Tag: ಟ್ರಾಫಿಕ್ ಜಾಮ್

  • BETL ಅಧಿಕಾರಿಗಳ ನಿರ್ಲಕ್ಷ್ಯ – ಹೊಸೂರು ರಸ್ತೆಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

    BETL ಅಧಿಕಾರಿಗಳ ನಿರ್ಲಕ್ಷ್ಯ – ಹೊಸೂರು ರಸ್ತೆಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

    ಆನೇಕಲ್: ಬಿಇಟಿಎಲ್ (BETL) ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿ ಹಾಗೂ ಬೇಜವಾಬ್ದಾರಿತನದಿಂದ ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿ ಹೊಸೂರು ರಸ್ತೆ (Hosur Road) ಸಂಪೂರ್ಣವಾಗಿ ಟ್ರಾಫಿಕ್ ಜಾಮ್‌ನಿಂದ (Traffic Jam) ವಾಹನ ಸಮಾರರು ಕಿರಿಕಿರಿ ಅನುಭವಿಸುತ್ತಿದ್ದಾರೆ. ಇಂದು ಸಹ ಹೊಸೂರು ರಸ್ತೆಯ ಗೆಸ್ಟ್ ಲೈನ್ ಸರ್ಕಲ್‌ನಿಂದ ಕೋನಪ್ಪನ ಅಗ್ರಹಾರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಸಾಕಷ್ಟು ಸಮಸ್ಯೆಯನ್ನು ಎದುರಿಸಿದ್ದಾರೆ.

    ಇತ್ತೀಚಿಗೆ ಬಿಇಟಿಎಲ್ ವತಿಯಿಂದ ಗೆಸ್ಟ್ ಲೈನ್ ಸಮೀಪ ಕಾಮಗಾರಿಯೊಂದನ್ನು ಮಾಡುತ್ತಿದ್ದು, ಕಾಮಗಾರಿಗಾಗಿ ಹಳ್ಳವನ್ನು ಅಗೆಯಲಾಗಿದೆ. ಆದರೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದ ಕಾಂಟ್ರಾಕ್ಟರ್ ಹಾಗೂ ಬಿಇಟಿಎಲ್ ಸಂಸ್ಥೆಯಿಂದಾಗಿ ಪ್ರತಿನಿತ್ಯ ಕಿಲೋ ಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇದರಿಂದ ವಾಹನ ಸವಾರರು ಬಿಇಟಿಎಲ್‌ಗೆ ಶಾಪ ಹಾಕುತ್ತಿದ್ದಾರೆ. ಇದನ್ನೂ ಓದಿ: ದೊಡ್ಡಗೌಡರ ಆರೋಗ್ಯ ವಿಚಾರಿಸಿದ ಬಿಎಸ್‌ವೈ, ವಿಜಯೇಂದ್ರ

    ಅಲ್ಲದೇ ಇಂದು ವಾರಾಂತ್ಯವಾಗಿದ್ದು, ತಮಿಳುನಾಡಿನತ್ತ ತಮ್ಮ ಊರುಗಳಿಗೆ ಅನೇಕ ಮಂದಿ ಹೊರಟಿದ್ದರು. ಆದರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡು ಕಿರಿಕಿರಿ ಅನುಭವಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಭೇಟಿಯಾದ ಸೆರ್ಗಿಯೊ ಗೋರ್ – ಟ್ರಂಪ್ ಮೋದಿಯನ್ನ ಗ್ರೇಟ್‌ ಫ್ರೆಂಡ್‌ ಅಂತ ಪರಿಗಣಿಸ್ತಾರೆ: ಯುಎಸ್‌ ರಾಯಭಾರಿ

  • ಆಯುಧ ಪೂಜೆಗೆ ಖರೀದಿ ಭರಾಟೆ ಜೋರು – ಬೆಳ್ಳಂಬೆಳಗ್ಗೆ ಕೆ.ಆರ್ ಮಾರ್ಕೆಟ್ ಸುತ್ತ ಟ್ರಾಫಿಕ್ ಜಾಮ್

    ಆಯುಧ ಪೂಜೆಗೆ ಖರೀದಿ ಭರಾಟೆ ಜೋರು – ಬೆಳ್ಳಂಬೆಳಗ್ಗೆ ಕೆ.ಆರ್ ಮಾರ್ಕೆಟ್ ಸುತ್ತ ಟ್ರಾಫಿಕ್ ಜಾಮ್

    ಬೆಂಗಳೂರು: ದೇಶದೆಲ್ಲೆಡೆ ಇಂದು (ಅ.1) ಆಯುಧ ಪೂಜೆ ಸಂಭ್ರಮ ಜೋರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಜನರು ಖರೀದಿಗಾಗಿ ಮುಗಿಬಿದ್ದಿದ್ದು, ಕೆ.ಆರ್ ಮಾರ್ಕೆಟ್  (KR Market) ಸುತ್ತ ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ಆಗಿದೆ.

    ಆಯುಧ ಪೂಜೆ ಹಿನ್ನೆಲೆ ಕೆ.ಆರ್ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಹೂವು, ಹಣ್ಣು ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಜೋರಾಗಿದೆ. ಈ ಹಿನ್ನೆಲೆ ಟೌನ್‌ಹಾಲ್‌ನಿಂದ ಕೆಆರ್ ಮಾರ್ಕೆಟ್‌ವರೆಗೆ ಟ್ರಾಫಿಕ್ ಬಿಸಿ ತಟ್ಟಿದೆ. ಖರೀದಿಗೆ ಬಂದ ಜನರು ಫ್ಲೈಓವರ್ ಮೇಲೆಯೂ ವಾಹನಗಳನ್ನು ಪಾರ್ಕ್ ಮಾಡಿದ್ದು, ಫ್ಲೈ ಓವರ್ ಮೇಲೆಯೂ ಕಿ.ಮೀವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.ಇದನ್ನೂ ಓದಿ: ಭಾರತದ ಮೋಸ್ಟ್‌ ಡೇಂಜರಸ್‌ ಫೋರ್ಟ್‌ – ಹರಿಹರ ಕೋಟೆ ಹತ್ತಲು ಡಬಲ್‌ ಗುಂಡಿಗೆ ಬೇಕು!

    ಆಯುಧ ಪೂಜೆ ಹಾಗೂ ದಸರಾ ಹಬ್ಬದ ಹಿನ್ನೆಲೆ ಹೂವು, ಹಣ್ಣುಗಳ ಬೆಲೆಯೂ ಗಗನಕ್ಕೇರಿದೆ. ಬೆಲೆ ಏರಿಕೆಯಾದರೂ ಹಬ್ಬರ ಸಂಭ್ರಮ ಜೋರಾಗಿ ಇದೆ.

    ಹೂವು                         ಇಂದಿನ ದರ (ಕೆ.ಜಿಗೆ)
    ಸೇವಂತಿ                      200-300 ರೂ.
    ಕನಕಾಂಬರ                2000-2500 ರೂ.
    ಮಲ್ಲಿಗೆ                         1500-2000 ರೂ.
    ಗುಲಾಬಿ                         400-450 ರೂ.
    ಕಾಕಡ                              800 ರೂ
    ಬಾಳೆಕಂಬ ಜೋಡಿ             50-70ರೂ.
    ಕುಂಬಳಕಾಯಿ                  50-60ರೂ
    ಗುಲಾಬಿ ಹಾರ                   4000 ರೂ.

  • ಬೆಂಗಳೂರಲ್ಲಿ ಮಳೆ ಅವಾಂತರ – ಮಣ್ಣು ಕುಸಿದು ಓರ್ವ ಕಾರ್ಮಿಕ ಬಲಿ

    ಬೆಂಗಳೂರಲ್ಲಿ ಮಳೆ ಅವಾಂತರ – ಮಣ್ಣು ಕುಸಿದು ಓರ್ವ ಕಾರ್ಮಿಕ ಬಲಿ

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿಂದು (Bengaluru) ಏಕಾಏಕಿ ಮಳೆ ಅಬ್ಬರಿಸಿದೆ. ಸಂಜೆ ಸುರಿದ ಮಳೆಯಿಂದ ಭಾರೀ ಅವಾಂತರ ಸೃಷ್ಟಿಯಾಗಿದೆ. ಇದೇ ವೇಳೆ ಮಣ್ಣು ಕುಸಿದು ಓರ್ವ ಕಟ್ಟಡ ಕಾರ್ಮಿಕ ಬಲಿಯಾಗಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಕಟ್ಟಡ ನಿರ್ಮಾಣಕ್ಕಾಗಿ ಅಗೆಯುವಾಗ ಮಣ್ಣು ಕುಸಿದು ಎಂಬಾಸಿ ಗ್ರೂಪ್‌ಗೆ ಸೇರಿದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬೆಂಗಳೂರು | ಸ್ವಚ್ಛತಾ ಕಾರ್ಮಿಕರಿಗೆ ʻಜಲಮಂಡಳಿ ಅನ್ನಪೂರ್ಣ ಯೋಜನೆʼ ಸ್ಮಾರ್ಟ್ ಕಾರ್ಡ್ ವಿತರಣೆ

    ಮಳೆ ನೀರು ಜಾಸ್ತಿ ಹರಿದ ಪರಿಣಾಮ ಮಣ್ಣು ಕುಸಿದಿದೆ, ಈ ವೇಳೆ ಮಣ್ಣಿನಡಿ ಸಿಲುಕಿ ಆಂಧ್ರ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇನ್ನೂ ಮತ್ತೋರ್ವನ ಸ್ಥಿತಿಯೂ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.  ಇದನ್ನೂ ಓದಿ: ರಾಷ್ಟ್ರಪತಿಗೆ ಕನ್ನಡ ಬರುತ್ತಾ ಅಂತ ಕೇಳಿದ ಸಿಎಂ – ಸ್ವಲ್ಪ ಸ್ವಲ್ಪ ಬರುತ್ತೆ; ಮುರ್ಮು ಉತ್ತರ

    ಸಂಜೆ ಮಳೆಗೆ ಭಾರಿ ಅವಾಂತರ
    ಕಳೆದ 2-3 ದಿನಗಳಿಂದ ಆಗೊಮ್ಮೆ ಈಗೊಮ್ಮೆ ಮಳೆ ಬಂದು ಹೋಗುತ್ತಿತ್ತು. ಆದ್ರೆ ಸೆಪ್ಟೆಂಬರ್ ಮೊದಲ ದಿನವೇ ಜೋರು ಮಳೆ ಸುರಿದಿದೆ. ಮಳೆಗಾಲದ ದಿನಗಳಿಗೆ ಹೋಲಿಸಿದ್ರೆ ಸೋಮವಾರ ಸಂಜೆ ಸುರಿದ ಮಳೆ ಬಿರುಸಾಗಿತ್ತು. ರಸ್ತೆಯಲ್ಲಿ ಜನ, ವಾಹನ ಸಂಚಾರ ಸಾಧ್ಯವಾಗದಷ್ಟು ಜೋರಿತ್ತು. ಮಿಂಚು ಗುಡುಗು ಕೂಡ ಇದ್ದು ಜನ ಭಯ ಭೀತರಾದರು. ವಾಹನ ಸವಾರರು ಮಳೆಯಲ್ಲಿ ಸಂಚಾರ ಮಾಡುವ ಧೈರ್ಯ ಮಾಡದೇ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿ ಮರ, ಕಟ್ಟಡಗಳ ಬಳಿ ಆಶ್ರಯ ಪಡೆದಿದ್ದರು. ಇನ್ನೂ ಅಲ್ಲಲ್ಲಿ ಟ್ರಾಫಿಕ್ ದಟ್ಟಣೆ ಕೂಡ ಉಂಟಾಗಿತ್ತು.

    ಎಲ್ಲೆಲ್ಲಿ ಮಳೆಯ ಆರ್ಭಟ ಜೋರು?
    ಟೌನ್ ಹಾಲ್, ಕಾರ್ಪೋರೇಷನ್, ಜಯನಗರ, ಜೆಪಿ ನಗರ ಸುತ್ತಮುತ್ತ, ವಿಲ್ಸನ್ ಗಾರ್ಡನ್, ಶಾಂತಿನಗರ, ಲಾಲ್ ಬಾಗ್ ಸುತ್ತಮುತ್ತ, ಮಲ್ಲೇಶ್ವರಂ ರಸ್ತೆ, ಮಂತ್ರಿ ಮಾಲ್ ಯಲ್ಲಿ ಜೋರು ಮಳೆ ಉಂಟಾಗಿತ್ತು. ಅಲ್ಲದೇ ಬಿಬಿಎಂಪಿ ವಲಯ ಕಚೇರಿ ಮುಂದಿನ ರಸ್ತೆಯೇ ತುಂಬಿ ಹರಿಯುತ್ತಿದ್ದ ದೃಶ್ಯವೂ ಕಂಡುಬಂದಿತು. ಅಲ್ಲದೇ ಕೆ.ಆರ್ ಮಾರ್ಕೆಟ್, ಶಾಂತಿನಗರದಲ್ಲೂ ಜೋರು ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿದ್ದವು.

    ಇನ್ನೂ ಏಕಾಏಕಿ ಸುರಿದ ಮಳೆಯಿಂದಾಗಿ ಕೆಲ ಸಮಯದ ರಸ್ತೆಯಲ್ಲಿ 2 ರಿಂದ 3 ಅಡಿಯಷ್ಟು ನೀರು ಆವೃತವಾಗಿತ್ತು. ಅಲ್ಲಲ್ಲಿ ಚರಂಡಿ ನೀರು ತುಂಬಿ ಹರಿಯುತ್ತಿದ್ದರಿಂದ ದುರ್ವಾಸನೆ ಬೀರುತ್ತಿತ್ತು. ಇದು ವಾಹನ ಸವಾರರನ್ನೂ ಹೈರಾಣಾಗುವಂತೆ ಮಾಡಿತ್ತು. ಇನ್ನೂ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಅವಾಂತರ ಸೃಷ್ಟಿಯಾಗಿತ್ತು. ಇದನ್ನೂ ಓದಿ: Bengaluru | ಗೋವಿಂದರಾಜನಗರದಲ್ಲಿ ಬ್ರಾಹ್ಮಣ ಭವನ ಉದ್ಘಾಟನೆ

  • Bengaluru Rains | ಕೆಲವೇ ನಿಮಿಷದ ಮಳೆಗೆ ಬೆಂಗಳೂರಲ್ಲಿ ಭಾರಿ ಅವಾಂತರ – ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

    Bengaluru Rains | ಕೆಲವೇ ನಿಮಿಷದ ಮಳೆಗೆ ಬೆಂಗಳೂರಲ್ಲಿ ಭಾರಿ ಅವಾಂತರ – ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

    – ಬಿಬಿಎಂಪಿ ವಲಯ ಕಚೇರಿ ರಸ್ತೆಯಲ್ಲೇ ತುಂಬಿ ಹರಿದ ಮಳೆ ನೀರು

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿಂದು (Bengaluru Rains) ಸಂಜೆ ಏಕಾಏಕಿ ಮಳೆ ಅಬ್ಬರಿಸಿದೆ. ಬೆಳಗ್ಗೆಯಿಂದ ಕಾಣಿಸಿಕೊಳ್ಳದ ಮಳೆರಾಯ ಸಂಜೆ ಏಕಾಏಕಿ ಅಪ್ಪಳಿಸಿದೆ. ಕೆಲವೇ ನಿಮಿಷ ಸುರಿದ ಮಳೆಗೆ ಹಲವೆಡೆ ಅವಾಂತರ ಉಂಟಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನ ಪರದಾಟುವಂತಾಗಿದೆ.

    ಕಳೆದ 2-3 ದಿನಗಳಿಂದ ಆಗೊಮ್ಮೆ ಈಗೊಮ್ಮೆ ಮಳೆ ಬಂದು ಹೋಗುತ್ತಿತ್ತು. ಆದ್ರೆ ಸೆಪ್ಟೆಂಬರ್‌ ಮೊದಲ ದಿನವೇ ಜೋರು ಮಳೆ ಸುರಿದಿದೆ. ಮಳೆಗಾಲದ ದಿನಗಳಿಗೆ ಹೋಲಿಸಿದ್ರೆ ಸೋಮವಾರ ಸಂಜೆ ಸುರಿದ ಮಳೆ ಬಿರುಸಾಗಿತ್ತು. ರಸ್ತೆಯಲ್ಲಿ ಜನ, ವಾಹನ ಸಂಚಾರ ಸಾಧ್ಯವಾಗದಷ್ಟು ಜೋರಿತ್ತು. ಮಿಂಚು ಗುಡುಗು ಕೂಡ ಇದ್ದು ಜನ ಭಯ ಭೀತರಾದರು. ವಾಹನ ಸವಾರರು ಮಳೆಯಲ್ಲಿ ಸಂಚಾರ ಮಾಡುವ ಧೈರ್ಯ ಮಾಡದೇ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿ ಮರ, ಕಟ್ಟಡಗಳ ಬಳಿ ಆಶ್ರಯ ಪಡೆದಿದ್ದರು. ಇನ್ನೂ ಅಲ್ಲಲ್ಲಿ ಟ್ರಾಫಿಕ್‌ ದಟ್ಟಣೆ ಕೂಡ ಉಂಟಾಗಿತ್ತು. ಇದನ್ನೂ  ಓದಿ: Ramanagara | ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ – 23 ಮಂದಿಯ ವಿರುದ್ಧ ಎಫ್‌ಐಆರ್

    ಎಲ್ಲೆಲ್ಲಿ ಮಳೆಯ ಆರ್ಭಟ ಜೋರು?
    ಟೌನ್ ಹಾಲ್, ಕಾರ್ಪೋರೇಷನ್, ಜಯನಗರ, ಜೆಪಿ ನಗರ ಸುತ್ತಮುತ್ತ, ವಿಲ್ಸನ್ ಗಾರ್ಡನ್, ಶಾಂತಿನಗರ, ಲಾಲ್ ಬಾಗ್ ಸುತ್ತಮುತ್ತ, ಮಲ್ಲೇಶ್ವರಂ ರಸ್ತೆ, ಮಂತ್ರಿ ಮಾಲ್ ಯಲ್ಲಿ ಜೋರು ಮಳೆ ಉಂಟಾಗಿತ್ತು. ಅಲ್ಲದೇ ಬಿಬಿಎಂಪಿ ವಲಯ ಕಚೇರಿ ಮುಂದಿನ ರಸ್ತೆಯೇ ತುಂಬಿ ಹರಿಯುತ್ತಿದ್ದ ದೃಶ್ಯವೂ ಕಂಡುಬಂದಿತು. ಅಲ್ಲದೇ ಕೆ.ಆರ್ ಮಾರ್ಕೆಟ್, ಶಾಂತಿನಗರದಲ್ಲೂ ಜೋರು ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿದ್ದವು. ಇದನ್ನೂ  ಓದಿ: ಡಿಕೆಶಿ ನಟ್ಟು ಬೋಲ್ಟು ಹೇಳಿಕೆ ಸಾಧು ಕೋಕಿಲ ಕಿತಾಪತಿ – ಕಿಚ್ಚ ಸುದೀಪ್‌

    ಇನ್ನೂ ಏಕಾಏಕಿ ಸುರಿದ ಮಳೆಯಿಂದಾಗಿ ಕೆಲ ಸಮಯದ ರಸ್ತೆಯಲ್ಲಿ 2 ರಿಂದ 3 ಅಡಿಯಷ್ಟು ನೀರು ಆವೃತವಾಗಿತ್ತು. ಅಲ್ಲಲ್ಲಿ ಚರಂಡಿ ನೀರು ತುಂಬಿ ಹರಿಯುತ್ತಿದ್ದರಿಂದ ದುರ್ವಾಸನೆ ಬೀರುತ್ತಿತ್ತು. ಇದು ವಾಹನ ಸವಾರರನ್ನೂ ಹೈರಾಣಾಗುವಂತೆ ಮಾಡಿತ್ತು. ಇನ್ನೂ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಅವಾಂತರ ಸೃಷ್ಟಿಯಾಗಿತ್ತು. ಇದನ್ನೂ  ಓದಿ: ಭಾರೀ ಭ್ರಷ್ಟಾಚಾರ ಆರೋಪ – ಆನೇಕಲ್‌ ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

  • ರಣ ಮಳೆಗೆ ನಡುಗಿದ ಮುಂಬೈ – ಹಲವೆಡೆ ಟ್ರಾಫಿಕ್‌ ಜಾಮ್‌, ಶಾಲಾ-ಕಾಲೇಜುಗಳಿಗೆ ರಜೆ, ರೆಡ್‌ ಅಲರ್ಟ್‌ ಘೋಷಣೆ

    ರಣ ಮಳೆಗೆ ನಡುಗಿದ ಮುಂಬೈ – ಹಲವೆಡೆ ಟ್ರಾಫಿಕ್‌ ಜಾಮ್‌, ಶಾಲಾ-ಕಾಲೇಜುಗಳಿಗೆ ರಜೆ, ರೆಡ್‌ ಅಲರ್ಟ್‌ ಘೋಷಣೆ

    – ಮುಳುಗಿದ ರೈಲ್ವೆ ಹಳಿಗಳು; ವಿಮಾನ ಹಾರಾಟಕ್ಕೂ ತೊಂದರೆ

    ಮುಂಬೈ: ಮಹಾರಾಷ್ಟ್ರದ ಮುಂಬೈ (Mumbai) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಂದು ಬೆಳಗ್ಗೆ ಭಾರೀ ಮಳೆಯಿಂದಾಗಿ (Heavy Rain) ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಪ್ರಮಾಣದ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

    ಅಧಿಕಾರಿಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ 54 ಮಿ.ಮೀ. ಗಿಂತ ಹೆಚ್ಚು ಮಳೆಯಾಗಿದೆ. ಇನ್ನೂ ಪೂರ್ವ ಮತ್ತು ಪಶ್ಚಿಮ ಉಪನಗರಗಳಲ್ಲಿ ಕ್ರಮವಾಗಿ 72 ಮಿ.ಮೀ. ಮತ್ತು 65 ಮಿ.ಮೀ. ಮಳೆಯಾಗಿದೆ. ಹಾಗಾಗಿ ಮುಂಬೈ ಮಹಾನಗರ ಪಾಲಿಕೆಯು, ಅನಗತ್ಯ ಓಡಾಟ ನಿಲ್ಲಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಮೀನುಗಾರರು (Fishermen) ಕಡಲಿಗಿಳಿಯದಂತೆ ಸೂಚಿಸಿದೆ. ಇದನ್ನೂ ಓದಿ: ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಫೋಟ – ಓರ್ವ ಪೊಲೀಸ್ ಸಾವು, ಮೂವರಿಗೆ ಗಾಯ

    ವಿಮಾನ ಹಾರಟಕ್ಕೂ ತೊಂದರೆ
    ಮಳೆಯಿಂದಾಗಿ ಮುಂಬೈನ ವಿಮಾನ ನಿಲ್ದಾಣದಲ್ಲಿ (Mumbai Airport) ಲ್ಯಾಂಡಿಂಗ್‌ ಮಾಡುವ ಮುನ್ನ 9 ವಿಮಾನಗಳು ಹಲವು ಸುತ್ತುಗಳನ್ನು ಹಾಕಿ ನಂತರ ಪ್ರಯಾಸದಿಂದ ಇಳಿದಿವೆ. ಒಂದು ವಿಮಾನವನ್ನ ಸೂರತ್‌ಗೆ ಮಾರ್ಗ ಬದಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: Video Viral | ಯೋಧನನ್ನ ಕಂಬಕ್ಕೆ ಕಟ್ಟಿ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ; ನಾಲ್ವರು ಅರೆಸ್ಟ್‌

    ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು:
    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಳವಾಗಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿ ಮಳೆ ಸುರಿಯುತ್ತಿದ್ದು ಹಲವು ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇದನ್ನೂ ಓದಿ: ಸಂಜೆಯೊಳಗೆ ಮಹೇಶ್‌ ಶೆಟ್ಟಿ ತಿಮರೋಡಿ ಅರೆಸ್ಟ್‌ ಮಾಡಲು ಪರಮೇಶ್ವರ್‌ ಸೂಚನೆ

    ರೆಡ್‌ ಅಲರ್ಟ್‌ ಘೋಷಣೆ
    ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಕೆಲವು ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಮಂಗಳವಾರ ಸಹ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹೇಳಿದೆ.

    ರೈಲು ಸಂಚಾರದಲ್ಲಿ ವಿಳಂಬ
    ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೇಂದ್ರೀಯ ರೈಲ್ವೆಯ ಉಪನಗರ ರೈಲು ಸಂಚಾರದಲ್ಲೂ ಸಮಸ್ಯೆ ಎದುರಾಗಿದೆ. ಕೆಲವು ಪ್ರದೇಶಗಳಲ್ಲಿ ಹಳಿಗಳು ಮುಳುಗಿವೆ. ಕುರ್ಲ ಮತ್ತು ತಿಲಕ್ ನಗರ ನಿಲ್ದಾಣಗಳ ನಡುವೆ ಚಾರ್ಜಿಂಗ್‌ ಪಾಯಿಂಟ್‌ಗಳೇ ಗೋಚರಿಸದಂತಾಗಿದೆ. ಹೀಗಾಗಿ ಕೆಲ ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ. ಆದ್ರೆ ಯಾವುದೇ ಸಂಚಾರ ಸ್ಥಗಿತಗೊಳಿಸಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ – ಶಿರಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್

    ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ – ಶಿರಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್

    – ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್
    – ಸಂಕಷ್ಟಕ್ಕೆ ಸಿಲುಕಿದ ಸಾವಿರಾರು ಸವಾರರು

    ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ (NH 75) ಭೂಕುಸಿತ (Landslide) ಉಂಟಾಗಿದೆ. ಭೂಕುಸಿತ ಹಿನ್ನೆಲೆ ವಾಹನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

    ಸಕಲೇಶಪುರ ತಾಲೂಕಿನ, ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತ ಉಂಟಾಗಿದೆ. ಮರ, ಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಶಿರಾಡಿ ಘಾಟ್ (Shiradi Ghat) ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ನಲ್ಲಿ (Traffic Jam) ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ. ಇದನ್ನೂ ಓದಿ: ಬುರುಡೆ ಸಿಕ್ಕಿದ್ದೆಲ್ಲಿ? ತಂದಿದ್ದೆಲ್ಲಿ? – ಅನಾಮಿಕ ದೂರುದಾರನ ತೀವ್ರ ವಿಚಾರಣೆ

    ಭೂಕುಸಿತ ಹಿನ್ನೆಲೆ ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್ ಆಗಿದ್ದು, ನೂರಾರು ವಾಹನಗಳು ರಸ್ತೆ ಮಧ್ಯೆ ನಿಂತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇದನ್ನೂ ಓದಿ: ಚಂದ್ರಶೇಖರ ಸ್ವಾಮೀಜಿ ಭೈರವೈಕ್ಯ – ನಾಥ ಸಂಪ್ರದಾಯದಂತೆ ನೆರವೇರಿದ ಅಂತ್ಯ ಸಂಸ್ಕಾರ

    ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಮಾರನಹಳ್ಳಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಸೂಚನೆ ನೀಡಿದ್ದಾರೆ. ಇದರಿಂದ ಸಾವಿರಾರು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.  ಇದನ್ನೂ ಓದಿ: ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲ್ಸ ಆಗ್ತಿದೆ: ವಿಶ್ವನಾಥ್‌

  • ಏರ್‌ಪೋರ್ಟ್ ರಸ್ತೆಯಲ್ಲಿ 3 ಕಾರುಗಳ ನಡುವೆ ಸರಣಿ ಅಪಘಾತ – ಟ್ರಾಫಿಕ್ ಜಾಮ್

    ಏರ್‌ಪೋರ್ಟ್ ರಸ್ತೆಯಲ್ಲಿ 3 ಕಾರುಗಳ ನಡುವೆ ಸರಣಿ ಅಪಘಾತ – ಟ್ರಾಫಿಕ್ ಜಾಮ್

    – 3-4 ಕಿ.ಮೀವರೆಗೆ ಸಾಲುಗಟ್ಟಿ ನಿಂತಿರೋ ವಾಹನಗಳು

    ಬೆಂಗಳೂರು: ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೆಂಗಳೂರಿನ (Bengaluru) ಏರ್‌ಪೋರ್ಟ್ ರಸ್ತೆಯಲ್ಲಿ (Airport Road) ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

    ಬೆಂಗಳೂರಿನಿಂದ ಏರ್‌ಪೋರ್ಟ್ ಕಡೆಗೆ ಸಾಗುವ ಮಾರ್ಗದಲ್ಲಿ ಸರಣಿ ಅಪಘಾತ ನಡೆದಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ. ಅಪಘಾತದ ಪರಿಣಾಮ ಟ್ರಾಫಿಕ್ ಜಾಮ್ (Traffic Jam) ಉಂಟಾಗಿ ಮೂರರಿಂದ ನಾಲ್ಕು ಕಿ.ಮೀವರೆಗೆ ವಾಹನಗಳು ರಸ್ತೆಯಲ್ಲೇ ನಿಂತಿವೆ. ಇದನ್ನೂ ಓದಿ:  ಇರಾನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ – ದೆಹಲಿಗೆ ಬಂದ ನಂತ್ರ ಕಳಪೆ ಬಸ್ಸು ನೀಡಿದ್ದಕ್ಕೆ ಆಕ್ರೋಶ

    ಸದ್ಯ ಸಂಚಾರಿ ಪೊಲೀಸರು ಅಪಘಾತವಾಗಿರುವ ವಾಹನಗಳನ್ನು ಕ್ಲಿಯರ್ ಮಾಡುತ್ತಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಲ್ಲಿ ನಿರತರಾಗಿದ್ದಾರೆ. ಇದನ್ನೂ ಓದಿ: 2 ಗಂಟೆ ಹಾರಾಟದ ಬಳಿಕ ತಾಂತ್ರಿಕ ದೋಷ – ಲೇಹ್‌ಗೆ ಹೊರಟಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್‌

  • Bengaluru | ಬೇಸಿಗೆಯ ತಾಪಕ್ಕೆ ತಂಪೆರಿದ ವರುಣ – ಬೆಂಗಳೂರಿನ ಹಲವೆಡೆ ಮಳೆಯ ಸಿಂಚನ

    Bengaluru | ಬೇಸಿಗೆಯ ತಾಪಕ್ಕೆ ತಂಪೆರಿದ ವರುಣ – ಬೆಂಗಳೂರಿನ ಹಲವೆಡೆ ಮಳೆಯ ಸಿಂಚನ

    ಬೆಂಗಳೂರು: ಬೇಸಿಗೆಯ ಬಿರುಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರಿಗೆ (Bengaluru) ವರುಣ ಸಿಂಚನವಾಗಿದೆ. ನಗರದ ಹಲವೆಡೆ ಇಂದು (ಮಂಗಳವಾರ) ಮಳೆಯಾಗಿದ್ದು, ಸಿಲಿಕಾನ್‌ ಸಿಟಿ ಕೂಲ್‌ ಕೂಲ್‌ ಆಗಿದೆ.

    ಬಿರು ಬಿಸಿಲಿನಿಂದ ಬೇಯುತ್ತಿದ್ದ ಬೆಂದಕಾಳೂರಿನ ಜನರಿಗೆ ಮಳೆಯು ತಂಪು-ತಂಪು, ಕೂಲ್‌ ಕೂಲ್‌ ಅನುಭವ ನೀಡಿದೆ. ಇದನ್ನೂ ಓದಿ: ಆಸ್ಪತ್ರೆಯ ಡ್ರೆಸ್ ರೂಮ್‍ನಲ್ಲಿ ಕ್ಯಾಮೆರಾ ಇರಿಸಿದ್ದ ಟ್ರೈನಿ ನರ್ಸ್ ಅರೆಸ್ಟ್!

    ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಆನಂದ್ ರಾವ್ ಸರ್ಕಲ್, ಕೆ.ಜಿ ರೋಡ್, ಶಿವಾನಂದ ಸರ್ಕಲ್ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಿದೆ. ಇದನ್ನೂ ಓದಿ: ಈ ವರ್ಷ ನಬಾರ್ಡ್‌ನಿಂದ ರಾಜ್ಯಕ್ಕೆ ಕಡಿಮೆ ಅನುದಾನ – ಕೆ.ಎನ್ ರಾಜಣ್ಣ ಅಸಮಾಧಾನ

    ಸಂಜೆ ಕೆಲಸ ಮುಗಿಸಿ ಮನೆಗೆ ಹೊರಟ್ಟಿದ್ದವರಿಗೆ ವರುಣ ದೇವ ಮಳೆಯ ಸ್ವಾಗತ ನೀಡಿದ್ದಾನೆ. ಆದ್ರೆ ಏಕಾಏಕಿ ಬಂದ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ. ಹಲವಡೆ ಟ್ರಾಫಿಕ್ ಜಾಮ್ ಉಂಟಾಗಿದೆ.

  • ಬೆಂಗಳೂರು – ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಬಿಬಿಎಂಪಿ ಪ್ಲ್ಯಾನ್‌

    ಬೆಂಗಳೂರು – ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಬಿಬಿಎಂಪಿ ಪ್ಲ್ಯಾನ್‌

    ಬೆಂಗಳೂರು: ನಗರದ ವಾಹನ ಸವಾರರು ಅದರಲ್ಲೂ ಬೆಂಗಳೂರು – ತುಮಕೂರು ರಾಷ್ಟ್ರೀಯ ಹೆದ್ದಾರಿಯ (Bengaluru – Tumkur National Highway) ವಾಹನ ಸವಾರರು ನೋಡಲೇಬೇಕಾದ ಸ್ಟೋರಿ ಇದು. ದಿನೇ ದಿನೇ ಬೆಂಗಳೂರು – ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಜಾಸ್ತಿ ಆಗ್ತಾ ಇದ್ದು ಬಿಬಿಎಂಪಿ ಟ್ರಾಫಿಕ್ ಜಾಮ್ (Traffic Jam) ನಿಯಂತ್ರಣ ಮಾಡೋಕೆ ಹಲವು ಯೋಜನೆ ಹಾಕಿಕೊಂಡಿದೆ. ಹಾಗಾಗಿ ಟ್ರಾಫಿಕ್ ಜಾಮ್ ಸರ್ವೆ ನಡೆಸಿದೆ. ಇದನ್ನೂ ಓದಿ: ಗಣರಾಜ್ಯೋತ್ಸವ ಪರೇಡ್‌ಗೆ ಮತ್ತೆ ದೆಹಲಿ ಟ್ಯಾಬ್ಲೋ ತಿರಸ್ಕಾರ – ಆಪ್‌, ಬಿಜೆಪಿ ನಡುವೆ ವಾಗ್ವಾದ

    ಎಲ್ಲಿ ಟ್ರಾಫಿಕ್ ಜಾಮ್ ಆಗ್ತಿದೆ? ಒಂದು ಸ್ಟೇಜ್‌ನಿಂದ ಮತ್ತೊಂದು ಸ್ಟೇಜ್‌ಗೆ ತಲುಪಲು ಎಷ್ಟು ಸಮಯ ಹಿಡಿಯುತ್ತೆ ಅಂತಾ ಸರ್ವೆ ಮಾಡಿದೆ. ಬೆಂಗಳೂರು – ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಯಶವಂತಪುರದಿಂದ 8ನೇ ಮೈಲಿ ನೈಸ್ ರಸ್ತೆ ತಲುಪಲು ಟ್ರಾಫಿಕ್‌ನಿಂದ ಹೆಚ್ಚು ಸಮಯ ತೆಗೆದುಕೊಳ್ತಿದೆ ಎಂಬ ಸರ್ವೆ ಲೆಕ್ಕಾಚಾರ ಇಲ್ಲಿದೆ. ಇದನ್ನೂ ಓದಿ: ಉಪನ್ಯಾಸಕನ ಮೇಲೆ ವಿದ್ಯಾರ್ಥಿ, ಪೋಷಕರಿಂದ ಹಲ್ಲೆ – ದೂರು ದಾಖಲು

    * ಯಶವಂತಪುರ ಬಿಎಂಟಿಸಿ ಬಸ್ ಸ್ಟಾಪ್ ಟು ಯಶವಂತಪುರ ಸ್ಕೈವಾಕ್‌
    ಅಂತರ – 0.8 ಕಿಮೀ
    ಟ್ರಾಫಿಕ್ ಇದ್ದರೆ – 197 ಸೆಕೆಂಡ್
    ಟ್ರಾಫಿಕ್ ಇಲ್ಲದಿದ್ದರೆ – 117 ಸೆಕೆಂಡ್
    ತಡ – 80 ಸೆಕೆಂಡ್

    * ಯಶವಂತಪುರ ಸ್ಕೈವಾಕ್ ಟು ಎಂಇಐ ಜಂಕ್ಷನ್
    ಅಂತರ – 1.2 ಕಿಮೀ
    ಟ್ರಾಫಿಕ್ ಇದ್ದರೆ – 287 ಸೆಕೆಂಡ್
    ಟ್ರಾಫಿಕ್ ಇಲ್ಲದಿದ್ದರೆ- 224 ಸೆಕೆಂಡ್
    ತಡ – 63 ಸೆಕೆಂಡ್

    * ಎಂಇಐ ಜಂಕ್ಷನ್ ಟು ಗೊರಗುಂಟೆ ಪಾಳ್ಯ
    ಅಂತರ – 0.6 ಕಿಮೀ
    ಟ್ರಾಫಿಕ್ ಇದ್ದರೆ – 128 ಸೆಕೆಂಡ್
    ಟ್ರಾಫಿಕ್ ಇಲ್ಲದಿದ್ದರೆ- 107 ಸೆಕೆಂಡ್
    ತಡ – 21 ಸೆಕೆಂಡ್

    * ಗೊರಗುಂಟೆ ಪಾಳ್ಯ ಟು ಓಆರ್‌ಆರ್ ಜಂಕ್ಷನ್
    ಅಂತರ – 0.5 ಕಿಮೀ
    ಟ್ರಾಫಿಕ್ ಇದ್ದರೆ – 120 ಸೆಕೆಂಡ್
    ಟ್ರಾಫಿಕ್ ಇಲ್ಲದಿದ್ದರೆ- 69 ಸೆಕೆಂಡ್
    ತಡ – 51 ಸೆಕೆಂಡ್

    * ಎಸ್‌ಆರ್‌ಎಸ್ ಜಂಕ್ಷನ್ ಟು ಪೀಣ್ಯ ಜಂಕ್ಷನ್ ಪಿಲ್ಲರ್
    ಅಂತರ – 1 ಕಿಮೀ
    ಟ್ರಾಫಿಕ್ ಇದ್ದರೆ- 112 ಸೆಕೆಂಡ್
    ಟ್ರಾಫಿಕ್ ಇಲ್ಲದಿದ್ದರೆ – 96 ಸೆಕೆಂಡ್
    ತಡ – 16 ಸೆಕೆಂಡ್

    * ಪೀಣ್ಯ ಜಂಕ್ಷನ್ ಟು ಜಾಲಹಳ್ಳಿ
    ಅಂತರ – 0.5 ಕಿಮೀ
    ಟ್ರಾಫಿಕ್ ಇದ್ದರೆ- 65 ಸೆಕೆಂಡ್
    ಟ್ರಾಫಿಕ್ ಇಲ್ಲದಿದ್ದರೆ -55 ಸೆಕೆಂಡ್
    ತಡ – 10 ಸೆಕೆಂಡ್

    * ಜಾಲಹಳ್ಳಿ ಟು ದಾಸರಹಳ್ಳಿ ಜಂಕ್ಷನ್
    ಅಂತರ – 0.8 ಕಿಮೀ
    ಟ್ರಾಫಿಕ್ ಇದ್ದರೆ- 143 ಸೆಕೆಂಡ್
    ಟ್ರಾಫಿಕ್ ಇಲ್ಲದಿದ್ದರೆ – 110 ಸೆಕೆಂಡ್
    ತಡ – 33 ಸೆಕೆಂಡ್

    * ದಾಸರಹಳ್ಳಿ ಜಂಕ್ಷನ್ ಟು ಎಂಟನೇ ಮೈಲಿ
    ಅಂತರ – 0.6 ಕಿಮೀ
    ಟ್ರಾಫಿಕ್ ಇದ್ದರೆ- 88 ಸೆಕೆಂಡ್
    ಟ್ರಾಫಿಕ್ ಇಲ್ಲದಿದ್ದರೆ- 47 ಸೆಕೆಂಡ್
    ತಡ – 41 ಸೆಕೆಂಡ್

    * 8ನೇ ಮೈಲಿ ಟು ನೈಸ್ ರೋಡ್
    ಅಂತರ – 4 ಕಿಮೀ
    ಟ್ರಾಫಿಕ್ ಇದ್ದರೆ- 312 ಸೆಕೆಂಡ್
    ಟ್ರಾಫಿಕ್ ಇಲ್ಲದಿದ್ದರೆ- 290 ಸೆಕೆಂಡ್
    ತಡ – 22 ಸೆಕೆಂಡ್

  • ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ – ಟ್ರಾಫಿಕ್ ಜಾಮ್, ಕಿಲೋ ಮೀಟರ್‌ಗಟ್ಟಲೇ ನಿಂತ ವಾಹನಗಳು

    ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ – ಟ್ರಾಫಿಕ್ ಜಾಮ್, ಕಿಲೋ ಮೀಟರ್‌ಗಟ್ಟಲೇ ನಿಂತ ವಾಹನಗಳು

    – ನಗರದಲ್ಲಿ ಮುಂದಿನ 48 ಗಂಟೆ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ (Fengal Cyclone) ಬಿಸಿ ಬೆಂಗಳೂರಿಗೂ ತಟ್ಟಿದೆ. ಬೆಂಗಳೂರಿನಲ್ಲಿ (Bengaluru)  ಜಿಟಿಜಿಟಿ ಮಳೆಯಾಗುತ್ತಿರುವ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ.

    ಮೆಜೆಸ್ಟಿಕ್, ಓಕಳಿಪುರಂ, ಮಾಗಡಿ ರೋಡ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ. ಸುಮಾರು ಒಂದು ಗಂಟೆಯಿಂದ ಜಾಮ್ ಉಂಟಾಗಿದ್ದು, ಕಿಲೋ ಮೀಟರ್‌ಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿವೆ. ಮಳೆ ಮಧ್ಯೆ ವಾಹನ ಸವಾರರು ಟ್ರಾಫಿಕ್‌ನಲ್ಲಿ ಸಿಲುಕಿದ್ದಾರೆ. ಇದನ್ನೂ ಓದಿ: ಸಿಎಂ, ಡಿಸಿಎಂ ನಿಜವಾದ ಕಾನೂನು ಪಾಲಕರಾಗಿದ್ರೆ ನಾನು ಸಾಷ್ಟಾಂಗ ನಮಸ್ಕಾರ ಮಾಡ್ತೇನೆ – ಅಶ್ವಥ್ ನಾರಾಯಣ

    ಇನ್ನು ಹೆಬ್ಬಾಳ ಫ್ಲೈಓವರ್ ಮಾರ್ಗದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಿಮಾನ ನಿಲ್ದಾಣದಿಂದ ಹೆಬ್ಬಾಳದ ಕಡೆ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಆನೇಕಲ್ | ಸಿಲಿಂಡರ್ ಸ್ಫೋಟಗೊಂಡು ಮೂವರು ಕಾರ್ಮಿಕರು ಗಂಭೀರ

    ಎರಡು ದಿನದಿಂದ ಬಿಸಿಲು ಕಾಣದ ಸಿಲಿಕಾನ್ ಸಿಟಿ ಜನರಿಗೆ ಮತ್ತಷ್ಟು ಮಳೆಯ ಕಾಟ ಎದುರಾಗಲಿದ್ದು, ಮುಂದಿನ 2-3 ದಿನ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮಂಡ್ಯ, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಂಭವವಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಇದನ್ನೂ ಓದಿ: ಉತ್ತರ ಕನ್ನಡ| ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ದುರ್ಮರಣ

    ಭಾನುವಾರ ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ?
    ಚಾಮರಾಜನಗರ: 89 ಎಂಎಂ
    ರಾಮನಗರ: 69 ಎಂಎಂ
    ಮಂಡ್ಯ: 41 ಎಂಎಂ
    ಬೆಂಗಳೂರು ಗ್ರಾಮಾಂತರ: 38 ಎಂಎಂ
    ಕೋಲಾರ: 37 ಎಂಎಂ
    ಮೈಸೂರು: 36 ಎಂಎಂ
    ತುಮಕೂರು: 34 ಎಂಎಂ
    ಚಿಕ್ಕಬಳ್ಳಾಪುರ: 38 ಎಂಎಂ
    ಕೊಡಗು: 26 ಎಂಎಂ
    ಬೆಂಗಳೂರು: 22 ಎಂಎ