Tag: ಝಡ್ ಪ್ಲಸ್ ಭದ್ರತೆ

  • ರಾಹುಲ್ ಗಾಂಧಿಯಿಂದ 113 ಬಾರಿ ಭದ್ರತಾ ನಿಯಮ ಉಲ್ಲಂಘನೆ: CRPF

    ರಾಹುಲ್ ಗಾಂಧಿಯಿಂದ 113 ಬಾರಿ ಭದ್ರತಾ ನಿಯಮ ಉಲ್ಲಂಘನೆ: CRPF

    ನವದೆಹಲಿ: ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ರಾಹುಲ್ ಗಾಂಧಿ (Rahul Gandhi) ಹಲವು 113 ಬಾರಿ ಭದ್ರತಾ ನಿಯಮ ಉಲ್ಲಂಘನೆ ಮಾಡಿರುವುದಾಗಿ ಕೇಂದ್ರದ ಅರೆಸೇನಾ ಪಡೆ ಸಿಆರ್‌ಪಿಎಫ್ (CRPF) ಹೇಳಿದೆ.

    ಡಿಸೆಂಬರ್ 24ರ ಯಾತ್ರೆಯಲ್ಲಿ ಭದ್ರತಾ ವೈಫಲ್ಯ ಉಂಟಾಗಿರುವುದಾಗಿ ಕಾಂಗ್ರೆಸ್ ಮಾಡಿರುವ ಆರೋಪಗಳಿಗೆ ಸಿಆರ್‌ಪಿಎಫ್ ಪ್ರತಿಕ್ರಿಯಿಸಿದೆ. ಇದನ್ನೂ ಓದಿ: ಎರಡು ಬಾರಿ ಮಾತ್ರ ಮಗನ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಹೀರಾಬೆನ್!

    ಪೊಲೀಸರು (Police) ರಾಹುಲ್ ಗಾಂಧಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಗ್ಗೆ ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (KC Venugopal) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಪತ್ರ ಬರೆದಿದ್ದರು. ರಾಷ್ಟ್ರರಾಜಧಾನಿಯಲ್ಲಿ ಭದ್ರತಾ ವೈಫಲ್ಯವಾಗಿರುವ ಆರೋಪವನ್ನು ಭದ್ರತಾ ಪಡೆಯು ನಿರಾಕರಿಸಿದೆ.

    ರಾಹುಲ್ ಗಾಂಧಿಗೆ ಅವರಿಗೆ `ಝಡ್ ಪ್ಲಸ್’ (Z Plus Security) ಭದ್ರತೆ ನೀಡಲಾಗಿದ್ದು, ಭಾರತ್ ಜೋಡೋ ಯಾತ್ರೆಯು ಪಂಜಾಬ್, ಜಮ್ಮು ಮತ್ತು ಕಾಶ್ಮೀರದ ಸೂಕ್ಷ್ಮ ಪ್ರದೇಶಗಳಿಗೆ ಪ್ರವೇಶಿಸಿದಾಗ ಅಗತ್ಯ ಭದ್ರತೆ ಖಚಿತಪಡಿಸುವಂತೆ ಕಾಂಗ್ರೆಸ್ ಕೋರಿದೆ. ಇದನ್ನೂ ಓದಿ: ಹೀರಾಬೆನ್ ಅಗಲಿಕೆಗೆ ಗಣ್ಯರ ಸಂತಾಪ

    ರಾಜ್ಯದ ಪೊಲೀಸರು ಹಾಗೂ ಇತರೆ ಭದ್ರತಾ ಇಲಾಖೆಗಳ ಸಮನ್ವಯದೊಂದಿಗೆ ಸಿಆರ್‌ಪಿಎಫ್ ರಾಹುಲ್ ಗಾಂಧಿ ಅವರಿಗೆ ಅಗತ್ಯ ಭದ್ರತೆಯನ್ನು ಒಗಿಸಿತ್ತು. ಡಿಸೆಂಬರ್ 24ರ ಕಾರ್ಯಕ್ರಮಕ್ಕಾಗಿ ಎರಡು ದಿನ ಮುಂಚಿತವಾಗಿಯೇ ಭದ್ರತಾ ಸಂಪರ್ಕ ಸುಧಾರಣೆ (ಎಎಸ್‌ಎಲ್) ನಡೆಸಲಾಗಿತ್ತು ಎಂದು ಸಿಆರ್‌ಪಿಎಫ್ ಹೇಳಿದೆ. ಪ್ರಮುಖ ಕಾರ್ಯಕ್ರಮಗಳಲ್ಲಿ ವಿಐಪಿಗಳ ಭದ್ರತೆಗಾಗಿ ಭದ್ರತಾ ಪಡೆಗಳು ಯೋಜನೆ ರೂಪಿಸಲು ನಡೆಸುವ ಸಭೆಯನ್ನು ಎಎಸ್‌ಎಲ್ ಎನ್ನಲಾಗುತ್ತದೆ.

    ದೆಹಲಿಯಲ್ಲಿ ಯಾತ್ರೆಯ ದಿನ ಭದ್ರತೆಗೆ ಸಂಬಂಧಿಸಿದ ಎಲ್ಲ ಮಾರ್ಗಸೂಚಿಗಳನ್ನು ಪೂರ್ಣವಾಗಿ ಅನುಸರಿಸಲಾಗಿದೆ. ಈ ಬಗ್ಗೆ ದೆಹಲಿ ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ಆದ್ರೆ ರಾಹುಲ್ ಗಾಂಧಿ ಅವರು ಪದೇ ಪದೇ ಭದ್ರತಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ. ಸುರಕ್ಷತೆಗಾಗಿ ಭದ್ರತೆ ನಿಯೋಜಿಸಿದ್ದರೆ, ರಕ್ಷಣೆಗೆ ಒಳಪಟ್ಟಿರುವ ವ್ಯಕ್ತಿಯೇ ಭದ್ರತಾ ನಿಯಮ ಮುರಿಯುವಂತೆ ಮಾಡಿದ್ದಾರೆ. ಅವರಿಗೂ ಇದನ್ನು ಆಗಾಗ್ಗೆ ತಿಳಿಸಲಾಗಿದೆ ಎಂದು ಪ್ರತಿ ಆರೋಪ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಅಂಬಾನಿಗೆ ನೀಡಲಾಗಿರುವ ಝಡ್ ಪ್ಲಸ್ ಭದ್ರತೆ ತೆಗೆಯಿರಿ – ಅರ್ಜಿ ವಜಾಗೊಳಿಸಿದ ಕೋರ್ಟ್

    ಅಂಬಾನಿಗೆ ನೀಡಲಾಗಿರುವ ಝಡ್ ಪ್ಲಸ್ ಭದ್ರತೆ ತೆಗೆಯಿರಿ – ಅರ್ಜಿ ವಜಾಗೊಳಿಸಿದ ಕೋರ್ಟ್

    ಮುಂಬೈ: ಏಷ್ಯಾದ ನಂಬರ್ ಒನ್ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿಯವರಿಗೆ ನೀಡಲಾಗಿರುವ ಝಡ್ ಪ್ಲಸ್ ಭದ್ರತೆಯನ್ನು ತೆಗೆದುಹಾಕಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.

    ಮಹಾರಾಷ್ಟ್ರದ ಮುಂಬೈನ ಅಂಧೇರಿ ಪ್ರದೇಶದ ನಿವಾಸಿ ಹಿಮಾಂಶು ಅಗರ್‌ವಾಲ್ ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದರು. ವೃತ್ತಿಯಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಅಗರ್‌ವಾಲ್, ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಭದ್ರತೆ ನೀಡುವುದರಿಂದ ರಾಜ್ಯ ಹಾಗೂ ತೆರಿಗೆ ಪಾವತಿದಾರರಿಗೆ ಹೊರೆಯಾಗಲಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

    ಇದೇ ಸಂದರ್ಭದಲ್ಲಿ ಅಂಬಾನಿ ಪರ ವಕೀಲರು ಸ್ಪಷ್ಟಪಡಿಸಿ, ಕುಟುಂಬವೂ ಭದ್ರತೆಯ ಸಂಪೂರ್ಣ ವೆಚ್ಚವನ್ನು ಭರಿಸುತ್ತಿದೆ. ಹೀಗಾಗಿ ತೆರಿಗೆ ಪಾವತಿಸುವವರ ಮೇಲೆ ಯಾವುದೇ ಹೊರೆಯಾಗುವುದಿಲ್ಲ ಎಂದು ವಾದಿಸಿದರು. ವಾದವನ್ನು ಆಲಿಸಿದ ನ್ಯಾಯಮೂರ್ತಿ ರಂಜಿತ್ ಮೋರ್ ನೇತೃತ್ವದ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿತು.

    ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶೇಷ ಭದ್ರತಾ ಪಡೆ (ಎಸ್‍ಪಿಜಿ)ಯಿಂದ ಭದ್ರತೆ ನೀಡಲಾಗಿದ್ದು, ಉಳಿದಂತೆ ಬೆದರಿಕೆ ಇರುವವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗುತ್ತದೆ. ಝಡ್ ಪ್ಲಸ್ ಭದ್ರತೆಯನ್ನು ರಾಷ್ಟ್ರೀಯ ಭದ್ರತಾ ದಳ(ಎನ್‍ಎಸ್‍ಜಿ) ನೀಡುತ್ತದೆ. ಎಂಪಿ5 ಬಂದೂಕುಗಳು, ಅಧುನಿಕ ಗ್ಯಾಜೆಟ್‍ಗಳು, ಬೆಂಗಾವಲು ವಾಹನಗಳನ್ನು ಹೊಂದಿದೆ ಎಂದು ಅಗರ್‌ವಾಲ್ ಅವರ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

    ಮುಕೇಶ್ ಅಂಬಾನಿಯವರ ಕುಟುಂಬ ರಾಜಕೀಯದಲ್ಲಿ ಭಾಗವಹಿಸದಿರುವುದರಿಂದ ಕುಟುಂಬಕ್ಕೆ ಯಾವುದೇ ಬೆದರಿಕೆ ಇಲ್ಲ. ಹೀಗಾಗಿ ಸೈದ್ಧಾಂತಿಕ ಸಂಘರ್ಷಕ್ಕೆ ಕಾರಣಗಳಿಲ್ಲ. ಅಲ್ಲದೆ ಅಂಬಾನಿಯವರ ಮೇಲೆ ಈವರೆಗೆ ದಾಳಿ ನಡೆಸಿರುವ ಹಾಗೂ ದಾಳಿ ನಡೆಸಲು ಪ್ರಯತ್ನಿಸಿರುವ ಪ್ರಕರಣಗಳಿಲ್ಲ. ದೊಡ್ಡ ಬುಸಿನೆಸ್ ಕಂಪನಿ ಸಿಇಓ ಆಗಿರುವವರು ಖಾಸಗಿ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುತ್ತಾರೆ ಎಂದು ಅಗರ್‍ವಾಲ್ ತಿಳಿಸಿದ್ದಾರೆ.

    ಜನಸಾಮಾನ್ಯರಿಗೆ ಹೋಲಿಸಿದರೆ ಪೊಲೀಸರ ಅನುಪಾತ ಕಡಿಮೆ ಇದೆ. ಹೀಗಾಗಿ ಭದ್ರತೆಯನ್ನು ತೆಗೆಯಬೇಕು. ಪೊಲೀಸ್ ಸಿಬ್ಬಂದಿ ಕೊರತೆಯಿಂದಾಗಿ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. 666 ಜನರಿಗೆ ಒಬ್ಬ ಪೊಲೀಸ್ ಹಾಗೂ ಪ್ರತಿ ವಿಐಪಿಗೆ ಮೂವರು ಪೊಲೀಸರಿದ್ದಾರೆ. ಇದು ಸಾರ್ವಜನಿಕ ಹಿತದೃಷ್ಟಿಯಿಂದ ಸಲ್ಲಿಸಿದ ಅರ್ಜಿಯಾಗಿದ್ದು, ಇದರ ಹಿಂದೆ ಯಾವುದೇ ಉದ್ದೇಶವಿಲ್ಲ ಎಂದು ಕೋರಿದ್ದರು. ನ್ಯಾಯಾಲಯ ಅರ್ಜಿದಾರರ ವಾದವನ್ನು ಮಾನ್ಯ ಮಾಡದೇ ತಿರಸ್ಕರಿಸಿದೆ.