Tag: ಟೊವಿನೋ ಥಾಮಸ್

  • ಮ್ಯಾನೇಜರ್ ಮೇಲೆ ಹಲ್ಲೆ- ನಟ ಉನ್ನಿ ಮುಕುಂದನ್ ವಿರುದ್ಧ ಕೇಸ್

    ಮ್ಯಾನೇಜರ್ ಮೇಲೆ ಹಲ್ಲೆ- ನಟ ಉನ್ನಿ ಮುಕುಂದನ್ ವಿರುದ್ಧ ಕೇಸ್

    ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಖ್ಯಾತ ಮಲಯಾಳಂ ನಟ ಉನ್ನಿ ಮುಕುಂದನ್ (Unni Mukundan) ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕೊಚ್ಚಿ ಇನ್ಫೋ ಪಾರ್ಕ್ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:ಚಾಕ್ಲೇಟ್ ಕಲರ್ ಕಟ್ ಔಟ್ ಡ್ರೆಸ್‌ನಲ್ಲಿ ಸಮಂತಾ ಮಿಂಚಿಂಗ್- ಬೆಂಕಿ ಲುಕ್ ಎಂದ ಫ್ಯಾನ್ಸ್

    ನಟ ಉನ್ನಿ ಮುಕುಂದನ್ ವಿರುದ್ಧ ಮ್ಯಾನೇಜರ್ ವಿಪಿನ್ ಕುಮಾರ್ ದೂರು ನೀಡಿದ್ದಾರೆ. ಟೋವಿನೋ ಥಾಮಸ್ (Tovino Thomas) ನಟನೆಯ ‘ನರಿವೆಟ್ಟ’ ಸಿನಿಮಾ ಬಗ್ಗೆ ಮೆಚ್ಚಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಕ್ಕೆ ನಟ ಉನ್ನಿ ತಮಗೆ ಕಪಾಳಮೋಕ್ಷ ಮಾಡಿದ್ದಲ್ಲದೇ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಮ್ಯಾನೇಜರ್ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ:ಫಸ್ಟ್‌ ಟೈಮ್‌ ಕನ್ನಡ ಚಿತ್ರರಂಗದಲ್ಲಿ ಪೋಸ್ಟರ್‌ ಬ್ಯಾನ್‌

    ಕೊಚ್ಚಿ ಇನ್ಫೋ ಪಾರ್ಕ್ ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಿಸೋದರ ಜೊತೆಗೆ ಮಲಯಾಳಂ ಕಲಾವಿದರ ಸಂಘದಲ್ಲಿಯೂ ಉನ್ನಿ ಮುಕುಂದನ್ ವಿರುದ್ಧ ಮ್ಯಾನೇಜರ್ ದೂರು ನೀಡಿರೋದಾಗಿ ತಿಳಿಸಿದ್ದಾರೆ.

    ನಾನು ಅನೇಕ ಸಿನಿಮಾಗಳಿಗೆ ಪಿಆರ್ ಆಗಿ ಕೆಲಸ ಮಾಡಿದ್ದೇನೆ. ಅದರಂತೆ ‘ನರಿವೆಟ್ಟ’ ಸಿನಿಮಾಗೂ ಪ್ರಚಾರ ಮಾಡಿದ್ದೆ, ಈ ಸಿನಿಮಾ ಬಗ್ಗೆ ಹೊಗಳಿ ಪೋಸ್ಟ್ ಮಾಡಿದ್ದು ಉನ್ನಿ ಮುಕುಂದನ್‌ಗೆ ಇಷ್ಟವಾಗಲಿಲ್ಲ. ಹಾಗಾಗಿ ಮೇ 26ರಂದು ತಮ್ಮ ಫ್ಲಾಟ್‌ನ ಪಾರ್ಕಿಂಗ್ ಏರಿಯಾಗೆ ತಮ್ಮನ್ನು ಕರೆದು ನಟ ಹಲ್ಲೆ ಮಾಡಿರೋದಾಗಿ ಮ್ಯಾನೇಜರ್ ದೂರು ನೀಡಿದ್ದಾರೆ. ಈ ಬಗ್ಗೆ ನಟ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಮಾಲಿವುಡ್ ಸ್ಟಾರ್ ಗೆ ಸಿಂಪಲ್ ಸ್ಟಾರ್ ಸಾಥ್

    ಮಾಲಿವುಡ್ ಸ್ಟಾರ್ ಗೆ ಸಿಂಪಲ್ ಸ್ಟಾರ್ ಸಾಥ್

    ಮಿನ್ನಲ್ ಮುರಳಿ ಎಂಬ ಸೂಪರ್ ಹೀರೋ ಸಿನಿಮಾ ಮೂಲಕ ಖ್ಯಾತಿ ಪಡೆದಿರುವ ಟೊವಿನೋ ಥಾಮಸ್ (Tovino Thomas) ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಅಜಯಂತೆ ರಂದಂ ಮೋಷನಂ (ARM) ಟೀಸರ್ ರಿಲೀಸ್ ಆಗಿದೆ. ಹಿಂದಿಯಲ್ಲಿ ಹೃತಿಕ್ ರೋಷನ್, ತೆಲುಗಿನಲ್ಲಿ ನಾನಿ, ತಮಿಳಿನಲ್ಲಿ ಲೋಕೇಶ್ ಕನಕರಾಜ್ ಮತ್ತು ಆರ್ಯ, ಕನ್ನಡದಲ್ಲಿ ರಕ್ಷಿತ್ ಶೆಟ್ಟಿ (Rakshit Shetty), ಮಲಯಾಳಂ ಪೃಥ್ವಿರಾಜ್ ಸುಕುಮಾರನ್ ಸೋಷಿಯಲ್ ಮೀಡಿಯಾ ಮೂಲಕ ಟೀಸರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

    ಟೊವಿನೋ ಥಾಮಸ್ ಮಾಸ್ ಅವತಾರ ತಾಳಿದ್ದಾರೆ. ಹಳ್ಳಿಗಾಡಿನಲ್ಲಿ ನಡೆಯುವ ಘಟನೆ ಸುತ್ತ ಇಡೀ ಟೀಸರ್ ಸಾಗುತ್ತದೆ. ಟೊವಿನೋ ಥಾಮಸ್ ವೃತ್ತಿ ಜೀವನದ ಬಹುವಿಶೇಷ ಸಿನಿಮಾ ಇದಾಗಿದೆ. ಈ  ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ  ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ.  ಮಲಯಾಳಂ ಖ್ಯಾತ ನಟ ಟೊವಿನೋ ಥಾಮಸ್ ವೃತ್ತಿ ಜೀವನದ ಬಹು ವಿಶೇಷ ಸಿನಿಮಾ ಇದಾಗಿದೆ.  ಇದನ್ನೂ ಓದಿ:ಕಾಲೆಳೆದ ನಟಿಗೆ ಸ್ನೇಹದ ಹಸ್ತಚಾಚಿದ ರಶ್ಮಿಕಾ ಮಂದಣ್ಣ

    ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ. ಸೌತ್ ಸಿನಿರಂಗದ ಸೆನ್ಸೇಷನಲ್ ನಟಿ ಕೃತಿ ಶೆಟ್ಟಿಗೂ (Kriti Shetty) ಸ್ಪೆಷಲ್ ಆಗಿದ್ದು ತೆಲುಗು, ತಮಿಳಿನಲ್ಲಿ ಮಿಂಚಿದ್ದ ಕೃತಿ ಶೆಟ್ಟಿ ಈಗ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿ ನೀಡುತ್ತಿದ್ದಾರೆ. ಟೊವಿನೋ ಥಾಮಸ್ ಜೋಡಿಯಾಗಿ ಕೃತಿ ನಟಿಸುತ್ತಿದ್ದು, ಉಳಿದಂತೆ ನಟಿಯರಾದ ಐಶ್ವರ್ಯ ರಾಜೇಶ್, ಸುರಭಿ ಲಕ್ಷಿ ಕೂಡ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

