Tag: ಟೋಲ್ ಪ್ಲಾಜಾ

  • ಏ.1ರಿಂದ ಕರ್ನಾಟಕದಲ್ಲಿ ಟೋಲ್‌ ದರ ಶೇ.5ರಷ್ಟು ಹೆಚ್ಚಳ!

    ಏ.1ರಿಂದ ಕರ್ನಾಟಕದಲ್ಲಿ ಟೋಲ್‌ ದರ ಶೇ.5ರಷ್ಟು ಹೆಚ್ಚಳ!

    ಬೆಂಗಳೂರು: ಏಪ್ರಿಲ್‌ 1ರಿಂದ ಹೊಸ ಟೋಲ್‌ ನೀತಿ ಜಾರಿಯಾಗಲಿದ್ದು, ಕರ್ನಾಟಕದಾದ್ಯಂತ ಟೋಲ್‌ ಶುಲ್ಕ (Toll Price)  ಶೇ.5ರಷ್ಟು ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಮೂಲಗಳು ತಿಳಿಸಿವೆ.

    ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಕನಿಷ್ಠ ಶೇ 3 ರಿಂದ ಗರಿಷ್ಠ 5 ರಷ್ಟು ಏರಿಕೆಯಾಗಲಿವೆ ಎಂದು ತಿಳಿದುಬಂದಿದೆ. ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ (Toll Plaza) ಹೆಚ್ಚಿನ ಟೋಲ್​ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ.5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ.

    delhi ncr toll plaza

    ರಾಷ್ಟ್ರೀಯ ಹೆದ್ದಾರಿಗಳ ಮೇಲಿನ ಸುಂಕಗಳಿಗೆ ಕೇಂದ್ರ ಸರ್ಕಾರ ಶೀಘ್ರವೇ ಹೊಸ ನೀತಿ ಪ್ರಕಟಿಸಲಿದೆ. ಇದರಲ್ಲಿ ಗ್ರಾಹಕರಿಗೆ ಕೆಲವು ರಿಯಾಯಿತಿ ದೊರೆಯಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದರೂ ಅದಿನ್ನೂ ಜಾರಿಯಾಗಿಲ್ಲ. 2008ರ ನೀತಿಯೇ ಅನ್ವಯವಾಗಲಿದೆ. ಟೋಲ್ ಗುತ್ತಿಗೆ ಅವಧಿಯನ್ನು ಆಧರಿಸಿ ದರಗಳು ಬದಲಾಗಲಿವೆ. ಈ ಹೆಚ್ಚುವರಿ ಶುಲ್ಕವನ್ನು ಗ್ರಾಹಕರಿಗೆ ವರ್ಗಾಯಿಸಲಾಗುವುದು ಎಂದು ಕರ್ನಾಟಕ ರಾಜ್ಯ ಟ್ರಾವೆಲ್ ಆಪರೇಟರ್ಸ್ ಅಸೋಸಿಯೇಷನ್ ತಿಳಿಸಿದೆ.

    ಕರ್ನಾಟಕದಲ್ಲಿ ಎಲ್ಲೆಲ್ಲಿ ಟೋಲ್ ಹೆಚ್ಚಳ?
    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಹೇಳಿರುವಂತೆ, ಗರಿಷ್ಠ ಶೇ.5 ಮತ್ತು ಕನಿಷ್ಠ ಶೇ.3 ರಷ್ಟು ಟೋಲ್ ದರ ಹೆಚ್ಚಳವಾಗಲಿದೆ. ಬೆಂಗಳೂರು-ಮೈಸೂರು ಮಾರ್ಗದ ಕನಮಿಣಿಕೆ ಮತ್ತು ಶೇಷಗಿರಿಹಳ್ಳಿ, ಬೆಂಗಳೂರು-ತಿರುಪತಿ ಮಾರ್ಗದ ನಂಗ್ಲಿ, ಬೆಂಗಳೂರು-ಹೈದರಾಬಾದ್ ಮಾರ್ಗದ ಬಾಗೇಪಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ, ಮತ್ತು ಹುಲಿಕುಂಟೆ ಹಾಗೂ ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರೋಡ್) ಟೋಲ್ ಪ್ಲಾಜಾಗಳಲ್ಲಿ ದರಗಳು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

    ದೇಶದಾದ್ಯಂತ ಒಟ್ಟು 323 ರಾಜ್ಯ ಹೆದ್ದಾರಿ ಟೋಲ್ ಫ್ಲಾಜಾ ಸೇರಿದಂತೆ, ದೇಶದಲ್ಲಿ ಒಟ್ಟು 1,181 ಟೋಲ್ ಗಳಿವೆ. 2023-24 ರಲ್ಲಿ 42,196 ಕೋಟಿ ರೂ., 2024-25 ರಲ್ಲಿ 64,809 ಕೋಟಿ ರೂ. ಟೋಲ್‌ ಸಂಗ್ರಹ ಆಗಿದೆ. ಈ ವರ್ಷ ಈ ಗುರಿಯನ್ನ 1 ಲಕ್ಷ ಕೋಟಿಗೆ ಏರಿಕೆ ಮಾಡಲಾಗಿದೆ. ಇನ್ನು ಕರ್ನಾಟಕದಲ್ಲಿ 58 ಟೋಲ್ ಫ್ಲಾಜಾಗಳಿದ್ದು, ಕಳೆದ 5 ವರ್ಷಗಳಲ್ಲಿ ಈ ಟೋಲ್‌ಗಳಿಂದ 13,702 ಕೋಟಿ ಸಂಗ್ರಹವಾಗಿದೆ.

  • ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ; ದೆಹಲಿ – ಎನ್‌ಸಿಆರ್ ಗಡಿಗಳಲ್ಲಿ ಟೋಲ್ ಪ್ಲಾಜಾಗಳಿಗೆ ಕೊಕ್?

    ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ; ದೆಹಲಿ – ಎನ್‌ಸಿಆರ್ ಗಡಿಗಳಲ್ಲಿ ಟೋಲ್ ಪ್ಲಾಜಾಗಳಿಗೆ ಕೊಕ್?

    ನವದೆಹಲಿ: ದೆಹಲಿ ಮತ್ತು ಎನ್‌ಸಿಆರ್ ಗಡಿಗಳಲ್ಲಿ ನಿರ್ಮಿಸಲಾದ ಟೋಲ್ ಸಂಗ್ರಹಣಾ ಪಾಯಿಂಟ್‌ಗಳಿಂದ (Toll Plaza) ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಇವುಗಳನ್ನು ಮುಖ್ಯ ಹೆದ್ದಾರಿಯಿಂದ ತೆಗೆದುಹಾಕಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಎಂಸಿಡಿಗೆ ಸೂಚನೆ ನೀಡಲಿದೆ ಎಂದು ವರದಿಯಾಗಿದೆ.

    ಈ ಟೋಲ್ ಬೂತ್‌ಗಳು ಹೆದ್ದಾರಿಯಲ್ಲಿ ಸಂಚಾರದ ವೇಗವನ್ನು ನಿಧಾನಗೊಳಿಸುತ್ತಿವೆ, ದೆಹಲಿಯನ್ನು ಗಾಜಿಯಾಬಾದ್ ಮತ್ತು ನೋಯ್ಡಾಗೆ ಸಂಪರ್ಕಿಸುವ NH-9 ಮತ್ತು ದೆಹಲಿ-ಗುರುಗ್ರಾಮ್ ಅನ್ನು ಸಂಪರ್ಕಿಸುವ NH-48 ಅತ್ಯಂತ ಜನನಿಬಿಡ ಹೆದ್ದಾರಿಗಳಾಗಿದ್ದು, ಈ ಬದಲಾವಣೆಯ ಪರಿಣಾಮವನ್ನು ಸ್ಪಷ್ಟವಾಗಿ ಕಾಣಬಹುದು. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಪಡೆಯದೇ ಹೋದ್ರೆ ಸಿಎಂ, ಸಚಿವರ ಕಾರ್ಯಕ್ರಮಗಳಿಗೆ ಮುತ್ತಿಗೆ – ಜೆಡಿಎಸ್ ಎಚ್ಚರಿಕೆ

    ಎಂಸಿಡಿ ಪ್ರಸ್ತುತ ದೆಹಲಿ ಗಡಿಗಳ ಐದು ಪ್ರಮುಖ ಸ್ಥಳಗಳಲ್ಲಿ ಇಸಿಸಿಯನ್ನು ಸಂಗ್ರಹಿಸುತ್ತದೆ. ಗುರುಗ್ರಾಮ್‌ನ ಸಿರ್ಹೌಲ್ ಗಡಿ, ಘಾಜಿಪುರ (NH 9), ಬದರ್ಪುರ್ (NH 19), ಟಿಕ್ರಿ (NH 10) ಮತ್ತು ಕುಂಡ್ಲಿ (NH 44) ಟೋಲ್ ಬೂತ್‌ಗಳು ಈ ಪ್ರದೇಶಗಳಲ್ಲಿ ಭಾರೀ ಸಂಚಾರ ದಟ್ಟಣೆಯನ್ನು ಉಂಟುಮಾಡುತ್ತವೆ. ಇದನ್ನೂ ಓದಿ: ವೈಮಾನಿಕ ದಾಳಿಯಲ್ಲಿ ಐಸಿಸ್‌ ಕಮಾಂಡರ್‌ ಅಬು ಖದೀಜಾ ಹತ್ಯೆ – ಬಲದ ಮೂಲಕ ಶಾಂತಿ ಎಂದ ಟ್ರಂಪ್‌

    ಕೇಂದ್ರ ಸರ್ಕಾರ, ರಸ್ತೆ ಸಾರಿಗೆ ಸಚಿವಾಲಯ ಮತ್ತು ಹರಿಯಾಣ ಸರ್ಕಾರ ಜಂಟಿಯಾಗಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಯೋಜಿಸುತ್ತಿವೆ. ಈ ಮನವಿಯಲ್ಲಿ ಟೋಲ್ ಸಂಗ್ರಹಣಾ ಕೇಂದ್ರಗಳನ್ನು ಗಡಿಯಿಂದ ಬೇರೆಡೆಗೆ ಸ್ಥಳಾಂತರಿಸಬೇಕೆಂದು ವಿನಂತಿಸಲಾಗುತ್ತಿದೆ. ಇದನ್ನೂ ಓದಿ: ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌ಗೆ ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ

    ಕೇಂದ್ರ ಸರ್ಕಾರ ದೆಹಲಿ ಮತ್ತು ಹರಿಯಾಣ ಆಡಳಿತದೊಂದಿಗೆ ಈ ವಿಷಯವನ್ನು ಚರ್ಚಿಸಿದೆ. ಈಗ ಅಂತಿಮ ನಿರ್ಧಾರವು ಸುಪ್ರೀಂ ಕೋರ್ಟ್‌ನ ನಿಲುವಿನ ಮೇಲೆ ನಿರ್ಧಾರವಾಗಲಿದೆ. ಈ ಯೋಜನೆ ಯಶಸ್ವಿಯಾದರೆ, ದೆಹಲಿ-ಎನ್‌ಸಿಆರ್‌ನ ಲಕ್ಷಾಂತರ ಪ್ರಯಾಣಿಕರು ಸಂಚಾರ ದಟ್ಟಣೆಯಿಂದ ಹೆಚ್ಚಿನ ಪರಿಹಾರ ಪಡೆಯಬಹುದು. ಇದನ್ನೂ ಓದಿ: ಹರ್ಯಾಣ| ಭೂ ವಿವಾದ; ಬಿಜೆಪಿ ಮಂಡಲ ಅಧ್ಯಕ್ಷನ ಭೀಕರ ಹತ್ಯೆ

  • ಟೋಲ್ ಪಾವತಿ ವಿಚಾರದಲ್ಲಿ ಕಿರಿಕ್ – ಜುಟ್ಟು ಹಿಡಿದು ಕಿತ್ತಾಡಿದ ಮಹಿಳೆಯರು

    ಟೋಲ್ ಪಾವತಿ ವಿಚಾರದಲ್ಲಿ ಕಿರಿಕ್ – ಜುಟ್ಟು ಹಿಡಿದು ಕಿತ್ತಾಡಿದ ಮಹಿಳೆಯರು

    ಮುಂಬೈ: ಕ್ಷುಲ್ಲಕ ಕಾರಣಕ್ಕೆ ಮಹಿಳೆಯರಿಬ್ಬರು (Women) ಪರಸ್ಪರ ಕೂದಲು ಹಿಡಿದು ಹೊಡೆದಾಡಿಕೊಂಡಿರುವ ಘಟನೆ ನಾಸಿಕ್ (Nashik) ಬಳಿಯ ಪಿಂಪಲ್ಗಾವ್ ಟೋಲ್ ಬೂತ್ (Toll Plaza) ಬಳಿ ನಡೆದಿದೆ.

    ಸಿಆರ್‌ಪಿಎಫ್ (CRPF) ಅಧಿಕಾರಿಯ ಪತ್ನಿ ಹಾಗೂ ಟೋಲ್ ಸಿಬ್ಬಂದಿ (Toll Employee) ಟೋಲ್‌ಬೂತ್ ರಸ್ತೆಯಲ್ಲೇ ನಿಂತು ಪರಸ್ಪರ ಮುಂದಲೆ ಹಿಡಿದು ಎಳೆದಾಡಿದ್ದಾರೆ, ನಿಂದಿಸಿದ್ದಾರೆ. ಮಹಿಳೆಯರಿಬ್ಬರ ನಡುವಿನ ಮಾರಾಮಾರಿ ದೃಶ್ಯ ಜಾಲತಾಣದಲ್ಲಿ ವೈರಲ್  (Video Viral) ಆಗಿದೆ. ಇದನ್ನೂ ಓದಿ: ಮೂಲಂಗಿ ಮಾರಿ ಜೀವನ ನಡೆಸುತಿದ್ದ ಪತ್ನಿಯನ್ನ ಕುಡಿದ ಅಮಲಿನಲ್ಲಿ ಕೊಲೆ ಮಾಡಿದ ಪತಿ

    ಟೋಲ್ (Toll) ಪಾವತಿಸುವ ವಿಚಾರಕ್ಕೆ ಇಬ್ಬರ ನಡುವೆ ಆರಂಭದಲ್ಲಿ ಮಾತಿನ ಚಕಮಕಿ ನಡೆದಿತ್ತು. ನಂತರ ಇದು ವಿಕೋಪಕ್ಕೆ ತಿರುಗಿ ಮಾರಾಮಾರಿಯಾಗಿದೆ. ಬಳಿಕ ಇಬ್ಬರು ಜುಟ್ಟು ಹಿಡಿದು ಎಳೆದಾಡಿದ್ದಾರೆ, ಕಪಾಳಕ್ಕೆ ಬಾರಿಸಿದ್ದಾರೆ. ಹತ್ತಾರು ಮಂದಿ ಸ್ಥಳದಲ್ಲೇ ನಿಂತಿದ್ದರೂ ಘಟನೆಯನ್ನು ಮೊಬೈಲ್‌ನಲ್ಲಿ (Mobile) ಸೆರೆ ಹಿಡಿಯುತ್ತಿದ್ದರೆ ಹೊರತು, ಯಾರೊಬ್ಬರೂ ಜಗಳ ಬಿಡಿಸುವ ಪ್ರಯತ್ನ ಮಾಡಲಿಲ್ಲ. ಸುಮಾರು 10 ನಿಮಿಷದ ಬಳಿಕ ಜಗಳ ಬಿಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇನ್ಮುಂದೆ ಟೋಲ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ- ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ

    ಇನ್ಮುಂದೆ ಟೋಲ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ- ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ

    ನವದೆಹಲಿ: ಸಾಮಾನ್ಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ (National Highway) ಟೋಲ್ ಪ್ಲಾಜಾಗಳನ್ನು (Toll Plaza) ನೋಡುತ್ತವೆ. ಅಲ್ಲಿ ಟೋಲ್ (Toll) ಪಾವತಿಗಾಗಿ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಇದರಿಂದ ವಾಹನ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಕಿರಿಕಿರಿ ಆಗುವುದುಂಟು. ಆದರೆ ಭವಿಷ್ಯದಲ್ಲಿ ಈ ಟೋಲ್ ಪ್ಲಾಜಾಗಳಿಂದ ಕಿರಿಕಿರಿ ಆಗುವುದೇ ಇಲ್ಲ.

    ಈ ಕುರಿತು ಮಾತನಾಡಿರುವ ಕೇಂದ್ರ ನಿತಿನ್ ಗಡ್ಕರಿ (Nitin Gadkari), ಶೀಘ್ರದಲ್ಲೇ ಸ್ವಯಂಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸುವ ವ್ಯವಸ್ಥೆ ಅಳವಡಿಸಲಾಗುವುದು. ಸ್ವಯಂ ಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸಲು ಕೇಂದ್ರ ಸರ್ಕಾರ ಈಗಾಗಲೇ ಪ್ರಾಯೋಗಿಕ ಯೋಜನೆಗಳನ್ನು ನಡೆಸುತ್ತಿದೆ. ಇದು ವಾಹನ ಮಾಲೀಕರ ಬ್ಯಾಂಕ್ ಖಾತೆಗಳಿಂದ (Bank Account) ಶುಲ್ಕವನ್ನು ಖಡಿತಗೊಳಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ: ಆರಗ ಜ್ಞಾನೇಂದ್ರ

    ಫಾಸ್ಟ್ಯಾಗ್‌ಗಳನ್ನು (FASTags) ಪರಿಚಯಿಸಿದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(NHAI) ಟೋಲ್ ಆದಾಯವು ವರ್ಷಕ್ಕೆ 15 ಸಾವಿರ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ. ಅದಕ್ಕಾಗಿ ಈಗ ಆಟೋ ಮೊಬೈಲ್ ನಂಬರ್‌ಪ್ಲೇಟ್(ಸ್ವಯಂಚಾಲಿನ ನಂಬರ್‌ಪ್ಲೇಟ್ ರೀಡರ್ ಕ್ಯಾಮೆರಾ) (Automatic Number Plate Reader Cameras) ತ್ರಜ್ಞಾನವನ್ನು ಪರಿಚಯಿಸಲಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೇಜಾವರ ಶ್ರೀಗಳ ಎದೆ ಮೇಲೆ ಕಾಲಿಟ್ಟು ಸೊಪ್ಪು ತಿಂದ ಆಡು

    2018-19ರಲ್ಲಿ ಟೋಲ್ ಪ್ಲಾಜಾಗಳಲ್ಲಿ (Toll Plaza) ವಾಹನಗಳು ಕಾಯುತ್ತಿದ್ದ ಸಮಯ ಸರಿಸುಮಾರು 8 ನಿಮಿಷಗಳಿತ್ತು. 2020 ರಿಂದ 2022ರ ಅವಧಿಯಲ್ಲಿ ಫಾಸ್ಟ್ಯಾಗ್‌ಗಳನ್ನು ಪರಿಚಯಿಸಿದ ನಂತರ ವಾಹನಗಳ ಸರಾಸರಿ ಸಮಯವು 47 ಸೆಕೆಂಡುಗಳಿಗೆ ಇಳಿಕೆಯಾಯಿತು. ಹೀಗಿದ್ದೂ ಕೆಲವು ನಗರಗಳಲ್ಲಿ ಸಂದಿಗ್ಧ ಸಮಯಗಳಲ್ಲಿ ಹೆಚ್ಚಿನ ವಿಳಂಬವಾಗುತ್ತಿವೆ. ಅದಕ್ಕಾಗಿ ಸಂಪೂರ್ಣ ಬದಲಿ ವ್ಯವಸ್ಥೆ ಕಲ್ಪಿಸಲು ಸ್ವಯಂಚಾಲಿನ ಟೋಲ್ ಸಂಗ್ರಹಿಸುವ ವಿಧಾನವನ್ನು ಪರಿಚಯಿಸಲಾಗುತ್ತಿದೆ ಎಂದಿದ್ದಾರೆ.

    ಸರ್ಕಾರ ಒಟ್ಟು ಎರಡು ರೀತಿಯ ಆಯ್ಕೆಗಳನ್ನು ಎದುರುನೋಡುತ್ತಿದೆ. ಮೊದಲಿಗೆ ಟೋಲ್ ಅನ್ನು ನೇರವಾಗಿ ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದ ಕಡಿತಗೊಳಿಸುವುದು, 2ನೇ ಅಯ್ಕೆಯಾಗಿ ಕಾರಿನಲ್ಲಿ ಜಿಪಿಎಸ್ ಅಳವಡಿಸಿ ಉಪಗ್ರಹ ಆಧಾರಿತವಾಗಿ ಟೋಲ್ ಸಂಗ್ರಹ ಮಾಡುವ ವಿಧಾನವನ್ನು ಎದುರು ನೋಡುತ್ತಿದೆ. ಉಪಗ್ರಹ ವಿಧಾನ ಅನುಸರಿಸಿದರೆ ಫಾಸ್ಟ್ಯಾಗ್‌ ಬದಲಾಗಿ ಜಿಪಿಎಸ್ ಅಳವಡಿಸಬೇಕಾಗುತ್ತದೆ. ಯಾವ ಆಯ್ಕೆಯನ್ನು ಈಗಲೇ ಅಂತಿಮಗೊಳಿಸಿಲ್ಲ. ಆದರೆ ಟೋಲ್ ಪ್ಲಾಜಾಗಳಿಂದ ಮುಕ್ತಿ ನೀಡುವುದು ಖಚಿತ. ಸ್ವಯಂ ಚಾಲಿತ ಟೋಲ್ ಸಂಗ್ರಹಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಟೋಲ್ ಪ್ಲಾಜಾ ನೌಕರರ ಮೇಲೆ ಬಿಜೆಪಿ ಮುಖಂಡನ ಗೂಂಡಾ ವರ್ತನೆ

    ಟೋಲ್ ಪ್ಲಾಜಾ ನೌಕರರ ಮೇಲೆ ಬಿಜೆಪಿ ಮುಖಂಡನ ಗೂಂಡಾ ವರ್ತನೆ

    ಭೋಪಾಲ್: ಟೋಲ್ ಪ್ಲಾಜಾ ಬಳಿ ಶಾಜಾದಪುರದ ಬಿಜೆಪಿ ಜಿಲ್ಲಾಧ್ಯಕ್ಷ ಅಂಬರಂ ಕರಡ ಗೂಂಡಾಗಿರಿ ಮೆರೆದಿದ್ದು, ಅವರ ಬೆಂಬಲಿಗರು ಟೋಲ್ ಪ್ಲಾಜಾದ ನೌಕರರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

    ಘಟನೆಯ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೆಹೋರ್‌ನ ಪಟೇರಿಯಾ ಗೋಯಲ್ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾದ ಪ್ರಕರಣ ಇದಾಗಿದ್ದು, ಬಿಜೆಪಿ ಕಾರ್ಯಕರ್ತರು ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

    ಜಿಲ್ಲಾಧ್ಯಕ್ಷರು ಸ್ಥಳದಲ್ಲೇ ಇದ್ದು, ಜಗಳ ನಿಲ್ಲಿಸುವ ಬದಲು ಪ್ರಚಾರ ಮಾಡುತ್ತಿರುವಂತಿದೆ ಎಂದು ದೂರು ಕೇಳಿಬರುತ್ತಿದೆ. ಸ್ಥಳೀಯ ವ್ಯಕ್ತಿಯೊಬ್ಬರು ಸಿಬ್ಬಂದಿ ಮೇಲೆ ಹಲ್ಲೆ ಎಸಗುತ್ತಿರುವ ದೃಶ್ಯಾವಳಿಗಳನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರ ದಬ್ಬಾಳಿಕೆ ಮುಂದೆ ಟೋಲ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

  • ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಇಂದಿನಿಂದ ದುಪ್ಪಟ್ಟು ಟೋಲ್ ಕಟ್ಟಿ

    ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಇಂದಿನಿಂದ ದುಪ್ಪಟ್ಟು ಟೋಲ್ ಕಟ್ಟಿ

    – ಟೋಲ್‍ಗಳಲ್ಲಿ ನೋ ಫಾಸ್ಟ್‌ಟ್ಯಾಗ್, ನೋ ಎಂಟ್ರಿ ಬೋರ್ಡ್

    ಬೆಂಗಳೂರು: ಇವತ್ತಿನಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಿದ್ದು, ಫಾಸ್ಟ್‌ಟ್ಯಾಗ್ ಇಲ್ಲವಾದರೆ ಟೋಲ್‍ಗಳಲ್ಲಿ ಪ್ರವೇಶವೇ ಇಲ್ಲ. ಇಲ್ಲವೇ 2 ಪಟ್ಟು ಟೋಲ್ ಕಟ್ಟಿ ಪ್ರಯಾಣಿಸಬೇಕಿದೆ.

    ಫಾಸ್ಟ್‌ಟ್ಯಾಗ್ ಕಡ್ಡಾಯ ಹಿನ್ನೆಲೆ ಎಲ್ಲ ಟೋಲ್‍ಗಳಲ್ಲಿ `ನೋ ಫಾಸ್ಟ್‌ಟ್ಯಾಗ್, ನೋ ಎಂಟ್ರಿ’ ಬೋರ್ಡ್ ಹಾಕಲಾಗಿದ್ದು, ಫಾಸ್ಟ್‌ಟ್ಯಾಗ್ ಇಲ್ಲವಾದರೆ ಟೋಲ್‍ನ 2 ಪಟ್ಟು ಹಣ ಕಟ್ಟಬೇಕು. ಇಂದು ಮಧ್ಯ ರಾತ್ರಿಯಿಂದ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ಒಂದೆಡೆ ಫಾಸ್ಟ್‌ಟ್ಯಾಗ್ ಪಡೆಯುವುದು ಸಮಸ್ಯೆಯಾದರೆ, ಮತ್ತೊಂದೆಡೆ ಫಾಸ್ಟ್‌ಟ್ಯಾಗ್ ನಲ್ಲಿ ಹಣ ಇದ್ದರೂ ಸ್ಕ್ಯಾನ್ ಆಗ್ತಿಲ್ಲ. ಹೀಗಾಗಿ ದುಪ್ಪಟ್ಟು ಟೋಲ್ ವಸೂಲಿ ಮಾಡಲಾಗುತ್ತಿದ್ದು, ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೋಲ್ ಸಿಬ್ಬಂದಿ ಜೊತೆಗೆ ವಾಹನ ಸವಾರರು ಕಿರಿಕ್ ಮಾಡಿಕೊಳ್ಳುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಿದೆ. ಫಾಸ್ಟ್‌ಟ್ಯಾಗ್ ಇಲ್ಲದವರ ಬಳಿ ಡಬಲ್ ಚಾರ್ಜ್ ಕಟ್ಟಿಸಿಕೊಳ್ಳಲಾಗುತ್ತಿದೆ.

    ಏರ್ ಪೋರ್ಟ್ ಟೋಲ್ ಪ್ಲಾಜಾ ಬಳಿ ವಾಹನ ಸವಾರರು ಕಿರಿಕ್ ಮಾಡಿಕೊಳ್ಳುತ್ತಿದ್ದು, ಫಾಸ್ಟ್‌ಟ್ಯಾಗ್ ಮಾಡುವ ಸ್ಥಳದಲ್ಲಿ ಹಗ್ಗಜಗ್ಗಾಟ ಶುರುವಾಗಿದೆ. ಟೋಲ್ ಸಿಬ್ಬಂದಿ ಮತ್ತು ವಾಹನ ಸವಾರರ ನಡುವೆ ಕಿರಿಕ್ ಶುರುವಾಗಿದೆ. ಮತ್ತೊಂದೆಡೆ ಟೋಲ್ ಪ್ಲಾಜಾ ಬಳಿಯೇ ಫಾಸ್ಟ್‌ಟ್ಯಾಗ್ ಅಳವಡಿಕೆ ನಡೆದಿದೆ.

    ತೀವ್ರಗೊಂಡ ವಾಗ್ವಾದ
    ಹೊಸಕೋಟೆ ಟೋಲ್ ನಲ್ಲಿ ಸ್ಟೋರ್ ಸಿಬ್ಬಂದಿ ಮತ್ತು ವಾಹನ ಸವಾರರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಫಾಸ್ಟ್‌ಟ್ಯಾಗ್ ಮಾಡಿಸದಿದ್ದರೆ ದುಪ್ಪಟ್ಟು ಹಣದ ಬರೆ. ಎಲ್‍ಸಿವಿ ವಾಹನಗಳಿಗೆ 30 ರೂ. ಇದ್ದ ಟೋಲ್ ದರ 60 ರೂ. ಆಗಿದೆ. ಬಸ್, ಲಾರಿಗಳಿಗೆ ಇದ್ದ 65 ರೂ. ಇದೀಗ 135 ರೂ. ಆಗಿದೆ. ಫಾಸ್ಟ್‌ಟ್ಯಾಗ್ ಮಾಡಿಸಿದವರಿಗೆ ಮಾತ್ರ ದುಪ್ಪಟ್ಟು ಹಣ ಪಡೆಯುತ್ತಿಲ್ಲ. ಫೆ.15 ರಿಂದ ಫಾಸ್ಟ್‌ಟ್ಯಾಗ್ ಕಡ್ಡಾಯ ಮಾಡಲಾಗಿದೆ.

    ದುಪ್ಪಟ್ಟು ಹಣ ಕೇಳುತ್ತಿದ್ದಂತೆ ಕೆಲವು ಕಾರುಗಳು ಹಿಂದಕ್ಕೆ ಹೋಗುತ್ತಿವೆ. ದುಪ್ಪಟ್ಟು ಹಣ ವಸೂಲಿ ಹಿನ್ನೆಲೆ ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳು ನಿನ್ನೆಯಿಂದಲೇ ಟೋಲ್ ರಸ್ತೆಗೆ ಹೋಗುತ್ತಿಲ್ಲ. ಅಲ್ಲದೆ ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳಿಗೆ ಟೋಲ್ ಬಳಿಯೇ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಕೆಲ ವಾಹನ ಮಾಲೀಕರು ದುಪ್ಪಟ್ಟು ಹಣ ಯಾಕೆ ಕೊಡಬೇಕು ಎಂದು ಪ್ರಶ್ನಿಸುತ್ತಿದ್ದಾರೆ. ಫಾಸ್ಟ್‌ಟ್ಯಾಗ್ ಕಡ್ಡಾಯ ಮಾಡಿರುವುದು ಕೆಲ ವಾಹನಗಳ ಮಾಲೀಕರಿಗೆ ಗೊತ್ತಿಲ್ಲ.

  • ಬೆಂಬಲಿಗರ ವಾಹನಗಳಿಗೆ ಸಿಗದ ಫ್ರೀ ಎಂಟ್ರಿ- ಟೋಲ್ ಸಿಬ್ಬಂದಿ ಮೇಲೆ ಬಿಜೆಪಿ ಶಾಸಕನಿಂದ ಹಲ್ಲೆ

    ಬೆಂಬಲಿಗರ ವಾಹನಗಳಿಗೆ ಸಿಗದ ಫ್ರೀ ಎಂಟ್ರಿ- ಟೋಲ್ ಸಿಬ್ಬಂದಿ ಮೇಲೆ ಬಿಜೆಪಿ ಶಾಸಕನಿಂದ ಹಲ್ಲೆ

    – ಸೋಶಿಯಲ್ ಮೀಡಿಯಾದಲ್ಲಿ ಶಾಸಕನ ದರ್ಪ ಸೆರೆ

    ಲಕ್ನೋ: ಬೆಂಬಲಿಗರ 200 ವಾಹನಗಳಿಗೆ ಫ್ರೀ ಎಂಟ್ರಿ ನೀಡದ ಟೋಲ್ ಸಿಬ್ಬಂದಿ ಮೇಲೆ ಬಿಜೆಪಿ ಶಾಸಕ ನರೇಶ್ ರಾವತ್ ಹಲ್ಲೆ ನಡೆಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಾಸಕರ ವಿರುದ್ಧ ಟೋಲ್ ಪ್ಲಾಜಾ ಮ್ಯಾನೇಜರ್ ಲಕ್ನೋ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಉತ್ತರ ಪ್ರದೇಶದ ರಾಯಬರೇಲಿ ಜಿಲ್ಲೆಯ ಲಕ್ನೋ ಮಾರ್ಗದಲ್ಲಿರುವ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಎನ್‍ಹೆಚ್-30 ಮಾರ್ಗವಾಗಿ ಬಂದ ಶಾಸಕರ ವಾಹನಗಳನ್ನ ಟೋಲ್ ಸಿಬ್ಬಂದಿ ತಡೆದು ಶುಲ್ಕ ಪಾವತಿಸುವಂತೆ ಸೂಚಿಸಿದ್ದರು. ಇದಕ್ಕೆ ಕೋಪಗೊಂಡ ಶಾಸಕ ಟೋಲ್ ಪ್ಲಾಜಾ ಕಚೇರಿಯೊಳಗೆ ನುಗ್ಗಿ ದರ್ಪ ಮರೆದಿದ್ದಾರೆ.

    ಟೋಲ್ ಸಿಬ್ಬಂದಿ ಅನುಮತಿ ನೀಡದ ಹಿನ್ನೆಲೆ ಶಾಸಕ ತಮ್ಮ ಬೆಂಬಲಿಗರ ಜತೆ ಸೇರಿ ರೌಡಿಯಂತೆ ವರ್ತಿಸಿದ್ದಾರೆ. ಈ ಎಲ್ಲ ದೃಶ್ಯಗಳು ಕಚೇರಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿವೆ.

    ಶಾಸಕರು ಪ್ರತಿದಿನ ಈ ಮಾರ್ಗವಾಗಿ ಸಂಚರಿಸುತ್ತಾರೆ. ಶಾಸಕರ ಹಿಂದೆ ಬರುವ ವಾಹನಗಳಿಗೆ ಟೋಲ್ ಫ್ರೀ ನೀಡಬೇಕೆಂದು ನಮ್ಮ ಮೇಲೆ ಒತ್ತಡ ಹಾಕುತ್ತಾರೆ. ಪ್ರವೇಶ ನೀಡದಕ್ಕೆ ಕಚೇರಿಯೊಳಗೆ ನುಗ್ಗೆ ಹಲ್ಲೆ ನಡೆಸಿದ್ದಾರೆ ಎಂದು ಟೋಲ್ ಪ್ಲಾಜಾ ಮ್ಯಾನೇಜರ್ ಆರೋಪಿಸಿದ್ದಾರೆ.

  • ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳಲು ಐದು ದಿನ ಬಾಕಿ

    ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳಲು ಐದು ದಿನ ಬಾಕಿ

    ಬೆಂಗಳೂರು: ಫಾಸ್ಟ್ ಟ್ಯಾಗ್ ಅಳವಡಿಸಲು ಕೇವಲ ಐದೇ ದಿನ ಬಾಕಿಯಿದೆ.

    ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ಸಂಚರಿಸುವ ಶೇ. 60ರಷ್ಟು ವಾಹನಗಳು ಫಾಸ್ಟ್ ಟ್ಯಾಗ್ ಅಳವಡಿಸಿಕೊಂಡಿದ್ದು, ಅಂತಿಮ ಗಡುವಿಗೆ  ಬಾಕಿ ಉಳಿದ ಐದು ದಿನಗಳಲ್ಲಿ ಶೇ.25ರಷ್ಟು ವಾಹನಗಳು ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳುವುದು ಬಾಕಿಯಿದೆ.

    ಕೇಂದ್ರ ಸರ್ಕಾರ ಫಾಸ್ಟ್ ಟ್ಯಾಗ್ ಅಳವಡಿಕೆ ನೀಡಿದ್ದ ಗಡುವು ವಿಸ್ತರಣೆ ಐದು ದಿನಗಳಲ್ಲಿ (ಜ.15) ಮುಕ್ತಾಯವಾಗಲಿದೆ. ಈ ಅವಧಿಯಲ್ಲಿ ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳದಿದ್ದರೆ ಕ್ಯಾಶ್ ಲೈನ್ ನಲ್ಲಿ ಮಾತ್ರ ಸಂಚರಿಸಬೇಕು.

    ರಾಜ್ಯದಲ್ಲಿ ಫಾಸ್ಟ್ ಟ್ಯಾಗ್‍ಗೆ ಬೇಡಿಕೆ ಕಡಿಮೆಯಾಗಿದೆ. ಟೋಲ್ ಪ್ಲಾಜಾಗಳಲ್ಲಿ ತೆರೆದಿರುವ ಫಾಸ್ಟ್ ಟ್ಯಾಗ್ ಸೆಂಟರ್ ಗಳು, ಬ್ಯಾಂಕ್‍ಗಳು, ಆನ್‍ಲೈನ್ ಮಾರ್ಕೆಟ್‍ನಲ್ಲಿ ಫಾಸ್ಟ್ ಟ್ಯಾಗ್ ಗೆ ಬೇಡಿಕೆ ಇಳಿಮುಖವಾಗಿದೆ. ಡಿಸೆಂಬರ್ 15ರ ವೇಳೆಗೆ ರಾಜ್ಯದಲ್ಲಿ ಶೇ.40ರಷ್ಟಿದ್ದ ಫಾಸ್ಟ್ ಟ್ಯಾಗ್ ಅಳವಡಿಕೆ ಪ್ರಮಾಣ ಕಳೆದ 25 ದಿನಗಳಲ್ಲಿ ಶೇ. 20ರಷ್ಟು ಹೆಚ್ಚಾಗಿದೆ. ಅಂದರೆ ಇವರೆಗೆ ರಾಜ್ಯದಲ್ಲಿ ಒಟ್ಟು ಶೇ.60ರಷ್ಟು ಫಾಸ್ಟ್ ಟ್ಯಾಗ್ ಅಳವಡಿಕೆಯಾಗಿದೆ.

    ವಾಹನಗಳಿಗೆ ಫಾಸ್ಟ್ ಟ್ಯಾಗ್ ಸ್ಟಿಕರ್ ಅಳವಡಿಕೆ ನಿರೀಕ್ಷಿತ ಮಟ್ಟಕ್ಕೆ ಮುಟ್ಟಿಲ್ಲ. ಆದರೂ ಇನ್ನೈದು ದಿನಗಳಲ್ಲಿ ಫಾಸ್ಟ್ ಟ್ಯಾಗ್ ವಾಹನಗಳ ಸಂಖ್ಯೆ ಶೇ.80ಕ್ಕೆ ಏರಿಕೆಯಾಗಲಿದೆ ಎಂದು ಅಧಿಕಾರಿಗಳು ಭರವಸೆ ವ್ಯಕ್ತಪಡಿಸಿದ್ದಾರೆ. ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳ ಸಂಚಾರಕ್ಕೆ ಟೋಲ್ ಪ್ಲಾಜಾಗಳಲ್ಲಿ ಒಂದು ಪಥ ಮೀಸಲಿಡಲು ಹೆದ್ದಾರಿ ಪ್ರಾಧಿಕಾರ ಚಿಂತನೆ ನಡೆಸಿದೆ.

  • ಫಾಸ್ಟ್ ಟ್ಯಾಗ್‍ನಿಂದ ಆದಾಯ ಸೋರಿಕೆಗೆ ಬಿತ್ತು ಕತ್ತರಿ- ಶೇ.15ರಷ್ಟು ಹೆಚ್ಚಳವಾಯ್ತು ಟೋಲ್ ಸಂಗ್ರಹ

    ಫಾಸ್ಟ್ ಟ್ಯಾಗ್‍ನಿಂದ ಆದಾಯ ಸೋರಿಕೆಗೆ ಬಿತ್ತು ಕತ್ತರಿ- ಶೇ.15ರಷ್ಟು ಹೆಚ್ಚಳವಾಯ್ತು ಟೋಲ್ ಸಂಗ್ರಹ

    ನವದೆಹಲಿ: ಟೋಲ್ ಪಾವತಿಸಲು ಫಾಸ್ಟ್ ಟ್ಯಾಗ್ ಕಡ್ಡಾಯ ಬಳಕೆಯನ್ನು ಕೇಂದ್ರ ಸರ್ಕಾರ ಮುಂದೂಡಿದ್ದರೂ, ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಪ್ರಮಾಣ ಶೇ.15 ರಷ್ಟು ಹೆಚ್ಚಾಗಿದೆ.

    ಮೂಲಗಳ ಮಾಹಿತಿಯ ಅನ್ವಯ ಎನ್‍ಎಚ್‍ಎಐ ಟೋಲ್ ಆದಾಯ 80 ಕೋಟಿ ರೂ. ದಾಟಿದ್ದು, ಇದಕ್ಕೂ ಮುನ್ನ ಸರಾಸರಿ 65 ರಿಂದ 68 ಕೋಟಿ ರೂ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಸಂಗ್ರಹವಾಗಿತ್ತು. ಫಾಸ್ಟ್ ಟ್ಯಾಗ್ ಅಳವಡಿಕೆಯಿಂದ ಆದಾಯ ಹೆಚ್ಚಳವಾಗಿದ್ದು, ಮುಂದಿನ ದಿನಗಳಲ್ಲಿ ಟೋಲ್‍ಗಳಲ್ಲಿ ಸೋರಿಕೆಯಾಗುತ್ತಿದ್ದ ಆದಾಯಕ್ಕೆ ಪೂರ್ಣವಿರಾಮ ಬೀಳುವ ಸಾಧ್ಯತೆಯಿದೆ.

    ಇದುವರೆಗೂ ದೇಶದಲ್ಲಿರುವ 530 ಟೋಲ್ ಪ್ಲಾಜಾಗಳಲ್ಲಿ 40 ರಿಂದ 45 ಪ್ಲಾಜಾಗಳಲ್ಲಿನ ‘ಟೋಲ್ ಟೈಮ್ ಝೀರೋ’ ಟೈಮ್ ದಾಖಲಾಗಿದೆ. ಕಳೆದ ವರ್ಷ 488 ಟೋಲ್ ಪ್ಲಾಜಾ ಗಳಲ್ಲಿ ಸರಾಸರಿ ಕಾಯುವ ಸಮಯ ಭಾನುವಾರ 12 ನಿಮಿಷವಾಗಿತ್ತು. ಉಳಿದಂತೆ ಇತರೇ ದಿನಗಳಲ್ಲಿ ಸರಾಸರಿ 10.04 ನಿಮಿಷ ಬೇಕಾಗಿತ್ತು.

    ಈಗಲೂ ಮಾಹಿತಿಯ ಕೊರತೆಯಿಂದಾಗಿ ವಾಹನಗಳು ಮಾಲೀಕರು ಫಾಸ್ಟ್ ಟ್ಯಾಗ್ ಅಳವಡಿಕೆ ಮಾಡದೇ ಇದ್ದರೂ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ ಟ್ಯಾಗ್ ಲೇನ್‍ಗಳಿಗೆ ಪ್ರವೇಶ ಮಾಡುತ್ತಿದ್ದರಿಂದ ಕೆಲ ಸಮಸ್ಯೆ ಆಗುತ್ತಿದೆ. ಈ ವೇಳೆ ಡಬಲ್ ಚಾರ್ಜ್ ಪಾವತಿ ಮಾಡಲು ನಿರಾಕರಿಸುತ್ತಿದ್ದಾರೆ. ಅಲ್ಲದೇ ಕೆಲ ಪ್ಲಾಜಾಗಳಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಅಂತಹ ಸ್ಥಳಗಳಲ್ಲಿ ವಾಹನ ಸವಾರರು ಸಾಕಷ್ಟು ಬ್ಯಾಲೆನ್ಸ್ ಇದ್ದರೆ ಉಚಿತ ಪ್ರವೇಶ ನೀಡಲಾಗುತ್ತಿದೆ ಎಂದು ಟೋಲ್ ಸಿಬ್ಬಂದಿ ಹೇಳಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ನೀಡಿರುವ ಮಾಹಿತಿ ಅನ್ವಯ, ದೇಶದ 245 ಪ್ಲಾಜಾಗಳಲ್ಲಿ ಫಾಸ್ಟ್ ಟ್ಯಾಗ್ ತೃಪ್ತಿದಾಯಕವಾಗಿದ್ದು, ಎಲ್ಲಾ ಪ್ಲಾಜಾಗಳಲ್ಲಿ ನೇರ ನಗದು ಸ್ವೀಕರಿಸುವ ಒಂದು ಲೇನ್ ಮಾತ್ರ ತೆರೆಯಲಾಗಿದೆ ಎಂದು ತಿಳಿಸಿದ್ದಾರೆ. ಉಳಿದ 242 ಪ್ಲಾಜಾಗಳಲ್ಲಿ ಶೇ.25 ರಷ್ಟು ಲೇನ್‍ಗಳಲ್ಲಿ ನಗದು ಸ್ವೀಕರಿಸಲಾಗುತ್ತಿದೆ. ಇನ್ನು 40-42 ಪ್ಲಾಜಾಗಳಲ್ಲಿ ನಿರೀಕ್ಷಿತ 25% ರಷ್ಟು ಪ್ರಮಾಣದಲ್ಲಿ ಫಾಸ್ಟ್ ಟ್ಯಾಗ್ ಬಳಕೆ ಸಾಧ್ಯವಾಗಿಲ್ಲ ಎಂಬ ಮಾಹಿತಿ ಲಭಿಸಿದೆ.

  • ಟೋಲ್ ಕೇಳಿದ್ದಕ್ಕೆ ಗೇಟ್ ಮುರಿದ ಶಾಸಕ: ದರ್ಪದ ವಿಡಿಯೋ ನೋಡಿ

    ಟೋಲ್ ಕೇಳಿದ್ದಕ್ಕೆ ಗೇಟ್ ಮುರಿದ ಶಾಸಕ: ದರ್ಪದ ವಿಡಿಯೋ ನೋಡಿ

    ತಿರುವನಂತಪುರಂ: ಟೋಲ್ ಶುಲ್ಕ ಕಟ್ಟಿ ಎಂದು ಹೇಳಿದ್ದಕ್ಕೆ ಕೇರಳದ ಶಾಸಕರೊಬ್ಬರು ಪ್ಲಾಜಾದಲ್ಲೇ ಗುಂಡಾವರ್ತನೆ ತೋರಿದ್ದು ವಿಡಿಯೋ ವೈರಲ್ ಆಗಿದೆ.

    ಕೇರಳದ ಪಕ್ಷೇತರ ಶಾಸಕ ಪಿ.ಸಿ.ಜಾರ್ಜ್ ಮತ್ತು ಸಹಚಚರು ತ್ರಿಶ್ಯೂರ್ ನಲ್ಲಿರುವ ಟೋಲ್ ಪ್ಲಾಜಾದ ಶುಲ್ಕ ನೀಡಲು ನಿರಾರಿಸಿ, ಸಿಬ್ಬಂದಿಯ ಮಾತನ್ನು ಕೇಳದೇ ಸ್ವಯಂ ಚಾಲಿತ ಗೇಟ್ ಮುರಿದು ದರ್ಪ ಮೆರೆದಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ಟೋಲ್ ಪ್ಲಾಜಾ ಸಿಬ್ಬಂದಿ ಪ್ರತಿ ವಾಹನ ತಡೆದು ಶುಲ್ಕ ಪಡೆಯುವಂತೆ ಮಂಗಳವಾರ ರಾತ್ರಿ ಕಾರನ್ನು ತಡೆದಿದ್ದಾರೆ. ಕಾರನ್ನು ನಿಲ್ಲಿಸಿದ್ದಕ್ಕೆ ಇಳಿದು ಬಂದ ಶಾಸಕ ಪಿ.ಸಿ.ಜಾರ್ಜ್ ತಡೆ ಹಾಕುವ ಸ್ವಯಂ ಚಾಲಿತ ಗೇಟ್ ಮುರಿದು ಹಣ ಕೇಳಿದ ಟೋಲ್ ಗೇಟ್ ಸಿಬ್ಬಂದಿಯನ್ನು ಹೆದರಿಸಿದ್ದಾರೆ. ಅಷ್ಟೇ ಅಲ್ಲದೇ ಅರ್ಧ ಸ್ವಯಂ ಚಾಲಿತ ಗೇಟನ್ನು ಮುರಿದಿದ್ದಾರೆ.

    ಅರ್ಧ ತುಂಡಾಗಿದ್ದರಿಂದ ಕಾರು ಮುಂದಕ್ಕೆ ಹೋಗಲು ಅಡ್ಡಿಯಾಗುತಿತ್ತು. ಈ ವೇಳೆ ಸಹಚರರು ಸ್ವಯಂ ಚಾಲಿತ ಗೇಟ್ ಮೇಲೆತ್ತಲು ಹೇಳಿದ್ದರು. ಇದಕ್ಕೆ ಒಪ್ಪದ ಸಿಬ್ಬಂದಿಗೆ ಶಾಸಕರ ಸಹಚರರು ಬೆದರಿಕೆ ಹಾಕಿ, ಗೇಟ್ ಅನ್ನು ಸಂಪೂರ್ಣವಾಗಿ ಮುರಿದಿದ್ದಾರೆ. ಕೊನೆಗೂ ಹಣ ನೀಡದೇ ಶಾಸಕ ಹಾಗೂ ಆತನ ಸಹಚರರು ಕಾರನ್ನು ಚಾಲನೆ ಮಾಡಿಕೊಂಡು ಹೋಗಿದ್ದಾರೆ.