Tag: ಜೈ ಹನುಮಾನ್

  • ಬಲ್ಲಾಳದೇವ ರಾಣಾ ಜೊತೆ ಕಾಂತಾರದ ಶಿವ

    ಬಲ್ಲಾಳದೇವ ರಾಣಾ ಜೊತೆ ಕಾಂತಾರದ ಶಿವ

    ತೆಲುಗಿನ ಖ್ಯಾತ ನಟ ರಾಣಾ ದಗ್ಗುಬಾಟಿ  (Rana Daggubati)ಮತ್ತು ಕನ್ನಡದ ಹೆಸರಾಂತ ನಟ ರಿಷಬ್ ಶೆಟ್ಟಿ (Rishabh Shetty)ಜೊತೆಗಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ರಾಣಾ ಏನಾದರೂ ಕನ್ನಡ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರಾ ಅನ್ನೋ ಅನುಮಾನ ಕೂಡ ಮೂಡಿದೆ. ಆದರೆ, ಕನ್ನಡಕ್ಕೆ ರಾಣಾ ಬಂದಿಲ್ಲ. ತೆಲುಗಿಗೆ ರಿಷಬ್ ಹೋಗಿದ್ದಾರೆ. ಜೈ ಹನುಮಾನ್ ಸಿನಿಮಾದಲ್ಲಿ ಈ ಜೋಡಿ ಒಟ್ಟಾಗಿ ನಟಿಸುತ್ತಿದೆ.

    ‘ಕಾಂತಾರ’ ಕಣಕ್ಕಿಳಿದಿರುವ ಕಾಡುಬೆಟ್ಟ ಶಿವನ ಲುಕ್ಕು ಕಣ್ತುಂಬಿಕೊಳ್ಳುವುದ್ದಕ್ಕೆ ಅಖಂಡ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯ್ತಿದ್ದಾರೆ. ಕುಂದಾಪುರದ ಕೆರಾಡಿ ಹುಡ್ಗ ‘ಕಾಂತಾರ’ ಪ್ರೀಕ್ವೆಲ್ ಮೂಲಕ ಕದಂಬರ ಕಥೆ ಹರವಿಡೋದಿಕ್ಕೆ ರೆಡಿಯಾಗಿರುವುದರ ಜೊತೆಗೆ ಪುರಾತನ ಸಮರ ಕಲೆ ಕಳರಿಪಯಟ್ಟು ಕಲೆಯನ್ನ ಕಟ್ಟಿಕೊಡಲು ಕಸರತ್ತು ನಡೆಸಿದ್ದಾರೆ. ಇದರ ನಡುವೆ ಹನುಮಾನ್ (Hanuman) ಪಾತ್ರದಲ್ಲಿ ಮಿಂಚಲು ರಿಷಬ್ ಶೆಟ್ಟಿ (Rishab Shetty) ರೆಡಿಯಾಗಿದ್ದಾರೆ. ಈ ಮೂಲಕ ತೆಲುಗಿಗೆ ನಟ ಎಂಟ್ರಿ ಕೊಟ್ಟಿದ್ದಾರೆ.

    ಟಾಲಿವುಡ್ ಅಂಗಳದಲ್ಲಿ ಮೂಡಿಬಂದಿದ್ದ ‘ಜೈ ಹನುಮಾನ್’ (Jai Hanuman) ಸಿನಿಮಾ ಸಕ್ಸಸ್‌ ಕಂಡಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡಿದ್ದ ಹನುಮಾನ್ ಸಿನಿಮಾದ ಸೀಕ್ವೆಲ್ ಮೂಡಿಬರುತ್ತಿದ್ದು, ಇದೀಗ ಪ್ಯಾನ್‌ ಇಂಡಿಯಾ ಹಿಟ್ ಸೀಕ್ವೆಲ್‌ನಲ್ಲಿ ‘ಕಾಂತಾರ’ (Kantara) ಶಿವ ನಟಿಸುವುದು ಅಧಿಕೃತವಾಗಿದೆ. ನಿರ್ದೇಶಕ ಪ್ರಶಾಂತ್ ವರ್ಮಾ ಡೈರೆಕ್ಷನ್ ಅಡಿಯಲ್ಲಿ ಮೂಡಿ ಬರುತ್ತಿರುವ ‘ಹನುಮಾನ್’ ಸಿನಿಮಾದ ಸೀಕ್ವೆಲ್‌ನಲ್ಲಿ ರಿಷಬ್ ಶೆಟ್ಟಿ ಹನುಮಂತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದೀಪಾವಳಿಯ ವಿಶೇಷ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.

    ನಿರ್ದೇಶಕ ಪ್ರಶಾಂತ್ ವರ್ಮಾ ‘ಜೈ ಹನುಮಾನ್’ ಚಿತ್ರದ ಸೀಕ್ವೆಲ್‌ನಲ್ಲಿ ಹನುಮಾನ್ ಪಾತ್ರಧಾರಿಗೆ ಬಹಳಷ್ಟು ಅಳೆದೂ ತೂಗಿ ರಿಷಬ್ ಶೆಟ್ಟಿ ಅವರನ್ನು ಆಯ್ಕೆ ಮಾಡಿದ್ದಾರೆ. ಕಾಂತಾರ ಸೀಕ್ವೆಲ್‌ಗಾಗಿ ನ್ಯಾಷನಲ್ ಅವಾರ್ಡ್‌ ಮುಡಿಗೇರಿಸಿಕೊಂಡಿರುವ ಡಿವೈನ್ ಸ್ಟಾರ್ ಕೇವಲ ನಟರಾಗಿ ಅಷ್ಟೇ ಅಲ್ಲದೆ, ನಿರ್ದೇಶಕರಾಗಿಯೂ ಪ್ಯಾನ್ ಇಂಡಿಯಾದಾದ್ಯಂತ ಮೋಡಿ ಮಾಡಿದ್ದಾರೆ. ಇದೇ ಕಾರಣಕ್ಕೆ ಯಾವುದೇ ಪಾತ್ರವನ್ನಾದರೂ ರಿಷಬ್ ನಿಭಾಯಿಸಬಲ್ಲರು. ಜೊತೆಗೆ ಕಥೆ-ಚಿತ್ರಕಥೆ ಹಾಗೂ ಸಂಭಾಷಣೆ ವಿಭಾಗಗಳಲ್ಲೂ ರಿಷಬ್ ಶೆಟ್ಟಿಗೆ ಕಂಟ್ರೋಲ್ ಇರೋದ್ರಿಂದ ‘ಹನುಮಾನ್’ ಸಿನಿಮಾದ ಸೀಕ್ವೆಲ್‌ಗೆ ಪ್ಲಸ್ ಪಾಯಿಂಟ್ಸ್ ಆಗಲಿದೆ.

     

    ಕೈಯಲ್ಲಿ ರಾಮನ ವಿಗ್ರಹ ಹಿಡಿದು ರಿಷಬ್ ಶೆಟ್ಟಿ ಹನುಮಾನ್ ಪಾತ್ರದಲ್ಲಿ ಪವರ್‌ಫುಲ್ ಪೋಸ್ಟ್ ಕೊಟ್ಟಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ಬಹಳ ಆಕರ್ಷಕವಾಗಿದೆ. ‘ಜೈ ಹನುಮಾನ್’ ಸಿನಿಮಾವನ್ನು ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್‌ನ ಭಾಗವಾಗಿ ತಯಾರಾಗಲಿದೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್‌ ನಿರ್ಮಾಣ ಮಾಡಲಿದ್ದಾರೆ.

  • ‘ಜೈ ಹನುಮಾನ್’ ಸಿನಿಮಾದಲ್ಲಿ ರಾಮನಾಗಿ ರಾಣಾ ದಗ್ಗುಬಾಟಿ?

    ‘ಜೈ ಹನುಮಾನ್’ ಸಿನಿಮಾದಲ್ಲಿ ರಾಮನಾಗಿ ರಾಣಾ ದಗ್ಗುಬಾಟಿ?

    ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ (Jai Hanuman) ಸಿನಿಮಾದಲ್ಲಿ ನಟಿಸುತ್ತಿರುವ ಕುರಿತು ಈಗಾಗಲೇ ಅಧಿಕೃತ ಘೋಷಣೆ ಆಗಿದೆ. ಈ ಬೆನ್ನಲ್ಲೇ, ರಾಣಾ ದಗ್ಗುಬಾಟಿ (Rana Daggubati) ಕೂಡ ಈ ಸಿನಿಮಾದ ಭಾಗವಾಗಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ತೆಲುಗಿನ ನಟ ರಾಣಾ ದಗ್ಗುಬಾಟಿ ಅವರು ‘ಜೈ ಹನುಮಾನ್’ ಸಿನಿಮಾ ತಂಡದ ಜೊತೆ ಕೈ ಜೋಡಿಸಿದ್ದಾರೆ ಎನ್ನಲಾಗಿದೆ. ನಿರ್ದೇಶಕ ಪ್ರಶಾಂತ್ ವರ್ಮಾ (Prashanth Varma) ಅವರು ರಿಷಬ್ ಶೆಟ್ಟಿ (Rishab Shetty) ಮತ್ತು ರಾಣಾ ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಜೈ ಜೈ ಹನುಮಾನ್’ ಎಂದು ಅಡಿಬರಹ ನೀಡಿದ್ದಾರೆ. ಪ್ರಶಾಂತ್‌, ರಿಷಬ್‌ ಜೊತೆಗಿನ ರಾಣಾ ಫೋಟೋ ಮತ್ತು ಅಡಿಬರಹ ನೋಡಿ ಈ ಸಿನಿಮಾದಲ್ಲಿ ಅವರು ನಟಿಸುವ ಕುರಿತು ಚರ್ಚೆಯಾಗುತ್ತಿದೆ.

    ರಾಣಾ ದಗ್ಗುಬಾಟಿ ಅವರು ಚಿತ್ರದಲ್ಲಿ ಶ್ರೀ ರಾಮನ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಚಿತ್ರತಂಡ ಅಧಿಕೃತವಾಗಿ ಘೋಷಿಸುವವರೆಗೂ ಕಾದುನೋಡಬೇಕಿದೆ. ಇದನ್ನೂ ಓದಿ:ಯಶ್ ನಟನೆಯ ‘ರಾಮಾಯಣ’ ಚಿತ್ರದ ಮೊದಲ ಪೋಸ್ಟರ್ ರಿಲೀಸ್

    ಇನ್ನೂ ಇತ್ತೀಚೆಗೆ ರಿಷಬ್ ಶೆಟ್ಟಿ ಹನುಮಂತನ ಪಾತ್ರದ ಫಸ್ಟ್ ಲುಕ್ ಅನ್ನು ಚಿತ್ರತಂಡ ರಿವೀಲ್ ಮಾಡಿತ್ತು. ರಿಷಬ್ ಅವತಾರಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದರು. ‘ಕಾಂತಾರ’ ಸಿನಿಮಾದ ಬಳಿಕ ಈ ಚಿತ್ರದ ಮೇಲೆಯೂ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆಯಿದೆ.

  • ಮತ್ತೊಂದು ಮೈಲಿಗಲ್ಲು ಸೃಷ್ಟಿಸಲು ‘ಕಾಂತಾರ’ ಸ್ಟಾರ್ ರೆಡಿ- ಹನುಮಂತನ ಪಾತ್ರದಲ್ಲಿ ರಿಷಬ್ ಶೆಟ್ಟಿ ಮೋಡಿ

    ಮತ್ತೊಂದು ಮೈಲಿಗಲ್ಲು ಸೃಷ್ಟಿಸಲು ‘ಕಾಂತಾರ’ ಸ್ಟಾರ್ ರೆಡಿ- ಹನುಮಂತನ ಪಾತ್ರದಲ್ಲಿ ರಿಷಬ್ ಶೆಟ್ಟಿ ಮೋಡಿ

