Tag: ಟಿ.ಎ.ಶರವಣ

  • ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದ ಹತ್ಯಾಕಾಂಡ: ಶರವಣ

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದ ಹತ್ಯಾಕಾಂಡ: ಶರವಣ

    ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದಿಂದ ಆದ ಹತ್ಯಾಕಾಂಡ. ಇದಕ್ಕೆ ಸರ್ಕಾರವೇ ಹೊಣೆ. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ MLC ಶರವಣ (T.A.Sharavana) ಆಗ್ರಹಿಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಕುಸಿದಿದೆ. ಅರಾಜಕತೆ ತಾಂಡವ ಆಡ್ತಿದೆ. ಯಾವ ರೀತಿ ಆಡಳಿತ ನಡೆಯುತ್ತಿದೆ ಅಂತ ಚಿನ್ನಸ್ವಾಮಿ ಘಟನೆಯಿಂದ ಗೊತ್ತಾಗಿದೆ. 11 ಜನರ ಸಾವಾಗಿದೆ. ಅಷ್ಟು ಬೇಗ ಯಾಕೆ ಕಾರ್ಯಕ್ರಮ ಮಾಡಬೇಕಿತ್ತು. ಭಾರತ ಚಾಂಪಿಯನ್ಸ್‌ ಟ್ರೋಫಿ ಗೆದ್ದಾಗಲೂ ಸಮಯ ತಗೊಂಡು ಕಾರ್ಯಕ್ರಮ ಮಾಡಿದ್ರು. ಸಿಎಂ, ಡಿಸಿಎಂ, ಗೃಹ ಸಚಿವರು ಇದಕ್ಕೆ ಹೊಣೆ. ಡಿಸಿಎಂ ಡಿಕೆ ಶಿವಕುಮಾರ್ ಜನರಿಗೆ ಆಹ್ವಾನ ಮಾಡಿದ್ರು. ಯಾಕೆ ಆಹ್ವಾನ ಕೊಟ್ರಿ. ವಿಧಾನಸೌಧದಲ್ಲಿ ಕಾರ್ಯಕ್ರಮ ಬೇಡ ಅಂತ ಪೊಲೀಸರು ಪತ್ರ ಬರೆದಿದ್ದರು. ಯಾಕೆ ಕಾರ್ಯಕ್ರಮ ಮಾಡಿದ್ರಿ. ಜನಕ್ಕೆ ಬನ್ನಿ ಅಂದ್ರಿ, ಕಪ್‌ಗೆ ಮುತ್ತು ಕೊಟ್ಟವರು ಡಿಕೆಶಿ. ಪರಮೇಶ್ವರ್ ಅನುಭವ ಇರೋ ಮಂತ್ರಿ. ನಿಮಗೂ ಮಾಹಿತಿ ಇಲ್ಲ ಅಂತೀರಾ. ಹಾಗಾದ್ರೆ ನೀವು ಈ ಜಾಗದಲ್ಲಿ ಇರೋದಕ್ಕೆ ಏನು ನೈತಿಕತೆ ಇದೆ. ಸಿಎಂ ವೈಫಲ್ಯ ಅಂತ ಒಪ್ಪಿದ್ದಾರೆ. ಅವರು ಕೂಡ ರಾಜೀನಾಮೆ ಕೊಡಬೇಕು ಎಂದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ತನಿಖಾ ಆಯೋಗದ ಮುಂದೆ ಮಾಹಿತಿ ಕೊಡ್ತೀವಿ – ಪರಮೇಶ್ವರ್

    ಡಿಸಿಎಂ ಅವರು ಜನರು ಸತ್ತಿದ್ದಾರೆ ಅಂತ ಗೊತ್ತಿದ್ದರೂ ಸೆಲೆಬ್ರೇಷನ್‌ನಲ್ಲಿ ಭಾಗಿಯಾಗಿದ್ರು. ಹತ್ಯಾಕಾಂಡ ಈ ರಾಜ್ಯದಲ್ಲಿ ನಡೆದಿದೆ. ಇದಕ್ಕೆ ಸರ್ಕಾರ ಹೊಣೆ. 25 ಲಕ್ಷ ಕೊಟ್ಟರೂ ಸತ್ತವರು ವಾಪಸ್ ಬರೊಲ್ಲ. ಇದನ್ನ ಪ್ರಶ್ನೆ ಮಾಡಿದ್ರೆ ಕುಂಭಮೇಳದ ಬಗ್ಗೆ ಮಾತಾಡ್ತಾರೆ ಕಾಂಗ್ರೆಸ್‌ನವರು. ನಮ್ಮ ರಾಜ್ಯದಲ್ಲಿ ಇಂತಹ ದುರಾಡಳಿತ ನಡೆಯುತ್ತಿದೆ‌. ಕರ್ನಾಟಕದ ಇತಿಹಾಸದಲ್ಲಿ ಇದು ಮರೆಯಲಾಗದ ಘಟನೆ. ಕಾಂಗ್ರೆಸ್ ಹೈಕಮಾಂಡ್ ಇದರ ಬಗ್ಗೆ ಮಾತಾಡಬೇಕು. ರಾಹುಲ್ ಗಾಂಧಿ ಈ ಬಗ್ಗೆ ಮಾತಾಡಬೇಕು. ರಾಜ್ಯದಲ್ಲಿ ಸರ್ಕಾರದ ವ್ಯವಸ್ಥೆ ಸರಿಯಾಗಿ ನಡೆಯುತ್ತಿಲ್ಲ. ಸಿಎಂ ಹಿಡಿತದಲ್ಲಿ ಆಡಳಿತ ವ್ಯವಸ್ಥೆ ‌ಇಲ್ಲ. ಎರಡು ಬಾರಿ ಸಿಎಂ ಆದವರಿಂದ ಆಡಳಿತ ನಿಯಂತ್ರಣ ತಪ್ಪಿದೆ. ನಿಮಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ ಅಂದರೆ ಈ ಸ್ಥಾನದಲ್ಲಿ ಇರಲು ಸಾಧ್ಯವಿಲ್ಲ. ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ. ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಆಡಳಿತ ಮಾಡಲು ಆಗದೇ ಹೋದ್ರೆ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಕಿಡಿಕಾರಿದರು.

    ಸರ್ಕಾರ ಅನುಮತಿ ಕೊಟ್ಟಿಲ್ಲ ಅಂದರೆ ಡಿಸಿಎಂ ಡಿಕೆ ಶಿವಕುಮಾರ್ ಯಾಕೆ ಹೋದ್ರು. ಕಪ್‌ಗೆ ಮುತ್ತು ಕೊಟ್ರು. ಮಕ್ಕಳು, ಮೊಮ್ಮಕ್ಕಳನ್ನ ಯಾಕೆ ಕರೆದುಕೊಂಡು ಹೋಗಿದ್ರಿ. ಇದು ವಿಜಯೋತ್ಸವ ಅಲ್ಲ. ಮರಣೋತ್ಸವ ಆಗಿದೆ. ನಾವೆಲ್ಲರು ತಲೆ ತಗ್ಗಿಸೋ ಕೆಲಸ ಆಗಿದೆ. ಸತ್ತವರ ಕುಟುಂಬ ನೋವು ಗೊತ್ತಿದೆಯಾ? ಕುನ್ಹಾ ನೇತೃತ್ವದ ತನಿಖೆ ಆಗ್ತಿದೆ, ಆಗಲಿ. ಪ್ರಾಮಾಣಿಕ ಅಧಿಕಾರಿಗಳನ್ನ ಅಮಾನತು ಮಾಡಿದ್ದೀರಾ? ಯಾಕೆ ಅಮಾನತು ಮಾಡಿದ್ರಿ? ತೆಲಂಗಾಣದಲ್ಲಿ ಅಲ್ಲು ಅರ್ಜುನ್‌ರನ್ನ ಬಂಧನ ಮಾಡ್ತಾರೆ. ನಮ್ಮಲ್ಲಿ ಯಾಕೆ ಇದು ಆಗಲಿಲ್ಲ. ನಿಮಗೆ ಶಿಕ್ಷೆ ಇಲ್ಲವಾ? ಸಿದ್ದರಾಮಯ್ಯ ಅವರು ನನಗೇನು ಗೊತ್ತಿಲ್ಲ ಅಂತ ಮುಂದುವರಿಸಿಕೊಂಡು ಹೋಗ್ತಿದ್ದಾರೆ. ಈ ಸರ್ಕಾರ ಈ ರಾಜ್ಯವನ್ನು ಬಿಟ್ಟು ಹೋಗಬೇಕು. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು. ಜನರು ಇದನ್ನೇ ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದು ನೀಚ ಸರ್ಕಾರ. ನೀವು ಮಾಡಿದ ತಪ್ಪಿಗೆ ಬಲಿಯಾಗಬೇಕು. ಕಾಂಗ್ರೆಸ್ ಹೈಕಮಾಂಡ್ ಯಾರನ್ನ ಬಲಿ ಕೊಡುತ್ತದೆಯೋ ನೋಡೋಣ ಎಂದರು. ಇದನ್ನೂ ಓದಿ: ನೀವು ರಾಜ್ಯದ ಮುಖ್ಯಮಂತ್ರಿಗಳೋ or ವಿಧಾನಸೌಧ ಮೆಟ್ಟಿಲುಗಳ ಮುಖ್ಯಮಂತ್ರಿಗಳೋ: ಸಿದ್ದರಾಮಯ್ಯಗೆ ಹೆಚ್‌ಡಿಕೆ ಟಾಂಗ್‌

  • ಕರ್ನಾಟಕದ ಶಾಸಕರಿಗೆ ತಿರುಪತಿಯಲ್ಲಿ ದರ್ಶನ ಭಾಗ್ಯ ಕೊಡಿಸಿ: ಟಿ.ಎ.ಶರವಣ ಮನವಿ

    ಕರ್ನಾಟಕದ ಶಾಸಕರಿಗೆ ತಿರುಪತಿಯಲ್ಲಿ ದರ್ಶನ ಭಾಗ್ಯ ಕೊಡಿಸಿ: ಟಿ.ಎ.ಶರವಣ ಮನವಿ

    ಬೆಂಗಳೂರು: ಕರ್ನಾಟಕದ ಶಾಸಕರಿಗೆ ತಿರುಪತಿಯಲ್ಲಿ ದರ್ಶನ ಭಾಗ್ಯ ಕಲ್ಪಿಸಬೇಕು ಅಂತ ವಿಧಾನ ಪರಿಷತ್ ಶರವಣ ಸರ್ಕಾರವನ್ನ ಆಗ್ರಹ ಮಾಡಿದರು. ಶಾಸಕರಿಗೆ ವಾರದಲ್ಲಿ ಮೂರು ದಿನ ದರ್ಶನ ಮಾಡೋ ವ್ಯವಸ್ಥೆ ತಿರುಪತಿಯಲ್ಲಿ ಕಲ್ಪಿಸಬೇಕು ಅಂತ ಸರ್ಕಾರಕ್ಕೆ ಆಗ್ರಹಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪ್ರಶ್ನೆ ಕೇಳಿದ ಶರವಣ, ತಿರುಪತಿಯಲ್ಲಿ ಕರ್ನಾಟಕ ಭವನ ಅತಿಥಿ ಗೃಹ ಅವ್ಯವಸ್ಥೆಯಿಂದ ಕೂಡಿದೆ. ಅದರ ನಿರ್ವಹಣೆ ಸರಿಯಾಗಿ ಮಾಡ್ತಿಲ್ಲ. 51 ಜನ ಸಿಬ್ಬಂದಿ ಇದ್ದರು ಯಾವುದೇ ನಿರ್ವಹಣೆ ಮಾಡುತ್ತಿಲ್ಲ. ಸಿಬ್ಬಂದಿಗಳಿಗೆ ಸಮವಸ್ತ್ರ ಕೊಡಿ. ಹಾಜರಾತಿ ಕಡ್ಡಾಯ ಮಾಡಬೇಕು. ಕರ್ನಾಟಕ ಭವನದಲ್ಲಿ ಅನ್ನ ದಾಸೋಹ ನಿಲ್ಲಿಸಿದ್ದಾರೆ. ಅದನ್ನ ಪುನರ್ ಪ್ರಾರಂಭ ಮಾಡಬೇಕು ಅಂತ ಒತ್ತಾಯಿಸಿದರು.

    ತಿರುಪತಿಯಲ್ಲಿ ಕರ್ನಾಟಕದಿಂದ ಯಾವುದೇ ಶಾಸಕರಿಗೆ ದರ್ಶನ ಭಾಗ್ಯ ಸಿಗ್ತಿಲ್ಲ. ತಿರುಪತಿಯಲ್ಲಿ ದರ್ಶನ ಭಾಗ್ಯ ಬೇಕು ಅಂತ ತೆಲಂಗಾಣದ ಶಾಸಕರು ಆಂಧ್ರಪ್ರದೇಶದ ಸಿಎಂ ಅವರನ್ನ ಭೇಟಿ ಮಾಡಿ ಸರ್ಕಾರಿ ಆದೇಶ ಮಾಡಿಸಿಕೊಂಡಿದ್ದಾರೆ. ಅದರಂತೆ ಕರ್ನಾಟಕದ ಶಾಸಕರ ನಿಯೋಗ ಆಂಧ್ರಪ್ರದೇಶದ ಸಿಎಂ ಅವರನ್ನು ಭೇಟಿಯಾಗಿ ದರ್ಶನ ಭಾಗ್ಯ ಕಲ್ಪಿಸಬೇಕು ಅಂತ ಮನವಿ ಮಾಡಿದರು.

    ಕಾಶಿಯಲ್ಲಿ ನಮ್ಮ ಅತಿಥಿ ಗೃಹ ನೂರು ವರ್ಷ ಆಗಿದೆ ಅಂತ ಕಟ್ಟಡ ನೆಲಸಮ ಮಾಡಿದ್ದಾರೆ. ಆದಷ್ಟು ಬೇಗ ಕಾಶಿಯಲ್ಲಿ ಅತಿಥಿ ಗೃಹ ಕೆಲಸ ಪ್ರಾರಂಭ ಮಾಡಬೇಕು ಅಂತ ಒತ್ತಾಯಿಸಿದರು.

    ಇದಕ್ಕೆ ಸಚಿವ ರಾಮಲಿಂಗಾರೆಡ್ಡಿ ಉತ್ತರ ನೀಡಿ, ತಿರುಪತಿಯಲ್ಲಿ ಕರ್ನಾಟಕ ಭವನದ ನವೀಕರಣ ಕೆಲಸ ಆಗ್ತಿದೆ. ಈಗಾಗಲೇ ಒಂದು ಭವನದ ಕೆಲಸ ಮುಗಿದು ಉದ್ಘಾಟನೆ ಆಗಿದೆ. ಬಾಕಿ ಕಾಮಗಾರಿಗಳನ್ನ ಮೇ ನಲ್ಲಿ ಮುಕ್ತಾಯ ಮಾಡುತ್ತೇವೆ. ಈಗ ಭವನ ನಿರ್ವಹಣೆ ಮಾಡಲು ತಾತ್ಕಾಲಿಕ ವ್ಯವಸ್ಥೆ ಮಾಡಿದ್ದೇವೆ. ಎಲ್ಲಾ ‌ಕಾಮಗಾರಿ ಮುಗಿದ ಮೇಲೆ 4 ಸ್ಟಾರ್ ಮಾದರಿಯಲ್ಲಿ ವ್ಯವಸ್ಥೆ ಮಾಡೋ ಕೆಲಸ ಮಾಡ್ತೀವಿ. ಸಿಬ್ಬಂದಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡೋ ವ್ಯವಸ್ಥೆ ಮಾಡ್ತೀವಿ. ಕರ್ನಾಟಕ ಭವನದ 60% ರೂಂ ಯಾರು ಬೇಕಾದ್ರು ಬುಕ್ ಮಾಡಿಕೊಳ್ಳಬಹುದು.40% ಕರ್ನಾಟಕದವರಿಗೆ ಮೀಸಲು ಇರಲಿದೆ ಅಂತ ತಿಳಿಸಿದರು.

    ಕಾಶಿಯಲ್ಲಿ ಕರ್ನಾಟಕ ಭವನ ನೂರು ವರ್ಷ ಆಗಿರೋದ್ರಿಂದ ಕಟ್ಟಡ ತೆಗೆಯಲಾಗಿದೆ. ಹೊಸ ಕಟ್ಟಡಕ್ಕೆ 36 ಕೋಟಿ ಹಣ ಬೇಕು.ಹೊಸ ಕಟ್ಟಡ ನಿರ್ಮಾಣದ ಕೆಲಸ ಆದಷ್ಟು ಬೇಗ ಪ್ರಾರಂಭ ಮಾಡ್ತೀವಿ ಅಂತ ಭರವಸೆ ನೀಡಿದರು.

  • ಸರ್ಕಾರಿ ಆಸ್ಪತ್ರೆಗಳ ಶುಲ್ಕ ಹೆಚ್ಚಳ ವಾಪಸ್ ಪಡೆಯಿರಿ: ಟಿ.ಎ ಶರವಣ ಆಗ್ರಹ

    ಸರ್ಕಾರಿ ಆಸ್ಪತ್ರೆಗಳ ಶುಲ್ಕ ಹೆಚ್ಚಳ ವಾಪಸ್ ಪಡೆಯಿರಿ: ಟಿ.ಎ ಶರವಣ ಆಗ್ರಹ

    ಬೆಂಗಳೂರು: ಇಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಶುಲ್ಕ ಹೆಚ್ಚಳ ಮಾಡಿರೋ ವಿಚಾರ ವಿಧಾನ ಪರಿಷತ್ ‌ನಲ್ಲಿ ಇಂದು ಪ್ರಸ್ತಾಪ ಆಯ್ತು. ಶುಲ್ಕ ಏರಿಕೆಯನ್ನ ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಶರವಣ (TA Saravana) ಪ್ರಶ್ನೆ ಕೇಳಿದ್ರು. ಈ ಸರ್ಕಾರ, ಸಿಎಂ ಅವರು ಯಾವುದಕ್ಕೂ ಜಗ್ಗಲ್ಲ, ಬಗ್ಗೊಲ್ಲ ಅಂತಾರೆ. ಸರ್ಕಾರಿ ಆಸ್ಪತ್ರೆಗಳಿಗೆ (Government Hospital) ಜನ ದುಡ್ಡು ಇಲ್ಲ ಅಂತ ಹೋಗೋದು. ಈಗ ಆಸ್ಪತ್ರೆಗಳ ಶುಲ್ಕ 3 ಪಟ್ಟು ಹಣ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿಗಳನ್ನ ಕೊಡ್ತಿದ್ದೀರಾ, ಒಂದು ಕೈಯಲ್ಲಿ ‌ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ತಿದೆ ಈ‌ ಸರ್ಕಾರ. ಬಡವರಿಗೆ ಮಾತ್ರ ಹಣ ಜಾಸ್ತಿ ಮಾಡಿದ್ದೀರಾ? ಸರ್ಕಾರಿ ಆಸ್ಪತ್ರೆಯಲ್ಲಿ ಇರೋ VIP ಕೊಠಡಿಗೆ ಶುಲ್ಕ ಜಾಸ್ತಿ ಮಾಡಿಲ್ಲ. ಕೂಡಲೇ ಆಸ್ಪತ್ರೆಗಳ ದರ ಹೆಚ್ಚಳ ಮಾಡಿರೋ ಆದೇಶ ವಾಪಸ್ ತೆಗೆದುಕೊಳ್ಳಿ ಅಂತ ಶರವಣ ಆಗ್ರಹ ಮಾಡಿದ್ರು. ಇದನ್ನೂ ಓದಿ: ಎರಡೂವರೆ ತಿಂಗಳಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಪದೋನ್ನತಿ: ಮಧು ಬಂಗಾರಪ್ಪ

    ಇದಕ್ಕೆ ಸಚಿವ ಶರಣು ಪ್ರಕಾಶ್ ಪಾಟೀಲ್ (Sharanu Prakash Patil) ಉತ್ತರ ನೀಡಿ, 2 ಪಟ್ಟು 3 ಪಟ್ಟು ನಾನು ಶುಲ್ಕವನ್ನು ಹೆಚ್ಚಳ ಮಾಡಿಲ್ಲ. 20% ಮಾತ್ರ ಶುಲ್ಕ ಪರಿಷ್ಕರಣೆ ಮಾಡಿದ್ದೇವೆ.‌ ಶುಲ್ಕ ಹೆಚ್ಚಳ ಮಾಡಿರೋದು ಸತ್ಯ. ಆದ್ರೆ ಇದು ಸರ್ಕಾರದ ಮಟ್ಟದಲ್ಲಿ ‌ಮಾಡಿಲ್ಲ. ಸಂಸ್ಥೆ ಮಟ್ಟದಲ್ಲಿ ಜಾಸ್ತಿ ಆಗಿದೆ. 3 ವರ್ಷಕ್ಕೆ ಪರಿಷ್ಕರಣೆ ಆಗಬೇಕಿತ್ತು. ಕೋವಿಡ್ ಹಿನ್ನಲೆಯಲ್ಲಿ ಆಗಿರಲಿಲ್ಲ ಈಗ 6 ವರ್ಷಗಳ ನಂತರ ಜಾಸ್ತಿ ಮಾಡಿದ್ದೇವೆ ಎಂದರು. ಶುಲ್ಕ ಹೆಚ್ಚಳದಿಂದ ಬಡವರಿಗೆ ಸಮಸ್ಯೆ ಆಗಿಲ್ಲ ಅಂತ ಸರ್ಕಾರಿ ಆಸ್ಪತ್ರೆಗಳ ಶುಲ್ಕ ಸಮರ್ಥನೆ ಮಾಡಿಕೊಂಡ್ರು. ಇದನ್ನೂ ಓದಿ: ಬಿಜೆಪಿಯವ್ರು ಮುಸ್ಲಿಂ ಮೀಸಲಾತಿ ಹಿಂಪಡೆದು ಒಕ್ಕಲಿಗ, ಲಿಂಗಾಯತ ಸಮುದಾಯಗಳಿಗೆ ಹಂಚಿದ್ರು: ಸಿಎಂ

  • ಕೇಂದ್ರ ಸರ್ಕಾರಕ್ಕೆ ಬಹುಮತ ಇದ್ರೆ ಸಾಲದು, ಜನರ ಸಹಮತವೂ ಬೇಕು: ಟಿ.ಎ.ಶರವಣ

    ಕೇಂದ್ರ ಸರ್ಕಾರಕ್ಕೆ ಬಹುಮತ ಇದ್ರೆ ಸಾಲದು, ಜನರ ಸಹಮತವೂ ಬೇಕು: ಟಿ.ಎ.ಶರವಣ

    – ಜೆಡಿಎಸ್‍ನಿಂದ 1 ಲಕ್ಷ ರೂ. ಪರಿಹಾರ ನೀಡಿದ್ದೇವೆ

    ರಾಯಚೂರು: ಅಕಾಲಿಕ ಮಳೆಯಿಂದಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ರೈತರು ಮನವಿ ಮಾಡಿದ್ರೂ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಸರಿಯಲ್ಲ. ಸರ್ಕಾರಕ್ಕೆ ಬಹುಮತ ಇದ್ರೆ ಸಾಲದು, ಜನರ ಸಹಮತವೂ ಇರಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಹೇಳಿದರು.

    ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಎಲ್ಲ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗಿವೆ. ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ ಜೆಡಿಎಸ್ ಬಲಿಷ್ಠವಾಗುತ್ತಿದೆ. ಜನತಾ ಸರ್ಕಾರ ಜಾರಿಗೆ ತರಲು ಜೆಡಿಎಸ್ ಮಿಷನ್ 123 ನಡೆಸಿದ್ದೇವೆ. ಯಾವ ಸರ್ಕಾರವೂ ನೀಡದೇ ಇರುವ ಜನಪ್ರಿಯ ಕಾರ್ಯಕ್ರಮವನ್ನು ಕೊಡಲು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ. 26 ಸಾವಿರ ಕೋಟಿ ಸಾಲ ಮನ್ನಾ ಮಾಡಿದ ಕೀರ್ತಿ ಕುಮಾರಸ್ವಾಮಿ ಅವರಿಗೆ ದಕ್ಕುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ:  ಬಕಾಸುರರ ರೀತಿ ನುಂಗೋದು ಅಭಿವೃದ್ಧಿಯಾ?: ಹೆಚ್‍ಡಿಕೆ ತಿರುಗೇಟು

    ಜಿಲ್ಲೆಯ ಲಿಂಗಸುಗೂರಿನ ಬೋಗಪುರ ಗ್ರಾಮದಲ್ಲಿ ರೈತ ಆತ್ಮಹತ್ಯೆ ಪ್ರಕರಣ ಕುರಿತು ಮಾತನಾಡಿದ ಅವರು, ಜಿಲ್ಲಾಡಳಿತ ರೈತರ ವಿಚಾರದಲ್ಲಿ ವಿಫಲವಾಗಿದೆ. ಮೊದಲೇ ಕೊರೊನಾ ಮತ್ತು ಮಳೆಯಿಂದಾಗಿ ರೈತರು ಕಂಗಾಲಾಗಿದ್ದಾರೆ. ಅಧಿಕಾರಿಗಳ ಹಾಗೂ ಸಚಿವರ ತಂಡ ರಚನೆ ಆಗಬೇಕು. ಬೆಳೆಹಾನಿಯಾದ ರೈತರಿಗೆ ಸ್ಥಳದಲ್ಲೇ ಪರಿಹಾರ ನೀಡಬೇಕು. ಆದರೆ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.

    ಕೂಡಲೇ ಸರ್ಕಾರ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು. ಮೃತ ರೈತನ ಕುಟುಂಬದ ಓರ್ವ ಸದಸ್ಯನಿಗೆ ಸರ್ಕಾರಿ ಕೆಲಸ ಕೊಡಿಸಬೇಕು. ಜೆಡಿಎಸ್ ವತಿಯಿಂದ ಮೃತ ರೈತ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಅಭಿನವ ಶ್ರೀ ನಮಗೆ ಧೈರ್ಯ ತುಂಬಿ ಸನ್ಮಾರ್ಗದಲ್ಲಿ ಮುನ್ನಡೆಸುವ ಮಾರ್ಗದರ್ಶಕರಾಗಿದ್ದರು: ಸಿಸಿ ಪಾಟೀಲ್

  • 2023 ರಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ, ಇದು ದೈವದ ಆಟ: ಶರವಣ

    2023 ರಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ, ಇದು ದೈವದ ಆಟ: ಶರವಣ

    – ಭೈರತಿ ಸುರೇಶ್‍ರೊಂದಿಗೆ ಜಮೀರ್ ಡೀಲ್ ಮಾಡಿಕೊಂಡಿದ್ರು
    – ಜಮೀರ್ ಸಿಎಂ ಅಭ್ಯರ್ಥಿ ಅಂತ ಘೋಷಣೆ ಮಾಡಿ

    ಬೆಂಗಳೂರು: 2023 ರಲ್ಲಿ ಜೆಡಿಎಸ್ ಪಕ್ಷ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ. ಇದು ದೈವದ ಆಟ ಯಾರು ಇದನ್ನು ತಡೆಯೋಕೆ ಆಗುವುದಿಲ್ಲ. ಕಾಂಗ್ರೆಸ್ ಮುಳುಗುತ್ತಿರುವ ಹಡಗು. ನಮ್ಮ ಟಾರ್ಗೆಟ್ 123. ನಾವು ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಜೆಡಿಎಸ್ ವಕ್ತಾರ ಟಿ.ಎ ಶರವಣ ಭವಿಷ್ಯ ನುಡಿದಿದ್ದಾರೆ.

    ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಸಿದ್ದರಾಮಯ್ಯಗೆ 5 ಪ್ರಶ್ನೆ ಕೇಳಿದ್ರು. ಆದ್ರೆ ಯಾವುದಕ್ಕೂ ಉತ್ತರ ಕೊಟ್ಟಿಲ್ಲ. ಕಾಂಗ್ರೆಸ್‍ಗೆ ಅಲ್ಪಸಂಖ್ಯಾತರ ಬಗ್ಗೆ ಮಾತಾಡೋ ನೈತಿಕತೆ ಇಲ್ಲ. ಸಿದ್ದರಾಮಯ್ಯ ಉತ್ತರ ಕೊಡೋ ಬದಲಾಗಿ ಕುಮಾರಸ್ವಾಮಿ ಮೇಲೆ ವೈಯಕ್ತಿಕವಾಗಿ ಅಟ್ಯಾಕ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಿಮ್ಮ ಹೊಟ್ಟೆಕಿಚ್ಚಿನಿಂದ ಹಾಳಾಗ್ತಿರೋದು ನೀವೇ ಸಿದ್ದರಾಮಯ್ಯ ಅಲ್ಲ – ಹೆಚ್‍ಡಿಕೆ ವಿರುದ್ಧ ಜಮೀರ್ ಗುಡುಗು

    ಡೀಲ್ ಮಾಡಿದ್ದು ಯಾರು?
    ಭೈರತಿ ಸುರೇಶ್ ಅವರನ್ನು ಎಂಎಲ್‍ಸಿ ಮಾಡೋಣ ಎಂದು ಜಮೀರ್ ಅಹ್ಮದ್ ಹೇಳಿದ್ರು. ಆದ್ರೆ ಅವತ್ತು ಅವ್ರ ಕುಲಬಾಂಧವರನ್ನು ಗೆಲ್ಲಿಸಬೇಕು ಅಂತ ಜಮೀರ್‍ಗೆ ಅನ್ನಿಸಿಲ್ಲವಾ? ಭೈರತಿ ಸುರೇಶ್‍ರೊಂದಿಗೆ ಜಮೀರ್ ಡೀಲ್ ಮಾಡಿಕೊಂಡಿದ್ರು. ಇವತ್ತು ಸಮುದಾಯ ಬಗ್ಗೆ ಪ್ರೀತಿ ಉಕ್ಕಿ ಬರುತ್ತಿದೆ. ಇದಕ್ಕೆ ಜಮೀರ್ ಉತ್ತರ ಕೊಡಬೇಕು. ವಿಧಾನಸೌಧದ ಒಳಗೆ ಜಮೀರ್ ಅವರನ್ನು ಬಿಟ್ಟಿರಲಿಲ್ಲ. ಕುಮಾರಸ್ವಾಮಿ ಅವತ್ತು ನಿಮ್ಮ ಹೆಗಲ ಮೇಲೆ ಕೈ ಹಾಕಿ ಎಂಎಲ್‍ಎ ಮಾಡ್ತೀನಿ ಅಂತ ಕರೆದುಕೊಂಡು ಬಂದಿದ್ದರು. ನಿಮ್ಮ ಮೂಲ ಬೇರು ಯಾವುದು? ಅದನ್ನು ಮರೆತು ಹೋದ್ರಾ? ಅಂದು ಕುಮಾರಸ್ವಾಮಿ ಅವರನ್ನು ಇಂದ್ರ, ಚಂದ್ರ ಸರ್ವಸ್ವ ಅಂತ ಹೇಳಿದ್ರು. ಇವತ್ತು ಅವ್ರ ವಿರುದ್ಧ ಮಾತಾಡ್ತೀರಾ? ಜಮೀರ್‍ಗೆ ತಾಕತ್ ಇದ್ದರೆ ಕಾಂಗ್ರೆಸ್‍ನಲ್ಲಿ ಅಲ್ಪಸಂಖ್ಯಾತರಿಗೆ ಸಿಎಂ ಸ್ಥಾನ ಎಂದು ಘೋಷಣೆ ಮಾಡಿಸಲಿ. ಅಥವಾ ಡಿಸಿಎಂ ಸ್ಥಾನ ಘೋಷಣೆ ಮಾಡಲಿ ಅದು ಇಲ್ಲವೆಂದಿದ್ದರೆ ಪರಿಷತ್ ವಿಪಕ್ಷ ಸ್ಥಾನ ಇಬ್ರಾಹಿಗೆ ಕೊಡಲಿ ನೋಡೋಣ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಕುಮಾರಸ್ವಾಮಿ ಒಬ್ಬ ಡೀಲರ್: ಜಮೀರ್ ವಾಗ್ದಾಳಿ

    ಯಾವುದರಲ್ಲಿ ಎಷ್ಟು ಡೀಲ್ ಮಾಡಿದ್ದೀರಿ ಎಂಬುದು ನಮಗೆ ಗೊತ್ತು. ದೇವೇಗೌಡರು ದೇವರು ಎಂದು ಹೇಳಿದ್ರಿ, ಇವತ್ತು ಅವರ ವಿರುದ್ಧವೇ ಮಾತನಾಡಿದ್ದೀರಿ. ಇನ್ನು ಮುಂದೆ ಜಮೀರ್‍ಗೆ ಕುಮಾರಸ್ವಾಮಿ ಉತ್ತರ ಕೊಡಬೇಡಿ. ನಾವು ಅವ್ರಿಗೆ ಉತ್ತರ ಕೊಡ್ತೀವಿ. ಎರಡು ಬಾರಿ ಸೋತು ಮನೆಯಲ್ಲಿ ಜಮೀರ್ ಇದ್ದರು. ಶಾಸಕನಾಗಿ ಮಾಡೋಕೆ ಯಾರು ಕಾರಣ? ಸಿದ್ದರಾಮಯ್ಯ ಇವತ್ತು ನಾಯಕ ಅಂತೀರಾ? ಇಲ್ಲಿ ಇದ್ದಾಗ ಕುಮಾರಣ್ಣ, ಈಗ ಸಿದ್ದರಾಮಣ್ಣ, ಮುಂದೆ ಯಾರನ್ನು ಅಣ್ಣಾ ಅಂತಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಅಲ್ಪಸಂಖ್ಯಾತ ನಾಯಕರನ್ನು ಮುಗಿಸಿ ಆಯ್ತು. ನಿಮ್ಮನ್ನು ಸಿದ್ದರಾಮಯ್ಯ ಮುಗಿಸುತ್ತಾರೆ. ದೇವೇಗೌಡ ಫ್ಯಾಕ್ಟರಿಯಲ್ಲಿ ಎಷ್ಟೋ ಜನ ಬಂದು ಹೋಗಿದ್ದಾರೆ. ತೊಡೆ ತಟ್ಟಿದವರು ಪರಪ್ಪನ ಅಗ್ರಹಾರಕ್ಕೆ ಹೋಗಿ ಬಂದಿದ್ದಾರೆ. ಬಾಯಿಗೆ ಬಂದಂತೆ ಮಾತನಾಡಬೇಡಿ. ಯೋಚನೆ ಮಾಡಿ ಹೇಳಿಕೆ ಕೊಡಿ ಎಂದು ಜಮೀರ್ ವಿರುದ್ಧ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಕುಮಾರಸ್ವಾಮಿ ಮಾತು ವೇದವಾಕ್ಯ ಅಲ್ಲ: ಸಿದ್ದರಾಮಯ್ಯ

    ಇಕ್ಬಾಲ್ ಅನ್ಸಾರ್ ಅವ್ರನ್ನು ಮಂತ್ರಿ ಮಾಡಿದ್ದು ಯಾರು? ಕಾಂಗ್ರೆಸ್ ನಿಂದ ಸೋತು ಹೋಗಿದ್ರು. ಕುಮಾರಸ್ವಾಮಿ ಟಿಕೆಟ್ ಕೊಟ್ಟು ಗೆಲ್ಲಿಸಿದ್ರು. ಕುಮಾರಸ್ವಾಮಿ ಹೆಸರಿನಲ್ಲಿ ಅನ್ಸಾರಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ಇವತ್ತು ಅದನ್ನು ಮರೆತು ಮಾತನಾಡುತ್ತಿದ್ದೀರಿ. ಸಿದ್ದರಾಮಯ್ಯರಿಗೆ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಇದ್ದರೆ ಜಮೀರ್‍ ನ್ನು ಸಿಎಂ ಅಭ್ಯರ್ಥಿ ಅಂತ ಘೋಷಣೆ ಮಾಡಿ. ಸಿದ್ದರಾಮಯ್ಯ 5 ವರ್ಷ ಅಲ್ಪಸಂಖ್ಯಾತರಿಗೆ ಏನ್ ಕೆಲಸ ಮಾಡಿದ್ರು? ಅಕ್ಕಿ ಕೊಟ್ಟೆ, ಆ ಭಾಗ್ಯ, ಈ ಭಾಗ್ಯ ಅಂತೀರಾ ಅಷ್ಟೇ. ಸಿದ್ದರಾಮಯ್ಯ ಅಲ್ಪಸಂಖ್ಯಾತ ನಾಯಕರನ್ನು ಮುಗಿಸಿದ್ದಾರೆ. ಜಮೀರ್ ಅವರನ್ನು ಮುಗಿಸುತ್ತಾರೆ. ಹೀಗಾಗಿ ಜಮೀರ್ ಎಚ್ಚರವಾಗಿ ಇರಿ. ನಮ್ಮದು ಸಣ್ಣ ಪಕ್ಷ ನಾವು ಸಿಎಂ ಮಾಡೋದು ಬಿಡಿ. ನಿಮ್ಮದು ರಾಷ್ಟ್ರೀಯ ಪಕ್ಷ ನೀವು ಅಲ್ಪಸಂಖ್ಯಾತರಿಗೆ ಸಿಎಂ ಸ್ಥಾನ ಕೊಡಿ ಎಂದು ಸವಾಲೆಸೆದರು.

  • ನಿಖಿಲ್‍ಗೆ ಗಂಡು ಮಗುವಾಗಲಿದೆ: ವಿನಯ್ ಗುರೂಜಿ

    ನಿಖಿಲ್‍ಗೆ ಗಂಡು ಮಗುವಾಗಲಿದೆ: ವಿನಯ್ ಗುರೂಜಿ

    – ರಾಜಕೀಯವಾಗಿ ನಿಖಿಲ್‍ಗೆ ಉತ್ತಮ ಭವಿಷ್ಯ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಗಂಡು ಮಗುವಾಗಲಿದ್ದು, ನಂತರ ಒಳ್ಳೆಯ ಯೋಗ ಬರುತ್ತದೆ ಎಂದು ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ.

    ಇಂದು ಜೆಡಿಎಸ್ ಮಾಜಿ ಪರಿಷತ್ ಸದಸ್ಯ ಟಿ.ಎ ಶರವಣ ಮನೆಯಲ್ಲಿ ಭೇಟಿಯಾಗಿ ಹೆಚ್‍ಡಿಕೆ ಅವರಿಗೆ ಗುರೂಜಿ ಆಶೀರ್ವಚನ ನೀಡಿದ್ದಾರೆ. ನಿಖಿಲ್ ಶಾಸಕರಾಗಿ ಆಯ್ಕೆಯಾಗುತ್ತಾರೆ. ಮನೆಗೆ ಗಂಡು ಮಗುವಿನ ಆಗಮನ ಆಗುತ್ತದೆ. ನಂತರ ನಿಖಿಲ್ ಗೆ ಒಳ್ಳೆಯ ಯೋಗ ಬರುತ್ತದೆ. ರಾಜಕೀಯವಾಗಿ ನಿಖಿಲ್ ಗೆ ಉತ್ತಮ ಭವಿಷ್ಯ ಇದೆ ಎಂದಿದ್ದಾರೆ.

    ಜೆಡಿಎಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಹಿಡಿಯುವುದು ಖಚಿತ. ರಾಜ್ಯದಲ್ಲಿ ಜೆಡಿಎಸ್ ಆಡಳಿತ ನಡೆಸಲಿದೆ ಎಂದು ವಿನಯ್ ಗುರೂಜಿ ತಿಳಿಸಿದ್ದಾರೆ. ಇದನ್ನೂ ಓದಿ: ಹೌದು ತಂದೆಯಾಗುತ್ತಿರುವುದು ನಿಜ: ನಿಖಿಲ್

    ಈ ಹಿಂದೆ ಮಾಧ್ಯಮಗಳ ಜೊತೆ ಮಾತನಾಡಿದ್ದ ನಿಖಿಲ್, ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದನ್ನು ಸ್ಪಷ್ಟಪಡಿಸಿದ್ದರು. ಇದಕ್ಕೂ ಮೊದಲು ಹೆಚ್.ಡಿ.ಕುಮಾರಸ್ವಾಮಿ ತಾವು ಅಜ್ಜನಾಗುತ್ತಿರುವ ವಿಚಾರವನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದರು. ಸೊಸೆ ರೇವತಿ 5 ತಿಂಗಳ ಗರ್ಭಿಣಿ ಎಂದು ಸಂತಸದ ಸುದ್ದಿಯನ್ನು ರಿವೀಲ್ ಮಾಡಿದ್ದರು.

  • ಗುರುಗಳಲ್ಲಿ ಭಗವಂತನನ್ನು ಕಾಣುತ್ತೇವೆ, ಅವರು ಸೇವಿಸಿದ ಆಹಾರ ನಮಗೆ ಪ್ರಸಾದ – ರಘು ಆಚಾರ್‌ಗೆ ಶರವಣ ಟಾಂಗ್

    ಗುರುಗಳಲ್ಲಿ ಭಗವಂತನನ್ನು ಕಾಣುತ್ತೇವೆ, ಅವರು ಸೇವಿಸಿದ ಆಹಾರ ನಮಗೆ ಪ್ರಸಾದ – ರಘು ಆಚಾರ್‌ಗೆ ಶರವಣ ಟಾಂಗ್

    ಬೆಂಗಳೂರು: ಗುರುಗಳಲ್ಲಿ ನಾವು ಭಗವಂತನನ್ನು ಕಾಣುವುದರಿಂದ ಅವರು ಸೇವಿಸಿದ ಆಹಾರ ಪ್ರಸಾದವೆಂದು ಭಾವಿಸುತ್ತೇವೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ಅವಧೂತ ವಿನಯ್ ಗುರೂಜಿ ವಿರುದ್ಧ ಆರೋಪಿಸಿದ್ದ ರಘು ಆಚಾರ್‌ಗೆ  ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಪ್ರಸಾದವೆಂದು ಬಲವಂತವಾಗಿ ಎಂಜಲು ತಿನ್ನಿಸಿದರು: ವಿನಯ್ ಗುರೂಜಿ ಮೇಲೆ ಕೈ ನಾಯಕ ಗರಂ

    ಅವಧೂತ ವಿನಯ್ ಗುರೂಜಿ ಪ್ರಸಾದ ಎಂದು ವಿತರಿಸಿ ಬಲವಂತವಾಗಿ ಎಂಜಲು ತಿನ್ನುವಂತೆ ಮಾಡಿದರು ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಆರೋಪಿಸಿದ್ದರು. ಈ ಬಗ್ಗೆ ಮಾಜಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ರಘು ಆಚಾರ್‌ಗೆ ಟಾಂಗ್ ನೀಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾದ ಶ್ರೀ ರಘು ಆಚಾರ್ ಅವರ ಹೇಳಿಕೆ ನನ್ನ ಗಮನಕ್ಕೆ ಬಂದಿದೆ. ಅವಧೂತ ವಿನಯ್ ಗುರೂಜಿಯವರ ಅಪಾರ ಶಿಷ್ಯವೃಂದದಲ್ಲಿ ನಾನು ಒಬ್ಬ ಭಕ್ತ. ಮೊದಲನೆಯದಾಗಿ ಧಾರ್ಮಿಕ ನಂಬಿಕೆಗಳು ಜನರ ವೈಯಕ್ತಿಕ ವಿಚಾರಕ್ಕೆ ಮತ್ತು ಅವರವರ ಭಾವನೆಗೆ ಒಳಪಟ್ಟಿರುತ್ತದೆ. ಗುರುಗಳಲ್ಲಿ ನಾವು ಭಗವಂತನನ್ನು ಕಾಣುವುದರಿಂದ ಅವರು ಸೇವಿಸಿದ ಆಹಾರ ಪ್ರಸಾದವೆಂದು ಭಾವಿಸುತ್ತೇವೆ. ಗುರುಗಳು ಯಾರಿಗೂ ಕೂಡ ಸೇವಿಸಲು ಒತ್ತಾಯ ಮಾಡಿಲ್ಲ ಹಾಗೂ ನಿಮಗೂ ಕೂಡ ಬಲವಂತವಾಗಿ ತಿಳಿಸಿಲ್ಲ.

    ನಂಬಿಕೆ ಇರುವವರು ಅದನ್ನು ಪ್ರಸಾದವೆಂದು ಸ್ವೀಕರಿಸುತ್ತಾರೆ. ನೀವು ಕೇವಲ ಪ್ರಚಾರಕ್ಕಾಗಿ ವ್ಯಕ್ತಿಯ ನಂಬಿಕೆಯ ವಿಚಾರವನ್ನು ಬಹಿರಂಗವಾಗಿ ಚರ್ಚಿಸುವುದು ಸರಿಯಲ್ಲ. ಇನ್ನು ನಮ್ಮ ಆರೋಗ್ಯದ ಬಗ್ಗೆ ಖಂಡಿತವಾಗಿ ಕಾಳಜಿ ಬೇಡ, ಗುರುಗಳು ಆರೋಗ್ಯದಿಂದ ಇದ್ದಾರೆ. ಹಾಗಾಗಿ ನಮಗೇನೂ ತೊಂದರೆ ಇಲ್ಲ. ನಮ್ಮ ಆಚಾರ-ವಿಚಾರಗಳ ಬಗ್ಗೆ, ನಂಬಿಕೆಗಳ ಬಗ್ಗೆ, ಕೆಲವರು ಓಲೈಕೆಗಾಗಿ ಕೆಟ್ಟದಾಗಿ ದೊಡ್ಡದಾಗಿ ಬಿಂಬಿಸಲಾಗುತ್ತಿದೆ. ಹಾಗಾಗಿ ಇಂತಹ ವಿಚಾರಗಳನ್ನು ಪ್ರಚಾರಕ್ಕಾಗಿ ಈ ತರಹದ ಮಾತುಗಳನ್ನು ನಿಲ್ಲಿಸಿ.

    ನಿಮಗೇನಾದರೂ ವಿನಯ್ ಗುರೂಜಿ ರವರ ಬಗ್ಗೆ ಮಾಹಿತಿ ಗೊತ್ತಿಲ್ಲ ಎಂದರೆ ನಿಮ್ಮ ಪಕ್ಷದ ಅಧ್ಯಕ್ಷರು ಮತ್ತು ಹಿರಿಯ ನಾಯಕರನ್ನು ಕೇಳಿ ತಿಳಿದು ಮಾತನಾಡಿ. ನೀವು ಗುರುಗಳ ಬಗ್ಗೆ ಇತರ ಹಗುರವಾಗಿ ಮಾತನಾಡಿರುವುದು ನನ್ನ ಮನಸ್ಸಿಗೆ ನೋವಾಗಿದೆ. ಇದು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ರಘು ಆಚಾರ್ ಖಾರವಾದ ಪದಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ಮನ್ಸೂರ್ ಖಾನ್ ಯಾರು ಅನ್ನೋದೆ ನನಗೆ ಗೊತ್ತಿಲ್ಲ: ಶರವಣ

    ಮನ್ಸೂರ್ ಖಾನ್ ಯಾರು ಅನ್ನೋದೆ ನನಗೆ ಗೊತ್ತಿಲ್ಲ: ಶರವಣ

    ಬೆಂಗಳೂರು: ಮನ್ಸೂರ್ ಖಾನ್ ಯಾರು ಎನ್ನುವುದೇ ನನಗೆ ಗೊತ್ತಿಲ್ಲ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಜ್ಯುವೆಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಟಿ.ಎ.ಶರವಣ ಸ್ಪಷ್ಟಪಡಿಸಿದ್ದಾರೆ.

    ಮನ್ಸೂರ್ ಖಾನ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಮ್ಮ ಹೆಸರು ಉಲ್ಲೇಖವಾಗಿರುವ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮನ್ಸೂರ್ ಖಾನ್ ಯಾರೆಂಬುದೇ ಗೊತ್ತಿಲ್ಲ. ಐಎಂಎ ಜ್ಯುವೆಲ್ಲರ್ಸ್ ಮಾತ್ರ ನನಗೆ ಗೊತ್ತು. ಕಳೆದ ಎರಡು ವರ್ಷಗಳಿಂದ ಈ ಅಂಗಡಿಯಲ್ಲಿ ವೇಸ್ಟೇಜ್, ಮೇಕಿಂಗ್ ಚಾರ್ಜ್ ಇಲ್ಲದೆ, ಕೇವಲ ಚಿನ್ನದ ಬೆಲೆಗೆ ಆಭರಣಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ನಮ್ಮ ಅಸೋಸಿಯೇಷನ್ ಸದಸ್ಯರು ತಿಳಿಸಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ನನಗಿಲ್ಲ ಎಂದು ತಿಳಿಸಿದ್ದಾರೆ.

