Tag: ಟಿವಿಕೆ

  • ಕರೂರಿನಲ್ಲಿ ಭೇಟಿಯಾಗದ್ದಕ್ಕೆ ಕ್ಷಮಿಸಿ – ಮೃತರ ಕುಟುಂಬಸ್ಥರನ್ನ ಭೇಟಿಯಾಗಿ 7.8 ಕೋಟಿ ಪರಿಹಾರ ವಿತರಿಸಿದ ವಿಜಯ್

    ಕರೂರಿನಲ್ಲಿ ಭೇಟಿಯಾಗದ್ದಕ್ಕೆ ಕ್ಷಮಿಸಿ – ಮೃತರ ಕುಟುಂಬಸ್ಥರನ್ನ ಭೇಟಿಯಾಗಿ 7.8 ಕೋಟಿ ಪರಿಹಾರ ವಿತರಿಸಿದ ವಿಜಯ್

    – ಘಟನೆ ನಡೆದ ಬರೋಬ್ಬರಿ ಒಂದು ತಿಂಗಳಿಗೆ ಭೇಟಿ

    ಚೆನ್ನೈ: ಕರೂರಿನಲ್ಲಿ (Karur) ಭೇಟಿಯಾಗದಿರೋದಕ್ಕೆ ಕ್ಷಮಿಸಿ ಎಂದು ನಟ, ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ (TVK Vijay) ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿಯಾಗಿ, 7.8 ಕೋಟಿ ರೂ. ಪರಿಹಾರ ನೀಡಿ, ಸಾಂತ್ವನ ಹೇಳಿದ್ದಾರೆ.

    ತಮಿಳುನಾಡಿನಲ್ಲಿ (Tamilnadu) ಕರೂರು ಭೀಕರ ಕಾಲ್ತುಳಿತ ದುರಂತ ಸಂಭವಿಸಿ ಇಂದಿಗೆ 1 ತಿಂಗಳು. ಸೆ.27ರಂದು ಟಿವಿಕೆ ವಿಜಯ್ ಅವರ ರ‍್ಯಾಲಿಯಲ್ಲಿ 41 ಜನ ಪ್ರಾಣ ಕಳೆದುಕೊಂಡಿದ್ದರು. ಘಟನೆ ನಡೆದು ಬರೋಬ್ಬರಿ ಒಂದು ತಿಂಗಳಿಗೆ ವಿಜಯ್ ಮೃತರ ಕುಟುಂಬಸ್ಥರನ್ನ ಭೇಟಿ ಮಾಡಿ, ಕರೂರಿನಲ್ಲಿ ಭೇಟಿಯಾಗದಿರೋದಕ್ಕೆ ಕ್ಷಮೆಯಾಚಿಸಿದ್ದಾರೆ.ಇದನ್ನೂ ಓದಿ: ಕಾಲ್ತುಳಿತಕ್ಕೆ 41 ಜನ ಸಾವು ಕೇಸ್‌ – ಅ.27ಕ್ಕೆ ಮೃತರ ಕುಟುಂಬಸ್ಥರ ಭೇಟಿಯಾಗಲಿರೋ ವಿಜಯ್‌

    ಮೃತಪಟ್ಟವರ ಕುಟುಂಬಸ್ಥರನ್ನು ಚೆನ್ನೈ ಬಳಿಯ ಮಹಾಬಲಿಪುರಂನಲ್ಲಿರುವ ರೆಸಾರ್ಟ್‌ನಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಕರೂರಿನಿಂದ ಒಟ್ಟು 37 ಕುಟುಂಬಗಳನ್ನು ರೆಸಾರ್ಟ್‌ಗೆ ಕರೆತರಲಾಗಿತ್ತು. ಅವರಿಗಾಗಿ ಟಿವಿಕೆ ಪಕ್ಷ, ರೆಸಾರ್ಟ್‌ನ ಸುಮಾರು 50 ಕೊಠಡಿಗಳನ್ನು ಕಾಯ್ದಿರಿಸಿತ್ತು. ಟಿವಿಕೆ ನಾಯಕ ಸಂತ್ರಸ್ತ ಕುಟುಂಬಸ್ಥರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿ, ಮೃತರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 2 ಲಕ್ಷ ರೂ.ಯಂತೆ ಒಟ್ಟು 7.8 ಕೋಟಿ ರೂ. ಪರಿಹಾರ ವಿತರಣೆ ಮಾಡಿದ್ದಾರೆ.

    ಇನ್ನೂ ಇದೇ ವೇಳೆ ಸಂತ್ರಸ್ತ ಕುಟುಂಬಗಳಿಗೆ ಶಿಕ್ಷಣದ ಜೊತೆಗೆ ಆರ್ಥಿಕ ಸಹಾಯ, ಉದ್ಯೋಗದ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಮಧ್ಯೆ, ರಾಜಕೀಯ ಸಮಾವೇಶ, ರೋಡ್‌ಶೋ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮ ಆಯೋಜನೆಗೆ 10 ದಿನಗಳ ಒಳಗೆ ಎಸ್‌ಓಪಿ ರಚಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದೆ.ಇದನ್ನೂ ಓದಿ:

  • ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

    ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

    ನವದೆಹಲಿ: ನಟ, ರಾಜಕಾರಣಿ ವಿಜಯ್ (Vijay) ಅವರ ಚುನಾವಣಾ ರ‍್ಯಾಲಿಯ ವೇಳೆ ಸಂಭವಿಸಿದ ಕರೂರು ಕಾಲ್ತುಳಿತ (Karur Stampede) ದುರಂತದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ವಹಿಸಿಕೊಂಡಿದ್ದು, ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ಸಿಬಿಐ ತಂಡ ಈಗಾಗಲೇ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಇದನ್ನೂ ಓದಿ: ಕರ್ನೂಲ್‌ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ – ಬಸ್‌ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯುವಂತಿಲ್ಲ!

    ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ವತಂತ್ರ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿತ್ತು. ಎಸ್‌ಐಟಿಯಲ್ಲಿ (SIT) ತಮಿಳುನಾಡಿನ ಪೊಲೀಸರೇ ಇರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೇಳಿತ್ತು. ಅರ್ಜಿ ವಿಚಾರಣೆ ಬಳಿಕ ಕರೂರು ಕಾಲ್ತುಳಿತ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದನ್ನೂ ಓದಿ: ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ – ಸಚಿವನಾಗುವ ಇಂಗಿತ ವ್ಯಕ್ತಪಡಿಸಿದ ಲಕ್ಷ್ಮಣ ಸವದಿ

    ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್ ರಚಿಸಿತ್ತು. ಇದನ್ನೂ ಓದಿ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಅಸಲಿ ಚಿನ್ನದ ಬಾಗಿಲು ತಾನೇ ಇಟ್ಟುಕೊಂಡು ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟಿದ್ದ ಉನ್ನಿಕೃಷ್ಣನ್

  • ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಸುಪ್ರೀಂ ಆದೇಶ

    ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಸುಪ್ರೀಂ ಆದೇಶ

    – ದೇಶವನ್ನೇ ಬೆಚ್ಚಿಬೀಳಿಸಿದ ಘಟನೆ, ನಿಷ್ಪಕ್ಷಪಾತ ತನಿಖೆ ಅಗತ್ಯ; ಕೋರ್ಟ್‌

    ನವದೆಹಲಿ: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ (Karur Stampede) ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್‌ (Supreme Court) ಇಂದು ಆದೇಶಿಸಿದೆ.

    ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರಿದ್ದ ದ್ವಿ ಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    TVK Vijay

    ಹೌದು. ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ (Ajay Rastogi) ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್‌ ರಚಿಸಿದೆ.

    ಇದು ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಘಟನೆ ಎಂದಿರುವ ಕೋರ್ಟ್‌, ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಹೇಳಿದೆ. ಸುಪ್ರೀಂ ಕೋರ್ಟ್‌ನ ಆದೇಶದಿಂದ ಸಿಎಂ ಎಂ.ಕೆ ಸ್ಟಾಲಿನ್‌ ನೇತೃತ್ವದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇದನ್ನೂ ಓದಿ: Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ನಟ ದಳಪತಿ ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದಿಂದ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್‌ ಸಿಬಿಐ ತನಿಖೆಗೆ ಆದೇಶಿಸಿದೆ. ಈ ಅರ್ಜಿಗಳು ಮದ್ರಾಸ್ ಹೈಕೋರ್ಟ್‌ನ ಏಕ ನ್ಯಾಯಾಧೀಶರು ನೀಡಿದ್ದ ವಿಶೇಷ ತನಿಖಾ ದಳ ತನಿಖೆಯ ಆದೇಶವನ್ನು ಪ್ರಶ್ನಿಸಿದ್ದವು. ಅಲ್ಲದೇ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ವಿಭಾಗೀಯ ಪೀಠವು ಸಿಬಿಐ ತನಿಖೆಯನ್ನು (CBI Investigation) ತಿರಸ್ಕರಿಸಿದ್ದ ಆದೇಶವನ್ನೂ ಪ್ರಶ್ನಿಸಲಾಗಿತ್ತು. ಇದನ್ನೂ ಓದಿ: TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಕೋರ್ಟ್‌ ಹೇಳಿದೇನು?
    ವಾಸ್ತವಾಂಶ ಪರಿಶೀಲಿಸಿದಾಗ ಈ ವಿಷಯವು ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಸಿಬಿಐಗೆ ಹಸ್ತಾಂತರಿಸಲು ನಿರ್ದೇಶಿಸಿದ್ದೇವೆ. ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ಪ್ರತಿಯೊಬ್ಬ ನಾಗರಿಕರ ಹಕ್ಕು ಎಂಬುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಕೋರ್ಟ್‌ ಹೇಳಿದೆ. ಇದನ್ನೂ ಓದಿ: Vijay Rally Stampede | 10 ವರ್ಷದ ಬಾಲಕಿ ಸಾವನ್ನ ಕಣ್ಣಾರೆ ಕಂಡೆ – ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಬೆಂಗ್ಳೂರಿನ ಪ್ರತ್ಯಕ್ಷದರ್ಶಿ

    ಎಲ್ಲಾ ರೀತಿಯ ಗೊಂದಲಗಳನ್ನ ನಿವಾರಿಸಲು ನಾವು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದೇವೆ. ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಅಲ್ಲದೇ ರಾಜ್ಯದ ಸ್ಥಳೀಯರಲ್ಲದ ಇಬ್ಬರು ಐಪಿಎಸ್ ಅಧಿಕಾರಿಗಳು ಸಮಿತಿಯ ಭಾಗವಾಗಿರಲಿದ್ದಾರೆ. ನಿವೃತ್ತ ನ್ಯಾಯಾಧೀಶರ ನಿರ್ದೇಶನಗಳ ಪ್ರಕಾರ ಸಮಿತಿಯು ತನ್ನದೇ ಆದ ಕಾರ್ಯವಿಧಾನಗಳನ್ನ ರೂಪಿಸಬೇಕು. ಇದರೊಂದಿಗೆ ತನಿಖೆಯ ಮಾಸಿಕ ವರದಿಯನ್ನು ಸಿಬಿಐ ಸಮಿತಿ ಮುಂದಿಡಬೇಕು ಎಂದು ಸಹ ಕೋರ್ಟ್‌ ಹೇಳಿದೆ.

  • ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

    ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

    ಚೆನ್ನೈ: ವಿಜಯ್ (Vijay) ಅವರ ಕರೂರ್‌ ರಾಜಕೀಯ ರ‍್ಯಾಲಿಯಲ್ಲಿ ನಡೆದ ಭೀಕರ ಕಾಲ್ತುಳಿತ (Karur Stampede) ದುರಂತ ಸಂಭವಿಸಿದ ಎರಡು ದಿನಗಳ ನಂತರ ಪಕ್ಷದ ಕಾರ್ಯಕರ್ತ ಆತ್ಮಹತ್ಯೆಗೆ (Suicide) ಶರಣಾಗಿದ್ದಾನೆ.

    ತಮಿಳಗ ವೆಟ್ರಿ ಕಳಗಂ (TVK) ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ ಅಯ್ಯಪ್ಪನ್ (52) ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

     

    ಈ ಭೀಕರ ಘಟನೆಯಿಂದ ತನಗೆ ನೋವಾಗಿದೆ ಎಂದು ಭಾವನಾತ್ಮಕವಾಗಿ ಪತ್ರ ಬರೆದಿರುವ ಅವರು, ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರುವುದರ ಜೊತೆಗೆ ಪೊಲೀಸರು ಸೂಕ್ತ ವ್ಯವಸ್ಥೆಗಳನ್ನು ಒದಗಿಸಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ:  TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪತ್ರವನ್ನು ವಶಪಡಿಸಿಕೊಂಡು, ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಲ್ಲುಪುರಂನ ಮುಂಡಿಯಂಬಕ್ಕಂ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

  • TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    – ಸಿಬಿಐ ತನಿಖೆಗೆ ಆಗ್ರಹಿಸಿ ಕೋರ್ಟ್‌ ಮೆಟ್ಟಿಲೇರಿದ್ದ ನಟ ವಿಜಯ್‌ & ಟೀಂ

    ಚೆನ್ನೈ: ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ (TVK Vijay Rally Stampede) ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ ದಳಪತಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ ನಡೆಯಲಿದೆ.

    ವಿಜಯ್ ಅವರ ಪರವಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಕಾನೂನು ತಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮದ್ರಾಸ್‌ ಹೈಕೋರ್ಟ್‌ನಲ್ಲಿ ನಡೆಯಲಿದೆ. ಈ ನಡುವೆ ರ‍್ಯಾಲಿಗಳಿಗೆ ಇನ್ಮುಂದೆ ಪ್ರೋಟೋಕಾಲ್‌ ತಯಾರಿಸುವವರೆಗೆ ನಟ ವಿಜಯ್‌ ರ‍್ಯಾಲಿಗೂ ಅನುಮತಿ ನೀಡದಂತೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯೂ ಇಂದೇ ವಿಚಾರಣೆಗೆ ಬರುವ ಸಾಧ್ಯತೆ. ಇದನ್ನೂ ಓದಿ: Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ಈ ಕುರಿತು ಮಾತನಾಡಿರುವ ಟಿವಿಕೆ ಪಕ್ಷದ ವಕೀಲ ಅರಿವಳಗನ್‌, ಕರೂರಿನಲಿ ನಡೆದ ಘಟನೆ ಹಿಂದೆ ಕ್ರಿಮಿನಲ್‌ ಪಿತೂರಿ ಇದೆ. ಆದ್ದರಿಂದ ನಾವು ರಾಜಕೀಯ ಸಂಸ್ಥೆಯ ಮೂಲಕ ತನಿಖೆ ಮಾಡೋದು ಬೇಡ. ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದೇವೆ. ನ್ಯಾಯಾಲಯವೇ ವಿಶೇಷ ತನಿಖಾ ತಂಡವನ್ನ ರಚಿಸಬೇಕು. ಇಲ್ಲದಿದ್ದರೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಅಂತ ಆಗ್ರಹಿಸಿದ್ದಾರೆ,

    ಸಾವಿನ ಸಂಖ್ಯೆ ಏರಿಕೆ
    ಇನ್ನೂ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕರೂರು ಸರ್ಕಾರಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಶಾರದಾ ಮೃತಪಟ್ಟಿದ್ದಾರೆ. ಇದನ್ನೂ ಓದಿ: TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಸಿಸಿಟಿವಿ, ಡ್ರೋನ್‌ ವಿಡಿಯೋ ಪರಿಶೀಲನೆ
    ಈಗಾಗಲೇ ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ಆರಂಭಿಸಿರುವ ಪೊಲೀಸರು ಕಾಲ್ತುಳಿತದ ಸ್ಥಳದಲ್ಲಿರುವ ಎಲ್ಲಾ ಸಿಸಿಕ್ಯಾಮರಾ, ಡ್ರೋನ್ ವಿಡಿಯೋ ಹಾಗೂ ಮೊಬೈಲ್‌ಗಳಲ್ಲಿ ರೆಕಾರ್ಡ್ ಮಾಡಿದ್ದ ವಿಡಿಯೋಗಳನ್ನ ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.

  • Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ಚೆನ್ನೈ: ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ (TVK Vijay Rally Stampede) ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದಿದೆ.

    ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್‌ಪಿಎಫ್ (CRPF) ಸಿಬ್ಬಂದಿಯನ್ನ ಮನೆಯ ಸುತ್ತಲೂ ನಿಯೋಜಿಸಲಾಗಿದೆ. ಕಾಲ್ತುಳಿತದಲ್ಲಿ ಸಾವು ನೋವು ಸಂಭವಿಸಿದ ಹಿನ್ನೆಲೆ ಶನಿವಾರ ಮಧ್ಯರಾತ್ರಿಯಿಂದಲೇ ವಿಜಯ್‌ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಬೆದರಿಕೆ ಬಂದ ಹಿನ್ನೆಲೆ ಶ್ವಾನದಳ ಹಾಗೂ ಬಾಂಬ್‌ ನಿಷ್ಕ್ರಿಯ ದಳಗಳಿಂದ ಮನೆಯ ಸುತ್ತಲೂ ಹಾಗೂ ಮನೆಯ ಒಳಾಂಗಣವನ್ನ ಪರಿಶೀಲನೆ ಮಾಡಲಾಗಿದೆ.

    ದುರಂತದ ಹೇಗಾಯ್ತು? ಆಮೇಲೆ ಏನಾಯ್ತು?
    ತಮಿಳುನಾಡು (Tamil Nadu) ರಾಜಕೀಯ ಪ್ರವೇಶಿಸಿರುವ ನಟ ದಳಪತಿ ವಿಜಯ್ ಕರೂರು ಜಿಲ್ಲಾ ಕೇಂದ್ರದ 2 ಕಿ.ಮೀ. ದೂರದ ವೇಲುಸ್ವಾಮಿಪುರಂನ ಹೆದ್ದಾರಿಯಲ್ಲಿ ಚುನಾವಣಾ ರ‍್ಯಾಲಿ ಹಮ್ಮಿಕೊಂಡಿದ್ದರು. ಶನಿವಾರ ರಾತ್ರಿ 7:15 ಸುಮಾರಿಗೆ ಏಕಾಏಕಿ ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಪೈಕಿ 2 ವರ್ಷದ ಮಗು ಸೇರಿ 10 ಮಕ್ಕಳು, 17 ಮಹಿಳೆಯರೂ ಸೇರಿದ್ದಾರೆ. ಮೃತ 28 ಜನ ಕರೂರು ಜಿಲ್ಲೆಯವರಾಗಿದ್ದರೆ ಉಳಿದವರು ಈರೋಡ್, ತಿರುಪುರ, ಧಾರಾಪುರಂ, ಸೇಲಂ ಜಿಲ್ಲೆಯವರಾಗಿದ್ದಾರೆ.

    ಎಲ್ಲಾ 40 ಜನರ ದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಯೇ ಸಾವನ್ನಪ್ಪಿರೋದು ಅಂತ ದೃಢವಾಗಿದೆ. ಶವಗಳ ರಾಶಿ ನೋಡಿದ ಸಚಿವ ಅನ್ಬಿಲ್ ಮಹೇಶ್ ಕಣ್ಣೀರು ಹಾಕಿದರು. ಮೃತರಿಗೆ ವಿಜಯ್ 20 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದರೆ.. ಸಿಎಂ ಸ್ಟಾಲಿನ್ ಅವರು ಮೃತರಿಗೆ 10 ಲಕ್ಷ ಹಾಗೂ ಗಾಯಾಳುಗಳಿಗೆ 1 ಲಕ್ಷ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಮೃತರಿಗೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಪ್ರಕಟಿಸಿದ್ದಾರೆ. ತಮಿಳುನಾಡು ಬಿಜೆಪಿ ಕೂಡ 1 ಲಕ್ಷ ಪರಿಹಾರ ಪ್ರಕಟಿಸಿದೆ.

    ಕರೂರು ಕಾಲ್ತುಳಿದಲ್ಲಿ ಗಾಯಾಗಳುಗಳ ಸಂಖ್ಯೆ 150ಕ್ಕೆ ಏರಿದೆ. ಕರೂರು, ತಿರುಚ್ಚಿ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗ್ತಿದೆ. ದುರ್ಘಟನೆ ಹಿನ್ನೆಲೆಯಲ್ಲಿ ಇಡೀ ಕರೂರು ಜಿಲ್ಲೆಯಲ್ಲಿ ವ್ಯಾಪಾರ-ವಹಿವಾಟುಗಳನ್ನು ವರ್ತಕರೇ ಸ್ವಯಂಪ್ರೇರಿತರಾಗಿ ಬಂದ್ ಮಾಡಿದ್ದರು. ಕಾಲ್ತುಳಿತ ಘಟನಾ ಸ್ಥಳವಾದ ಹೆದ್ದಾರಿಯಲ್ಲಿ ಚಪ್ಪಲಿ-ಶೂಗಳ ರಾಶಿ, ಹರಿದ ಬಟ್ಟೆಗಳು, ಮುರಿದು ಹೋಗಿರುವ ಮರದ ಕಂಬಗಳು, ನಜ್ಜುಗುಜ್ಜಾಗಿರುವ ನೀರಿನ ಬಾಟೆಲ್‌ಗಳ ರಾಶಿಯೇ ಕಂಡು ಬಂದಿತ್ತು.

    ಒಬ್ಬೊಬ್ಬರದ್ದೂ ಒಂದೊಂದು ಕಣ್ಣೀರ ಕಥೆ
    ಕರೂರು ವಿಜಯ್ ರ‍್ಯಾಲಿಯಲ್ಲಿ ಸಾವನ್ನಪ್ಪಿದ್ದವರದ್ದು ಒಬ್ಬೊಬ್ಬರದ್ದು ಒಂದೊಂದು ಕಣ್ಣೀರ ಕಥೆ. ನೆಚ್ಚಿನ ನಟನ ನೋಡಲು ಪತ್ನಿ ಕಣ್ಮರೆಯಾಗಿದೆ ಅಂತ ಇಡೀ ಕುಟುಂಬ ರಾತ್ರಿಯೆಲ್ಲಾ ಹುಡುಕಾಡಿದೆ. ಆದರೆ, ಬೆಳಗ್ಗೆ ಜಿಲ್ಲಾಡಳಿತದಿಂದ ಕರೆ ಬಂದಿತ್ತು. ಆತಂಕದಲ್ಲಿ ಹೋಗಿ ನೋಡಿದಾಗ ನನ್ನ ಹೆಂಡತಿ ಹೆಣವಾಗಿದ್ದಳು ಅಂತ ಕೈಮೇಲಿನ ಅಚ್ಚೆ ನೋಡಿ ಪತಿ ಗುರುತಿಸಿದ್ದಾರೆ. ಅಂದಹಾಗೆ, ದಂಪತಿಗೆ ಒಂದು ವರ್ಷದ ಮಗು ಇದ್ದು ತಾಯಿಯನ್ನು ಕಳೆದುಕೊಂಡಿದೆ. ಆಸ್ಪತ್ರೆ ಮುಂದೆ ತಮ್ಮವರ ಕಳೆದುಕೊಂಡ ಕುಟುಂಬಸ್ಥರು ಎದೆ ಬಡಿದುಕೊಂಡು ಗೋಳಾಡ್ತಿರೋದನ್ನು ನೋಡಿದ್ರೆ ಕರುಳು ಚುರ್ ಅನ್ನಿಸುತ್ತೆ. ಈ ಮಧ್ಯೆ, ಆಪ್ತರನ್ನು ಕಳೆದುಕೊಂಡ ಕುಟುಂಬವೊಂದು ವಿಜಯ್ ನಾಶವಾಗಿ ಹೋಗ್ತಾನೆ ಅಂತ ಹಿಡಿಶಾಪ ಹಾಕಿದೆ.

  • ವಿಜಯ್‌ ಅವರದ್ದು ಏನೂ ತಪ್ಪಿಲ್ಲ, ಪೊಲೀಸ್‌ ಇಂಟೆಲಿಜೆನ್ಸ್‌ ವಿಫಲವಾಗಿದೆ: ಅಣ್ಣಾಮಲೈ ಆರೋಪ

    ವಿಜಯ್‌ ಅವರದ್ದು ಏನೂ ತಪ್ಪಿಲ್ಲ, ಪೊಲೀಸ್‌ ಇಂಟೆಲಿಜೆನ್ಸ್‌ ವಿಫಲವಾಗಿದೆ: ಅಣ್ಣಾಮಲೈ ಆರೋಪ

    – ಕರೂರು ಕಾಲ್ತುಳಿತದಲ್ಲಿ ಮೃತರ ಕುಟುಂಬಸ್ಥರಿಗೆ ತಲಾ 1 ಲಕ್ಷ ಪರಿಹಾರ ಘೋಷಿಸಿದ ಬಿಜೆಪಿ ನಾಯಕ

    ಚೆನ್ನೈ: ನಟ, ರಾಜಕಾರಣಿ ವಿಜಯ್‌ (Vijay Thalapathy) ಚುನಾವಣಾ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ (Annamalai) ಘೋಷಿಸಿದ್ದಾರೆ.

    ಕಾರೂರು (Karur Stampede) ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅಣ್ಣಾಮಲೈ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು. ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿದ್ದ ಜನರಿಗೆ ಸಾಂತ್ವನ ಹೇಳಿದರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಘಟನೆ ಬಗ್ಗೆ ತೀವ್ರ ನೋವಾಗಿದೆ. ಈವರೆಗೆ ತಮಿಳುನಾಡಿನಲ್ಲಿ ಈ ರೀತಿ ಘಟನೆ ನಡೆದಿರಲಿಲ್ಲ. ಈ ದುರಂತಕ್ಕೆ ನೇರ ಹೊಣೆ ಸ್ಥಳೀಯ ಪೊಲೀಸರು ಮತ್ತು ರಾಜ್ಯ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಇದರಲ್ಲಿ ನಟ, ರಾಜಕಾರಣಿ ವಿಜಯ್ ಅವರದ್ದು ಏನು ತಪ್ಪು ಇಲ್ಲ. ಸಮಾರಂಭಕ್ಕೆ ಅನುಮತಿ ನೀಡಿದ್ದು ಸ್ಥಳೀಯ ಆಡಳಿತ ಮಂಡಳಿ. 10 ಸಾವಿರ ಜನ ಸೇರುತ್ತಾರೆ, ಅನುಮತಿ ಕೊಡಿ ಅಂತ ಕೇಳಿದ್ರು ಕೊಟ್ಟಿದ್ದೇವೆ ಅಂತ ಈಗ ಅಧಿಕಾರಿಗಳು ಹೇಳುತ್ತಿದ್ದಾರೆ. ಹಾಗಾದರೆ ಪೊಲೀಸರ ಇಂಟಲಿಜೆನ್ಸ್ ವಿಫಲ ಆಗಿದೆಯಾ? ಪೊಲೀಸರಿಗೆ ಗೊತ್ತಿಲ್ಲವಾ ಅವರು ಒಬ್ಬ ಐಕಾನ್ ಸ್ಟಾರ್ ಅಂತ? ಇಲ್ಲಿನ ಡಿಸಿ ಮತ್ತು ಎಸ್‌ಪಿಯನ್ನು ಅಮಾನತು ಮಾಡಬೇಕು. ಅದರೆ, ಅದನ್ನು ರಾಜ್ಯ ಸರ್ಕಾರ ಮಾಡಿಲ್ಲ ಎಂದು ಕಿಡಿಕಾರಿದರು.

    ಕರ್ನಾಟಕದಲ್ಲಿ ಆರ್‌ಸಿಬಿ ವಿಚಾರವಾಗಿ ಒಂದು ಘಟನೆ ನಡೆದಿತ್ತು. ಅಲ್ಲಿಯೂ ಕೂಡ ರಾಜ್ಯ ಸರ್ಕಾರದ ವಿಫಲತೆ ಇತ್ತು. ಅಲ್ಲಿ ಒನ್‌ ಮ್ಯಾನ್ ತನಿಖೆಗೆ ಆದೇಶ ನೀಡಲಾಗಿತ್ತು. ಅವರು ರಾಜ್ಯ ಸರ್ಕಾರದ ವಿರುದ್ಧ ರಿಪೋರ್ಟ್ ನೀಡಲು ಸಾಧ್ಯವಿಲ್ಲ. ಅದೇ ರೀತಿ ಇಲ್ಲಿ ಕೂಡ ಆಗುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ಕೊಡಬೇಕು. ಸಿಬಿಐ ತನಿಖೆಯಲ್ಲಿ ಗೊತ್ತಾಗುತ್ತೆ, ಇದು ಯಾರಾದ್ರು ಹೇಳಿ ಮಾಡಿಸಿದ್ದ ಅಂತ. ಜನಸಂದಣಿಯಲ್ಲಿ ಯಾರದ್ರು ಕುಮ್ಮಕ್ಕು ಕೊಟ್ರ ಎಂಬ ಎಲ್ಲಾ ಮಾಹಿತಿ ಹೊರ ಬರುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಕರೂರು ಕಾಲ್ತುಳಿತ – 39 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

    ನಮ್ಮ ಪಕ್ಷದಿಂದ ಗ್ರೌಂಡ್ ಲೆವೆಲ್‌ನಲ್ಲಿ ಕೆಲಸ ಮಾಡುತ್ತಿದ್ದೇವೆ. ಮೃತ 40 ಜನರಿಗೂ ತಲಾ ಒಂದು ಲಕ್ಷ ಪರಿಹಾರ ನೀಡಲು ಬಿಜೆಪಿಯಿಂದ ತೀರ್ಮಾನ ಮಾಡಲಾಗಿದೆ. ಒಂದು ವಾರದಲ್ಲಿ ಮೃತರ ಎಲ್ಲರ ಮನೆಗೆ ತೆರಳಿ ನಾವು ಚೆಕ್‌ ತಲುಪಿಸುತ್ತೇವೆ ಎಂದರು.

  • ಕಾಲ್ತುಳಿತಕ್ಕೆ ಪೊಲೀಸರ ಲಾಠಿಚಾರ್ಜ್‌ ಕಾರಣ: ಟಿವಿಕೆ ಆರೋಪ

    ಕಾಲ್ತುಳಿತಕ್ಕೆ ಪೊಲೀಸರ ಲಾಠಿಚಾರ್ಜ್‌ ಕಾರಣ: ಟಿವಿಕೆ ಆರೋಪ

    ಕರೂರ್‌: ಪೊಲೀಸರು ಲಾಠಿಚಾರ್ಜ್‌ ಮಾಡಿದ್ದರಿಂದ 39 ಮಂದಿ ಮೃತಪಟ್ಟಿದ್ದಾರೆ ಎಂದು ವಿಜಯ್‌ (Vijay) ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಆರೋಪಿಸಿದೆ.

    ಪಕ್ಷ ಮೊದಲು ಕರೂರ್‌ನ ಲೈಟ್‌ಹೌಸ್ ಕಾರ್ನರ್ ಮತ್ತು ಉಜಾವರ್ ಮಾರುಕಟ್ಟೆಯ ಬಳಿ ರ‍್ಯಾಲಿ ನಡೆಸಲು ಟಿವಿಕೆ ಅನುಮತಿ ಕೋರಿತ್ತು. ಆದರೆ ಡಿಎಂಕೆ ಸರ್ಕಾರ ಸುರಕ್ಷತಾ ಕಾರಣಗಳಿಂದಾಗಿ ಈ ಜಾಗದಲ್ಲಿ ರ‍್ಯಾಲಿ ನಡೆಸಲು ಅನುಮತಿ ನೀಡಿರಲಿಲ್ಲ. ಬದಲಾಗಿ ಕರೂರ್-ಈರೋಡ್ ರಸ್ತೆಯಲ್ಲಿ ರ‍್ಯಾಲಿಗೆ ಅವಕಾಶ ನೀಡಲಾಯಿತು. ಆದರೆ ಈ ಜಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸದ ಕಾರಣ ದುರಂತ (TVK Rally Stampede) ಸಂಭವಿಸಿದೆ ಎಂದು ದೂರಿದೆ. ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತ ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ವಿಜಯ್

     

    ಪ್ರತ್ಯಕ್ಷದರ್ಶಿಗಳು ಹೇಳೋದು ಏನು?
    ವಿಜಯ್‌ ಅವರು ವಾಹನ ಹತ್ತಿದ ಬಳಿಕ ಸೆಂಥಿಲ್‌ ಬಾಲಾಜಿ ಅವರನ್ನು ʼ10 ರೂ. ಮಂತ್ರಿʼ ಎಂದು ಟೀಕಿಸುವ ಹಾಡನ್ನು ಹಾಡಲಾಯಿತು. ಈ ವೇಳೆಗೆ ಜನ ಆಕ್ರೋಶ ಹೊರಹಾಕಿದಾಗ ಪೊಲೀಸರು ಲಾಠಿ ಬೀಸತೊಡಗಿದರು. ಇದರಿಂದ ಜನ ಭಯಗೊಂಡು ಓಡಲು ಆರಂಭಿಸಿದರು. ಶಿಶುಗಳನ್ನು ಹಿಡಿದಿರುವ ಪೋಷಕರು ಸೇರಿದಂತೆ ಎಲ್ಲರೂ ಮುಂದಕ್ಕೆ ತಳ್ಳಿಕೊಂಡು ಓಡಿದಾಗ ನೂಕುನುಗ್ಗಲು ನಡೆದು ಕಾಲ್ತುಳಿತ ಸಂಭವಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  Explainer | ಕುಂಭಮೇಳದಿಂದ ತಮಿಳುನಾಡು ದುರಂತದವರೆಗೆ – ದೇಶದ ಪ್ರಮುಖ ಕಾಲ್ತುಳಿತ ದುರಂತಗಳ ಪಟ್ಟಿ ಇಲ್ಲಿದೆ

    ಇನ್ನೊಬ್ಬರು ಹೇಳಿದ ಪ್ರಕಾರ, ವಿಜಯ್ ಪ್ರಚಾರ ಸ್ಥಳಕ್ಕೆ ಬರುವವರೆಗೂ ಎಲ್ಲವೂ ಸರಿಯಾಗಿತ್ತು. ಇದ್ದಕ್ಕಿದ್ದಂತೆ ಜನರೇಟರ್‌ಗೆ ಸಂಪರ್ಕಗೊಂಡಿದ್ದ ಫ್ಲಡ್‌ಲೈಟ್‌ಗಳು ಆಫ್ ಆದವು. ಈ ವೇಳೆ ಮಹಿಳೆಯೊಬ್ಬಳು ಕಾಣೆಯಾದ ಮಗುವನ್ನು ಹುಡುಕಲು ಪ್ರಾರಂಭಿಸಿದಳು. ಈ ವೇಳೆ ಜನ ಆ ಮಗುವನ್ನು ಹುಡುಕಲು ಆರಂಭಿಸಿದಾಗ ತಳ್ಳಾಟ, ನೂಕಾಟ ನಡೆದು ಕಾಲ್ತುಳಿತ ಸಂಭವಿಸಿರಬಹುದು ಎಂದು ತಿಳಿಸಿದ್ದಾರೆ.

  • ಕರೂರು ಕಾಲ್ತುಳಿತ ದುರಂತ – ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ವಿಜಯ್

    ಕರೂರು ಕಾಲ್ತುಳಿತ ದುರಂತ – ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ವಿಜಯ್

    – ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

    ಚೆನ್ನೈ: ತಮಿಳುನಾಡಿನ (Tamil Nadu) ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ (Karur Stampede) ಮೃತಪಟ್ಟವರ ಕುಟುಂಬಕ್ಕೆ ನಟ, ರಾಜಕಾರಣಿ ವಿಜಯ್ ದಳಪತಿ (Thalapathy Vijay) ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಿದ್ದು, ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

    ತಮಿಳುನಾಡು ಕರೂರಿನಲ್ಲಿ ವಿಜಯ್ ದಳಪತಿ ಆಯೋಜಿಸಿದ್ದ ಚುನಾವಣಾ ಪ್ರಚಾರದ ರ‍್ಯಾಲಿ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 39 ಮಂದಿ ಸಾವನ್ನಪ್ಪಿದ್ದು, 48 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ವಿಜಯ್ ದಳಪತಿ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದು, ಘಟನೆಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಿಸಿದ್ದಾರೆ.

    ಎಕ್ಸ್‌ನಲ್ಲಿ ಏನಿದೆ?
    ನನ್ನ ಹೃದಯದಲ್ಲಿ ನೆಲೆಸಿರುವ ಎಲ್ಲರಿಗೂ ನಮಸ್ಕಾರಗಳು. ಶನಿವಾರ ಕರೂರಿನಲ್ಲಿ ನಡೆದ ದುರಂತದಿಂದ ನನ್ನ ಹೃದಯ ಮತ್ತು ಮನಸ್ಸು ಭಾರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ದುಃಖಿಸುತ್ತಿರುವ ಕುಟುಂಬಗಳಿಗೆ ನನ್ನ ಸಂತಾಪವನ್ನು ಸೂಚಿಸುತ್ತಾ, ಈ ದುಃಖವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಇದು ನಿಜಕ್ಕೂ ನಮಗೆ ತುಂಬಲಾರದ ನಷ್ಟ. ಘಟನೆಯಿಂದ ನನ್ನ ಹೃದಯ ಅನುಭವಿಸುತ್ತಿರುವ ನೋವನ್ನು ವ್ಯಕ್ತಪಡಿಸಲು ಪದಗಳೇ ಸಿಗುತ್ತಿಲ್ಲ. ಯಾರೇ ಸಾಂತ್ವನದ ಮಾತುಗಳನ್ನು ಹೇಳಿದರೂ, ಪ್ರೀತಿಪಾತ್ರರನ್ನು ಕಳೆದುಕೊಂಡ ನೋವನ್ನು ಭರಿಸಲು ಸಾಧ್ಯವಿಲ್ಲ. ಆದರೂ, ನಿಮ್ಮ ಕುಟುಂಬದ ಸದಸ್ಯನಾಗಿ, ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ 20 ಲಕ್ಷ ರೂ. ಮತ್ತು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 2 ಲಕ್ಷ ರೂ. ನೀಡಲು ನಾನು ಉದ್ದೇಶಿಸಿದ್ದೇನೆ. ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಸಂದರ್ಭದಲ್ಲಿ ಈ ಮೊತ್ತವು ಗಮನಾರ್ಹವಾಗಿಲ್ಲ. ಆದರೂ, ಈ ಕ್ಷಣದಲ್ಲಿ, ನಿಮ್ಮ ಕುಟುಂಬಕ್ಕೆ ಸೇರಿದವನಾಗಿ, ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯ.

    ಅದೇ ರೀತಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ನಮ್ಮೆಲ್ಲರ ಪ್ರೀತಿಪಾತ್ರರು ಬೇಗನೆ ಚೇತರಿಸಿಕೊಂಡು ಮನೆಗೆ ಮರಳಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ನಮ್ಮ ಪ್ರೀತಿಪಾತ್ರರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನಮ್ಮ ತಮಿಳಗ ವೆಟ್ರಿ ಕಳಗಂ ಪಕ್ಷ ನೀಡುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ.

    ಘಟನೆ ಏನು?
    ಕಾಲಿವುಡ್ ಸೂಪರ್ ಸ್ಟಾರ್ ಕಮ್ ರಾಜಕಾರಣಿ ದಳಪತಿ ವಿಜಯ್ ತಮಿಳುನಾಡಿನ ರಾಜಕೀಯದಲ್ಲಿ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ. ಅದಕ್ಕಾಗಿ 2026ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ಕರೂರಿನಲ್ಲಿ ತಮ್ಮ ತಮಿಳಿಗ ವೆಟ್ರಿ ಕಳಗಂ ಪಕ್ಷದ ರ‍್ಯಾಲಿ ಹಮ್ಮಿಕೊಂಡಿದ್ದರು. ವಿಜಯ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿನಮಾನಿಗಳು, ಬೆಂಬಲಿಗರು ಸೇರಿದ್ದರು. ತಮ್ಮ ನಾಯಕನಿಗಾಗಿ ಸುಮಾರು ಆರು ಗಂಟೆಗಳಿಗೂ ಹೆಚ್ಚು ಕಾಲ ಕಾದು ಕುಳಿತಿದ್ದರು. ಆದ್ರೆ, ದಳಪತಿ ವಿಜಯ್ ಕಾರ್ಯಕ್ರಮದ ಸ್ಥಳಕ್ಕೆ ತಡವಾಗಿ ಆಗಮಿಸಿದ್ದರು.

    ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಇನ್ನು ಇದೇ ವೇಳೆ 9 ವರ್ಷದ ಬಾಲಕಿ ಕಳೆದು ಹೋಗಿರ್ತಾಳೆ. ಆಗ ವಿಜಯ್ ಮೈಕ್ ಮೂಲಕ ಪೊಲೀಸರಿಗೆ ಮನವಿ ಮಾಡ್ತಾರೆ. ಮೈಕ್‌ನಲ್ಲಿ ಅನೌನ್ಸ್ ಮಾಡುತ್ತಲೇ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಂದ್ಹಾಗೆ ರ‍್ಯಾಲಿ ತಡವಾಗಿ ಸಂಜೆ ಆರಂಭವಾಗಿತ್ತು. ಹೀಗಾಗಿ ವಿಜಯ್ ನೋಡಲು ಫ್ಯಾನ್ಸ್ ಮುಗಿ ಬಿದ್ದಿದ್ರು. ಅಲ್ದೆ ರ‍್ಯಾಲಿ ವೇಳೆ ಕರೆಂಟ್ ತೆಗೆದಿದ್ದರಿಂದ ದುರಂತ ಸಂಭವಿಸಿದೆ.

    39 ಮಂದಿ ಸಾವು, 48 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
    ಸ್ಥಳಪರಿಶೀಲನೆ ನಡೆಸಿದ ಎಡಿಜಿಪಿ ಡೇವಿಡ್ ಸನ್ ಆಶಿರ್ವಾದ್ ಮಾತನಾಡಿ, 10,000 ಜನ ಸೇರುತ್ತಾರೆ ಅಂತ ಅನುಮತಿ ಪಡೆದಿದ್ದರು. ಹೀಗಾಗಿ 116 ಸ್ಥಳೀಯ ಪೊಲೀಸರು ಹೊರತುಪಡಿಸಿ ಹೆಚ್ಚುವರಿ 500 ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಈ ಹಿಂದೆಯೂ 15,000 ಜನಕ್ಕೆ 600 ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಆದ್ರೆ ಇಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಹೀಗಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ. 48 ಮಂದಿ ಆಸ್ಪತ್ರೆಯಲ್ಲಿ ಸಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಯಾವುದೇ ಲಾಠಿ ಚಾರ್ಜ್ ಮಾಡಿಲ್ಲ, ದುರಂತಕ್ಕೆ ಕಾರಣಗಳನ್ನ ಪಟ್ಟಿ ಮಾಡಿದ್ದೇವೆಂದು ತಿಳಿಸಿದ್ದಾರೆ.

  • ನನ್ನ ಹೃದಯ ಚೂರಾಗಿದೆ.. ನೋವು, ದುಃಖದಲ್ಲಿ ನರಳುತ್ತಿದ್ದೇನೆ: ಕಾಲ್ತುಳಿತ ದುರಂತಕ್ಕೆ ವಿಜಯ್‌ ಮೊದಲ ಪ್ರತಿಕ್ರಿಯೆ

    ನನ್ನ ಹೃದಯ ಚೂರಾಗಿದೆ.. ನೋವು, ದುಃಖದಲ್ಲಿ ನರಳುತ್ತಿದ್ದೇನೆ: ಕಾಲ್ತುಳಿತ ದುರಂತಕ್ಕೆ ವಿಜಯ್‌ ಮೊದಲ ಪ್ರತಿಕ್ರಿಯೆ

    ಚೆನ್ನೈ: ಕರೂರಿನಲ್ಲಿ ರ‍್ಯಾಲಿ ವೇಳೆ ಭೀಕರ ಕಾಲ್ತುಳಿತ (Karur Stampede) ದುರಂತಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ದಳಪತಿ ವಿಜಯ್‌ (Vijay) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ವಿಜಯ್‌, ನನ್ನ ಹೃದಯ ಚೂರಾಗಿದೆ. ನಾನು ಅಸಹನೀಯ ನೋವು ಮತ್ತು ದುಃಖದಲ್ಲಿದ್ದೇನೆ. ಹೇಳಿಕೊಳ್ಳಲಾಗದಷ್ಟು ನೋವು ಎಂದು ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮಾಯಕರ ಜೀವಹಾನಿ ಹೃದಯವನ್ನು ಕಲಕಿದೆ: ಕಾಲ್ತುಳಿತ ದುರಂತಕ್ಕೆ ರಜನಿಕಾಂತ್‌ ಕಂಬನಿ

    ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ, ಸಹೋದರಿಯರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವೇ ಗುಣಮುಖರಾಗಲೆಂದು ನಾನು ಪ್ರಾರ್ಥಿಸುತ್ತೇನೆ ಎಂದು ವಿಜಯ್‌ ತಿಳಿಸಿದ್ದಾರೆ.

    ತಮಿಳುನಾಡು ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಬೃಹತ್‌ ರ‍್ಯಾಲಿ ನಡೆಸಿದ್ದರು. ವಿಜಯ್‌ ನೋಡಲೆಂದು ಲಕ್ಷಾಂತರ ಸಂಖ್ಯೆಯಲ್ಲಿ ಜನ ನೆರೆದಿದ್ದರು. ಈ ವೇಳೆ ಭೀಕರ ಕಾಲ್ತುಳಿತ ಸಂಭವಿಸಿದೆ. 35ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಏರುತ್ತಿದೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?