Tag: ಟೋಕಿಯೋ ಒಲಿಂಪಿಕ್ಸ್

  • Lausanne Diamond League: ಚಿನ್ನಕ್ಕೆ ಮುತ್ತಿಟ್ಟ ನೀರಜ್‌ ಚೋಪ್ರಾ

    Lausanne Diamond League: ಚಿನ್ನಕ್ಕೆ ಮುತ್ತಿಟ್ಟ ನೀರಜ್‌ ಚೋಪ್ರಾ

    ಬರ್ರೆನ್‌: ಟೋಕಿಯೋ ಒಲಿಂಪಿಕ್ಸ್‌ನಲ್ಲಿ (Olympics) ಚಿನ್ನಗೆದ್ದು ಭಾರತದ ಕೀರ್ತಿಪತಾಕೆ ಹಾರಿಸಿದ್ದ ಭಾರತದ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ (Neeraj Chopra) ಲಾಸೆನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ನಲ್ಲಿ ಚಿನ್ನದ ಪದಕ ಗೆದ್ದು ಮಿಂಚಿದ್ದಾರೆ.

    ಒಲಿಂಪಿಕ್ಸ್‌ ಬಳಿಕ ಅದ್ಭುತ ಫಾರ್ಮ್‌ ಮುಂದುವರಿಸಿರುವ ನೀರಜ್‌ ಪ್ರತಿಷ್ಠಿತ ಡೈಮಂಡ್‌ ಲೀಗ್ (Lausanne Diamond League) ಸ್ಪರ್ಧೆಯಲ್ಲಿ ಚಿನ್ನಕ್ಕೆ ಕೊರಳೊಡ್ಡಿದ್ದಾರೆ. ಈ ಹಿಂದೆ ದೋಹಾ ಡೈಮಂಡ್ ಲೀಗ್‌ನಲ್ಲಿ ಗೆದ್ದಿದ್ದ ನೀರಜ್ ಚೋಪ್ರಾ, ಡೈಮಂಡ್‌ ಲೀಗ್‌ನಲ್ಲಿ ಸತತ 2ನೇ ಗೆಲುವು ದಾಖಲಿಸಿದ್ದಾರೆ. ಇದನ್ನೂ ಓದಿ: Indonesia Open 2023: ಐತಿಹಾಸಿಕ ಜಯ ತಂದ ಮೊದಲ ಭಾರತೀಯ ಜೋಡಿ, ಸಾತ್ವಿಕ್‌ಸಾಯಿರಾಜ್, ಚಿರಾಗ್‌ಗೆ ಪ್ರಶಸ್ತಿ

    ಗಾಯದ ಸಮಸ್ಯೆಯಿಂದ ಯಾವುದೇ ಟೂರ್ನಿಯಲ್ಲಿ ಪಾಲ್ಗೊಳ್ಳದೇ ವಿಶ್ರಾಂತಿಯಲ್ಲಿದ್ದ ನೀರಜ್‌ ಇದೀಗ ಡೈಮಂಡ್‌ ಲೀಗ್‌ ಮೂಲಕ ಕಂಬ್ಯಾಕ್‌ ಮಾಡಿದ್ದಾರೆ. ಹೌದು.. ಸ್ನಾಯು ಸೆಳೆತ ಕಾರಣದಿಂದಾಗಿ ಕಳೆದ ಜೂನ್ 4ರಂದು ನೆದರ್‌ಲ್ಯಾಂಡ್ಸ್‌ನ ಹೆಂಗೆಲೋದಲ್ಲಿ ನಡೆದ ಎಫ್‌ಬಿಕೆ ಗೇಮ್ಸ್ ಮತ್ತು ಜೂನ್ 13ರಂದು ಫಿನ್‌ಲ್ಯಾಂಡ್‌ನ ತುರ್ಕುದಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಿಂದಲೂ ಅವರು ಹೊರಗುಳಿಯಬೇಕಾಗಿತ್ತು.

    ಇದೀಗ ಸ್ವಿಡ್ಜರ್‌ಲ್ಯಾಂಡ್‌ನ ಲೌಸನ್ನೆಯಲ್ಲಿ ನಡೆದ ಲೀಗ್‌ ಫೈನಲ್‌ನಲ್ಲಿ 87.66 ಮೀಟರ್‌ ದೂರಕ್ಕೆ ಜಾವೆಲಿನ್ ಎಸೆದ (Javelin Throw) ನೀರಜ್‌, ಅಗ್ರಸ್ಥಾನದೊಂದಿಗೆ ಆಟ ಮುಗಿಸಿದ್ದಾರೆ. ನೀರಜ್ ಮೊದಲ ಪ್ರಯತ್ನದಲ್ಲೇ ಫೌಲ್‌ ಮಾಡಿದರು. 2ನೇ ಪ್ರಯತ್ನದಲ್ಲಿ 83.52 ಮೀಟರ್ ದೂರ ಜಾವೆಲಿನ್ ಎಸೆದರು. 3ನೇ ಪ್ರಯತ್ನದಲ್ಲಿ 85.04 ಮೀಟರ್ ದೂರ ಜಾವೆಲಿನ್ ಥ್ರೋ ಮಾಡಿದರೆ, ನಾಲ್ಕನೇ ಪ್ರಯತ್ನದಲ್ಲಿ ಮತ್ತೆ ಫೌಲ್‌ ಮಾಡಿದರು. ಆದರೆ 5ನೇ ಪ್ರಯತ್ನದಲ್ಲಿ ನೀರಜ್ 87.66 ಮೀಟರ್ ದೂರ ಜಾವೆಲಿನ್ ಥ್ರೋ ಮಾಡುವ ಅಗ್ರಸ್ಥಾನ ಕಾಯ್ದುಕೊಂಡರು.

    ಜರ್ಮನಿಯ ಜೂಲಿಯನ್ ವೆಬರ್ ಮತ್ತು ಜಕುಬ್ ವಡ್ಲೆಜ್ ತಮ್ಮ ಅಂತಿಮ ಪ್ರಯತ್ನಗಳಲ್ಲಿ ಕ್ರಮವಾಗಿ 87.03 ಮೀ ಹಾಗೂ 86.13 ಮೀ ದಾಖಲಿಸಿ 2 ಮತ್ತು 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಇದನ್ನೂ ಓದಿ: ಒಡಿಶಾ ರೈಲು ದುರಂತದಲ್ಲಿ ಮೃತರ ಕುಟುಂಬಕ್ಕೆ 20 ಲಕ್ಷ ದೇಣಿಗೆ ನೀಡಿದ ಭಾರತೀಯ ಫುಟ್ಬಾಲ್‌ ತಂಡ

    ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತದ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ ಅವರು ಲಾಸನ್‌ನಲ್ಲಿ ನಡೆದ ಡೈಮಂಡ್ ಲೀಗ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. 89.04 ಮೀ. ಜಾವೆಲಿನ್ ಎಸೆಯುವ ಮೂಲಕ ಮೊದಲ ಸ್ಥಾನ ಪಡೆದು, ಈ ವಿಶಿಷ್ಟ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ಗೌರವಕ್ಕೆ ನೀರಜ್ ಪಾತ್ರರಾಗಿದ್ದರು. ‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 1.5 ಕೋಟಿ ರೂ. ನೀಡಿ ನೀರಜ್ ಚೋಪ್ರಾರ ಜಾವೆಲಿನ್ ಖರೀದಿಸಿದ ಬಿಸಿಸಿಐ

    1.5 ಕೋಟಿ ರೂ. ನೀಡಿ ನೀರಜ್ ಚೋಪ್ರಾರ ಜಾವೆಲಿನ್ ಖರೀದಿಸಿದ ಬಿಸಿಸಿಐ

    ಮುಂಬೈ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾರ ಜಾವೆಲಿನ್ ಒಂದನ್ನು ಇ-ಹರಾಜಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 1.5 ಕೋಟಿ ರೂ. ನೀಡಿ ಖರೀದಿಸಿದೆ.

    ಇ-ಹರಾಜು 2021ರಲ್ಲಿ ಆಗಿತ್ತು. ಈ ವೇಳೆ 1.5 ಕೋಟಿ ರೂ. ನೀಡಿ ಖರೀದಿಸಿರುವ ಬಗ್ಗೆ ಇದೀಗ ಮಾಹಿತಿ ಹೊರಬಿದ್ದಿದೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಬಳಸಿದ್ದ ಜಾವೆಲಿನ್ ಒಂದನ್ನು ನೀರಜ್ ಚೋಪ್ರಾ ಪ್ರಧಾನಿ ನರೇಂದ್ರ ಮೋದಿಗೆ ಉಡುಗೊರೆಯಾಗಿ ನೀಡಿದ್ದರು. ಈ ಉಡುಗೊರೆಯನ್ನು ನಮಾಮಿ ಗಂಗಾ ಯೋಜನೆಗೆ ಹಣ ಸಂಗ್ರಹಣೆಗಾಗಿ ಹರಾಜಿಗಿಡಲಾಗಿತ್ತು. ಇ-ಹರಾಜಿನಲ್ಲಿ ಬಿಸಿಸಿಐ ಜಾವೆಲಿನ್‍ನ್ನು ಖರೀದಿಸಿದೆ. ಇದನ್ನೂ ಓದಿ: ಕಸ ಹಾಕಿದ್ದಕ್ಕೆ ದಂಡ ವಿಧಿಸಲು ಹೋದ ಮಾರ್ಷಲ್‌ಗಳ ಮೇಲೆ ರಿಕ್ಷಾ ಹತ್ತಿಸಿದ್ರು

    2014ರಲ್ಲಿ ಪ್ರಾರಂಭಗೊಂಡ ನಮಾಮಿ ಗಂಗಾ ಯೋಜನೆಯ ಮೂಲಕ ಗಂಗಾ ನದಿಯ ಸ್ವಚ್ಛತೆ ಮತ್ತು ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿದೆ. ಈಗಾಗಲೇ ಸಾಕಷ್ಟು ಹಣ ನಮಾಮಿ ಯೋಜನೆಗೆ ಹರಿದುಬಂದಿದೆ. ಬಿಸಿಸಿಐ ಇ-ಹರಾಜಿನಲ್ಲಿ ಜಾವೆಲಿನ್ ಸಹಿತ ಇತರ ವಸ್ತುಗಳನ್ನು ಖರೀದಿಸಿದೆ. 1,348 ವಿವಿಧ ಕ್ರೀಡಾ ಪರಿಕರಗಳನ್ನು ಹರಾಜಿಗಿಡಲಾಗಿತ್ತು. ಒಟ್ಟು 8,600 ಬಿಡ್ ಸಲ್ಲಿಕೆಯಾಗಿತ್ತು. ಇದನ್ನೂ ಓದಿ: 5 ಲಕ್ಷ ರೂ. ಚೆಕ್‌ನೊಂದಿಗೆ ಬಸವಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ ಸಾಯಿನಾಥ್‌

    ಈ ಹಿಂದೆ ಕೊರೊನಾ ಸಮಯದಲ್ಲಿ  ಪಿಎಂ ಕೇರ್ಸ್ ಫಂಡ್‌ಗೆ ಬಿಸಿಸಿಐ 51 ಕೋಟಿ ರೂ. ದೇಣಿಗೆ ನೀಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಚಿನ್ನದ ಹುಡುಗ ನೀರಜ್ ಚೋಪ್ರಾ ಕೊರಳಿಗೆ ಮತ್ತೊಂದು ಚಿನ್ನ

    ಚಿನ್ನದ ಹುಡುಗ ನೀರಜ್ ಚೋಪ್ರಾ ಕೊರಳಿಗೆ ಮತ್ತೊಂದು ಚಿನ್ನ

    ಹೆಲ್ಸಿಂಕಿ: ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತದ ಕ್ರೀಡಾತಾರೆ ನೀರಜ್ ಚೋಪ್ರಾ ಫಿನ್‌ಲ್ಯಾಂಡ್‌ನಲ್ಲಿ ನಡೆದ ಕುರ್ಟೇನ್ ಗೇಮ್ಸ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಂದು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

    ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲೇ 86.69 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ವಿಶ್ವದ ದುಬಾರಿ ಕ್ರೀಡೆಯಾಗಿ ಹೊರಹೊಮ್ಮಿದ IPL

    ಫಿನ್‌ಲ್ಯಾಂಡ್‌ನಲ್ಲಿ ಈ ವಾರದ ಆರಂಭದಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ನೀರಜ್ ಚೋಪ್ರಾ 89.30 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದರು, ಈ ಮೂಲಕ ತಮ್ಮದೇ ದಾಖಲೆ ಮುರಿದಿದ್ದರು. ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಚಿನ್ನಗೆದ್ದಿದ್ದ ಭಾರತದ ನೀರಜ್ ಚೋಪ್ರಾರಿಂದ ಮತ್ತೊಂದು ದಾಖಲೆ

    ನೀರಜ್ ಚೋಪ್ರಾ ಟ್ರಿನಿಡಾಡ್ ಮತ್ತು ಟೊಬಾಗೋದ ಕೆಶೋರ್ನ್ ವಾಲ್ಕಾಟ್ ಮತ್ತು ಗ್ರೆನಡಾದ ವಿಶ್ವ ಚಾಂಪಿಯನ್ ಆ್ಯಂಡರ್ಸನ್ ಪೀಟರ್ಸ್‌ಗಿಂತ ಮೊದಲು ಗುರಿ ತಲುಪಿದರು.

    ಚೋಪ್ರಾ ಅಥ್ಲೆಟಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯರಾದರು. ಕೆಶೋರ್ನ್ ವಾಲ್ಕಾಟ್ 86.64 ಮೀ. ಜಾವೆಲಿನ್ ಎಸೆದು 2ನೇ ಸ್ಥಾನ ಪಡೆದರೆ, ಆ್ಯಂಡರ್ಸನ್ ಪೀಟರ್ಸ್ 84.75 ಮೀಟರ್ ಎಸೆಯುವ ಉತ್ತಮ ಪ್ರಯತ್ನದೊಂದಿಗೆ 3ನೇ ಸ್ಥಾನ ಪಡೆದರು.

    Live Tv

  • ಯೋಗಿ ಆದಿತ್ಯನಾಥ್‍ರಿಂದ ಕೊಡಗಿನ ಅಂಕಿತಾ ಸುರೇಶ್‍ಗೆ 10 ಲಕ್ಷ ರೂ. ಪುರಸ್ಕಾರ

    ಯೋಗಿ ಆದಿತ್ಯನಾಥ್‍ರಿಂದ ಕೊಡಗಿನ ಅಂಕಿತಾ ಸುರೇಶ್‍ಗೆ 10 ಲಕ್ಷ ರೂ. ಪುರಸ್ಕಾರ

    ಮಡಿಕೇರಿ: ಟೋಕಿಯೋ ಒಲಿಂಪಿಕ್ಸ್ ಹಾಕಿಯಲ್ಲಿ ಭಾರತ ಮಹಿಳಾ ತಂಡದ ಅಪ್ರತಿಮ ಸಾಧನೆಗೆ ಕಾರಣಕರ್ತರಾದ ಭಾರತೀಯ ಮಹಿಳಾ ಹಾಕಿ ತಂಡದ ಸಹಾಯಕ ತರಬೇತುದಾರರಾದ ಕೊಡಗಿನ ಕಂಬಿಬಾಣೆಯ ಅಂಕಿತಾ ಸುರೇಶ್ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸನ್ಮಾನಿಸಿ, 10 ಲಕ್ಷ ರೂ. ಪುರಸ್ಕಾರ ನೀಡಿ ಗೌರವಿಸಿದ್ದಾರೆ.

    ಅಂಕಿತಾ ಅವರಿಗೆ 10 ಲಕ್ಷ ರೂ.ಗಳ ಕೊಡುಗೆಯನ್ನು ಯೋಗಿ ಆದಿತ್ಯನಾಥ್ ನೀಡಿ ಪುರಸ್ಕರಿಸಿದ ಬಳಿಕ ಒಡಿಶಾದ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಕೂಡ ಅಂಕಿತಾ ಸುರೇಶ್ ಹಾಗೂ ಭಾರತೀಯ ಮಹಿಳಾ ಹಾಕಿ ತಂಡದ ಆಟಗಾರ್ತಿಯರನ್ನು ರಾಜ್ಯದ ಪರವಾಗಿ ಸನ್ಮಾನಿಸಿ ಗೌರವಿಸಿದರು. ಇದನ್ನೂ ಓದಿ: ಹಾಕಿಯಲ್ಲಿ ಸಾಧನೆ – ಕೊಡಗಿನಲ್ಲಿ ಅಂಕಿತಾ ಸುರೇಶ್‍ಗೆ ಅದ್ಧೂರಿ ಸ್ವಾಗತ

    ಪ್ರೋತ್ಸಾಹ  ಧನ ಕೊಡುಗೆ ಘೋಷಿಸಿದ ರಾಜ್ಯಪಾಲರು
    ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡದ ಸಹಾಯಕ ತರಬೇತುದಾರರಾಗಿದ್ದ ಅಂಕಿತಾ ಸುರೇಶ್ ಸೇರಿದಂತೆ ಕರ್ನಾಟಕದ ನಾಲ್ವರು ಕ್ರೀಡಾಪಟುಗಳಿಗೆ ಕರ್ನಾಟಕ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ತಲಾ ಒಂದು ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿದ್ದಾರೆ. ಜೊತೆಗೆ ನಾಲ್ವರಿಗೆ ಶೀಘ್ರದಲ್ಲೇ ರಾಜ ಭವನದಲ್ಲಿ ಗೌರವ ಸನ್ಮಾನ ನೀಡುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ. ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್ ಹಾಕಿ ಕೋಚ್ ಅಂಕಿತಾರನ್ನು ಸನ್ಮಾನಿಸಿದ ಬೊಮ್ಮಾಯಿ

  • ದೇಶಕ್ಕೆ ಹೆಮ್ಮೆ ತಂದಿದ್ದೀರಿ – ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಕೋವಿಂದ್ ಅಭಿನಂದನೆ

    ದೇಶಕ್ಕೆ ಹೆಮ್ಮೆ ತಂದಿದ್ದೀರಿ – ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಕೋವಿಂದ್ ಅಭಿನಂದನೆ

    ನವದೆಹಲಿ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕ್ರೀಡಾಪಟುಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟೀ ಪಾರ್ಟಿ ನೀಡಿ ಅಭಿನಂದಿಸಿದ್ದಾರೆ.

    ರಾಷ್ಟ್ರಪತಿ ಭವನದಲ್ಲಿ ಚಹಾ ಕೂಟ ನೀಡಿ ಮಾತನಾಡಿದ ಕೋವಿಂದ್, ಇಡೀ ದೇಶವೇ ಹೆಮ್ಮೆ ಪಡುವ ಸಾಧನೆ ಮಾಡಿದ್ದೀರಿ ಎಂದು ಹೇಳಿ ಕ್ರೀಡಾಪಟುಗಳನ್ನು ಶ್ಲಾಘಿಸಿದ್ದಾರೆ.

    ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶ ವಿದೇಶಗಳಲ್ಲಿರುವ ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿದರು. ಈ ವರ್ಷ ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ವಿಶೇಷತೆಯಿಂದ ಆಚರಿಸಲಾಗುತ್ತಿದೆ. ಇದು 75ನೇ ಸ್ವಾತಂತ್ರ್ಯ ದಿನಾಚರಣೆಯಾಗಿದೆ. ನಾವೆಲ್ಲರೂ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸುತ್ತೇವೆ. ಆದರೆ ಈ ವಿಶೇಷ ದಿನದ ಹಿಂದೆ ಹಲವು ಗಣ್ಯರ ತ್ಯಾಗ ಬಲಿದಾನಗಳಿವೆ ಎಂದು ಸ್ಮರಿಸಿಕೊಂಡರು.

    ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಹೋರಾಟ ಮಾಡಿದ ಸರ್ವರಿಗೂ ನನ್ನ ನಮನಗಳು. ನಾವೆಲ್ಲರೂ 75 ವರ್ಷಗಳಲ್ಲಿ ಹಲವು ಅಡೆ ತಡೆಗಳನ್ನು ಮೆಟ್ಟಿನಿಂತು ಎಲ್ಲರೂ ಒಂದಾಗಿ ಸಾಗಿ ಬಂದಿದ್ದೇವೆ. ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪ್ರದರ್ಶನ ಕಂಡು ದೇಶವೇ ಹೆಮ್ಮೆ ಪಡುತ್ತಿದೆ. ಹಾಗಾಗಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಮತ್ತಷ್ಟು ವಿಶೇಷವಾಗಿದೆ. 121 ವರ್ಷಗಳ ಬಳಿಕ ಒಲಿಂಪಿಕ್ಸ್ ಇತಿಹಾಸದಲ್ಲಿ ನಮ್ಮ ದೇಶದಿಂದ ಅತೀ ಹೆಚ್ಚು ಕ್ರೀಡಾಪಟುಗಳನ್ನು ಕಳುಹಿಸಿದ್ದೇವೆ ಅವರು ಉತ್ತಮ ಸಾಧನೆ ತೋರಿ ಪದಕ ಬೇಟೆಯಾಡಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಶ್ಲಾಘಿಸಿದರು. 

    ದೇಶದಲ್ಲಿ ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಹಾಗಾಗಿ ಪ್ರತಿಯೊಬ್ಬರು ಕೊರೊನಾದ ಬಗ್ಗೆ ಎಚ್ಚರದಿಂದ ಇರಬೇಕು. ಯಾರು ಕೂಡ ಮುಂಜಾಗ್ರತಾ ಕ್ರಮಗಳನ್ನು ಮರೆಯಬಾರದು. ಎಲ್ಲರೂ ಕೂಡ ಕೊರೊನಾ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಿ ಎಂದು ಕೋವಿಂದ್ ಅವರು ಮನವಿ ಮಾಡಿಕೊಂಡರು. ಇದನ್ನೂ ಓದಿ: ತವರಿಗೆ ಬಂದ ಟೋಕಿಯೋ ಒಲಿಂಪಿಕ್ಸ್ ವೀರರಿಗೆ ಅದ್ಧೂರಿ ಸ್ವಾಗತ – ದೆಹಲಿಯಲ್ಲಿ ಕೇಂದ್ರ ಸರ್ಕಾರದಿಂದ ಸನ್ಮಾನ

  • ನಿಮ್ಮ ಹೆಸರು ನೀರಜ್, ವಂದನಾ ಆಗಿದ್ರೆ ರೋಪ್ ವೇ ಸೇವೆ ಉಚಿತ

    ನಿಮ್ಮ ಹೆಸರು ನೀರಜ್, ವಂದನಾ ಆಗಿದ್ರೆ ರೋಪ್ ವೇ ಸೇವೆ ಉಚಿತ

    ಡೆಹರಾಡೂನ್: ನಿಮ್ಮ ಹೆಸರು ನೀರಜ್ ಅಥವಾ ವಂದನಾ ಆಗಿದ್ರೆ ಹರಿದ್ವಾರದ ಚಂಡಿದೇವಿ ದೇವಸ್ಥಾನಕ್ಕೆ ತೆರಳುವ ರೋಪ್ ವೇನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಮತ್ತು ಹಾಕಿಯಲ್ಲಿ ಹ್ಯಾಟ್ರಿಕ್ ಗೋಲ್ ಮಾಡಿದ ವಂದನಾ ಕಟಾರಿಯಾ ಅವರಿಗೆ ರೋಪ್ ವೇ ನಿರ್ವಹಣಾ ಕಂಪನಿ ವಿಶೇಷವಾಗಿ ಗೌರವ ಸಲ್ಲಿಸಿದೆ.

    ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ವಿವಿಧ ರೀತಿಯಲ್ಲಿ ಗೌರವ ಸಲ್ಲಿಕೆ ಮಾಡಲಾಗುತ್ತಿದೆ. ಆಯಾ ರಾಜ್ಯ ಸರ್ಕಾರಗಳು ವಿಜೇತರ ಜೊತೆ ಒಲಿಂಪಿಕ್ಸ್ ನಲ್ಲಿ ಭಾಗಿಯಾದ ಆಟಗಾರರಿಗೂ ಬಹುಮಾನ ಘೋಷಿಸಿವೆ. ಚಂಡಿದೇವಿ ದೇವಿಯ ರೋಪ್ ವೇ ನಿರ್ವಹಣೆಯ ಉಷಾ ಬ್ರೆಕೋ ಕಂಪನಿ ನೀರಜ್ ಮತ್ತು ವಂದನಾ ಹೆಸರಿನ ಜನರಿಗೆ ಉಚಿತ ಸೇವೆನೀಡುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ.

    ಆಗಸ್ಟ್ 11ರಿಂದ ಆಗಸ್ಟ್ 20ರವರೆಗೆ ನೀರಜ್ ಮತ್ತು ವಂದನಾ ಹೆಸರಿನವರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಪ್ರಯಾಣಿಕರು ಸಿಬ್ಬಂದಿಗೆ ತಮ್ಮ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೋರಿಸಬೇಕು ಎಂದು ಉಷಾ ಬ್ರೆಕೊ ಕಂಪನಿಯ ರೀಜನಲ್ ಹೆಡ್ ಮನೋಜ್ ಡೋಬಾಲ್ ಹೇಳಿದ್ದಾರೆ. ಇದನ್ನೂ ಓದಿ: 200 ರಿಂದ 4ನೇ ಸ್ಥಾನಕ್ಕೆ ಜಿಗಿತ – ಕೊನೆ ಕ್ಷಣದಲ್ಲಿ ಅದಿತಿಗೆ ತಪ್ಪಿತು ಪದಕ

    ಟೋಕಿಯೋ ಒಲಿಂಪಿಕ್ಸ್ ನಲ್ಲಿ ಇತಿಹಾಸ ಬರೆದ ಪದಕ ವೀರರು ಸೋಮವಾರ ಭಾರತಕ್ಕೆ ಹಿಂದಿರುಗಿದ್ದಾರೆ. ಎಲ್ಲ ಕ್ರೀಡಾಳುಗಳಿಗೆ ದೆಹಲಿಯ ಅಶೋಕ ಹೋಟೆಲ್ ನಲ್ಲಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಸನ್ಮಾನಿಸಿದರು. ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತ ಒಟ್ಟು ಏಳು ಪದಕಗಳನ್ನು ಗೆದ್ದಿದೆ. ಇದನ್ನೂ ಓದಿ: ನಾನು ಸಿಂಗಲ್, ಆಟದ ಮೇಲೆ ಮಾತ್ರ ನನ್ನ ಗಮನ: ನೀರಜ್ ಚೋಪ್ರಾ

  • ನೀರಜ್ ಹೆಸರಿನವರಿಗೆ ಉಚಿತ ಪೆಟ್ರೋಲ್ ಕೊಟ್ಟ ಬಂಕ್ ಮಾಲೀಕ!

    ನೀರಜ್ ಹೆಸರಿನವರಿಗೆ ಉಚಿತ ಪೆಟ್ರೋಲ್ ಕೊಟ್ಟ ಬಂಕ್ ಮಾಲೀಕ!

    ಗಾಂಧಿನಗರ: ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ ಸಾಧನೆಯನ್ನು ಬಂಕ್ ಮಾಲೀಕರೊಬ್ಬರು ವಿಶೇಷವಾಗಿ ಸಂಭ್ರಮಿಸಿದ್ದಾರೆ.

    ಹೌದು. ಗುಜರಾತ್ ನ ಭರೂಚ್‍ನಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ಆಯುಬ್ ಪಠಾಣ್ ಅವರು ವಿಶೇಷ ಆಫರ್ ನೀಡಿ ಸುದ್ದಿಯಾಗಿದ್ದಾರೆ. ನೀರಜ್ ಹೆಸರಿನವರಿಗೆ 500ರೂ. ವರೆಗೆ ಉಚಿತ ಪೆಟ್ರೋಲ್- ಡೀಸೆಲ್ ನೀಡುವ ಮೂಲಕ ನೀರಜ್ ಗೆಲುವನ್ನು ವಿಶೇಷವಾಗಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಚಿನ್ನ ಗೆದ್ದ ಬಳಿಕ ರಾಷ್ಟ್ರಗೀತೆ ವೇಳೆ ನೀರಜ್ ಕಣ್ಣೀರು- ಪದಕವನ್ನು ಮಿಲ್ಕಾ ಸಿಂಗ್‍ಗೆ ಸಮರ್ಪಿಸಿದ ಸಾಧಕ

    ಎರಡು ದಿನಗಳ ಕಾಲ ಅಂದರೆ ನಿನ್ನೆ ಸಂಜೆಯವರೆಗೆ ಪಠಾಣ್ ಅವರು ತನ್ನ ಗ್ರಾಹಕರಿಗೆ ಉಚಿತವಾಗಿ ಪೆಟ್ರೋಲ್-ಡೀಸೆಲ್ ನೀಡಿದ್ದಾರೆ. ಪೆಟ್ರೋಲ್ ಹಾಕಿಸಿಕೊಳ್ಳುವಾಗ ಗುರುತಿನ ಚೀಟಿ ತೋರಿಸಬೇಕಿತ್ತು. ಈ ವೇಳೆ ವ್ಯಕ್ತಿಯ ಹೆಸರು ನೀರಜ್ ಎಂದು ಇದ್ದರೆ ಅವರಿಗೆ ಫ್ರೀಯಾಗಿ ಪೆಟ್ರೋಲ್ ನೀಡಲಾಗಿತ್ತು. ಪಠಾಣ್ ಅವರ ಈ ಕೊಡುಗೆಯನ್ನು ಅನೇಕ ಮಂದಿ ಸದುಪಯೋಗಪಡಿಸಿಕೊಂಡರು.  ಇದನ್ನೂ ಓದಿ: ಚಿನ್ನದ ನೀರಜ್‍ಗೆ ಪ್ರಶಂಸೆಯ ಮಹಾಪೂರ – ಸರ್ಕಾರಗಳಿಂದ ಬಹುಮಾನಗಳ ಸುರಿಮಳೆ

    ಟೋಕಿಯೋ ಒಲಿಂಪಿಕ್ಸ್ ನ ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದಿದ್ದಾರೆ. ನೀರಜ್ ಅವರ ಈ ಸಾಧನೆಯನ್ನು ಇಡೀ ಭಾರತ ಕೊಂಡಾಡಿದೆ. ಬರೋಬ್ಬರಿ 120 ವರ್ಷಗಳ ಬಳಿಕ ಅಥ್ಲೆಟಿಕ್ ನಲ್ಲಿ ಭಾರತಕ್ಕೆ ಚಿನ್ನ ತಂದುಕೊಡುವ ಮೂಲಕ 23 ವರ್ಷದ ನೀರಜ್ ಚೋಪ್ರಾ ಹೀರೋ ಆಗಿ ಮಿಂಚಿದ್ದಾರೆ. ನೀರಜ್ ಅವರ ಈ ಗೆಲುವನ್ನು ಅನೇಕ ಮಂದಿ ವಿವಿಧ ರೀತಿಯಲ್ಲಿ ಆಚರಿಸಿ ಸಂಭ್ರಮಿಸಿದ್ದರು. ಅದೇ ರೀತಿ ಪಠಾಣ್ ಅವರು ಕೂಡ ವಿಶೇಷವಾಗಿ ಆಚರಿಸಿ ಖುಷಿಪಟ್ಟಿದ್ದಾರೆ. ಇದನ್ನೂ ಓದಿ: ತವರಿಗೆ ಬಂದ ಟೋಕಿಯೋ ಒಲಿಂಪಿಕ್ಸ್ ವೀರರಿಗೆ ಅದ್ಧೂರಿ ಸ್ವಾಗತ – ದೆಹಲಿಯಲ್ಲಿ ಕೇಂದ್ರ ಸರ್ಕಾರದಿಂದ ಸನ್ಮಾನ

  • ತವರಿಗೆ ಬಂದ ಟೋಕಿಯೋ ಒಲಿಂಪಿಕ್ಸ್ ವೀರರಿಗೆ ಅದ್ಧೂರಿ ಸ್ವಾಗತ – ದೆಹಲಿಯಲ್ಲಿ ಕೇಂದ್ರ ಸರ್ಕಾರದಿಂದ ಸನ್ಮಾನ

    ತವರಿಗೆ ಬಂದ ಟೋಕಿಯೋ ಒಲಿಂಪಿಕ್ಸ್ ವೀರರಿಗೆ ಅದ್ಧೂರಿ ಸ್ವಾಗತ – ದೆಹಲಿಯಲ್ಲಿ ಕೇಂದ್ರ ಸರ್ಕಾರದಿಂದ ಸನ್ಮಾನ

    ನವದೆಹಲಿ: ಟೋಕಿಯೋ ಒಲಂಪಿಕ್ಸ್ ನಲ್ಲಿ ಅದ್ವಿತೀಯ ಸಾಧನೆ ಮೆರೆದು ತಾಯ್ನಾಡಿಗೆ ಮರಳಿದ ಕ್ರೀಡಾಪಟುಗಳಿಗೆ ದೆಹಲಿಯಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಚಿನ್ನದ ಪದಕ ವಿಜೇತ ನೀರಜ್, ಕಂಚಿನ ತಾರೆ ಲವ್ಲಿನಾ, ಕಂಚಿನ ವೀರ ಭಜರಂಗ್ ಪುನಿಯಾ, ಪುರುಷ ಮತ್ತು ಮಹಿಳಾ ಹಾಕಿ ತಂಡದ ಸದಸ್ಯರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಆತ್ಮೀಯ ಸ್ವಾಗತ ನೀಡಿದ್ರು.

    ಏರ್‍ಪೋರ್ಟ್ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದನ್ನು ಕಂಡು ಬೇರೊಂದು ಮಾರ್ಗದಲ್ಲಿ ಕ್ರೀಡಾಪಟುಗಳನ್ನು ಹೊರಗೆ ಕರೆತಂದರೂ, ಅಭಿಮಾನಿಗಳು ಬಿಡಲಿಲ್ಲ. ಚಿನ್ನದ ಭರ್ಜಿ ಭೀಮನನ್ನು ಅಭಿಮಾನಿಗಳು ಭುಜದ ಮೇಲೆ ಹೊತ್ತು ಸಂಭ್ರಮಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ರು. ಏರ್ ಪೋರ್ಟ್ ನಿಂದ ಹೋಟೆಲ್ ಅಶೋಕವರೆಗೆ ತೆರೆದ ವಾಹನಗಳಲ್ಲಿ ಒಲಂಪಿಕ್ಸ್ ವೀರರ ಮೆರವಣಿಗೆ ನಡೀತು. ನಂತರ ಒಲಂಪಿಕ್ಸ್ ವೀರರನ್ನು ಕೇಂದ್ರ ಸರ್ಕಾರ ಸನ್ಮಾನಿಸಿತು.

    ಪದೇ ಪದೇ ಪದಕ ನೋಡುತ್ತಿದ್ದೇನೆ:
    ವೇದಿಕೆ ಮೇಲೆ ಬಂದ ಚಿನ್ನದ ಹುಡುಗ ನೀರಜ್ ಚೋಪ್ರಾ ಎಲ್ಲರಿಗೂ ಮೆಡಲ್ ತೋರಿಸಿ ಮಾತನಾಡಿದರು. ಇದು ದೇಶದ ಪದಕ ನನ್ನದಲ್ಲ. ಈ ಪದಕ ಬಂದಾಗಿನಿಂದ ಸರಿಯಾಗಿ ನಿದ್ದೆ, ಊಟ ಸಹ ಮಾಡಿಲ್ಲ. ಅಂದಿನಿಂದ ಇಂದಿನವರೆಗೂ ಜೇಬಿನಲ್ಲಿಯೇ ಪದಕ ಇಟ್ಟುಕೊಂಡು ಓಡಾಡುತ್ತಿದ್ದೇನೆ. ಜೇಬಿನಿಂದ ಪದೇ ಪದೇ ಪದಕ ತೆಗೆದು ನೋಡಿ ಸಂಭ್ರಮಿಸುತ್ತಿದ್ದೇನೆ. ಇಂದು ಪದಕ ಬಂದಿದ್ದರ ಬಗ್ಗೆ ಹಲವು ವಿಷಯಗಳನ್ನು ಹೇಳಬಹುದು. ಆದ್ರೆ ಈಗ ಆ ವಿಷಯಗಳು ಬೇಡ. ನನ್ನನ್ನು ಬೆಂಬಲಿಸಿ ಗೌರವಿಸುತ್ತಿರುವ ಎಲ್ಲರಿಗೂ ಧನ್ಯವಾದ. ಓಲಿಂಪಿಕ್ಸ್ ನನ್ನ ಜೀವನದ ಬಹುದೊಡ್ಡ ಕನಸು ಅಗಿತ್ತು. ಸಿಕ್ಕ ಅವಕಾಶವನ್ನು ಮಿಸ್ ಮಾಡಿಕೊಳ್ಳಲು ನನಗಿಷ್ಟವಿರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ರಜತ ಪದಕ – ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿ

    ಇದೇ ವೇಳೆ ಮಾತನಾಡಿದ ಭಜರಂಗ್ ಪುನಿಯಾ, ಕಂಚಿನ ಪದಕಕ್ಕಾಗಿ ಆಡುವಾಗ ನಾನು ನೀ ಕ್ಯಾಪ್ ಸಹ ಧರಿಸಿರಲಿಲ್ಲ. ಗಾಯವಾದ್ರೂ ಪರವಾಗಿಲ್ಲ, ಮರುದಿನ ವಿಶ್ರಾಂತಿ ಪಡೆದುಕೊಳ್ಳಬಹುದು ಅಂತ ಅಖಾಡ ಪ್ರವೇಶಿಸಿದೆ ಅಂತ ಎಂದರು. ಲವ್ಲಿನಾ ಮಾತನಾಡಿ, ನಾನು ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಚಿನ್ನ ತರಲು ಪ್ರಯತ್ನಿಸುತ್ತೇನೆ ಎಂದು ದೇಶದ ಜನತೆಗೆ ಭರವಸೆ ನೀಡಿದರು. ಇದನ್ನೂ ಓದಿ: 200 ರಿಂದ 4ನೇ ಸ್ಥಾನಕ್ಕೆ ಜಿಗಿತ – ಕೊನೆ ಕ್ಷಣದಲ್ಲಿ ಅದಿತಿಗೆ ತಪ್ಪಿತು ಪದಕ

    ಹೊಸ ಭಾರತದ ಹೊಸ ಹೀರೋಗಳು:
    ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಪದಕ ತಂಡ ಕ್ರೀಡಾಳುಗಳ ಹೆಸರಿನಲ್ಲಿ ಈ ಸಂಜೆ ಇತಿಹಾಸದಲ್ಲಿ ದಾಖಲಾಗಲಿದೆ. ಎಲ್ಲ ವಿಜೇತರಿರೂ 135 ಕೋಟಿ ಭಾರತೀಯರ ಪರವಾಗಿ ಶುಭ ಕೋರುತ್ತೇನೆ. ನೀರಜ್ ಚೋಪ್ರಾ ಕೇವಲ ಪದಕ ಮಾತ್ರ ಗೆದ್ದಿಲ್ಲ, ಬದಲಾಗಿ ಇಡೀ ಭಾರತೀಯರ ಹೃದಯವನ್ನು ಗೆದ್ದಿದ್ದಾರೆ. ಎಲ್ಲ ಅಥ್ಲೀಟ್ ಗಳು ಹೊಸ ಭಾರತದ ಹೊಸ ಹೀರೋಗಳು. ಮುಂದಿನ ಒಲಿಂಪಿಕ್ಸ್ ನಲ್ಲಿ ನಮ್ಮ ಕ್ರೀಡಾಳುಗಳು ಚೆನ್ನಾಗಿ ಪ್ರದರ್ಶನ ನೀಡಲಿ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದರು. ಇದನ್ನೂ ಓದಿ: ಶತಕೋಟಿ ಭಾರತೀಯರ ಕನಸು ನನಸು – ಚಿನ್ನ ಗೆದ್ದ ನೀರಜ್

  • ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ತರಬೇತಿ ನೀಡಿದ್ದಿದ್ದು ಶಿರಸಿಯ ಯೋಧ..!

    ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ತರಬೇತಿ ನೀಡಿದ್ದಿದ್ದು ಶಿರಸಿಯ ಯೋಧ..!

    – ನವೀನ್ ಸಾಗರ್
    ಕಾರವಾರ: ಒಲಿಂಪಿಕ್ ‘ಚಿನ್ನದ ವೀರ’ ನೀರಜ್ ಚೋಪ್ರಾ ಹಿಂದಿನ ಶಕ್ತಿ ಉತ್ತರ ಕನ್ನಡ ಜಿಲ್ಲೆಯ ಯೋಧ.

    ಹೌದು, ಒಲಿಂಪಿಕ್ ಇತಿಹಾಸದಲ್ಲೇ ಭಾರತಕ್ಕೆ ಅಥ್ಲೆಟಿಕ್ಸ್ ವಿಭಾಗದಲ್ಲಿ ಚೊಚ್ಚಲ ಚಿನ್ನದ ಪದಕ ಗೆದ್ದವನಿಗೆ ಭಾರತೀಯ ಸೇನೆಯಲ್ಲಿ ಸುಬೇದಾರ್ ಹುದ್ದೆಯಲ್ಲಿರುವ ಕಾಶಿನಾಥ ನಾಯ್ಕ್ ರವರು ಮೊದಲು ತರಬೇತಿ ನೀಡಿದ್ದರು. ಪ್ರಸ್ತುತ ಪುಣೆಯ ಸೇನಾ ಕ್ರೀಡಾ ಇನ್‍ಸ್ಟಿಟ್ಯೂಟ್‍ನಲ್ಲಿ ತರಬೇತುದಾರರಾಗಿರುವ ಕಾಶಿನಾಥ್ ಮೂಲತಃ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದವರಾಗಿದ್ದಾರೆ.

    23 ವರ್ಷದಿಂದ ಸೇನೆಯಲ್ಲಿರುವ ಕಾಶಿನಾಥ ನಾಯ್ಕ, 2010ರ ನವದೆಹಲಿಯ ಕಾಮನ್‍ವೆಲ್ತ್ ಗೇಮ್ಸ್ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಗಳಿಸಿದ್ದರು. 2015ರಲ್ಲಿ ಕಾಶಿನಾಥ ನಾಯ್ಕರ ಬಳಿ ತರಬೇತಿಗೆ ಸೇರಿದ್ದ ನೀರಜ್ ಚೋಪ್ರಾ, 2017ರವರೆಗೆ ತರಬೇತಿ ಪಡೆದಿದ್ದರು. ಅಂದೇ 86.48 ಮೀಟರ್ ಜೂನಿಯರ್ ವಿಶ್ವ ದಾಖಲೆ ಮಾಡಿದ್ದ ನೀರಜ್ ಚೋಪ್ರಾ ರವರು ಇತ್ತೀಚಿಗೆ ವಿದೇಶಿ ತರಬೇತುದಾರರ ಬಳಿ ತರಬೇತಿ ಪಡೆಯಲಾರಂಭಿಸಿದ್ದರು. ಇದನ್ನೂ ಓದಿ: ಚಿನ್ನ ಗೆದ್ದ ಬಳಿಕ ರಾಷ್ಟ್ರಗೀತೆ ವೇಳೆ ನೀರಜ್ ಕಣ್ಣೀರು- ಪದಕವನ್ನು ಮಿಲ್ಕಾ ಸಿಂಗ್‍ಗೆ ಸಮರ್ಪಿಸಿದ ಸಾಧಕ

    ನೀರಜ್ ಚೋಪ್ರಾ ಚಿನ್ನದ ಪದಕ ವಿಜೇತರಾಗಿರುವ ಬಗ್ಗೆ ಸಂತಸ ಹಂಚಿಕೊಂಡ ಕಾಶಿನಾಥ ನಾಯ್ಕ ಅವರು, 2016ರಲ್ಲೇ ನೀರಜ್ ಚೋಪ್ರಾ ಚಿನ್ನ ಗೆಲ್ಲುವ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದೆ, ತುಂಬಾ ಉತ್ತಮ ಕ್ರೀಡಾಪಟು ಈತ. ಇಂದು ಆತ ಚಿನ್ನದ ಪದಕ ಗೆಲ್ಲಲು ಕಾರಣವಾಗಿದೆ ಎಂದು ಹೇಳಿದ್ದಾರೆ. ನೀರಜ್ ಚೋಪ್ರಾನಿಗೆ ಪ್ರತಿಭೆ ದೇವರು ಕೊಟ್ಟ ವರ ಎಂದು ತಾನು ತರಬೇತಿ ನೀಡಿದ ಕುರಿತು ತಮ್ಮ ಮನದಾಳದ ಮಾತುಗಳನ್ನು ಆಡಿದ್ದಾರೆ. ಇದನ್ನೂ ಓದಿ: ಹರಿಯಾಣ ಸರ್ಕಾರ 6 ಕೋಟಿ, ಆನಂದ್ ಮಹೀಂದ್ರ ಕಾರ್ ಗಿಫ್ಟ್- ಚಿನ್ನದ ನೀರಜ್‍ಗೆ ಭರ್ಜರಿ ಉಡುಗೊರೆ

    ನೀರಜ್ ಚೋಪ್ರಾ ಅವರು ಹರಿಯಾಣದ ಪಾಣಿಪತ್ ಬಳಿಯ ಖಂಡ್ರಾ ಗ್ರಾಮದವರು. ಕೂಡು ಕುಟುಂಬದಿಂದ ಬಂದ ನೀರಜ್ ಚೋಪ್ರಾ, ಮನೆಯಲ್ಲಿ 16 ಜನರಿದ್ದಾರೆ. ನೀರಜ್ ತಂದೆ ಕೃಷಿ ಮಾಡುತ್ತಿದ್ದು, ಮನೆಯವರು ಸಾಧಾರಣ ಕೆಲಸ ಹಾಗೂ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಪಾಕೆಟ್ ಮನಿಯಿಂದಲೇ ಸಲಕರಣೆಗಳನ್ನು ಖರೀದಿಸಿ ನೀರಜ್ ಅಭ್ಯಾಸ ಮಾಡುತ್ತಿದ್ದರು. ನೀರಜ್ ಚೋಪ್ರಾ ಅವರು ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದು, ಭಾರತೀಯ ಸೇನೆಯಲ್ಲಿ ಸುಬೇದಾರ್ ಕೆಲಸ ಮಾಡುತ್ತಿದ್ದಾರೆ. ನೀರಜ್ ತಮ್ಮ 12ನೇ ವಯಸ್ಸಿನಲ್ಲಿ 90 ಕೆ.ಜಿ.ತೂಕ ಹೊಂದಿದ್ದರು. ಬಳಿಕ ಕುಟುಂಬದವರ ಒತ್ತಾಯದ ಮೇರೆಗೆ ಜಿಮ್ ಮಾಡಿ, ಫಿಟ್ನೆಸ್ ಕಾಪಾಡಿಕೊಂಡರು. ನಂತರ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಇದನ್ನೂ ಓದಿ: ರೈತನ ಮಗ 23 ವರ್ಷದ ನೀರಜ್ ಚೋಪ್ರಾ ಚಿನ್ನದ ಸಾಧನೆ

    ಆಸ್ಟ್ರೇಲಿಯಾದಲ್ಲಿ ನಡೆದ 2018ರ ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದ ಬಳಿಕ ಒಲಿಂಪಿಕ್ಸ್ ಗಾಗಿ ತಯಾರಿ ನಡೆಸಿದ್ದರು. ಅಲ್ಲದೆ ನೀರಜ್ ಚೋಪ್ರಾ ಪೋಲೆಂಡ್‍ನಲ್ಲಿ ನಡೆದ ಅಂಡರ್ 20 ಜೂನಿಯರ್ ವರ್ಲ್ಡ್ಸ್ ಚಾಂಪಿಯನ್‍ಶಿಪ್ 2016ರಲ್ಲಿ 86.48 ಮೀಟರ್ ಜಾವೆಲಿನ್ ಎಸೆಯುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೆ ನೀರಜ್ ಚೋಪ್ರಾ ಅವರ ಉತ್ತಮ ಎಸೆತ 88.07 ಮೀಟರ್ ಎಂದು ನೀರಜ್ ಚಿಕ್ಕಪ್ಪ ಭೀಮಸೇನ ಚೋಪ್ರಾ ಅವರು ತಿಳಿಸಿದ್ದಾರೆ.

    ಇಂದು ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಎರಡನೇ ಎಸೆತದಲ್ಲೇ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇದು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಲಭಿಸುತ್ತಿರುವ 7ನೇ ಪದಕ ಮತ್ತು ಚೊಚ್ಚಲ ಬಂಗಾರವಾಗಿದ್ದು ಇಡೀ ದೇಶ ನೀರಜ್ ಜೋಪ್ರಾ ಕಡೆ ತಿರುಗಿ ನೋಡುವಂತೆ ಮಾಡಿದೆ.

  • ‘ಚಿನ್ನ’ದ ಹುಡುಗ ನೀರಜ್ ಚೋಪ್ರಾಗೆ ಹೆಚ್‍ಡಿಕೆ ಅಭಿನಂದನೆ

    ‘ಚಿನ್ನ’ದ ಹುಡುಗ ನೀರಜ್ ಚೋಪ್ರಾಗೆ ಹೆಚ್‍ಡಿಕೆ ಅಭಿನಂದನೆ

    ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ‘ಚಿನ್ನ’ ನೀರಜ್ ಚೋಪ್ರಾ ಕಮಾಲ್ ಮಾಡಿದ್ದು, ಇದೀಗ ರೈತನ ಮಗನ ಸಾಧನೆಗೆ ಶುಭಾಶಯಗಳ ಸುರಿಮಳೆಗಳೇ ಬರುತ್ತಿವೆ. ರಾಜಕಾರಣಿ, ಸೆಲೆಬ್ರಿಟಿಗಳು ಸೇರಿದಂತೆ ಎಲ್ಲರೂ ಯೋಧನ ಸಾಹಸಕ್ಕೆ ಶಹಬ್ಬಾಸ್ ಗಿರಿ ಹೇಳುತ್ತಿದ್ದಾರೆ. ಅಂತೆಯೇ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೂಡ ನೀರಜ್ ಚೋಪ್ರಾ ಅವರಿಗೆ ವಿಶ್ ಮಾಡಿದ್ದಾರೆ.

    ಹೌದು, ಸರಣಿ ಟ್ವೀಟ್ ಮಾಡುವ ಮೂಲಕ ಚೊಚ್ಚಲ ಚಿನ್ನದ ಪದಕ ಗೆದ್ದು ಕೊಟ್ಟು ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. ಅಲ್ಲದೆ ಹಾಕಿ ತಂಡದಲ್ಲಿ ಸಾಧನೆಗೈದವರ ಬಗ್ಗೆಯೂ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹರಿಯಾಣ ಸರ್ಕಾರ 6 ಕೋಟಿ, ಆನಂದ್ ಮಹೀಂದ್ರ ಕಾರ್ ಗಿಫ್ಟ್- ಚಿನ್ನದ ನೀರಜ್‍ಗೆ ಭರ್ಜರಿ ಉಡುಗೊರೆ

    ಟ್ವೀಟ್ ನಲ್ಲೇನಿದೆ..?
    ಟೊಕಿಯೋ ಒಲಿಂಪಿಕ್ಸ್ ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ, ಭಾರತಕ್ಕೆ ಚೊಚ್ಚಲ ಚಿನ್ನದ ಪದಕ ಗೆದ್ದು ಕೊಟ್ಟು ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳು. ಚಿನ್ನದ ಸಾಧನೆ ಮಾಡುವ ಮೂಲಕ ನೀರಜ್ ಚೋಪ್ರಾ ಭಾರತದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿ ಹಾರಿಸಿದ್ದಾರೆ. ನೀರಜ್ ಸಾಧನೆ ಪ್ರೇರಣದಾಯಕ. ಇದನ್ನೂ ಓದಿ: ರೈತನ ಮಗ 23 ವರ್ಷದ ನೀರಜ್ ಚೋಪ್ರಾ ಚಿನ್ನದ ಸಾಧನೆ

    ಒಲಿಂಪಿಕ್ಸ್ ನಲ್ಲಿ ನಮ್ಮ ಹಾಕಿ ತಂಡಗಳು ಅಚ್ಚರಿ ಮೂಡಿಸಿದ್ದು, 41 ವರ್ಷಗಳ ಬಳಿಕ ಪುರುಷರ ತಂಡ ಪದಕ ಗೆದ್ದರೆ, ಮಹಿಳಾ ತಂಡ ನೆನಪಿಟ್ಟುಕೊಳ್ಳವ ಸಾಧನೆ ಮಾಡಿದೆ. ಇದರ ಹಿಂದೆ ಒಡಿಶಾ ಸರ್ಕಾರದ ಪ್ರೋತ್ಸಾಹ ಇರುವುದು ಗಮನಾರ್ಹ. ಹಾಕಿ ತಂಡದ ಪ್ರಯೋಜಕತೆ ಪಡೆದ ಒಡಿಶಾ ತಂಡಕ್ಕೆ ಸಕಲವನ್ನು ಒದಿಗಿಸಿ ಪ್ರೋತ್ಸಾಹಿಸಿತು. ಒಡಿಶಾದ ಕ್ರಮ ಅನುಕರಣೀಯ.

    ಒಡಿಶಾ ಹಾಕಿಯನ್ನು ಪ್ರೋತ್ಸಾಹಿಸಿದಂತೆ ಎಲ್ಲ ರಾಜ್ಯಗಳೂ ಒಂದೊಂದು ಕ್ರೀಡೆಯನ್ನು ಪ್ರೋತ್ಸಾಹಿಸುವ ಅವಶ್ಯಕತೆ ಇದೆ. ಈ ಮೂಲಕ ಪ್ರತಿಯೊಂದು ಕ್ರೀಡೆಗೆ ಪ್ರೋತ್ಸಾಹ ಸಿಗುವಂತೆ ಮಾಡುವುದು, ವಿಶ್ವ ಮಟ್ಟದ ಕೂಟದಲ್ಲಿ ಭಾರತದ ಘನತೆ ಎತ್ತಿ ಹಿಡಿಯುವುದು ಆದ್ಯತೆ ಆಗಬೇಕು. ಸಂಸದೀಯ ಸ್ಥಾಯಿಸಮಿತಿ(ಕ್ರೀಡೆ) ಇದೇ ಶಿಫಾರಸನ್ನು ಕೇಂದ್ರಕ್ಕೆ ಮಾಡಿದೆ ಎಂದು ಸರಣಿ ಟ್ವೀಟ್ ನಲ್ಲಿ ಹೆಚ್‍ಡಿಕೆ ಬರೆದುಕೊಂಡಿದ್ದಾರೆ.