Tag: ಟವೆಲ್

  • ಟವೆಲ್‍ನಲ್ಲಿ ಯಾವುದೇ ಗ್ಲಿಸರಿನ್ ಇಲ್ಲ, ನಮ್ದು ಭಾವನಾತ್ಮಕ ಕುಟುಂಬ: ಹೆಚ್‍ಡಿಕೆ

    ಟವೆಲ್‍ನಲ್ಲಿ ಯಾವುದೇ ಗ್ಲಿಸರಿನ್ ಇಲ್ಲ, ನಮ್ದು ಭಾವನಾತ್ಮಕ ಕುಟುಂಬ: ಹೆಚ್‍ಡಿಕೆ

    – ಜಮೀರ್ ಅಹ್ಮದ್ ಕೊಚ್ಚೆ ಇದ್ದಂಗೆ
    – ತಾಕತ್ ಇದ್ರೆ ಆಡಿಯೋ ರಿಲೀಸ್ ಮಾಡ್ಲಿ

    ವಿಜಯಪುರ: ಟವೆಲ್ ನಲ್ಲಿ ಯಾವುದೇ ರೀತಿಯ ಗ್ಲಿಸರಿನ್ ಇಲ್ಲ. ಬೇಕಿದ್ರೆ ನೀವೇ ಚೆಕ್ ಮಾಡಿ. ನಮ್ಮದು ಮೊದಲಿನಿಂದಲೂ ಭಾವನಾತ್ಮಕ ಕುಟುಂಬ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಟವೆಲ್ ನಲ್ಲಿ ಗ್ಲಿಸರಿನ್ ಹಾಕಿದ್ದರಿಂದ ಕಣ್ಣೀರು ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿದರು. ನನಗೆ ಸ್ವಾಭಾವಿಕವಾಗಿ ಕಣ್ಣೀರು ಬರುತ್ತದೆ. ಟವೆಲ್ ನಲ್ಲಿ ಯಾವುದೇ ಗ್ಲಿಸರಿನ್ ಇಲ್ಲ, ನೀವೇ ಚೆಕ್ ಮಾಡಿ. ಯಾರದ್ರು ತಮ್ಮ ಸಮಸ್ಯೆ ಹೇಳಿದ್ರೆ ನನಗೆ ಕಣ್ಣಿರು ಬರುತ್ತೆ. ಕಳೆದ 12 ವರ್ಷ ಪಕ್ಷ ಕಟ್ಟಲು ಇರುವ ಶ್ರಮ ಏನಿದೆ ಅದನ್ನ ಯಾರು ಅರ್ಥ ಮಾಡಿಕೊಳ್ಳಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೈಲಾಗದವನು ಮೈ ಪರಚಿಕೊಂಡ ಹಾಗೆ, ಜಮೀರ್ ಸ್ಥಿತಿ: ಹೆಚ್‍ಡಿಕೆ ಲೇವಡಿ

    ಇದೇ ವೇಳೆ ಶಾಸಕ ಜಮೀರ್ ಅಹ್ಮದ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ, ಜಮೀರ್ ಬ್ಲ್ಯಾಕ್ ಮೇಲ್ ವ್ಯಕ್ತಿ. ಅವರು ಕೊಚ್ಚೆ ಇದ್ದಂತೆ ಎಂದರು. ಇದನ್ನೂ ಓದಿ: ನಿಮ್ಮಿಂದ ಬೆಳೆದಿರೋದು ನಾವು – ಕಣ್ಣೀರು ಹಾಕಿದ ಹೆಚ್‍ಡಿಕೆ

    ಇದೇ ವೇಳೆ 20-20 ಸರ್ಕಾರದ ಆಡಿಯೋ ವಿಚಾರದ ಕುರಿತು ಮಾತನಾಡಿ, ತಾಕತ್ ಇದ್ದರೆ ಆಡಿಯೋ ಬಿಡುಗಡೆ ಮಾಡಲಿ. ಬ್ಲ್ಯಾಕ್ ಮೇಲ್ ಜೀವನ ಮಾಡ್ತಾರೆ. ಮಾರ್ಯಾದೆ ಇಲ್ಲದವರ ಜೊತೆಗೆ ಚರ್ಚೆ ಮಾಡಲ್ಲ. ಬೆಂಗಳೂರು ಬಹಳ ದೊಡ್ಡದು. ಬೆಂಗಳೂರಿನಲ್ಲಿ ನನಗೆ ಜಾಗವೇ ಇಲ್ವಾ. ಪಾಪ ಜಮೀರ್ ಅಹ್ಮದ್ ನನಗೆ ಜಾಗ ಕೊಡಬೇಕಾ..? ಕೊಚ್ಚೆಯ ಮೇಲೆ ಕಲ್ಲು ಎಸೆದ್ರೇ ನಮ್ಮ ಮೇಲೆ ಬೀಳುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಸ್ ಓಡಿಸಿಕೊಂಡಿದ್ದವನನ್ನು ಕರ್ಕೊಂಡು ಬಂದು ಶಾಸಕ ಮಾಡಿದೆ -ಜಮೀರ್ ವಿರುದ್ಧ ಹೆಚ್‍ಡಿಕೆ ವಾಗ್ದಾಳಿ

  • ಸಿಸೇರಿಯನ್ ವೇಳೆ ಮಹಿಳೆಯ ಗರ್ಭದಲ್ಲಿ ಟವೆಲ್ ಬಿಟ್ಟ ವೈದ್ಯರು

    ಸಿಸೇರಿಯನ್ ವೇಳೆ ಮಹಿಳೆಯ ಗರ್ಭದಲ್ಲಿ ಟವೆಲ್ ಬಿಟ್ಟ ವೈದ್ಯರು

    – ಹೊಟ್ಟೆ ನೋವು, ಮೂತ್ರವಿಸರ್ಜನೆ ಆಗದೆ ಮಹಿಳೆ ಕಂಗಾಲು
    – ಟವೆಲ್ ಹೊರಗೆ ತೆಗೆದ ಖಾಸಗಿ ಆಸ್ಪತ್ರೆ ವೈದ್ಯರು
    – ಮಹಿಳೆಯ ಪತಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹ

    ಚಂಡೀಗಡ: ಮಹಿಳೆಗೆ ಸಿಸೇರಿಯನ್ ಡೆಲಿವರಿ ಮಾಡಿಸಿದ ಬಳಿಕ ಗರ್ಭಕೋಶದಲ್ಲಿ ವೈದ್ಯರು ಟವೆಲ್ ಬಿಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

    ಪಂಜಾಬ್‍ನ ಲುಧಿಯಾನದ ಸಾರ್ವಜನಿಕ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಮಹಿಳೆಯ ಪತಿ ರವೀಂದ್ರ ಸಿಂಗ್, ಕುಟುಂಬಸ್ಥರು ಹಾಗೂ ಕೆಲ ಸಾಮಾಜಿಕ ಕಾರ್ಯಕರ್ತರು ಆಸ್ಪತ್ರೆಯ ಹೆರಿಗೆ ವಾರ್ಡ್ ಬಳಿ ಪ್ರತಿಭಟನೆ ನಡೆಸಲು ಆರಂಭಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ನಿರ್ಲಕ್ಷ್ಯ ವಹಿಸಿದ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

    ಶಿಮ್ಲಾಪುರಿ ನಿವಾಸಿ ರವೀಂದ್ರ ಅವರು ಡಿಸೆಂಬರ್ 7ರಂದು ತಮ್ಮ ಗರ್ಭಿಣಿ ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡ ಬಳಿಕ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ ಬಳಿಕ ವೈದ್ಯರು ಸಿಸೇರಿಯನ್ ಡೆಲಿವರಿ ಮಾಡುವುದಾಗಿ ತಿಳಿಸಿದ್ದಾರೆ.

    ಮಾರನೇ ದಿನ ಸರ್ಜರಿ ಮಾಡಲಾಗಿದೆ. ನವಜಾತ ಶಿಶು ಸಂಪೂರ್ಣವಾಗಿ ಆರಾಮವಾಗಿದೆ. ಆದರೆ ಹೆರಿಗೆ ಬಳಿಕ ತಾಯಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಮೂತ್ರವಿಸರ್ಜನೆ ಮಾಡಲು ಸಹ ಸಾಧ್ಯವಾಗಿಲ್ಲ. ಈ ಕುರಿತು ವೈದ್ಯರಿಗೆ ತಿಳಿಸಿದರೆ, ಮಹಿಳೆಗೆ ನಿದ್ರಾಜನಕ ನೀಡಿ ಮಲಗಿಸಿದ್ದಾರೆ.

    ಎರಡು ದಿನಗಳಾದರೂ ಮಹಿಳೆಗೆ ಹೊಟ್ಟೆ ನೋವು ಕಡಿಮೆಯಾಗದ್ದರಿಂದ ನಾನು ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಲು ವೈದ್ಯರಿಗೆ ತಿಳಿಸಿದೆ. ಆದರೆ ಅವರು ಪಟಿಯಾಲದ ರಾಜಿಂದ್ರ ಸರ್ಕಾರಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದರು. ಅಂತಿಮವಾಗಿ ಡಿಸೆಂಬರ್ 11ರಂದು ನಾನು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ಕರೆದೊಯ್ದೆ. ಬಳಿಕ ವೈದ್ಯರು ನನ್ನ ಪತ್ನಿಗೆ ಚಿಕಿತ್ಸೆ ನೀಡಿದರು. ಅಲ್ಲದೆ ಗರ್ಭಕೋಶದಲ್ಲಿ ಟವೆಲ್ ಇರುವುದನ್ನು ಪತ್ತೆಹಚ್ಚಿದರು. ವೈದ್ಯರ ನಿರ್ಲಕ್ಷ್ಯದಿಂದಾಗಿ ನನ್ನ ಪತ್ನಿಯ ಜೀವವೇ ಹೋಗುತ್ತಿತ್ತು ಎಂದು ಮಹಿಳೆ ಪತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಸಿಂಗ್ ಅವರು ತಮ್ಮ ಪತ್ನಿಗೆ ಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ ದೂರು ದಾಖಲಿಸಿದ್ದಾರೆ. ಅಲ್ಲದೆ ಖಾಸಗಿ ಆಸ್ಪತ್ರೆ ವೈದ್ಯರು ಮಹಿಳೆಯ ಗರ್ಭಕೋಶದಲ್ಲಿದ್ದ ಟವೆಲ್ ಹೊರಗೆ ತೆಗೆದಿದ್ದಾರೆ.