Tag: ಟೆಂಟ್

  • ನದಿ, ಕಣಿವೆ, ಕೋಟೆ, ಜೈಲು – ಗಂಡಿಕೋಟವನ್ನು ನೀವು ನೋಡ್ಲೇಬೇಕು

    ನದಿ, ಕಣಿವೆ, ಕೋಟೆ, ಜೈಲು – ಗಂಡಿಕೋಟವನ್ನು ನೀವು ನೋಡ್ಲೇಬೇಕು

    ದಿ, ಕಣಿವೆ, ಕಲ್ಲುಬಂಡೆಗಳು, ಕೋಟೆ, ಉಗ್ರಾಣ, ಪುಷ್ಕರಿಣಿ, ಸೂರ್ಯೋದಯ, ಸೂರ್ಯಾಸ್ತಮಾನ, ಬೋಟಿಂಗ್, ದೇವಾಲಯ ಎಲ್ಲವನ್ನು ಒಂದೇ ಕಡೆ ನೋಡಬೇಕೇ? ಹಾಗಾದರೆ ನೀವು ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿರುವ ಗಂಡಿಕೋಟ(Gandikota) ಸ್ಥಳಕ್ಕೆ ಹೋಗಬೇಕು‌.

    ‘Grand Canyon of India’ ಎಂದೇ ಹೆಸರಾಗಿರುವ ಇಲ್ಲಿ ಪೆನ್ನಾರ್ ನದಿ ಹರಿಯುತ್ತಿದ್ದು ಸುತ್ತಲು ಕಣಿವೆ ಇದೆ. ನೀರು ಹತ್ತಿರದಲ್ಲೇ ಇರುವ ಕಾರಣ ವಿಜಯನಗರದ ಸಾಮಂತ ರಾಜನಾಗಿದ್ದ ಕುಮಾರ ತಿಮ್ಮಾ ಇಲ್ಲಿ ಕೋಟೆ ಕಟ್ಟಿದ್ದು ಈಗಲೂ ನೋಡಬಹುದು.

    ಕೋಟೆಯಲ್ಲಿ ಏನಿದೆ?
    50 ಅಡಿ ಎತ್ತರ, ಸುಮಾರು 7-8 ಕಿ‌‌ಮೀ ಸುತ್ತಳತೆಯ ಗಟ್ಟಿಯಾದ ರಕ್ಷಣಾ ಗೋಡೆಯಿದೆ. ಕಲ್ಲುಗಳನ್ನು ಬೆಲ್ಲ ಮತ್ತು ಸುಣ್ಣ ಬಳಸಿ ಕಟ್ಟಲಾಗಿದೆ. ಪ್ರವೇಶದ್ವಾರ ದಾಟಿ ಮುಂದೆ ಹೋದರೆ ಮದ್ದುಗುಂಡು ಸಂಗ್ರಹಾಗಾರ, ಉಗ್ರಾಣಗಳು, ಜೈಲು, ಮಾಧವ ಮತ್ತು ರಂಗನಾಥ ದೇವಸ್ಥಾನ, ರಾಣಿ ಮಹಲ್, ಪುಷ್ಕರಣಿ, ಚಾರ್ ಮಿನಾರ್, ಜುಮ್ಲಾ ಮಸೀದಿ ಇದೆ‌. ಇದನ್ನೂ ಓದಿ: ಬೈಕ್ ಪ್ರವಾಸಕ್ಕೆ ಯಾವ ಅಪ್ಲಿಕೇಶನ್ ಉತ್ತಮ?

    ಮೇಲೆ ತಿಳಿಸಿದ ಜೊತೆ ಜನರನ್ನು ಹೆಚ್ಚು ಸೆಳೆಯುವುದು ಇಲ್ಲಿನ ಕಲ್ಲು ಬಂಡೆಗಳು ಮತ್ತು ಕಣಿವೆಗಳು. ಸೂರ್ಯೋದಯ ಮತ್ತು ಸೂರ್ಯಾಸ್ತಮಾನ ಎರಡನ್ನು ಕಣ್ತುಂಬಿಕೊಳ್ಳುವ ಕಾರಣ ಇಲ್ಲಿಗೆ ಪ್ರವಾಸಿಗರು‌ ಹೆಚ್ಚಾಗಿ ಬರುತ್ತಾರೆ. ಫೋಟೋಗ್ರಫಿಗೆ ಬೇಕಾದ ಎಲ್ಲ ಪೂರಕ ಅಂಶಗಳು ಒಂದೇ ಕಡೆ ಸಿಗುವ ಕಾರಣ ಫೋಟೋಗ್ರಾಫರ್‌ಗಳು ಸಹ ಜಾಸ್ತಿ ಸಂಖ್ಯೆಯಲ್ಲಿ ಬರುತ್ತಾರೆ. ಎಲ್ಲವೂ ಚೆನ್ನಾಗಿದ್ದರೂ ಇಲ್ಲಿ ರಾತ್ರಿ ತಂಗಲು ಹೆಚ್ಚಿನ ವ್ಯವಸ್ಥೆ ಇಲ್ಲ.

    ಹತ್ತಿರದಲ್ಲಿ ಆಂಧ್ರಪ್ರದೇಶ ಸರ್ಕಾರ ಹರಿತಾ ಹೋಟೆಲಿನಲ್ಲಿ ಎಸಿ ರೂಮ್ ವ್ಯವಸ್ಥೆ ಇದೆ. ರೂಮ್ ಸಿಗದೇ ಇದ್ದರೂ ಟೆಂಟ್‌ನಲ್ಲಿ ಮಲಗಬಹುದು. ಹರಿತಾ ಮೂಲಕ ಮೊದಲೇ ಬುಕ್ ಮಾಡಿ ತಿಳಿಸಿದರೆ ಟೆಂಟ್ ಹಾಕಿ ಅವರೇ ವ್ಯವಸ್ಥೆ ಮಾಡಿಕೊಡುತ್ತಾರೆ.

    ಎಸಿ ರೂಮ್ ಗಳಿಗೆ ಹೋಲಿಸಿದರೆ ಟೆಂಟ್ ದರ ಬಹಳ ಕಡಿಮೆ. ಇದರಲ್ಲಿ ಸಂಜೆಯ ತಿಂಡಿ, ರಾತ್ರಿಯ ಊಟ, ಬೆಳಗ್ಗೆ ತಿಂಡಿಯೂ ಬರುತ್ತದೆ. ರಾತ್ರಿ ಊಟ ಟೆಂಟ್ ಇದ್ದ ಸ್ಥಳಕ್ಕೆ ಬರುತ್ತದೆ. ನಿಮಗೆ ಸಸ್ಯಾಹಾರ ಬೇಕೋ, ಮಾಂಸಾಹಾರ ಬೇಕೋ ಎನ್ನುವುದನ್ನು ಮೊದಲೇ ತಿಳಿಸಬೇಕಾಗುತ್ತದೆ.
    – ಅಶ್ವಥ್‌ ಸಂಪಾಜೆ

    Live Tv
    [brid partner=56869869 player=32851 video=960834 autoplay=true]

  • ಬೆಟ್ಟದ ತುದಿಯಲ್ಲಿ ಅತ್ಯಾಧುನಿಕ ಟೆಂಟ್, ನಕ್ಸಲರ ಶಂಕೆ

    ಬೆಟ್ಟದ ತುದಿಯಲ್ಲಿ ಅತ್ಯಾಧುನಿಕ ಟೆಂಟ್, ನಕ್ಸಲರ ಶಂಕೆ

    ಚಿಕ್ಕಮಗಳೂರು: ಬೆಟ್ಟದ ತುದಿಯಲ್ಲಿ ಅತ್ಯಾಧುನಿಕ ಶೆಡ್ ಪತ್ತೆಯಾಗಿದ್ದು, ನಕ್ಸಲರು ಮತ್ತೆ ಮಲೆನಾಡನ್ನು ಅಡಗುದಾಣವನ್ನಾಗಿ ಮಾಡಿಕೊಳ್ಳುತ್ತಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ.

    ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲೆಮಡಿಲು ಗ್ರಾಮದ ದುರ್ಗದ ಬೆಟ್ಟದ ತುದಿಯಲ್ಲಿ ಶೆಡ್ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸ್ಥಳೀಯರು ಚಾರಣಕ್ಕೆ ಹೋದಾಗ ಈ ಶೆಡ್ ಪತ್ತೆಯಾಗಿದ್ದು, ತಾರ್ಪಲ್‍ನಿಂದ ನಿರ್ಮಿಸಿರುವ ಶೆಡ್ ಕಂಡು ಸ್ಥಳಿಯರು ಆತಂಕಕ್ಕೀಡಾಗಿದ್ದಾರೆ.

    ಶೆಡ್‍ನಲ್ಲಿ ಪೆಟ್ರೋಲ್ ಕ್ಯಾನ್‍ಗಳು, ಗುಣಮಟ್ಟದ ಹಗ್ಗ, ನೀರಿನ ಬಾಟಲ್ ಹಾಗೂ ಕುರ್ಚಿಗಳು ಪತ್ತೆಯಾಗಿದ್ದು, ನಕ್ಸಲರು ಬಂದು ಹೋಗಿರಬಹುದಾ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಳೆದ ಒಂದೆರಡು ವರ್ಷಗಳಿಂದ ಮಲೆನಾಡಲ್ಲಿ ನಕ್ಸಲರ ಸಂಖ್ಯೆ ಸಂಪೂರ್ಣ ಕ್ಷೀಣಿಸಿದೆ. ಇರುವಿಕೆಯ ಬಗ್ಗೆಯೂ ಯಾವುದೇ ಪುರಾವೆಗಳು ಸಿಕ್ಕಿರಲಿಲ್ಲ. ಇದೀಗ ಗುಡ್ಡದಲ್ಲಿ ಶೆಡ್ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ನಕ್ಸಲರು ಸಂಘಟನೆಯನ್ನು ಬಲಪಡಿಸಿಕೊಳ್ಳುತ್ತಿದ್ದಾರಾ, ತರಬೇತಿ ನಡೆಸಿದ್ದಾರಾ ಎಂಬ ಅನುಮಾನ ಮೂಡಿದೆ. ಯಾವುದಾದರು ಕೃತ್ಯಕ್ಕೆ ಸಂಚು ರೂಪಿಸಿರಬಹುದಾ ಎಂಬ ಶಂಕೆ ಕೂಡ ಮನೆ ಮಾಡಿದೆ. ವಿಷಯ ತಿಳಿಯುತ್ತಿದ್ದಂತೆ ಜಯಪುರ ಪೊಲೀಸರು ಹಾಗೂ ಕೊಪ್ಪ ಸರ್ಕಲ್ ಇನ್ಸ್‍ಪೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಲಿನ ಕಾಫಿ ಎಸ್ಟೇಟ್‍ನವರು ಮೋಜು-ಮಸ್ತಿಗಾಗಿಯೂ ನಿರ್ಮಿಸಿರಬಹುದು ಎಂದು ಅಂದಾಜಿಸಲಾಗಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರು ಸೂಕ್ತ ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

  • ಕೊಲ್ಲೂರು ಕಾಡಲ್ಲಿ ಸಿಕ್ಕ ಟೆಂಟ್ ಭಕ್ತರದ್ದು – ಎಸ್‍ಪಿ ನಿಶಾ ಜೇಮ್ಸ್ ಸ್ಪಷ್ಟನೆ

    ಕೊಲ್ಲೂರು ಕಾಡಲ್ಲಿ ಸಿಕ್ಕ ಟೆಂಟ್ ಭಕ್ತರದ್ದು – ಎಸ್‍ಪಿ ನಿಶಾ ಜೇಮ್ಸ್ ಸ್ಪಷ್ಟನೆ

    ಉಡುಪಿ: ರಾಜ್ಯದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಚಿಗುರಿತಾ? ಪಕ್ಕದ ಕೇರಳದ ಕೆಂಪು ನಕ್ಸಲರು ತಮ್ಮ ಕ್ಯಾಂಪನ್ನು ಕರಾವಳಿ, ಮಲೆನಾಡು ಕಡೆ ವಿಸ್ತರಿಸಿದ್ರಾ? ಇಂತಹದೊಂದು ಪ್ರಶ್ನೆ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಓಡಾಡುತ್ತಿದೆ. ಬೈಂದೂರು ತಾಲೂಕು ಕೊಲ್ಲೂರಿನ ಕಾಡಿನಲ್ಲಿ ಸಿಕ್ಕ ತಾತ್ಕಾಲಿಕ ಗುಡಿಸಲು ಇಷ್ಟೆಲ್ಲಾ ಗಾಸಿಪ್ ಗಳಿಗೆ ಕಾರಣವಾಗಿದೆ.

    ಕೊಲ್ಲೂರು ಅಭಯಾರಣ್ಯದ ಗುಡಿಸಲಿನಲ್ಲಿ ಸಿಕ್ಕ ಅಕ್ಕಿ, ಎಣ್ಣೆ, ಛತ್ರಿ, ವಿಭೂತಿ, ಬಟ್ಟೆಗಳು ಪೊಲೀಸ್ ಇಲಾಖೆ, ಎಎನ್‍ಎಫ್, ಅರಣ್ಯ ಇಲಾಖೆಯ ನಿದ್ದೆಗೆಡಿಸಿತ್ತು. ದಿನಪೂರ್ತಿ ತಪಾಸಣೆ ಮಾಡಿದ ಮೂರೂ ಇಲಾಖೆಯ ಸಿಬ್ಬಂದಿಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಇದೀಗ ನಕ್ಸಲ್ ಚಟುವಟಿಕೆಯನ್ನು ಅಲ್ಲಗಳೆದಿದ್ದಾರೆ.

    ಚಾರಣಿಗರೋ, ಧಾರ್ಮಿಕ ಪ್ರವಾಸದ ಸಂದರ್ಭ ಭಕ್ತರು ತಾತ್ಕಾಲಿಕ ಟೆಂಟ್ ಮಾಡಿರಬಹುದು ಎಂದು ಪೊಲೀಸ್ ತಪಾಸಣೆಯಲ್ಲಿ ತಿಳಿದುಬಂದಿದೆ. ಪಕ್ಕದಲ್ಲೆ ಧ್ಯಾನಕೇಂದ್ರವಿದ್ದು ಭಕ್ತರು ಧ್ಯಾನ ಮಾಡಲು ತಾತ್ಕಾಲಿಕ ಟೆಂಟ್ ಹಾಕಿಕೊಂಡಿರುವ ಸಾಧ್ಯತೆಯಿದೆ ಎಂದು ಉಡುಪಿ ಎಸ್‍ಪಿ ನಿಶಾ ಜೇಮ್ಸ್ ಸ್ಪಷ್ಟನೆ ಕೊಟ್ಟಿದ್ದಾರೆ.

    ಈ ನಡುವೆ ಹೆಬ್ರಿ ತಾಲೂಕಿನ ನಾಡ್ಪಾಲ್ ಲೊಕೇಶನ್ ನಿಂದ ಕರಾಚಿಗೆ ಫೋನ್ ಕರೆಯೊಂದು ಹೋಗಿದೆ. ಹೆಬ್ರಿಗೆ ಮತ್ತು ಕೊಲ್ಲೂರಿಗೆ ಎನ್‍ಐಎ ಅಧಿಕಾರಿಗಳು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ ಎಂಬ ಸುದ್ದಿ, ರಾಜ್ಯಮಟ್ಟದ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದೆ. ನಕ್ಸಲ್ ಸುದ್ದಿ ಮತ್ತು ಭಯೋತ್ಪಾದಕ ಚಲನವಲನದ ವರದಿ ಒಂದಕ್ಕೊಂದು ಲಿಂಕ್ ಆಗಿ, ಜನರಲ್ಲಿ ಆತಂಕ ಮೂಡಿಸಿತ್ತು. ಇದಕ್ಕೂ ಸ್ಪಷ್ಟನೆ ನೀಡಿರುವ ಎಸ್‍ಪಿ ನಿಶಾ ಜೇಮ್ಸ್ ಎನ್‍ಐಎ ಅಧಿಕಾರಿಗಳು ಜಿಲ್ಲೆಗೆ ಆಗಮಿಸಿಲ್ಲ, ಎಲ್ಲೂ ವಿಚಾರಣೆ ನಡೆಸಿಲ್ಲ. ನಕ್ಸಲ್ ಚಲನವಲನ ಕೂಡಾ ಜಿಲ್ಲೆಯಲ್ಲಿ ಇಲ್ಲ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

    ಎಸ್‍ಪಿ ನಿಶಾ ಜೇಮ್ಸ್ ಮಾತನಾಡಿ, ದಿನಾಂಕ 16ರಂದು ಅರಣ್ಯಾಧಿಕಾರಿಗಳಿಂದ ನಮಗೆ ಮಾಹಿತಿ ಬಂದಿತ್ತು. ನಮ್ಮ ಮತ್ತು ಶಿವಮೊಗ್ಗ ಜಿಲ್ಲೆಯ ಗಡಿ ಪ್ರದೇಶ ಅದು ಜಂಟಿ ಕಾರ್ಯಾಚರಣೆ ಮಾಡಿದಾಗ ವಿಭೂತಿ ಕುಂಕುಮ ಸಿಕ್ಕಿದೆ. ಧ್ಯಾನಕ್ಕೆ ಬರುವವರು ಟೆಂಟ್ ಹಾಕಿರುವ ಸಾಧ್ಯತೆಯಿದೆ. ಮೇಲ್ನೋಟಕ್ಕೆ ನಕ್ಸಲ್ ಚಟುವಟಿಕೆಯಂತೆ ಕಂಡುಬರುವುದಿಲ್ಲ. ಜಿಲ್ಲೆಗೆ ಎಎನ್‍ಐ ಅಧಿಕಾರಿಗಳು ಭೇಟಿಕೊಟ್ಟಿಲ್ಲ. ಎಎನ್‍ಐ ಅಧಿಕಾರಿಗಳು ಜಿಲ್ಲೆಗೆ ಬಂದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ಕೊಡದೆ ಯಾವುದೇ ಕಾರ್ಯಾಚರಣೆ ನಡೆಸುವುದಿಲ್ಲ ಎಂದರು.

  • ಕೊಡಗು ನಿರಾಶ್ರಿತರಿಗೆ ತಿಂಗಳಿಗೆ 10 ಸಾವಿರ ರೂ. ಸಹಾಯಧನ – ಯು.ಟಿ.ಖಾದರ್

    ಕೊಡಗು ನಿರಾಶ್ರಿತರಿಗೆ ತಿಂಗಳಿಗೆ 10 ಸಾವಿರ ರೂ. ಸಹಾಯಧನ – ಯು.ಟಿ.ಖಾದರ್

    ಬೆಂಗಳೂರು: ಕೊಡಗು ನಿರಾಶ್ರಿತರಿಗೆ ಟೆಂಟ್ ನಿರ್ಮಾಣ ಮಾಡಿಕೊಡುವ ಪ್ರಸ್ತಾವನೆ ಕೈ ಬಿಡಲಾಗಿದ್ದು, ಮನೆ ನಿರ್ಮಿಸುವವರೆಗೆ ಪ್ರತಿ ತಿಂಗಳು ಕುಟುಂಬಕ್ಕೆ 10 ಸಾವಿರ ರೂ. ಪರಿಹಾರ ಧನ ನೀಡಲಾಗುತ್ತದೆ ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕೊಡಗು ಜಿಲ್ಲೆಯಲ್ಲಿ ಸುರಿದ ಮಹಾಮಳೆಗೆ 700-800 ಕುಟುಂಬಗಳು ಆಶ್ರಯ ಕಳೆದುಕೊಂಡಿದ್ದು, ಅವರನ್ನು ಗುರುತಿಸಲಾಗಿದೆ. ಜಿಲ್ಲಾಧಿಕಾರಿ ತಿಳಿಸುವ ಸ್ಥಳಗಳಲ್ಲಿ ತಲಾ 6 ಲಕ್ಷ ರೂ. ವೆಚ್ಚದಲ್ಲಿ ನಿರಾಶ್ರಿತರಿಗೆ ಮಾದರಿ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ ಎಂದರು.

    ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಮನೆ ಪಡೆದು ಸೂಕ್ತ ಸಮಯದಲ್ಲಿ ದಾಖಲಾತಿ ಸಲ್ಲಿಸಿರಲಿಲ್ಲ ಹಾಗೂ ಹಣ ಪಾವತಿಸಿಲ್ಲ. ಹೀಗಾಗಿ 72,370 ಫಲಾನುಭವಿಗಳಿಗೆ ಮಂಜೂರಾತಿಯನ್ನು ತಡೆಹಿಡಿಯಲಾಗಿದೆ. 19 ಸಾವಿರ ಮಂದಿ ದಾಖಲೆಗಳನ್ನು ಸಲ್ಲಿಸಿದ್ದರೆ, ಸುಮಾರು 32 ಸಾವಿರ ಫಲಾನುಭವಿಗಳು ದಾಖಲೆಗಳನ್ನು ಸಲ್ಲಿಸಿಲ್ಲ. ಇಲ್ಲಿಯವರೆಗೆ ದಾಖಲೆಗಳನ್ನು ಸಲ್ಲಿಸದ ಫಲಾನುಭವಿಗಳಿಗೆ ಅಕ್ಟೋಬರ್ 15ರ ವರಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಅವರು ಗ್ರಾಮ ಪಂಚಾಯ್ತಿ ಪಿಡಿಓಗಳ ಮೂಲಕವೇ ದಾಖಲೆಗಳನ್ನು ಅಪ್‍ಲೋಡ್ ಮಾಡಿಸಬೇಕು ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv