Tag: ಜೋಡಿ ಕೊಲೆ

  • ಬೆಂಗಳೂರು ಹೊರವಲಯದಲ್ಲಿ ಡಬಲ್‌ ಮರ್ಡರ್‌ ಕೇಸ್‌ – ಆರೋಪಿ ಬಂಧನ

    ಬೆಂಗಳೂರು ಹೊರವಲಯದಲ್ಲಿ ಡಬಲ್‌ ಮರ್ಡರ್‌ ಕೇಸ್‌ – ಆರೋಪಿ ಬಂಧನ

    – ಸದಾ ಹೀಯಾಳಿಸುತ್ತಿದ್ದಕ್ಕೆ ಬೇಸತ್ತು ಕುಡಿದ ಮತ್ತಿನಲ್ಲಿ ಇಬ್ಬರಿಗೂ ರಾಡ್‌ನಿಂದ ಹೊಡೆದು ಕೊಲೆ

    ಬೆಂಗಳೂರು: ಸಿಲಿಕಾನ್‌ ಸಿಟಿಯ ಹೊರವಲಯದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ.

    ಬಸ್ ಸರ್ವಿಸ್ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಬಂಧಿತ ಆರೋಪಿ. ನಾಗೇಶ್ (55) ಮತ್ತು ಮಂಜುನಾಥ್ (50) ಎಂಬವರನ್ನ ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದ. ಇದನ್ನೂ ಓದಿ: ರೋಡ್ ರೇಜ್ ಪ್ರಕರಣಗಳ ತನಿಖೆಗಾಗಿ ಟ್ರಾಫಿಕ್ ಪೊಲೀಸರಿಗೆ ಅವಕಾಶ ನೀಡುವಂತೆ ಗೃಹ ಇಲಾಖೆಗೆ ಪತ್ರ

    ಕುಡಿದ ನಶೆಯಲ್ಲಿ ಗಲಾಟೆ ಮಾಡಿಕೊಂಡು ರಾಡ್‌ನಿಂದ ತಲೆಗೆ ಹೊಡೆದು ಇಬ್ಬರ ಹತ್ಯೆ ಮಾಡಿದ್ದ. ನಾಗೇಶ್ ಮತ್ತು ಮಂಜುನಾಥ್‌ನಿಂದ ಸದಾ ಸುರೇಶ್‌ಗೆ ಬೈಯ್ಯುತ್ತಿದ್ದರು. ಕುಡಿದ ಬಳಿಕ ನೀನು ಕಳ್ಳ, ನಿನ್ನ ಮೇಲೆ ಕೇಸ್‌ಗಳಿವೆ ಎಂದು ಸದಾ ಹಿಯಾಳಿಸುತ್ತಿದ್ದರು.

    ಕೊಲೆಯಾದ ಶುಕ್ರವಾರ ರಾತ್ರಿ ಕೂಡ ಕುಡಿದು ನಿಂದನೆ ಮಾಡಿದ್ದಾರೆ. ಇದರಿಂದ ಬೇಸತ್ತು ಇಬ್ಬರನ್ನ ರಾಡ್‌ನಿಂದ ಹೊಡದು ಕೊಲೆ ಮಾಡಿ ಆರೋಪಿ ಸುರೇಶ್‌ ಪರಾರಿಯಾಗಿದ್ದ. ಬೆಂಗಳೂರು ಉತ್ತರ ತಾಲೂಕಿನ ಸಿಂಗಹಳ್ಳಿ ಗ್ರಾಮದ ಬಳಿ ಕೊಲೆ ನಡೆದಿತ್ತು. ಇದನ್ನೂ ಓದಿ: ರಾಯಚೂರಿನಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಹೆಚ್ಚಳ – ಹೆಲ್ಮೆಟ್ ಬಳಕೆ ಕಡ್ಡಾಯಗೊಳಿಸಿದ ಪೊಲೀಸರು

    ಈ ಮೂವರು ಸಹ ಬಸ್‌ಗಳ ಸರ್ವಿಸ್ ಕೆಲಸ ಮಾಡಿಕೊಂಡಿದ್ದರು. ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

  • ಅನುಮಾನಾಸ್ಪದ ರೀತಿಯಲ್ಲಿ ತಾಯಿ, ಮಗನ ಹತ್ಯೆ

    ಅನುಮಾನಾಸ್ಪದ ರೀತಿಯಲ್ಲಿ ತಾಯಿ, ಮಗನ ಹತ್ಯೆ

    ಕೋಲ್ಕತ್ತಾ: ಶಾಲಾ ಶಿಕ್ಷಕಿ ಹಾಗೂ ಆಕೆಯ 14 ವರ್ಷದ ಮಗ ಅನುಮಾನಾಸ್ಪದ ರೀತಿಯಲ್ಲಿ ಕೊಲೆಯಾಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

    ಕೋಲ್ಕತ್ತಾದ ಬೆಹಲ ಪರ್ಣಶ್ರೀಯಲ್ಲಿ ಈ ಜೋಡಿ ಕೊಲೆ ನಡೆದಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಘಟನೆ ವಿವರ: ಮೃತ ಶಿಕ್ಷಕಿಯ ಗಂಡ ಎಂದಿನಂತೆ ತಮ್ಮ ಕೆಲಸ ಮುಗಿಸಿ ಮನೆಗೆ ಬಂದಿದ್ದಾರೆ. ಬಾಗಿಲು ತೆಗೆದು ಇರುವುದನ್ನು ಗಮನಿಸಿದ್ದಾರೆ. ಸುತ್ತ ನೋಡುವಷ್ಟರಲ್ಲಿ ಶಾಲಾ ಸಮವಸ್ತ್ರದಲ್ಲೇ ಕುತ್ತಿಗೆಗೆ ಟೈ ಸುತ್ತಿದ ರೀತಿಯಲ್ಲಿ ಮಗ ಬಿದ್ದಿರುವುದನ್ನು ನೋಡಿದ್ದಾರೆ. ಅಲ್ಲೆ ನೆಲದಲ್ಲಿ ತನ್ನ ಹೆಂಡತಿಯ ಮೃತ ದೇಹವನ್ನು ಸಹ ಕಂಡಿದ್ದಾರೆ. ಇದನ್ನೂ ಓದಿ: ಪರೀಕ್ಷೆಗೆ ತೆರಳೋ ಮುನ್ನ ಮೊಟ್ಟೆ ಬೇಯಿಸಲು ಹೋಗಿ ಅಗ್ನಿ ಅವಘಡ- ವಿದ್ಯಾರ್ಥಿನಿ ಸಾವು 

    ಸೋಮವಾರ ಸಂಜೆ  5 ಗಂಟೆ ಸುಮಾರಿಗೆ ಅಂತಕರು ಮನೆಗೆ ನುಸುಳಿ, ಬಾಗಿಲು ಮುಚ್ಚಿ, ದೀಪ ಆರಿಸಿ ಈ ಕೃತ್ಯವನ್ನು ಎಸಗಿರಬಹುದು ಎಂದು ಮೆಲ್ನೋಟಕ್ಕೆ ತಿಳಿದುಬಂದಿದೆ. ಅಡುಗೆ ಮನೆಯಲ್ಲಿ ಕೊಲೆ ಮಾಡಿ ಹೊರ ತಂದು ಹಾಕಿದ್ದಾರೆಂದು ಅಂದಾಜಿಸಲಾಗಿದ್ದು, ಒಬ್ಬರು ಅಥವಾ ಅದಕ್ಕಿಂತ ಹೆಚ್ಚಿನ ಜನ ಸೇರಿ ಈ ಇಬ್ಬರನ್ನು ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೆ ಸತ್ಯ ಹೊರಬರಲಿದೆ. ಇದನ್ನೂ ಓದಿ: ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು