Tag: ಟ್ರೇಲರ್

  • ಕೋಣ ಚಿತ್ರದ ಹೊಸ ಅವತಾರದಲ್ಲಿ ಕೋಮಲ್: ಟ್ರೇಲರ್‌  ರಿಲೀಸ್

    ಕೋಣ ಚಿತ್ರದ ಹೊಸ ಅವತಾರದಲ್ಲಿ ಕೋಮಲ್: ಟ್ರೇಲರ್‌ ರಿಲೀಸ್

    ಹಜಾಭಿನಯದ ಮೂಲಕ ಮನೆ ಮಾತಾಗಿರುವ ಕೋಮಲ್ ಕುಮಾರ್ (Komal) ಇದೀಗ ಕೋಣ (Kona) ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿಯಾಗುತ್ತಿದ್ದಾರೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದ್ದ ಕೋಣ ಚಿತ್ರದ ಟ್ರೇಲರ್ (Trailer) ಇದೀಗ ರಿಲೀಸ್ ಆಗಿದೆ. ಕಾಮಿಡಿ, ಆಕ್ಷನ್, ಸಸ್ಪೆನ್ಸ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಇಲ್ಲಿ ಕೋಮಲ್ ಹೊಸ ಅವತಾರದಲ್ಲಿ ಕಾಣಿಸುತ್ತಾರೆ.

    ನಿರ್ಮಾಣದಲ್ಲಿ ಕೈ ಜೋಡಿಸಿರುವ ತನಿಷಾ ಕುಪ್ಪಂಡ (Tanisha Kuppanda) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೀರ್ತಿರಾಜ್, ರಿತ್ವಿ ಜಗದೀಶ್, ನಮ್ರತಾ ಗೌಡ, ವಿನಯ್ ಗೌಡ, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ನಿರಂಜನ್, ಅನಂತ್, ಶಿಶಿರ್ ಶಾಸ್ತ್ರಿ, ಗೋಲ್ಡ್ ಸುರೇಶ್, ಸುಷ್ಮಿತ, ಜಗಪ್ಪ, ಮಂಜು ಪಾವಗಡ, ಕುರಿ ಸುನಿಲ್, ಮೋಹನ್ ಕೃಷ್ಣರಾಜ್ ಹೀಗೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.  ಇದನ್ನೂ ಓದಿ:  ಮೊದಲ ದಿನವೇ ಬುಕ್‌ಮೈಶೋದಲ್ಲಿ ದಾಖಲೆ ಬರೆದ ಕಾಂತಾರ

    ಡಾರ್ಕ್ ಕಾಮೆಡಿ ಶೈಲಿಯಲ್ಲಿ ‘ಕೋಣ’ ಸಿನಿಮಾ ಮೂಡಿಬರಲಿದೆ. ಜಗ್ಗೇಶ್ ನಟನೆಯ ‘8 MM’ ಸಿನಿಮಾಗೆ ನಿರ್ದೇಶನ ಮಾಡಿದ್ದ ಎಸ್. ಹರಿಕೃಷ್ಣ ಅವರು ಈ ಸಿನಿಮಾಗೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ನಾಗೇಶ್.ಎನ್ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಒಂದು ನೈಜ ಘಟನೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದ್ದು ತೆರೆಗೆ ಬರಲು ಸಿದ್ಧವಾಗಿದೆ. ಕೋಮಲ್ ಕುಮಾರ್ ಅವರು ಈವರೆಗೂ ಕಾಣಿಸಿಕೊಂಡಿರದ ಪಾತ್ರವನ್ನು ‘ಕೋಣ’ ಸಿನಿಮಾದಲ್ಲಿ ನಿಭಾಯಿಸಿದ್ದಾರೆ. ಇದನ್ನೂ ಓದಿKantara: Chapter 1ಗೆ ಭರ್ಜರಿ ರೆಸ್ಪಾನ್ಸ್  ಮೊದಲ ದಿನವೇ 55 ಕೋಟಿ ಗಳಿಕೆ

    ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಷಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್, ರವಿಕಿರಣ್ .ಎನ್ ಅವರು ‘ಕೋಣ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವೀನಸ್ ನಾಗರಾಜ್ಮೂರ್ತಿ ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದು ಇವರ ಜೊತೆ ವಿಶಾಲ್ ಗೌಡ ಸಹ ಕೈ ಜೋಡಿಸಿದ್ದಾರೆ. ಉಮೇಶ್ ಆರ್. ಬಿ. ಅವರ ಸಂಕಲನ ಚಿತ್ರಕ್ಕಿದೆ, ಸಾಹಸ ನಿರ್ದೇಶಕರಾಗಿ ವಿನೋದ್‌ ಕುಮಾರ್‌, ಮುರುಗನ್ ಅವರ ನೃತ್ಯ ನಿರ್ದೇಶನ ಹಾಗೂ ಶಶಿಕುಮಾರ್, ಸಂದೀಪ್ ಆಚಾರ್ಯ ಸಂಭಾಷಣೆ ಚಿತ್ರಕ್ಕಿದ್ದು ಕೋಣ ಚಿತ್ರ ಅದ್ಭುತವಾಗಿ ಮೂಡಿಬಂದಿದ್ದು ಪ್ರೇಕ್ಷಕರನ್ನ ಸೆಳೆಯುವಲ್ಲಿ ಅನುಮಾನವೇ ಇಲ್ಲ.

  • ʼದಿ ರಾಜಾಸಾಬ್’ ಟ್ರೈಲರ್ ರಿಲೀಸ್ : ಪ್ರಭಾಸ್ ಅಭಿಮಾನಿಗಳಿಗೆ ಸರ್ಪ್ರೈಸ್

    ʼದಿ ರಾಜಾಸಾಬ್’ ಟ್ರೈಲರ್ ರಿಲೀಸ್ : ಪ್ರಭಾಸ್ ಅಭಿಮಾನಿಗಳಿಗೆ ಸರ್ಪ್ರೈಸ್

    ರೆಬೆಲ್ ಸ್ಟಾರ್ ಪ್ರಭಾಸ್ (Prabhas) ಅವರ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಹಾರರ್-ಫ್ಯಾಂಟಸಿ ಡ್ರಾಮಾ ದಿ ರಾಜಾಸಾಬ್ (The Raja Saab) ಸಿನಿಮಾ ಮೇಲೆ ಎಲ್ಲರ ಕಣ್ಣಿದೆ. ನಿರೀಕ್ಷೆಯೂ ದುಪ್ಪಟ್ಟಾಗಿದೆ. ಕಳೆದ ವರ್ಷ, ಚಿತ್ರತಂಡವು ಪ್ಯಾನ್-ಇಂಡಿಯಾ ಝಲಕ್ ಮೂಲಕ ಕುತೂಹಲ ಕೆರಳಿಸಿತ್ತು. ಅದಾದ ಮೇಲೆ ಇದೇ ಜೂನ್‌ ತಿಂಗಳಿನಲ್ಲಿ ಟೀಸರ್ ಬಿಡುಗಡೆಯಾಗಿ ಕೌತುಕಕ್ಕೆ ಒಗ್ಗರಣೆ ಹಾಕಿತ್ತು. ಆ ಟೀಸರ್‌ನಲ್ಲಿ ಹಲವು ಶೇಡ್‌ಗಳಲ್ಲಿ ಪ್ರಭಾಸ್ ಕಾಣಿಸಿಕೊಂಡು, ಅಚ್ಚರಿ ಮೂಡಿಸಿದ್ದರು. ಇದೀಗ ಇದೇ ರಾಜಾಸಾಬ್ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.

    ಹೌದು, ಮಾರುತಿ ನಿರ್ದೇಶನದ ಬಹುನಿರೀಕ್ಷಿತ ‘ದಿ ರಾಜಾಸಾಬ್’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಇಲ್ಲೊಂದು ಟ್ವಿಸ್ಟ್ ಇದೆ. `ದಿ ರಾಜಾಸಾಬ್ʼ ಸಿನಿಮಾದ ಟ್ರೇಲರ್ ಮೊದಲಿಗೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುವ ಮೂಲಕ ಅಭಿಮಾನಿಗಳಿಗೆ ಹಬ್ಬದ ಉಡುಗೊರೆ ನೀಡಿದೆ. ಇದಾದ ಮೇಲೆ ಅಂತಿಮವಾಗಿ ಈ ಟ್ರೇಲರ್ (Trailer) ಎಲ್ಲೆಡೆ ಯಾವಾಗ, ಯಾವ ದಿನದಂದು ಬಿಡುಗಡೆ ಆಗಲಿದೆ ಎಂಬುದನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಲಿದೆ.  ಇದನ್ನೂ ಓದಿ: ನೋವಿನ ಸಂದರ್ಭದಲ್ಲಿ ಸಂಭ್ರಮ ಬೇಡವೆಂದು ಹಿಂದೆ ಸರಿದ ರಿಷಬ್ ಶೆಟ್ಟಿ


    ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆಯ ಈ ಮಹೋನ್ನತ ಪ್ರಾಜೆಕ್ಟ್‌ಗೆ ಟಿ.ಜಿ. ವಿಶ್ವ ಪ್ರಸಾದ್ ಬಂಡವಾಳ ಹೂಡುತ್ತಿದ್ದಾರೆ. ಪ್ರಭಾಸ್ ನಟನೆಯ ‘ದಿ ರಾಜಾಸಾಬ್’ ಸಿನಿಮಾ ಐದು ಭಾಷೆಗಳಲ್ಲಿ ಸಿದ್ಧವಾಗಿದೆ. ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ತಮನ್ ಎಸ್ ಅವರ ಸಂಗೀತ ಮತ್ತು ಮೈನವಿರೇಳಿಸುವ ದೃಶ್ಯಗಳು ಈ ಸಿನಿಮಾದ ಹೈಲೈಟ್ಸ್. ಇದನ್ನೂ ಓದಿ:  ಮಳೆಯಲ್ಲಿ ರೋಷನ್ ಜೊತೆಯಲಿ ಅನುಶ್ರೀ ಜಾಲಿ ಟ್ರಿಪ್

    ಈ ಭರಪೂರ ಮನರಂಜನೆಯ ಪ್ಯಾನ್-ಇಂಡಿಯಾ ಸಿನಿಮಾದಲ್ಲಿ ರೆಬೆಲ್ ಸ್ಟಾರ್ ಪ್ರಭಾಸ್ ವರ್ಚಸ್ಸು ಸಂಪೂರ್ಣ ಬದಲಾಗಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಬಹುತಾರಾಗಣದ ಚಿತ್ರದಲ್ಲಿ ಸಂಜಯ್ ದತ್, ಜರೀನಾ ವಹಾಬ್, ಬೋಮನ್ ಇರಾನಿ, ನಿಧಿ ಅಗರವಾಲ್, ಮಾಳವಿಕಾ ಮೋಹನನ್ ಮತ್ತು ರಿದ್ಧಿ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಟಿ.ಜಿ. ವಿಶ್ವ ಪ್ರಸಾದ್ ಮತ್ತು ಕೃತಿ ಪ್ರಸಾದ್ ಅವರು ಪೀಪಲ್ ಮೀಡಿಯಾ ಫ್ಯಾಕ್ಟರಿ ಅಡಿಯಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
  • ಪ್ರಭಾಸ್ ನಟನೆಯ ರಾಜಾಸಾಬ್ ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್

    ಪ್ರಭಾಸ್ ನಟನೆಯ ರಾಜಾಸಾಬ್ ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್

    ಟ ಪ್ರಭಾಸ್ (Prabhas) ಅಭಿನಯದ ರಾಜಾಸಾಬ್ ಸಿನಿಮಾದ ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಮುಂಚೆ ಟೀಸರ್ ರಿಲೀಸ್ ಆಗಿ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಇದೀಗ ಟ್ರೇಲರ್‌ ಇದೇ ಸೆಪ್ಟೆಂಬರ್‌ 29ರ ಸಂಜೆ 6ಕ್ಕೆ ರಿಲೀಸ್ ಆಗಲಿದೆ. ಪ್ರಭಾಸ್ ನಟನೆಯ ವಿಭಿನ್ನ ಕಾನ್ಸೆಪ್ಟ್‌ ಸಿನಿಮಾ ಇದಾಗಿದೆ. ಕಲ್ಕಿ 2898 ಎಡಿ ಸಿನಿಮಾ ನಂತರ ಬರುತ್ತಿರುವ ವಿಶಿಷ್ಟ ಸಿನಿಮಾ ರಾಜಾಸಾಬ್ ಆಗಿದೆ.

    ರಾಜಾಸಾಬ್ ಸಿನಿಮಾದಲ್ಲಿ ಪ್ರಭಾಸ್ ಜೊತೆ ಸಂಜಯ್ ದತ್, ನಿಧಿ ಅಗರವಾಲ್, ಮಾಳವಿಕಾ ಮೋಹನನ್, ರಿದ್ದಿ ಕುಮಾರ್ ಸೇರಿದಂತೆ ಅತಿದೊಡ್ಡ ತಾರಾಗಣ ಈ ಸಿನಿಮಾದಲ್ಲಿ ಇರಲಿದೆ. ಪ್ರಭಾಸ್ ಸಿನಿಮಾ ಕರಿಯರ್‌ನಲ್ಲೇ ವಿಭಿನ್ನವಾದ ಸಿನಿಮಾ ರಾಜಾಸಾಬ್ ಆಗಿದ್ದು, ಪ್ಯಾನ್ ಇಂಡಿಯಾ ಕಾನ್ಸೆಪ್ಟ್‌ನಲ್ಲಿ ತಯಾರಾಗಿದೆ.  ಇದನ್ನೂ ಓದಿ: ಬಿಗ್‌ಬಾಸ್‌ಗೆ ಯೂಟ್ಯೂಬ್ ಸ್ಟಾರ್ ರಕ್ಷಿತಾ ಶೆಟ್ಟಿ ಎಂಟ್ರಿ|


    ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ ಮಾರುತಿ. ಇನ್ನು ಈ ಸಿನಿಮಾಗೆ ಬಂಡವಾಳ ಹೂಡಿ ನಿರ್ಮಾಣ ಮಾಡಿರೋದು ಟಿಜಿ ವಿಶ್ವಪ್ರಸಾದ್, ವಿವೇಕ್ ಕುಚಿಬೊಟ್ಲಾ, ಇಶಾನ್ ಸಕ್ಸೇನಾ. ರಾಜಾಸಾಬ್ ಸಿನಿಮಾ ಇದೇ ಡಿಸೆಂಬರ್‌ನಲ್ಲಿ ತೆರೆಗೆ ಬರುವ ತಯಾರಿಯನ್ನ ಮಾಡಿಕೊಂಡಿತ್ತು. ಇದೀಗ ಈ ಸಿನಿಮಾ 2026ರ ಜನವರಿ 9ಕ್ಕೆ ರಿಲೀಸ್ ಆಗಲಿದೆ. ಪ್ರಭಾಸ್ ಅಭಿಮಾನಿಗಳಿಗೆ ಹೊಸ ರೀತಿಯ ಎಂಟರ್‌ಟೈನ್ಮೈಂಟ್‌ ನೀಡಲಿದೆ ರಾಜಾಸಾಬ್. ಸದ್ಯ ಟ್ರೇಲರ್‌ ಹೇಗಿರಲಿದೆ ಎನ್ನುವ ಕುತೂಹಲ ಮೂಡಿದೆ.

  • ಜಮಾಲಿ ಗುಡ್ಡ ಚಿತ್ರದ ಟ್ರೇಲರ್ ರಿಲೀಸ್ : ಡಿಸೆಂಬರ್ 30ರಂದು ತೆರೆಗೆ

    ಜಮಾಲಿ ಗುಡ್ಡ ಚಿತ್ರದ ಟ್ರೇಲರ್ ರಿಲೀಸ್ : ಡಿಸೆಂಬರ್ 30ರಂದು ತೆರೆಗೆ

    ಟ ರಾಕ್ಷಸ ಎಂದೇ ಖ್ಯಾತರಾಗಿರುವ ಡಾಲಿ ಧನಂಜಯ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿರುವ  “once upon  a time in ಜಮಾಲಿಗುಡ್ಡ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ಈ ಚಿತ್ರ ಒಂದು ಕಾಲ್ಪನಿಕ ಪ್ರಪಂಚ. ಜೊತೆಗೆ ಭಾವನಾತ್ಮಕ ಪಯಣ ಕೂಡ. ಧನಂಜಯ ಹಾಗೂ ಬೇಬಿ‌ ಪ್ರಾಣ್ಯ ನಡುವಿನ ಸನ್ನಿವೇಶಗಳು ಸುಂದರವಾಗಿ ಮೂಡಿಬಂದಿದೆ. 95 – 96 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಿದು. ಚಿಕ್ಕಮಗಳೂರಿನ ಬಾಬಾಬುಡನಗಿರಿಯ ಸೊಬಗು ಚಿತ್ರದ ಮತ್ತೊಂದು ಹೈಲೈಟ್. ಅಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ. “ಜಮಾಲಿ ಗುಡ್ಡ” ಚಿತ್ರ ಉತ್ತಮವಾಗಿ ಮೂಡಿಬರಲು ನಿರ್ಮಾಪಕರು ಹಾಗೂ ಇಡೀ ಚಿತ್ರತಂಡದ ಸಹಕಾರ ಕಾರಣ ಎಂದರು ನಿರ್ದೇಶಕ ಕುಶಾಲ್ ಗೌಡ.

    “ಜಮಾಲಿಗುಡ್ಡ” ಈ ವರ್ಷದ ನನ್ನ ನಟನೆಯ 6 ನೇ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಇದೊಂದು ಫೀಲ್ ಗುಡ್ ಸಿನಿಮಾ.‌ ಕುಟುಂಬ ಸಮೇತರಾಗಿ ಬಂದು ನೋಡಬಹುದಾದ ಚಿತ್ರ. ಕುಶಾಲ್ ಗೌಡ ಅವರು ಈ ಚಿತ್ರಕ್ಕಾಗಿ ಫೇಸ್ ಬುಕ್ ಮೂಲಕ ನಿರ್ಮಾಪಕರನ್ನು ಹುಡುಕಿದರು. ಆಗ ಶ್ರೀಹರಿ ಸಿಕ್ಕರು. ನಾನು‌ ಕೂಡ ಬ್ಯುಸಿ ಇದ್ದೆ. ಆದರೆ, ಹೆಚ್ಚಿನ ಚಿತ್ರೀಕರಣ ಬಾಬಾಬುಡನಗಿರಿಯಲ್ಲೇ ನಡೆಯಬೇಕಿತ್ತು. ಅದರಲ್ಲೂ  ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ವಾತಾವರಣದಲ್ಲೇ ಚಿತ್ರೀಕರಣ ನಡೆಯಬೇಕಾಗಿದ್ದರಿಂದ ಬೇಗ ಈ ಚಿತ್ರೀಕರಣದಲ್ಲಿ ಪಾಲ್ಗೊಂಡೆ.   ಛಾಯಾಗ್ರಾಹಕ ಕಾರ್ತಿಕ್ ಸೇರಿದಂತೆ ಇಡೀ ತಂತ್ರಜ್ಞರ ಕಾರ್ಯವೈಖರಿ ಹಾಗೂ ಅದಿತಿ ಪ್ರಭುದೇವ ಅವರ ಆದಿಯಾಗಿ ಎಲ್ಲಾ ಕಲಾವಿದರ ಅಭಿನಯ  ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ. ನಿರ್ಮಾಪಕರು ಮತ್ತಷ್ಟು ಚಿತ್ರ ನಿರ್ಮಾಣ ಮಾಡಲಿ ಎಂದರು ನಾಯಕ ಡಾಲಿ ಧನಂಜಯ.

    ಈ ಚಿತ್ರ ನನ್ನ ವೃತ್ತಿ ಬದುಕಿನಲ್ಲಿ ಸದಾ ನೆನಪಿನಲ್ಲಿ ಉಳಿಯುವ ಸಿನಿಮಾವಾಗಲಿದೆ. ಈ ಚಿತ್ರದ ಭಾವನಾತ್ಮಕ ಸನ್ನಿವೇಶಗಳಲ್ಲಿ ನಾನು ಎಷ್ಟೋ ಕಡೆ ಸಹಜವಾಗಿ ಅತ್ತಿದ್ದು ಇದೆ. ಅಂತಹ ಅದ್ಭುತ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಧನಂಜಯ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹ ನಮ್ಮ ಚಿತ್ರದ ಮೇಲಿರಲಿ ಎಂದರು ನಟಿ ಅದಿತಿ ಪ್ರಭುದೇವ. ಇದನ್ನೂ ಓದಿ: ದೀಪಿಕಾ ಅಸಭ್ಯ ನೃತ್ಯ ಸಿನಿಮಾ ನೋಡದಂತೆ ಮಾಡಿದೆ – `ಪಠಾಣ್’ ಹೆಸರು ಬಳಕೆಗೆ ಮುಸ್ಲಿಂ ಧರ್ಮಗುರು ಆಕ್ಷೇಪ

    ನಾನು ಮೂಲತಃ ಚಿತ್ರೋದ್ಯಮಿ ಅಲ್ಲ. ನಮ್ಮದೇ ಬೇರೆ ಉದ್ಯಮ ಇದೆ. ಆದರೆ ನನಗೆ ಇಪ್ಪತ್ತು ವರ್ಷಗಳ ಹಿಂದೆ ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು. ಅದು ಆಗಲಿಲ್ಲ. ಈಗ ನಿರ್ಮಾಪಕನಾಗಿದ್ದೇನೆ. ಡಿಸೆಂಬರ್ 30ರಂದು ನಮ್ಮ ಚಿತ್ರ ತೆರೆಗೆ ಬರುತ್ತಿದೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ಮಾಪಕ ಶ್ರೀಹರಿ. ಚಿತ್ರದಲ್ಲಿ ನಟಿಸಿರುವ ಯಶ್ ಶೆಟ್ಟಿ, ರುಶಿಕಾ, ದಿವ್ಯ, ಪ್ರಾಣ್ಯ, ಸಂತು, ಸಂಕಲನಕಾರ ಹರೀಶ್ ಕೊಮ್ಮೆ ಮುಂತಾದವರು ಚಿತ್ರದ ಬಗ್ಗೆ ಮಾತನಾಡಿದರು. ಕಾರ್ತಿಕ್ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ತನುಜಾ’  ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಸಚಿವ ಸುಧಾಕರ್

    ‘ತನುಜಾ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಸಚಿವ ಸುಧಾಕರ್

    ಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಶಿವಮೊಗ್ಗದ ಕುಗ್ರಾಮದಿಂದ ಬೆಂಗಳೂರಿಗೆ ಬಂದು ತನುಜಾ ನೀಟ್ ಪರೀಕ್ಷೆ ಬರೆಯುತ್ತಾರೆ. ಆಕೆ ಪರೀಕ್ಷೆ ಬರೆಯಲು ಮುಖ್ಯ ಕಾರಣ ಆಗಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ಪತ್ರಕರ್ತರಾದ ವಿಶ್ವೇಶ್ವರ್ ಭಟ್ ರವರು ಹಾಗೂ ಪ್ರದೀಪ್ ಈಶ್ವರ್. ಇವರೆಲ್ಲರ ಸಹಾಯದಿಂದ ತನುಜಾ ನೀಟ್ ಪರೀಕ್ಷೆ ಬರೆದು, ಇಂದು ಬೆಳಗಾವಿಯಲ್ಲಿ ಎರಡನೇ ವರ್ಷದ ಎಂ.ಬಿ.ಬಿ.ಎಸ್ ಅಭ್ಯಾಸ ಮಾಡುತ್ತಿದ್ದಾರೆ. ಈ ವಿಷಯವನ್ನಿಟ್ಟುಕೊಂಡು  ಹರೀಶ್ ಎಂ ಡಿ ಹಳ್ಳಿ ಚಿತ್ರ  ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ವೈದ್ಯಕೀಯ ಸಚಿವರಾದ ಸುಧಾಕರ್  “ತನುಜಾ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಪತ್ರಕರ್ತರಾದ ವಿಶ್ವೇಶ್ವರ ಭಟ್ ರವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ನಾನು ಸಮಾನ್ಯವಾಗಿ ಎಲ್ಲರ ಟ್ವಿಟ್ ಫಾಲೋ ಮಾಡುತ್ತಿರುತ್ತೇನೆ. ನನ್ನ ಆತ್ಮೀಯ ಸ್ನೇಹಿತರಾದ ವಿಶ್ವೇಶ್ವರ ಭಟ್ ಅವರು ತನುಜಾ ನೀಟ್ ಪರೀಕ್ಷೆ ಬರೆಯಲು ಸಹಾಯ ಮಾಡುವಂತೆ ಟ್ವಿಟ್ ಮಾಡಿದ್ದನ್ನು  ಗಮನಿಸಿ, ಆ ಹುಡುಗಿ ಪರೀಕ್ಷೆ ಬರೆಯಲು ಸಹಾಯ ಮಾಡುವಂತೆ ದೆಹಲಿಯ ನೀಟ್ ಅಧಿಕಾರಿಗಳ ಜೊತೆ ಮಾತನಾಡಿದ್ದೆ.  ಈ ವಿಷಯದಲ್ಲಿ ನಮ್ಮ ನಾಯಕರೂ ಹಾಗೂ ಆಗ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರ ಸಹಕಾರವಂತೂ ಅಪಾರ. ಆಮೇಲೆ ವಿಶ್ವೇಶ್ವರ ಭಟ್ ಅವರು ನಿರ್ದೇಶಕ ಹರೀಶ್ ಅವರನ್ನು ಪರಿಚಯ ಮಾಡಿಸಿ, ತನುಜಾ ಕುರಿತಾದ ಸಿನಿಮಾ ಮಾಡುತ್ತಿದ್ದಾರೆ‌ ಎಂದರು. ಹರೀಶ್ ಅವರು ನೀವು ಸಹ ಸಚಿವರಾಗಿಯೇ ಇದರಲ್ಲಿ ಅಭಿನಯಿಸಬೇಕು ಎಂದರು. ಡಾಕ್ಟರ್ ಆಗಿರುವ ನನ್ನನ್ನು ಆಕ್ಟರ್ ಮಾಡಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆ ತನುಜಾ ಅಂದುಕೊಂಡಿದ್ದನ್ನು ಸಾಧಿಸಿ ವೈದ್ಯೆ ಆಗುತ್ತಿದ್ದಾಳೆ. ಈ ಸಿನಿಮಾ “ತನುಜಾ” ಕೂಡ ಯಶಸ್ವಿಯಾಗಲಿ ಎಂದು ಸಚಿವ ಸುಧಾಕರ್ ಹಾರೈಸಿದರು. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ನನ್ನ ಪರಿಚಯದವರೊಬ್ಬರಿಂದ ಕೋವಿಡ್ ಸಮಯದಲ್ಲಿ ತನುಜಾ ಪರೀಕ್ಷೆ ‌ಬರೆಯಲು ಮುಂದಾಗಿರುವ ವಿಷಯ ತಿಳಿಯಿತು. ತಕ್ಷಣ ನಾನು ಈ ವಿಷಯದ ಕುರಿತು ಟ್ವಿಟ್ ಮಾಡಿದೆ. ತನುಜಾ ತಾಯಿ ಸಹ ನನಗೆ ಫೋನ್ ಮಾಡಿ ಮಗಳು ಪರೀಕ್ಷೆ ಬರೆಯಲು ಸಹಾಯ ಮಾಡುವಂತೆ ಕೇಳಿಕೊಂಡರು. ನನ್ನ ಟ್ವಿಟ್ ಗೆ ಕೊರೋನ ಅಂತಹ ಕಷ್ಟ ಸಮಯದಲ್ಲಿ, ಅದರಲ್ಲೂ ಅವರೆ ಆರೋಗ್ಯ ಸಚಿವರಾಗಿ ಸಾಕಷ್ಟು ಒತ್ತಡವಿದ್ದರೂ ನನ್ನ ಮನವಿಗೆ ಸ್ಪಂದಿಸಿ ತನುಜಾ ನೀಟ್ ಪರೀಕ್ಷೆ ಬರೆಯಲು ಸುಧಾಕರ್ ಸಹಾಯ ಮಾಡಿದರು. ಆಗ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರು ಆ ಹುಡಿಗಿಗೆ ನಮ್ಮ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು. ನಾನು ಈ ಘಟನೆಯನ್ನು ಅಂಕಣದಲ್ಲಿ ಬರೆದುಕೊಂಡಿದ್ದೆ. ಅಂಕಣ ಓದ್ದಿದ ಹರೀಶ್ ಚಿತ್ರ ಮಾಡಲು ಮುಂದಾದರು. ಕಷ್ಟಪಟ್ಟು ನಿರ್ಮಾಪಕರನ್ನು ಹುಡುಕಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಈ ಚಿತ್ರವನ್ನು ನೋಡಿ ಎಂದರು ಪತ್ರಕರ್ತ ವಿಶ್ವೇಶ್ವರ ಭಟ್.

    “ತನುಜಾ” ನಿಜಕ್ಕೂ ಎಲ್ಲಾ ವಿದ್ಯಾರ್ಥಿಗಳಿಗೂ ಸ್ಫೂರ್ತಿ. ಆಕೆಯ ಪಾತ್ರ ಮಾಡಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದರು ನಟಿ ಸಪ್ತ ಪಾವೂರ್. ನಟ ರಾಜೇಶ್ ನಟರಂಗ ಸಹ ತಮ್ಮ ಪಾತ್ರದ ಕುರಿತು ಮಾತನಾಡಿದರು. ತನುಜಾ ತಾಯಿ ಹಿರಿಯಮ್ಮ ಅವರು ಸಮಾರಂಭಕ್ಕೆ ಆಗಮಿಸಿ, ಮಗಳು ಪರೀಕ್ಷೆ ಬರೆಯಲು ಸಹಕಾರ ನೀಡಿದ್ದ ಸಕಲರಿಗೂ ಧನ್ಯವಾದ ತಿಳಿಸಿದರು. ಚಿತ್ರರಂಗ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

    Live Tv
    [brid partner=56869869 player=32851 video=960834 autoplay=true]

  • ‘ಧರಣಿ ಮಂಡಲ ಮಧ್ಯದೊಳಗೆ’ ಚಿತ್ರದ ಟ್ರೇಲರ್ ರಿಲೀಸ್

    ‘ಧರಣಿ ಮಂಡಲ ಮಧ್ಯದೊಳಗೆ’ ಚಿತ್ರದ ಟ್ರೇಲರ್ ರಿಲೀಸ್

    ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಮನದಲ್ಲಿ ಭರವಸೆಯ ಮುದ್ರೆ ಒತ್ತಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ರನ್ನು ಡಿಜಿಟಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ವೇದಿಕೆಯಲ್ಲಿ ನಾಯಕ ನಟ ವಸಿಷ್ಠ ಸಿಂಹ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಡಿಸೆಂಬರ್ 2ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಟ್ರೇಲರ್ ಹೊತ್ತು ಬಂದ ಸಿನಿಮಾ ತಂಡ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಸಿನಿಮಾದ ಕ್ಯೂರಿಯಾಸಿಟಿ ಹೊತ್ತ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು ಭರವಸೆ ಮೂಡಿಸಿದೆ. ಗುಲ್ಟು ಖ್ಯಾತಿಯ ನಟ ನವೀನ್ ಶಂಕರ್, ಐಶಾನಿ ಶೆಟ್ಟಿ ನಟಿಸಿರುವ ಈ ಚಿತ್ರವನ್ನು ಶ್ರೀಧರ್ ಶಿಕಾರಿಪುರ ನಿರ್ದೇಶನ ಮಾಡಿದ್ದಾರೆ.

    ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಟ ವಸಿಷ್ಠ ಸಿಂಹ ಚಿತ್ರದಲ್ಲಿ ಪ್ರತಿಯೊಂದು ಅಂಶಗಳು ಕೂಡ ಗಮನ ಸೆಳೆಯುತ್ತಿದೆ. ಯಂಗ್ ಟೀಂ ಸೇರಿಕೊಂಡು ಇಷ್ಟು ಒಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಅಂದ್ರೆ ತುಂಬಾ ಖುಷಿಯ ವಿಚಾರ. ಟ್ರೇಲರ್ ಬಹಳಾನೇ ಖುಷಿ ಕೊಡ್ತು. ಮ್ಯೂಸಿಕ್, ಡೈಲಾಗ್, ಕ್ಯಾಮೆರಾ ವರ್ಕ್ ತುಂಬಾನೇ ಚೆನ್ನಾಗಿ ಮೂಡಿ ಬಂದಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದ್ರು. ಚಿತ್ರದ ನಿರ್ದೇಶಕ ಶ್ರೀಧರ್ ಶಿಕಾರಿಪುರ ಮಾತನಾಡಿ ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ನಮ್ಮ ಸುತ್ತಮುತ್ತ ಇರುವವರ ಕಥೆಯೇ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ. ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಕಥಾಹಂದರದ ಸಿನಿಮಾವಿದು. ಬಾಕ್ಸಿಂಗ್ ನಲ್ಲಿ ಅಪಾರ ಆಸಕ್ತಿ ಇರುವ ಹುಡುಗನ ಬದುಕಿನಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆಯಲಾದ ಕಥೆ ಚಿತ್ರದಲ್ಲಿದೆ. ಪ್ರೀತಿ, ಸೆಂಟಿಮೆಂಟ್ ಎಳೆಯನ್ನೂ ಹೊತ್ತ ಈ ಚಿತ್ರ ಖಂಡಿತ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ ಎಂದು ತಿಳಿಸಿದ್ರು.

    ಗುಳ್ಟು ನಂತರ ಕೇಳಿದ ಇಂಟ್ರಸ್ಟಿಂಗ್ ಸಬ್ಜೆಕ್ಟ್ ಇರುವ ಕಥೆ ಇದಾಗಿದೆ. ಚಿತ್ರದಲ್ಲಿ ಆದಿ ಪಾತ್ರವನ್ನು ನಿರ್ವಹಿಸಿದ್ದೇನೆ. ಬಾಕ್ಸಿಂಗ್ ನಲ್ಲಿ ಸಾಧನೆ ಮಾಡಬೇಕು ಎಂದುಕೊಂಡಿರುವ ಹುಡುಗನ ಪಾತ್ರ. ಗುಳ್ಟು ಸಿನಿಮಾಗಿಂತ ಡಿಫ್ರೆಂಟ್ ಆದ ಪಾತ್ರವನ್ನು ಇಲ್ಲಿ ನಿರ್ವಹಿಸಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಡಿಸೆಂಬರ್ 2ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ನಾಯಕ ನಟ ನವೀನ್ ಶಂಕರ್ ತಿಳಿಸಿದ್ರು. ನಿರ್ದೇಶಕರು ಕ್ರೈಂ ಡ್ರಾಮಾ ಸಿನಿಮಾ ಎಂದಾಗ ನಾನು ಸ್ವಲ್ಪ ಯೋಚನೆ ಮಾಡ್ದೆ, ಆದ್ರೆ ಕಥೆ ಕೇಳಿ ತುಂಬಾ ಖುಷಿ ಆಯ್ತು. ಇಲ್ಲಿವರೆಗೂ ನಾನು ಮಾಡಿರುವ ಪಾತ್ರಕ್ಕಿಂತ ಕಂಪ್ಲೀಟ್ ಡಿಫ್ರೆಂಟ್ ಆಗಿರುವ ಪಾತ್ರ ನಿರ್ವಹಿಸಿದ್ದೇನೆ. ಶ್ರೇಯ ಎನ್ನುವ ಪಾತ್ರವನ್ನು ನಿರ್ವಹಿಸಿದ್ದೇನೆ. ಡೋಂಟ್ ಕೇರ್ ಆಟಿಟ್ಯೂಡ್ ಇರುವ ಬೋಲ್ಡ್ ಹುಡುಗಿ ಪಾತ್ರ. ಈ ಚಿತ್ರದ ಭಾಗವಾಗಿರೋದಕ್ಕೆ ತುಂಬಾ ಖುಷಿ ಇದೆ. ಚಿತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಎಲ್ಲರೂ ಈ ಚಿತ್ರಕ್ಕೆ ಸಪೋರ್ಟ್ ಮಾಡಿ ಎಂದು ನಾಯಕ ನಟಿ ಐಶಾನಿ ಶೆಟ್ಟಿ ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ನಿರ್ಮಾಪಕ ಓಂಕಾರ್ ಮಾತನಾಡಿ ಸಿನಿಮಾ ನಿರ್ಮಾಣದ ಜೊತೆಗೆ ಡಿಸ್ಕೊ ಎಂಬ ನಟೋರಿಯಸ್ ಗ್ಯಾಂಗ್ ಸ್ಟಾರ್ ಪಾತ್ರ ಮಾಡಿದ್ದೇನೆ. ಸಿನಿಮಾದ ಸ್ಕ್ರೀನ್ ಪ್ಲೇ ತುಂಬಾ ಡಿಫ್ರೆಂಟ್ ಆಗಿದೆ. ಕನ್ನಡದಲ್ಲಿ ಇದು ಮೊದಲ ಪ್ರಯತ್ನ ಆದ್ರಿಂದ ಸಿನಿಮಾ ನಿರ್ಮಾಣ ಮಾಡಲು ಒಪ್ಪಿಕೊಂಡೆ. ಚಿತ್ರದ ಪ್ರತಿ ವಿಭಾಗದಲ್ಲೂ ಎಲ್ಲರೂ ಪರಿಶ್ರಮ ವಹಿಸಿ ಕೆಲಸ ಮಾಡಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಲ್ಲರೂ ನೋಡಿ ಸಪೋರ್ಟ್ ಮಾಡಿ ಎಂದು ಕೇಳಿಕೊಂಡ್ರು. ಇದನ್ನೂ ಓದಿ:ಪ್ರಭಾಸ್ ಲವ್ ಲೈಫ್ ಬಗ್ಗೆ ಸುಳಿವು ಕೊಟ್ಟ ವರುಣ್ ಧವನ್

    ಚಿತ್ರದಲ್ಲಿ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡು, ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ಒಳಗೊಂಡ ತಾರಾಗಣವಿದೆ. ಬಾಕ್ಸ್ ಆಫೀಸ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಒಂಕಾರ್ ಸಿನಿಮಾವನ್ನು ನಿರ್ಮಾಣ ಮಾಡಿದ್ದು. ವೀರೇಂದ್ರ ಕಂಚನ್, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ. ಕೀರ್ತನ್ ಪೂಜಾರಿ ಕ್ಯಾಮೆರಾ ವರ್ಕ್, ರೋಣದ ಬಕ್ಕೇಶ್, ಕಾರ್ತಿಕ್ ಚೆನ್ನೋಜಿರಾವ್ ಸಂಗೀತ ನಿರ್ದೇಶನ, ಉಜ್ವಲ್ ಚಂದ್ರ ಸಂಕಲನ ಚಿತ್ರಕ್ಕಿದೆ. ಡಿಸೆಂಬರ್ 2ರಂದು ಪ್ರೇಕ್ಷಕರ ಮನಗೆಲ್ಲಲು ಸಿನಿಮಾ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಿಯಾಮಣಿ ನಟನೆಯ ’56′ ಸಿನಿಮಾದ  ಟ್ರೈಲರ್ ಬಿಡುಗಡೆ

    ಪ್ರಿಯಾಮಣಿ ನಟನೆಯ ’56′ ಸಿನಿಮಾದ ಟ್ರೈಲರ್ ಬಿಡುಗಡೆ

    ಮೆಡಿಕಲ್ ಮಾಫಿಯಾ ಸುತ್ತ ನಡೆಯುವ ಕಥಾಹಂದರ ಹೊಂದಿರುವ ” 56″ ಚಿತ್ರದ ಟ್ರೈಲರ್ ಹಾಡು ಹಾಗೂ ಟ್ರೈಲರ್ ಬಿಡುಗಡೆ ಸಮಾರಂಭ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಚಲನಚಿತ್ರ ವಾಣಿಜ್ಯ‌ ಮಂಡಳಿ ಅಧ್ಯಕ್ಷ ಭಾ.ಮ ಹರೀಶ್ ಮಾತನಾಡಿ ಟ್ರೈಲರ್ ಕುತೂಹಲ ಮೂಡಿಸುವಂತಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದರು. ಚತುರ್ಭಾಷಾ ಕಲಾವಿದೆ ಪ್ರಿಯಾಮಣಿ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರವೀಣ್ ರೆಡ್ಡಿ  ಈ ಚಿತ್ರದ ನಾಯಕ ಹಾಗೂ ನಿರ್ಮಾಪಕ. ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂ‌ ಸೇರಿ ೪/ಭಾಷೆಯಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದೆ.

    ಚಿತ್ರದ ಟ್ರೈಲರ್ ಬಿಡುಗಡೆ‌ ಮಾಡಿದ ಹಿರಿಯ ಸಿನಿಮಾ ಪ್ರಚಾರಕರ್ತ ನಾಗೇಂದ್ರ ಅವರು ಮಾತನಾಡುತ್ತ,  ಚಿತ್ರ‌ ಚೆನ್ನಾಗಿ ಮೂಡಿ ಬಂದಿದೆ. ಒಳ್ಳೆಯ ಪ್ರಯತ್ನ ಮಾಡಿದ್ದಾರೆ, ಈ ಚಿತ್ರ ಖಂಡಿತ ಶತದಿನೋತ್ಸವ ಆಚರಿಸಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು. ನಿರ್ದೇಶಕ ರಾಜೇಶ್ ಆನಂದ್ ಲೀಲಾ ಮಾತನಾಡಿ,  ನಿರ್ಮಾಪಕ ಪ್ರವೀಣ್ ರೆಡ್ಡಿ ಅವರೇ  ಕಥೆ,  ಚಿತ್ರಕಥೆ  ಬರೆದಿದ್ದಾರೆ. ಚಿತ್ರಕ್ಕೆ ನಟಿ ಪ್ರಿಯಾಮಣಿ ಅವರು  ಚಿನ್ನದ ಕಳಸವಿದ್ದಂತೆ,  ಮೆಡಿಕಲ್ ಮಾಫಿಯಾದ ಸುತ್ತ ಸಾಗುವ  ಸೈನ್ಸ್  ಫಿಕ್ಷನ್ ಕತೆ, ಈವರೆಗೂ ಇದನ್ನು ಯಾರೂ ತೆರೆಮೇಲೆ ತರುವ ಪ್ರಯತ್ನ ಮಾಡಿಲ್ಲ, ವೀಕ್ಷಕರಿಗೂ ಆಶ್ಚರ್ಯವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: EXCLUSIVE:ಆಗಿದ್ದು ಎಂಗೇಜ್‌ಮೆಂಟ್ ಅಲ್ಲ, ನಾನಿನ್ನೂ ಒಪ್ಪಿಲ್ಲ: ವೈಷ್ಣವಿ

    ನಟಿ ಪ್ರಿಯಾಮಣಿ ಮಾತನಾಡಿ, ನಾನು ಮೊದಲು ಕಥೆ ಕೇಳಿದಾಗ, ನೀವು ಹೇಳಿದ ಹಾಗೆ ಸಿನಿಮಾ ಮಾಡಿದರೆ  ಹಿಟ್ ಆಗಲಿದೆ ಎಂದು ಹೇಳಿದ್ದೆ‌.  ಚಿತ್ರದ ಮೂಲಕ ಒಂದೊಳ್ಳೆ ಸಂದೇಶ ಹೇಳಲಾಗಿದೆ. ಕಥೆಯೇ ಪವರ್ ಹೌಸ್ ಹೊರತು ನಾನಲ್ಲ ಎಂದು ಹೇಳಿದರು. ನಟ, ನಿರ್ಮಾಪಕ ಪ್ರವೀಣ್ ರೆಡ್ಡಿ ಮಾತನಾಡಿ,  ಡಿಆರ್ 56 ಕಥೆ  ರೆಡಿ ಮಾಡಿಕಡು, ಸಿನಿಮಾ ಮಾಡಲು ಮುಂದಾದೆವು. ಪ್ರಿಯಾಮಣಿ ಅವರು ಕಥೆ ಕೇಳಿ ಸುಮ್ಮನೆ ಇದ್ದರು. ಅವರು ಒಪ್ಪಿಕೊಳ್ಳುತ್ತಾರೋ ಇಲ್ಲವೇ ಅನ್ನಿಸಿತ್ತು. ನಂತರ ಒಪ್ಪಿದರು. ಅವರಿಲ್ಲದಿದ್ದರೆ, ಸಿನಿಮಾನ ಎಲ್ಲಾ ಕಡೆ ತಲುಪಿಸಲು ಆಗುತ್ತಿರಲಿಲ್ಲ ಎಂದು ಹೇಳಿದರು.

    ನಟ ರೂಪೇಶ್ ಕುಮಾರ್ ಮಾತನಾಡಿ,  ಚಿತ್ರದಲ್ಲಿ ಡಾಕ್ಟರ್ ಪಾತ್ರ ಮಾಡಿದ್ದೇನೆ. ಚಿತ್ರದ ಬಿಡುಗಡೆಗೆ ಕುತೂಹಲದಿಂದ ಕಾಯುತ್ತಿದ್ದೇನೆ ಎಂದರು. ಸಂಚಿತ್ ಫಿಲಂಸ್ ವೆಂಕಟ್ ಗೌಡ ಚಿತ್ರದ ವಿತರಣೆಯ ಜವಾಬ್ದಾರಿ ಹೊತ್ತಿದ್ದು 150 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗೆಯಾಗಲಿದೆ ಎನ್ನುವ ಮಾಹಿತಿ ನೀಡಿದರು. ಛಾಯಾಗ್ರಾಹಕ ರಾಕೇಶ್ ಸಿ ತಿಲಕ್,  ಸಂಕಲನಕಾರ ವಿಶ್ವ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

    Live Tv
    [brid partner=56869869 player=32851 video=960834 autoplay=true]

  • ‘ಡವ್ ಮಾಸ್ಟರ್’ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

    ‘ಡವ್ ಮಾಸ್ಟರ್’ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

    ವಿಭಿನ್ನ ಕಥಾಹಂದರ ಹೊಂದಿರುವ “ಡವ್ ಮಾಸ್ಟರ್” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ‌ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಎಸ್ ಎ ಚಿನ್ನೇಗೌಡ, ಕೆ.ವಿ.ಚಂದ್ರಶೇಖರ್, ಹಾಲಿ ಅಧ್ಯಕ್ಷರಾದ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕರಾದ ಸಿದ್ದರಾಜು, ಭಾ.ಮ.ಗಿರೀಶ್ ಸೇರಿದಂತೆ ಹಲವು ಗಣ್ಯರು ಬಿಡುಗಡೆಗೊಳಿಸಿದರು.

    “ಡವ್ ಮಾಸ್ಟರ್” ಚಿತ್ರ ನಾಯಿ ಹಾಗೂ ಮನುಷ್ಯನ ಸಂಬಂಧದ ನಡುವಿನ ಕಥಾಹಂದರ ಹೊಂದಿರುವ ಚಿತ್ರ ಎಂದು ತಿಳಿದು ಸಂತೋಷವಾಯಿತು. ಪ್ರಾಣಿಗಳಲ್ಲೇ ಹೆಚ್ಚು ನಿಯತ್ತಿನ ಪ್ರಾಣಿ ನಾಯಿ ಎನ್ನುತ್ತೇವೆ. “ರಾಕಿ” ಎಂಬ ಹೆಸರಿನ ನಾಯಿ ಈ ಚಿತ್ರದಲ್ಲಿ ಅಭಿನಯಿಸಿದೆ. ತಬಲನಾಣಿ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಆತ್ಮೀಯರಾದ ಚಾಂದ್ ಪಾಷ ಅವರ ಮಗ ರೋಷನ್ ಈ ಚಿತ್ರ ನಿರ್ಮಾಣ ಮಾಡಿರುವ ವಿಷಯ ತಿಳಿದು ಖುಷಿಯಾಯಿತು. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಎಲ್ಲರೂ ಈ ಚಿತ್ರ ನೋಡುವ ಮೂಲಕ ಪ್ರೋತ್ಸಾಹಿಸಿ ಎಂದರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

    ನಿರ್ದೇಶಕ ಆರ್ಯ ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು. ನಾನು ಇಪ್ಪತ್ತೈದು ವರ್ಷಗಳಿಂದ ಚಿತ್ರರಂಗದಲ್ಲಿ ವಿತರಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈಗ ಚಿತ್ರ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ನನ್ನ ಮಗ ರೋಷನ್ ನೋಡಿಕೊಳ್ಳುತ್ತಿದ್ದಾನೆ. ಈ ಸಮಾರಂಭಕ್ಕೆ ಆಗಮಿಸಿರುವ ಸಿದ್ದರಾಮಯ್ಯ ಅವರು ಸೇರಿದಂತೆ ಎಲ್ಲಾ ಗಣ್ಯರಿಗೆ ನನ್ನ ಧನ್ಯವಾದ ಎಂದರು ಚಾಂದ್ ಪಾಷಾ. ಇದನ್ನೂ ಓದಿ:ಬಳ್ಳಾರಿಗೆ ಬರಲಿದ್ದಾರೆ ವಿಜಯ್ ಮತ್ತು ರಶ್ಮಿಕಾ ಮಂದಣ್ಣ

    ನನ್ನ ಕಥೆ ಇಷ್ಟಪಟ್ಟು ನಿರ್ಮಾಣ ಮಾಡಿದ ನಿರ್ಮಾಪಕರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ. ಸಿದ್ದರಾಮಯ್ಯ ಅವರಿಂದ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಸಬೇಕೆಂಬುದು ನನ್ನ ಆಸೆಯಾಗಿತ್ತು. ಅದು ಈಡೇರಿದೆ. ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಆರ್ಯ. ನನ್ನ ಅಭಿನಯದ ಚಿತ್ರವೊಂದಕ್ಕೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಆರ್ಯ ಈ ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ನಾಯಿ ಹಾಗೂ ನನ್ನ ನಡುವಿನ ಬಾಂಧವ್ಯದ ಸನ್ನಿವೇಶಗಳನ್ನು ನಿರ್ದೇಶಕರು ಮನಮುಟ್ಟುವಂತೆ ತೋರಿಸಿದ್ದಾರೆ. ರಾಕಿ(ನಾಯಿ) ನನಗಿಂತ ಚೆನ್ನಾಗಿ ನಟಿಸಿದೆ ಅಂತ ಹೇಳಬಹುದು ಎಂದು ತಬಲನಾಣಿ  ತಿಳಿಸಿದರು.

    ನಿರ್ಮಾಪಕ ಸಿ.ರೋಷನ್, ಸಂಗೀತ ನಿರ್ದೇಶಕ ಶಕೀಲ್ ಅಹ್ಮದ್, ಛಾಯಾಗ್ರಾಹಕ ಕಿರಣ್ ಕುಮಾರ್, ನಟಿ ಪಂಕಜ ಹಾಗೂ ಹಾಡು ಬರೆದಿರುವ ಸೌಮ್ಯ ಅವರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ತಬಲ ನಾಣಿ, ಶಕೀಲ, ಕುರಿ ಪ್ರತಾಪ್, ಮಿತ್ರ, ನವೀನ್ ಪಡೀಲ್, ಪಂಕಜ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರಾಕಿ(ನಾಯಿ) ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಚಿತ್ರದ ಟ್ರೇಲರ್ ಡಿಸೆಂಬರ್ ನಲ್ಲಿ ರಿಲೀಸ್

    ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಚಿತ್ರದ ಟ್ರೇಲರ್ ಡಿಸೆಂಬರ್ ನಲ್ಲಿ ರಿಲೀಸ್

    ಕಿರುತೆರೆಯಿಂದ ಬೆಳ್ಳಿತೆರೆಗೆ ನಾಯಕ ಹಾಗೂ ನಿರ್ದೇಶಕರಾಗಿ ಬಡ್ತಿ ಪಡೆದಿರುವ ರಾಜೇಶ್ ಧ್ರುವ, ಹೊಸ ರೀತಿಯ ಸಿನಿಮಾ ಮಾಡಿದ್ದಾರೆ. ಈ ಚಿತ್ರಕ್ಕೆ ಅವರು ‘ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’ ಎಂದು ಹೊಸ ರೀತಿಯ ಹೆಸರು ಇಟ್ಟಿದ್ದಾರೆ. ಟೈಟಲ್ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಕೂಡ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗ ಪ್ರಯೋಗಾತ್ಮಕ ಚಿತ್ರಗಳತ್ತ ಮುಖ ಮಾಡಿದೆ. ಅದರಲ್ಲೂ ಹಳ್ಳಿ ಸೊಗಡಿನ ಚಿತ್ರಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಿನಿಮಾ ಕೂಡ ಉತ್ತರ ಕನ್ನಡ ಜಿಲ್ಲೆಯ ಸೊಗಡನ್ನು ಪರಿಚಯಿಸಲಿದೆ.

    ಈ ಇಡೀ ಚಿತ್ರವನ್ನು ಶಿರಸಿ, ಯಲ್ಲಾಪುರ, ಹೊನ್ನಾವರದಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಅಲ್ಲಿಯ ಸ್ಥಳೀಯ  ಪ್ರತಿಭೆಗಳನ್ನು ಬಳಸಿಕೊಳ್ಳಲಾಗಿದೆ. ಈ ಚಿತ್ರದ ಮತ್ತೊಂದು ವಿಶೇಷ ಅಂದರೆ ಚಿತ್ರಕ್ಕೆ ಬಳಸಿರುವುದು ಉತ್ತರ ಕನ್ನಡ ಭಾಷೆ ಹಾಗೂ ರಮಣೀಯ ಸ್ಥಳಗಳು ಎನ್ನುವುದು ನೆನಪಿಡಬೇಕಾದ ಸಂಗತಿ. ಇಡೀ ಸಿನಿಮಾ ನೋಡುಗನ ಕಣ್ಣು ತಂಪು ಮಾಡಿದರೆ, ಚಿತ್ರಕಥೆಯ ಹೊಸತನವು ಭಾರತ ಚಿತ್ರರಂಗದಲ್ಲಿ ಇಲ್ಲಿಯವರೆಗೂ ಬಂದಿಲ್ಲ ಎನ್ನುತ್ತಾರೆ ಸಿನಿಮಾದ ನಿರ್ದೇಶಕರು.

    ಒಬ್ಬ ಫೋಟೋಗ್ರಾಫರ್ ಹಾಗೂ ಫೋಟೋ ಸ್ಟುಡಿಯೋ ನಡುವಿನ ಭಾವನೆಯ ಹೋರಾಟವೇ ಈ ಚಿತ್ರದ ಹೈಲೈಟ್. ಇದರ ಜೊತೆಗೆ ಮುದ್ದಾದ ಪ್ರೇಮಿಗಳ ಕಥೆಯೂ ಇದೆ.  ಒಬ್ಬ ಇನ್ಶೂರೆನ್ಸ್ ಮಾಡಿಸುವವ ಹಾಗೂ ಅವನ ವೈಯಕ್ತಿಕ ಜೀವನದ ಬಗ್ಗೆ ಹಾಗೂ ಒಬ್ಬ ಜಮೀನ್ದಾರ ಮತ್ತು ಫೋಟೋಗ್ರಾಫರ್ ನಡುವಿನ ಸಂಘರ್ಷ ನೋಡುಗರಿಗೆ ಹೊಸ ಅನುಭವ ತರಿಸಲಿದೆ ಎಂದಿದೆ ಸಿನೆಮಾ ಟೀಮ್. ಇದನ್ನೂ ಓದಿ:ನನ್ನ ಮಗನ ಕಾರು ಅಪಘಾತಕ್ಕೆ ‘ಬುಧ ಭಕ್ತಿ’ ಕಾರಣ ಎಂದ ಜಗ್ಗೇಶ್

    ಈ ಸಿನಿಮಾದ ನಿರ್ಮಾಪರು ವೆಂಕಟೇಶ್ವರ ರಾವ್. ಬಳ್ಳಾರಿ ಮೂಲದವರಾದ ಇವರು ಮೊದಲ ಬಾರಿಗೆ ಸೃಜನ್ ಪ್ರೊಡಕ್ಷನ್ ಅಡಿಯಲ್ಲಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಿರ್ದೇಶಕರಾಗಿ ಹಾಗೂ ಮುಖ್ಯ ಪಾತ್ರದಲ್ಲಿ ಕಿರುತೆರೆಯಲ್ಲಿ 6 ವರ್ಷಗಳ ಕಾಲ ಕೆಲಸ ಮಾಡಿ ಫೇಮಸ್ ಆಗಿರುವ, ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ನಟ ರಾಜೇಶ್ ಧ್ರುವ ಕಾಣಿಸಿಕೊಂಡಿದ್ದಾರೆ. ರವಿ ಸಾಲಿಯಾನ್, ರಾಧಿಕಾ ಅಚ್ಯುತ್ ರಾವ್, ಸಂಪತ್ ಜೆ ರಾಮ್, ಶುಭಲಕ್ಷ್ಮಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕರುಳುಬಳ್ಳಿಯ ರೋಚಕ ಕಥೆ ಹೇಳುವ ‘2nd ಲೈಫ್’ ಸಿನಿಮಾ

    ಕರುಳುಬಳ್ಳಿಯ ರೋಚಕ ಕಥೆ ಹೇಳುವ ‘2nd ಲೈಫ್’ ಸಿನಿಮಾ

    ಗು ಜನಿಸಿದ ಕೆಲವೇ ದಿನಗಳಲ್ಲಿ ಕರುಳಬಳ್ಳಿ(ಹೊಕ್ಕಳು ಬಳ್ಳಿ) ಬೀಳುತ್ತದೆ. ಅದನ್ನು ಕ್ಯಾನ್ಸರ್‌ ರೋಗಿಗಳ ಔಷದಿಗೆ ಬಳಸಿಕೊಳ್ಳಲಾಗುತ್ತದೆ. ಕರ್ನಾಟಕ ಒಂದರಲ್ಲೆ 70..80 ಸಾವಿರ ಜನರು ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ. ಅಂತಹವರಿಗೆ ಇದು ಉಪಯೋಗವಾಗುತ್ತದೆ.  ಕರುಳಬಳ್ಳಿಯನ್ನು ಶೇಖರಿಸಿಡುವ ಕಾರ್ಯ ಕೂಡ ಎಲ್ಲೆಡೆ ನಡೆಯುತ್ತಿದೆ. ಈ ಅಂಶವನ್ನೇ ಪ್ರಮುಖವಾಗಿಟ್ಟು ಕೊಂಡು “2 nd ಲೈಫ್” ಚಿತ್ರ ತಯಾರಾಗಿದೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಜಯಣ್ಣ ಫಿಲಂಸ್ ಹಾಗೂ ಶುಕ್ರ ಫಿಲಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದೆ.

    ಜೀವನದಲ್ಲಿ ಯಾವುದೋ ದೊಡ್ಡ ಅನಾಹುತ ನಡೆದು ಅದರಿಂದ ಪಾರಾದಾಗ ಎಲ್ಲರೂ ಹೇಳುವುದು. ನಿನ್ನ ಹೊಸಜೀವನ ಆರಂಭವಾಗಿದೆ ಅಂತ.  ಈ ರೀತಿಯ ಘಟನೆ ಚಿತ್ರದಲ್ಲಿ ನಡೆಯುವುದರಿಂದ ಚಿತ್ರಕ್ಕೆ “2nd ಲೈಫ್” ಅಂತ ಹೆಸರಿಡಲಾಗಿದೆ. ಈಗ ಟ್ರೇಲರ್ ಬಿಡುಗಡೆಯಾಗಿದೆ ಎಂದು ನಿರ್ದೇಶಕ ರಾಜು ದೇವಸಂದ್ರ ಚಿತ್ರದ ಕುರಿತು ವಿವರಣೆ ನೀಡಿದರು. ನಾನು ಈ ಹಿಂದೆ “ಸ್ವಾರ್ಥ ರತ್ನ” ಎಂಬ ಚಿತ್ರದಲ್ಲಿ ‌ಅಭನಯಸಿದ್ದೆ. ಈಗ “2 nd ಲೈಫ್” ಚಿತ್ರದಲ್ಲಿ ನಟಿಸಿದ್ದೇನೆ. ನಾನು ಮೂಲತಃ ಆಡಿಟರ್. ಮಂಜುಳಾ ರಮೇಶ್ ಅವರು ಬರೆದಿರುವ ಈ ಚಿತ್ರದ ಕಥೆ ಹಿಡಿಸಿತು. ಪಿ.ಆರ್.ಕೆ ಆಡಿಯೋ ಮೂಲಕ ಹಾಡು ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು ಮೂರು ಭಾಷೆಗಳಲ್ಲಿ ನಮ್ಮ ಚಿತ್ರ ನಿರ್ಮಾಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಪ್ರೋತ್ಸಾಹಿಸಿ ಎಂದರು ನಾಯಕ ಆದರ್ಶ ಗುಂಡುರಾಜ್.  ಇದನ್ನೂ ಓದಿ:ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸುದೀಪ್‌ ದಂಪತಿ ಭೇಟಿ

    ಈ‌ ಚಿತ್ರದಲ್ಲಿ ನನ್ನದು ಕುರುಡಿಯ ಪಾತ್ರ ಎಂದು ತಮ್ಮ ಪಾತ್ರದ ಬಗ್ಗೆ  ನಾಯಕಿ ಸಿಂಧೂ ರಾವ್ ತಿಳಿಸಿದರು. ಸಂಗೀತ ನಿರ್ದೇಶಕ ಆರವ್ ರಿಶಿಕ್, ಛಾಯಾಗ್ರಹಕ ರಮೇಶ್ ಕೊಯಿರ,  ನಟ ಶಿವಪ್ರದೀಪ್ ಹಾಗೂ ಸಹ ನಿರ್ಮಾಪಕ – ನಟ ರುದ್ರಮುನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]