Tag: ಜೊತೆ ಜೊತೆಯಲಿ

  • ‘ಜೊತೆ ಜೊತೆಯಲಿ’ ಅಂತ್ಯ- ಇನ್ಮುಂದೆ ಸಿನಿಮಾಗಳಿಗೆ ಆದ್ಯತೆ ಕೊಡ್ತೀನಿ ಎಂದ ಮೇಘಾ ಶೆಟ್ಟಿ

    ‘ಜೊತೆ ಜೊತೆಯಲಿ’ ಅಂತ್ಯ- ಇನ್ಮುಂದೆ ಸಿನಿಮಾಗಳಿಗೆ ಆದ್ಯತೆ ಕೊಡ್ತೀನಿ ಎಂದ ಮೇಘಾ ಶೆಟ್ಟಿ

    ಕಿರುತೆರೆಯ ಜನಪ್ರಿಯ ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಅಂತ್ಯವಾಗಿದೆ. ಅನು ಸಿರಿಮನೆ ಪಾತ್ರದ ಮೂಲಕ ಮನೆ ಮಾತಾದ ನಟಿ ಮೇಘಾ ಶೆಟ್ಟಿ (Megha Shetty) ಇದೀಗ ಪ್ರತಿಕ್ರಿಯೆ ನೀಡಿದ್ದಾರೆ. ಈ ಸೀರಿಯಲ್ ಬಳಿಕ ಮುಂದೇನು.? ಎಂದು ಮೇಘಾ ಶೆಟ್ಟಿ ಮಾತನಾಡಿದ್ದಾರೆ.

    ಆರೂರು ಜಗದೀಶ್ ನಿರ್ದೇಶನದ ‘ಜೊತೆ ಜೊತೆಯಲಿ’ ಸೀರಿಯಲ್ ಕಥೆ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಆರ್ಯ- ಅನು ಸಿರಿಮನೆ ಲವ್ ಸ್ಟೋರಿಗೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟಿದ್ದರು. ಈ ಶುಕ್ರವಾರ (ಮೇ 19)ಕ್ಕೆ ಸೀರಿಯಲ್ ಅಂತ್ಯವಾಗುತ್ತಿದೆ. ಈ ಬಗ್ಗೆ ಮೇಘಾ ಶೆಟ್ಟಿ ರಿಯಾಕ್ಷನ್ ನೀಡಿದ್ದಾರೆ. ಇದನ್ನೂ ಓದಿ:ಸಹೋದರ ವರುಣ್ ತೇಜ್- ಲಾವಣ್ಯ ಮದುವೆ ಬಗ್ಗೆ ನಿಹಾರಿಕಾ ಪ್ರತಿಕ್ರಿಯೆ

    ‘ಜೊತೆ ಜೊತೆಯಲಿ’ ಸೀರಿಯಲ್ ಮೊದಲ ಶಾಟ್ ಎದುರಿಸಿದ್ದು ನಾನೇ, ಕೊನೆಯ ಶಾಟ್ ಕೂಡ ನನ್ನದೆ. ಈ ಎರಡರ ನಡುವೆ ಸಾಕಷ್ಟು ದಿನಗಳ ಅಂತರವಿದೆ. ಯಾರೂ ಪರಿಚಯವಿಲ್ಲದೇ ಈ ತಂಡಕ್ಕೆ ಕಾಲಿಟ್ಟ ನನಗೆ ಈಗ ಈ ತಂಡ ಎರಡನೇ ಕುಟುಂಬ. ಈ ಕುಟುಂಬದೊಂದಿಗಿನ ನಂಟನ್ನು ಮುಗಿಸುತ್ತಿದ್ದೇನೆ. ನಿರ್ದೇಶಕ ಜಗದೀಶ್, ಎಪಿಸೋಡ್ ನಿರ್ದೇಶಕರು ಸೇರಿದಂತೆ ಇಡೀ ತಂಡದ ಜೊತೆ ನಾಲ್ಕು ವರ್ಷಗಳ ಕಾಲ ಒಡನಾಡಿದ್ದೇನೆ. ಅವರ ಜೊತೆ ಕೂತು ಊಟ ಮಾಡಿದ್ದೆನೆ. ಅದನ್ನೆಲ್ಲವನ್ನೂ ಮರೆಯಲು ಸಾಧ್ಯವಿಲ್ಲ. ಅನು ಸಿರಿಮನೆ ನನಗೆ ಎಲ್ಲವನ್ನೂ ನೀಡಿದ್ದಾಳೆ. ನನಗೆ ಸಿಗುತ್ತಿರುವ ಸಿನಿಮಾಗಳು, ಜನರ ಪ್ರಿತಿ ಇವೆಲ್ಲದಕ್ಕೂ ಜೊತೆ ಜೊತೆಯಲಿ ಸೀರಿಯಲ್ ಮಾತ್ರ ಕಾರಣ. ಸಾವಿರ ಎಪಿಸೋಡ್‌ವರೆಗೂ ರೀಚ್ ಆಗಬೇಕು ಎಂದುಕೊಂಡಿದ್ದೆವು. ಅದರಂತೆ ಮುಗಿಸುತ್ತಿದ್ದೇವೆ ಎಂದು ಮೇಘಾ ಶೆಟ್ಟಿ ಮಾತನಾಡಿದ್ದಾರೆ. ಈ ಸೀರಿಯಲ್ ನಂತರ ತಮ್ಮ ನಡೆಯೇನು ಎಂದು ನಟಿ ಬಿಚ್ಚಿಟ್ಟಿದ್ದಾರೆ.

    ಮೇಘಾ ಶೆಟ್ಟಿ ಮುಂದಿನ ದಿನಗಳಲ್ಲಿ ಯಾವುದೇ ಸೀರಿಯಲ್ ನಟಿಸದಿರಲು ನಿರ್ಧರಿಸಿದ್ದಾರಂತೆ. ಇನ್ನೆನಿದ್ದರೂ ಸಿನಿಮಾಗಳತ್ತ ಮಾತ್ರ ನನ್ನ ಗಮನ. ಒಳ್ಳೊಳ್ಳೆ ಕಥೆಗಳನ್ನು ಕೇಳುತ್ತಿದ್ದೇನೆ. ಈಗ ನಟಿಸಿರುವ ‘ಕೈವ’ (Kaiva) ಮತ್ತು ‘ಆಪರೇಷನ್ ಲಂಡನ್ ಕೆಫೆ’ (Operation London Cafe) ಸಿನಿಮಾ ಚೆನ್ನಾಗಿದೆ. ಈ ಎರಡೂ ಸಿನಿಮಾಗಳು ರಿಲೀಸ್‌ಗೆ ಸಿದ್ಧವಾಗಿವೆ. ಮುಂದಿನ ದಿನಗಳಲ್ಲಿ ಒಳ್ಳೆಯ ಕಥೆಗಳ ನಿರೀಕ್ಷೆಯಲ್ಲಿದ್ದೇನೆ ಎಂದು ನಟಿ ಮೇಘಾ ಪ್ರತಿಕ್ರಿಯೆ ನೀಡಿದ್ದಾರೆ.

  • ಶೂಟಿಂಗ್ ಮುಗಿಸಿದ ‘ಜೊತೆ ಜೊತೆಯಲಿ’ ಧಾರಾವಾಹಿ: ಮುಟ್ಟಲಿಲ್ಲ ಟಾರ್ಗೆಟ್?

    ಶೂಟಿಂಗ್ ಮುಗಿಸಿದ ‘ಜೊತೆ ಜೊತೆಯಲಿ’ ಧಾರಾವಾಹಿ: ಮುಟ್ಟಲಿಲ್ಲ ಟಾರ್ಗೆಟ್?

    ನ್ನಡದ ಪಾಪ್ಯುಲರ್ ಧಾರಾವಾಹಿಗಳಲ್ಲಿ (Serial) ಒಂದಾದ ‘ಜೊತೆ ಜೊತೆಯಲಿ’ (Jothe Jotheyali) ಕೊನೆಗೂ ತನ್ನ ಶೂಟಿಂಗ್ (Shooting) ಮುಗಿಸಿದೆ. ಭಾನುವಾರ ಕೊನೆ ಕಂತಿನ ಚಿತ್ರೀಕರಣ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ತಾವು ಕೊನೆ ದಿನದ ಶೂಟಿಂಗ್ ಮುಗಿಸಿರುವುದಾಗಿ ನಟಿ ಮೇಘಾ ಶೆಟ್ಟಿ (Megha Shetty) ಹೇಳಿಕೊಂಡಿದ್ಧಾರೆ. ಅದೊಂದು ಭಾವುಕ ಕ್ಷಣವೂ ಆಗಿತ್ತು ಎಂದು ಮಾತನಾಡಿದ್ದಾರೆ.

    ಕಳೆದ ವಾರವಷ್ಟೇ ಧಾರಾವಾಹಿ ಮುಕ್ತಾಯವಾಗುತ್ತಿರುವ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ನ್ಯೂಸ್ ಬ್ರೇಕ್ ಮಾಡಿತ್ತು. ಅದಕ್ಕೆ ಕಾರಣವನ್ನೂ ನಿಖರವಾಗಿ ನೀಡಿತ್ತು. ಧಾರಾವಾಹಿ ತಂಡದ ಸದಸ್ಯರ ಅನಿಸಿಕೆಯನ್ನೂ ಪ್ರಕಟಿಸಿತ್ತು. ಕೊನೆಗೂ ಅದು ನಿಜವಾಗಿದೆ. ಭಾನುವಾರ ಕೊನೆಯ ಎಪಿಸೋಡ್ ನ ದೃಶ್ಯಗಳನ್ನು ಸೆರೆ ಹಿಡಿಯಲಾಗಿದೆ ಎಂದು ಧಾರಾವಾಹಿ ತಂಡವೂ ಖಚಿತ ಪಡಿಸಿದೆ. ಇದನ್ನೂ ಓದಿ:7 ತಿಂಗಳ ಬಳಿಕ ಮೊದಲ ಬಾರಿಗೆ ಮಗಳ ಮುಖ ರಿವೀಲ್ ಮಾಡಿದ ಧ್ರುವ ಸರ್ಜಾ

    ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಮನೆ ಮನ ತಲುಪಿದ್ದನಟ ಅನಿರುದ್ಧ, ಧಾರಾವಾಹಿ ತಂಡಕ್ಕೆ ಸಹಕಾರ ನೀಡಲಿಲ್ಲ ಎಂದು ದೊಡ್ಡ ಸುದ್ದಿ ಆಗಿತ್ತು. ಬಹಿರಂಗವಾಗಿಯೂ ಅನಿರುದ್ಧ ಹಾಗೂ ಧಾರಾವಾಹಿಯ ನಿರ್ಮಾಪಕ ಆರೂರು ಜಗದೀಶ್ ಈ ಕುರಿತು ಮಾತನಾಡಿದ್ದರು. ಅನಿರುದ್ಧ (Aniruddha) ಅವರನ್ನು ಧಾರಾವಾಹಿಯಿಂದ ಕೈ ಬಿಡಲಾಯಿತು. ನಂತರ ಹರೀಶ್ ರಾಜ್ ಆ ಪಾತ್ರವನ್ನು ಮುಂದುವರೆಸಿದರು. ಇದೀಗ ಮತ್ತೆ ಕಲಾವಿದರ ಕಾರಣದಿಂದಾಗಿಯೇ ಧಾರಾವಾಹಿ ನಿಲ್ಲಿಸಬೇಕಾದ ಸ್ಥಿತಿ ಬಂದಿತ್ತು.

    ಧಾರಾವಾಹಿ ತಂಡದ ಕೆಲವು ಸದಸ್ಯರೇ ಹೇಳಿಕೊಂಡಂತೆ ಪ್ರಮುಖ ಪಾತ್ರ ಮಾಡುತ್ತಿದ್ದ ಕಲಾವಿದೆಯು ಡೇಟ್ ಕೊಡದೇ ಇರುವ ಕಾರಣದಿಂದಾಗಿ ಧಾರಾವಾಹಿ ನಿಲ್ಲಿಸಬೇಕಾಗಿ ಬಂದಿದೆ. ಪ್ರಮುಖ ಪಾತ್ರ ಮಾಡುತ್ತಿದ್ದ ನಟಿ ಅಸಹಕಾರದಿಂದ ಪಾಪ್ಯುಲರ್ ಧಾರಾವಾಹಿಯೊಂದು ಅಕಾಲಿಕವಾಗಿ ನಿಂತಿದೆ. ಅಂದುಕೊಂಡಂತೆ ಆಗಿದ್ದರೆ ಈ ಧಾರಾವಾಹಿ 1000 ಕಂತುಗಳನ್ನು ಕಾಣಬೇಕಿತ್ತು. ಆದರೆ, ಟಾರ್ಗೆಟ್ ಮುಟ್ಟುವಲ್ಲಿ ವಿಫಲವಾಗಿದೆ.

  • Breaking- ಕಲಾವಿದರ ಕಿರಿಕ್: ‘ಜೊತೆ ಜೊತೆಯಲಿ’ ಸೀರಿಯಲ್ ನಿಲ್ಲಿಸಲು ಮುಂದಾದ ಟೀಮ್?

    Breaking- ಕಲಾವಿದರ ಕಿರಿಕ್: ‘ಜೊತೆ ಜೊತೆಯಲಿ’ ಸೀರಿಯಲ್ ನಿಲ್ಲಿಸಲು ಮುಂದಾದ ಟೀಮ್?

    ರೂರು ಜಗದೀಶ್ (Aroor jagadish) ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಕನ್ನಡದ ಹೆಸರಾಂತ ಧಾರಾವಾಹಿ (Serial) ‘ಜೊತೆ ಜೊತೆಯಲಿ’ (Jothe Jotheyali) ಈ ತಿಂಗಳು ಹೊತ್ತಿಗೆ ನಿಲ್ಲುತ್ತಾ? ಇಂಥದ್ದೊಂದು ಆಘಾತಕಾರಿ ಸುದ್ದಿ ಕಿರುತೆರೆ ವಲಯದಿಂದ ಬಂದಿದೆ. ಅನಿರುದ್ಧ ಕಾರಣಕ್ಕಾಗಿ ಸಾಕಷ್ಟು ಸುದ್ದಿಯಾಗಿದ್ದ ಈ ಧಾರಾವಾಹಿ ಮತ್ತೆ ಕಲಾವಿದರ ಕಾರಣದಿಂದಾಗಿಯೇ ಆಟ ನಿಲ್ಲಿಸುತ್ತಿದೆ (Ending) ಎನ್ನುವುದು ವಿಷಾದಕರ. ಧಾರಾವಾಹಿಯ ಪ್ರಮುಖ ಪಾತ್ರಧಾರಿ ಡೇಟ್ ಕೊಡದೇ ಇರುವ ಕಾರಣದಿಂದಾಗಿಯೇ ಸೀರಿಯಲ್ ನಿಲ್ಲಿಸುತ್ತಿರುವುದಾಗಿ ತಂಡದ ಸದಸ್ಯರು ಬಾಯ್ಬಿಟ್ಟಿದ್ದಾರೆ.

    ಧಾರಾವಾಹಿಯ ಪ್ರಮುಖ ಮಹಿಳಾ ಪಾತ್ರಧಾರಿ ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದಾರಂತೆ. ಅವರು ಶೂಟಿಂಗ್ ಗೆ ಡೇಟ್ ಕೊಡಲು ಸಖತ್ ಕಿರಿಕ್ ಮಾಡುತ್ತಾರಂತೆ. ಈ ಧಾರಾವಾಹಿಯಿಂದಲೇ ಫೇಮಸ್ ಆಗಿರುವ ನಟಿ, ಅದೇ ಧಾರಾವಾಹಿಯನ್ನು ಮುಗಿಸುತ್ತಿರುವುದು ನಿಜಕ್ಕೂ ನೋವಿನ ಸಂಗತಿ ಎನ್ನುತ್ತಾರೆ ಜೊತೆ ಜೊತೆಯಲಿ ಧಾರಾವಾಹಿ ತಂಡದ ಸದಸ್ಯರು. ಇದನ್ನೂ ಓದಿ:ರಾಣಾ ದಗ್ಗುಭಾಟಿ ಪತ್ನಿ ಪ್ರೆಗ್ನೆಂಟ್? ಮಿಹಿಕಾ ಬಜಾಜ್ ಪ್ರತಿಕ್ರಿಯೆ

    ಈ ಹಿಂದೆ ಅನಿರುದ್ಧ(Aniruddha)  ಕೂಡ ಜೊತೆ ಜೊತೆಯಲಿ ಟೀಮ್ ಜೊತೆ ಅಸಹಕಾರ ತೋರಿದ್ದರು ಎನ್ನುವ ಕಾರಣಕ್ಕಾಗಿ ಟೆಲಿವಿಷನ್ ಅಸೋಸಿಯೇಷನ್ ನ ನಿರ್ಮಾಪಕರ ವಿಭಾಗ, ಅನಿರುದ್ಧ ವಿರುದ್ದ ಕಠಿಣ ಕ್ರಮ ತಗೆದುಕೊಂಡಿತ್ತು. ಆನಂತರ ಅದು ಸುಖಾಂತ್ಯವಾಗಿತ್ತು. ಇದೀಗ ಪ್ರಧಾನ ಪಾತ್ರಧಾರಿ ಕೂಡ ಅದೇ ಹಾದಿಯನ್ನೇ ಹಿಡಿದಿದ್ದಾರೆ ಎನ್ನುವುದು ಕಿರುತೆರೆ ವಲಯದಲ್ಲಿ ಕೇಳಿ ಬರುತ್ತಿರುವ ಮಾತು.

    ಪಬ್ಲಿಕ್ ಟಿವಿ ಡಿಜಟಲ್ ಜೊತೆ ಮಾತನಾಡಿದ ಜೊತೆ ಜೊತೆಯಲಿ ಟೀಮ್ ಮತ್ತೋರ್ವ ಸದಸ್ಯರೊಬ್ಬರು ಧಾರಾವಾಹಿ ನಿಲ್ಲಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡರು. ಆದರೆ, ಉಳಿದ ವಿಚಾರದ ಬಗ್ಗೆ ಮಾತನಾಡಲು ಇಷ್ಟಪಡಲಿಲ್ಲ. ಧಾರಾವಾಹಿ ಅದ್ಭುತವಾಗಿ ಮೂಡಿ ಬರುತ್ತಿದ್ದರು, ಹೆಚ್ಚು ಪ್ರೇಕ್ಷಕರನ್ನು ಹೊಂದಿದ್ದರೂ ಕಲಾವಿದರ ಅಸಹಕಾರ ಜೊತೆ ಜೊತೆಯಲಿ ಧಾರಾವಾಹಿಯನ್ನೇ ಬಲಿ ತಗೆದುಕೊಂಡಿತು ಎಂದು ಹೇಳುವುದನ್ನು ಅವರು ಮರೆಯಲಿಲ್ಲ.

    ಅಂದಹಾಗೆ ಈ ಧಾರಾವಾಹಿಯ ಪ್ರಧಾನ ಪಾತ್ರಗಳಲ್ಲಿ ಹರೀಶ್ ರಾಜ್ (Harish Raj) ಹಾಗೂ ಮೇಘಾ ಶೆಟ್ಟಿ (Megha Shetty) ನಟಿಸುತ್ತಿದ್ದಾರೆ. ವಿಜಯಲಕ್ಷ್ಮಿ ಸಿಂಗ್ ಸೇರಿದಂತೆ ಹಲವರು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.

  • ‘ಜೊತೆ ಜೊತೆಯಲಿ’ ನನ್ನ ಪಯಣ ಮುಗಿಯಿತು : ನಟಿ ಮೇಘಾ ಶೆಟ್ಟಿ ಭಾವುಕ

    ‘ಜೊತೆ ಜೊತೆಯಲಿ’ ನನ್ನ ಪಯಣ ಮುಗಿಯಿತು : ನಟಿ ಮೇಘಾ ಶೆಟ್ಟಿ ಭಾವುಕ

    ರೂರು ಜಗದೀಶ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ (Jothe Jotheyali) ಧಾರಾವಾಹಿ ಮುಗಿಯುತ್ತಿದೆಯಾ? ಅಥವಾ ಸೀರಿಯಲ್ (Serial) ನಾಯಕಿ ಮೇಘಾ ಶೆಟ್ಟಿ (Megha Shetty) ಪಾತ್ರ ಮುಕ್ತಾಯ ಆಗುತ್ತಿದೆಯೋ ಗೊತ್ತಿಲ್ಲ. ಆದರೆ, ತಮ್ಮ ಪಾತ್ರವು ಧಾರಾವಾಹಿಯ ಕಥೆಯಲ್ಲಿ ಮುಗಿಯುತ್ತಿರುವ ಕುರಿತು ನಟಿ ಮೇಘಾ ಶೆಟ್ಟಿ ಹಂಚಿಕೊಂಡಿದ್ದಾರೆ. ಒಂದೊಂದು ರೀತಿಯಲ್ಲಿ ಕುಟುಂಬವನ್ನು ತೊರೆದಂತೆ ನೋವು ಆಗುತ್ತಿದೆ ಎಂದು ಅವರು ಹೇಳಿದ್ದಾರೆ.

    ಜೊತೆ ಜೊತೆಯಲಿ ಧಾರಾವಾಹಿಯು ಅವರ ವೃತ್ತಿ ಜೀವನಕ್ಕೆ ದೊಡ್ಡ ಬ್ರೇಕ್ ನೀಡಿತ್ತು. ಸತತ ನಾಲ್ಕು ವರ್ಷಗಳ ಕಾಲ ಪ್ರೇಕ್ಷಕರನ್ನು ರಂಜಿಸಿರುವ ಧಾರಾವಾಹಿಯು ಅಪಾರ ಅಭಿಮಾನಿಗಳನ್ನು ಹೊಂದಿತ್ತು. ಅದರಲ್ಲೂ ಅನಿರುದ್ಧ ಜತ್ಕರ್ ಗೂ ಕೂಡ ದೊಡ್ಡ ಮಟ್ಟದ ಗೆಲುವನ್ನು ತಂದು ಕೊಟ್ಟಿತ್ತು. ಅಂತಹ ಧಾರಾವಾಹಿ ಈಗ ಅಂತಿಮ ದೃಶ್ಯಗಳನ್ನು ಚಿತ್ರೀಕರಿಸುತ್ತಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಮೇಘಾ ನಿರ್ವಹಿಸುತ್ತಿದ್ದ ಪಾತ್ರವೂ ಕೊನೆಗೊಂಡಿದೆ. ಇದನ್ನೂ ಓದಿ:ಶಾಹಿದ್ ಕಪೂರ್ ಜೊತೆ ಪೂಜಾ ಹೆಗ್ಡೆ ರೊಮ್ಯಾನ್ಸ್

    ಜೊತೆ ಜೊತೆಯಲಿ ಧಾರಾವಾಹಿ ಮುಗಿಯುತ್ತಿದ್ದಂತೆಯೇ ಮೇಘಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈಗಾಗಲೇ ಅವರು ಗೋಲ್ಡನ್ ಸ್ಟಾರ್ ಗಣೇಶ್ (Ganesh) ನಟನೆಯ ಟ್ರಿಬಲ್ ರೈಡಿಂಗ್ (Triple Riding) ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ್ದಾರೆ. ಅಲ್ಲದೇ,   ಧನ್ವೀರ್ ನಟನೆಯ ಕೈವಾ ಸಿನಿಮಾದಲ್ಲೂ ನಾಯಕಿಯಾಗಿ ನಟಿಸಿದ್ದಾರೆ. ಆಪರೇಷನ್ ಲಂಡನ್ ಕೆಫೆ ಸಿನಿಮಾದ ಶೂಟಿಂಗ್ ನಲ್ಲೂ ಬ್ಯುಸಿಯಾಗಿದ್ದಾರೆ.

    ಕಿರುತೆರೆಯಿಂದ ಆಚೆ ಬರುತ್ತಿದ್ದಂತೆಯೇ ಹಲವಾರು ನಿರ್ದೇಶಕರು ಮೇಘಾರ ಜೊತೆ ಮಾತುಕತೆ ಮಾಡುತ್ತಿದ್ದಾರಂತೆ. ಹಲವು ಸ್ಕ್ರಿಪ್ಟ್ ಗಳನ್ನೂ ಅವರು ಕೇಳಿದ್ದಾರೆ. ಒಂದಷ್ಟು ಒಪ್ಪಿಕೊಂಡಿದ್ದಾರಂತೆ. ಮುಂದಿನ ದಿನಗಳಲ್ಲಿ ಈ ಸಿನಿಮಾಗಳ ಬಗ್ಗೆ ಮಾಹಿತಿ ಸಿಗಬಹುದು.

  • `ಜೊತೆ ಜೊತೆಯಲಿ’ ಖ್ಯಾತಿಯ ಶಿಲ್ಪಾ ಅಯ್ಯರ್ ಮದುವೆ ಆಲ್ಬಂ

    `ಜೊತೆ ಜೊತೆಯಲಿ’ ಖ್ಯಾತಿಯ ಶಿಲ್ಪಾ ಅಯ್ಯರ್ ಮದುವೆ ಆಲ್ಬಂ

    ಚಿತ್ರರಂಗದಲ್ಲಿ ಗಟ್ಟಿಮೇಳದ ಸೌಂಡ್ ಜೋರಾಗಿದೆ. ನಟ-ನಟಿಯರು ಸಾಲು ಸಾಲಾಗಿ ಹಸೆಮಣೆ ಏರುತ್ತಿದ್ದಾರೆ. ಇದೀಗ `ಜೊತೆ ಜೊತೆಯಲಿ’ (Jothe Jotheyali) ಖ್ಯಾತಿಯ ಶಿಲ್ಪಾ ಅಯ್ಯರ್ (Shilpa Iyer) ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಮುದ್ದಾದ ಜೋಡಿಯ ಚೆಂದದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಇದೀಗ ಸದ್ದು ಮಾಡ್ತಿದೆ. ಅವರ ಮದುವೆಯ ಸುಂದರ ಆಲ್ಬಂ ಇಲ್ಲಿದೆ ನೋಡಿ.

    ನಾಗಮಂಡಲ, ಕಸ್ತೂರಿ ನಿವಾಸ, ಜೊತೆ ಜೊತೆಯಲಿ, ಒಲವಿನ ನಿಲ್ದಾಣ ಸೇರಿದಂತೆ ಸಾಕಷ್ಟು ಸೀರಿಯಲ್‌ನಲ್ಲಿ ಬಣ್ಣ ಹಚ್ಚಿರುವ ನಟಿ ಶಿಲ್ಪಾ ಅವರು ಸಚಿನ್‌ ಜೊತೆ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಇದನ್ನೂ ಓದಿ: ಬಿದಿರಿನ ಉಡುಪಿನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟ ಉರ್ಫಿ ಜಾವೇದ್

    ಪ್ರೇಮಿಗಳ ದಿನಾಚರಣೆಯಂದು ಎಂಗೇಜ್ ಆಗಿರುವ ಸುದ್ದಿಯನ್ನು ನಟಿ ಸೋಷಿಯಲ್ ಮೀಡಿಯಾ ಮುಖಾಂತರ ತಿಳಿಸಿದ್ದರು. ಭಾವಿ ಪತಿ ಜೊತೆಗಿನ ಫೋಟೋ ಶೇರ್ ಮಾಡಿ ಅಚ್ಚರಿ ಮೂಡಿಸಿದ್ದರು. ಈಗ ಸೈಲೆಂಟ್ ಆಗಿ ಮದುವೆಯಾಗಿದ್ದಾರೆ.

    ಸಚಿನ್ ವಿಶ್ವನಾಥ್ (Sachin Vishwanath) ಅವರು ಲಾಯರ್ ಆಗಿದ್ದು, ಮನೆಯವರೇ ನೋಡಿ ನಿಶ್ಚಯಿಸಿರುವ ಮದುವೆಯಾಗಿದೆ. ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರಿದ್ದಾರೆ.

    ಶಿಲ್ಪಾ ಅಯ್ಯರ್- ಸಚಿನ್ ಮದುವೆಗೆ `ಜೊತೆ ಜೊತೆಯಲಿ’ ಟೀಂ ಮತ್ತು ʻಒಲವಿನ ನಿಲ್ದಾಣʼ ಸೇರಿದಂತೆ ಹಲವು ನಟ-ನಟಿಯರು ಭಾಗಿಯಾಗಿದ್ದರು. ನವಜೋಡಿಗೆ ಕಲಾವಿದರು, ಅಭಿಮಾನಿಗಳು ಶುಭಹಾರೈಸಿದ್ದಾರೆ.

    ಇನ್ನೂ ʻಜೊತೆ ಜೊತೆಯಲಿʼ ಸೀರಿಯಲ್‌ನಿಂದ ನಟ ಅನಿರುದ್ಧ್‌ ದೂರ ಸರಿದಿದ್ದರು ಕೂಡ ಸಹನಟಿ ಶಿಲ್ಪಾ ಜೊತೆ ಉತ್ತಮ ಸ್ನೇಹ ಹೊಂದಿದ್ದಾರೆ. ತಂಡದ ಜೊತೆ ಸೇರಿ ನಟಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಹಿರಿಯ ನಟಿ ವಿಜಯ್‌ ಲಕ್ಷ್ಮಿ ಸಿಂಗ್‌, ಪ್ರಥಮಾ ಪ್ರಸಾದ್‌ ಕೂಡ ಭಾಗಿಯಾಗಿದ್ದರು.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಜೊತೆ ಜೊತೆಯಲಿ’ ನಟಿ ಶಿಲ್ಪಾ ಅಯ್ಯರ್

    ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಜೊತೆ ಜೊತೆಯಲಿ’ ನಟಿ ಶಿಲ್ಪಾ ಅಯ್ಯರ್

    ಚಿತ್ರರಂಗದಲ್ಲಿ ಗಟ್ಟಿಮೇಳದ ಸೌಂಡ್ ಜೋರಾಗಿದೆ. ನಟ-ನಟಿಯರು ಸಾಲು ಸಾಲಾಗಿ ಹಸೆಮಣೆ ಏರುತ್ತಿದ್ದಾರೆ. ಇದೀಗ `ಜೊತೆ ಜೊತೆಯಲಿ’ (Jothe Jotheyali) ಖ್ಯಾತಿಯ ಶಿಲ್ಪಾ ಅಯ್ಯರ್ (Shilpa Iyer) ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

    ನಾಗಮಂಡಲ, ಕಸ್ತೂರಿ ನಿವಾಸ, ಜೊತೆ ಜೊತೆಯಲಿ, ಒಲವಿನ ನಿಲ್ದಾಣ (Olavina Nildana) ಸೇರಿದಂತೆ ಸಾಕಷ್ಟು ಸೀರಿಯಲ್‌ನಲ್ಲಿ ಬಣ್ಣ ಹಚ್ಚಿರುವ ನಟಿ ಶಿಲ್ಪಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೇಮಿಗಳ ದಿನಾಚರಣೆಯಂದು ಎಂಗೇಜ್ (Engage) ಆಗಿರುವ ಸುದ್ದಿಯನ್ನು ನಟಿ ಸೋಷಿಯಲ್ ಮೀಡಿಯಾ ಮುಖಾಂತರ ತಿಳಿಸಿದ್ದರು. ಭಾವಿ ಪತಿ ಜೊತೆಗಿನ ಫೋಟೋ ಶೇರ್ ಮಾಡಿ ಅಚ್ಚರಿ ಮೂಡಿಸಿದ್ದರು. ಈಗ ಸೈಲೆಂಟ್ ಆಗಿ ಮದುವೆಯಾಗಿದ್ದಾರೆ.

    ಸಚಿನ್ ವಿಶ್ವನಾಥ್ (Sachin Vishwanath) ಅವರು ಲಾಯರ್ (Lawyer) ಆಗಿದ್ದು, ಮನೆಯವರೇ ನೋಡಿ ನಿಶ್ಚಯಿಸಿರುವ ಮದುವೆಯಾಗಿದೆ. ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ (Wedding) ಏರಿದ್ದಾರೆ.

    ಶಿಲ್ಪಾ ಅಯ್ಯರ್- ಸಚಿನ್ ಮದುವೆಗೆ `ಜೊತೆ ಜೊತೆಯಲಿ’ ಟೀಂ ಮತ್ತು ಹಲವು ನಟ-ನಟಿಯರು ಭಾಗಿಯಾಗಿದ್ದರು. ನವಜೋಡಿಗೆ ಕಲಾವಿದರು, ಅಭಿಮಾನಿಗಳು ಶುಭಹಾರೈಸಿದ್ದಾರೆ.

  • ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ʻಜೊತೆ ಜೊತೆಯಲಿʼ ನಟಿಯ ಹೊಸ ಫೋಟೋಶೂಟ್‌

    ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ʻಜೊತೆ ಜೊತೆಯಲಿʼ ನಟಿಯ ಹೊಸ ಫೋಟೋಶೂಟ್‌

    ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ಕರಾವಳಿ ಬೆಡಗಿ ಮೇಘಾ ಶೆಟ್ಟಿ (Megha Shetty) ಮಿಂಚ್ತಿದ್ದಾರೆ. ಇತ್ತೀಚಿಗೆ ಬಿಳಿ ಬಣ್ಣದ ಸೀರೆಯುಟ್ಟು ಹೊಸ ಫೋಟೋಶೂಟ್‌ನಲ್ಲಿ (Photoshoot) ನಟಿ ಕಂಗೊಳಿಸಿದ್ದಾರೆ. ಇದೀಗ ಈ ಫೋಟೋಶೂಟ್ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೂ ಓದಿ: ಅರವಿಂದ್- ದಿವ್ಯಾ ಉರುಡುಗ ಪ್ರೀತಿಗೆ 2 ವರ್ಷಗಳ ಸಂಭ್ರಮ

    `ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮತ್ತು ಸಿನಿಮಾ ಎರಡನ್ನು ಬ್ಯಾಲೆನ್ಸ್ ಮಾಡುತ್ತ ಚಿತ್ರರಂಗದಲ್ಲಿ ತಮ್ಮದೇ ಶೈಲಿಯಲ್ಲಿ ಛಾಪು ಮೂಡಿಸುತ್ತಿದ್ದಾರೆ. ಕಿರುತೆರೆಯ ಅನು ಸಿರಿಮನೆ ಪಾತ್ರದ ಮೂಲಕ ನಟಿ ಗಮನ ಸೆಳೆಯುತ್ತಿದ್ದಾರೆ.

    ಕೆಲವು ಭಿನ್ನಾಭಿಪ್ರಾಯದಿಂದ ನಟ ಅನಿರುದ್ಧ ಸೀರಿಯಲ್‌ನಿಂದ ಹೊರನಡೆದರು. ಅದೇ ಸಮಯದಲ್ಲಿ ಅನು ಸಿರಿಮನೆ (Anu Sirimane) ಪ್ರೆಗ್ನೆಂಟ್ ಎಂದು ಸ್ಟೋರಿ ಲೈನ್ ಪ್ರಸಾರವಾಗುತ್ತಿತ್ತು. ಈಗಲೂ ಈ ಬಗ್ಗೆ ಸೀರಿಯಲ್‌ನಲ್ಲಿ ಅನು ಪ್ರೆಗ್ನೆಂಟ್ ಎಂದೇ ಕಥೆಯಲ್ಲಿ ತೋರಿಸಲಾಗುತ್ತಿದೆ. ತೆರೆ ಮೇಲಿನ ಕಥೆಯನ್ನ ನೋಡುಗರು ನಿಜ ಜೀವನದಲ್ಲೂ ನಿಜ ಎಂದೇ ಭಾವಿಸಿ ಮಾತನಾಡುತ್ತಾರೆ ಎಂಬುದಕ್ಕೆ ಮೇಘಾ ಶೆಟ್ಟಿ ಫೋಟೋಶೂಟ್ ಕಥೆಯೇ ತಾಜಾ ಉದಾಹರಣೆಯಾಗಿದೆ.

    ಇತ್ತೀಚಿಗೆ ನಟಿ ಮೇಘಾ, ಬಿಳಿ ಬಣ್ಣದ ಡಿಸೈನರ್ ಸೀರೆಯುಟ್ಟು ಮಿಂಚಿರುವ ಚೆಂದದ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಈ ಫೋಟೋನೇ ಈಗ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಸೀರಿಯಲ್‌ನಲ್ಲಿ ಅನು ಸಿರಿಮನೆ ಗರ್ಭಿಣಿ ಎಂದು ಜನರಿಗೆ ಪದೇ ಪದೇ ಹೇಳುತ್ತಿದ್ದಾರೆ. ಆದರೆ ಒಂದು ದಿನವೂ ಹೊಟ್ಟೆ ಕಾಣಿಸಿಲ್ಲ. ಇಲ್ಲಿ ನೋಡಿದರೆ ಹೊಟ್ಟೆ ತೋರಿಸಿಕೊಂಡು ಫೋಟೋ ಹಾಕಿದ್ದಾರೆ ಎಂದು ನಟಿ ಮೇಘಾ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ಈ ಪೋಸ್ಟ್ ಇದೀಗ ಸಖತ್ ಸದ್ದು ಮಾಡ್ತಿದೆ.

  • ಮದುವೆ ಅನ್ನೋದು ಒಂದು ಜವಾಬ್ದಾರಿ: ಎರಡನೇ ಮದುವೆ ಬಗ್ಗೆ ನಟಿ ಅಪೂರ್ವ ಮಾತು

    ಮದುವೆ ಅನ್ನೋದು ಒಂದು ಜವಾಬ್ದಾರಿ: ಎರಡನೇ ಮದುವೆ ಬಗ್ಗೆ ನಟಿ ಅಪೂರ್ವ ಮಾತು

    ಕಿರುತೆರೆ `ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮೂಲಕ ಮನೆ ಮಾತಾಗಿರುವ ಪುಷ್ಪ ಪಾತ್ರಧಾರಿ ಅಪೂರ್ವ ಅವರು ಸೂಪರ್ ಕ್ವೀನ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಈ ವೇಳೆ ಅಮ್ಮ ಮತ್ತು ಮಗಳ ರೌಂಡ್ ನಡೆಯುತ್ತಿದ್ದು, ಅಪೂರ್ವ (Apoorva) ಅವರಿಗೆ ಮಗಳ ಬಿಗ್ ಸರ್ಪ್ರೈಸ್ (Surprise) ಕೊಟ್ಟಿದ್ದಾರೆ. ಮಗಳ ಗಿಫ್ಟ್ ನೋಡಿ ಅಪೂರ್ವ ಖುಷಿಯಾಗಿದ್ದಾರೆ.

    ಸೂಪರ್ ಕ್ವೀನ್ಸ್ (Super Queens) ಮೂಲಕ ತಮ್ಮ ಜೀವನದ ತೆರೆಹಿಂದಿನ ಕಥೆಯನ್ನ ಸ್ಪರ್ಧಿಗಳು ಬಿಚ್ಚಿಟ್ಟಿದ್ದಾರೆ. ಹಾಗೆಯೇ ನಟಿ ಅಪೂರ್ವ ಅವರ ಜೀವನದ ಕಥೆ ಪ್ರೇಕ್ಷಕರನ್ನು ಕೂಡ ಭಾವುಕರನ್ನಾಗಿಸಿದೆ. ಇನ್ನೂ ಅಮ್ಮ -ಮಗಳ ರೌಂಡ್‌ನಲ್ಲಿ ಮಗಳು, ಕೆಲವು ಪ್ರಶ್ನೆಗಳನ್ನ ತಾಯಿ ಅಪೂರ್ವಗೆ ಕೇಳಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಅರವಿಂದ್‌ಗಾಗಿ ಬೇಡಿಕೆಯಿಟ್ಟ ದಿವ್ಯಾ ಉರುಡುಗ

    ನನ್ನ ಮೊದಲ ಪ್ರಶ್ನೆ ಇದು. ಯಾವತ್ತಾದ್ದರೂ ಅನಿಸಿದ್ಯಾ ನನ್ನ ಮಗಳು ಇಲ್ಲದಿದ್ದರೆ ನಾನು ಖುಷಿಯಾಗಿರುತ್ತಿದ್ದೆ ಅಥವಾ ಗಂಡು ಮಗು ಆಗಿದ್ದರೆ ಇನ್ನೂ ಖುಷಿಯಾಗಿರುತ್ತಿದ್ದೆ ಕಷ್ಟ ಪಡುತ್ತಿರಲಿಲ್ಲ ಅನಿಸಿದ್ಯಾ ಎಮದು. ಆಗ 100ರಲ್ಲಿ 1% ನನಗೆ ಈ ರೀತಿ ಅನಿಸಿಲ್ಲ. ಎಷ್ಟೋ ದೇವರಲ್ಲಿ ಹರಿಕೆ ಕಟ್ಟಿಕೊಂಡು ಮೊದಲು ಹೆಣ್ಣು ಮಗು ಆಗಬೇಕು ಎಂದು ಹುಟ್ಟಿರುವ ಮಗು ನೀನು ಎಂದು ಅಪೂರ್ವ ಉತ್ತರಿಸಿದ್ದಾರೆ.

    ಮತ್ತೆ ಮದುವೆ ಆಗಬೇಕು ಎಂದು ಯೋಚನೆ ಕೂಡ ಮಾಡಿಲ್ಲ ಯಾಕೆ ಎಂದು ಅಮ್ಮನಿಗೆ ಕೇಳಿದ್ದಾರೆ. ಮದುವೆ ಅಂದ್ರೆ ಏನು ಅದರ ಮಹತ್ವ ಎಲ್ಲ ಅರ್ಥ ಆಗೋಕು ಮುಂಚೆ ಮದುವೆ ಆಗಿದ್ದು ಎಷ್ಟೊಂದು ಸಮಸ್ಯೆ ನೋಡ್ಬಿಟ್ಟು ಮದುವೆ ಆಗಬೇಕು ಅನಿಸಲಿಲ್ಲ. ಕೈಯಲ್ಲಿ ಒಂದು ಹೆಣ್ಣು ಮಗುವಿಗೆ ಬರುವ ಜನರ ಮೆಂಟಾಲಿಟಿ ಹೇಗೆ ಇರುತ್ತೆ. ಏನೇ ಆಗಲಿ ಫಸ್ಟ್ ತಪ್ಪು ಎಂದು ಹೇಳುವುದು ಹೆಣ್ಣು ಮಕ್ಕಳ ಮೇಲೆ ಹೀಗಾಗಿ ಯೋಚನೆ ಮಾಡಿಲ್ಲ ಮಾಡುವ ಯೋಚನೆ ಮಾಡಲ್ಲ. ಮದುವೆ ಅನ್ನೋದು ಒಂದು ಜವಾಬ್ದಾರಿ ರೀತಿ ಬಂದವರನ್ನು ನಾವು ಚೆನ್ನಾಗಿ ನೋಡಿಕೊಂಡಿಲ್ಲ ಅಂದ್ರೆ ಹೇಗೆ ಎಂದು ನಟಿ ಅಪೂರ್ವ ಮಾತನಾಡಿದ್ದಾರೆ.

    ಇನ್ನೂ ಈ ವೇಳೆ ಅಮ್ಮನಿಗೆ ಚಿನ್ನದ ಮಾಂಗಲ್ಯ ಗಿಫ್ಟ್ ಮಾಡಿದ್ದಾರೆ. ತನಗೆ ಕಾರು ಖರಿದೀಸಲು ಎಂದು ಇಟ್ಟ ಹಣದಲ್ಲಿ ತಾಯಿಗೆ ಚಿನ್ನದ ಮಾಂಗಲ್ಯ ಕಾಣಿಕೆಯಾಗಿ ನೀಡಿದ್ದಾರೆ. ಮಗಳ ಪ್ರೀತಿಗೆ ನಟಿ ಅಪೂರ್ವ ಭಾವುಕರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • Breaking News: ಅನಿರುದ್ಧ ಬ್ಯಾನ್ ಪ್ರಕರಣ ಸುಖಾಂತ್ಯ – ಕೈ ಕುಲುಕಿ ಅನುಮತಿ

    Breaking News: ಅನಿರುದ್ಧ ಬ್ಯಾನ್ ಪ್ರಕರಣ ಸುಖಾಂತ್ಯ – ಕೈ ಕುಲುಕಿ ಅನುಮತಿ

    ಜೊತೆ ಜೊತೆಯಲಿ (Jothe Jotheyali) ಧಾರಾವಾಹಿಯಲ್ಲಿ ಅನಿರುದ್ಧ ಅಸಹಕಾರ ತೋರಿದರು ಮತ್ತು ಧಾರಾವಾಹಿ ತಂಡಕ್ಕೆ ನಷ್ಟವನ್ನುಂಟು ಮಾಡಿದರು ಅನ್ನುವ ಕಾರಣಕ್ಕಾಗಿ ಕನ್ನಡ ಕಿರುತೆರೆ ನಿರ್ಮಾಪಕರ ಸಂಘವು ಅನಿರುದ್ಧ (Aniruddha) ಅವರಿಗೆ ಅಲಿಖಿತ ಬ್ಯಾನ್ ಘೋಷಣೆ ಮಾಡಿತ್ತು. ಇಂದು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಭೆ ಮಾಡಿ, ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದಾರೆ.

    ಸಭೆಯಲ್ಲಿ ಹಿರಿಯ ನಿರ್ದೇಶಕರಾದ ಲಿಂಗದೇವರು, ಶೇಷಾದ್ರಿ ಹಾಗೂ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ ಶಿವಕುಮಾರ್, ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಸೇರಿದಂತೆ ಹಲವರು ಹಾಜರಿದ್ದರು. ಅನಿರುದ್ಧ ಮತ್ತು ನಿರ್ಮಾಪಕರ ಸಂಘದ ಅಹವಾಲನ್ನು ಕೇಳಿಸಿಕೊಂಡು, ಹೇರಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಇದನ್ನೂ ಓದಿ: Breaking News- ಅನಿರುದ್ಧ ಬ್ಯಾನ್ ವಿಚಾರ: ಫಿಲ್ಮ್ ಚೇಂಬರ್ ಗೆ ಬಾರದಿರಲು ನಿರ್ಮಾಪಕರ ಸಂಘ ನಿರ್ಧಾರ

    ಅನಿರುದ್ಧ ಅವರು ಸೂರ್ಯವಂಶ ಧಾರಾವಾಹಿಯಲ್ಲಿ ನಾಯಕರಾಗಿ ನಟಿಸುವುದಕ್ಕೂ ಆಕ್ಷೇಪಣೆ ವ್ಯಕ್ತಪಡಿಸಲಾಗಿತ್ತು. ಹಾಗಾಗಿ ಸಮಸ್ಯೆ ಮತ್ತಷ್ಟು ಜಟಿಲಗೊಂಡಿತ್ತು. ಇದೀಗ ಆ ಧಾರಾವಾಹಿಯಲ್ಲೂ ನಟಿಸಲು ಅನಿರುದ್ಧ ಅವರಿಗೆ ಅವಕಾಶ ಸಿಕ್ಕಿದೆ. ಎಸ್.ನಾರಾಯಣ್ ನಿರ್ದೇಶನದಲ್ಲಿ ಈ ಧಾರಾವಾಹಿ ಯಾವುದೇ ಅಡೆತಡೆ ಇಲ್ಲದೇ ಮೂಡಿ ಬರಲಿದೆ.

    ಅನಿರುದ್ಧ ಅವರಿಗೆ ಸಭೆಯಲ್ಲಿ ಹಲವು ಸಲಹೆಗಳನ್ನೂ ನೀಡಲಾಗಿದ್ದು, ನಿರ್ಮಾಪಕರ ಹಿತದೃಷ್ಟಿಯನ್ನೂ ಕಾಪಾಡುವಂತೆ ತಿಳಿಸಲಾಗಿದೆ. ಮುಂದೆ ಹೀಗೆ ಆಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಈ ಮೂಲಕ ಎಲ್ಲ ಸಮಸ್ಯೆಗಳಿಗೂ ಸಭೆಯಲ್ಲಿ ಪರಿಹಾರ ಕಂಡುಕೊಳ್ಳಲಾಗಿದೆ. ಇದನ್ನೂ ಓದಿ: ‘ಕಾಂತಾರ 2’ ಸಿನಿಮಾ ಮಾಡಲು ಪಂಜುರ್ಲಿ ದೈವದಿಂದ ಸಿಕ್ತು ಅನುಮತಿ

    Live Tv
    [brid partner=56869869 player=32851 video=960834 autoplay=true]

  • ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ಅನಿರುದ್ಧ್-ಅನು ಜೋಡಿ

    ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ಅನಿರುದ್ಧ್-ಅನು ಜೋಡಿ

    ಕಿರುತೆರೆಯ ಮುದ್ದಾದ ಜೋಡಿ ಅನಿರುದ್ಧ್ (Aniruddha Jatkar) ಮತ್ತು ಅನು ಸಿರಿಮನೆ (Anu Sirimane) ಮತ್ತೆ ಒಂದಾಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. `ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮೂಲಕ ಮನೆ ಮಾತಾದ ಈ ಜೋಡಿ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

    ಟಿವಿ ಲೋಕದ ಸಕ್ಸಸ್‌ಫುಲ್ `ಜೊತೆ ಜೊತೆಯಲಿ’ ಸೀರಿಯಲ್‌ನಿಂದ ಆರ್ಯವರ್ಧನ್ ಅಲಿಯಾಸ್ ಅನಿರುದ್ಧ್ ಹೊರಬಂದ ಮೇಲೆ ಮತ್ತೆ ಆರ್ಯ ಮತ್ತು ಅನು ಜೊತೆಯಾಗಿ ಈ ಮೂಲಕ ತಮ್ಮ ಫ್ಯಾನ್ಸ್‌ಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅನಿರುದ್ಧ್ ಮಾಡ್ತಿದ್ದ ಪಾತ್ರವನ್ನ ಇದೀಗ ಹರೀಶ್ ರಾಜ್(Harish Raj) ನಿಭಾಯಿಸುತ್ತಿದ್ದಾರೆ. ಅನಿರುದ್ಧ್ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ತೆರೆಯ ಮೇಲೆ ಮಿಸ್ ಮಾಡಿಕೊಳ್ತಿರುವ ಫ್ಯಾನ್ಸ್‌ಗೆ ಈ ಜೋಡಿಯ ನಯಾ ಫೋಟೋ ನೋಡಿ ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ: ದೊಡ್ಮನೆಯಲ್ಲಿ ಬ್ರೇಕಪ್ ಮಾಡಿಕೊಂಡ ರಾಕೇಶ್ – ಅಮೂಲ್ಯ

    ಅನಿರುದ್ಧ್ ಮತ್ತು ಭಾರತಿ ವಿಷ್ಣುವರ್ಧನ್ (Bharathi Vishnuvardhan) ಅವರ ಹೊಸ ಮನೆಯ ಗೃಹ ಪ್ರವೇಶಕ್ಕೆ (House Warming) ಅನು ಸಿರಿಮನೆ ಅಲಿಯಾಸ್ ಮೇಘಾ ಶೆಟ್ಟಿ (Megha Shetty) ಸಾಕ್ಷಿಯಾಗಿದ್ದಾರೆ. ಅನಿರುದ್ಧ್ ಅವರ ಹೊಸ ಮನೆಯ ಸಂಭ್ರಮಕ್ಕೆ ಮೇಘಾ ಕೂಡ ಸಾಕ್ಷಿಯಾಗಿದ್ದು, ತಾವು ಕೂಡ ಅವರ ಕುಟುಂಬದಲ್ಲಿ ಒಬ್ಬರಾಗಿ ಒಳ್ಳೆಯ ಸಮಯವನ್ನ ಕಳೆದಿದ್ದಾರೆ. ಆರ್ಯ ಮನೆಯ ಗೃಹಪ್ರವೇಶದ ಸಂಭ್ರಮದ ಫೋಟೋವನ್ನು ನಟಿ ಅನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

    ಆರ್ಯ ಮತ್ತು ಜೋಡಿ ಹೊಸ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಬಹುದಿನಗಳ ನಂತರ ಒಟ್ಟಿಗೆ ಕಾಣಿಸಿಕೊಳ್ಳುವುದರ ಮೂಲಕ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]