    ‘ಕಾಂತಾರ’ ಕಣಕ್ಕಿಳಿದಿರುವ ಕಾಡುಬೆಟ್ಟ ಶಿವನ ಲುಕ್ಕು ಕಣ್ತುಂಬಿಕೊಳ್ಳುವುದ್ದಕ್ಕೆ ಅಖಂಡ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯ್ತಿದ್ದಾರೆ. ಕುಂದಾಪುರದ ಕೆರಾಡಿ ಹುಡ್ಗ ‘ಕಾಂತಾರ’ ಪ್ರೀಕ್ವೆಲ್ ಮೂಲಕ ಕದಂಬರ ಕಥೆ ಹರವಿಡೋದಿಕ್ಕೆ ರೆಡಿಯಾಗಿರುವುದರ ಜೊತೆಗೆ ಪುರಾತನ ಸಮರ ಕಲೆ ಕಳರಿಪಯಟ್ಟು ಕಲೆಯನ್ನ ಕಟ್ಟಿಕೊಡಲು ಕಸರತ್ತು ನಡೆಸಿದ್ದಾರೆ. ಇದರ ನಡುವೆ ಹನುಮಾನ್ (Hanuman) ಪಾತ್ರದಲ್ಲಿ ಮಿಂಚಲು ರಿಷಬ್ ಶೆಟ್ಟಿ (Rishab Shetty) ರೆಡಿಯಾಗಿದ್ದಾರೆ. ಈ ಮೂಲಕ ತೆಲುಗಿಗೆ ನಟ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:ದರ್ಶನ್‌ಗೆ ಜಾಮೀನು ಸಿಕ್ಕ ಬೆನ್ನಲ್ಲೇ ವಿಜಯಲಕ್ಷ್ಮಿ ಟೆಂಪಲ್ ರನ್

    ಟಾಲಿವುಡ್ ಅಂಗಳದಲ್ಲಿ ಮೂಡಿಬಂದಿದ್ದ ‘ಜೈ ಹನುಮಾನ್’ (Jai Hanuman) ಸಿನಿಮಾ ಸಕ್ಸಸ್‌ ಕಂಡಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡಿದ್ದ ಹನುಮಾನ್ ಸಿನಿಮಾದ ಸೀಕ್ವೆಲ್ ಮೂಡಿಬರುತ್ತಿದ್ದು, ಇದೀಗ ಪ್ಯಾನ್‌ ಇಂಡಿಯಾ ಹಿಟ್ ಸೀಕ್ವೆಲ್‌ನಲ್ಲಿ ‘ಕಾಂತಾರ’ (Kantara) ಶಿವ ನಟಿಸುವುದು ಅಧಿಕೃತವಾಗಿದೆ. ನಿರ್ದೇಶಕ ಪ್ರಶಾಂತ್ ವರ್ಮಾ ಡೈರೆಕ್ಷನ್ ಅಡಿಯಲ್ಲಿ ಮೂಡಿ ಬರುತ್ತಿರುವ ‘ಹನುಮಾನ್’ ಸಿನಿಮಾದ ಸೀಕ್ವೆಲ್‌ನಲ್ಲಿ ರಿಷಬ್ ಶೆಟ್ಟಿ ಹನುಮಂತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದೀಪಾವಳಿಯ ವಿಶೇಷ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.

     

    View this post on Instagram

     

    A post shared by Mythri Movie Makers (@mythriofficial)

    ನಿರ್ದೇಶಕ ಪ್ರಶಾಂತ್ ವರ್ಮಾ ‘ಜೈ ಹನುಮಾನ್’ ಚಿತ್ರದ ಸೀಕ್ವೆಲ್‌ನಲ್ಲಿ ಹನುಮಾನ್ ಪಾತ್ರಧಾರಿಗೆ ಬಹಳಷ್ಟು ಅಳೆದೂ ತೂಗಿ ರಿಷಬ್ ಶೆಟ್ಟಿ ಅವರನ್ನು ಆಯ್ಕೆ ಮಾಡಿದ್ದಾರೆ. ಕಾಂತಾರ ಸೀಕ್ವೆಲ್‌ಗಾಗಿ ನ್ಯಾಷನಲ್ ಅವಾರ್ಡ್‌ ಮುಡಿಗೇರಿಸಿಕೊಂಡಿರುವ ಡಿವೈನ್ ಸ್ಟಾರ್ ಕೇವಲ ನಟರಾಗಿ ಅಷ್ಟೇ ಅಲ್ಲದೆ, ನಿರ್ದೇಶಕರಾಗಿಯೂ ಪ್ಯಾನ್ ಇಂಡಿಯಾದಾದ್ಯಂತ ಮೋಡಿ ಮಾಡಿದ್ದಾರೆ. ಇದೇ ಕಾರಣಕ್ಕೆ ಯಾವುದೇ ಪಾತ್ರವನ್ನಾದರೂ ರಿಷಬ್ ನಿಭಾಯಿಸಬಲ್ಲರು. ಜೊತೆಗೆ ಕಥೆ-ಚಿತ್ರಕಥೆ ಹಾಗೂ ಸಂಭಾಷಣೆ ವಿಭಾಗಗಳಲ್ಲೂ ರಿಷಬ್ ಶೆಟ್ಟಿಗೆ ಕಂಟ್ರೋಲ್ ಇರೋದ್ರಿಂದ ‘ಹನುಮಾನ್’ ಸಿನಿಮಾದ ಸೀಕ್ವೆಲ್‌ಗೆ ಪ್ಲಸ್ ಪಾಯಿಂಟ್ಸ್ ಆಗಲಿದೆ.

    ಕೈಯಲ್ಲಿ ರಾಮನ ವಿಗ್ರಹ ಹಿಡಿದು ರಿಷಬ್ ಶೆಟ್ಟಿ ಹನುಮಾನ್ ಪಾತ್ರದಲ್ಲಿ ಪವರ್‌ಫುಲ್ ಪೋಸ್ಟ್ ಕೊಟ್ಟಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ಬಹಳ ಆಕರ್ಷಕವಾಗಿದೆ. ‘ಜೈ ಹನುಮಾನ್’ ಸಿನಿಮಾವನ್ನು ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್‌ನ ಭಾಗವಾಗಿ ತಯಾರಾಗಲಿದೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್‌ ನಿರ್ಮಾಣ ಮಾಡಲಿದ್ದಾರೆ.

  • ‘ಜೈ ಹನುಮಾನ್’ ಸೀಕ್ವೆಲ್‌ನಲ್ಲಿ ರಿಷಬ್ ಶೆಟ್ಟಿ?

    ‘ಜೈ ಹನುಮಾನ್’ ಸೀಕ್ವೆಲ್‌ನಲ್ಲಿ ರಿಷಬ್ ಶೆಟ್ಟಿ?

    ರಾಷ್ಟ್ರ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ ಚಾಪ್ಟರ್ 1’ರಲ್ಲಿ (Kantara Chapter 1) ಬ್ಯುಸಿಯಾಗಿದ್ದಾರೆ. ಇದೀಗ ‘ಜೈ ಹನುಮಾನ್ ಪಾರ್ಟ್ 2’ನಲ್ಲಿ (Jai Hanuman Sequel) ರಿಷಬ್ ನಟಿಸಲಿದ್ದಾರೆ ಎನ್ನಲಾದ ಸುದ್ದಿಯೊಂದು ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ:ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ

    ಸೂಪರ್ ಹಿಟ್ ಚಿತ್ರ ಜೈ ಹನುಮಾನ್ ಸಿನಿಮಾದ ಸೀಕ್ವೆಲ್‌ಗೆ ಸಿದ್ಧತೆ ನಡೆಯುತ್ತಿದೆ. ಈ ಚಿತ್ರದ ಪಾರ್ಟ್ 2ನಲ್ಲಿ ರಿಷಬ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಲು ಚಿತ್ರತಂಡ ನಟನನ್ನು ಅಪ್ರೋಚ್ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ರಿಷಬ್ ಆಗಲಿ, ನಿರ್ಮಾಣ ಸಂಸ್ಥೆ ಆಗಲಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಇದು ಸದ್ಯ ಹರಿದಾಡುತ್ತಿರುವ ಗಾಸಿಪ್ ಅಥವಾ ನಿಜ ಸಂಗತಿನಾ? ಎಂಬುದನ್ನು ಚಿತ್ರತಂಡ ತಿಳಿಸುವವರೆಗೂ ಕಾದುನೋಡಬೇಕಿದೆ.

    ಅಂದಹಾಗೆ, 2024ರಲ್ಲಿ ತೆರೆಕಂಡ ‘ಜೈ ಹನುಮಾನ್’ ಚಿತ್ರದಲ್ಲಿ ತೇಜ ಸಜ್ಜಾ ಮತ್ತು ಅಮೃತಾ ಅಯ್ಯರ್ ಜೋಡಿಯಾಗಿ ನಟಿಸಿದ್ದರು. ಈ ಚಿತ್ರಕ್ಕೆ ಪ್ರಶಾಂತ್ ವರ್ಮಾ ಆ್ಯಕ್ಷನ್ ಕಟ್ ಹೇಳಿದ್ದರು. ಇದೀಗ ಇದರ ಎರಡನೇ ಭಾಗಕ್ಕೆ ತೆರೆಮರೆಯಲ್ಲಿ ತಯಾರಿ ನಡೆಯುತ್ತಿದೆ.

  • ‘ಜೈ ಹನುಮಾನ್’ ಸೀಕ್ವೆಲ್‌ನಲ್ಲಿ ರಣ್‌ವೀರ್ ಸಿಂಗ್

    ‘ಜೈ ಹನುಮಾನ್’ ಸೀಕ್ವೆಲ್‌ನಲ್ಲಿ ರಣ್‌ವೀರ್ ಸಿಂಗ್

    ಪ್ರಶಾಂತ್ ವರ್ಮಾ ನಿರ್ದೇಶನ ಮತ್ತು ತೇಜಾ ಸಜ್ಜಾ (Teja Sajja) ನಟನೆಯ ‘ಜೈ ಹನುಮಾನ್’ (Jai Hanuman)  ಮೊದಲ ಭಾಗ ಸಕ್ಸಸ್ ಕಂಡಿದೆ. ಇದರ ಪಾರ್ಟ್ 2 ಬರುವ ಬಗ್ಗೆ ಇತ್ತೀಚೆಗೆ ಚಿತ್ರತಂಡ ಅನೌನ್ಸ್ ಮಾಡಿದೆ. ಆಂಜನೇಯ ಪಾತ್ರದಲ್ಲಿ ಯಾರು ನಟಿಸುತ್ತಾರೆ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.

    ತೇಜಾ ಸಜ್ಜಾ, ಅಮೃತಾ ನಟನೆಯ ಜೈ ಹನುಮಾನ್ ಸಿನಿಮಾದಲ್ಲಿ ಆಂಜನೇಯನಾಗಿ ರಣ್‌ವೀರ್ ಸಿಂಗ್ (Ranveer Singh) ನಟಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈಗಾಗಲೇ ಚಿತ್ರದ ನಿರ್ದೇಶಕ ಪ್ರಶಾಂತ್‌ ವರ್ಮಾ ಅವರು ರಣ್‌ವೀರ್‌ರನ್ನು ಭೇಟಿಯಾಗಿದ್ದು, ಪಾತ್ರದ ಬಗ್ಗೆ ಮಾತುಕತೆ ಕೂಡ ನಡೆದಿದೆ ಎನ್ನಲಾಗಿದೆ.

    ಈ ಚಿತ್ರದ ಭಾಗವಾಗಲು ಒಪ್ಪಿಕೊಂಡ್ರಾ? ಜೈ ಹನುಮಾನ್ ಚಿತ್ರಕ್ಕೆ ರಣ್‌ವೀರ್ ಕೈಜೋಡಿಸ್ತಾರಾ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಇದನ್ನೂ ಓದಿ:ಮತ್ತೆ ಕಾಣಿಸಿಕೊಂಡ ರಾಹಾ- ರಣ್‌ಬೀರ್ ದಂಪತಿ ಪುತ್ರಿಗೆ ನೆಟ್ಟಿಗರ ಮೆಚ್ಚುಗೆ

    ಸಿಂಗಂ ಅಗೇನ್, ಡಾನ್ 3 ಸೇರಿದಂತೆ ಹಲವು ಸಿನಿಮಾಗಳು ರಣ್‌ವೀರ್ ಸಿಂಗ್ ಕೈಯಲ್ಲಿವೆ.

  • ರಾಮ ಮಂದಿರ ಉದ್ಘಾಟನೆ ದಿನ ‘ಶ್ರೀ ರಾಮ್, ಜೈ ಹನುಮಾನ್’ ಪೋಸ್ಟರ್ ರಿಲೀಸ್

    ರಾಮ ಮಂದಿರ ಉದ್ಘಾಟನೆ ದಿನ ‘ಶ್ರೀ ರಾಮ್, ಜೈ ಹನುಮಾನ್’ ಪೋಸ್ಟರ್ ರಿಲೀಸ್

    ಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆಯ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿದೆ. ಎಲ್ಲರೂ ರಾಮ ನಾಮ ಸ್ಮರಣೆ ಮಾಡುವ ಶುಭ ಘಳಿಗೆಯಲ್ಲಿ ‘ಶ್ರೀ ರಾಮ್, ಜೈ ಹನುಮಾನ್’ (Shri Ram Jai Hanuman) ಎಂಬ ಹೊಚ್ಚ ಹೊಸ ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆಯಾಗಿದೆ.  ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ನಿರ್ಮಾಣವಾಗಲಿರುವ ‘ಶ್ರೀ ರಾಮ್, ಜೈ ಹನುಮಾನ್’ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

    ರಾಮ ಮಂದಿರ ಉದ್ಘಾಟನೆಯ ಸಮಯಕ್ಕೆ  ಅನಾವರಣಗೊಂಡಿರುವುದು ಹಿಂದೂ ಧರ್ಮದ ಭಕ್ತಗಣಕ್ಕೆ ಸಂತಸದ ವಿಷಯ. “An Untold Epic of RAMAYANA” ಎಂಬ ಅಡಿಬರಹ ಈ ಚಿತ್ರಕ್ಕಿದೆ. ರಾಮಾಯಣದ ಕುರಿತು ಬಹುತೇಕರಿಗೆ ವಿಷಯ ತಿಳಿದಿದೆ. ಆದರೆ ಎಲ್ಲೂ ದಾಖಲಾಗದ ಕೆಲವು ವಿಷಯಗಳನ್ನು ಈ ಚಿತ್ರದ ಮೂಲಕ ಹೇಳಲಾಗುತ್ತಿದೆ ಎಂಬುದು ಈ ಸಿನಿಮಾದ ಮತ್ತೊಂದು ವಿಶೇಷ.

    ಸದ್ಯ ಹರಿಬಿಟ್ಟಿರುವ ಪೋಸ್ಟರ್ ಸಾಕಷ್ಟು ಕುತೂಹಲ ಕೆರಳಿಸಿದೆ. ಬೆಟ್ಟ, ಗುಡ್ಡ, ಬೆಂಕಿ, ನೀರು, ರಾಮ – ಹನುಮ… ಹೀಗೆ ಅನೇಕ ಸಂಗತಿಗಳು ಪೋಸ್ಟರ್ ನಲ್ಲಿ ಅಡಕವಾಗಿವೆ. ಒಂದೆಡೆ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಖುಷಿಯಲ್ಲಿರುವ ಜನರಿಗೆ, ಈ ಪೋಸ್ಟರ್ ನೋಡುತ್ತಲೇ ಮೈ ಜುಂ ಎನಿಸುವಂತೆ ಮಾಡಿರುವುದು ಚಿತ್ರದ ಮೇಲೆ ಈಗಲೇ ಸಾಕಷ್ಟು ನಿರೀಕ್ಷೆ ಗರಿಗೆದರುವಂತೆ ಮಾಡಿದೆ.

     

    ಯುವ ನಿರ್ದೇಶಕ ಅವಧೂತ ಶ್ರೀ ರಾಮ್, ಜೈ ಹನುಮಾನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ಮಾಪಕ ಕೆ ಎ.ಸುರೇಶ್ ಅದ್ಧೂರಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕನ್ನಡದಲ್ಲಿ ಈಗಾಗಲೇ ಯಶಸ್ವಿ ನಿರ್ಮಾಣ ಸಂಸ್ಥೆ ಎನ್ನಿಸಿಕೊಂಡಿರುವ ಸುರೇಶ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಈ ಪ್ಯಾನ್ ಇಂಡಿಯಾ ಸಿನಿಮಾ ಮೂಡಿ ಬರುತ್ತಿದ್ದು, ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂನ ಖ್ಯಾತ ನಟರು, ಕಲಾವಿದರು ಸೇರಿದಂತೆ ದೊಡ್ಡ ತಾರಾಬಳಗವೇ ಇರಲಿದೆ. ಬಹುಕೋಟಿ ವಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾಕ್ಕೆ ಸದ್ಯ ಸ್ಟೋರಿ ಬೋರ್ಡ್ ಮತ್ತು ವಿಎಫ್ಎಕ್ಸ್ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಮತ್ತಷ್ಟು ವಿವರಗಳನ್ನು ಹಂಚಿಕೊಳ್ಳಲಿದೆ ಚಿತ್ರತಂಡ.