Tag: ಟೋಲ್ ಶುಲ್ಕ

  • ನ.15 ರಿಂದ ಹೊಸ ಟೋಲ್ ನಿಯಮ – ಫಾಸ್ಟ್‌ಟ್ಯಾಗ್ ಇಲ್ಲದವರಿಗೆ‌ ಗುಡ್‌ನ್ಯೂಸ್‌, UPI ಪಾವತಿದಾರರಿಗೆ ಭಾರೀ ರಿಯಾಯಿತಿ

    ನ.15 ರಿಂದ ಹೊಸ ಟೋಲ್ ನಿಯಮ – ಫಾಸ್ಟ್‌ಟ್ಯಾಗ್ ಇಲ್ಲದವರಿಗೆ‌ ಗುಡ್‌ನ್ಯೂಸ್‌, UPI ಪಾವತಿದಾರರಿಗೆ ಭಾರೀ ರಿಯಾಯಿತಿ

    ನವದೆಹಲಿ: ಟೋಲ್ (Toll) ಪಾವತಿಗಳಿಗೆ ಸಂಬಂಧಿಸಿದಂತೆ ಡಿಜಿಟಲ್‌ ಪಾವತಿಯನ್ನ ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಮತ್ತೊಂದು ಹೊಸ ನಿಯಮ ಪರಿಚಯಿಸಿದೆ. ಇದರಿಂದ ಫಾಸ್ಟ್‌ಟ್ಯಾಗ್‌ ಹೊಂದಿಲ್ಲದವರು ಯುಪಿಐ ಪಾವತಿ ಮೂಲಕವೂ ರಿಯಾಯಿತಿ ಗಳಿಸಬಹುದಾಗಿದೆ. ನವೆಂಬರ್‌ 15ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ.

    ಸಹೌದು. ಫಾಸ್ಟ್‌ ಟ್ಯಾಗ್‌ (FASTag) ಹೊಂದದೇ ಇರುವ ವಾಹನಗಳು ನವೆಂಬರ್ 15ರಿಂದ ನಗದುರೂಪದಲ್ಲಿ ಟೋಲ್ ಶುಲ್ಕ ಪಾವತಿಸಲು ಬಯಸಿದ್ರೆ ಅವು ಎರಡುಪಟ್ಟು ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಆದ್ರೆ ಯುಪಿಐ (UPI) ರೂಪದಲ್ಲಿ ಶುಲ್ಕ ಪಾವತಿಸುವವರಿಗೆ ನಿಗದಿಗಿಂತ 1.25 ಪಟ್ಟು ಅಧಿಕ ಶುಲ್ಕ ವಿಧಿಸಲಾಗುತ್ತದೆ. ಇದನ್ನೂ ಓದಿ: ಮುಂಬೈಗೆ ಸೈಕ್ಲೋನ್ `ಶಕ್ತಿʼಯ ಭೀತಿ – ಸೋಮವಾರ ಗುಜರಾತ್‌ಗೂ ಅಪ್ಪಳಿಸಲಿದೆ ಚಂಡಮಾರುತ

    ಫಾಸ್ಟ್‌ಟ್ಯಾಗ್‌ ಬಳಕೆದಾರರಲ್ಲದವರಿಗೆ ಅವರ ಟೋಲ್ ಶುಲ್ಕ (Toll) ಪಾವತಿಯ ವಿಧಾನವನ್ನ ಆಧರಿಸಿ ವಿಭಿನ್ನ ಶುಲ್ಕಗಳನ್ನು ವಿಧಿಸಲು ರಸ್ತೆ ಸಾರಿಗೆ ಹಾಗೂ ಹೆದ್ದಾರಿ (MORTH) ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳು ಹಾಗೂ ಆದಾಯ ನಿರ್ಧಾರ) ನಿಯಮಗಳು, 2008 ಅನ್ನು ತಿದ್ದುಪಡಿಗೊಳಿಸಿದೆ. ಟೋಲ್‌ ಪ್ಲಾಜಾಗಳಲ್ಲಿ (Toll Plaza) ಡಿಜಿಟಲ್ ಪಾವತಿ ಉತ್ತೇಜಿಸುವುದು ಹಾಗೂ ನಗದು ಬಳಕೆಯನ್ನು ಕಡಿಮೆಗೊಳಿಸುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

    ನವೆಂಬರ್‌ 15ರಿಂದ ನಿಯಮ ಜಾರಿ
    ಟೋಲ್‌ ಪ್ಲಾಜಾಗಳಲ್ಲಿ ನಗದು ವಹಿವಾಟು ಕಡಿಮೆಮಾಡಲು ಈ ಬದಲಾವಣೆ ತರಲಾಗಿದ್ದು, ನವೆಂಬರ್‌ 15ರಿಂದ ಹೊಸ ನಿಯಮ ಜಾರಿಗೆ ಬರಲಿದೆ. ಅಲ್ಲದೇ ಡಿಜಿಟಲ್‌ ಪಾವತಿ ಮಾಡುವುದರಿಂದ ಪಾರದರ್ಶಕತೆ ಕಾಯ್ದುಕೊಳ್ಳುವ ಜೊತೆಗೆ ವಾಹನ ದಟ್ಟಣೆಯೂ ಕಡಿಮೆಯಾಗಲಿದೆ, ಹೆದ್ದಾರಿ ಬಳಕೆದಾರರ ಪ್ರಯಾಣ ಸಮಯ ಉಳಿತಾಯ ಕೂಡ ಮಾಡಬಹುದಾಗಿದೆ. ಇದನ್ನೂ ಓದಿ: ಕಂದಮ್ಮಗಳ ಜೀವ ತೆಗೆದ ಕೆಮ್ಮಿನ ಸಿರಪ್ – ಕೇಂದ್ರ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

    ಉದಾಹರಣೆಗೆ
    ಫಾಸ್ಟ್‌ಟ್ಯಾಗ್ ಮೂಲಕ ವಾಹನದ ಟೋಲ್ ಶುಲ್ಕ 100 ರೂ. ಆಗಿದ್ದರೆ, ನಗದು ರೂಪದಲ್ಲಿ ಪಾವತಿಸಿದರೆ 200 ರೂ. ಆಗುತ್ತದೆ, ಆದರೆ UPI ಮೂಲಕ ಡಿಜಿಟಲ್ ಆಗಿ ಪಾವತಿಸಿದರೆ 125 ರೂ. ಮಾತ್ರ ಆಗುತ್ತದೆ. ಇದರರ್ಥ ನವೆಂಬರ್ 15 ರಿಂದ FASTag ಅಲ್ಲದ ಬಳಕೆದಾರರು UPI ಮೂಲಕ ಪಾವತಿ ಮಾಡಿದ್ರೆ 100 ರೂ.ನಲ್ಲಿ 75 ರೂ. ಉಳಿತಾಯ ಮಾಡಬಹುದಾಗಿದೆ. ಇದನ್ನೂ ಓದಿ: ಬಿಹಾರದಲ್ಲಿ ವಿಧಾನಸಭೆ ಚುನಾವಣೆ; ತಯಾರಿ ಪರಿಶೀಲಿಸಿದ ಕೇಂದ್ರ ಚುನಾವಣಾ ಆಯೋಗ

  • ಏ.1ರಿಂದ ಕರ್ನಾಟಕದಲ್ಲಿ ಟೋಲ್‌ ದರ ಶೇ.5ರಷ್ಟು ಹೆಚ್ಚಳ!

    ಏ.1ರಿಂದ ಕರ್ನಾಟಕದಲ್ಲಿ ಟೋಲ್‌ ದರ ಶೇ.5ರಷ್ಟು ಹೆಚ್ಚಳ!

    ಬೆಂಗಳೂರು: ಏಪ್ರಿಲ್‌ 1ರಿಂದ ಹೊಸ ಟೋಲ್‌ ನೀತಿ ಜಾರಿಯಾಗಲಿದ್ದು, ಕರ್ನಾಟಕದಾದ್ಯಂತ ಟೋಲ್‌ ಶುಲ್ಕ (Toll Price)  ಶೇ.5ರಷ್ಟು ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಮೂಲಗಳು ತಿಳಿಸಿವೆ.

    ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಕನಿಷ್ಠ ಶೇ 3 ರಿಂದ ಗರಿಷ್ಠ 5 ರಷ್ಟು ಏರಿಕೆಯಾಗಲಿವೆ ಎಂದು ತಿಳಿದುಬಂದಿದೆ. ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ (Toll Plaza) ಹೆಚ್ಚಿನ ಟೋಲ್​ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ.5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ.

    delhi ncr toll plaza

    ರಾಷ್ಟ್ರೀಯ ಹೆದ್ದಾರಿಗಳ ಮೇಲಿನ ಸುಂಕಗಳಿಗೆ ಕೇಂದ್ರ ಸರ್ಕಾರ ಶೀಘ್ರವೇ ಹೊಸ ನೀತಿ ಪ್ರಕಟಿಸಲಿದೆ. ಇದರಲ್ಲಿ ಗ್ರಾಹಕರಿಗೆ ಕೆಲವು ರಿಯಾಯಿತಿ ದೊರೆಯಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದರೂ ಅದಿನ್ನೂ ಜಾರಿಯಾಗಿಲ್ಲ. 2008ರ ನೀತಿಯೇ ಅನ್ವಯವಾಗಲಿದೆ. ಟೋಲ್ ಗುತ್ತಿಗೆ ಅವಧಿಯನ್ನು ಆಧರಿಸಿ ದರಗಳು ಬದಲಾಗಲಿವೆ. ಈ ಹೆಚ್ಚುವರಿ ಶುಲ್ಕವನ್ನು ಗ್ರಾಹಕರಿಗೆ ವರ್ಗಾಯಿಸಲಾಗುವುದು ಎಂದು ಕರ್ನಾಟಕ ರಾಜ್ಯ ಟ್ರಾವೆಲ್ ಆಪರೇಟರ್ಸ್ ಅಸೋಸಿಯೇಷನ್ ತಿಳಿಸಿದೆ.

    ಕರ್ನಾಟಕದಲ್ಲಿ ಎಲ್ಲೆಲ್ಲಿ ಟೋಲ್ ಹೆಚ್ಚಳ?
    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಹೇಳಿರುವಂತೆ, ಗರಿಷ್ಠ ಶೇ.5 ಮತ್ತು ಕನಿಷ್ಠ ಶೇ.3 ರಷ್ಟು ಟೋಲ್ ದರ ಹೆಚ್ಚಳವಾಗಲಿದೆ. ಬೆಂಗಳೂರು-ಮೈಸೂರು ಮಾರ್ಗದ ಕನಮಿಣಿಕೆ ಮತ್ತು ಶೇಷಗಿರಿಹಳ್ಳಿ, ಬೆಂಗಳೂರು-ತಿರುಪತಿ ಮಾರ್ಗದ ನಂಗ್ಲಿ, ಬೆಂಗಳೂರು-ಹೈದರಾಬಾದ್ ಮಾರ್ಗದ ಬಾಗೇಪಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ, ಮತ್ತು ಹುಲಿಕುಂಟೆ ಹಾಗೂ ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರೋಡ್) ಟೋಲ್ ಪ್ಲಾಜಾಗಳಲ್ಲಿ ದರಗಳು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

    ದೇಶದಾದ್ಯಂತ ಒಟ್ಟು 323 ರಾಜ್ಯ ಹೆದ್ದಾರಿ ಟೋಲ್ ಫ್ಲಾಜಾ ಸೇರಿದಂತೆ, ದೇಶದಲ್ಲಿ ಒಟ್ಟು 1,181 ಟೋಲ್ ಗಳಿವೆ. 2023-24 ರಲ್ಲಿ 42,196 ಕೋಟಿ ರೂ., 2024-25 ರಲ್ಲಿ 64,809 ಕೋಟಿ ರೂ. ಟೋಲ್‌ ಸಂಗ್ರಹ ಆಗಿದೆ. ಈ ವರ್ಷ ಈ ಗುರಿಯನ್ನ 1 ಲಕ್ಷ ಕೋಟಿಗೆ ಏರಿಕೆ ಮಾಡಲಾಗಿದೆ. ಇನ್ನು ಕರ್ನಾಟಕದಲ್ಲಿ 58 ಟೋಲ್ ಫ್ಲಾಜಾಗಳಿದ್ದು, ಕಳೆದ 5 ವರ್ಷಗಳಲ್ಲಿ ಈ ಟೋಲ್‌ಗಳಿಂದ 13,702 ಕೋಟಿ ಸಂಗ್ರಹವಾಗಿದೆ.

  • ಚತುಷ್ಪತ ರಸ್ತೆ ಕಾಮಗಾರಿ ಮುಗಿಯುವ ಮುಂಚೆಯೇ ಟೋಲ್ ಶುಲ್ಕ – ಸ್ಥಳೀಯರಿಗೆ ವಿನಾಯ್ತಿ ನೀಡುವಂತೆ ಆಗ್ರಹ

    ಚತುಷ್ಪತ ರಸ್ತೆ ಕಾಮಗಾರಿ ಮುಗಿಯುವ ಮುಂಚೆಯೇ ಟೋಲ್ ಶುಲ್ಕ – ಸ್ಥಳೀಯರಿಗೆ ವಿನಾಯ್ತಿ ನೀಡುವಂತೆ ಆಗ್ರಹ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಐ.ಆರ್.ಬಿ ಕಂಪನಿ ಚತುಷ್ಪತ ರಸ್ತೆ ಕಾಮಗಾರಿ ಅಪೂರ್ಣ ವಾಗಿರುವಾಗಲೇ ಟೋಲ್ ನಿರ್ಮಾಣ ಮಾಡಿ ಸ್ಥಳೀಯರಿಗೆ ಶುಲ್ಕ ವಸೂಲಿ ಮಾಡುತ್ತಿರುವುದಕ್ಕೆ ಕಾರವಾರದ ಮಾಜಿ ಶಾಸಕ ಸತೀಶ್ ಸೈಲ್ ಅಕ್ಷೇಪ ವ್ಯಕ್ತಪಡಿಸಿದ್ದಾರೆ.

    ಇಂದು ಕಾರವಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಅವರು ನಿನ್ನೆದಿನ ಐ.ಆರ್.ಬಿ ಕಂಪನಿ ಅಧಿಕಾರಿಗಳೊಂದಿಗೆ ಮೀಟಿಂಗ್ ಮಾಡಿದ್ದೇನೆ. ಸ್ಥಳೀಯರಿಗೆ ಶುಲ್ಕ ವಸೂಲಿ ಮಾಡುತ್ತಿರುವುದು ತಪ್ಪು, ಮಾಜಾಳಿಯಿಂದ ಅಂಕೋಲದ ವರೆಗೆ ಶೇಕಡ 50 ರಷ್ಟು ಕಾಮಗಾರಿ ಪೂರ್ಣವಾಗಿಲ್ಲ ಆದರೂ ಅಂಕೋಲದ ಬೇಲಿಕೇರಿ ಬಳಿ ಶುಲ್ಕ ವಸೂಲಿ ಮಾಡುತಿದ್ದಾರೆ, ಅರಗ, ಅಮದಳ್ಳಿ, ಚಂಡಯಾ, ಹಟ್ಟಿಕೇರಿ ಬಿಡ್ಜ್ ಗಳು, ರಸ್ತೆಗಳೇ ಆಗಿಲ್ಲ. ಹೀಗಿರುವಾಗ ಹೇಗೆ ಶುಲ್ಕ ವಸೂಲಿ ಮಾಡುತ್ತಾರೆ ಎಂದು ಪ್ರಶ್ನಿಸಿದರು.

    ಕರಾವಳಿ ಭಾಗದಲ್ಲಿನ ಸ್ಥಳೀಯ ವಾಹನಗಳಿಗೆ ವಿನಾಯ್ತಿ ನೀಡಲೇ ಬೇಕು ಈ ಹಿಂದೆ ಮಾಜಾಳಿ ನಂತರ ಗೋವಾ ಗಡಿಯಲ್ಲಿ ಗೋವಾ ಸರ್ಕಾರದ ಟೋಲ್ ಗೆ ಕಾರವಾರದ ಸ್ಥಳೀಯ ವಾಹನಗಳಿಗೆ ವಿನಾಯ್ತಿ ನೀಡಬೇಕೆಂದು ಗೋವಾದ ಅಂದಿನ ಮುಖ್ಯಮಂತ್ರಿ ಪಾಲೇಕರ್ ರವರಿಗೆ ನಾನು ಶಾಸಕನಾಗಿದ್ದಾಗ ವಿನಾಯ್ತಿ ನೀಡಬೇಕೆಂದು ಕೇಳಿದ್ದೆ ಆಗ ಕಾರವಾರದ ವಾಹನಗಳಿಗೆ ವಿನಾಯ್ತಿ ನೀಡಿದ್ದರು. ಆದರೇ ನಮ್ಮಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯ್ತಿ ನೀಡಿಲ್ಲ, ಕೇಳಿದರೆ ವೈಟ್ ಬೋರ್ಡ ಗೆ ಮಾತ್ರ ನೀಡುತ್ತೇವೆ ಎಂದು ಕಂಪನಿಯವರು ಹೇಳುತ್ತಾರೆ. ಇದು ತಪ್ಪು ಎಲ್ಲಾ ವಾಹನಗಳಿಗೆ ವಿನಾಯ್ತಿ ನೀಡಬೇಕು, ಕಾಮಗಾರಿ ಪೂರ್ಣವಾಗದೇ ಶುಲ್ಕ ವಸೂಲಿ ಮಾಡುತಿದ್ದಾರೆ. ನಾನು ಮಾಜಾಳಿಯಿಂದ ಅಂಕೋಲದ ವರೆಗೆ ರಸ್ತೆ ಸರ್ವೆ ಮಾಡಿಸಿ ಐ.ಆರ್.ಬಿ ಕಂಪನಿ ವಿರುದ್ಧ ಕೋರ್ಟ ನಲ್ಲಿ ದಾವೆ ಹೂಡುತ್ತೇನೆ. ಹತ್ತು ದಿನ ಸಮಯ ಕೇಳಿದ್ದಾರೆ ತೆಗೆದುಕೊಳ್ಳಲಿ ಆದರೇ ಸ್ಥಳೀಯ ವಾಹನಗಳಿಗೆ ಶುಲ್ಕ ವಿನಾಯ್ತಿ ನೀಡಲೇ ಬೇಕು ಎಂದರು.

    ಸರ್ಕಾರಿ ಬಸ್ಸುಗಳ ಮೇಲೆ ಟೋಲ್ ಶುಲ್ಕ:
    ಕಾರವಾರದಿಂದ ಅಂಕೋಲಕ್ಕೆ ಹೋಗುವ ಸ್ಥಳೀಯ ಸರ್ಕಾರಿ ಬಸ್ ಗಳಿಗೆ ಟೋಲ್ ಶುಲ್ಕದಿಂದಾಗಿ ಪ್ರಯಾಣಿಕರ ಮೇಲೆ ಹೆಚ್ಚಿನ ದರ ವಿಧಿಸಲಾಗುತ್ತಿದೆ. ಮೂರು ಕಡೆ ಟೋಲ್‍ಗಳಿದ್ದು, ಕೆಎಸ್‌ಆರ್‌ಟಿಸಿಯ ಬಸ್ಸಿಗೆ ಕ್ರಮವಾಗಿ 9 ರೂ., ಸ್ಲೀಪರ್ ಗೆ 13 ರೂ., ರಾಜಹಂಸಕ್ಕೆ 10 ರೂ. ಏರಿಸಲಾಗಿದೆ. ಆದರೆ ಲೋಕಲ್ ಬಸ್ಸಿಗೆ ವಿನಾಯ್ತಿ ನೀಡಬೇಕು ಇದರಿಂದ ಸ್ಥಳೀಯ ಪ್ರಯಾಣಿಕರಿಗೆ ಹೊರೆ ತಪ್ಪುತ್ತದೆ. ಪ್ರತಿ ಟ್ರಿಪ್‍ಗೆ ಟೋಲ್ ಶುಲ್ಕ ತೆಗೆದುಕೊಳ್ಳುವುದನ್ನು ಬಿಡಬೇಕು. 24 ಘಂಟೆಗೆ ತೆಗೆದುಕೊಳ್ಳಬೇಕು. ಐ.ಆರ್.ಬಿ ಕಂಪನಿ ರಸ್ತೆಯಲ್ಲಿ ದರೋಡೆಗೆ ಮಾಡುತಿದ್ದಾರೆ. ಇದು ಸರಿಯಲ್ಲ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಸತೀಶ್ ಸೈಲ್ ಹೇಳಿದರು.

    ಅಪಘಾತ ತಪ್ಪಿಸಲು ಬೀದಿ ದೀಪ ಅಳವಡಿಸಿ:
    ಮಾಜಾಳಿಯಿಂದ ಅಂಕೋಲ ಭಾಗದಲ್ಲಿ ಅಲ್ಲಲ್ಲಿ ಬೀದಿ ದೀಪವನ್ನು ರಸ್ತೆಯಲ್ಲಿ ಅಳವಡಿಸಲಾಗಿದೆ. ಆದರೆ ಎಲ್ಲಿ ಅವಷ್ಯಕತೆ ಇದೆಯೋ ಅಲ್ಲಿ ಅಳವಡಿಸಿಲ್ಲ. ರಸ್ತೆ ತಿರುವು, ಗ್ರಾಮಗಳು ಇರುವ ಪ್ರದೇಶಕ್ಕೆ ಕಡ್ಡಾಯವಾಗಿ ಬೀದಿ ದೀಪಗಳನ್ನು ಅಳವಡಿಸಬೇಕು ಎಂದು ಆಗ್ರಹಿಸಿದರು. ಇತ್ತ ರಸ್ತೆಯನ್ನು ಸಹ ಸಮರ್ಪಕವಾಗಿ ಮಾಡದೇ ಅಪಘಾತವಾಗಿ ಜನರು ಸಾಯುವಂತಾಗಿದೆ ಎಂದು ಐ.ಆರ್.ಬಿ ಕಂಪನಿ ವಿರುದ್ಧ ಸತೀಶ್ ಸೈಲ್ ಆಕ್ರೋಶ ವ್ಯಕ್ತಪಡಿಸಿದರು.

  • ಪಂಪ್‍ವೆಲ್ ಫ್ಲೈ ಓವರ್ ಕೊನೆಗೂ ಉದ್ಘಾಟನೆ: ಸಂಸದರಿಗೆ ತರಾಟೆ

    ಪಂಪ್‍ವೆಲ್ ಫ್ಲೈ ಓವರ್ ಕೊನೆಗೂ ಉದ್ಘಾಟನೆ: ಸಂಸದರಿಗೆ ತರಾಟೆ

    – ಕಾಂಗ್ರೆಸ್ಸಿಗರಿಂದ ಅಣಕು ಉದ್ಘಾಟನೆ

    ಮಂಗಳೂರು: ಹತ್ತು ವರ್ಷಗಳಿಂದ ಪೂರ್ಣಗೊಳ್ಳದ ಪಂಪ್‍ವೆಲ್ ಫ್ಲೈಓವರ್ ಬುಧವಾರ ಏಕಾಏಕಿ ಉದ್ಘಾಟನೆಗೊಂಡಿತು. ಅರೆ ಇದೇನು ಇನ್ನೂ ಕಾಮಗಾರಿ ಪೂರ್ಣಗೊಳ್ಳದ ಈ ಫೈಓವರ್ ಹೇಗೆ ಉದ್ಘಾಟನೆಗೊಂಡಿತು ಎಂದು ತಲೆಕೆಡಿಸಿಕೊಳ್ಳಬೇಡಿ. ಇದು ಅಣಕು ಉದ್ಘಾಟನೆ.

    ಕಳೆದ ಹತ್ತು ವರ್ಷಗಳಿಂದಲೂ ಕಾಮಗಾರಿ ನಡೆಯುತ್ತಾ ಇರುವ ಈ ಫೈಓವರ್ ಇಂದಿಗೂ ಕಾಮಗಾರಿ ಪೂರ್ಣಗೊಳ್ಳದೆ ಜನ ಪ್ರತಿನಿತ್ಯ ಪರಡಾಡುತ್ತಿದ್ದಾರೆ. ಇಲ್ಲಿನ ಸಂಸದ ನಳಿನ್ ಕುಮಾರ್ ಕಟೀಲ್ ಹತ್ತು ವರ್ಷದಲ್ಲಿ ಐದು ಬಾರಿ ಡೆಡ್ ಲೈನ್ ನೀಡಿ ಉದ್ಘಾಟನೆಗೆ ದಿನ ಘೋಷಿಸುತ್ತಿದ್ದರು. ಕೊನೆಯದಾಗಿ ಕಳೆದ 2019ರ ಡಿಸೆಂಬರ್ 31ರಂದು ಕಾಮಗಾರಿ ಮುಗಿಸಿ 2020 ಜನವರಿ 1ರಂದು ಉದ್ಘಾಟನೆ ಮಾಡುವುದಾಗಿ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ಆದರೆ ಕೊನೆಯ ಗಡುವೂ ಮುಗಿದಿದ್ದು, ಇನ್ನೂ ಸಾಕಷ್ಟು ತಿಂಗಳ ಕಾಮಗಾರಿ ಉಳಿದಿದೆ. ಹೀಗಾಗಿ ಜನವರಿ 1 ರಂದು ಸಂಸದರಿಗೆ ಉದ್ಘಾಟನೆ ಮಾಡಲು ಸಾಧ್ಯವಾಗದ ಹಿನ್ನಲೆಯಲ್ಲಿ ಕಾಂಗ್ರೆಸ್‍ನ ತಂಡವೊಂದು ಅದೇ ದಿನವಾದ ಜನವರಿ 1ರಂದು ಫೈಓವರ್ ಮೇಲೆ ಹೋಗಿ ಅಣಕು ಉದ್ಘಾಟನೆ ಮಾಡಿತು. ಇದನ್ನೂ ಓದಿ: ಅತೀ ಹೆಚ್ಚು ಟ್ರೋಲ್‍ಗೆ ಒಳಗಾದ ದೇಶದ No.1 ಸಂಸದ ನಳಿನ್

    ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪ್ರತಿಕೃತಿ ಮಾಡಿ ಅದರ ಮೂಲಕ ಉದ್ಘಾಟನೆ ಮಾಡಿ ಸಂಸದರಿಗೆ ಟಾಂಗ್ ನೀಡಿದರು. ಬಳಿಕ ಪ್ರತಿಕೃತಿಯನ್ನು ಫೈಓವರ್ ನಿಂದ ಕೆಳಗೆ ಬಿಸಾಕುವುದರ ಮೂಲಕ ಸಂಸದರ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಪಂಪ್‍ವೆಲ್ ಫೈಓವರ್ ಅಪೂರ್ಣ: ತಲಪಾಡಿ ಟೋಲ್ ಸಂಗ್ರಹ ಸ್ಥಗಿತ

    ಪ್ರತಿಭಟನೆಯಲ್ಲಿದ್ದ ಕಾಂಗ್ರೆಸ್ ನಾಯಕ ಐವಾನ್ ಡಿಸೋಜ ಮಾತನಾಡಿ, ಇಂತಹ ಸಂಸದರನ್ನು ಪಡೆದ ಮಂಗಳೂರಿನ ಜನತೆಯ ದುರಾದೃಷ್ಟ. ಸಂಸದರು ಇನ್ನೂ ಒಂದು ತಿಂಗಳ ಕಾಲಾವಕಾಶ ಕೇಳಿದ್ದು, ಆ ಡೆಡ್ ಲೈನ್‍ನಲ್ಲೂ ಕಾಮಗಾರಿ ಪೂರ್ಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

  • ಪಂಪ್‍ವೆಲ್ ಫೈಓವರ್ ಅಪೂರ್ಣ: ತಲಪಾಡಿ ಟೋಲ್ ಸಂಗ್ರಹ ಸ್ಥಗಿತ

    ಪಂಪ್‍ವೆಲ್ ಫೈಓವರ್ ಅಪೂರ್ಣ: ತಲಪಾಡಿ ಟೋಲ್ ಸಂಗ್ರಹ ಸ್ಥಗಿತ

    – ಒಂದು ದಿನದ ಮಟ್ಟಿಗೆ ಟೋಲ್ ಸಂಗ್ರಹ ತಡೆ ಹಿಡಿದ ಬಿಜೆಪಿ

    ಮಂಗಳೂರು: ಕರ್ನಾಟಕ-ಕೇರಳದ ಗಡಿಭಾಗದಲ್ಲಿರುವ ತಲಪಾಡಿ ಟೋಲ್ ಗೇಟ್‍ನಲ್ಲಿ ಬುಧವಾರ ಟೋಲ್ ಸಂಗ್ರಹ ಸ್ಥಗಿತವಾಗಿದ್ದು, ಜನ ಒಂದು ದಿನದ ಮಟ್ಟಿಗೆ ಟೋಲ್ ಫ್ರೀ ಸಂಚಾರ ಮಾಡಿ ಖುಷಿ ಪಟ್ಟರು. ಈ ಟೋಲ್ ಸಂಗ್ರಹ ಇಂದು ಒಂದು ದಿನದ ಮಟ್ಟಿಗೆ ಸ್ಥಗಿತಗೊಳ್ಳಲು ಕಾರಣವಾಗಿದ್ದೂ ಅದೇ ಪಂಪ್‍ವೆಲ್ ಫೈಓವರ್ ಎನ್ನುವುದು ಒಂದು ವಿಶಿಷ್ಟ ಸುದ್ದಿ.

    ಹತ್ತು ವರ್ಷಗಳಿಂದಲೂ ಕಾಮಗಾರಿ ನಡೆಯುತ್ತಿರುವ ಪಂಪ್‍ವೆಲ್ ಫ್ಲೈ ಓವರ್ ಇನ್ನೂ ಪೂರ್ಣಗೊಳ್ಳದಿರಲು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ಕಾರಣ ಎಂಬ ಆರೋಪಗಳು ಕೇಳಿ ಬರುತ್ತಿದೆ. ಆದರೂ ಸಂಸದ ನಳಿನ್ ಕುಮಾರ್ ಅವರು ಮಾತ್ರ ಅಧಿಕಾರಿಗಳ ತಲೆ ಮೇಲೆ ಹಾಕಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಪಂಪ್‍ವೆಲ್ ಫೈಓವರ್ ಬಳಿ ಭೇಟಿ ನೀಡಿದ್ದ ನಳಿನ್ ಕುಮಾರ್ ಕಟೀಲ್ ಡಿಸೆಂಬರ್ ಅಂತ್ಯದಲ್ಲಿ ಕಾಮಗಾರಿ ಪೂರ್ಣಗೊಂಡು ಜನವರಿ 1ರಂದು ಫೈಓವರ್ ಉದ್ಘಾಟನೆ ಎಂದಿದ್ದರು. ಆದರೆ ಇನ್ನೂ ಕಾಮಗಾರಿ ಮುಗಿಯದಿದ್ದ ಕಾರಣ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಯಾವಾಗ ಪೂರ್ಣಗೊಳ್ಳುತ್ತೆ ಎಂದು ಸ್ಪಷ್ಟನೆ ಕೇಳಿದ್ದರು. ಇದನ್ನೂ ಓದಿ: ಅತೀ ಹೆಚ್ಚು ಟ್ರೋಲ್‍ಗೆ ಒಳಗಾದ ದೇಶದ No.1 ಸಂಸದ ನಳಿನ್

    ಅಧಿಕಾರಿಗಳು ಇನ್ನೂ ಕೆಲ ತಿಂಗಳ ಸಮಯ ಕೇಳಿರುವುದರಿಂದ ಒಂದು ತಿಂಗಳ ಒಳಗೆ ಪೂರ್ಣಗೊಳ್ಳಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೊಂದು ಗಡುವು ನೀಡಿದ್ದಾರೆ. ಜೊತೆಗೆ ಆ ಒಂದು ತಿಂಗಳ ಕಾಲ ಈ ಹೈವೇಲಿ ಸಿಗುವ ತಲಪಾಡಿ ಟೋಲ್ ಗೇಟ್‍ನಲ್ಲಿ ಯಾವುದೇ ವಾಹನಗಳಿಂದಲೂ ಟೋಲ್ ಶುಲ್ಕ ಸಂಗ್ರಹಿಸಬಾರದು ಎಂದು ಟೋಲ್ ಗುತ್ತಿಗೆ ಪಡೆದಿರುವ ನವಯುಗ್ ಕಂಪನಿಯ ಸಿಬ್ಬಂದಿಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಮೂಲಕ ಸೂಚಿಸದ್ದರು. ಆದರೆ ಇಂದು ಮುಂಜಾನೆಯಿಂದಲೇ ಟೋಲ್ ಸಂಗ್ರಹ ಆರಂಭವಾಗಿದ್ದನ್ನು ತಿಳಿದ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಬಿಜೆಪಿ ಕಾರ್ಯಕರ್ತರೊಂದಿಗೆ ತಲಪಾಡಿ ಟೋಲ್ ಗೇಟ್‍ಗೆ ಧಾವಿಸಿದರು. ಬಳಿಕ ಸಿಬ್ಬಂದಿ ಜೊತೆ ಮಾತುಕತೆ ನಡೆಸಿ ಸಾಂಕೇತಿಕವಾಗಿ ಇಂದು ಒಂದು ದಿನದ ಮಟ್ಟಿಗೆ ಟೋಲ್ ಸಂಗ್ರಹ ಮಾಡದಂತೆ ಕೇಳಿಕೊಂಡರು.

    ಈ ವೇಳೆ ವಾಗ್ದಾದ ನಡೆದು ಬಳಿಕ ಒಂದು ದಿನ ಟೋಲ್ ಸಂಗ್ರಹ ಸ್ಥಗಿತಕ್ಕೆ ಟೋಲ್ ಸಿಬ್ಬಂದಿ ಒಪ್ಪಿಕೊಂಡಿದ್ದಾರೆ. ಆದರೆ ಸಂಸದರ ಸೂಚನೆ ಇರೋದು ಪಂಪ್‍ವೆಲ್ ಫೈಓವರ್ ಪೂರ್ಣಗೊಳ್ಳುವವರೆಗೂ ಟೋಲ್ ಸಂಗ್ರಹ ಸ್ಥಗಿತಗೊಳಿಸಬೇಕೆಂದು. ನಾಳೆಯಿಂದ ಮತ್ತೆ ಎಂದಿನಂತೆ ಟೋಲ್ ಸಂಗ್ರಹ ಇರುವುದರಿಂದ ಸಂಸದರು ಈ ಮಾತನ್ನೂ ಉಳಿಸಿಕೊಳ್ಳೋದಿಲ್ಲ ಅನ್ನೋದು ಗ್ಯಾರಂಟಿಯಾಗಿದೆ ಎಂದು ಸ್ಥಳೀಯರು ಅಸಮಾಧಾನ ಹೊರ ಹಾಕಿದ್ದಾರೆ.

  • ವಕೀಲರಿಗೆ ಟೋಲ್ ವಿನಾಯತಿ- ವೈರಲ್ ಸುದ್ದಿಯ ಸತ್ಯ

    ವಕೀಲರಿಗೆ ಟೋಲ್ ವಿನಾಯತಿ- ವೈರಲ್ ಸುದ್ದಿಯ ಸತ್ಯ

    ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯವು ವಕೀಲರಿಗೆ ದೇಶಾದ್ಯಂತ ಟೋಲ್ ಫೀ ವಿನಾಯತಿ ನೀಡಿದೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.

    ಈ ಸಂಬಂಧ ಐಎಎಸ್ ಅಧಿಕಾರಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಲಾಯದ ಖಾಸಗಿ ಕಾರ್ಯದರ್ಶಿ ಸಂಕೇತ್ ಭೋಂಡ್ವೆ ಅವರು ವಕೀಲ ರವಿಗೌಡ ಅವರಿಗೆ ಡಿಸೆಂಬರ್ 3ರಂದು ಪತ್ರ ಬರೆದಿದ್ದಾರೆ. ಈ ಮೂಲಕ ಡಿಸೆಂಬರ್ 1ರಿಂದ ಅನ್ವಯವಾಗುವಂತೆ ಭಾರತದ ಎಲ್ಲಾ ರಾಜ್ಯಗಳ ವಕೀಲರಿಗೆ ದೇಶಾದ್ಯಂತ ಟೋಲ್ ಫೀ ವಿನಾಯತಿ ನೀಡಲಾಗಿದೆ. ಹೀಗಾಗಿ ವಕೀಲರು ಟೋಲ್ ಪ್ಲಾಜಾಗಳಲ್ಲಿ ತಮ್ಮ ಐಡಿ ಕಾರ್ಡ್ ತೋರಿಸಿದರೆ ಸಾಕು ಎಂದು ಪತ್ರದಲ್ಲಿ ಬರೆಯಲಾಗಿತ್ತು.

    ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಪತ್ರ ಎನ್ನಲಾಗಿದ್ದ ಪತ್ರವು ವಾಟ್ಸಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಅಸಲಿಗೆ ಇದು ಸುಳ್ಳು ಪತ್ರವಾಗಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟ್ವೀಟ್ ಮೂಲಕ ಡಿಸೆಂಬರ್ 11ರಂದು ಸ್ಪಷ್ಟನೆ ನೀಡಿದ್ದು, ವಕೀಲರಿಗೆ ಟೋಲ್ ಪ್ಲಾಜಾಗಳಲ್ಲಿ ಯಾವುದೇ ರೀತಿಯ ಶುಲ್ಕ ವಿನಾಯತಿ ನೀಡಿಲ್ಲ ಎಂದು ತಿಳಿಸಿದೆ.

    ಈ ಕುರಿತು ಉತ್ತರ ನೀಡುವಂತೆ ಭೋಂಡ್ವೆ ಅವರು ಡಿಸೆಂಬರ್ 3ರಂದು ವಕೀಲ ಆರ್.ಬಾಸ್ಕರದಾಸ್ ಅವರಿಗೆ ಪತ್ರ ಬರೆದಿದ್ದರು. ಸಚಿವಾಲಯ ಕೇಳಿದ್ದ ಪ್ರಶ್ನೆಗಳಿಗೆ ಬಾಸ್ಕರದಾಸ್ ಅವರು ಉತ್ತರಿಸಿದ ಪತ್ರವನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ರವಾನಿಸಲಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಮುಂದಿನ ಕ್ರಮ ಜರುಗಿಸಲಿದೆ ಎಂದು ಭೋಡ್ವೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

  • ಸರ್ಕಾರಕ್ಕೂ ಕ್ಯಾರೇ ಎನ್ನದ ಅಶೋಕ್ ಖೇಣಿ- ನೈಸ್ ರಸ್ತೆ ಟೋಲ್ ಇಳಿಸಲ್ಲ ಎಂದು ಸೆಡ್ಡು

    ಸರ್ಕಾರಕ್ಕೂ ಕ್ಯಾರೇ ಎನ್ನದ ಅಶೋಕ್ ಖೇಣಿ- ನೈಸ್ ರಸ್ತೆ ಟೋಲ್ ಇಳಿಸಲ್ಲ ಎಂದು ಸೆಡ್ಡು

    ಬೆಂಗಳೂರು: ಜಿಎಸ್‍ಟಿ ಜಾರಿ ಬಳಿಕ ಏರಿಕೆ ಮಾಡಲಾಗಿರೋ ಟೋಲ್ ಶುಲ್ಕವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ನೈಸ್ ಸಂಸ್ಥೆ ಸರ್ಕಾರಕ್ಕೆ ಹೇಳಿದೆ.

    ಜಿಎಸ್‍ಟಿ ಜಾರಿ ಬಳಿಕ ಟೋಲ್ ಶುಲ್ಕವನ್ನು ಏಕಾಏಕಿ ಏರಿಸಲಾಗಿತ್ತು. ಸರ್ಕಾರದ ಅನುಮತಿ ಪಡೆಯದೆ ಟೋಲ್ ಶುಲ್ಕ ಏರಿಸಿದ್ದಕ್ಕೆ ಆಕ್ಷೇಪಿಸಿ ಲೋಕೋಪಯೋಗಿ ಇಲಾಖೆ ನೋಟಿಸ್ ಜಾರಿ ಮಾಡಿತ್ತು. ಇದೀಗ ನೋಟಿಸ್‍ಗೆ 9 ಪುಟಗಳಲ್ಲಿ ಉತ್ತರಿಸಿರುವ ನೈಸ್ ಸಂಸ್ಥೆ, ಟೋಲ್ ರಿಯಾಯಿತಿ ಒಪ್ಪಂದದ ಉಲ್ಲಂಘನೆಯಾಗಿಲ್ಲ. ಹೀಗಾಗಿ ಟೋಲ್ ಶುಲ್ಕ ಹೆಚ್ಚಳ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದೆ.

    ಜಲೈ 7ರಂದು ನೈಸ್ ಸಂಸ್ಥೆಗೆ ನೋಟಿಸ್ ನೀಡಿದ್ದ ಲೋಕೋಪಯೋಗಿ ಇಲಾಖೆ 7 ದಿನಗಳೊಳಗೆ ಶುಲ್ಕ ಹೆಚ್ಚಳ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿತ್ತು.