Tag: ಟಿಎಂಸಿ

  • ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ: ಮಮತಾ ಬ್ಯಾನರ್ಜಿ

    ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 30ರಂದು ನಡೆಯಲಿರುವ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

    ಕೋಲ್ಕತ್ತಾದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮೋದಿಯವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿದ್ದೇನೆ. ಇದು ಪ್ರಮಾಣವಚನ ಕಾರ್ಯಕ್ರಮವಾಗಿದ್ದರಿಂದ ಹಾಜರಾಗಲು ಯೋಚಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

    ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆದರೆ ಈಗ ರಾಜಕೀಯ ವೈರತ್ವ ಮರೆತು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದ್ದಾರೆ.

    ಸಿಎಂ ಕುಮಾರಸ್ವಾಮಿ ಅವರಿಗೂ ಇಂದು ಆಮಂತ್ರಣ ತಲುಪಿದೆ. ಆದರೆ ಕಾರ್ಯಕ್ರಮಕ್ಕೆ ಹಾಜರಾಗುವ ಕುರಿತು ಜೆಡಿಎಸ್ ವರಿಷ್ಠ, ತಂದೆ ಎಚ್.ಡಿ.ದೇವೇಗೌಡರ ಜೊತೆಗೆ ಸಿಎಂ ಚರ್ಚೆ ಮಾಡಲಿದ್ದಾರೆ. ಹೀಗಾಗಿ ನಾಳೆ ನಿರ್ಧಾರ ತಿಳಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಬಿಜೆಪಿಯು 2014ರ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ ಕೇವಲ 2 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು. ಆದರೆ ಈ ಬಾರಿ ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಮೇಲೆ ಹೆಚ್ಚು ಗಮನ ಕೇಂದ್ರಿಕರಿಸಿತ್ತು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೀದಿ ನಾಡಿನಲ್ಲಿ 17 ಬೃಹತ್ ಸಮಾವೇಶ ಕೈಗೊಂಡಿದ್ದರು. ಎಲ್ಲ ಪ್ರಯತ್ನಗಳ ಮೂಲಕ ಬಿಜೆಪಿಯು 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 2014ರಲ್ಲಿ 34 ಕ್ಷೇತ್ರಗಳಲ್ಲಿ ಜಯ ಕಂಡಿದ್ದ ಟಿಎಂಸಿ ಈ ಬಾರಿ 22 ಸ್ಥಾನಕ್ಕೆ ಕುಸಿದಿದೆ.

    ಲೋಕಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಸರ್ಕಾರ ಬೀಳಿಸಲು ಆಪರೇಷನ್ ಕಮಲ ಭಾರೀ ಸದ್ದು ಮಾಡುತ್ತಿದೆ. ಈ ಮೂಲಕ ಟಿಎಂಸಿಯ ಇಬ್ಬರು ಶಾಸಕರು ಹಾಗೂ 50 ಜನ ಕೌನ್ಸಿಲರ್ ಗಳು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

  • 7 ಹಂತಗಳಲ್ಲಿ ದೀದಿ ಭದ್ರಕೋಟೆ ಛಿದ್ರ: ಕೈಲಾಸ್ ವಿಜಯವರ್ಗೀಯ

    7 ಹಂತಗಳಲ್ಲಿ ದೀದಿ ಭದ್ರಕೋಟೆ ಛಿದ್ರ: ಕೈಲಾಸ್ ವಿಜಯವರ್ಗೀಯ

    – ಮತ್ತಿಬ್ಬರು ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ

    ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣೆ 7 ಹಂತಗಳಲ್ಲಿ ನಡೆದಿದೆ. ಅದೇ ರೀತಿ 7 ಹಂತಗಳಲ್ಲಿ ತೃಣ ಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಸ್ ವಿಜಯವರ್ಗೀಯ ಹೇಳಿದ್ದಾರೆ.

    ನವದೆಹಲಿಯಲ್ಲಿ ಮುಕುಲ್ ರಾಯ್ ಪುತ್ರ ಸುಬ್ರಂಗ್ಶು ರಾಯ್ ಸೇರಿದಂತೆ ಟಿಎಂಸಿಯ ಇಬ್ಬರು ಶಾಸಕರು ಹಾಗೂ 50ಕ್ಕೂ ಹೆಚ್ಚು ಕೌನ್ಸಿಲರ್‌ಗಳು ಇಂದು ಬಿಜೆಪಿಗೆ ಸೇರ್ಪಡೆಯಾದರು. ಅಷ್ಟೇ ಅಲ್ಲದೆ ಎಡಪಕ್ಷದ ಶಾಸಕರೊಬ್ಬರು ಕೂಡ ಬಿಜೆಪಿ ಮನೆ ಪ್ರವೇಶ ಮಾಡಿದ್ದಾರೆ.

    ನಮ್ಮ ಸಂಪರ್ಕದಲ್ಲಿ ಮತ್ತಿಬ್ಬರು ಶಾಸಕರು ಇದ್ದಾರೆ. ಅವರು ಕೂಡ ಕೆಲವೇ ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ಕೈಲಾಸ್ ವಿಜಯವರ್ಗೀಯ ತಿಳಿಸಿದರು.

    ಈ ವೇಳೆ ಮಾತನಾಡಿದ ಶಾಸಕರೊಬ್ಬರು, ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಉಸಿರುಗಟ್ಟಿಸಿರುವ ವಾತಾವರಣ ಇತ್ತು. ಹೀಗಾಗಿ ಪಕ್ಷ ಬಿಡಬೇಕಾಯಿತು ಎಂದು ಹೇಳಿದ್ದಾರೆ.

    ಟಿಎಂಸಿಯ ಮಹಿಳಾ ಕೌನ್ಸಿಲರ್‌ಗಳು ನಿನ್ನೆಯೇ ದೆಹಲಿಗೆ ಆಗಮಿಸಿದ್ದರು. ಈ ನಿಟ್ಟಿನಲ್ಲಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಮಮತಾ ಬ್ಯಾನರ್ಜಿ ಅವರ ಜೊತೆಗೆ ನಮಗೆ ಮುನಿಸಿಕೊಂಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದ 18 ಸ್ಥಾನಗಳನ್ನು ಪಡೆದಿದೆ. ಈ ಗೆಲುವು ನಮ್ಮನ್ನು ಬಿಜೆಪಿ ಸೇರುವಂತೆ ಪ್ರೇರಣೆ ನೀಡಿತು. ರಾಜ್ಯದ ಜನರು ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡಲು ಉತ್ಸುಕರಾಗಿದ್ದಾರೆ ಎಂದು ಬಿಜೆಪಿ ಸೇರಲು ಮುಂದಾದ ಕೌನ್ಸಿಲರ್‍ಗಳು ತಿಳಿಸಿದ್ದಾರೆ.

    ಬಿಜೆಪಿಯು 2014ರ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ ಕೇವಲ 2 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು. ಆದರೆ ಈ ಬಾರಿ ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಮೇಲೆ ಹೆಚ್ಚು ಗಮನ ಕೇಂದ್ರಿಕರಿಸಿತ್ತು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೀದಿ ನಾಡಿನಲ್ಲಿ 17 ಬೃಹತ್ ಸಮಾವೇಶ ಕೈಗೊಂಡಿದ್ದರು. ಎಲ್ಲ ಪ್ರಯತ್ನಗಳ ಮೂಲಕ ಬಿಜೆಪಿಯು 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 2014ರಲ್ಲಿ 34 ಕ್ಷೇತ್ರಗಳಲ್ಲಿ ಜಯ ಕಂಡಿದ್ದ ಟಿಎಂಸಿ ಈ ಬಾರಿ 22 ಸ್ಥಾನಕ್ಕೆ ಕುಸಿದಿದೆ.

  • ದೀದಿಗೆ ಮತ್ತೊಂದು ಶಾಕ್ – ಬಿಜೆಪಿ ಸೇರಲಿದ್ದಾರೆ ಟಿಎಂಸಿಯ ಇಬ್ಬರು ಶಾಸಕರು, 20 ಜನ ಕೌನ್ಸಿಲರ್‌ಗಳು

    ದೀದಿಗೆ ಮತ್ತೊಂದು ಶಾಕ್ – ಬಿಜೆಪಿ ಸೇರಲಿದ್ದಾರೆ ಟಿಎಂಸಿಯ ಇಬ್ಬರು ಶಾಸಕರು, 20 ಜನ ಕೌನ್ಸಿಲರ್‌ಗಳು

    ನವದೆಹಲಿ: ಪಶ್ಚಿಮ ಬಂಗಾಳದ ಗ್ಯಾರಿಫ್‍ನ 20 ಜನ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಹಿಳಾ ಕೌನ್ಸಿಲರ್‌ಗಳು ಹಾಗೂ ಇಬ್ಬರು ಶಾಸಕರು ಬಿಜೆಪಿ ಸೇರಲು ಮುಂದಾಗಿದ್ದಾರೆ.

    ಲೋಕಸಭಾ ಚುನಾವಣೆ ಫಲಿತಾಂಶದ ಮೂಲಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿ ಶಾಕ್ ಕೊಟ್ಟಿತ್ತು. ಈ ಬೆನ್ನಲ್ಲೆ ಟಿಎಂಸಿಯ ನಾಯಕರು, ಕಾರ್ಯಕರ್ತರು ಬಿಜೆಪಿ ಸೇರಲು ಮುಂದಾಗುತ್ತಿದ್ದಾರೆ.

    ಟಿಎಂಸಿಯ ಮಹಿಳಾ ಕೌನ್ಸಿಲರ್‌ಗಳು ಈಗಾಗಲೇ ದೆಹಲಿಗೆ ಆಗಮಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ದೀದಿ ಸರ್ಕಾರಕ್ಕೆ ಬಿಜೆಪಿಯಿಂದ 90 ದಿನಗಳ ಡೆಡ್‍ಲೈನ್

    ಮಮತಾ ಬ್ಯಾನರ್ಜಿ ಅವರ ಜೊತೆಗೆ ನಮಗೆ ಮುನಿಸಿಕೊಂಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದ 18 ಸ್ಥಾನಗಳನ್ನು ಪಡೆದಿದೆ. ಈ ಗೆಲುವು ನಮ್ಮನ್ನು ಬಿಜೆಪಿ ಸೇರುವಂತೆ ಪ್ರೇರಣೆ ನೀಡಿತು. ರಾಜ್ಯದ ಜನರು ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡಲು ಉತ್ಸುಕರಾಗಿದ್ದಾರೆ ಎಂದು ಬಿಜೆಪಿ ಸೇರಲು ಮುಂದಾದ ಕೌನ್ಸಿಲರ್‌ಗಳು ತಿಳಿಸಿದ್ದಾರೆ.

    ಬಿಜೆಪಿಯು 2014ರ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ ಕೇವಲ 2 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು. ಆದರೆ ಈ ಬಾರಿ ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಮೇಲೆ ಹೆಚ್ಚು ಗಮನ ಕೇಂದ್ರಿಕರಿಸಿತ್ತು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೀದಿ ನಾಡಿನಲ್ಲಿ 17 ಬೃಹತ್ ಸಮಾವೇಶ ಕೈಗೊಂಡಿದ್ದರು. ಎಲ್ಲ ಪ್ರಯತ್ನಗಳ ಮೂಲಕ ಬಿಜೆಪಿಯು 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 2014ರಲ್ಲಿ 34 ಕ್ಷೇತ್ರಗಳಲ್ಲಿ ಜಯ ಕಂಡಿದ್ದ ಟಿಎಂಸಿ ಈ ಬಾರಿ 22 ಸ್ಥಾನಕ್ಕೆ ಕುಸಿದಿದೆ.

  • ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಿ – ಕರ್ನಾಟಕಕ್ಕೆ ಸಿಡಬ್ಲ್ಯೂಸಿ ಆದೇಶ

    ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಿ – ಕರ್ನಾಟಕಕ್ಕೆ ಸಿಡಬ್ಲ್ಯೂಸಿ ಆದೇಶ

    ನವದೆಹಲಿ: ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಸಿ) ಆದೇಶ ನೀಡಿದೆ.

    ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು. ಕಾವೇರಿ ಕೊಳ್ಳದ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗಿಯಾಗಿದ್ದರು. ಸಭೆಯ ಬಳಿಕ ಜೂನ್ ತಿಂಗಳಲ್ಲಿ ಬಿಡಬೇಕಾಗಿರುವ 9.19 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಸಿಡಬ್ಲ್ಯೂಸಿ ಸೂಚಿಸಿದೆ.

    ಸಭೆಯ ಬಳಿಕ ಪ್ರಾಧಿಕಾರದ ಅಧ್ಯಕ್ಷ ಮಸೂದ್ ಹುಸೇನ್ ಪ್ರತಿಕ್ರಿಯಿಸಿ, ಜೂನ್ ತಿಂಗಳಲ್ಲಿ ಬಿಡಬೇಕಾದ ನೀರನ್ನು ಹರಿಸಲು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಜೂನ್ ತಿಂಗಳ ಅಂತ್ಯದ ಒಳಗಡೆ 10 ದಿನಕ್ಕೊಮ್ಮೆ 3 ಟಿಎಂಸಿಯಂತೆ ನೀರು ಹರಿಸಬೇಕು. ಮಾನ್ಸೂನ್ ಮಳೆ ತಡವಾದರೆ ಮುಂದೆ ಬಿಡಬೇಕಾದ ನೀರಿನ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

    ಪುದುಚೇರಿ ಹಾಗು ತಮಿಳುನಾಡಿನ ಕೋಟಾ ಮೊದಲಿನಂತೆ ಉಳಿಯಲಿದೆ. ಕರ್ನಾಟಕ 9.19 ಟಿಎಂಸಿ ನೀರನ್ನು ಜೂನ್ ಅಂತ್ಯದೊಳಗೆ ಹರಿಸಲಿದೆ. ಕರ್ನಾಟಕದಲ್ಲಿ ಮುಂಗಾರು ಎಂದಿನಂತೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರ್ನಾಟಕ ಕೂಡ ಈ ವಿಷಯವನ್ನು ತಗಾದೆಯಿಲ್ಲದೇ ಒಪ್ಪಿಕೊಂಡಿದೆ ಎಂದು ಮಸೂದ್ ತಿಳಿಸಿದರು.

    ಯಾವ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ಟಿಎಂಸಿ ನೀರು?
    ನ್ಯಾ. ಎನ್.ಪಿ.ಸಿಂಗ್, ನ್ಯಾ. ಸುಧೀರ್ ನಾರಿಯನ್, ನ್ಯಾ. ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪ ನೀಡಿತ್ತು. ಈ ತೀರ್ಪು ಪ್ರಕಾರ ಜೂನ್ ನಲ್ಲಿ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಟಿಎಂಸಿ ಸೇರಿ ಒಟ್ಟು 192 ಟಿಎಂಸಿ ನೀರನ್ನು ಕರ್ನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕಿತ್ತು. ಈ ಐತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಎಎಂ ಖಾನ್ವೀಲ್ಕರ್ ಮತ್ತು ಅಮಿತಾವ್ ರಾಯ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ 2018 ಫೆಬ್ರವರಿ 16 ರಂದು ಐತೀರ್ಪನ್ನು ಸ್ವಲ್ಪ ಬದಲಾಯಿಸಿ 177.75 ಟಿಎಂಸಿ ನೀರನ್ನು ಕರ್ನಾಟಕ ಪ್ರತಿವರ್ಷ ತಮಿಳುನಾಡಿಗೆ ಬಿಡಬೇಕೆಂದು ಆದೇಶಿಸಿತ್ತು. ಅಷ್ಟೇ ಅಲ್ಲದೇ ಯಾವ ತಿಂಗಳಿನಲ್ಲಿ ಎಷ್ಟು ನೀರು ಬಿಡಬೇಕು ಎನ್ನುವುದನ್ನು ಕೇಂದ್ರ ನೇಮಿಸುವ ಸಂಸ್ಥೆ ನಿರ್ಧರಿಸಬೇಕು ಎಂದು ಹೇಳಿತ್ತು.

    ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು Cubic feet per Second. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

    ತಮಿಳುನಾಡಿಗೆ ಕರ್ನಾಟಕದಿಂದ ನೀರು ಹರಿದಿದೆ ಎಂದು ಪತ್ತೆ ಮಾಡೋದು ಹೇಗೆ?
    ತಮಿಳುನಾಡಿನ ಭಾಗದಲ್ಲಿರುವ ಬಿಳಿಗುಂಡ್ಲುವಿನಲ್ಲಿ ಎಷ್ಟು ಪ್ರಮಾಣದ ನೀರು ಹರಿದಿದೆ ಎಂದು ಪತ್ತೆ ಮಾಡಲು ಕೇಂದ್ರ ಜಲ ಆಯೋಗದ ಅಧಿಕಾರಿಗಳು ವರ್ಷವಿಡಿ ನೀರಿನ ಲೆಕ್ಕಾಚಾರ ಹಾಕುತ್ತಾರೆ. ಪ್ರತಿದಿನ ಬೆಳಗ್ಗೆ 8ರಿಂದ 10ರವರೆಗೆ ಎರಡು ಗಂಟೆಗಳ ಕಾಲ 160 ಮೀಟರ್ ಪ್ರದೇಶದ 15 ನಿರ್ದಿಷ್ಟ ಸ್ಥಳಗಳಲ್ಲಿ ಈ ಪರೀಕ್ಷೆ ನಡೆಯುತ್ತದೆ. 7 ಮಂದಿ ಸಿಬ್ಬಂದಿ ದೋಣಿ ಮೂಲಕ ಒಂದು ದಂಡೆಯಿಂದ ಮತ್ತೂಂದು ದಂಡೆಗೆ ಸಾಗಿ ತಮ್ಮ ಜೊತೆ ಇರುವ ಉಪಕರಣವನ್ನು ನೀರಿಗೆ ಬಿಡುತ್ತಾರೆ. ಈ ಮೂಲಕ ಪ್ರತಿ ಸೆಕೆಂಡ್‍ಗೆ ಎಷ್ಟು ನೀರು ಕರ್ನಾಟಕದಿಂದ ತಮಿಳುನಾಡಿಗೆ ಹೋಗುತ್ತಿದೆ ಎಂಬುದನ್ನು ಪತ್ತೆ ಮಾಡುತ್ತಾರೆ. ಈ ಸಿಬ್ಬಂದಿಯನ್ನು ಕರ್ನಾಟಕ, ತಮಿಳುನಾಡಿನ ಅಧಿಕಾರಿಗಳು ನೇರವಾಗಿ ಸಂಪರ್ಕಿಸುವಂತಿಲ್ಲ. ರಾಜ್ಯ ಸರ್ಕಾರಗಳು ಅಥವಾ ನ್ಯಾಯಾಲಯಗಳು ಕೇಳಿದರೆ ಮಾತ್ರ ಮಾಹಿತಿಯನ್ನು ನೀಡಲಾಗುತ್ತದೆ.

  • ದೀದಿ ಸರ್ಕಾರಕ್ಕೆ ಬಿಜೆಪಿಯಿಂದ 90 ದಿನಗಳ ಡೆಡ್‍ಲೈನ್

    ದೀದಿ ಸರ್ಕಾರಕ್ಕೆ ಬಿಜೆಪಿಯಿಂದ 90 ದಿನಗಳ ಡೆಡ್‍ಲೈನ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಮತ ಬೇಟೆಯಾಡಿದ ಬಿಜೆಪಿಯು ಈಗ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ 90 ದಿನಗಳ ಗಡುವು ನೀಡಿದೆ.

    ಲೋಕಸಭಾ ಚುನಾವಣಾ ಫಲಿತಾಂಶ ನಿನ್ನೆಷ್ಟೇ ಪ್ರಕಟವಾಗಿದ್ದು, ಬಿಜೆಪಿಯು ಪಶ್ಚಿಮ ಬಂಗಾಳದ 40 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಇತ್ತ ಟಿಎಂಸಿ 22 ಸ್ಥಾನ ಪಡೆದಿದ್ದು, ತನ್ನ ಪ್ರಾಬಲ್ಯವನ್ನು ಕಳೆದುಕೊಂಡಿದೆ. ಈ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಶುರುವಾಗಿದೆ ಎಂದು ವರದಿಯಾಗಿದೆ.

    ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರು ಮಾತನಾಡಿ, ಬಿಜೆಪಿ ಅಲೆ ದೇಶದ ಎಲ್ಲ ಕಡೆಯಲ್ಲಿಯೂ ಬೀಸುತ್ತಿದೆ. ಮೋದಿ ಅಲೆ ಪಶ್ಚಿಮ ಬಂಗಾಳದಲ್ಲಿಯೂ ಬೀಸುತ್ತಿದೆ. ಇದರಿಂದಾಗಿ ಟಿಎಂಸಿ ನಾಯಕರು, ಶಾಸಕರು ಬಿಜೆಪಿ ಸೇರಲು ಮುಂದಾಗುತ್ತಿದ್ದಾರೆ. ಕೇವಲ 90 ರಿಂದ 120 ದಿನಗಳಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

    ಅರ್ಜುನ್ ಸಿಂಗ್ ಅವರು ಇತ್ತೀಚೆಗಷ್ಟೇ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. ಈ ಮೂಲಕ ಬಾರಕ್‍ಪುರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಟಿಎಂಸಿ ಅಭ್ಯರ್ಥಿ ದಿನೇಶ್ ತ್ರಿವೇದಿ ವಿರುದ್ಧ 14,857 ಮತಗಳಿಂದ ಜಯ ಸಾಧಿಸಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಭಾರೀ ಹಿನ್ನಡೆಯಾಗಿದ್ದರಿಂದ ಮಮತಾ ಬ್ಯಾನರ್ಜಿ ಅವರು ವಿಚಲಿತರಾಗಿರಾಗಿದ್ದಾರೆ. ಹೀಗಾಗಿ ಪಕ್ಷದ ವಿಜೇತ ಹಾಗೂ ಪರಾಭವಗೊಂಡ ಅಭ್ಯರ್ಥಿಗಳ ಸಭೆಯನ್ನು ಶನಿವಾರ ಕರೆದಿದ್ದಾರೆ. ಈ ಮೂಲಕ ರಾಜ್ಯದಲ್ಲಿ ತಮ್ಮ ಸರ್ಕಾರವನ್ನು ಭದ್ರಪಡಿಸಿಕೊಳ್ಳಲು ಚರ್ಚೆ ಮಾಡಲಿದ್ದಾರೆ.

    ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಟಿಎಂಸಿಯಲ್ಲಿ ಏಕವ್ಯಕ್ತಿ ಅಧಿಕಾರವಿದೆ. ಹೀಗಾಗಿ ಪಕ್ಷದ ಕಾರ್ಯತರು, ಮುಖಂಡರಿಗೆ ಯಾವುದೇ ಪ್ರಾಮುಖ್ಯತೆ ಸಿಗುತ್ತಿಲ್ಲ. ಟಿಎಂಸಿನ ಅನೇಕ ಮುಖಂಡರು, ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. 40 ಶಾಸಕರ ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಎಂದು ಹೇಳಿದ್ದರು.

  • ಎಕ್ಸಿಟ್ ಪೋಲ್ ಎಂಬ ಗಾಸಿಪ್ ನಂಬಲ್ಲ: ಮಮತಾ ಬ್ಯಾನರ್ಜಿ

    ಎಕ್ಸಿಟ್ ಪೋಲ್ ಎಂಬ ಗಾಸಿಪ್ ನಂಬಲ್ಲ: ಮಮತಾ ಬ್ಯಾನರ್ಜಿ

    – ಆಯೋಗ ಮೋದಿಗೆ ಶರಣಾಗಿದೆ ಅಂದ್ರು ರಾಗಾ

    ನವದೆಹಲಿ: ಭಾನುವಾರ ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗಗೊಂಡಿದೆ. 10ರಲ್ಲಿ 9 ಸಮೀಕ್ಷೆಗಳು ಕೇಂದ್ರದಲ್ಲಿ ಮತ್ತೊಮ್ಮೆ ಎನ್‍ಡಿಎ ಸರ್ಕಾರ ರಚನೆ ಮಾಡಲಿದೆ ಎಂದು ಸ್ಪಷ್ಟವಾಗಿ ಹೇಳಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಎಕ್ಸಿಟ್ ಪೋಲ್ ಎಂಬ ಗಾಸಿಪ್ ನಂಬಲ್ಲ ಎಂದು ಹೇಳಿದ್ದಾರೆ.

    ದೆಹಲಿಯಲ್ಲಿರುವ ಮಾಧ್ಯಮಗಳು ವಿಶ್ವಾಸರ್ಹತೆಯನ್ನು ಕಳೆದುಕೊಳ್ಳುತ್ತಿವೆ. ಎಕ್ಸಿಟ್ ಪೋಲ್ ಹೆಸರಿನಲ್ಲಿ ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ. ಹಾಗಾಗಿ ಜನಮತಕ್ಕಾಗಿ ನಾವು ಕಾಯುತ್ತೇವೆ. ಪ್ರಧಾನಿ ಮೋದಿಜಿ ಏಳನೇ ಹಂತದ ಚುನಾವಣೆಗೂ ಮುನ್ನವೇ ಎನ್‍ಡಿಎ ಒಕ್ಕೂಟ 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಹೇಳುತ್ತಾರೆ. ಪೋಲ್ ಸರ್ವೆಗಳ ಅಂಕಿಅಂಶಗಳು ಮೋದಿ ಹೇಳಿಕೆಯೊಂದಿಗೆ ಹೋಲಿಕೆಯಾಗುತ್ತಿವೆ. ಇವಿಎಂನಲ್ಲಿ ಮತ್ತೆ ಗೊಂದಲ ಕಾಣುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

    ಟ್ವೀಟ್ ಮೂಲಕ ಸಹ ಅಸಮಾಧಾನ ಹೊರ ಹಾಕಿರುವ ಮಮತಾ ಬ್ಯಾನರ್ಜಿ, ಎಕ್ಸಿಟ್ ಪೋಲ್ ಎಂಬ ಗಾಸಿಪ್ ನಂಬಲಾರೆ. ಸಾವಿರಾರು ಇವಿಎಂಗಳು ಬದಲಾವಣೆ ಮಾಡಿರುವ ಸಾಧ್ಯತೆಗಳಿವೆ. ಎಲ್ಲ ವಿರೋಧ ಪಕ್ಷಗಳು ಒಂದಾಗಿ ಈ ಅನ್ಯಾಯದ ವಿರುದ್ಧ ಹೋರಾಟದಲ್ಲಿ ಭಾಗಿಯಾಗಲು ಮನವಿ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಚುನಾವಣೆ ಸಂದರ್ಭದಲ್ಲಿ ಎಲೆಕ್ಟೋಲ್ ಬಾಂಡ್ ಮತ್ತು ಇವಿಎಂಗಳನ್ನು ಬದಲಾವಣೆ ಮಾಡಲಾಗಿದೆ. ಚುನಾವಣಾ ಆಯೋಗ ನಮೋ ಟಿವಿ, ಮೋದಿ ಸೇನೆ ಮತ್ತು ಕೇದಾರನಾಥದಲ್ಲಿಯ ಡ್ರಾಮಾ, ಮೋದಿ ಹಾಗು ಗ್ಯಾಂಗ್ ಮುಂದೆ ಶರಣಾಗಿರೋದನ್ನು ಎಲ್ಲ ಭಾರತೀಯರು ನೋಡಿದ್ದಾರೆ. ಚುನಾವಣಾ ಆಯೋಗ ಮೋದಿ ಗ್ಯಾಂಗ್ ಮುಂದೆ ಗೌರವಾನ್ವಿತವಾಗಿ ಭಯಗೊಂಡಿದೆ ಎಂದು ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಉಮರ್ ಅಬ್ದುಲ್ಲಾ, ಯಾವುದೇ ಎಕ್ಸಿಟ್ ಪೋಲ್ ಗಳು ಸುಳ್ಳು ಹೇಳುವುದಿಲ್ಲ. ಟಿವಿ ಬಂದ್ ಮಾಡಿ, ಸೋಶಿಯಲ್ ಮೀಡಿಯಾದಿಂದ ದೂರ ಉಳಿಯುವ ಸಮಯ ಇದಾಗಿದೆ. ಮೇ 23ರ ಫಲಿತಾಂಶ ಇಡೀ ಜಗತ್ತೇ ನೋಡಲಿದೆ ಎಂದು ಟ್ವೀಟ್ ಮಾಡಿದ್ದಾರೆ.

  • ಕೇದಾರನಾಥಕ್ಕೆ ತೆರಳಿ ಮೋದಿಯಿಂದ ನೀತಿ ಸಂಹಿತೆ ಉಲ್ಲಂಘನೆ – ಆಯೋಗಕ್ಕೆ ಮಮತಾ ದೂರು

    ಕೇದಾರನಾಥಕ್ಕೆ ತೆರಳಿ ಮೋದಿಯಿಂದ ನೀತಿ ಸಂಹಿತೆ ಉಲ್ಲಂಘನೆ – ಆಯೋಗಕ್ಕೆ ಮಮತಾ ದೂರು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೇದಾರನಾಥಕ್ಕೆ ತೆರಳಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

    ಕೊನೆಯ ಹಂತದ ಚುನಾವಣೆ ಪ್ರಚಾರಕ್ಕೆ ಮೇ 17 ಸಂಜೆ 6 ಗಂಟೆಗೆ ತೆರೆ ಬಿದ್ದಿದೆ.  ಮೇ 18ರ ದಿನವಿಡಿ ಮೋದಿ ಅವರ ಕೇದಾರನಾಥ ಯಾತ್ರೆಯನ್ನು ವಾಹಿನಿಗಳು ಪ್ರಸಾರ ಮಾಡಿವೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಟಿಎಂಸಿ ತನ್ನ ದೂರಿನಲ್ಲಿ ಉಲ್ಲೇಖಿಸಿದೆ.

    ಪ್ರಧಾನಿ ಮೋದಿ ಅವರು ಕೇದಾರನಾಥ ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದ ಮಾಸ್ಟರ್ ಪ್ಲಾನ್ ಘೋಷಣೆ ಮಾಡಿದ್ದಾರೆ. ಈ ವೇಳೇ ಸಾರ್ವಜನಿಕರು ಮತ್ತು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಆರೋಪಿಸಿದೆ. ಇದನ್ನು ಓದಿ: ಪ್ರಧಾನಿ ಮೋದಿ ಧ್ಯಾನದ ಗುಹೆಯ ವಿಶೇಷತೆ ಏನು?

    ಪ್ರಧಾನಿ ಮೋದಿ ಅವರ ಪ್ರತಿಯೊಂದು ಕ್ರಿಯೆಗೆ ವ್ಯಾಪಕ ಪ್ರಚಾರ ನೀಡಲಾಗಿದೆ. ಇದು ಮತದಾರರ ಮೇಲೆ ನೇರವಾಗಿ ಅಥವಾ ಪರೋಕ್ಷವಾಗಿ ಪ್ರಭಾವ ಬೀರುವ ಸಾಧ್ಯತೆಯಿದೆ. ಹಿಂದುಗಡೆ “ಮೋದಿ ಮೋದಿ” ಘೋಷಣೆ ಸಹ ಪ್ರಸಾರವಾಗಿತ್ತು. ಇಷ್ಟೆಲ್ಲ ನಡೆಯುತ್ತಿದ್ದರೂ ಚುನಾವಣಾ ಆಯೋಗ ಕಣ್ಣಿದ್ದರೂ ಕುರುಡಾದಂತೆ ವರ್ತಿಸಿದೆ ಎಂದು ಟಿಎಂಸಿ ತನ್ನ ದೂರಿನಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ.

    ಪ್ರಧಾನಿಯಾದ ಮೇಲೆ ನಾಲ್ಕನೇ ಬಾರಿ ಕೇದಾರನಾಥಕ್ಕೆ ಭೇಟಿ ನೀಡಿರುವ ಮೋದಿ, ದೇಗುಲದಿಂದ ಒಂದೂವರೆ ಕಿಲೋಮೀಟರ್ ದೂರದಲ್ಲಿರುವ ರುದ್ರಗುಹೆಯಲ್ಲಿ ಧ್ಯಾನ ಮಾಡಿದ್ದಾರೆ. ಮಳೆ ನಡುವೆಯೂ ಗುಹೆಗೆ ಕಾಲ್ನಡಿಗೆ ಮೂಲಕ ತೆರಳಿದ ಪ್ರಧಾನಿ ಮೋದಿ ಧ್ಯಾನಕ್ಕೆ ಕುಳಿತರು. ಇಲ್ಲಿ ಸುಮಾರು 17 ಗಂಟೆಗಳ ಕಾಲ ಮೋದಿ ಧ್ಯಾನ ಮಾಡಿದ್ದರು. ಇದನ್ನು ಓದಿ:ಪ್ರತಿಷ್ಠೆಯ ಯುದ್ಧ ಗೆಲ್ಲೋಕೆ ಮೋದಿ ದೇವರ ಮೊರೆ – ರಾತ್ರಿಯಿಡೀ ಕೇದಾರನಾಥ ಗುಹೆಯಲ್ಲಿ ನಮೋ ಧ್ಯಾನ

    ಧ್ಯಾನಕ್ಕೆ ಕುಳಿತುಕೊಳ್ಳುವ ಮುನ್ನ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ಮೋದಿ ರುದ್ರಾಭಿಷೇಕ ಮಾಡಿದ್ದಾರೆ. ಬಳಿಕ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ, ಅಧಿಕಾರಿಗಳಿಗೆ ಸಲಹೆ, ಸೂಚನೆ ಕೊಟ್ಟಿದ್ದಾರೆ.

    ಈ ಹಿಂದೆ 2017ರ ಮೇ 3, ಅಕ್ಟೋಬರ್ 20 ಮತ್ತು 2018ರ ನವೆಂಬರ್ 7ರಂದು ಪ್ರಧಾನಿ ಮೋದಿ ಕೇದಾರನಾಥನ ಸನ್ನಿಧಿಗೆ ಭೇಟಿ ನೀಡಿದ್ದರು.

  • ಟಿಎಂಸಿ-ಬಿಜೆಪಿ ನಡುವೆ ಭುಗಿಲೆದ್ದ ಹಿಂಸಾಚಾರ, ಬಾಂಬ್ ದಾಳಿ!

    ಟಿಎಂಸಿ-ಬಿಜೆಪಿ ನಡುವೆ ಭುಗಿಲೆದ್ದ ಹಿಂಸಾಚಾರ, ಬಾಂಬ್ ದಾಳಿ!

    ಕೋಲ್ಕತಾ: ವಿಧಾನಸಭೆ ಉಪ ಚುನಾವಣೆಯ ಹಿಂದಿನ ದಿನವೇ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಭಟ್ಪರಾ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

    ಭಟ್ಪರಾ ಪ್ರದೇಶದಲ್ಲಿ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಸ್ಥಳದಲ್ಲಿ ಬೀಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಷ್ಟೆ ಅಲ್ಲದೆ, ಗಲಾಟೆಯಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿ ಕೂಡ ನಡೆಸಲಾಗಿದ್ದು, ಭಾರೀ ಹಿಂಸಾಚಾರದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಹಲವು ವಾಹನಗಳು ಬೆಂಕಿಗಾಹುತಿಯಾಗಿದೆ.

    ಲೋಕಸಭಾ ಚುನಾವಣೆಯ ಎಲ್ಲಾ ಹಂತಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಇಲ್ಲಿ ಗಲಾಟೆ ನಡೆಯಬಹುದು ಎಂದು ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಜೊತೆಗೆ ಅರೆಸೇನಾ ಪಡೆಗಳ 800 ತುಕಡಿಗಳನ್ನು ಚುನಾವಣೆ ನಡೆಯುತ್ತಿರುವ 9 ಕ್ಷೇತ್ರದಲ್ಲಿಯೂ ನಿಯೋಜಿಸಲಾಗಿದೆ.

    ಭಟ್ಪಾರ ಕ್ಷೇತ್ರದಿಂದ ಅರ್ಜುನ್ ಸಿಂಗ್ ರಾಜೀನಾಮೆ ನೀಡಿದ್ದು, ಬ್ಯಾರಕ್ಪೋರ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದರು. ಹಾಗೆಯೇ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಆರೋಪಿಯಾಗಿ ಜೈಲಿನಿಂದ ಬಿಡುಗಡೆಯಾದ ಮೂರು ವರ್ಷಗಳ ನಂತರ, ಬಂಗಾಳ ಸರ್ಕಾರದ ಮಾಜಿ ಮಂತ್ರಿ ಮದನ್ ಮಿತ್ರ, ಭಟ್ಪಾರದಿಂದ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದ ಚುನಾವಣೆ ಬಿಜೆಪಿ ಮತ್ತು ಟಿಎಂಸಿ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಈ ಬಾರಿ 9 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಅದರಲ್ಲಿ ಬಹುತೇಕ ಕಡೆ ಟಿಎಂಸಿ ಪಕ್ಷದ ಪ್ರಬಲ್ಯ ಹೆಚ್ಚಾಗಿದೆ. ಆದರೆ ಟಿಎಂಸಿ ಪ್ರಬಲ್ಯ ಹೊಂದಿರುವ ಕ್ಷೇತ್ರಗಳನ್ನು ತಮ್ಮ ವಶಕ್ಕೆ ಪಡೆಯಬೇಕೆಂದು ಬಿಜೆಪಿ ಪ್ರಯತ್ನ ಪಡುತ್ತಿರುವುದರಿಂದ ಉಭಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ.

    ಲೋಕಸಮರದ 7ನೇ ಹಂತದ ಚುನಾವಣೆಯ ಪ್ರಚಾರದಲ್ಲಿ ಇದೇ ಕಾರಣಕ್ಕೆ ಬಿಜೆಪಿ-ಟಿಎಂಸಿ ನಡುವೆ ಗಲಾಟೆ ನಡೆದಿತ್ತು. 8 ಸ್ಥಾನಗಳ ಪೈಕಿ ಜಾಧವಪುರ ಹೊರತುಪಡಿಸಿ ಉಳಿದ 7 ಕಡೆ ಬಿಜೆಪಿ-ಟಿಎಂಸಿ ಜತೆಗೆ ಕಾಂಗ್ರೆಸ್ ಮತ್ತು ಎಡಪಂತಿ ಪಕ್ಷಗಳೂ ಸ್ಪರ್ಧೆಗೆ ಮುಂದಾದ ಕಾರಣಕ್ಕೆ ಚುನಾವಣಾ ಕಣ ಮತ್ತಷ್ಟು ರಂಗೇರಿತ್ತು. ಈ ನಡುವೆಯೇ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಸ್ಪರ್ಧೆಯಿಂದಾಗಿ ಕೋಲ್ಕತ್ತಾದ ಡೈಮಂಡ್ ಹಾರ್ಬರ್ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ.

  • ಪಶ್ಚಿಮ ಬಂಗಾಳ ಚುನಾವಣೆ : ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಿಗೂಢ ಸಾವು

    ಪಶ್ಚಿಮ ಬಂಗಾಳ ಚುನಾವಣೆ : ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಿಗೂಢ ಸಾವು

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಲೋಕಸಭಾ ಚುನಾವಣಾ ಸಮಯದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಕಾರ್ಯಕರ್ತರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

    ಪಶ್ಚಿಮ ಬಂಗಾಳದ ಝಗ್ರಾಮ್ ಜಿಲ್ಲೆಯಾ ಗೋಪಿಬಾಲ್ಲಪುರದ ಬಿಜೆಪಿ ಕಾರ್ಯಕರ್ತ, ಬೂತ್ ಅಧ್ಯಕ್ಷ ರಾಮನ್ ಸಿಂಗ್ ಅವರು ಶನಿವಾರ ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

    ಕಾಂತಿ ಕ್ಷೇತ್ರದ ಮೆಡಿನಿಪುರ್ ಎಂಬಲ್ಲಿ ಟಿಎಂಸಿ ಕಾರ್ಯಕರ್ತ ಸುಧಾಕರ್ ಮೈತಿ ಎಂಬುವವರ ಮೃತದೇಹ ಸಿಕ್ಕಿದೆ. ಸಂಬಂಧಿಕರನ್ನು ನೋಡಿಕೊಂಡು ಬರುತ್ತೇನೆ ಎಂದು ಶನಿವಾರ ರಾತ್ರಿ ಆಸ್ಪತ್ರೆಗೆ ಹೋಗಿದ್ದ ಸುಧಾಕರ್ ಅವರು ಮನೆಗೆ ವಾಪಸ್ ಬಂದಿಲ್ಲ. ಅವರ ಮೃತದೇಹ ಕಾಂತಿ ಕ್ಷೇತ್ರದಲ್ಲಿ ಸಿಕ್ಕಿದೆ ಎಂದು ಪೊಲೀಸರು ಮನೆಯವರಿಗೆ ತಿಳಿಸಿದ್ದಾರೆ. ಅದರೆ ಸುಧಾಕರ್ ಮನೆಯವರು ಇದು ಕೊಲೆ ಎಂದು ಆರೋಪ ಮಾಡಿದ್ದಾರೆ.

    ಶನಿವಾರ ರಾತ್ರಿ ಭಾಗನ್‍ಪುರ್ ಮತ್ತು ಮೆಡಿನಿಪುರ್ ನಲ್ಲಿ ಬಿಜೆಪಿ ಕಾರ್ಯಕರ್ತರಾದ ಆನಂತ ಗುಚೈತ್ ಮತ್ತು ರಂಜಿತ್ ಮೈಟಿ ಎಂಬುವವರ ಮೇಲೆ ಯಾರೋ ಕಿಡಿಗೇಡಿಗಳು ಗುಂಡಿನ ದಾಳಿ ಮಾಡಿದ್ದಾರೆ. ಅವರನ್ನು ತಮ್ಲುಕ್ ಅಸ್ಪತ್ರೆ ದಾಖಲು ಮಾಡಲಾಗಿತ್ತು. ಈಗ ಅವರನ್ನು ಹೆಚ್ಚಿನ ಚಿಕಿತ್ಸೆ ಕೊಡಿಸಲು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಂದು ಪಶ್ಚಿಮ ಬಂಗಾಳದ ಎಂಟು ಲೋಕಸಭಾ ಕ್ಷೇತ್ರದಲ್ಲಿ ಆರನೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಝಗ್ರಾಮ್, ಮೆಡಿನಿಪುರ್, ಕಾಂತಿ, ತಮ್ಲುಕ್, ಬಂಕುರಾ, ಬಿಷ್ಣುಪುರ್, ಪುರುಲಿಯಾ ಮತ್ತು ಘಟಾಲ್ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.

  • ಜೈ ಶ್ರೀರಾಮ್ ಹೇಳೋ ಬಿಜೆಪಿ ಬಾಬುಗಳೇ ಒಂದಾದ್ರೂ ರಾಮಮಂದಿರ ಕಟ್ಟಿದ್ರಾ?: ಮಮತಾ ಬ್ಯಾನರ್ಜಿ

    ಜೈ ಶ್ರೀರಾಮ್ ಹೇಳೋ ಬಿಜೆಪಿ ಬಾಬುಗಳೇ ಒಂದಾದ್ರೂ ರಾಮಮಂದಿರ ಕಟ್ಟಿದ್ರಾ?: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಮಾತಿನ ಸಮರ ನಡೆಯುತ್ತಲೇ ಇದೆ. ಇಬ್ಬರು ನಾಯಕರು ತಮ್ಮ ಪ್ರಚಾರದ ಸಮಾವೇಶದಲ್ಲಿ ಒಬ್ಬರ ಮೇಲೋಬ್ಬರು ಹರಿಹಾಯುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಬಿಜೆಪಿ ನಾಯಕರೇ ಇದುವರೆಗೆ ಒಂದಾದರೂ ರಾಮಮಂದಿರವನ್ನು ಕಟ್ಟಿದ್ದೀರಾ ಎಂದು ಮಮತಾ ಪ್ರಶ್ನೆ ಮಾಡಿದ್ದಾರೆ.

    ಪಶ್ಚಿಮ ಬಂಗಾಳದ ವಿಷ್ಣುಪುರದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಬಾಬುಗಳು ಜೈ ಶ್ರೀರಾಮ್ ಎಂದು ಹೇಳುತ್ತಾರೆ. ಚುನಾವಣೆ ಸಮಯದಲ್ಲಿ ಶ್ರೀ ರಾಮಚಂದ್ರ ತಮ್ಮ ಪಕ್ಷದ ಏಜೆಂಟ್ ನನ್ನಾಗಿ ಮಾಡಿಕೊಳ್ಳುತ್ತೀರಿ. ನೀವು ಘೋಷಣೆ ಕೂಗುವುದರ ಜೊತೆಗೆ ಬೇರೆಯವರ ಮೇಲೆಯೂ ಒತ್ತಡ ಹಾಕುತ್ತೀರಿ. ಆದರೆ ಇದುವರೆಗೆ ಒಂದಾದರೂ ರಾಮಮಂದಿರವನ್ನ ಕಟ್ಟಿದ್ದೀರಾ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ಮಿದಾನಪುರ ಜಿಲ್ಲೆಯಲ್ಲಿ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಮಾರ್ಗ ಮಧ್ಯೆ ಕೆಲ ಯುವಕರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಘೋಷಣೆ ಕೇಳುತ್ತಿದ್ದಂತೆಯೇ ಕಾರು ನಿಲ್ಲಿಸಿದ ಮಮತಾ ಬ್ಯಾನರ್ಜಿ, ಯುವಕರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಸೋಮವಾರ ಪಶ್ಚಿಮ ಬಂಗಾಳದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ್ದ ಮೋದಿ, ಪಶ್ಚಿಮ ಬಂಗಾಳದಲ್ಲಿ ಜೈ ಶ್ರೀರಾಮ್ ಅನ್ನೋದು ದೊಡ್ಡ ಅಪರಾಧವಾಗಿದೆ. ಜೈ ಶ್ರೀರಾಮ್ ಘೋಷಣೆ ಕೂಗುವವರನ್ನು ಇಲ್ಲಿ ಜೈಲಿಗೆ ಹಾಕಲಾಗುತ್ತದೆ ಎಂದು ಆರೋಪಿಸಿದ್ದರು.