Tag: ಟೋಕಿಯೋ ಪ್ಯಾರಾಲಿಂಪಿಕ್ಸ್

  • ಬೆಂಬಲಿಸಿದ ಕರ್ನಾಟಕದ ಜನತೆಗೆ ಧನ್ಯವಾದ: ಸುಹಾಸ್

    ಬೆಂಬಲಿಸಿದ ಕರ್ನಾಟಕದ ಜನತೆಗೆ ಧನ್ಯವಾದ: ಸುಹಾಸ್

    ಟೋಕಿಯೋ: ಬೆಳ್ಳಿ ಗೆದ್ದಿದ್ದಕ್ಕೆ ಖುಷಿ ಆಗಿದೆ, ಚಿನ್ನದ ಪದಕ ಗೆಲ್ಲದ್ದಕ್ಕೆ ಬೇಸರವಿದೆ ಎಂದು ಪ್ಯಾರಾಲಿಂಪಿಕ್ಸ್ ನ ಬ್ಯಾಡ್ಮಿಂಟನ್‍ನಲ್ಲಿ ಬೆಳ್ಳಿ ಪದಕ ಬೆಳ್ಳಿ ಪದಕ ಗೆದ್ದಿರುವ ಸುಹಾಸ್ ಯತಿರಾಜ್ ಹೇಳಿದ್ದರೆ.

    ಸುಹಾಸ್ ಅವರು ಈ ಕುರಿತು ಮಾತನಾಡಿದ್ದು, ಖುಷಿ ಮತ್ತು ದುಃಖ ಎರಡೂ ಆಗುತ್ತಿದೆ. ಬೆಳ್ಳಿ ಗೆದ್ದಿದ್ದಕ್ಕೆ ಖುಷಿ ಆಗಿದೆ. ಆದರೆ ಚಿನ್ನ ಗೆಲ್ಲದ್ದಕ್ಕೆ ಬೇಸರ ಆಗುತ್ತಿದೆ. ನನಗೆ ಬೆಂಬಲಿಸಿದ ಗುರು ಹಿರಿಯರಿಗೆ ಮತ್ತು ಕರ್ನಾಟಕದ ಜನತೆಗೆ ಧನ್ಯವಾದ ಸಲ್ಲಿಸ್ತೇನೆ ಎಂದು ಸುಹಾಸ್ ಹೇಳಿದ್ದಾರೆ.

    ತಮ್ಮ ಪುತ್ರನ ಬೆಳ್ಳಿ ಸಾಧನೆ ಬಗ್ಗೆ ಸುಹಾಸ್ ಯತಿರಾಜ್ ಅವರ ತಾಯಿ ಜಯಶ್ರೀ, ಸುಹಾಸ್ ಪತ್ನಿ ರಿತು, ಸಹೋದರ ಶರತ್, ನಾದಿನಿ ಸಂಜನಾ ಅವರು ಪಬ್ಲಿಕ್ ಟಿವಿ ಜೊತೆಗೆ ಖುಷಿ ಹಂಚಿಕೊಂಡಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದುಕೊಂಡೇ ಅವರು ಪ್ರತಿ ನಿತ್ಯ ಪ್ರ್ಯಾಕ್ಟಿಸ್ ಮಾಡುತ್ತಿದ್ದರು. ಸಂಜೆ ಅದಕ್ಕಾಗಿ ಸಮಯ ಮೀಸಲಿರಿಸುತ್ತಿದ್ದರು. ನಾನೂ ಸಹ ಚಿನ್ನದ ಪದಕಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದ್ದೆ. ಆದರೆ ಬೆಳ್ಳಿ ಗೆದ್ದಿದ್ದಾರೆ ಖುಷಿ ಇದೆ ಎಂದು ಸುಹಾಸ್ ಪತ್ನಿ ರಿತು ತಿಳಿಸಿದ್ದಾರೆ. ಇದನ್ನೂ ಓದಿ: ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ವೀರ ಕನ್ನಡಿಗ ಸುಹಾಸ್ ಬೆಳ್ಳಿ ಸಾಧನೆ

    ಸುಹಾಸ್ ಯತಿರಾಜ್ ಸಾಧನೆಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ. ಸುಹಾಸ್ ಅವರ ಬೆಳ್ಳಿ ಬೇಟೆಯೊಂದಿಗೆ ಪ್ಯಾರಾ ಒಲಿಂಪಿಕ್ಸ್ ನಲ್ಲಿ ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿದೆ. 5 ಚಿನ್ನ, 8 ಬೆಳ್ಳಿ, 6 ಕಂಚು ಪದಕಗಳನ್ನು ಭಾರತ ಗೆದ್ದಿದೆ.

    ಬೆಳ್ಳಿ ಸಾಧನೆ:
    ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ವೀರ ಕನ್ನಡಿಗ ಬೆಳ್ಳಿ ಗೆದ್ದಿದ್ದಾರೆ. ಕರ್ನಾಟಕ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಬ್ಯಾಡ್ಮಿಂಟನ್‍ನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದು, ಈ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಬ್ಯಾಡ್ಮಿಂಟನ್ ಫೈನಲ್‍ನ Sಐ4 ವಿಭಾಗದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ಎದುರು 15-21, 21-17, 21-15 ಅಂತರದಲ್ಲಿ ಸೋಲು ಅನುಭವಿಸಿ ಬೆಳ್ಳಿ ಕೊರಳಿಗೇರಿಸಿಕೊಂಡಿದ್ದಾರೆ. ಇಂದು ಮುಂಜಾನೆ ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ವಿರುದ್ಧ ಸೋತಿದ್ದಾರೆ.

    ಶಿವಮೊಗ್ಗ ಮೂಲದ ಯತಿರಾಜ್ ಹಾಗೂ ಹಾಸನ ಮೂಲದ ಜಯಶ್ರೀ(34) ಅವರ ಪುತ್ರ ಸುಹಾಸ್ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಸದ್ಯ ಉತ್ತರ ಪ್ರದೇಶದ ನೋಯ್ಡಾದಲ್ಲಿ ಸುಹಾಸ್ ಜಿಲ್ಲಾಧಿಕಾರಿಯಾಗಿದ್ದಾರೆ. ಸುಹಾಸ್ ಅವರ ಪತ್ನಿ ರಿತು ಗಾಜಿಯಾಬಾದ್‍ನಲ್ಲಿ ಸಹಾಯಕ ವಿಭಾಗಾಧಿಕಾರಿ ಆಗಿದ್ದಾರೆ.

  • ಪ್ಯಾರಾಲಿಂಪಿಕ್ಸ್ – ಶೂಟಿಂಗ್‍ನಲ್ಲಿ ಮನೀಷ್‍ಗೆ ಚಿನ್ನ, ಸಿಂಗ್‍ರಾಜ್‍ಗೆ ಬೆಳ್ಳಿ

    ಪ್ಯಾರಾಲಿಂಪಿಕ್ಸ್ – ಶೂಟಿಂಗ್‍ನಲ್ಲಿ ಮನೀಷ್‍ಗೆ ಚಿನ್ನ, ಸಿಂಗ್‍ರಾಜ್‍ಗೆ ಬೆಳ್ಳಿ

    – ಬ್ಯಾಡ್ಮಿಂಟನ್ ಫೈನಲ್ ಪ್ರವೇಶಿಸಿದ ಸುಹಾಸ್, ಭಗತ್

    ಟೋಕಿಯೋ: ಟೋಕಿಯೋ ಪ್ಯಾರಾಲಿಂಪಿಕ್ಸ್ 11ನೇ ದಿನ ಭಾರತ ಶುಭಾರಂಭ ಮಾಡಿದ್ದು, ಎರಡು ಪದಕ ಗೆದ್ದುಕೊಂಡಿದೆ. ಶೂಟಿಂಗ್ ಎಸ್‍ಎಚ್-1 ವಿಭಾಗದ 50 ಮೀಟರ್ ಏರ್ ಪಿಸ್ತೂಲ್ ನಲ್ಲಿ ಮನೀಷ್ ನರ್ವಾಲ್ ಚಿನ್ನಕ್ಕೆ ಮುತ್ತಿಟ್ಟರೆ, ಸಿಂಗ್‍ರಾಜ್‍ ಅಧಾನಾ ಬೆಳ್ಳಿಗೆ ಕೊರಳೊಡ್ಡಿದ್ದಾರೆ.

    ಬ್ಯಾಡ್ಮಿಂಟನ್ ಎಸ್‍ಎಲ್-4ರಲ್ಲಿ ನೋಯ್ಡಾದ ಡಿ.ಎಂ. ಸುಹಾಸ್ ಯತಿರಾಜ್ ಫೈನಲ್ ಪ್ರವೇಶಿಸುವ ಮೂಲಕ ಭಾರತಕ್ಕೆ ಮತ್ತೊಂದು ಪದಕ ಅನ್ನೋದನ್ನು ಖಚಿತಪಡಿಸಿದರು. ಇದಕ್ಕೂ ಮೊದಲು ಪ್ರಮೋದ್ ಭಗತ್ ಎಸ್‍ಎಲ್-3ರಲ್ಲಿ ಬೆಳ್ಳಿ ಪದಕ ಖಾತ್ರಿ ಮಾಡಿಕೊಂಡಿದ್ದು, ಚಿನ್ನಕ್ಕಾಗಿ ಆಟ ಆಡಲಿದ್ದಾರೆ.

    ಮನೀಷ್ ಫೈನಲ್ ನಲ್ಲಿ 209 ಸ್ಕೋರ್ ಮಾಡಿ ಚಿನ್ನ ಗೆದ್ರೆ, ಸಿಂಗ್ ರಾಜ್ 207 ಸ್ಕೋರ್ ಪೇರಿಸಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಅರ್ಹತಾ ಸುತ್ತಿನಲ್ಲಿ ಸಿಂಹರಾಜ್ 536 ಅಂಕಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದರು. ಇದಕ್ಕೂ ಮೊದಲು ಸಿಂಹರಾಜ್ 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಕಂಚು ಗೆದ್ದುಕೊಂಡಿದ್ದಾರೆ.

    ಸೆಮಿಫೈನಲ್ ನಲ್ಲಿ ಪ್ರಮೋದ್ ಭಗತ್, ಜಪಾನಿನ ಫುಜಿಹಾರಾ ಡಾಯಿಸುಕೆ ಅವರನ್ನು 21-11, 21-16 ಅಂತರದಲ್ಲಿ ಸೋಲಿಸಿ ಫೈನಲ್ ಪ್ರವೇಶಿಸಿದ್ದಾರೆ. ಇಂಡೋನೇಷಿಯಾದ ಫ್ರೆಡೀ ಸೇತಿಯಾವಾನ್ ಅವರನ್ನ 21-9, 21-15ರಲ್ಲಿ ಸೋಲಿಸಿದ್ದಾರೆ. ಭಾರತ ಇದುವರೆಗೂ 17 ಪದಕಗಳಿಗೆ ಮುತ್ತಿಕ್ಕಿದೆ. ಇದನ್ನೂ ಓದಿ: ಆರ್ಚರಿ ಕಂಚಿನ ಪದಕ ಗೆದ್ದ ಹರ್ವಿಂದರ್ ಸಿಂಗ್