Tag: ಟಿಎಂಸಿ

  • TMC ನಾಯಕ ಬಾಬುಲ್ ಸುಪ್ರಿಯೋ, ಪತ್ನಿ, ತಂದೆಗೆ ಕೊರೊನಾ

    TMC ನಾಯಕ ಬಾಬುಲ್ ಸುಪ್ರಿಯೋ, ಪತ್ನಿ, ತಂದೆಗೆ ಕೊರೊನಾ

    ಕೋಲ್ಕತ್ತಾ: ತೃಣ ಮೂಲಕ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಮಾಜಿ ಸದಸ್ಯ ಬಾಬುಲ್ ಸುಪ್ರಿಯೊ ತಮಗೆ, ತಮ್ಮ ಪತ್ನಿ, ತಂದೆ ಮತ್ತು ಇಬ್ಬರು ಸಿಬ್ಬಂದಿ ಇಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ.

    ಭಾರತೀಯ ಹಿನ್ನೆಲೆ ಗಾಯಕ ಮತ್ತು ಟೆಲಿವಿಷನ್ ಹೋಸ್ಟ್ ಆಗಿರುವ ಬಾಬುಲ್ ಸುಪ್ರಿಯೋ ಅವರು ಈ ಕುರಿತಂತೆ ತಮ್ಮ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ನನಗೆ, ನನ್ನ ಪತ್ನಿ, ಕೆಲ ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ. ಒಂದು ಕಾಕ್‍ಟೈಲ್ ಜಬ್‍ನ ಬೆಲೆ ರೂ.61,000ದಷ್ಟು ದುಬಾರಿಯಾಗಿದೆ. ಇದನ್ನು ಗಂಭೀರವಾಗಿ ಅಸ್ವಸ್ಥರಾಗಿರುವ ಕೊರೊನಾ ಸೋಂಕಿತರಿಗೆ ನೀಡಬೇಕಾಗಿದೆ. ನನ್ನ ತಂದೆ 84 ವರ್ಷದವರಾಗಿದ್ದು, ಅವರಿಗೆ ಕಾಕ್‍ಟೈಲ್ ಜಬ್‍ನ ಅಗತ್ಯವಿತ್ತು. ಹಾಗಾಗಿ ಅದನ್ನು ನಾನು ಕೂಡಲೇ ಖರೀದಿಸಿದೆ. ಆದರೆ ಬಡವರು ಖರೀದಿಸಲು ಹೇಗೆ ಸಾಧ್ಯ ಎಂದು ಟ್ವೀಟ್ ಮಾಡಿದ್ದಾರೆ.  ಇದನ್ನೂ ಓದಿ: ಬಿಜೆಪಿ ನಾಯಕ ಮನೋಜ್ ತಿವಾರಿಗೆ ಕೊರೊನಾ ಪಾಸಿಟಿವ್

    ಅಂದರೆ ಗಂಭೀರವಾಗಿ ಅಸ್ವಸ್ಥರಾಗಿರುವ ಕೊರೊನಾ ಸೋಂಕಿತರಿಗೆ ನೀಡಬೇಕಾದ ಕಾಕ್‍ಟೈಲ್ ಲಸಿಕೆಯ ಬೆಲೆ 61,000 ರೂ. ಆಗಿದ್ದು, ನನ್ನ 84 ವರ್ಷದ ತಂದೆಗೆ ಅಗತ್ಯ ಇರುವುದರಿಂದ ಅದನ್ನು ತಕ್ಷಣ ಖರೀದಿಸಿದೆ. ಆದರೆ ಈ ಲಸಿಕೆಯನ್ನು ಆರ್ಥಿಕವಾಗಿ ದುರ್ಬಲಗೊಂಡಿರುವ ಜನರಿಗೆ ಖರೀದಿಸಲು ಹೇಗೆ ಸಾಧ್ಯವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.  ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ

    ಮತ್ತೊಂದೆಡೆ ಇಂದು  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಜೆಪಿ ನಾಯಕ ಮನೋಜ್ ತಿವಾರಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

  • 2024ರ ಚುನಾವಣೆಯಲ್ಲಿ ಬಿಜೆಪಿಗೆ ಸೋಲು: ಮಮತಾ ಬ್ಯಾನರ್ಜಿ

    2024ರ ಚುನಾವಣೆಯಲ್ಲಿ ಬಿಜೆಪಿಗೆ ಸೋಲು: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದ ಸೋಲನ್ನು 2024ರ ಲೋಕಸಭಾ ಚುನಾವಣೆಯಲ್ಲೂ ಕಾಣಲಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ತಿಂಗಳ 19ರಂದು ನಡೆಯುವ ಕೋಲ್ಕತ್ತಾದ ಮುನ್ಸಿಪಲ್ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಂಗಾಳವು ಕೋಮು ಸೌಹಾರ್ದ ರಾಜ್ಯವಾಗಿದೆ. ಆದರೆ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕೋಮು ಸೌಹಾರ್ದತೆಯನ್ನು ಕೆಡಿಸಲು ನಡೆಸಿದಂತಹ ಪ್ರಚಾರವನ್ನು ಎಲ್ಲರೂ ನೋಡಿದ್ದೇವೆ ಎಂದು ಹರಿಹಾಯ್ದರು.

    ಬಿಜೆಪಿಯವರು ಏನೇ ಮಾಡಿದರೂ ರಾಜ್ಯದ ಜನರು ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ಇಡೀ ದೇಶವೂ ಈ ರೀತಿಯಾಗೆ ಚಿಂತಿಸಿ ಬಿಜೆಪಿಯನ್ನು ಸೋಲಿಸುತ್ತದೆ ಎಂದರು. ಇದನ್ನೂ ಓದಿ: ಖಾಸಗಿ ಜೆಟ್ ಪತನಗೊಂಡು 9 ಮಂದಿ ದುರ್ಮರಣ

    ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಉದ್ಯಮವನ್ನು ಹೆಚ್ಚಿಸಿ ನಿರುದ್ಯೋಗಿಗಳಿಗೆ ಸಹಾಯ ಮಾಡುವುದು ತೃಣಮೂಲ ಕಾಂಗ್ರೆಸ್ಸಿನ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕೆಲಸವನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ನವದೆಹಲಿ-ಕರ್ನಾಟಕ ಎಕ್ಸ್‌ಪ್ರೆಸ್‍ನಲ್ಲಿ ಬಾಂಬ್ – ಹುಸಿ ಕರೆಗೆ ಪ್ರಯಾಣಿಕರು ಕಂಗಾಲು

    ತೃಣ ಮೂಲ ಕಾಂಗ್ರೆಸ್ ಪಕ್ಷವು ರಾಷ್ಟ್ರಮಟ್ಟದಲ್ಲಿ ವಿಸ್ತರಿಸುತ್ತಿದೆ. ತ್ರಿಪುರಾದ ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಲು ಇತ್ತೀಚೆಗೆ ಅಲ್ಲಿನ ಮುನ್ಸಿಪಲ್ ಚುನಾವಣೆಯಲ್ಲಿ ಟಿಎಂಸಿ ಬಿಜೆಪಿಯ ವಿರುದ್ಧ ಸ್ಪರ್ಧೆ ನಡೆಸಿತ್ತು. ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿ ವಿರುದ್ಧ ಗೆಲುವು ಸಾಧಿಸಲು ಟಿಎಂಸಿ ಸಜ್ಜಾಗುತ್ತಿದೆ.

  • ತ್ರಿಪುರ ಸ್ಥಳೀಯ ಸಂಸ್ಥೆಗಳ ಚುನಾವಣೆ: 334ಕ್ಕೆ 329 ಸ್ಥಾನಗಳಲ್ಲಿ ಬಿಜೆಪಿ ಗೆಲುವು, ಎಎಂಸಿಯಲ್ಲಿ ʼಕಮಲʼ ಕ್ಲೀನ್‌ಸ್ವೀಪ್‌

    ತ್ರಿಪುರ ಸ್ಥಳೀಯ ಸಂಸ್ಥೆಗಳ ಚುನಾವಣೆ: 334ಕ್ಕೆ 329 ಸ್ಥಾನಗಳಲ್ಲಿ ಬಿಜೆಪಿ ಗೆಲುವು, ಎಎಂಸಿಯಲ್ಲಿ ʼಕಮಲʼ ಕ್ಲೀನ್‌ಸ್ವೀಪ್‌

    ಅಗರ್ತಲಾ: ತ್ರಿಪುರಾದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಆಡಳಿತಾರೂಢ ಬಿಜೆಪಿ ಜಯಭೇರಿ ಸಾಧಿಸಿದೆ. ಅಗರ್ತಲಾ ನಗರ ಪಾಲಿಕೆ (ಎಎಂಸಿ) 51 ವಾರ್ಡ್‌ಗಳಲ್ಲೂ ಗೆಲುವು ಸಾಧಿಸುವ ಮೂಲಕ ಬಿಜೆಪಿ ಕ್ಲೀನ್‌ಸ್ವೀಪ್‌ ಮಾಡಿದೆ.

    ಎಎಂಸಿ 51 ವಾರ್ಡ್‌ಗಳಲ್ಲೂ ಬಿಜೆಪಿಯ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದಾರೆ. ವಾರ್ಡ್‌ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹಾಗೂ ಸಿಪಿಐ(ಎಂ) ಪಕ್ಷಗಳು ಖಾತೆ ತೆರೆಯುವಲ್ಲಿಯೂ ವಿಫಲವಾಗಿವೆ. ಇದನ್ನೂ ಓದಿ: 140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು: BSY ಸಂಕಲ್ಪ

    15 ಸದಸ್ಯ ಬಲದ ಖೋವೈ ಮುನ್ಸಿಪಲ್‌ ಕೌನ್ಸಿಲ್‌, 17 ಸದಸ್ಯ ಬಲದ ಬೆಲೋನಿಯಾ ಮುನ್ಸಿಪಲ್‌ ಕೌನ್ಸಿಲ್‌, 15 ಸದಸ್ಯ ಬಲದ ಕುಮಾರ್‌ಘಾಟ್‌ ಮುನ್ಸಿಪಲ್‌ ಕೌನ್ಸಿಲ್‌ ಮತ್ತು 9 ಸದಸ್ಯ ಬಲದ ಸಬ್‌ರೂಮ್‌ ನಗರ್‌ ಪಂಚಾಯತ್‌ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ರಾಜ್ಯ ಚುನಾವಣೆ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

    ಧರ್ಮನಗರ ಮುನ್ಸಿಪಲ್‌ ಕೌನ್ಸಿಲ್‌ನ 25 ವಾರ್ಡ್‌ ಹಾಗೂ 15 ಸದಸ್ಯ ಬಲದ ತೆಲಿಯಾಮುರ ಮುನ್ಸಿಪಲ್‌ ಕೌನ್ಸಿಲ್‌ ಮತ್ತು 13 ಸದಸ್ಯ ಬಲದ ಅಮರ್‌ಪುರ್‌ ನಗರ ಪಂಚಾಯಿತಿಯ ಎಲ್ಲಾ ಸ್ಥಾನಗಳನ್ನೂ ಗೆಲ್ಲುವ ಮೂಲಕ ಬಿಜೆಪಿ ಕ್ಲೀನ್‌ಸ್ವೀಪ್‌ ಸಾಧಿಸಿದೆ.

    ಸೊನಾಮುರ ನಗರ ಪಂಚಾಯಿತಿ ಮತ್ತು ಮೆಲಘರ್‌ ನಗರ ಪಂಚಾಯಿತಿ 13 ಸ್ಥಾನಗಳನ್ನೂ ಬಿಜೆಪಿ ತನ್ನದಾಗಿಸಿಕೊಂಡಿದೆ. ಜಿರಾನಿಯಾ ನಗರ ಪಂಚಾಯಿತಿಯ 11 ಸ್ಥಾನಗಳಲ್ಲೂ ಬಿಜೆಪಿ ಜಯದ ನಗೆಬೀರಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ಬೊಮ್ಮಾಯಿ ನಾಮಪತ್ರ ವಾಪಸ್ ಪಡೆಯುವಂತೆ ಒತ್ತಡ ಹಾಕಿದ್ದಾರೆ: ಮಲ್ಲಿಕಾರ್ಜುನ ಲೋಣಿ

    ಅಂಬಸ್ಸ ಮುನ್ಸಿಪಲ್‌ ಕೌನ್ಸಿಲ್‌ನಲ್ಲಿ 12 ಸೀಟ್‌ಗಳನ್ನು ಬಿಜೆಪಿ ಗೆದ್ದಿದೆ. ಇಲ್ಲಿ ಮಾತ್ರ ಟಿಎಂಸಿ ಮತ್ತು ಸಿಪಿಐ(ಎಂ) ತಲಾ ಒಂದು ಸ್ಥಾನ ಗೆಲ್ಲಲಷ್ಟೇ ಶಕ್ತವಾಗಿವೆ. ಇಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದಾರೆ. ಕೈಲಾಶಹರ್‌ ಮುನ್ಸಿಪಲ್‌ ಕೌನ್ಸಿಲ್‌ನಲ್ಲಿ ಬಿಜೆಪಿ 16 ಸ್ಥಾನಗಳನ್ನು ಗೆದ್ದಿದೆ. ಸಿಪಿಐ(ಎಂ) ಒಂದು ಸ್ಥಾನ ಗೆದ್ದಿದೆ. ಪಣಿಸಗರ್‌ ನಗರ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಸಿಪಿಐ(ಎಂ) ಒಂದು ಸ್ಥಾನವನ್ನು ಮಾತ್ರ ತನ್ನದಾಗಿಸಿಕೊಂಡಿದೆ. ಒಟ್ಟು 334 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 329, ಸಿಪಿಐ(ಎಂ) 3, ಟಿಎಂಸಿ 1, ತಿಪ್ರ 1 ಸ್ಥಾನಗಳಲ್ಲಿ ಜಯ ಸಾಧಿಸಿವೆ.

    51 ವಾರ್ಡ್‌ಗಳು, 13 ಮುನ್ಸಿಪಲ್‌ ಕೌನ್ಸಿಲ್‌ಗಳು ಮತ್ತು 6 ನಗರ ಪಂಚಾಯತ್‌ಗಳನ್ನು ಹೊಂದಿರುವ ಎಎಂಸಿ ಸೇರಿದಂತೆ ತ್ರಿಪುರಾದ ಸ್ಥಳೀಯ ಸಂಸ್ಥೆಗಳ ಒಟ್ಟು 334 ಸ್ಥಾನಗಳಿಗೆ ಮತದಾನ ನಡೆದಿತ್ತು. ಈ ಎಲ್ಲಾ ಸ್ಥಾನಗಳಲ್ಲೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಒಟ್ಟು ಸ್ಥಾನಗಳ ಪೈಕಿ 112 ಸ್ಥಾನಗಳಲ್ಲಿ ಬಿಜೆಪಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರು. 2018ರಲ್ಲಿ ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿತ್ತು.

  • ಪಶ್ಚಿಮ ಬಂಗಾಳ ಸಚಿವ ಸುಬ್ರತಾ ಮುಖರ್ಜಿ ನಿಧನ

    ಪಶ್ಚಿಮ ಬಂಗಾಳ ಸಚಿವ ಸುಬ್ರತಾ ಮುಖರ್ಜಿ ನಿಧನ

    ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ನಾಯಕ ಹಾಗೂ ಪಶ್ಚಿಮ ಬಂಗಾಳ ಸಚಿವ ಸುಬ್ರತಾ ಮುಖರ್ಜಿ ನಿಧನರಾಗಿದ್ದಾರೆ.

    ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮುಖರ್ಜಿ ಅವರು ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಹಾರ್‌: ನಕಲಿ ಮದ್ಯ ಸೇವಿಸಿ 24 ಮಂದಿ ಸಾವು!

    75 ವರ್ಷ ವಯಸ್ಸಿನ ಸುಬ್ರತಾ ಮುಖರ್ಜಿ ಅವರು ರಾಜ್ಯ ಪಂಚಾಯತ್‌ ಸಚಿವರಾಗಿದ್ದರು. ಇವರು ಪತ್ನಿಯನ್ನು ಅಗಲಿದ್ದಾರೆ.

    ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು. ಗುರುವಾರ ರಾತ್ರಿ ಹೃದಯ ಸ್ತಂಭನವಾಗಿ ಮೃತಪಟ್ಟಿದ್ದಾರೆ ಎಂದು ಸಚಿವ ಫಿರಾದ್‌ ಹಕೀಮ್‌ ತಿಳಿಸಿದ್ದಾರೆ.

    “ಅವರು ನಮ್ಮೊಂದಿಗಿಲ್ಲ ಎಂದು ನನಗೆ ಇನ್ನೂ ನಂಬಲಾಗುತ್ತಿಲ್ಲ. ಪಕ್ಷಕ್ಕಾಗಿ ಸಮರ್ಪಣ ಮನೋಭಾವದಿಂದ ಕೆಲಸ ಮಾಡಿದವರು ಮುಖರ್ಜಿ. ವೈಯಕ್ತಿಕವಾಗಿಯೂ ನನಗೆ ನಷ್ಟವಾಗಿದೆ” ಎಂದು ಸಿಎಂ ಮಮತಾ ಬ್ಯಾನರ್ಜಿ ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೇದಾರನಾಥದಲ್ಲಿ ಶಂಕರಾಚಾರ್ಯ ಪ್ರತಿಮೆ ಉದ್ಘಾಟಿಸಿದ ಮೋದಿ

    ಸುಬ್ರತಾ ಮುಖರ್ಜಿ ಅವರ ಪಾರ್ಥಿವ ಶರೀರವನ್ನು ಸರ್ಕಾರದ ರವೀಂದ್ರ ಸದನ ಸಭಾಂಗಣದಲ್ಲಿ ಇರಿಸಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಉಸಿರಾಟದ ಸಮಸ್ಯೆಯಿಂದ ಮುಖರ್ಜಿ ಅವರು ಅ.24ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯದ ರಕ್ತನಾಳ ಕಟ್ಟಿಕೊಂಡಿದ್ದರಿಂದ ಎರಡು ಸ್ಟಂಟ್‌ಗಳನ್ನು ಅಳವಡಿಸಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು.

  • ಭವಾನಿಪುರ ಉಪಚುನಾವಣೆ: ಮಮತಾ ಬ್ಯಾನರ್ಜಿಗೆ ಮುನ್ನಡೆ

    ಭವಾನಿಪುರ ಉಪಚುನಾವಣೆ: ಮಮತಾ ಬ್ಯಾನರ್ಜಿಗೆ ಮುನ್ನಡೆ

    ಕೊಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯ ಮತ ಎಣಿಕೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಆರಂಭವಾಗಿದ್ದು, ಸಿಎಂ ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ್ದಾರೆ.

    ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿ ಸೋತಿದ್ದ ಸಿಎಂ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೊಲ್ಕತ್ತಾದ ಭವಾನಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ಪ್ರಿಯಾಂಕಾ ತಿಬ್ರೇವಾಲ್ ಮತ್ತು ಸಿಪಿಐ(ಎಂ)ನ ಶ್ರೀಜಿಬ್ ಬಿಸ್ವಾಸ್ ವಿರುದ್ಧ ಸ್ಪರ್ಧಿಸಿದ್ದಾರೆ. ಇದನ್ನೂ ಓದಿ:  ತುಕುಡೆ ಗ್ಯಾಂಗಿನ ನಾಯಕರ ಸಮಾಧಿ ಮೇಲೆ ಬಿಜೆಪಿ, ಸಂಘ ಬಲವಾಗಿ ಬೆಳೆದಿದೆ: ಸಿ.ಟಿ.ರವಿ

    ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿಯ ವಿರುದ್ಧ ಮಮತಾ ಬ್ಯಾನರ್ಜಿ ಸೋತಿದ್ದರು. ಆದರೆ ಮಮತಾ ಬ್ಯಾನರ್ಜಿ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಆರು ತಿಂಗಳೊಳಗೆ ಚುನಾಯಿತರಾಗಬೇಕು. ಹೀಗಾಗಿ ಮಮತಾ ಬ್ಯಾನರ್ಜಿ ಅವರು ಕೊಲ್ಕತ್ತಾದ ಭವಾನಿಪುರದಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

     

  • ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಇಡಿ ನೋಟಿಸ್

    ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಇಡಿ ನೋಟಿಸ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಅಭಿಷೇಕ್ ಬ್ಯಾನರ್ಜಿ ಪತ್ನಿ ರೂಜಿರಾ ಅವರಿಗೂ ನೋಟಿಸ್ ನೀಡಲಾಗಿದೆ.

    ಸೆಪ್ಟೆಂಬರ್ 3ರಂದು ಬ್ಯಾಂಕ್ ದಾಖಲೆಗಳ ಜೊತೆ ವಿಚಾರಣೆಗೆ ಹಾಜರಾಗುವಂತೆ ಅಭಿಷೇಕ್ ಬ್ಯಾನರ್ಜಿ ಅವರಿಗೆ ಇಡಿ ಸೂಚಿಸಿದೆ. ಅದೇ ರೀತಿ ಪತ್ನಿ ರೂಜಿರಾ ಅವರಿಗೆ ಸೆಪ್ಟೆಂಬರ್ 1ರಂದು ವಿಚಾರಣೆಗೆ ದಿನಾಂಕ ನೀಡಿದೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಗಳ ಖಾತೆಗೆ ಇಬ್ಬರು ತಮ್ಮ ಕಂಪನಿಯಿಂದ ಹಣ ವರ್ಗಾವಣೆ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆ ಕೇಂದ್ರಿಯ ತನಿಖಾ ಸಂಸ್ಥೆ ಎಫ್‍ಐಆರ್ ದಾಖಲಿಸಿತ್ತು. ನಂತರ ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿ ಸಹ ಪ್ರಕರಣ ದಾಖಲಿಸಿತ್ತು. ಇದನ್ನೂ ಓದಿ: ದೇಶದ ಆಸ್ತಿ ಬಿಜೆಪಿ, ಮೋದಿಯ ಸ್ವಂತದ್ದಲ್ಲ: ಮಮತಾ ಬ್ಯಾನರ್ಜಿ

    ಹಣ ವರ್ಗಾವಣೆ ಬದಲಾಗಿ ಕಂಪನಿ ಜೊತೆ ನಕಲಿ ಒಪ್ಪಂದಗಳನ್ನ ಮಾಡಿಕೊಂಡಿರುವ ಆರೋಪಗಳು ಅಭಿಷೇಕ್ ಬ್ಯಾನರ್ಜಿ ಅವರ ಮೇಲಿದೆ. ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಜೊತೆಗೆ ತೃಣಮೂಲ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಹ ಆಗಿದ್ದಾರೆ. ಇದನ್ನೂ ಓದಿ: ಮುಂದುವರಿದ ಸಂಘರ್ಷ – ಸಿಎಂ ಮಮತಾ ಬ್ಯಾನರ್ಜಿ 9 ಪ್ರಶ್ನೆಗಳಿಗೆ ಕೇಂದ್ರದ ಉತ್ತರ

  • ರಾಷ್ಟ್ರಧ್ವಜದ ಮೇಲೆ ಬಿಜೆಪಿ ಬಾವುಟ – ಕಾಂಗ್ರೆಸ್, ಟಿಎಂಸಿ ಪ್ರಶ್ನೆ

    ರಾಷ್ಟ್ರಧ್ವಜದ ಮೇಲೆ ಬಿಜೆಪಿ ಬಾವುಟ – ಕಾಂಗ್ರೆಸ್, ಟಿಎಂಸಿ ಪ್ರಶ್ನೆ

    – ಕಲ್ಯಾಣ್ ಸಿಂಗ್ ಪಾರ್ಥಿವ ಶರೀರದ ಮೇಲೆ ಹಾಕಲಾಗಿದ್ದ ಧ್ವಜ

    ಲಕ್ನೋ: ರಾಷ್ಟ್ರಧ್ವಜದ ಮೇಲೆ ಬಿಜೆಪಿ ಬಾವುಟ ಹಾಕಿರೋದನ್ನು ಕಾಂಗ್ರೆಸ್ ಮತ್ತು ಟಿಎಂಸಿ ಖಂಡಿಸಿದ್ದು, ಕಮಲ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದರು. ಭಾನುವಾರ ಲಕ್ನೋ ನಗರದ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರದ ಮೇಲೆ ಗೌರವ ಪೂರ್ವಕಗಾಗಿ ರಾಷ್ಟ್ರಧ್ವಜ ಹಾಕಲಾಗಿತ್ತು. ಇದರ ಮೇಲೆಯೇ ಬಿಜೆಪಿ ಧ್ವಜ ಹಾಕಿರೋದು ವಿವಾದಕಕ್ಕೆ ಕಾರಣವಾಗಿದೆ. ರಾಷ್ಟ್ರಧ್ವಜಕ್ಕೆ ಬಿಜೆಪಿ ಅವಮಾನಿಸಿದೆ. ಮಾತೃಭೂಮಿಗೆ ಗೌರವ ತೋರುವ ಹೊಸ ಆಯಾಮ ಎಂದು ಟಿಎಂಸಿ ಖಾರವಾಗಿ ಟೀಕಿಸಿದೆ.

    ನಕಲಿ ದೇಶಭಕ್ತಿ ಅನಾವರಣ ಎಂದ ಕಾಂಗ್ರೆಸ್: ಬಿಜೆಪಿಗರು ಯಾವ ಪರಿಸ್ಥಿತಿಯಲ್ಲೂ ಪಕ್ಷದ ಹಾಗೂ ಮೋದಿಯ ‘ಬ್ರಾಂಡಿಂಗ್’ ಮಾಡುವ ಅವಕಾಶ ಬಿಡರು, ಶವವಾದರೂ ಸರಿಯೇ! ಕಲ್ಯಾಣ್ ಸಿಂಗ್‍ರ ಮೃತದೇಹಕ್ಕೆ ಹೊದಿಸಿದ್ದ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಧ್ವಜ ಹಾಕುವ ಮೂಲಕ ರಾಷ್ಟ್ರಧ್ವಜದ ಮೇಲಿರುವ ತಮ್ಮ ಸುಪ್ತದ್ವೇಷ ಹೊರಹಾಕಿ ಜೆ.ಪಿ.ನಡ್ಡಾ ಅವಮಾನಿಸಿದ್ದಾರೆ. ಬಿಜೆಪಿಯ ನಕಲಿ ದೇಶಭಕ್ತಿ ಅನಾವರಣಗೊಂಡಿದೆ ಎಂದು ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

    ಭಾರತದ ತ್ರಿವರ್ಣ ಧ್ವಜದ ಮೇಲೆ ರಾಜಕೀಯ ಪಕ್ಷವೊಂದರ ಬಾವುಟ ಇರಿಸೋದು ಸರಿಯೇ? ಈ ಫೋಟೋ ನೋಡಿದ ಮೇಲೆ ಯಾವುದೋ ಒಂದು ಪಕ್ಷದ ಧ್ವಜ ರಾಷ್ಟ್ರ ಧ್ವಜಕ್ಕಿಂತ ದೊಡ್ಡದು ಆಯ್ತಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ ಎಂದು ಯುಥ್ ಕಾಂಗ್ರೆಸ್ ಅಧಕ್ಷ ಬಿ.ವಿ.ಶ್ರೀನಿವಾಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕೋವಿಡ್ ಕಾಲಘಟ್ಟದಲ್ಲಿ ಹೊಸ ಮನ್ವಂತರ – ಇಂದಿನಿಂದ ರಾಜ್ಯದಲ್ಲಿ ಶಾಲೆ-ಕಾಲೇಜು ಓಪನ್

  • ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ – ಸಿಬಿಐ ತನಿಖೆಗೆ ಆದೇಶ

    ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ – ಸಿಬಿಐ ತನಿಖೆಗೆ ಆದೇಶ

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರ ನಡೆದ ಹಿಂಸೆಯ ಕುರಿತು ಸಿಬಿಐ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ ನೀಡಿದೆ.

    ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳ ತನಿಖೆ ಸಿಬಿಐ ನಡೆಸಲಿದ್ದು, ಇನ್ನುಳಿದ ಪ್ರಕರಣಗಳ ತನಿಖೆಯನ್ನು ಎಸ್‍ಐಟಿ ನಡೆಸಬೇಕು. ಇದರ ಜೊತೆಗೆ ಪ್ರಕರಣದ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕೆಂದು ಆದೇಶಿಸಿದೆ.

    ರಾಜ್ಯ ಸರ್ಕಾರಕ್ಕೆ ‘ಹೈ’ ಚಾಟಿ:
    ನ್ಯಾಯಾಲಯ ಸಿಬಿಐ ಮತ್ತು ಎಸ್‍ಐಟಿ ಆರು ವಾರಗಳಲ್ಲಿ ತನಿಖೆಯ ವರದಿ ನೀಡುವಂತೆ ಹೇಳಿದೆ. ಈ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಲು ವಿಫಲವಾಗಿದ್ದು, ಚುನಾವಣಾ ಆಯೋಗ ಉತ್ತಮವಾಗಿ ಕೆಲಸ ಮಾಡಬಹುದಿತ್ತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಕೋಲ್ಕತ್ತಾದ ಪೊಲೀಸ್ ಕಮೀಷನರ್ ಸೋಮೆನ್ ಮಿತ್ರಾ ತನಿಖೆಯ ಭಾಗವಾಗಲಿದ್ದಾರೆ.

    ಪೊಲೀಸರು ಹೇಳಿದ್ದು 17 ಸಾವು:
    ರಾಜಕೀಯ ಹಿಂಸಾಚಾರದಲ್ಲಿ ಒಟ್ಟು 17 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದರು. ಆದ್ರೆ 17ಕ್ಕಿಂತ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಇದಾದ ಬಳಿಕ ಹಿಂಸಾಚಾರದ ಕುರಿತು ಸಮೀಕ್ಷೆ ನಡೆಸಿ ಬಿಜೆಪಿ ವರದಿ ಸಿದ್ಧಪಡಿಸಿತ್ತು. ಈ ವರದಿಯಲ್ಲಿ ಹಿಂಸೆ, ಕೊಲೆ, ದರೋಡೆ ಮತ್ತು ಬೆಂಕಿ ಹಾಕಿದ ಒಟ್ಟು 273 ಘಟನೆಗಳು ನಡೆದಿವೆ ಎಂದ ಆರೋಪಿಸಿತ್ತು. ಇದನ್ನೂ ಓದಿ: ಮೂರನೇ ಬಾರಿ ಬಂಗಾಳದ ಗದ್ದುಗೆ ಏರಿದ ಮಮತಾ ಬ್ಯಾನರ್ಜಿ

    ಏಪ್ರಿಲ್-ಮೇನಲ್ಲಿ ಚುನಾವಣೆ ನಡೆದ ಬಳಿಕ ಅಂದ್ರೆ ಫಲಿತಾಂಶದ ದಿನ ಕೋಲ್ಕತ್ತಾದ ಬಿಜೆಪಿ ಕಚೇರಿಗಳ ಮೇಲೆ ದಾಳಿ ನಡೆಸಿ ಬೆಂಕಿ ಹಾಕಲಾಗಿತ್ತು. ಈ ಘಟನೆ ನಡೆದ ಮರುದಿನವೇ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ನಡೆದ ಗಲಾಟೆಯಲ್ಲಿ ಸಾವು-ನೋವುಗಳು ಸಂಭವಿಸಿರುವ ಬಗ್ಗೆ ವರದಿಯಾಗಿತ್ತು. ತಮ್ಮ ಕಾರ್ಯಕರ್ತರನ್ನು ಗುರಿಯಾಗಿಸಿ ದಾಳಿ ನಡೆದಿದೆ ಎಂದು ಆರೋಪಿಸಿದ್ದ ವಿಪಕ್ಷ, ಗೃಹ ಸಚಿವಾಲಯದಿಂದ ಪ್ರಕರಣದ ವರದಿಯನ್ನು ಕೇಳಿತ್ತು. ಇದನ್ನೂ ಓದಿ:  ಪಶ್ಚಿಮ ಬಂಗಾಳದಲ್ಲಿ ಮತ್ತಷ್ಟು ಹಿಂಸಾಚಾರ – ಕೇಂದ್ರ ಸಚಿವರ ಕಾರಿನ ಗಾಜು ಪುಡಿಪುಡಿ

    NHRC ಹೇಳಿದ್ದೇನು?:
    ಜುಲೈ 13ರಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೋಲ್ಕತ್ತಾ ಹೈಕೋರ್ಟಿಗೆ ತನ್ನ ವರದಿಯನ್ನು ಸಲ್ಲಿಸಿತ್ತು. ಬಂಗಾಳದಲ್ಲಿ ಕಾನೂನುಗಳ ಪಾಲನೆ ಆಗುತ್ತಿಲ್ಲ. ಆದ್ರೆ ನಾಯಕ ಕಾನೂನು ಚಲಾಯಿಸುತ್ತಾನೆ. ಬಂಗಾಳದಲ್ಲಿ ನಡೆದ ಹಿಂಸೆಯ ಪ್ರಕರಣಗಳ ತನಿಖೆ ರಾಜ್ಯದ ಹೊರಗಿನವರಿಂದ ನಡೆಯಬೇಕಿದೆ ಎಂದು ಹೇಳಿತ್ತು. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಕಚ್ಚಾ ಬಾಂಬ್, ಗುಂಡಿನ ದಾಳಿಗೆ ಇಬ್ಬರ ಸಾವು

    ಮಾನವ ಹಕ್ಕುಗಳ ಆಯೋಗ ವರದಿಯಲ್ಲಿನ ಪ್ರಮುಖ ಅಂಶಗಳು:
    1. ಚುನಾವಣೆ ನಂತರ ಬಂಗಾಳದಲ್ಲಿ ನಡೆದ ಹಿಂಸಾಚಾರದ ಕುರಿತು ಸಿಬಿಐ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಕೊಲೆ, ಅತ್ಯಾಚಾರದಂತೆ ಗಂಭೀರ ಪ್ರಮಾಣದ ಕೃತ್ಯಗಳ ಕುರಿತ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ.
    2. ಬಂಗಾಳದ ಬಡೇ ಪೈಮಾನ್ ನಲ್ಲಿ ನಡೆದ ಹಿಂಸೆ ಕಾಣುತ್ತಿದೆ. ಆದ್ರೆ ರಾಜ್ಯ ಸರ್ಕಾರ ಸಂತ್ರಸ್ತರ ಬಗ್ಗೆ ನಿರ್ಲಕ್ಷ್ಯ ಹೊಂದಿದೆ.
    3. ಅಧಿಕಾರಕ್ಕೆ ಬಂದ ಪಕ್ಷದ ಬೆಂಬಲದಿಂದಲೇ ಈ ಕೃತ್ಯಗಳು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಚುನಾವಣೆಯಲ್ಲಿ ಬೇರೆ ಪಕ್ಷ ಬೆಂಬಲಿಸಿದವರ ಮೇಲೆಯೇ ದೌರ್ಜನ್ಯಗಳು ನಡೆದಿವೆ.
    4. ರಾಜ್ಯ ಸರ್ಕಾರ ಕೆಲ ಇಲಾಖೆಗಳು ಮತ್ತು ಅಧಿಕಾರಿಗಳು ಹಿಂಸಾಚಾರಕ್ಕೆ ಮೂಕ ಪ್ರೇಕ್ಷಕರಾಗಿದ್ದರು. ಇನ್ನೂ ಕೆಲ ಅಧಿಕಾರಿಗಳೇ ಈ ಹಿಂಸಾಚಾರದಲ್ಲಿ ಭಾಗಿಯಾಗಿರುವ ಅನುಮಾನಗಳು ವ್ಯಕ್ತವಾಗಿವೆ.

  • ಮುಂದೊಂದು ದಿನ ನರೇಂದ್ರ ಮೋದಿ ಸ್ಟೇಡಿಯಂಗೆ ಅಮಿತಾ ಶಾ ಪುತ್ರನ ಹೆಸರಿಡಬಹುದು: ಟಿಎಂಸಿ ಸಂಸದ

    ಮುಂದೊಂದು ದಿನ ನರೇಂದ್ರ ಮೋದಿ ಸ್ಟೇಡಿಯಂಗೆ ಅಮಿತಾ ಶಾ ಪುತ್ರನ ಹೆಸರಿಡಬಹುದು: ಟಿಎಂಸಿ ಸಂಸದ

    ನವದೆಹಲಿ: ಮುಂದೊಂದು ದಿನ ನರೇಂದ್ರ ಮೋದಿ ಸ್ಟೇಡಿಯಂಗೆ ಅಮಿತ್ ಶಾ ಅವರು ತಮ್ಮ ಪುತ್ರನ ಹೆಸರಿಡಬಹುದು ಎಂದು ಟಿಎಂಸಿ ಸಂಸದ ಮದನ್ ಮಿತ್ರ ವ್ಯಂಗ್ಯವಾಡಿದ್ದಾರೆ.

    ವಿಷಯಗಳ ವಿಷಯಾಂತರ ಮಾಡೋದು ಅವರ (ಬಿಜೆಪಿ) ಸಂಸ್ಕೃತಿ. ಇಂದು ಪ್ರಧಾನಿ ಮೋದಿ ಅವರು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಬದಲಿಸಿದ್ದಾರೆ. ಬಹುಶಃ ಮುಂದೊಂದು ದಿನ ಅಮಿತ್ ಶಾ, ನರೇಂದ್ರ ಮೋದಿ ಸ್ಟೇಡಿಯಂ ಹೆಸರು ತೆಗೆದು ಪುತ್ರ ಜಯ್ ಶಾ ಹೆಸರಿಡುತ್ತಾರೆ ಅನ್ನಿಸುತ್ತೆ ಎಂದು ಟೀಕಿಸಿದ್ದಾರೆ. ಟಿಎಂಸಿಯ ಮತ್ತೋರ್ವ ಸಂಸದ ಸುಖೇಂದ್ರ ಕೇಶವ್ ರಾಯ್, ಇದೊಂದು ಕೆಳಮಟ್ಟದ ರಾಜಕೀಯ ಎಂದು ಕಿಡಿಕಾರಿದ್ದಾರೆ.

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಕೇಂದ್ರ ಸರ್ಕಾರ ಮೇಜರ್ ಧ್ಯಾನ್ ಚಂದ್ ಎಂದು ಬದಲಿಸಿದೆ. ಕೇಂದ್ರದ ಈ ನಿರ್ಣಯ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಮೋದಿ ಸರ್ಕಾರದ ಈ ನಿರ್ಣಯವನ್ನು ಕಾಂಗ್ರೆಸ್ ಸೇರಿದಂತೆ ಹಲವು ವಿಪಕ್ಷಗಳು ಖಂಡಿಸಿವೆ.

    1991-92 ರಲ್ಲಿ ಈ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲು ಆರಂಭಿಸಿದ್ದು, ಕ್ರೀಡಾ ಸಾಧಕರಿಗೆ 25 ಲಕ್ಷ ರೂ. ನಗದು ಹಣವನ್ನು ಬಹುಮಾನವಾಗಿ ನೀಡಲಾಗುತ್ತದೆ. ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಾವಣೆ ಹಿಂದೆ ಮೋದಿ ಸೇಡಿನ ರಾಜಕಾರಣ: ಎಸ್. ಮನೋಹರ್

  • ನರ್ಸ್ ಬದಲು ತಾನೇ ಲಸಿಕೆ ಕೊಟ್ಟ ಕೌನ್ಸಿಲರ್

    ನರ್ಸ್ ಬದಲು ತಾನೇ ಲಸಿಕೆ ಕೊಟ್ಟ ಕೌನ್ಸಿಲರ್

    ಕೋಲ್ಕತ್ತಾ: ಕೌನ್ಸಿಲರ್ ಒಬ್ಬರು ತಾವೇ ಒಂದು ಮಹಿಳೆಗೆ ಕೊರೊನಾ ಲಸಿಕೆ ನೀಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

    ರಾಜ್ಯದ ಕುಲತಿ ಪ್ರದೇಶದಲ್ಲಿ ಟಿಎಂಸಿ ಕೌನ್ಸಿಲರ್ ಆಗಿರುವ ತಬಸ್ಸುಮ್ ಅರಾ ಕೊರೊನಾ ಲಸಿಕಾ ಕೇಂದ್ರಕ್ಕೆ ಬರುತ್ಥಾರೆ. ಅಲ್ಲಿ ನರ್ಸ್ ಬಳಿ ಬಂದು ಅವರ ಕೈಲಿದ್ದ ಸಿರಿಂಜ್ ಪಡೆದು, ಲಸಿಕೆ ಸ್ವೀಕರಿಸಿಲು ಕುಳಿತಿದ್ದ ಮಹಿಳೆಗೆ ತಾವೇ ಲಸಿಕೆ ಕೊಡುತ್ತಾರೆ. ಇದು ವೀಡಿಯೋದಲ್ಲಿ ಸ್ಪಷ್ಟವಾಗಿ ಚಿತ್ರೀಕರಣವಾಗಿದೆ. ಇದನ್ನೂ ಓದಿ:  ಮಹಿಳೆಯರಿಗೆ ಸೂಟ್ ಆಗುವಂತಹ 5 ಬೆಸ್ಟ್ ಬ್ರೆಸ್ಲೆಟ್‍ಗಳು

    ಬಿಜೆಪಿಯ ಅನೇಕ ನಾಯಕರು ಈ ವೀಡಿಯೋವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಟಿಎಂಸಿ ಪಕ್ಷಕ್ಕೆ ಅದರ ನಾಯಕರ ಮೇಲೆ ಹಿಡಿತವಿಲ್ಲ ಎಂದು ಪ್ರಶ್ನಿಸುತ್ತಿದೆ. ಈ ರೀತಿ ಅನುಭವವಿಲ್ಲದವರು ಲಸಿಕೆ ಕೊಟ್ಟರೆ ಅದನ್ನಿ ಸ್ವೀಕರಿಸಿದವರ ಕಥೆ ಏನಾಗಬೇಕು ಎಂದು ಕೇಳಲಾರಂಭಿಸಿದ್ದಾರೆ.

    ಆದರೆ ಈ ಆರೋಪವನ್ನು ಕೌನ್ಸಿಲರ್ ತಬಸ್ಸುಮ್ ಅರಾ ತಳ್ಳಿ ಹಾಕಿದ್ದಾರೆ. ಜನರು ಲಸಿಕೆ ಪಡೆಯುವುದಕ್ಕೆ ಹಿಂಜರಿಯುತ್ತಿದ್ದಾರೆ. ಹೀಗಾಗಿ ನಾನು ಸಿರಿಂಜ್ ಹಿಡಿದುಕೋಮಡಿದ್ದೇ ಅಷ್ಟೇ. ನಾನು ಲಸಿಕೆ ಕೊಟ್ಟಿಲ್ಲ. ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಸಿರಿಂಜ್ ಹಿಡಿದುಕೋಮಡಿದ್ದೆ. ನನ್ನದು ನರ್ಸಿಂಗ್ ಕೋರ್ಸ್ ಮುಗಿಸಿದೆ. ಇದು ಸುಳ್ಳು ಆರೋಪ ಎಂದು ಹೇಳಿದ್ದಾರೆ.

    ನಾವು ಈ ಬಗ್ಗೆ ತನಿಖೆ ನಡೆಸುತ್ತೇವೆ. ತಬಸ್ಸುಮ್ ಅರಾ ಯಾರಿಗಾದರೂ ಲಸಿಕೆ ನೀಡಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿವಿಕ್ ಆಡಳಿತಾಧಿಕಾರಿ, ಅಸನ್ಸೋಲ್ ಮುನ್ಸಿಪಲ್ ಕಾರ್ಪೊರೇಶನ್ ಅಮರನಾಥ ಚಟರ್ಜಿ ಅವರು ಹೇಳಿದ್ದಾರೆ.