Tag: ಟಿ.ಬಿ.ಜಯಚಂದ್ರ

  • ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಟಿ.ಬಿ ಜಯಚಂದ್ರ ಮನವಿ

    ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಟಿ.ಬಿ ಜಯಚಂದ್ರ ಮನವಿ

    ನವದೆಹಲಿ: ಕರ್ನಾಟಕದ ಕುಂಚಿಟಿಗ ಸಮುದಾಯಕ್ಕೆ (Kunchitiga community) ಒಬಿಸಿ (OBC) ಮೀಸಲಾತಿ ಕಲ್ಪಿಸುವಂತೆ ಮಾಜಿ ಸಚಿವ ಟಿ.ಬಿ ಜಯಚಂದ್ರ (TB Jayachandra) ಮನವಿ ಮಾಡಿದ್ದಾರೆ. ಕೇಂದ್ರ ಹಿಂದುಳಿದ ವರ್ಗಗಳ ಉಪ ಪಂಗಡಗಳ ‘ರೋಹಿಣಿ’ ನಿಯೋಗದ ಅಧ್ಯಕ್ಷೆ, ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆ ಜಿ. ರೋಹಿಣಿ ಅವರನ್ನು ಭೇಟಿ ಮಾಡಿದ ಅವರು ಈ ಬಗ್ಗೆ ಚರ್ಚೆ ನಡೆಸಿದರು.

    ಭೇಟಿ ವೇಳೆ ಮನವಿಗೆ ಪೂರಕವಾಗಿ ಹಿಂದಿನಿಂದಲೂ ಕೇಂದ್ರ ಸರ್ಕಾರದ ಜೊತೆ ನಡೆದಿರುವ ಪತ್ರ ವ್ಯವಹಾರಗಳ ದಾಖಲೆ, ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಲ್ಪಿಸಲು ಅಗತ್ಯವಿರುವ ಹಲವಾರು ದಾಖಲೆಗಳನ್ನು ನೀಡಿ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಇದನ್ನೂ ಓದಿ: ಮುಂದಿನ 18 ತಿಂಗಳಲ್ಲಿ ರಾಜ್ಯದಲ್ಲಿ ಐದು ಏರ್‌ಪೋರ್ಟ್‌ ನಿರ್ಮಾಣ: ಮುರುಗೇಶ್ ನಿರಾಣಿ

    ಮನವಿ ಬಳಿಕ ಮಾತನಾಡಿದ ಅವರು, ಇತ್ತೀಚೆಗೆ ತುಮಕೂರು, ಹಿರಿಯೂರು, ಶಿಕಾರಿಪುರ, ಚಿಕ್ಕಹುಲಿಕುಂಟೆಯಲ್ಲಿ ಕುಂಚಿಟಿಗರ ಸಮಾವೇಶ ನಡೆದಿತ್ತು. ಈ ಸಮುದಾಯದ ಬಹುದಿನಗಳ ಬೇಡಿಕೆಯಾದ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸಲು ಅಗತ್ಯವಿರುವ ಹೋರಾಟ ಮಾಡಲು ಒಮ್ಮತದಿಂದ ತಿರ್ಮಾನ ಮಾಡಿ ಈ ಕುರಿತು ನಿರ್ಣಯವನ್ನು ತೆಗೆದುಕೊಳ್ಳಲಾಗಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ಕೋಟಿ ಕಂಠ ಗಾಯನದಲ್ಲಿ ಕನ್ನಡ ಹಾಡಿಗೆ ಹೆಜ್ಜೆ ಹಾಕಿದ ಪ್ರಹ್ಲಾದ್‌ ಜೋಶಿ

    ಸುಮಾರು 2 ದಶಕಗಳ ಕಾಲ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಲ್ಪಿಸಲು ಹೋರಾಟ ಮಾಡಲಾಗಿದೆ. ಈ ನಿಟ್ಟಿನಲ್ಲಿ ಇದ್ದಂತಹ ಅನೇಕ ಕಾನೂನು ತೊಡಕುಗಳನ್ನು ನಿವಾರಣೆ ಮಾಡಿ, ತಾವು ಕಾನೂನು ಸಚಿವರಾಗಿದ್ದ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಾನವಶಾಸ್ತ್ರ ಅಧ್ಯಯನ ವಿಭಾಗದ ಮೂಲಕ ಸಮುದಾಯದ ಕುಲಶಾಸ್ತ್ರ ಅಧ್ಯಯನ ಮಾಡಿಸಿದ್ದೇವೆ. ಈಗಾಗಲೇ 2019ರಲ್ಲಿ ಈ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆ ಅಂಗೀಕರಿಸಿ ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರದ ಮುಖೇನ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನು ಆಧರಿಸಿ ಕ್ರಮ ವಹಿಸಲು ಮನವಿ ಮಾಡಿದೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಮದಲೂರು ಕೆರೆಗೆ ನೀರು ಬಿಡಲು ಸಾಧ್ಯವಿಲ್ಲ- ಮಾಧುಸ್ವಾಮಿ ಮತ್ತೊಮ್ಮೆ ಸ್ಪಷ್ಟನೆ

    ಮದಲೂರು ಕೆರೆಗೆ ನೀರು ಬಿಡಲು ಸಾಧ್ಯವಿಲ್ಲ- ಮಾಧುಸ್ವಾಮಿ ಮತ್ತೊಮ್ಮೆ ಸ್ಪಷ್ಟನೆ

    ತುಮಕೂರು: ಶಿರಾ ತಾಲೂಕು ಮದಲೂರು ಕೆರೆಗೆ ಯಾವುದೇ ಕಾರಣಕ್ಕೂ ನೀರು ಬೀಡಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರ ರಾಜಕೀಯ ದಾಳಕ್ಕೆ ಬಲಿಯಾಗಲು ನಾನು ತಯಾರಿಲ್ಲ. ಮದಲೂರು ಕೆರೆಗೆ ನೀರು ಹರಿಸಲಾಗದು, ಏನಾದರೂ ಮಾಡಿಕೊಳ್ಳಲಿ ಎಂದು ಸುದ್ದಿಗಾರರಿಗೆ ತಿಳಿಸಿದರು. ಶಿರಾ ತಾಲೂಕಿಗೆ ಹಂಚಿಕೆಯಾಗಿರುವ 0.9 ಟಿಎಂಸಿ ನೀರನ್ನು ಆ ಭಾಗಕ್ಕೆ ಬಳಸಿಕೊಳ್ಳುವಂತೆ ಹೈಕೋರ್ಟ್ ಹೇಳಿದೆ. ಹಂಚಿಕೆಯಾಗಿರುವ ನೀರನ್ನು ಕಳ್ಳಂಬೆಳ್ಳ ಕೆರೆಗೆ ತುಂಬಿಸಿ, ಶಿರಾ ಕೆರೆಗೆ ನೀರು ಹರಿಸುವುದರ ಒಳಗೆ ಮುಗಿದು ಹೋಗುತ್ತದೆ. ಮದಲೂರು ಕೆರೆಗೆ ಎಲ್ಲಿಂದ ನೀರು ಕೊಡುವುದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮದಲೂರು ಕೆರೆಗೆ ನೀರು ಬಿಡಲ್ಲ ಎನ್ನಲು ಮಾಧುಸ್ವಾಮಿಗೆ ನೈತಿಕತೆ ಇಲ್ಲ: ಟಿ.ಬಿ.ಜಯಚಂದ್ರ

    ಜಯಚಂದ್ರ ಅವರು ಶಿರಾ ಕೆರೆಗೆ ನೀರು ಬಿಡುವುದು ಬೇಡ. ಅದೇ ನೀರನ್ನು ಮದಲೂರು ಕೆರೆಗೆ ಹರಿಸಿ ಎಂದು ಹೇಳಿದರೆ ಆಗ ಮಾತ್ರ ನೀರು ಬಿಡಬಹುದು. ಇದಕ್ಕೆ ಶಿರಾ ನಗರದ ಜನರನ್ನು ಒಪ್ಪಿಸಿಕೊಂಡು ಬರಲಿ ಎಂದು ಸವಾಲು ಹಾಕಿದರು. 0.9 ಟಿಎಂಸಿ ನೀರನ್ನು ತಾಲೂಕಿನ ಎಲ್ಲಿಗೆ ಬೇಕಾದರೂ ಹರಿಸಿಕೊಳ್ಳಲಿ. ಶಿರಾ ನಗರದಲ್ಲಿ 60 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಅಲ್ಲಿನ ಜನರು ಕುಡಿಯಲು ಕೆರೆ ನೀರನ್ನೇ ಆಶ್ರಯಿಸಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಶಿರಾ ಕೆರೆಗೆ ಬಿಡದೆ ಬೇರೆಡೆಗೆ ಕೊಡಲು ಸಾಧ್ಯವಿಲ್ಲ. ಮದಲೂರು ಕೆರೆ ಬಳಿ ಕುಡಿಯುವ ನೀರು ಸರಬರಾಜು ಮಾಡಲು ಯಾವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಸುಮ್ಮನೆ ಕೆರೆಗೆ ಬಿಡಲಾಗುತ್ತದೆಯೆ? ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲೇ ನೀರು ಕೊಡಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮಯುದ್ಧ- ಎಂ.ಬಿ.ಪಾಟೀಲ್ ಧರ್ಮ ದಾಳಕ್ಕೆ ಕಾಂಗ್ರೆಸ್ ಮೌನ

    ಶಿರಾ, ಮದಲೂರು ನಾಲೆ ಮಧ್ಯದಲ್ಲಿ ಸಾಕಷ್ಟು ಬ್ಯಾರೇಜ್‍ಗಳನ್ನು ಜಯಚಂದ್ರ ನಿರ್ಮಿಸಿದ್ದಾರೆ. ಈ ಬ್ಯಾರೇಜ್‍ಗಳನ್ನು ತುಂಬಿಸಿ ಮುಂದಕ್ಕೆ ನೀರು ತೆಗೆದುಕೊಂಡು ಹೋಗಲು ಸಾಧ್ಯವೇ ಇಲ್ಲ. ಬ್ಯಾರೇಜ್‍ಗಳನ್ನು ತೆರವುಮಾಡಿ, ಪೈಪ್‍ಲೈನ್ ನಿರ್ಮಿಸಿದರೆ ಈಗಲೂ ನೀರು ಬಿಡಲು ಸಿದ್ಧ. ಆಗ ಬೇಕಾದರೆ ರಾಜಿಮಾಡಿಕೊಳ್ಳುತ್ತೇನೆ. ಈಗ ಪೈಪ್‍ಲೈನ್ ನಿರ್ಮಿಸಿ, ನೀರು ಬಿಡುವುದು ಅಸಾಧ್ಯದ ಕೆಲಸ. ಅವರು ಮಾಡಿದ ಅವಾಂತರದಿಂದ ಇಷ್ಟೆಲ್ಲ ಸಮಸ್ಯೆಗಳಾಗಿವೆ ಎಂದು ಹೇಳಿದರು.

  • ಮದಲೂರು ಕೆರೆಗೆ ನೀರು ಬಿಡಲ್ಲ ಎನ್ನಲು ಮಾಧುಸ್ವಾಮಿಗೆ ನೈತಿಕತೆ ಇಲ್ಲ: ಟಿ.ಬಿ.ಜಯಚಂದ್ರ

    ಮದಲೂರು ಕೆರೆಗೆ ನೀರು ಬಿಡಲ್ಲ ಎನ್ನಲು ಮಾಧುಸ್ವಾಮಿಗೆ ನೈತಿಕತೆ ಇಲ್ಲ: ಟಿ.ಬಿ.ಜಯಚಂದ್ರ

    ತುಮಕೂರು: ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಮದಲೂರು ಕೆರೆಗೆ ನೀರು ಬಿಡಲು ಅಡ್ಡಿಯಾಗುತ್ತಿದ್ದಾರೆ ಎಂದು ಮಾಜಿ ಕಾನೂನು ಸಚಿವ ಟಿ.ಬಿ ಜಯಚಂದ್ರ ಆರೋಪಿಸಿದ್ದಾರೆ.

    ತುಮಕೂರು ನಗರದ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದಲೂರು ಕೆರೆಗೆ ನೀರು ಬಿಡಲು ಮಾಧುಸ್ವಾಮಿ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಮದಲೂರು ಕೆರೆಗೆ ನೀರು ಬಿಡಲು ಸರ್ಕಾರದ ಆದೇಶವಿದೆ. ಆದರೂ ಮಾಧುಸ್ವಾಮಿ ಅಡ್ಡಿಯಾಗುತ್ತಿದ್ದಾರೆ. ಮಾಧುಸ್ವಾಮಿ ನೀರಾವರಿ ಹೋರಾಟಗಾರರಲ್ಲ. ನಾವು ನೀರಿಗಾಗಿ ಹೋರಾಟ ಮಾಡುವಾಗ ಮಾಧುಸ್ವಾಮಿಯ ಅಡ್ರೆಸ್ ಇರಲಿಲ್ಲ. ಆದರೆ ಇವತ್ತು ದೊಡ್ಡ, ದೊಡ್ಡ ಮಾತುಗಳನ್ನಾಡುತ್ತಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳು ಒತ್ತಾಯಪೂರ್ವಕವಾಗಿ ಶಾಲೆಗೆ ಬರಬೇಕೆಂದಿಲ್ಲ: ಬಿ.ಸಿ.ನಾಗೇಶ್

    ಮಾಧುಸ್ವಾಮಿಗಿಂತ ಮೊದಲು ನಾನು ಲಾಯರ್ ಆಗಿದ್ದವನು, ಮಾಧುಸ್ವಾಮಿಗಿಂತ ಕಾನೂನು ಅನುಭವ ನನಗಿದೆ. ಮಾಧುಸ್ವಾಮಿ ಬಹಳ ಬುದ್ದಿವಂತರು ಎಂದು ಕೇಳ್ಪಟ್ಟಿದ್ದೇನೆ. ಆದರೆ ಮದಲೂರು ಕೆರೆಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳುವ ಮೊದಲು ಸ್ವಲ್ಪ ಪ್ರಜ್ಞೆಯಿಂದ ಮಾತನಾಡಲಿ ಎಂದಿದ್ದಾರೆ.

    ಬಿಜೆಪಿ ಸಂಸದ ಜಿ.ಎಸ್ ಬಸವರಾಜು, ನಾನು, ಬಸವರಾಜ್ ಬೊಮ್ಮಾಯಿ ನೀರಾವರಿ ಯೋಜನೆ ಬಗ್ಗೆ ಚಿಂತನೆ ನಡೆಸಿದ್ದೇವೆ. ಮಾಧುಸ್ವಾಮಿ ಹೋರಾಟ ಮಾಡಿದವರಲ್ಲ. ಹಾಗಾಗಿ ಅವರಿಗೆ ನೀರು ಬಿಡಲ್ಲ ಎನ್ನುವ ನೈತಿಕತೆಯಿಲ್ಲ ಎಂದು ಟಿ.ಬಿ.ಜಯಚಂದ್ರ ಹರಿಹಾಯ್ದಿದ್ದಾರೆ. ಇದನ್ನೂ ಓದಿ:ಕೆಜಿಎಫ್ ಬಿಡುಗಡೆಗೆ ದಿನಾಂಕ ನಿಗದಿ – ಏಪ್ರಿಲ್‍ನಲ್ಲಿ ರಾಖಿಬಾಯ್ ಆರ್ಭಟ

  • ಶಿರಾ ವಿಚಾರಕ್ಕೆ ಬಂದ್ರೆ ಹುಷಾರ್ – ಮಾಧುಸ್ವಾಮಿಗೆ ಟಿ.ಬಿ ಜಯಚಂದ್ರ ಖಡಕ್ ವಾರ್ನಿಂಗ್

    ಶಿರಾ ವಿಚಾರಕ್ಕೆ ಬಂದ್ರೆ ಹುಷಾರ್ – ಮಾಧುಸ್ವಾಮಿಗೆ ಟಿ.ಬಿ ಜಯಚಂದ್ರ ಖಡಕ್ ವಾರ್ನಿಂಗ್

    ತುಮಕೂರು: ಶಿರಾ ವಿಚಾರಕ್ಕೆ ಬಂದ್ರೆ ಹುಷಾರ್ ಎಂದು ಕಾಂಗ್ರೆಸ್ ಮಾಜಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಸಚಿವ ಮಾಧುಸ್ವಾಮಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    ಮದಲೂರು ಕೆರೆ ನೀರಿನ ವಿವಾದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಶಾಪವೋ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿದರು. ಶಿರಾ ಉಪಚುನಾವಣೆ ವೇಳೆ ಮುಖ್ಯಮಂತ್ರಿಯಾಗಿದ್ದ ಬಿಎಸ್‍ವೈ ಕೆಲವೇ ತಿಂಗಳಲ್ಲಿ ಮದಲೂರು ಕೆರೆಗೆ ನೀರು ಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಸಚಿವ ಮಾಧುಸ್ವಾಮಿ ಮದಲೂರು ಕೆರೆಗೆ ನೀರು ಹರಿಸಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಅದು ಸರಿಯಲ್ಲವೆಂದು ನೇರವಾಗಿಯೇ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

    ಸಚಿವ ಜೆ.ಸಿ.ಮಾಧುಸ್ವಾಮಿ ಕೇವಲ ಜೆ.ಸಿ.ಪುರಕ್ಕೆ ಮಾಧುಸ್ವಾಮಿ ಆಗಬಾರದು. ಇಡೀ ಕರ್ನಾಟಕಕ್ಕೆ ಕಾನೂನು ಮಂತ್ರಿ ಆಗಬೇಕು. ಕಾನೂನು ಬಿಟ್ಟು ಮಾತನಾಡಲು ಹೋಗಬೇಡಿ. ಈ ಮುಂಚೆ ಗೊಂದಲ ಸೃಷ್ಟಿಸಿ ಅವಾಂತರ ಮಾಡಿಕೊಂಡಿರುವುದು ರಾಜ್ಯದ ಜನರಿಗೆ ಗೊತ್ತಿದೆ. ನೀವು ಮಂತ್ರಿ ಆಗಿರಿ ಏನೇ ಆಗಿರಿ ಶಿರಾ ವಿಚಾರಕ್ಕೆ ಬಂದ್ರೆ ಹುಷಾರ್ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ಬಿಎಂಟಿಸಿ ಸಿಬ್ಬಂದಿಯಿಂದ ಗಾಂಜಾ ಮಾರಾಟ-ಇಬ್ಬರು ಅರೆಸ್ಟ್

    ಜನಸಮೂಹದ ಮೇಲೆ ಯಾವುದೇ ಒತ್ತಡವನ್ನು ತರುವುದಕ್ಕೆ ನಾವು ಬಿಡುವುದಿಲ್ಲ. ಮದಲೂರು ಕೆರೆಗೆ ಹೇಮವಾತಿ ನೀರನ್ನು ಭಿಕ್ಷೆಯಾಗಿ ಕೇಳುತ್ತಿಲ್ಲ. ನ್ಯಾಯಯುತವಾಗಿ ಕೇಳುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಜಮೀರ್‌ಗಾಗಿ ಡಿಕೆಶಿ, ಸಿದ್ದರಾಮಯ್ಯ ಬಣದ ತಂತ್ರ ಪ್ರತಿತಂತ್ರ – ವಾರದ ಮುನಿಸಿನ ಬಳಿಕ ಇಂದು ಭೇಟಿಯಾಗ್ತಾರಾ?

  • ಮೂರನೇ ಅಲೆಯಲ್ಲಿ ಯಾರು ಇರ್ತಾರೋ ಯಾರು ಹೋಗ್ತಾರೋ ಗೊತ್ತಿಲ್ಲ: ಜಯಚಂದ್ರ

    ಮೂರನೇ ಅಲೆಯಲ್ಲಿ ಯಾರು ಇರ್ತಾರೋ ಯಾರು ಹೋಗ್ತಾರೋ ಗೊತ್ತಿಲ್ಲ: ಜಯಚಂದ್ರ

    ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ 2 ವರ್ಷ ಬಾಕಿ ಇದೆ. ಅಷ್ಟರಲ್ಲಿ ಕೊರೊನಾ ಮೂರನೇ ಅಲೆ ಬಂದು ಯಾರು ಇರುತ್ತಾರೋ ಯಾರು ಹೋಗುತ್ತಾರೋ ಗೊತ್ತಿಲ್ಲ. ಈ ನಡುವೆ ಕಾಂಗ್ರೆಸ್ ನಲ್ಲಿ ಸಿಎಂ ಗಾದಿ ಚರ್ಚೆ ಸದ್ಯಕ್ಕೆ ಅಪ್ರಸ್ತುತ ಎಂದು ಮಾಜಿ ಸಚಿವ ಟಿ.ಬಿ ಜಯಚಂದ್ರ ಹೇಳಿದ್ದಾರೆ.

    ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮಲ್ಲಿ ಈಗ ಸಿಎಂ ಯಾರು ಎಂಬ ಪ್ರಶ್ನೆ ಅಪ್ರಸ್ತುತ. 2023ರಲ್ಲಿ 125ಕ್ಕೂ ಹೆಚ್ಚು ಸ್ಥಾನ ಪಡೆದರೆ ಆಗ ಅಂದು ಆಯ್ಕೆಯಾದ ಶಾಸಕರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ. ಅಷ್ಟರಲ್ಲಿ ಸಿಎಂ ಅಭ್ಯರ್ಥಿ ಯಾರೂ ಅನ್ನುವ ಚರ್ಚೆ ಬೇಡ ಎಂದಿದ್ದಾರೆ.

    ಜತೆಗೆ ಕಾಂಗ್ರೆಸ್ ನಲ್ಲಿ ಯಾವ ಬಣನೂ ಇಲ್ಲ, ಗುಂಪುಗಾರಿಕೆನೂ ಇಲ್ಲ, ಅದು ಕೇವಲ ಮಾಧ್ಯಮದ ಸೃಷ್ಟಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ನಾನು ಓಪನ್ ಹಾರ್ಟೆಡ್ ಏನೇ ಹೇಳಿದ್ರೂ ಓಪನ್ ಆಗಿ ಹೇಳ್ತೀನಿ: ಜಮೀರ್

  • ಧೈರ್ಯವಾಗಿ ಮತ ಎಣಿಕೆಯಲ್ಲಿ ಪಾಲ್ಗೊಳ್ಳಲು ಜಯಚಂದ್ರ ಕರೆ

    ಧೈರ್ಯವಾಗಿ ಮತ ಎಣಿಕೆಯಲ್ಲಿ ಪಾಲ್ಗೊಳ್ಳಲು ಜಯಚಂದ್ರ ಕರೆ

    ಬೆಂಗಳೂರು: ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಶಿರಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ತಮ್ಮ ಕಾರ್ಯಕರ್ತರಿಗೆ ವೀಡಿಯೋ ಸಂದೇಶ ರವಾನಿಸಿದ್ದಾರೆ. ನಾಳೆ ನಡೆಯುವ ಮತ ಎಣಿಕೆ ಕಾರ್ಯದಲ್ಲಿ ಎಲ್ಲರೂ ಧೈರ್ಯವಾಗಿ ಭಾಗಿಯಾಗಿ ಎಂದು ಹೇಳಿದ್ದಾರೆ.

    ಇಂದು ಅನಿರೀಕ್ಷಿತ ಘಟನೆ ನಡೆದಿದ್ದು, ಪತ್ನಿ ನಿರ್ಮಲಾರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹಾಗಾಗಿ ನಾನು ಸಹ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಬಂದು ಪರೀಕ್ಷೆಗೆ ಒಳಗಾದಾಗ ನನ್ನ ಕೊರೊನಾ ವರದಿ ಸಹ ಪಾಸಿಟಿವ್ ಬಂದಿದೆ. ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಮತ ಎಣಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ. ನಿಮ್ಮೆಲ್ಲರ ಪರಿಶ್ರಮದಿಂದಾಗಿ ಚುನಾವಣೆ ನಡೆದಿದೆ. ಮತ ಎಣಿಕೆ ವೇಳೆ ನಾನು ಗೈರಾಗುತ್ತಿದ್ದೇನೆ. ದಯಮಾಡಿ ಎಲ್ಲರೂ ಎದೆಗುಂದದೆ ಧೈರ್ಯದಿಂದ ಮತ ಎಣಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ ಎಂದು ಟಿ.ಬಿ.ಜಯಚಂದ್ರ ಕೇಳಿ ಕೊಂಡಿದ್ದಾರೆ.

    ನಮ್ಮ ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತೆ ಎಂಬ ವಿಶ್ವಾಸವಿದೆ. ಕಾರ್ಯಕರ್ತರು ಯಾವುದಕ್ಕೂ ಯೋಚನೆ ಮಾಡಬೇಡಿ. ಆದಷ್ಟು ಬೇಗ ಗುಣಮುಖನಾಗಿ ಆಸ್ಪತ್ರೆಯಿಂದ ಬರುತ್ತೇನೆ. ಬಂದ ವೇಳೆ ನಿಮ್ಮೆಲ್ಲರನ್ನ ಭೇಟಿಯಾಗಿ ಕೃತಜ್ಞತೆಯನ್ನು ಹೇಳುತ್ತೇನೆ. ನಾಳೆಯ ನನ್ನ ಗೈರು ಹಾಜರಿಗೆ ಯಾರು ಬೇಸರ ತಿಳಿದುಕೊಳ್ಳ ಬೇಡಿ. ಎಲ್ಲರೂ ಅತ್ಯಂತ ಸಂತೋಷದಿಂದ ಚುನಾವಣೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ. ಕಾರಣ ಜಯ ನಮ್ಮದು, ಜಯ ನಮಗೆ ಕಟ್ಟಿಟ್ಟ ಬುತ್ತಿ ಎಂದು ಜಯಚಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರೋಂದರಿಂದ ನಾಳೆಯ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ ಕೆರಳಿಸಿದೆ.

    ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಒಟ್ಟು 24 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿ ಸುತ್ತಿನಲ್ಲಿ ತೀವ್ರ ಹಣಾಹಣಿಯಿಂದಾಗಿ ರೋಚಕತೆಯ ಘಟ್ಟ ತಲುಪುವ ಸಾಧ್ಯತೆ. ಈ ಬಾರಿ ಅಂಚೆ 4821 ಅಂಚೆ ಮತ ಸೇರಿ ಒಟ್ಟು ಶೇ.84 ರಷ್ಟು ಮತದಾನವಾಗಿದ್ದು. ಇವಿಎಂ ಮತಯಂತ್ರದಲ್ಲಿ 1 ಲಕ್ಷ 77 ಸಾವಿರದ 645 ಮತದಾರರು ಮತಚಲಾಯಿಸಿದ್ದಾರೆ.

     

    ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮುಂಜಾನೆ 7 ಗಂಟೆಗೆ ಸ್ರ್ಟಾಂಗ್ ರೂಂ ತೆರಯಲಿದ್ದು, 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕಾ ಕೇಂದ್ರದ ಸುತ್ತ ಮೂರು ಸುತ್ತಿನ ಭದ್ರತೆ ನಿಯೋಜಿಸಿದ್ದು, ಸೆಂಟ್ರಲ್ ಆರ್ಮಡ್ ಫೊರ್ಸ್ ಕಾರ್ಯನಿರ್ವಹಿಲಿದೆ. 2 ಕೆ.ಎಸ್.ಆರ್.ಪಿ, ಮೂರು ಡಿವೈಎಸ್ಪಿ, ಸಿಪಿಐ, ಪಿಎಸ್‍ಐ ಗಳು ಸೇರಿದಂತೆ ಒಟ್ಟು 200ಕ್ಕೂ ಹೆಚ್ಚು ಪೊಲೀಸರನ್ನ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.

    ಒಟ್ಟು 14 ಟೇಬಲ್ ಗಳಲ್ಲಿ 24 ಸುತ್ತು ಮತ ಎಣಿಕೆ ನಡೆಯಲಿದ್ದು, 330 ಮತಗಟ್ಟೆಗಳ ರಿಸಲ್ಟ್ ಹೊರಬೀಳಲಿದೆ. ಕೋವಿಡ್ ಹಿನ್ನಲೆಯಲ್ಲಿ ಭಾರೀ ಮುಂಜಾಗ್ರತೆವಹಿಸಿದ್ದು ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್, ಥರ್ಮಲ್ ಸ್ಕಾನಿಂಗ್ ನಡೆಯಲಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಬೆಳಗ್ಗೆ 6 ವರೆಗೂ ಮತ ಎಣಿಕಾ ಕೇಂದ್ರದ ಸುತ್ತಾ 5 ಕಿ.ಮೀ ವ್ಯಾಪ್ತಿ ಹಾಗೂ ಶಿರಾ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

  • ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ ಕೊರೊನಾ ದೃಢ

    ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ ಕೊರೊನಾ ದೃಢ

    ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದೆ.

    ಇಂದು ಮಧ್ಯಾಹ್ನ ತೀವ್ರ ಕೆಮ್ಮು ಕಾಣಿಸಿಕೊಂಡು ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಟಿ.ಬಿ.ಜಯಚಂದ್ರ ಅವರ ಪತ್ನಿ ನಿರ್ಮಲಾರಿಗೂ ಕೊರೊನಾ ಸೋಂಕು ತಗುಲಿದೆ. ಕಳೆದ ಕೆಲ ದಿನಗಳಿಂದ ತಮ್ಮ ಸಂಪರ್ಕದಲ್ಲಿದವರು ಆರೋಗ್ಯದ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವದರ ಜೊತೆಗೆ ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಟಿ.ಬಿ.ಜಯಚಂದ್ರ ಮನವಿ ಮಾಡಿಕೊಂಡಿದ್ದಾರೆ.

    ಶಿರಾ ಉಪಚುನಾವಣೆ ಫಲಿತಾಂಶ ನಾಳೆಯೇ ಪ್ರಕಟವಾಗಲಿದೆ. ಈ ಬಾರಿ ಶಿರಾದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮುಂಜಾನೆ 7 ಗಂಟೆಗೆ ಸ್ರ್ಟಾಂಗ್ ರೂಂ ತೆರಯಲಿದ್ದು, 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕಾ ಕೇಂದ್ರದ ಸುತ್ತ ಮೂರು ಸುತ್ತಿನ ಭದ್ರತೆ ನಿಯೋಜಿಸಿದ್ದು, ಸೆಂಟ್ರಲ್ ಆರ್ಮಡ್ ಫೊರ್ಸ್ ಕಾರ್ಯನಿರ್ವಹಿಲಿದೆ. 2 ಕೆ.ಎಸ್.ಆರ್.ಪಿ, ಮೂರು ಡಿವೈಎಸ್ಪಿ, ಸಿಪಿಐ, ಪಿಎಸ್‍ಐ ಗಳು ಸೇರಿದಂತೆ ಒಟ್ಟು 200ಕ್ಕೂ ಹೆಚ್ಚು ಪೊಲೀಸರನ್ನ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.

  • ಬಿಎಸ್‍ವೈ, ಮೋದಿ ಅವರೇನು ಎಳೆ ಕಡಸುಗಳಾ?- ಸಿದ್ದರಾಮಯ್ಯ

    ಬಿಎಸ್‍ವೈ, ಮೋದಿ ಅವರೇನು ಎಳೆ ಕಡಸುಗಳಾ?- ಸಿದ್ದರಾಮಯ್ಯ

    ಬೆಂಗಳೂರು: ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮುದಿ ಎತ್ತು ಎಂದು ಹೇಳಿದ್ದ ಬಿಜೆಪಿಯ ನಾಯಕರ ಹೇಳಿಕೆಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಟಿ.ಬಿ.ಜಯಚಂದ್ರ ಅವರಿಗೆ ವಯಸ್ಸಾಗಿದೆ ಅಂದ್ರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ ಎಂದು ಪ್ರಶ್ನೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

    ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ. ಹಾಗಾದರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ?. ಚುನಾವಣೆಯನ್ನು ಸಾಧನೆ ಮತ್ತು ಸಿದ್ಧಾಂತದ ಮೂಲಕ ಎದುರಿಸಲಾಗದವರು ಮಾತ್ರ ಸೋಲಿನ ಭೀತಿಯಿಂದ ಈ ರೀತಿ ಚಾರಿತ್ರ್ಯಹರಣ, ಗೂಂಡಾಗಿರಿ, ಹಣ ಹಂಚುವುದು ಮೊದಲಾದ ಅಡ್ಡದಾರಿ ಹಿಡಿಯುವುದು ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗುಡುಗಿದ್ದಾರೆ.

    ಮಂಗಳವಾರ ಯಶವಂತಪುರ ಸಮೀಪ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿದ್ದರಲ್ಲದೆ, ನಾನು ವಾಪಾಸು ತೆರಳುವಾಗ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ ಮಾಡಿದ್ದರು. ಇದು ಬಿಜೆಪಿಯವರ ರಾಜಕಾರಣದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ ಎಂದು ಆರೋಪಿಸಿದ್ದಾರೆ.

    ಆರ್.ಆರ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದ ಮುನಿರತ್ನ ಅವರೆ ಅಲ್ಲಿನ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಮೂಲ ಕಾರಣ. ಸೋಲಿನ ಭಯದಿಂದ ಜಿ.ಕೆ ವೆಂಕಟೇಶ್ ಅಂಥವರನ್ನು ಮುಂದೆ ಬಿಟ್ಟು ಮುನಿರತ್ನ ಅವರೆ ಗಲಭೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯನವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಣ್ಣೀರಿಟ್ಟ ಬಿಜೆಪಿ ಅಭ್ಯರ್ಥಿ ಮುನಿರತ್ನ

    ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ಹಾಗೂ ಶಾಸಕರು ನಿರ್ಧರಿಸುತ್ತಾರೆ. ಕೆಲವರು ಅಭಿಮಾನದಿಂದ ಇವ್ರೆ ನಮ್ಮ ಮುಂದಿನ ಮುಖ್ಯಮಂತ್ರಿ ಅಂತ ಹೇಳ್ತಾರೆ, ಅವರಿಗೆಲ್ಲ ಮಾತಾಡ್ಬೇಡಿ ಅಂತ ಹೇಳೋಕಾಗುತ್ತಾ ಎಂದು ತಮ್ಮ ಆಪ್ತರ ಹೇಳಿಕೆಯನ್ನ ಸಿದ್ದರಾಮಯ್ಯನವರು ಸಮರ್ಥಿಸಿಕೊಂಡರು.

    ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದೇನು?: ಯುವ ಎತ್ತಿಗೆ ಶಿರಾ ಜನತೆ ಮತ ನೀಡಿದ್ರೆ ಪ್ರಯೋಜನೆ. ಏಳು ಬಾರಿ ಗೆದ್ದಿರುವ ಟಿ.ಬಿ.ಜಯಚಂದ್ರ ಮುದಿ ಎತ್ತು. ನಮ್ಮ ಅಭ್ಯರ್ಥಿಯಾಗಿರುವ ರಾಜೇಶ್ ಗೌಡ ಯುವಕರು. ಹಾಗಾಗಿ ಯುವ ಎತ್ತಿಗೆ ಮತ ನೀಡಿದ್ರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರ ವೈಯಕ್ತಿಕ ದ್ವೇಷದಿಂದಾಗಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನವಾಯ್ತು. ಸರ್ಕಾರ ಬಿದ್ದು ಒಂದು ವರ್ಷ ಕಳೆದರೂ ಇಬ್ಬರ ಅಸಮಾಧಾನ ಇನ್ನೂ ಕಡಿಮೆಯಾಗಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಬಳಿ ಅಭಿವೃದ್ಧಿ ಮಂತ್ರ ಇಲ್ಲ. ಎರಡೂ ಪಕ್ಷಗಳು ಅಭ್ಯರ್ಥಿಗಳನ್ನು ನಿಲ್ಲಿಸಿದ್ಯಾಕೆ ಅಂತ ಗೊತ್ತಾಗುತ್ತಿಲ್ಲ ಎಂದು ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದರು.

  • ಶಿರಾ ‘ಕೈ’ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು: ಬಿ.ಜೆ.ಪುಟ್ಟಸ್ವಾಮಿ

    ಶಿರಾ ‘ಕೈ’ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು: ಬಿ.ಜೆ.ಪುಟ್ಟಸ್ವಾಮಿ

    – ಬಿಜೆಪಿಯ ರಾಜೇಶ್ ಗೌಡ ಯುವ ಎತ್ತು
    – ಶಿರಾದಲ್ಲಿ ಮರಿ ರಾಜಾಹುಲಿ ಪ್ರಚಾರ

    ತುಮಕೂರು: ಶಿರಾದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಟಿ.ಬಿ.ಜಯಚಂದ್ರ ಮುದಿ ಎತ್ತು. ನಮ್ಮ ಅಭ್ಯರ್ಥಿ ರಾಜೇಶ್ ಗೌಡ ಯುವ ಎತ್ತು ಎಂದು ರಾಜ್ಯ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ.

    ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಜೆ.ಪುಟ್ಟಸ್ವಾಮಿ, ಯುವ ಎತ್ತಿಗೆ ಶಿರಾ ಜನತೆ ಮತ ನೀಡಿದ್ರೆ ಪ್ರಯೋಜನೆ. ಏಳು ಬಾರಿ ಗೆದ್ದಿರುವ ಟಿ.ಬಿ.ಜಯಚಂದ್ರ ಮುದಿ ಎತ್ತು. ನಮ್ಮ ಅಭ್ಯರ್ಥಿಯಾಗಿರುವ ರಾಜೇಶ್ ಗೌಡ ಯುವಕರು. ಹಾಗಾಗಿ ಯುವ ಎತ್ತಿಗೆ ಮತ ನೀಡಿದ್ರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರ ವೈಯಕ್ತಿಕ ದ್ವೇಷದಿಂದಾಗಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನವಾಯ್ತು. ಸರ್ಕಾರ ಬಿದ್ದು ಒಂದು ವರ್ಷ ಕಳೆದರೂ ಇಬ್ಬರ ಅಸಮಾಧಾನ ಇನ್ನೂ ಕಡಿಮೆಯಾಗಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಬಳಿ ಅಭಿವೃದ್ಧಿ ಮಂತ್ರ ಇಲ್ಲ. ಎರಡೂ ಪಕ್ಷಗಳು ಅಭ್ಯರ್ಥಿಗಳನ್ನು ನಿಲ್ಲಿಸಿದ್ಯಾಕೆ ಅಂತ ಗೊತ್ತಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.

