Tag: ಟ್ರ್ಯಾಕ್ಟರ್ ಟ್ರಾಲಿ

  • ದುರ್ಗಾ ಮೂರ್ತಿ ವಿಸರ್ಜನೆಗೆಂದು ತೆರಳುತ್ತಿದ್ದಾಗ ಕೊಳಕ್ಕೆ ಬಿದ್ದ ಟ್ರ್ಯಾಕ್ಟರ್ – ಕನಿಷ್ಠ 10 ಮಂದಿ ಸಾವು

    ದುರ್ಗಾ ಮೂರ್ತಿ ವಿಸರ್ಜನೆಗೆಂದು ತೆರಳುತ್ತಿದ್ದಾಗ ಕೊಳಕ್ಕೆ ಬಿದ್ದ ಟ್ರ್ಯಾಕ್ಟರ್ – ಕನಿಷ್ಠ 10 ಮಂದಿ ಸಾವು

    – ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಘೋಷಿಸಿದ ಮಧ್ಯಪ್ರದೇಶ ಸಿಎಂ 

    ಭೋಪಾಲ್: ದುರ್ಗಾ ಪೂಜೆಯ ಬಳಿಕ ಮೂರ್ತಿಯನ್ನು ವಿಸರ್ಜಿಸಲು (Durga Idol Immersion) ಭಕ್ತರನ್ನು ಕರೆದೊಯ್ಯುತ್ತಿದ್ದ ಟ್ರ‍್ಯಾಕ್ಟರ್ ಟ್ರಾಲಿ (Tractor Trolley) ಉರುಳಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ (Madhya Pradesh) ಖಾಂಡ್ವಾ (Khandwa) ಜಿಲ್ಲೆಯ ಪಂಧಾನ ಪ್ರದೇಶದಲ್ಲಿ ಗುರುವಾರ ನಡೆದಿದೆ.

    ಮೃತರಲ್ಲಿ ಹೆಚ್ಚಿನವರು ಯುವತಿಯರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ದ್ಲಾ ಮತ್ತು ಜಮ್ಲಿ ಗ್ರಾಮಗಳಿಂದ ಸುಮಾರು 20-25 ಮಂದಿ ದುರ್ಗಾ ಭಕ್ತರು ದುರ್ಗಾ ದೇವಿಯ ಮೂರ್ತಿಯನ್ನು ವಿಸರ್ಜನೆಗಾಗಿ ಕೊಂಡೊಯ್ಯುತ್ತಿದ್ದರು. ಕೊಳದ ಹತ್ತಿರ ನಿಲ್ಲಿಸಿದ್ದ ಟ್ರ‍್ಯಾಕ್ಟರ್ ಸಮತೋಲನ ತಪ್ಪಿ ನೀರಿಗೆ ಬಿದ್ದ ಪರಿಣಾಮ ದುರಂತ ಸಂಭವಿಸಿದೆ. ಇದನ್ನೂ ಓದಿ: ಎನ್‌ಕೌಂಟರ್ ಭೀತಿ – ಏಕಕಾಲಕ್ಕೆ 103 ನಕ್ಸಲರ ಶರಣಾಗತಿ

    ಅಪಘಾತದ ನಂತರ ಸ್ಥಳೀಯ ಪೊಲೀಸ್ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಹಲವರನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಾಲಿಯಲ್ಲಿ ಜನಸಂಖ್ಯೆ ಹೆಚ್ಚಾದ ಕಾರಣ ಸಮತೋಲನ ತಪ್ಪಿ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ | ಚಳ್ಳಕೆರೆಯಲ್ಲಿ ಮಳೆ ಇಲ್ಲದೆ ಒಣಗಿದ ಶೇಂಗಾ ಬೆಳೆ – ರೈತರು ಕಂಗಾಲು

    ಇನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಚೆನ್ನೈ ಕಸ್ಟಮ್ಸ್‌ ಭಾರೀ ಲಂಚ- ಭಾರತದ ಕಾರ್ಯಾಚರಣೆ ನಿಲ್ಲಿಸುತ್ತೇವೆ ಎಂದ ಲಾಜಿಸ್ಟಿಕ್ಸ್ ಕಂಪನಿ

  • Uttar Pradesh | ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ – 8 ಯಾತ್ರಿಕರು ದುರ್ಮರಣ, 43 ಮಂದಿಗೆ ಗಾಯ

    Uttar Pradesh | ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ – 8 ಯಾತ್ರಿಕರು ದುರ್ಮರಣ, 43 ಮಂದಿಗೆ ಗಾಯ

    ಲಕ್ನೋ: ಯಾತ್ರಿಕರನ್ನು (Pilgrims) ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ (Tractor-Trolley) ಟ್ರಕ್ (Truck) ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬುಲಂದ್‌ಶಹರ್ (Bulandshahr) ಜಿಲ್ಲೆಯಲ್ಲಿ ನಡೆದಿದೆ.

    ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಸೋಮವಾರ ನಸುಕಿನ ಜಾವ 2:10ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಗೊಂಡಿರುವ ಯಾತ್ರಿಕರ ಪೈಕಿ 12 ಮಂದಿ ಅಪ್ರಾಪ್ತರಾಗಿದ್ದಾರೆ. ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ‍್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಅದು ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ದಿನೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: Shivamogga | ತಾನೇ ಜನ್ಮ ನೀಡಿದ ನವಜಾತ ಶಿಶುವಿನ ಕತ್ತು ಕೊಯ್ದು ಕೊಂದಿದ್ದ ಲೇಡಿ ಅರೆಸ್ಟ್

    ಟ್ರಾಕ್ಟರ್ ಟ್ರಾಲಿಯಲ್ಲಿ 61 ಜನರು ಇದ್ದರು. ಯಾತ್ರಿಕರು ಕಾಸ್ಗಂಜ್ ಜಿಲ್ಲೆಯ ರಫತ್‌ಪುರ ಗ್ರಾಮದಿಂದ ರಾಜಸ್ಥಾನದ ಜಹರ್‌ಪೀರ್‌ಗೆ ತೀರ್ಥಯಾತ್ರೆಗಾಗಿ ಪ್ರಯಾಣಿಸುತ್ತಿದ್ದರು. 10 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. 10 ಮಂದಿ ಗಾಯಾಳುಗಳನ್ನು ಅಲಿಘರ್ ವೈದ್ಯಕೀಯ ಕಾಲೇಜಿಗೆ, ಇನ್ನೂ 10 ಜನರನ್ನು ಬುಲಂದ್‌ಶಹರ್ ಜಿಲ್ಲಾ ಆಸ್ಪತ್ರೆಗೆ ಮತ್ತು 23 ಮಂದಿಯನ್ನು ಖುರ್ಜಾದ ಕೈಲಾಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಳಗಾವಿ| ದೇವಸ್ಥಾನದ ಜಾಗಕ್ಕಾಗಿ ಕೊಲೆ – ಐವರಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಮೃತರನ್ನು ಟ್ರ‍್ಯಾಕ್ಟರ್ ಚಾಲಕ ಇ.ಯು. ಬಾಬು (40), ರಾಂಬೆಟಿ (65), ಚಾಂದನಿ (12), ಘನಿರಾಮ್ (40), ಮೋಕ್ಷಿ (40), ಶಿವಾಂಶ್ (6), ಯೋಗೇಶ್ (50) ಮತ್ತು ವಿನೋದ್ (45) ಎಂದು ಗುರುತಿಸಲಾಗಿದ್ದು, ಎಲ್ಲರೂ ಕಾಸ್ಗಂಜ್ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಶ್ರುತಿ, ಎಸ್‌ಎಸ್‌ಪಿ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯಲ್ಲಿರುವ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್ – ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಚಿಂತನೆ

  • ಕೊಳಕ್ಕೆ ಬಿದ್ದ ಟ್ರ್ಯಾಕ್ಟರ್ ಟ್ರಾಲಿ- ಗಂಗಾ ನದಿ ಪವಿತ್ರ ಸ್ನಾನಕ್ಕೆ ತೆರಳುತ್ತಿದ್ದ 15 ಯಾತ್ರಿಕರು ಸಾವು

    ಕೊಳಕ್ಕೆ ಬಿದ್ದ ಟ್ರ್ಯಾಕ್ಟರ್ ಟ್ರಾಲಿ- ಗಂಗಾ ನದಿ ಪವಿತ್ರ ಸ್ನಾನಕ್ಕೆ ತೆರಳುತ್ತಿದ್ದ 15 ಯಾತ್ರಿಕರು ಸಾವು

    ಲಕ್ನೋ: ಮಾಘ ಪೂರ್ಣಿಮೆಯ (Magh Purnima) ಪ್ರಯುಕ್ತ ಗಂಗಾ ನದಿಯಲ್ಲಿ (Ganga River) ಪವಿತ್ರ ಸ್ನಾನ ಮಾಡಲು ಹೊರಟಿದ್ದ ಯಾತ್ರಿಕರನ್ನು (Pilgrims) ಒಳಗೊಂಡ ಟ್ರ್ಯಾಕ್ಟರ್ ಟ್ರಾಲಿ (Tractor Trolley) ಕೊಳಕ್ಕೆ ಬಿದ್ದ ಪರಿಣಾಮ 7 ಮಂದಿ ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಉತ್ತರಪ್ರದೇಶದ (Uttar Pradesh) ಕಾಸ್‌ಗಂಜ್‌ನಲ್ಲಿ (Kasganj) ನಡೆದಿದೆ.

    ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಾಘ ಪೂರ್ಣಿಮೆ; ಪುಣ್ಯಸ್ನಾನಕ್ಕಾಗಿ ಅಯೋಧ್ಯೆಯ ಸರಯೂ ನದಿ ತಟದಲ್ಲಿ ಜನಸಾಗರ

    ಘಟನೆಯ ಕುರಿತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡ ಯಾತ್ರಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಯೋಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕೃಷ್ಣ ಜನ್ಮಭೂಮಿ ಬೆಂಬಲಿಗರಿಗೆ ಬಾಂಬ್ ದಾಳಿ ಬೆದರಿಕೆ