Tag: ಟೆಕ್ಕಿ

  • Kurnool Bus Fire | ಬೆಂಗಳೂರಿನ ಇಬ್ಬರು ಟೆಕ್ಕಿಗಳ ದುರಂತ ಸಾವು

    Kurnool Bus Fire | ಬೆಂಗಳೂರಿನ ಇಬ್ಬರು ಟೆಕ್ಕಿಗಳ ದುರಂತ ಸಾವು

    – ದೀಪಾವಳಿ ಹಬ್ಬ ಮುಗಿಸಿಕೊಂಡು ಬರ್ತಿದ್ದ ಸಾಫ್ಟ್‌ವೇರ್‌ ಎಂಜಿನಿಯರ್‌ ಅನುಷಾ

    ಹೈದರಾಬಾದ್‌/ಬೆಂಗಳೂರು: ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್‌ ದುರಂತದಲ್ಲಿ (Kurnool Bus Fire) ಬೆಂಗಳೂರಿನ (Bengaluru) ಇಬ್ಬರು ಸಾಫ್ಟ್‌ವೇರ್‌ ಎಂಜಿನಿಯರ್‌ ಕೂಡ ಸಾವನ್ನಪ್ಪಿದ್ದಾರೆ.

    ಎಂಜಿನಿಯರ್‌ಗಳಾದ (Software Engineer) ಅನುಷಾ, ಗನ್ನಮನೇನಿ ಧಾತ್ರಿ (ಜಿ.ಧಾತ್ರಿ) ಮೃತ ದುರ್ದೈವಿಗಳು. ಇದನ್ನೂ ಓದಿ: Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂಬ

    ದೀಪಾವಳಿ ಮುಗಿಸಿಕೊಂಡು ಬರ್ತಿದ್ದ ಅನುಷಾ
    ಮಹೇಶ್ವರಂ ಅನುಷಾ ರೆಡ್ಡಿ ಮೂಲತಃ ಯದಾದ್ರಿ ಭುವನಗಿರಿ ಜಿಲ್ಲೆಯ ವಸ್ತಕೊಂಡೂರು ಗ್ರಾಮದವರು. ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡಿಕೊಂಡಿದ್ದರು. ದೀಪಾವಳಿ ಹಬ್ಬ ಮುಗಿಸಿ ಬರುತ್ತಿದ್ದ ಅನುಷಾ ಇಂದು ಬೆಳಗ್ಗಿನ ಜಾವ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಸಾಫ್ಟ್‌ವೇರ್‌ ಎಂಜಿನಿಯರ್ ಧಾತ್ರಿ
    ಗನ್ನಮನೇನಿ ಧಾತ್ರಿ (ಜಿ.ಧಾತ್ರಿ) ಬಾಪಟ್ಲ ಜಿಲ್ಲೆಯವರು. ಮಾವನ ಮನೆಯಿಂದ ಬೆಂಗಳೂರಿಗೆ ವಾಪಸ್‌ ಬರುತ್ತಿದ್ದ ವೇಳೆ ಸಾವನ್ನಪ್ಪಿದ್ದು, ಬದುಕು ದುರಂತ ಅಂತ್ಯಕಂಡಿದೆ. ಇದನ್ನೂ ಓದಿ: ಬೈಕ್‌ ಡಿಕ್ಕಿ, ಧಗಧಗಿಸಿದ ಬೆಂಗಳೂರಿಗೆ ಬರುತ್ತಿದ್ದ ಬಸ್ಸು – 20ಕ್ಕೂ ಹೆಚ್ಚು ಮಂದಿ ಸಜೀವ ದಹನ

    ಬೆಂಗಳೂರಿಗೆ ಬರುತ್ತಿದ್ದ ಬಸ್‌ನಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು 41 ಮಂದಿ ಪ್ರಯಾಣಿಕರಿದ್ದರು. 20 ಪ್ರಯಾಣಿಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈವರೆಗೆ 11 ಮೃತದೇಹಗಳನ್ನ ಹೊರ ತೆಗೆಯಲಾಗಿದ್ದು, ಮೃತದೇಹ ಪತ್ತೆಹಚ್ಚುವ ಕಾರ್ಯವೂ ನಡೆದಿದೆ. ವಿಧಿವಿಜ್ಞಾನ ತಜ್ಞರು ಮೃತ ದೇಹಗಳ ಮಾದರಿಗಳನ್ನು ಸಂಗ್ರಹಿಸಿ ಡಿಎನ್‌ಎ ಪರೀಕ್ಷೆಗಳನ್ನು ನಡೆಸಿದ ನಂತರ ಪೊಲೀಸರು ಮೃತರ ವಿವರಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸುವ ಸಾಧ್ಯತೆಯಿದೆ. ಘಟನಾ ಸ್ಥಳದಿಂದ ಡ್ರೈವರ್‌ ಎಸ್ಕೇಪ್‌ ಆಗಿದ್ದು, ನಿರ್ವಾಹಕನನ್ನ ವಶಕ್ಕೆ ಪಡೆಯಲಾಗಿದೆ.

    ಬಸ್‌ನಲ್ಲಿದ್ದವರ ಪಟ್ಟಿ:
    ಅಶ್ವಿನ್ ರೆಡ್ಡಿ (36), ಜಿ.ಧಾತ್ರಿ (27), ಕೀರ್ತಿ (30), ಪಂಕಜ್ (28), ಯುವನ್ ಶಂಕರ್ ರಾಜು (22), ತರುಣ್ (27), ಆಕಾಶ್ (31), ಗಿರಿರಾವ್ (48), ಬುನ್ಸಾಯ್ (33), ಗಣೇಶ್ (30), ಜಯಂತ್ ಪುಷ್ವಾಹ (27), ಪಿಲ್ವಾಮಿನ್ ಬೇಬಿ (30), ರಮೇಶ್ ಕುಮಾರ್ (30) ಮತ್ತು ಅವರ ಕುಟುಂಬದವರು (64), ಕೆ. ಅನುಷಾ (22), ಮೊಹಮ್ಮದ್ ಕೈಸರ್ (51), ದೀಪಕ್ ಕುಮಾರ್ (24), ಆಂದೋಜ್ ನವೀನ್ ಕುಮಾರ್ (26), ಪ್ರಶಾಂತ್ (32), ಎಂ. ಸತ್ಯನಾರಾಯಣ (28), ಮೇಘನಾಥ್ (25), ವೇಣು ಗುಂಡ (33), ಚರಿತ್ (21), ಚಂದನ ಮಂಗ (23), ಸಂಧ್ಯಾರಾಣಿ ಮಂಗಾ (43), ಗ್ಲೋರಿಯಾ (24), ಎಲ್ಲೆಸಾ ಎಸ್. ಶ್ರೀಹರ್ಷ (24), ಶಿವ (24), ಶ್ರೀನಿವಾಸ ರೆಡ್ಡಿ (40), ಸುಬ್ರಹ್ಮಣ್ಯಂ (26), ಕೆ. ಅಶೋಕ್ (27), ಎಂ.ಜಿ. ರಾಮ ರೆಡ್ಡಿ (50), ಉಮಾಪತಿ (32), ಅಮೃತ್ ಕುಮಾರ್ (18), ವೇಣುಗೋಪಾಲ್ ರೆಡ್ಡಿ (24).

    ತುರ್ತು ನಿರ್ಗಮನ ದ್ವಾರದ ಮುರಿದು ಎಸ್ಕೇಪ್ ಆದವರು
    ಜಯಸೂರ್ಯ, ರಾಮಿರೆಡ್ಡಿ, ಅಕಿರಾ, ವೇಣುಗೋಪಾಲ್ ರೆಡ್ಡಿ, ಹರಿಕಾ, ಸತ್ಯನಾರಾಯಣ, ಶ್ರೀಲಕ್ಷ್ಮಿ, ನವೀನ್ ಕುಮಾರ್, ಅಖಿಲ್, ಜಸ್ಮಿತಾ, ರಮೇಶ್ ಮತ್ತು ಸುಬ್ರಹ್ಮಣ್ಯಂ.

  • ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ – ಟೆಕ್ಕಿ ಪತಿಯನ್ನೇ ಹತ್ಯೆಗೈದ ಪತ್ನಿ!

    ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ – ಟೆಕ್ಕಿ ಪತಿಯನ್ನೇ ಹತ್ಯೆಗೈದ ಪತ್ನಿ!

    ಬೆಂಗಳೂರು: ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಪತ್ನಿಯೇ (Wife) ಪತಿಯನ್ನು ಕೊಲೆ ಮಾಡಿದ ಘಟನೆ ಸುದ್ದಗುಂಟೆ ಪಾಳ್ಯದಲ್ಲಿ ನಡೆದಿದೆ.

    ಭಾಸ್ಕರ್(41) ಕೊಲೆಯಾದ ವ್ಯಕ್ತಿ. ಭಾಸ್ಕರ್‌ ಸಾಫ್ಟ್‌ವೇರ್‌ ಕಂಪನಿಯೊಂದರಲ್ಲಿ (Software Company) ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಶ್ರುತಿ  ಪತಿಯನ್ನು ಕೊಲೆ ಮಾಡಿದ್ದು ಪೊಲೀಸರು ಈಗ ಬಂಧಿಸಿದ್ದಾರೆ.

    ಮನೆಗೆಲಸದವಳ ಜೊತೆ ಭಾಸ್ಕರ್ ಹೆಚ್ಚು ಸಲುಗೆಯಿಂದ ಇದ್ದರು. ಈ ಕಾರಣಕ್ಕೆ ಸಾಕಷ್ಟು ಬಾರಿ ಗಂಡ- ಹೆಂಡತಿ ನಡುವೆ ಕಲಹ ಉಂಟಾಗಿತ್ತು. ಎರಡು ದಿನದ ಹಿಂದೆ ರಾತ್ರಿ ಇದೇ ಕಾರಣಕ್ಕೆ ಗಲಾಟೆ ಶುರುವಾಗಿತ್ತು. ಗಲಾಟೆ ವೇಳೆ ಗಂಡನ ಮುಖಕ್ಕೆ ಬಲವಾಗಿ ಶ್ರುತಿ ಹೊಡೆದಿದ್ದಳು. ಇದರಿಂದ ಸ್ಥಳದಲ್ಲಿಯೇ ಭಾಸ್ಕರ್‌ ಮೃತಪಟ್ಟಿದ್ದರು.  ಇದನ್ನೂ ಓದಿ: ಉಡುಪಿ | `ರಕ್ತಕ್ಕೆ ರಕ್ತವೇ ಬೇಕು’ ಅಂತ ಸ್ಟೇಟಸ್ ಹಾಕಿದ್ದ ಯುವಕ ಅರೆಸ್ಟ್

     

    ಗಂಡನ ಕೊಂದು ಪೊಲೀಸರ ಮುಂದೆ ಶ್ರುತಿ ಕಥೆ ಕಟ್ಟಿದ್ದಳು. ಗಂಡ ಕುಡಿದು ಬಂದು ಬಾತ್ ರೂಮಿನಲ್ಲಿ ಬಿದ್ದು ಗಾಯಗೊಂಡಿದ್ದರು. ನಾನು ಅವರಿಗೆ ಸ್ನಾನ ಮಾಡಿಸಿ ಮಲಗಿಸಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ಹೇಳಿದ್ದಳು.

    ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದ ಎಸ್‌ಜಿ ಪಾಳ್ಯ ಪೊಲೀಸರು ತನಿಖೆ ಆರಂಭಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ (Post ortem Report) ಮುಖಕ್ಕೆ ಮತ್ತು ದೇಹಕ್ಕೆ ಯಾವುದೋ ವಸ್ತುವಿನಿಂದ ಹೊಡೆದಿರುವ ವಿಚಾರ ಬೆಳಕಿಗೆ ಬಂದಿತ್ತು. ಅನುಮಾನ ಬಂದ ಹಿನ್ನೆಲೆಯಲ್ಲಿ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಶ್ರುತಿ ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: ರಸ್ತೆಬದಿ ನಡೆದುಕೊಂಡು ಹೋಗ್ತಿದ್ದ 10ರ ಬಾಲಕನ ಮೇಲೆ ಹರಿದ ಕಾರು – ಸ್ಥಳದಲ್ಲೇ ಸಾವು

    ಮೊದಲನೇ ಪತ್ನಿಗೆ ಡಿವೋರ್ಸ್‌ ಕೊಟ್ಟಿದ್ದ ಭಾಸ್ಕರ್‌ ಶ್ರುತಿಯನ್ನು ಮದುವೆಯಾಗಿದ್ದರು. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಶ್ರುತಿ ಕೋಪಕ್ಕೆ ಕಾರಣವಾಗಿತ್ತು. ಸಂಬಳ ಅಲ್ಲದೇ ಮನೆ ಬಾಡಿಗೆಯಿಂದಲೇ ತಿಂಗಳಿಗೆ 1.15 ಲಕ್ಷ ರೂ. ಆದಾಯ ಬರುತ್ತಿತ್ತು. ಬಂದ ಹಣವನ್ನು ಭಾಸ್ಕರ್‌ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ನೀಡುತ್ತಿದ್ದರು. ಕಳೆದ ಒಂದು ತಿಂಗಳಿನಿಂದ ಭಾಸ್ಕರ್‌ ನಿವಾಸಕ್ಕೆ ಬಾರದೇ ಸ್ನೇಹಿತೆಯ ಮನೆಯಲ್ಲೇ ಇರುತ್ತಿದ್ದರು. ಎರಡು ದಿನದ ಹಿಂದೆ ಮನೆಗೆ ಬಂದಾಗ ಪತ್ನಿ ಶ್ರುತಿ  ಈ ವಿಚಾರವನ್ನು ಪ್ರಸ್ತಾಪಿಸಿದ್ದಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಗೆ ತಿರುಗಿ ಶ್ರುತಿ  ಪತಿಯನ್ನೇ ಹತ್ಯೆ ಮಾಡಿದ್ದಾಳೆ.

  • ಕೊರಿಯರ್‌ ಕೊಡುವ ನೆಪದಲ್ಲಿ ಬಂದು ಟೆಕ್ಕಿ ಮೇಲೆ ಅತ್ಯಾಚಾರ – ಮುಖಕ್ಕೆ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿ ಕುಕೃತ್ಯ

    ಕೊರಿಯರ್‌ ಕೊಡುವ ನೆಪದಲ್ಲಿ ಬಂದು ಟೆಕ್ಕಿ ಮೇಲೆ ಅತ್ಯಾಚಾರ – ಮುಖಕ್ಕೆ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿ ಕುಕೃತ್ಯ

    ಮುಂಬೈ: ಕೊರಿಯರ್‌ ಕೊಡುವ ನೆಪದಲ್ಲಿ ಬಂದು ಮಹಿಳಾ ಟೆಕ್ಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಪುಣೆಯ (Pune) ಕೊಂಢವಾದಲ್ಲಿ ನಡೆದಿದೆ.

    ಕೊಂಢವಾ ವಸತಿ ಸೊಸೈಟಿಯ ಮನೆಯಲ್ಲಿ ಒಂಟಿಯಾಗಿದ್ದ 22 ವರ್ಷದ ಟೆಕ್ಕಿ ಮೇಲೆ ಕೊರಿಯರ್‌ ಕೊಡುವ ನೆಪದಲ್ಲಿ ಬಂದಾತ ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬೈಕ್‌ಗೆ ಟ್ರ್ಯಾಕ್ಟರ್‌  ಡಿಕ್ಕಿ – ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸಾವು

    ಘಟನೆ ರಾತ್ರಿ 7:30 ರ ಸುಮಾರಿಗೆ ನಡೆದಿದೆ. ಟೆಕ್ಕಿ ತನ್ನ ಬಾಡಿಗೆ ಫ್ಲಾಟ್‌ನಲ್ಲಿ ಒಬ್ಬಂಟಿಯಾಗಿದ್ದಳು. ಆಕೆಯ ಸಹೋದರ ಹೊರಗೆ ಹೋಗಿದ್ದ. ಆರೋಪಿಯು ಕೊರಿಯರ್‌ ನೆಪದಲ್ಲಿ ಆಕೆಯ ಅಪಾರ್ಟ್‌ಮೆಂಟ್‌ಗೆ ಬಂದಿದ್ದ. ನಾನು ಏನನ್ನೂ ಬುಕ್‌ ಮಾಡಿಲ್ಲ ಎಂದು ಆಕೆ ಸ್ಪಷ್ಟಪಡಿಸಿದ್ದಾರೆ. ಆದರೂ, ನಿಮ್ಮ ಸಹಿ ಬೇಕಿದೆ ಎಂದು ಆತ ಕೇಳಿದ್ದಾನೆ.

    ಸಹಿ ಹಾಕಲು ಆಕೆ ಬಾಗಿಲು ತೆರೆದಾಗ, ಆರೋಪಿಯು ಅವಳ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿದ್ದಾನೆ. ನಂತರ ಫ್ಲಾಟ್‌ಗೆ ನುಗ್ಗಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತೆ ಐಟಿ ವಲಯದಲ್ಲಿ ಕೆಲಸ ಮಾಡುತ್ತಿದ್ದಳು. ಕುಕೃತ್ಯದ ಬಳಿಕ ಆರೋಪಿಯು, ‘ಈ ಬಗ್ಗೆ ಯಾರಿಗೂ ಹೇಳಬೇಡ. ಮತ್ತೆ ಬರುವೆ’ ಮೊಬೈಲ್‌ನಲ್ಲಿ ಸಂದೇಶ ಬಿಟ್ಟು ಹೋಗಿದ್ದಾನೆ. ಅಲ್ಲದೇ, ಸಂತ್ರಸ್ತೆಯೊಂದಿಗೆ ಸೆಲ್ಫಿ ಕೂಡ ಕ್ಲಿಕ್ಕಿಸಿಕೊಂಡಿದ್ದಾನೆ. ಇದನ್ನೂ ಓದಿ: ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ – ಹೊರಟ್ಟಿ

    ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಸರಾಂತ ಸಂಸ್ಥೆಯಲ್ಲಿ ಐಟಿ ವೃತ್ತಿಪರರಾಗಿರುವ ಆ ಮಹಿಳೆ ಮೂಲತಃ ಅಕೋಲಾದವರು. ಅವರು ನಗರದ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿರುವ ತಮ್ಮ ಕಿರಿಯ ಸಹೋದರನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಪೂರ್ವ ಪ್ರದೇಶ) ಮನೋಜ್ ಪಾಟೀಲ್ ತಿಳಿಸಿದ್ದಾರೆ.

  • ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿ ವೀಡಿಯೋ ರೆಕಾರ್ಡ್ – ಟೆಕ್ಕಿ ಅರೆಸ್ಟ್

    ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿ ವೀಡಿಯೋ ರೆಕಾರ್ಡ್ – ಟೆಕ್ಕಿ ಅರೆಸ್ಟ್

    ಬೆಂಗಳೂರು: ರಹಸ್ಯವಾಗಿ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿ ವೀಡಿಯೋ ರೆಕಾರ್ಡ್ ಮಾಡುತ್ತಿದ್ದ ಟೆಕ್ಕಿಯನ್ನು (Techie) ಎಲೆಕ್ಟ್ರಾನಿಕ್ ಸಿಟಿ ಪೊಲೀಸರು (Electronic City Police) ಬಂಧಿಸಿದ್ದಾರೆ.

    ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಆಂಧ್ರಪ್ರದೇಶ (Andhra Pradesh) ಮೂಲದ ಸ್ವಪ್ನಿಲ್ ನಾಗೇಶ್ ಮಲಿ (28) ಬಂಧಿತ ಟೆಕ್ಕಿ. ಇದನ್ನೂ ಓದಿ: I Stand By My Words, ಡಿಕೆಶಿಗೂ ಅವಕಾಶ ಸಿಗಲಿ – ಇಕ್ಬಾಲ್ ಹುಸೇನ್

    ಆರೋಪಿಯು ಕಂಪನಿಯ ಪಕ್ಕದ ಶೌಚಾಲಯದ ಕಮೋಡ್ ಮೇಲೆ ನಿಂತು ರಹಸ್ಯವಾಗಿ ಮೊಬೈಲ್‌ನಲ್ಲಿ ಮಹಿಳೆಯ ವೀಡಿಯೋ ಮಾಡುತ್ತಿದ್ದು, ಅದರ ಪ್ರತಿಬಿಂಬ ಎದುರುಗಡೆಯ ಬಾಗಿಲು ಮೇಲೆ ಕಾಣಿಸಿತ್ತು. ಇದನ್ನು ಕಂಡ ಮಹಿಳೆ ಕೂಡಲೇ ಹೊರಬಂದು ನೋಡಿದಾಗ ಇನ್ನೋರ್ವ ಮಹಿಳಾ ಸಿಬ್ಬಂದಿ ಮಾತ್ರ ಕಾಣಿಸಿದ್ದರು. ಇದನ್ನೂ ಓದಿ: ಕೈ ಕೊಟ್ಟ ಪ್ರೀತಿಸಿದ ಹುಡುಗಿ – ಮನನೊಂದು ಯುವಕ ನೇಣಿಗೆ ಶರಣು

    ಬಳಿಕ ಶೌಚಾಲಯದ ಒಳ ಹೋಗಿ ಪರಿಶೀಲಿಸಿದಾಗ ಆರೋಪಿಯು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ. ಈ ವೇಳೆ ಮಹಿಳೆಯು ಕಿರುಚಾಡಿದಾಗ ಆರೋಪಿಯು ಕ್ಷಮೆಯಾಚಿಸಿದ್ದ. ಬಳಿಕ ಕಂಪನಿಯ ಹೆಚ್.ಆರ್ ಸಿಬ್ಬಂದಿ ಆರೋಪಿಯ ಮೊಬೈಲ್ ಪರಿಶೀಲನೆ ಮಾಡಿದಾಗ ಸುಮಾರು 30ಕ್ಕೂ ಅಧಿಕ ಮಹಿಳೆಯರ ವಿಡಿಯೋ ಪತ್ತೆಯಾಗಿತ್ತು. ಇದನ್ನೂ ಓದಿ: 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ರೈಲ್ವೆ ಟ್ರ‍್ಯಾಕ್‌ನಲ್ಲಿ ಶವವಾಗಿ ಪತ್ತೆ

    ಇಷ್ಟಾದರೂ ಕಂಪನಿಯ ಆಡಳಿತ ಮಂಡಳಿಯು ಆರೋಪಿಯಿಂದ ಕ್ಷಮೆ ಕೇಳಿಸಿ ಸುಮ್ಮನಾಗಿತ್ತು. ಈ ವಿಚಾರ ತಿಳಿದ ಮಹಿಳಾ ಉದ್ಯೋಗಿಯ ಪತಿ, ಕಂಪನಿ ವಿರುದ್ಧ ಆಕ್ರೋಶ ಹೊರಹಾಕಿ, ಗಲಾಟೆ ಮಾಡಿದ್ದರು. ಅಲ್ಲದೇ ಮಂಗಳವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಪೊಲೀಸರು ದೂರನ್ನಾಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

  • ಲವ್ ಫೇಲ್ ಆದ ಕೋಪಕ್ಕೆ ಉಡುಪಿ ಸೇರಿ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿ ಅರೆಸ್ಟ್

    ಲವ್ ಫೇಲ್ ಆದ ಕೋಪಕ್ಕೆ ಉಡುಪಿ ಸೇರಿ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿ ಅರೆಸ್ಟ್

    ಚೆನ್ನೈ/ಉಡುಪಿ: ಉಡುಪಿ (Udupi) ಶಾಲೆ ಸೇರಿದಂತೆ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿ ಯುವತಿಯೊಬ್ಬಳನ್ನು ಚೆನ್ನೈನಲ್ಲಿ (Chennai Techie) ಪೊಲೀಸರು ಬಂಧಿಸಿದ್ದಾರೆ.

    ಚೆನ್ನೈ ಮೂಲದ ರಿನಾ ಜೊಶಿಲ್ಡಾ ಬಂಧಿತ ಆರೋಪಿ. ಈಕೆ ತಾನು ಪ್ರೀತಿಸುತ್ತಿದ್ದ ವ್ಯಕ್ತಿ ತನ್ನನ್ನು ಒಪ್ಪಿಕೊಳ್ಳದ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಈ ರೀತಿಯ ಕೃತ್ಯ ಎಸಗಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.‌ ಇದನ್ನೂ ಓದಿ: ಇನ್ನೊಬ್ಬಳೊಂದಿಗೆ ಮದುವೆ ಫಿಕ್ಸ್ ಆಗಿದ್ದಕ್ಕೆ ಜಗಳ – ಬುರ್ಖಾ ಧರಿಸಿ ಬಂದು 5ನೇ ಮಹಡಿಯಿಂದ ತಳ್ಳಿ ಪ್ರೇಯಸಿಯ ಕೊಲೆ

    ಇಂಜಿನಿಯರಿಂಗ್ ಮಾಡಿದ್ದ ಯುವತಿ ರಿನಾ, ಉಡುಪಿಯ ವಿದ್ಯೋದಯ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಳು. ತನಿಖೆ ವೇಳೆ ಆಕೆ ಹೆಸರು ಪತ್ತೆಯಾಗಿ ರಿನಾಳನ್ನು ಚೆನ್ನೈನಲ್ಲಿ ಅರೆಸ್ಟ್ ಮಾಡಲಾಗಿದೆ. ಬಾಂಬ್ ಬೆದರಿಕೆ ಹಿನ್ನೆಲೆ ಉಡುಪಿ ಪೊಲೀಸರು ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಕಸ್ಟಡಿ ಪಡೆಯುವ ಸಾಧ್ಯತೆ ಇದೆ.

    ಜೂ.16ರಂದು ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇಮೇಲ್‌ನಲ್ಲಿ, ‘ನಿಮ್ಮ ಶಾಲೆಯಲ್ಲಿ ಬಾಂಬ್ ಸ್ಫೋಟಿಸಿದರೆ ಮಕ್ಕಳು ಸಾಯುತ್ತಾರೆ. ಮಕ್ಕಳು ಸತ್ತರೆ ಮಾತ್ರ ಪೋಷಕರು ಪ್ರತಿಭಟನೆ ಮಾಡುತ್ತಾರೆ. ಪೊಲೀಸರು ಸರಿಯಾದ ತನಿಖೆ ನಡೆಸಿ ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತಾರೆ ಎಂದು ಇಮೇಲ್ ಕಳುಹಿಸಿದ್ದಾಳೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತುರ್ತು ಪರಿಸ್ಥಿತಿ ಕಾಂಗ್ರೆಸ್‌ನ ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯ ಪ್ರತಿಬಿಂಬವಾಗಿತ್ತು: ಅಮಿತ್ ಶಾ

    ಗುಜರಾತ್, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇದೇ ರೀತಿಯ ಇಮೇಲ್ ಸಂದೇಶವನ್ನು ಆರೋಪಿ ರಿನಾ ಕಳುಹಿಸಿದ್ದಾಳೆ. ಶಾಲೆಗಳು, ಆಸ್ಪತ್ರೆಗಳು ಮತ್ತು ಕ್ರೀಡಾಂಗಣಗಳಿಗೆ ಬಾಂಬ್ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಆಕೆಯ ಬಂಧನವಾಗಿದೆ.

    ಚೆನ್ನೈನಲ್ಲಿ ಇಂಜಿನಿಯರ್ ಆಗಿರುವ ಆರೋಪಿ ರೀನಾಳನ್ನು, ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಕಸ್ಟಡಿಗೆ ಮನವಿ ಉಡುಪಿ ಪೊಲೀಸರು ಮನವಿ ಮಾಡಿದ್ದಾರೆ. ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ನಮ್ಮ ಕಸ್ಟಡಿಗೆ ನೀಡಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಪತ್ರ ಬರೆದಿದ್ದಾರೆ.

    ಲವ್ ಫೇಲ್ ಕೋಪಕ್ಕೆ ಕೃತ್ಯ!?
    ರಿನಾ ಒಬ್ಬ ಹುಡುಗನನ್ನು ಪ್ರೀತಿಸುತ್ತಿದ್ದಳು. ಆದರೆ, ರಿನಾಳನ್ನು ಪ್ರಿಯಕರ ಒಪ್ಪದೇ ಬೇರೆ ಹುಡುಗಿ ಕೈಹಿಡಿದಿದ್ದಾನೆ. ಇದರಿಂದ ಕುಪಿತಳಾದ ರೆನಾ ತನ್ನ ತಾಂತ್ರಿಕ ಪರಿಣತಿಯಿಂದ ನಕಲಿ ಇಮೇಲ್ ಖಾತೆಗಳನ್ನು ತೆರೆದು, ತನ್ನನ್ನು ನಿರ್ಲಕ್ಷಿಸಿದ ಪ್ರಿಯಕರನ ಹೆಸರಲ್ಲಿ ದೇಶದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ರವಾನಿಸಿದ್ದಳು.

  • ಮಹಾರಾಷ್ಟ್ರದ ಇಂದ್ರಯಾಣಿ ನದಿ ಸೇತುವೆ ಕುಸಿತ – ಕರ್ನಾಟಕದ ಟೆಕ್ಕಿ ಸಾವು

    ಮಹಾರಾಷ್ಟ್ರದ ಇಂದ್ರಯಾಣಿ ನದಿ ಸೇತುವೆ ಕುಸಿತ – ಕರ್ನಾಟಕದ ಟೆಕ್ಕಿ ಸಾವು

    ಚಿಕ್ಕೋಡಿ: ಮಹಾರಾಷ್ಟ್ರದ (Maharashtra) ಪುಣೆಯ ಇಂದ್ರಯಾಣಿ ನದಿಯ (Indrayani River) ಸೇತುವೆ ಕುಸಿದು ದುರಂತದಲ್ಲಿ ವೀಕೆಂಡ್ ಮಸ್ತಿಗಾಗಿ ಹೋಗಿದ್ದ ಕರ್ನಾಟಕ (Karntaka) ಮೂಲದ ಟೆಕ್ಕಿ (Techie)  ಸಾವನ್ನಪ್ಪಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ರಾಯಭಾಗ ತಾಲೂಕಿನ ನಸಲಾಪುರ ಗ್ರಾಮದ ಚೇತನ್ ಚಾವರೇ (22) ಸೇತುವೆ ದುರಂತದಲ್ಲಿ ಮೃತಪಟ್ಟ ಟೆಕ್ಕಿ.  ಇದನ್ನೂ ಓದಿ: ರ‍್ಯಾಪಿಡೊ ಚಾಲಕನಿಂದ ಹಲ್ಲೆ – ಒಂದೇ ಏಟಿಗೆ ಕೆಳಗೆ ಬಿದ್ದ ಯುವತಿ, ಸ್ಥಳೀಯರಿಂದ ರಕ್ಷಣೆ

    ಪುಣೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ಚಾವರೇ ಅವರು ಸ್ನೇಹಿತರ ಜೊತೆಗೆ ಭಾನುವಾರ ಬೆಳಗ್ಗೆ ಇಂದ್ರಯಾಣಿ ನದಿ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಸೇತುವೆ ಕುಸಿದು ಚೇತನ್ ಕೊಚ್ಚಿ ಹೋಗಿದ್ದರು. ಭಾನುವಾರವೇ ಚೇತನ್ ಶವ ಪತ್ತೆಯಾಗಿತ್ತು. ಇದನ್ನೂ ಓದಿ: ಕಲಬುರಗಿ | ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶ ಸಾವು

    ಈಗಾಗಲೇ ಆರು ಜನರ ಶವ ಪತ್ತೆಯಾಗಿದ್ದು, ಮೃತದೇಹಗಳನ್ನು ಮಹಾರಾಷ್ಟ್ರ ಸರ್ಕಾರ ಮೃತರ ಕುಟುಂಬಕ್ಕೆ ಹಸ್ತಾಂತರ ಮಾಡಿದೆ. ಚೇತನ್ ಕುಟುಂಬಸ್ಥರು ಇಂದು ಬೆಳಗ್ಗೆ ನಸಲಾಪುರ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಿದರು. ಈ ದುರ್ಘಟನೆಯಲ್ಲಿ 25ಕ್ಕೂ ಅಧಿಕ ಜನರು ಕೊಚ್ಚಿ ಹೋಗಿರುವ ಮಾಹಿತಿ ಲಭ್ಯವಾಗಿದ್ದು, ಇನ್ನುಳಿದ ಮೃತದೇಹಗಳಿಗೆ ಶೋಧ ಕಾರ್ಯ ಮುಂದುವರೆದಿದೆ.

  • ಜಾತ್ರೆಯಲ್ಲಿ ಲವ್‌… ಓಯೋ ರೂಮಲ್ಲಿ ಕೆಲಸ ಮುಗಿದ್ಮೇಲೆ ಆಂಟಿಯನ್ನ ಇರಿದು ಕೊಂದ ಟೆಕ್ಕಿ

    ಜಾತ್ರೆಯಲ್ಲಿ ಲವ್‌… ಓಯೋ ರೂಮಲ್ಲಿ ಕೆಲಸ ಮುಗಿದ್ಮೇಲೆ ಆಂಟಿಯನ್ನ ಇರಿದು ಕೊಂದ ಟೆಕ್ಕಿ

    – ನನಗೆ ಸಿಕ್ಕವಳು ಬೇರೆ ಯಾರಿಗೂ ಸಿಗಬಾರ್ದು ಅಂತ ಸೈಕೋ ವರ್ತನೆ
    – ಅಂದಕ್ಕೂ ಐಶ್ವರ್ಯಕ್ಕೂ ಕಡಿಮೆಯಿಲ್ಲದ ಸುಂದ್ರಿ ಟೆಕ್ಕಿ ಪ್ರೀತಿ ಆಸೆಗೆ ಬಿದ್ದು ಹೆಣವಾದ್ಲು

    ಬೆಂಗಳೂರು: ಸೌಂದರ್ಯದ ಖನಿ ಅವಳು… ರೂಪ ಲಾವಣ್ಯದಲ್ಲಾಗಲಿ.. ಅಂದ – ಐಶ್ವರ್ಯದಲ್ಲಾಗಲಿ ಯಾರಿಗೇನು ಕಡಿಮೆ ಇರಲಿಲ್ಲ. ಗಂಡ ಇಬ್ಬರು ಹೆಣ್ಣುಮಕ್ಕಳಿದ್ದ ಸುಂದರ ಸಂಸಾರದಲ್ಲಿ ಯುವಕನೊಂದಿಗೆ ಪ್ರೇಮ, ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಪ್ರಿಯಕರನಿಂದಲೇ (Lover) ಮಂಚದ ಮೇಲೆ ಹೆಣವಾದಳು ಸುಂದ್ರಿ.. ಏನಿದು ಥ್ರಿಲ್ಲಿಂಗ್‌ ಸ್ಟೋರಿ ಅಂತೀರಾ ಮುಂದೆ ಓದಿ…

    ಹೌದು… ಬೆಂಗಳೂರಿನ (Bengaluru) ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿ ಓಯೋ ರೂಮಿನಲ್ಲಿ ಹತ್ಯೆಗೀಡಾದ ಗೃಹಿಣಿ ಹರಿಣಿ ವಯಸ್ಸು 35 ಆದ್ರೂ ನೋಡೋಕೆ ರೂಪವತಿ. ಮನೆ ಕಡೆಯೂ ಸಾಕಷ್ಟು ಸ್ಥಿತಿವಂತರಾಗಿದ್ರು. ಕೋಟಿ ಕೋಟಿ ಆಸ್ತಿ ಇರೋ ಈ ಹರಿಣಿಗೆ ಊರ ಜಾತ್ರೆಯಲ್ಲಿ 25 ವರ್ಷದ ಟೆಕ್ಕಿ ಯಶಸ್ ಪರಿಚಯವಾಗಿದ್ದ. ಇದೇ ವೇಳೆ ಇಬ್ಬರ ಪರಿಚಯ ಸ್ನೇಹಕ್ಕೆ ತಿರುಗಿತ್ತು. ಜಾತ್ರೆಯಲ್ಲೇ ನಂಬರ್‌ ಎಕ್ಸ್‌ಚೇಂಜ್‌ ಮಾಡಿಕೊಂಡು ಚಾಟಿಂಗ್‌, ಡೇಟಿಂಗ್‌ ಶುರು ಮಾಡಿದ್ರು. ಇವರಿಬ್ಬರ ಪ್ರೀತಿ (Love) ಮಂಚದವರೆಗೂ ತಲುಪಿತ್ತು. ಹೆಮ್ಮಿಗೆಪುರದ ಹರಿಣಿಯ ಗಂಡ ಸ್ಥಳೀಯ ಜಮಿನ್ದಾರ. ಹಣಕಾಸಿಗೆ ಕೊರತೆ ಇರ್ಲಿಲ್ಲ. ಇಬ್ಬರು ಹೆಣ್ಣು ಮಕ್ಕಳನ್ನ ಓದಿಸಿಕೊಂಡು ಹೆಂಡತಿಯನ್ನ ಚೆನ್ನಾಗಿ ನೋಡಿಕೊಂಡಿದ್ದನಂತೆ. ಇತ್ತಿಚೇಗೆ ದೊಡ್ಡ ಮನೆ ಕಟ್ಟಲು ಪಾಯ ಪೂಜೆ ಸಹ ಮಾಡಿದ್ರಂತೆ.  ಇದನ್ನೂ ಓದಿ: ಹೆಂಡತಿ ಮಾತು ಕೇಳಿ ನನ್ನ ಮಗ ಹನಿಮೂನ್‌ಗೆ 10 ಲಕ್ಷ ಮೌಲ್ಯ‌ದ ಆಭರಣ ಹಾಕ್ಕೊಂಡು ಹೋಗಿದ್ದ: ಸೊಸೆಯ ಪ್ಲ್ಯಾನ್‌ ಬಗ್ಗೆ ಬಿಚ್ಚಿಟ್ಟ ಅತ್ತೆ

    ಸಿಕ್ಕ ಕೂಡಲೇ ಮುಗಿಸಿಬಿಡಬೇಕೆಂದು ಸ್ಕೆಚ್‌
    ಹೀಗಿರುವಾಗಲೇ ಪತ್ನಿ ಹರಿಣಿ ಹಾಗೂ ಯಶಸ್ ನಡುವಿನ ಅನೈತಿಕ ಸಂಬಂಧ ಗಂಡನಿಗೆ ಗೊತ್ತಾಗಿದೆ. ಗಂಡ ಪತ್ನಿಗೆ ಬುದ್ಧಿ ಹೇಳಿ ಹರಿಣಿಯ ಫೋನ್‌ ಕೂಡ ಕಿತ್ಕೊಂಡು ಮನೆಯಲ್ಲೇ ಕೂಡಿ ಹಾಕಿದ್ದರಂತೆ ಪತಿ ದಾಸೇಗೌಡ. ಇದಾದ ನಂತರ ಪತ್ನಿ ಸರಿ ಹೋಗ್ತಾಳೆ ಅಂತ ಹೊರಗಡೆ ಬಿಟ್ಟಿದ್ದಾನೆ. ಈ ವೇಳೆ ಹರಿಣಿ ತನ್ನ ಬಾಯ್‌ಫ್ರೆಂಡ್‌ ಯಶಸ್‌ನ ಮತ್ತೆ ಸಂಪರ್ಕಿಸಿದ್ದಾಳೆ. ಇತ್ತ ಹರಿಣಿ ಸಂಪರ್ಕಕ್ಕೆ ಸಿಗದೇ ಹುಚ್ಚನಂತಾಗಿದ್ದ ಯಶಸ್, ಹರಿಣಿ ಸಿಕ್ಕರೇ ಸಾಯಿಸಲು ನಿರ್ಧಾರ ಮಾಡಿದ್ನಂತೆ. ಕೊಲೆ ಮಾಡೋ ಉದ್ದೇಶದಿಂದ ಚಾಕು ಕೂಡ ಖರೀದಿ ಮಾಡಿದ್ನಂತೆ.  ಇದನ್ನೂ ಓದಿ: Bengaluru | ಅನೈತಿಕ ಸಂಬಂಧ ಆರೋಪ – ಮಹಿಳೆ ದೇಹ ಬೆತ್ತಲೆಗೊಳಿಸಿ ಹತ್ಯೆಗೈದ ಪಾಗಲ್‌ ಪ್ರೇಮಿ

    ಎಲ್ಲಾ ಮುಗಿದ್ಮೇಲೆ ಸೈಕೋ ವರ್ತನೆ ತಾಳಿದ್ದ ಟೆಕ್ಕಿ
    ಇದೇ ಸಮಯಕ್ಕೆ ಹರಿಣಿ ಯಶಸ್‌ಗೆ ಕಾಲ್ ಮಾಡಿದ್ದು ಇಬ್ಬರು ಓಯೋ ರೂಮ್‌ನಲ್ಲಿ ಸೇರೋದಾಗಿ ಮಾತು ಕತೆ ನಡೆಸಿದ್ದಾರೆ. ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯ ಓಯೊ ರೂಂ ನಲ್ಲಿ (Oyo Room) ಕಳೆದ ಶುಕ್ರವಾರ ಇಬ್ಬರೂ ಸೇರಿದ್ದಾರೆ. ಲೈಗಿಂಕ ಸಂಪರ್ಕ ಮುಗಿಸಿದ ಬಳಿಕ ಯಶಸ್‌ ಸೈಕೋ ವರ್ತನೆ ತಾಳಿದ್ದಾನೆ. ನನಗೆ ಸಿಕ್ಕವಳು ಬೇರೆ ಯಾರಿಗೂ ಸಿಗಬಾರದು ಅಂತ ಮೊದಲೇ ಪ್ಲಾನ್ ಮಾಡಿದಂತೆ ಚಾಕುನಿಂದ ಬರ್ಬರವಾಗಿ ಇರಿದು ಕೊಂದೇಬಿಟ್ಟಿದ್ದಾನೆ. ನಂತರ ಟೆಕ್ಕಿ ತಾನೂ ಕೂಡ ಎದೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ಆದ್ರೆ ನೋವಾಯ್ತು ಅಂತ ಚಾಕು ಅಲ್ಲೆ ಬಿಟ್ಟು ನೇರವಾಗಿ ಕೆಂಗೇರಿ ಠಾಣೆಗೆ ಹೋಗಿ ಕೊಲೆ ವಿಚಾರ ಹೇಳಿದ್ದಾನೆ.

    ಕೊನೆಗೆ ಕೆಂಗೇರಿ ಪೊಲೀಸ್ರು ಕೊಲೆ ನಡೆದ ಸ್ಥಳ ಸುಬ್ರಹ್ಮಣ್ಯಪುರ ಠಾಣಾವ್ಯಾಪ್ತಿಗೆ ಬರೋದಾಗಿ ಟೆಕ್ಕಿ ಯಶಸ್‌ನ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಹನಿಮೂನ್‌ ಮರ್ಡರ್‌ | ನನ್ನ ಮಗಳು 100% ಮುಗ್ಧೆ – CBI ತನಿಖೆಗಾಗಿ ಅಮಿತ್ ಶಾಗೆ ಮನವಿ ಮಾಡ್ತೇನೆ: ಸೋನಮ್‌ ತಂದೆ

  • Bengaluru | ಅನೈತಿಕ ಸಂಬಂಧ ಆರೋಪ – ಮಹಿಳೆ ದೇಹ ಬೆತ್ತಲೆಗೊಳಿಸಿ ಹತ್ಯೆಗೈದ ಪಾಗಲ್‌ ಪ್ರೇಮಿ

    Bengaluru | ಅನೈತಿಕ ಸಂಬಂಧ ಆರೋಪ – ಮಹಿಳೆ ದೇಹ ಬೆತ್ತಲೆಗೊಳಿಸಿ ಹತ್ಯೆಗೈದ ಪಾಗಲ್‌ ಪ್ರೇಮಿ

    – ಆಂಟಿ ಸಿಗದೇ ತಲೆ ಕೆಡಿಸಿಕೊಂಡು ಹುಚ್ಚನಂತಾಗಿದ್ದ ಪ್ರೇಮಿ
    – ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಸಾಫ್ಟ್‌ವೇರ್‌ ಎಂಜಿನಿಯರ್‌

    ಬೆಂಗಳೂರು: ಅನೈತಿಕ ಸಂಬಂಧಕ್ಕೆ ಬಿದ್ದು ವಿವಾಹಿತ ಮಹಿಳೆಯೊಬ್ಬಳು (Married Women) ಭೀಕರ ಹತ್ಯೆಗೀಡಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಆರೋಪಿ ಸಹ ಬಂಧನವಾಗಿದ್ದು, ಪೊಲೀಸ್‌ ತನಿಖೆ ವೇಳೆ ಆರೋಪಿಯ ವಿಕೃತಿ, ಕ್ರೌರ್ಯ ಬಯಲಾಗಿದೆ.

    ಹರಿಣಿ (36) ಕೊಲೆಯಾದ ಪ್ರಿಯತಮೆ, ಟೆಕ್ಕಿ ಯಶಸ್ (25) ಕೊಲೆ ಆರೋಪಿ. ಬಹಳ ದಿನಗಳಿಂದ ಪ್ರಿಯತಮೆಯನ್ನ (Lovers) ಮೀಟ್‌ ಮಾಡದೇ ತಲೆ ಕೆಡಿಸಿಕೊಂಡಿದ್ದ ಟೆಕ್ಕಿ ಆಕೆ ಸಿಗುತ್ತಿದ್ದಂತೆ ಮುಗಿಸಿಬಿಡಬೇಕೆಂದು ಪ್ಲ್ಯಾನ್‌ ಮಾಡಿಕೊಂಡಿದ್ದ. ಅದರಂತೆ ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿ ಓಯೋ ರೂಮಿಗೆ (Oyo Room) ಕರೆದೊಯ್ದು, ಹರಿಣಿಗೆ ಬರೋಬ್ಬರಿ 17 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಆಕೆಯ ದೇಹವನ್ನ ಬೆತ್ತಲೆಗೊಳಿಸಿ ಹರಿಣಿಯ ಕತ್ತು, ಎದೆ ಭಾಗ, ಹೊಟ್ಟೆ ಸೇರಿ ದೇಹದ ಹಲವು ಭಾಗಗಳಿಗೆ ಇರಿದಿದ್ದಾನೆ.

    ತಾನೂ ಆತ್ಮಹತ್ಯೆಗೆ ಯತ್ನ
    ಹರಿಣಿಯನ್ನ ಬೆತ್ತಲೆಗೊಳಿಸಿ ಭೀಕರವಾಗಿ ಹತ್ಯೆಗೈದಿದ್ದ ಆರೋಪಿ ಯಶಸ್ ಕೊಲೆ ಮಾಡಿದ ಬಳಿಕ ಮನೆಗೆ ತೆರಳಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ತಾನೇ ಕೆಂಗೇರಿ ಪೊಲೀಸ್‌ (Kengeri Police) ಠಾಣೆಗೆ ಹೋಗಿ ಶರಣಾಗಿದ್ದಾನೆ. ಆದ್ರೆ ಕೆಂಗೇರಿ ಪೊಲೀಸರು ನಮ್ಮ ಠಾಣೆ ವ್ಯಾಪ್ತಿಗೆ ಬರಲ್ಲ ಅಂತ ಹೇಳಿ, ಆರೋಪಿಯನ್ನ ಕರೆತಂದು ಸುಬ್ರಮಣ್ಯಪುರ ಪೊಲೀಸರಿಗೆ (Subramanyapura Police) ಒಪ್ಪಿಸಿದ್ದಾರೆ.

    ಆಂಟಿ-ಯುವಕನ ಲವ್‌ಸ್ಟೋರಿ – ಕೊಲೆಯಲ್ಲಿ ಅಂತ್ಯ
    ಕೆಂಗೇರಿ ಮೂಲದ ಹರಿಣಿ, ದಾಸೇಗೌಡ ಎಂಬವರ ಪತ್ನಿ. ಕೆಲ ತಿಂಗಳ ಹಿಂದೆ ಏರಿಯಾದಲ್ಲಿ ಜಾತ್ರೆ ಇತ್ತು, ಗೃಹಿಣಿ ಹರಿಣಿ ಇದ್ದ ಏರಿಯಾಗೆ ಜಾತ್ರೆಗೆ ಹೋಗಿದ್ದ ಟೆಕ್ಕಿ ಯಶಸ್, ಅಲ್ಲದೇ ಆಕೆಯನ್ನ ಪರಿಚಯ ಮಾಡಿಕೊಂಡಿದ್ದ. ಕೊನೆಗೆ ಇಬ್ಬರು ಫೋನ್‌ ನಂಬರ್‌ ಕೂಡ ಪರಸ್ಪರ ಪಡೆದುಕೊಂಡಿದ್ರು. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು ಚಾಟಿಂಗ್‌, ಡೇಟಿಂಗ್‌ ಶುರು ಮಾಡಿಕೊಂಡಿದ್ರು. ಹೀಗಾಗಿ ಇಬ್ಬರ ನಡುವೆ ಅನೈತಿಕ ಸಂಬಂಧ ಇತ್ತಂತೆ.

    ಕ್ರಮೇಣ ಹರಿಣಿ ಗಂಡ ದಾಸೇಗೌಡನಿಗೆ ಪತ್ನಿಯ ಅನೈತಿಕ ಸಂಬಂಧದ ಗೊತ್ತಾಗಿತ್ತು. ನಂತರ ಹೆಂಡ್ತಿಯ ಫೋನ್ ಕಿತ್ಕೊಂಡು ಮನೆಯಲ್ಲೇ ಕೂಡಿ ಹಾಕಿದ್ದ. ಕೆಲ ತಿಂಗಳ ಬಳಿಕ ಮತ್ತೆ ಹೊರ ಬಂದಿದ್ದ ಹರಿಣಿ, ತನ್ನ ಬಾಯ್ ಫ್ರೆಂಡ್ ಯಶಸ್‌ನ ಸಂಪರ್ಕಿಸಿದ್ಲು. ಇತ್ತ ಹರಿಣಿ ಸಂಪರ್ಕಕ್ಕೆ ಸಿಗದೇ ಹುಚ್ಚನಂತೆ ಆಗಿದ್ದ ಯಶಸ್, ಸಿಕ್ಕ ಕೂಡಲೇ ಮುಗಿಸಿಬಿಡಬೇಕೆಂದು ನಿರ್ಧಾರ ಮಾಡಿಕೊಂಡಿದ್ದ. ಹೀಗಾಗಿ ಚಾಕು ಕೂಡ ಖರೀದಿಸಿ ಇಟ್ಟಿದ್ದ. ಮತ್ತೆ ಹರಿಣಿಯನ್ನು ಮೀಟ್ ಮಾಡಿ ಮಾತುಕತೆ ಮಾಡಿಕೊಂಡು ಓಯೋ ರೂಮ್‌ಗೆ ಕರೆದೊಯ್ದ ಯಶಸ್‌, ಅವಳು ಬೇರೆ ಯಾರಿಗೂ ಸಿಗಬಾರ್ದು ಅಂತ ಇರಿದು ಕೊಂಡಿದ್ದಾನೆ.

    ಯಶಸ್‌ ಶುಕ್ರವಾರ ಕೊಲೆ ಮಾಡಿ ಪರಾರಿಯಾಗಿದ್ದ. ನಂತರ ಸುಬ್ರಹ್ಮಣ್ಯಪುರ ಇನ್ಸ್‌ಪೆಕ್ಟರ್‌ ರಾಜು ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿತ್ತು. ಬಳಿಕ ಎಫ್‌ಎಸ್‌ಎಲ್‌ ತಂಡ ಕರೆಸಿ ಎಲ್ಲಾ ಸಾಕ್ಷ್ಯ ಸಂಗ್ರಹಿಸಿದ ಬಳಿಕ ಆರೋಪಿಯನ್ನ ಬಂಧಿಸಲಾಗಿದೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ನನಗೂ ಆಕೆಗೂ ಅನೈತಿಕ ಸಂಬಂಧ ಇತ್ತು. ನನ್ನನ್ನ ಅವಾಯ್ಡ್‌ ಮಾಡ್ತಾ ಇದ್ಲು, ಹೀಗಾಗಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇಂದು ಮಧ್ಯಾಹ್ನ 3 ಗಂಟೆಗೆ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ .

  • ಅನೈತಿಕ ಸಂಬಂಧ ಆರೋಪ – ಓಯೋ ರೂಮಿನಲ್ಲಿ ಪ್ರಿಯತಮೆ ಹತ್ಯೆಗೈದ ಟೆಕ್ಕಿ

    ಅನೈತಿಕ ಸಂಬಂಧ ಆರೋಪ – ಓಯೋ ರೂಮಿನಲ್ಲಿ ಪ್ರಿಯತಮೆ ಹತ್ಯೆಗೈದ ಟೆಕ್ಕಿ

    ಬೆಂಗಳೂರು: ಅನೈತಿಕ ಸಂಬಂಧ ಹೊಂದಿದ್ದ ಶಂಕೆಯಿಂದ ಟೆಕ್ಕಿ ಪ್ರಿಯಕರ, ತನ್ನ ಪ್ರಿಯತಮೆಯನ್ನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ (Subramanyapura Police Station) ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಹರಿಣಿ (36) ಕೊಲೆಯಾದ ಪ್ರಿಯತಮೆ (Lover), ಟೆಕ್ಕಿ ಯಶಸ್ (25) ಕೊಲೆ ಆರೋಪಿ. ಇಬ್ಬರೂ ಕೆಂಗೇರಿ ನಿವಾಸಿಗಳಾಗಿದ್ದು, ಪೂರ್ಣ ಪ್ರಜ್ಞಾ ಲೇಔಟ್‌ನ ಓಯೋ ರೂಂ ನಲ್ಲಿ‌ (Oyo Room) ಘಟನೆ ನಡೆದಿದೆ.

    ಕಳೆದ ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಪ್ರಿಯತಮೆ ಅನೈತಿಕ ಸಂಬಂಧ ಹೊಂದಿದ್ದಳು ಎಂಬ ಆರೋಪ ಕೇಳಿಬಂದಿದೆ. ಇದರಿಂದ ಕೋಪಗೊಂಡಿದ್ದ ಟೆಕ್ಕಿ ಯಶಸ್‌ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಹ್ಮಣ್ಯಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  • ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

    ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

    – ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಸಹನಾ ಕಾಲ್ತುಳಿತಕ್ಕೆ ಬಲಿ

    ಕೋಲಾರ: ಮಗಳಿಗೆ ಮದುವೆ ಮಾಡಬೇಕು ಎಂದುಕೊಂಡಿದ್ದೆವು. ಈಗ ಅವಳೇ ಇಲ್ಲ. ನಮಗಾದ ಕಷ್ಟ ಯಾವ ತಂದೆ-ತಾಯಿಗೂ ಬರುವುದು ಬೇಡ ಎಂದು ಕಾಲ್ತುಳಿತಕ್ಕೆ ಮೃತಪಟ್ಟ ಟೆಕ್ಕಿ ಸಹನಾ ತಂದೆ ಕಣ್ಣೀರಿಟ್ಟಿದ್ದಾರೆ.

    ಕೋಲಾರದಲ್ಲಿ (Kolar) ‘ಪಬ್ಲಿಕ್ ಟಿವಿ’ ಜೊತೆ ಮಾತನಾಡುವಾಗ ಸಹನಾ ತಂದೆ ಸುರೇಶ್ ಬಾಬು ಕಣ್ಣೀರಾಕಿದ್ದಾರೆ. ಚೆನ್ನಾಗಿ ಓದಿ ಇಂಜಿನಿಯರಿಂಗ್ ಮಾಡಿ ಕೆಲಸ‌ ಮಾಡ್ತಾ ಇದ್ದಳು. ತಂದೆ-ತಾಯಿ ಮಾತು ಮೀರದೆ ಒಳ್ಳೆಯ ಮಗಳಾಗಿದ್ದಳು. ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಳು. ಮದುವೆ ಕೂಡ ಮಾಡಬೇಕು ಎಂದುಕೊಂಡಿದ್ದೆವು. ನಿನ್ನೆ ನಮಗೆ ತಿಳಿಸಿ ಆರ್‌ಸಿಬಿ ವಿಜಯೋತ್ಸವಕ್ಕೆ ತೆರಳಿದ್ದಳು. ಈ ಮೊದಲು ಆರ್‌ಸಿಬಿ ಮ್ಯಾಚ್ ನೋಡೋದಕ್ಕೆ ಹೋಗಿದ್ದಳು. ಆದರೆ, ಕಾಲ್ತುಳಿತದಲ್ಲಿ ಅಮಾಯಕರು ಬಲಿಯಾಗಿದ್ದಾರೆ ಎಂದು ನೊಂದು ನುಡಿದಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಟೀಶರ್ಟ್‌ನಿಂದ ಮೃತ ಪತ್ನಿಯ ಗುರುತು ಪತ್ತೆ ಮಾಡಿದ ಪತಿ

    RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿದ್ದು ಸರ್ಕಾರದ ನಿರ್ಲಕ್ಷ್ಯದಿಂದ ಎಂದು ರಾಜ್ಯ ಸರ್ಕಾರದ ವಿರುದ್ಧ ಸಹನಾ ಪೋಷಕರ ಮತ್ತು ಸ್ನೇಹಿತರು ಆಕ್ರೋಶ ಹೊರಹಾಕಿದ್ದಾರೆ. ಮೃತ ಸಹನಾ, ಶಿಕ್ಷಕ ದಂಪತಿಯಾದ ಸುರೇಶ್ ಬಾಬು ಹಾಗೂ ಮಂಜುಳಾ ಮೊದಲನೇ ಪುತ್ರಿಯಾಗಿದ್ದರು.

    ಒಂದೇ ಸಮಯದಲ್ಲಿ ಎರಡೂ ಕಡೆ ಸಂಭ್ರಮಾಚಾರಣೆ ಮಾಡಿದ್ದು ಸರಿ ಇಲ್ಲ. ಜನರು ಒಂದೇ ಸಮನೆ ನುಗ್ಗಿದ ಹಿನ್ನೆಲೆ ಅಮಾಯಕರು ಬಲಿಯಾಗಿದ್ದಾರೆ. ಸರ್ಕಾರ ಈ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಿತ್ತು. ಸರ್ಕಾರದ ನಿರ್ಲಕ್ಷ್ಯದಿಂದ ಮತ್ತು ಸರಿಯಾದ ಪ್ಲಾನ್‌ ಮಾಡಿಕೊಳ್ಳದ ಕಾರಣ 11 ಜನ ಅಮಾಯಕರು ಬಲಿಯಾದರು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