    ಸಿಎಂ ಯಡಿಯೂರಪ್ಪ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಕೊರೊನಾ ವೇಳೆ ದೇಶಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಯಡಿಯೂರಪ್ಪ ಇರದಿದ್ರೆ ಅಲ್ಲೋಲ ಕಲ್ಲೋಲವಾಗುತ್ತಿತ್ತು. ಸಿಎಂ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯತೆ ಮತ್ತು ಆರ್ಥಿಕ ನೆರವು ನೀಡಿದ್ದಾರೆ. ರಾಜಾಹುಲಿ ಯಡಿಯೂರಪ್ಪನವರ ಪುತ್ರ ಮರಿ ರಾಜಾಹುಲಿ ವಿಜಯೇಂದ್ರ ಶಿರಾದಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ನಮ್ಮ ಅಭ್ಯರ್ಥಿಗೆ ಗೆದ್ದರೆ ಈ ಕ್ಷೇತ್ರ ಅಭಿವೃದ್ಧಿಯಾಗಲಿದ್ದು, ಬಿಜೆಪಿಗೆ ಮತ ನೀಡಿ ಎಂದು ಮತದಾರರ ಬಳಿ ಬಿ.ಜೆ.ಪುಟ್ಟಸ್ವಾಮಿ ಮನವಿ ಮಾಡಿಕೊಂಡರು.

  • ನಾವು ಮುಂದೆ ರಾಜ್ಯಕ್ಕೆ ಅಭಿವೃದ್ದಿ ಸರ್ಕಾರ ಕೊಡುತ್ತೇವೆ: ಡಿಕೆಶಿ

    ನಾವು ಮುಂದೆ ರಾಜ್ಯಕ್ಕೆ ಅಭಿವೃದ್ದಿ ಸರ್ಕಾರ ಕೊಡುತ್ತೇವೆ: ಡಿಕೆಶಿ

    – ರಾಜ್ಯದಲ್ಲಿ ನಿಷ್ಕ್ರೀಯ ಸರ್ಕಾರವಿದೆ ಅಂದ್ರು ಸಿದ್ದು

    ತುಮಕೂರು: ಶಿರಾ ಉಪಚುನಾವಣೆ ಗರಿಗೆದರಿದ್ದು, ಅಭ್ಯರ್ಥಿಗಳ ಪರ ಮುಖಂಡರು ಮತಪ್ರಚಾರಕ್ಕೆ ಇಳಿದಿದ್ದಾರೆ. ಶಿರಾದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ನಾಮಪತ್ರ ಸಲ್ಲಿಸಿದರು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಶಿರಾ ಜನರ ಉತ್ಸಾಹ ಫಲಿತಾಂಶ ಏನಾಗುತ್ತದೆ ಎಂಬುದನ್ನು ತೋರಿಸುತ್ತದೆ. ಅನುಭವಿ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ. ಅವರು ಅಧಿಕಾರದಲ್ಲಿದ್ದಾಗ 2500 ಕೋಟಿ ಅನುದಾನ ತಂದು ಅಭಿವೃದ್ದಿ ಗುಡ್ಡೆಗಳನ್ನೇ ನಿರ್ಮಿಸಿದ್ದಾರೆ ಎಂದರು.

    ಈ ಚುನಾವಣೆಯನ್ನು ನಾವ್ಯಾರು ಬಯಸಿರಲಿಲ್ಲ. ಸತ್ಯನಾರಾಯಣ್ ಅವರ ಕೊನೆ ಚುನಾವಣೆ ಎಂದು ಅವರನ್ನು ಗೆಲ್ಲಿಸಿದ್ರು. ಇಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಸರ್ಕಾರದ ಆಡಳಿತ ಸರಿಯಿಲ್ಲ ಎನ್ನುವ ಸಂದೇಶ ನೀಡಬೇಕು. ನಮ್ಮ ಅಭ್ಯರ್ಥಿ ಟಿ.ಬಿ ಜಯಚಂದ್ರ ವಿದ್ಯಾವಂತ, ಬುದ್ಧಿವಂತರಿದ್ದಾರೆ. ನಾವು ಮುಂದೆ ರಾಜ್ಯಕ್ಕೆ ಅಭಿವೃದ್ದಿ ಸರ್ಕಾರ ಕೊಡುತ್ತೇವೆ. ನುಡಿದಂತೆ ನಡೆದಿದ್ದೇವೆ ಎಂದು ತಿಳಿಸಿದರು.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಶಿರಾ ಉಪಚುನಾವಣೆಯಲ್ಲಿ ಜನರು ಒಳ್ಳೆಯ ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದಲ್ಲಿ ನಿಷ್ಕ್ರೀಯ ಸರ್ಕಾರವಿದೆ. ಈ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಬಾರಿಸಬೇಕಿದೆ. ಬಿಜೆಪಿ ಸರ್ಕಾರ ರಾಜ್ಯವನ್ನು ಆರ್ಥಿಕ ದಿವಾಳಿ ಮಾಡಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಯಚಂದ್ರ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ- ಸಮಿಶ್ರ ಸರ್ಕಾರ- ಬಿಜೆಪಿ ಸರ್ಕಾರವನ್ನು ಹೋಲಿಕೆ ಮಾಡುತ್ತಾರೆ ಎಂದರು.

    ಮತದಾರರು ಬುದ್ಧಿವಂತರಿದ್ದಾರೆ. ಜಯಚಂದ್ರರಿಗೆ ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸವಿದೆ. ಈ ಬಾರಿ ಅವರನ್ನು ಶಿರಾ ಜನ ಕೈ ಹಿಡಿಯುತ್ತಾರೆ. ಜಯಚಂದ್ರ 100ಕ್ಕೆ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ. ಶಿರಾದಲ್ಲಿ ತ್ರಿಕೋನ ಸ್ಪರ್ಥೆಯಿದೆ ಜಯಚಂದ್ರ ಗೆಲ್ಲುತ್ತಾರೆ. ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುವು ಸಾಧಿಸಲಿದೆ. ಎರಡೂ ಉಪಚುನಾವಣೆ ಮುಂದಿನ ಚುನಾವಣೆಯ ದಿಕ್ಸೂಚಿ. ಮುಂದೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.