Tag: ಟ್ವೀಟರ್

  • ಖಾಸಗಿ ಫೋಟೋ, ವೀಡಿಯೋ ಹಂಚಿಕೆಗೆ ಟ್ವಿಟ್ಟರ್ ನಿರ್ಬಂಧ

    ಖಾಸಗಿ ಫೋಟೋ, ವೀಡಿಯೋ ಹಂಚಿಕೆಗೆ ಟ್ವಿಟ್ಟರ್ ನಿರ್ಬಂಧ

    ನವದೆಹಲಿ: ವೈಯಕ್ತಿಕ ಫೋಟೋ ಮತ್ತು ವೀಡಿಯೋಗಳನ್ನು ವ್ಯಕ್ತಿಯ ಅನುಮತಿ ಇಲ್ಲದೆ ಹಂಚಿಕೊಳ್ಳುಲು ಇನ್ಮುಂದೆ ಅವಕಾಶ ನೀಡುವುದಿಲ್ಲ ಎಂದು ಸಮಾಜಿಕ ಜಾಲತಾಣ ಕಂಪನಿಯಾದ ಟ್ವಿಟ್ಟರ್ ಹೇಳಿದೆ.

    ಈಗಾಗಲೇ ಅನ್ಯರ ಫೋನ್ ನಂಬರ್, ವಿಳಾಸ, ಗುರುತಿನ ಚೀಟಿಯಂತಹ ಖಾಸಗಿ ಮಾಹಿತಿಯನ್ನು ಹಂಚಿಕೊಳ್ಳುವುದನ್ನು ನಿಷೇಧಿಸಿ ಟ್ವೀಟರ್ ನೀತಿ ಜಾರಿ ಮಾಡಿದೆ. ಹೊಸ ನಿಯಮದ ಅನ್ವಯ ಬಳಕೆದಾರರು ಪ್ರತಿ ಬಾರಿ ಫೋಟೋ ಅಥವಾ ವೀಡಿಯೋ ಅಪ್ಲೋಡ್ ಮಾಡುವಾಗಲೂ ಟ್ವೀಟರ್ ಪರಾಮರ್ಶೆ ಮಾಡುವುದಿಲ್ಲ.  ಇದನ್ನೂ ಓದಿ: ಟ್ವಿಟ್ಟರ್‌ ಸಿಇಒ ಪರಾಗ್‌ ಅಗರ್‌ವಾಲ್‌ ಸಿಗುತ್ತೆ ಕೋಟಿಗಟ್ಟಲೇ ಸಂಬಳ + ಬೋನಸ್‌

    ಚಿತ್ರಿತ ವ್ಯಕ್ತಿಗಳು ಅಥವಾ ಅಧಿಕೃತ ಪ್ರತಿನಿಧಿಗಳು ತಮ್ಮ ಖಾಸಗಿ ಚಿತ್ರ ಅಥವಾ ವೀಡಿಯೋವನ್ನು ಹಂಚಿಕೊಳ್ಳಲು ತಾವು ಒಪ್ಪಿಗೆ ನೀಡಿಲ್ಲ ಎಂದು ನಮಗೆ ಸೂಚಿಸಿದಾಗ, ನಾವು ಅದನ್ನು ತೆಗೆದುಹಾಕುತ್ತೇವೆ ಎಂದು ಟ್ವೀಟರ್ ತನ್ನ ಬ್ಲಾಗ್  ಪೋಸ್ಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಟ್ವಿಟ್ಟರ್‌ CEO ಜಾಕ್‌ ಡಾರ್ಸಿ ರಾಜೀನಾಮೆ – ಭಾರತೀಯ ಪರಾಗ್‌ ಅಗರ್‌ವಾಲ್‌ಗೆ ಒಲಿಯಿತು ಪಟ್ಟ


    ಮೈಕ್ರೋಬ್ಲಾಗಿಂಗ್ ಕಂಪನಿ ಟ್ವಿಟ್ಟರ್ ಸಹ-ಸಂಸ್ಥಾಪಕ ಜಾಕ್ ಡಾರ್ಸೆ ಸೋಮವಾರ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯಿಂದ ಕೆಳಗಿಳಿದರು. ಟ್ವೀಟರ್‌ನ ನೂತನ ಸಿಇಒ ಆಗಿ ಭಾರತೀಯ ಮೂಲದ ಪರಾಗ್ ಅಗರ್‌ವಾಲ್ ಅಧಿಕಾರ ವಹಿಸಿಕೊಂಡಿದ್ದಾರೆ.

  • ಆರ್‌ಎಸ್‌ಎಸ್‌ ಸದಸ್ಯನಾಗಿದ್ದ ಡಿಕೆಶಿಯವರೇ ಸಿದ್ದರಾಮಯ್ಯನವರ ಮಾತನ್ನು ಒಪ್ಪುತ್ತೀರಾ – ಬಿಜೆಪಿ ಪ್ರಶ್ನೆ

    ಆರ್‌ಎಸ್‌ಎಸ್‌ ಸದಸ್ಯನಾಗಿದ್ದ ಡಿಕೆಶಿಯವರೇ ಸಿದ್ದರಾಮಯ್ಯನವರ ಮಾತನ್ನು ಒಪ್ಪುತ್ತೀರಾ – ಬಿಜೆಪಿ ಪ್ರಶ್ನೆ

    ಬೆಂಗಳೂರು:  ತಾಲಿಬಾನ್ ಅನ್ನುವ ಸಿದ್ದರಾಮಯ್ಯ ಹೇಳಿಕೆಗೆ ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಬಿಜೆಪಿ ಈಗ ತಿರುಗೇಟು ನೀಡಿದೆ.

    ನಾನು ಆರ್‌ಎಸ್‌ಎಸ್‌ ಸದಸ್ಯನಾಗಿದ್ದ ಡಿಕೆಶಿಯವರೇ ಸಿದ್ದರಾಮಯ್ಯನವರ ಮಾತನ್ನು ಒಪ್ಪುತ್ತೀರಾ – ಬಿಜೆಪಿ ಪ್ರಶ್ನೆ ಶಾಖೆಯ ಸದಸ್ಯನಾಗಿದ್ದೆ. ನಮಸ್ತೇ ಸದಾ ವತ್ಸಲೆ ಗೀತೆಯನ್ನೂ ಹಾಡಿದ್ದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಅದು ನಿಮ್ಮ ಹೇಳಿಕೆ ಅಲ್ಲವೇ? ಈಗ ನಿಮ್ಮ ಪಟಾಲಂಗಳ ಬಾಯಿಯಿಂದ ಹೊರಡುತ್ತಿರುವ ಮಾತುಗಳನ್ನು ನೀವು ಒಪ್ಪಿಕೊಳ್ಳುವಿರಾ? ನಿಮ್ಮನ್ನು ಅಡಕತ್ತರಿಯಲ್ಲಿ ಸಿಲುಕಿಸುವ ಹುನ್ನಾರವಿದು ಎಂದಿದೆ. ಇದನ್ನೂ ಓದಿ: ಆರ್‌ಎಸ್‌ಎಸ್‌ ಕೂಡಾ ತಾಲಿಬಾನ್ ಸಂಘಟನೆಯಂತೆ: ಧ್ರುವ ನಾರಾಯಣ್

    ಸಿದ್ದರಾಮಯ್ಯ ಅವರ ತಾಲಿಬಾನ್ ಹೇಳಿಕೆಯನ್ನು ಕಾಂಗ್ರೆಸ್ ಒಪ್ಪುತ್ತದೆಯೇ? ಕೆಪಿಸಿಸಿ ಅಧ್ಯಕ್ಷರಾಗಿ ಈ ಹೇಳಿಕೆಯನ್ನು ದೃಢೀಕರಿಸುತ್ತಾರೆಯೇ? ಕೆಪಿಸಿಸಿ ಅಧ್ಯಕ್ಷರೇ, ಹಿಂದೂಗಳ ಭಾವನೆ ಕೆಣಕುವ ಸಿದ್ದರಾಮಯ್ಯ ಚಾಳಿಗೆ ನೀವೂ ಕೈ ಜೋಡಿಸುತ್ತೀರಾ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದೆ. ಇದನ್ನೂ ಓದಿ: ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯಗಿಲ್ಲ : ಮಹಾಂತೇಶ್ ಕವಟಗಿಮಠ

    ಕಾಂಗ್ರೆಸ್ ಪಕ್ಷದ ಬೌದ್ಧಿಕ ಸಾಮಥ್ರ್ಯ ವಿಸ್ತಾರಗೊಳಿಸಿದ ಮಾಜಿ ರಾಷ್ಟ್ರಪತಿ ದಿ. ಪ್ರಣಬ್ ಮುಖರ್ಜಿ ಅವರು ಸಂಘ ಕಾರ್ಯಕ್ರಮಕ್ಕೆ ಭೇಟಿ ನೀಡಿ ಸೇವಾ ಕಾರ್ಯವನ್ನು ಶ್ಲಾಘಿಸಿದ್ದರು. ಆರ್‍ಎಸ್‍ಎಸ್ ಕಾರ್ಯಕ್ರಮಗಳನ್ನು ಮೆಚ್ಚಿ ಹೊಗಳಿದ್ದರು. ಹಾಗಾದರೆ ಜೆಡಿಎಸ್ ಬಿಟ್ಟು ವಲಸೆ ಬಂದಿರುವ ಸಿದ್ದರಾಮಯ್ಯ ಅವರಿಗೆ ನೈಜ ಕಾಂಗ್ರೆಸ್ಸಿಗರ ಬಗ್ಗೆ ಗೌರವವಿಲ್ಲ ಎಂದಾಯ್ತಲ್ಲವೇ? ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ಟಾಂಗ್ ಕೊಟ್ಟಿದೆ.

    ಭಾರತೀಯ ಹಿಂದೂ ಪರಿಷತ್ (ಬಿಎಚ್‍ಪಿ) ಸ್ಥಾಪಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಕೇಡರ್ ಮಾದರಿಯಲ್ಲಿ ಪಕ್ಷ ಸಂಘಟಿಸುತ್ತೇವೆ ಎಂದಿತ್ತು. ಪ್ರೇರಕ್ ಸೃಷ್ಟಿಸುತ್ತೇವೆ ಎಂದಿತ್ತು ಸಂದರ್ಭಾನುಸಾರವಾಗಿ ಪ್ರಶಂಸೆ ವ್ಯಕ್ತಪಡಿಸಿದ್ದ ಕಾಂಗ್ರೆಸ್, ಸಿದ್ದರಾಮಯ್ಯ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದೇ ಎಂದು ಮರು ಪ್ರಶ್ನೆಯನ್ನು ಹಾಕಿದೆ.

  • ಭಾರತೀಯರಲ್ಲಿ ಕ್ಷಮೆ ಕೇಳಿದ ಪ್ರಿಯಾಂಕಾ ಚೋಪ್ರಾ

    ಭಾರತೀಯರಲ್ಲಿ ಕ್ಷಮೆ ಕೇಳಿದ ಪ್ರಿಯಾಂಕಾ ಚೋಪ್ರಾ

    ನವದೆಹಲಿ: ಕ್ವಾಂಟಿಕೋ ಸಂಚಿಕೆಯಲ್ಲಿ ಉದ್ದೇಶ ಪೂರ್ವಕವಾಗಿ ಭಾರತೀಯರನ್ನು ಹಿಂದೂ ಉಗ್ರಗಾಮಿಗಳೆಂದು ಬಿಂಬಿಸಿಲ್ಲ. ಈ ಅಹಿತಕರ ಬೆಳವಣಿಗೆಗೆ ನಾನು ಭಾರತೀಯರಲ್ಲಿ ಕ್ಷಮೆ ಕೇಳುತ್ತೇನೆ ಎಂದು ನಟಿ ಪ್ರಿಯಾಂಕಾ ಚೋಪ್ರಾ ಟ್ವಟ್ಟರ್‍ನಲ್ಲಿ ಬರೆದುಕೊಂಡಿದ್ದಾರೆ.

    ಅಮೆರಿಕ ಎಬಿಸಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಕ್ವಾಂಟಿಕೋದಲ್ಲಿ ಬಾಲಿವುಡ್‍ನ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾರವರು ಅಭಿನಯಿಸಿದ್ದಾರೆ. ಹೀಗಾಗಿ ತಮ್ಮ ಟ್ವೀಟರ್ ಖಾತೆಯಲ್ಲಿ “ನನ್ನ ಅಭಿನಯದ ಕ್ವಾಂಟಿಕೋ ಸಂಚಿಕೆಯಲ್ಲಿ ಭಾರತೀಯರ ಭಾವನೆಗೆ ಧಕ್ಕೆ ತರುವ ಸನ್ನಿವೇಶ ದುಃಖ ತಂದಿದೆ. ಉದ್ದೇಶ ಪೂರ್ವಕವಾಗಿ ಹಾಗೇ ಬಿಂಬಿಸಿಲ್ಲ. ಈ ಅಹಿತಕರ ಘಟನೆಗೆ ನಾನು ಭಾರತೀಯರಲ್ಲಿ ಕ್ಷಮೆ ಕೇಳುತ್ತೇನೆ. ಅಲ್ಲದೇ ನಾನು ಎಂದೆಂದಿಗೂ ಭಾರತೀಯಳು. ಭಾರತೀಯಳೆಂದು ಹೇಳಿಕೊಳ್ಳಲು ಹೆಮ್ಮೆ ಪಡುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ:  ಪ್ರಿಯಾಂಕ ಚೋಪ್ರಾ ಅಭಿನಯದ ಕ್ವಾಂಟಿಕೋ ಸಂಚಿಕೆಯಲ್ಲಿ ಹಿಂದೂಗಳಿಗೆ ಉಗ್ರ ಪಟ್ಟ: ಕ್ಷಮೆ ಕೇಳಿದ ಅಮೆರಿಕಾ ಟಿವಿ ಮಾಧ್ಯಮ!

    ಕ್ವಾಂಟಿಕೋ ಸಂಚಿಕೆಯಲ್ಲಿ ಪ್ರಿಯಾಂಕಾ ಚೋಪ್ರಾರವರು ಎಫ್‍ಬಿಐನ ಏಜೆಂಟ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದು, ಕಳೆದ ವಾರ ಬಿಡುಗಡೆಗೊಂಡ ಸಂಚಿಕೆಯಲ್ಲಿ ಭಾರತೀಯರನ್ನು ಹಿಂದೂ ಉಗ್ರರೆಂದು ಬಿಂಬಿಸಲಾಗಿತ್ತು. ಪ್ರಸಾರವಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಅಲ್ಲದೇ ನಟಿ ಪ್ರಿಯಾಂಕಾ ಚೋಪ್ರಾ ವಿರುದ್ಧವೂ ಟ್ವೀಟರ್ ನಲ್ಲಿ ಭಾರೀ ಟೀಕೆಗಳು ಕೇಳಿಬಂದಿದ್ದವು.

    ಹಣಕ್ಕೋಸ್ಕರ ಭಾರತೀಯರನ್ನು ಅವಮಾನಿಸುವ ಕೃತ್ಯಕ್ಕೆ ಕೈ ಹಾಕಿದ್ದಿರಿ, ಇಂತಹ ಪಾತ್ರಗಳಲ್ಲಿ ಅಭಿನಯಿಸುವ ನಿಮಗೆ ನಾಚಿಕೆಯಾಗಬೇಕು ಎಂದು ಆರೋಪಿಸಿ, ಕೂಡಲೇ ಭಾರತೀಯರಲ್ಲಿ ಕ್ಷಮೆಯಾಚಿಸಬೇಕು ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

    ಇದಕ್ಕೂ ಮುನ್ನ ಎಬಿಸಿ ಸಂಸ್ಥೆ “ಸಂಚಿಕೆಯಲ್ಲಿ ಬರುವ ಸನ್ನಿವೇಶಕ್ಕೂ ನಟಿ ಪ್ರಿಯಾಂಕ ಚೋಪ್ರಾಗೂ ಯಾವುದೇ ಸಂಬಂಧವಿಲ್ಲ, ಕೇವಲ ಅವರು ಪಾತ್ರ ನಿರ್ವಹಿಸಿದ್ದಾರೆ.” ಅಲ್ಲದೇ ಸಂಚಿಕೆಯ ಯಾವುದೇ ತಯಾರಿಯಲ್ಲಿ ಅವರು ಭಾಗವಹಿಸಿಲ್ಲ. ಭಾರತೀಯರ ಭಾವನೆಗೆ ಧಕ್ಕೆಯಾದ ಹಿನ್ನೆಲೆಯಲ್ಲಿ ನಾವು ಕ್ಷಮೆಯಾಚಿಸುತ್ತಿದ್ದೇವೆ ಎಂದು ಕ್ಷಮೆ ಕೇಳಿದ್ದರು.

  • ರೈಲ್ವೇ ಜೊತೆ  ಕ್ಷಮೆ ಕೇಳಿದ ಹಿರಿಯ ನಟಿ ಶಬಾನಾ ಅಜ್ಮಿ

    ರೈಲ್ವೇ ಜೊತೆ ಕ್ಷಮೆ ಕೇಳಿದ ಹಿರಿಯ ನಟಿ ಶಬಾನಾ ಅಜ್ಮಿ

    ನವದೆಹಲಿ: ರೈಲ್ವೇ ಸಿಬ್ಬಂದಿ ಕೊಳಚೆ ನೀರಿನಲ್ಲಿ ಪಾತ್ರೆ ತೊಳೆಯುತ್ತಿದ್ದಾರೆ ಎನ್ನುವ ವಿಡಿಯೋವನ್ನು ಟ್ವೀಟ್ ಮಾಡಿದ್ದ ಹಿರಿಯ ನಟಿ ಶಬಾನಾ ಅಜ್ಮಿ ಈಗ ಕ್ಷಮೆ ಕೇಳಿದ್ದಾರೆ.

    ಸೋಮವಾರ ಹಿರಿಯ ನಟಿ ಅಜ್ಮಿ ಅವರು, ರೈಲ್ವೇ ಸಿಬ್ಬಂದಿ ಕೊಳಚೆ ನೀರಿನಲ್ಲಿ ಪಾತ್ರೆ ತೊಳೆಯುತ್ತಿದ್ದ 30 ಸೆಕೆಂಡ್ ವಿಡಿಯೋ ಟ್ವೀಟ್ ಮಾಡಿದ್ದರು. ಅಲ್ಲದೇ ಇದನ್ನು ನೋಡಿ ಎಂದು ರೈಲ್ವೆ ಸಚಿವ ಪಿಯೂಶ್ ಗೋಯಲ್ ಹಾಗೂ ರೈಲ್ವೇ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದರು.

    ಅಜ್ಮಿ ಅವರ ಟ್ವೀಟ್‍ನಿಂದ ತಬ್ಬಿಬ್ಬಾದ ರೈಲ್ವೇ ಸಚಿವಾಲಯ ವಿಡಿಯೋ ಎಲ್ಲಿದೆಂದು ಪತ್ತೆಹಚ್ಚಿ, ಬುಧವಾರ ಸಂಜೆ ತಮ್ಮ ಉತ್ತರವನ್ನು ಟ್ವೀಟ್ ಮಾಡಿದ್ದಾರೆ. “ಮೇಡಂ ನೀವು ಟ್ಯಾಗ್ ಮಾಡಿರುವ ಕೊಳಚೆ ನೀರಿನಲ್ಲಿ ಪಾತ್ರೆ ತೊಳೆಯುತ್ತಿವ ವಿಡಿಯೋ ಮಲೇಷ್ಯಾದ ಉಪಹಾರ ಗೃಹಕ್ಕೆ ಸೇರಿದ್ದು” ಎಂದು ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದೆ.

    ಸಚಿವಾಲಯ ಟ್ವೀಟ್ ನೋಡಿದ ಬಳಿಕ ಎಚ್ಚೆತ್ತ ಹಿರಿಯ ನಟಿ, ನನ್ನಿಂದ ತಪ್ಪಾಗಿದೆ ಕ್ಷಮಿಸಿ ಹಾಗೂ ಮಾಹಿತಿ ನೀಡಿದ್ದಕ್ಕೆ ಧನ್ಯವಾದ ಎಂದು ಟ್ವೀಟ್ ಮಾಡಿದ್ದಾರೆ.

    ಶಬಾನಾ ಅಜ್ಮಿ ಅವರ ಟ್ವೀಟ್ ಗೆ ಟ್ವಿಟ್ಟರ್ ನಲ್ಲಿ ಜನ ತರಾಟೆಗೆ ತೆಗೆದುಕೊಂಡಿದ್ದು, ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಕ್ಕೆ ರೈಲ್ವೇ ಸಚಿವಾಲಯವು ಅಜ್ಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಬೇಕೆಂದು ಆಗ್ರಹಿಸಿದ್ದಾರೆ.

  • ಫಿಟ್‍ನೆಸ್ ಚಾಲೆಂಜ್ – ಯಶ್ ಪರ ಚಿರಂಜೀವಿ ಸರ್ಜಾ ಬ್ಯಾಟಿಂಗ್

    ಫಿಟ್‍ನೆಸ್ ಚಾಲೆಂಜ್ – ಯಶ್ ಪರ ಚಿರಂಜೀವಿ ಸರ್ಜಾ ಬ್ಯಾಟಿಂಗ್

    ದಾವಣಗೆರೆ: ಫಿಟ್ನೆಸ್ ಚಾಲೆಂಜ್ ನಲ್ಲಿ ಯಶ್ ಸುದೀಪ್ ಹೆಸರನ್ನು ಏಕವಚನದಲ್ಲಿ ಬಳಕೆ ಮಾಡಿದ್ದು ತಪ್ಪಲ್ಲ. ಫ್ರೆಂಡ್ಸ್ ಅಂತ ಬಂದಾಗ ಹೆಸರು ಇಟ್ಟು ಕರೆದದ್ದು ತಪ್ಪೇನಲ್ಲ ಎಂದು ನಟ ಚಿರಂಜೀವಿ ಸರ್ಜಾ ಹೇಳಿಕೆ ನೀಡಿದ್ದಾರೆ.

    ತಮ್ಮ ನಟನೆಯ ‘ಅಮ್ಮ ಐ ಲವ್ ಯು’ ಸಿನಿಮಾ ಪ್ರಚಾರಕ್ಕಾಗಿ ನಗರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಯಶ್ ಗಿಂತ ಸುದೀಪ್ ಸೀನಿಯರ್, ಸೀನಿಯರ್ ಎಂದರೇ ಗೌರವ ನೀಡಬೇಕಾಗುತ್ತದೆ. ಹಾಗಂತ ಹೆಸರಿನಿಂದ ಕರೆದರೆ ಗೌರವ ಕೊಟ್ಟಿಲ್ಲವೆಂದಲ್ಲ. ಇದೊಂದು ಕಂಪರ್ಟ್ ಜೋನ್, ಈ ಬಗ್ಗೆ ಸುದೀಪ್ ಅವರ ಟ್ವೀಟ್ ನೋಡಿದಾಗಲೂ ಯಾವುದೇ ಗೊಂದಲವಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಪ್ರೀತಿ ಲಿಮಿಟ್ ಇಲ್ಲ. ಅವರವರ ಹೀರೋಗೆ ಅವರೇ ದೊಡ್ಡ ಹೀರೋ. ಇಂತಹ ವಿಚಾರ ತುಂಬಾ ಸೆನ್ಸಿಟಿವ್, ಈ ಕುರಿತು ನಾನು ಮಾತನಾಡುವುದು ಅಷ್ಟು ಸರಿಯಲ್ಲ ಎಂದು ಅವರು ತಿಳಿಸಿದರು. ಇದನ್ನು ಓದಿ: ಯಶ್ ವಿರುದ್ಧ ಗರಂ ಆಗಿರೋ ಅಭಿಮಾನಿಗಳಿಗೆ ಸುದೀಪ್ ಮನವಿ!

    https://twitter.com/NimmaYash/status/1003581840563638272

    ದ್ವಾರಕೀಶ್ ನಿರ್ದೇಶನ ಹಾಗೂ ನನ್ನ ನಟನೆಯ ಅಮ್ಮ ಐ ಲವ್ ಯು ಸಿನಿಮಾ ಇದೆ ತಿಂಗಳ 15 ರಂದು ಸುಮಾರು 150 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಎಲ್ಲರೂ ಸಿನಿಮಾ ನೋಡಿ ಎಂದು ಜನರಿಗೆ ಅವರು ಮನವಿ ಮಾಡಿಕೊಂಡರು.

  • ವಿಶ್ವಸಂಸ್ಥೆಯಲ್ಲಿ ಕಾಂಗ್ರೆಸ್ ಸಾಧನೆ ಹೊಗಳಿದ್ದಕ್ಕೆ ಸುಷ್ಮಾ ಸ್ವರಾಜ್‍ ಗೆ ಥ್ಯಾಂಕ್ಸ್ ಹೇಳಿದ ರಾಹುಲ್

    ವಿಶ್ವಸಂಸ್ಥೆಯಲ್ಲಿ ಕಾಂಗ್ರೆಸ್ ಸಾಧನೆ ಹೊಗಳಿದ್ದಕ್ಕೆ ಸುಷ್ಮಾ ಸ್ವರಾಜ್‍ ಗೆ ಥ್ಯಾಂಕ್ಸ್ ಹೇಳಿದ ರಾಹುಲ್

    ನವದೆಹಲಿ: ‘ಸುಷ್ಮಾ ಜೀ ನಮ್ಮ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯನ್ನು ನೆನಪಿಸಿ ನಾವು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಕೊನೆಗೂ ಒಪ್ಪಿಕೊಂಡಿದ್ದಕ್ಕೆ ತಮಗೆ ಧನ್ಯವಾದಗಳು’ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

    ಶನಿವಾರ ನಡೆದ 72 ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಯೋತ್ಪಾದನೆ ಬಗ್ಗೆ ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಮಾತನಾಡಿದರು. ಈ ವೇಳೆ ಭಾರತ ಬಡತನ ನಿರ್ಮೂಲನೆಗೆ ಗಮನ ಹರಿಸಿದರೆ ಪಾಕಿಸ್ತಾನ ಉಗ್ರಸಂಘಟನೆಗಳ ಹುಟ್ಟುವಿಕೆಗೆ ಗಮನ ಹರಿಸುತ್ತಿದೆ. ನಾವು ಐಐಟಿ, ಐಐಎಂ, ಎಐಐಎಂಎಸ್ ಮತ್ತು ಇಸ್ರೋ ಸಂಸ್ಥೆಗಳನ್ನು ಸ್ಥಾಪಿಸಿ ಅಭಿವೃದ್ಧಿ ನೋಡುತ್ತಿದ್ದೇವೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದರು.

    ಈ ಹೇಳಿಕೆಯನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಸ್ವಾಗಸಿದ್ದಾರೆ. 70 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಐಐಟಿ, ಐಐಎಂ, ಏಮ್ಸ್ ಮತ್ತು ಇಸ್ರೋ ಸಂಸ್ಥೆಗಳನ್ನು ಸ್ಥಾಪಿಸಿ ಅಭಿವೃದ್ಧಿ ನೋಡುವಂತೆ ಮಾಡಿದ್ದು ನಾವು. ನಮ್ಮ ಅವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನೆನಪಿಸಿದ್ದಕ್ಕೆ ತಮಗೆ ಧನ್ಯವಾದಗಳು ಸುಷ್ಮಾ ಜೀ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದು ಬಿಜೆಪಿ ಕಾಲೇಳೆದಿದ್ದಾರೆ.

    ರಾಹುಲ್ ಗಾಂಧಿ ಟ್ವೀಟ್ ಬೆನ್ನಲ್ಲೆ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಸರ್ಕಾರ 70 ವರ್ಷಗಳ ಕಾಲ ಆಡಳಿತ ನಡೆಸಿತ್ತು. ಅಂದು ಮಾಡಿದ ಕಾರ್ಯಗಳನ್ನು ಇಂದು ಬಹಿರಂಗಪಡಿಸಿ ನಮ್ಮ ದಕ್ಷ ಆಡಳಿತವನ್ನು ಮೆಲುಕು ಹಾಕಲು ಸುಷ್ಮಾ ಸ್ವರಾಜ್ ಕನ್ನಡಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಭಾರತದ ಅಭಿವೃಧ್ದಿ ಬಯಸಿತ್ತು.
    ಹೀಗಾಗಿ ಮತ್ತೆ ನಮ್ಮ ಕಾರ್ಯಗಳನ್ನು ಎನ್‍ಡಿಎ ಸರ್ಕಾರ ಒಪ್ಪಿಕೊಂಡಿದೆ ಎಂದು ವ್ಯಂಗ್ಯವಾಡಿದ್ದಾರೆ.

    ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ಥಾನದ ಭಯೋತ್ಪಾದನೆ ಕುರಿತು ನಿನ್ನೆ ಮಾತನಾಡಿದ್ದರು. ನಾವು ಐಐಟಿ, ಐಐಎಂ, ಏಮ್ಸ್ ಮತ್ತು ಇಸ್ರೋ ಸಂಸ್ಥೆಗಳನ್ನು ಕಟ್ಟಿದರೆ, ಪಾಕಿಸ್ತಾನ ಲಷ್ಕರ್ ಎ ತೋಯ್ಬಾ, ಜೈಷ್ ಎ ಮಹಮ್ಮದ್, ಹಖ್ಖಾನಿ ನೆಟ್‍ವರ್ಕ್, ಹಿಜ್ಬುಲ್ ಮುಜಾಹಿದ್ದಿನ್ ಉಗ್ರ ಸಂಘಟನೆಗಳನ್ನು ಕಟ್ಟಿ ಹೆಸರು ಮಾಡುತ್ತಿದೆ ಎಂದು ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದರು.