Tag: ಜೋತಿಷಿ

  • ಪ್ರಧಾನಿ ಮೋದಿ ಜಾತಕದಲ್ಲಿ ಕಂಟಕ- ಫೆಬ್ರವರಿ ನಂತರ ಬುಧಬುಕ್ತಿಗೆ ಮುಕ್ತಿ: ಜ್ಯೋತಿಷಿ ಅಮ್ಮಣ್ಣಾಯ

    ಪ್ರಧಾನಿ ಮೋದಿ ಜಾತಕದಲ್ಲಿ ಕಂಟಕ- ಫೆಬ್ರವರಿ ನಂತರ ಬುಧಬುಕ್ತಿಗೆ ಮುಕ್ತಿ: ಜ್ಯೋತಿಷಿ ಅಮ್ಮಣ್ಣಾಯ

    ಉಡುಪಿ: ಪ್ರಧಾನಿ ನರೇಂದ್ರ ಮೋದಿ ಜಾತಕದಲ್ಲಿ ಕಂಟಕ ಇರುವುದರಿಂದ ಪಂಚರಾಜ್ಯಗಳ ಚುನಾವಣೆಯಲ್ಲಿ ಸೋಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಕೆಲವು ಆರೋಪಗಳು ಬರುತ್ತಿದೆ ಎಂದು ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಹೇಳಿದ್ದಾರೆ.

    ಉಡುಪಿಯ ಕಾಪುವಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರಕಾಶ್ ಅಮ್ಮಣ್ಣಾಯ, ಮೋದಿ ಜಾತಕದಲ್ಲಿ ಬುಧಭುಕ್ತಿ ಇದೆ. ಬುಧಭುಕ್ತಿ ವಿಮೋಚನೆಯಾದ ನಂತರ ಮತ್ತೆ ಜಾತಕದಲ್ಲಿ ಒಳ್ಳೇ ದಿನಗಳು ಇದೆ ಎಂದು ಹೇಳಿದರು. ಪ್ರಧಾನಿ ಮೋದಿ ನೇತೃತ್ವದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ ಮಿತ್ರಕೂಟಕ್ಕೆ 280 ಸೀಟುಗಳು ಬರಲಿದೆ. ಹೆಚ್ಚು ಮಿತ್ರಪಕ್ಷಗಳು ಜೊತೆಯಾದರೆ ಸೀಟುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದರು.

    ಜಾತ್ರೆಯ ಬಲೂನು: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮೋದಿಯ ಗರ್ವಭಂಗ ಅಂತ ಬೀಗುತ್ತಿರುವವರು ಜಾತ್ರೆಯ ಬಲೂನುಗಳು ಎಂದು ವಿಪಕ್ಷಗಳನ್ನು ಬಣ್ಣಿಸಿದ್ದಾರೆ. ಮೋದಿ ಫುಟ್ಬಾಲ್ ಇದ್ದಂತೆ. ಚೌಕಟ್ಟಿನೊಳಗೆ ಫುಟ್ ಬಾಲ್ ಓಡಾಡುತ್ತದೆ. ಎಲ್ಲೆಲ್ಲೋ ಹಾರಿ ಹೋಗಲ್ಲ. ಬಲೂನು ಊದಿಕೊಂಡು ಆಗಸದಲ್ಲಿ ಹಾರಾಟ ಮಾಡಿ ಕೆಲವೇ ಕ್ಷಣಗಳಲ್ಲಿ ಒಡೆದುಹೋಗುತ್ತದೆ ಎಂದು ಹೇಳಿದ್ದಾರೆ.

    ಪ್ರಧಾನಿ ಮೋದಿ ಜಾತಕದಲ್ಲಿ ಬುಧಭುಕ್ತಿ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿಗೆ ಕೊಂಚ ಹಿನ್ನಡೆಯಾಗುತ್ತದೆ. ಫೆಬ್ರವರಿ ನಂತರ ಕೇತುಭುಕ್ತಿ ಆಗಮನವಾಗಿ ಪ್ರಧಾನಿ ಮೋದಿಗೆ ಬರುವ ಸಮಸ್ಯೆಗಳೆಲ್ಲಾ ಪರಿಹಾರವಾಗುತ್ತದೆ ಎಂದು ಹೇಳಿದರು. ಪಂಚ ರಾಜ್ಯಗಖ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಅವಕಾಶ ಇತ್ತು. ಆದ್ರೆ ರಾಜಕೀಯ ನಾಟಕದಲ್ಲಿ ಕೊನೆ ಕ್ಷಣದ ಬದಲಾವಣೆಯಾಗಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಎಂ ಯಾರಾಗ್ತಾರೆ ಅನ್ನೋ ನಿರ್ಧಾರ ಮಾಡೋದು ಎಚ್‍ಡಿಡಿ: ಶಾ ನಿವಾಸದ ಮುಂದೆ ಜ್ಯೋತಿಷಿ ಭವಿಷ್ಯ

    ಸಿಎಂ ಯಾರಾಗ್ತಾರೆ ಅನ್ನೋ ನಿರ್ಧಾರ ಮಾಡೋದು ಎಚ್‍ಡಿಡಿ: ಶಾ ನಿವಾಸದ ಮುಂದೆ ಜ್ಯೋತಿಷಿ ಭವಿಷ್ಯ

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಕಷ್ಟು ಪ್ರಯತ್ನಪಟ್ಟರೆ ಮಾತ್ರ ಸರಳ ಬಹುಮತಗಳಿಸುತ್ತದೆ. ಇಲ್ಲವಾದರೆ ರಾಜ್ಯದಲ್ಲಿ ಸಿಎಂ ಪಟ್ಟ ಯಾರಿಗೆ ಅನ್ನೋದು ದೇವೇಗೌಡರ ಕೈಯಲ್ಲಿರುತ್ತದೆ ಎಂದು ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ.

    ಚುನಾವಣೆಯ ಕುರಿತಂತೆ ಭವಿಷ್ಯ ತಿಳಿಸಲು ಶಿರಸಿಯ ಶ್ರೀಕಾಂತ್ ಭಟ್ ಎಂಬವರು ಅಮಿತ್ ಶಾ ಅವರ ನಿವಾಸದ ಬಳಿ ಆಗಮಿಸಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿ ಮನೆ ಒಳ ಪ್ರವೇಶಿಸಲು ಅನುಮತಿ ನಿರಾಕರಿಸಿದ್ದರು. ಹೀಗಾಗಿ ಅಮಿತ್ ಶಾ ಮನೆಯ ಮುಂದೆ ನಿಂತು ಮಾಧ್ಯಮಗಳ ಜೊತೆ ತನ್ನ ಭವಿಷ್ಯವಾಣಿಯನ್ನು ಹೇಳಿದರು.

    ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಯಾವುದೇ ಸರ್ಕಾರ ಬಹುಮತ ಪಡೆಯುವುದಿಲ್ಲ. ಆದರೆ ಪ್ರಯತ್ನಪಟ್ಟರೆ ಬಿಜೆಪಿಗೆ ಬಹುಮತ ಬರಬಹುದು. ಬಿಜೆಪಿಯಲ್ಲಿ 2, 3 ಸಾವಿರ ಮತಗಳ ಅಂತರದಲ್ಲಿ ಸೋಲುವ ಅಭ್ಯರ್ಥಿಗಳು ಇದ್ದಾರೆ. ಅವರ ಕುರಿತು ತಾನು ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

    ಬಿಜೆಪಿ ನಾಯಕರು ಪಕ್ಷದಲ್ಲಿನ ಈ ತಪ್ಪುಗಳನ್ನು ಸರಿಪಡಿಸಿಕೊಂಡಿಲ್ಲ ಎಂದರೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಾರೆ. ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಆಗಬೇಕು ಎಂಬುವುದನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ನಿರ್ಧರಿಸುತ್ತಾರೆ.

    ಅತಂತ್ರ ಸರ್ಕಾರ ಬಂದರೆ ಸಿದ್ದರಾಮಯ್ಯ ಹಾಗೂ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಸಿಎಂ ಆಗಲು ಸಾಧ್ಯವಿಲ್ಲ. ಇನ್ನು ಹೆಚ್‍ಡಿ ರೇವಣ್ಣಗೆ ಸಿಎಂ ಆಗುವ ಅದೃಷ್ಟ ಇಲ್ಲದಿದ್ದರೂ, ಡಿಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ.