Tag: ಟಿಎಂಸಿ

  • 40 ಟಿಎಂಸಿ ಶಾಸಕರು ನಮ್ಮ ಸಂಪರ್ಕದಲ್ಲಿ – ದೀದಿಗೆ ಶಾಕ್ ಕೊಟ್ಟ ಮೋದಿ

    40 ಟಿಎಂಸಿ ಶಾಸಕರು ನಮ್ಮ ಸಂಪರ್ಕದಲ್ಲಿ – ದೀದಿಗೆ ಶಾಕ್ ಕೊಟ್ಟ ಮೋದಿ

    ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಬ್ ಸಿಡಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಶಾಕ್ ನೀಡಿದ್ದಾರೆ.

    ಪಶ್ಚಿಮ ಬಂಗಾಳದ ಸೆರಾಂಪುರ್ ಸಮಾವೇಶದಲ್ಲಿ ಮಾತನಾಡಿದ ಮೋದಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ, ಮೇ 23ರ ಬಳಿಕ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಸ್ತಿತ್ವಕ್ಕೆ ಬರಲಿದೆ. ಆ ಬಳಿಕ ಎಲ್ಲೆಲ್ಲೂ ಬಿಜೆಪಿ ಇರಲಿದೆ. ಟಿಎಂಸಿ ಪಕ್ಷದ ನಿಮ್ಮ ಶಾಸಕರು ಕೂಡ ನಿಮ್ಮನ್ನು ತೊರೆದು ಬರಲಿದ್ದಾರೆ. ಈಗಾಗಲೇ 40 ಮಂದಿ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಏಕೆಂದರೆ ನಿಮ್ಮ ಮೇಲೆ ಇಟ್ಟಿದ್ದ ನಂಬಿಕೆಯನ್ನು ಅವರು ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ನಿಮಗೆ ಈ ಸಂಗತಿ ಕಷ್ಟವಾಗಬಹುದು ಎಂದು ಹೇಳಿದ್ದಾರೆ.

    ಕಳೆದ ಸೋಮವಾರವೂ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ಟೀಕೆಗಳನ್ನು ಮಾಡಿದ್ದ ಮೋದಿ ಅವರು, ಲೋಕಸಭಾ ಚುನಾವಣೆ 4ನೇ ಹಂತದ ಮತದಾನದ ವೇಳೆ ಉಂಟಾದ ಘರ್ಷಣೆಗಳ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಟಿಎಂಸಿ ಕಾರ್ಯಕರ್ತರನ್ನು ಗೂಂಡಾಗಳ ಗುಂಪು ಎಂದು ಕರೆದಿದ್ದರು. ಅಲ್ಲದೇ ಗೂಂಡಾಗಳು ಚುನಾವಣೆಯಲ್ಲಿ ಮತದಾನವನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

    ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಇತ್ತೀಚೆಗೆ ನಡೆಸಿದ ಟಿವಿ ಸಂದರ್ಶನದಲ್ಲಿ ಪ್ರಧಾನಿ ಮೋದಿ, ಪ್ರತಿಪಕ್ಷಗಳಲ್ಲೂ ನನಗೆ ‘ಒಳ್ಳೆಯ ಸ್ನೇಹಿತರಿದ್ದಾರೆ’ ಎಂದು ಹೇಳಿದ್ದರು. ಜತೆಗೆ ಮಮತಾ ಬ್ಯಾನರ್ಜಿ ಅವರು ಖುದ್ದಾಗಿ ವರ್ಷಕ್ಕೆ ಎರಡು ಜತೆ ಕುರ್ತಾಗಳನ್ನು ಮತ್ತು ಸ್ವತಃ ತಯಾರಿಸಿದ ಸಿಹಿತಿಂಡಿಗಳನ್ನು ಕಳುಹಿಸುತ್ತಾರೆ ಎನ್ನುವ ವಿಚಾರವನ್ನು ಬಹಿರಂಗ ಪಡಿಸಿದ್ದರು.

    ಈ ವಿಚಾರ ಬಹಿರಂಗವಾದ ಬಳಿಕ ಮಮತಾ ಬ್ಯಾನರ್ಜಿ, ಮಣ್ಣಿನಿಂದ ಸಿಹಿತಿಂಡಿ ತಯಾರಿಸಿ ಅದರೊಳಗೆ ಕಲ್ಲುಗಳನ್ನು ತುಂಬಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿ ಕೊಡುತ್ತೇನೆ. ಲಡ್ಡು ತಯಾರಿಸುವಾಗ ಗೋಡಂಬಿ ಮತ್ತು ಒಣ ದ್ರಾಕ್ಷೆಗಳನ್ನು ಹಾಕುವಂತೆ ಮಣ್ಣಿನಿಂದ ತಯಾರಿಸಿದ ಸಿಹಿತಿಂಡಿಗೆ ಕಲ್ಲುಗಳನ್ನು ತುಂಬಿಸಿ ಮೋದಿಗೆ ಕಳುಹಿಸುತ್ತೇನೆ. ಅವರು ಅದನ್ನು ತಿನ್ನುವಾಗ ಹಲ್ಲುಗಳು ಮುರಿದು ಹೋಗಲಿ ಎನ್ನುವ ಆಘಾತಕಾರಿ ಹೇಳಿಕೆ ನೀಡಿದ್ದರು.

    ಕುರ್ತಾಗಳು ಮತ್ತು ಸ್ವೀಟ್‍ಗಳನ್ನು ಕಳುಹಿಸುವುದರಲ್ಲಿ ಯಾವ ತಪ್ಪೂ ಇಲ್ಲ. ದುರ್ಗಾ ಪೂಜೆ ಸಂದರ್ಭದಲ್ಲಿ ನಾವು ಪ್ರಮುಖ ವ್ಯಕ್ತಿಗಳ ಜತೆಗೆ ಸಿಹಿ ಹಂಚಿಕೊಳ್ಳುತ್ತೇವೆ. ಈ ವಿಷಯವನ್ನು ಬಹಿರಂಗಪಡಿಸುವ ಮೂಲಕ ಮೋದಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಮಮತಾ ಟೀಕಿಸಿದ್ದರು.

  • ‘ದಿ ಗ್ರೇಟ್’ ಖಲಿ ಬಿಜೆಪಿ ಪರ ಪ್ರಚಾರ – ಟಿಎಂಸಿಯಿಂದ ಆಯೋಗಕ್ಕೆ ದೂರು

    ‘ದಿ ಗ್ರೇಟ್’ ಖಲಿ ಬಿಜೆಪಿ ಪರ ಪ್ರಚಾರ – ಟಿಎಂಸಿಯಿಂದ ಆಯೋಗಕ್ಕೆ ದೂರು

    ಕೋಲ್ಕತ್ತಾ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಡಬ್ಲ್ಯೂಡಬ್ಲ್ಯೂಇ ರೆಸ್ಲಿಂಗ್ ಚಾಂಪಿಯನ್ ‘ದಿ ಗ್ರೇಟ್’ ಖಲಿ ಪ್ರಚಾರ ಮಾಡಿರುವ ವಿಚಾರವಾಗಿ ತೃಣಮೂಲಕ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

    ಖಲಿ ಸದ್ಯ ಅಮೆರಿಕ ಪೌರತ್ವವನ್ನು ಪಡೆದಿದ್ದು, ಒಬ್ಬ ವಿದೇಶಿ ಪ್ರಜೆ ಚುನಾವಣೆಯಲ್ಲಿ ಪ್ರಚಾರ ನಡೆಸಿ ಪ್ರಭಾವ ಬೀರುವುದು ನಿಯಮ ಬಾಹಿರವಾಗಿದೆ ಎಂದು ಟಿಎಂಸಿ ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ತಿಳಿಸಿದೆ.

    ಪಶ್ಚಿಮ ಬಂಗಾಳದ ಜಾದವಪುರ ಬಿಜೆಪಿ ಅಭ್ಯರ್ಥಿ ಅನುಪಮ್ ಹಜ್ರಾ ನಾಮಪತ್ರ ಸಲ್ಲಿಸುವ ವೇಳೆ ಅಂದರೆ ಏಪ್ರಿಲ್ 26 ರಂದು ಖಲಿ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಹಜ್ರಾ, ನಾವಿಬ್ಬರು ಸಹೋದರರಂತೆ ಎಂದು ಹೇಳಿದ್ದರು. ಅಂದಹಾಗೇ ಖಲೀ ಡಬ್ಲ್ಯೂಡಬ್ಲ್ಯೂಇ ರೆಸ್ಲಿಂಗ್ ನ ಹೆವಿವೇಯ್ಟ್ ವಿಭಾಗದಲ್ಲಿ ಚಾಂಪಿಯನ್ ಆದ ಮೊದಲ ಭಾರತೀಯರಾಗಿದ್ದಾರೆ. 2014ರ ಬಳಿಕ ಅವರು ಅಮೆರಿಕದಲ್ಲಿ ನೆಲೆಸಿ ಭಾರತ ವೀಸಾವನ್ನು ರದ್ದು ಪಡಿಸಿ ಅಲ್ಲಿನ ಕಾರ್ಡ್ ಪಡೆದಿದ್ದರು.

    ಕಳೆದ ಕೆಲ ದಿನಗಳ ಹಿಂದೆ ಬಾಂಗ್ಲಾದೇಶದ ಸೂಪರ್ ಸ್ಟಾರ್ ಫಿದೋರ್ಸ್ ಅಹ್ಮದ್ ಕೂಡ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪರ ಪ್ರಚಾರ ನಡೆಸಿದ್ದರು. ಈ ವೇಳೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ ನಟನ ಬಂಧನಕ್ಕೆ ಆಗ್ರಹಿಸಿತ್ತು. ಆ ಬಳಿಕ ನಟನ ವೀಸಾ ರದ್ದು ಪಡಿಸಿ ವಾಪಸ್ ಕಳುಹಿಸಲಾಗಿತ್ತು. ಅಲ್ಲದೇ ಕೇಂದ್ರ ಗೃಹ ಇಲಾಖೆ ನಟನ ವೀಸಾವನ್ನು ಬ್ಲಾಕ್ ಪಟ್ಟಿಗೆ ಸೇರಿಸಿತ್ತು. ಈ ವೇಳೆ ಬಾಂಗ್ಲಾ ವಲಸಿಗರನ್ನು ಓಲೈಕೆ ಮಾಡಲು ಟಿಎಂಸಿ ಈ ಮಾರ್ಗವನ್ನು ಬಳಸಿದೆ ಎಂದು ಬಿಜೆಪಿ ದೂರಿತ್ತು. ಅಲ್ಲದೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‍ರನ್ನು ಕೂಡ ಟಿಎಂಸಿ ಪ್ರಚಾರಕ್ಕೆ ಕರೆಸಿಕೊಳ್ಳಲಿ ಎಂದು ಬಿಜೆಪಿ ಆಕ್ರೋಶ ಹೊರಹಾಕಿತ್ತು.

  • ಟಿಎಂಸಿಗೆ ಮತ ಹಾಕದ್ದಕ್ಕೆ ಪತ್ನಿಯ ಬಾಯಿಗೆ ಆ್ಯಸಿಡ್ ಹಾಕ್ದ!

    ಟಿಎಂಸಿಗೆ ಮತ ಹಾಕದ್ದಕ್ಕೆ ಪತ್ನಿಯ ಬಾಯಿಗೆ ಆ್ಯಸಿಡ್ ಹಾಕ್ದ!

    ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದ್ದಕ್ಕೆ ಪತಿಯೊಬ್ಬ ಪತ್ನಿಯ ಬಾಯಿಗೆ ಆ್ಯಸಿಡ್ ಹಾಕಿ ದೌರ್ಜನ್ಯ ಎಸಗಿದ್ದಾನೆ.

    ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪತಿ ಟಿಎಂಸಿ ಕಾರ್ಯಕರ್ತನಾಗಿದ್ದು ಆಡಳಿತರೂಢ ಪಕ್ಷಕ್ಕೆ ಮತ ಹಾಕುವಂತೆ ಹೇಳಿದ್ದ. ಆದರೆ ಪತ್ನಿ ಅನ್ಸುರಾ ಬಿಬಿ ಟಿಎಂಸಿಗೆ ಮತ ಹಾಕದ್ದಕ್ಕೆ ಬಾಯಿಗೆ ಆ್ಯಸಿಡ್ ಹಾಕಿ ಹೊಡೆದಿದ್ದಾನೆ.

    ಮುರ್ಷಿದಾಬಾದ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಅನ್ಸುರಾಳನ್ನು ದಾಖಲಿಸಲಾಗಿದೆ. ಶ್ವಾಸನಾಳ ಸುಟ್ಟು ಹೋಗಿದ್ದು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ತಂದೆ ತಲೆಕೂದಲು ಎಳೆದು ಹೊಡೆದು ನಂತರ ತಾಯಿಯ ಬಾಯಿಗೆ ಆ್ಯಸಿಡ್ ಹಾಕಿದ್ದಾನೆ ಎಂದು ಮಗ ದೂರು ನೀಡಿದ್ದಾನೆ. ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಏಪ್ರಿಲ್ 23 ಮಂಗಳವಾರ ಮಧ್ಯಾಹ್ನ ವೋಟ್ ಹಾಕಿ ಪತ್ನಿ ಮನೆಗೆ ಬಂದಿದ್ದಾಳೆ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ಹೋಗಿ ಪತಿ ಬಾಯಿಗೆ ಆ್ಯಸಿಡ್ ಹಾಕಿದ್ದಾನೆ.

  • ವೇದಿಕೆಯಲ್ಲಿ ಕುಳಿತಿದ್ದಾಗಲೇ ಟಿಎಂಸಿ ಶಾಸಕನ ಎದೆಗೆ ಗುಂಡಿಟ್ರು..!

    ವೇದಿಕೆಯಲ್ಲಿ ಕುಳಿತಿದ್ದಾಗಲೇ ಟಿಎಂಸಿ ಶಾಸಕನ ಎದೆಗೆ ಗುಂಡಿಟ್ರು..!

    -ಬಿಜೆಪಿಯ ಯೋಜಿತ ಕೊಲೆಯೆಂದು ಟಿಎಂಸಿ ಆರೋಪ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಸತ್ಯಜಿತ್ ಬಿಸ್ವಾಸ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆಗೈದಿದ್ದಾರೆ. ಕೃಷ್ಣಗಂಜ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಸತ್ಯಜಿತ್ ಅವರನ್ನು ಶನಿವಾರ ರಾತ್ರಿ ಮನೆಯ ಸಮೀಪದಲ್ಲಿ ಗುಂಡಿಟ್ಟು ಕೊಲೆಗೈದು ಪರಾರಿಯಾಗಿದ್ದಾರೆ.

    ಶನಿವಾರ ರಾತ್ರಿ ತಮ್ಮ ನಿವಾಸದ ಸಮೀಪದಲ್ಲಿ ಆಯೋಜಿಸಲಾಗಿದ್ದು ಕಾರ್ಯಕ್ರಮದಲ್ಲಿ ಶಾಸಕರು ಭಾಗಿಯಾಗಿದ್ದರು. ಜನರ ಗುಂಪಿನ ಮಧ್ಯದಲ್ಲಿದ್ದ ಇಬ್ಬರು ಆಗಂತುಕರು ವೇದಿಕೆಯಲ್ಲಿಯೇ ಆಸೀನರಾಗಿದ್ದ ಶಾಸಕರ ಎದೆ ಭಾಗಕ್ಕೆ ಗುಂಡು ಹೊಡೆದಿದ್ದಾರೆ ಎಂದು ವರದಿಯಾಗಿದೆ.

    ರಾತ್ರಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಜನರ ಗುಂಪಿನಿಂದಲೇ ಗುಂಡು ಹಾರಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಸತ್ಯಜಿತ್ ಅವರನ್ನು ಶಕ್ತಿನಗರದ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಶಾಸಕರು ಕೊನೆಯುಸಿರೆಳೆದಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶಾಸಕರ ಮೇಲೆ ಗುಂಡು ಹಾರಿಸಿದ ಮೂವರ ಸಹಿತ ರಿವಾಲ್ವರ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಮೃತ ಶಾಸಕರಿಗೆ ಇತ್ತೀಚೆಗಷ್ಟೇ ಮದುವೆಯಾಗಿತ್ತು ಎಂದು ತಿಳಿದು ಬಂದಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಟಿಎಂಸಿ ನಾಯಕ ಗರಿಶಂಕರ್ ದತ್ತ, ಇದೊಂದು ಬಿಜೆಪಿಯ ಯೋಜಿತ ಕೊಲೆ ಎಂದು ಆರೋಪಿಸಿದ್ದಾರೆ. ಟಿಎಂಸಿ ನಾಯಕನ ಹೇಳಿಕೆಗೆ ಪ್ರತಿಕ್ರಿಯಿಸಿದ ಪಶ್ವಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಶ್, ಆಡಳಿತ ಪಕ್ಷದ ಆಂತರಿಕ ಕಲಹದ ಫಲಿತಾಂಶ ಇದಾಗಿದೆ ಎಂದು ತಿರುಗೇಟು ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಮತಾ ಬ್ಯಾನರ್ಜಿಗೆ ಶಾಕ್ – ಟಿಎಂಸಿ ಸಂಸದ ಬಿಜೆಪಿಗೆ ಜಂಪ್

    ಮಮತಾ ಬ್ಯಾನರ್ಜಿಗೆ ಶಾಕ್ – ಟಿಎಂಸಿ ಸಂಸದ ಬಿಜೆಪಿಗೆ ಜಂಪ್

    ಕೋಲ್ಕತ್ತಾ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಉಳಿದಿದ್ದು, ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಬಿಜೆಪಿ ಮನೆ ಸೇರಿದ್ದಾರೆ.

    ಟಿಎಂಸಿ ಸಂಸದ ಸೌಮಿತ್ರ ಖಾನ್ ಇಂದು ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರಿದ್ದಾರೆ. ಈ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಮುಖಲ್ ರಾಯ್ ಹಾಜರಿದ್ದರು.

    ಪಶ್ಚಿಮ ಬಂಗಾಳದ ಬಿಷ್ಣುಪುರ್ ಕ್ಷೇತ್ರದಿಂದ ಸೌಮಿತ್ರ ಖಾನ್ ಸಂಸದರಾಗಿ ಆಯ್ಕೆಯಾಗಿದ್ದರು. ಸೌಮಿತ್ರ ಅವರ ಬೆನ್ನಲ್ಲೇ ಕೆಲ ಬೆಂಬಲಿರು ಕೂಡ ಬಿಜೆಪಿ ಸೇರಲಿದ್ದಾರೆ. ಈ ಬೆಳವಣಿಗೆಯಿಂದ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನುವ ವಿಶ್ಲೇಷಣೆ ಕೇಳಿಬಂದಿದೆ.

    ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಸಿಂಡಿಕೇಟ್ ರಾಜ್ ಮತ್ತು ಪೊಲೀಸ್ ರಾಜ್ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ತೃಣಮೂಲ ಕಾಂಗ್ರೆಸ್ ಗೂಂಡಾಗಳಿಗೆ ಬೆಂಬಲ ನೀಡುತ್ತಿದೆ. ರಾಜ್ಯದಲ್ಲಿ ಅಹಿತಕರ ಘಟನೆಗಳು ಹೆಚ್ಚಾಗುತ್ತಿವೆ. ಹೀಗಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಸೌಮಿತ್ರ ಖಾನ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿ ರ‍್ಯಾಲಿ ಮಾಡಿದ್ದ ಜಾಗವನ್ನು ಗಂಗಾಜಲ ಹಾಕಿ ಶುದ್ಧ ಮಾಡಿದ್ರು!

    ಬಿಜೆಪಿ ರ‍್ಯಾಲಿ ಮಾಡಿದ್ದ ಜಾಗವನ್ನು ಗಂಗಾಜಲ ಹಾಕಿ ಶುದ್ಧ ಮಾಡಿದ್ರು!

    ಕೋಲ್ಕತ್ತ: ಪಶ್ಚಿಮ ಬಂಗಾಳದ ಕೂಚ್ ಬೆಹರ್ ನಲ್ಲಿ ಬಿಜೆಪಿ ನಡೆಸಿದ್ದ ರ‍್ಯಾಲಿಯ ಬಳಿಕ ತೃಣಮೂಲ ಕಾಂಗ್ರೆಸ್(ಟಿಎಂಸಿ) ಕಾರ್ಯಕರ್ತರು ಗಂಗಾಜಲವನ್ನು ಹಾಕಿ ಶುದ್ಧಿಗೊಳಿಸಿದ್ದಾರೆ.

    ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧದ ನಡುವೆಯೂ ಬಿಜೆಪಿ ಕೂಚ್ ಬೆಹರ್ ನಲ್ಲಿ ಅದ್ಧೂರಿಯಾಗಿ ರ‍್ಯಾಲಿಯನ್ನು ಕೈಗೊಂಡಿತ್ತು. ಆದರೆ ಇಂದು ಟಿಎಂಸಿ ಕಾರ್ಯಕರ್ತರು ಗಂಗಾಜಲವನ್ನು ಸುರಿದು, ಸ್ವಚ್ಛ ಮಾಡುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳಿಯ ಟಿಎಂಸಿ ಮುಖಂಡ ಪಂಕಜ್ ಘೋಷ್, ಬಿಜೆಪಿಯವರು ಇಲ್ಲಿ ಧರ್ಮದ ಸಂದೇಶವನ್ನು ನೀಡಿದ್ದಾರೆ. ಹೀಗಾಗಿ ಈ ಸ್ಥಳವನ್ನು ಶುದ್ಧೀಕರಿಸಿದ್ದೇವೆ. ಇದು ಮದನ್ ಮೋಹನ್‍ರ ದೇವರ ನಾಡು. ಹೀಗಾಗಿ ಹಿಂದೂ ಸಂಪ್ರದಾಯದಂತೆ ನಾವು ಈ ಸ್ಥಳವನ್ನು ಶುದ್ಧ ಮಾಡಿದ್ದೇವೆ. ಇಲ್ಲಿ ಮದನ್ ಮೋಹನ್ ದೇವರ ರಥವನ್ನು ಬಿಟ್ಟು, ಯಾವುದೇ ರಥವನ್ನು ಹೋಗಲು ಬಿಡುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿ, ರಥಯಾತ್ರೆ ಸಾಗಿದ ದಾರಿಯನ್ನು ಶುದ್ಧಗೊಳಿಸಿ, ಏಕತಾ ಯಾತ್ರೆ ಕೈಗೊಳ್ಳುವಂತೆ ನನ್ನ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ. ಅಲ್ಲದೇ ಫೈವ್ ಸ್ಟಾರ್ ಸೌಲಭ್ಯ ಹೊಂದಿರುವ ರಥ ಯಾತ್ರೆಯಾದರೂ ಏನು? ಅದು ರಾವಣ ಯಾತ್ರೆಯೇ ಹೊರತು ರಥ ಯಾತ್ರೆಯಲ್ಲ ಎಂದು ಕಿಡಿಕಾರಿದ್ದಾರೆ.

    ಟಿಎಂಸಿ ಕಾರ್ಯಕರ್ತರ ವರ್ತನೆಯನ್ನು ಸ್ಥಳೀಯ ಬಿಜೆಪಿ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತೇವೆಂಬ ಭೀತಿಯಿಂದ ಈ ರೀತಿ ಮಾಡಿದ್ದಾರೆಂದು ತಿರುಗೇಟು ನೀಡಿದ್ದಾರೆ.

    ಬಿಜೆಪಿ ರಾಷ್ಟ್ರಾಧ್ಯಕ್ಷ ಅಮೀತ್ ಶಾ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಕ್ಷೇತ್ರಗಳಲ್ಲಿಯೂ ರಥಯಾತ್ರೆ ನಡೆಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದರು. ಪ್ರಮುಖವಾಗಿ ಶನಿವಾರದಂದು ಕೂಚ್ ಬೆಹರ್ ನಲ್ಲಿ ನಡೆಯಬೇಕಿದ್ದ ರಥಯಾತ್ರೆಗೆ ಕೋಲ್ಕತ್ತ ಹೈಕೋರ್ಟ್ ತಡೆ ನೀಡಿತ್ತು. ಹೀಗಾಗಿ ಬಿಜೆಪಿ ಶನಿವಾರ ರ‍್ಯಾಲಿಯನ್ನು ಮಾತ್ರವೇ ಹಮ್ಮಿಕೊಂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೆ ಮೋದಿ ಪ್ರಧಾನಿ ಆಗೋದನ್ನು ತಡೆಯಲು ವಿಪಕ್ಷ ರಣತಂತ್ರ!

    ಮತ್ತೆ ಮೋದಿ ಪ್ರಧಾನಿ ಆಗೋದನ್ನು ತಡೆಯಲು ವಿಪಕ್ಷ ರಣತಂತ್ರ!

    ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೇಗಾದ್ರೂ ಮಾಡಿ ಮೋದಿ ಮತ್ತೆ ಪ್ರಧಾನಿಯಾಗೋದನ್ನು ತಡೆಯಲು ವಿಪಕ್ಷ ಕಾಂಗ್ರೆಸ್ ಮಹಾ ರಣತಂತ್ರ ರೂಪಿಸಿದೆ.

    ಕಾಂಗ್ರೆಸ್ ತಾನು ಗೆಲ್ಲದಿದ್ರೂ ಪರವಾಗಿಲ್ಲ. ಎದುರಾಳಿ ಸೋಲಬೇಕು ಎನ್ನುವ ಮಂತ್ರ ಅಳವಡಿಸಿಕೊಂಡಿದೆ. ವಿಪಕ್ಷಗಳಲ್ಲಿ ಯಾರನ್ನೇ ಆದರೂ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿದ್ರೆ ಅದನ್ನು ಒಪ್ಪಲು ಕಾಂಗ್ರೆಸ್ ರೆಡಿಯಾಗಿದೆ ಎನ್ನಲಾಗುತ್ತಿದೆ.

    ಕಾಂಗ್ರೆಸ್‍ನ ಒಂದು ಕಂಡೀಷನ್ ಅಂದ್ರೆ ಆ ಅಭ್ಯರ್ಥಿ ಆರ್‍ಎಸ್‍ಎಸ್ ಹಿನ್ನೆಲೆ ಹೊಂದಿರಬಾರದು. ಈ ಮೂಲಕ ಲೋಕಸಮರಕ್ಕೂ ಮುನ್ನವೇ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ರೇಸ್‍ನಿಂದ ಹೊರಬಿದ್ದಂತಾಗಿದೆ.

    ಬಿಎಸ್‍ಪಿ ಅಧಿನಾಯಕಿ ಮಾಯಾವತಿ ಮತ್ತು ಟಿಎಂಸಿಯ ಮಮತಾ ಬ್ಯಾನರ್ಜಿ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಲೋಕಸಭೆಯ ಅರ್ಧಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿ, ಉಳಿದ ಕ್ಷೇತ್ರಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಡಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಕಾಂಗ್ರೆಸ್‍ನ ಈ ಚಿಂತನೆ ರಾಷ್ಟ್ರ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇನ್ನು ಕೇಳಿದಷ್ಟು ಸೀಟ್ ಕೊಟ್ಟರೆ ಮಾತ್ರ ಕಾಂಗ್ರೆಸ್ ಜೊತೆ ದೋಸ್ತಿ ಎಂದು ಮಾಯಾವತಿ ಹೇಳಿದ್ದಾರೆ.

  • ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರ: 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ- ಶಾಕಿಂಗ್ ವಿಡಿಯೋ ನೋಡಿ

    ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರ: 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ- ಶಾಕಿಂಗ್ ವಿಡಿಯೋ ನೋಡಿ

    ಕೊಲ್ಕತ್ತಾ: ಪಂಚಾಯತ್ ಚುನಾವಣೆ ವೇಳೆ 10 ಕಡೆ ನಡೆದ ಘರ್ಷಣೆ ಹಿಂಸಾ ರೂಪ ಪಡೆದುಕೊಂಡಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

    ಮುಂಜಾನೆ ಪ್ರಾರಂಭವಾದ ಚುನಾವಣೆಯಲ್ಲಿ ವಿವಿಧ ಬೂತ್‍ಗಳಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಪರಸ್ಪರ ಹೊಡೆದಾಡಿದ್ದಾರೆ. ನಂತರ ಇದು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಪ್ರದೇಶವೊಂದರಲ್ಲಿ ನಡೆದ ಬಾಂಬ್ ದಾಳಿಯಲ್ಲಿ 20 ಜನ ಗಾಯಗೊಂಡಿವುದು ವರದಿಯಾಗಿದೆ.

     

    ಚುನಾವಣೆಗೂ ಮುನ್ನ 34%ರಷ್ಟು ಸ್ಥಾನಗಳಲ್ಲಿ ಅವಿರೋಧವಾಗಿ ಆಡಳಿತ ರೂಢ ತೃಣಮೂಲ ಕಾಂಗ್ರೆಸ್ ಸದಸ್ಯರು ಆಯ್ಕೆಯಾಗಿದ್ದರು. ಈ ಸಂಬಂಧ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಈ ಬೆಳವಣಿಗೆ ನಂತರ ಪ್ರಾರಂಭವಾದ ಚುನಾವಣೆಯು ಹಿಂಸಾಚಾರ ಸ್ವರೂಪ ಪಡೆದುಕೊಂಡಿದೆ.

    ಘಟನೆಗೆ ಸಂಬಂಧಿಸಿದಂತೆ ಉತ್ತರದ 24 ಪರಗಣದಿಂದ ಹಾಗೂ ದಕ್ಷಿಣದ ಬುದ್ರ್ವಾನ್, ಕೋಚ್‍ಬೆಹರ್‍ನಿಂದ 24 ಪರಗಣಗಳಿಂದ ರಾಜ್ಯ ಚುನಾವಣೆ ಆಯೋಗವು ದೂರು ದಾಖಲಿಸಿಕೊಂಡಿದೆ.

    ಉತ್ತರ ಬಂಗಾಳದ ಕೊಚ್ಬೆಗಾರ್ ಜಿಲ್ಲೆಯ ಶುಕ್ತಾಬಾರಿ ಮತದಾನದ ಬೂತ್‍ನಲ್ಲಿ ನಡೆದ ಬಾಂಬ್ ದಾಳಿ ನಡೆದಿದ್ದು, ಒಬ್ಬ ಟಿಎಂಸಿ ಕಾರ್ಯಕರ್ತ, ಓರ್ವ ಮಹಿಳೆ ಸೇರಿದಂತೆ ಒಟ್ಟು 20 ಜನರು ಗಾಯಗೊಂಡಿದ್ದಾರೆ.

    ಗುಂಪೊಂದು ಉತ್ತರ ಬಂಗಾಳದ ಅಲಿಪುರ್ದಾರ್ ಬೂತ್ ಸುತ್ತ ಗೆರೆ ಏಳೆದಿದ್ದು, ಇದನ್ನು ದಾಟದಂತೆ ಮತದಾರರಿಗೆ ಸೂಚಿಸಿದೆ. ಅಲ್ಲದೇ ದಿನ್ಹಾಟ್‍ದಲ್ಲಿ ಎರಡು ಗುಂಪುಗಳ ನಡುವಿನ ಕಲಹದಿಂದಾಗಿ ಕೆಲವು ಮತದಾರಿಗೆ ಗಾಯವಾಗಿದೆ.

    ದಕ್ಷಿಣ ಪರಗಣದ ಭಾಂಗಾರ್‍ದಲ್ಲಿ ನಡೆದ ಘರ್ಷಣೆ ವೇಳೆ ಮಾಧ್ಯಮದ ವಾಹನಗಳಿಗೂ ಹಾನಿಯಾಗಿದೆ. ಬಿರ್ಪಾರಾದಲ್ಲಿ ಐದು ಜನ ಪತ್ರಕರ್ತರು ಗಾಯಗೊಂಡಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಟ್ರಿಗರ್ ಗ್ಯಾಸ್ ಬಳಕೆ ಮಾಡಿದ್ದಾರೆ. ಬುದ್ರ್ವಾನ್ ನಲ್ಲಿ ಬಿಜೆಪಿ ಹಾಗೂ ಸಿಪಿಎಂ ಕಾರ್ಯಕರ್ತರು ಬಾಂಬ್ ಹಾಗೂ ದೊಣ್ಣೆ ಹಿಡಿದು ಮತದಾರರನ್ನು ಹೆದರಿಸಿದ್ದಾರೆ ಎಂದು ವರದಿಯಾಗಿದೆ.

    ಇತ್ತೀಚಿನ ವರದಿಯ ಪ್ರಕಾರ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

  • ಟಿಎಂಸಿ ಮಾಜಿ ನಾಯಕ ಮುಕುಲ್ ರಾಯ್ ಬಿಜೆಪಿಗೆ ಸೇರ್ಪಡೆ

    ಟಿಎಂಸಿ ಮಾಜಿ ನಾಯಕ ಮುಕುಲ್ ರಾಯ್ ಬಿಜೆಪಿಗೆ ಸೇರ್ಪಡೆ

    ನವದೆಹಲಿ: ಕಾರ್ಯಕಾರಿ ಸಮಿತಿಗೆ ರಾಜೀನಾಮೆ ನೀಡಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಿರಿಯ ನಾಯಕ ಮುಕುಲ್ ರಾಯ್ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

    ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸಮ್ಮುಖದಲ್ಲಿ ಸೇರ್ಪಡೆಯಾಗಿ ಮಾತನಾಡಿದ ಅವರು, ಇಂದು ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ನನಗೆ ತಿಳಿದ ಮಟ್ಟಿಗೆ ಬಿಜೆಪಿ ಕೋಮುವಾದಿ ಪಕ್ಷವಲ್ಲ. ಇದೊಂದು ಜಾತ್ಯತೀತ ಪಕ್ಷವಾಗಿದ್ದು, ಮುಂದೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

    ಈ ವೇಳೆ ರವಿಶಂಕರ್ ಪ್ರಸಾದ್ ಮಾತನಾಡಿ ಮುಕುಲ್ ರಾಯ್ ಯಾವುದೇ ಷರತ್ತು ವಿಧಿಸದೇ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.

    ಮುಕುಲ್ ರಾಯ್ ಸೆಪ್ಟೆಂಬರ್ 25 ರಂದು ರಾಜೀನಾಮೆ ನೀಡಿದ್ದರು. ಪಕ್ಷಕ್ಕೆ ರಾಜೀನಾಮೆಯನ್ನು ನೀಡಿದ ಕೆಲವೇ ಘಂಟೆಗಳಲ್ಲಿ ಟಿಎಂಸಿ ನಾಯಕ ಪಾರ್ಥ ಚಟರ್ಜಿ, ರಾಯ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿರುವುದಾಗಿ ಆದೇಶ ಹೊರಡಿಸಿದ್ದರು.

    ರಾಯ್ ಅವರ ರಾಜೀನಾಮೆಗೆ ಟಿಎಂಸಿ ಪಕ್ಷ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವಿನ ಭಿನ್ನಾಭಿಪ್ರಾಯಗಳೇ ಕಾರಣ ಎಂದು ತಿಳಿದು ಬಂದಿದೆ. ರಾಯ್ ಅವರು ಹಲವು ದಿನಗಳ ಮುಂಚೆಯೇ ಪಕ್ಷ ತೊರೆಯುವ ಕುರಿತು ಸೂಚನೆಯನ್ನು ನೀಡಿದ್ದರು. ಟಿಎಂಸಿ ರಾಜ್ಯಸಭಾ ನಾಯಕ ಸ್ಥಾನದಿಂದ ಇವರನ್ನು ಕೆಳಗಿಳಿಸಿತ್ತು. ಅಲ್ಲದೆ ಸಾರಿಗೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಂಸತ್ತಿನ ಸ್ಥಾಯಿ ಸಮಿತಿಯ ಮುಖ್ಯಸ್ಥ ಸ್ಥಾನದಿಂದಲೂ ತೆಗೆದು ಹಾಕಲಾಗಿತ್ತು.

    ಕಳೆದ ಕೆಲವು ದಿನಗಳ ಹಿಂದೆ ಟಿಎಂಸಿಯ ಹಿರಿಯ ನಾಯಕರೊಬ್ಬರು ಮಮತಾ ಅವರು ಪಕ್ಷದ ಹೃದಯವಾದರೆ, ರಾಯ್ ಪಕ್ಷದ ತಲೆ ಇದ್ದ ಹಾಗೆ ಎಂದು ಹೇಳಿಕೆ ನೀಡಿದ್ದರು. ಮಮತಾ ಅವರ ಆಪ್ತ ವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ರಾಯ್ ಪಕ್ಷದ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ರಾಷ್ಟ್ರಪತಿ ಚುನಾವಣೆ ವೇಳೆ ಟಿಎಂಸಿ ಅಡ್ಡಮತದಾನ ಮಾಡಿ ರಾಮನಾಥ್ ಕೋವಿಂದ್ ಬೆಂಬಲ ನೀಡಿದ್ದಕ್ಕೆ ಮಮತಾ ಬ್ಯಾನರ್ಜಿ ಅಸಮಾಧಾನಗೊಂಡಿದ್ದರು. ಈ ಚುನಾವಣೆಯ ನಂತರ ಪಕ್ಷದಲ್ಲಿ ಅಂತರಿಕ ಒಡಕು ಉಂಟಾಗಿತ್ತು.

    ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಸ್ಥಾಪನೆಯಿಂದ ಅಧಿಕಾರವನ್ನು ಪಡೆಯುವ ತನಕ ಮುಕುಂದ್ ಅವರ ಕಾರ್ಯ ಮಹತ್ವ ಪೂರ್ಣವಾದ್ದು. ಮುಕುಂದ್ ಅವರ ರಾಜೀನಾಮೆಯು ಟಿಎಂಸಿಯಲ್ಲಿ ಭಾರೀ ಬದಲವಾಣೆಗೆ ಕಾರಣವಾಗಲಿದೆ ಎನ್ನುವ ವಿಶ್ಲೇಷಣೆ ಆರಂಭವಾಗಿದೆ.