Tag: ಟ್ವಟ್ಟರ್

  • ಯುಪಿ ಸಿಎಂ ಕಚೇರಿಯ ಟ್ವಿಟ್ಟರ್ ಖಾತೆ ಹ್ಯಾಕ್

    ಯುಪಿ ಸಿಎಂ ಕಚೇರಿಯ ಟ್ವಿಟ್ಟರ್ ಖಾತೆ ಹ್ಯಾಕ್

    ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿಯ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಯುಪಿ ಸಿಎಂ ಖಾತೆಯಲ್ಲಿ ಅನಿಮೆಟೆಡ್ ಚಿತ್ರಗಳನ್ನು ಹಾಕಲಾಗಿದೆ.

    ಯುಪಿ ಸಿಎಂಒ ಎನ್ನುವ ಟ್ವಿಟ್ಟರ್ ಖಾತೆ ಹ್ಯಾಕ್ ಮಾಡಲಾಗಿದ್ದು, ಅನಿಮೆಟೆಡ್ ಚಿತ್ರದ ಕುರಿತು ಪೋಸ್ಟ್‌ಗಳನ್ನು ಹಾಕಲಾಗಿದೆ. ಜೊತೆಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರವನ್ನು ತೆಗೆದು ವ್ಯಂಗ್ಯ ಚಿತ್ರವನ್ನು ಟ್ವಿಟ್ಟರ್ ಡಿಪಿಯಾಗಿ ಬಳಸಲಾಗಿದೆ.

    ಯುಪಿ ಸಿಎಂಒ ಅಧಿಕೃತ ಟ್ವಿಟ್ಟರ್ ಅನ್ನು ಹ್ಯಾಕರ್‌ಗಳು ಹ್ಯಾಕ್ ಮಾಡಿದ ನಂತರ, ಖಾತೆಯಿಂದ ಸುಮಾರು 400-500ಕ್ಕೂ ಹೆಚ್ಚು ಟ್ವೀಟ್‍ಗಳನ್ನು ಮಾಡಿದ್ದಾರೆ. ಇದನ್ನೂ ಓದಿ: ಮುಸ್ಲಿಮರನ್ನ ಮದುವೆಯಾದ್ರೆ SSK ಸಮಾಜದಿಂದ ಬಹಿಷ್ಕರಿಸಿ: ನಾಗೇಶ್‌

    ಈ ಖಾತೆಯಲ್ಲಿ ಪ್ರಸ್ತುತ 4 ಮಿಲಿಯನ್ ಫಾಲೋವರ್ಸ್‍ಗಳನ್ನು ಹೊಂದಿದೆ. ಸುಮಾರು 4 ಗಂಟೆಗಳ ನಂತರ ಟ್ವಿಟ್ಟರ್ ಖಾತೆಯ ಮೇಲೆ ಸಿಎಂ ಕಚೇರಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಹ್ಯಾಕರ್‌ಗಳು ಹಾಕಿದ್ದ ಪೋಸ್ಟ್‌ನ್ನು ಟ್ವೀಟ್‍ಗಳನ್ನು ತೆಗೆದುಹಾಕಲಾಗಿದೆ. ಜೊತೆಗೆ ಸೈಬರ್ ತಜ್ಞರಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ಇದಾದ ಬಳಿಕ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಯುಪಿ ಸರ್ಕಾರ ಟ್ವೀಟ್‍ನಲ್ಲಿ ತಿಳಿಸಿದೆ. ಇದನ್ನೂ ಓದಿ: ಕಪಾಳಮೋಕ್ಷ ಘಟನೆಯ ನಂತರ 10 ವರ್ಷ ಆಸ್ಕರ್ ಪ್ರಶಸ್ತಿಯಿಂದ ಬ್ಯಾನ್ ಆದ ವಿಲ್ ಸ್ಮಿತ್

  • ಬೈಪಾಸ್ ಶಸ್ತ್ರಚಿಕಿತ್ಸೆಯಿಂದ ಗುಣಮುಖ- ಹಿತೈಷಿಗಳಿಗೆ ಸುನಿಲ್ ಧನ್ಯವಾದ

    ಬೈಪಾಸ್ ಶಸ್ತ್ರಚಿಕಿತ್ಸೆಯಿಂದ ಗುಣಮುಖ- ಹಿತೈಷಿಗಳಿಗೆ ಸುನಿಲ್ ಧನ್ಯವಾದ

    ಮುಂಬೈ: ಬಾಲಿವುಡ್ ಹಾಸ್ಯ ನಟ ಸುನಿಲ್ ಗ್ರೋವರ್ ಸೋಶಿಯಲ್ ಮೀಡಿಯಾದಲ್ಲಿ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

    ಸುನಿಲ್ ಅವರು ಸಣ್ಣ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನ ಪರೀಕ್ಷಿಸಿದ ವೈದ್ಯರು ಬೈಪಾಸ್ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ತಿಳಿಸಿದ್ದರು. ಪರಿಣಾಮ ಸುನಿಲ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿ ಗುಣಮುಖರಾಗಿದ್ದು, ನಿನ್ನೆ ಟ್ವಟ್ಟರ್‌ನಲ್ಲಿ, ನನ್ನ ಚಿಕಿತ್ಸೆ ಮುಗಿದಿದೆ. ನಾನು ಈಗ ಗುಣವಾಗುತ್ತಿದ್ದೇನೆ. ನನಗಾಗಿ ಪ್ರಾರ್ಥಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ! ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕೊನೆಗೂ ನಮ್ಮ ಕನಸು ನನಸಾಗಿದೆ: ಆಲಿಯಾ ಹೀಗೆಂದಿದ್ದೇಕೆ?

    heart blockage symptoms: kapil sharma show actor sunil grover undergoes surgery for heart blockage know what is it warning signs and symptoms - Sunil Grover heart surgery: 'गुत्थी' बनकर हंसाने वाले सुनील

    44 ವರ್ಷದ ಈ ನಟನನ್ನು ಕಳೆದ ವಾರ ಮುಂಬೈನ ಏಷ್ಯನ್ ಹಾರ್ಟ್ ಇನ್‍ಸ್ಟಿಟ್ಯೂಟ್‍ಗೆ ದಾಖಲಿಸಲಾಗಿತ್ತು. ಜನವರಿ 27 ರಂದು ಸುನಿಲ್ ಚಿಕಿತ್ಸೆಗೆ ಒಳಗಾದರು. ಅಲ್ಲದೆ ಅವರಿಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿತ್ತು. ಈ ವೇಳೆ ವೈದ್ಯರು ಪರೀಕ್ಷಿಸಿದಾಗ ಅವರನ್ನು ನಾಲ್ಕು ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ಫೆಬ್ರವರಿ 3 ರಂದು ಸುನಿಲ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

    ಸುನಿಲ್ ಅವರು ಕಾಮಿಡಿ ನೈಟ್ಸ್ ವಿತ್ ಕಪಿಲ್ ಮತ್ತು ದಿ ಕಪಿಲ್ ಶರ್ಮಾ ಶೋಗಳ್ಲಿ ಕಾಣಿಸಿಕೊಂಡಿದ್ದು, ಪ್ರಸಿದ್ಧ ಕಿರುತೆರೆ ನಟ. ಟೆಲಿಸಿಷನ್ ಕಾರ್ಯವನ್ನು ಹೊರತುಪಡಿಸಿ, ಸುನಿಲ್ ಇತ್ತೀಚೆಗೆ ಭಾರತ್, ಪಟಾಖಾ, ತಾಂಡವ್ ಮತ್ತು ಸೂರ್ಯಕಾಂತಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ನೋಡಿದ ಜನರು ಸುನಿಲ್ ಅವರಿಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

    ಸುನಿಲ್ ಈ ಹಿಂದೆ ಅಮೀರ್ ಖಾನ್ ಅವರ 2008ರ ಹಿಟ್ ಚಿತ್ರ ‘ಗಜಿನಿ’, ಅಕ್ಷಯ್ ಕುಮಾರ್ ಅವರ ‘ಗಬ್ಬರ್ ಈಸ್ ಬ್ಯಾಕ್’ ಮತ್ತು ‘ದಿ ಲೆಜೆಂಡ್ ಆಫ್ ಭಗತ್ ಸಿಂಗ್’ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು, ಜನಪ್ರಿಯ ಕಾಮಿಡಿ ನಟರಲ್ಲಿ ಒಬ್ಬರಾಗಿದ್ದಾರೆ. ಈ ಹಿಂದೆ ಸುನಿಲ್ ಅವರ ಚಿಕಿತ್ಸೆಗೆ ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಸಹಾಯ ಮಾಡಿದ್ದಾರೆ. ಸಲ್ಲು ತಮ್ಮ ವೈದ್ಯ ತಂಡವನ್ನು ಸುನಿಲ್ ಅವರನ್ನು ನೋಡಿಕೊಳ್ಳಲು ಸೂಚಿಸಿದ್ದು ಸಹ ಸುದ್ದಿಯಾಗಿತ್ತು. ಇದನ್ನೂ ಓದಿ: ಸುನಿಲ್ ಗ್ರೋವರ್ ಆರೋಗ್ಯ ವಿಚಾರಿಸಲು ತನ್ನ ವೈದ್ಯ ತಂಡಕ್ಕೆ ಸೂಚಿಸಿದ ಸಲ್ಮಾನ್

  • ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

    ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

    ನವದೆಹಲಿ: ತಮಿಳು ನಟ ಸಿದ್ದಾರ್ಥ್ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ವಿರುದ್ಧ ಲೈಂಗಿನ ಅವಹೇಳನಕಾರಿ ಟ್ವೀಟ್ ಮಾಡುವ ಮೂಲಕ ವಿವಾದಕ್ಕೆ ಸಿಲುಕಿಕೊಂಡಿದ್ದರು. ಈ ಹೇಳಿಕೆಯ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಈಗ ತನ್ನ ವರ್ತನೆಗೆ ನೆಹ್ವಾಲ್ ಅವರಿಗೆ ಪತ್ರ ಬರೆದು ಸೋಶಿಯಲ್ ಮೀಡಿಯಾದಲ್ಲೇ ಕ್ಷಮೆಯಾಚಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    ಆತ್ಮೀಯ ಸೈನಾ, ಕೆಲವು ದಿನಗಳ ಹಿಂದೆ ನಿಮ್ಮ ಟ್ವೀಟ್‍ಗೆ ಪ್ರತಿಕ್ರಿಯೆಯಾಗಿ ನಾನು ಬರೆದ ನನ್ನ ಅಸಭ್ಯ ಹಾಸ್ಯಕ್ಕಾಗಿ ನಾನು ನಿಮ್ಮಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ನಿಮ್ಮೊಂದಿಗೆ ಅನೇಕ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ ಅಂದು ನಿಮ್ಮ ಟ್ವೀಟ್ ಅನ್ನು ನಾನು ಓದಿದಾಗ ನನಗೆ ಕೋಪವನ್ನು ತಡೆದುಕೊಳ್ಳಲಾಗಲಿಲ್ಲ. ಅದಕ್ಕೆ ಆ ರೀತಿ ಪ್ರತಿಕ್ರಿಯೆ ನೀಡಿದೆ. ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್‍ಗೆ ಕೋವಿಡ್ ಪಾಸಿಟಿವ್

    ಯಾವುದೇ ದುರುದ್ದೇಶದಿಂದ ನಾನು ಆ ರೀತಿ ಪ್ರತಿಕ್ರಿಯೆಯನ್ನು ನೀಡಲಿಲ್ಲ. ನಾನು ಸ್ತ್ರೀವಾದಿ ಮಿತ್ರ. ನನ್ನ ಟ್ವೀಟ್‍ನಲ್ಲಿ ಯಾವುದೇ ಲಿಂಗವನ್ನು ಸೂಚಿಸಿಲ್ಲ. ನಿಮ್ಮ ಮೇಲೆ ಯಾವುದೇ ದುರುದ್ದೇಶದಿಂದ ಆ ಪದಗಳನ್ನು ಬಳಸಲಿಲ್ಲ ಎಂಬ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ. ಈ ಪತ್ರವನ್ನು ನೀವು ಸಮ್ಮತಿಸುತ್ತೀರಾ ಎಂದು ನಾನು ಭಾವಿಸುತ್ತೇನೆ. ನೀವು ಯಾವಾಗಲೂ ನನ್ನ ಚಾಂಪಿಯನ್ ಆಗಿರುತ್ತೀರಿ ಎಂದು ಬರೆದು ಕ್ಷಮೆಯನ್ನು ಕೇಳಿದ್ದಾರೆ.

    ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪ ಕುರಿತಂತೆ ಸೈನಾ ನೆಹ್ವಾಲ್ ಟ್ವೀಟ್ ಮಾಡಿದ್ದರು. ಯಾವುದೇ ರಾಷ್ಟ್ರ್ರದಲ್ಲಿ ಪ್ರಧಾನ ಮಂತ್ರಿಗೆ ಭದ್ರತೆ ಸಿಗದೇ ಇದ್ದರೆ, ಆ ದೇಶದಲ್ಲಿ ನಾವೂ ಸುರಕ್ಷಿತವಾಗಿದ್ದೇವೆ ಎಂದು ಹೇಳಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಅಜರೂಕತೆಯನ್ನು ನಾನು ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

    ಸೈನಾ ನೆಹ್ವಾಲ್ ಅವರ ಈ ಟ್ವೀಟ್ ಗೆ ಸಿದ್ದಾರ್ಥ್, ವಿಶ್ವದ ಸಟಲ್ ಕಾಕ್ ಚಾಂಪಿಯನ್. ದೇವರಿಗೆ ಧನ್ಯವಾದಗಳು ನಾವು ಭಾರತದ ರಕ್ಷಕರನ್ನು ಹೊಂದಿದ್ದೇವೆ. ರೆಹಾನ್ನಾ ನಿಮಗೆ ನಾಚಿಕೆಯಾಗಬೇಕು ಎಂದು ಟ್ವೀಟ್ ಮಾಡಿದ್ದರು. ಇದನ್ನೂ ಓದಿ:  ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ

    ಪುರುಷನ ಮಮಾರ್ಂಗವನ್ನು ಗ್ರಾಮ್ಯವಾಗಿ ‘ಕಾಕ್’ ಎಂದು ಕರೆಯಲಾಗುತ್ತದೆ. ಈ ಟ್ವೀಟ್ ಮೂಲಕ ಸಿದ್ದಾರ್ಥ್ ಸೈನಾ ಅವರನ್ನು ಲೈಂಗಿಕವಾಗಿ ಅವಮಾನಿಸಿದ್ದಾರೆ  ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ ಗರಂ ಸಿದ್ದಾರ್ಥ್ ಖಾತೆಯನ್ನೇ ಬ್ಲಾಕ್ ಮಾಡುವಂತೆ ಟ್ವಿಟ್ಟರ್‌ಗೆ ಪತ್ರ ಬರೆದಿದೆ.

  • ಸ್ಕ್ರೀನ್‍ನಲ್ಲಿ ಅಪ್ಪು ಬಯೋಪಿಕ್ – ಸುಳಿವು ನೀಡಿದ ಸಂತೋಷ್ ಆನಂದ್‍ರಾಮ್

    ಸ್ಕ್ರೀನ್‍ನಲ್ಲಿ ಅಪ್ಪು ಬಯೋಪಿಕ್ – ಸುಳಿವು ನೀಡಿದ ಸಂತೋಷ್ ಆನಂದ್‍ರಾಮ್

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿ ವಾರಗಳು ಕಳೆಯುತ್ತಿದ್ದರೂ ಅವರ ನೆನಪು ಮಾತ್ರ ಇನ್ನು ಹಸಿಯಾಗಿಯೇ ಇದೆ. ಈ ಹಿನ್ನೆಲೆ ಅಭಿಮಾನಿಯೊಬ್ಬರು ನಿರ್ದೇಶಕ ಸಂತೋಷ್ ಆನಂದ್‍ರಾಮ್ ಅವರನ್ನು ಅಪ್ಪು ಬಯೋಪಿಕ್ ತೆಗೆಯುವಂತೆ ಮನವಿ ಮಾಡಿಕೊಂಡಿದ್ದು, ರಾಮ್ ಅದಕ್ಕೆ ಒಪ್ಪಿಕೊಂಡಿದ್ದಾರೆ.

    ಅಪ್ಪು ಜೊತೆ ಸಂತೋಷ್ ಆನಂದ್‍ರಾಮ್ ಅವರು ಕೆಲಸ ಮಾಡಿ ಒಳ್ಳೆಯ ಸಿನಿಮಾಗಳನ್ನು ನೀಡಿದ್ದಾರೆ. ಇವರಿಬ್ಬರ ನಡುವೆ ಒಳ್ಳೆಯ ಬಾಂಧವ್ಯವಿದೆ. ಈ ಪರಿಣಾಮ ರಾಮ್ ಅವರು, ನಿಮ್ಮಲ್ಲಿ ಇದ್ದಂತಹ ನಿಷ್ಕಲ್ಮಶ ಮನಸ್ಸು ಮಗುವಿನಷ್ಟೇ ಚಂದ. ನಿಮ್ಮ ನಗುವಿನಲ್ಲಿ ಯಾವುದೇ ರೀತಿಯ ಅಹಂ ಇಲ್ಲ. ಅದಕ್ಕೆ ನೀವು ನಿಮ್ಮನ್ನು ಇಷ್ಟಪಡುವ ಎಲ್ಲ ಮಕ್ಕಳಲ್ಲೂ ಇದ್ದಿರಾ. ನೀವು ಇಲ್ಲ ಎಂದು ನಾನು ಎಂದೂ ಸಹ ಭಾವಿಸುವುದಿಲ್ಲ. ನಿಮಗೆ ಸಂಬಂಧ ಪಟ್ಟ ಪ್ರತಿ ಪೋಸ್ಟ್ ನಲ್ಲೂ ನಿಮ್ಮನ್ನು ಟ್ಯಾಗ್ ಮಾಡುತ್ತೇನೆ. ನೀವು ನನಗೆ ಸದಾ ಜೀವಂತ ಎಂದು ಬರೆದು ಟ್ವೀಟ್ ಮಾಡಿದ್ದರು. ಇದನ್ನೂ ಓದಿ:  ಪ್ರಾಣವನ್ನೇ ಪಣಕ್ಕಿಟ್ಟು ಅರ್ಚಕನನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್ – ವೀಡಿಯೋ ವೈರಲ್

    ಈ ಸಾಲುಗಳನ್ನು ನೋಡಿದ ಅಪ್ಪು ಅಭಿಮಾನಿಗಳು ರಾಮ್ ಅವರಿಗೆ ಅಪ್ಪುಗೊಸ್ಕರ ಒಂದು ಒಯೋಪಿಕ್ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ಉತ್ಸಾಹದಿಂದ ಆನಂದ್‍ರಾಮ್ ಅವರು, ನಾನು ಅವರ ಬಗ್ಗೆ ತೆರೆ ಮೇಲೆ ತರಲು ನನ್ನ ಕೈಯಲ್ಲಿ ಆದಷ್ಟು ಪ್ರಯತ್ನ ಮಾಡುತ್ತೇನೆ ಎಂದು ರಿಪ್ಲೈ ಮಾಡಿದ್ದಾರೆ.

    ಅದು ಅಲ್ಲದೇ ಅಭಿಮಾನಿ, ಅಪ್ಪು ಸರ್‍ಗೋಸ್ಕರ ಪ್ರತಿ ವರ್ಷ ಒಂದು ಹಾಡನ್ನು ಮಾಡಿ. ಅದು ನಮಗೆ ಪ್ರಾರ್ಥನೆ ಆಗಿರುತ್ತೆ ಎಂದು ಕೇಳಿಕೊಂಡಿದ್ದಾರೆ. ಅದಕ್ಕೆ ರಾಮ್ ಅವರು, 1000% ಪಕ್ಕ ಎಂದು ರಿಪ್ಲೈ ಮಾಡಿದ್ದಾರೆ. ಇದನ್ನೂ ಓದಿ: ಇನ್ನು ಮುಂದೆ ಪತಿ ಪತ್ನಿಯ ಹುಟ್ಟುಹಬ್ಬ ಮರೆತರೆ ಜೈಲೇ ಗತಿ!

  • ತಂದೆಯ ಬಳಿಕ ಟ್ವಿಟ್ಟರ್‌ಗೆ ಕಾಲಿಟ್ಟ ರಾಮ್ ಚರಣ್

    ತಂದೆಯ ಬಳಿಕ ಟ್ವಿಟ್ಟರ್‌ಗೆ ಕಾಲಿಟ್ಟ ರಾಮ್ ಚರಣ್

    ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ ಪುತ್ರ ನಟ ರಾಮ್‍ಚರಣ್‍ತೇಜಾ ತಂದೆಯ ಬಳಿಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಹುಟ್ಟುಹಬ್ಬದ ಮುನ್ನಾದಿನವೇ ಅಭಿಮಾನಿಗಳಿಗೆ ಈ ಸಂತಸ ಸುದ್ದಿ ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ಮೆಗಾ ಸ್ಟಾರ್ ಚಿರಂಜೀವಿ ಸಾಮಾಜಿಕ ಜಲತಾಣಗಳಿಗೆ ಎಂಟ್ರಿ ಕೊಟ್ಟಿದ್ದು, ಈ ಮೂಲಕ ಅಭಿಮಾನಿಗಳಿ ಹತ್ತಿರವಾಗಲು ಯತ್ನಿಸಿದ್ದರು. ಇದೀಗ ರಾಮ್ ಚರಣ್ ಸಹ ಅದೇ ಹಾದಿ ತುಳಿದಿದ್ದು, ಅಭಿಮಾನಿಗಳಿಗೆ ಹತ್ತಿರವಾಗಲು ಪ್ರಯತ್ನಿಸಿದ್ದಾರೆ.

    ಇದೀಗ ರಾಮ್‍ಚರಣ್‍ತೇಜಾ ಸಿಹಿ ಸುದ್ದಿಯೊಂದನ್ನು ತಿಳಿಸಿದ್ದು, ತಮ್ಮ ತಂದೆಯ ಬಳಿಕ ಅವರೂ ಸಹ ಟ್ವಿಟ್ಟರ್ ಖಾತೆಯನ್ನು ತೆರೆದಿದ್ದಾರೆ. ಹಲವು ವರ್ಷಗಳ ಹಿಂದೆ ಟ್ವಿಟ್ಟರ್ ನಿಂದ ದೂರ ಉಳಿದಿದ್ದ ರಾಮ್ ಚರಣ್ ಇದೀಗ ಮತ್ತೆ ರೀ ಎಂಟ್ರಿ ಕೊಟ್ಟಿದ್ದಾರೆ. ಅದೂ ಸಹ ತಮ್ಮ ತಂದೆ ಖಾತೆ ತೆರೆದು ಕೆಲವೇ ದಿನಗಳ ನಂತರ ಅವರೂ ತೆರೆದಿದ್ದಾರೆ. ಅಲ್ಲದೆ ಹುಟ್ಟುಹಬ್ಬದ ಮುನ್ನಾದಿನ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಪ್ರವೇಶಿಸಿರುವುದು ಅಭಿಮಾನಿಗಳಲ್ಲಿ ಸಂತಸವನ್ನುಂಟು ಮಾಡಿದೆ. ಕೇವಲ ಒಂದೇ ದಿನಕ್ಕೆ ಒಂದೂವರೆ ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ.

    ಟ್ವೀಟ್ ಖಾತೆ ತೆರೆಯುತ್ತಿದ್ದಂತೆ ಕೊರೊನಾ ಮಹಾಮಾರಿ ತಡೆಗಟ್ಟಲು ಪರಿಹಾರ ಮೊತ್ತ ನೀಡಿರುವ ಪ್ರತಿಯನ್ನು ಹಂಚಿಕೊಂಡಿದ್ದು, ಕೇಂದ್ರ, ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳಿಗೆ ಒಟ್ಟು 70 ಲಕ್ಷ ರೂ. ನೀಡಿರುವುದಾಗಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದಾದ ಬಳಿಕ ಹುಟ್ಟುಹಬ್ಬಕ್ಕೆ ಜೂನಿಯರ್ ಎನ್‍ಟಿಆರ್ ಅವರ ಡಿಜಿಟಲ್ ಸರ್ಪ್ರೈಸ್ ನೀಡುವ ಕುರಿತ ಟ್ವೀಟನ್ನು ರೀಟ್ವೀಟ್ ಮಾಡಿದ್ದು, ನಾನು ಸರಿಯಾದ ಸಮಯಕ್ಕೇ ಟ್ವಿಟ್ಟರ್ ಖಾತೆ ತೆರೆದಿದ್ದೇನೆ ಅನ್ನಿಸುತ್ತಿದೆ. ಇಲ್ಲವಾದಲ್ಲಿ ನಿಮ್ಮ ಸರ್ಪ್ರೈಸ್ ಮಿಸ್ ಮಾಡಿಕೊಳ್ಳುತ್ತಿದ್ದೆ ಎನ್ನಿಸುತ್ತಿದೆ ಬ್ರೊ ಎಂದು ಹೇಳಿದ್ದಾರೆ. ಅಲ್ಲದೆ ನಾಳೆಯ ವರೆಗೆ ಕಾಯಲು ಆಗುತ್ತಿಲ್ಲ ಎಂದು ತಿಳಿಸಿದ್ದಾರೆ.

    ನಂತರ ಎನ್‍ಟಿಆರ್ ಅವರು, ನಿಮ್ಮ ಗಿಫ್ಟನ್ನು ರಾಜಮೌಳಿಯವರಿಗೆ ಕಳುಹಿಸಿದ್ದೇನೆ ಹೀಗಾಗಿ ಗಿಫ್ಟ್ ನಿಮಗೆ ತಲುಪುವುದು ಸ್ವಲ್ಪ ತಡವಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಮ್‍ಚರಣ್, ಏನು ಅವರಿಗೆ ಕಳುಹಿಸಿದ್ದೀರಾ, ಇಂದು ನಾನು ಅದನ್ನು ಪಡೆಯಬಹುದೇ ಎಂದು ತಿಳಿಸಿದ್ದಾರೆ.

    ಬಳಿಕ ತಂದೆ ಮೆಗಾ ಸ್ಟಾರ್ ಚಿರಂಜೀವಿಯವರ ಟ್ವೀಟ್‍ಗೆ ರೀಟ್ವೀಟ್ ಮಾಡಿದ್ದು, ಚಿರಂಜೀವಿ ಅವರು ಮಗ ಚಿಕ್ಕವನಿದ್ದಾಗಿನ ಫೋಟೋವನ್ನು ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ, ಇದಕ್ಕೆ ರಾಮ್‍ಚರಣ್ ಪ್ರತಿಕ್ರಿಯಿಸಿ, ನನ್ನ ಹೀರೋನಿಂದ ಹೃದಯ ಕಲಕುವ ಸಾಲುಗಳು, ಇದರಿಂದಾಗಿ ಈ ದಿನ ಏನಾದರೂ ಸಂಬಂಧವಿದೆಯೇ ಎಂದು ಹೇಳಲಾರೆ, ನಮ್ಮ ಅಪ್ಪ ಮಾಡಿದ್ದಾರೆ ಎಂಬುದು ನನಗೆ ತಿಳಿದಿದೆ. ಶುಭಾಶಯ ತಿಳಿಸಿದ್ದಕ್ಕೆ ಧನ್ಯವಾದ, ಲವ್ ಯು ಅಪ್ಪಾ ಎಂದು ಟ್ವೀಟ್‍ಗೆ ಪ್ರತಿಕ್ರಿಯಿಸಿದ್ದಾರೆ.

    ಅಭಿಮಾನಿಗಳ ಕುರಿತು ಸಹ ಟ್ವೀಟ್ ಮಾಡಿರುವ ಅವರು, ಮಧ್ಯರಾತ್ರಿಯಿಂದಲೂ ಮೆಸೇಜ್‍ಗಳ ಮೂಲಕ ಶುಭಾಶಯ ತಿಳಿಸುತ್ತಿದ್ದೀರಿ. ನಿಮ್ಮೆಲ್ಲರಿಂದ ನಾನು ಒಂದೇ ಗಿಫ್ಟ್ ಬಯಸುವುದು. ಲಾಕ್‍ಡೌನ್ ಕೊನೆಗೊಳ್ಳುವ ವರೆಗೂ ದಯವಿಟ್ಟು ಮನೆಯಲ್ಲೇ ಇರಿ. ಇದೇ ನೀವು ನನಗೆ ಕೊಡುವ ದೊಡ್ಡ ಉಡುಗೊರೆ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

    ಸದ್ಯ ಆರ್‍ಆರ್‍ಆರ್ ಸಿನಿಮಾದಲ್ಲಿ ರಾಮ್‍ಚರಣ್ ಬ್ಯುಸಿಯಾಗಿದ್ದು, ಕೊರೊನಾ ಲಾಕ್‍ಡೌನ್ ಹಿನ್ನೆಲೆ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ. ಈ ಚಿತ್ರದಲ್ಲಿ ರಾಮ್‍ಚರಣ್ ಹಾಗೂ ಜೂನಿಯರ್ ಎನ್‍ಟಿಆರ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಎಸ್.ಎಸ್.ರಾಜಮೌಳಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಹೀಗಾಗಿ ಚಿತ್ರ ಸಾಕಷ್ಟು ಕುತೂಹಲ ಮೂಡಿಸಿದೆ. ಒಟ್ಟು ಐದು ಭಾಷೆಗಳಲ್ಲಿ ಸಿನಿಮಾ ತಯಾರಾಗುತ್ತಿದೆ. ಇತ್ತೀಚೆಗಷ್ಟೇ ಇದರ ಮೋಷನ್ ಪೋಸ್ಟರ್ ಹಾಗೂ ಆರ್‍ಆರ್‍ಆರ್ ಟೈಟಲ್ ಗುಟ್ಟನ್ನು ರಾಜಮೌಳಿ ಅವರು ಬಹಿರಂಗ ಪಡಿಸಿದ್ದಾರೆ. ಹೀಗಾಗಿ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ.

  • ಸೊಸೆಯ ಬಗ್ಗೆ ‘ಬಿಗ್’ ಬಿ ಮಾತು

    ಸೊಸೆಯ ಬಗ್ಗೆ ‘ಬಿಗ್’ ಬಿ ಮಾತು

    ಮುಂಬೈ: ಬಾಲಿವುಡ್ ಹಿರಿಯ ನಾಯಕ ಬಿಗ್ ಬಿ ಅಮಿತಾಬ್ ಬಚ್ಚನ್ ಸೊಸೆಯ ಬಗ್ಗೆ ತಮ್ಮ ಮನದಾಳದ ಮಾತನ್ನು ಟ್ವಿಟ್ಟರ್ ನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅಮಿತಾ ಬಚ್ಚನ್ ಟ್ವೀಟ್ ಮಹಿಳೆಯರ ಮನ ಗೆದ್ದಿದ್ದು, ನಿಮ್ಮ ಸೊಸೆ ಐಶ್ವರ್ಯ ಅದೃಷ್ಟವಂತೆ ಎಂಬಿತ್ಯಾದಿ ಕಮೆಂಟ್ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

    ಅಮಿತಾಬ್ ಬಚ್ಚನ್ ಟ್ವೀಟ್:
    ಜನರು ”ಇವಳು ನಮ್ಮ ಮನೆಯ ಸೊಸೆ” ಎಂದು ಸಾಮಾನ್ಯವಾಗಿ ಹೇಳುತ್ತಾರೆ. ಆದರೆ ”ಈ ಮನೆ ನಮ್ಮ ಸೊಸೆಯದ್ದು” ಎಂದು ಯಾಕೆ ಹೇಳಲ್ಲ ಅಂತಾ ಅಮಿತಾಬ್ ಬಚ್ಚನ್ ಅರ್ಥಪೂರ್ಣವಾದ ಎರಡು ಸಾಲುಗಳನ್ನು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    ಮನೆಗೆ ಬರುವ ಸೊಸೆಯನ್ನು ಬೇರೆಯವರಂತೆ ಕಾಣಬೇಡಿ. ಹೊಸ ಕುಟುಂಬ ಮತ್ತು ಮನೆ ಆಕೆಯದ್ದು ಎಂದು ಭಾವ ಸೊಸೆಗೆ ಬರಬೇಕು ಎಂಬ ಭಾವರ್ಥದಲ್ಲಿ ಅಮಿತಾಬ್ ಕೆಲವು ಸಾಲುಗಳು ಬರೆದುಕೊಂಡಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಅಮಿತಾಬ್ ಬಚ್ಚನ್ ಮಂಗಳವಾರ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ರೋಟಿನ್ ಚೆಕಪ್ ಗಾಗಿ ಬಚ್ಚನ್ ಆಸ್ಪತ್ರೆಗೆ ದಾಖಲಾಗಿದ್ದರು. ಅಮಿತಾಬ್ ಆರೋಗ್ಯದಿಂದ ಇದ್ದಾರೆ ಎಂದು ವರದಿಯಾಗಿತ್ತು.

    ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಪತ್ನಿ ಜಯಾ ಬಚ್ಚನ್ ರ ಕರ್ವಾ ಚೌತ ವ್ರತದಲ್ಲಿ ಭಾಗಿಯಾಗಿದ್ದರು. 77 ವರ್ಷದ ಅಮಿತಾಬ್ ಬಚ್ಚನ್ ಕೈಯಲ್ಲಿ ಇಂದಿಗೂ ಸಾಲು ಸಾಲು ಸಿನಿಮಾಗಳಿವೆ. ಬಾಲಿವುಡ್ ಮಾತ್ರವಲ್ಲದೇ ಕಾಲಿವುಡ್ ಮತ್ತು ಟಾಲಿವುಡ್ ನಲ್ಲಿಯೂ ಬಿಗ್ ಬಿ ಸದ್ದು ಮಾಡುತ್ತಿದ್ದಾರೆ. ಸದ್ಯ ಕಿರುತೆರೆಯಲ್ಲಿ ಅಮಿತಾಬ್ ಬಚ್ಚನ್ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದಾರೆ.

  • ವಿಕ್ರಮ್ ನಿನಗೆ ದಂಡ ಹಾಕಲ್ಲ ಸಂಪರ್ಕಕ್ಕೆ ಸಿಗು: ನಾಗ್ಪುರ್ ಪೊಲೀಸ್

    ವಿಕ್ರಮ್ ನಿನಗೆ ದಂಡ ಹಾಕಲ್ಲ ಸಂಪರ್ಕಕ್ಕೆ ಸಿಗು: ನಾಗ್ಪುರ್ ಪೊಲೀಸ್

    ಮುಂಬೈ: ಇಸ್ರೋನ ಬಹುನಿರೀಕ್ಷೆಯ ಚಂದ್ರಯಾನ-2 ರ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲು 2.1 ಕಿ.ಮೀ ಅಂತರದಲ್ಲಿ ಸಂಪರ್ಕವನ್ನು ಕಳೆದುಕೊಂಡಿತ್ತು. ಈ ವಿಚಾರವಾಗಿ ಟ್ವೀಟ್ ಮಾಡಿರುವ ನಾಗ್ಪುರ್ ಪೊಲೀಸ್ ವಿಕ್ರಮ್ ನಿನಗೆ ದಂಡ ಹಾಕಲ್ಲ ಸಂಪರ್ಕಕ್ಕೆ ಸಿಗು ಎಂದು ಟ್ವೀಟ್ ಮಾಡಿದ್ದಾರೆ,

    ಶನಿವಾರ ಚಂದ್ರನ ದಕ್ಷಿಣ ಕಕ್ಷೆಯಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗಬೇಕಿದ್ದ ವಿಕ್ರಮ್ ಲ್ಯಾಂಡರ್, ಲ್ಯಾಂಡಿಂಗ್‍ಗೆ ಕೆಲವು ನಿಮಿಷ ಬಾಕಿಯಿದ್ದಾಗ ತನ್ನ ಕಕ್ಷೆಯನ್ನು ಬದಲಿಸಿ ಇಸ್ರೋದಿಂದ ಸಂಪರ್ಕವನ್ನು ಕಳೆದುಕೊಂಡಿತ್ತು. ಇದಕ್ಕೆ ಸಂಬಧಿಸಿದಂತೆ ನಾಗ್ಪುರ ಪೊಲೀಸ್ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಇಸ್ರೋಗೆ ಸಂಪರ್ಕಕ್ಕೆ ಸಿಗದ ವಿಕ್ರಮ್ ಲ್ಯಾಂಡರ್ ಕುರಿತು ಟ್ವೀಟ್ ಮಾಡಿರುವ ನಾಗ್ಪುರ್ ಪೊಲೀಸರು, ನಮ್ಮ ಪ್ರೀತಿಯ ವಿಕ್ರಮ್. ನೀನು ಸಿಗ್ನಲ್ ಜಂಪ್ ಮಾಡಿದ್ದೀಯಾ ಎಂದು ನಾವು ನಿನಗೆ ದಂಡ ಹಾಕಲ್ಲ. ದಯವಿಟ್ಟು ನೀನು ನಮ್ಮ ಸಂಪರ್ಕಕ್ಕೆ ಸಿಗು ಎಂದು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದೆ.

    ಈಗ ಈ ಟ್ವಿಟ್ಟರ್ ನೋಡಿದ ನೆಟ್ಟಿಗರು ಪೊಲೀಸರ ಈ ಟ್ವೀಟ್‍ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿಮ್ಮ ಟ್ವೀಟ್ ಅದ್ಭುತವಾಗಿದೆ. ನಿಮ್ಮ ಹಾಗೇ 130 ಕೋಟಿ ಭಾರತೀಯರು ವಿಕ್ರಮನ ಸಂಪರ್ಕಕ್ಕೆ ಕಾಯುತ್ತಿದ್ದಾರೆ ಎಂದು ಕೆಲವರು ರೀಟ್ವೀಟ್ ಮಾಡಿದ್ದಾರೆ. ಒಳ್ಳೆಯ ಮಾತುಗಳು ಸೋ ಕ್ಯೂಟ್ ಎಂದು ಕಮೆಂಟ್ ಮಾಡಿದ್ದಾರೆ.

    ಸಾಫ್ಟ್ ಲ್ಯಾಂಡಿಂಗ್ ಆಗದೆ ಹಾರ್ಡ್ ಲ್ಯಾಂಡಿಂಗ್ ಆದ ಕಾರಣ ವಿಕ್ರಮ್ ಲ್ಯಾಂಡರ್ ಮತ್ತೆ ಸಂಪರ್ಕ ಸಿಗುವುದು ಕಷ್ಟ ಎಂದು ಹೇಳಲಾಗಿತ್ತು. ಆದರೆ ಆರ್ಬಿಟರ್ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಬಿದ್ದಿರುವ ಥರ್ಮಲ್‍ನ ಫೋಟೋವನ್ನು ಕಳುಹಿಸಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ಭಾನುವಾರ ಹೇಳಿದ್ದರು. ಮುಂದಿನ ಮೂರು ದಿನಗಳಲ್ಲಿ ವಿಕ್ರಮ್ ಲ್ಯಾಂಡರ್ ಎಲ್ಲಿದೆ ಮತ್ತು ಹೇಗಿದೆ ಎಂಬಿತ್ಯಾದಿಗಳ ವಿಷಯಗಳ ಮಾಹಿತಿ ಸಿಗಲಿದೆ ಎಂದು ಹಲವು ವಿಜ್ಞಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದರು.

    ಹಿರಿಯ ವಿಜ್ಞಾನಿಯೊಬ್ಬರು, ಮುಂದಿನ ಮೂರು ದಿನಗಳಲ್ಲಿ ವಿಕ್ರಮ್ ಲ್ಯಾಂಡರ್ ಸಂಪರ್ಕ ಸಿಗುವ ಸಾಧ್ಯತೆಗಳಿವೆ. ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡು ಸ್ಥಳ ತಲುಪಲು ಆರ್ಬಿಟರ್ ಗೆ ಮೂರು ದಿನ ಸಮಯ ಬೇಕಾಗುತ್ತದೆ. ಕೊನೆಯ ಕ್ಷಣದಲ್ಲಿ ವಿಕ್ರಮ್ ತನ್ನ ಪಥ ಬದಲಿಸಿದ್ದರಿಂದ ಸಂಪರ್ಕ ಕಡಿತಗೊಂಡಿತು ಎಂದು ವಿವರಿಸಿದ್ದರು.

  • ಟ್ವಿಟ್ಟರ್ ಖಾತೆ ತೆರೆದ ಮೋಹನ್ ಭಾಗವತ್, ಆರ್‍ಎಸ್‍ಎಸ್ ನಾಯಕರು

    ಟ್ವಿಟ್ಟರ್ ಖಾತೆ ತೆರೆದ ಮೋಹನ್ ಭಾಗವತ್, ಆರ್‍ಎಸ್‍ಎಸ್ ನಾಯಕರು

    ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‍ಎಸ್‍ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಸಂಘದ ಇತರ ಮುಖಂಡರು ಟ್ವಿಟ್ಟರ್ ಖಾತೆ ತೆರೆದಿದ್ದಾರೆ.

    ಆರ್‍ಎಸ್‍ಎಸ್‍ನ ಸರಸಂಘ ಚಾಲಕ ಮೋಹನ್ ಭಾಗವತ್, ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ ಜೋಶಿ, ಜಂಟಿ ಪ್ರಧಾನ ಕಾಯದರ್ಶಿ ಸುರೇಶ್ ಸೋನಿ ಸೇರಿದಂತೆ ಒಟ್ಟು ಆರು ಜನ ಟ್ವಿಟ್ಟರ್ ಖಾತೆಯನ್ನು ತೆರೆದಿದ್ದಾರೆ. ನಕಲಿ ಖಾತೆಗಳ ಮೂಲಕ ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಈ ಖಾತೆಗಳನ್ನು ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಮೋಹನ್ ಭಗವತ್ ಅವರು ಮೇ ತಿಂಗಳಲ್ಲೇ ಖಾತೆ ತೆರೆದಿದ್ದು ಈ ವರೆಗೆ ಯಾವುದೇ ಟ್ವೀಟ್ ಮಾಡಿಲ್ಲ. ಅವರ ಟ್ವಿಟ್ಟರ್ ಖಾತೆ @DrMohanBhagwat ಆಗಿದೆ.

    ಅಲ್ಲದೆ, ಮೋಹನ್ ಭಾಗವತ್ ಅವರು ಆರ್‍ಎಸ್‍ಎಸ್‍ನ ಅಧಿಕೃತ ಟ್ವಿಟ್ಟರ್ ಖಾತೆಯೊಂದನ್ನೇ ಫಾಲೋ ಮಾಡುತ್ತಿದ್ದಾರೆ. ಆರ್‍ಎಸ್‍ಎಸ್ ಖಾತೆಯನ್ನು 2011ರಲ್ಲಿ ತೆರೆಯಲಾಗಿದ್ದು, 1.3 ಮಿಲಿಯನ್ ಹಿಂಬಾಲಕರನ್ನು ಹೊಂದಿದೆ. ಅಲ್ಲದೆ, ಆರ್‍ಎಸ್‍ಎಸ್‍ನ ಫೇಸ್‍ಬುಕ್ ಪೇಜ್‍ನ್ನು 54 ಲಕ್ಷಕ್ಕೂ ಅಧಿಕ ಜನ ಲೈಕ್ ಮಾಡಿದ್ದಾರೆ. ಆರ್‍ಎಸ್‍ಎಸ್‍ನ ಟ್ವಿಟ್ಟರ್ ಖಾತೆಯನ್ನು ಕೇವಲ ಹೇಳಿಕೆಗಳ ಬಿಡುಗಡೆ ಹಾಗೂ ಮಾಹಿತಿ ರವಾನೆಗೆ ಮಾತ್ರ ಬಳಸಲಾಗುತ್ತಿದೆ.

  • ಕಾಲೆಳೆದ ಅಭಿಮಾನಿಗೆ ಸ್ಮಾರ್ಟ್ ಉತ್ತರ ಕೊಟ್ಟ ಟೀಂ ಇಂಡಿಯಾ ಆಟಗಾರ್ತಿ!

    ಕಾಲೆಳೆದ ಅಭಿಮಾನಿಗೆ ಸ್ಮಾರ್ಟ್ ಉತ್ತರ ಕೊಟ್ಟ ಟೀಂ ಇಂಡಿಯಾ ಆಟಗಾರ್ತಿ!

    ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಜೆಮಿಮಾ ರಾಡ್ರಿಗಾಸ್ ಅವರು ತಮ್ಮ ಹುಚ್ಚು ಅಭಿಮಾನಿಯೊಬ್ಬನ ಟ್ವೀಟ್‍ಗೆ ಬುದ್ಧಿವಂತಿಕೆಯ ಉತ್ತರ ನೀಡಿ ನೆಟ್ಟಿಗರಿಂದ ಮೆಚ್ಚುಗೆ ಪಡೆದಿದ್ದಾರೆ.

    ಜೆಮಿಮಾ ರಾಡ್ರಿಗಾಸ್ ಅವರು ಭಾರತೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ತನ್ನ ಸ್ಫೋಟಕ ಬ್ಯಾಟಿಂಗ್‍ನಿಂದ ಗುರುತಿಸಿಕೊಂಡವರು. ಈ ಬಾರಿಯ 2019ರ ಮಹಿಳಾ ಟಿ20 ಲೀಗ್‍ನಲ್ಲಿ ತನ್ನ ತಂಡ ಸೂಪರ್‍ನೋವಾಸ್ ಪರ ಉತ್ತಮವಾಗಿ ಅಡಿದ್ದರು ಮತ್ತು ಆ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

    ಗುರುವಾರ ಮಹಿಳಾ ಟಿ20 ಲೀಗ್ ಫೈನಲ್ ಪಂದ್ಯದ ಬಳಿಕ ಅಭಿಮಾನಿ ವರುಣ್, “ಜೆಮಿನಾ ನಾನು ನಿಮ್ಮನ್ನು ಇಷ್ಟಪಡುತ್ತೇನೆ. ನೀವು ತುಂಬಾ ಸುಂದರವಾಗಿ ಇದ್ದಿರಾ, ನೀವು ಯಾರನ್ನಾದರೂ ನೋಡುತ್ತಿದ್ದಿರಾ?” ಎಂದು ಬರೆದು ಜೆಮಿಮಾ ರಾಡ್ರಿಗಾಸ್ ಅವನ್ನು ಟ್ಯಾಗ್ ಮಾಡಿ ಪ್ರೇಮ ನಿವೇದನೆ ಮಾಡಿದ್ದ.

    ಇದಕ್ಕೆ ಬಹಳ ಬುದ್ದಿವಂತಿಕೆಯಿಂದ ಉತ್ತರ ನೀಡಿರುವ ರಾಡ್ರಿಗಾಸ್ “ಹೌದು ನಾನು ನೋಡುತ್ತಿದ್ದೇನೆ, ಈ ಪಂದ್ಯದ ನಂತರ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉತ್ತಮವಾದ ಭವಿಷ್ಯವನ್ನು ನೋಡುತ್ತಿದ್ದೇನೆ” ಎಂದು ಉತ್ತರಿಸಿ ಅಭಿಮಾನಿಯ ಬಾಯಿಯನ್ನು ಮುಚ್ಚಿಸಿದ್ದಾರೆ.

    ಮಹಿಳಾ ಆಟಗಾರ್ತಿಯ ಈ ಉತ್ತರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ನೆಟ್ಟಿಗರು ತುಂಬಾ ಒಳ್ಳೆಯ ಉತ್ತರ ಎಂದು ಕಾಮೆಂಟ್ ಮಾಡಿದ್ದಾರೆ. 19 ವರ್ಷದ ಮುಂಬೈನ ಬಲಗೈ ಆಟಗಾರ್ತಿ ರಾಡ್ರಿಗಾಸ್ ಮಹಿಳಾ ಟಿ20 ಲೀಗ್‍ನಲ್ಲಿ ಮೂರು ಪಂದ್ಯಗಳನ್ನಾಡಿ ಒಟ್ಟು 123 ರನ್ ಹೊಡೆದಿದ್ದಾರೆ. ಇದರಲ್ಲಿ ವಿಲೊಸಿಟಿ ತಂಡದ ವಿರುದ್ಧ ಹೊಡೆದ 77 ರನ್ (48 ಎಸೆತ) ಅವರ ಗರಿಷ್ಠ ಮೊತ್ತವಾಗಿದೆ. ಅವರ ಈ ಸಾಧನೆಗೆ 2019 ರ ಮಹಿಳಾ ಟಿ20 ಲೀಗ್‍ನಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ದೂರಕಿದೆ.