    ‘ಅಜಯಂತೆ ರಂದಂ ಮೋಷನಂ’ ನಿರ್ದೇಶಕ ಜಿತಿನ್ ಲಾಲ್ ನಿರ್ದೇಶಿಸುತ್ತಿದ್ದು ಇದು ಇವರ ಮೊದಲ ಸಿನಿಮಾ. ಸುಜಿತ್ ನಂಬಿಯಾರ್ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದು, ಬಾಸಿಲ್ ಜೋಸೆಫ್, ಕಿಶೋರ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಜಗದೀಶ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರ್ಮಾಣವಾಗುತ್ತಿರುವ 3ಡಿಯಲ್ಲಿ ತೆರೆ ಕಾಣುವ ‘ಅಜಯಂತೆ ರಂದಂ ಮೋಷನಂ’ ಚಿತ್ರವನ್ನು ಯುಜಿಎಂ ಪ್ರೊಡಕ್ಷನ್ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಮ್ಯಾಜಿಕ್ ಫ್ರೇಮ್ಸ್ ಸಹ ನಿರ್ಮಾಣ ಮಾಡುತ್ತಿದೆ.

  • 3ಡಿಯಲ್ಲಿ ಮೂಡಿ ಬರಲಿದೆ ‘ಅಜಯಂತೆ ರಂದಂ ಮೋಷನಂ’ ಪ್ಯಾನ್ ಇಂಡಿಯಾ ಸಿನಿಮಾ

    3ಡಿಯಲ್ಲಿ ಮೂಡಿ ಬರಲಿದೆ ‘ಅಜಯಂತೆ ರಂದಂ ಮೋಷನಂ’ ಪ್ಯಾನ್ ಇಂಡಿಯಾ ಸಿನಿಮಾ

    ಲಯಾಳಂ ಖ್ಯಾತ ನಟ ಟೊವಿನೋ ಥಾಮಸ್, ನಟಿ ಕೃತಿ ಶೆಟ್ಟಿ (Kriti Shetty) ಅಭಿನಯದ ನೂತನ ಪ್ಯಾನ್ ಇಂಡಿಯಾ ಸಿನಿಮಾ ‘ಅಜಯಂತೆ ರಂದಂ ಮೋಷನಂ’ (Ajayante Randam Moshanam) ಇಂದು ಸೆಟ್ಟೇರಿದೆ. ಫ್ಯಾಂಟಸಿ ಅಡ್ವೆಂಚರ್ ಸಿನಿಮಾ ಇದಾಗಿದ್ದು, 3ಡಿಯಲ್ಲಿ ತೆರೆ ಕಾಣಲಿರುವ ಬಿಗ್ ಬಜೆಟ್ ಚಿತ್ರದ ಮುಹೂರ್ತ ಇಂದು ಅದ್ದೂರಿಯಾಗಿ ನೆರವೇರಿದೆ. ಮಲಯಾಳಂ ಖ್ಯಾತ ನಟ ಟೊವಿನೋ ಥಾಮಸ್ (Tovino Thomas) ವೃತ್ತಿ ಜೀವನದ ಬಹು ವಿಶೇಷ ಸಿನಿಮಾ ಇದಾಗಿದೆ.  ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ (Pan India)  ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ.

    ಮೂರು ಯುಗಗಳನ್ನು ಸುತ್ತುವ ಕಥೆ ಚಿತ್ರದಲ್ಲಿದ್ದು ಟೊವಿನೋ ಥಾಮಸ್ ಮಣಿಯನ್, ಅಜಯನ್, ಕುಂಜಿಕೇಲು ಎಂಬ ಮೂರು ಪಾತ್ರಗಳಿಗೆ ಜೀವ ತುಂಬುತ್ತಿದ್ದಾರೆ. ಈ ಚಿತ್ರ ಸೌತ್ ಸಿನಿರಂಗದ ಸೆನ್ಸೇಷನಲ್ ನಟಿ ಕೃತಿ ಶೆಟ್ಟಿಗೂ ಸ್ಪೆಷಲ್ ಆಗಿದ್ದು ತೆಲುಗು, ತಮಿಳಿನಲ್ಲಿ ಮಿಂಚಿದ್ದ ಕೃತಿ ಈಗ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿ ನೀಡುತ್ತಿದ್ದಾರೆ. ನಟಿಯರಾದ ಐಶ್ವರ್ಯ ರಾಜೇಶ್, ಸುರಭಿ ಲಕ್ಷಿ ಕೂಡ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ:`ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಿಎಂಗೆ ಆಹ್ವಾನ ನೀಡಿದ ಅಣ್ಣಾವ್ರ ಕುಟುಂಬ

     

    ‘ಅಜಯಂತೆ ರಂದಂ ಮೋಷನಂ’ ನಿರ್ದೇಶಕ ಜಿತಿನ್ ಲಾಲ್ ನಿರ್ದೇಶಿಸುತ್ತಿದ್ದು ಇದು ಇವರ ಮೊದಲ ಸಿನಿಮಾ. ಸುಜಿತ್ ನಂಬಿಯಾರ್ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದು, ಬಾಸಿಲ್ ಜೋಸೆಫ್, ಕಿಶೋರ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಜಗದೀಶ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರ್ಮಾಣವಾಗುತ್ತಿರುವ 3ಡಿಯಲ್ಲಿ ತೆರೆ ಕಾಣುವ ‘ಅಜಯಂಂತೆ ರಂದಂ ಮೋಷನಂ’ ಚಿತ್ರವನ್ನು ಯುಜಿಎಂ ಪ್ರೊಡಕ್ಷನ್ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಮ್ಯಾಜಿಕ್ ಫ್ರೇಮ್ಸ್ ಸಹ ನಿರ್ಮಾಣ ಮಾಡುತ್ತಿದೆ.

    ಚಿತ್ರದ ತಾಂತ್ರಿಕ ಬಳಗ ಅನುಭವಿ ತಂತಜ್ಞರಿಂದ ಕೂಡಿದ್ದು,  ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ದೀಪು ನೈನನ್ ಥಾಮಸ್ ಸಂಗೀತ ನಿರ್ದೇಶನ, ಜೋಮನ್ ಟಿ ಜಾನ್ ಛಾಯಾಗ್ರಹಣ, ಶಮೀರ್ ಮೊಹಮ್ಮದ್ ಸಂಕಲನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್ ಅಪಹಾಸ್ಯ – ಕೆಆರ್‌ಕೆ, ಅಭಿಷೇಕ್ ಬಚ್ಚನ್ ರೋಚಕ ಟ್ವೀಟ್ ಸಮರ!

    ಬಾಲಿವುಡ್ ಅಪಹಾಸ್ಯ – ಕೆಆರ್‌ಕೆ, ಅಭಿಷೇಕ್ ಬಚ್ಚನ್ ರೋಚಕ ಟ್ವೀಟ್ ಸಮರ!

    ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರು, ಕಮಾಲ್ ಆರ್ ಖಾನ್ ಅವರಿಗೆ ಟ್ವಿಟರ್‌ನಲ್ಲಿ ಹಾಸ್ಯದ ಪ್ರತಿಕ್ರಿಯೆಗಳನ್ನು ನೀಡುವ ಮೂಲಕ ನೆಟ್ಟಿಗರ ಗಮನ ಸೆಳೆದಿದಿದ್ದಾರೆ.

    ಅಭಿಷೇಕ್ ಅವರು ಶನಿವಾರ ಟೊವಿನೋ ಥಾಮಸ್ ಮತ್ತು ಕೀರ್ತಿ ಸುರೇಶ್ ಅಭಿನಯದ ವಾಶಿ ಚಿತ್ರದ ಪೋಸ್ಟರ್ ಅನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದಕ್ಕೆ ಅವರು ಮಲಯಾಳಂ ಚಲನಚಿತ್ರೋದ್ಯಮದಿಂದ ಮತ್ತೊಂದು ಅದ್ಭುತ ಚಿತ್ರ ಬರುತ್ತಿದೆ ಎಂದು ಶೀರ್ಷಿಕೆ ನೀಡಿದ್ದರು. ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರ

    ಈ ವೇಳೆ ಅಭಿಷೇಕ್ ಅವರ ಟ್ವೀಟ್ ಅನ್ನು ಗಮನಿಸಿದ ಕೆಆರ್‌ಕೆಗೆ ಅದು ಇಷ್ಟವಾಗಲಿಲ್ಲ. ಅವರು ಆಗಾಗ್ಗೆ ಬಾಲಿವುಡ್ ನಟರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ. ‘ಸಹೋದರ, ಎಂದಾದರೂ ನೀವು ಬಾಲಿವುಡ್ ಜನರು ನಂಬಲುಸಾಧ್ಯವಾದ ಚಲನಚಿತ್ರವನ್ನು ಮಾಡಿ’ ಎಂದು ಟ್ವೀಟ್ ಮಾಡಿ ಟಾಂಗ್ ನೀಡಿದ್ದಾರೆ.

    ಇದಕ್ಕೆ ಪ್ರತಿ ಉತ್ತರವಾಗಿ ಕೆಆರ್‌ಕೆಯ ಚಿತ್ರ `ದೇಶದ್ರೋಹಿ’ ಬಗ್ಗೆ ವ್ಯಂಗ್ಯವಾಡಿದ ಬಚ್ಚನ್, ನಾವು ಪ್ರಯತ್ನ ಮಾಡುತ್ತೇವೆ. ನೀವು ಒಂದು ಚಿತ್ರ ಮಾಡಿದ್ದೀರಲ್ಲ `ದೇಶದ್ರೋಹಿ’ ಎಂದು ಕುಟುಕಿದ್ದಾರೆ. ನಂತರ ಕೆಆರ್‌ಕೆ ಮತ್ತು ಅಭಿಷೇಕ್ ನಡುವಿನ ಟ್ವಿಟರ್ ಸಮರ ಇಲ್ಲಿಗೇ ಮುಗಿಯಲಿಲ್ಲ.

    ಅಭಿಷೇಕ್‍ಗೆ ಪ್ರತಿಕ್ರಿಯಿಸಿದ ಕೆಆರ್‌ಕೆ,  ಹಹಹಾ! ನನ್ನ ಒಂದು ಚಿತ್ರದ ಬಜೆಟ್ 1.5 ಕೋಟಿ ರೂ.ಗಿಂತ ಜಾಸ್ತಿ ಇರುವುದಿಲ್ಲ. ನನ್ನ ಚಿತ್ರದ ಬಜೆಟ್ ನಿಮ್ಮ ಮೇಕಪ್ ಮ್ಯಾನ್‍ಗೆ ಕೊಡುವ ಬಜೆಟ್‍ಗಿಂತ ಕಡಿಮೆ ಇರುತ್ತದೆ. ನಾನು ಬಾಲಿವುಡ್‍ನಲ್ಲಿ ಎರಡನೇ ಚಿತ್ರ ಮಾಡಲು ಬಯಸಿದ್ದೆ. ಆದರೆ ಬಾಲಿವುಡ್ ನನಗೆ ಅವಕಾಶ ನೀಡಲಿಲ್ಲ. ಇಲ್ಲದಿದ್ದರೆ ಅದು ಮತ್ತೊಂದು ಬ್ಲಾಕ್‍ಬಸ್ಟರ್ ಆಗುತ್ತಿತ್ತು ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಹಿಜಬ್ ಆಯ್ಕೆಯಲ್ಲ, ನಾವು ಪ್ರೀತಿಸುವ ದೇವರು ವಿಧಿಸಿರುವ ಶಿಷ್ಟಾಚಾರ: ಝೈರಾ ವಾಸಿಮ್

    ಈ ಟ್ವೀಟ್‍ಗೆ ಅಭಿಷೇಕ್ ಮತ್ತೊಮ್ಮೆ ಕೆಆರ್‌ಕೆಗೆ ಟಾಂಗ್ ಕೊಟ್ಟಿದ್ದು, ಬನ್ನಿ, ನೀವೂ ಪ್ರಯತ್ನಿಸಿ, ಹೋರಾಟ ಯಶಸ್ವಿಯಾಗಲಿ ಅಂತ ಹಾರೈಸೋಣ ಎಂದು ಪಂಥಾಹ್ವಾನ ನೀಡಿದ್ದಾರೆ.

    ಅಭಿಷೇಕ್ ಮತ್ತು ಕೆಆರ್‍ಕೆಯ ಈ ಸಂಭಾಷಣೆಯ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಷೇಕ್ ಅವರು ದಾಸ್ವಿ ಎಂಬ ತಮ್ಮ ಮುಂಬರುವ ಚಿತ್ರದಲ್ಲಿ ಬಣ್ಣ ಹಚ್ಚಲಿದ್ದು, ಚಿತ್ರದ ನಾಯಕಿಯಾಗಿ ಯಾಮಿ ಗೌತಮ್ ಅವರು ಕೂಡಾ ಕಾಣಿಸಿಕೊಳ್ಳಲಿದ್ದಾರೆ.