Tag: ಜ್ಞಾನವಾಪಿ ಮಸೀದಿ

  • ಜ್ಞಾನವ್ಯಾಪಿ ಮಸೀದಿ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

    ನವದೆಹಲಿ: ಜ್ಞಾನವ್ಯಾಪಿ ಮಸೀದಿಯಲ್ಲಿ (Gyanvapi Mosque) ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ನಡೆಸುತ್ತಿರುವ ಸರ್ವೆ ಕಾರ್ಯಕ್ಕೆ ಬುಧವಾರ ಸಂಜೆವರೆಗೂ ಸುಪ್ರೀಂಕೋರ್ಟ್ (Supreme Court) ತಡೆ ನೀಡಿದೆ. ವಾರಣಾಸಿ ಜಿಲ್ಲಾ ನ್ಯಾಯಲಯದ ಆದೇಶದ ವಿರುದ್ಧ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ನೀಡಿದೆ.

    ಅಂಜುಮನ್ ಇಂಟೆಝಾಮಿಯಾ ಮಸೀದಿಯ ನಿರ್ವಹಣಾ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ತಾತ್ಕಾಲಿಕ ತಡೆ ನೀಡಿದೆ. ಅಲ್ಲದೇ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ.

    ಜಿಲ್ಲಾ ನ್ಯಾಯಾಲಯವು ಶುಕ್ರವಾರ ಸಂಜೆ 4:30 ರಂದು ಉತ್ಖನನಕ್ಕೆ ಅನುಮತಿ ನೀಡಿದೆ. ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಇಂದು ಬೆಳಗ್ಗೆ ಎಎಸ್‍ಐ ಸಮೀಕ್ಷಾ ತಂಡ ಸ್ಥಳಕ್ಕೆ ತಲುಪಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ.

    ಕನಿಷ್ಠ ಒಂದು ವಾರದವರೆಗೆ ಸ್ಥಳದಲ್ಲಿ ಯಾವುದೇ ಉತ್ಖನನಗಳು ನಡೆಯುವುದಿಲ್ಲ. ಪ್ರಸ್ತುತ ಅಳತೆ ಪಡೆಯುವುದು, ಫೋಟೋ ತೆಗೆಯುವುದು ನಡೆಯುತ್ತಿದೆ. ಎಎಸ್‍ಐನ ಹೇಳಿಕೆಯಿಂದ ಯಾವುದೇ ಉತ್ಖನನವನ್ನು ನಡೆಸುತ್ತಿಲ್ಲ ಎಂದು ತೋರುತ್ತದೆ. ಮುಂದಿನ ಸೋಮವಾರದವರೆಗೆ ಮಸೀದಿ ಜಾಗದಲ್ಲಿ ಯಾವುದೇ ಉತ್ಖನನವನ್ನು ನಡೆಸಲು ಯೋಜಿಸುವುದಿಲ್ಲ ಎಂಬ ಎಎಸ್‍ಐ ಹೇಳಿಕೆಯನ್ನು ನಾವು ದಾಖಲಿಸುತ್ತೇವೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

    ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ಅರ್ಜಿದಾರರಿಗೆ ಅವಕಾಶ ನೀಡುತ್ತೇವೆ. ಯಾವುದೇ ಆಕ್ರಮಣಶೀಲವಲ್ಲದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ನಾವು ಸ್ಪಷ್ಟಪಡಿಸುತ್ತೇವೆ. ಅರ್ಜಿದಾರರ ವಿಚಾರಣೆಯ ನಂತರ ಹೈಕೋರ್ಟ್‍ನ ಮುಂದಿನ ನಿರ್ದೇಶನಗಳಿಗೆ ಈ ಆದೇಶ ಒಳಪಟ್ಟಿರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿದ್ದ ಪೀಠ ಆದೇಶಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ

    ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ

    ಲಕ್ನೋ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ASI) ತಂಡ ಇಂದು (ಸೋಮವಾರ) ವಾರಣಾಸಿಯ (Varanasi) ಜ್ಞಾನವಾಪಿ (Gyanvapi) ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭಿಸಿದೆ.

    ಮಸೀದಿ ಪರಿಶೀಲನೆಗೆ ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ (Court) ಆದೇಶದ ವಿರುದ್ಧ ಮಸೀದಿ ಆಡಳಿತ ಸಮಿತಿ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಈ ಸರ್ವೆ ಆರಂಭಗೊಂಡಿದೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಸಮೀಕ್ಷೆ ಸೀಲ್ ಮಾಡಿದ ಶಿವಲಿಂಗದ ಆಕೃತಿ ಇರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಾ ಪ್ರದೇಶಗಳಲ್ಲೂ ನಡೆಯಲಿದೆ. ಮಸೀದಿಯಲ್ಲಿ ಶಿವಲಿಂಗದಂತೆ ಕಾಣುವ ರಚನೆ 2022 ರಲ್ಲಿ ಸಮೀಕ್ಷೆಯ ಸಮಯದಲ್ಲಿ ಕಂಡುಬಂದಿತ್ತು. ಈಗ ನಡೆಯುತ್ತಿರುವ ಸಮೀಕ್ಷೆಯ ವರದಿಯನ್ನು ಆ.4ರ ಒಳಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಮುಸ್ಲಿಂ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ, ಐವರು ಹಿಂದೂ ಮಹಿಳೆಯರಿಗೆ ಗೆಲುವು

    ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಈ ತಪಾಸಣೆ ನಡೆಸಲಾಗುತ್ತಿದೆ. ಪುರಾತನ ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ನಂತರ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ಬಗ್ಗೆ ಸಂಪೂರ್ಣ ಸತ್ಯವನ್ನು ಹೊರತರಲು ವೈಜ್ಞಾನಿಕ ಅಧ್ಯಯನದ ಅಗತ್ಯವಿದೆ ಎಂದಿದ್ದರು. ಆದರೆ ಜ್ಞಾನವಾಪಿ ಮಸೀದಿಯ ಸಿಬ್ಬಂದಿ ಶಿವಲಿಂಗದ ರಚನೆಯು ವಝುಖಾನಾದಲ್ಲಿ ಕಾರಂಜಿಯ ಒಂದು ಭಾಗವಾಗಿದೆ ಎಂದು ಹೇಳಿದ್ದರು. ವಿಚಾರಣೆಯ ಭಾಗವಾಗಿ ವೈಜ್ಞಾನಿಕ ತನಿಖೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

    ಅರ್ಜಿದಾರರ ಪರವಾಗಿಯೂ ಪ್ರತಿನಿಧಿಸುವ ಸುಭಾಷ್ ನಂದನ್ ಚತುರ್ವೇದಿ, ನ್ಯಾಯಾಲಯದ ನಿರ್ಧಾರವು ಪ್ರಕರಣದಲ್ಲಿ ಮಹತ್ವದ ತಿರುವು ಎಂದು ಹೇಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಸರ್ವೇಗೆ ಕೋರ್ಟ್ ಅನುಮತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜ್ಞಾನವಾಪಿ ಮಸೀದಿಯಲ್ಲಿ ಸರ್ವೇಗೆ ಕೋರ್ಟ್ ಅನುಮತಿ

    ಜ್ಞಾನವಾಪಿ ಮಸೀದಿಯಲ್ಲಿ ಸರ್ವೇಗೆ ಕೋರ್ಟ್ ಅನುಮತಿ

    ಲಕ್ನೋ: ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಸರ್ವೆ (Survey) ನಡೆಸಲು ವಾರಣಾಸಿ ನ್ಯಾಯಾಲಯ (Varanasi Court) ಶುಕ್ರವಾರ ಅನುಮತಿ ನೀಡಿದೆ.

    ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ವಿವಾದಿತ ಶಿವಲಿಂಗದ (Shivling) ರಚನೆಯನ್ನು ಹೊರತುಪಡಿಸಿ ಸಂಕೀರ್ಣದಲ್ಲಿ ಕಾರ್ಬನ್ ಡೇಟಿಂಗ್ ನಡೆಸಲು ಅನುಮತಿ ನೀಡಲಾಗಿದೆ. ವೈಜ್ಞಾನಿಕ ಸಮೀಕ್ಷೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ನಡೆಸಲಿದೆ. ವಿಚಾರಣೆಗೆ ಮುಂದಿನ ದಿನಾಂಕವಾಗಿರುವ ಆಗಸ್ಟ್ 4 ರೊಳಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ನ್ಯಾಯಾಲಯ ಎಎಸ್‌ಐಗೆ ತಿಳಿಸಿದೆ.

    ಹಿಂದೂಗಳ ದೇವಾಲಯ ಇರುವ ಜಾಗದಲ್ಲಿ ಮಸೀದಿ ಕಟ್ಟಲಾಗಿದ್ದು, ಈ ಕುರಿತು ವೈಜ್ಞಾನಿಕ ಸರ್ವೇ ಆಗಬೇಕು ಎಂದು ಹಿಂದೂಗಳ ಪರವಾಗಿ ಎಕೆ ವಿಶ್ವೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಇದಕ್ಕೂ ಮುನ್ನ ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ವಾದ-ಪ್ರತಿವಾದಗಳನ್ನು ನ್ಯಾಯಾಲಯ ಆಲಿಸಿತ್ತು. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಜ್ಞಾನವಾಪಿ ಮಸೀದಿಯ ಸಂಪೂರ್ಣ ಸರ್ವೇ ನಡೆಸಬೇಕು ಎಂದು ಹಿಂದೂ ಭಕ್ತರ ಪರ ವಕೀಲರು ಒತ್ತಾಯಿಸಿದ್ದರು. ಇದನ್ನೂ ಓದಿ: ನಾಳೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

    ಸದ್ಯ ಮಸೀದಿಯ ಕಾರ್ಬನ್ ಡೇಟಿಂಗ್‌ಗೆ ವಾರಣಾಸಿ ನ್ಯಾಯಲಯ ಆದೇಶಿಸಿದೆ. ಇದಕ್ಕೂ ಮೊದಲು ವಜೂ ಸ್ಥಳದಲ್ಲಿದ್ದ ಶಿವಲಿಂಗ ಆಕೃತಿಯು ಶಿವಲಿಂಗ ಅಥವಾ ಕಾರಂಜಿಯೇ ಎಂದು ತಿಳಿಯಲು ಕಾರ್ಬನ್ ಡೇಟಿಂಗ್ ಮಾಡಲು ಅಲಹಾಬಾದ್ ಹೈಕೋರ್ಟ್ ಆದೇಶಿಸಿತ್ತು. ಆದರೆ ವಿವಾದಿತ ಶಿವಲಿಂಗ ರಚನೆಯ ಕಾರ್ಬನ್ ಡೇಟಿಂಗ್ ನಡೆಸದಂತೆ ಎಎಸ್‌ಐಗೆ ಕಳೆದ ಮೇನಲ್ಲಿ ಸೂಚಿಸಿತ್ತು.

    ವಾರಣಾಸಿ ಕೋರ್ಟ್‌ನಲ್ಲಿ ಹಿಂದೂ ಅರ್ಜಿದಾರರಿಗೆ ಗೆಲುವು ಸಿಕ್ಕಿದೆ. ಆದರೆ ಮಸೀದಿಯ ಆಡಳಿತ ಮಂಡಳಿ ಅಲಹಾಬಾದ್ ಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, ಕೋರ್ಟ್ ಇಲ್ಲಿ ಅನುಮತಿ ನೀಡಲಿದ್ಯಾ ಕಾದು ನೋಡಬೇಕು. ಇದನ್ನೂ ಓದಿ: ಶಸ್ತ್ರಾಸ್ತ್ರ ಹಿಡಿದುಕೊಂಡು ಮಮತಾ ಮನೆಗೆ ನುಗ್ಗಲು ಯತ್ನಿಸಿದ ವ್ಯಕ್ತಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಆರಾಧನೆಗೆ ಅನುಮತಿ ಕೋರಿ ಅರ್ಜಿ – ನ.14ಕ್ಕೆ ವಿಚಾರಣೆ ಮುಂದೂಡಿಕೆ

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಆರಾಧನೆಗೆ ಅನುಮತಿ ಕೋರಿ ಅರ್ಜಿ – ನ.14ಕ್ಕೆ ವಿಚಾರಣೆ ಮುಂದೂಡಿಕೆ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಜ್ಞಾನವಾಪಿ ಮಸೀದಿಯ (Gyanvapi mosque) ಆವರಣದೊಳಗೆ ಶಿವಲಿಂಗ ಪತ್ತೆಯಾದ ಹಿನ್ನೆಲೆಯಲ್ಲಿ ಆರಾಧನೆಗೆ ಅವಕಾಶ ನೀಡಬೇಕೆಂದು ಹಿಂದೂ ಸಂಘಟನೆಗಳು (Hindus) ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ವಾರಣಾಸಿ ನ್ಯಾಯಾಲಯ (Varanasi Court) ನವೆಂಬರ್ 14ಕ್ಕೆ ಮುಂದೂಡಿದೆ.

    ಸಂಬಂಧಪಟ್ಟ ನ್ಯಾಯಾಧೀಶರು ಇಂದು ಕೋರ್ಟ್‌ನಲ್ಲಿ (Court) ಹಾಜರಾಗದ ಕಾರಣ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಲಾಗಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ – ವೈಜ್ಞಾನಿಕ ಪರೀಕ್ಷೆ ಸಾಧ್ಯವಿಲ್ಲ ಎಂದು ಕೋರ್ಟ್‌

    ಬೇಡಿಕೆಗಳೇನಿತ್ತು?
    ಸ್ವಯಂಭು ಜ್ಯೋತಿರ್ಲಿಂಗ ಭಗವಾನ್ ವಿಶ್ವೇಶ್ವರರ ಆರಾಧನೆಗೆ ಕೂಡಲೇ ಅನುಮತಿ ನೀಡಬೇಕು, ಇಡೀ ಜ್ಞಾನವಾಪಿ ಸಂಕೀರ್ಣವನ್ನು (Gyanvapi Mosque Premises) ಹಿಂದೂಗಳಿಗೆ (Hindus) ಬಿಟ್ಟುಕೊಡಬೇಕು ಹಾಗೂ ಮುಸ್ಲಿಮರ (Muslims) ಪ್ರವೇಶ ನಿಷೇಧಿಸಬೇಕು ಎಂಬ ಬೇಡಿಕೆಗಳ ಕುರಿತು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

    ಪ್ರಸ್ತುತ ಮುಸ್ಲಿಮರಿಗೆ ಮಸೀದಿಯೊಳಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಕಳೆದ ತಿಂಗಳು ಅಕ್ಟೋಬರ್ ನಲ್ಲಿ ನಡೆಸಿದ ವಿಚಾರಣೆ ವೇಳೆ ಶಿವಲಿಂಗವನ್ನು ವೈಜ್ಞಾನಿಕ ತಪಾಸಣೆ ನಡೆಸಲು ವಾರಣಾಸಿ ಕೋರ್ಟ್ ಅವಕಾಶ ನೀಡಲು ನಿರಾಕರಿಸಿತು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ; ಶಿವಲಿಂಗದ ವೈಜ್ಞಾನಿಕ ಪರೀಕ್ಷೆಗೆ ಆಕ್ಷೇಪ – ತೀರ್ಪಿನ ದಿನಾಂಕ ಮುಂದೂಡಿದ ವಾರಣಾಸಿ ಕೋರ್ಟ್‌

    GYANVAPI MOSQUE

    ಮಸೀದಿಯೊಳಗಿನ ಕಟ್ಟಡ ರಚನೆಗಳ ಮೇಲೆ ಕಾರ್ಬನ್ ಡೇಟಿಂಗ್ (Carbon Dating) ನಡೆಸಲು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಆದರೆ ಅಲ್ಲಿ ಶಿವಲಿಂಗವಿಲ್ಲ ಎನ್ನುವುದು ಮುಸ್ಲಿಮರ ವಾದವಾಗಿದೆ. ಹೀಗಾಗಿ ಮಸೀದಿಯನ್ನು ಕೆಡವಿ ದೇವಾಲಯಕ್ಕೆ, ಪೂಜೆ-ಪುನಸ್ಕಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಹಿಂದೂ ಸಂಘಟನೆಗಳು ಸೆಪ್ಟೆಂಬರ್ 22ರಂದು ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದವು. ಜೊತೆಗೆ ಶಿವಲಿಂಗವಿದೆ ಎಂದು ಹೇಳುವ ಜಾಗದಲ್ಲಿ ಕಾರ್ಬನ್ ಡೇಟಿಂಗ್ ಮಾಡಬೇಕೆಂಬುದು ಸಂಘಟನೆಗಳು ಒತ್ತಾಯಿಸಿದ್ದವು. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ ಪೂಜಾ ಸ್ಥಳಗಳ ಕಾಯ್ದೆಯ ವ್ಯಾಪ್ತಿಗೆ ಒಳಪಡಲ್ಲ: ವಾರಣಾಸಿ ಕೋರ್ಟ್‌ ಹೇಳಿದ್ದೇನು?

    ಏನಿದು ಕಾರ್ಬನ್ ಡೇಟಿಂಗ್?
    ಕಾರ್ಬನ್ ಡೇಟಿಂಗ್ (Carbon Dating) ಎಂಬುದು ವೈಜ್ಞಾನಿಕ ಪ್ರಕ್ರಿಯೆ. ಪುರಾತತ್ವ ವಸ್ತುಗಳು ಅಥವಾ ಪುರಾತತ್ವ ರಚನೆಗಳು, ಪಳೆಯುಳಿಕೆಗಳು ಪತ್ತೆಯಾದರೆ ಅವುಗಳು ಎಷ್ಟು ವರ್ಷ ಹಳೆಯದು ಎಂದು ಪತ್ತೆಹಚ್ಚಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ – ವೈಜ್ಞಾನಿಕ ಪರೀಕ್ಷೆ ಸಾಧ್ಯವಿಲ್ಲ ಎಂದು ಕೋರ್ಟ್‌

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ – ವೈಜ್ಞಾನಿಕ ಪರೀಕ್ಷೆ ಸಾಧ್ಯವಿಲ್ಲ ಎಂದು ಕೋರ್ಟ್‌

    ನವದೆಹಲಿ: ಜ್ಞಾನವಾಪಿ ಮಸೀದಿಯ (Gyanvapi Mosque) ಆವರಣದಲ್ಲಿ ಪತ್ತೆಯಾಗಿದ್ದ ಶಿವಲಿಂಗ (Shivling) ರೂಪದ ಆಕೃತಿಯ ವೈಜ್ಞಾನಿಕ ಪರೀಕ್ಷೆ ಕೋರಿ ಹಿಂದೂಪರ ನಾಲ್ವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ (Varanasi Court) ವಜಾ ಮಾಡಿದೆ. ಸುಪ್ರೀಂ ಕೋರ್ಟ್ (Supreme Court) ಆದೇಶ ಹಿನ್ನಲೆ ಕಾರ್ಬನ್ ಡೇಟಿಂಗ್ ಪರೀಕ್ಷೆ ಸಾಧ್ಯವಿಲ್ಲ ಎಂದು ಹೇಳಿದೆ.

    ಪ್ರಕರಣ ವಿಚಾರಣೆ ನಡೆಸಿದ್ದ ನ್ಯಾ. ಅಜಯ್ ಕೃಷ್ಣ ವಿಶ್ವೇಶಾ ಎರಡು ಬಾರಿ ಆದೇಶವನ್ನು ಮುಂದೂಡಿಸಿದ್ದರು. ಇಂದು ಆದೇಶ ಪ್ರಕಟಿಸಿದ ಅವರು ಮೇ 16 ರಂದು ಸುಪ್ರೀಂ ಕೋರ್ಟ್ ಶಿವಲಿಂಗ ಪತ್ತೆಯಾದ ಸ್ಥಳವನ್ನು ಸೀಲಿಂಗ್ ಮಾಡಲು ಆದೇಶಿಸಿದ್ದರಿಂದ ವೈಜ್ಞಾನಿಕ ತನಿಖೆಯ ಮನವಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಅದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ; ಶಿವಲಿಂಗದ ವೈಜ್ಞಾನಿಕ ಪರೀಕ್ಷೆಗೆ ಆಕ್ಷೇಪ – ತೀರ್ಪಿನ ದಿನಾಂಕ ಮುಂದೂಡಿದ ವಾರಣಾಸಿ ಕೋರ್ಟ್‌

    ಜ್ಞಾನವಾಪಿ ಮಸೀದಿಯ ಸರ್ವೇ ವೇಳೆ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಎನ್ನಲಾಗಿತ್ತು. ಈ ಶಿವಲಿಂಗ ರೂಪದ ಆಕೃತಿಯನ್ನು ವೈಜ್ಞಾನಿಕ ಪರೀಕ್ಷೆ ನಡೆಸಬೇಕು ಎಂದು ಮನವಿ ಮಾಡಲಾಗಿತ್ತು. ಈ ಅರ್ಜಿಯನ್ನು ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ವಿರೋಧಿಸಿತ್ತು.

    ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶಿವಲಿಂಗವು ಸೂಟ್ ಆಸ್ತಿಯ ಭಾಗವಾಗಿದೆಯೇ ಅಥವಾ ಇಲ್ಲವೇ? ಆಪಾದಿತ ರಚನೆಯ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆಯೇ? ಎನ್ನುವ ಎರಡು ಪ್ರಶ್ನೆಗಳನ್ನು ಮುಂದಿಟ್ಟು ಮೊದಲು ಈ ಬಗ್ಗೆ ವಿಚಾರಣೆ ನಡೆಯಬೇಕು ಎಂದು ಮಸೀದಿ ಪರ ವಕೀಲರು ವಾದಿಸಿದ್ದರು‌. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ ಪೂಜಾ ಸ್ಥಳಗಳ ಕಾಯ್ದೆಯ ವ್ಯಾಪ್ತಿಗೆ ಒಳಪಡಲ್ಲ: ವಾರಣಾಸಿ ಕೋರ್ಟ್‌ ಹೇಳಿದ್ದೇನು?

    court order law

    ಇದಕ್ಕೆ ಪ್ರತಿವಾದ ಮಂಡಿಸಿದ್ದ ಹಿಂದೂ ಆರಾಧಕರ ಪರ ವಕೀಲ ವಿಷ್ಣು ಶಂಕರ್ ಜೈನ್, ಶಿವಲಿಂಗವು ಸೂಟ್ ಆಸ್ತಿಯ ಒಂದು ಭಾಗವಾಗಿದೆ. ಸಿವಿಲ್ ಪ್ರೊಸೀಜರ್ ಕೋಡ್ 1908 ರ ಆದೇಶ 26 ನಿಯಮ 10A ರ ಪ್ರಕಾರ, ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿರುವ ಶಿವಲಿಂಗದ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆ ಎಂದು ಹೇಳಿದ್ದರು.

    ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಅಂತಿಮವಾಗಿ ಸುಪ್ರೀಂ ಕೋರ್ಟ್‌ ಹಳೆಯ ತೀರ್ಪಿನ ಅಂಶವನ್ನು ಗಮನದಲ್ಲಿಟ್ಟುಕೊಂಡು ಹಿಂದೂ ಆರಾಧಕ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನು ಪ್ರಶ್ನಿಸಿ ಮಹಿಳೆಯರು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಹಿಂದೂ ಮಹಿಳೆಯರಿಗೆ ಗೆಲುವು, ಅರ್ಜಿ ವಿಚಾರಣೆಗೆ ಯೋಗ್ಯ

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಮಸೀದಿ ವಿವಾದ; ಶಿವಲಿಂಗದ ವೈಜ್ಞಾನಿಕ ಪರೀಕ್ಷೆಗೆ ಆಕ್ಷೇಪ – ತೀರ್ಪಿನ ದಿನಾಂಕ ಮುಂದೂಡಿದ ವಾರಣಾಸಿ ಕೋರ್ಟ್‌

    ಜ್ಞಾನವಾಪಿ ಮಸೀದಿ ವಿವಾದ; ಶಿವಲಿಂಗದ ವೈಜ್ಞಾನಿಕ ಪರೀಕ್ಷೆಗೆ ಆಕ್ಷೇಪ – ತೀರ್ಪಿನ ದಿನಾಂಕ ಮುಂದೂಡಿದ ವಾರಣಾಸಿ ಕೋರ್ಟ್‌

    ಲಕ್ನೋ: ಜ್ಞಾನವಾಪಿ ಮಸೀದಿ (Gyanvapi Mosque) ಆವರಣದಲ್ಲಿ ನಡೆಸಿದ ಸರ್ವೆ ವೇಳೆ ಪತ್ತೆಯಾದ ವಸ್ತು ಶಿವಲಿಂಗವೇ ಅಥವಾ ನೀರಿನ ಕಾರಂಜಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈಜ್ಞಾನಿಕ ತನಿಖೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ನಿರ್ದೇಶನ ನೀಡುವಂತೆ ಕೋರಿ ಹಿಂದೂ ಪರ ಅರ್ಜಿದಾರರು ಸಲ್ಲಿಸಿದ್ದ ಮನವಿಯ ತೀರ್ಪನ್ನು ವಾರಣಾಸಿ ನ್ಯಾಯಾಲಯ (Varanasi Court) ಶುಕ್ರವಾರ ಮುಂದೂಡಿದೆ.

    ಪ್ರಕರಣ ತೀರ್ಪನ್ನು ಅಕ್ಟೋಬರ್ 11 ರಂದು ನೀಡಲಾಗುವುದು ಎಂದು ಜಿಲ್ಲಾ ನ್ಯಾಯಾಧೀಶ ಡಾ. ಎ.ಕೆ.ವಿಶ್ವೇಶ ಅವರು ಹೇಳಿದರು‌. ಮಸೀದಿ ಸಮಿತಿ ಪರ ವಕೀಲರು ಇಂದು ಆಕ್ಷೇಪ ವ್ಯಕ್ತಪಡಿಸಿದರು. ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶಿವಲಿಂಗವು (Shivlinga) ಮೂಲ ಪ್ರಕರಣ ಆಸ್ತಿಯ ಭಾಗವಾಗಿದೆಯೇ ಅಥವಾ ಇಲ್ಲವೇ? ಶಿವಲಿಂಗ ರೂಪದ ಈ ಪಳಿಯುಳಿಯ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆಯೇ ಎಂದು ಪ್ರಶ್ನಿಸಿದರು. ಈ ಬಗ್ಗೆ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಕೋರಿಕೊಂಡರು. ಇದನ್ನೂ ಓದಿ: ರಾವಣನ ಪ್ರತಿಕೃತಿಯ ತಲೆಗಳು ಸುಟ್ಟುಹೋಗದಕ್ಕೆ ನೌಕರ ಅಮಾನತು

    Gyanvapi mosque, 

    ಇದಕ್ಕೆ ಒಪ್ಪಿಕೊಂಡ ನ್ಯಾಯಾಧೀಶರು ತೀರ್ಪಿನ ದಿನಾಂಕವನ್ನು ಮುಂದೂಡಿದರು. ಮಸೀದಿ ಸಮಿತಿಯ ವಕೀಲರ ವಾದ ಆಲಿಸಿದ ಬಳಿಕ ಕೋರ್ಟ್ ಆದೇಶವನ್ನು ಪ್ರಕಟಿಸುವ ಸಾಧ್ಯತೆಯಿದೆ. ಅಕ್ಟೋಬರ್ 11 ರೊಳಗೆ ಈ ಬಗ್ಗೆ ಮಸೀದಿಯ ಸಮಿತಿಯ ವಕೀಲರು ಕೋರ್ಟ್ ಮುಂದೆ ತಮ್ಮ ವಾದವನ್ನು ಮಂಡಿಸಲಿದ್ದಾರೆ.

    ಇದೇ ವೇಳೆ ಕೋರ್ಟ್‌ನಲ್ಲಿದ್ದ ಹಿಂದೂ ಆರಾಧಕರ ಪರ ವಕೀಲ ವಿಷ್ಣು ಶಂಕರ್ ಜೈನ್, ಶಿವಲಿಂಗವು ಮೂಲ ಪ್ರಕರಣದ ಆಸ್ತಿಯ ಒಂದು ಭಾಗವಾಗಿದೆ. ಸಿವಿಲ್ ಪ್ರೊಸೀಜರ್ ಕೋಡ್ 1908ರ ಆದೇಶ 26 ನಿಯಮ 10Aರ ಪ್ರಕಾರ, ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿ (Gyanvapi Case) ಆವರಣದಲ್ಲಿ ಕಂಡುಬಂದಿರುವ ಶಿವಲಿಂಗದ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆ ಎಂದು ಹೇಳಿದರು. ಇದನ್ನೂ ಓದಿ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಜಖಂ – ಎಮ್ಮೆಗಳ ಮಾಲೀಕನ ವಿರುದ್ಧ FIR

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಕೇಸ್‌ – ಹಿಂದೂ ಮಹಿಳೆಯರಿಗೆ ಗೆಲುವು, ಅರ್ಜಿ ವಿಚಾರಣೆಗೆ ಯೋಗ್ಯ

    ಜ್ಞಾನವಾಪಿ ಕೇಸ್‌ – ಹಿಂದೂ ಮಹಿಳೆಯರಿಗೆ ಗೆಲುವು, ಅರ್ಜಿ ವಿಚಾರಣೆಗೆ ಯೋಗ್ಯ

    – ವಾರಣಾಸಿ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಪ್ರಕಟ

    ಲಕ್ನೋ: ಜ್ಞಾನವಾಪಿ ಮಸೀದಿಯ (Gyanvapi Masjid) ಆವರಣದಲ್ಲಿ ಇದೆ ಎನ್ನಲಾಗಿರುವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಅವಕಾಶ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಯೋಗ್ಯವಾಗಿದೆ ಎಂದು ವಾರಣಾಸಿ (Varanasi) ಜಿಲ್ಲಾ ನ್ಯಾಯಾಲಯ ಇಂದು ಮಹತ್ವದ ತೀರ್ಪು (Verdict) ಪ್ರಕಟಿಸಿದೆ.

    ರಾಖಿಸಿಂಗ್ ಸೇರಿ ಐವರು ಮಹಿಳೆಯರು ಮಸೀದಿ ಒಳಗಡೆ ಇರುವ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ನೀಡುವುಂತೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಕೋಮು ಸೂಕ್ಷ್ಮ ಪ್ರಕರಣದ ಆದೇಶವನ್ನು ಸೆಪ್ಟೆಂಬರ್ 12ಕ್ಕೆ  ಕಾಯ್ದಿರಿಸಿದ್ದರು.

    ಇಂದು ನ್ಯಾಯಾಲಯವು ಮಸೀದಿ ಸಮಿತಿ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ಪೂಜಿಸುವ ಹಕ್ಕು ಕೋರಿ 5 ಹಿಂದೂ ಮಹಿಳೆಯರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಯೋಗ್ಯ ಎಂದು ತೀರ್ಪು ಪ್ರಕಟಿಸಿದೆ.

    ಅರ್ಜಿ ವಿಚಾರಣೆಗೆ ಯೋಗ್ಯವಾಗಿದೆ ಎಂಬ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಕೋರ್ಟ್ ಪೂಜೆಗೆ ಅವಕಾಶ ನೀಡಬೇಕಾ? ಬೇಡವೋ ಎಂಬ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ಮುಂದಿನ ಅರ್ಜಿಯ ವಿಚಾರಣೆ ಸೆ.22 ರಂದು ನಡೆಯಲಿದೆ.

    ಈ ಐದು ಮಂದಿ ಮಹಿಳೆಯರು ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಇದು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಮಸೀದಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಗಂಭೀರವಾಗಿರುವ ಹಿನ್ನಲೆ ಸುಪ್ರೀಂಕೋರ್ಟ್ (Supreme Court) ಜಿಲ್ಲಾ ನ್ಯಾಯಾಲಯಕ್ಕೆ ವಿಚಾರಣೆ ನಡೆಸಲು ಸೂಚಿಸಿತ್ತು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ

    ಈ ಹಿಂದೆ ಜ್ಞಾನವ್ಯಾಪಿ ಮಸೀದಿಯಲ್ಲಿ ಉತ್ಖನನ ನಡೆಸಲು ಕೆಳ ಹಂತದ ನ್ಯಾಯಾಲಯ ಅನುಮತಿ ನೀಡಿತ್ತು. ಪರಿಶೀಲನೆ ವೇಳೆ ಮಸೀದಿಯ ಆವರಣದಲ್ಲಿದ್ದ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಹಾಗೂ ಮಂಗಳ ಗೌರಿಯ ದೇವಸ್ಥಾನ ಇದೆ ಎಂದು ಅಧಿಕಾರಿಗಳು ಕೋರ್ಟ್‍ಗೆ ವರದಿ ನೀಡಿದ್ದರು. ಈ ವರದಿಯ ಬೆನ್ನಲ್ಲೇ ದೊಡ್ಡ ಪ್ರಮಾಣ ಸಂಚಲನ ಸೃಷ್ಟಿಯಾಗಿತ್ತು. ಮಸೀದಿಯ ಜಾಗದಲ್ಲಿ ಮಂದಿರ ಇದೆ ಎಂದು ವಾದಿಸಿದ್ದರು.

    ಮುಸ್ಲಿಮರ ಪರ ವಾದ ಮಂಡಿಸಿದ ವಕೀಲರು 1991ರ ವಿಶೇಷ ಪೂಜಾ ಸ್ಥಳ ಕಾಯ್ದೆಯನ್ನು ಪ್ರಮುಖವಾಗಿ ವಿಚಾರಣೆ ವೇಳೆ ಉಲ್ಲೇಖಿಸಿದ್ದರು. 1991ರ ಪೂಜಾ ಸ್ಥಳಗಳ ಕಾಯ್ದೆ ಪ್ರಕಾರ ದೇಶದ ಯಾವುದೇ ಧಾರ್ಮಿಕ ಸ್ಥಳದಲ್ಲಿ ಸದ್ಯ ಚಾಲ್ತಿಯಲ್ಲಿ ಇರುವ ಯಾವುದೇ ಧರ್ಮದ ಆಚರಣೆಯ ಧಾರ್ಮಿಕ ಸ್ವರೂಪವನ್ನು ಬದಲಿಸುವಂತಿಲ್ಲ. 1947ರ ಆಗಸ್ಟ್ 15ರ ನಂತರ ಯಾವ ಧಾರ್ಮಿಕ ಸ್ಥಳದಲ್ಲಿ ಯಾವ ಧರ್ಮದ ಆಚರಣೆ ಇತ್ತೋ, ಅದೇ ಆಚರಣೆ ಮುಂದೆಯೂ ನಿರಂತರವಾಗಿ ಮುಂದುವರೆಯಬೇಕು. ಈ ಕಾಯಿದೆಯ ಅನ್ವಯ ಜ್ಞಾನವ್ಯಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಸಾಧ್ಯವಿಲ್ಲ. ಜ್ಞಾನವ್ಯಾಪಿ ಮಸೀದಿ 16-17 ಶತಮಾನದ ಪುರಾತನ ಧಾರ್ಮಿಕ ಪ್ರದೇಶವಾಗಿರುವ ಈ ಹಿನ್ನಲೆ ಈ ನಿಯಮ ಅನ್ವಯವಾಗಲಿದೆ. ಒಂದು ವೇಳೆ ಪೂಜೆಗೆ ಅವಕಾಶ ನೀಡಿದ್ದಲ್ಲಿ ದೇಶದಲ್ಲಿ ಇಂತಹ ಹತ್ತಾರು ವಿವಾದಾತ್ಮಕ ಪ್ರದೇಶಗಳಲ್ಲೂ ಪೂಜೆ ಅವಕಾಶ ಕೇಳುವ ಸಾಧ್ಯತೆಗಳಿರುತ್ತದೆ, ಇದು ಒಳ್ಳೆಯ ಬೆಳವಣಿಗೆಯಲ್ಲ. ಎಲ್ಲದಕ್ಕಿಂತ ಮುಖ್ಯವಾಗಿ ವಝುಖಾನದಲ್ಲಿ ಪತ್ತೆಯಾಗಿರುವುದು ನೀರಿನ ಕಾರಂಜಿ ಮತ್ತು ಅಲ್ಲಿ ಯಾವುದೇ ಶೃಂಗಾರ ಗೌರಿ ಮೂರ್ತಿಗಳಿಲ್ಲ, ಅದು ಹಳೆಯ ವಾಸ್ತು ಶಿಲ್ಪ ಶೈಲಿಯಾಗಿದೆ ಎಂದು ವಾದ ಮಂಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ

    ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ

    ಲಕ್ನೋ: ಜ್ಞಾನವಾಪಿ ಮಸೀದಿ ಹಾಗೂ ಶೃಂಗಾರ ಗೌರಿ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ 5 ಮಹಿಳೆಯರಲ್ಲಿ ಒಬ್ಬರ ಪತಿಗೆ ಅರ್ಜಿಯನ್ನು ಹಿಂಪಡೆಯುವಂತೆ ಪಾಕಿಸ್ತಾನದಿಂದ ಬೆದರಿಕೆ ಕರೆಗಳು ಬಂದಿವೆ ಎಂಬ ಆರೋಪ ಕೇಳಿ ಬರುತ್ತಿದೆ.

    ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ಮಸೀದಿಯ ಹಿಂಭಾಗದಲ್ಲಿರುವ ಶೃಂಗಾರ ಗೌರಿ ದೇವರಿಗೆ ನಿತ್ಯ ಪ್ರಾರ್ಥನೆ ಸಲ್ಲಿಸಲು ಅನುಮತಿ ಕೋರಿ ಐವರು ಮಹಿಳೆಯರು ಸ್ಥಳೀಯ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ನಂಬರ್‌ನಿಂದ ಹಲವಾರು ಬಾರಿ ಅರ್ಜಿಯನ್ನು ಹಿಂತೆಗೆದುಕೊಳ್ಳಬೇಕು ಎಂದು ಬೆದರಿಕೆ ಕರೆಗಳು ಬಂದಿವೆ. ಆದರೆ ನಾವು ಯಾವುದೇ ಬೆದರಿಕೆಗೂ ಹೆದರುವುದಿಲ್ಲ ಎಂದು ಸೋಹನ್ ಲಾಲ್ ಆರ್ಯ ತಿಳಿಸಿದ್ದಾರೆ.

    ಸೋಹನ್ ಲಾಲ್ ಆರ್ಯ ಅವರ ಪತ್ನಿ ಲಕ್ಷ್ಮಿ ದೇವಿ ಹಾಗೂ ವಾರಣಾಸಿ ಮೂಲದ ಮೂವರು ಮಹಿಳೆಯರು, ಇನ್ನೊಬ್ಬರು ದೆಹಲಿಯ ಮಹಿಳೆಯೊಬ್ಬರು ಅರ್ಜಿಯನ್ನು ಸಲ್ಲಿಸಿದ್ದರು. ಇದನ್ನೂ ಓದಿ: ರಾಷ್ಟ್ರಧ್ವಜವನ್ನು ಸಿಗರೇಟ್‍ನಿಂದ ಸುಟ್ಟ ವ್ಯಕ್ತಿಯ ಬಂಧನ

    ಘಟನೆಗೆ ಸಂಬಂಧಿಸಿ ಲಕ್ಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಅವರ ಭದ್ರತೆಗಾಗಿ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಪೊಲೀಸ್ ಆಯುಕ್ತ ಅವಧೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ. ಇದನ್ನೂ ಓದಿ: ಕಾಣೆಯಾಗಿ ಮತ್ತೆ ಸಿಕ್ಕಿದ್ದ ಗಿಳಿಯನ್ನು ಗುಜರಾತ್ ಝೂಗೆ ಬಿಟ್ಟ ಮಾಲೀಕರು

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    ಮುಂಬೈ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮುಂಬೈ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ.

    ನೂಪುರ್ ಶರ್ಮಾ ಜ್ಞಾನವಾಪಿ ಮಸೀದಿ ಕುರಿತ ಚರ್ಚೆಯ ವೇಳೆ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಗದ್ದಲ ಎಬ್ಬಿದ್ದಾರೆ. ಈ ಸಂಬಂಧ ಇದೇ ಜೂನ್ 22ರಂದು ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ನೂಪುರ್ ಶರ್ಮಾಗೆ ಇ-ಮೇಲ್ ಮತ್ತು ಸ್ಪೀಡ್ ಪೋಸ್ಟ್ ಮೂಲಕ ಸಮನ್ಸ್ ಕಳುಹಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ, ಕೊಲೆ ಬೆದರಿಕೆ – ವಿವಾದಿತ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ದೆಹಲಿ ಪೊಲೀಸರಿಂದ ಭದ್ರತೆ 

    ಈಗಾಗಲೇ ಅವಹೇಳನಕಾರಿ ಹೇಳಿಕೆ ಕುರಿತಂತೆ ನೂಪುರ್ ವಿರುದ್ಧ ಥಾಣೆ ಜಿಲ್ಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಂಬರ್‌ನಾಥ್ ಪೋಲೀಸರೂ ಸಹ ದೂರನ್ನು ಸ್ವೀಕರಿಸಿದ್ದಾರೆ. ಇದೂ ಸಹ ಎಫ್‌ಐಆರ್ ಆದರೆ ಥಾಣೆ ಜಿಲ್ಲೆಯಲ್ಲೇ ಮೂರು ಪ್ರಕರಣ ದಾಖಲಾಗಲಿದೆ. ಈ ಹಿನ್ನೆಲೆಯಲ್ಲಿ ಜೂನ್ 22ರಂದು ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಲು ಸಮನ್ಸ್ ಜಾರಿ ಮಾಡಲಾಗಿದೆ ಎಂದು ಥಾಣೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‍ ಕುರಿತು ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅಮಾನತು

    ಭಾರತದ ರಾಯಭಾರಿಗೂ ಸಮನ್ಸ್: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಜಕಾರ್ತದಲ್ಲಿರುವ ಭಾರತದ ರಾಯಭಾರಿಗೆ ಇಂಡೋನೇಷ್ಯಾ ಸರ್ಕಾರ ಸಮನ್ಸ್ ನೀಡಿದೆ. ಸಮನ್ಸ್ ನೀಡಿರುವ ವಿಚಾರವನ್ನು ಇಂಡೋನೇಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರ ತೆವುಕು ಫಜಾಸ್ಯಾಹ್ ಖಚಿತಪಡಿಸಿದ್ದಾರೆ. ಜಕಾರ್ತದಲ್ಲಿರುವ ಭಾರತದ ರಾಯಭಾರಿ ಮನೋಜ್ ಕುಮಾರ್ ಭಾರ್ತಿ ಅವರನ್ನು ನಿನ್ನೆ ಕರೆದು ಪ್ರತಿಭಟನೆ ದಾಖಲಿಸಿದ್ದು, ಸಮನ್ಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಬ್ ರಾಷ್ಟ್ರಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹಲವು ಮಧ್ಯಪ್ರಾಚ್ಯ ರಾಷ್ಟ್ರಗಳು ಭಾರತದ ರಾಯಭಾರಿಗಳಿಗೆ ಸಮನ್ಸ್ ನೀಡಿದ್ದವು. ಕುವೈತ್ ಸೂಪರ್ ಮಾರ್ಕೆಟ್‌ನಿಂದ ಭಾರತದ ಉತ್ಪನ್ನಗಳನ್ನು ತೆಗೆದುಹಾಕಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಇಂಡೋನೇಷ್ಯಾ ಕೂಡ ಕ್ರಮ ಕೈಗೊಂಡಿದೆ.

    ಈ ಸಂಬಂಧ ಟ್ವೀಟ್ ಮಾಡಿರುವ ಇಂಡೋನೇಷ್ಯಾ ವಿದೇಶಾಂಗ ಸಚಿವಾಲಯವು, ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಭಾರತದ ಇಬ್ಬರು ರಾಜಕಾರಣಿಗಳು ನೀಡಿರುವ ಆಕ್ಷೇಪಾರ್ಹ, ಅವಹೇಳನಕಾರಿ ಹೇಳಿಕೆಗಳನ್ನು ಬಲವಾಗಿ ಖಂಡಿಸಿದ್ದೇವೆ ಎಂದು ಹೇಳಿದೆ.

  • ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ವಾರಣಾಸಿ: ಜ್ಞಾನವಾಪಿ ಮಸೀದಿಯಲ್ಲಿ ವೀಡಿಯೋ ಸರ್ವೆ ವೇಳೆ ಪತ್ತೆಯಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಐದು ಮಂದಿ ಹಿಂದೂ ಮಹಿಳೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಅರ್ಹವೇ ಎನ್ನುವ ಬಗ್ಗೆ ಮೊದಲು ವಿಚಾರಣೆ ನಡೆಸಲಾಗುವುದು. ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಜಿಲ್ಲಾ ನ್ಯಾಯಧೀಶ ಅಜಯ್ ಕೃಷ್ಣ ವಿಶ್ವೇಶ ಆದೇಶಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಕೃಷ್ಣ ಅವರು ಇಂದು ಆದೇಶ ನೀಡಿದ್ದು, ಮೇ 26 ರಿಂದ ಮಸೀದಿ ಪರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು. ಅದಕ್ಕೂ ಮುನ್ನ ಏಳು ದಿನಗಳೊಳಗೆ ವೀಡಿಯೋಗ್ರಫಿ ಸರ್ವೆಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಕೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಈ ವಿಚಾರಣೆ ಬಳಿಕ ವೀಡಿಯೋಗ್ರಫಿ ಸರ್ವೆ ಆಧರಿಸಿ ವಿಚಾರಣೆ ಮುಂದುವರಿಸುವ ಬಗ್ಗೆ ಕೋರ್ಟ್ ತೀರ್ಮಾನಿಸುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವ ಪವರ್ ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಪದಕ ತಂದು ಕೊಟ್ಟ ಉಡುಪಿಯ ಅಕ್ಷತಾ 

    ಶಿವಲಿಂಗ ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಸಲ್ಲಿರುವ ಅರ್ಜಿ 1991ರ ಕಾಯಿದೆ ಮತ್ತು ಆದೇಶ 7, ನಿಯಮ 11 ಉಲ್ಲಂಘಿಸುತ್ತದೆ. ಹೀಗಾಗಿ ಇಡೀ ಪ್ರಕರಣವನ್ನು ವಜಾ ಮಾಡಬೇಕು ಎಂದು ಮಸೀದಿ ಪರ ಅರ್ಜಿದಾರರು ವಾದ ಮಂಡಿಸಿದ್ದರು.

    ಇದಕ್ಕೆ ಪ್ರತಿವಾದ ಸಲ್ಲಿಸಿದ್ದ ಐವರು ಮಹಿಳೆಯರು ಮತ್ತು ಹಿಂದೂ ಸೇನಾ ಪರ ವಕೀಲರು, ಮಸೀದಿ ದೇವಸ್ಥಾನಕ್ಕೆ ಸೇರಿದ್ದು, ಇದನ್ನು ಅತಿಕ್ರಮಣ ಮಾಡಿಕೊಂಡು ಮಸೀದಿ ನಿರ್ಮಿಸಲಾಗಿದೆ. ಈಗ ಶಿವಲಿಂಗ ಪತ್ತೆಯಾಗಿರುವುದೇ ಇದಕ್ಕೆ ಸಾಕ್ಷಿ. ಹೀಗಾಗಿ ಸರ್ವೆ ವೇಳೆ ಮಸೀದಿಯ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.

    ರಾಮಮಂದಿರ ವಿವಾದ ಉತ್ತುಂಗದ ವೇಳೆ, 1991ರಲ್ಲಿ ಪೂಜಾ ಸ್ಥಳಗಳ ನಿರ್ಬಂಧ ಕಾಯ್ದೆ ಜಾರಿ ಮಾಡಲಾಗಿತ್ತು. ಅದರಲ್ಲಿ ಸ್ವಾತಂತ್ರ್ಯದ ನಂತರದ ದಿನಾಂಕದಿಂದ ಯಾವುದೇ ಧಾರ್ಮಿಕ ಕಟ್ಟಡಗಳನ್ನು ಬದಲಾಯಿಸುವುದು ಅಥವಾ ಅದರ ರಚನೆಗೆ ಧಕ್ಕೆ ಮಾಡುವಂತಿಲ್ಲ. ಅದು ಇದ್ದಂತಯೇ ಮುಂದುವರಿಸಬೇಕು ಎಂದು ನಿಯಮ ರೂಪಿಸಲಾಗಿತ್ತು. ಇದನ್ನೂ ಓದಿ: ನಯನತಾರಾಗೆ ಲೋಕಲ್ ಫುಡ್ ತಿನ್ನಿಸಿದ ಭಾವಿಪತಿ ವಿಘ್ನೇಶ್ 

    ಇದೇ ಅಂಶವನ್ನು ಮುಂದಿಟ್ಟುಕೊಂಡು ಈಗ ಮಸೀದಿ ಆಡಳಿತ ಮಂಡಳಿ ಕಾನೂನು ಹೋರಾಟ ಮಾಡುತ್ತಿದೆ. 1991ರ ಕಾಯಿದೆ ಅನ್ವಯ ಇಡೀ ಪ್ರಕರಣವೇ ವಿಚಾರಣೆಗೆ ಯೋಗ್ಯವಲ್ಲ ಎಂದು ಕೋರ್ಟ್‍ನಲ್ಲಿ ವಾದ ಮಂಡಿಸಿದೆ. ಆದರೆ ರಾಮಮಂದಿರ ರೀತಿಯಲ್ಲೇ ಈ ಪ್ರಕರಣವನ್ನು ಪರಿಗಣಿಸಲು ಹಿಂದೂ ಪರ ವಕೀಲರು ಮನವಿ ಮಾಡುತ್ತಿದ್ದಾರೆ.