Tag: ಟೋಲ್ ಸಿಬ್ಬಂದಿ

  • ದೀಪಾವಳಿ ಬೋನಸ್ ಕೊಟ್ಟಿಲ್ಲ ಅಂತ ಬೇಸರ; ಟೋಲ್ ಸಂಗ್ರಹಿಸದೇ ವಾಹನಗಳನ್ನ ಫ್ರೀ ಬಿಟ್ಟ ಸಿಬ್ಬಂದಿ

    ದೀಪಾವಳಿ ಬೋನಸ್ ಕೊಟ್ಟಿಲ್ಲ ಅಂತ ಬೇಸರ; ಟೋಲ್ ಸಂಗ್ರಹಿಸದೇ ವಾಹನಗಳನ್ನ ಫ್ರೀ ಬಿಟ್ಟ ಸಿಬ್ಬಂದಿ

    – ಸಂಸ್ಥೆಗೆ ಲಕ್ಷಾಂತರ ರೂ. ನಷ್ಟ; ಆಗ್ರಾ- ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ಘಟನೆ

    ಲಕ್ನೋ: ದೀಪಾವಳಿ ಹಬ್ಬಕ್ಕೆ ಬೋನಸ್‌ (Diwali Bonus) ಕೊಟ್ಟಿಲ್ಲ ಅಂತ ಟೋಲ್‌ ಸಂಗ್ರಹಿಸದೇ ವಾಹನಗಳನ್ನು ಫ್ರೀ ಬಿಟ್ಟು ಟೋಲ್‌ ಸಿಬ್ಬಂದಿ ಮುಷ್ಕರ ನಡೆಸಿದ ಘಟನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇನಲ್ಲಿ ನಡೆದಿದೆ. ಇದರಿಂದ ಸಾವಿರಾರು ವಾಹನಗಳು ಟೋಲ್‌ (Toll) ಪಾವತಿಸದೇ ಹೋಗಿದ್ದು, ನಿರ್ವಹಿಸುವ ಸಂಸ್ಥೆಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

    ದೀಪಾವಳಿ (Deepavali) ಪ್ರಯುಕ್ತ ಬೋನಸ್‌ ನಿರಾಕರಿಸಿದ ಹಿನ್ನೆಲೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇ (Agra Lucknow Expressway) ಟೋಲ್‌ ನಿರ್ವಾಹಕರು ಎಲ್ಲಾ ವಾಹನಗಳನ್ನ ಫ್ರೀ ಬಿಟ್ಟಿದ್ದಾರೆ. ಟೋಲ್‌ ಪಾವತಿಸದೇ ವಾಹನಗಳು ಹೊರಡುತ್ತಿರುವ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲೂ ಹರಿದಾಡುತ್ತಿವೆ. ಇದರಿಂದ ಕೇಂದ್ರ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ವರದಿಗಳು ತಿಳಿಸಿವೆ.

    ಈ ಎಕ್ಸ್‌ಪ್ರೆಸ್‌ ವೇ ಆಗ್ರಾ ಮತ್ತು ಲಕ್ನೋ ನಡುವೆ ನೇರ ಸಂಪರ್ಕ ಕಲ್ಪಿಸುತ್ತದೆ. ಜೊತೆಗೆ ಯಮುನಾ ಎಕ್ಸ್‌ಪ್ರೆಸ್‌ವೇ ಮೂಲಕ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶಕ್ಕೂ ಸಂಪರ್ಕ ಕಲ್ಪಿಸುತ್ತದೆ.

    ʻಕಳೆದ ಒಂದು ವರ್ಷದಿಂದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಆದ್ರೆ ಅವರು ಹಬ್ಬಕ್ಕೆ ಯಾವುದೇ ಬೋನಸ್‌ ಕೊಟ್ಟಿಲ್ಲ. ತುಂಬಾ ಕಷ್ಟಪಟ್ಟಿ ಕೆಲಸ ಮಾಡ್ತಿದ್ದೇವೆ. ಮೊದಲೇ ವೇತನವನ್ನ ಸಮಯಕ್ಕೆ ಸರಿಯಾಗಿ ಕೊಡುತ್ತಿಲ್ಲ. ಈಗ ಬೋನಸ್‌ ಕೇಳಿದ್ರೆ ನಮ್ಮನ್ನೇ ಕೆಲಸರಿಂದ ತೆಗೆಯುವುದಾಗಿ ಹೆದರಿಸುತ್ತಿದ್ದಾರೆ ಎಂದು ಪ್ರತಿಭಟನಾ ನಿರತ ಟೋಲ್‌ ಸಿಬ್ಬಂದಿಯೊಬ್ಬರು ಹೇಳಿಕೊಂಡಿದ್ದಾರೆ.

    ಮತ್ತೊಬ್ಬ ಉದ್ಯೋಗಿ ಮಾತನಾಡಿ, ಶ್ರೀಸಾಯಿ ಮತ್ತು ದಾತಾರ್ ಸಂಸ್ಥೆಗಾಗಿ ಕೆಲಸ ಮಾಡ್ತಿದ್ದಾರೆ. ದೀಪಾವಳಿ ಹಬಕ್ಕೆ ಬೋನಸ್‌ ಕೊಡಲಾಗುವುದು. ಹಣವನ್ನ ನಿಮ್ಮ ಬ್ಯಾಂಕ್‌ ಖಾತೆಗೆ ನೇರವಾಗಿ ವರ್ಗಾಯಿಸುವುದಾಗಿ ಹೇಳಿದ್ದರು. ಆದ್ರೂ ಕೂಡ ಬೋನಸ್‌ ಕೊಡಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಸಿಬ್ಬಂದಿ ಹೇಳಿದ್ದಾರೆ. ಆದ್ರೆ ಈವರೆಗೆ ಟೋಲ್‌ ನಿರ್ವಹಣೆ ಮಾಡುವ ಕಂಪನಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

  • ಟೋಲ್‌ ಸಿಬ್ಬಂದಿ ಜೊತೆ WWE ಖ್ಯಾತಿಯ ಗ್ರೇಟ್‌ ಖಲಿ ಗಲಾಟೆ – ವೀಡಿಯೋ ವೈರಲ್‌

    ಟೋಲ್‌ ಸಿಬ್ಬಂದಿ ಜೊತೆ WWE ಖ್ಯಾತಿಯ ಗ್ರೇಟ್‌ ಖಲಿ ಗಲಾಟೆ – ವೀಡಿಯೋ ವೈರಲ್‌

    ಛತ್ತೀಸಗಢ: ಪಂಜಾಬ್‌ನ ಲುಧಿಯಾನದ ಟೋಲ್ ಪ್ಲಾಜಾದ ಸಿಬ್ಬಂದಿಯೊಂದಿಗೆ ‘ದಿ ಗ್ರೇಟ್ ಖಲಿ’ ಎಂದೇ ಜನಪ್ರಿಯವಾಗಿರುವ WWE ಕುಸ್ತಿಪಟು ದಲೀಪ್ ಸಿಂಗ್ ರಾಣಾ ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ಖಲಿ ತನ್ನ ಕಾರಿನಲ್ಲಿ ಲುಧಿಯಾನ ಮೂಲಕ ಕರ್ನಾಲ್‌ಗೆ ಪ್ರಯಾಣಿಸುತ್ತಿದ್ದಾಗ ಪಾಣಿಪತ್-ಜಲಂಧರ್ ರಾಷ್ಟ್ರೀಯ ಹೆದ್ದಾರಿಯ ಲಾಧೋವಲ್‌ನಲ್ಲಿ ಈ ಘಟನೆ ನಡೆದಿದೆ. ಐಡಿ ಕಾರ್ಡ್‌ ತೋರಿಸುವಂತೆ ಕೇಳಿದಾಗ ತಮ್ಮ ಸಹೋದ್ಯೋಗಿಯೊಬ್ಬರಿಗೆ ಕುಸ್ತಿಪಟು ಕಪಾಳಮೋಕ್ಷ ಮಾಡಿದ್ದಾರೆ ಎಂದು ಟೋಲ್ ಪ್ಲಾಜಾ ಸಿಬ್ಬಂದಿ ಆರೋಪಿಸಿದ್ದಾರೆ. ಇದನ್ನೂ ಓದಿ: ಸಿಎಂಗೆ ಕಳಪೆ ಗುಣಮಟ್ಟದ ಟೀ ನೀಡಿದ್ದ ಅಧಿಕಾರಿಗೆ ಶೋಕಾಸ್ ನೋಟಿಸ್

    ನಮ್ಮ ಸಿಬ್ಬಂದಿ ಕ್ಯಾಮೆರಾದಲ್ಲಿ ಘಟನೆಯನ್ನು ರೆಕಾರ್ಡ್ ಮಾಡುವಾಗ, ಖಲಿ ಅನುಚಿತವಾಗಿ ವರ್ತಿಸಿದ್ದಾರೆ. ಅಷ್ಟೇ ಅಲ್ಲದೆ ಖಲಿ ಅವರು ಟೋಲ್‌ನ ಗೇಟ್‌ ತೆಗೆಯುವಂತೆ ಧಮ್ಕಿ ಹಾಕಿದ್ದಾರೆ. ನಮ್ಮ ಸಿಬ್ಬಂದಿಗೆ ಬ್ಲ್ಯಾಕ್‌ಮೇಲ್‌ ಕೂಡ ಮಾಡಿದ್ದಾರೆ ಎಂದು ದೂರಿದ್ದಾರೆ. ಗಲಾಟೆ ಸಂಬಂಧದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

    ಆರೋಪ ಕುರಿತು ಪ್ರತಿಕ್ರಿಯಿಸಿರುವ ಖಲಿ, ಪಂಜಾಬ್‌ನ ಫಿಲ್ಲೌರ್‌ನ ಟೋಲ್ ಸಿಬ್ಬಂದಿ ನನ್ನ ಕಾರನ್ನು ನಿಲ್ಲಿಸಿ ಸೆಲ್ಫಿಗಾಗಿ ಅನುಚಿತವಾಗಿ ವರ್ತಿಸಿದರು. ನಾನು ಸೆಲ್ಫಿಯನ್ನು ನಿರಾಕರಿಸಿದಾಗ ಅವರು ಅನುಚಿತವಾಗಿ ವರ್ತಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನರೇಟರ್ ಆಫ್ ಆಗಿದ್ದಕ್ಕೆ ಮದುವೆನೇ ಕ್ಯಾನ್ಸಲ್ ಮಾಡಿದ್ಲು

    ನಾನೊಬ್ಬ ಸೆಲಿಬ್ರಿಟಿ. ಸೆಲಿಬ್ರಿಟಿ ಯಾರಿಗಾದರೂ ಕಪಾಳಮೋಕ್ಷ ಮಾಡಬಹುದೇ? ನಾನು ಅದರ ಬಗ್ಗೆ ಯೋಚಿಸಲೂ ಸಾಧ್ಯವಿಲ್ಲ. ಅವರು ನನ್ನೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದ ನಂತರವೇ ನಾನು ಕಾರಿನಿಂದ ಇಳಿದು ಗೇಟ್‌ ತೆಗೆಯುವಂತೆ ಹೇಳಿದೆ ಅಷ್ಟೆ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಣ ಕೇಳಿದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ

    ಹಣ ಕೇಳಿದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ

    ಮಂಗಳೂರು: ನಗರದ ಹೊರವಲಯದ ಸುರತ್ಕಲ್ ನ ಟೋಲ್ ಸಿಬ್ಬಂದಿ ಮೇಲೆ ಏಳು ಮಂದಿ ಕಾರು ಸವಾರರು ಹಲ್ಲೆ ನಡೆಸಿದ್ದಾರೆ.

    ಭಟ್ಕಳ ನೋಂದಣಿ ನಂಬರ್ ಕಾರು ಸುರತ್ಕಲ್ ಟೋಲ್ ನಲ್ಲಿ ಹಣ ಪಾವತಿಸಲು ನಿರಾಕರಿಸಿದ್ದರು. ಈ ವೇಳೆ ಟೋಲ್ ಸಿಬ್ಬಂದಿ ಹಣ ಪಾವತಿಸಲು ತಿಳಿಸಿದ್ದಾರೆ. ಹಣ ಪಾವತಿ ಮಾಡೋದಿಲ್ಲ ಎಂದು ತಗಾದೆ ತೆಗೆದು ಟೋಲ್ ಸಿಬ್ಬಂದಿಗೆ ಏಳು ಮಂದಿ ಸೇರಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಹಲ್ಲೆಯಿಂದಾಗಿ ಟೋಲ್ ಸಿಬ್ಬಂದಿಯ ಕೈ ಮುರಿತಕ್ಕೊಳಗಾಗಿದ್ದು, ಬಳಿಕ ಹಲ್ಲೆ ನಡೆಸಿದ ಆರೋಪಿಗಳು ಕಾರಿನ ಸಮೇತ ಪರಾರಿಯಾಗಿದ್ದಾರೆ.

    ಹಲ್ಲೆಯ ದೃಶ್ಯ ಟೋಲ್ ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯ ಬಗ್ಗೆ ಎನ್‍ಹೆಚ್‍ಎಐ ಟೋಲ್ ಸಿಬ್ಬಂದಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

  • ರೈತನ ಮೇಲೆ ಟೋಲ್ ಸಿಬ್ಬಂದಿಯಿಂದ ಹಲ್ಲೆ- ಮಧ್ಯರಾತ್ರಿ ರೈತರಿಂದ ಪ್ರತಿಭಟನೆ

    ರೈತನ ಮೇಲೆ ಟೋಲ್ ಸಿಬ್ಬಂದಿಯಿಂದ ಹಲ್ಲೆ- ಮಧ್ಯರಾತ್ರಿ ರೈತರಿಂದ ಪ್ರತಿಭಟನೆ

    ಚಿಕ್ಕಬಳ್ಳಾಪುರ: ಶುಲ್ಕದ ವಿಚಾರವಾಗಿ ರೈತನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿ ಗೂಂಡಾಗಿರಿ ನಡೆಸಿದ್ದಾರೆ ಅಂತ ರೈತರು ಆರೋಪಿಸಿ ರೈತರು ರಾತ್ರೋರಾತ್ರಿ ಪ್ರತಿಭಟನೆಗೆ ಇಳಿದಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ-ಯಲಹಂಕ ಮಾರ್ಗದ ನಡುವೆ ಇರುವ ಕಡತನಮಲೆ ಸುಂಕ ವಸೂಲಾತಿ ಸಿಬ್ಬಂದಿ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ.

    ಮಂಗಳವಾರ ನಸುಕಿನ ವೇಳೆ ಸುಮಾರು 2 ಗಂಟೆಗೆ ದೊಡ್ಡಬಳ್ಳಾಪುರ ತಾಲೂಕಿನ ತುರುವನಹಳ್ಳಿ ಗ್ರಾಮದ ರೈತ ಹಾಗೂ ಚಾಲಕ ವಿಜಯ್ ಕುಮಾರ್ ತನ್ನ ಬೊಲೆರೋ ವಾಹನದಲ್ಲಿ ಹೂ ಸೇರಿದಂತೆ ತರಕಾರಿಗಳನ್ನ ಬೆಂಗಳೂರಿನ ಮಾರುಕಟ್ಟೆಗೆ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಟೋಲ್ ಶುಲ್ಕ ಪಾವತಿಸುವಂತೆ ಟೋಲ್ ಸಿಬ್ಬಂದಿ ತಾಕೀತು ಮಾಡಿದ್ದಾರೆ. ವಾರಕ್ಕೆ ಎರಡು ಮೂರಿ ಬಾರಿ ಇದೇ ಟೋಲ್ ಮುಖಾಂತರ ಬೆಂಗಳೂರಿಗೆ ಸಂಚರಿಸುತ್ತಿದ್ದ ವಿಜಯ್ ಕುಮಾರ್ ಗೆ ಈ ಹಿಂದೆ ಸ್ಥಳೀಯರು ಅನ್ನೋ ಕಾರಣಕ್ಕೆ ಟೋಲ್ ಶುಲ್ಕ ಕೇಳುತ್ತಿರಲಿಲ್ಲವಂತೆ. ಹೀಗಾಗಿ ಹಿಂದೆ ಕೇಳುತ್ತಿರಲಿಲ್ಲ ಈಗ ಯ್ಯಾಕೆ ಕೊಡಬೇಕು ಅಂತ ಪ್ರಶ್ನೆ ಮಾಡಿದ್ದಾರೆ.

    ಈ ವೇಳೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಆಗ 10 ಮಂದಿ ಗೂಂಡಾಗಳನ್ನ ಕರೆಸಿದ ಟೋಲ್ ಸಿಬ್ಬಂದಿ ನನ್ನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ನಡೆಸಿದ್ದಾರೆ ಅಂತ ರೈತ ವಿಜಯ್ ಕುಮಾರ್ ದೂರಿದ್ದಾರೆ. ಮತ್ತೊಂದೆಡೆ ಮಧ್ಯರಾತ್ರಿಯೇ ಬೊಲೆರೋ ವಾಹನವನ್ನ ಸುಂಕ ವಸೂಲಾತಿ ಕೇಂದ್ರದಲ್ಲಿ ಅಡ್ಡ ಹಾಕಿ ಹೂ ತರಕಾರಿ ಇಟ್ಟು ರೈತರು ಪ್ರತಿಭಟನೆ ನಡೆಸಿದ್ದಾರೆ.

    ಬೆಳಿಗ್ಗೆಯೂ ಪ್ರತಿಭಟನೆ ಮುಂದುವರಿಸಿರುವ ರೈತ ವಿಜಯ್ ಕುಮಾರ್ ವಾಹನ ಸವಾರರು, ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ತನ್ನ ಮೇಲಾದ ಹಲ್ಲೆ ವಿಷಯ ತಿಳಿಸುತ್ತಾ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ರೈತನ ಮೇಲೆ ಹಲ್ಲೆ ಗಲಾಟೆ ಆದ ಸಂದರ್ಭದಲ್ಲಿ ವಿಡಿಯೋ ಮಾಡಿದ್ದೆ, ಆದರೆ ಮೊಬೈಲ್ ಕಿತ್ತುಕೊಂಡ ಟೋಲ್ ಗೂಂಡಾಗಳು ಅದನ್ನು ಡಿಲೀಟ್ ಮಾಡಿ ಕೊಟ್ಟಿದ್ದಾರೆ. ಕೊನೆಗ ಕಾಲಿಗೆ ಬಿದ್ದು ಕ್ಷಮೆ ಕೇಳಿದ ನಂತರ ಮೊಬೈಲ್ ವಾಪಸ್ ಕೊಟ್ಟಿದ್ದಾರೆ ಅಂತ ವಿಜಯ್ ಕುಮಾರ್ ಪಬ್ಲಿಕ್ ಟವಿ ಜೊತೆ ಮೊಬೈಲ್ ಮೂಲಕ ತನ್ನ ಅಳಲು ತೋಡಿಕೊಂಡಿದ್ದಾರೆ.

    ಈ ಸಂಬಂಧ ರಾಜಾನುಕುಂಟೆ ಪೊಲೀಸರಿಗೆ ರೈತ ವಿಜಯ್ ಕುಮಾರ್ ದೂರು ನೀಡಲು ಮುಂದಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv