Tag: ಟಿ 20

  • ಆಫ್ರಿಕಾ ವಿರುದ್ಧ ದಾಖಲೆಯ ಜಯದೊಂದಿಗೆ ಸರಣಿ ಗೆದ್ದ ಟೀಂ ಇಂಡಿಯಾ

    ಆಫ್ರಿಕಾ ವಿರುದ್ಧ ದಾಖಲೆಯ ಜಯದೊಂದಿಗೆ ಸರಣಿ ಗೆದ್ದ ಟೀಂ ಇಂಡಿಯಾ

    ಜೋಹಾನ್ಸ್‌ಬರ್ಗ್‌: ಬ್ಯಾಟಿಂಗ್‌, ಬೌಲಿಂಗ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು (South Africa) ಚೆಂಡಾಡಿದ ಭಾರತ (Team India) ದಾಖಲೆಯ 135 ರನ್‌ಗಳ ಜಯದೊಂದಿಗೆ 4 ಪಂದ್ಯಗಳ ಟಿ 20 (T20) ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ.

    ಗೆಲ್ಲಲು 284 ರನ್‌ಗಳ ಕಠಿಣ ಸವಾಲನ್ನು ಪಡೆದ ದಕ್ಷಿಣ ಆಫ್ರಿಕಾ 18.2 ಓವರ್‌ಗಳಲ್ಲಿ 148 ರನ್‌ಗಳಿಗೆ ಸರ್ವಪತನ ಕಂಡಿತು.

    ಆಫ್ರಿಕಾ ಪರವಾಗಿ ಸ್ಟಬ್ಸ್‌ 43 ರನ್‌ (29 ಎಸೆತ, 3 ಬೌಂಡರಿ, 2 ಸಿಕ್ಸ್‌) ಹೊಡೆದರೆ ಡೇವಿಡ್‌ ಮಿಲ್ಲರ್‌ 36 ರನ್‌(27 ಎಸೆತ, 2 ಬೌಂಡರಿ, 3 ಸಿಕ್ಸ್‌) , ಮಾರ್ಕೊ ಜಾನ್ಸೆನ್ ಔಟಾಗದೇ 29 ರನ್‌(12 ಎಸೆತ, 2 ಬೌಂಡರಿ, 3 ಸಿಕ್ಸ್‌) ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು.

    ಆರ್ಶ್‌ದೀಪ್‌ ಸಿಂಗ್‌ 3 ವಿಕೆಟ್‌ ಕಿತ್ತರೆ ವರುಣ್‌ ಚಕ್ರವರ್ತಿ ಮತ್ತು ಅಕ್ಷರ್‌ ಪಟೇಲ್‌ ತಲಾ ಎರಡು ವಿಕೆಟ್‌, ಹಾರ್ದಿಕ್‌ ಪಾಂಡ್ಯ, ರಮನ್‌ದೀಪ್‌ ಸಿಂಗ್‌, ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್‌ ಪಡೆದರು.

    2023 ರಲ್ಲಿ ಆಫ್ರಿಕಾ ವಿರುದ್ಧ ಭಾರತ ಜೋಹಾನ್ಸ್‌ಬರ್ಗ್‌ನಲ್ಲಿ 106 ರನ್‌ಗಳ ಜಯವನ್ನು ಸಾಧಿಸಿತ್ತು. ಇಲ್ಲಿಯವರೆಗೆ ಇದು ಆಫ್ರಿಕಾ ವಿರುದ್ಧ ದೊಡ್ಡ ಅಂತರದ ಗೆಲುವು ಆಗಿತ್ತು. ಈಗ ಈ ದಾಖಲೆಯನ್ನು ಭಾರತ ಮುರಿದ್ದಿದ್ದು ಮೂರನೇ ದೊಡ್ಡ ಅಂತರದ ಗೆಲುವು ಇದಾಗಿದೆ. ಇದನ್ನೂ ಓದಿ: ರನ್‌ ಹೊಳೆಯಲ್ಲಿ ತೇಲಾಡಿದ ಭಾರತ – ಸಂಜು, ತಿಲಕ್‌ ಶತಕಗಳ ಅಬ್ಬರಕ್ಕೆ ದಾಖಲೆಗಳು ಧೂಳಿಪಟ

    2023ರಲ್ಲಿ ಅಹಮದಾಬಾದ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ  168 ರನ್‌ಗಳ ಗೆಲುವು ಮೊದಲ ಸ್ಥಾನದಲ್ಲಿದ್ದರೆ 2018ರಲ್ಲಿ ಡಬ್ಲಿನ್‌ನಲ್ಲಿ ಐರ್ಲೆಂಡ್‌ ವಿರುದ್ಧ 143 ರನ್‌ಗಳ ಗೆಲುವು ಎರಡನೇ ಸ್ಥಾನದಲ್ಲಿದೆ.

  • T20 World Cup: ರೋಹಿತ್ ಶರ್ಮಾ ನಾಯಕ, ಹಾರ್ದಿಕ್ ಉಪನಾಯಕ: ಜಯ್ ಶಾ

    T20 World Cup: ರೋಹಿತ್ ಶರ್ಮಾ ನಾಯಕ, ಹಾರ್ದಿಕ್ ಉಪನಾಯಕ: ಜಯ್ ಶಾ

    ಮುಂಬರುವ T20 ವಿಶ್ವಕಪ್ 2024 ರಲ್ಲಿ ರೋಹಿತ್ ಶರ್ಮಾ (Rohit Sharma) ಭಾರತವನ್ನು ಮುನ್ನಡೆಸಲಿದ್ದಾರೆ. ಟಿ-20 ವಿಶ್ವಕಪ್‌ನಲ್ಲಿ ರೋಹಿತ್ ನಾಯಕತ್ವದಲ್ಲಿ ಭಾರತ ತಂಡ ಆಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (BCCI secretary Jay Shah) ಬುಧವಾರ ಹೇಳಿದ್ದಾರೆ. ಹಾರ್ದಿಕ್ ಪಾಂಡ್ಯ ಉಪನಾಯಕನಾಗಿದ್ದು, ರಾಹುಲ್ ದ್ರಾವಿಡ್ (Rahul Dravid) ಕೋಚ್ ಆಗಲಿದ್ದಾರೆ.

    ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂಗೆ ಬಿಸಿಸಿಐನ ಮಾಜಿ ಕಾರ್ಯದರ್ಶಿ ನಿರಂಜನ್ ಶಾ (Niranjan Shah) ಅವರ ಹೆಸರಿಡುವ ಕಾರ್ಯಕ್ರಮದ ವೇಳೆ ಜಯ್ ಶಾ ಅವರು, 2023ರಲ್ಲಿ ಅಹಮದಾಬಾದ್‌ನಲ್ಲಿ ಸತತ 10 ಗೆಲುವಿನ ನಂತರ ನಾವು ವಿಶ್ವಕಪ್ ಗೆಲ್ಲಲು ಸಾಧ್ಯವಾಗಲಿಲ್ಲ, ಆದರೆ ನಾವು ಹೃದಯವನ್ನು ಗೆದ್ದಿದ್ದೇವೆ ಎಂದು ಹೇಳಿದರು. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಬಾರ್ಬಡೋಸ್‌ನಲ್ಲಿ ಭಾರತದ ಧ್ವಜವನ್ನು ಹಾರಿಸುವ ಭರವಸೆ ನೀಡುವುದಾಗಿ ತಿಳಿಸಿದರು.

    ಈ ವೇಳೆ ನಿರಂಜನ್ ಶಾ, ಮಾಜಿ ನಾಯಕ ಸುನಿಲ್ ಗವಾಸ್ಕರ್, ಅನಿಲ್ ಕುಂಬ್ಳೆ ಮತ್ತು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಅಕ್ಷರ್ ಪಟೇಲ್ ಉಪಸ್ಥಿತರಿದ್ದರು. ಇದನ್ನೂ ಓದಿ: ಮುಸ್ಲಿಂ ರಾಷ್ಟ್ರದಲ್ಲಿ ಹಿಂದೂ ದೇಗುಲ ಉದ್ಘಾಟಿಸಿದ PM ಮೋದಿ- ಫೋಟೋಗಳಲ್ಲಿ ನೋಡಿ

  • ಜೈಸ್ವಾಲ್‌, ಗಾಯಕ್‌ವಾಡ್‌, ಕಿಶಾನ್‌ ಆಕರ್ಷಕ ಅರ್ಧಶತಕ – ಆಸೀಸ್‌ಗೆ 236 ರನ್‌ ಗುರಿ

    ಜೈಸ್ವಾಲ್‌, ಗಾಯಕ್‌ವಾಡ್‌, ಕಿಶಾನ್‌ ಆಕರ್ಷಕ ಅರ್ಧಶತಕ – ಆಸೀಸ್‌ಗೆ 236 ರನ್‌ ಗುರಿ

    ತಿರುವನಂತಪುರಂ: ಯಶಸ್ವಿ ಜೈಸ್ವಾಲ್‌, ಋತುರಾಜ್‌ ಗಾಯಕ್‌ವಾಡ್‌, ಇಶಾನ್‌ ಕಿಶಾನ್‌ ಆಕರ್ಷಕ ಅರ್ಧಶತಕ ನೆರವಿನಿಂದ ಇಲ್ಲಿ ನಡೆಯುತ್ತಿರುವ 2ನೇ ಟಿ-20 ಪಂದ್ಯದಲ್ಲಿ ಆಸೀಸ್‌ಗೆ ಟೀಂ ಇಂಡಿಯಾ 236 ರನ್‌ಗಳ ಗುರಿ ನೀಡಿದೆ.

    ಟಾಸ್‌ ಗೆದ್ದ ಆಸ್ಟ್ರೇಲಿಯಾ (India vs Australia) ಬೌಲಿಂಗ್‌ ಆಯ್ದುಕೊಂಡಿತು. ಬ್ಯಾಟಿಂಗ್‌ ನಡೆಸಿದ ಭಾರತ ಉತ್ತಮ ಆರಂಭ ನೀಡಿತು. ಭಾರತ ತಂಡದ ಆರಂಭಿಕ ಆಟಗಾರರು ಉತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರಿದರು. ಜೈಸ್ವಾಲ್‌ ಮತ್ತು ಗಾಯಕ್‌ವಾಡ್‌ ಇನ್ನಿಂಗ್ಸ್‌ ಆರಂಭದಲ್ಲೇ 35 ಬಾಲ್‌ಗಳಿಗೆ 77 ರನ್‌ಗಳ ಜೊತೆಯಾಟ ಆಡಿದರು. 25 ಬಾಲ್‌ಗೆ ಅರ್ಧಶತಕ (53 ರನ್‌, 2 ಸಿಕ್ಸ್‌, 9 ಫೋರ್‌) ಗಳಿಸಿ ಮಿಂಚಿದರು. ಈ ಮಧ್ಯೆ ಜಂಪಾಗೆ ಕ್ಯಾಚ್‌ ನೀಡಿ ಜೈಸ್ವಾಲ್‌ ನಿರ್ಗಮಿಸಿದರು. ಇದನ್ನೂ ಓದಿ: ಬಿಸಿಸಿಐ ವಿಜಯ್ ಮರ್ಚಂಟ್ ಟ್ರೋಫಿ ಪಂದ್ಯಾವಳಿಗೆ ರಾಯಚೂರಿನ ಯುವಕ ಉಪನಾಯಕ

    ನಂತರ ಗಾಯಕ್‌ವಾಡ್‌ಗೆ ಇಶಾನ್‌ ಕಿಶಾನ್‌ ಸಾಥ್‌ ನೀಡಿ ತಂಡಕ್ಕೆ ಹೆಚ್ಚಿನ ರನ್‌ ಸೇರ್ಪಡೆಯಾಗಲು ಸಹಕಾರಿಯಾದರು. 58 ಬಾಲ್‌ಗೆ 87 ರನ್‌ ಆಕರ್ಷಕ ಜೊತೆಯಾಟವಾಡಿದರು. ಫೋರ್‌, ಸಿಕ್ಸ್‌ ಸಿಡಿಸಿ ಆಸೀಸ್‌ ಬೌಲರ್‌ಗಳ ಬೆವರಿಳಿಸಿದ ಕಿಶಾನ್‌ 32 ಬಾಲ್‌ಗೆ 52 (4 ಸಿಕ್ಸ್‌, 3 ಫೋರ್‌) ರನ್‌ ಗಳಿಸಿದರು. ಬೌಂಡರಿಗೆ ಬಾಲ್‌ ಅಟ್ಟಲು ಮುಂದಾಗಿ ಇಶಾನ್‌ ಕಿಶಾನ್‌ ಕ್ಯಾಚ್‌ ನೀಡಿ ಪೆವಿಲಿಯನ್‌ ಸೇರಿದರು.

    ಈ ವೇಳೆ ಗಾಯಕ್‌ವಾಡ್‌ಗೆ ಸೂರ್ಯಕುಮಾರ್‌ ಯಾದವ್‌ ಜೊತೆಯಾದರು ಸಹ ಹೆಚ್ಚು ಹೊತ್ತು ನಿಲ್ಲಲಿಲ್ಲ. ಸೂರ್ಯ ಕ್ರೀಸ್‌ಗ ಬಂದಂತೆ ಮೊದಲ ಬಾಲ್‌ನ್ನು ಸಿಕ್ಸ್‌ಗಟ್ಟಿ ಮತ್ತಷ್ಟು ಭರವಸೆ ಮೂಡಿಸಿದರು. ಆದರೆ 10 ಬಾಲ್‌ಗೆ 19 ರನ್‌ ಗಳಿಸಿ (2 ಸಿಕ್ಸ್‌) ಬಹುಬೇಗ ನಿರ್ಗಮಿಸಿದರು. ಇದನ್ನೂ ಓದಿ: IPL 2024 Retention: ರೋಹಿತ್‌ ಕ್ಯಾಪ್ಟನ್‌ – ಮುಂಬೈನಲ್ಲಿ ಯಾರಿಗೆ ಲಕ್‌, ಯಾರಿಗೆ ಕೊಕ್‌?

    ನಿಧಾನಗತಿಯ ಆಟದೊಂದಿಗೆ ಅರ್ಧಶತಕ ಬಾರಿಸಿದ್ದ ಗಾಯಕ್‌ವಾಡ್‌ 43 ಬಾಲ್‌ಗೆ 58 ರನ್‌ಗಳಿಸಿ (2 ಸಿಕ್ಸ್‌, 3 ಫೋರ್‌) ಆಟ ಮುಂದುವರಿಸಿದ್ದರು. ಕ್ರೀಸ್‌ಗೆ ಬಂದಂತೆ ಸಿಕ್ಸ್‌, ಬೌಂಡರಿ ಬಾರಿಸಿ ಘರ್ಜಿಸಿದ ರಿಂಕು ಸಿಂಗ್‌ ಜೊತೆ ಗಾಯಕ್‌ವಾಡ್‌ ಹೆಚ್ಚುಹೊತ್ತು ನಿಲ್ಲಲಿಲ್ಲ. ನಾಥನ್ ಎಲ್ಲಿಸ್ ಬೌಲಿಂಗ್‌ನಲ್ಲಿ ಡೇವಿಡ್‌ಗೆ ಕ್ಯಾಚ್‌ ನೀಡಿ ಹೊರನಡೆದರು. ಬೌಟಾಗದೇ ರಿಂಕು ಸಿಂಗ್‌ ಕೇವಲ 9 ಬಾಲ್‌ಗೆ 31 ರನ್‌ (2 ಸಿಕ್ಸ್‌, 4 ಫೋರ್‌) ಸಿಡಿಸಿದರು. ತಿಲಕ್‌ ವರ್ಮಾ 7 ರನ್‌ಗಳಿಸಿದರು.

    ಈ ಮೂಲಕ ಭಾರತ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 235 ರನ್‌ ಗಳಿಸಿತು. ಆ ಮೂಲಕ ಆಸೀಸ್‌ಗೆ 236 ಬೃಹತ್‌ ಮೊತ್ತದ ಗುರಿ ನೀಡಿದೆ. ಆಸೀಸ್‌ ಪರ ನಾಥನ್ ಎಲ್ಲಿಸ್ 3 ವಿಕೆಟ್‌ ಕಿತ್ತು ಗಮನ ಸೆಳೆದರು. ಮಾರ್ಕಸ್ ಸ್ಟೊಯಿನಿಸ್ 1 ವಿಕೆಟ್‌ ಪಡೆದರು. ಇದನ್ನೂ ಓದಿ: IPL 2024 Retention: ‌ಪಂತ್ ಮತ್ತೆ ಅಖಾಡಕ್ಕೆ – ಕನ್ನಡಿಗನನ್ನು ಕೈಬಿಟ್ಟು ಮಿಚೆಲ್‌ ಮಾರ್ಷ್‌ ಉಳಿಸಿಕೊಂಡ ಕ್ಯಾಪಿಟಲ್ಸ್‌

  • ಸೂರ್ಯ ಬೆಂಕಿ ಆಟ- ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು

    ಸೂರ್ಯ ಬೆಂಕಿ ಆಟ- ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು

    ವಿಶಾಖಪಟ್ಟಣ: ವಿಶ್ವಚಾಂಪಿಯನ್ ಆಸ್ಟ್ರೇಲಿಯಾ (Australia) ವಿರುದ್ಧದ ಮೊದಲ ಟಿ20 (T20) ಪಂದ್ಯದಲ್ಲಿ ಟೀಂ ಇಂಡಿಯಾ (Team India) 2 ವಿಕೆಟ್ ಗಳ ಜಯ ಗಳಿಸಿದೆ.

    ಇಲ್ಲಿನ ವೈ.ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ 209ರನ್ ಗಳ ಬೃಹತ್ ಗುರಿಯನ್ನು ಭಾರತ ತಂಡ ನಿಗಧಿತ ಓವರ್‌ಗಳಲ್ಲಿ 2 ವಿಕೆಟ್ ಗಳ ಅಂತರದ ರೋಚಕ ಜಯ ದಾಖಲಿಸಿದೆ. ಇದನ್ನೂ ಓದಿ: ಟೀಂ ಇಂಡಿಯಾ ಕೋಚ್ ಆಗ್ತಾರಾ ವಿವಿಎಸ್ ಲಕ್ಷ್ಮಣ್?

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಜೋಶ್ ಇಂಗ್ಲಿಸ್ (110 ರನ್, 50 ಎಸೆತ, 11 ಬೌಂಡರಿ, 8 ಸಿಕ್ಸರ್), ಸ್ಟೀವನ್ ಸ್ಮಿತ್ (52 ರನ್, 41 ಎಸೆತ, 8 ಬೌಂಡರಿ) ಬಿರುಸಿನ ಬ್ಯಾಟಿಂಗ್‍ನಿಂದ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 208ರನ್ ಗಳಿಸಿತ್ತು.

    ಟೀಂ ಇಂಡಿಯಾ ಪರ ಅರ್ಷ್‍ದೀಪ್ ಸಿಂಗ್ (4-0-41-0), ಪ್ರಸಿದ್ದ ಕೃಷ್ಣ (4-0-50-1), ರವಿ ಬಿಷ್ಣೋಯಿ (4-0-54-1), ಅಕ್ಷರ್ ಪಟೇಲ್ (4-0-32-0), ಮುಕೇಶ್ ಕುಮಾರ್ (4-0-29-0) ರನ್ ನೀಡಿ ವಿಕೆಟ್ ಪಡೆದಿದ್ದಾರೆ.

    209 ರನ್‍ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ, ನಾಯಕ ಸೂರ್ಯ ಕುಮಾರ್ ಯಾದವ್ (80 ರನ್, 42 ಎಸೆತ, 9 ಬೌಂಡರಿ, 4 ಸಿಕ್ಸರ್), ಇಶಾನ್ ಕಿಶನ್ (58 ರನ್, 39 ಎಸೆತ, 2 ಬೌಂಡರಿ, 5 ಸಿಕ್ಸರ್) ಸ್ಪೋಟಕ ಬ್ಯಾಟಿಂಗ್‍ನಿಂದ ಗೆಲುವನ್ನು ಮುಡಿಗೇರಿಸಿಕೊಂಡಿತು. ಇದನ್ನೂ ಓದಿ: ಮೊದಲ ಟಿ20 ಪಂದ್ಯದಲ್ಲೇ ಭಾರತಕ್ಕೆ ಬೃಹತ್ ಗುರಿ ನೀಡಿದ ಆಸೀಸ್

  • ಭಾರತ, ದಕ್ಷಿಣ ಆಫ್ರಿಕಾ T20 ಪಂದ್ಯ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

    ಭಾರತ, ದಕ್ಷಿಣ ಆಫ್ರಿಕಾ T20 ಪಂದ್ಯ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

    ಭುವನೇಶ್ವರ: ಭಾರತ ಮತ್ತು ದಕ್ಷಿಣ ಆಫ್ರಿಕಾದ ನಡುವಿನ ಟಿ20 ಸರಣಿ ಇದೇ ಜೂನ್ 9 ರಿಂದ ಆರಂಭವಾಗುತ್ತಿದೆ. ಆದರೆ ಜೂನ್ 12ರಂದು ಕಟಕ್‌ನ ಬಾರಮತಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯಗಳನ್ನು ರದ್ದುಗೊಳಿಸುವಂತೆ ಒಡಿಶಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಸಲಾಗಿದ್ದು, ತುರ್ತು ವಿಚಾರಣೆಗೆ ಕೋರಲಾಗಿದೆ.

    ಮಾನವ ಹಕ್ಕುಗಳ ಹೋರಾಟಗಾರ ಸಂಜಯ್ ಕುಮಾರ್ ನಾಯಕ್ ಈ ಅರ್ಜಿ ಸಲ್ಲಿಸಿದ್ದು, ಒಡಿಶಾ ಕ್ರಿಕೆಟ್ ಅಸೋಸಿಯೇಷನ್, ಬಿಸಿಸಿಐ ಸೇರಿದಂತೆ 15 ಪಕ್ಷಗಳನ್ನು ಪ್ರತಿವಾದಿಗಳಾಗಿದ್ದಾರೆ. ಇದನ್ನೂ ಓದಿ: ಎಂ.ಎಸ್ ಧೋನಿ ಸೇರಿ 8 ಮಂದಿ ವಿರುದ್ಧ FIR

    ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಸಂಬಂಧಿಸಿದ ಪ್ರಾಧಿಕಾರಕ್ಕೆ ರಚನಾತ್ಮಕ ಸುರಕ್ಷತಾ ಪ್ರಮಾಣಪತ್ರವನ್ನು ನೀಡಿಲ್ಲ, ಅಗ್ನಿ ಸುರಕ್ಷತಾ ಅಳತೆ ಪ್ರಮಾಣ ಪತ್ರವನ್ನೂ ನೀಡಿಲ್ಲ, 45,000 ಪ್ರೇಕ್ಷಕರು ಸೇರುವ ಪ್ರದೇಶದಲ್ಲಿ ನಿಯಮಗಳ ಉಲ್ಲಂಘನೆ ದೊಡ್ಡ ವಿಷಯವಾಗಿದೆ ಎಂದು ಅವರು ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

    ಕಾನೂನಿನ ಕಡ್ಡಾಯ ಅವಶ್ಯಕತೆಗಳನ್ನು ಅನುಸರಿಸದ ಸಂಸ್ಥೆಯು ಸರ್ಕಾರಿ ಪದಾಧಿಕಾರಿಗಳ ನೆರವಿನೊಂದಿಗೆ ಯಾವುದೇ ಕಾರ್ಯವನ್ನು ಮಾಡಲು ಅನುಮತಿಸಬಾರದು ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಕಾನೂನಿನ ಕಡ್ಡಾಯ ಪಾಲನೆ ಬಗ್ಗೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ವಿಶೇಷವಾಗಿ ಒಡಿಶಾ ಅಗ್ನಿಶಾಮಕ ತಡೆಗಟ್ಟುವಿಕೆ ಮತ್ತು ಅಗ್ನಿ ಸುರಕ್ಷತಾ ನಿಯಮಗಳು 2017ರ ಅಡಿಯಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.  ಇದನ್ನೂ ಓದಿ: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ ನೀಡಿಲ್ಲ: ಜಯ್ ಶಾ ಸ್ಪಷ್ಟನೆ

    ಪಂದ್ಯಗಳನ್ನು ನಡೆಸಲು ಯಾವುದೇ ವಿರೋಧವಿಲ್ಲ, ಆದರೆ 70 ವರ್ಷಗಳ ಹಳೆಯ ಕ್ರೀಡಾಂಗಣದಲ್ಲಿ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿ ಪಂದ್ಯಗಳನ್ನು ಏರ್ಪಡಿಸುವುದು ಅಪಾಯಕಾರಿ. ಹಾಗಾಗಿ ಅಗತ್ಯ ಕ್ರಮ ತೆಗೆದುಕೊಳ್ಳುವರೆಗೂ ಪಂದ್ಯಗಳನ್ನು ರದ್ದು ಮಾಡಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹಾಕಿ ಏಷ್ಯಾ ಕಪ್ 2022: ಭಾರತಕ್ಕೆ ಕಂಚಿನ ಪದಕ

    ಯಾವ ದಿನ – ಎಲ್ಲಿ ಪಂದ್ಯ?

    • ಮೊದಲ ಪಂದ್ಯ ಜೂನ್ 09 – ದೆಹಲಿ
    • 2ನೇ ಪಂದ್ಯ ಜೂನ್ 12 – ಕಟಕ್
    • 3ನೇ ಪಂದ್ಯ ಜೂನ್ 14 – ವಿಶಾಖಪಟ್ಟಣ
    • 4ನೇ ಪಂದ್ಯ ಜೂನ್ 17 – ರಾಜ್‌ಕೋಟ್
    • 5ನೇ ಪಂದ್ಯ ಜೂನ್ 19 – ಬೆಂಗಳೂರು 

  • ಟೀಕೆಗಳ ನಡುವೆಯೂ ಮೈಲಿಗಲ್ಲು ಸಾಧಿಸಿದ ಕಿಂಗ್ ಕೊಹ್ಲಿ

    ಟೀಕೆಗಳ ನಡುವೆಯೂ ಮೈಲಿಗಲ್ಲು ಸಾಧಿಸಿದ ಕಿಂಗ್ ಕೊಹ್ಲಿ

    ಮುಂಬೈ: 2022ರ 15ನೇ ಆವೃತ್ತಿ ಐಪಿಎಲ್‌ನಲ್ಲಿ ಸಂಪೂರ್ಣ ಫಾರ್ಮ್ ಕಳೆದುಕೊಂಡಿರುವ ಆರ್‌ಸಿಬಿ ತಂಡದ ಮಾಜಿ ನಾಯಕ ವಿರಾಟ್‌ಕೊಹ್ಲಿ ಭಾರೀ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಪ್ರತಿ ಐಪಿಎಲ್‌ನಲ್ಲೂ ತಮ್ಮದೇ ಸಾಧನೆ ಮಾಡುತ್ತಿದ್ದ ಕೊಹ್ಲಿ, ಈ ಬಾರಿ ಸಾಕಷ್ಟು ಟ್ರೋಲ್‌ಗೆ ಗುರಿಯಾಗಿದ್ದಾರೆ. ಈ ಟೀಕೆಗಳ ನಡುವೆಯೂ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದಾರೆ.

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮಗದೊಂದು ಮೈಲಿಗಲ್ಲು ಸ್ಥಾಪಿಸಿದ್ದು, 6,500 ರನ್‌ಗಳನ್ನು ಗಳಿಸಿದ ಏಕೈಕ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಇದನ್ನೂ ಓದಿ: RCB ಫ್ಯಾನ್ಸ್‌ಗಳಿಗೆ ಭರ್ಜರಿ ಗುಡ್‌ನ್ಯೂಸ್ – ಎಬಿಡಿ ಮತ್ತೆ ಎಂಟ್ರಿ

    ಐಪಿಎಲ್ 2022 ಟೂರ್ನಿಯಲ್ಲಿ ನಿನ್ನೆ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪದ್ಯದಲ್ಲಿ 14 ಎಸೆತಗಳನ್ನು ಕೊಹ್ಲಿ ಗಳಿಸಿದ್ದು, 20 ರನ್‌ಗಳೇ ಆದರೂ ಐಪಿಎಲ್ ಇತಿಹಾಸದಲ್ಲೇ 6,500 ರನ್ ಗಳಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

    ಐಪಿಎಲ್‌ನ ತಮ್ಮ 220ನೇ ಪಂದ್ಯದ 212ನೇ ಇನ್ನಿಂಗ್ಸ್ನಲ್ಲಿ ಕೊಹ್ಲಿ 36.21ರ ಸರಾಸರಿಯಲ್ಲಿ ಒಟ್ಟು 6,519 ರನ್ ಗಳಿಸಿದ್ದಾರೆ. ಇದರಲ್ಲಿ 5 ಶತಕ ಹಾಗೂ 43 ಅರ್ಧಶತಕಗಳು ಸೇರಿವೆ. 215 ಸಿಕ್ಸರ್ ಹಾಗೂ 568 ಬೌಂಡರಿಗಳನ್ನು ಸಿಡಿಸಿರುವ ಕೊಹ್ಲಿ, 129.26ರ ಸ್ಟ್ರೈಕ್‌ರೇಟ್‌ ಕಾಯ್ದುಕೊಂಡಿದ್ದು, ಇನ್ನಿಂಗ್ಸ್‌ಒಂದರಲ್ಲಿ ಗರಿಷ್ಠ ಸ್ಕೋರ್ 113 ಆಗಿದೆ. ಇದನ್ನೂ ಓದಿ: ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಂಗೊಳಿಸಲಿದೆ ಆರ್‌ಸಿಬಿ

    ಟಿ20 ಯಲ್ಲೂ 10,500 ರನ್ ಸಾಧನೆ: ಈ ನಡುವೆ ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ವಿರಾಟ್ ಕೊಹ್ಲಿ 10,500 ರನ್‌ಗಳ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಮುನ್ನಡೆಯಲ್ಲಿರುವ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಒಟ್ಟು 14,562 ರನ್ ಗಳಿಸಿದ್ದಾರೆ.

    virat kohli

    ಮತ್ತೆ ಬ್ಯಾಟಿಂಗ್ ವಿಫಲ: ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ವಿರಾಟ್ ಬ್ಯಾಟಿಂಗ್ ವೈಫಲ್ಯ ಮುಂದುವರಿಯಿತು. ಉತ್ತಮ ಆರಂಭ ಪಡೆದರೂ ಅದನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸಲು ಕೊಹ್ಲಿಗೆ ಸಾಧ್ಯವಾಗಲಿಲ್ಲ. 14 ಎಸೆತಗಳನ್ನು ಎದುರಿಸಿದ ವಿರಾಟ್ 1 ಸಿಕ್ಸರ್ ಹಾಗೂ 2 ಬೌಂಡರಿ ನೆರವಿನಿಂದ 20 ರನ್ ಗಳಿಸಿ ಔಟ್ ಆದರು.

  • 6 ಸಾವಿರ ರನ್‌ಗಳ ಗಡಿ ದಾಟಿ ಐಪಿಎಲ್ `ಶಿಖರ’ವೇರಿದ ಧವನ್

    6 ಸಾವಿರ ರನ್‌ಗಳ ಗಡಿ ದಾಟಿ ಐಪಿಎಲ್ `ಶಿಖರ’ವೇರಿದ ಧವನ್

    ಮುಂಬೈ: ಚೆನ್ನೈ ಸೂಪರ್‌ಕಿಂಗ್ಸ್ (CSK) ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ಅಧಿಕ ರನ್‌ಗಳಿಸಿ ಮ್ಯಾನ್ ಆಫ್ ದಿ ಮ್ಯಾಚ್ (ಪಂದ್ಯಶ್ರೇಷ್ಠ) ಪ್ರಶಸ್ತಿ ಗಳಿಸಿದ ಶಿಖರ್ ಧವನ್ ಐಪಿಎಲ್‌ನಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ್ದಾರೆ. ಐಪಿಎಲ್‌ನಲ್ಲಿ ಹೆಚ್ಚು ರನ್‌ಗಳಿಸಿರುವ ಬ್ಯಾಟ್ಸ್‌ಮನ್‌ ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ.

    CRICKET-IND-T20-IPL-DELHI-PUNJAB

    ಐಪಿಎಲ್‌ನಲ್ಲಿ ತಮ್ಮದೇ ಪ್ರಾಬಲ್ಯ ಹೊಂದಿರುವ ಶಿಖರ್ ಧವನ್, ತಮ್ಮ ಅದ್ಭುತ ಬ್ಯಾಟಿಂಗ್ ವೈಖರಿಯಿಂದ ಅಬ್ಬರಿಸಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತಮ್ಮ 200ನೇ ಪಂದ್ಯವಾಡಿದ ಅವರು, 6 ಸಾವಿರ ರನ್‌ಗಳ ಗಡಿ ದಾಟಿದ್ದಾರೆ. ಪೂರೈಸುವ ಮೂಲಕ ಐಪಿಎಲ್‌ನಲ್ಲಿ ಹೆಚ್ಚು ರನ್‌ಗಳಿಸಿದ 2ನೇ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಮೊದಲ ಪತ್ನಿಯಿಂದ ಒಪ್ಪಿಗೆ ಪಡೆದು 38 ವರ್ಷದ ಟೀಚರ್ ಜೊತೆ 66ರ ಅರುಣ್ ಲಾಲ್ ಮದುವೆ

    DHAVAN

    ಶಿಖರ್ ಧವನ್ ಅವರಿಗಿಂತ ಮೊದಲು ಈ ಸಾಧನೆ ಮಾಡಿರುವ ಆರ್‌ಸಿಬಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ 3ನೇ ಸ್ಥಾನ, ಡೇವಿಡ್ ವಾರ್ನರ್ ನಾಲ್ಕನೇ ಸ್ಥಾನ ಹಾಗೂ ಸುರೇಶ್ ರೈನಾ 5ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: 4 ವರ್ಷಗಳ ನಂತರ ನನಗೆ ಐಪಿಎಲ್‍ನಲ್ಲಿ ಅವಕಾಶ ಸಿಕ್ಕಿದೆ: ರಿಷಿ ಧವನ್

    2022ರಲ್ಲಿ ನಡೆಯುತ್ತಿರುವ 15ನೇ ಆವೃತ್ತಿಯ ಐಪಿಎಲ್‌ನಲ್ಲಿ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ಬ್ಯಾಟ್ಸ್‌ಮನ್‌ ಆಗಿರುವ ಶಿಖರ್ ಧವನ್, ಈ ಹಿಂದೆ ಡೆಕ್ಕನ್ ಚಾರ್ಜರ್ಸ್, ಸನ್‌ರೈಸರ್ಸ್ ಹೈದ್ರಾಬಾದ್, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಲ್ಲಿ ಆಡಿರುವ ಅನುಭವ ಹೊಂದಿದ್ದಾರೆ.

    ಅಲ್ಲದೆ, ತಮ್ಮ ಟಿ20 ಕ್ರಿಕೆಟ್‌ನಲ್ಲಿ 9 ಸಾವಿರ ರನ್‌ಗಳ ಗಡಿ ದಾಟಿದ್ದು, ಇದೀಗ ಅತಿಹೆಚ್ಚು ರನ್‌ಗಳಿಸಿದ ಭಾರತದ 3ನೇ ಆಟಗಾರ ಎಂಬ ಖ್ಯಾತಿಯನ್ನೂ ಗಳಿಸಿದ್ದಾರೆ.

    ಐಪಿಎಲ್‌ನಲ್ಲಿ ಅತ್ಯಧಿಕ ರನ್‌ಗಳಿಸಿದವರು
    ವಿರಾಟ್ ಕೊಹ್ಲಿ – 215 ಪಂದ್ಯಗಳು- 6402 ರನ್
    ಶಿಖರ್ ಧವನ್ – 200 ಪಂದ್ಯಗಳು- 6086 ರನ್
    ರೋಹಿತ್ ಶರ್ಮಾ 221 ಪದ್ಯಗಳು- 5764
    ಡೇವಿಡ್ ವಾರ್ನರ್ 155 ಪಂದ್ಯಗಳು – 5668
    ಸುರೇಶ್ ರೈನಾ- 205 ಪಂದ್ಯಗಳು- 5528

  • ಪೋಲಾರ್ಡ್ ವಿದಾಯ ಹೇಳಿದ್ದು ನನ್ನಿಂದ ನಂಬಲು ಸಾಧ್ಯವಾಗುತ್ತಿಲ್ಲ: ಕ್ರಿಸ್‌ಗೇಲ್

    ಪೋಲಾರ್ಡ್ ವಿದಾಯ ಹೇಳಿದ್ದು ನನ್ನಿಂದ ನಂಬಲು ಸಾಧ್ಯವಾಗುತ್ತಿಲ್ಲ: ಕ್ರಿಸ್‌ಗೇಲ್

    ಮುಂಬೈ: 15 ವರ್ಷಗಳ ಕಾಲ ವೆಸ್ಟ್ಇಂಡೀಸ್ ತಂಡದಲ್ಲಿ ಕ್ರಿಕೆಟ್ ಆಡಿದ 34 ವರ್ಷದ ಕೀರನ್ ಪೊಲಾರ್ಡ್ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಅಭಿಮಾನಿಗಳು ಮಾತ್ರವಲ್ಲದೇ ಸ್ಟಾರ್ ಕ್ರಿಕೆಟರ್‌ಗಳು ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಜಾಲತಾಣಗಳಲ್ಲಿ ಪೊಲಾರ್ಡ್ ಅವರ ಫೋಟೋ ಹಂಚಿಕೊಳ್ಳುವ ಮೂಲಕ ವಿದಾಯದ ಶುಭಾಶಯ ಕೋರಿದ್ದಾರೆ.

    IPL 2022 MI (1)

    ಮಾಸ್ಟರ್ ಬ್ಲಾಸ್ಟರ್ ಖ್ಯಾತಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸಹ ತಮ್ಮ ಟ್ವೀಟ್‌ನಲ್ಲಿ ಪೋಲಾರ್ಡ್ ಅವರ ಫೋಟೋ ಹಂಚಿಕೊಂಡಿದ್ದು, ಅವರನ್ನು `ಆಲ್‌ರೌಂಡರ್, ಚಾಲೆಂಜರ್, ಫೈಟರ್’ ಎಂದು ಕರೆದಿದ್ದಾರೆ. ಇದನ್ನೂ ಓದಿ: ಡೆಲ್ಲಿ ದರ್ಬಾರ್‌ಗೆ ಪಂಜಾಬ್ ಪಂಚರ್ – 10 ಓವರ್‌ಗಳಲ್ಲಿ ಟಾರ್ಗೆಟ್ ಉಡೀಸ್

    ವೆಸ್ಟ್ಇಂಡೀಸ್ ತಂಡದ ಕ್ರಿಕೆಟಿಗ ಕ್ರಿಸ್‌ಗೇಲ್, ನನಗಿಂತಲೂ ಮುಂಚಿತವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವುದು ನನಗೆ ನಂಬಲಾಗುತ್ತಿಲ್ಲ. ನಿಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಅಭಿನಂದನೆಗಳು. ನಿಮ್ಮ ಜೊತೆಯಲ್ಲಿ ಆಡಿದ ಆಟಗಳು ತುಂಬಾ ಚೆನ್ನಾಗಿವೆ ಎಂದು ನೆನಪಿಸಿಕೊಂಡಿದ್ದಾರೆ.

    ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಪೊಲಾರ್ಡ್ ಅವರು ಆಡುತ್ತಿದ್ದಾರೆ. T20 ಫ್ರಾಂಚೈಸಿ ಹಾಗೂ T-10 ಲೀಗ್ ಟೂರ್ನಿಗಳಲ್ಲೂ ತಮ್ಮ ಆಟ ಮುಂದುವರಿಸಲಿದ್ದಾರೆ. ಬಹಳಷ್ಟು ಯೋಚಿಸಿದ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಕೆಜಿಎಫ್ ಚಾಪ್ಟರ್-2 ಡೈಲಾಗ್ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ವ್ಯಂಗ್ಯ

    Kieron Pollard a

    34 ವರ್ಷ ವಯಸ್ಸಿನ ಪೊಲಾರ್ಡ್ 2007ರಲ್ಲಿ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಕೊನೆಯ ಸರಣಿಯನ್ನು ಭಾರತ ತಂಡದ ವಿರುದ್ಧ ಆಡಿದರು. ಈವರೆಗೆ 123 ಏಕದಿನ ಪಂದ್ಯಗಳು ಹಾಗೂ ಹಾಗೂ 101 ಟಿ20 ಪಂದ್ಯಗಳಲ್ಲಿ ಮಿಂಚಿರುವ ಪೊಲಾರ್ಡ್ ಏಕದಿನ ಪಂದ್ಯಗಳಲ್ಲಿ 2706 (13 ಅರ್ಧ ಶತಕ, 3 ಶತಕ) ಹಾಗೂ T20 ಪಂದ್ಯಗಳಲ್ಲಿ 1569 ರನ್ (6 ಅರ್ಧಶತಕ) ಗಳನ್ನು ಗಳಿಸಿದ್ದಾರೆ. ಏಕದಿನ ಪಂದ್ಯದಲ್ಲಿ 119 ಗರಿಷ್ಠ ರನ್ ಗಳಿಸಿರುವ ಅವರು T20 ನಲ್ಲಿ 75 ಗರಿಷ್ಠ ರನ್‌ಗಳನ್ನು ಪೇರಿಸಿದ್ದಾರೆ.

    ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿರುವ ಅವರು, ಅನೇಕ ಪಂದ್ಯಗಳಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಗೆಲುವಿನ ದಡ ಸೇರಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟಿಗರ ಸ್ಪೋಟಕ ಆಟಗಾರರ ಪಟ್ಟಿಯಲ್ಲೂ ಸ್ಥಾನ ಗಳಿಸಿದ್ದಾರೆ.

  • ಇಂದಿನ ಟಿ20 ಪಂದ್ಯಕ್ಕೆ ಮಳೆಯಾಗಲ್ಲ –  ಸತತ 11 ಪಂದ್ಯ ಗೆದ್ದು ಬೀಗಿದ ಭಾರತ

    ಇಂದಿನ ಟಿ20 ಪಂದ್ಯಕ್ಕೆ ಮಳೆಯಾಗಲ್ಲ – ಸತತ 11 ಪಂದ್ಯ ಗೆದ್ದು ಬೀಗಿದ ಭಾರತ

    ಚಂಡೀಗಢ: ಧರ್ಮಶಾಲಾದಲ್ಲಿ ನಡೆಯಲಿರುವ ಭಾರತ ಮತ್ತು ಶ್ರೀಲಂಕಾ ತಂಡದ ನಡುವಿನ 3ನೇ ಟಿ-20 ಸರಣಿಯ ಅಂತಿಮ ಪಂದ್ಯಕ್ಕೆ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಈಗಾಗಲೇ ಧರ್ಮಶಾಲಾದಲ್ಲಿ ಮೋಡ ಕವಿದ ವಾತಾವರಣವಿದೆ. ಹೀಗಿದ್ದರೂ ಹವಾಮಾನ ವರದಿ ಪ್ರಕಾರ ಮಳೆಯಾಗುವುದಿಲ್ಲ ಎಂದು ಹೇಳಿದೆ.

    ದಿನದ ಗರಿಷ್ಠ ತಾಪಮಾನವು 12 ಡಿಗ್ರಿ ಸೆಲ್ಸಿಯಸ್ ಇದ್ದು, ಇದು ರಾತ್ರಿಯಲ್ಲಿ 4 ಡಿಗ್ರಿಗಳಿಗೆ ಇಳಿಯಬಹುದು. ಗಾಳಿಯ ವೇಗ ಗಂಟೆಗೆ 8 ಕಿಲೋಮೀಟರ್ ವರೆಗೆ ಇರುತ್ತದೆ. ಹಗಲಿನಲ್ಲಿ ತೇವಾಂಶವು 69 ಪ್ರತಿಶತದಷ್ಟು ಇರುತ್ತದೆ. ಇದು ರಾತ್ರಿಯಲ್ಲಿ 53 ಪ್ರತಿಶತಕ್ಕೆ ಇಳಿಯುತ್ತದೆ ಎಂಬ ಮಾಹಿತಿ ಸಿಕ್ಕಿದೆ. ಆದ್ದರಿಂದ, ಯಾವುದೇ ಅಡೆತಡೆಗಳಿಲ್ಲದೆ ಭಾರತ ಮತ್ತು ಶ್ರೀಲಂಕಾ ನಡುವಿನ ಅಂತಿಮ ಪಂದ್ಯ ನಡೆಯಲಿದೆ.

    ಭಾನುವಾರ (ಫೆಬ್ರವರಿ 27) ಹಿಮಾಚಲ ಪ್ರದೇಶದ ಸುಂದರವಾದ ಧರ್ಮಶಾಲಾ ಕ್ರೀಡಾಂಗಣದಲ್ಲಿ ಸರಣಿಯನ್ನು ವೈಟ್‍ವಾಶ್ ಮಾಡಲು ನೋಡುತ್ತಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಈಗಾಗಲೇ ಇದೇ ಸ್ಥಳದಲ್ಲಿ ಶನಿವಾರ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಏಳು ವಿಕೆಟ್‍ಗಳಿಂದ ಲಂಕಾ ತಂಡವನ್ನು ಸೋಲಿಸುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

    ಗೆಲ್ಲಲು 184 ರನ್‍ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 17.1 ಓವರ್‍ಗಳಲ್ಲಿ ಇನ್ನೂ 17 ಎಸೆತ ಬಾಕಿ ಇರುವಂತೆ 186 ರನ್ ಸಿಡಿಸಿ 7 ವಿಕೆಟ್‍ಗಳ ಭರ್ಜರಿ ಗೆಲುವಿನ ನಗೆ ಬೀರಿತು. ಈ ಮೊದಲು ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಟಿ-20 ಸರಣಿ ಗೆದ್ದಿತ್ತು. ಇದೀಗ ಶ್ರೀಲಂಕಾ ವಿರುದ್ಧ ಸರಣಿ ಜಯದೊಂದಿಗೆ ಹ್ಯಾಟ್ರಿಕ್ ಸರಣಿ ಗೆದ್ದಂತಾಗಿದೆ.

    ಭಾರತದ ಪರ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 1 ರನ್ ಮತ್ತು ಇಶನ್ ಕಿಶನ್ 16 ರನ್ (15 ಎಸೆತ, 2 ಬೌಂಡರಿ) ಸಿಡಿಸಿ ಔಟ್ ಆಗುವ ಮೂಲಕ ನಿರಾಸೆ ಅನುಭವಿಸಿದರು. ನಂತರ ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾಗೆ ಆಸರೆಯಾದ ಸಂಜು ಸ್ಯಾಮ್ಸನ್ 39 ರನ್ (25 ಎಸೆತ, 2 ಬೌಂಡರಿ, 3 ಸಿಕ್ಸ್) ಸಿಡಿಸಿ ನೆರವಾದರು. ಇನ್ನೊಂದೆಡೆ ಶ್ರೇಯಸ್ ಅಯ್ಯರ್ ಆರ್ಭಟಿಸಿದರು. ಲಂಕಾ ಬೌಲರ್‍ಗಳನ್ನು ಮನಬಂದಂತೆ ದಂಡಿಸಿದ ಅಯ್ಯರ್ ಅಜೇಯ 74 ರನ್ (44 ಎಸೆತ, 6 ಬೌಂಡರಿ, 4 ಸಿಕ್ಸ್) ಬಾರಿಸಿ ಮಿಂಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ರವೀಂದ್ರ ಜಡೇಜಾ ಬಿರುಸಿನ ಬ್ಯಾಟಿಂಗ್ ನಡೆಸಿ 45 ರನ್ (18 ಎಸೆತ, 7 ಬೌಂಡರಿ, 1 ಸಿಕ್ಸ್) ಸಿಡಿಸಿ ಇನ್ನೂ 17 ಎಸೆತ ಬಾಕಿ ಇರುವಂತೆ ತಂಡವನ್ನು ಗೆಲುವಿನ ದಡ ಸೇರಿಸಿದರು.

    ಈ ಪಂದ್ಯದ ಗೆಲುವಿನ ಮೂಲಕ ಟೀಂ ಇಂಡಿಯಾವು ತನ್ನ ಗೆಲುವಿನ ಓಟವನ್ನು 11 ಪಂದ್ಯಗಳಿಗೆ ವಿಸ್ತರಿಸಿದೆ. ಟೀಂ ಇಂಡಿಯಾ ಕಳೆದ ವರ್ಷದ ವಿಶ್ವಕಪ್‍ನಲ್ಲಿ ಲೀಗ್ ಹಂತದಲ್ಲೇ ಹೊರ ಬಿದ್ದರೂ ಕೊನೆಯಲ್ಲಿ ನಡೆದ ಅಫ್ಘಾನಿಸ್ತಾನ, ಸ್ಕಾಟ್ಲೆಂಡ್, ನಮೀಬಿಯಾ ವಿರುದ್ದ ಜಯಗಳಿಸಿತ್ತು. ಅಲ್ಲಿಂದ ಆರಂಭವಾಗಿ ಎಲ್ಲ ಪಂದ್ಯಗಳನ್ನು ಭಾರತ ಜಯಗಳಿಸಿದೆ.

    ಯಾವ ತಂಡದ ವಿರುದ್ಧ ಜಯ?
    * ಅಫ್ಘಾನಿಸ್ತಾನ ವಿರುದ್ಧ 66 ರನ್
    * ಸ್ಕಾಟ್ಲೆಂಡ್ ವಿರುದ್ಧ 8 ವಿಕೆಟ್
    * ನಮೀಬಿಯಾ ವಿರುದ್ಧ 9 ವಿಕೆಟ್‍ಗಳು
    * ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್
    * ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್
    * ನ್ಯೂಜಿಲೆಂಡ್ ವಿರುದ್ಧ 73 ರನ್
    * ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್
    * ವೆಸ್ಟ್ ಇಂಡೀಸ್ ವಿರುದ್ಧ 8 ರನ್
    * ವೆಸ್ಟ್ ಇಂಡೀಸ್ ವಿರುದ್ಧ 17 ರನ್
    * ಶ್ರೀಲಂಕಾ ವಿರುದ್ಧ 62 ರನ್
    * ಶ್ರೀಲಂಕಾ ವಿರುದ್ಧ 7 ವಿಕೆಟ್

  • ಹಿಟ್ ಮ್ಯಾನ್, ಕೊಹ್ಲಿ ಅಬ್ಬರ- ಸರಣಿ ಗೆದ್ದ ಭಾರತ

    ಹಿಟ್ ಮ್ಯಾನ್, ಕೊಹ್ಲಿ ಅಬ್ಬರ- ಸರಣಿ ಗೆದ್ದ ಭಾರತ

    ಅಹಮದಾಬಾದ್: ಒಟ್ಟು 5 ಪಂದ್ಯಗಳ ಪೈಕಿ ತಲಾ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಹಾಗೂ ಇಂಗ್ಲೆಂಡ್ ಇಂದು ನಿರ್ಣಾಯಕ ಪಂದ್ಯವನ್ನಾಡಿದ್ದು, ಹಿಟ್ ಮ್ಯಾನ್ ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ಅವರ ಅಬ್ಬರದ ಆಟದಿಂದಾಗಿ ಭಾರತ ಸರಣಿಯನ್ನು ತನ್ನದಾಗಿಸಿಕೊಂಡಿದೆ.

    ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ-20 ಸರಣಿಯ ಕೊನೇಯ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯನ್ನು ತನ್ನದಾಗಿಸಿಕೊಂಡಿದೆ. 36 ರನ್‍ಗಳಿಂದ ಭಾರತ ವಿಜಯಿಯಾಗಿದ್ದು, 3-2 ಅಂತರದಲ್ಲಿ ಸರಣಿಯನ್ನು ತನ್ನದಾಗಹಿಸಿಕೊಂಡಿದೆ.

    ಟಾಸ್ಕ್ ಗೆದ್ದ ಇಂಗ್ಲೆಂಡ್ ನಾಯಕ ಇಯಾನ್ ಮೊರ್ಗನ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಭಾರತದ ಆರಂಭಿಕ ಆಟಗಾರಾಗಿ ರೋಹಿತ್ ಶರ್ಮಾ ಹಾಗೂ ತಂಡದ ನಾಯಕ ವಿರಾಟ್ ಕೊಹ್ಲಿ ಕಣಕ್ಕಿಳಿದರು. ಇಬ್ಬರೂ ಉತ್ತಮ ಜೊತೆಯಾಟವಾಡುವ ಮೂಲಕ ಇಂಗ್ಲೆಂಡ್ ಬೌಲರ್‍ಗಳ ಬೆವರಿಳಿಸಿದರು. ಜೊತಯಾಟದಲ್ಲಿ ಬರೋಬ್ಬರಿ 94 ರನ್ ಗಳಿಸುವ ಮೂಲಕ ಸತತ ಮೂರನೇ ಬಾರಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದ ಇಂಗ್ಲೆಂಡ್ ನಾಯಕ ಐಯಾನ್ ಮಾರ್ಗನ್ ಅವರ ಯೋಜನೆಯನ್ನು ತಲೆ ಕೆಳಗೆ ಮಾಡಿದರು.

    ಹಿಟ್ ಮ್ಯಾನ್ ಸ್ಫೋಟಕ ಅರ್ಧ ಶತಕ
    ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್‍ನಿಂದಾಗಿ ಭಾರತ ತಂಡ ಉತ್ತಮ ರನ್ ಕಲೆ ಹಾಕಲು ಸಹಕಾರಿಯಾಯಿತು. ಕೇವಲ 34 ಎಸೆತಗಳಿಗೆ 64 ರನ್(6 ಸಿಕ್ಸ್, 4 ಬೌಂಡರಿ) ಕಲೆ ಹಾಕುವ ಮೂಲಕ ತಂಡಕ್ಕೆ ಬೃಹತ್ ರನ್‍ಗಳ ಕೊಡುಗೆ ನೀಡಿದರು. ಆರಂಭದಿಂದಲೂ ಅಬ್ಬರದ ಆಟವಾಡಿದ್ದ ರೋಹಿತ್ ಶರ್ಮಾ 8ನೇ ಓವರ್ ನ ಕೊನೆಯಲ್ಲಿ ಬೆನ್ ಸ್ಟೋಕ್ ಬಾಲ್‍ಗೆ ಕ್ಲೀನ್ ಬೋಲ್ಡ್ ಆದರು.

    ಅಚ್ಚರಿ ಮೂಡಿಸಿದ ವಿರಾಟ್
    ನಾಯಕ ವಿರಾಟ್ ಕೊಹ್ಲಿ ಆರಂಭಿಕ ಆಟಗಾರಾರಾಗಿ ಕಣಕ್ಕಿಳಿದು ಔಟಾಗದೆ 52 ಬಾಲ್‍ಗೆ 80 ರನ್(2 ಸಿಕ್ಸ್ 7 ಬೌಂಡರಿ) ಚೆಚ್ಚಿ ತಂಡದ ಮೊತ್ತವನ್ನು 200 ದಾಟಿಸುವಲ್ಲಿ ಬೃಹತ್ ಕೊಡುಗೆ ನೀಡಿದರು. ಪಂದ್ಯವನ್ನು ಗೆಲುವಿನ ದಡಕ್ಕೆ ತಂದರು. ಇಬ್ಬರು ಆಟಗರರೊಂದಿಗೆ ಉತ್ತಮ ಜೊತೆಯಾಟವಾಡಿ ವಿರಾಟ್ ಕೊಹ್ಲಿ ಉತ್ತಮ ರನ್ ಕಲೆ ಹಾಕಿದರು. ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ಜೊತೆಯಾಟವಾಡಿ 56 ಬಾಲ್‍ಗೆ 94 ರನ್ ಸಿಡಿಸಿದ್ದು, ಈ ಮೂಲಕ ತಂಡವನ್ನು ಗೆಲುವಿನ ಹಂತಕ್ಕೆ ತಂದು ನಿಲ್ಲಿಸಿದರು. ಬಳಿಕ ನಾಯಕ ವಿರಾಟ್ ಕೊಹ್ಲಿಗೆ ಸೂರ್ಯಕುಮಾರ್ ಯಾದವ್ ಉತ್ತಮ ಜೊತೆಯಾಟದಲ್ಲಿ 26 ಬಾಲ್‍ಗೆ 49 ರನ್ ಸಿಡಿಸಿದರು. ಹಾರ್ದಿಕ್ ಪಾಂಡ್ಯ ಜೊತೆಯಾಟವಾಡಿ 3ನೇ ವಿಕೆಟ್‍ಗೆ 40 ಎಸೆತಗಳಿಗೆ 81 ರನ್ ಸಿಡಿ ತಂಡ ಉತ್ತಮ ಮೊತ್ತ ಕಲೆ ಹಾಕಲು ನೆರವಾದರು.

    ಕೊಹ್ಲಿ ದಾಖಲೆ
    ವಿರಾಟ್ ಕೊಹ್ಲಿ ಟಿ20ಯಲ್ಲಿ 12 ಅರ್ಧ ಶತಕ ದಾಖಲಿಸಿದ ಮೊದಲ ನಾಯಕ ಎಂಬ ದಾಖಲೆ ಬರೆದರು. ನ್ಯೂಜಿಲೆಂಡ್ ಕ್ಯಾಪ್ಟನ್ ಕೇನ್ ವಿಲಿಯಮ್ಸ್ 11 ಅರ್ಧ ಶತಕ ದಾಖಲಿಸಿದ್ದಾರೆ. ಆಸ್ಟ್ರೇಲಿಯಾದ ಕ್ಯಾಪ್ಟನ್ ಅರೋನ್ ಪಿಂಚ್ 10 ಅರ್ಧ ಶತಕ ದಾಖಲಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಸೂರ್ಯಕುಮಾರ್ ಯಾದವ್ 17 ಎಸೆತದಲ್ಲಿ 32 ಮತ್ತು ಹಾರ್ದಿಕ್ ಪಾಂಡ್ಯ 17 ಎಸೆತದಲ್ಲಿ 39 ರನ್ ಪೇರಿಸಿದರು.

    ಭುವನೇಶ್ವರ್ ಕುಮಾರ್ ಪ್ಲೇಯರ್ ಆಫ್ ದಿ ಮ್ಯಾಚ್
    ಕೇವಲ 15 ರನ್ ನೀಡಿ 2 ವಿಕೆಟ್ ಪಡೆದು ಅತ್ಯದ್ಭುತವಾಗಿ ಬಾಲಿಂಗ್ ಮಾಡಿದ ಭುವನೇಶ್ವರ್ ಕುಮಾರ್ ಗೆ ಪ್ಲೇಯರ್ ಆಫ್ ದಿ ಮ್ಯಾಚ್ ನೀಡಲಾಗಿದೆ. ನಾಯಕ ವಿರಾಟ್ ಕೊಹ್ಲಿ ಅವರಿಗೆ ಪ್ಲೇಯರ್ ಆಫ್ ದಿ ಸಿರೀಸ್ ಸಹ ನೀಡಲಾಗಿದೆ.

    ಸೂರ್ಯಕುಮಾರ್ ಯಾದವ್ ಸಹ ಅದೇ ವೇಗದಲ್ಲಿ ಆಟವಡಲು ಯತ್ನಿಸಿದರು. 17 ಬಾಲ್‍ಗೆ 32ರನ್(2 ಸಿಕ್ಸ್, 3 ಬೌಂಡರಿ) ಸಿಡಿಸಿದರು. ಉತ್ತಮ ಆಡವಾಡುತ್ತಿದ್ದರೂ 13ನೇ ಓವರ್ ಆರಂಭದಲ್ಲಿ ಕ್ರಿಸ್ ಜೋರ್ಡನ್ ಬಾಲ್‍ಗೆ ಜೇಸನ್ ರಾಯ್‍ಗೆ ಕ್ಯಾಚ್ ನೀಡಿದರು. ನಂತರ ಬಂದ ಹಾರ್ದಿಕ್ ಪಾಂಡ್ಯ ಔಟಾಗದೆ 17 ಬಾಲ್‍ಗೆ 39 ರನ್(2 ಸಿಕ್ಸ್, 4 ಬೌಂಡರಿ) ಸಿಡಿಸಿದರು.

    ಈಗಾಗಲೇ ಆಡಿರುವ ನಾಲ್ಕು ಪಂದ್ಯಗಳಲ್ಲಿ ತಲಾ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ಹಾಗೂ ಇಂಗ್ಲೆಂಡ್ ಟಿ-20 ಸರಣಿಯಲ್ಲಿ ಸಮ ಬಲ ಸಾಧಿಸಿದ್ದವು. ಇದು ನಿರ್ಣಾಯಕ ಪಂದ್ಯವಾಗಿದ್ದರಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇತ್ತು.

    ಗೆಲುವಿಗೆ 225 ರನ್‍ಗಳ ಗುರಿಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್‍ಗೆ ಆರಂಭಿಕ ಆಘಾತ ನೀಡಿದ ಭೂವನೇಶ್ವರ್ ಕುಮಾರ್ ಎರಡನೇ ಬಾಲ್‍ಗೇ ಜೇಸನ್ ರಾಯ್‍ರನ್ನು ಕ್ಲೀನ್ ಬೋಲ್ಡ್ ಮಾಡಿದರು. ಈ ಮೂಲಕ ರಾಯ್ ಡಕೌಟ್ ಆದರು. ಅಬ್ಬರದ ಆಟವಾಡಿ 34 ಎಸೆತಗಳಿಗೆ 52 ರನ್(4 ಸಿಕ್ಸ್, 2 ಬೌಂಡರಿ) ಸಿಡಿಸಿ ಬಟ್ಲರ್ ಜೋಸ್ ಬಟ್ಲರ್ ಹಾರ್ದಿಕ್ ಪಾಂಡ್ಯಗೆ ಕ್ಯಾಚ್ ನೀಡಿದರು. ಬಳಿಕ ಜಾನಿ ಬೈರ್‍ಸ್ಟೋವ್ 7 ರನ್ (1 ಬೌಂಡರಿ) ಸಿಡಿಸಿ ಕ್ಯಾಚ್ ಸೂರ್ಯಕುಮಾರ್ ಯಾದವ್‍ಗೆ ಕ್ಯಾಚ್ ನೀಡಿದರು. ಬಳಿಕ ಡೇವಿಡ್ ಮಲನ್ ಮಿಂಚಿನಾಟವಾಡಿ 46 ಬಾಲ್‍ಗೆ 68 ರನ್ ಸಿಡಿಸಿ(2 ಸಿಕ್ಸ್, 9 ಬೌಂಡರಿ) ಶಾರ್ದೂಲ್ ಠಾಕೂರ್ ಅವರ ಬಾಲಿಗೆ ಕ್ಲೀನ್ ಬೌಲ್ಡ್ ಆದರು. ಬಳಿಕ ಐಯಾನ್ ಮಾರ್ಗನ್ ಸಹ 1 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಬೆನ್ ಸ್ಟೋಕ್ಸ್ 12 ಬಾಲ್‍ಗೆ 14ರನ್(2 ಬೌಂಡರಿ) ಬಾರಿಸಿ 18ನೇ ಓವರ್‍ನಲ್ಲಿ ಕ್ಯಾಚ್ ನೀಡಿದರು. ಇದೇ ಓವರ್ ಕೊನೇ ಬಾಲ್‍ಗೆ ಜೋಫ್ರಾ ಆರ್ಚರ್ 1 ರನ್ ಹೊಡೆದು ರನ್‍ಔಟ್ ಆದರು. ಕೊನೆಯದಾಗಿ ಕ್ರಿಸ್ ಜಾರ್ಡನ್ 10 ಬಾಲ್‍ಗೆ 11 ರನ್(1 ಸಿಕ್ಸ್) ಬಾರಿಸಿ ಸೂರ್ಯಕುಮಾರ್ ಯಾದವ್ ಅವರಿಗೆ ಕ್ಯಾಚ್ ನೀಡಿದರು.