Tag: ಟೆಂಪೋ

  • ಟೆಂಪೋದಲ್ಲೇ ಮಹಿಳೆಯ ಅತ್ಯಾಚಾರವೆಸಗಿದ ಕಾಮುಕ!

    ಟೆಂಪೋದಲ್ಲೇ ಮಹಿಳೆಯ ಅತ್ಯಾಚಾರವೆಸಗಿದ ಕಾಮುಕ!

    ಮುಂಬೈ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋದಲ್ಲಿ ಮಹಿಳೆಯ ಮೇಲೆ ಕಾಮಾಂಧನೊಬ್ಬ ಅಟ್ಟಹಾಸ ಮೆರೆದು, ಅತ್ಯಾಚಾರ ಎಸಗಿರುವುದನ್ನು ಕಂಡು ಇಡೀ ದೇಶವೇ ಬೆಚ್ಚಿಬಿದ್ದಿದೆ.

    ಮುಂಬೈನ ಕೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ 34 ವರ್ಷದ ಮಹಿಳೆಗೆ ಚಿತ್ರ ಹಿಂಸೆ ನೀಡಿ, ಬಳಿಕ ಆಕೆಯನ್ನು ಅತ್ಯಾಚಾರ ಎಸಗಿದ್ದಾನೆ. ಸದ್ಯ ಸಂತ್ರಸ್ತೆಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಮೋಹನ್ ಚೌಹಾಟ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಿಂದ ವಾಪಸ್ಸಾಗ್ತಿದ್ದಾಗ ಕಾರು ಅಪಘಾತ- ಮದ್ವೆಯಾಗ್ಬೇಕಿದ್ದ ಜೋಡಿ ಸಾವು

    ಕೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ಫೋನ್ ಮಾಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸುವಷ್ಟರಲ್ಲಿ ಕೃತ್ಯ ನಡೆದಿದೆ. ಆರೋಪಿಯು ಮಹಿಳೆಗೆ ಥಳಿಸಿ, ಹಲ್ಲೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಪೊಲೀಸರು ರಾಜವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬೈಕ್ ಆಕ್ಸಿಡೆಂಟ್ – ಟಾಲಿವುಡ್ ನಟ ಸಾಯಿಧರ್ಮ ತೇಜ್ ಸ್ಥಿತಿ ಗಂಭೀರ

  • ಹೊತ್ತಿ ಉರಿಯಿತು 15 ಜನರಿದ್ದ ಟೆಂಪೋ- 25 ನಿಮಿಷದಲ್ಲಿ ಸುಟ್ಟು ಭಸ್ಮ

    ಹೊತ್ತಿ ಉರಿಯಿತು 15 ಜನರಿದ್ದ ಟೆಂಪೋ- 25 ನಿಮಿಷದಲ್ಲಿ ಸುಟ್ಟು ಭಸ್ಮ

    – ಚಲಿಸುತ್ತಿದ್ದ ಟೆಂಪೋದಿಂದ ಜಿಗಿಯ ಪ್ರಯಾಣಿಕರು

    ಜೈಪುರ: 15 ಜನರು ಪ್ರಯಾಣಿಸುತ್ತಿದ್ದ ಟೆಂಪೋ ಬೆಂಕಿಗಾಹುತಿಯಾಗಿರುವ ಘಟನೆ ರಾಜಸ್ಥಾನದ ಸಿಕರ್ ಜಿಲ್ಲೆಯ ನಿಮಕಾಥಾನ್ ದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಚಲಿಸುತ್ತಿದ್ದ ಟೆಂಪೋದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

    ಟೆಂಪೋದಲ್ಲಿ ಚಾಲಕ ಸೇರಿದಂತೆ 15 ಜನರು ಪ್ರಯಾಣಿಸುತ್ತಿದ್ದರು. ಟೆಂಪೋ ನಿಮಕಾಥಾನ್ ದಿಂದ ಪಾಟ್ನಾದತ್ತ ಹೊರಟಿತ್ತು. ಇಂದು ಬೆಳಗ್ಗೆ ಸುಮಾರು 9 ಗಂಟೆಗೆ ಚಲಿಸುತ್ತಿದ್ದ ಟೆಂಪೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕೆಲ ಪ್ರಯಾಣಿಕರು ಜಿಗಿದಿದ್ದಾರೆ. ಇತ್ತ ಚಾಲಕ ಸಹ ವಾಹನ ನಿಲ್ಲಿಸಿ ಇನ್ನುಳಿದ ಪ್ರಯಾಣಿಕರನ್ನ ಕೆಳಗೆ ಇಳಿಸಿ ದೂರ ಕರೆದುಕೊಂಡು ಹೋಗಿದ್ದಾನೆ.

    ಟೆಂಫೋಗೆ ಬೆಂಕಿ ತಗುಲಿದ ಪರಿಣಾಮ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೂಡಲೇ ಸ್ಥಳೀಯರು ಗ್ರಾಮದಲ್ಲಿನ ನೀರಿನ ಟ್ಯಾಂಕರ್ ತರಿಸಿ ಬೆಂಕಿ ನಂದಿಸಿದ್ದಾರೆ. ಆದ್ರೆ 25 ನಿಮಿಷಲ್ಲಿ ಟೆಂಪೋ ಸುಟ್ಟು ಭಸ್ಮವಾಗಿತ್ತು. ಚಲಿಸುತ್ತಿದ್ದ ವಾಹನದಿಂದ ಜಿಗಿದ ಕೆಲ ಪ್ರಯಾಣಿಕರಿಗೆ ತರಚಿದ ರೀತಿಯಲ್ಲಿ ಗಾಯಗಳಾಗಿವೆ. ಬೆಂಕಿ ಯಾಕೆ ಹತ್ತಿಕೊಂಡಿತು ಎಂಬುದರ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.

  • ಡಿಕ್ಕಿಯಾಗಿ 20 ಮೀಟರ್ ಬೈಕ್ ಸವಾರನನ್ನು ಎಳೆದೊಯ್ದ ಟೆಂಪೋ!

    ಡಿಕ್ಕಿಯಾಗಿ 20 ಮೀಟರ್ ಬೈಕ್ ಸವಾರನನ್ನು ಎಳೆದೊಯ್ದ ಟೆಂಪೋ!

    – ಸವಾರ ದುರ್ಮರಣ

    ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದ ಟೆಂಪೋವೊಂದು ಸುಮಾರು 20 ಮೀಟರ್ ಬೈಕ್ ಸಮೇತ ಎಳೆದೊಯ್ದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ಹುಬ್ಬಳ್ಳಿಯಿಂದ ಅಂಚಟಗೇರಿಗೆ ಹೋಗುತ್ತಿದ್ದ ಟೆಂಪೋ ಹಾಗೂ ಕಲಘಟಗಿ ಕಡೆಯಿಂದ ಬರುತ್ತಿದ್ದ ಬೈಕ್, ಕಾರವಾರ ರಸ್ತೆಯ ಕೆಂಪಗೇರಿಯ ಗಣೇಶ್ ಗುಡಿ ಹತ್ತಿರ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಹುಬ್ಬಳ್ಳಿ ಅಲ್ತಾಫನಗರದ ನಿವಾಸಿ ಮೆಹಬೂಬಸಾಬ ತಾರೆಗಾರ್(23) ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ಟೆಂಪೋ ಚಾಲಕ ವೇಗವಾಗಿ ಬರುತ್ತಿದ್ದ ಸಮಯದಲ್ಲಿ ಮುಂದೆ ಬಂದ ಬೈಕಿಗೆ ಡಿಕ್ಕಿ ಹೊಡೆದು, ಅದೇ ವೇಗದಲ್ಲಿ 20 ಮೀಟರ್ ಟೆಂಪೋ ಚಲಿಸಿದೆ. ರಸ್ತೆಯಲ್ಲಿಯೇ ತೀವ್ರವಾಗಿ ಗಾಯಗೊಂಡಿದ್ದ ಯುವಕ, ಕಿಮ್ಸ್ ಗೆ ರವಾನೆಯಾಗುವ ಮುನ್ನವೇ ಸಾವಿಗೀಡಾಗಿದ್ದಾನೆ.

    ಅಂಚಟಗೇರಿ ಸಮೀಪ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ರಸ್ತೆ ಧೂಳಿನಿಂದ ತುಂಬಿದ್ದು, ಎದುರಿಗೆ ಬರುವ ವಾಹನಗಳು ಸಡನ್ನಾಗಿ ಕಾಣುವುದೇ ಇಲ್ಲ. ಹೀಗಾಗಿಯೇ ಘಟನೆ ನಡೆದಿದ್ದು, ಅಪಘಾತ ನಡೆಯುತ್ತಿದ್ದ ಹಾಗೇ ಟೆಂಪೋ ಚಾಲಕ ವಾಹನವನ್ನ ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.

  • ನಿಶ್ಚಿತಾರ್ಥಕ್ಕೆ ಹೊರಟಿದ್ದ ಟೆಂಪೋ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

    ನಿಶ್ಚಿತಾರ್ಥಕ್ಕೆ ಹೊರಟಿದ್ದ ಟೆಂಪೋ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

    ಕೊಪ್ಪಳ: ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಕುಕನೂರ ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ನಡೆದಿದೆ.

    ಬೈಕ್ ಹಾಗೂ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ, ಬಳಿಕ ಟೆಂಪೋ ಮರಕ್ಕೆ ಗುದ್ದಿದೆ. ಈ ವೇಳೆ ಸ್ಥಳದಲ್ಲೇ ನಾಲ್ವರು ಸಾನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರನ ವೇಗದ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ.

    ಮಿನಿ ಬಸ್ ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲೂಕು ಹಿರೇಸಿಂಧೋಗಿಗೆ ಬರುತ್ತಿತ್ತು. ಈ ವೇಳೆ ಬೈಕ್ ವೇಗವಾಗಿ ಬಂದಿದ್ದರಿಂದ ಮಿನಿ ಬಸ್‍ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಟೆಂಪೋ ಮರಕ್ಕೆ ಗುದ್ದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಮಿನಿ ಬಸ್ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೊರಟಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

  • ಸಮುದ್ರಕ್ಕೆ ಬಿದ್ದ ಟೆಂಪೋ – ಮೇಲಕ್ಕೆತ್ತಲು ಕ್ರೇನ್ ಬಳಕೆ

    ಸಮುದ್ರಕ್ಕೆ ಬಿದ್ದ ಟೆಂಪೋ – ಮೇಲಕ್ಕೆತ್ತಲು ಕ್ರೇನ್ ಬಳಕೆ

    ಉಡುಪಿ: ಮೀನು ಲೋಡ್ ಮಾಡಲು ಬಂದರಿಗೆ ಬಂದ ಗೂಡ್ಸ್ ಟೆಂಪೋ ನೀರಿನೊಳಗೆ ಬಿದ್ದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.

    ಅರಬ್ಬಿ ಸಮುದ್ರದಲ್ಲಿ ಹಿಡಿದ ಮೀನನ್ನು ಮಲ್ಪೆ ಬಂದರಿನಲ್ಲಿ ಖಾಲಿ ಮಾಡಲಾಗುತ್ತದೆ. ಬೋಟ್‍ಗಳು ಲಂಗರು ಹಾಕುವ ಪಕ್ಕದಲ್ಲೇ ಗೂಡ್ಸ್ ಟೆಂಪೋ ತಂದು ನಿಲ್ಲಿಸಿ ಮೀನು ಖಾಲಿ ಮಾಡಲಾಗುತ್ತದೆ. ಎಂದಿನಂತೆ ಈ ಪ್ರಕ್ರಿಯೆ ನಡೆಯುತ್ತಿದ್ದಾಗ ನೀರಿನಲ್ಲಿ ಇದ್ದ ಬೋಟು ನಿಧಾನಕ್ಕೆ ಹಿಂದಕ್ಕೆ ಬಂದಿದೆ.

    ಮೀನು ಖಾಲಿ ಮಾಡುವ ಸಂದರ್ಭ ಗೂಡ್ಸ್ ಟೆಂಪೋವನ್ನು ಬೋಟಿಗೆ ಸಿಕ್ಕಿಸಲಾಗಿತ್ತು. ಟೆಂಪೋ ಹಿಂದಕ್ಕೆ ಹೋಗಿ, ನೀರಿಗೆ ಬಿದ್ದಿದೆ. ಅಲ್ಲದೇ ಟೆಂಪೋ ಸಂಪೂರ್ಣವಾಗಿ ಮುಳುಗಿದೆ. ಮುಳುಗಿದ್ದ ಟೆಂಪೋವನ್ನು ಕ್ರೇನ್‌ಗೆ ಸರಪಳಿಯಲ್ಲಿ ಕಟ್ಟಿ ಮೇಲಕ್ಕೆತ್ತಲಾಗಿದೆ.

    ವಿಠ್ಠಲ ಪೂಜಾರಿ ಎಂಬವರಿಗೆ ಸೇರಿದ ಟೆಂಪೋ ಇದಾಗಿದ್ದು, ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟೆಂಪೋದ ಎಂಜಿನ್ ಒಳಗೆ ನೀರು ಹೋಗಿದ್ದು, ಸಾವಿರಾರು ರೂಪಾಯಿ ನಷ್ಟವಾಗಿದೆ.

  • ಜಾಸ್ತಿ ಜನ ಸಂಚಾರ: ಬೆಂಗ್ಳೂರಿನಿಂದ ಕಾರ್ಮಿಕರನ್ನ ಕರೆ ತಂದ ಟೆಂಪೋ ಕಾಲುವೆಗೆ ಪಲ್ಟಿ

    ಜಾಸ್ತಿ ಜನ ಸಂಚಾರ: ಬೆಂಗ್ಳೂರಿನಿಂದ ಕಾರ್ಮಿಕರನ್ನ ಕರೆ ತಂದ ಟೆಂಪೋ ಕಾಲುವೆಗೆ ಪಲ್ಟಿ

    – ವಾಹನಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಜನರ ಓಡಾಟಕ್ಕೆ ಬೀಳುತ್ತಿಲ್ಲ ಕಡಿವಾಣ

    ರಾಯಚೂರು: ಬೆಂಗಳೂರಿನಲ್ಲಿ ಕಟ್ಟಡ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಜಿಲ್ಲೆಯ ಮಸ್ಕಿ ತಾಲೂಕಿಗೆ ಬಿಟ್ಟು ವಾಪಸ್ ಹೋಗುತ್ತಿದ್ದ ಟೆಂಪೋ ಪಲ್ಟಿಯಾಗಿ ತುಂಗಭದ್ರಾ ಉಪ ಕಾಲುವೆಗೆ ಬಿದ್ದಿದೆ.

    ಮಸ್ಕಿ ತಾಲೂಕಿನ ರಂಗಾಪುರ ಬಳಿ ಘಟನೆ ನಡೆದಿದೆ.ಬೆಂಗಳೂರಿಗೆ ಗುಳೆ ಹೋಗಿದ್ದ ಕಾರ್ಮಿಕರನ್ನು ಬಿಟ್ಟು ಹೋಗಲು ಬಂದಿದ್ದ ವಾಹನ, ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೊರೊನಾ ಭೀತಿ ಹಾಗೂ ಲಾಕ್‍ಡೌನ್ ಹಿನ್ನಲೆ ಬೆಂಗಳೂರಿನಿಂದ ಗ್ರಾಮಗಳಿಗೆ ಕೂಲಿ ಕಾರ್ಮಿಕರು ಟೆಂಪೋ ಮಾಡಿಕೊಂಡು ಮರಳಿದ್ದಾರೆ. ಆದರೆ ವಾಪಸ್ ಹೋಗಬೇಕಿದ್ದ ಟೆಂಪೋ ಕಾಲುವೆಗೆ ಬಿದ್ದಿದೆ.

    ಕೂಲಿ ಕಾರ್ಮಿಕರು ವಾಪಸ್ ಬರುವ ಭರಾಟೆಯಲ್ಲಿ ವಾಹನಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ಪ್ರಯಾಣಿಸುತ್ತಿದ್ದಾರೆ. ಮಕ್ಕಳನ್ನು ಕುರಿಗಳ ಹಾಗೆ ತುಂಬಿಕೊಂಡು ಬರಲಾಗುತ್ತಿದೆ. ಅಲ್ಲದೆ ಗಾಡಿಗಳಿಗೆ ನೇತಾಡಿಕೊಂಡು ಜನ ಬರುತ್ತಿದ್ದಾರೆ. ಪೊಲೀಸರು ಎಷ್ಟೇ ವಾಹನಗಳನ್ನು ತಡೆದರೂ ಜನರ ಹಾಗೂ ಕೂಲಿ ಕಾರ್ಮಿಕರ ಓಡಾಟ ಇನ್ನೂ ನಿಂತಿಲ್ಲ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಪತಿಯೊಂದಿಗೆ ಜಗಳ ಮಾಡ್ಕೊಂಡು ದೇವಾಲಯಕ್ಕೆ ಹೋದ್ಳು – ಟೆಂಪೋದಲ್ಲಿ ಗ್ಯಾಂಗ್‍ರೇಪ್

    ಪತಿಯೊಂದಿಗೆ ಜಗಳ ಮಾಡ್ಕೊಂಡು ದೇವಾಲಯಕ್ಕೆ ಹೋದ್ಳು – ಟೆಂಪೋದಲ್ಲಿ ಗ್ಯಾಂಗ್‍ರೇಪ್

    – ಮನೆಗೆ ವಾಪಸ್ ಬರೋ ನಿರ್ಧಾರ ಮಾಡಿದ್ದೇ ತಪ್ಪಾಯ್ತು

    ಮುಂಬೈ: ಡ್ರಾಪ್ ಕೊಡುವ ನೆಪದಲ್ಲಿ ಚಲಿಸುತ್ತಿದ್ದ ಟೆಂಪೋದಲ್ಲಿ ವಿವಾಹಿತ ಮಹಿಳೆಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

    ಮಂಗಳವಾರ ಈ ಘಟನೆ ನಡೆದಿದೆ. 29 ವರ್ಷದ ಸಂತ್ರಸ್ತೆ ತನ್ನ ಪತಿಯೊಂದಿಗೆ ಜಗಳ ಮಾಡಿಕೊಂಡು ಮನೆಯಿಂದ ಹೊರಗಡೆ ಬಂದಿದ್ದಳು. ನಂತರ ಮನೆಯ ಹತ್ತಿರದ ದೇವಸ್ಥಾನವೊಂದಕ್ಕೆ ಹೋಗಿದ್ದಳು. ಅಲ್ಲಿ ಸ್ವಲ್ಪ ಹೊತ್ತು ಕುಳಿತುಕೊಂಡು ಸುಮಾರು ರಾತ್ರಿ 10ಗಂಟೆಗೆ ಮನೆಗೆ ವಾಪಸ್ ಹೋಗಲು ನಿರ್ಧಾರ ಮಾಡಿದ್ದಾಳೆ.

    ಕೊನೆಗೆ ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳ ಬಳಿ ಲಿಫ್ಟ್ ಕೇಳಿದ್ದಾಳೆ. ಆದರೆ ಯಾವ ವಾಹನವೂ ಡ್ರಾಪ್ ಕೊಡಲಿಲ್ಲ. ನಂತರ ಸಂತ್ರಸ್ತೆ ಹತ್ತಿರದಲ್ಲಿದ್ದ ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗಿ ಬಸ್‍ಗಾಗಿ ಕಾಯುತ್ತಿದ್ದಳು. ಮಧ್ಯರಾತ್ರಿ ವೇಳೆ ಬಸ್ ನಿಲ್ದಾಣದ ಬಳಿ ಒಂದು ಟೆಂಪೋ ಬಂದಿದ್ದು, ಅದರಲ್ಲಿದ್ದ ಚಾಲಕ ಮತ್ತು ಕ್ಲೀನರ್ ಸಂತ್ರಸ್ತೆಯನ್ನು ಮನೆಗೆ ಡ್ರಾಪ್ ಮಾಡುವುದಾಗಿ ಹೇಳಿದ್ದಾರೆ.

    ನಾವು ಅದೇ ಮಾರ್ಗವಾಗಿ ಹೋಗುತ್ತಿದ್ದೇವೆ ಎಂದು ಸಂತ್ರಸ್ತೆಯನ್ನು ವಾಹನದಲ್ಲಿ ಕೂರಿಸಿಕೊಂಡಿದ್ದಾರೆ. ಸಂತ್ರಸ್ತೆ ಮಹಿಳೆ ವಾಹನದಲ್ಲಿ ಕುಳಿತ ನಂತರ ಆರೋಪಿಗಳು ಬೇರೆ ಮಾರ್ಗದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಚಾಲಕ ಮತ್ತು ಕ್ಲೀನರ್ ನಿಂದ ಸಂತ್ರಸ್ತೆ ಹೇಗೋ ತಪ್ಪಿಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಂತ್ರಸ್ತೆಗೆ ಆರೋಪಿಗಳು ಕರೆದುಕೊಂಡು ಹೋಗಿದ್ದ ಸ್ಥಳ ನಿಖರವಾಗಿ ತಿಳಿದಿಲ್ಲ. ಆದರೆ ಅವರಿಂದ ತಪ್ಪಿಸಿಕೊಂಡು ಬಂದ ಸಂತ್ರಸ್ತೆ ಪಿಂಪ್ರಿ-ಚಿಂಚ್‍ವಾಡ್ ಪ್ರದೇಶಕ್ಕೆ ತಲುಪಿದ್ದಳು. ಅಲ್ಲಿ ಕಟ್ಟಡವೊಂದರ ಭದ್ರತಾ ಸಿಬ್ಬಂದಿಯ ಸಹಾಯ ಕೇಳಿದ್ದಾಳೆ. ಆಗ ಸೆಕ್ಯೂರಿಟಿ ಗಾರ್ಡ್ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾನೆ. ಸದ್ಯಕ್ಕೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಸನ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಆರೋಪಿಗಳಿಗೂ ಶೋಧ ಕಾರ್ಯಾ ನಡೆಯುತ್ತಿದೆ ಎಂದು ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

  • ಹುಲಿವೇಷಧಾರಿಗಳ ಟೆಂಪೋ ಪಲ್ಟಿ – ಓರ್ವ ಸಾವು, ಮೂವರಿಗೆ ಗಾಯ

    ಹುಲಿವೇಷಧಾರಿಗಳ ಟೆಂಪೋ ಪಲ್ಟಿ – ಓರ್ವ ಸಾವು, ಮೂವರಿಗೆ ಗಾಯ

    ಉಡುಪಿ: ಹುಲಿವೇಷಧಾರಿಗಳ ಟೆಂಪೋ ಪಲ್ಟಿಯಾಗಿ ಓರ್ವ ವೇಷಧಾರಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉಡುಪಿ ಸಂತೆಕಟ್ಟೆ ಸಮೀಪದ ನೇಜಾರಿನಲ್ಲಿ ನಡೆದಿದೆ.

    ಘಟನೆಯಲ್ಲಿ ಸಾವನ್ನಪ್ಪಿದ ಹುಲಿವೇಷಧಾರಿಯನ್ನು 22 ವರ್ಷದ ಸುಮಂತ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಮೂವರು ವೇಷಧಾರಿಗಳನ್ನು ಹತ್ತಿರದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಗಣೇಶ ಚತುರ್ಥಿ ಪ್ರಯುಕ್ತ ಹುಲಿವೇಷ ಹಾಕಿದ್ದ ತಂಡದಲ್ಲಿ ಸ್ಥಳೀಯ ಯುವಕರು ಮತ್ತು ಮಕ್ಕಳು ಕೂಡ ತಂಡದಲ್ಲಿದ್ದರು. ಈ ವೇಳೆ ನೇಜಾರು ಮಾರ್ಗದಲ್ಲಿ ಹೋಗುವಾಗ ಟೆಂಪೋ ಆಯತಪ್ಪಿ ಪಲ್ಟಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ. ಈ ಸಂಬಂಧ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

  • ಕಾರ್, ಟೆಂಪೋ ಡಿಕ್ಕಿ- ದಂಪತಿ ಸಾವು

    ಕಾರ್, ಟೆಂಪೋ ಡಿಕ್ಕಿ- ದಂಪತಿ ಸಾವು

    ತುಮಕೂರು: ಕಾರು ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಬಾಣವಾರ ಗೇಟ್ ಬಳಿ ನಡೆದಿದೆ.

    ದಂಪತಿ ಸಿಎಸ್ ಪುರದಿಂದ ತುಮಕೂರಿನತ್ತ ಬರುವಾಗ ತಡರಾತ್ರಿ ಈ ಘಟನೆ ನಡೆದಿದ್ದು, ಮೃತಪಟ್ಟ ದಂಪತಿಯನ್ನು ಗುಬ್ಬಿ ತಾಲೂಕಿನ ಸಿಎಸ್ ಪುರ ಗ್ರಾಮದವರಾದ 55 ವರ್ಷದ ರಾಮೇಗೌಡ ಮತ್ತು 50 ವರ್ಷದ ಹೇಮಾ ಎಂದು ಗುರುತಿಸಲಾಗಿದೆ.

    ಘಟನೆಯಲ್ಲಿ ಟೆಂಪೋ ಕಾರಿಗೆ ಗುದ್ದಿ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಟೆಂಪೋ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಚಾಲಕನ ಮೇಲೆ ಲಾಠಿ ಚಾರ್ಜ್- ಮೂವರು ಪೊಲೀಸರ ಅಮಾನತು

    ಚಾಲಕನ ಮೇಲೆ ಲಾಠಿ ಚಾರ್ಜ್- ಮೂವರು ಪೊಲೀಸರ ಅಮಾನತು

    ನವದೆಹಲಿ: ಟೆಂಪೋ ಚಾಲಕನ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

    ದೆಹಲಿಯ ಮುಖರ್ಜಿನಗರದಲ್ಲಿ ನಡೆದ ಅಪಘಾತದ ನಂತರ ಟೆಂಪೋ ಚಾಲಕ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಜಗಳ ತಾರಕ್ಕೇರಿದ ಪರಿಣಾಮ ಓರ್ವ ಅಧಿಕಾರಿ ಗಾಯಗೊಂಡಿದ್ದಾರೆ. ಈಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ವಿಡಿಯೋದಲ್ಲಿ ಹರಿತವಾದ ಆಯುಧವನ್ನು ಹಿಡಿದಿದ್ದ ವ್ಯಕ್ತಿಯನ್ನು ಪೊಲೀಸರು ಲಾಠಿಯಿಂದ ಥಳಿಸುತ್ತಿರುವುದು ಕಂಡು ಬಂದಿದೆ. ಅಲ್ಲದೆ ತಂದೆಯನ್ನು ಸಂಭಾಳಿಸಲು ಪ್ರಯತ್ನಿಸುತ್ತಿದ್ದ ಚಾಲಕನ ಮಗನ ಮೇಲೆ ಕೂಡ ಪೊಲೀಸರು ದೌರ್ಜನ್ಯವೆಸಗಿದ್ದಾರೆ. ಆದರೆ ಚಾಲಕ ರಸ್ತೆಯಲ್ಲಿ ಗಾಡಿಯನ್ನು ಬಹಳ ಅಪಾಯಾಕಾರಿ ರೀತಿಯಲ್ಲಿ ಚಲಾಯಿಸುತ್ತಿದ್ದ ಮತ್ತು ಪೊಲೀಸ್ ಅಧಿಕಾರಿಯ ತಲೆಗೆ ಆಯುಧದಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ತಕ್ಷಣವೇ ಈ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಚಾಲಕ ಧರಿಸಿದ್ದ ರುಮಾಲಿನ ಕಾರಣದಿಂದ ಹಲ್ಲೆಗೊಳಗಾಗಿದ್ದು ಎಂದು ಬಿಜೆಪಿ ಶಾಸಕ ಮನ್‍ಜೀಂದ್ರನ್ ಸಿಂಗ್ ಆರೋಪಿಸಿದ್ದಾರೆ. ಅಲ್ಲದೆ ಕೆಲ ನಾಯಕರು ಮುಖರ್ಜಿನಗರದ ಪೊಲೀಸ್ ಠಾಣೆಯ ಎದುರು ರಾತ್ರಿಯ ತನಕ ಪ್ರತಿಭಟನೆ ನಡೆಸಿದ್ದಾರೆ. ವರದಿಗಳ ಪ್ರಕಾರ ಸಿಂಗ್ ದೌರ್ಜನ್ಯವೆಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.

    ಖಾಸಗಿ ವಾಹಿನಿಯ ಮಾಹಿತಿಯ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.