Tag: ಟಿಟಿಪಿ

  • ಮಿಲಿಟರಿ ಹೊರಠಾಣೆ ಮೇಲೆ ಟಿಟಿಪಿ ದಾಳಿ – 25 ಪಾಕ್‌ ಸೈನಿಕರು ಸಾವು

    ಮಿಲಿಟರಿ ಹೊರಠಾಣೆ ಮೇಲೆ ಟಿಟಿಪಿ ದಾಳಿ – 25 ಪಾಕ್‌ ಸೈನಿಕರು ಸಾವು

    ಕಾಬೂಲ್/ಇಸ್ಲಾಮಾಬಾದ್: ದಕ್ಷಿಣ ವಜಿರಿಸ್ತಾನದಲ್ಲಿರುವ ಪಾಕಿಸ್ತಾನಿ ಮಿಲಿಟರಿ ಹೊರಠಾಣೆ ಮೇಲೆ ನಡೆದ ಭೀಕರ ದಾಳಿಯಲ್ಲಿ 25 ಪಾಕ್‌ ಸೈನಿಕರು ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ ಎಂದು ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ (TTP) ಹೇಳಿಕೊಂಡಿದೆ.

    ಸೋಮವಾರ ತಡರಾತ್ರಿ ತನ್ನ ಸೇನೆಯು ಮಿಲಿಟರಿ ಹೊರಠಾಣೆ ಮೇಲೆ ಭೀಕರ ದಾಳಿ ನಡೆಸಿದೆ. ಕಾರ್ಯಾಚರಣೆಯ ಸಮಯದಲ್ಲಿ ಪಾಕಿಸ್ತಾನಿ ಸೇನಾ ಡ್ರೋನ್‌ಗಳನ್ನು (Pakistani Army Drone) ನಾಶಪಡಿಸಿದ್ದಾಗಿ ಟಿಟಿಪಿ ಉಗ್ರರ ಗುಂಪು ಹೇಳಿಕೊಂಡಿದೆ. ದಾಳಿಯ ನಂತರ ಮಿಲಿಟರಿ ಠಾಣೆಯನ್ನ ಟಿಟಿಪಿ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

    ಅಫ್ಘಾನಿಸ್ತಾನದ ಗಡಿಯಲ್ಲಿರುವ ಬುಡಕಟ್ಟು ಪ್ರದೇಶಗಳಲ್ಲಿ ಟಿಟಿಪಿ ಆಗಾಗ್ಗೆ ಪಾಕಿಸ್ತಾನಿ ಭದ್ರತಾಪಡೆಗಳನ್ನ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಾ ಬರುತ್ತಿದೆ. ಪಹಲ್ಗಾಮ್‌ ದಾಳಿ ಬಳಿಕ ಒಂದೆಡೆ ಭಾರತ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾಗಲೂ ಟಿಟಿಪಿ ಪಾಕ್‌ನ ಸೇನಾ ಠಾಣೆಯ ಮೇಲೆ ದಾಳಿ ನಡೆಸಿ ಹತ್ತಾರು ಮಂದಿ ಸೈನಿಕರನ್ನ ಕೊಂದಿತ್ತು. ಆದ್ರೆ ಇದು ಇತ್ತೀಚಿನ ತಿಂಗಳಲ್ಲಿ ನಡೆಸಿದ ಭೀಕರ ದಾಳಿಯಲ್ಲಿ ಒಂದಾಗಿದೆ ಎಂದು ಹೇಳಲಾಗ್ತಿದೆ. ಪಾಕಿಸ್ತಾನ ಸೇನೆಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

  • ಆತ್ಮಾಹುತಿ ದಾಳಿಯಲ್ಲಿ ಪಾಕಿಸ್ತಾನದ 7 ಸೈನಿಕರ ಸಾವು – ಆಫ್ಘನ್ ಗಡಿಯ ಉತ್ತರ ವಜೀರಿಸ್ತಾನದಲ್ಲಿ ದಾಳಿ

    ಆತ್ಮಾಹುತಿ ದಾಳಿಯಲ್ಲಿ ಪಾಕಿಸ್ತಾನದ 7 ಸೈನಿಕರ ಸಾವು – ಆಫ್ಘನ್ ಗಡಿಯ ಉತ್ತರ ವಜೀರಿಸ್ತಾನದಲ್ಲಿ ದಾಳಿ

    ಇಸ್ಲಾಮಾಬಾದ್: ಅಫ್ಘಾನ್‌ ಗಡಿ ಬಳಿಯ ಉತ್ತರ ವಜೀರಿಸ್ತಾನದ ಮಿರ್‌ ಅಲಿಯಲ್ಲಿರುವ ಭದ್ರತಾ ಪಡೆಗಳ ಶಿಬಿರದ ಮೇಲೆ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 7 ಮಂದಿ ಪಾಕಿಸ್ತಾನಿ ಸೈನಿಕರು (Pakistani Soldiers) ಸಾವನ್ನಪ್ಪಿದ್ದಾರೆ.

    ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ)ಗೆ ಸಂಬಂಧಿಸಿದ ಆತ್ಮಹತ್ಯಾ ಕಾರ್ ಬಾಂಬರ್, ಮಿರ್ ಅಲಿಯಲ್ಲಿರುವ ಭದ್ರತಾ ಪಡೆಗಳ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬೃಹತ್ ಸ್ಫೋಟವು ಹತ್ತಿರದ ಮನೆಗಳಿಗೆ ಹಾನಿಯನ್ನುಂಟು ಮಾಡಿದೆ. ಇದನ್ನೂ ಓದಿ: ಕೆನಡಾದಲ್ಲಿ ನಟ ಕಪಿಲ್ ಶರ್ಮಾ ಕೆಫೆ ಮೇಲೆ 3ನೇ ಬಾರಿ ಗುಂಡಿನ ದಾಳಿ

    ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವು ದೋಹಾದಲ್ಲಿ ಶಾಂತಿ ಮಾತುಕತೆ ನಡೆಸಲು ಕೆಲವೇ ಗಂಟೆಗಳ ಮೊದಲು ಈ ದಾಳಿ ನಡೆದಿದೆ. ದಾಳಿಯ ಹೊಣೆಯನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಹೊತ್ತುಕೊಂಡಿದೆ. ಅದರ ಖಾಲಿದ್ ಬಿನ್ ವಲೀದ್ ಆತ್ಮಹತ್ಯಾ ಘಟಕ ಮತ್ತು ತೆಹ್ರೀಕ್ ತಾಲಿಬಾನ್ ಗುಲ್ಬಹಾದಾರ್ ಈ ದಾಳಿಗಳನ್ನು ನಡೆಸಿವೆ ಎಂದು ಹೇಳಿದೆ.

    ಒಂದು ವಾರದ ತೀವ್ರ ಗಡಿ ಹೋರಾಟದ ನಂತರ ಡುರಾಂಡ್ ರೇಖೆಯಲ್ಲಿ ನಡೆದ ಕದನ ವಿರಾಮದ ಸಮಯದಲ್ಲಿ ಈ ದಾಳಿ ನಡೆದಿದೆ. ಇದರಲ್ಲಿ ಎರಡೂ ಕಡೆಗಳಲ್ಲಿ ಹತ್ತಾರು ಜನರು ಸಾವನ್ನಪ್ಪಿದರು. ಅಫ್ಘಾನ್ ತಾಲಿಬಾನ್ ಕೋರಿಕೆಯ ಮೇರೆಗೆ ಕದನ ವಿರಾಮವಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ತಿಳಿಸಿದೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಸಂಘರ್ಷ – 2 ಗಂಟೆಗೂ ಅಧಿಕ ಕಾಲ ಪುಟಿನ್ ಜೊತೆ ಟ್ರಂಪ್ ಮಾತು

    ಮಿರ್ ಅಲಿಯಲ್ಲಿ ಭದ್ರತಾ ಪಡೆಗಳ ಮೇಲೆ ಖವಾರಿಜ್ ಒಬ್ಬ ಆತ್ಮಹತ್ಯಾ ದಾಳಿ ನಡೆಸಲು ಪ್ರಯತ್ನಿಸಿದ. ಒಬ್ಬ ಖರ್ಜಿ ಸ್ಫೋಟಕಗಳಿಂದ ತುಂಬಿದ ವಾಹನವನ್ನು ಭದ್ರತಾ ಶಿಬಿರದ ಗೋಡೆಗೆ ಡಿಕ್ಕಿ ಹೊಡೆದ. ನಂತರ ಇನ್ನೂ ಮೂವರು ಖವಾರಿಜ್‌ಗಳು ಆವರಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದರು. ಉತ್ತರ ವಜೀರಿಸ್ತಾನದಲ್ಲಿ ಇತ್ತೀಚಿಗೆ ನಡೆದ ಅತ್ಯಂತ ಗಂಭೀರವಾದ ಉಗ್ರಗಾಮಿ ದಾಳಿಗಳಲ್ಲಿ ಇದು ಕೂಡ ಒಂದು ಎನ್ನಲಾಗಿದೆ.

  • ಮಿಲಿಟರಿ ಹೊರಠಾಣೆ ಮೇಲೆ ಟಿಟಿಪಿ ದಾಳಿ – 20 ಪಾಕ್‌ ಸೈನಿಕರು ಸಾವು

    ಮಿಲಿಟರಿ ಹೊರಠಾಣೆ ಮೇಲೆ ಟಿಟಿಪಿ ದಾಳಿ – 20 ಪಾಕ್‌ ಸೈನಿಕರು ಸಾವು

    ಇಸ್ಲಾಮಾಬಾದ್: ತೆಹ್ರಿಕ್‌-ಎ-ತಾಲಿಬಾನ್‌ ಪಾಕಿಸ್ತಾನ್‌ (ಟಿಟಿಪಿ), ದಕ್ಷಿಣ ವಜೀರಿಸ್ತಾನದ ಮಿಲಿಟರಿ ಹೊರಠಾಣೆ ಮೇಲೆ ನಡೆಸಿದ ದಾಳಿಯಲ್ಲಿ 20 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ.

    ಗುರುವಾರ ತಡರಾತ್ರಿ ಶಕೈ ಉಪವಿಭಾಗದಲ್ಲಿರುವ ಡಂಗೇಟ್ ಹೊರಠಾಣೆಯನ್ನು ಗುರಿಯಾಗಿಸಿಕೊಂಡು ಲೇಸರ್ ರೈಫಲ್‌ಗಳು ಮತ್ತು ಭಾರೀ ಶಸ್ತ್ರಾಸ್ತ್ರಗಳನ್ನು ಬಳಸಿ ಈ ದಾಳಿ ನಡೆಸಲಾಗಿತ್ತು.

    ಪಾಕಿಸ್ತಾನಿ ಸೇನೆಯು ಹೆಚ್ಚುವರಿ ಪಡೆಗಳನ್ನು ರವಾನಿಸಿತು. ಆದರೆ ಮಾರ್ಗಮಧ್ಯೆ ಬೆಂಬಲ ನೀಡುವ ಬೆಂಗಾವಲು ಪಡೆಯ ಮೇಲೆ ಹೊಂಚುದಾಳಿ ನಡೆಸಲಾಯಿತು. ಇದು ವಿನಾಶವನ್ನು ಹೆಚ್ಚಿಸಿತು. ಶಾವಲ್‌ನಲ್ಲಿ ಪಾಕಿಸ್ತಾನಿ ಮಿಲಿಟರಿ ಕಾರ್ಯಾಚರಣೆಗೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂದು ಟಿಟಿಪಿ ಹೊಣೆಗಾರಿಕೆಯನ್ನು ಹೊತ್ತುಕೊಂಡಿತು. ಉಗ್ರಗಾಮಿಗಳು ನೈಟ್‌ ವಿಷನ್ ಗೇರ್ ಮತ್ತು ರಾಕೆಟ್ ಲಾಂಚರ್ ಸೇರಿದಂತೆ ಸುಧಾರಿತ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ತೀವ್ರಗೊಳಿಸುತ್ತಿರುವಂತೆಯೇ ಈ ಬೆಳವಣಿಗೆ ಸಂಭವಿಸಿದೆ. ಗಡಿ ರಾಜ್ಯಗಳಲ್ಲಿ ಹೆಚ್ಚಿನ ಮಿಲಿಟರಿ ಸನ್ನದ್ಧತೆಯೊಂದಿಗೆ ಭಾರತೀಯ ಪಡೆಗಳು ಹೆಚ್ಚಿನ ಜಾಗರೂಕತೆಯಿಂದ ಕೂಡಿವೆ.

  • ಭಯೋತ್ಪಾದಕರಿಗೆ ಏಕೆ ಬಾಗಿಲು ತೆರೆದರು? – ಆತ್ಮಾಹುತಿ ಬಾಂಬ್ ದಾಳಿಗೆ ನವಾಜ್ ಷರೀಫ್ ಪುತ್ರಿ ಖಂಡನೆ

    ಭಯೋತ್ಪಾದಕರಿಗೆ ಏಕೆ ಬಾಗಿಲು ತೆರೆದರು? – ಆತ್ಮಾಹುತಿ ಬಾಂಬ್ ದಾಳಿಗೆ ನವಾಜ್ ಷರೀಫ್ ಪುತ್ರಿ ಖಂಡನೆ

    ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಪೇಶಾವರದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯನ್ನು (Suicide Bomb Attack) ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿ ಮರ್ಯಮ್ ನವಾಜ್ (Maryam Nawaz) ಖಂಡಿದ್ದಾರೆ.

    ಪೇಶಾವರದ ಮಸೀದಿಯಲ್ಲಿ (Peshawar Mosque) ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಹತ್ಯೆಗೀಡಾದ 101 ಜನರ ಸಾವಿಗೆ ಮಾಜಿ ಐಎಸ್‌ಐ (ISI) ಮುಖ್ಯಸ್ಥ ಹಾಗೂ ಪೇಶಾವರ ಕಾರ್ಪ್ಸ್ ಕಮಾಂಡರ್ ಫೈಜ್ ಹಮೀದ್ ಹೊಣೆಗಾರ ಎಂದು ದೂರಿದ್ದಾರೆ. ಇದನ್ನೂ ಓದಿ: ಪಾಕ್‌ನಲ್ಲಿ ನಡೆದಿದ್ದು ಪ್ರತೀಕಾರದ ದಾಳಿ – ಸ್ಫೋಟದ ಸ್ಥಳದಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡರಿಸಿದ ತಲೆ ಪತ್ತೆ

    ಪಾಕಿಸ್ತಾನಿ ತಾಲಿಬಾನ್ ಎಂದು ಕರೆಯಲ್ಪಡುವ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (TTP) ಸಂಘಟನೆಯು ಆತ್ಮಾಹುತಿ ದಾಳಿಯ ಹೊಣೆ ಹೊತ್ತಿದೆ. ಇದು ಕಳೆದ ಆಗಸ್ಟ್‌ನಲ್ಲಿ ಅಫ್ಘಾನಿಸ್ತಾನದಲ್ಲಿ ಹತ್ಯೆಗೀಡಾದ ಟಿಟಿಪಿ ಕಮಾಂಡರ್ ಉಮರ್ ಖಾಲಿದ್ ಖುರಾಸಾನಿಯ ಪ್ರತೀಕಾರದ ದಾಳಿಯ ಭಾಗವಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ಹುಳಿ-ಸಿಹಿ ರುಚಿಯ ನೆಲ್ಲಿಕಾಯಿ ಜ್ಯಾಮ್ ಮಾಡಿ ನೋಡಿ

    ಪಾಕ್‌ನಲ್ಲಿ ನಡೆದಿದ್ದು ಪ್ರತೀಕಾರದ ದಾಳಿ - ಸ್ಫೋಟದ ಸ್ಥಳದಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡರಿಸಿದ ತಲೆ ಪತ್ತೆ

    ಇಮ್ರಾನ್ ಖಾನ್ (Imran Khan) ಯಾರನ್ನ ತನ್ನ ಕಣ್ಣು, ಕೈ ಹಾಗೂ ಕಿವಿ ಎಂದು ಕರೆಯುತ್ತಿದ್ದರೋ ಆ ಒಬ್ಬನನ್ನು ಪೇಶಾವರಲ್ಲಿ ನಿಯೋಜಿಸಲಾಗಿತ್ತು. ಅವನೇಕೆ ಭಯೋತ್ಪಾದಕರಿಗೆ ಬಾಗಿಲು ತೆರೆಯಬೇಕಿತ್ತು? ಭಯೋತ್ಪಾದಕರು ನಮ್ಮ ಸಹೋದರರು ಎಂದು ಏಕೆ ಹೇಳಿದ? ಭಯೋತ್ಪಾದಕನನ್ನ ಪಾಕಿಸ್ತಾನಕ್ಕೆ ಆಹ್ವಾನಿಸಿದ್ದೇಕೆ? ಜೈಲಿನಿಂದ ಹಾರ್ಡ್ಕೋರ್ ಭಯೋತ್ಪಾದಕರನ್ನ ಬಿಡುಗಡೆ ಮಾಡಿದ್ದೇಕೆ? ಅವನು (ಜನರಲ್ ಹಮೀದ್) ನಿಜವಾಗಿಯೂ ಪಾಕಿಸ್ತಾನದ ಕಣ್ಣು, ಕೈ ಮತ್ತು ಕಿವಿ ಆಗಿದ್ದರೆ, ಈ ಪರಿಸ್ಥಿತಿ (ಭಯೋತ್ಪಾದನೆಯ) ಸಂಭವಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

    ನನ್ನ ತಂದೆ ದೇಶವನ್ನು ಭಯೋತ್ಪಾದನೆ ದಾಳಿಯಿಂದ ಮುಕ್ತಗೊಳಿದ್ದರು. ಆದರೆ ಇಮ್ರಾನ್ ಖಾನ್ ಆಡಳಿತದ ಕೆಟ್ಟ ನೀತಿಗಳಿಂದ ಮತ್ತೆ ಭಯೋತ್ಪಾದನೆ ಮರಳಿತು. ನವಾಜ್ ಷರೀಫ್ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದ್ದರೆ, ಇಮ್ರಾನ್ ಖಾನ್ ಅವರ 4 ವರ್ಷಗಳ ಅಧಿಕಾರಾವಧಿಯಲ್ಲಿ ದೇಶದಲ್ಲಿ ಹಾಲು ಮತ್ತು ಜೇನುತುಪ್ಪದ ನದಿಗಳು ಹರಿಯಬೇಕಾಗಿತ್ತು. ಆದರೆ ನವಾಜ್ ಷರೀಫ್ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ದೇಶವನ್ನು ಉಳಿಸಿದ್ದಾರೆ. ಈ ದೇಶವನ್ನು ಶ್ರೀಲಂಕಾದಂತೆ ಆಗುವುದನ್ನು ತಡೆದಿದ್ದಾರೆ ಎಂದು ಸ್ಮರಿಸಿದರು.

    ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ - 89ಕ್ಕೇರಿದ ಸಾವಿನ ಸಂಖ್ಯೆ

    ಯಾರಿದು ಹಮೀದ್?
    ಐಎಸ್‌ಐ ಮುಖ್ಯಸ್ಥನ ಹುದ್ದೆಯನ್ನು ಪಾಕಿಸ್ತಾನ ಸೇನೆಯಲ್ಲಿ ಅತ್ಯಂತ ಪ್ರಮುಖವಾದದ್ದು ಎಂದು ಪರಿಗಣಿಸಲಾಗಿದೆ. ಇದು ತನ್ನ 75 ವರ್ಷಗಳ ಅಸ್ತಿತ್ವದಲ್ಲಿ ಅರ್ಧಕ್ಕಿಂತ ಹೆಚ್ಚು ವರ್ಷಗಳ ಕಾಲ ದೇಶವನ್ನು ಆಳಿದೆ. 2019ರ ಜೂನ್ ನಿಂದ 2021ರ ನವೆಂಬರ್ ವರೆಗೆ ಬೇಹುಗಾರಿಕಾ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ ಮುಖ್ಯಸ್ಥನಾಗಿದ್ದ ಲೆಫ್ಟಿನೆಂಟ್ ಜನರಲ್ ಹಮೀದ್, 2021ರ ಆಗಸ್ಟ್ ಮಧ್ಯದಲ್ಲಿ ತಾಲಿಬಾನ್ ಅಫ್ಘಾನ್ ರಾಜಧಾನಿಯನ್ನು ವಶಪಡಿಸಿಕೊಂಡ ನಂತರ ಅಫ್ಘಾನಿಸ್ತಾನಕ್ಕೆ ಭೇಟಿ ನೀಡಿದ ಮೊದಲ ಉನ್ನತ ಶ್ರೇಣಿಯ ವಿದೇಶಿ ಅಧಿಕಾರಿ ಎನ್ನಿಸಿಕೊಂಡಿದ್ದ. ಕೊನೆಯದಾಗಿ ಅವರನ್ನು ಪೇಶಾವರಕ್ಕೆ ಕಾರ್ಪ್ಸ್ ಕಮಾಂಡರ್ ಆಗಿ ನಿಯೋಜಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್

    ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್

    ಇಸ್ಲಾಮಾಬಾದ್: ಇದೇ ರೀತಿ ಪಾಕಿಸ್ತಾನದಲ್ಲಿ (Pakistan) ಸರ್ಕಾರ ನಡೆದುಕೊಂಡು ಹೋದರೆ ಮುಂದೆ ಪಾಕ್ ವಿರುದ್ಧ ಯುದ್ಧ ಸಾರಿ ಅಲ್ಲಿಯೂ ಕೂಡ ಅಘ್ಫಾನಿಸ್ತಾನದಂತೆ ತಾಲಿಬಾನ್ (Taliban) ಸರ್ಕಾರ ರಚಿಸುವುದಾಗಿ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (TTP) ಬೆದರಿಕೆ ಹಾಕಿದೆ.

    ಪಾಕಿಸ್ತಾನ ಸರ್ಕಾರ ತನ್ನ ರಾಷ್ಟ್ರದ ಮುಸ್ಲಿಮರಿಗೆ ಸರಿಯಾದ ಸಹಕಾರ ನೀಡುತ್ತಿಲ್ಲ. ಸಾರ್ವಭೌಮತ್ವವನ್ನು (Sovereignty) ಪ್ರಶ್ನಿಸುವಂತೆ ಮಾಡುತ್ತಿದೆ ಹೀಗೆ ಮುಂದುವರಿದರೆ, ಟಿಟಿಪಿ ರಕ್ಷಣೆಯಿಂದ ಹಿಡಿದು ಶಿಕ್ಷಣದವರೆಗೆ ತನ್ನದೇ ಆದ ಸಚಿವ ಸಂಪುಟವನ್ನು ಘೋಷಿಸಿ ಸರ್ಕಾರ ರಚಿಸಿ ಆಡಳಿತ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವ ದೇಶವೂ ನೊಂದಿಲ್ಲ: ಜೈಶಂಕರ್

    ಇದಲ್ಲದೆ, ಟಿಟಿಪಿ ತನ್ನ ಸಡಿಲವಾದ ನಿಯಂತ್ರಣದಲ್ಲಿರುವ ಪ್ರದೇಶಗಳನ್ನು ಎರಡು ವಲಯಗಳಾಗಿ ವಿಂಗಡಿಸಿದೆ. ಪೇಶಾವರ್, ಮಲಕಾಂಡ್, ಮರ್ದಾನ್, ಮತ್ತು ಗಿಲ್ಗಿಟ್-ಬಲೂಚಿಸ್ತಾವನ್ನು ಉತ್ತರ ಮತ್ತು ಡೇರಾ, ಇಸ್ಮಾಯಿಲ್ ಖಾನ್, ಬನ್ನು ಮತ್ತು ಕೊಹತ್ ಸೇರಿದಂತೆ ಕೆಲ ಪ್ರದೇಶಗಳನ್ನು ದಕ್ಷಿಣ ಪ್ರಾಂತ್ಯವನ್ನಾಗಿ ವಿಂಗಡಿಸಿದೆ.

    ಟಿಟಿಪಿ 148 ಬಾರಿ ದಾಳಿ:
    ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ ತನ್ನ ಬೆಂಬಲಿಗರೊಂದಿಗೆ ಒಂದು ವರ್ಷದಲ್ಲಿ ಪಾಕಿಸ್ತಾನದ ರಕ್ಷಣಾ ಪಡೆಗಳ ಮೇಲೆ 148 ಬಾರಿ ದಾಳಿ ಮಾಡಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‍ ಯಶಸ್ಸು ಕಂಡು ಸರ್ಕಾರ ರಚಿಸಿದ ಬಳಿಕ ಪಾಕಿಸ್ತಾನದ ಕಡೆ ಕಣ್ಣಿಟ್ಟಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್‌ ದಾಖಲು- ಹರಿಯಾಣದ ಕ್ರೀಡಾ ಸಚಿವ ಸ್ಥಾನಕ್ಕೆ ಸಂದೀಪ್ ಸಿಂಗ್ ರಾಜೀನಾಮೆ

    https://twitter.com/Noorzay__/status/1609091024999047168

    2021ರಲ್ಲಿ ಟಿಟಿಪಿ ಪೊಲೀಸರ ಮೇಲೆ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳನ್ನು ನಡೆಸಿದೆ. ಬಲೂಚಿಸ್ತಾನ್ ಪ್ರದೇಶದ ಖೈಬರ್ ಪಖ್ತುಂಖ್ವಾ ಮತ್ತು ಕ್ವೆಟ್ಟಾದಲ್ಲಿನ ಸೇನಾ ಪ್ರಧಾನ ಕಚೇರಿಯ ಮೇಲೂ ದಾಳಿ ನಡೆಸಿ ಶಕ್ತಿ ಪ್ರದರ್ಶಿಸಿದೆ. ಇದೀಗ ದೇಶದ ಬುಡಕಟ್ಟು ಪ್ರದೇಶಗಳಲ್ಲಿ ತಮ್ಮ ಭಯೋತ್ಪಾದಕ ಕಾರ್ಯಾಚರಣೆಯನ್ನು ವಿಸ್ತರಿಸಲು ಇತರ ಉಗ್ರಗಾಮಿ ಗುಂಪುಗಳು ಟಿಟಿಪಿಯೊಂದಿಗೆ ಕೈಜೋಡಿಸುತ್ತಿವೆ ಎಂದು ಖಾಮಾ ಪ್ರೆಸ್ ವರದಿ ಮೂಲಕ ಆರೋಪ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನದ ಹಲವೆಡೆ ಸ್ಫೋಟ – 5 ಸಾವು, 10 ಮಂದಿಗೆ ಗಾಯ

    ಪಾಕಿಸ್ತಾನದ ಹಲವೆಡೆ ಸ್ಫೋಟ – 5 ಸಾವು, 10 ಮಂದಿಗೆ ಗಾಯ

    ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಬಲೂಚಿಸ್ತಾನ್ ಪ್ರಾಂತ್ಯದ ಹಲವೆಡೆ ಸ್ಫೋಟ ನಡೆಸಲಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ 10 ಮಂದಿ ಗಾಯಗೊಂಡಿದ್ದಾರೆ.

    ಎರಡು ಹ್ಯಾಂಡ್ ಗ್ರೆನೇಡ್‌ಗಳನ್ನು ರಸ್ತೆಯ ಮೇಲೆ ಎಸೆಯಲಾಗಿದೆ. ಅದರಲ್ಲಿ ಒಂದು ಸ್ಫೋಟಗೊಂಡಿದೆ. ಮತ್ತೊಂದನ್ನು ನಿಷ್ಕ್ರಿಯಗೊಳಿಸಲಾಯಿತು ಎಂದು ಕ್ವೆಟ್ಟಾ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಂಧನ ಟ್ಯಾಂಕರ್ ಭೀಕರ ಸ್ಫೋಟ – 10 ಸಾವು, 40 ಮಂದಿಗೆ ಗಾಯ

    PAK

    ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಬಲೂಚಿಸ್ತಾನ ಮುಖ್ಯಮಂತ್ರಿ ಅಬ್ದುಲ್ ಖುಡೂಸ್ ಬಿಜೆಂಜೊ ಅವರು ನಗರದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವಂತೆ ಪೊಲೀಸ್ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ಪಾಕಿಸ್ತಾನ ವಿವಿಧ ಭಯೋತ್ಪಾದಕ ದಾಳಿಗಳನ್ನು ಎದುರಿಸಿದೆ.

    ಬಲೂಚಿಸ್ತಾನದ ಚಮನ್ ನಗರದ ಆಫ್ಘನ್ ಗಡಿ ಹಲವಾರು ಘರ್ಷಣೆಗಳಿಗೆ ಸಾಕ್ಷಿಯಾಗಿದೆ ಎಂದು ಪಾಕಿಸ್ತಾನಿ ಪತ್ರಿಕೆ ವರದಿ ಮಾಡಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ನೆರೆಯ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ತಾಲಿಬಾನ್‌ನೊಂದಿಗೆ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ ಮೈತ್ರಿ ಮಾಡಿಕೊಂಡಿದೆ. ನವೆಂಬರ್‌ನಲ್ಲಿ ಪಾಕಿಸ್ತಾನ ಸರ್ಕಾರದೊಂದಿಗೆ ಅಫ್ಘಾನ್ ತಾಲಿಬಾನ್ ಮಧ್ಯಸ್ಥಿಕೆಯ ಕದನ ವಿರಾಮದ ಅಂತ್ಯವನ್ನು ಘೋಷಿಸಿದಾಗಿನಿಂದ ತೀವ್ರಗಾಮಿ ಇಸ್ಲಾಮಿಕ್ ಸಂಘಟನೆಯು ದಾಳಿಗಳನ್ನು ಹೆಚ್ಚಿಸಿದೆ. ಇದನ್ನೂ ಓದಿ: ರಣಭೀಕರ ಹಿಮ ಸುನಾಮಿಗೆ ತತ್ತರಿಸಿದ ಅಮೆರಿಕ – ಕುದಿಯುವ ನೀರು ಕ್ಷಣ ಮಾತ್ರದಲ್ಲಿ ಐಸ್ ಆಗ್ತಿದೆ

    Live Tv
    [brid partner=56869869 player=32851 video=960834 autoplay=true]

  • ನೂಪುರ್ ಶರ್ಮಾ ಹತ್ಯೆಗೆ ಪಾಕ್‌ ಸಂಘಟನೆಗ‌ಳಿಂದ ಸುಪಾರಿ ಪಡೆದಿದ್ದ ಉಗ್ರ ಅರೆಸ್ಟ್

    ನೂಪುರ್ ಶರ್ಮಾ ಹತ್ಯೆಗೆ ಪಾಕ್‌ ಸಂಘಟನೆಗ‌ಳಿಂದ ಸುಪಾರಿ ಪಡೆದಿದ್ದ ಉಗ್ರ ಅರೆಸ್ಟ್

    ಲಕ್ನೋ: ನೂಪುರ್ ಶರ್ಮಾರನ್ನ ಹತ್ಯೆ ಮಾಡಲು ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಹಾಗೂ ತಹ್ರಿಖ್-ಎ-ತಾಲಿಬಾನ್ ಸಂಘಟನೆಗಳಿಂದ ಸುಪಾರಿ ಪಡೆದಿದ್ದ ಭಯೋತ್ಪಾದಕ ಮೊಹಮ್ಮದ್ ನದೀಮ್‌ನನ್ನು ಉತ್ತರಪ್ರದೇಶದ ಭಯೋತ್ಪಾದಕ ನಿಗ್ರಹ ದಳವು ಬಂಧಿಸಿದೆ.

    ಪಾಕಿಸ್ತಾನ ಮೂಲದ ಜೆಎಂಇ ಹಾಗೂ ಟಿಟಿಪಿ ಭಯೋತ್ಪಾದನಾ ಸಂಘಟನೆಗಳೊಂದಿಗೆ ನೇರ ಸಂಪರ್ಕ ಹೊಂದಿದ್ದ ನದೀಮ್ ನೂಪರ್ ಶರ್ಮಾರನ್ನು ಕೊಲ್ಲುವ ಕೆಲಸ ವಹಿಸಿಕೊಂಡಿದ್ದ. ಅವನನ್ನು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಎಟಿಎಸ್ ಹೇಳಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಏನ್ ಬಿಚ್ಚಿಡುತ್ತಾರೋ ಬಿಚ್ಚಿಡಲಿ: ಸುಧಾಕರ್ ತಿರುಗೇಟು

    ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರಿಂದ ಮುಸ್ಲಿಂ ರಾಷ್ಟ್ರಗಳಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೆಲ ಪಾಕಿಸ್ತಾನಿ ಸಂಘಟನೆಗಳು ನೂಪುರ್ ಶರ್ಮಾರನ್ನ ಕೊಲ್ಲುವುದಕ್ಕೆ ಬಹಿರಂಗವಾಗಿ ಆಫರ್‌ಗಳನ್ನು ಘೋಷಣೆ ಮಾಡಿದ್ದವು. ದೇಶದ ವಿವಿಧ ರಾಜ್ಯಗಳಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದವು. ಇದೀಗ ಸುಪ್ರೀಂ ಕೋರ್ಟ್ ಅವರ ವಿರುದ್ಧದ ಎಲ್ಲ ಕೇಸ್‌ಗಳನ್ನು ದೆಹಲಿಗೆ ವರ್ಗಾಯಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]