Tag: ಟಿ.ಬಿ.ಜಯಚಂದ್ರ

  • ಶಿರಾಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನೀಡುವಂತೆ ಕೇಂದ್ರ ಸಚಿವರ ಭೇಟಿ ಮಾಡಿ, ಮನವಿ ಮಾಡ್ತೀವಿ – ಟಿ.ಬಿ.ಜಯಚಂದ್ರ

    ಶಿರಾಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನೀಡುವಂತೆ ಕೇಂದ್ರ ಸಚಿವರ ಭೇಟಿ ಮಾಡಿ, ಮನವಿ ಮಾಡ್ತೀವಿ – ಟಿ.ಬಿ.ಜಯಚಂದ್ರ

    ಬೆಂಗಳೂರು: ಶಿರಾಗೆ (Sira) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನೀಡುವಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಮನವಿ ಮಾಡುತ್ತೇವೆ ಎಂದು ದೆಹಲಿಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ (TB Jayachandra) ಹೇಳಿದರು.ಇದನ್ನೂ ಓದಿ: ಶಿರಾದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲು 30 ಕ್ಕೂ ಹೆಚ್ಚು ಶಾಸಕರಿಂದ ಮನವಿ

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) 4,000 ಎಕರೆಯಲ್ಲಿ ನಿರ್ಮಾಣ ಆಗಿದೆ. ದೇಶದ ನಂಬರ್ ಒನ್ ವಿಮಾನ ನಿಲ್ದಾಣ ಬೆಂಗಳೂರು ವಿಮಾನ ನಿಲ್ದಾಣ. 5 ಕೋಟಿ ಜನ ಇಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಬೆಂಗಳೂರಿಗೆ ಇರುವ ಮಾನ್ಯತೆ ಕಾರಣಕ್ಕೆ ಇಲ್ಲಿಗೆ ಹೆಚ್ಚಿನ ಜನ ಬರುತ್ತಾರೆ. 150 ಕಿ.ಮೀ ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ಮಾಡಬೇಕು ಅಂತಿದೆ ಎಂದು ತಿಳಿಸಿದರು.

    ಶಿರಾದಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಇವೆ. ಬೆಂಗಳೂರು, ಶಿರಾ ನಡುವೆ 1 ಗಂಟೆಯ ಪ್ರಯಾಣ. ಈ ಎಲ್ಲಾ ಕಾರಣಗಳನ್ನು ಸಿಎಂಗೆ ಮನವಿ ಮಾಡಿದ್ದೇವೆ. ಕೇಂದ್ರ ಸಚಿವ ಸೋಮಣ್ಣ ಅವರನ್ನು ಭೇಟಿ ಮಾಡುತ್ತೇವೆ. ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿ ಮಾಡಿ, ಮನವಿ ಮಾಡುತ್ತೇವೆ. ಏರ್‌ಪೋರ್ಟ್ ಅಥಾರಿಟಿ ಅವರು ಇಷ್ಟು ಬೇಗ ಬರುತ್ತಾರೆ ಎಂದು ನಮಗೂ ಗೊತ್ತಿರಲಿಲ್ಲ. ಆದರೂ ಈಗಲೂ ಅವಕಾಶ ಇದೆ, ಶಿರಾದಲ್ಲಿ ಆಗುತ್ತಾ ಎಂಬುದನ್ನ ಪರಿಶೀಲಿಸಬಹುದು. ಏರ್‌ಪೋರ್ಟ್ 2032ಕ್ಕೆ ಆಗುತ್ತದೆ. ಇನ್ನೂ 8 ವರ್ಷ ಬೇಕು. ಶಿರಾದಲ್ಲಿ ಏರ್‌ಪೋರ್ಟ್ ಆದರೆ ಉತ್ತರ ಕರ್ನಾಟಕ ಸೇರಿದಂತೆ ಎಲ್ಲಾ ಭಾಗಕ್ಕೆ ಸಹಾಯವಾಗಲಿದೆ ಎಂದಿದ್ದಾರೆ.ಇದನ್ನೂ ಓದಿ: ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‍ಐಆರ್

  • ಬಾಯಿ ಮುಚ್ಚಿಕೊಂಡಿರಿ ಅಂತ ಖರ್ಗೆ ಹೇಳಿದ್ದಾರೆ, ಅದನ್ನು ಅರ್ಥ ಮಾಡ್ಕೋಬೇಕು: ಟಿ.ಬಿ.ಜಯಚಂದ್ರ

    ಬಾಯಿ ಮುಚ್ಚಿಕೊಂಡಿರಿ ಅಂತ ಖರ್ಗೆ ಹೇಳಿದ್ದಾರೆ, ಅದನ್ನು ಅರ್ಥ ಮಾಡ್ಕೋಬೇಕು: ಟಿ.ಬಿ.ಜಯಚಂದ್ರ

    ಬೆಂಗಳೂರು: ಖರ್ಗೆ ಅವರು ಬಾಯಿ ಮುಚ್ಚಿಕೊಂಡು ಇರಿ ಎಂದಿದ್ದಾರೆ. ಅವರೇ ಹೈಕಮಾಂಡ್ ಆಗಿರೋದ್ರಿಂದ ಅವರ ಸಂದೇಶ ಅರ್ಥ ಮಾಡಿಕೊಳ್ಳಬೇಕು. ಬಾಯಿ ಮುಚ್ಚಿಕೊಂಡು ಇರಿ ಅಂದರೆ ಸುಮ್ಮನಿರಬೇಕು ಎಂದು. ಅವರ ಈ ಹೇಳಿಕೆಯು ಎಲ್ಲದಕ್ಕೂ ತೆರೆ ಎಳೆದಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ (T B Jayachandra) ಸ್ಪಷ್ಟನೆ ನೀಡಿದರು.

    ಪಕ್ಷದ ನಾಯಕರು ದೆಹಲಿಗೆ ಹೋಗ್ತಿರೋ ವಿಚಾರ ಮತ್ತು ಸಿಎಂ ಹಾಗೂ ಕೆಪಿಸಿಸಿ (KPCC) ಬದಲಾವಣೆ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ (Bengaluru) ಮಾತನಾಡಿದರು. ಖರ್ಗೆ ಅವರು ಕರ್ನಾಟಕದ ಬಗ್ಗೆ ಅಧ್ಯಕ್ಷರ ಬದಲಾವಣೆ ಕುರಿತು ಹೇಳಿಲ್ಲ. ಕೆ.ಎನ್.ರಾಜಣ್ಣ ಪದೇ ಪದೇ ಹೇಳಿಕೆಯ ವಿಚಾರದಲ್ಲಿ ಯಾರು ಏನು ಹೇಳ್ತಾರೆ ಅನ್ನೋದಕ್ಕೆ ನಾನೇನು ಹೇಳಲ್ಲ. ನಾವೆಲ್ಲ ಹಿರಿಯರು, ನಾವು ಅರ್ಥ ಮಾಡಿಕೊಳ್ಳಬೇಕು. ಪದೇ ಪದೇ ಎಲ್ಲದಕ್ಕೂ ಉತ್ತರ ಕೊಡೋಕೆ ಆಗಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಮೂವರು ಪಾದಚಾರಿಗಳ ಮೇಲೆ ಹರಿದ ಕಾರು – ಓರ್ವ ಸಾವು

    ರಾಜಕಾರಣ ಒಂದೊಂದು ಸಂದರ್ಭದಲ್ಲಿಯೂ ಬದಲಾವಣೆ ಆಗುತ್ತಿರುತ್ತದೆ. ಆದರೆ ಬಿಜೆಪಿಯವರು ನಮ್ಮ ಸಿಎಂ ಮೇಲೆ ಆರೋಪ ಮಾಡಿದ್ದಾರೆ. ಅಪಪ್ರಚಾರ ಮಾಡಿ, ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಆದರೆ ಇಂದು ಸಿಎಂ ನಿರ್ದೋಷಿ ಎಂದು ತೀರ್ಪು ಬಂದಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜಣ್ಣ ಮಾತಾಡಿದ್ದು ತಪ್ಪು – ಹಿರಿಯರು ತಪ್ಪು ಹಾದಿಯಲ್ಲಿ ಹೋದ್ರೆ ನಾವು ದಾರಿ ತಪ್ತೀವಿ: ಶಿವಗಂಗಾ ಬಸವರಾಜ್

    ಸ್ಥಳೀಯ ಸಂಸ್ಥೆ ಚುನಾವಣೆ ಆಗಿಲ್ಲ. ಪಂಚಾಯತ್ ಚುನಾವಣೆ ಆಗಿಲ್ಲ. ಹೀಗಾಗಿ ಸ್ಥಳೀಯ ಆಡಳಿತದ ಮೇಲೆ ಹೆಚ್ಚು ಗಮನ ಹರಿಸಬೇಕು. ನಾವು ಸ್ಥಳೀಯ ಚುನಾವಣೆ ಮೇಲೆ ಗಮನ ಹರಿಸಬೇಕು. ಆದರೆ ಈ ವೇಳೆ ಹೈಕಮಾಂಡ್‌ನವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಅವರಿಗೆ ಬಿಟ್ಟಿದ್ದು. ಈಗ ಯಾವುದೇ ಬದಲಾವಣೆ ಆಗಲ್ಲ ಅಂತ ಅನ್ನಿಸುತ್ತಿದೆ ಎಂದರು. ಇದನ್ನೂ ಓದಿ: Champions Trophy: ಟಿವಿಯಲ್ಲಿ ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ ವೀಕ್ಷಿಸಿದ ಹೆಚ್‌ಡಿಕೆ

  • ಬೆಂಗಳೂರು – ಪುಣೆ ದಶಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅತಿ ಶೀಘ್ರ: ಟಿ.ಬಿ ಜಯಚಂದ್ರ

    ಬೆಂಗಳೂರು – ಪುಣೆ ದಶಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅತಿ ಶೀಘ್ರ: ಟಿ.ಬಿ ಜಯಚಂದ್ರ

    ತುಮಕೂರು: ಬೆಂಗಳೂರು- ಪುಣೆ ದಶಪಥ ರಾಷ್ಟ್ರೀಯ ಹೆದ್ದಾರಿ (Bengaluru-Pune Expressway) (ವಿಷನ್-47) ಕಾಮಗಾರಿ ಅತಿ ಶೀಘ್ರ ಪ್ರಾರಂಭವಾಗಲಿದ್ದು, ಇದರಿಂದಾಗಿ ಶಿರಾ ತಾಲೂಕಿನ ಚಿತ್ರಣವೇ ಬದಲಾಗುವುದು ಎಂದು ಶಾಸಕ ಟಿ.ಬಿ.ಜಯಚಂದ್ರ (TB Jayachandra) ಹೇಳಿದರು.

    ಶಿರಾ (Sira) ತಾಲೂಕಿನ ತೊಗರಗುಂಟೆ ಬಳಿ 25 ಕೋಟಿ ರೂ. ವೆಚ್ಚದಲ್ಲಿ ಶಿರಾ-ಅಮರಾಪುರ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನಲ್ಲಿ ಈಗಾಗಲೇ ಮೂರು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುತ್ತಿದ್ದು, ಶೀಘ್ರದಲ್ಲಿ ಬೆಂಗಳೂರು- ಪುಣೆ ಹೆದ್ದಾರಿ ಕಾಮಗಾರಿ ಪ್ರಾರಂಭವಾಗುವುದರಿಂದ ಒಟ್ಟು ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುವುದರಿಂದ ಮುಂದಿನ ದಿನಗಳಲ್ಲಿ ತಾಲೂಕು ಅಭಿವೃದ್ಧಿಯತ್ತ ಸಾಗುವುದು ಎಂದರು. ಇದನ್ನೂ ಓದಿ: ತ್ರಾಸಿ ಬೀಚ್‌ನಲ್ಲಿ ಟೂರಿಸ್ಟ್ ಬೋಟ್ ಪಲ್ಟಿ – ರೈಡರ್ ಕಣ್ಮರೆ

    ಶಿರಾ- ಅಮರಾಪುರ ರಸ್ತೆ ಕಾಮಗಾರಿ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿದೆ. ರಸ್ತೆ ಗುಣಮಟ್ಟಕ್ಕೆ ಆದ್ಯತೆ ನೀಡಿ ಹಣದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಹೆಚ್ಚು ಹಣ ಬೇಕಾದರೆ ನನಗೆ ಹೇಳಿ ಕೊಡಿಸಲಾಗುವುದು. ತಾಲೂಕಿನಲ್ಲಿ ನಾಲ್ಕು ಹೆದ್ದಾರಿಗಳು ಹಾದು ಹೋಗುತ್ತಿದ್ದು, ಇದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: Maharashtra | ನೂತನ ಸಚಿವರಿಗೆ ಖಾತೆ ಹಂಚಿಕೆ, ಗೃಹಖಾತೆ ತನ್ನಲ್ಲೇ ಉಳಿಸಿಕೊಂಡ ಬಿಜೆಪಿ – ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌!

  • 3,133 ಮೆಟ್ರಿಕ್ ಟನ್ ಕುಸುಬೆ ಬೆಳೆಯನ್ನು ಬೆಂಬಲ ಬೆಲೆಗೆ ಖರೀದಿಸಲು ಕೇಂದ್ರ ಒಪ್ಪಿಗೆ – ಟಿಬಿ ಜಯಚಂದ್ರ

    3,133 ಮೆಟ್ರಿಕ್ ಟನ್ ಕುಸುಬೆ ಬೆಳೆಯನ್ನು ಬೆಂಬಲ ಬೆಲೆಗೆ ಖರೀದಿಸಲು ಕೇಂದ್ರ ಒಪ್ಪಿಗೆ – ಟಿಬಿ ಜಯಚಂದ್ರ

    ನವದೆಹಲಿ: ರಾಜ್ಯದಲ್ಲಿ 2023-24ರ ಕೃಷಿ ಹಂಗಾಮಿನ ಹಿಂಗಾರಿನಲ್ಲಿ ಬೆಳೆದ 3,133 ಮೆಟ್ರಿಕ್ ಟನ್ ಕುಸುಬೆ ಬೆಳೆಯನ್ನು (Safflower Crop) ಬೆಂಬಲ ಬೆಲೆ (MSP) ಯೋಜನೆಯಡಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ (TB Jayachandra) ಹೇಳಿದ್ದಾರೆ.

    ರಾಜ್ಯದ ಮಧ್ಯ ಹಾಗೂ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಸುಮಾರು 21,000 ಹೆಕ್ಟೇರ್ ಪ್ರದೇಶದಲ್ಲಿ ಕುಸುಬೆ ಬೆಳೆ ಕೃಷಿ ನಡೆಯುತ್ತಿದ್ದು, ರೈತರು (Farmers) ಸರಿಯಾದ ಬೆಲೆ ಇಲ್ಲದೇ ತೊಂದರೆ ಎದುರಿಸುತ್ತಿದ್ದರು. ಇದನ್ನು ಪರಿಗಣಿಸಿ, ರಾಜ್ಯ ಸರ್ಕಾರದ ಸಹಕಾರ ಇಲಾಖೆಯ ಅಪರ ಕಾರ್ಯದರ್ಶಿಯವರು ಕೇಂದ್ರ ಸಹಕಾರ ಇಲಾಖೆ ಕಾರ್ಯದರ್ಶಿಯವರಿಗೆ ಕುಸುಬೆ ಬೆಳೆಯನ್ನು ಬೆಂಬಲ ಬೆಲೆ ವ್ಯಾಪ್ತಿಗೆ ತರಲು ಕೋರಿದ್ದರು. ಇದನ್ನೂ ಓದಿ: ಮದ್ದೂರು ಶಾಸಕ ಉದಯ್‌ ಮನೆಯಲ್ಲೇ ಗನ್‌ಮ್ಯಾನ್‌ ಮೇಲೆ ಹಲ್ಲೆ ನಡೆಸಿತ್ತು ದರ್ಶನ್‌ ಗ್ಯಾಂಗ್‌!

    ಬಳಿಕ ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಮನವಿಯನ್ನು ಮುತುವರ್ಜಿ ವಹಿಸಿ ಸಂಬಂಧಿಸಿದ ಇಲಾಖೆಗಳೊಡನೆ ಪತ್ರ ವ್ಯವಹಾರ ಹಾಗೂ ಸಮಾಲೋಚನೆ ನಡೆಸಿ ಕೇಂದ್ರ ಸರ್ಕಾರದಿಂದ ಅಂತಿಮವಾಗಿ ಅನುಮತಿ ಪಡೆದಿದೆ. ರಾಜ್ಯ ಸರ್ಕಾರವು ಸಂಬಂಧಿಸಿದ ನೋಡಲ್ ಏಜೆನ್ಸಿಗಳ ಸಮನ್ವಯತೆಯೊಂದಿಗೆ ಮುಂಬರುವ ದಿನಗಳಲ್ಲಿ ಬೆಂಬಲ ಬೆಲೆಯಲ್ಲಿ ಕುಸುಬೆ ಬೆಳೆ ಖರೀದಿಗೆ ಕ್ರಮ ವಹಿಸಲಿದೆ ಎಂದು ಜಯಚಂದ್ರ ವಿವರಿಸಿದರು. ಇದನ್ನೂ ಓದಿ: ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ

    ಕಳೆದ ಒಂದು ದಿನದ ಹಿಂದೆಯಷ್ಟೇ ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಭತ್ತ, ರಾಗಿ, ತೊಗರಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.50 ರಷ್ಟು ಎಂಎಸ್‌ಪಿ ಹೆಚ್ಚಿಸಿದೆ. ಭತ್ತದ ಮೇಲಿನ ಎಂಎಸ್‌ಪಿಯನ್ನು 143 ರೂಪಾಯಿ ಹೆಚ್ಚಿಸಿದ್ದು, ಭತ್ತದ ಕನಿಷ್ಠ ಬೆಲೆ ಈಗ 2,300 ರೂಪಾಯಿ ಆಗಿದೆ. ಅದೇ ರೀತಿ ರಾಗಿಗೆ 268 ರೂ., ಗೋಧಿ 150 ರೂ., ಮೆಕ್ಕೆ ಜೋಳ 128 ರೂ., ಜೋಳ 210 ರೂ., ಸಜ್ಜೆ 150 ರೂ., ತೊಗರಿ 400 ರೂ., ಹೆಸರುಬೇಳೆ 803 ರೂ., ಉದ್ದಿನ ಬೇಳೆ 350 ರೂ., ಕಡಲೆಕಾಯಿ 527 ರೂ., ಸೂರ್ಯಕಾಂತಿ 360 ರೂ., ಸೋಯಾಬೀನ್ 300 ರೂ., ಹತ್ತಿ 400 ರೂ., ಎಳ್ಳಿ 632 ರೂ., ಹುಚ್ಚೆಳ್ಳಿ 983 ರೂ. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಇದರಿಂದ 2 ಲಕ್ಷ ರೈತರಿಗೆ ಲಾಭವಾಗಲಿದೆ. ಸರ್ಕಾರಕ್ಕೆ 35,000 ಕೋಟಿ ರೂ. ಹೆಚ್ಚುವರಿ ಹೊರೆ ಆಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದೀಗ ಕುಸುಬೆ ಬೆಳೆಯನ್ನೂ ಎಂಎಸ್‌ಪಿ ಯೋಜನೆ ಅಡಿಗೆ ತಂದಿರುವುದು ರೈತರರಲ್ಲಿ ಸಂತಸ ತಂದಿದೆ. ಇದನ್ನೂ ಓದಿ: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳ ಮೂಲದ ಅರ್ಚಕ ಹೃದಯಾಘಾತದಿಂದ ಸಾವು

  • ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ.. ನಾನು ಕತ್ತಲಲ್ಲಿ ಇದ್ದೇನೆ:‌ ಟಿ.ಬಿ.ಜಯಚಂದ್ರ

    ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ.. ನಾನು ಕತ್ತಲಲ್ಲಿ ಇದ್ದೇನೆ:‌ ಟಿ.ಬಿ.ಜಯಚಂದ್ರ

    ಬೆಂಗಳೂರು: ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ನಾನು ಕತ್ತಲಲ್ಲಿ ಇದ್ದೇನೆ ಎಂದು ನವದೆಹಲಿ ಪ್ರತಿನಿಧಿ ಶಾಸಕ ಟಿ.ಬಿ.ಜಯಚಂದ್ರ (T.B.Jayachandra) ಪ್ರತಿಕ್ರಿಯಿಸಿದರು.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆ ವಿಚಾರದ ಬಗ್ಗೆ ನಾನು ಏನೂ ಮಾತನಾಡಲ್ಲ. ನಾನು ಕತ್ತಲಲ್ಲಿ ಕೂತಿದ್ದೇನೆ. ಕನ್ನಡಕ ಹಾಕಿಕೊಂಡಿದ್ದೇನೆ. ಈಗಾಗಲೇ ವರಿಷ್ಠರು ಬಂದು ಸೂಚನೆ ನೀಡಿ ಹೋಗಿದ್ದಾರೆ. ನಾನು ಕಾಂಗ್ರೆಸ್‌ನ (Congress) ಶಿಸ್ತಿನ ಸಿಪಾಯಿ. ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಂತರ ಡಿಕೆಶಿಯೇ ಸಿಎಂ ಆಗಬೇಕು: ಶಾಸಕ ಉದಯ್ ಗೌಡ

    ನಾನು ಕಣ್ಣು ಆಪರೇಷನ್ ಮಾಡಿಸಿಕೊಂಡು ನಾಲ್ಕು ದಿನ ಆಗಿದೆ. ಕತ್ತಲಲ್ಲಿ ಕೂತಿದ್ದೇನೆ. ಇವತ್ತಷ್ಟೆ ನನಗೆ ಟಿವಿ ನೋಡೋಕು ಬಿಡ್ತಿಲ್ಲ. ನಾನು ಕತ್ತಲಲ್ಲಿದ್ದೀನಿ. ಕನ್ನಡಕ ಹಾಕಿಕೊಂಡಿದ್ದೀನಿ. ಯಾವ ವಿಚಾರವೂ ಗೊತ್ತಿಲ್ಲ. ಏನ್ ಚರ್ಚೆ ಆಗಿದ್ಯೋ, ಆ ಗೋಜಿಗೆ ನಾನು ಹೋಗಿಲ್ಲ ಎಂದರು.

    ಜಾತಿಗಣತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ‌ ಕಾಲದಲ್ಲೇ ಮಾನದಂಡ ಇಟ್ಟುಕೊಂಡು ಕಾಂತರಾಜು ವರದಿ ಕೇಳಿದ್ದೆವು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಜಾತಿಗಣತಿ ಕೇಳಿದ್ವಿ. ಆ ವರದಿಯಲ್ಲಿ ಪರಿಪೂರ್ಣ ಏನಿದೆ ಅಂತ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ: ಯಡಿಯೂರಪ್ಪ

    ಜಯಪ್ರಕಾಶ್ ಹೆಗ್ಡೆ ವರದಿ ಕೊಡ್ತೀವಿ ಅನ್ನೋದನ್ನ ಮಾಧ್ಯಮದಲ್ಲಿ ನೋಡಿದ್ದೇನೆ. ವರದಿ ಕೊಟ್ಟಾಗ ಸರ್ಕಾರ ಸ್ವೀಕಾರ ಮಾಡಬೇಕು. ವರದಿ ಸ್ವೀಕಾರದ ಬಳಿಕ ಜಾರಿ ಮಾಡೋದು ಬಿಡೋದು ಸರ್ಕಾರಕ್ಕೆ ಬಿಟ್ಟ ವಿಚಾರ. ಅಧಿಕೃತವಾಗಿ ಸರ್ಕಾರಕ್ಕೆ ವರದಿ ಒಪ್ಪಿಸುವ ಕೆಲಸ ಮಾಡಬೇಕಿದೆ. ಸದುದ್ದೇಶದ ಹಿನ್ನೆಲೆಯಲ್ಲಿ ಐವತ್ತೈದು ಮಾನದಂಡ ಇಟ್ಟುಕೊಂಡು ಜಾತಿಗಣತಿ ಮಾಡಿಸಿದ್ದೇವೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Operation Ajay: ಭಾರತ ಸರ್ಕಾರಕ್ಕೆ ಸಲಾಂ – ಇಸ್ರೇಲ್‌ ಯುದ್ಧ ಭೂಮಿಯ ಅನುಭವ ಬಿಚ್ಚಿಟ್ಟ ಕನ್ನಡಿಗರು

    Operation Ajay: ಭಾರತ ಸರ್ಕಾರಕ್ಕೆ ಸಲಾಂ – ಇಸ್ರೇಲ್‌ ಯುದ್ಧ ಭೂಮಿಯ ಅನುಭವ ಬಿಚ್ಚಿಟ್ಟ ಕನ್ನಡಿಗರು

    ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ (Israel Hamas War) ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ (Operation Ajay) ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಮೊದಲ ಹಂತದಲ್ಲಿ 230 ಮಂದಿ ಭಾರತೀಯರನ್ನ ಕರೆತರಲಾಗಿದ್ದು, ಈ ಪೈಕಿ ಐವರು ಕನ್ನಡಿಗರೂ ಇದ್ದಾರೆ. ಅವರಿಂದು ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಯುದ್ಧಭೂಮಿಯ ಅನುಭವ ಬಿಚ್ಚಿಟ್ಟಿದ್ದಾರೆ.

    ಮಹಾರಾಷ್ಟ್ರ ಯುವತಿ ಕಂಡಂತೆ ಇಸ್ರೇಲ್‌ ಹೇಗಿತ್ತು?
    ಕಳೆದ 9 ತಿಂಗಳಿನಿಂದ ಇಸ್ರೇಲ್‌ನಲ್ಲಿ ಕೆಲಸ ಮಾಡಿಕೊಂಡಿರುವ ಮಹಾರಾಷ್ಟ್ರ ಮೂಲದ ಯುವತಿ ಪ್ರಿಯಾಂಕಾ ʻಪಬ್ಲಿಕ್‌ ಟಿವಿʼ (Public TV) ಜೊತೆಗೆ ಮಾತನಾಡಿ, ಯುದ್ಧಭೂಮಿಯ ಅನುಭವ ಹಂಚಿಕೊಂಡಿದ್ದಾರೆ. ನಾನು ಇದ್ದ ಅಷ್ಟೂ ದಿನಗಳಲ್ಲಿ ಇದೇ ಮೊದಲ ಬಾರಿಗೆ ದೊಡ್ಡಮಟ್ಟದ ಸಮಸ್ಯೆ ಆಗಿರೋದು. ನಾವು ಇಸ್ರೇಲ್‌ ಕೇಂದ್ರ ಭಾಗದಲ್ಲಿದ್ದೆವು. ದಕ್ಷಿಣಕ್ಕೆ 120 ಕಿಮೀ ದೂರದಲ್ಲಿದ್ದ ಗಾಜಾಪಟ್ಟಿಯಲ್ಲಿ ದಾಳಿ ನಡೆದಿತ್ತು. ಇದರಿಂದ ಸಾಕಷ್ಟು ಆತಂಕಕ್ಕೆ ಒಳಗಾಗಿದ್ದೆವು ಎಂದು ಹೇಳಿದ್ದಾರೆ.

    ನಾವು ಬಂಕರ್‌ಗಳಲ್ಲಿ ಅಡಗಿ ಕೂರಬೇಕಿತ್ತು. ದಿನಕ್ಕೆ ಎರಡು ಬಾರಿ ಸೈರನ್‌ ಮಾಡುತ್ತಿದ್ದರು. ಆಗ 9 ನಿಮಿಗಳಷ್ಟೇ ಕಾಲಾವಕಾಶ ಸಿಗುತ್ತಿತ್ತು. ಅಷ್ಟರಲ್ಲೇ ನಾವು ಮತ್ತೊಂದು ಬಂಕರ್‌ ಸೇರಿಕೊಳ್ಳಬೇಕಿತ್ತು. ದಿನಕ್ಕೆ ಎರಡು ಬಾರಿ ಮಾತ್ರ ಸೈರನ್‌ ಆಗುತ್ತಿತ್ತು. ಕೆಲವೊಮ್ಮೆ ದಿನಕ್ಕೆ ಒಂದು ಬಾರಿ ಮಾತ್ರ ಆಗುತ್ತಿತ್ತು. ಬಂಕರ್‌ನಿಂದ ಆಚೆ ಬಂದಾಗ ರಾಕೆಟ್‌, ಗುಂಡಿನ ಶಬ್ಧ ಕಿವಿಗೆ ಅಪ್ಪಳಿಸುತ್ತಿತ್ತು, ಪರಿಸ್ಥಿತಿ ಸೂಕ್ಷ್ಮವಾಗಿ ಇದ್ದುದರಿಂದ ನಾವು ನೋಡಲು ಸಾಧ್ಯವಾಗಲಿಲ್ಲ. ಆದ್ರೆ ನಾವು ಬಂಕರ್‌ ನಿಂದ ಮತ್ತೊಂದು ಬಂಕರ್‌ಗೆ ತೆರಳುತ್ತಿದ್ದ ವೇಳೆ ಅನೇಕ ಇಸ್ರೇಲಿಯನ್ನರು ನನಗೆ ಸಹಾಯ ಮಾಡಿದರು, ಸೇಫ್‌ ಆಗಿ ಹೋಗಿ ಅಂತಾ ಹೇಳಿದರು. ಅವರ ಹೆಸರೂ ಕೂಡ ನನಗೆ ಗೊತ್ತಾಗಲಿಲ್ಲ ಎಂದು ಹೇಳಿಕೊಂಡಿದ್ದಾರೆ.

    ಇನ್ನೂ ಇಸ್ರೇಲ್‌ ಉತ್ತರ ಭಾಗದಲ್ಲಿ ಮತ್ತು ದಕ್ಷಿಣಕ್ಕೆ ಇರುವ ಗಾಜಾದಲ್ಲಿ ಸಮಸ್ಯೆ ತುಂಬಾ ಸಮಸ್ಯೆಯಾಗಿತ್ತು. ಭಾರತಕ್ಕೆ ಬಂದ ನಂತರ ಆತಂಕವೆಲ್ಲಾ ದೂರವಾಯಿತು. ನಮ್ಮನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಸೇರಿಸಿದ್ದಕ್ಕೆ ಭಾರತ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇವೆ. ಶೀಘ್ರದಲ್ಲೇ ಇಸ್ರೇಲ್‌ ಪರಿಸ್ಥಿತಿಯನ್ನು ನಿಯಂತ್ರಿಸಲಿದೆ ಎಂದೂ ವಿಶ್ವಾಸ ವ್ಯಕ್ತಪಡಿಸಿದರು.

    ನಾವಿದ್ದ ಜಾಗ ಸೇಫ್‌:
    ಕಳೆದ ಎರಡು ವರ್ಷಗಳಿಂದ ಟೆಲ್‌ ಅವೀವ್‌ನಿಂದ 40 ಕಿಮೀ ದೂರದಲ್ಲಿರುವ ಆರ್ಯಲ್‌ ನಗರದ ವಿಶ್ವವಿದ್ಯಾಲಯದಲ್ಲಿ PHD ಪದವಿ ಮಾಡುತ್ತಿರುವ ವಿಜಯಪುರ ಮೂಲದ ಈರಣ್ಣ ʻಪಬ್ಲಿಕ್‌ ಟಿವಿʼಯೊಂದಿಗೆ ಮಾತನಾಡಿದ್ದಾರೆ. ನಾವಿದ್ದ 300 ಕಿಮೀ ದೂರದಲ್ಲಿ ಯುದ್ಧ ಶುರುವಾಗಿತ್ತು. ಗಡಿ ಭಾಗಗಳಲ್ಲಿ ಮಾತ್ರ ಸಮಸ್ಯೆಯಿತ್ತು. ಆದ್ರೆ ನಾವಿದ್ದ ಕಡೆ ತುಂಬಾ ಸೇಫ್‌ ಇತ್ತು, ಯುದ್ಧದ ಅನುಭವವೇ ಆಗಲಿಲ್ಲ ಎಂದು ಹೇಳಿದ್ದಾರೆ.

    ಭಾರತ ಸರ್ಕಾರಕ್ಕೆ ಸಲಾಂ:
    ನಾವು ಕಳೆದ 2 ವರ್ಷಗಳಿಂದ ಇಸ್ರೇಲ್‌ನ ಅರಿಯಲ್‌ ನಗರದಲ್ಲಿ ಇದ್ದೇವೆ. ನಾವಿದ್ದ ಜಾಗದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇತ್ತು. ಎಂದಿನಂತೆ ಕೆಲಕ್ಕೆ ಹೋಗಿ ಬರುತ್ತಿದ್ದೆವು. ಕೆಲವು ಸಂದರ್ಭಗಳಲ್ಲಿ ಮಾತ್ರ ಹೊರಗಡೆ ಹೋಗಬೇಡಿ, ಬಂಕರ್‌ ವ್ಯವಸ್ಥೆ ಕಲ್ಪಿಸಿದ್ರೆ ಅಲ್ಲಿಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಿದ್ದರು. ಕೊನೆಗೆ ಭಾರತಕ್ಕೆ ಬಂದಿದ್ದು ನಿರಾಳ ಎನಿಸಿದೆ. ದೇಶಕ್ಕೆ ಬರಲು ಭಾರತ ಸರ್ಕಾರ ತುಂಬಾ ಸಹಕಾರ ನೀಡಿದ್ದಕ್ಕೆ ಧನ್ಯವಾದ ತಿಳಿಸುತ್ತೇವೆ. ಎಷ್ಟೇ ಆದ್ರೂ ನಮ್ಮ ದೇಶ ನಮ್ಮ ದೇಶವೇ ಎಂದು ಶ್ಲಾಘಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Operation Ajay: ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ – ಕನ್ನಡಿಗರಿಗೆ ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

    Operation Ajay: ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ – ಕನ್ನಡಿಗರಿಗೆ ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

    ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ (Israel Hamas War) ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ (Operation Ajay) ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಭಾರತೀಯರನ್ನು (Indians) ಹೊತ್ತ ಮೊದಲ ವಿಮಾನ ಇಸ್ರೇಲ್‌ನಿಂದ ದಹೆಲಿಗೆ ಬಂದಿಳಿದಿದೆ.

    ಒಟ್ಟು 230 ಮಂದಿ ಭಾರತೀಯರು ತವರಿಗೆ ಮರಳಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಸ್ವಾಗತಿಸಿದ್ದಾರೆ. 230 ಮಂದಿಯಲ್ಲಿ ಐವರು ಕನ್ನಡಿಗರು ಸಹ ಇದ್ದು, ಅವರನ್ನ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (TB Jayachandra) ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದೇ ವೇಳೆ ದೆಹಲಿಯಿಂದ ಕರ್ನಾಟಕಕ್ಕೆ ತೆರಳಲು ಸಾರಿಗೆ ವೆಚ್ಚದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನ ರೇಪ್‌ ಮಾಡ್ತಿದ್ದಾರೆ, ಮಕ್ಕಳನ್ನ ಕೊಲ್ತಿದ್ದಾರೆ- ಹಮಾಸ್‌ ಉಗ್ರರ ಕರಾಳ ಮುಖ ಬಿಚ್ಚಿಟ್ಟ ಭಾರತದ ಇಸ್ರೇಲ್‌ ಮಹಿಳೆ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಚಂದ್ರ ಅವರು, ಇಸ್ರೆಲ್‌ನಿಂದ ಬಂದ ಕನ್ನಡಿಗರ ಜೊತೆ ಮಾತನಾಡಿದ್ದೇನೆ. ದೆಹಲಿಗೆ ಬಂದಿರುವ ಅವರ ಯೋಗಕ್ಷೇಮವನ್ನು ಕರ್ನಾಟಕ ಸರ್ಕಾರ ನೋಡಿಕೊಳ್ಳಲಿದೆ. ಪ್ರತಿಯತೊಬ್ಬರನ್ನು ಅವರ ಊರುಗಳಿಗೆ ಕ್ಷೇಮವಾಗಿ ತಲುಪಿಸುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಲಿದೆ. ರಷ್ಯಾ-ಉಕ್ರೇನ್‌ ಯುದ್ಧದ ಸಂಧರ್ಭದಲ್ಲಿ ಮಾಡಿದಂತೆ ಈ ಬಾರಿಯೂ ವ್ಯವಸ್ಥೆ ಮಾಡಲಾಗುವುದು. ಉಳಿದುಕೊಳ್ಳಲು ಕರ್ನಾಟಕ ಭವನದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: 10ನೇ ತರಗತಿ ವಿದ್ಯಾರ್ಥಿಯನ್ನ ಸೆಕ್ಸ್‌ಗೆ ಪೀಡಿಸುತ್ತಿದ್ದ ಟೀಚರ್‌; ಮತಾಂತರಕ್ಕೂ ಒತ್ತಾಯ – ಕೇಸ್‌ ದಾಖಲು

    ಕೇಂದ್ರ ಸರ್ಕಾರದ ಜೊತೆಗೆ ನಮ್ಮ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಹಂತ ಹಂತವಾಗಿ ಕನ್ನಡಿಗರು ವಾಪಸ್ ಬರಲಿದ್ದಾರೆ. ರಾಜ್ಯ ಸರ್ಕಾರ ಜೊತೆಗಿದೆ ಎನ್ನುವ ಸಂದೇಶ ನೀಡಲು ನಾನೇ ಅವರ ಸ್ವಾಗತಕ್ಕೆ ಬಂದಿದ್ದೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ಅಪರೇಷನ್ ಅಜಯ್ ಆರಂಭಿಸಿದ ಕೇಂದ್ರ ಸರ್ಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರಿಪ್ರಸಾದ್ ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು: ಟಿ.ಬಿ ಜಯಚಂದ್ರ

    ಹರಿಪ್ರಸಾದ್ ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು: ಟಿ.ಬಿ ಜಯಚಂದ್ರ

    ಬೆಂಗಳೂರು: ಸಿಎಂ ವಿರುದ್ಧದ ಹರಿಪ್ರಸಾದ್ (Hariprasad) ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು ಉಂಟಾಗಿದೆ ಎಂದು ಕಾಂಗ್ರೆಸ್‍ನ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (T.B Jayachandra) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಹರಿಪ್ರಸಾದ್ ಅವರಿಗೆ ಹೈಕಮಾಂಡ್ ನೋಟಿಸ್ ನೀಡಿರುವ ವಿಚಾರವಾಗಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ, ಹರಿಪ್ರಸಾದ್ ಕಾಂಗ್ರೆಸ್‍ನ (Congress) ಹಿರಿಯ ನಾಯಕರಾಗಿದ್ದಾರೆ. ನಾವೆಲ್ಲ ಒಂದೇ ಬಾರಿ ರಾಜಕೀಯಕ್ಕೆ ಬಂದವರು. ಅವರು ಎಐಸಿಸಿಯಲ್ಲಿ ಉನ್ನತ ಹುದ್ದೆಯಲ್ಲಿ ಇದ್ದರು. ಆದರೆ ಅವರು ಮಾತನಾಡುವಾಗ ಯೋಚನೆ ಮಾಡಬಹುದಿತ್ತು. ಇದು ಒಂದು ರೀತಿಯಲ್ಲಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದಂತಾಗಿದೆ. ಅವರ ಹೇಳಿಕೆ ವಿಚಾರವಾಗಿ ಹೈಕಮಾಂಡ್ ನೋಟಿಸ್ ನೀಡಿದೆ. ಅದಕ್ಕೆ ಉತ್ತರ ಕೊಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: DCM ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು, ಅದು ಸಾಂವಿಧಾನಿಕ ಹುದ್ದೆಯಲ್ಲ: ಟಿ.ಬಿ ಜಯಚಂದ್ರ

    ಬಿಜೆಪಿ, ಜೆಡಿಎಸ್ ದೋಸ್ತಿ ವಿಚಾರವಾಗಿ, ಇತ್ತೀಚೆಗೆ ಯಾವುದೇ ತತ್ವ ಆಧಾರಗಳಿಲ್ಲದೆ ಹೊಂದಾಣಿಕೆ ನಡೆಯುತ್ತಿದೆ. ಜಾತ್ಯತೀತ ಎಂದು ಹೆಸರಿಟ್ಟುಕೊಂಡವರು ಬಿಜೆಪಿ ಜೊತೆ ಹೋಗುವುದು ಎಷ್ಟು ಸರಿ ಎನಿಸುತ್ತದೆ? ಜನ ಅದನ್ನು ಹೇಗೆ ಒಪ್ಪುತ್ತಾರೆ ಎನ್ನುವುದು ಚರ್ಚೆ ಆಗಬೇಕು ಎಂದಿದ್ದಾರೆ.

    ಕೇವಲ ಅಸ್ತಿತ್ವ ಉಳಿಸಿಕೊಳ್ಳಲು ಹೀಗೆ ಮೈತ್ರಿ ಮಾಡಿಕೊಳ್ಳುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೇ ಈ ಮೈತ್ರಿಯಿಂದ ಕಾಂಗ್ರೆಸ್‍ಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬರಗಾಲ ಘೋಷಣೆಗೆ ಒತ್ತಾಯ – ಶಾಸಕರ ಕಾರ್ಯಕ್ರಮಗಳ ಘೇರಾವ್‍ಗೆ ರೈತ ಸಂಘ ನಿರ್ಧಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • DCM ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು, ಅದು ಸಾಂವಿಧಾನಿಕ ಹುದ್ದೆಯಲ್ಲ: ಟಿ.ಬಿ ಜಯಚಂದ್ರ

    DCM ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು, ಅದು ಸಾಂವಿಧಾನಿಕ ಹುದ್ದೆಯಲ್ಲ: ಟಿ.ಬಿ ಜಯಚಂದ್ರ

    ಬೆಂಗಳೂರು: ಉಪ ಮುಖ್ಯಮಂತ್ರಿ (DCM) ಹುದ್ದೆಯು ಸಾಂವಿಧಾನಿಕ ಹುದ್ದೆ ಅಲ್ಲ. ಅದಕ್ಕೆ ಹೆಚ್ಚು ಮಹತ್ವ ಕೊಡಬಾರದು ಎಂದು ಮಾಜಿ ಸಚಿವರೂ ಆಗಿರುವ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (TB Jayachandra) ತಿಳಿಸಿದ್ದಾರೆ.

    3 ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕು ಎಂಬ ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ರಾಜಣ್ಣ (Rajanna) ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಪತ್ರ ಬರೆಯುತ್ತೇನೆ ಅಂತ ಹೇಳಿದ್ದಾರೆ. ಅದು ಸಲಹೆ ರೂಪದಲ್ಲಿ ಕೊಟ್ಟಿರಬಹುದು ಎಂದಿದ್ದಾರೆ. ಇದನ್ನೂ ಓದಿ: ಜನ್ಮದಿನದಂದು ದೆಹಲಿಯಲ್ಲಿ ಮೋದಿ ಮೆಟ್ರೋ ರೈಡ್ – ಪ್ರಯಾಣಿಕರೊಂದಿಗೆ ಸೆಲ್ಫಿ

    ಡಿಸಿಎಂ ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು. ಏಕೆಂದರೆ ಅದು ಸಾಂವಿಧಾನಿಕ ಹುದ್ದೆ ಅಲ್ಲ. ಸರ್ಕಾರ ಆಗಿ ನಾವು ನೋಡಬೇಕಾದ ಕೆಲಸ ತುಂಬಾ ಇದೆ. ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಬೇಕು. ಹೀಗಾಗಿ ಅದಕ್ಕೆ ಹೇಗೆ ಹಣ ಸಂಗ್ರಹ ಮಾಡಬೇಕು ಅನ್ನೋದರ ಬಗ್ಗೆ ಗಮನಹರಿಸಬೇಕು. ಗ್ಯಾರಂಟಿ ಯೋಜನೆ ಜೊತೆಗೆ ಬೇರೆ ಬೇರೆ ಅಭಿವೃದ್ಧಿ ಕೆಲ‌ಸ ಮಾಡುವ ಬಗ್ಗೆಯೂ ಗಮನ ಕೊಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಂಗೀತಾ ಬಿಜಲಾನಿ ಜೊತೆ ಸಲ್ಮಾನ್ ಮದುವೆ ಕ್ಯಾನ್ಸಲ್ ಆಗಿದ್ಯಾಕೆ- ಅಷ್ಟಕ್ಕೂ ಆಗಿದ್ದೇನು?

    ಲೋಕಸಭೆ ಚುನಾವಣೆ ಸಮಯದಲ್ಲಿ ಇದಕ್ಕೆ ಪ್ರಾಮುಖ್ಯತೆ ಕೊಡಬಾರದು. ಅವರ ಹೇಳಿಕೆ ರಾಜಕೀಯವಾಗಿ ಪ್ರಸ್ತುತ ಇರುತ್ತದೆ. ಅಂತಿಮವಾಗಿ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡುತ್ತದೆ. ರಾಜಣ್ಣ ಹೇಳಿಕೆಗೆ ಸಹಮತ ಅಂತ ಹೇಳುವುದಿಲ್ಲ. ಡಿಸಿಎಂ ಹುದ್ದೆಗೆ ಸಾಂವಿಧಾನಿಕ ಮಾನ್ಯತೆ ಇಲ್ಲ. ರಾಜಕೀಯವಾಗಿ ಡಿಸಿಎಂ ಹುದ್ದೆ ಸ್ಕೋಪ್ ಇರುತ್ತದೆ. ಅಂತಿಮವಾಗಿ ಹೈಕಮಾಂಡ್ ಎಲ್ಲವನ್ನ ತೀರ್ಮಾನ ಮಾಡುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೈಸ್ ಯೋಜನೆಯನ್ನ ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು – ಟಿ.ಬಿ.ಜಯಚಂದ್ರ

    ನೈಸ್ ಯೋಜನೆಯನ್ನ ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು – ಟಿ.ಬಿ.ಜಯಚಂದ್ರ

    ಬೆಂಗಳೂರು: ನೈಸ್ ವಿಚಾರದಲ್ಲಿ ಸದನ ಸಮಿತಿ ಕೊಟ್ಟಿರೋ ವರದಿ ಅನ್ವಯ ನೈಸ್ ಯೋಜನೆಯನ್ನ (Nice Project) ಸರ್ಕಾರ ವಶಪಡಿಸಿಕೊಳ್ಳಬೇಕು ಅಂತ ದೆಹಲಿ ಪ್ರತಿನಿಧಿ, ಸದನ ಸಮಿತಿ ಅಧ್ಯಕ್ಷರಾಗಿದ್ದ ಟಿ.ಬಿ ಜಯಚಂದ್ರ (TB Jayachandra) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ನೈಸ್ ದಾಖಲಾತಿ ಬಿಡುಗಡೆ ವಿಚಾರವಾಗಿ ವಿಧಾನಸೌಧದಲ್ಲಿ (Vidhan Soudha) ಪ್ರತಿಕ್ರಿಯೆ ನೀಡಿದ ಅವರು, ಸದನ ಸಮಿತಿ ವರದಿ ಕೊಟ್ಟ ಮೇಲೆ ಮುಗಿದೋಯ್ತು. 2016ರ ಡಿಸೆಂಬರ್‌ನಲ್ಲೇ ವರದಿ ಕೊಟ್ಟಿದ್ದೇನೆ. ಮೂರು ಪಕ್ಷಗಳ ಶಾಸಕರು ಕುಳಿತು ವರದಿ ಕೊಟ್ಟಿದ್ದೇವೆ. ಬೆಳಗಾವಿ ಅಧಿವೇಶನದಲ್ಲಿ (Belagavi Session) ಚರ್ಚೆಗೆ ಒತ್ತಾಯಿಸಿದ್ದರು. ಸರ್ಕಾರ ಕೂಡ ಅದಕ್ಕೆ ಉತ್ತರ ಕೊಟ್ಟಿದೆ. ನಮ್ಮ ಶಿಫಾರಸು ಸಲಹೆ ಕೊಟ್ಟಿದ್ದೇವೆ ಅಂತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಹಸ್ತ ಭೀತಿ; ವಲಸಿಗರ ಜೊತೆ ಸಮಾಲೋಚನೆ ನಡೆಸಲು ಬಿಎಸ್‌ವೈಗೆ ತಾಕೀತು

    ನೈಸ್ ಯೋಜನೆ ಮೇಲೆ 101 ಕೇಸ್ ಇದಕ್ಕೆ ಸಂಬಂಧಿಸಿದಂತೆ ಇದ್ವು. ಮೂರು ಜನರ ಸಮಿತಿ ರಚನೆ ಮಾಡಬೇಕು. ಅವರ ನೇತೃತ್ವದಲ್ಲಿ ಇದರ ತನಿಖೆ ಆಗಬೇಕು ಎಂದಿದ್ದೆವು. ನಾವು ಸಮಿತಿಯಲ್ಲಿ ಚರ್ಚಿಸಿ ವರದಿ ಕೊಟ್ಟಿದ್ದೇವೆ. ಶಿಫಾರಸು ಮಾಡಿದ್ದನ್ನ ಸರ್ಕಾರ ತೀರ್ಮಾನಿಸಬೇಕು. ಯೋಜನೆಯ ಹೆಚ್ಚುವರಿ ಭೂಮಿ ಪಡೆದುಕೊಳ್ಳಬೇಕು. ನಮ್ಮ‌ ವರದಿ ಮೇಲೆ ಸರ್ಕಾರ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3: ನೆಹರೂ ತಾರಾಲಯದಲ್ಲಿ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯೋ ದೃಶ್ಯ ನೇರಪ್ರಸಾರ

    ಮನಿ ಲಾಂಡರಿಂಗ್ ಕೂಡ ಆಗಿದೆ ವರದಿಯಲ್ಲಿ ಹೇಳಿದ್ದೆವು, ಯೋಜನೆಯ ಮೂಲ ಒಪ್ಪಂದದ ಉಲ್ಲಂಘನೆ ಆದ ಬಗ್ಗೆ ವರದಿಯಲ್ಲಿ ಪ್ರಸ್ತಾಪ ಆಗಿದೆ. ಅದಕ್ಕೆ ವರದಿ ಬಗ್ಗೆ ಕ್ರಮ ಆಗಲೇಬೇಕು. ಇಡೀ ಯೋಜನೆಯನ್ನೇ ಸರ್ಕಾರ‌ ಟೇಕ್ ಓವರ್ ಮಾಡಬೇಕು ಅಂತ ಒತ್ತಾಯಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]