Tag: ಟೊಮ್ಯಾಟೋ

  • ಬೆಂಗ್ಳೂರಲ್ಲಿ ಕದ್ರು, ಚೆನ್ನೈನಲ್ಲಿ ಮಾರಿದ್ರು- ಕೊನೆಗೂ ಸಿಕ್ಕಿಬಿದ್ದ ಟೊಮೆಟೋ ಕಳ್ಳರು

    ಬೆಂಗ್ಳೂರಲ್ಲಿ ಕದ್ರು, ಚೆನ್ನೈನಲ್ಲಿ ಮಾರಿದ್ರು- ಕೊನೆಗೂ ಸಿಕ್ಕಿಬಿದ್ದ ಟೊಮೆಟೋ ಕಳ್ಳರು

    – ಸಿಸಿಟಿವಿ ಆಧರಿಸಿ ನಾಲ್ವರ ಬಂಧನ

    ಬೆಂಗಳೂರು: ಟೆಮೆಟೋ (Tomato) ತುಂಬಿದ್ದ ಬೊಲೆರೋ ವಾಹನ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಆರ್‍ಎಂಸಿ ಯಾರ್ಡ್ ಪೊಲೀಸರು (Police) ಬಂಧಿಸಿದ್ದಾರೆ.

    ಆರೋಪಿಗಳು ಬೆಂಗಳೂರಲ್ಲಿ (Bengaluru) ವಾಹನವನ್ನು ಕದ್ದು ಬಳಿಕ ಟೊಮೆಟೋವನ್ನು ಚೆನ್ನೈಗೆ ಸಾಗಿಸಿ ಮಾರಾಟ ಮಾಡಿದ್ದಾರೆ. ಬಳಿಕ ಖಾಲಿ ವಾಹನವನ್ನು ಪೀಣ್ಯ ಬಳಿ ನಿಲ್ಲಿಸಿ ಪರಾರಿಯಾಗಿದ್ದರು. ಕಳೆದ 11 ದಿನಗಳಿಂದಲೂ ಈ ಪ್ರಕರಣದ ಹಿಂದೆ ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ನಡುವೆ 2 ಟನ್ ಟೊಮೆಟೊವಿದ್ದ ವಾಹನವನ್ನೇ ಕದ್ದ ಕಳ್ಳರು

    ಇದೇ ತಿಂಗಳ 10 ರಂದು ರೈತರು ಚಿತ್ರದುರ್ಗದಿಂದ ಆರ್‍ಎಂಸಿ ಯಾರ್ಡ್‍ಗೆ ಟೊಮೆಟೋ ಲೋಡ್ ಅನ್ನು ತಂದಿದ್ದರು. ರೈತರು ಯಾವಾಗ ವಾಹನವನ್ನು ನಿಲ್ಲಿಸಿ, ಟೀ ಕುಡಿಯಲು ಹೋಗಿದ್ದಾರೋ ಆಗ ಬಂದ ಕಳ್ಳರು ವಾಹನ ಸಮೇತವಾಗಿ 2 ಟನ್ ಟೊಮೆಟೋ ಹೊತ್ತೊಯ್ದಿದ್ದರು.

    ಕಾರಿನಲ್ಲಿ ಬಂದಿದ್ದ ಮೂವರು ವಾಹನವನ್ನು ಹೈಜಾಕ್ ಮಾಡಿದ್ದರು. ಟೊಮೆಟೋ ತುಂಬಿದ್ದ ಗಾಡಿ ಫಾಲೋ ಮಾಡಿ ಬಂದ ಆರೋಪಿಗಳು, ಆರ್‍ಎಂಸಿ ಯಾರ್ಡ್ ಬಳಿ ಅಡ್ಡ ಹಾಕಿ ರೈತನಿಗೆ ಅವಾಜ್ ಹಾಕಿದ್ದರು. ಗಾಡಿ ಟಚ್ ಆಗಿದೆ ಎಂದು ನಾಟಕ ಮಾಡಿ ಡ್ರೈವರ್‍ಗೆ ಥಳಿಸಿದ್ದು, ನಂತರ ರೈತನ ಮೇಲೂ ಹಲ್ಲೆ ಮಾಡಿ ಹಣ ಕೊಡು ಬೆದರಿಸಿದ್ದರು. ಬಳಿಕ ಆನ್‍ಲೈನ್ ಮೂಲಕ ಹಣ ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಾಹನವನ್ನು ಕದ್ದೊಯ್ದಿದ್ದರು. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂ ದೇಗುಲ ಧ್ವಂಸ- ಆರೋಪಿಯ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೊಮ್ಯಾಟೋ ಬೆಲೆ ಗಗನಕ್ಕೆ: ಡೋಂಟ್ ಕೇರ್ ಎಂದ ಉರ್ಫಿ ಜಾವೇದ್

    ಟೊಮ್ಯಾಟೋ ಬೆಲೆ ಗಗನಕ್ಕೆ: ಡೋಂಟ್ ಕೇರ್ ಎಂದ ಉರ್ಫಿ ಜಾವೇದ್

    ಸಿಕ್ಕ ಸಿಕ್ಕ ವಸ್ತುಗಳಲ್ಲೇ ಕಾಸ್ಟ್ಯೂಮ್ ಡಿಸೈನ್ ಮಾಡಿಕೊಳ್ಳುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ್ (Urfi Javed)  ಈ ಬಾರಿ ಟೊಮ್ಯಾಟೋ ಮೇಲೆ ಕಣ್ಣು ಹಾಕಿದ್ದಾರೆ. ಟೊಮ್ಯಾಟೋ ಬೆಲೆ ಗಗನಕ್ಕೇರಿದರೂ ಅದಕ್ಕೆ ತಲೆ ಕೆಡಿಸಿಕೊಳ್ಳದೇ ಟೊಮ್ಯಾಟೋದಿಂದ (Tomato) ಮಾಡಿದ ಕಿವಿಯೋಲೆಯನ್ನು ಅವರು ಧರಿಸಿದ್ದಾರೆ. ಈ ಮೂಲಕ ಅದ್ಯಾವ ಸಂದೇಶ ಸಾರಿದ್ದಾರೋ ಅವರನ್ನೇ ಕೇಳಬೇಕು.

    ಮೊನ್ನೆಯಷ್ಟೇ ಉರ್ಫಿ ಕಣ್ಣಿನ ಸರ್ಜರಿಗೆ ಒಳಗಾಗಿದ್ದು, ಅದರಿಂದಾಗಿ ಕಣ್ಣಿನ ಕೆಳಭಾಗ ನೋವುಂಟಾಗಿದೆ ಎಂದು ಹೇಳಿಕೊಂಡಿದ್ದಾರೆ. ಕಣ್ಣಿನ ಸುತ್ತಲೂ ಒಂದು ರೀತಿಯ ಅಲರ್ಜಿಯಾಗಿದ್ದು, ಅದನ್ನು ಮೇಕಪ್ ನಿಂದ ಮುಚ್ಚಲೂ ಸಾಧ್ಯವಾಗುತ್ತಿಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಒಂದು ಕಡೆ ನಾನಾ ಅಡೆತಡೆಗಳು ಮತ್ತೊಂದು ಕಡೆ ಕೆಲಸವಿಲ್ಲದೇ ನಿರುದ್ಯೋಗಿ ಆಗಿರುವ ಕುರಿತು ಅವರು ಹೇಳಿಕೊಂಡಿದ್ದಾರೆ. ಅಲ್ಲದೇ, ಅವರು ಇದೀಗ ಕೆಲಸ ಹುಡುಕುತ್ತಿದ್ದಾರಂತೆ. ಈ ಮಾಹಿತಿಯನ್ನು ಸ್ವತಃ ಅವರೇ ಹಂಚಿಕೊಂಡಿದ್ದಾರೆ. ನಾನು ಫೇಮಸ್ ಆಗಿದ್ದೇನೆ, ಜನರು ನನ್ನನ್ನು ಗುರುತಿಸುತ್ತಾರೆ ಎಲ್ಲವೂ ನಿಜ. ಆದರೆ, ನನಗೆ ಕೆಲಸವಿಲ್ಲ (Work). ನನ್ನೊಂದಿಗೆ ಕೆಲಸ ಮಾಡಲು ಯಾರೂ ಒಪ್ಪುವುದಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ:ರಚ್ಚು- ಸತೀಶ್ ನೀನಾಸಂ ಕಡೆಯಿಂದ ಗುಡ್ ನ್ಯೂಸ್- ‘ಮ್ಯಾಟ್ನಿ’ ಚಿತ್ರದ ಅಪ್‌ಡೇಟ್

    ತಾವು ಕೆಲಸ ಮಾಡಲು ರೆಡಿಯಾಗಿದ್ದು, ತಮಗೆ ಯಾವುದೇ ಕೆಲಸ ಸಿಗುತ್ತಿಲ್ಲ ಎಂದು ಉರ್ಫಿ ಹೇಳಿಕೊಂಡಿದ್ದಾರೆ. ನಾನು ಕೆಲಸ ಮಾಡಲು ತಯಾರಿದ್ದರೂ, ನನ್ನೊಂದಿಗೆ ಕೆಲಸ ಮಾಡಲು ಯಾರೂ ಸಿದ್ದರಿಲ್ಲ. ಹಾಗಾಗಿ ನನಗೆ ಕೆಲಸ ಸಿಗುತ್ತಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ತಮಗಾಗಿ ಯಾರಾದರೂ ಕೆಲಸ ಸೃಷ್ಟಿ ಮಾಡಿದರೆ ಹೋಗುವುದಾಗಿಯೂ ತಿಳಿಸಿದ್ದಾರೆ.

     

    ಈ ಹಿಂದೆ ಉರ್ಫಿಗಾಗಿ ಕಾಸ್ಟ್ಯೂಮ್ (Costume) ಡಿಸೈನ್ ಮಾಡುವವರು ಯಾರೂ ಇರಲಿಲ್ಲವಂತೆ. ಹಾಗಾಗಿಯೇ ತಮ್ಮ ಕಾಸ್ಟ್ಯೂಮ್ ಅನ್ನು ತಾವೇ ಡಿಸೈನ್ ಮಾಡಲು ಕಲಿತಿದ್ದಾರಂತೆ. ಇತ್ತ ಮನೆಯಲ್ಲೂ ಗೌರವವಿಲ್ಲ, ಬೀದಿಯಲ್ಲೂ ಇಲ್ಲ. ಈ ವಿಚಾರವಾಗಿ ತಮಗೆ ತುಂಬಾ ನೋವಾಗಿದೆ ಎಂದಿದ್ದಾರೆ ಉರ್ಫಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೊಮ್ಯಾಟೋ ವಿಚಾರದಲ್ಲಿ ಕ್ಷಮೆ ಕೇಳಿದ ನಟ ಸುನೀಲ್ ಶೆಟ್ಟಿ

    ಟೊಮ್ಯಾಟೋ ವಿಚಾರದಲ್ಲಿ ಕ್ಷಮೆ ಕೇಳಿದ ನಟ ಸುನೀಲ್ ಶೆಟ್ಟಿ

    ಗನಕ್ಕೇರಿದ ಟೊಮ್ಯಾಟೋ ಬೆಲೆ ಕುರಿತಾಗಿ ಈ ಹಿಂದೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಹೇಳಿಕೆಯೊಂದನ್ನು ನೀಡಿದ್ದರು. ‘ಟೊಮ್ಯಾಟೋ ಬೆಲೆ ಕೇಳಿದ್ಮೇಲೆ ಊಟದಲ್ಲಿ ಟೊಮ್ಯಾಟೋ ತಿನ್ನುವುದನ್ನು ಕಡಿಮೆ ಮಾಡಿದ್ದೇನೆ’ ಎನ್ನುವ ಮಾತುಗಳನ್ನು ಆಡಿದ್ದರು. ಆ ನಂತರ ಅನೇಕರು ಇವರ ಮಾತಿಗೆ ವಿರೋಧಿಸಿದ್ದರು. ಟ್ರೋಲ್ ಕೂಡ ಮಾಡಿದ್ದರು.

    ಸುನೀಲ್ ಶೆಟ್ಟಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಟೊಮ್ಯಾಟೋ ಬೆಲೆಯಿಂದ ರೈತರಿಗೆ ಲಾಭವಾಗಿದೆ. ಇವರು ರೈತ ವಿರೋಧಿ. ರೈತರಿಗೆ ಕೊಂಚ ಸಹಾಯವಾಗುತ್ತದೆ ಎಂದರೆ, ಇವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಅನೇಕರು ಟೀಕಿಸಿದ್ದರು. ಈ ಕುರಿತು ಸುನೀಲ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.

    ನಾನು ಕೂಡ ರೈತ ಕುಟುಂಬದಿಂದ ಬಂದವನು. ರೈತನ ಕಷ್ಟ ನಷ್ಟಗಳು ನನಗೆ ಗೊತ್ತಿದೆ. ನಾನು ರೈತ ವಿರೋಧಿ ಮಾತುಗಳನ್ನು ಆಡಿಲ್ಲ. ನನಗೂ ರೈತನ ಬಗ್ಗೆ ಕಾಳಜಿ ಇದೆ. ನನ್ನ ಮಾತುಗಳಿಂದ ಬೇಸರವಾಗಿದ್ದರೆ ಕ್ಷಮೆ ಇರಲಿ ಎಂದು ಅವರು ಹೇಳಿಕೊಂಡಿದ್ದಾರೆ.  ತಮಗೂ ರೈತರ ಬಗ್ಗೆ ಕಾಳಜಿ ಇರುವ ಕುರಿತು ಮಾತನಾಡಿದ್ದಾರೆ.

    ಏನಿದು ವಿವಾದ?

    ದೇಶದಾದ್ಯಂತ ಟೊಮ್ಯಾಟೋ (Tomato) ಬೆಲೆ ಏರಿ ಕೂತಿದೆ. ಇದು ಮಧ್ಯಮ ಮತ್ತು ಕೆಳಮಧ್ಯಮ ವರ್ಗಕ್ಕೆ ಮಾತ್ರ ತಲೆಬಿಸಿ ತಂದಿಲ್ಲ, ಶ್ರೀಮಂತರು ಕೂಡ ಟೊಮ್ಯಾಟೋ ಬಗ್ಗೆ ಮಾತನಾಡುವಂತಾಗಿದೆ. ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿರುವ ಬಾಲಿವುಡ್ (Bollywood) ನಟ ಸುನೀಲ್ ಶೆಟ್ಟಿ (Sunil Shetty) ಟೊಮ್ಯಾಟೋ ಬೆಲೆ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ:ಅಪಘಾತದಿಂದ ಚೇತರಿಸಿಕೊಂಡ್ರಾ ಸಾಯಿ ಧರಂ ತೇಜ್- ನಟ ಹೇಳೋದೇನು?

    ನನ್ನ ಮನೆಯಲ್ಲಿ ಯಾವಾಗಲೂ ನಾವು ತಾಜಾ ತರಕಾರಿಯನ್ನೇ ತಂದು ಬಳಸುತ್ತೇವೆ. ದಿನಕ್ಕೆ ಎರಡ್ಮೂರು ರೀತಿಯ ತರಕಾರಿಗಳನ್ನು ನನ್ನ ಪತ್ನಿ ಖರೀದಿಸುತ್ತಾರೆ. ಅದರಲ್ಲೂ ಇತ್ತೀಚೆಗೆ ಟೊಮ್ಯಾಟೋ ದರ ಗಗನಕ್ಕೇರಿದೆ. ಹಾಗಾಗಿ ನಾನು ಟೊಮ್ಯಾಟೋ ತಿನ್ನುವುದನ್ನು ಕಡಿಮೆ ಮಾಡಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

     

    ಟೊಮ್ಯಾಟೋ ದರ ಏರಿಕೆಯಾಗುತ್ತಿದ್ದಂತೆಯೇ ಹಲವರು ಹಲವು ರೀತಿಯ ಪ್ರಯೋಗಗಳನ್ನು ಅಡುಗೆಯಲ್ಲಿ ಮಾಡುತ್ತಿದ್ದಾರೆ. ಅಲ್ಲದೇ, ತಮ್ಮ ಮನೆಯಲ್ಲೇ ಟೊಮ್ಯಾಟೋ ಬೆಳೆಯುವುದು ಹೇಗೆ ಎನ್ನುವುದನ್ನು ನಟಿ ರಾಖಿ ಸಾವಂತ್ ಹೇಳಿದ್ದರು. ಹದಿನೈದು ದಿನದ ಒಳಗೆ ಟೊಮ್ಯಾಟೋ ಬೆಳೆಯುವುದು ಹೇಗೆ ಎನ್ನುವುದನ್ನು ತೋರಿಸಿಕೊಟ್ಟಿದ್ದರು. ಆ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೊಮ್ಯಾಟೋ ತಿನ್ನುವುದನ್ನೇ ಕಡಿಮೆ ಮಾಡಿದ್ದೇನೆ : ನಟ ಸುನೀಲ್ ಶೆಟ್ಟಿ

    ಟೊಮ್ಯಾಟೋ ತಿನ್ನುವುದನ್ನೇ ಕಡಿಮೆ ಮಾಡಿದ್ದೇನೆ : ನಟ ಸುನೀಲ್ ಶೆಟ್ಟಿ

    ದೇಶದಾದ್ಯಂತ ಟೊಮ್ಯಾಟೋ (Tomato) ಬೆಲೆ ಏರಿ ಕೂತಿದೆ. ಇದು ಮಧ್ಯಮ ಮತ್ತು ಕೆಳಮಧ್ಯಮ ವರ್ಗಕ್ಕೆ ಮಾತ್ರ ತಲೆಬಿಸಿ ತಂದಿಲ್ಲ, ಶ್ರೀಮಂತರು ಕೂಡ ಟೊಮ್ಯಾಟೋ ಬಗ್ಗೆ ಮಾತನಾಡುವಂತಾಗಿದೆ. ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿರುವ ಬಾಲಿವುಡ್ (Bollywood) ನಟ ಸುನೀಲ್ ಶೆಟ್ಟಿ (Sunil Shetty) ಟೊಮ್ಯಾಟೋ ಬೆಲೆ ಬಗ್ಗೆ ಮಾತನಾಡಿದ್ದಾರೆ.

    ನನ್ನ ಮನೆಯಲ್ಲಿ ಯಾವಾಗಲೂ ನಾವು ತಾಜಾ ತರಕಾರಿಯನ್ನೇ ತಂದು ಬಳಸುತ್ತೇವೆ. ದಿನಕ್ಕೆ ಎರಡ್ಮೂರು ರೀತಿಯ ತರಕಾರಿಗಳನ್ನು ನನ್ನ ಪತ್ನಿ ಖರೀದಿಸುತ್ತಾರೆ. ಅದರಲ್ಲೂ ಇತ್ತೀಚೆಗೆ ಟೊಮ್ಯಾಟೋ ದರ ಗಗನಕ್ಕೇರಿದೆ. ಹಾಗಾಗಿ ನಾನು ಟೊಮ್ಯಾಟೋ ತಿನ್ನುವುದನ್ನು ಕಡಿಮೆ ಮಾಡಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

    ಟೊಮ್ಯಾಟೋ ದರ ಏರಿಕೆಯಾಗುತ್ತಿದ್ದಂತೆಯೇ ಹಲವರು ಹಲವು ರೀತಿಯ ಪ್ರಯೋಗಗಳನ್ನು ಅಡುಗೆಯಲ್ಲಿ ಮಾಡುತ್ತಿದ್ದಾರೆ. ಅಲ್ಲದೇ, ತಮ್ಮ ಮನೆಯಲ್ಲೇ ಟೊಮ್ಯಾಟೋ ಬೆಳೆಯುವುದು ಹೇಗೆ ಎನ್ನುವುದನ್ನು ನಟಿ ರಾಖಿ ಸಾವಂತ್ ಹೇಳಿದ್ದರು. ಹದಿನೈದು ದಿನದ ಒಳಗೆ ಟೊಮ್ಯಾಟೋ ಬೆಳೆಯುವುದು ಹೇಗೆ ಎನ್ನುವುದನ್ನು ತೋರಿಸಿಕೊಟ್ಟಿದ್ದರು. ಆ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೊಮೆಟೋಗೆ ಬಂಗಾರದ ಬೆಲೆ – 30 ಲಕ್ಷ ಗಳಿಸಿದ್ದ ರೈತನ ಕೊಲೆ

    ಟೊಮೆಟೋಗೆ ಬಂಗಾರದ ಬೆಲೆ – 30 ಲಕ್ಷ ಗಳಿಸಿದ್ದ ರೈತನ ಕೊಲೆ

    ಅಮರಾವತಿ: ಟೊಮೆಟೋ (Tomato) ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದ ರೈತನನ್ನು ಹಣಕ್ಕಾಗಿ ದರೋಡೆಕೋರರು ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದಲ್ಲಿ (Andhra Pradesh) ನಡೆದಿದೆ.

    ಮದನಪಲ್ಲಿಯ ರಾಜಶೇಖರ್ ರೆಡ್ಡಿ (62) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಆತ ಟೊಮೆಟೋ ಬೆಳೆದು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ. ಜುಲೈ ಮೊದಲ ವಾರದಲ್ಲಿ ಬೆಲೆ ಏರಿಕೆಯಾಗುತ್ತಿದ್ದಾಗ ಟೊಮೆಟೋ ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದ. ಸುಮಾರು 70 ಬಾಕ್ಸ್ ಟೊಮೆಟೋ ಮಾರಾಟ ಮಾಡಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ – ಪತಿ ವಿರುದ್ಧ ಕೊಲೆ ಆರೋಪ

    ಪ್ರಾಥಮಿಕ ತನಿಖೆಯ ಪ್ರಕಾರ ಕೊಲೆಯಲ್ಲಿ ದರೋಡೆಕೋರರ ಜೊತೆಗೆ ಕೆಲವು ಉದ್ಯಮಿಗಳು ಭಾಗಿಯಾಗಿದ್ದಾರೆ ಎಂದು ಕುಟುಂಬ ಸದಸ್ಯರು ಶಂಕಿಸಿದ್ದಾರೆ.

    ಬೈಕ್‍ನಲ್ಲಿ ಹೋಗುತ್ತಿದ್ದ ವೇಳೆ ಆತನನ್ನು ದರೋಡೆಕೋರರು ಅಡ್ಡಗಟ್ಟಿದ್ದರು. ಆತನ ಬಾಯಿಗೆ ಬಲವಂತವಾಗಿ ಬಟ್ಟೆ ತುರುಕಿ ಮರಕ್ಕೆ ಕೈಕಾಲು ಕಟ್ಟಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: Don’t Allow him to Speak ಎಂದ ಸಿಎಂ: ಪ್ಲೀಸ್ ಸೇರಿಸಿ Kill Him ಎನ್ನಬಹುದಾ ಎಂದ ಸುರೇಶ್ ಕುಮಾರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹದಿನೈದೇ ದಿನದಲ್ಲಿ ಟೊಮ್ಯಾಟೋ ಬೆಳೆಯೋದು ಹೇಗೆ? : ರಾಖಿ ಸಾವಂತ್ ಪಾಠ

    ಹದಿನೈದೇ ದಿನದಲ್ಲಿ ಟೊಮ್ಯಾಟೋ ಬೆಳೆಯೋದು ಹೇಗೆ? : ರಾಖಿ ಸಾವಂತ್ ಪಾಠ

    ನಸಲ್ಲೂ ಬೆಚ್ಚಿ ಬೀಳಿಸುತ್ತಿದೆ ಟೊಮ್ಯಾಟೋ ದರ.  ಬೆಲೆ ಗಗನಕ್ಕೇರಿ ಹಲವು ದಿನಗಳೇ ಕಳೆದರೂ, ಈ ಹೊತ್ತಿಗೂ ದರ ಇಳಿಯುತ್ತಿಲ್ಲ. ಟೊಮ್ಯಾಟೋ ಕುರಿತಾಗಿ ಸಾಕಷ್ಟು ಜೋಕ್ ಗಳು ಹುಟ್ಟಿಕೊಂಡಿವೆ. ಟೊಮ್ಯಾಟೋ ಕಾಯಲು ಸಿಸಿಟಿವಿ ಕ್ಯಾಮೆರಾ ಅಳವಡಿಸುವುದರಿಂದ ಹಿಡಿದು ಬೌನ್ಸರ್ ಹಾಕಿ ಕಾಯುವಲ್ಲಿಗೆ ವಿಡಿಯೋಗಳು ಹರಿದಾಡುತ್ತಿದೆ. ಆದರೆ ಬಾಲಿವುಡ್ (Bollywood) ನಟಿ ರಾಖಿ ಸಾವಂತ್ , ಈ ಕುರಿತು ತಲೆ ಕೆಡಿಸಿಕೊಂಡಿಲ್ಲ.

    ಹೌದು, ರಾಖಿ ಸಾವಂತ್ ((Rakhi Sawant)) ಟೊಮ್ಯಾಟೋ ಬೆಲೆ ಗಗನಕ್ಕೇರಿದ ಕುರಿತಾಗಿ ತಲೆಬಿಸಿ ಮಾಡಿಕೊಂಡಿಲ್ಲ. ಬದಲಾಗಿ ಕೇವಲ ಹದಿನೈದೇ ದಿನದಲ್ಲಿ ಟೊಮ್ಯಾಟೋ ಬೆಳೆಯುವುದು ಹೇಗೆ ಎನ್ನುವುದನ್ನು ಕಲಿತಿದ್ದಾರೆ. ಅದನ್ನು ವಿಡಿಯೋ ಮಾಡಿ, ಇತರರಿಗೂ ಟೊಮ್ಯಾಟೋ ಬೆಳೆಯುವಂತೆ ವಿನಂತಿಸಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ನಟಿ, ಡೆಲಿವರಿ ಆಗ್ತಿದ್ದಂತೆ ಶೂಟಿಂಗ್ ಹಾಜರಾದ ಮಮತಾ

    ಮೊದಲು ಪುಟ್ಟದೊಂದು ಪಾಟ್ ತಗೆದುಕೊಂಡು ಅದರಲ್ಲಿ ಕಾಲು ಭಾಗ ಮಣ್ಣು ತುಂಬಿದ್ದಾರೆ. ಆ ಮಣ್ಣಿನಲ್ಲಿ ನಾಲ್ಕೈದು ಟೊಮ್ಯಾಟೋ ಹಾಕುತ್ತಾರೆ. ಅದರ ಮೇಲೆ ಟೊಮ್ಯಾಟೋ ಗಿಡಿ ನೆಡುತ್ತಾರೆ. ಅದು ಕೇವಲ 15 ದಿನದಲ್ಲಿ ಟೊಮ್ಯಾಟೋ (Tomato) ಕೊಡುತ್ತದೆ ಎಂದು ಅವರು ಹೇಳುತ್ತಾರೆ. ಈ ಗಿಡವನ್ನು ಆರೈಕೆ ಮಾಡಲೆಂದು ಒಬ್ಬ ಹುಡುಗನನ್ನು ರಾಖಿ ನೇಮಿಸಿಕೊಂಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.

     

    ಹದಿನೈದು ದಿನಕ್ಕೆ ಟೊಮ್ಯಾಟೋ ಬೆಳೆ (Crop) ಬರತ್ತೋ ಇಲ್ಲವೋ ಗೊತ್ತಿಲ್ಲ. ಆದರೆ, ರಾಖಿ ರಂಪಾಟ ಮಾಡದೇ ಮೊದಲ ಬಾರಿಗೆ ವಿಡಿಯೋ ಮಾಡಿದ್ದು ಅಭಿಮಾನಿಗಳಿಗೆ ಖುಷಿ ತಂದಿದೆ. ಜೊತೆಗೆ ಟೊಮ್ಯಾಟೋ ಬೆಳೆಯನ್ನು ಆರೈಕೆ ಮಾಡಲು ನೇಮಿಸಿಕೊಂಡಿರುವ ಹುಡುಗನ ಸಂಬಳದಲ್ಲಿ ಅದೆಷ್ಟೋ ಕೆಜಿ ಟೊಮ್ಯಾಟೋ ಖರೀದಿಸಬಹುದಿತ್ತು ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಘಮ ಘಮಿಸುವ ಟೊಮೆಟೋ ಬಾತ್ ಸಖತ್ ಟೇಸ್ಟ್ – ನೀವೂ ಒಮ್ಮೆ ಟ್ರೈ ಮಾಡಿ

    ಘಮ ಘಮಿಸುವ ಟೊಮೆಟೋ ಬಾತ್ ಸಖತ್ ಟೇಸ್ಟ್ – ನೀವೂ ಒಮ್ಮೆ ಟ್ರೈ ಮಾಡಿ

    ಬೆಳಗ್ಗೆ, ಸಂಜೆ  ಹೊತ್ತಿನಲ್ಲಿ  ಸವಿಯಬಹುದಾದ ರೆಸಿಪಿ ಹುಡುಕುತ್ತಿದ್ದೀರಾ?  ತಿನ್ನಲು ರುಚಿಕರವಾಗಿರುವ ಮತ್ತು ಮಕ್ಕಳಿಗೆ ತುಂಬಾನೇ ಇಷ್ಟವಾಗುವ ಅಡುಗೆ ಎಂದರೆ ಟೊಮೆಟೋ ಬಾತ್. ಈ ಅಡುಗೆಯನ್ನು ಮಾಡುವುದು ತುಂಬಾ ಸುಲಭ ಮತ್ತು ನಾಲಿಗೆಗೆ ರುಚಿ ನೀಡುವ ಅಡುಗೆಯಾಗಿದೆ.  ರುಚಿ ರುಚಿಯಾದ ಟೊಮೆಟೋ ಬಾತ್ ಮಾಡೋದು ಹೇಗೆ ಎಂಬುದು ಇಲ್ಲಿದೆ
    ಬೇಕಾಗುವ ಸಾಮಗ್ರಿಗಳು:
    * ಬೇಕಾಗುವ ಸಾಮಾಗ್ರಿಗಳು :
    * ತುಪ್ಪ- ಅರ್ಧ ಕಪ್
    * ಪುಲಾವ್ ಎಲೆ- 2
    * ಚಕ್ಕೆ – 2
    * ಲವಂಗ – 4
    * ಏಲಕ್ಕಿ – 2
    * ಶುಂಠಿ -ಬೆಳ್ಳುಳ್ಳಿ ಪೇಸ್ಟ್ – ಅರ್ಧ ಚಮಚ
    * ನೆನೆಸಿದ ಒಣ ಬಟಾಣಿ -ಅರ್ಧ ಕಪ್
    * ಗೋಡಂಬಿ – ಸ್ವಲ್ಪ
    * ಹಸಿ ಮೆಣಸಿನ ಕಾಯಿ – 2
    * ಟೊಮೆಟೋ – 2
    * ಅರಿಶಿನ ಪುಡಿ – ಸ್ವಲ್ಪ
    * ರುಚಿಗೆ ತಕ್ಕಷ್ಟು ಉಪ್ಪು
    * ಅಚ್ಚ ಖಾರದ ಪುಡಿ – ಅರ್ಧ ಚಮಚ
    * ಪುದಿನ ಎಲೆ – 5 ಎಲೆಗಳು
    * ಕೊತ್ತಂಬರಿ ಸೊಪ್ಪು – 3 ದೊಡ್ಡ ಚಮಚ
    * ಅಕ್ಕಿ – 2 ಕಪ್ ಇದನ್ನೂ ಓದಿ:  ಬಿಸ್ಕೆಟ್ ನಿಂದ ತಯಾರಿಸಿ ಸಿಹಿಯಾದ ಬರ್ಫಿ

    ಮಾಡುವ ವಿಧಾನ:
    * ಒಂದು ಕಪ್ ಅಕ್ಕಿಯನ್ನು ಕೆಲ ನಿಮಿಷಗಳ ಕಾಲ ತೊಳೆದು ನೀರಿನಲ್ಲಿ ನೆನೆಸಿಡಿ.
    * ನಂತರ ಪ್ರೆಶರ್ ಕುಕ್ಕರ್‍ನಲ್ಲಿ 2 ಚಮಚ ತುಪ್ಪವನ್ನು ಹಾಕಿ ಬಿಸಿ ಮಾಡಿ ಅದಕ್ಕೆ 2 ಪಲಾವ್ ಎಲೆ, ಚಕ್ಕೆ, ಏಲಕ್ಕಿ ಮತ್ತು 2 ಲವಂಗ ಸೇರಿಸಿ ಹುರಿದುಕೊಳ್ಳಿ. ಇದನ್ನೂ ಓದಿ:  ನಾಲಿಗೆ ಚಪ್ಪರಿಸಿ ತಿನ್ನುವ ಶುಂಠಿ ಉಪ್ಪಿನಕಾಯಿ ಮಾಡುವ ವಿಧಾನ

    * ನಂತರ ಹಸಿ ಬಟಾಣಿ, ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್, ಈರುಳ್ಳಿ ಸೇರಿಸಿ ಹಸಿ ವಾಸನೆ ಹೋಗುವವರೆಗೂ ಚನ್ನಾಗಿ ಹುರಿಯಬೇಕು.
    * ಈಗ 2 ಚಮಚ ಗೋಡಂಬಿ ಬೀಜ, ಹಸಿ ಮೆಣಸಿನ ಕಾಯಿ, ಟೊಮೆಟೋ ಸೇರಿಸಿ ಮಧ್ಯಮ ಉರಿಯಲ್ಲಿ ಚನ್ನಾಗಿ ಹುರಿಯಿರಿ. ಇದನ್ನೂ ಓದಿ: ಮಂಗಳೂರು ಸ್ಟೈಲ್ ಚಿಕನ್ ಸುಕ್ಕಾ ಮಾಡೋ ಸುಲಭ ವಿಧಾನ

    * ಈಗ ಮೆಣಸಿನ ಪುಡಿ, ಉಪ್ಪು, 5 ಕತ್ತರಿಸಿದ ಪುದಿನ ಎಲೆಗಳು, 3 ಚಮಚ ಸಣ್ಣಗೆ ಕತ್ತರಿಸಿದ ಕೊತ್ತಂಬರಿ ಸೊಪ್ಪು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂ ತರ 2 ಕಪ್ ನೀರನ್ನು ಹಾಕಿ ಚನ್ನಾಗಿ ಕುದಿಸಿ, ನೀರು ಕುದಿಯಲು ಪ್ರಾರಂಭಿಸಿದ ನಂತರ ಅದಕ್ಕೆ ನೆನೆಸಿದ ಅಕ್ಕಿಯನ್ನು ಹಾಕಿ ಚನ್ನಾಗಿ ಮಿಶ್ರಣ ಮಾಡಿ. ಇದನ್ನೂ ಓದಿ: ಅಕ್ಕಿ ರೊಟ್ಟಿಗೆ ಕಾಂಬಿನೇಷನ್ ಖಾರವಾದ ಚಿಕನ್ ಮಸಾಲ

    * ಒಂದೆರಡು ವಿಷಲ್ ಬರುವವರೆಗೆ ದೊಡ್ಡ ಉರಿಯಲ್ಲಿ ಬೇಯಿಸಿದರೆ ರುಚಿಯಾ ಟೊಮೆಟೋ ಬಾತ್ ಸವಿಯಲು ಸಿದ್ಧವಾಗುತ್ತದೆ.