Tag: ಟ್ರೆಂಟ್ ಬೋಲ್ಟ್

  • IPL 2023: ಯಶಸ್ವಿ, ಬಟ್ಲರ್‌ ಬೊಂಬಾಟ್‌ ಬ್ಯಾಟಿಂಗ್‌ – ರಾಜಸ್ಥಾನ್‌ಗೆ 57 ರನ್‌ಗಳ ಭರ್ಜರಿ ಜಯ

    IPL 2023: ಯಶಸ್ವಿ, ಬಟ್ಲರ್‌ ಬೊಂಬಾಟ್‌ ಬ್ಯಾಟಿಂಗ್‌ – ರಾಜಸ್ಥಾನ್‌ಗೆ 57 ರನ್‌ಗಳ ಭರ್ಜರಿ ಜಯ

    – ಡೇವಿಡ್‌ ವಾರ್ನರ್‌ ಏಕಾಂಗಿ ಹೋರಾಟ ವ್ಯರ್ಥ

    ಗುವಾಹಟಿ: ಜೋಸ್‌ ಬಟ್ಲರ್‌ (Jos Buttler), ಯಶಸ್ವಿ ಜೈಸ್ವಾಲ್‌ (Yashasvi Jaiswal) ಬೊಂಬಾಟ್‌ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ರಾಜಸ್ಥಾನ್‌ ರಾಯಲ್ಸ್‌ ತಂಡ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 57 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಅಸ್ಸಾಂನ ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್‌ (Rajasthan Royals) ತಂಡ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿತು. 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು. ಬರೋಬ್ಬರಿ 200 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಡೇವಿಡ್‌ ವಾರ್ನರ್‌ (DavidWarner) ಏಕಾಂಗಿ ಹೋರಾಟದಿಂದ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 142 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪರ ನಾಯ ಡೇವಿಡ್‌ ವಾರ್ನರ್‌ ಒಬ್ಬರೇ ಏಕಾಂಗಿ ಹೋರಾಟ ನಡೆಸಿದರು. ರಾಜಸ್ಥಾನ್‌ ಬೌಲರ್‌ಗಳ ಸಂಘಟಿತ ದಾಳಿಗೆ ಬೆಚ್ಚಿದ ಡೆಲ್ಲಿ ಕ್ಯಾಪಿಟಲ್ಸ್‌ ಪವರ್‌ಪ್ಲೇನಲ್ಲೇ 38 ರನ್‌ಗಳಿಗೆ ಪ್ರಮುಖ 3 ವಿಕೆಟ್‌ಗಳನ್ನ ಕಳೆದುಕೊಂಡಿತ್ತು. ಆರಂಭಿಕನಾಗಿ ಕಣಕ್ಕಿಳಿದ ವಾರ್ನರ್‌ 19ನೇ ಓವರ್‌ವರೆಗೂ ಹೋರಾಡಿ 65 ರನ್‌ (55 ಎಸೆತ, 7 ಬೌಂಡರಿ) ಗಳಿಸಿದರು. ಇದರೊಂದಿಗೆ ಲಲಿತ್‌ ಯಾದವ್‌ 38 ರನ್‌ (24 ಎಸೆತ, 5 ಬೌಂಡರಿ) ಗಳಿಸಿ ತಂಡಕ್ಕೆ ನೆರವಾದರು. ಉಳಿದವರು ರಾಜಸ್ಥಾನ್‌ ಬೌಲರ್‌ಗಳ ದಾಳಿಗೆ ತತ್ತರಿಸಿದರು. ಅಂತಿಮವಾಗಿ 20 ಓವರ್‌ಗಳಲಿ 9 ವಿಕೆಟ್‌ ನಷ್ಟಕ್ಕೆ 142 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ರಾಜಸ್ಥಾನ್‌ ರಾಯಲ್ಸ್‌ ಪರ ಟ್ರೆಂಟ್‌ ಬೋಲ್ಟ್‌, ಯಜುವೇಂದ್ರ ಚಾಹಲ್‌ ತಲಾ 3 ವಿಕೆಟ್‌ ಪಡೆದರೆ, ರವಿಚಂದ್ರನ್‌ ಅಶ್ವಿನ್‌ 2 ವಿಕೆಟ್‌ ಹಾಗೂ ಸಂದೀಪ್‌ ಶರ್ಮಾ 1 ವಿಕೆಟ್‌ ಕಿತ್ತರು.

    ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ ಪರ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ನೀಡಿದರು. ಮೊದಲ ಓವರ್‌ನಲ್ಲಿಯೇ ಬರೋಬ್ಬರಿ 5 ಬೌಂಡರಿಗಳೊಂದಿಗೆ 20 ರನ್‌ ಚಚ್ಚಿದರು. ಈ ಮೂಲಕ 2023ರ ಐಪಿಎಲ್‌ನಲ್ಲಿ ಮೊದಲ ಓವರ್ ನಲ್ಲೇ ಅತಿ ಹೆಚ್ಚು ರನ್ ದಾಖಲಾಯಿತು. ಯಶಸ್ವಿಯೊಂದಿಗೆ ಜೊತೆಯಾದ ಬಟ್ಲರ್‌ ಸಹ ಭರ್ಜರಿ ಸಿಕ್ಸರ್‌, ಬೌಂಡರಿ ಚಚ್ಚಿದರು. ಪರಿಣಾಮ ಮೊದಲ ವಿಕೆಟ್‌ ಜೊತೆಯಾಟಕ್ಕೆ ಈ ಜೋಡಿ 8.3 ಓವರ್‌ಗಳಲ್ಲಿ ಈ ಜೋಡಿ ಬರೋಬ್ಬರಿ 98 ರನ್‌ ಕಲೆಹಾಕಿ, ದೊಡ್ಡ ಮೊತ್ತ ಗಳಿಸಲು ನೆರವಾಯಿತು.

    ಈ ವೇಳೆ ಜೈಸ್ವಾಲ್‌ 60 ರನ್‌ (31 ಎಸೆತ, 11 ಬೌಂಡರಿ, 1 ಸಿಕ್ಸರ್‌) ಬಾರಿಸಿ ಔಟಾದರು. ಈ ಬೆನ್ನಲ್ಲೇ ಸಂಜು ಸ್ಯಾಮ್ಸನ್‌ ಸಹ ಶೂನ್ಯ ಸುತ್ತಿ ನಿರ್ಗಮಿಸಿದರೆ, ರಿಯಾನ್‌ ಪರಾಗ್‌ ಕೇವಲ 7 ರನ್‌ ಗಳಿಸಿ ಹೊರನಡೆದರು. ಆದರೂ ಬಟ್ಲರ್‌ ಬ್ಯಾಟಿಂಗ್‌ ಅಬ್ಬರ ನಿಲ್ಲಲಿಲ್ಲ. ಬಳಿಕ 5ನೇ ವಿಕೆಟ್‌ಗೆ ಜೊತೆಯಾದ ಬಟ್ಲರ್‌ ಹಾಗೂ  ಹೆಟ್ಮೇಯರ್‌ 29 ಎಸೆತಗಳಲ್ಲಿ 49 ರನ್‌ ಕಲೆಹಾಕಿ ತಂಡಕ್ಕೆ ಚೇತರಿಕೆ ನೀಡಿತು. 51 ಎಸೆತಗಳಲ್ಲಿ 79 ರನ್‌ (11 ಬೌಂಡರಿ, 1 ಸಿಕ್ಸರ್)‌ ಚಚ್ಚಿ ಬಟ್ಲರ್‌ ಔಟಾದರು. ಕೊನೆಯಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ ಹೆಟ್ಮೇಯರ್‌ 21 ಎಸೆತಗಳಲ್ಲಿ ಸ್ಫೋಟಕ 39 ರನ್‌ (1 ಬೌಂಡರಿ, 4 ಸಿಕ್ಸರ್‌) ಚಚ್ಚಿದರೆ, ಧ್ರುವ್ ಜುರೆಲ್ 3 ಎಸೆತಗಳಲ್ಲಿ 1 ಸಿಕ್ಸರ್‌ನೊಂದಿಗೆ 8 ರನ್‌ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ ರಾಜಸ್ಥಾನ್‌ 20 ಓವರ್‌ಗಳಲ್ಲಿ 199 ರನ್‌ ಕಲೆಹಾಕಿತು.

    ಡೆಲ್ಲಿ ಕ್ಯಾಪಿಟಲ್ಸ್‌ ಪರ ಮುಕೇಶ್‌ ಕುಮಾರ್‌ 2 ವಿಕೆಟ್‌ ಕಿತ್ತರೆ, ಕುಲ್‌ದೀಪ್‌ ಯಾದವ್‌, ರೋವ್ಮನ್‌ ಪೋವೆಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ರನ್‌ ಏರಿದ್ದು ಹೇಗೆ?
    50 ರನ್‌, 24 ಎಸೆತ
    100 ರನ್‌, 55 ಎಸೆತ
    150 ರನ್‌, 99 ಎಸೆತ
    199 ರನ್‌, 120 ಎಸೆತ

  • ಟ್ರೆಂಟ್ ಬೋಲ್ಟ್ ವಿಕೆಟ್ ಹೇಗೆ ಪಡೆಯಬೇಕು? ಎಂಎಸ್‍ಡಿ ಸಲಹೆ ನೀಡುತ್ತಿದಂತೆ ಔಟ್- ವಿಡಿಯೋ

    ಟ್ರೆಂಟ್ ಬೋಲ್ಟ್ ವಿಕೆಟ್ ಹೇಗೆ ಪಡೆಯಬೇಕು? ಎಂಎಸ್‍ಡಿ ಸಲಹೆ ನೀಡುತ್ತಿದಂತೆ ಔಟ್- ವಿಡಿಯೋ

    ನೇಪಿಯರ್: ಟೀಂ ಇಂಡಿಯಾ ಕ್ರಿಕೆಟ್ ತಂಡಕ್ಕೆ ಧೋನಿ ನೀಡುವ ಸಲಹೆ ಮತ್ತಷ್ಟು ಅಗತ್ಯ ಎಂಬುದಕ್ಕೆ ಮತ್ತೊಂದು ಸಾಕ್ಷಿ ಲಭಿಸಿದ್ದು, ನ್ಯೂಜಿಲೆಂಡ್ ತಂಡದ ಬೋಲ್ಟ್ ವಿಕೆಟ್ ಪಡೆಯಲು ಕುಲ್ದೀಪ್ ಯಾದವ್ ಅವರಿಗೆ ಸಲಹೆ ನೀಡಿರುವ ವಿಡಿಯೋ ಲಭಿಸಿದೆ.

    ನೇಪಿಯರ್ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟೀಂ ಇಂಡಿಯಾ ಬೌಲರ್ ಗಳ ದಾಳಿಗೆ ಸಿಲುಕಿ 157 ರನ್ ಗಳಿಗೆ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇದೇ ವೇಳೆ ಟೀಂ ಇಂಡಿಯಾ ಕಿವೀಸ್ ತಂಡವನ್ನು ಬಹುಬೇಗ ಅಲೌಟ್ ಮಾಡಿ, ಭರ್ಜರಿ ಗೆಲುವು ಪಡೆಯುವ ನಿರೀಕ್ಷೆಯಲ್ಲಿತ್ತು. ಇದರಂತೆ 38ನೇ ಓವರ್ ಎಸೆದ ಕುಲ್ದೀಪ್ ಯಾದವ್‍ಗೆ ಧೋನಿ ಸಲಹೆ ನೀಡಿದ್ದರು. ಇದನ್ನು ಓದಿ:  ನ್ಯೂಜಿಲೆಂಡ್ ವಿರುದ್ಧ ಪಂದ್ಯಕ್ಕೆ ಸೂರ್ಯ ರಶ್ಮಿ ಅಡ್ಡಿ – 40 ನಿಮಿಷ ಆಟಕ್ಕೆ ಬ್ರೇಕ್!

    ಓವರ್ ನ ಅಂತಿಮ ಎಸೆತದಲ್ಲಿ ಬೋಲ್ಟ್ ಸ್ಟ್ರೈಕ್ ನಲ್ಲಿದ್ದು, ಈ ವೇಳೆ ಧೋನಿ, ಕುಲ್ದೀಪ್ ಯಾದವ್‍ಗೆ ಗೂಗ್ಲಿ ಎಸೆಯಲು ಸಲಹೆ ನೀಡಿದ್ದರು. ಧೋನಿ ಸಲಹೆಯಂತೆ ಕುಲ್ದೀಪ್ ಬೌಲ್ ಮಾಡುತ್ತಿದಂತೆ ಬ್ಯಾಟಿಗೆ ತಾಗಿದ ಚೆಂಡು ಸ್ಲಿಪ್ ನಲ್ಲಿದ್ದ ರೋಹಿತ್ ಶರ್ಮಾ ಕೈ ಸೇರಿತ್ತು. ಇದನ್ನು ಓದಿ: 10 ರನ್ ಗಳಿಸಿ ಲಾರಾ ದಾಖಲೆ ಸರಿಗಟ್ಟಿದ ಶಿಖರ್ ಧವನ್

    ರೋಹಿತ್ ಕ್ಯಾಚ್ ಪಡೆಯುತ್ತಿದಂತೆ ಕುಲ್ದೀಪ್ ಯಾದವ್ ಕೂಡ ಕ್ಷಣ ಕಾಲ ಅಚ್ಚರಿಗೊಂಡಿದ್ದರು. ಇತ್ತ ಧೋನಿ ತಂತ್ರಗಾರಿಕೆ ಯಶಸ್ವಿ ಆಗುವುದರೊಂದಿಗೆ ನ್ಯೂಜಿಲೆಂಡ್ 157 ರನ್ ಗಳಿಗೆ ಸರ್ವ ಪತನ ಕಂಡಿತು. ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್‍ಗಳ ಜಯ ಪಡೆಯಿತು. ಇದನ್ನು ಓದಿ: ನ್ಯೂಜಿಲೆಂಡ್ ಅಂತಿಮ 2 ಏಕದಿನ, ಟಿ20 ಸರಣಿಯಿಂದ ಕೊಹ್ಲಿಗೆ ವಿಶ್ರಾಂತಿ

    ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಬ್ಯಾಟಿಂಗ್ ನಲ್ಲಿ ಫಾರ್ಮ್ ಮರಳಿರುವುದು ತಂಡದ ಆತ್ಮಸ್ಥೈರ್ಯ ಹೆಚ್ಚಿಸಿದೆ. ಇತ್ತ ನಾಯಕ ಕೊಹ್ಲಿಗೆ ಬಿಸಿಸಿಐ ಗೆ ಅಂತಿಮ 2 ಪಂದ್ಯ ಹಾಗೂ ಟಿ20 ಸರಣಿಗೆ ವಿಶ್ರಾಂತಿ ನೀಡಿದ್ದು, ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ತಂಡದ ನಾಯಕತ್ವ ವಹಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv