Tag: ಟ್ಯಾಬ್ ವಿತರಣೆ

  • 56 ಮಂದಿ ವಿದ್ಯಾರ್ಥಿಗಳಿಗೆ ಜ್ಞಾನದೀವಿಗೆ ಟ್ಯಾಬ್ ವಿತರಣೆ

    56 ಮಂದಿ ವಿದ್ಯಾರ್ಥಿಗಳಿಗೆ ಜ್ಞಾನದೀವಿಗೆ ಟ್ಯಾಬ್ ವಿತರಣೆ

    – ಸಾಫ್ಟ್‍ವೇರ್ ಎಂಜಿನಿಯರ್ ರವಿಕುಮಾರ್ ರಿಂದ ಕೊಡುಗೆ

    ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಳೆಕೋಟೆ ಸರ್ಕಾರಿ ಪ್ರೌಢಶಾಲೆಯ 10ನೇ ವಿದ್ಯಾರ್ಥಿಗಳಿಗೆ ಪಬ್ಲಿಕ್ ಟಿವಿ, ರೋಟರಿ ಜ್ಞಾನದೀವಿಗೆ ಕಾರ್ಯಕ್ರಮದ ಮೂಲಕ ಉಚಿತ ಟ್ಯಾಬ್ ವಿತರಣೆ ಮಾಡಲಾಯಿತು.

    ಬೆಂಗಳೂರು ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ರವಿಕುಮಾರ್ ಪಬ್ಲಿಕ್ ಟಿವಿ ಸಮಾಜಮುಖಿಕಾರ್ಯ ಮೆಚ್ಚಿ ಟ್ಯಾಬ್‍ಗಳನ್ನ ಕೊಡುಗೆ ನೀಡಿದ್ದಾರೆ. ರವಿಕುಮಾರ್ ಅವರ ಅನುಪಸ್ಥಿತಿಯಲ್ಲಿ ನಿಮ್ಮ ಪಬ್ಲಿಕ್ ಟಿವಿ ತಂಡ ಶಾಲಾ ಮಕ್ಕಳಿಗೆ ಇಂದು ಉಚಿತ ಟ್ಯಾಬ್ ವಿತರಿಸಿದೆ.

    ಟ್ಯಾಬ್ ಪಡೆದುಕೊಂಡ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರು, ಎಸ್‍ಡಿಎಂಸಿ ಅಧ್ಯಕ್ಷರು ಪಬ್ಲಿಕ್ ಟಿವಿ ಹಾಗೂ ಸಹೃದಯಿ ದಾನಿಗಳಾದ ರವಿಕುಮಾರ್ ರವರಿಗ ಧನ್ಯವಾದಗಳನ್ನು ಅರ್ಪಿಸಿದರು. ಈ ಹಿಂದೆ ರವಿಕುಮಾರ್ ರವರು ಹಣಬೆ ಸರ್ಕಾರಿ ಶಾಲೆಯ ಮಕ್ಕಳಿಗೂ ಸಹ ತಮ್ಮ ತಂದೆ ವ್ಯಾಸಂಗ ಮಾಡಿದ ಶಾಲೆ ಎಂಬ ನೆನಪಿನಾರ್ಥಕವಾಗಿ ಫ್ರೀ ಟ್ಯಾಬ್ ವಿತರಿಸಿದ್ದರು.

  • ಮಕ್ಕಳಿಗೆ ಟ್ಯಾಬ್ ವಿತರಣೆ ಮಾಡುತ್ತಿರುವ ಪಬ್ಲಿಕ್ ಟಿವಿ ಕಾರ್ಯ ಶ್ಲಾಘನೀಯ: ಯಲಬುರ್ಗಾ ಕೃಷಿ ಅಧಿಕಾರಿ ಶರಣಪ್ಪ ಗುಂಗಾಡಿ

    ಮಕ್ಕಳಿಗೆ ಟ್ಯಾಬ್ ವಿತರಣೆ ಮಾಡುತ್ತಿರುವ ಪಬ್ಲಿಕ್ ಟಿವಿ ಕಾರ್ಯ ಶ್ಲಾಘನೀಯ: ಯಲಬುರ್ಗಾ ಕೃಷಿ ಅಧಿಕಾರಿ ಶರಣಪ್ಪ ಗುಂಗಾಡಿ

    ಕೊಪ್ಪಳ: ಬಡ ಮಕ್ಕಳಿಗೆ ಟ್ಯಾಬ್ ವಿತರಣೆ ಮಾಡುತ್ತಿರುವ ಪಬ್ಲಿಕ್ ಟಿವಿ ಕಾರ್ಯ ಶ್ಲಾಘನೀಯವಾಗಿದೆ ಎಂದು ದಾನಿಗಳು ಹಾಗೂ ಯಲಬುರ್ಗಾ ಕೃಷಿ ಅಧಿಕಾರಿ ಶರಣಪ್ಪ ಗುಂಗಾಡಿ ಹೇಳಿದರು.

    ಕೊಪ್ಪಳದ ಕುಕನೂರ ತಾಲೂಕಿನ ಮಸಬಹಂಚಿನಾಳ ಗ್ರಾಮದ ಶ್ರೀಮತಿ ಗೌರಮ್ಮ ಬಸಪ್ಪ ಆಚಾರ, ಸರಕಾರಿ ಪ್ರೌಢಶಾಲೆಗೆ ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಹಯೋಗದಲ್ಲಿ ಜ್ಞಾನ ದೀವಿಗೆ ಅಭಿಯಾನದಡಿ ಬಡ 40 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಮಾಡಿ ಮಾತನಾಡಿದರು.

    ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸುತ್ತಿರುವ ಪಬ್ಲಿಕ್ ಟಿವಿ ರಂಗನಾಥ್ ಅವರು ರಾಜ್ಯದ ಎಲ್ಲೆಡೆ ಮನೆ ಮಾತಾಗಿದ್ದಾರೆ. ವಾಹಿನಿ ಮೂಲಕ ವಿಭಿನ್ನ ಕಾರ್ಯಕ್ರಮಗಳ ಜನರ ಸಮಸ್ಯೆಗೆ ಸ್ಪಂದಿಸುವ ಕಾರ್ಯ ಮಾಡುತ್ತಿದ್ದಾರೆ. ಕೊರೊನಾ ಲಾಕ್‍ಡೌನ್ ಸಮಯದಲ್ಲಿ ರೋಗಿಗಳು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದರು. ಈ ವೇಳೆ ವಾಹಿನಿ ಮನೆಯೇ ಮಂತ್ರಾಲಯ ಕಾರ್ಯಕ್ರಮದ ಮೂಲಕ ರೋಗಿಗಳಿಗೆ ಅಗತ್ಯ ಔಷಧ ವಿತರಿಸಿ ಸಾಮಾಜಿಕ ಬದ್ಧತೆ ಮೆರೆದಿದ್ದಾರೆ ಎಂದರು.

    ಬಡ ಮಕ್ಕಳು ಆನ್ ಲೈನ್ ತರಗತಿ ಕೇಳಲು ಅನುಕೂಲವಾಗಲು ಪಬ್ಲಿಕ್ ಟಿವಿ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಬಡ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಟ್ಯಾಬ್ ಸದ್ಬಳಕೆ ಮಾಡಿಕೊಂಡು ವಿಷಯಾಧಾರಿತ ಕಲಿಕೆ ಹಾಗೂ ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚಿನ ಫಲಿತಾಂಶ ಪಡೆಯಬೇಕು ಎಂದು ಹೇಳಿದರು.

    ಟ್ಯಾಬ್ ವಿತರಣೆ ಮಾಡಿರುವುದು ಸಂತೋಷವಾಗಿದೆ. ಆನ್‍ಲೈನ್ ತರಗತಿ ಹಾಗೂ ವಿಷಯಾಧಾರಿತ ಹೆಚ್ಚಿನ ಪಾಠ ಕೇಳಲು ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ಬಡ ಮಕ್ಕಳು ಹೆಚ್ಚು ಜ್ಞಾನ ಪಡೆಯಲು ಶಕ್ತಿ ತುಂಬಿದ ಹಾಗೆ ಆಗಿದೆ. ಪಬ್ಲಿಕ್ ಟಿವಿ ಮತ್ತು ಶರಣಪ್ಪ ಗುಂಗಾಡಿ ಅವರ ಸಹಾಯವನ್ನು ಯಾವತ್ತು ಮರೆಯಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

    ಯಲಬುರ್ಗಾ ಹಾಗೂ ಕುಕನೂರು ತಾಲೂಕಿನಲ್ಲಿ ಜನರು, ರೈತರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗೆ ಸದಾಕಾಲ ಸ್ಪಂದಿಸುತ್ತಿರುವ ಕೃಷಿ ಅಧಿಕಾರಿ ಶರಣಪ್ಪ ಗುಂಗಾಡಿ ಅವರ ಕಾರ್ಯವನ್ನು ಶಿಕ್ಷಕ ವೃಂದ ಮೆಚ್ಚಿದರು. ಕೊರೊನಾ ಸಮಯದಲ್ಲಿ ಜಿಲ್ಲೆಯಲ್ಲಿ ಯಾವೊಬ್ಬ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನೀಡದ ಹಣವನ್ನು ಶರಣಪ್ಪ ಗುಂಗಾಡಿ ಅವರು ತಮ್ಮ ಒಂದು ವರ್ಷದ ವೇತನ 5 ಲಕ್ಷ ರೂಪಾಯಿ ನೀಡಿ ಮಾನವೀಯತೆ ಮೆರೆದಿದ್ದಾರೆ. ಸರ್ಕಾರಿ ಕೆಲಸದ ಜೊತೆಜೊತೆಗೆ ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ. ದಕ್ಷ ಅಧಿಕಾರಿ ಶರಣಪ್ಪ ಗುಂಗಾಡಿ ಹಾಗೂ ಪಬ್ಲಿಕ್ ಟಿವಿ ಅವರಿಗೆ ನಾವು ಋಣಿಯಾಗಿರುತ್ತೇವೆ ಟ್ಯಾಬ್ ಪಡೆದ ವಿದ್ಯಾರ್ಥಿಗಳು ಹೇಳಿದ್ದಾರೆ.

  • ವಿದ್ಯಾರ್ಥಿಗಳೂ ಟ್ಯಾಬ್ ಉಪಯುಕ್ತತೆಯ ಕುರಿತಂತೆ ಹೆಮ್ಮೆಪಟ್ಟಿದ್ದು ಖುಷಿ ತಂದಿತು – ಸುರೇಶ್‍ಕುಮಾರ್

    ವಿದ್ಯಾರ್ಥಿಗಳೂ ಟ್ಯಾಬ್ ಉಪಯುಕ್ತತೆಯ ಕುರಿತಂತೆ ಹೆಮ್ಮೆಪಟ್ಟಿದ್ದು ಖುಷಿ ತಂದಿತು – ಸುರೇಶ್‍ಕುಮಾರ್

    – ಸಚಿವರಿಂದ ಪಬ್ಲಿಕ್ ಟಿವಿ ಜ್ಞಾನ ದೀವಿಗೆ ಟ್ಯಾಬ್ ವಿತರಣೆ
    – 150 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

    ಬೆಂಗಳೂರು: ಇಂದು ಬೆಂಗಳೂರು ಹೊರವಯಲದ ದೇವನಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪಬ್ಲಿಕ್ ಟಿವಿ ಜ್ಞಾನ ದೀವಿಗೆಯ ಟ್ಯಾಬ್ ವಿತರಿಸಿದರು.

    ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ವತಿಯಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಬಡ ಮಕ್ಕಳಿಗೆ ಸಹಾಯವಾಗಲಿ ಎಂದು ಟ್ಯಾಬ್ ನೀಡಲಾಗುತ್ತಿದೆ. ಕೊರೊನಾ ಸಮಯದಲ್ಲಿ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುಂಠಿತವಾಗಬಾರದು ಎಂಬ ಉದ್ದೇಶದಿಂದ ಈ ಕಾರ್ಯವನ್ನು ಮಾಡಲಾಗಿದೆ. ಇದಕ್ಕೆ ಶಿಕ್ಷಣ ಸಚಿವರು ಸಂಪೂರ್ಣ ಸಾಥ್ ನೀಡಿದ್ದು ಫೇಸ್‍ಬುಕ್‍ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿ ಪೋಸ್ಟ್ ಹಾಕಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?
    ಇಂದು ದೇವನಹಳ್ಳಿಗೆ ಭೇಟಿ ನೀಡಿದೆ. ಪಬ್ಲಿಕ್ ಟೀವಿ ಮಹತ್ವಾಕಾಂಕ್ಷೆಯಿಂದ ಪ್ರಾರಂಭಿಸಿರುವ ಜ್ಞಾನ ದೀವಿಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣಾ ಅಭಿಯಾನದಲ್ಲಿ ಈ ತಾಲೂಕಿನ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ದೇವನಹಳ್ಳಿ ಹಾಗೂ ಸರ್ಕಾರಿ ಪ್ರೌಢಶಾಲೆ, ಬಚ್ಚಹಳ್ಳಿ ಈ ಎರಡು ಶಾಲೆಗಳ 150 ವಿದ್ಯಾರ್ಥಿಗಳು ಟ್ಯಾಬ್ ಗಳನ್ನು ಪಡೆದಿದ್ದಾರೆ.

    ಈ ಪೈಕಿ ಸುಮಾರು ಹದಿನೈದು ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಟ್ಯಾಬ್ ಪ್ರಯೋಜನೆ ಕುರಿತು ಮಾತನಾಡಿದೆ. ಎಲ್ಲ ವಿದ್ಯಾರ್ಥಿಗಳೂ ಟ್ಯಾಬ್ ಉಪಯುಕ್ತತೆಯ ಕುರಿತಂತೆ ಹೆಮ್ಮೆಪಟ್ಟಿದ್ದು ಖುಷಿ ತಂದಿತು. ಕೋರ್ ವಿಷಯಗಳು, ಆಂಗ್ಲ ಭಾಷಾ ಬೋಧನೆ ಪರಿಣಾಮಕಾರಿಯಾಗಿದೆ ಎಂದು ಆ ಮಕ್ಕಳು ಹೇಳಿದರು. ಕೊರೊನಾ ಸಮಯದಲ್ಲಿ ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಈ ರೀತಿ ಕೈ ಜೋಡಿಸಿದಲ್ಲಿ ನಿಜಕ್ಕೂ ಪರಿಣಾಮಕಾರಿ ಯಾಗುತ್ತದೆ. ಪಬ್ಲಿಕ್ ಟೀವಿ ಅಭಿಯಾನಕ್ಕೆ ಅಭಿನಂದನೆಗಳು.

    ಈ ಮಕ್ಕಳು ಚಂದನ ಟಿವಿಯಲ್ಲಿ ಬರುತ್ತಿರುವ ಪಾಠಗಳನ್ನು ಸಹ ವೀಕ್ಷಿಸುತ್ತಿದ್ದಾರೆ. ಅದರಿಂದಲೂ ಹೆಚ್ಚು ಪ್ರಯೋಜನಕಾರಿಯಾಗಿದೆ. ವಿದ್ಯಾರ್ಥಿಗಳಿಗೆ ಶಾಲಾ ಚಟುವಟಿಕೆಗಳಿಂದ ದೂರವಿರುವುದು ಸಂತಸ ತಂದಿಲ್ಲವೆನ್ನುವುದು ಅವರೊಂದಿಗೆ ನಾನು ಚರ್ಚಿಸಿದಾಗ ಖಚಿತವಾದ ಅಂಶ. ಸಂಶಯ ಪರಿಹಾರಕ್ಕೆ ಶಿಕ್ಷಕರಿಲ್ಲ, ಸ್ಪರ್ಧಾತ್ಕಕವಾದ ಮನೋಭಾವಕ್ಕೆ ಕುಂದುಂಟಾಗಿದೆ, ಆಟಪಾಠಗಳೆಂಬ ದೈಹಿಕ ಚಟುವಟಿಕೆಗಳಿಲ್ಲ, ಮಧ್ಯಾಹ್ನದ ಬಿಸಿಯೂಟ ದೊರೆಯುತ್ತಿಲ್ಲ ಎಂಬ ಸಮಸ್ಯೆಗಳು ಕೇಳಿಬಂದವು.

    ತಾಲೂಕಿನ ಶಿಕ್ಷಕರು ವಿದ್ಯಾಗಮ ಕಾರ್ಯಕ್ರಮವು ಸ್ಥಗಿತಗೊಂಡಿರುವ ಕಾರಣ ವಿದ್ಯಾರ್ಥಿಗಳಲ್ಲಿ ಶಿಸ್ತಿನ ಕೊರತೆ, ಪೋಷಕರಲ್ಲಿ ಅವರ ಕಲಿಕೆಯನ್ನು ಮುಂದುವರೆಸಲು ನಿರಾಸಕ್ತಿ, ಹೆಚ್ಚುತ್ತಿರುವ ಸಾಮಾಜಿಕ ಸಮಸ್ಯೆಗಳು ಎಲ್ಲವನ್ನೂ ಶಿಕ್ಷಕರು ಗಮನಕ್ಕೆ ತಂದರು. ನಾನು ಇಂದು ಹೋಗಿದ್ದ ಆ ಸರಕಾರಿ ಶಾಲೆಯ ಕಟ್ಟಡವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಸಂಸ್ಥೆ ಅಚ್ಚುಕಟ್ಟಾಗಿ ನಿರ್ಮಿಸಿಕೊಟ್ಟಿದೆ. ಸಿಎಸ್‍ಆರ್ ಅನುದಾನದಡಿ ಈ ಉತ್ತಮ ಕಾರ್ಯ ನಡೆದಿದೆ.