Tag: ಟ್ವೀಟ್ ವಾರ್

  • ಕಾಂಗ್ರೆಸ್ಸಿಗೆ ದ್ರೋಹ ಮಾಡಿರುವ ಸುಧಾಕರ್ ಅಧಿಕಾರದ ಮದದಿಂದ ವರ್ತಿಸ್ತಿದ್ದಾರೆ: ಸಿದ್ದರಾಮಯ್ಯ

    ಕಾಂಗ್ರೆಸ್ಸಿಗೆ ದ್ರೋಹ ಮಾಡಿರುವ ಸುಧಾಕರ್ ಅಧಿಕಾರದ ಮದದಿಂದ ವರ್ತಿಸ್ತಿದ್ದಾರೆ: ಸಿದ್ದರಾಮಯ್ಯ

    ಬೆಂಗಳೂರು: ಕಾಂಗ್ರೆಸ್ಸಿಗೆ ದ್ರೋಹ ಮಾಡಿ ಬಿಜೆಪಿ ಸೇರಿ ಮಂತ್ರಿಯಾಗಿರುವ ಕೆ. ಸುಧಾಕರ್ ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

    ಇಂದು ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಮತ್ತೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆರ್‍ಎಸ್‍ಎಸ್ ನವರನ್ನು ಹಾಗೂ ಕೇಸರಿ ಕಂಡರೆ ನನಗ್ಯಾಕೆ ಭಯ ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಮಾಜಿ ಸಿಎಂ ಟ್ವೀಟ್ ವಾರ್ ಮುಂದುವರಿಸಿದ್ದಾರೆ.

    ಟ್ವೀಟ್‍ನಲ್ಲೇನಿದೆ..?
    ಹಣ, ಅಧಿಕಾರದ ಆಸೆಗೆ ಕಾಂಗ್ರೆಸ್ ಗೆ ದ್ರೋಹ ಮಾಡಿ ಬಿಜೆಪಿ ಪಕ್ಷ ಸೇರಿ ಮಂತ್ರಿಯಾಗಿರುವ ಕೆ ಸುಧಾಕರ್ ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರೆ. ಈ ಅಧಿಕಾರ ಶಾಶ್ವತವಲ್ಲ. 2023 ಕ್ಕೆ ಚುನಾವಣೆ ಬರುತ್ತೆ, ಯಾರು ಯಾರನ್ನು ಜೈಲಿಗೆ ಕಳಿಸ್ತಾರೆ ಎಂಬುದನ್ನು ನಾವೂ ನೋಡ್ತೀವಿ. ಇದನ್ನೂ ಓದಿ: ಹತಾಶೆ ಹಾಗೂ ಪ್ರಚಾರಕ್ಕಾಗಿ ಕಟೀಲ್ ಟೀಕೆ: ಪ್ರಿಯಾಂಕ್ ಖರ್ಗೆ

    ಉಪ ಚುನಾವಣೆ ಆಗಲೀ, ಸಾರ್ವತ್ರಿಕ ಚುನಾವಣೆಯೇ ಆಗಲಿ ಎಲ್ಲಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಗೆಲುವಿಗಾಗಿ ಹೋರಾಟ ಮಾಡುತ್ತೇನೆ. ಕಳೆದ ಉಪಚುನಾವಣೆಯಲ್ಲಿ ಕೂಡ 15 ಕ್ಷೇತ್ರಗಳಲ್ಲಿ ನಿರಂತರ ಪ್ರಚಾರ ಮಾಡಿದ್ದೆ. ನಮ್ಮ ಪಕ್ಷದ ಪ್ರತಿ ಅಭ್ಯರ್ಥಿಯ ಗೆಲುವು ನನಗೆ ಮುಖ್ಯ. ಇದನ್ನೂ ಓದಿ: ಉತ್ತರಾಖಂಡ್ ಮೇಘ ಸ್ಫೋಟ – ಸಾವಿನ ಸಂಖ್ಯೆ 52ಕ್ಕೆ ಏರಿಕೆ 5 ಮಂದಿ ನಾಪತ್ತೆ

    ಬೆಲೆಯೇರಿಕೆ ವಿರುದ್ಧ ಜನರು ತಿರುಗಿ ಬೀಳುವವರೆಗೆ ನಿರಂತರವಾಗಿ ಸರ್ಕಾರಗಳು ಬೆಲೆ ಹೆಚ್ಚು ಮಾಡುತ್ತಲೇ ಇರುತ್ತವೆ. ವಿರೋಧ ಪಕ್ಷವಾಗಿ ನಾವು ಶಕ್ತಿಮೀರಿ ಹೋರಾಟ ಮಾಡುತ್ತಲೇ ಇದ್ದೇವೆ, ಜನ ಬೀದಿಗಿಳಿದಾಗ ಮಾತ್ರ ನಮ್ಮ ಹೋರಾಟಕ್ಕೆ ಬಲ ಬರುವುದು. ಇದನ್ನೂ ಓದಿ: ಭಾರತದ ಐತಿಹಾಸಿಕ ಸಾಧನೆ- ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆ ವಿತರಿಸಲಾಗಿದೆ?

    ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ. ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ. ಸೌಹಾರ್ದತೆಗೆ ಧಕ್ಕೆಯಾಗದ ಮನಸಿಗೆ ನೋವಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

  • ತಾಲಿಬಾನಿ, ಐಎಸ್‍ಐ ಉಗ್ರರನ್ನು ಬಿಟ್ಟು ಭಾರತದಲ್ಲಿ ದಾಳಿಯಾಗುವಂತೆ ಮಾಡಿದ್ದು ಯಾರು – ಸಿಟಿ ರವಿ ಪ್ರಶ್ನೆ

    ತಾಲಿಬಾನಿ, ಐಎಸ್‍ಐ ಉಗ್ರರನ್ನು ಬಿಟ್ಟು ಭಾರತದಲ್ಲಿ ದಾಳಿಯಾಗುವಂತೆ ಮಾಡಿದ್ದು ಯಾರು – ಸಿಟಿ ರವಿ ಪ್ರಶ್ನೆ

    – ಟಿಪ್ಪು ಸುಲ್ತಾನ್ ಆರಾಧಕ ಸಿದ್ದರಾಮಯ್ಯ
    – ಸಂಘದ ಶಾಖೆಗೆ ಬಂದು ನಂತರ ಆರ್‍ಎಸ್‍ಎಸ್ ಬಗ್ಗೆ ಮಾತನಾಡಿ

    ಬೆಂಗಳೂರು: ತಾಲಿಬಾನಿಗಳನ್ನು, ಐಎಸ್‍ಐ ಉಗ್ರರನ್ನು ಭಾರತದೊಳಕ್ಕೆ ನುಸುಳಲು ಬಿಟ್ಟು ಮುಂಬೈ ಹಾಗೂ ಇನ್ನಿತರ ಭಾಗಗಳಲ್ಲಿ ಉಗ್ರರ ದಾಳಿಯಾಗುವಂತೆ ಮಾಡಿದ್ದು ಎಂದು ಪ್ರಶ್ನಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.

    ಆರ್‍ಎಸ್‍ಎಸ್, ಬಿಜೆಪಿಯನ್ನು ತಾಲಿಬಾನಿಗೆ ಹೋಲಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಡುವಿನ ಟ್ವೀಟ್ ವಾರ್ ಮುಂದುವರಿದಿದ್ದು, ಇದೀಗ ಸರಣಿ ಟ್ವೀಟ್ ಮಾಡುವ ಮೂಲಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:  ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೆ ಅನುಮತಿ ಇಲ್ಲ- ಸಿದ್ದರಾಮಯ್ಯ ದಾವಣಗೆರೆ ಪ್ರವಾಸ ರದ್ದು

    ಸಿದ್ದರಾಮಯ್ಯನವರೇ, ಆರ್‍ಎಸ್‍ಎಸ್ ಅಂದರೇನು ಎಂಬುದು ನಿಮ್ಮ ಘನ ಹೃದಯಕ್ಕೆ ಅರ್ಥವಾಗಬೇಕಾದರೆ ಮೊದಲು ನೀವು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗೆ ಬರಬೇಕು. ಆರ್‍ಎಸ್‍ಎಸ್ ಎಂಬುದನ್ನು ಹೊರಗಿನಿಂದ ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಏಕೆಂದರೆ ಅದು ಕೊಡುವ ಶಿಕ್ಷಣ, ಪ್ರೇರಣೆಯನ್ನು ಹತ್ತಿರದಿಂದ ನೋಡಿದಾಗ ನಿಮಗೆ ಅರ್ಥವಾಗಬಹುದು. ನಿಮ್ಮ ಪಕ್ಷದಲ್ಲೇ ಕೇಂದ್ರದಲ್ಲಿ ವಿತ್ತ ಸಚಿವರಾಗಿ, 40 ವರ್ಷ ರಾಜಕೀಯ ಜೀವನದಲ್ಲಿ ಇದ್ದು, 13ನೇ ರಾಷ್ಟ್ರಪತಿಯಾಗಿ ನಿಧನರಾದ ಪ್ರಣವ್ ಮುಖರ್ಜಿ ಅವರ ಜೀವನ ಚರಿತ್ರೆಯನ್ನು ಒಮ್ಮೆ ಓದಿ ಸಿದ್ದರಾಮಯ್ಯ ನವರೇ. ಆರ್‍ಎಸ್‍ಎಸ್ ಅಂದರೇನು ಎಂಬುದನ್ನು ಅವರು ವಿವರಿಸಿದ್ದಾರೆ. ಆಗಲಾದರೂ ಆರ್‍ಎಸ್‍ಎಸ್ ಬಗ್ಗೆ ನಿಮ್ಮ ಧೋರಣೆ ಬದಲಾಗಬಹುದು ಎಂದು ಕಿಡಿಕಾರಿದ್ದಾರೆ.

    ಯುದ್ಧ, ಪ್ರವಾಹಗಳು ಈ ದೇಶದ ಯಾವುದೇ ಮೂಲೆಯಲ್ಲಿ ಘಟಿಸಿದಾಗ ಅಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರು ಮೊದಲು ಹಾಜರಾಗಿ ಸಂಕಷ್ಟದಲ್ಲಿರುವ ಜನರಿಗೆ ಸಾಹಾಯದ ಹಸ್ತವನ್ನು ಚಾಚುತ್ತಾರೆ. ಸ್ವಯಂಸೇವಕರು ತಮ್ಮ ಪ್ರಾಣವನ್ನು ಪಣವಾಗಿಟ್ಟು ರಕ್ಷಣೆ ಮಾಡುತ್ತಾರೆ. ಸಂಘದ ನಿಸ್ವಾರ್ಥ ಸೇವೆಯನ್ನು ತಾಲಿಬಾನಿಗೆ ಹೋಲಿಸಲು ನಿಮಗೆ ಮನಸ್ಸಾದರೂ ಹೇಗೆ ಬಂತು? ಇದನ್ನೂ ಓದಿ: ಹಾನಗಲ್ ಉಪಚುನಾವಣೆ- ಟಿಕೆಟ್‍ಗಾಗಿ ಬಿಜೆಪಿ, ಕಾಂಗ್ರೆಸ್ ಆಕಾಂಕ್ಷಿಗಳು ತೆರೆಮರೆಯ ಕಸರತ್ತು

    ಈ ದೇಶ ಜಾತ್ಯಾತೀತ ತತ್ವಗಳ ಮೇಲೆ ನಿಂತಿದೆ, ಸಂಘ ಯಾರನ್ನೂ ಗುತ್ತಿಗೆ ಪಡೆದಿಲ್ಲ. ನಿಮ್ಮ ಪಕ್ಷದ ಉಳಿಗಮಾನ್ಯ ಪದ್ಧತಿಯನ್ನು ನೀವು ತೋರಿಸಿಕೊಟ್ಟಿದ್ದೀರಿ. ದೇಶ ಸೇವೆ ಮಾಡಬೇಕೆಂದರೆ ರಾಜಕೀಯಕ್ಕೆ ಬರಬೇಕೆಂದಿಲ್ಲ ಸಿದ್ದರಾಮಯ್ಯನವರೇ. ಬಲಹೀನರಿಗೆ ಬೆಳಕಾಗಲು ಸಂಘ ಕೊಟ್ಟ ಕೊಡುಗೆಗಳನ್ನು ನಾವು ತಿಳಿಸುತ್ತೇವೆ, ಒಮ್ಮೆ ಸಂಘದ ಶಾಖೆಗೆ ಬನ್ನಿ. ಬಿಜೆಪಿ ಮತ್ತು ಆರ್‍ಎಸ್‍ಎಸ್‍ಗೂ ಏನು ಸಂಬಂಧ ಎಂದು ಕೇಳಿದ್ದೀರಲ್ಲವೇ? ತಾಯಿ ಮತ್ತು ಮಕ್ಕಳ ಸಂಬಂಧ. ಅದು ಕಾರ್ಖಾನೆಯಲ್ಲ. ದೇಶವನ್ನು ಸಂಘಟಿಸಲು ಮತ್ತು ಗಟ್ಟಿಯಾಗಿ ಭಾರತವನ್ನು ಕಟ್ಟಲು ಕಾರ್ಯಕರ್ತರನ್ನು ರೂಪಿಸುವ ಶಿಸ್ತುಬದ್ಧ ಗರಡಿ ಮನೆ ಎಂದು ವಿವರಿಸಿದ್ದಾರೆ.

    ನೀವು ಹತ್ತಿರಕ್ಕೆ ಬರದೇ ಸಂಘವನ್ನು ನೋಡುವುದು ಅಂಧ ಆನೆಯನ್ನು ಮುಟ್ಟಿ ವರ್ಣಿಸಿದಂತಾಗುತ್ತದೆ. ಹೀಗಾಗಿ ನೀವು ಸಂಘದ ಶಾಖೆಗೆ ಬನ್ನಿ ಸಂಘದ ಬಾಗಿಲು ನಿಮಗಾಗಿ ಸದಾ ತೆರೆದಿರುತ್ತದೆ. ಆರ್‍ಎಸ್‍ಎಸ್ ಶಾಖೆಗೆ ಬನ್ನಿ ಎಂದು ಸಿದ್ದರಾಮಯ್ಯಗೆ ಸಿಟಿ ರವಿ ಆಹ್ವಾನ ಕೊಟ್ಟಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಮತ್ತೆ ರಣ ಮಳೆ- ಪ್ರವಾಹ ಪರಿಸ್ಥಿತಿ

    ನಿಮ್ಮ ಪಕ್ಷದ ಆಡಳಿತದಲ್ಲಿ ಅಲ್ಲವೇ ಸಿದ್ದರಾಮಯ್ಯನವರೇ, ತಾಲಿಬಾನಿಗಳನ್ನು, ಐಎಸ್‍ಐ ಉಗ್ರರನ್ನು ಭಾರತದೊಳಕ್ಕೆ ನುಸುಳಲು ಬಿಟ್ಟು ಮುಂಬೈ ಹಾಗೂ ಇನ್ನಿತರ ಭಾಗಗಳಲ್ಲಿ ಉಗ್ರರ ದಾಳಿಯಾಗುವಂತೆ ಮಾಡಿದ್ದು? ನೂರಾರು ಮುಗ್ದರ ಸಾವಿನ ಭಾರ ನಿಮ್ಮ ಪಕ್ಷದ ಮೇಲಿರುವುದನ್ನು ಮರೆತುಬಿಟ್ಟರಾ ಸಿದ್ದರಾಮಯ್ಯನವರೇ? ಇತ್ತೀಚೆಗೆ ಯಾಕೋ ನಿಮ್ಮ ನಾಲಗೆಯ ಮೇಲೆ ತಾಲಿಬಾನಿ ಪದ ಹೆಚ್ಚು ಬಳಕೆಯಾಗುತ್ತಿದೆ. ನೀವೇನಾದರೂ ಅಲ್ಲಿಗೆ ಹೋಗುವ ಮನಸ್ಸು ಮಾಡಿದ್ದರೆ ಹೇಳಿ ಬಿಡಿ. ನಿಮ್ಮ ಮನೆಗೆ ನಾವು ಬಂದು ಅಲ್ಲಿಯ ಬಿಕ್ಕಟ್ಟು ಸಂಘದ ಸ್ವಾತಂತ್ರ್ಯದ ಬಗ್ಗೆ ಎಳೆ ಎಳೆಯಾಗಿ ವಿವರಿಸುತ್ತೇವೆ. ಏನಂತೀರಿ ಟಿಪ್ಪು ಸುಲ್ತಾನ್ ಆರಾಧಕ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.

    ಕೊನೆಯದಾಗಿ, ನಾನೇನು ಎಂಬುದು ಚಿಕ್ಕಮಗಳೂರಿನ ನನ್ನ ಜನರಿಗೆ, ನನ್ನ ಜೊತೆ ಇರುವ ಕಾರ್ಯಕರ್ತರಿಗೆ ಗೊತ್ತು. ಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು ಎಂದು ಮೈಸೂರಿನನಾಗರೀಕರು ಈಗಲೂ ಮರೆತಿರಲಿಕ್ಕಿಲ್ಲ. ಒಮ್ಮೆ ಕೇಳಿ ನೋಡಿ ಸಿದ್ದರಾಮಯ್ಯನವರೇ ಎಂದು ಟಾಂಗ್ ನೀಡಿದ್ದಾರೆ.

  • ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಕ್ಕೆ ಕಾಂಗ್ರೆಸ್‌ಗೆ ಬಿಜೆಪಿ ಸರಣಿ ಟ್ವೀಟ್ ಏಟು..!

    ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಕ್ಕೆ ಕಾಂಗ್ರೆಸ್‌ಗೆ ಬಿಜೆಪಿ ಸರಣಿ ಟ್ವೀಟ್ ಏಟು..!

    ಬೆಂಗಳೂರು: ಪ್ರಧಾನಿ ಮೋದಿ ಸರ್ಕಾರ ‌ರೂಪಿಸುತ್ತಿರುವ ಸೆಂಟ್ರಲ್ ವಿಸ್ತಾ ಯೋಜನೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಮಾಡುತ್ತಿರುವುದೇನು? ತನ್ನದೇ ಆಡಳಿತವಿರುವ ರಾಜ್ಯಗಳಲ್ಲಿ ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಯೋಜನೆಗಳ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿಲ್ಲವೇಕೆ ಎಂದು ಬಿಜೆಪಿ ಟ್ವೀಟರ್ ಮೂಲಕ ಪ್ರಶ್ನಿಸಿದೆ.

    ಸೆಂಟ್ರಲ್‌ ವಿಸ್ಟಾ ಯೋಜನೆ & ಕಾಂಗ್ರೆಸ್‌ ಪಕ್ಷ ಎಂದು ಇನ್ನೊಂದು ಟ್ವೀಟ್‌ನಲ್ಲಿ ರಾಜಸ್ಥಾನದಲ್ಲಿ 266 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಸಕರ ಭವನ ನಿರ್ಮಾಣ, ಮಹಾರಾಷ್ಟ್ರದಲ್ಲಿ 900 ಕೋಟಿ ವೆಚ್ಚದಲ್ಲಿ ಶಾಸಕರ ವಸತಿ ನಿರ್ಮಾಣವಾಗುತ್ತಿದೆ. ಆದರೆ, ದೇಶದ ಪ್ರಜಾಪ್ರಭುತ್ವದ ಸಂಕೇತವಾಗಲಿರುವ ನೂತನ ಸಂಸತ್‌ ಭವನಕ್ಕೆ ಮಾತ್ರ ಕಾಂಗ್ರೆಸ್‌ ವಿರೋಧ ಮಾಡ್ತಿದೆ ಅಂತಾ ಟಾಂಗ್ ಕೊಟ್ಟಿದೆ.‌ ಇದನ್ನೂ ಓದಿ: ಸೈಕಲ್ ಗರ್ಲ್‍ಗೆ ಪ್ರಿಯಾಂಕಾ ವಾದ್ರಾ ನೆರವು

    ಕಾಂಗ್ರೆಸ್‌ ಇಂದು ಏನನ್ನು ತಪ್ಪು ಎಂದು ಬಿಂಬಿಸುತ್ತಿದೆಯೋ ಆ ತಪ್ಪುಗಳನ್ನು ನೆಹರೂ ಕಾಲದಿಂದಲೂ ಮಾಡುತ್ತಲೇ ಬಂದಿದೆ. ನೆಹರೂ ಸ್ಮಾರಕ – 52 ಎಕರೆ, ಇಂದಿರಾ ಸ್ಮಾರಕ – 45 ಎಕರೆ, ರಾಜೀವ್‌ ಸಮಾಧಿ – 15 ಎಕರೆ, ಆದರೆ, ಇದಕ್ಕಿಂತ ಕಡಿಮೆ ಜಾಗ ವಿನಿಯೋಗವಾಗಲಿರುವ ಸೆಂಟ್ರಲ್‌ ವಿಸ್ಟಾ ಯೋಜನೆಗೆ ಕಾಂಗ್ರೆಸ್ ವಿರೋಧವೇಕೆ ಅಂತಾ ಖಾರವಾಗಿ ಟ್ವೀಟ್ ಮಾಡಿದೆ.

    ಅಧಿಕಾರದಲ್ಲಿದ್ದಾಗ ‍‍ಮತ್ತು ಅಧಿಕಾರದಲ್ಲಿಲ್ಲದಿದ್ದಾಗ ಕಾಂಗ್ರೆಸ್ ಚಾಚೂ ತಪ್ಪದೆ ಮಾಡುವ ಒಂದೇ ಒಂದು ಕೆಲಸವೆಂದರೆ ದೇಶದ ಹಿತಾಸಕ್ತಿಯ ವಿರುದ್ಧ ಕಾರ್ಯಾಚರಿಸುವುದು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಡ್ಡಿಪಡಿಸಿದ್ದ ಕಾಂಗ್ರೆಸ್‌ ಈಗ ನೂತನ ಸಂಸತ್‌ ಭವನಕ್ಕೆ ವಿರೋಧಿಸುತ್ತಿದೆ. ಇದು ಟೂಲ್‌ ಕಿಟ್‌ ಕಾಂಗ್ರೆಸ್ ಅಂತಾ ಛೇಡಿಸಿದೆ.

    ದೇಶದಲ್ಲಿ ಕೋವಿಡ್ ಸಂಕಷ್ಟವಿದ್ದರೂ ಇಟಲಿಯಲ್ಲಿ ಕೋವಿಡ್ ಲಸಿಕೆ ನೀಡಲು ಆರಂಭಿಸಿದ ದಿನದಂದೇ ಕಾಂಗ್ರೆಸ್ ಯುವರಾಜ‌ ರಾಹುಲ್ ಗಾಂಧಿ ಇಟಲಿ ದೇಶಕ್ಕೆ ಪ್ರಯಾಣ ಬೆಳೆಸಿದ್ದರು.ಇಂತಹ ವ್ಯಕ್ತಿಗಳು ಇಂದು, ದೇಶ ಸಂಕಷ್ಟದಲ್ಲಿರುವಾಗ ಸೆಂಟ್ರಲ್ ವಿಸ್ಟಾದಂತಹ ಕಾಮಗಾರಿಗಳು ಅನಗತ್ಯ ಎನ್ನುವುದು ಹಾಸ್ಯಾಸ್ಪದ ಅಂತಾ ಬಿಜೆಪಿ ಟ್ವೀಟ್ ಏಟು ಕೊಟ್ಟಿದೆ.

  • ನನ್ನ ಅಳಿಲು ಸೇವೆಯನ್ನು ಸಿದ್ದರಾಮಯ್ಯ ಸಹ ಮರೆತಿಲ್ಲ ಎಂದು ಭಾವಿಸಿದ್ದೇನೆ: ಸುಧಾಕರ್

    ನನ್ನ ಅಳಿಲು ಸೇವೆಯನ್ನು ಸಿದ್ದರಾಮಯ್ಯ ಸಹ ಮರೆತಿಲ್ಲ ಎಂದು ಭಾವಿಸಿದ್ದೇನೆ: ಸುಧಾಕರ್

    – ಮಂದುವರಿದ ಮಾಜಿ ಗುರು ಶಿಷ್ಯರ ಟ್ವೀಟ್ ವಾರ್

    ಬೆಂಗಳೂರು: ನನ್ನ ಅಳಿಲು ಸೇವೆಯನ್ನು ಸಿದ್ದರಾಮಯ್ಯ ಅವರು ಸಹ ಮರೆತಿಲ್ಲ ಎಂದು ಭಾವಿಸಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್ ಅವರು ಸಿದ್ದುಗೆ ಮತ್ತೆ ಟಾಂಗ್ ಕೊಟ್ಟಿದ್ದಾರೆ.

    ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕೊರೊನಾ ವಿಚಾರದಲ್ಲಿ ಅವ್ಯವಾರವಾಗಿದೆ ಎಂದು ನಿನ್ನೆ ಸಿದ್ದರಾಮಯ್ಯ ಆರೋಪಿಸಿದ್ದರು. ನಂತರ ಪ್ರಸ್ತಾವನೆಗೂ ಮಂಜೂರಾತಿಗೂ ಸಿದ್ದರಾಮಯ್ಯ ಅವರಿಗೆ ವ್ಯತ್ಯಾಸ ಗೊತ್ತಿಲ್ಲ ಎಂದು ಸುಧಾಕರ್ ಟ್ವೀಟ್ ಮಾಡಿದ್ದರು. ಈ ವಿಚಾರವಾಗಿ ಇಂದು ಮತ್ತೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಅದನ್ನು ತಿಳಿದುಕೊಳ್ಳದೇ 13 ಬಾರಿ ಬಜೆಟ್ ಮಂಡಿಸಿಲ್ಲ ಎಂದು ಟಾಂಗ್ ನೀಡಿದ್ದರು. ಇದನ್ನೂ ಓದಿ: ನಂಗೇ ಪಾಠ ಹೇಳಿಕೊಡೋದಾ?, ಅಧಿಕಾರದ ಅಹಂನಿಂದ ಸುಧಾಕರ್ ಮಾತಾಡ್ತಿದ್ದಾರೆ: ಸಿದ್ದು

    ಈಗ ಈ ವಿಚಾರವಾಗಿ ಟ್ವೀಟ್ ಮಾಡಿರುವ ಸುಧಾಕರ್, ಮಾನ್ಯ ಸಿದ್ದರಾಮಯ್ಯನವರು ನಾನು ಅಧಿಕಾರದ ಅಹಂನಿಂದ ಮಾತನಾಡಿದ್ದೇನೆ ಮತ್ತು ನನಗೆ ಉಪಕಾರ ಸ್ಮರಣೆ ಇರಬೇಕು ಎಂದಿದ್ದಾರೆ. ಅವರು ಹಿಂದೆ ನೀಡಿರುವ ಸಹಕಾರ ಮತ್ತು ಮಾರ್ಗದರ್ಶನವನ್ನು ಸದಾ ಸ್ಮರಿಸುತ್ತೇನೆ. ನನ್ನ ಅಳಿಲು ಸೇವೆಯನ್ನು ಅವರೂ ಸಹ ಮರೆತಿಲ್ಲ ಎಂದು ಭಾವಿಸಿದ್ದೇನೆ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

    ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಸುಧಾಕರ್, ಕಳೆದ 5 ತಿಂಗಳಿನಿಂದ ವೈದ್ಯಕೀಯ ಶಿಕ್ಷಣ ಇಲಾಖೆಯ ಜವಾಬ್ದಾರಿ ಹೊತ್ತು ಕಾರ್ಯ ಕ್ಷಮತೆಯಿಂದ ಅವಿರತವಾಗಿ ಶ್ರಮಿಸುತ್ತಿದ್ದೇನೆ. ಇಂಥ ಸನ್ನಿವೇಶದಲ್ಲಿ ನನ್ನ ಇಲಾಖೆಯ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳು ಬಂದಿವೆ. ಅವರ ಆರೋಪಗಳಿಗೆ ಜವಾಬ್ದಾರಿಯುತವಾಗಿ ವಾಸ್ತವಾಂಶವನ್ನು ಜನರ ಮುಂದಿಟ್ಟಿದ್ದೇನೆ. ಇದರಲ್ಲಿ ಯಾವುದೇ ವೈಯಕ್ತಿಕ ನಿಂದನೆ ಅಥವಾ ಅಪಹಾಸ್ಯದ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.

  • ಮೋದಿ ಆಗಮನಕ್ಕೂ ಮುನ್ನ ಸಿಎಂ & ಬಿಎಸ್‍ವೈ ಟ್ವಿಟರ್ ವಾರ್!

    ಮೋದಿ ಆಗಮನಕ್ಕೂ ಮುನ್ನ ಸಿಎಂ & ಬಿಎಸ್‍ವೈ ಟ್ವಿಟರ್ ವಾರ್!

    ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ನಗರಕ್ಕೆ ಆಗಮಿಸುತ್ತಿದ್ದು, ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿದೆ. ಬೆಂಗಳೂರು ನಗರಕ್ಕೆ ಆಗಮಿಸುವ ಮೋದಿ ಹೊಸ ಘೋಷಣೆಗಳನ್ನು ಘೋಷಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಟಾಂಗ್ ನೀಡುವ ಮೂಲಕ ಪ್ರಧಾನಿಗಳಿಗೆ ಸ್ವಾಗತ ಕೋರಿದ್ದಾರೆ. ಮುಖ್ಯಮಂತ್ರಿ ಅವರ ಸ್ವಾಗತದ ಟ್ವೀಟ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡ ಖಡಕ್ ತಿರುಗೇಟು ನೀಡಿದ್ದಾರೆ.

    ಸಿಎಂ ಟ್ವೀಟ್‍ನಲ್ಲಿ ಬರೆದಿದ್ದು ಹೀಗೆ: ನಮ್ಮ ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಹೂಡಿಕೆ, ಅಭಿವೃದ್ಧಿ ಮತ್ತು ಬದಲಾವಣೆಯಲ್ಲಿ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ. ಕರ್ನಾಟಕ ಅಭಿವೃದ್ದಿ ರಾಜ್ಯಗಳ ಮಾದರಿಯಾಗಿದೆ. ದೇಶದ ಹಲವು ವಿಭಾಗಗಳಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಕರ್ನಾಟಕದ ಈ ಯಶಸ್ಸು ಭಾರತವನ್ನು ಹೆಮ್ಮೆ ಪಡುವಂತೆ ಮಾಡಲಿದೆ ಎಂಬ ವಿಶ್ವಾಸವನ್ನು ಹೊಂದಿದ್ದೇನೆ ಅಂತ ಬರೆದುಕೊಂಡಿದ್ದಾರೆ.

    ಹೊಸ ಕಲ್ಪನೆ/ಆವಿಷ್ಕಾರದ ಕೇಂದ್ರ ಬಿಂದುವಾಗಿರುವ ನಮ್ಮ ಬೆಂಗಳೂರಿಗೆ ಇಂದು ಪ್ರಧಾನಿಗಳು ಆಗಮಿಸುತ್ತಿರುವುದು ನನಗೆ ಸಂತೋಷವನ್ನು ತಂದಿದೆ. ರಾಜ್ಯದ ಜನತೆಯ ಪರವಾಗಿ ಕರ್ನಾಟಕದ ಕುಡಿಯುವ ನೀರಿಗಾಗಿ ನಡೆಯುತ್ತಿರುವ ಮಹದಾಯಿ ವಿವಾದವನ್ನು ಇತ್ಯರ್ಥಗೊಳಿಸಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದು #ನಮ್ಮಕರ್ನಾಟಕಫಸ್ಟ್ (#NammaKarnatakaFirst) ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ.

    ಸಿಎಂ ಸಿದ್ದರಾಮಯ್ಯ ತಮ್ಮದೇ ಸ್ಟೈಲ್ ಮೂಲಕ ವ್ಯಂಗ್ಯವಾಗಿ ಮೋದಿ ಅವರಿಗೆ ಸ್ವಾಗತ ಮಾಡಿದ್ದಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಟ್ವಿಟ್ಟರ್ ನಲ್ಲಿ ಖಾರವಾಗಿಯೇ ಉತ್ತರ ನೀಡಿದ್ದಾರೆ.

    ಬಿಎಸ್‍ವೈ ಟ್ವೀಟ್: ಪ್ರಧಾನಿಗಳಿಗೆ ಸ್ವಾಗತ ಕೋರಿದ ಸಿಎಂ ಸಿದ್ದರಾಮಯ್ಯನವರಿಗೆ ಧನ್ಯವಾದಗಳು. ಹೌದು, ಕರ್ನಾಟಕ ಹಲವು ವಿಚಾರಗಳಲ್ಲಿ ಮೊದಲನೇಯ ಸ್ಥಾನದಲ್ಲಿದೆ. ಅವುಗಳು ಹೀಗಿವೆ, ಭ್ರಷ್ಟಾಚಾರದಲ್ಲಿ ನಂಬರ್ ಒನ್, 3,500 ಕ್ಕೂ ಹೆಚ್ಚು ರೈತರ ಆತ್ಮಹತ್ಯೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಅಧಿಕಾರಿಗಳ ನಿಗೂಢ ಸಾವು, ಪ್ರಾಮಾಣಿಕ ಅಧಿಕಾರಿಗಳ ವರ್ಗಾವಣೆ, ಬೆಂಗಳೂರು ಅವನತಿ ಅಂತಾ ಬರೆದಿದ್ದಾರೆ. ಕೊನೆಗೆ #ಕರ್ನಾಟಕಟ್ರಸ್ಟ್ ( #KarnatakaTrustsModi)ಮೋದಿ ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ.

    ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಇಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ. ಮೋದಿ ಅವರ ಆಗಮನದ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳು ಮಹದಾಯಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದಾರೆ.