Tag: ಟ್ವೀಟ್

  • ಪುನೀತ್ ರಾಜ್‍ಕುಮಾರ್ ಹುಟ್ಟಹುಬ್ಬ- ಬಿಎಸ್‍ವೈ, ಬೊಮ್ಮಾಯಿ ಹೇಳಿದ್ದೇನು..?

    ಪುನೀತ್ ರಾಜ್‍ಕುಮಾರ್ ಹುಟ್ಟಹುಬ್ಬ- ಬಿಎಸ್‍ವೈ, ಬೊಮ್ಮಾಯಿ ಹೇಳಿದ್ದೇನು..?

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಡಾ.ಪುನೀತ್ ರಾಜ್‍ಕುಮಾರ್‍ಗೆ ಇಂದು 47ನೇ ಹುಟ್ಟುಹಬ್ಬವಾಗಿದ್ದು, ಈ ವಿಶೇಷ ದಿನದಂದು ಅಪ್ಪುಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶುಭಕೋರಿದ್ದಾರೆ.

    ಅಪ್ಪು ಎಲ್ಲರನ್ನು ಅಗಲಿ ನಾಲ್ಕೂವರೆ ತಿಂಗಳಾಗುತ್ತಾ ಬಂದರೂ, ಪುನೀತ್ ನೆನಪು ಮಾತ್ರ ಎಲ್ಲರ ಮನದಲ್ಲಿ ಅಜರಾಮರವಾಗಿದೆ. ಇಂದು ಅಪ್ಪು ಹುಟ್ಟುಹಬ್ಬವನ್ನು ರಾಜ್ಯದೆಲ್ಲೆಡೆ ಅಭಿಮಾನಿಗಳು ಬಹಳ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಈ ನಡುವೆ ಅನೇಕ ರಾಜಕೀಯ ಗಣ್ಯರು ಸಹ ಅಪ್ಪು ಸಮಾಜಕ್ಕೆ ಸಲ್ಲಿಸಿದ ಸೇವೆಯನ್ನು ನೆನಪಿಸಿಕೊಳ್ಳುತ್ತಾ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದಾರೆ.

    ಬಿ.ಎಸ್. ಯಡಿಯೂರಪ್ಪನವರು, ನಾಡಿನ ಪ್ರೀತಿ ಗಳಿಸಿದ್ದ ಅಪ್ರತಿಮ, ಸಹೃದಯಿ ಕಲಾವಿದ, ಕನ್ನಡಿಗರ ಕಣ್ಮಣಿ, ಡಾ.ರಾಜ್ ಕುಟುಂಬದ ಕುಡಿ, ಚಿಕ್ಕ ವಯಸ್ಸಿನಲ್ಲಿಯೇ ಅಪಾರವಾದದ್ದನ್ನು ಸಾಧಿಸಿ, ಅಕಾಲಿಕವಾಗಿ ನಮ್ಮನ್ನಗಲಿದ ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ.

    ಬಸವರಾಜ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ, ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ನೀವು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಮಾಡಿದ ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್

    ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು, ನಮ್ಮ ನೆಚ್ಚಿನ ಪುನೀತ್ ರಾಜ್‍ಕುಮಾರ್ ಅವರ ಬದುಕಿನ ಸಾಧನೆಗಳನ್ನು ಪ್ರೇರಣೆಯಾಗಿ ಪಡೆದು ಉತ್ತಮ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿಸೋಣ. ಅವರಲ್ಲಿದ್ದ ಸಾಮಾಜಿಕ ಕಳಕಳಿ, ಶಿಕ್ಷಣ ಪ್ರೇಮ, ಆವಿಷ್ಕಾರಿ ಮನೋಭಾವ ಎಲ್ಲರ ಮನೆ-ಮನಗಳಲ್ಲೂ ಬೆಳಗಿಸಿ ಅವರನ್ನು ಅಮರರಾಗಿಸೋಣ ಎಂದು ಶುಭ ಕೋರಿದ್ದಾರೆ.

    ಮತ್ತೊಂದೆಡೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು, ಬೆಟ್ಟದ ಹೂವಾಗಿ ಅರಳಿದೆ. ಎರಡು ನಕ್ಷತ್ರಗಳಾಗಿ ಮಿಂಚಿದೆ. ಅರಸುವಾಗಿ ಚಂದನವನದ ಯುವರತ್ನನಾದೆ. ವೀರ ಕನ್ನಡಿಗನಾಗಿ ಪೃಥ್ವಿಯ ಮೈತ್ರಿ ತೊರೆದು ಪರಮಾತ್ಮನ ಮಿಲನವಾದೆ. ಅಪ್ಪು ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅಪ್ಪು ನೆನಪು ಎಂದಿಗೂ ಅಮರ, ಅಪ್ಪು ಎಂದೆಂದಿಗೂ ಅಜರಾಮರ. ಹ್ಯಾಪಿ ಬರ್ತಡೇ ಅಪ್ಪು ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ರಾಜ್ಯದ 400 ಥಿಯೇಟರ್‌ಗಳಲ್ಲಿ ಜೇಮ್ಸ್ ರಿಲೀಸ್

  • ಓಟಿಟಿ ಜಗತ್ತಿಗೆ ಕಾಲಿಟ್ಟ ಶಾರೂಖ್ ಖಾನ್

    ಓಟಿಟಿ ಜಗತ್ತಿಗೆ ಕಾಲಿಟ್ಟ ಶಾರೂಖ್ ಖಾನ್

    ಮುಂಬೈ: ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಈಗಾಗಲೇ ಹಲವು ರೀತಿಯ ಬ್ಯುಸ್ನೆಸ್ ಮಾಡುತ್ತಿದ್ದಾರೆ. ಅದಕ್ಕೆ ಸೇರ್ಪಡೆ ಎನ್ನುವಂತೆ ಮತ್ತೊಂದು ಕಾಯಕವನ್ನು ಶೂರು ಮಾಡಿದ್ದಾರೆ. ಜಗತ್ತಿನಾದ್ಯಂತ ಹೊಸ ಸಂಚಲನ ಮೂಡಿಸಿರುವ ಮತ್ತು ಮನೆಯಲ್ಲಿಯೇ ಕೂತು ಸಿನಿಮಾ ವೀಕ್ಷಿಸಲು ನೆರವಾಗಿರುವ ಓಟಿಟಿ ಓನರ್ ಆಗಿ ಶಾರೂಖ್ ಆ ಜಗತ್ತಿಗೆ ಕಾಲಿಟ್ಟಿದ್ದಾರೆ. ಈಗ ತಮ್ಮದೇ ಎಸ್‍ಆರ್‌ಕೆ+ ಎಂಬ ಒಟಿಟಿ ಪ್ಲಾಟ್‍ಫಾರ್ಮ್ ರೆಡಿ ಮಾಡಿಕೊಂಡಿದ್ದು, ಅದನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ ‘ಎಸ್‍ಆರ್‌ಕೆ+ ಶೀಘ್ರದಲ್ಲೇ ಬರಲಿದೆ’ ಎಂಬ ಫಾಂಟ್‍ನ ಪಕ್ಕದಲ್ಲಿ ಥಂಬ್ಸ್ ಅಪ್ ನೀಡುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿರುವ ಅವರು, (ಕುಚ್ ಕುಚ್ ಹೋನೆ ವಾಲಾ ಹೈ, ಒಟಿಟಿ ಕಿ ದುನಿಯಾ ಮೇ) ಈ ಮೂಲಕ ಓಟಿಟಿ ಜಗತ್ತಿನಲ್ಲಿ ಏನೆಲ್ಲಾ ಆಗೋದಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಎಲ್ಲಿ, ಏನು ಬೇಕಾದರೂ ಧರಿಸಬಹುದು, ಆದರೆ…: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ

     

    View this post on Instagram

     

    A post shared by Shah Rukh Khan (@iamsrk)

    ನಿರ್ಮಾಪಕ ಅನುರಾಗ್ ಕಶ್ಯಪ್ ಅವರು ಶಾರೂಖ್ ಅವರ ಟ್ವೀಟ್‍ಗೆ ರಿ-ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಕನಸು ನನಸಾಗುತ್ತಿದೆ ಅವರ ಹೊಸ ಒಟಿಟಿ ಅಪ್ಲಿಕೇಶನ್, ಎಸ್‍ಆರ್‌ಕೆ+ ನಲ್ಲಿ ನಾನು ಕೂಡ ಸಹಭಾಗಿತ್ವ ಪಡೆದುಕೊಂಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ಮಾದಕ ವಸ್ತು ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ಆರ್ಯನ್ ಖಾನ್ ವಿವಾದದಲ್ಲಿ ಸಿಲುಕಿದ ಮೇಲೆ ಶಾರೂಖ್ ಖಾನ್ ಮೌನಕ್ಕೆ ಶರಣಾಗಿದ್ದರು. ಕೆಲವು ದಿನಗಳ ಹಿಂದೆಯಷ್ಟೇ, ಎನ್‍ಸಿಬಿಯ ವಿಶೇಷ ತನಿಖಾ ತಂಡ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ಆರ್ಯನ್ ಖಾನ್ ಡ್ರಗ್ಸ್ ಹೊಂದಿರಲಿಲ್ಲ, ಆದ್ದರಿಂದ ಅವರ ಫೋನ್ ತೆಗೆದುಕೊಂಡು ಅವರ ಚಾಟ್‍ಗಳನ್ನು ಪರಿಶೀಲಿಸುವ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿದ್ದ ಬೆನ್ನಲ್ಲೆ ನಿರಾಳತೆಗೆ ಜಾರಿದ್ದರು.

    ಮತ್ತೆ ಶಾರೂಖ್ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಇತ್ತೀಚೆಗಷ್ಟೇ ಅವರ ನಟನೆಯ ‘ಪಠಾಣ್’ ಚಿತ್ರದ ಫಸ್ಟ್ ಲುಕ್‍ನೊಂದಿಗೆ ಅಭಿಮಾನಿಗಳ ಹುಮ್ಮಸ್ಸು ಹೆಚ್ಚಿಸಿದ್ದರು.

  • ಮೊದಲು ಮಕ್ಕಳ ಭವಿಷ್ಯ ಮುಖ್ಯ, ಆಮೇಲೆ ರಾಜಕೀಯ: ಡಿಕೆಶಿ

    ಮೊದಲು ಮಕ್ಕಳ ಭವಿಷ್ಯ ಮುಖ್ಯ, ಆಮೇಲೆ ರಾಜಕೀಯ: ಡಿಕೆಶಿ

    ಚಿಕ್ಕಬಳ್ಳಾಪುರ: ಮೊದಲು ಮಕ್ಕಳ ವಿದ್ಯಾಭ್ಯಾಸ ಅವರ ಭವಿಷ್ಯ ಮುಖ್ಯ. ರಾಜಕೀಯ ಆಮೇಲೆ ಎಂದು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

    ದೆಹಲಿಯಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಡಿಕೆಶಿವಕುಮಾರ್ ಅವರು ಹಿಜಬ್ ತೀರ್ಪು ಕುರಿತಂತೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ, ತೀರ್ಪಿನ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕಿದೆ. ಯಾವುದೇ ರಾಜಕೀಯ ಪಕ್ಷ ತೀರ್ಪುನ್ನು ತಮ್ಮದೇ ರೀತಿಯಲ್ಲಿ ವ್ಯಾಖ್ಯಾನ ಮಾಡಬಹುದು. ಆದರೆ ತೀರ್ಪು ತೀರ್ಪೆ. ತೀರ್ಪನ್ನು ಎಲ್ಲರೂ ಕೂಡ ಗೌರವದಿಂದ ಸ್ವೀಕಾರ ಮಾಡಬೇಕು ಎಂದಿದ್ದಾರೆ.

    ತೀರ್ಪಿನಲ್ಲಿ ಮಾಡಿರುವ ಸಂಪೂರ್ಣವಾದ ಉಲ್ಲೇಖಗಳನ್ನು ನೋಡದೇ ನಾನು ರಾಜಕೀಯ ಪಕ್ಷದ ರಾಜ್ಯಾಧ್ಯಕ್ಷನಾಗಿ ಪ್ರತಿಕ್ರಿಯೆ ನೀಡಲಾರೆ. ನಮ್ಮ ಹಿರಿಯ ನಾಯಕರ ಜೊತೆ ಚರ್ಚೆ ಮಾಡಿ ಪ್ರತಿಕ್ರಿಯೆ ನೀಡುತ್ತೇನೆ. ನಮಗೆ ಶಾಂತಿ ಬೇಕು, ಮಕ್ಕಳ ವಿದ್ಯಾಭ್ಯಾಸ ಮುಖ್ಯವೇ ಹೊರತು ರಾಜಕೀಯ ಎಲ್ಲ ಆಮೇಲೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್‌ ಕುರಿತ ಹೈಕೋರ್ಟ್‌ ತೀರ್ಪನ್ನು ನಾನು ಒಪ್ಪಲ್ಲ: 15 ಟ್ವೀಟ್‌ ಮಾಡಿದ ಓವೈಸಿ

    ಮತ್ತೊಂದೆಡೆ ಹಿಜಬ್ ಕುರಿತಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಜಬ್ ವಿವಾದದಲ್ಲಿ ನನ್ನ ಪ್ರಮುಖ ಕಾಳಜಿ ಶಿಕ್ಷಣ, ಕಾನೂನು ಮತ್ತು ಸುವ್ಯವಸ್ಥೆಯಾಗಿದೆ. ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಶಿಕ್ಷಣ, ಕಾನೂನು ಮತ್ತು ಸುವ್ಯವಸ್ಥೆ, ಕೋಮು ಸೌಹಾರ್ದತೆಯ ಜವಾಬ್ದಾರಿ ಇನ್ನೂ ಕರ್ನಾಟಕ ಸರ್ಕಾರದ ಮೇಲಿದೆ ಎಂದಿದ್ದಾರೆ. ಇದನ್ನೂ ಓದಿ: ಕೋರ್ಟ್ ತೀರ್ಪು ಬೆನ್ನಲ್ಲೇ ಪರೀಕ್ಷೆ ಬಿಟ್ಟು ಹೊರ ನಡೆದ ವಿದ್ಯಾರ್ಥಿನಿಯರು

    ನಾನು ಕರ್ನಾಟಕ ಸರ್ಕಾರಕ್ಕೆ ಪ್ರಬುದ್ಧ ನಾಯಕತ್ವವನ್ನು ಪ್ರದರ್ಶಿಸಲು ಮತ್ತು ಖಚಿತಪಡಿಸಿಕೊಳ್ಳಲು ಮನವಿ ಮಾಡುತ್ತೇನೆ.
    1) ಶಾಲೆಗಳು ಮತ್ತು ಕಾಲೇಜುಗಳ ಸುತ್ತಮುತ್ತ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಬೇಕಾಗುತ್ತದೆ.
    2) ಧರ್ಮ ಮತ್ತು ಲಿಂಗದ ಲೆಕ್ಕದ ಮೇಲೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುವುದಿಲ್ಲ.
    3) ಕೋಮು ಸೌಹಾರ್ದತೆ ಇದೆ.

     

  • ಹಿಜಬ್‌ ಕುರಿತ ಹೈಕೋರ್ಟ್‌ ತೀರ್ಪನ್ನು ನಾನು ಒಪ್ಪಲ್ಲ: 15 ಟ್ವೀಟ್‌ ಮಾಡಿದ ಓವೈಸಿ

    ಹಿಜಬ್‌ ಕುರಿತ ಹೈಕೋರ್ಟ್‌ ತೀರ್ಪನ್ನು ನಾನು ಒಪ್ಪಲ್ಲ: 15 ಟ್ವೀಟ್‌ ಮಾಡಿದ ಓವೈಸಿ

    ನವದೆಹಲಿ: ಹಿಜಬ್‌ ವಿವಾದ ಕುರಿತು ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪನ್ನು ನಾನು ಒಪ್ಪುವುದಿಲ್ಲ ಎಂದು ಎಐಎಂಐಎಂ ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್‌ ಓವೈಸಿ ಹೇಳಿದ್ದಾರೆ.

    ಹಿಜಬ್‌ ಸಂಬಂಧ ಹೈಕೋರ್ಟ್‌ ತೀರ್ಪು ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪನ್ನು ನಾನು ಒಪ್ಪುವುದಿಲ್ಲ. ಕೋರ್ಟ್‌ ತೀರ್ಪನ್ನು ವಿರೋಧಿಸುವುದು ನನ್ನ ಹಕ್ಕು. ಹಿಜಬ್‌ ಪರ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂಬ ಭರವಸೆ ಇದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

    ಟ್ವೀಟ್‌ನಲ್ಲೇನಿದೆ?
    ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾವ್‌ ಬೋರ್ಡ್‌ ಮಾತ್ರವಲ್ಲ ಇತರೆ ಧಾರ್ಮಿಕ ಗುಂಪುಗಳ ಸಂಘಸಂಸ್ಥೆಗಳು ಸಹ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲಿವೆ ಎಂದು ಭಾವಿಸಿದ್ದೇನೆ.

    ಏಕೆಂದರೆ ಅದು (ಕೋರ್ಟ್‌) ಧರ್ಮ, ಸಂಸ್ಕೃತಿ, ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಸ್ಥಗಿತಗೊಳಿಸಿದೆ. ಸಂವಿಧಾನದ ಪೀಠಿಕೆಯು ವ್ಯಕ್ತಿಗೆ ಆಲೋಚನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು ಹೊಂದುವ ಹಕ್ಕಿದೆ ಎಂದು ಹೇಳುತ್ತದೆ.

    ನನ್ನ ತಲೆಯನ್ನು ಮುಚ್ಚಿಕೊಳ್ಳುವುದು ಅತ್ಯಗತ್ಯ ಎಂಬುದು ನನ್ನ ನಂಬಿಕೆ. ನಾನು ಸೂಕ್ತವೆಂದು ಭಾವಿಸಿದಂತೆ ಆ ನಂಬಿಕೆಯನ್ನು ವ್ಯಕ್ತಪಡಿಸಲು ನನಗೆ ಹಕ್ಕಿದೆ. ಧರ್ಮನಿಷ್ಠ ಮುಸಲ್ಮಾನರಿಗೆ ಹಿಜಬ್‌ ಕೂಡ ಒಂದು ಆರಾಧನೆಯ ಕ್ರಿಯೆಯಾಗಿದೆ.

    ಅಗತ್ಯವಾದ ಧಾರ್ಮಿಕ ಅಭ್ಯಾಸ ಪರೀಕ್ಷೆಯನ್ನು ಪರಿಶೀಲಿಸುವ ಸಮಯ ಇದು. ದರ್ಮನಿಷ್ಠ ವ್ಯಕ್ತಿಗೆ ಎಲ್ಲವೂ ಅತ್ಯಗತ್ಯ. ನಾಸ್ತಿಕನಿಗೆ ಯಾವುದೂ ಅತ್ಯಗತ್ಯವಲ್ಲ. ಶ್ರದ್ಧಾವಂತ ಹಿಂದೂ ಬ್ರಾಹ್ಮಣರಿಗೆ ಜನಿವಾರ ಅತ್ಯಗತ್ಯ. ಆದರೆ ಬ್ರಾಹ್ಮಣೇತರರಿಗೆ ಅದು ಇಲ್ಲದಿರಬಹುದು. ನ್ಯಾಯಾಧೀಶರು ಅಗತ್ಯವನ್ನು ನಿರ್ಧರಿಸಬಹುದು ಎಂಬುದು ಅಸಂಬದ್ಧವಾಗಿದೆ.

    ಅದೇ ಧರ್ಮದ ಇತರ ಜನರು ಸಹ ಅಗತ್ಯವನ್ನು ನಿರ್ಧರಿಸುವ ಹಕ್ಕನ್ನು ಹೊಂದಿಲ್ಲ. ಇದು ವ್ಯಕ್ತಿ ಮತ್ತು ದೇವರ ನಡುವೆ ಇದೆ. ಇಂತಹ ಪೂಜಾ ಕಾರ್ಯಗಳು ಇತರರಿಗೆ ಹಾನಿಯಾದರೆ ಮಾತ್ರ ಧಾರ್ಮಿಕ ಹಕ್ಕುಗಳಲ್ಲಿ ರಾಜ್ಯವು ಹಸ್ತಕ್ಷೇಪ ಮಾಡಲು ಅವಕಾಶ ನೀಡಬೇಕು. ಹಿಜಬ್‌ ಯಾರಿಗೂ ಹಾನಿ ಮಾಡುವುದಿಲ್ಲ.

    ಹಿಜಬ್‌ ನಿಷೇಧಿಸುವುದರಿಂದ ಧಾರ್ಮಿಕ ಮುಸ್ಲಿಂ ಮಹಿಳೆಯರು ಮತ್ತು ಅವರ ಕುಟುಂಬಗಳಿಗೆ ಖಂಡಿತವಾಗಿಯೂ ಹಾನಿಯಾಗುತ್ತದೆ. ಅವರು ಶಿಕ್ಷಣ ಪಡೆಯುವುದಕ್ಕೆ ಅಡ್ಡಿಪಡಿಸಿದಂತಾಗುತ್ತದೆ.

    ಸಮವಸ್ತ್ರವು ಏಕರೂಪತೆಯನ್ನು ಖಚಿತಪಡಿಸುತ್ತದೆ ಎನ್ನಲಾಗುತ್ತದೆ. ಅದು ಹೇಗೆ? ಶ್ರೀಮಂತ/ಬಡ ಕುಟುಂಬದಿಂದ ಬಂದವರು ಯಾರೆಂದು ಮಕ್ಕಳಿಗೆ ತಿಳಿಯುವುದಿಲ್ಲವೇ? ಜಾತಿಯ ಹೆಸರುಗಳು ಹಿನ್ನೆಲೆಯನ್ನು ಸೂಚಿಸುವುದಿಲ್ಲವೇ? ಶಿಕ್ಷಕರು ತಾರತಮ್ಯ ಮಾಡುವುದನ್ನು ತಡೆಯಲು ಸಮವಸ್ತ್ರ ಸಹಕಾರಿಯಾಗಿದೆಯೇ?

    ಐರ್ಲೆಂಡ್‌ ಸರ್ಕಾರವು ಹಿಜಬ್‌ ಮತ್ತು ಸಿಖ್‌ ಪೇಟವನ್ನು ಅನುಮತಿಸಲು ಪೊಲೀಸ್‌ ಸಮವಸ್ತ್ರದ ನಿಯಮಗಳನ್ನು ಬದಲಾಯಿಸಿದಾಗ ಮೋದಿ ಸರ್ಕಾರ ಅದನ್ನು ಸ್ವಾಗತಿಸಿತು. ಹಾಗಾದರೆ ಸ್ವದೇಶ ಮತ್ತು ವಿದೇಶ ವಿಚಾರವಾಗಿ ಏಕೆ ಎರಡು ಮಾನದಂಡಗಳು? ಸಮವಸ್ತ್ರದ ಬಣ್ಣಗಳಿಗೆ ಹೋಲುವ ಹಿಜಬ್‌ ಮತ್ತು ಪೇಟಗಳನ್ನು ಧರಿಸಲು ಅನುಮತಿಸಬಹುದು.

    ಇದೆಲ್ಲದರ ಪರಿಣಾಮವೇನು? ಮೊದಲನೆಯದಾಗಿ, ಸರ್ಕಾರವು ಅಸ್ತಿತ್ವದಲ್ಲಿಲ್ಲದ ಸಮಸ್ಯೆಯನ್ನು ಸೃಷ್ಟಿಸಿತು. ಮಕ್ಕಳು ಹಿಜಬ್‌, ಬಳೆ ಇತ್ಯಾದಿ ಧರಿಸಿ ಶಾಲೆಗೆ ಹೋಗುತ್ತಿದ್ದರು. ಎರಡನೆಯದಾಗಿ, ಹಿಂಸಾಚಾರವನ್ನು ಪ್ರಚೋದಿಸಲಾಯಿತು. ಕೇಸರಿ ಪೇಟಗಳೊಂದಿಗೆ ಪ್ರತಿಯಾಗಿ ಪ್ರತಿಭಟನೆಗಳನ್ನು ನಡೆಸಲಾಯಿತು.

    ಕೇಸರಿ ಪೇಟಗಳು ಅಗತ್ಯವೆ? ಅಥವಾ ಹಿಜಬ್‌ಗೆ ಪ್ರತಿಕ್ರಿಯೆ ಮಾತ್ರವೇ? ಸರ್ಕಾರ ಮತ್ತು ಹೈಕೋರ್ಟ್‌ ಆದೇಶವು ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದೆ. ಹಿಜಬ್‌ ಧರಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮಾಧ್ಯಮಗಳು, ಪೊಲೀಸರು ಮತ್ತು ನಿರ್ವಾಹಕರು ಕಿರುಕುಳ ನೀಡುವುದನ್ನು ನಾವು ನೋಡಿದ್ದೇವೆ. ಮಕ್ಕಳು ಪರೀಕ್ಷೆ ಬರೆಯುವುದನ್ನು ಸಹ ನಿಷೇಧಿಸಲಾಗಿದೆ. ಇದು ನಾಗರಿಕ ಹಕ್ಕುಗಳ ಸಾಮೂಹಿಕ ಉಲ್ಲಂಘನೆಯಾಗಿದೆ.

    ಕೊನೆಯದಾಗಿ, ಇದರರ್ಥ ಒಂದು ಧರ್ಮವನ್ನು ಗುರಿಯಾಗಿಸಲಾಗಿದೆ. ಅದರ ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್‌ 15, ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದೇ ಉಲ್ಲಂಘನೆಯಲ್ಲವೇ? ಸಂಕ್ಷಿಪ್ತವಾಗಿ ಹೈಕೋರ್ಟ್‌ ಆದೇಶವು ಮಕ್ಕಳನ್ನು ಶಿಕ್ಷಣ ಮತ್ತು ಅಲ್ಲಾನ ಆಜ್ಞೆಗಳ ನಡುವೆ ಆಯ್ಕೆ ಮಾಡಲು ಒತ್ತಾಯಿಸಿದೆ.

    ಮುಸ್ಲಿಮರಿಗೆ ಶಿಕ್ಷಣ ಪಡೆಯುವುದು ಅಲ್ಲಾಹನ ಆಜ್ಞೆಯಾಗಿದೆ. ಅವನ ಕಟ್ಟುಪಾಡುಗಳನ್ನು (ಸಲಾಹ್‌, ಹಿಜಬ್‌, ರೋಜಾ ಇತ್ಯಾದಿ) ಅನುಸರಿಸುತ್ತದೆ. ಈಗ ಯಾವುದು ಬೇಕು ಅದನ್ನು ಆಯ್ಕೆ ಮಾಡಿ ಎಂದು ಸರ್ಕಾರ ಹುಡುಗಿಯರನ್ನು ಒತ್ತಾಯಿಸುತ್ತಿದೆ. ಇಲ್ಲಯವರೆಗೆ ನ್ಯಾಯಾಂಗವು ಗಡ್ಡವನ್ನು ಹೊಂದುವುದು ಮತ್ತು ಹಿಜಬ್‌ ಅನಿವಾರ್ಯವಲ್ಲ ಎಂದು ಘೋಷಿಸಿದೆ. ನಂಬಿಕೆಗಳ ಮುಕ್ತ ಅಭಿವ್ಯಕ್ತಿಯಿಂದ ಈಗ ಏನು ಉಳಿದಿದೆ?

    ಹಿಜಬ್‌ ಧರಿಸುವುದು ಮಹಿಳೆಯರಿಗೆ ಕಿರುಕುಳವನ್ನು ಕಾನೂನುಬದ್ಧಗೊಳಿಸಲು ಈ ತೀರ್ಪು ಬಳಸಿಕೊಳ್ಳುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಬ್ಯಾಂಕ್‌ಗಳು, ಆಸ್ಪತ್ರೆಗಳು, ಸಾರ್ವಜನಿಕ ಸಾರಿಗೆ ಇತ್ಯಾದಿಗಳಲ್ಲಿ ಹಿಜಬ್‌ ಧರಿಸಿದ ಮಹಿಳೆಯರಿಗೆ ಇದು ಸಂಭವಿಸಿದಾಗ ನಿರಾಶೆಯಾಗಬಹುದು.

    ಪೂರ್ಣ ತೀರ್ಪು ಲಭ್ಯವಾದಾಗ ಒಬ್ಬರು ಹೆಚ್ಚು ವಿವರವಾಗಿ ಪ್ರತಿಕ್ರಿಯೆಯನ್ನು ನೀಡಬಹುದು ಎಂದು ಅಸಾದುದ್ದೀನ್‌ ಓವೈಸಿ ಸರಣಿ ಟ್ವೀಟ್‌ ಮಾಡಿದ್ದಾರೆ.

  • ಮೂರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಉಗ್ರರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ 3 ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

    ಕಳೆದ 12 ಗಂಟೆಗಳಲ್ಲಿ ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಭಾರೀ ಕಾರ್ಯಾಚರಣೆಯನ್ನು ಆರಂಭಿಸಿವೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಶನಿವಾರ ಬೆಳಗ್ಗೆ ಕಾಶ್ಮೀರದ ಪುಲ್ವಾಮಾ, ಗಂದರ್‌ಬಾಲ್ ಮತ್ತು ಹಂದ್ವಾರ ಪ್ರದೇಶದಲ್ಲಿ ಮೂರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಿದ್ದಾರೆ.

    ಕಾಶ್ಮೀರದಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿದಿದೆ. ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಹಲವು ಕಾರ್ಯಾಚರಣೆಗಳನ್ನು ಆರಂಭಿಸಿವೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದರು. ಇದನ್ನೂ ಓದಿ:  ಭೂದಾಖಲೆಗಳನ್ನು ‘ರೈತನ ಮನೆ ಬಾಗಿಲಿಗೆ’ ತಲುಪಿಸುವುದು ಒಂದು ಅತ್ಯುತ್ತಮ ಸೇವೆ: ಆರ್.ಅಶೋಕ್

    ನಾವು ಕಳೆದ ರಾತ್ರಿ 4-5 ಸ್ಥಳಗಳಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ಇದುವರೆಗೆ ಪುಲ್ವಾಮಾದಲ್ಲಿ ಜೆಇಎಂನ ಇಬ್ಬರು ಭಯೋತ್ಪಾದಕರು, ಗಂದರ್‌ಬಾಲ್ ಎಲ್‍ಇಟಿಯ ಒಬ್ಬ ಭಯೋತ್ಪಾದಕ, ಹಂದ್ವಾರದಲ್ಲಿ ಎಲ್‍ಇಟಿಯ ಮತ್ತೊಬ್ಬ ಭಯೋತ್ಪಾದಕ ಹತನಾಗಿದ್ದಾನೆ ಎಂದು ತಿಳಿಸಿದರು. ಎಲ್ಲಾ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ. ಇತರ ಸ್ಥಳಗಳಲ್ಲಿಯೂ ಸಂಪರ್ಕವನ್ನು ಸ್ಥಾಪಿಸಲಾಗುವುದು ಅಂತ ನಾವು ನಿರೀಕ್ಷಿಸುತ್ತಿದ್ದೇವೆ ಎಂದರು.

    ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚೆವಾಕಲನ್ ಗ್ರಾಮದಲ್ಲಿ ನಿನ್ನೆ ಸಂಜೆ ಮೊದಲ ಎನ್‍ಕೌಂಟರ್ ಪ್ರಾರಂಭವಾಯಿತು. ಅಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ಇನ್ನೂ ಇಬ್ಬರು ಉಗ್ರರು ಅಲ್ಲಿಯೇ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

    ಎರಡನೇ ಎನ್‍ಕೌಂಟರ್ ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಕೌಬಾಗ್ ನುನಾರ್ ಪ್ರದೇಶದಲ್ಲಿ ನಡೆದಿದ್ದು, ಅಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಎಲ್‍ಇಟಿ ಭಯೋತ್ಪಾದಕನನ್ನು ಕೊಲ್ಲಲಾಯಿತು. ಸದ್ಯ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶನಿವಾರ ಬೆಳಗ್ಗೆ ಹಂದ್ವಾರದ ರಾಜ್ವಾರ್ ಪ್ರದೇಶದ ನೆಚಮಾದಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ಇನ್ನೊಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ, ಹಂದ್ವಾರದ ರಾಜ್ವಾರ್ ಪ್ರದೇಶದ ನೆಚಮಾದಲ್ಲಿ ಎನ್‍ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯದಲ್ಲಿವೆ. ಹೆಚ್ಚಿನ ವಿವರಗಳನ್ನು ಅನುಸರಿಸಲಾಗುವುದು. ಎನ್‍ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ತಾವು ಆಯ್ಕೆಯಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿ, ರಾಜಧಾನಿಯಲ್ಲಿ ಅಲ್ಲ: ಭಗವಂತ್ ಮಾನ್

    ಇದಕ್ಕೂ ಮೊದಲು, ಫೆಬ್ರವರಿ 10 ರಂದು ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಕೊಲ್ಲಲಾಯಿತು. ಅದರಲ್ಲಿ ಇಬ್ಬರು ಎಲ್‍ಇಟಿ ಭಯೋತ್ಪಾದಕರು ಪುಲ್ವಾಮಾದ ಬಟ್ಪೋರಾ ಪ್ರದೇಶದಲ್ಲಿ ಮತ್ತು ಶ್ರೀನಗರದ ಹಜರತ್ಬಾಲ್ ಪ್ರದೇಶದಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ತಿಳಿದು ಬಂದಿದೆ.

    ಈ ವರ್ಷ ಕಾಶ್ಮೀರದಲ್ಲಿ 20 ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳನ್ನು ಕಾರ್ಯಗತಗೊಳಿಸಲಾಗಿದೆ. ಭದ್ರತಾ ಪಡೆಗಳು ಮೂವರು ಉನ್ನತ ಕಮಾಂಡರ್‍ಗಳು ಮತ್ತು 9 ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ 35 ಭಯೋತ್ಪಾದಕರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

    ಅದಲ್ಲದೆ ಭದ್ರತಾ ಪಡೆಗಳು ಈ ವರ್ಷ 16 ಸಕ್ರಿಯ ಭಯೋತ್ಪಾದಕರು ಮತ್ತು ಮೂರು ಡಜನ್‍ಗಿಂತಲೂ ಹೆಚ್ಚು ಭಯೋತ್ಪಾದಕರ ಸಹಚರರನ್ನು ಜೀವಂತವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

     

  • ಬಿಜೆಪಿ ಸೀಟುಗಳನ್ನು ಕಡಿಮೆಗೊಳಿಸಬಹುದು ಅಂತ ನಾವು ತೋರಿಸಿದ್ದೇವೆ: ಅಖಿಲೇಶ್ ಯಾದವ್

    ಬಿಜೆಪಿ ಸೀಟುಗಳನ್ನು ಕಡಿಮೆಗೊಳಿಸಬಹುದು ಅಂತ ನಾವು ತೋರಿಸಿದ್ದೇವೆ: ಅಖಿಲೇಶ್ ಯಾದವ್

    ಲಕ್ನೋ: ಬಿಜೆಪಿ ಸೀಟುಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ನಾವು ತೋರಿಸಿದ್ದೇವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

    ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವನ್ನು ಸಾಧಿಸಿದ ಒಂದು ದಿನದ ಬಳಿಕ ಅಖಿಲೇಶ್ ಯಾದವ್ ಅವರು ಟ್ವೀಟ್ ಮಾಡಿದ್ದು, ತಮ್ಮ ಸೀಟುಗಳ ಸಂಖ್ಯೆಯನ್ನು ಎರಡರಷ್ಟು ಹೆಚ್ಚಿಸಿದಕ್ಕೆ ಮತ್ತು ಮತ ಹಂಚಿಕೆಯಲ್ಲಿ ಒಂದೂವರೆ ಪಟ್ಟು ಹೆಚ್ಚಿಸಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭವಾಗಿ ಸಿಗಲಿದೆ ಜಯ

    ಬಿಜೆಪಿಯ ಸೀಟುಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ನಾವು ತೋರಿಸಿದ್ದೇವೆ. ಇದು ಮುಂದುವರಿಯುತ್ತದೆ. ಅರ್ಧಕ್ಕಿಂತ ಹೆಚ್ಚು ಸುಳ್ಳುಗಳನ್ನು ಈಗಾಗಲೇ ಅಳಿಸಿಹಾಕಲಾಗಿದೆ. ಉಳಿದವುಗಳನ್ನು ಅಳಿಸಲಾಗುತ್ತದೆ. ಸಾರ್ವಜನಿಕ ಹಿತಾಸಕ್ತಿಗಾಗಿ ಹೋರಾಟ ಮುಂದುವರಿಯುತ್ತದೆ ಎಂದಿದ್ದಾರೆ.

    ಉತ್ತರ ಪ್ರದೇಶದಲ್ಲಿ ಗುರುವಾರ ನಡೆದ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ 273 ಸ್ಥಾನಗಳನ್ನು ಪಡೆಯುವ ಮೂಲಕ ಸಂಪೂರ್ಣ ಜಯ ಗಳಿಸಿದೆ. ಸಮಾಜವಾದಿ ಪಕ್ಷ 125 ಸ್ಥಾನಗಳನ್ನು ಗಳಿಸುವ ಮೂಲಕ ಸೋತಿದೆ. 2017ರ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 47 ಸ್ಥಾನಗಳನ್ನು ಗೆದ್ದಿತ್ತು.
    ಇದನ್ನೂ ಓದಿ: Exclusive -ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಚುನಾವಣೆ?

  • ಕೆಲವೊಬ್ಬರು ಸುಧಾರಿಸಲು ಸಾಧ್ಯವಿಲ್ಲ ಬಿ. ಎಲ್. ಸಂತೋಷ್ ವ್ಯಂಗ್ಯ

    ಕೆಲವೊಬ್ಬರು ಸುಧಾರಿಸಲು ಸಾಧ್ಯವಿಲ್ಲ ಬಿ. ಎಲ್. ಸಂತೋಷ್ ವ್ಯಂಗ್ಯ

    ನವದೆಹಲಿ: ಕೆಲವೊಬ್ಬರು ಸುಧಾರಿಸುವುದು ಸಾಧ್ಯವಿಲ್ಲ ಎಂದು ಎಸ್‍ಪಿ ಅಧ್ಯಕ್ಷನಿಗೆ ಪರೋಕ್ಷವಾಗಿ ವ್ಯಂಗ್ಯವಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ವ್ಯಂಗ್ಯವಾಡಿದ್ದಾರೆ.

    ಪಂಚ ರಾಜ್ಯಗಳ ವಿಧಾನಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಬಿ. ಎಲ್. ಸಂತೋಷ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ಗೆ ಸೋಲು

    ಈ ವೇಳೆ ಬಿಜೆಪಿಯ ಗೆಲುವಿನ ಬಗ್ಗೆ ಯಾವಾಗಲೂ ಟೀಕೆ ಮಾಡುವ ಪ್ರತಿಪಕ್ಷಗಳ ವಿರುದ್ಧ ಸಿಡಿದ ಅವರು, ದೇವ ಭೂಮಿಯಲ್ಲಿ ಬಿಜೆಪಿಯು ಗೆಲುವಿನ ನಾಗಾಲೋಟದತ್ತ ಸಾಗಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿದ್ದು, ಗಣರಾಜ್ಯವನ್ನು ಕಿತ್ತೊಗೆಯಲಾಗುತ್ತಿದೆ. ಗಡಿನಾಡು ಪಂಜಾಬ್‍ನಲ್ಲಿ ಆಮ್ ಆದ್ಮಿಯು ಗೆಲುವಿನತ್ತ ಸಾಗುತ್ತಿದೆ. ಪರ್ಯಾಯ ಆಡಳಿತದ ಭರವಸೆ, ಆಶಾವಾದ ಮೂಡಿದೆ. ಕೆಲವೊಬ್ಬರು ಸುಧಾರಿಸುವುದೇ ಇಲ್ಲ ಎಂದು ಟ್ವೀಟ್ ಮೂಲಕ ಕುಹಕವಾಡಿದ್ದಾರೆ. ಇದನ್ನೂ ಓದಿ: ಹುಟ್ಟೂರಿಗೆ ನೆರವಾದ ಸೋನು ಸೂದ್-1,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ

    ಉತ್ತರ ಪ್ರದೇಶದಲ್ಲಿ ಬಿಜೆಪಿ ಪರವಾಗಿ ಫಲಿತಾಂಶ ಬರುವಂತೆ ಮತಯಂತ್ರಗಳನ್ನು ತಿರುಚಲು ಸರ್ಕಾರದಿಂದ ಜಿಲ್ಲಾಧಿಕಾರಿಗಳಿಗೆ ಸೂಚನೆ ಬಂದಿದೆ ಅಂತ ಆಖಿಲೇಶ್ ಯಾದವ್ ಮಂಗಳವಾರ ಆರೋಪಿಸಿದ್ದರು. ವಾರಣಾಸಿಯಲ್ಲಿ ಇವಿಎಂಗಳನ್ನು ಸಾಗಿಸುತ್ತಿದ್ದು ಎರಡು ಟ್ರಕ್‍ಗಳನ್ನು ಎಸ್‍ಪಿ ಕಾರ್ಯಕರ್ತರು ತಡೆದು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ ಹರಸಾಹಸದ ನಂತರ ಟ್ರಕ್‍ಗಳು ಮುಂದೆ ಸಾಗಲು ಅನುವು ಮಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು.

    ಆರೋಪ ಬಂದ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಬಳಸಿರುವ ಮತ ಯಂತ್ರಗಳನ್ನು ಬಲಿಷ್ಟವಾದ ಒಂದು ಕೊಠಡಿಯಲ್ಲಿ ಭದ್ರವಾಗಿ ಇರಿಸಲಾಗಿದೆ. ಅಲ್ಲಿ ಸಿ.ಸಿ.ಟಿ.ವಿ ಕಣ್ಗಾಗಾವಲು ಇದೆ. ಬಲಿಷ್ಟವಾದ ಆ ಕೊಠಡಿಯಿಂದ ಯಾವುದೇ ಮತಯಂತ್ರಗಳನ್ನು ಸಾಗಿಸಿಲ್ಲ. ಟ್ರಕ್‍ನಲ್ಲಿ ಇರುವ ಮತಯಂತ್ರಗಳನ್ನು ಚುನಾವಣೆಯಲ್ಲಿ ಬಳಿಸಿಲ್ಲ. ಮತ ಎಣಿಕೆ ಸಿಬ್ಬಂದಿಗೆ ತರಬೇತಿ ನೀಡಲು ಈ ಮತಯಂತ್ರಗಳನ್ನು ಸಾಗಿಸಲಾಗುತ್ತಿತ್ತು. ರಾಜಕೀಯ ಪಕ್ಷಗಳು ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಎಂದು ವಾರಣಾಸಿ ಜಿಲ್ಲಾಧಿಕಾರಿ ಕೌಶಲ್ ಶರ್ಮಾ ಸ್ಪಷ್ಟನೆ ನೀಡಿದ್ದರು.

  • ಆಪ್‍ಗೆ ಅಭಿನಂದನೆ ಕೋರಿದ ನವಜೋತ್ ಸಿಂಗ್ ಸಿಧು

    ಆಪ್‍ಗೆ ಅಭಿನಂದನೆ ಕೋರಿದ ನವಜೋತ್ ಸಿಂಗ್ ಸಿಧು

    ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಶುಭಕೋರಿದ್ದಾರೆ.

    ಈ ಕುರಿತಂತೆ ನವಜೋತ್ ಸಿಂಗ್ ಸಿಧು ಅವರು, ಜನರ ಧ್ವನಿ ದೇವರ ಧ್ವನಿ. ಪಂಜಾಬ್ ಜನತೆಯ ಆದೇಶವನ್ನು ವಿನಮ್ರವಾಗಿ ಸ್ವೀಕರಿಸಿ. ಆಪ್‍ಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು

    ಪಂಜಾಬ್‍ನಲ್ಲಿ ಕಾಂಗ್ರೆಸ್ ಸೋತಿದ್ದು, ಈ ಮಧ್ಯೆ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಪ್‍ನಿಂದ ಸರ್ಧಿಸಿದ್ದ ಜೀವನ್ ಜ್ಯೋತ್ ಕೌರ್ ಮುನ್ನಡೆಯಲ್ಲಿದ್ದರೆ, ಶಿರೋಮಣಿ ಅಕಾಲಿ ದಳದ ಬಿಕ್ರಾಂ ಸಿಂಗ್ ಎರಡನೇ ಸ್ಥಾನ ಪಡೆದಿದ್ದಾರೆ ಮತ್ತು ಮೂರನೇ ಸ್ಥಾನದಲ್ಲಿ ನವಜೋತ್ ಸಿಂಗ್ ಸಿಧು ಇದ್ದಾರೆ. ಇದನ್ನೂ ಓದಿ:  ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

    ಮಧ್ಯಾಹ್ನ 1 ಗಂಟೆಯ ಟ್ರೆಂಡ್ ಪ್ರಕಾರ ಆಪ್ 91, ಕಾಂಗ್ರೆಸ್ 17, ಶಿರೋಮಣಿ ಅಖಾಲಿ ದಳ 06, ಬಿಜೆಪಿ 2, ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈಗಾಗಲೇ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ಮನೆಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ. ಇದನ್ನೂ ಓದಿ: ಪಂಜಾಬ್ ಫಲಿತಾಂಶ: 3ನೇ ಸ್ಥಾನಕ್ಕೆ ಕುಸಿದ ಸಿಧು

  • ಮಹಿಳೆಯರು ತಮ್ಮ ಶಕ್ತಿಯಿಂದ ಸಮಾಜವನ್ನು ಪರಿವರ್ತಿಸಬಲ್ಲರು: ರಾಹುಲ್

    ಮಹಿಳೆಯರು ತಮ್ಮ ಶಕ್ತಿಯಿಂದ ಸಮಾಜವನ್ನು ಪರಿವರ್ತಿಸಬಲ್ಲರು: ರಾಹುಲ್

    ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಅವರು ಮಹಿಳೆಯರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ ಮಹಿಳೆಯರು ತಮ್ಮ ಬುದ್ಧಿವಂತಿಕೆಯಿಂದ ಸಮಾಜವನ್ನು ಪರಿವರ್ತಿಸುವಲ್ಲಿ ಸಮರ್ಥರಾಗಿದ್ದಾರೆ ಎಂದಿದ್ದಾರೆ.

    ಈ ವಿಶೇಷ ದಿನದಂದು ರಾಹುಲ್ ಗಾಂಧಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಮಹಿಳೆಯರು ತಮ್ಮ ಬುದ್ಧಿವಂತಿಕೆ, ಸಮರ್ಪಣೆ ಮತ್ತು ಶಕ್ತಿಯಿಂದ ಸಮಾಜವನ್ನು ಪರಿವರ್ತಿಸುವ ಸಾಮಥ್ರ್ಯ ಹೊಂದಿದ್ದಾರೆ. ಮಹಿಳೆಯರು ತಮಗೆ ಸಿಗಬೇಕಾಗಿರುವ ಬಾಕಿಯನ್ನು ಪಡೆಯಬೇಕು. ಎಲ್ಲರಿಗೂ ಮಹಿಳಾ ದಿನಾಚರಣೆಯ ಶುಭಾಶಯಗಳು ಎಂದು ಶುಭ ಕೋರಿದ್ದಾರೆ. ಇದನ್ನೂ ಓದಿ: ಏಕಾಂಗಿಯಾಗಿ ಉಕ್ರೇನ್ ಗಡಿಗೆ ಪ್ರಯಾಣಿಸಿದ 11 ವರ್ಷದ ಬಾಲಕ

    ಕಾಂಗ್ರೆಸ್ ಟ್ವಿಟ್ಟರ್‌ನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಸರಣಿ ಟ್ವೀಟ್ ಮಾಡುವ ಮೂಲಕ ಮಹಿಳೆಯರಿಗೆ ಶುಭಾ ಕೋರಲಾಗಿದೆ. ಮಹಿಳಾ ಶಕ್ತಿ ಮತ್ತು ಯಶಸ್ಸಿನ ಫೋಟೋಗಳನ್ನು ಹಂಚಿಕೊಂಡಿದೆ. ರಾಷ್ಟ್ರದ್ಯಂತ ಮತ್ತು ವಿಶ್ವದ್ಯಂತ ಸಹೋದರಿಯರೇ, ನಿಮ್ಮ ಆಲೋಚನೆಗಳು, ನಿಮ್ಮ ಶಕ್ತಿ, ನಿಮ್ಮ ಧೈರ್ಯ, ನಿಮ್ಮ ಶಾಂತಿಯತ್ವ ಮತ್ತು ನಿಮ್ಮ ದಯೆಗೆ ನಾವು ನಮ್ರತೆಯಿಂದ ತಲೆಬಾಗುತ್ತೇವೆ. ನಿಮ್ಮಲ್ಲಿ ಪ್ರತಿಯೊಬ್ಬರೂ ಭರವಸೆ ಮತ್ತು ಸಂತೋಷದ ಧ್ವಜಧಾರಿಗಳಾಗಿರುತ್ತಾರೆ. ಈ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ

  • ಏಕಾಂಗಿಯಾಗಿ ಉಕ್ರೇನ್ ಗಡಿಗೆ ಪ್ರಯಾಣಿಸಿದ 11 ವರ್ಷದ ಬಾಲಕ

    ಏಕಾಂಗಿಯಾಗಿ ಉಕ್ರೇನ್ ಗಡಿಗೆ ಪ್ರಯಾಣಿಸಿದ 11 ವರ್ಷದ ಬಾಲಕ

    ಕೀವ್: 11 ವರ್ಷದ ಬಾಲಕನೊಬ್ಬ ರಷ್ಯಾದ ಆಕ್ರಮಣದ ನಡುವೇಯು ಏಕಾಂಗಿಯಾಗಿ ಉಕ್ರೇನ್ ಗಡಿಗೆ ಪ್ರಯಾಣಿಸಿದ್ದಾನೆ.

    ಆಗ್ನೇಯ ಉಕ್ರೇನ್‍ನ ಝಪೊರೊಝೈಯಿಂದ ಏಕಾಂಗಿಯಾಗಿ 11 ವರ್ಷದ ಉಕ್ರೇನಿಯನ್ ಬಾಲಕನೊಬ್ಬನು ತನ್ನ ಪಶ್ಚಿಮ ನೆರೆಯ ರಾಷ್ಟ್ರವಾದ ಸ್ಲೋವಾಕಿಯಾ ತಲುಪಿದ್ದಾನೆ. ಬಾಲಕನು ಸ್ಲೋವಾಕಿಯಾಕ್ಕೆ ವಯಸ್ಕರ ಸಹಾಯವಿಲ್ಲದೆ ಏಕಾಂಗಿಯಾಗಿ ಪ್ರಯಾಣ ಬೆಳೆಸಿ, ತಲುಪಿದ್ದಾನೆ ಎಂದು ಉಕ್ರೇನ್‍ನ ಆಂತರಿಕ ವ್ಯವಹಾರಗಳ ಸಚಿವಾಲಯವು ಮಂಗಳವಾರ ತಿಳಿಸಿದೆ. ಇದನ್ನೂ ಓದಿ: ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ

    ಬಾಲಕನು ತನ್ನ ನಗು ಮುಖ, ನಿಜವಾದ ನಾಯಕನಂತಹ ದೃಢಸಂಕಲ್ಪದಿಂದ ಎಲ್ಲರ ಗಮನಸೆಳೆದಿದ್ದು, ಅವನು ಸುರಕ್ಷಿತವಾಗಿದ್ದಾಗಿ ತಲುಪಿದ್ದಾನೆ ಎಂದು ಇಲಾಖೆ ಹೇಳಿದೆ. ಇದನ್ನೂ ಓದಿ: ರೇಣುಕಾಚಾರ್ಯ, ಪ್ರತಾಪಸಿಂಹ ವಿರುದ್ಧದ 4 ಕೇಸ್‌ ವಾಪಸ್‌ ಪಡೆದ ಸರ್ಕಾರ- ಹೈಕೋರ್ಟ್‌ ಗರಂ

    ಕೆಲ ಅನಿವಾರ್ಯತೆಗಳ ಕಾರಣ ಬಾಲಕನ ಪೋಷಕರು ಉಕ್ರೇನ್‍ನಲ್ಲಿಯೇ ಉಳಿಯಬೇಕಾಗಿತ್ತು. ಹೀಗಾಗಿ ಅವನು ಒಬ್ಬಂಟಿಗನಾಗಿಯೇ ಗಡಿ ದಾಟಬೇಕಾಯಿತು ಎಂದು ಸಚಿವಾಲಯವೂ ತಿಳಿಸಿದೆ.

    ಬಾಲಕನು ಪ್ಲಾಸ್ಟಿಕ್ ಚೀಲ, ಪಾಸ್‍ಪೋರ್ಟ್ ಮತ್ತು ಫೋನ್ ಸಂಖ್ಯೆಯನ್ನು ಕೈಯಲ್ಲಿ ಬರೆದುಕೊಂಡು ಸ್ಲೋವಾಕಿಯಾಕ್ಕೆ ಬಂದಿರುವುದಾಗಿ ಸ್ಲೋವಾಕಿಯಾ ಸಚಿವಾಲಯವು ಬಾಲಕನ ಸುರಕ್ಷಿತ ಆಗಮನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

    ಸ್ಲೋವಾಕಿಯಾದ ಸ್ವಯಂಸೇವಕರು ಅವನನ್ನು ಆದರದಿಂದ ಸ್ವಾಗತಿಸಿ ಆಹಾರ ಮತ್ತು ಪಾನೀಯಗಳನ್ನು ನೀಡಿ ಉಪಚರಿಸಿದ್ದಾರೆ. ಬಾಲಕನ ತಾಯಿಯೂ ಅವನ ಕೈಯಲ್ಲಿ ಅವರ ಸಂಬಂಧಿಕರೊಬ್ಬರ ಮೊಬೈಲ್ ಸಂಖ್ಯೆ ಬರೆದಿದ್ದರು. ಇದರ ಸಹಾಯದಿಂದ ಅವನನ್ನು ಸೇರಿಸಬೇಕಾಗಿದ್ದ ಜಾಗಕ್ಕೆ ಸೇರಿಸಿದ್ದೇವೆ ಎಂದು ಸಚಿವಾಲಯವೂ ತಿಳಿಸಿದೆ.

    ಮಾರ್ಚ್ 6 ರಂದು ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ 10 ದಿನಗಳ ಅಂತರದಲ್ಲಿ 1.5 ಮಿಲಿಯನ್ ಜನರು ಉಕ್ರೇನ್‍ನಲ್ಲಿ ನಡೆಯುತ್ತಿರುವ ಯುದ್ಧದಿಂದ ಪಲಾಯನ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

    ಫೆಬ್ರವರಿ 24 ರಿಂದ ಸಂಘರ್ಷ ಪ್ರಾರಂಭವಾದಾಗಿನಿಂದಲೂ ಅತಿ ಹೆಚ್ಚು ನಿರಾಶ್ರಿತರನ್ನು ಪೋಲೆಂಡ್ ದೇಶವು ಉಕ್ರೇನ್‍ನಿಂದ ಸ್ವೀಕರಿಸಿದೆ. ಇದುವರೆಗೆ ಒಟ್ಟು 1,735,068 ಉಕ್ರೇನ್ ನಾಗರಿಕರು ಮಧ್ಯ ಯುರೋಪ್‍ನ ಗಡಿ ದಾಟಿದ್ದಾರೆ ಎಂದು ಯುಎನ್‍ಹೆಚ್‍ಸಿಆರ್ ವರದಿ ನೀಡಿದೆ.