Tag: ಟಾಟಾ ಸಂಸ್ಥೆ

  • ಕೇವಲ 100 ರೂ. ಕ್ಯಾನ್ಸರ್‌ಗೆ ಚಿಕಿತ್ಸೆ – ಟಾಟಾ ಸಂಸ್ಥೆಯಿಂದ ಮಾತ್ರೆ ಅಭಿವೃದ್ಧಿ

    ಕೇವಲ 100 ರೂ. ಕ್ಯಾನ್ಸರ್‌ಗೆ ಚಿಕಿತ್ಸೆ – ಟಾಟಾ ಸಂಸ್ಥೆಯಿಂದ ಮಾತ್ರೆ ಅಭಿವೃದ್ಧಿ

    – ಎರಡನೇ ಬಾರಿ ಕ್ಯಾನ್ಸರ್‌ ಬರುವುದನ್ನು ತಡೆಯುತ್ತೆ ಮಾತ್ರೆ
    – 10 ವರ್ಷಗಳ ಕಾಲ ದೀರ್ಘ ಸಂಶೋಧನೆ
    – FSSAI ಅನುಮೋದನೆಗಾಗಿ ಕಾಯುತ್ತಿದ್ದಾರೆ ಸಂಶೋಧಕರು

    ಮುಂಬೈ: ಎರಡನೇ ಬಾರಿಗೆ ಕ್ಯಾನ್ಸರ್ (Cancer) ಬರುವುದನ್ನು ತಡೆಯುವ ಮಾತ್ರೆಯನ್ನು (Tablet) ನಾವು ಅಭಿವೃದ್ಧಿ ಪಡಿಸಿರುವುದಾಗಿ ಭಾರತದ ಪ್ರಸಿದ್ಧ ಕ್ಯಾನ್ಸರ್‌ ಸಂಶೋಧನಾ ಸಂಸ್ಥೆ ಟಾಟಾ ಸ್ಮಾರಕ ಕೇಂದ್ರ (TMC) ಹೇಳಿಕೊಂಡಿದೆ.

    ಸಂಶೋಧಕರು 10 ವರ್ಷಗಳ ಕಾಲ ಸಂಶೋಧನೆ ನಡೆಸಿದ ಬಳಿಕ ಮಾತ್ರೆ ಅಭಿವೃದ್ಧಿ ಪಡಿಸಿದ್ದು ವಿಕಿರಣ (Radiation) ಮತ್ತು ಕೀಮೋಥೆರಪಿಯಂತಹ (Chemotherapy) ಚಿಕಿತ್ಸೆಗಳ ಅಡ್ಡಪರಿಣಾಮಗಳನ್ನು 50% ರಷ್ಟು ಮಾತ್ರೆ ಕಡಿಮೆ ಮಾಡುತ್ತದೆ. ಕ್ಯಾನ್ಸರ್‌ ಚಿಕಿತ್ಸೆಗೆ ಲಕ್ಷದಿಂದ ಕೋಟಿ ರೂ. ವೆಚ್ಚವಾಗುತ್ತಿದ್ದು, ಈ ಮಾತ್ರೆಯ ಬೆಲೆ ಕೇವಲ 100 ರೂ. ಇರಲಿದೆ ಎಂದು ಟಾಟಾ ಸಂಸ್ಥೆ ಹೇಳಿದೆ.

    ಸಂಶೋಧನಾ ಗುಂಪಿನ ಭಾಗವಾಗಿದ್ದ ಟಾಟಾ ಮೆಮೋರಿಯಲ್ ಆಸ್ಪತ್ರೆಯ ಹಿರಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸಕ ಡಾ.ರಾಜೇಂದ್ರ ಬದ್ವೆ ಪ್ರತಿಕ್ರಿಯಿಸಿ, ಸಂಶೋಧನೆಗಾಗಿ ಆರಂಭದಲ್ಲಿ ಇಲಿಗಳಲ್ಲಿ (Rat) ಮಾನವನ ಕ್ಯಾನ್ಸರ್ ಕೋಶಗಳನ್ನು ಸೇರಿಸಲಾಯಿತು. ಆ ಕೋಶಗಳು ಇಲಿಗಳಲ್ಲಿ ಗೆಡ್ಡೆಯನ್ನು ರೂಪಿಸಿತು. ನಂತರ ಇಲಿಗಳಿಗೆ ವಿಕಿರಣ ಚಿಕಿತ್ಸೆ, ಕೀಮೋಥೆರಪಿ ಮತ್ತು ಶಸ್ತ್ರಚಿಕಿತ್ಸೆಯ ಮೂಲಕ ಚಿಕಿತ್ಸೆ ನೀಡಲಾಯಿತು. ಈ ಕ್ಯಾನ್ಸರ್ ಕೋಶಗಳು ಸತ್ತಾಗ ಅವು ಕ್ರೊಮಾಟಿನ್ ಕಣಗಳೆಂದು ಕರೆಯಲ್ಪಡುವ ಸಣ್ಣ ತುಂಡುಗಳಾಗಿ ಒಡೆಯುತ್ತವೆ. ಈ ಸಣ್ಣ ತುಂಡುಗಳು ರಕ್ತದೊಂದಿಗೆ ಸೇರಿ ಆರೋಗ್ಯ ಹೊಂದಿದ ಜೀವಕೋಶಗಳನ್ನು ಪ್ರವೇಶಿಸಿದಾಗ ಕ್ಯಾನ್ಸರ್‌ ಬರುತ್ತದೆ ಎಂದು ತಿಳಿಸಿದರು.

    ಈ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು, ವೈದ್ಯರು ಇಲಿಗಳಿಗೆ ರೆಸ್ವೆರಾಟ್ರೊಲ್ ಮತ್ತು ತಾಮ್ರದ (R+Cu) ಪ್ರೊ-ಆಕ್ಸಿಡೆಂಟ್ ಮಾತ್ರೆಗಳನ್ನು ನೀಡಲಾಯಿತು. R+Cu ಆಮ್ಲಜನಕ ಮುಕ್ತ ಕಣಗಳನ್ನು ಉತ್ಪಾದಿಸುತ್ತದೆ, ಇದು ಕ್ರೊಮಾಟಿನ್ ಕಣಗಳನ್ನು ನಾಶಪಡಿಸುತ್ತದೆ ಎಂದು ವಿವರಿಸಿದರು.  ಇದನ್ನೂ ಓದಿ: ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ

    R+Cu ಅನ್ನು ಸೇವಿಸಿದಾಗ ಹೊಟ್ಟೆಯಲ್ಲಿ ಆಮ್ಲಜನಕ ಮುಕ್ತ ಕಣಗಳನ್ನು ಉತ್ಪಾದಿಸುತ್ತದೆ. ಈ ಆಮ್ಲಜನಕ ಮುಕ್ತ ಕಣಗಳನ್ನು ಚಲಾವಣೆಯಲ್ಲಿರುವ ಕ್ರೊಮಾಟಿನ್ ಕಣಗಳನ್ನು ನಾಶಮಾಡುತ್ತವೆ ಮತ್ತು ‘ಮೆಟಾಸ್ಟೇಸ್’ಗಳನ್ನು ತಡೆಯುತ್ತವೆ. ಇದು ದೇಹದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಕ್ಯಾನ್ಸರ್ ಕೋಶಗಳ ಚಲನೆ ತಡೆಯುತ್ತದೆ ಎಂದು ಹೇಳಿದರು.

    ಈ ಟ್ಯಾಬ್ಲೆಟ್ ಕ್ಯಾನ್ಸರ್ ಚಿಕಿತ್ಸೆಯ ಚಿಕಿತ್ಸೆಯ ಅಡ್ಡಪರಿಣಾಮಗಳನ್ನು ಸುಮಾರು 50 ಪ್ರತಿಶತದಷ್ಟು ಕಡಿಮೆ ಮಾಡುತ್ತದೆ ಮತ್ತು ಎರಡನೇ ಬಾರಿಗೆ ಇದು ಕ್ಯಾನ್ಸರ್ ತಡೆಗಟ್ಟುವಲ್ಲಿ ಸುಮಾರು 30% ಪರಿಣಾಮಕಾರಿಯಾಗಿದೆ. ಇದು ಮೇದೋಜೀರಕ ಗ್ರಂಥಿ, ಶ್ವಾಸಕೋಶ ಮತ್ತು ಬಾಯಿಯ ಕ್ಯಾನ್ಸರ್‌ನ ಮೇಲೂ ಪರಿಣಾಮಕಾರಿಯಾಗಬಲ್ಲದು ಎಂದು ತಿಳಿಸಿದರು.

    ಟಾಟಾ ವೈದ್ಯರು ಸುಮಾರು ಒಂದು ದಶಕದಿಂದ ಈ ಮಾತ್ರೆಯ ಮೇಲೆ ಸಂಶೋಧನೆ ಮಾಡುತ್ತಿದ್ದು ಈಗ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅನುಮೋದನೆಗೆ ಕಾಯತ್ತಿದ್ದಾರೆ. ಈಗಾಲೇ ಟಿಐಎಫ್‌ಆರ್ ವಿಜ್ಞಾನಿಗಳು ಈ ಮಾತ್ರೆಯನ್ನು ಅನುಮೋದಿಸಲು ಎಫ್‌ಎಸ್‌ಎಸ್‌ಎಐಗೆ ಅರ್ಜಿ ಸಲ್ಲಿಸಿದ್ದಾರೆ. ಅನುಮೋದನೆ ಪಡೆದ ನಂತರ ಜೂನ್-ಜುಲೈನಿಂದ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ.  ಇದನ್ನೂ ಓದಿ: ಗಗನಯಾನ ಕೈಗೊಳ್ಳುವ 4 ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಮೋದಿ

    ಈ ಮಾತ್ರೆ ಸೇವನೆಯ ಬಳಿಕ ಇಲಿಗಳು ಮತ್ತು ಮನುಷ್ಯರ ಮೇಲೆ ಆಗುವ ಅಡ್ಡ ಪರಿಣಾಮವನ್ನು ಪರೀಕ್ಷಿಸಲಾಗಿದೆ. ಮಾನವನ ಮೇಲಿನ ಪ್ರಯೋಗಗಳನ್ನು ಪೂರ್ಣಗೊಳಿಸಲು ಸುಮಾರು ಐದು ವರ್ಷ ಬೇಕಾಯಿತು. ಸಂಶೋಧನೆಯ ಸಮಯದಲ್ಲಿ ಸವಾಲುಗಳು ಇದ್ದವು. ಈ ಸಂಶೋಧನೆ ಮಾಡುವಾಗ ಸಮಯ ಮತ್ತು ಹಣ ವ್ಯರ್ಥ ಎಂದು ಹಲವರು ಹೇಳಿದ್ದರು. ಆದರೆ ಇಂದು ನಾವೆಲ್ಲ ಸಂತೋಷವಾಗಿದ್ದು ದೊಡ್ಡ ಯಶಸ್ಸು ಸಿಕ್ಕಿದೆ ಎಂದು ವೈದ್ಯರು ಬಣ್ಣಿಸಿದರು.

    ಕ್ಯಾನ್ಸರ್‌ ಎರಡನೇ ಬಾರಿ ಹೇಗೆ ಬರುತ್ತೆ?
    ಕೆಲವೊಮ್ಮೆ ಕ್ಯಾನ್ಸರ್ ಚಿಕಿತ್ಸೆಯ ನಂತರ ಕ್ಯಾನ್ಸರ್ ಮತ್ತೆ ಬರುತ್ತದೆ. ಇದನ್ನು ಕ್ಯಾನ್ಸರ್ ಮರುಕಳಿಸುವಿಕೆ ಎಂದು ಕರೆಯಲಾಗುತ್ತದೆ. ಮೂಲ ಕ್ಯಾನ್ಸರ್‌ಗೆ ಚಿಕಿತ್ಸೆ ನೀಡಿದ ವಾರ, ತಿಂಗಳುಗಳು ಅಥವಾ ವರ್ಷಗಳ ನಂತರವೂ ಇದು ಬರಹುದು.

    ಕೆಲವು ರೀತಿಯ ಕೀಮೋಥೆರಪಿ ಮತ್ತು ವಿಕಿರಣ ಚಿಕಿತ್ಸೆಯು ಎರಡನೇ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಮಗು, ಹದಿಹರೆಯ ಅಥವಾ ಯುವ ವಯಸ್ಕರಲ್ಲಿ ಕ್ಯಾನ್ಸರ್‌ ಚಿಕಿತ್ಸೆ ಪಡೆದಿದ್ದರೆ ಅಪಾಯವು ಹೆಚ್ಚು. ರೋಗಿಗೆ ಚಿಕಿತ್ಸೆ ಮುಗಿದ ನಂತರ ಕ್ಯಾನ್ಸರ್ ಮತ್ತೆ ಬರುತ್ತದೆಯೇ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ.

     

  • ಉದ್ಯೋಗ ಕಡಿತವೊಂದೇ ಪರಿಹಾರವಲ್ಲ- ರತನ್ ಟಾಟಾ

    ಉದ್ಯೋಗ ಕಡಿತವೊಂದೇ ಪರಿಹಾರವಲ್ಲ- ರತನ್ ಟಾಟಾ

    – ನಿಮ್ಮ ಕಾರ್ಮಿಕರ ಬಗ್ಗೆ ಕಾಳಜಿ ವಹಿಸಿ

    ನವದೆಹಲಿ: ಕೊರೊನಾ ವೈರಸ್ ಹಾಗೂ ಲಾಕ್‍ಡೌನ್ ಅವಾಂತರದಿಂದಾಗಿ ಬಹುತೇಕ ಭಾರತೀಯ ಕಂಪನಿಗಳಲ್ಲಿ ಉದ್ಯೋಗ ಕಡಿತ ಸಾಮಾನ್ಯವಾಗಿದ್ದು, ಬೇಕಾಬಿಟ್ಟಿಯಾಗಿ ಕೆಲಸದಿಂದ ವಜಾ ಮಾಡಲಾಗುತ್ತಿದೆ. ಈ ಕುರಿತು ಟಾಟಾ ಸಮೂಹ ಸಂಸ್ಥೆ ಅಧ್ಯಕ್ಷ ರತನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೊನಾ ಪರಿಸ್ಥಿತಿಯಲ್ಲಿ ಉದ್ಯೋಗ ಕಡಿತವೊಂದೇ ಪರಿಹಾರವಲ್ಲ ಎಂದು ತಿಳಿಸಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಕೊರೊನಾ ಪರಿಸ್ಥಿತಿಯಲ್ಲಿ ಕಂಪನಿಗಳಿಂದ ನೌಕರರನ್ನು ಕೆಲಸದಿಂದ ತೆಗೆಯುವುದೇ ಪರಿಹಾರವಲ್ಲ. ಇದು ಮೊಣಕಾಲಿನ ಕೆಳಗಿನ ಪ್ರತಿಕ್ರಿಯೆಯಾಗಿದೆ. ಅಲ್ಲದೆ ಕೊರೊನಾ ನಂತರದ ಜಗತ್ತಿನಲ್ಲಿ ವ್ಯವಹರಿಸುವ ವಿಧಾನವೂ ಬದಲಾಗಬೇಕಿದೆ ಎಂದು ಹೇಳೀದ್ದಾರೆ.

    ಟಾಟಾ ಸಮೂಹ ಸಂಸ್ಥೆ ಯಾವುದೇ ಸಿಬ್ಬಂದಿಯನ್ನು ಕೆಲಸದಿಂದ ತೆಗೆದಿಲ್ಲ. ಆದರೆ ದೇಶಾದ್ಯಂತ ಲಾಕ್‍ಡೌನ್ ನಂತರ ಹಣದ ಹರಿವಿನ ಕೊರತೆಯಿಂದಾಗಿ ಹಲವು ಭಾರತೀಯ ಕಂಪನಿಗಳು ಉದ್ಯೋಗಿಗಳನ್ನು ತೆಗೆದು ಹಾಕಿವೆ. ಆದರೆ ಟಾಟಾ ಸಂಸ್ಥೆ ಉನ್ನತ ಹುದ್ದೆಯಲ್ಲಿರುವವರ ಶೇ.20ರಷ್ಟು ಸಂಬಳವನ್ನು ಕಡಿತಗೊಳಿಸಿದೆ. ಕೊರೊನಾದಿಂದಾಗಿ ಟಾಟಾ ಸಂಸ್ಥೆಯ ಹೋಟೆಲ್‍ಗಳು, ವಿಮಾನಯಾನ ಸಂಸ್ಥೆಗಳು, ಆಟೋಮೊಬೈಲ್ ಹಾಗೂ ಹಣಕಾಸು ಸೇವೆ ಸೇರಿದಂತೆ ಎಲ್ಲ ವಿಭಾಗಕ್ಕೂ ನಷ್ಟ ಉಂಟಾಗಿದೆ. ಆದರೆ ಟಾಟಾ ಸಂಸ್ಥೆ ಈ ವರೆಗೆ ಉದ್ಯೋಗ ಕಡಿತಗೊಳಿಸಿಲ್ಲ.

    ಬದುಕುಳಿಯಲು ನ್ಯಾಯಯುತ ಮತ್ತು ಅಗತ್ಯವೆಂದು ಪರಿಗಣಿಸುವ ವಿಷಯದಲ್ಲಿ ಬದಲಾಗಬೇಕು ಎಂಬುದನ್ನು ಒಪ್ಪಿಕೊಳ್ಳಿ. ಅಲ್ಲದೆ ಒಬ್ಬರೇ ಹಲವು ವಿಭಾಗಗಳಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಅಲ್ಲದೆ ನಿಮ್ಮ ಮಧ್ಯಸ್ಥಗಾರರಗೊಂದಿಗೆ ಸೂಕ್ಷ್ಮವಾಗಿ ವರ್ತಿಸದಿದ್ದಲ್ಲಿ ಬುದುಕುಳಿಯುವುದು ಕಷ್ಟ. ಇದಕ್ಕೆ ಮನೆಯಿಂದ ಕೆಲಸ ಮಾಡುವುದೂ ಒಂದು ಪರಿಹಾರ. ಉದ್ಯೋಗಿಗಳ ಜವಾಬ್ದಾರಿಯನ್ನು ನೀವು ಹೊತ್ತಿರುವುದರಿಂದ ಕೆಲಸದಿಂದ ಹೊರಗಳಿದವರು ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಸಂಸ್ಥೆಯ ಒಬ್ಬರೂ ತಮ್ಮ ಉದ್ಯೋಗಿಗಳ ಕುರಿತು ಸೂಕ್ಷ್ಮತೆ ಹೊಂದಿರದಿದ್ದಲ್ಲಿ ಸಂಘಟನೆಯಾಗಿ ಬದುಕುವುದ ಕಷ್ಟ. ವ್ಯವಹಾರವೆಂದರೆ ಕೇವಲ ಹಣ ಸಂಪಾದಿಸುವುದು ಮಾತ್ರವಲ್ಲ. ಗ್ರಾಹಕರು ಹಾಗೂ ಮಧ್ಯಸ್ಥಗಾರರಿಗಾಗಿ ಎಲ್ಲವನ್ನೂ ಸರಿಯಾಗಿ ಮತ್ತು ನೈತಿಕವಾಗಿ ಮಾಡಬೇಕು ಎಂದು ಒತ್ತಿ ಹೇಳಿದ್ದಾರೆ.

    ಕೊರೊನಾ ವೈರಸ್‍ನಿಂದಾಗಿ ಆರೋಗ್ಯ ಹಾಗೂ ಆರ್ಥಿಕ ವಲಯಗಳಲ್ಲಿ ವಿವಿಧ ಸವಾಲುಗಳು ಎದುರಾಗಿವೆ. ಹೀಗಾಗಿ ಪ್ರತಿಯೊಬ್ಬ ಕೈಗಾರಿಕೋದ್ಯಮಿ ಈ ಸಮಯವನ್ನು ಸದುಪಯೋಗಪಡಿಸಿಕೊಂಡು ಹೊಸ ಹೊಸ ಹಾಗೂ ಕ್ರಿಯೇಟಿವ್ ಆವಿಷ್ಕಾರಗಳ ಮೂಲಕ ಪರಿಹಾರ ಕಂಡುಕೊಳ್ಳಬೇಕಿದೆ. ಇಂತಿಹ ಕಷ್ಟದ ಪರಿಸ್ಥಿತಿಯಲ್ಲೇ ಕೆಲವು ಅತ್ಯಂತ ಆಸಕ್ತಿದಾಯಕ ಅಥವಾ ಪ್ರಚಂಡ ಪರಿಹಾರಗಳು ಸಿಕ್ಕಿವೆ. ಇಂತಹ ಸಮಯದಲ್ಲಿ ಪರಿಹಾರ ಕಂಡುಹಿಡಿಯಲು ಹೆಚ್ಚು ನವೀನ ಹಾಘೂ ಸೃಜನಶೀಲರಾಗಿರಬೇಕು ಎಂದು ರತನ್ ಟಾಟಾ ತಿಳಿಸಿದ್ದಾರೆ.

    ಕೊರೊನಾ ಮಹಾಮಾರಿಯನ್ನು ನಾವು ಒಗ್ಗಟ್ಟು, ಸಂಕಲ್ಪ, ಅನುಭೂತಿ ಹಾಗೂ ತಿಳುವಳಿಕೆಯ ಮನೋಭಾವದಿಂದ ಹೋರಾಡಬೇಕು. ಕೋವಿಡ್-19 ಯುದ್ಧವನ್ನು ನಾವು ಗೆಲ್ಲಲು ಒಂದಾಗಬೇಕು. ಕೊರೊನಾ ವಿರುದ್ಧದ ಹೋರಾಟದಲ್ಲಿ ಮಾಡಿದ ಲಾಕ್‍ಡೌನ್‍ನಿಂದಾಗಿ ಲಕ್ಷಾಂತರ ವಲಸೆ ಕಾರ್ಮಿಕರು ನಿರುದ್ಯೋಗಿಗಳಾಗಿ ಉಳಿದರು. ಇದು ಬಿಸಿನೆಸ್ ನೀತಿಯ ಕೊರತೆಯನ್ನು ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ವಲಸೆ ಕಾರ್ಮಿಕರು ನಿಮಗಾಗಿ ಹಗಲಿರುಳು ಕೆಲಸ ಮಾಡಿದವರು, ಮಳೆಯಲ್ಲಿ ನೆನೆಯುವಂತೆ ಅವರನ್ನು ನೀವು ಹೊರ ದಬ್ಬಿದಿರಿ. ಇದೇ ನಿಮ್ಮ ನೀತಿಯ ಅರ್ಥ? ಇದೇ ನಿಮ್ಮ ಕಾರ್ಮಿಕರನ್ನು ನೀವು ನಡೆಸಿಕೊಳ್ಳುತ್ತಿರುವ ರೀತಿ ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.