Tag: ಟಿಎಂಸಿ

  • ಮಮತಾ ನಾಮಪತ್ರ ತಿರಸ್ಕರಿಸಿ – ದಾಖಲೆಯೊಂದಿಗೆ ಆಯೋಗಕ್ಕೆ ಸುವೇಂದು ದೂರು

    ಮಮತಾ ನಾಮಪತ್ರ ತಿರಸ್ಕರಿಸಿ – ದಾಖಲೆಯೊಂದಿಗೆ ಆಯೋಗಕ್ಕೆ ಸುವೇಂದು ದೂರು

    ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ನಂದಿಗ್ರಾಮದಲ್ಲಿ ದೀದಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

    ಮಮತಾ ಬ್ಯಾನರ್ಜಿ ನಾಮಪತ್ರ ಸಲ್ಲಿಸುವಾಗ ಅಫಿಡವಿತ್‌ನಲ್ಲಿ ತನ್ನ ಮೇಲಿರುವ 6 ಕ್ರಿಮಿನಲ್‌ ಪ್ರಕರಣಗಳನ್ನು ಬಹಿರಂಗಗೊಳಿಸಿಲ್ಲ. ಹೀಗಾಗಿ ನಾಮಪತ್ರವನ್ನು ತಿರಸ್ಕರಿಸುವಂತೆ ಆಯೋಗದ ಮೆಟ್ಟಿಲು ಏರಿದ್ದಾರೆ.

    ಅಸ್ಸಾಂನಲ್ಲಿ ಐದು ಮತ್ತು ಪಶ್ಚಿಮ ಬಂಗಾಳದಲ್ಲಿ ಸಿಬಿಐ ದಾಖಲಿಸಿರುವ ಒಂದು ಪ್ರಕರಣವನ್ನು ಮುಚ್ಚಿಟ್ಟು ನಾಮಪತ್ರ ಸಲ್ಲಿಕೆಯಾಗಿದೆ ಎಂದು ಸುವೇಂದು ಅಧಿಕಾರಿ ದೂರಿನಲ್ಲಿ ಆರೋಪಿಸಿದ್ದಾರೆ.

    ತನ್ನ ವಿರುದ್ಧ ದಾಖಲಾಗಿದ್ದ ಒಂದು ಎಫ್‌ಐಆರ್‌ ಅನ್ನು ರದ್ದುಗೊಳಿಸುವಂತೆ ಮಮತಾ ಬ್ಯಾನರ್ಜಿ ಕೋಲ್ಕತ್ತಾ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ ಕೋರ್ಟ್‌ ಮಮತಾ ಅರ್ಜಿಯನ್ನು ತಿರಸ್ಕರಿಸಿದೆ. ನಾನು ಎಲ್ಲ ಮಾಹಿತಿಯನ್ನು ಕ್ರೋಢಿಕರಿಸಿ ಚುನಾವಣಾ ಆಯೋಗಕ್ಕೆ ನೀಡಿದ್ದೇನೆ. ನಾನು ನೀಡಿದ ದಾಖಲೆಗಳ ಆಧಾರದ ಮೇಲೆ ಚುನಾವಣಾ ಆಯೋಗ ಮಮತಾ ಬ್ಯಾನರ್ಜಿ ಅವರ ನಾಮಪತ್ರ ಪರಿಶೀಲಿಸಲಿ.ಕಾನೂನು ಪ್ರಕಾರ ಈ ಪ್ರಕರಣದಲ್ಲಿ ನನಗೆ ನ್ಯಾಯ ಸಿಗುವ ವಿಶ್ವಾಸವಿದೆ. ಒಂದು ವೇಳೆ ನ್ಯಾಯ ಸಿಗದೇ ಇದ್ದಲ್ಲಿ ನಾನು ಮುಂದಿನ ಹಂತಕ್ಕೆ ಈ ಪ್ರಕರಣವನ್ನು ತೆಗೆದುಕೊಂಡು ಹೋಗುತ್ತೇನೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

    2016ರ ಚುನಾವಣೆಯಲ್ಲಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಸುವೇಂದು ಅಧಿಕಾರಿ ಜಯಗಳಿಸಿದ್ದರು. ಆದರೆ ಈ ಬಾರಿ ಸುವೇಂದು ಅಧಿಕಾರಿಯನ್ನು ಸೋಲಿಸಲೆಂದೇ ಮಮತಾ ಬ್ಯಾನರ್ಜಿ ಈ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ.

  • ಚುನಾವಣೆಗೂ ಮುನ್ನ ಮಹತ್ವದ ಬೆಳವಣಿಗೆ- ಟಿಎಂಸಿ ಸೇರಿದ ಯಶವಂತ್ ಸಿನ್ಹಾ

    ಚುನಾವಣೆಗೂ ಮುನ್ನ ಮಹತ್ವದ ಬೆಳವಣಿಗೆ- ಟಿಎಂಸಿ ಸೇರಿದ ಯಶವಂತ್ ಸಿನ್ಹಾ

    ಕೋಲ್ಕತ್ತಾ: ರಾಜಕಾರಣದಿಂದ ಸನ್ಯಾಸವನ್ನು ತೆಗೆದುಕೊಳ್ಳುತ್ತಿದ್ದೇನೆ, ಬಿಜೆಪಿಯನ್ನು ತೊರೆದಿದ್ದೇನೆ ಎಂದು ಹೇಳಿದ್ದ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಇದೀಗ ತೃಣ ಮೂಲ ಕಾಂಗ್ರೆಸ್‍ಗೆ ಸೆರ್ಪಡೆಯಾಗಿದ್ದಾರೆ.

    ಯಶವಂತ್ ಸಿನ್ಹಾ(83)ರವರು, ಡೆರೆಕ್ ಓ ಬ್ರಾಯನ್, ಸುದೀಪ್ ಬಂದೋಪಾಧ್ಯಾಯ ಹಾಗೂ ಸುಬ್ರತ್ ಮುಖರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡಗೊಂಡಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಪಶ್ಚಿಮ ಬಂಗಾಳ ರಾಜಕೀಯ ಕಣ ಮತ್ತೊಂದು ತಿರುವು ಪಡೆದುಕೊಂಡಿದೆ.

    ಈ ಹಿಂದೆ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಕೆಲಸ ಮಾಡುತ್ತೇನೆ. ಬರುವ ದಿನಗಳಲ್ಲಿ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ. ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ, ಪಕ್ಷಾಧಾರಿತ ರಾಜಕೀಯ ಮಾಡುವುದಿಲ್ಲ, ಯಾವುದೇ ಉನ್ನತ ಹುದ್ದೆಯ ಆಕಾಂಕ್ಷಿಯಲ್ಲ ಎಂದು ತಿಳಿಸಿದ್ದರು.

    ಯಶವಂತ್ ಸಿನ್ಹಾ ನಮ್ಮ ಪಕ್ಷಕ್ಕೆ ಸೇರಿರುವುದು ಸಂತಸವಾಗಿದೆ. ನಂದಿಗ್ರಾಮದಲ್ಲಿ ನಡೆದ ಹಲ್ಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದಾರೆ. ಹೀಗಾಗಿ ಇಂದು ಈ ಸಂತಸದಲ್ಲಿ ಅವರು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸುಬ್ರತ್ ಮುಖರ್ಜಿ ಹೇಳಿದ್ದಾರೆ.

    1990ರಲ್ಲಿ ಹಣಕಾಸು ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 2004ರಲ್ಲಿ ಭಾರತ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ಟಿಎಂಸಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

  • ಶಾಸಕಿಯ ಕೆನ್ನೆ ಹಿಂಡಿದ ಸಂಸದ – ವೀಡಿಯೋ ವೈರಲ್

    ಶಾಸಕಿಯ ಕೆನ್ನೆ ಹಿಂಡಿದ ಸಂಸದ – ವೀಡಿಯೋ ವೈರಲ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಿಸಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆರೋಪ-ಪ್ರತ್ಯಾರೋಪಗಳ ನಡುವೆ ವೀಡಿಯೋಗಳು ಸಹ ಹೆಚ್ಚು ಸದ್ದು ಮಾಡುತ್ತಿವೆ. ಇದೀಗ ಟಿಎಂಸಿ ಸಂಸದರೊಬ್ಬರು ಶಾಸಕಿಯ ಕೆನ್ನೆ ಹಿಂಡುವ ವೀಡಿಯೋ ವೈರಲ್ ಆಗಿದೆ.

    ಬಿಜೆಪಿ ಸಂಸದ ಲಾಕೆಟ್ ಚಟರ್ಜಿ ಅವರು ಟಿಎಂಸಿಯ ಸಂಸದ ಕಲ್ಯಾಣ್ ಬ್ಯಾನರ್ಜಿ ಸುದ್ದಿಗೋಷ್ಠಿಯಲ್ಲಿ ಬಂಕುರಾ ಶಾಸಕಿಯ ಕೆನ್ನೆ ಹಿಂಡಿದ್ದಾರೆ. ಶಾಸಕಿ  ಟಿಕೆಟ್ ಆಕಾಂಕ್ಷಿಯಾಗಿದ್ದರು ಎನ್ನಲಾಗಿದೆ. ಟಿಕೆಟ್ ಸಿಗದಿದ್ದಾಗ ನಿರಾಸೆಗೊಂಡಾಗ ಸಂಸದರು ಕೆನ್ನೆ ಹಿಂಡಿದ್ದಾರೆ ಎನ್ನಲಾಗುತ್ತಿದೆ. ಈ ವೀಡಿಯೋ ಎಲ್ಲಿಯದ್ದು ಅನ್ನೋದರ ಮಾಹಿತಿ ಸಿಕ್ಕಿಲ್ಲ. ಆದ್ರೆ ಈ ವೀಡಿಯೋವನ್ನ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಕಮಲ ನಾಯಕರು ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

    ವೀಡಿಯೋ ಶೇರ್ ಮಾಡಿಕೊಂಡಿರುವ ಲಾಕೆಟ್ ಬ್ಯಾನರ್ಜಿ, ಮಹಿಳೆಯರನ್ನ ಸಶಕ್ತರನ್ನಾಗಿ ಮಾಡಲಾಗ್ತಿದೆ ಎಂದು ಟಿಎಂಸಿ ಹೇಳುತ್ತಿದೆ. ಆದ್ರೆ ಇಲ್ಲಿ ಅವರದೇ ಸಂಸದರು ಟಿಕೆಟ್ ಸಿಗದ ಶಾಸಕಿಯ ಕೆನ್ನೆಯನ್ನು ಹಿಂಡಿದ್ದಾರೆ. ನಿಮಗೆ ನಾಚಿಕೆಯಾಗಬೇಕು ಎಂದು ಬರೆದುಕೊಂಡಿದ್ದಾರೆ.

    ಬಿಜೆಪಿಯವರು ಚುನಾವಣೆ ಸಮಯದಲ್ಲಿ ಮಾತ್ರ ಬಂಗಾಳಕ್ಕೆ ಬಂದು ಸುಳ್ಳುಗಳನ್ನು ಹೇಳಿ ಹೋಗುತ್ತಾರೆ. ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುವ ಅವರು ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸಿದ್ದಾರೆಯೇ? ಮೋದಿಯವರ ಪ್ರಿಯವಾದ ಗುಜರಾತ್ ರಾಜ್ಯದಲ್ಲಿನ ಪರಿಸ್ಥಿತಿ ಹೇಗಿದೆ? ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ರಾತ್ರಿ ಕೂಡ ಓಡಾಡುವಷ್ಟು ಸುರಕ್ಷತೆ ಇದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಎಲೆಕ್ಷನ್ ಕಾಂಪೇನ್ ನಲ್ಲಿ ಹೇಳಿದ್ದರು.

    ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಇಲ್ಲಸಲ್ಲದ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ. ತೃಣಮೂಲದ ಧ್ಯೇಯವಾಕ್ಯವನ್ನು ನೆನಪಿನಲ್ಲಿಟ್ಟುಕೊಳ್ಳಿ ಮಾ-ಮಾತಿ-ಮನುಷ್ಯ (ತಾಯಿ, ತಾಯಿನಾಡು ಮತ್ತು ಮಾನವೀಯತೆ) ಎಂದು ಹೇಳುವ ಮೂಲಕ ಕಿಡಿಕಾರಿದರು.

    ಮಹಿಳೆಯರು ಬಂಗಾಳದ ಪರ ಹೋರಾಡಲಿದ್ದಾರೆ. ಮಹಿಳೆಯರು ಬಂಗಾಳವನ್ನು ನಿರ್ಮಿಸಲಿದ್ದಾರೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಇದು ನಾನು ಮಾಡುತ್ತಿರುವ ಪ್ರತಿಜ್ಞೆ ಎಂದು ಹೇಳಿದರು.

  • ಹೌದು, ಗೆಳೆಯರಿಗಾಗಿ ಕೆಲಸ ಮಾಡುತ್ತೇನೆ, ಬಡವರೇ ನನ್ನ ಸ್ನೇಹಿತರು: ಮೋದಿ

    ಹೌದು, ಗೆಳೆಯರಿಗಾಗಿ ಕೆಲಸ ಮಾಡುತ್ತೇನೆ, ಬಡವರೇ ನನ್ನ ಸ್ನೇಹಿತರು: ಮೋದಿ

    ಕೋಲ್ಕತ್ತಾ: ಬಡವರೇ ನನ್ನ ಸ್ನೇಹಿತರು. ಹಾಗಾಗಿ ಈ ಗೆಳೆಯರಿಗಾಗಿಯೇ ನಾನು ಕೆಲಸ ಮಾಡುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು ನೀಡಿದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಪಕ್ಷದ ಪ್ರಚಾರದಲ್ಲಿ ಪ್ರಧಾನಿಗಳು ಭಾಗಿಯಾಗಿದ್ದರು. ಈ ವೇಳೆ ಕಾಂಗ್ರೆಸ್ ಮತ್ತು ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದರು.

    ಸಮಾವೇಶದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನಿಗಳು, ವಿಪಕ್ಷ ನಾಯಕರು ಗೆಳೆಯರಿಗಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ. ನಾನು ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದವನು, ನನಗೆ ಅವರ ಕಷ್ಟಗಳು ಗೊತ್ತು. ಅವರು ಹಿಂದೂಸ್ಥಾನದ ಯಾವುದೇ ಕೋಣೆಯಲ್ಲಿದ್ರೂ ಅವರೆಲ್ಲ ನನ್ನ ಗೆಳೆಯರು. ಅವರ ಕಷ್ಟ ಮತ್ತು ದುಃಖಗಳನ್ನ ಅರ್ಥ ಮಾಡಿಕೊಳ್ಳಬಲ್ಲೆ. ಹೌದು ಬಡ ಗೆಳೆಯರಿಗಾಗಿ ನಾನು ಕೆಲಸ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ನಾವಿಬ್ಬರು, ನಮಗಿಬ್ಬರು- ನಾಲ್ವರಿಂದ ದೇಶದ ಆಡಳಿತ: ಕೇಂದ್ರದ ವಿರುದ್ಧ ರಾಹುಲ್ ಕಟು ಟೀಕೆ

    ಭವಾನಿಪುರದಲ್ಲಿ ನಿಲುಗಡೆಯಾಗಬೇಕಿದ್ದ ದೀದಿ ಸ್ಕೂಟಿಯು ನಂದಿಗ್ರಾಮದ ಕಡೆಗೆ ದಿಡೀರ್ ತಿರುಗಿದೆ ಅಂತ ವ್ಯಂಗ್ಯವಾಡಿದ್ರು. ಬಂಗಾಳದ ಜನರು ಬದಲಾವಣೆಯ ಬಗೆಗಿನ ಭರವಸೆಯನ್ನು ಎಂದಿಗೂ ಕಳೆದುಕೊಂಡಿಲ್ಲ. ಬಂಗಾಳಕ್ಕೆ ಶಾಂತಿ ಬೇಕಿದೆ. ಹೊಳಪಿನ ಬಂಗಾಳ, ಪ್ರಗತಿಶೀಲ ಬಂಗಾಳ ಬೇಕಾಗಿದೆ ಎಂದರು. ಇಲ್ಲಿ ಹೂಡಿಕೆ ಹೆಚ್ಚಿಸಲು, ಬಂಗಳಾದ ಸಂಸ್ಕೃತಿ ಕಾಪಾಡಲು ಹಾಗೂ ಬದಲಾವಣೆಯನ್ನು ತರುವ ಭರವಸೆ ನೀಡುತ್ತೇನೆ ಎಂದು ಭರವಸೆ ನೀಡಿದರು. ನಟ ಮಿಥುನ್ ಚಕ್ರವರ್ತಿ ಬಿಜೆಪಿ ಸೇರ್ಪಡೆಯಾದರು.

    ದೀದಿ ತಿರುಗೇಟು: ಈ ಮಧ್ಯೆ, ಮೋದಿ ಮಾತಿಗೆ ಕೌಂಟರ್ ಕೊಟ್ಟಿರೋ ಮಮತಾ ಬ್ಯಾನರ್ಜಿ, ನಿಮ್ಮ ಆರೋಪಗಳ ಬಗ್ಗೆ ಮುಖಾಮುಖಿ ಚರ್ಚೆಗೆ ನಾನು ಸಿದ್ಧ. ದಿನ, ಸಮಯವನ್ನು ನೀವೇ ನಿಗದಿ ಮಾಡಿ ಅಂತ ಮೋದಿಗೆ ಸವಾಲ್ ಹಾಕಿದ್ದಾರೆ. ಅಲ್ಲದೆ ನಾವು ಗೆಲ್ತೇವೇ.. ಮೋದಿ-ಬಿಜೆಪಿಯನ್ನು ಭಾರತದಿಂದಲೇ ತೊಗಲಿಸ್ತೇವೆ. ನಮ್ಮ ತಂಟೆಗೆ ಬಂದವರು ಸರ್ವನಾಶ ಆಗ್ತಾರೆ ಅಂತ ಗುಡುಗಿದ್ದಾರೆ.

  • ಒಂದು ಕಾಲದ ಅತ್ಯಾಪ್ತನನ್ನ ದೀದಿ ವಿರುದ್ಧ ಕಣಕ್ಕಿಳಿಸಿದ ಬಿಜೆಪಿ

    ಒಂದು ಕಾಲದ ಅತ್ಯಾಪ್ತನನ್ನ ದೀದಿ ವಿರುದ್ಧ ಕಣಕ್ಕಿಳಿಸಿದ ಬಿಜೆಪಿ

    – ಬಿಜೆಪಿಯ 57 ಅಭ್ಯರ್ಥಿಗಳ ಹೆಸರು ಪ್ರಕಟ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಕದನ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸುವ ನಂದಿಗ್ರಾಮದಿಂದ ಒಂದು ಕಾಲದ ಟಿಎಂಸಿ ಪ್ರಮುಖ ನಾಯಕ, ದೀದಿಯ ಅತ್ಯಾಪ್ತ ಸುವೇಂದು ಅಧಿಕಾರಿಯನ್ನ ಬಿಜೆಪಿ ಕಣಕ್ಕಿಳಿಸಿದೆ.

    ಟಿಎಂಸಿ ತೊರೆದು ಬಿಜೆಪಿ ಸೇರಿದಾಗಿನಿಂದಲೂ ಸುವೇಂದು ಅಧಿಕಾರಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿಕೊಂಡು ಬಂದಿದ್ದರು. ಈ ಬಾರಿ ಕ್ಷೇತ್ರ ಬದಲಿಸಿ ನಂದಿಗ್ರಾಮ ಆಯ್ಕೆ ಮಾಡಿಕೊಳ್ಳುವ ಮೂಲಕ ಸುವೇಂದು ಅಧಿಕಾರಿಗೆ ಮಮತಾ ಬ್ಯಾನರ್ಜಿ ಸವಾಲ್ ಎಸೆದಿದ್ದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂದು ಸಂಜೆ ದೆಹಲಿಯಲ್ಲಿ 57 ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದರು. ಮಾಜಿ ಕ್ರಿಕೆಟಿಗ ಅಶೋಕ್ ಡಿಂಡಾಗೂ ಬಿಜೆಪಿ ಟಿಕೆಟ್ ನೀಡಿದೆ.

    ಶುಕ್ರವಾರ ಮಮತಾ ಬ್ಯಾನರ್ಜಿ ಒಂದೇ ಪಟ್ಟಿಯಲ್ಲಿಯೇ 291 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ 20 ಬದಲಾಗಿ 120 ಸಮಾವೇಶ ನಡೆಸಿದ್ರೂ ಗೆಲುವು ನಮ್ಮದೇ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: 291 ಅಭ್ಯರ್ಥಿಗಳ ಹೆಸರು ಘೋಷಿಸಿದ ದೀದಿ – ಟಿಕೆಟ್ ಹಂಚಿಕೆ ಲೆಕ್ಕಾಚಾರ ಹೀಗಿದೆ

    ಇತ್ತ ಪಕ್ಷಾಂತರ ಪರ್ವ ಮುಂದುವರಿದಿದ್ದು, ಟಿಎಂಸಿ ಮಾಜಿ ಸಂಸದ ದಿನೇಶ್ ತ್ರಿವೇದಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಮಲ ಹಿಡಿದ ಬಳಿಕ ಪ್ರತಿಕ್ರಿಯಿಸಿರುವ ದಿನೇಶ್ ತ್ರಿವೇದಿ, ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೋ, ಇಲ್ಲವೋ ಗೊತ್ತಿಲ್ಲ. ಆದರೆ ಚುನಾವಣೆ ಪ್ರಕ್ರಿಯೆಯಲ್ಲಿ ಆ್ಯಕ್ಟಿವ್ ಆಗಿರುತ್ತೇನೆ. ಬಂಗಾಳ ಟಿಎಂಸಿಯನ್ನು ತಿರಸ್ಕರಿಸಿದೆ. ಜನತೆ ಪ್ರಗತಿ ಬಯಸಿದ್ದಾರೆ, ಭ್ರಷ್ಟಾಚಾರ ಅಥವಾ ಹಿಂಸಾಚಾರವನ್ನಲ್ಲ. ನಿಜವಾದ ಬದಲಾವಣೆಗೆ ಜನತೆ ಸಿದ್ಧರಾಗಿದ್ದಾರೆ. ರಾಜಕೀಯ ಆಟವಲ್ಲ, ಅದೊಂದು ಗಂಭೀರ ವಿಚಾರ. ಸಿಎಂ ಮಮತಾ ಬ್ಯಾನರ್ಜಿ ಆಟವಾಡುವ ಭರದಲ್ಲಿ ತಮ್ಮ ಆದರ್ಶಗಳನ್ನು ಮರೆತಿದ್ದಾರೆ ಎಂದು ಅವರ ಹೆಸರನ್ನು ಹೇಳದೆ ತ್ರಿವೇದಿ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ:  ಪ್ರಧಾನಿಗಳು 20 ಅಲ್ಲ 120 ರ‍್ಯಾಲಿ ನಡೆಸಲಿ, ಗೆಲ್ಲೋದು ನಾವೇ: ದೀದಿ ಸವಾಲ್

    ಪಶ್ಚಿಮ ಬಂಗಾಳದ 294 ಕ್ಷೇತ್ರಗಳಿಗೆ ಎಂಟು ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27 ಮೊದಲ ಹಂತದ ಮತದಾನ ನಡೆಯಲಿದೆ. ತದನಂತರ ಏಪ್ರಿಲ್ 1, 6, 10, 17, 22, 26, 29 ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ:  ಟಿಎಂಸಿ ಮಾಜಿ ಸಂಸದ ದಿನೇಶ್ ತ್ರಿವೇದಿ ಬಿಜೆಪಿಗೆ ಸೇರ್ಪಡೆ

  • ಟಿಎಂಸಿ ಮಾಜಿ ಸಂಸದ ದಿನೇಶ್ ತ್ರಿವೇದಿ ಬಿಜೆಪಿಗೆ ಸೇರ್ಪಡೆ

    ಟಿಎಂಸಿ ಮಾಜಿ ಸಂಸದ ದಿನೇಶ್ ತ್ರಿವೇದಿ ಬಿಜೆಪಿಗೆ ಸೇರ್ಪಡೆ

    ನವದೆಹಲಿ: ತೃಣಮೂಲ ಕಾಂಗ್ರೆಸ್ ಮಾಜಿ ಸಂಸದ ದಿನೇಶ್ ತ್ರಿವೇದಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ನವದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಪಿಯೂಶ್ ಗೋಯಲ್, ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ದಿನೇಶ್ ತ್ರಿವೇದಿ ಅವರು ಉತ್ತಮ ವ್ಯಕ್ತಿಯಾಗಿದ್ದು, ತಪ್ಪಾಗಿ ಟಿಎಂಸಿಯಲ್ಲಿದ್ದರು. ಇದೀಗ ಸರಿಯಾದ ಪಕ್ಷಕ್ಕೆ ಸೇರಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ದಿನೇಶ್ ತ್ರಿವೇದಿ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಜೆ.ಪಿ.ನಡ್ಡಾ ಹೇಳಿದರು. ಇದನ್ನೂ ಓದಿ: ಪ್ರಧಾನಿಗಳು 20 ಅಲ್ಲ 120 ರ‍್ಯಾಲಿ ನಡೆಸಲಿ, ಗೆಲ್ಲೋದು ನಾವೇ: ದೀದಿ ಸವಾಲ್

    ನನಗೆ ಬ್ಯುಸಿನೆಸ್‍ನಲ್ಲಿ ಸ್ವಲ್ಪವೂ ಇಷ್ಟವಿಲ್ಲ, ಹೀಗಾಗಿ ಇಂದು ಜನತಾ ಪರಿವಾರ ಸೇರಿದ್ದೇನೆ. ಆ ಪಕ್ಷದ ಬಗ್ಗೆ ಮಾತನಾಡುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್‍ನ ಹೆಸರನ್ನು ತ್ರಿವೇದಿ ಹೇಳಲಿಲ್ಲ. ಆ ಪಕ್ಷದವರು ಜನರ ಸೇವೆ ಮಾಡುತ್ತಿಲ್ಲ. ಬದಲಿಗೆ ಕುಟುಂಬದ ಸೇವೆ ಮಾಡುತ್ತಿದ್ದಾರೆ. ರಾಜ್ಯದ ಸ್ಥಿತಿಗತಿ ಬಗ್ಗೆ ಹಲವರು ನನ್ನನ್ನು ಪ್ರಶ್ನಿಸುತ್ತಾರೆ. ಹೀಗಾಗಿ ಹೇಳುತ್ತಿದ್ದೇನೆ, ರಾಜ್ಯ ಸರ್ಕಾರದಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: 291 ಅಭ್ಯರ್ಥಿಗಳ ಹೆಸರು ಘೋಷಿಸಿದ ದೀದಿ – ಟಿಕೆಟ್ ಹಂಚಿಕೆ ಲೆಕ್ಕಾಚಾರ ಹೀಗಿದೆ

    ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೋ, ಇಲ್ಲವೋ ಗೊತ್ತಿಲ್ಲ. ಆದರೆ ಚುನಾವಣೆ ಪ್ರಕ್ರಿಯೆಯಲ್ಲಿ ಆ್ಯಕ್ಟಿವ್ ಆಗಿರುತ್ತೇನೆ. ಬಂಗಾಳ ಟಿಎಂಸಿಯನ್ನು ತಿರಸ್ಕರಿಸಿದೆ. ಜನತೆ ಪ್ರಗತಿ ಬಯಸಿದ್ದಾರೆ, ಭ್ರಷ್ಟಾಚಾರ ಅಥವಾ ಹಿಂಸಾಚಾರವನ್ನಲ್ಲ. ನಿಜವಾದ ಬದಲಾವಣೆಗೆ ಜನತೆ ಸಿದ್ಧರಾಗಿದ್ದಾರೆ. ರಾಜಕೀಯ ಆಟವಲ್ಲ, ಅದೊಂದು ಗಂಭೀರ ವಿಚಾರ. ಸಿಎಂ ಮಮತಾ ಬ್ಯಾನರ್ಜಿ ಆಟವಾಡುವ ಭರದಲ್ಲಿ ತಮ್ಮ ಆದರ್ಶಗಳನ್ನು ಮರೆತಿದ್ದಾರೆ ಎಂದು ಅವರ ಹೆಸರನ್ನು ಹೇಳದೆ ತ್ರಿವೇದಿ ವಾಗ್ದಾಳಿ ನಡೆಸಿದರು.

    ದಿನೇಶ್ ತ್ರಿವೇದಿ ಮಾಜಿ ಕೇಂದ್ರ ಸಚಿವರಾಗಿದ್ದು, ಬಜೆಟ್ ಅಧಿವೇಶನದ ವೇಳೆ ಫೆಬ್ರವರಿ 12ರಂದು ತಮ್ಮ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

  • ಪ್ರಧಾನಿಗಳು 20 ಅಲ್ಲ 120 ರ‍್ಯಾಲಿ ನಡೆಸಲಿ, ಗೆಲ್ಲೋದು ನಾವೇ: ದೀದಿ ಸವಾಲ್

    ಪ್ರಧಾನಿಗಳು 20 ಅಲ್ಲ 120 ರ‍್ಯಾಲಿ ನಡೆಸಲಿ, ಗೆಲ್ಲೋದು ನಾವೇ: ದೀದಿ ಸವಾಲ್

    – ಪಟ್ಟಿ ರಿಲೀಸ್ ದಿನವೇ ವಿಕ್ಟರಿ ಸಿಂಬಲ್

    ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆ ಅಖಾಡಕ್ಕೆ ರಂಗೇರುತ್ತಿದ್ದು, ತೃಣಮೂಲ ಕಾಂಗ್ರೆಸ್ ಒಂದೇ ಬಾರಿಗೆ 291 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದೆ. ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದಲ್ಲಿ 20 ಅಲ್ಲ 120 ಬೃಹತ್ ಸಮಾವೇಶಗಳನ್ನು ನಡೆಸಲಿ. ಆದ್ರೆ ಗೆಲುವು ಮಾತ್ರ ನಮ್ಮದೇ ಎಂದು ಹೇಳಿ ಮಾಧ್ಯಮಗಳ ಕ್ಯಾಮೆರಾಗಳಿಗೆ ಗೆಲವುವಿನ ಚಿಹ್ನೆ ತೋರಿಸಿದರು.

    ಪಶ್ಚಿಮ ಬಂಗಾಳದಲ್ಲಿ ಪ್ರಧಾನಿಗಳ ನೇತೃತ್ವದಲ್ಲಿ 20 ದೊಡ್ಡ ಸಮಾವೇಶ ಆಯೋಜನೆಗೆ ಮುಂದಾಗಿದೆ. ಈ ಸಮಾವೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ. ಚುನಾವಣೆ ಹಿನ್ನೆಲೆ ಬಹುತೇಕ ಕಮಲ ನಾಯಕರು ಬಂಗಾಳದಲ್ಲಿಯೇ ಉಳಿದುಕೊಂಡು ಪಕ್ಷ ಸಂಘಟನೆ ಜೊತೆಯಲ್ಲಿ ಪ್ರಚಾರದ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ.

    294 ಕ್ಷೇತ್ರಗಳಿಗೆ ಎಂಟು ಹಂತದಲ್ಲಿ ಚುನಾವಣೆ ನಡೆಯಲಿ ಅಥವಾ 294 ಹಂತಗಳಲ್ಲಿಯೇ ನಡೆದ್ರೂ ಅಮಿತ್ ಶಾ ಅವರಿಗೆ ಸೋಲು ಖಚಿತ. ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ತಮ್ಮ ಪಡೆಯನ್ನ ಬಂಗಾಳದಲ್ಲಿ ಬಿಜೆಪಿ ನಿಯೋಜಿಸಿದ್ರೂ ಪ್ರಯೋಜನವಿಲ್ಲ ಎಂದು ಅಮಿತ್ ಶಾಗೆ ಮಮತಾ ಬ್ಯಾನರ್ಜಿ ಸವಾಲು ಎಸೆದರು. ಈ ಹಿಂದೆ ಚುನಾವಣೆ ಆಯೋಗ ಕೇಂದ್ರದಲ್ಲಿರುವ ಬಿಜೆಪಿಗೆ ಅನಕೂಲವಾಗುವಂತೆ ಚುನಾವಣೆ ದಿನಾಂಕ ನಿಗದಿ ಮಾಡಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು. ಇದನ್ನೂ ಓದಿ: 291 ಅಭ್ಯರ್ಥಿಗಳ ಹೆಸರು ಘೋಷಿಸಿದ ದೀದಿ – ಟಿಕೆಟ್ ಹಂಚಿಕೆ ಲೆಕ್ಕಾಚಾರ ಹೀಗಿದೆ

    ಜಾತಿ ಸೇರಿದಂತೆ ಪಕ್ಕಾ ರಾಜಕೀಯ ಸಮೀಕರಣದಲ್ಲಿ ಮಮತಾ ಬ್ಯಾನರ್ಜಿ ಟಿಕೆಟ್ ಹಂಚಿಕೆ ಮಾಡಿರುವ ಬಗ್ಗೆ ವಿಶ್ಲೇಷಣೆ ಮಾಡಲಾಗುತ್ತಿದೆ. ಎಲ್ಲ ಸಮುದಾಯಗಳನ್ನ ಗಮನದಲ್ಲಿರಿಸಿಕೊಂಡು ಟಿಕೆಟ್ ಹಂಚಿಕೆ ಮಾಡಿದ್ದಾರೆ, 291ರ ಪೈಕಿ 50 ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ರೆ, 42 ಮುಸ್ಲಿಂ ನಾಯಕರು ಟಿಎಂಸಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಯಾವುದೇ ಪಕ್ಷಗಳ ಗೆಲುವಿನಲ್ಲಿ ಮುಸ್ಲಿಂ ಮತಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಪಶ್ಚಿಮ ಬಂಗಾಳದ ಒಟ್ಟು ಮತಗಳ ಪೈಕಿ ಶೇ.30ರಷ್ಟು ಮುಸ್ಲಿಮರಿದ್ದಾರೆ. ಸರಿ ಸುಮಾರು 100 ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ಅಭ್ಯರ್ಥಿಗಳ ಗೆಲುವನ್ನ ನಿರ್ಣಯಿಸಲಿವೆ. ಇದನ್ನೂ ಓದಿ: ಬಂಗಾಳದಲ್ಲಿ ಗಮನಸೆಳೆದ ‘ಮಾ’ ಕ್ಯಾಂಟೀನ್

    79 ದಲಿತರಿಗೆ ಮತ್ತು 17 ಪರಿಶಿಷ್ಠ ಪಂಗಡದ ನಾಯಕರಿಗೂ ಮಮತಾ ಬ್ಯಾನರ್ಜಿ ಟಿಕೆಟ್ ನೀಡಿದ್ದಾರೆ. ಸಮುದಾಯಗಳ ಪ್ರಾಬಲ್ಯದ ಮೇಲೆ ಆ ಕ್ಷೇತ್ರಗಳಲ್ಲಿ ಕ್ರಮಬದ್ಧವಾಗಿ ಟಿಎಂಸಿ ಟಿಕೆಟ್ ಹಂಚಿಕೆ ಮಾಡಿದೆ. ಈ ಎರಡೂ ಸಮುದಾಯಗಳ ಮತಗಳು ಶೇ.30ರಷ್ಟಿವೆ. ಬಿಜೆಪಿ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಮುದಾಯದ ಅಭ್ಯರ್ಥಿಗಳನ್ನ ಟಿಎಂಸಿ ಕಣಕ್ಕಿಳಿಸಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ದೊಡ್ಡ ದಂಗೆಕೋರ- ಮಮತಾ ಬ್ಯಾನರ್ಜಿ ವಾಗ್ದಾಳಿ

  • 291 ಅಭ್ಯರ್ಥಿಗಳ ಹೆಸರು ಘೋಷಿಸಿದ ದೀದಿ – ಟಿಕೆಟ್ ಹಂಚಿಕೆ ಲೆಕ್ಕಾಚಾರ ಹೀಗಿದೆ

    291 ಅಭ್ಯರ್ಥಿಗಳ ಹೆಸರು ಘೋಷಿಸಿದ ದೀದಿ – ಟಿಕೆಟ್ ಹಂಚಿಕೆ ಲೆಕ್ಕಾಚಾರ ಹೀಗಿದೆ

    ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಸಿಎಂ ಮಮತಾ ಬ್ಯಾನರ್ಜಿ ಇಂದು ಅಧಿಕೃತ 294 ಕ್ಷೇತ್ರಗಳ ಪೈಕಿ 291ರಲ್ಲಿ ತೃಣಮೂಲ ಕಾಂಗ್ರೆಸ್ ಸ್ಪರ್ಧಿಸಲಿದೆ. ಮೂರು ಕ್ಷೇತ್ರಗಳಲ್ಲಿ ಸಹಯೋಗಿ ಗೋರ್ಖಾ ಮುಕ್ತಿ ಮೋರ್ಚಾ ಪಕ್ಷದ ಅಭ್ಯರ್ಥಿಗಳು ಟಿಎಂಸಿ ಬೆಂಬಲದೊಂದಿಗೆ ಅಖಾಡಕ್ಕೆ ಇಳಿಯಲಿದ್ದಾರೆ. ಪಕ್ಷ ತೊರೆದು ಕಮಲ ಮುಡಿದ ಶಾಸಕರು ಸೇರಿದಂತೆ 27 ಜನಪ್ರತಿನಿಧಿಗಳಿಗೆ ಟಿಕೆಟ್ ನೀಡಿಲ್ಲ.

    ಜಾತಿ ಸೇರಿದಂತೆ ಪಕ್ಕಾ ರಾಜಕೀಯ ಸಮೀಕರಣದಲ್ಲಿ ಮಮತಾ ಬ್ಯಾನರ್ಜಿ ಟಿಕೆಟ್ ಹಂಚಿಕೆ ಮಾಡಿರುವ ಬಗ್ಗೆ ವಿಶ್ಲೇಷಣೆ ಮಾಡಲಾಗುತ್ತಿದೆ. ಎಲ್ಲ ಸಮುದಾಯಗಳನ್ನ ಗಮನದಲ್ಲಿರಿಸಿಕೊಂಡು ಟಿಕೆಟ್ ಹಂಚಿಕೆ ಮಾಡಿದ್ದಾರೆ, 291ರ ಪೈಕಿ 50 ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ರೆ, 42 ಮುಸ್ಲಿಂ ನಾಯಕರು ಟಿಎಂಸಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಯಾವುದೇ ಪಕ್ಷಗಳ ಗೆಲುವಿನಲ್ಲಿ ಮುಸ್ಲಿಂ ಮತಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಪಶ್ಚಿಮ ಬಂಗಾಳದ ಒಟ್ಟು ಮತಗಳ ಪೈಕಿ ಶೇ.30ರಷ್ಟು ಮುಸ್ಲಿಮರಿದ್ದಾರೆ. ಸರಿ ಸುಮಾರು 100 ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ಅಭ್ಯರ್ಥಿಗಳ ಗೆಲುವನ್ನ ನಿರ್ಣಯಿಸಲಿವೆ.

    79 ದಲಿತರಿಗೆ ಮತ್ತು 17 ಪರಿಶಿಷ್ಠ ಪಂಗಡದ ನಾಯಕರಿಗೂ ಮಮತಾ ಬ್ಯಾನರ್ಜಿ ಟಿಕೆಟ್ ನೀಡಿದ್ದಾರೆ. ಸಮುದಾಯಗಳ ಪ್ರಾಬಲ್ಯದ ಮೇಲೆ ಆ ಕ್ಷೇತ್ರಗಳಲ್ಲಿ ಕ್ರಮಬದ್ಧವಾಗಿ ಟಿಎಂಸಿ ಟಿಕೆಟ್ ಹಂಚಿಕೆ ಮಾಡಿದೆ. ಈ ಎರಡೂ ಸಮುದಾಯಗಳ ಮತಗಳು ಶೇ.30ರಷ್ಟಿವೆ. ಬಿಜೆಪಿ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಮುದಾಯದ ಅಭ್ಯರ್ಥಿಗಳನ್ನ ಟಿಎಂಸಿ ಕಣಕ್ಕಿಳಿಸಿದೆ.

    ಈ ಬಾರಿ ಮಮತಾ ಬ್ಯಾನರ್ಜಿ ಭವಾನಿಪುರ ಕ್ಷೇತ್ರದಿಂದ ಹಿಂದೆ ಸರಿದಿದ್ದು, ನಂದಿಗ್ರಾಮದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇತ್ತೀಚೆಗೆ ಬಿಜೆಪಿ ಸೇರಿರುವ ಸುವೇಂದು ಚಟರ್ಜಿ ನಂದಿಗ್ರಾಮದಿಂದ ಸ್ಪರ್ಧೆ ಮಾಡಲಿದ್ದಾರೆ. ಈ ಹಿಂದೆ ಹಾಕಿದ ಸವಾಲಿನಂತೆ ದೀದಿ ನಂದಿಗ್ರಾಮದಲ್ಲಿ ಒಂದು ಕಾಲದ ಆಪ್ತನಿಗೆ ಸೋಲಿನ ರುಚಿ ತೋರಿಸಲು ಮುಂದಾಗಿದ್ದಾರೆ. ತಮ್ಮ ತವರು ಕ್ಷೇತ್ರ ಭವಾನಿಪುರವನ್ನ ಸೋವನದೇವ್ ಚಟರ್ಜಿ ಅವರಿಗೆ ಬಿಟ್ಟುಕೊಟ್ಟಿದ್ದಾರೆ. 80 ವರ್ಷ ಮೇಲ್ಪಟ್ಟ ಯಾವ ನಾಯಕರಿಗೂ ಟಿಎಂಸಿ ಈ ಬಾರಿ ಟಿಕೆಟ್ ನೀಡಿಲ್ಲ. ಬಿಜೆಪಿ ಸೇರಿದ ಶಾಸಕರ ಕ್ಷೇತ್ರಗಳಿಗೆ ಹೊಸಬರಿಗೆ ಟಿಎಂಸಿ ಮಣೆ ಹಾಕಿದೆ.

  • ಕೊಕೇನ್ ಸಹಿತ ಬಿಜೆಪಿ ಯುವ ಮೋರ್ಚಾ ನಾಯಕಿ ಅರೆಸ್ಟ್

    ಕೊಕೇನ್ ಸಹಿತ ಬಿಜೆಪಿ ಯುವ ಮೋರ್ಚಾ ನಾಯಕಿ ಅರೆಸ್ಟ್

    – ಲಕ್ಷಾಂತರ ಮೌಲ್ಯದ ಕೊಕೇನ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ಅವರನ್ನ ಕೊಕೇನ್ ಸಮೇತ ಬಂಧಿಸಲಾಗಿದೆ ಎಂದು ಪೊಲೀಸರು ಪ್ರಕಟನೆ ಹೊರಡಿಸಿದ್ದಾರೆ. ಶುಕ್ರವಾರ ಪಮೇಲಾ ಅವರನ್ನ ಪೊಲೀಸರು ಬಂಧಿಸಿದ್ದು, 100 ಗ್ರಾಂ ಕೊಕೇನ್ ಪರ್ಸ್ ನಲ್ಲಿಸಿ ಕಾರಿನೊಳಗೆ ಇರಿಸಿದ್ದರು ಎಂದು ವರದಿಯಾಗಿದೆ.

    ನ್ಯೂ ಅಲಿಪೋರಾದಲ್ಲಿ ಪಮೇಲಾ ಅವರ ಬಂಧನವಾಗಿದ್ದು, ಕಾರಿನಲ್ಲಿ ಇವರ ಜೊತೆಯಲ್ಲಿದ್ದ ಪ್ರಬೀರ್ ಕುಮಾರ್ ದೇ ಅವರನ್ನ ಸಹ ಪೊಲೀಸರು ಬಂಧಿಸಿದ್ದಾರೆ. ಪಮೇಲಾ ಮತ್ತು ಪ್ರಬೀರ್ ಜೊತೆಯಾಗಿ ಎನ್.ಆರ್.ಅವೆನ್ಯೂನಲ್ಲಿರುವ ಕೆಫೆಗೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಪೊಲೀಸರು ಕಾರ್ ತಪಾಸಣೆ ನಡೆಸಿದಾಗ ಸೀಟಿನಡಿ ಪರ್ಸ್ ನಲ್ಲಿ 100 ಗ್ರಾಂ ಕೊಕೇನ್ ಲಭ್ಯವಾಗಿದೆ.

    ಪಮೇಲಾ ಮತ್ತು ಪ್ರಬೀರ್ ಬಂಧನ ರಾಜಕೀಯ ತಿರುವು ಪಡೆದುಕೊಂಡಿದ್ದು, ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪಶ್ಚಿಮ ಬಂಗಾಳ ಪೊಲೀಸರ ನಿಯಂತ್ರಣದಲ್ಲಿ ಏನು ಬೇಕಾದ್ರೂ ಆಗುವ ಸಾಧ್ಯತೆಗಳಿವೆ. ಉದ್ದೇಶಪೂರ್ವಕವಾಗಿ ಕಾರಿನಲ್ಲಿ ಕೊಕೇನ್ ಇರಿಸಿರುವ ಸಾಧ್ಯತೆಗಳಿವೆ ಎಂದು ಬಿಜೆಪಿ ವಕ್ತಾರ ಸಮೀಕ್ ಭಟ್ಟಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಿಜೆಪಿಗರ ಅಸಲಿ ಮುಖ ಜನರ ಮುಂದೆ ಬರುತ್ತಿದೆ. ಈ ರೀತಿಯ ಘಟನೆ ಪಶ್ವಿಮ ಬಂಗಾಳಕ್ಕೆ ಅವಮಾನಕರ. ಈ ಹಿಂದೆ ಬಿಜೆಪಿ ನಾಯಕರ ಮಕ್ಕಳು ಮಾನವ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದರು ಎಂದು ಟಿಎಂಸಿ ನಾಯಕಿ ಚಂದ್ರಿಮಾ ಭಟ್ಟಾಚಾರ್ಯ ಆರೋಪಿಸಿದ್ದಾರೆ.

  • ಪಶ್ಚಿಮ ಬಂಗಾಳ ಚುನಾವಣೆ ಅಖಾಡಕ್ಕೆ ಓವೈಸಿ ಎಂಟ್ರಿ

    ಪಶ್ಚಿಮ ಬಂಗಾಳ ಚುನಾವಣೆ ಅಖಾಡಕ್ಕೆ ಓವೈಸಿ ಎಂಟ್ರಿ

    – ಧರ್ಮಗುರುಗಳನ್ನ ಭೇಟಿಯಾದ ಓವೈಸಿ

    ಕೋಲ್ಕತ್ತಾ: ಎಐಎಂಐಎಂ ಪಕ್ಷದ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದು, ಸ್ಥಳೀಯ ಧಾರ್ಮಿಕ ಗುರುಗಳನ್ನ ಭೇಟಿಯಾಗಿ ಬೆಂಬಲ ಕೋರಿದ್ದಾರೆ.

    ಹೂಗ್ಲಿ ಜಿಲ್ಲೆಯ ಧಾರ್ಮಿಕ ಸ್ಥಳವಾದ ಫುರಫುರಾದ ಧರ್ಮಗುರು ಅಬ್ಬಾಸ್ ಸಿದ್ದಿಕಿ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದರು. ಚುನಾವಣೆ ಪ್ರಚಾರದಲ್ಲಿ ಎಐಎಂಐಎಂ ಪಾರ್ಟಿಯ ಪ್ರಮುಖರಾಗಿ ಮುಂದಾಳತ್ವವನ್ನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಮಾತುಕತೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಓವೈಸಿ, ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸೋದನ್ನ ಖಚಿತಪಡಿಸಿದರು.

    ಅಬ್ಬಾಸ್ ಸಿದ್ದಿಕಿ ನಮ್ಮ ಪಕ್ಷದ ಜೊತೆಯಲ್ಲಿರಲಿದ್ದಾರೆ. ನಾವೆಲ್ಲರೂ ಸಿದ್ದಿಕಿ ಅವರ ಮುಂದಾಳತ್ವದಲ್ಲಿ ಹೋಗಲಿದ್ದೇವೆ. ಎಷ್ಟು ಕ್ಷೇತ್ರ ಮತ್ತು ರಾಜ್ಯದ ಯಾವ ಭಾಗದಲ್ಲಿ ಎಐಎಂಐಎಂ ಸ್ಪರ್ಧೆ ಮಾಡಲಿದೆ ಎಂಬುದನ್ನ ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

    ಅಬ್ಬಾಸ್ ಸಿದ್ದಿಕಿ ಸಿಎಂ ಮಮತಾ ಬ್ಯಾನರ್ಜಿ ಅವರ ರಾಜಕೀಯ ವಿರೋಧಿಗಳಾಗಿದ್ದು, ಟಿಎಂಸಿ ಮುಸ್ಲಿಂ ಮತಗಳನ್ನ ಕೇವಲ ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತೆ ಎಂದು ಆರೋಪಿಸಿದ್ದಾರೆ. ಅಬ್ಬಾಸ್ ಸಿದ್ದಿಕಿ ಫುರಫುರಾದ ಕ್ಷೇತ್ರದ ಪ್ರಮುಖ ಧರ್ಮಗುರು ಆಗಿರುವ ತೋಹಾ ಸಿದ್ದಿಕಿಯವರ ಸೋದರಳಿಯ. ಆದ್ರೆ ತೋಹಾ ಸಿದ್ದಿಕಿ ಟಿಎಂಸಿಯ ಸಮರ್ಥಕರಾಗಿದ್ದು, ಹಾಗಾಗಿ ತಮ್ಮ ಪ್ರವಾಸದಲ್ಲಿ ಅಬ್ಬಾಸ್ ಅವರನ್ನ ಮಾತ್ರ ಓವೈಸಿ ಭೇಟಿಯಾಗಿದ್ದಾರೆ. ಅಬ್ಬಾಸ್ ಮುಂದಾಳತ್ವದಲ್ಲಿ ಹೂಗ್ಲಿ, ಮಾಲ್ದಾ, ಮುರ್ಶೀದಾಬಾದ್ ಮತ್ತು ದಿನಾಜಪುರ ಜಿಲ್ಲೆಗಳಲ್ಲಿ ಚುನಾವಣೆ ಎದುರಿಸಲು ಓವೈಸಿ ಪ್ಲಾನ್ ಮಾಡಿಕೊಂಡಿದ್ದಾರೆ.