    ಐಎಂಎ ಜ್ಯುವೆಲರ್ಸ್‍ನ ಮಾಲೀಕತ್ವದ ಜಯನಗರ ಅಂಗಡಿಯವರು ವೇಸ್ಟೇಜ್, ಮೇಕಿಂಗ್ ಚಾರ್ಜ್ ಇಲ್ಲದೆ, ಕಡಿಮೆ ಬೆಲೆಗೆ ಆಭರಣಗಳನ್ನು ಮಾರುತ್ತಿದ್ದಾರೆ. ಈ ಕುರಿತು ಏನಾದರೂ ಕ್ರಮ ಕೈಗೊಳ್ಳಬೇಕು ಎಂದು ಜಯಗನರದ ವಿವಿಧ ಜ್ಯುವೆಲ್ಲರಿ ಶಾಪ್‍ನ ಮಾಲೀಕರು ಹಾಗೂ ಸಂಘದ ಸದಸ್ಯರು ನನ್ನ ಬಳಿ ವಿನಂತಿಸಿದ್ದರು. ಈ ಕುರಿತು ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಅವರ ವೈಯಕ್ತಿಕ ಅಂಗಡಿಯಲ್ಲಿ ಅವರವರ ಬೆಲೆಗೆ ಮಾರುತ್ತಾರೆ. ಕ್ವಾಲಿಟಿಯಲ್ಲಿ ಮೋಸವಾದರೆ, ಗ್ರಾಹಕರಿಗೆ ತೊಂದರೆ ಆದರೆ ಮಾತ್ರ ನಾವು ದೂರು ನೀಡಲು ಸಾಧ್ಯ ಎಂದು ಮನವರಿಕೆ ಮಾಡಿದ್ದೆ ಎಂದು ತಿಳಿಸಿದರು.

    ಈ ಕುರಿತು ನಮ್ಮ ವಕೀಲರ ಬಳಿ ಚರ್ಚಿಸಿದಾಗ, ಕಡಿಮೆ ಬೆಲೆಗೆ ಮಾರುತ್ತಾರೆಂದು ಏನೂ ಮಾಡಲು ಸಾಧ್ಯವಿಲ್ಲ. ಅವರ ಅಂಗಡಿಯಲ್ಲಿ ಅವರು ಯಾವುದೇ ಬೆಲೆಗೆ ಮಾರಬಹುದು. ಗುಣಮಟ್ಟದಲ್ಲಿ ಮೋಸ ಮಾಡಿದ್ದರೆ ಮಾತ್ರ ನಾವು ಕೇಳಬಹುದು ಎಂದು ಸ್ಪಷ್ಟಪಡಿಸಿದ್ದರು. ಅದೇ ರೀತಿ ನಾನು ಅಸೋಸಿಯೇಷನ್ ಸದಸ್ಯರಿಗೆ ತಿಳಿಸಿದ್ದೆ ಎಂದು ಹೇಳಿದರು.

    ನಾವೇನು ಮಾಡಲು ಸಾಧ್ಯವಿಲ್ಲ, ಈ ಹಿಂದೆ ಇದೇ ರೀತಿ ಮಾರಾಟ ಮಾಡಿ ಕೆಲವು ಅಂಗಡಿಗಳು ಮುಚ್ಚಿಕೊಂಡು ಹೋಗಿವೆ ಇದು ಅದೇ ರೀತಿ ಆಗುತ್ತದೆ ಬಿಡಿ ಎಂದು ನಮ್ಮ ಸದಸ್ಯರಿಗೆ ತಿಳಿಸಿದ್ದೆ ಎಂದರು.

    ಮನ್ಸೂರ್ ಖಾನ್ ವಿಡಿಯೋದಲ್ಲಿ ನನ್ನ ಹೆಸರನ್ನು ಯಾಕೆ ಉಲ್ಲೇಖಿಸಿದ್ದಾರೆ ಎಂದು ತಿಳಿದಿಲ್ಲ. ಅವರ ಮುಖವನ್ನೂ ನಾನು ಈವರೆಗೆ ನೋಡಿಲ್ಲ. ನಮ್ಮ ಅಂಗಡಿಗೆ ಸಪ್ಲೈ ಮಾಡುವವರೇ ಅವರಿಗೂ ಸಪ್ಲೈ ಮಾಡುತ್ತಾರೆ. ನಮಗೆ ನೀಡಿದ ದರದಲ್ಲೇ ಅವರಿಗೂ ಚಿನ್ನ ನೀಡುತ್ತಾರೆ. ಆದರೆ, ಅವರು ವೇಸ್ಟೇಜ್, ಮೇಕಿಂಗ್ ಚಾರ್ಜ್ ಇಲ್ಲದೆ ಚಿನ್ನದ ದರದಲ್ಲೇ ಆಭರಣವನ್ನು ಮಾರುತ್ತಿದ್ದರು ಎಂದು ಶರವಣ ವಿವರಿಸಿದರು.

    ನಮ್ಮ ಸದಸ್ಯರು ದೂರು ನೀಡಿರುವುದನ್ನು ಬಿಟ್ಟರೆ, ಇನ್ನಾವುದು ನನಗೆ ತಿಳಿದಿಲ್ಲ. ಐಎಂಎ ಜ್ಯುವೆಲರ್ಸ್ ಮಾಲೀಕರು ಯಾರೆಂಬುದೇ ನನಗೆ ತಿಳಿದಿರಲಿಲ್ಲ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ನಂತರ ಗೊತ್ತಾಯಿತು ಎಂದು ಹೇಳಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮುದ್ದೆ ತಿನ್ನಿ ಊಟ ಗೆಲ್ಲಿ- ಅಪ್ಪಾಜಿ ಕ್ಯಾಂಟೀನ್‍ನಲ್ಲಿ ಇಂದು ಸ್ಪರ್ಧೆ

    ಮುದ್ದೆ ತಿನ್ನಿ ಊಟ ಗೆಲ್ಲಿ- ಅಪ್ಪಾಜಿ ಕ್ಯಾಂಟೀನ್‍ನಲ್ಲಿ ಇಂದು ಸ್ಪರ್ಧೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾಗಿ ಮುದ್ದೆ ಸ್ಪರ್ಧೆಗೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಭಾರೀ ಸಿದ್ಧತೆ ನಡೆಸಿದ್ದಾರೆ.

    ಅಪ್ಪಾಜಿ ಕ್ಯಾಂಟೀನ್ ಮೊದಲ ವರ್ಷದ ಆಚರಣೆ ನಿಮಿತ್ತ ‘ಮುದ್ದೆ ತಿನ್ನಿ ಊಟ ಗೆಲ್ಲಿ’ ಎನ್ನುವ ವಿಶಿಷ್ಟ ಸ್ಪರ್ಧೆಯನ್ನು ಟಿ.ಎ.ಶರವಣ ಆಯೋಜಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ನಗರದ ಬಸವನಗುಡಿಯಲ್ಲಿರುವ ಅಪ್ಪಾಜಿ ಕ್ಯಾಂಟೀನ್ ಬಳಿ ಸ್ಪರ್ಧೆ ನಡೆಯಲಿದೆ.

    ಬಹುಮಾನ ಏನು?
    ಪಂದ್ಯದಲ್ಲಿ ಜಯ ಸಾಧಿಸಿದ ಮೂವರಿಗೆ ಬಂಪರ್ ಗಿಫ್ಟ್ ನೀಡಲಾಗುತ್ತದೆ. ಅದು ಏನು ಅಂದರೆ, ಮೊದಲ ಬಹುಮಾನ ಒಂದು ತಿಂಗಳು ಟಿಫನ್, ಮಧ್ಯಾಹ್ನದ ಊಟ ಉಚಿತ. ಇನ್ನು ಎರಡನೇ ಬಹುಮಾನ 20 ದಿನ ಟಿಫನ್, ಊಟ ಮತ್ತು ಮೂರನೇ ಸ್ಥಾನ ಪಡೆದವರಿಗೆ 10 ದಿನ ಟಿಫನ್ ಹಾಗೂ ಊಟ ಉಚಿತವಾಗಿ ಸಿಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews