Tag: ಟಿವಿ ಶೋ

  • ಜೀ ಕನ್ನಡ ಕಾಮಿಡಿ ಕಿಲಾಡಿಗಳು: ಹೊಸ ರೂಪದೊಂದಿಗೆ ರೆಡಿ

    ಜೀ ಕನ್ನಡ ಕಾಮಿಡಿ ಕಿಲಾಡಿಗಳು: ಹೊಸ ರೂಪದೊಂದಿಗೆ ರೆಡಿ

    ನ್ನ ಹೊಸತನದಿಂದ ಯಾವಾಗಲೂ ವೀಕ್ಷಕರಿಗೆ ಹೊಸತನವನ್ನು ಕೊಟ್ಟು ಮನರಂಜಿಸುವ ಜೀ ಕನ್ನಡ (Zee Kannada) ಈಗ ಎಲ್ಲರ ಅಚ್ಚುಮೆಚ್ಚಿನ ನಾನ್-ಫಿಕ್ಷನ್ ಶೋ ಕಾಮಿಡಿ (Comedy Khiladigalu) ಕಿಲಾಡಿಗಳನ್ನು ಮತ್ತೆ ತಂದಿದೆ. ಇಡೀ ರಾಜ್ಯವನ್ನೇ ನಗಿಸಿದ ಯಶಸ್ವಿ ಸೀಸನ್‌ಗಳನ್ನು ನೀಡಿದ ನಂತರ, ಕಾಮಿಡಿಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ವಾಹಿನಿ ಸಿದ್ಧವಾಗಿದೆ. ಇನ್ನು ಎಲ್ಲರೂ ಕಾತುರತೆಯಿಂದ ಕಾಯುತ್ತಿರುವ ಕಾಮಿಡಿ ಕಿಲಾಡಿಗಳು ಅಕ್ಟೋಬರ್ 25 ರಂದು ರಾತ್ರಿ 9 ಗಂಟೆಗೆ ಶುರುವಾಗಲಿದ್ದು, ಪ್ರತಿ ವಾರಾಂತ್ಯದಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

    ತರ್ಲೆ ಮಾತು, ವಿಭಿನ್ನ ನಿರೂಪಣಾ ಶೈಲಿಯಿಂದ ಕನ್ನಡಿಗರ ಮನಗೆದ್ದ ನಿರಂಜನ್ ದೇಶಪಾಂಡೆ ಅವರು ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಿರೂಪಣಾ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಇನ್ನು ಈ ನಗುವಿನ ಪಯಣದ ಸಾರಥಿಗಳಾಗಿ ಅತ್ಯುತ್ತಮ ಸಿನೆಮಾಗಳನ್ನು ನೀಡಿ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದ ಕಾಮಿಡಿ ಕಿಂಗ್ ಜಗ್ಗೇಶ್ ಮತ್ತು ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್, ಎಲ್ಲರ ಅಚ್ಚುಮೆಚ್ಚಿನ ಹಿರಿಯ ನಟಿ ತಾರಾ ಅನುರಾಧ ಇರಲಿದ್ದಾರೆ. ಒಟ್ಟಾರೆಯಾಗಿ ಇವೆರಲ್ಲರೂ ನಿಮ್ಮ ನಗುವನ್ನು ಡಬಲ್ ಮಾಡೋದರಲ್ಲಿ ಯಾವುದೇ ಸಂದೇಹವಿಲ್ಲ. ಇದನ್ನೂ ಓದಿ: ಮೂರೇ ವಾರಕ್ಕೆ ಕಾಂತಾರ ಚಾಪ್ಟರ್-1 ಹೊಸ ಮೈಲಿಗಲ್ಲು

    ಸತತ 19 ವರ್ಷಗಳಿಂದ ಜೀ ಕನ್ನಡ ವಾಹಿನಿ ಕನ್ನಡಿಗರನ್ನು ಮನರಂಜಿಸುವಲ್ಲಿ ಮುಂಚೂಣಿಯಲ್ಲಿದೆ. ಇದೀಗ ಈ ಪರಂಪರೆಯನ್ನು ಮುಂದುವರೆಸುತ್ತ ಜೀ ಕನ್ನಡ ವಾಹಿನಿ ಪ್ರೇಕ್ಷಕರನ್ನು ನಕ್ಕು ನಗಿಸಲು ‘ಕಾಮಿಡಿ ಕಿಲಾಡಿಗಳು’ ಹೊಚ್ಚ ಹೊಸ ಸೀಸನ್ ಅನ್ನು ತರಲು ಸಜ್ಜಾಗಿದೆ. ಈ ಶೋನಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಪ್ರತಿಭಾನ್ವಿತ ನವಹಾಸ್ಯನಟರು ಪಾಲ್ಗೊಳ್ಳಲಿದ್ದು, ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಲಿದ್ದಾರೆ. ಹಾಸ್ಯಮಯ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುವ ನೂತನ ಸ್ಕಿಟ್ ಗಳನ್ನೂ ಈ ಪ್ರತಿಭೆಗಳು ಪ್ರದರ್ಶಿಸಲಿದ್ದಾರೆ.

    ಈ ಸೀಸನ್ ನ ಕಾಮಿಡಿ ಕಿಲಾಡಿಗಳು ಕ್ರಿಯೇಟಿವಿಟಿ ಮತ್ತು ಹೊಸತನದ ಪ್ರತಿರೂಪವಾಗಿದೆ. ಇನ್ನು ಪ್ರತಿಸಂಚಿಕೆಯಲ್ಲೂ ಹಾಸ್ಯ, ತರ್ಲೆ, ನಗುವಿನ ಚಟಾಕಿ ಇರಲಿದೆ. ಹೊಸಪ್ರತಿಭೆಗಳು ಕಾಮಿಡಿ ಸ್ಕಿಟ್ ಗಳ ಮೂಲಕ ಕನ್ನಡಿಗರ ಮನಕ್ಕೆ ಲಗ್ಗೆ ಇಡಲು ಸಜ್ಜಾಗಿದ್ದಾರೆ. ಇದೇ ಅಕ್ಟೋಬರ್ 25 ರಿಂದ, ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ಶೋ ಪ್ರಸಾರವಾಗಲಿದೆ.

  • `ಬೆಳಗಿಕೊಂಡಿರೆಂದು ಕಿಡಿ ತಾಕಿಸಿ ಹೊರಟಿತು ಹೆಣ್ಣು’ – ಪ್ರೀತಿಯ ಮಡದಿ ನೆನೆದು ಪತಿ ಬರೆದ ಕವನವಿದು..!

    `ಬೆಳಗಿಕೊಂಡಿರೆಂದು ಕಿಡಿ ತಾಕಿಸಿ ಹೊರಟಿತು ಹೆಣ್ಣು’ – ಪ್ರೀತಿಯ ಮಡದಿ ನೆನೆದು ಪತಿ ಬರೆದ ಕವನವಿದು..!

    ಬೆಂಗಳೂರು: ಅಚ್ಚಕನ್ನಡದ ನಿರೂಪಕಿ ಅಪರ್ಣಾ (Kannada Anchor Aparna) ಅವರಿಂದು ಕೊನೆಯುಸಿರೆಳೆದಿದ್ದಾರೆ. ಇತ್ತ ಪ್ರೀತಿಯ ಮಡದಿ ಕಳೆದುಕೊಂಡು ಭಾವುಕರಾಗಿರುವ ಪತಿ ನಾಗರಾಜ್ ವಸ್ತಾರೆ (Nagaraj Ramaswamy Vastarey) ಭಾವುಕರಾಗಿದ್ದಾರೆ. ಮಡದಿಗಾಗಿ ಕವನವೊಂದನ್ನು ಬರೆದು ಪೃಥ್ವಿಯಿಂದ ಬೀಳ್ಕೊಟ್ಟಿದ್ದಾರೆ. ಪತ್ನಿಯೊಂದಿಗಿನ ಕೊನೇ ಕ್ಷಣಗಳನ್ನು ನೆನೆದು ಬರೆದ ಸಾಲುಗಳು ಹೀಗಿವೆ….

    ಬೆಳಗಿಕೊಂಡಿರೆಂದು
    ಕಿಡಿ ತಾಕಿಸಿ ಹೊರಟಿತು
    ಹೆಣ್ಣು

    ಚಿತ್ತು ತೆಗೆದು
    ಬತ್ತಿಯ ನೆತ್ತಿ ಚೆನ್ನಾಗಿಸಿ
    ತಿರುಪಿ ತಿದ್ದಿ
    ಇರು

    ತುಸುವಿರೆಂದು ಕರೆದರೂ
    ನಿಲ್ಲದೆಯೇ
    ಬೇರಾವುದೋ ಕರೆಗೆ
    ತಣ್ಣಗೆ ಓಗೊಟ್ಟ ಮೇರೆ
    ಯಲ್ಲಿ

    ಒಂದೇ ಒಂದು
    ನಿಮಿಷ
    ಬಂದೇನೆಂದು ಕಡೆಗಳಿಗೆ
    ಯ ಸೆರಗಿನ ಬೆನ್ನಿನಲ್ಲಿ
    ಅಂದು.

    ಕಾದಿದ್ದೇನೆ
    ಈಗ ಬಂದಾಳೆಂದು
    ಆಗ ಬಂದಾಳೆಂದು
    ಮರಳಿ
    ಜೀವ ತಂದಾಳೆಂದು
    ಇದು

    ಮೂರನೇ ದಿವಸ
    ಇಷ್ಟಾಗಿ
    ಬೆಳಗಲಿಟ್ಟ ಕಿರಿಸೊಡರ
    ಬೆಳಕು ನಾನು
    ಉರಿವುದಷ್ಟೇ ಕೆಲಸ
    ಇರುವ ತನಕ.

  • ಶ್ವಾಸಕೋಶ ಕ್ಯಾನ್ಸರ್‌ ಈ ಹಂತದಲ್ಲಿತ್ತು, ವೈದ್ಯರು ಆರೇ ತಿಂಗಳು ಗ್ಯಾರಂಟಿ ಕೊಟ್ಟಿದ್ದರು – ಮಡದಿ ಸಾವು ನೆನೆದು ಪತಿ ಭಾವುಕ!

    ಶ್ವಾಸಕೋಶ ಕ್ಯಾನ್ಸರ್‌ ಈ ಹಂತದಲ್ಲಿತ್ತು, ವೈದ್ಯರು ಆರೇ ತಿಂಗಳು ಗ್ಯಾರಂಟಿ ಕೊಟ್ಟಿದ್ದರು – ಮಡದಿ ಸಾವು ನೆನೆದು ಪತಿ ಭಾವುಕ!

    ಬೆಂಗಳೂರು: ಕನ್ನಡಿಗರ ಮನ ಗೆದ್ದಿದ್ದ ನಿರೂಪಕಿ ಅಪರ್ಣಾ (Aparna) ಅವರಿಂದು ಚಿರನಿದ್ರೆಗೆ ಜಾರಿದ್ದಾರೆ. ಇತ್ತ ಪ್ರೀತಿಯ ಮಡದಿ ಕಳೆದುಕೊಂಡು ಪತಿ ನಾಗರಾಜ್ ವಸ್ತಾರೆ (Nagaraj Ramaswamy Vastarey)  ಭಾವುಕರಾಗಿದ್ದಾರೆ.

    ಅಪರ್ಣಾ ವಿಧಿವಶರಾದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ನಾಗರಾಜ್‌ ವಸ್ತಾರೆ, ತುಂಬಾ ಖಾಸಗಿಯಾಗಿ ಬದುಕಿದವಳು ಅಪರ್ಣಾ, ಅಷ್ಟೇ ಖಾಸಗಿಯಾಗಿ ಬೀಳ್ಕೊಡಲು ಬಯಸುತ್ತೇನೆ. ಅವಳು ನನಗೆ ಸಲ್ಲೋದಕ್ಕೆ ಮುಂಚೆನೇ ಕರ್ನಾಟಕಕ್ಕೆ ಸೇರಿದವಳು. ಮಾಧ್ಯಮದವರ ಮುಂದೆಯೇ ನಿಂತು ಏನಾಯ್ತು ಅಂತಾ ಹೇಳಬೇಕು ಅನ್ನೋದು ಅವಳ ಆಸೆಯಾಗಿತ್ತು. ಅಷ್ಟನ್ನೇ ನಾನು ಹೇಳ್ತಿದ್ದೀನಿ ಎಂದರು. ಇದನ್ನೂ ಓದಿ: ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಅಪರ್ಣಾ – ಬಾಡಿತು ʻಮಸಣದ ಹೂವುʼ!

    ಕ್ಯಾನ್ಸರ್‌ ಗೊತ್ತಾಗಿದ್ದು ಹೇಗೆ?
    ಎರಡು ವರ್ಷಗಳ ಹಿಂದೆ ಶ್ವಾಸಕೋಶದ ಕ್ಯಾನ್ಸರ್‌ (Lung cancer) ಇರುವುದು ತಪಾಸಣೆಯಲ್ಲಿ ಗೊತ್ತಾಯ್ತು. ಅದಾಗಲೇ ನಾಲ್ಕನೇ ಹಂತದಲ್ಲಿತ್ತು. ಮೊದಲು ನೋಡಿದಾಗ ವೈದ್ಯರು ಇನ್ನೂ 6 ತಿಂಗಳು ಬುಕಿದ್ದರೆ ಹೆಚ್ಚು ಅಂತ ಹೇಳಿದ್ದರು. ಆದ್ರೆ ಅವಳು ಛಲಗಾತಿ, ಏನಾದರೂ ಗೆದ್ದೇ ಗೆಲ್ಲುತ್ತೇನೆ ಅನ್ನುವ ಛಲವಿತ್ತು. ಅದಾದಮೇಲೂ ಒಂದೂವರೆ ವರ್ಷ ಹೋರಾಡಿದಳು. ಆದ್ರೆ ಕಳೆದ ಫೆಬ್ರವರಿ ತಿಂಗಳಿನಿಂದ ಸೋತಿದ್ದಳು. ಏಕೆಂದರೆ ಇದು ದೇಹವೇ ದೇಹವನ್ನ ಬಾಧಿಸುವ ವ್ಯಾದಿ, ನಾನು ಅರಿತಿರುವ ಹಾಗೆಯೇ ಕ್ಯಾನ್ಸರ್‌ ಅನ್ನೋದು ನೀನಲ್ಲದ ಇನ್ನೊಂದು ವ್ಯಕ್ತಿತ್ವವನ್ನ ಹೇರಲು ಬಯಸುತ್ತೆ. ಅವಳು ಧೀರೆ ಇಷ್ಟು ವರ್ಷ ಸಾಧ್ಯವಾದಷ್ಟೂ ಮಣಿಸಿದಳು. ಆದರೀಗ ನಾವಿಬ್ಬರೂ ಜಂಟಿಯಾಗಿ ಸೋತಿದ್ದೇವೆ ಎಂದು ಕಣ್ಣೀರಿಟ್ಟರು. ಇದನ್ನೂ ಓದಿ: Breaking: ಮಾತು ನಿಲ್ಲಿಸಿ ಚಿರನಿದ್ರೆಗೆ ಜಾರಿದ ಅಪರ್ಣಾ!

    ಮುಂಬರುವ ಅಕ್ಟೋಬರ್‌ಗೆ 58 ವರ್ಷ ತುಂಬುತ್ತಿತ್ತು. ಅವಳ ದೇಹ ಅನ್ನೋದು ಮಾಯಕ ಅನ್ನೋದು ತೋರುತ್ತದೆ. ಏಕೆಂದರೆ ನಿಜವಾದ ವಯಸ್ಸನ್ನು ಯಾವತ್ತೂ ತೋರಿಸಲಿಲ್ಲ. 9:30 ಸುಮಾರಿನಲ್ಲಿ ದೇಹ ತನ್ನನ್ನ ತಾನೂ ಹಿಂಪಡೆದುಕೊಂಡಿತು ಎಂದು ಭಾವುಕರಾದರು. ಇದನ್ನೂ ಓದಿ: ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ! 

  • ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಅಪರ್ಣಾ – ಬಾಡಿತು ʻಮಸಣದ ಹೂವುʼ!

    ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಅಪರ್ಣಾ – ಬಾಡಿತು ʻಮಸಣದ ಹೂವುʼ!

    ಬೆಂಗಳೂರು: ಆಕೆಯ ಧ್ವನಿಯಲ್ಲಿ ಹೊಮ್ಮುತ್ತಿದ್ದ ಕನ್ನಡ ನುಡಿಗಳು ಎಂಥವರನ್ನೂ ತಲೆದೂಗುವಂತೆ ಮಾಡುತ್ತಿತ್ತು, ಭಾಷೆಗೆ ತಕ್ಕ ಭಾವನೆ, ಅಚ್ಚ ಕನ್ನಡವನ್ನು‌ ಸ್ವಚ್ಛವಾಗಿ ಮಾತನಾಡುವ ಶೈಲಿ, ಪದಕ್ಕೆ ಪದ ಸೇರಿಸಿ ಅಕ್ಷರಗಳಿಗೂ ಭಾವ ತುಂಬುತ್ತಿದ್ದ ದನಿ ಇಂದು ಚಿರಮೌನಕ್ಕೆ ಜಾರಿದೆ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಕನ್ನಡಿಗರ ಮನಗೆದ್ದಿದ್ದ ಅಪರ್ಣಾ ತಮ್ಮ ಮಾತುಗಳಿಗೆ ಪೂರ್ಣ ವಿರಾಮವನ್ನಿಟ್ಟಿದ್ದಾರೆ.

    ಹೌದು. ಕನ್ನಡಿಗರ ಮನ ಗೆದ್ದಿದ್ದ ನಿರೂಪಕಿ ಅಪರ್ಣಾ (Kannada Anchor Aparna) ಅವರಿಂದು ಚಿರನಿದ್ರೆಗೆ ಜಾರಿದ್ದಾರೆ. ಹಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

    ನಮ್ಮ ಮೆಟ್ರೋಗೆ ದನಿಯಾಗಿದ್ದ ಅಪರ್ಣಾ:
    ಯಶಸ್ವಿ ನಿರೂಪಕಿಯಾಗಿ 3 ದಶಕಗಳ ವರೆಗೆ ಕನ್ನಡ ಸೇವೆ ಸಲ್ಲಿಸಿದ ಅಪರ್ಣಾ, 2014 ರಲ್ಲಿ ಬೆಂಗಳೂರಿನ ʻನಮ್ಮ ಮೆಟ್ರೋʼದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ, ಮತ್ತು ಇಳಿಯುವ ಸೂಚನೆʼಗೆ ಧ್ವನಿ ಗೂಡಿಸಿದ್ದರು. ಇದನ್ನೂ ಓದಿ: ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!

    ಬಾಡಿದ ಮಸಣದ ಹೂವು:
    1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ʻಸಣದ ಹೂವುʼಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟನೆ ಮಾಡಿದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದನ್ನೂ ಓದಿ: Breaking: ಮಾತು ನಿಲ್ಲಿಸಿ ಚಿರನಿದ್ರೆಗೆ ಜಾರಿದ ಅಪರ್ಣಾ!

    1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟನೆ ಮಾಡಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನ ಸ್ಪರ್ಧೆಯಾಗಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದರು. 2014ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದು ಕೂಡ ಇವರೇ. ಇದನ್ನೂ ಓದಿ: ಜು.16ರಂದು ಸಿಗಲಿದೆ ‌’ಮ್ಯಾಕ್ಸ್‌’ ಚಿತ್ರದ ಅಪ್‌ಡೇಟ್‌- ಕಿಚ್ಚ ಕೊಟ್ರು ಗುಡ್‌ ನ್ಯೂಸ್ 

  • ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!

    ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!

    ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ (kannada anchor aparna) ಅವರಿಂದು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ʻಮಸಣದ ಹೂವುʼ ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಿರಲಿಲ್ಲ. ನಟನೆ, ನಿರೂಪಣೆ, ಕಿರುತೆರೆಯಲ್ಲಿ ಅವರು ಮಿಂಚಿದ್ದರು. ಅವರಿಂದು ತಮ್ಮ ಮಾತುಗಳಿಗೆ ಪೂರ್ಣ ವಿರಾಮವನ್ನಿಟ್ಟಿದ್ದಾರೆ.

    ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯಮಾನ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಬಸವರಾಜ ಬೊಮ್ಮಾಯಿ:
    ಕನ್ನಡದ ಖ್ಯಾತ‌ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು.‌ ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

    ಸಂತೋಷ್‌ ಲಾಡ್‌:
    ತಮ್ಮ ಅದ್ಭುತ ಮಾತುಗಾರಿಕೆಯಿಂದ ಹೆಸರು ಮಾಡಿದ್ದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರ ಅಕಾಲಿಕ ನಿಧನ‌‌ ನಿಜಕ್ಕೂ ಬೇಸರ ತರಿಸಿದೆ. ಅಪರ್ಣಾ ಅವರಾಡುತ್ತಿದ್ದ ಶುದ್ಧ ಕನ್ನಡ ಭಾಷೆಯನ್ನು ಕೇಳುವುದೇ ಅನನ್ಯ ಅನುಭವ. ಅವರ ನಿಧನ ಯಾವತ್ತಿಗೂ ತುಂಬಲಾರದ ನಷ್ಟ. ಅಪರ್ಣಾ ಅವರ ಆತ್ಮಕ್ಕೆ ಪರಮಾತ್ಮನು ಶಾಂತಿ ಕರುಣಿಸಲಿ, ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸೋಣ.

    ಜಮೀರ್ ಅಹಮದ್ ಖಾನ್:
    ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡದಲ್ಲಿ ಸೊಗಸಾಗಿ ನಿರೂಪಣೆ ಮಾಡಿ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಅಪರ್ಣಾ ಅವರ ಅಗಲಿಕೆ ಕಿರುತೆರೆ ಹಾಗೂ ಚಲನ ಚಿತ್ರ ರಂಗಕ್ಕೆ ಅಪಾರ ನಷ್ಟ. ಅಪರ್ಣಾ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತ ನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

    ಡಿಕೆ ಶಿವಕುಮಾರ್: 
    ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು.

  • Breaking: ಮಾತು ನಿಲ್ಲಿಸಿ ಚಿರನಿದ್ರೆಗೆ ಜಾರಿದ ಅಪರ್ಣಾ!

    Breaking: ಮಾತು ನಿಲ್ಲಿಸಿ ಚಿರನಿದ್ರೆಗೆ ಜಾರಿದ ಅಪರ್ಣಾ!

    ಬೆಂಗಳೂರು: ಕ್ಯಾನ್ಸರ್‌ ಕಾಯಿಲೆಯಿಂದಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ  (Kannada Anchor Aparna) ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್‌ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್‌ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಇದನ್ನೂ ಓದಿ: ಪ್ರೆಗ್ನೆಂಟ್ ದೀಪಿಕಾ ಪಡುಕೋಣೆ ಬೇಬಿ ಬಂಪ್ ಮುಟ್ಟಿ ಪೋಸ್ ಕೊಟ್ಟ ಓರ್ರಿ

    ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ. ಈ ಮೂಲಕ ತಮ್ಮ ಕನ್ನಡ ಸೇವೆಯನ್ನು ಮುಂದುವರಿಸಿದ್ದಾರೆ. ಇದನ್ನೂ ಓದಿ: ತಪ್ಪಾಗಿದ್ರೆ ಶಿಕ್ಷೆಯಾಗುತ್ತದೆ, ಕಾನೂನಿಗಿಂತ ಯಾರು ದೊಡ್ಡವರಿಲ್ಲ: ಧನ್ವೀರ್‌ ಗೌಡ

    ಕಿರುತೆರೆಯಲ್ಲಿ ʻಮೂಡಲಮನೆʼ, ʻಮುಕ್ತʼ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆʼಗೆ ಧ್ವನಿ ಗೂಡಿಸಿದ್ದರು. ಇದನ್ನೂ ಓದಿ: ನಟ ದರ್ಶನ್‌ ಬಂಧನವಾಗಿ ಒಂದು ತಿಂಗಳು ಪೂರ್ಣ – ಅರೆಸ್ಟ್‌ ದಿನದಿಂದ ಇಲ್ಲಿವರೆಗೆ ಏನೇನಾಯ್ತು? ಇಲ್ಲಿದೆ ಟೈಮ್‌ಲೈನ್‌! 

  • ಕೂಡಿಬಾಳಲು ಒಪ್ಪಿಕೊಳ್ಳದ ಮಾಜಿ ಪತ್ನಿಗೆ HIV ರೋಗಿಯ ರಕ್ತ ಇಂಜೆಕ್ಟ್ ಮಾಡಿದ ಭೂಪ

    ಕೂಡಿಬಾಳಲು ಒಪ್ಪಿಕೊಳ್ಳದ ಮಾಜಿ ಪತ್ನಿಗೆ HIV ರೋಗಿಯ ರಕ್ತ ಇಂಜೆಕ್ಟ್ ಮಾಡಿದ ಭೂಪ

    – ಕ್ರೈಂ ಥ್ರಿಲರ್ ಟಿವಿ ಶೋ ನಿಂದ ಪ್ರೇರಣೆ
    – ತನಿಖೆ ವೇಳೆ ರೋಚಕ ರಹಸ್ಯ ಬಯಲು

    ನವದೆಹಲಿ: ಪ್ರತಿಷ್ಠಿತ ಟಿ.ವಿ ಕಾರ್ಯಕ್ರಮವೊಂದರಿಂದ (TV Show) ಪ್ರೇರಣೆ ಪಡೆದ ವ್ಯಕ್ತಿಯೊಬ್ಬ ತನ್ನೊಂದಿಗೆ ಕೂಡಿಬಾಳಲು ಒಪ್ಪಿಕೊಳ್ಳದ ಮಾಜಿ ಪತ್ನಿಗೆ ಹೆಚ್‌ಐವಿ ರೋಗಿಯ ರಕ್ತವನ್ನು ಇಂಜೆಕ್ಟ್ ಮಾಡಿರುವ ಘಟನೆ ಗುಜರಾತ್‌ನ (Gujarat) ಸೂರತ್‌ನಲ್ಲಿ  ನಡೆದಿದೆ.

    ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನ ಸೂರತ್ ಪೊಲೀಸರು (Surat Police) ಬಂಧಿಸಿದ್ದಾರೆ. ಬಳಿಕ ತನಿಖೆಯಲ್ಲಿ ಆತ ಕ್ರೈಂ (Crime) ಥ್ರಿಲ್ಲಿಂಗ್ ಟಿವಿ ಶೋ ನಿಂದ ಪ್ರೇರಿತನಾಗಿದ್ದಾನೆ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಪೆರೋಲ್ ಪಡೆದು ಪರಾರಿಯಾದಾತ ತನ್ನದೇ ಸಾವಿನ ಕತೆ ಕಟ್ಟಿದ – 15 ವರ್ಷಗಳ ಬಳಿಕ ಮತ್ತೆ ಅಂದರ್

    ಸಂತ್ರಸ್ತ ಮಹಿಳೆ ಹಾಗೂ ಆರೋಪಿ (Accused) ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಆದ್ರೆ ಕಳೆದ 2 ತಿಂಗಳಿನಿಂದ ನಿರಂತರ ಜಗಳದಿಂದಾಗಿ ವಿಚ್ಛೇದನ ಪಡೆದು ಇಬ್ಬರೂ ದೂರವಾಗಿದ್ದರು. ಒಂಟಿ ಜೀವನದಿಂದ ಬೇಸತ್ತಿದ್ದ ಆರೋಪಿ ಪತಿ ಮತ್ತೆ ತನ್ನ ಸಂಗಾತಿಯೊಂದಿಗೆ ಕೂಡಿಬಾಳಲು ನಿರ್ಧರಿಸಿದ್ದನು. ಆದ್ರೆ ಇದಕ್ಕೆ ಮಹಿಳೆ ಒಪ್ಪಿಕೊಳ್ಳಲಿಲ್ಲ. ಹಾಗಾಗಿ ಆಕೆ ವಿರುದ್ಧ ಸೇಡು ತೀರಿಸಿಕೊಳ್ಳಲು ಕಳೆದ ಒಂದು ತಿಂಗಳಿನಿಂದ ಸ್ಕೆಚ್ ಹಾಕಿ ಭೇಟಿಯಾಗಲು ಕಾಯುತ್ತಿದ್ದನು. ಇದನ್ನೂ ಓದಿ: ರಚನಾ ದಶರಥ್ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡ ಲೋಕೇಶ್ ಬಸವಟ್ಟಿ

    ಬಹುದಿನಗಳ ನಂತರ ಭಾನುವಾರ (ಡಿ.25) ಇಬ್ಬರೂ ಭೇಟಿಯಾಗಿದ್ದರು. ಇಬ್ಬರೂ ರೆಸ್ಟೋರೆಂಟ್ ಹೋಗಿ ಊಟ ಮಾಡಿ, ಶಾಪಿಂಗ್ ಸಹ ಮುಗಿಸಿದ್ದರು. ಸಂಜೆ ಸ್ವಲ್ಪ ಖಾಸಗಿ ಸಮಯ ಕಳೆಯೋದಕ್ಕಾಗಿ ಮೋರಾ ಭಾಗಲ್ ಪ್ರದೇಶದಲ್ಲಿ ಪ್ರತ್ಯೇಕ ಸ್ಥಳಕ್ಕೆ ತೆರಳಿದ್ದರು. ಈ ಸಮಯದಲ್ಲಿ ಮಾಜಿ ಪತಿ ಆಕೆಯ ಮನವೊಲಿಸಲು ಶತಾಯಗತಾಯ ಪ್ರಯತ್ನಿಸಿದ್ದಾನೆ. ಆದರೂ ಆಕೆ ಒಪ್ಪಿಕೊಳ್ಳದ ಮೇಲೆ, ತಬ್ಬಿಕೊಳ್ಳುವ ನೆಪದಲ್ಲಿ ಪೃಷ್ಠ ಭಾಗಕ್ಕೆ (ಹಿಂಬದಿಯ ಪಕ್ಕೆಯಿಂದ ಕೆಳಭಾಗ) ಹೆಚ್‌ಐವಿ ರೋಗಿಯ ರಕ್ತವನ್ನು ಇಂಜೆಕ್ಟ್ ಮಾಡಿದ್ದಾನೆ. ಸ್ವಲ್ಪ ಸಮಯದಲ್ಲೇ ಮಹಿಳೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ಮರಳಿ ಪ್ರಜ್ಞೆ ಬಂದೊಡನೆ ವೈದ್ಯರಿಂದ ಮಾಹಿತಿ ಪಡೆದು ನಂತರ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿಯನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ ಆತನ ಪ್ಯಾಂಟ್ ಜೇಬಿನಲ್ಲಿ ರಕ್ತದ ಕಲೆ ಪತ್ತೆಯಾಗಿದೆ.

    ಥ್ರಿಲ್ಲರ್ ಟಿವಿ ಶೋ ಪ್ರೇರಣೆ: ಮಹಿಳೆಗೆ ಇಂಜೆಕ್ಟ್ ಮಾಡಲು ಒಂದು ತಿಂಗಳ ಹಿಂದೆಯೇ ಯೋಜಿಸಿದ್ದನು. ಒಂದು ಟಿವಿ ಶೋನಿಂದ ಪ್ರೇರಣೆ ಪಡೆದಿದ್ದನು. ಆ ಟಿವಿ ಶೋನಲ್ಲಿ `ವ್ಯಕ್ತಿಯೊಬ್ಬ ಹೆಣ್ಣು ನಾಯಿಗೆ ರಕ್ತವನ್ನು ಇಂಜೆಕ್ಟ್ ಮಾಡುತ್ತಾನೆ’ ಅದನ್ನು ನಾನೂ ನೋಡಿದ್ದೆ ಎಂದು ಆರೋಪಿ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ರಕ್ತ ಹೇಗೆ ಪಡೆದುಕೊಂಡನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ʻಸರಿಗಮಪʼ ಖ್ಯಾತಿಯ ಜ್ಞಾನಗೆ ಒಲಿದು ಬಂತು ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಪ್ರಶಸ್ತಿ

    ʻಸರಿಗಮಪʼ ಖ್ಯಾತಿಯ ಜ್ಞಾನಗೆ ಒಲಿದು ಬಂತು ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಪ್ರಶಸ್ತಿ

    ಕಿರುತೆರೆಯ ಖ್ಯಾತ ರಿಯಾಲಿಟಿ ಶೋ `ಸರಿಗಮಪ’ ಕಾರ್ಯಕ್ರಮದಲ್ಲಿ ತನ್ನ ಚೆಂದದ ಮಾತುಗಳಿಂದಲೇ ಕರ್ನಾಟಕದ ಸಾಕಷ್ಟು ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಪುಟಾಣಿ ಜ್ಞಾನ ಗುರುರಾಜ್ ಬೆಂಗಳೂರಿನ ಸಾಲುಮರದ ತಿಮ್ಮಕ್ಕ ಇಂಟರ್‌ನ್ಯಾಶನಲ್ ಫೌಂಡೇಶನ್ ವತಿಯಿಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಚಿಕ್ಕ ವಯಸ್ಸಿನಲ್ಲಿಯೇ ಸಂಗೀತಲೋಕದಲ್ಲಿ ಗುರುತಿಸಿಕೊಂಡಿರುವ ಜ್ಞಾನ, ತಮ್ಮ ಸುಮಧುರ ಕಂಠದಿಂದಲೇ ಹಂಸಲೇಖ ಸೇರಿದಂತೆ ಹಲವಾರು ಗಣ್ಯರ ಸಾರಥ್ಯದಲ್ಲಿ ಮುಂದುವರಿಯುತ್ತಿದ್ದು, ಇದೀಗ ಇಂದು ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯುವ ಸಾಲು ಮರದ ತಿಮ್ಮಕ್ಕ ಅಭಿನಂದನಾ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಗೌರವಾರ್ಪಣೆ ಪಡೆಯಲಿದ್ದಾರೆ. ಇದನ್ನೂ ಓದಿ:ಜಸ್ವಂತ್ ಗಿಲ್ ಬಯೋಪಿಕ್‌ನಲ್ಲಿ ಅಕ್ಷಯ್ ಕುಮಾರ್

    ಇನ್ನು ಈ ಪ್ರಶಸ್ತಿಯು ತಲಾ 25 ಸಾವಿರ ರೂ ನಗದು, ಬೆಳ್ಳಿಪದಕ, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಜ್ಞಾನ ತಾಯಿ ರೇಖಾ ಅವರು ಕಡಬದ ಕೊಂಬಾರು ಗ್ರಾಮದ ಕಟ್ಟೆ ಇಡ್ಯಡ್ಕದವರಾಗಿದ್ದು, ಬೆಂಗಳೂರಿನ ರಾಮನಗರ ಹನುಮಾನ ಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಂಗೀತ ಶಿಕ್ಷಕಿಯಾಗಿದ್ದಾರೆ. ಜ್ಞಾನ ತಂದೆ ಗುರುರಾಜ್ ಬೆಂಗಳೂರಿನಲ್ಲಿ ಸಂಗೀತ ಗುರುಗಳಾಗಿದ್ದಾರೆ. ಜ್ಞಾನ ನೂರಾರು ವೇದಿಕೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ, ಟಿ.ವಿ. ಶೋಗಳಲ್ಲಿ ಭಾಗವಹಿಸಿ ಖ್ಯಾತ ನಟರಿಂದ, ಸಂಗೀತ ಮಾಂತ್ರಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಾರ್ಯಕ್ರಮದಲ್ಲಿ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಗೈದ ಹಲವಾರಿಗೆ ಪ್ರಶಸ್ತಿ ಪ್ರಧಾನವು ನಡೆಯಲಿದೆ.

    Live Tv

  • ರಾಮಾಯಣ, ಮಹಾಭಾರತದ ನಂತರ ಮತ್ತೆ ಎಂಟ್ರಿ ಕೊಡ್ತಿದ್ದಾನೆ ಶಕ್ತಿಮಾನ್

    ರಾಮಾಯಣ, ಮಹಾಭಾರತದ ನಂತರ ಮತ್ತೆ ಎಂಟ್ರಿ ಕೊಡ್ತಿದ್ದಾನೆ ಶಕ್ತಿಮಾನ್

    ನವದೆಹಲಿ: ಭಾರತದ ಪ್ರಪ್ರಥಮ ಸೂಪರ್ ಹೀರೋ ಧಾರಾವಾಹಿ, 90ರ ದಶಕದ ಮಕ್ಕಳ ಅಚ್ಚುಮೆಚ್ಚಿನ ಶಕ್ತಿಮಾನ್ ಶೋ ಮತ್ತೆ ಪ್ರಸಾರ ಮಾಡಲು ದೂರದರ್ಶನ ಸಕಲ ಸಿದ್ಧತೆ ಮಾಡಿಕೊಂಡಿದೆ.

    ಮುಖೇಶ್ ಖನ್ನಾ ನಟನೆಯ ಈ ಧಾರಾವಾಹಿಯನ್ನು ಡಿಡಿ ನ್ಯಾಷನಲ್ ವಾಹಿನಿಯಲ್ಲಿ ಪ್ರತಿ ದಿನ ಒಂದು ತಾಸು ಪ್ರಸಾರ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್‍ನಿಂದ ಮಧ್ಯಾಹ್ನ 1ಗಂಟೆಗೆ ಈ ಶೋ ಪ್ರಸಾರವಾಗಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಮೂಲಕ ಶಕ್ತಿಮಾನ್‍ನ ಸಾಹಸಗಳನ್ನು ಮಕ್ಕಳೊಂದಿಗೆ ಮತ್ತೆ ಎಂಜಾಯ್ ಮಾಡಬಹುದಾಗಿದೆ.

    ಮುಖೇಶ್ ಖನ್ನಾ ಅವರು ಈ ಧಾರಾವಾಹಿಯಲ್ಲಿ ಶಕ್ತಿಮಾನ್ ಪಾತ್ರ ನಿರ್ವಹಿಸಿದ್ದರು. ಕೇವಲ ಮನರಂಜನೆ ಮಾತ್ರವಲ್ಲದೆ ತಮ್ಮ ಅದ್ಭುತ ಶಕ್ತಿ ಮೂಲಕ ಶಕ್ತಿಮಾನ್ ಜೀವನದ ಪಾಠಗಳನ್ನು ಕಲಿಸುತ್ತಿದ್ದ. ಹೀಗಾಗಿ ಪ್ರತಿ ಭಾನುವಾರ ಒಂದು ಗಂಟೆ ಕಾಲ ಪ್ರಸಾರವಾಗುತ್ತಿದ್ದ ಶಕ್ತಿಮಾನ್ ಧಾರವಾಹಿಯನ್ನು ಕುಟುಂಬ ಸಮೇತರಾಗಿ ನೋಡುತ್ತಿದ್ದರು. ಇದೀಗ ಮತ್ತೆ ಪ್ರಸಾರ ಮಾಡಲು ನಿರ್ಧರಿಸಲಾಗಿದೆ.

    ರಾಮಾಯಣ, ಮಹಾಭಾರತವನ್ನು ಮರು ಪ್ರಸಾರ ಮಾಡಲು ತೀರ್ಮಾನ ಕೈಗೊಂಡ ನಂತರ ಶಕ್ತಿಮಾನ್ ಧಾರವಾಹಿಯನ್ನೂ ಮರು ಪ್ರಸಾರ ಮಾಡುವಂತೆ ಒತ್ತಡ ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

    ಮಾತ್ರವಲ್ಲದೆ ಈ ಹಿಂದೆ ಶಕ್ತಿಮಾನ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಇದರ ಮುಂದುವರಿದ ಭಾಗವನ್ನು ರಚಿಸಲು ಮುಖೇಶ್ ಖನ್ನಾ ಚಿಂತನೆ ನಡೆಸಿದ್ದಾರಂತೆ. ಇದರಲ್ಲಿ ಮುಖೇಶ್ ಶಕ್ತಿಮಾನ್ ಪಾತ್ರ ನಿರ್ವಹಿಸುವುದು ಮಾತ್ರವಲ್ಲದೆ, ಕಥೆ ರಚಿಸುವ ಪ್ರಯತ್ನದಲ್ಲಿಯೂ ತೊಡಗಿದ್ದಾರಂತೆ.

    ಈ ಕುರಿತು ಇಂಗ್ಲಿಷ್ ಪತ್ರಿಕೆಯೊಂದರ ಸಂದರ್ಶನದಲ್ಲಿ ಮುಖೇಶ್ ಖನ್ನಾ ಮಾಹಿತಿ ನೀಡಿದ್ದು, ಶಕ್ತಿಮಾನ್ ಮುಂದುವರಿದ ಭಾಗದ ಕುರಿತು ಕೆಲಸ ಮಾಡುತ್ತಿದ್ದೇವೆ. ಶಕ್ತಿಮಾನ್‍ನ ಎರಡನೇ ಭಾಗವನ್ನು ತೆರೆ ಮೇಲೆ ತರಲು ಕಳೆದ ಮೂರು ವರ್ಷಗಳಿಂದ ಸಿದ್ಧತೆ ನಡೆಸಿದ್ದೇವೆ. ಇದು ಸಮಕಾಲೀನವಾಗಿದ್ದು, ಮೌಲ್ಯಗಳನ್ನು ಎತ್ತಿ ಹಿಡಿಯಲಿದೆ. ಹೀಗಾಗಿ ಅದರ ಎರಡನೇ ಭಾಗದ ತಯಾರಿಯಲ್ಲಿ ತೊಡಗಿದ್ದೇವೆ. ಅಲ್ಲದೆ ಜನ ಸಹ ಮುಂದೇನಾಗುತ್ತದೆ ಎಂಬುದನ್ನು ತಿಳಿಯಲು ಕುತೂಹಲದಿಂದ ಕಾಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಕೊರೊನಾ ಭೀತಿ ಎಲ್ಲ ತಿಳಿಯಾದ ನಂತರ ಕೆಲಸ ಚುರುಕಾಗಲಿದೆ. ಆದರೆ ಯಾವಾಗಿಂದ ಮತ್ತೆ ಕೆಲಸ ಮಾಡುತ್ತೇವೆ ಎಂಬ ನಿರ್ದಿಷ್ಟ ಸಮಯವನ್ನು ಹೇಳಲು ಸಾಧ್ಯವಿಲ್ಲ. ಹಿಂದೆಂದಿಗಿಂತಲೂ ಇದೀಗ ತುಂಬಾ ಬೇಡಿಕೆ ಬರುತ್ತಿದೆ. ಹೀಗಾಗಿ ಎರಡನೇ ಭಾಗವನ್ನು ತೆರೆ ಮೇಲೆ ತರಲು ಇದು ಸೂಕ್ತ ಸಮಯ ಎಂದು ನಾನು ಭಾವಿಸಿದ್ದೇನೆ. ಇದಕ್ಕೂ ಮುನ್ನ ಮುಖೇಶ್ ಅವರು ಸೂಪರ್ ಹೀರೋ ಕುರಿತು ಚಿತ್ರ ಮಾಡುವ ಇಂಗಿತವನ್ನು ಹೊರ ಹಾಕಿದ್ದರು. ನಾನು ಶಕ್ತಿಮಾನ್ ನನ್ನು ಪೂರ್ಣ ಪ್ರಮಾಣದ ಚಲನಚಿತ್ರವನ್ನಾಗಿಸಲು ಬಯಸಿದ್ದೆ. ಆದರೆ ಟೆಲಿಫಿಲಂನೊಂದಿಗೆ ಹಣಕಾಸು ಹೊಂದಾಣಿಕೆ ಏರ್ಪಡಲಿಲ್ಲ. ಹೀಗಾಗಿ ಈ ಯೋಜನೆ ಈಡೇರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

    ಅಲ್ಲದೆ ಶಕ್ತಿಮಾನ್ 3ಡಿ ಆ್ಯನಿಮೇಟೆಡ್ ಸಿರೀಸ್ ಕೂಡ ಘೋಷಣೆಯಾಗಿದ್ದು, ಇದರ ಟ್ರೈಲರ್ ನ್ನು ಕಳೆದ ವರ್ಷ ಕಾಮಿಕ್-ಕಾನ್ ಇಂಡಿಯಾದಲ್ಲಿ ಬಿಡುಗಡೆ ಮಾಡಲಾಗಿದೆ.

    ಕೊರೊನಾ ವೈರಸ್ ಲಾಕ್‍ಡೌನ್ ಸಂದರ್ಭದಲ್ಲಿ ಕಾಲ ಕಳೆಯಲು ಅನುಕೂಲವಾಗುವಂತೆ ಇತ್ತೀಚೆಗಷ್ಟೇ ಹಳೆಯ ರಾಮಾಯಣ, ಮಹಾಭಾರತ ಧಾರಾವಾಹಿಗಳನ್ನು ಪ್ರಸಾರ ಮಾಡಲು ಸರ್ಕಾರ ಮುಂದಾಗಿದೆ. ಇವೆರಡೂ ಧಾರವಾಹಿ ಸಹ ಒಂದಾನೊಂದು ಕಾಲದಲ್ಲಿ ದೇಶದ ಜನತೆಯ ಪ್ರೈಮ್ ಟೈಮ್ ಫೇವರಿಟ್ ಶೋಗಳಾಗಿದ್ದವು. ಹೀಗಾಗಿ ಸಾರ್ವಜನಿಕರಲ್ಲಿ ಸಾಮರಸ್ಯ ಕಾಪಾಡಲು ಈ ಧಾರವಾಹಿಗಳನ್ನು ಸರ್ಕಾರ ಮರು ಪ್ರಸಾರ ಮಾಡುವ ನಿರ್ಧಾರ ಕೈಗೊಂಡಿದೆ.

  • ಬೆಸೆದ ಬಂಧಗಳನ್ನು ಗಟ್ಟಿ ಮಾಡೋಕೆ 4 ವರ್ಷ ನಂತರ ಟಿವಿಯಲ್ಲಿ ಬರ್ತಿದ್ದಾರೆ ಅಪ್ಪು!

    ಬೆಸೆದ ಬಂಧಗಳನ್ನು ಗಟ್ಟಿ ಮಾಡೋಕೆ 4 ವರ್ಷ ನಂತರ ಟಿವಿಯಲ್ಲಿ ಬರ್ತಿದ್ದಾರೆ ಅಪ್ಪು!

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 4 ವರ್ಷಗಳ ಬ್ರೇಕ್ ಬಳಿಕ ಟಿವಿ ಶೋ ನಡೆಸಲು ಬರುತ್ತಿದ್ದಾರೆ. ಈ ಹೊಸ ಫ್ಯಾಮಿಲಿ ಶೋ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದ್ದು ಈ ಕಾರ್ಯಕ್ರಮದ ಪ್ರೋಮೋ ಶೂಟನ್ನು ಪುನೀತ್ ರಾಜ್ ಕುಮಾರ್ ಈಗಾಗಲೇ ಮುಗಿಸಿದ್ದಾರೆ. ಕಲರ್ಸ್ ಕನ್ನಡ ಫೇಸ್ ಬುಕ್ ಪೇಜ್ ನಲ್ಲಿ ಈ ಕಾರ್ಯಕ್ರಮದ 5 ನಿಮಿಷಗಳ ಪ್ರೋಮೋ ರಿಲೀಸ್ ಆಗಿದೆ. ಈಗಾಗಲೇ 4 ಲಕ್ಷಕ್ಕೂ ಅಧಿಕ ಬಾರಿ ಜನರು ಈ ಪ್ರೋಮೋ ನೋಡಿದ್ದಾರೆ.

    ನೂತನ ಶೋದ ಹೆಸರು ಹಾಗೂ ವಿಶೇಷತೆಯನ್ನು ಚಾನೆಲ್ ಎಲ್ಲೂ ಬಿಟ್ಟುಕೊಟ್ಟಿಲ್ಲ.ಜೊತೆಯಲ್ಲಿ ಪುನೀತ್ ಅವರೂ ಹೇಳಲಿಲ್ಲ. ಆದರೆ ಈ ಪ್ರೋಮೋದ ಕೊನೆಯಲ್ಲಿ ಮಾತ್ರ ಬರ್ತಿದೆ ಬೆಸೆದ ಸಂಬಂಧಗಳನ್ನು ಗಟ್ಟಿ ಮಾಡೋ ಹೊಸ ಶೋ ಎಂಬ ಧ್ವನಿ ಕೇಳಿಸುತ್ತಿದೆ.

    ತುಂಬಾ ಸೀಕ್ರೆಟ್ ಆಗಿ ಕಾರ್ಯಕ್ರಮದ ಶೂಟ್ ನಡೆಯುತ್ತಿದೆ. ಈ ಹೊಸ ಶೋಗಾಗಿ ಪುನೀತ್ ರಾಜ್ ಕುಮಾರ್ ಫೋಟೋ ಶೂಟ್ ಕೂಡಾ ನಡೆಯಿತು.

    ಟಿವಿ ಕಮ್ ಬ್ಯಾಕ್ ಬಗ್ಗೆ ಮಾತನಾಡಿದ ಪುನೀತ್ ರಾಜ್ ಕುಮಾರ್ ನನಗೆ ಎಕ್ಸೈಟ್ಮೆಂಟ್ ಅಂತೂ ಇದ್ದೇ ಇದೆ. ಶೋ ಯಾವ ಥರಾ ಇರುತ್ತೆ, ಹೇಗೆ ನಡೆಸ್ಕೊಂಡು ಹೋಗ್ತೀವಿ. ಗೆಸ್ಟ್ ಗಳು ಏನೆಲ್ಲಾ ಹೇಳ್ತಾರೆ ಅನ್ನೋದೇ ಒಂಥರಾ ಥ್ರಿಲ್ ಎಂದರು. ಶೋನ ಪ್ರೋಮೋದಲ್ಲೇ ಎಕ್ಸೈಟ್ಮೆಂಟ್ ಇದೆ. ಪಾಸಿಟಿವ್ ಎನರ್ಜಿ ಕಾಣಿಸಿಕೊಂಡಿದೆ. ಇದೊಂದು ಫ್ಯಾಮಿಲಿ ಶೋ. ಈ ಶೋ ನೋಡಿ ಪ್ರೇಕ್ಷಕರು ಏನ್ ಹೇಳ್ತಾರೆ ಅಂತಾ ನೋಡೋದಕ್ಕೆ ನಾನು ಕಾತರದಿಂದ ಕಾಯುತ್ತಿದ್ದೇನೆ ಎಂದು ಹೇಳಿದರು.

    https://twitter.com/ColorsKannada/status/915790820376141824