Tag: ಡಬಲ್ ಇಂಜಿನ್ ಸರ್ಕಾರ

  • ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ: ರಣದೀಪ್ ಸಿಂಗ್ ಸುರ್ಜೇವಾಲಾ

    ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ: ರಣದೀಪ್ ಸಿಂಗ್ ಸುರ್ಜೇವಾಲಾ

    ಬೆಂಗಳೂರು: ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

    ಮೇಕೆದಾಟು 2.0 ಪಾದಯಾತ್ರೆಯನ್ನು ಪಾಲ್ಗೊಂಡ ಅವರು, ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ, ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ. 2013ಕ್ಕೂ ಮುಂಚೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆಗೆ ಏನೂ ಮಾಡಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಿದ್ದರಾಮಯ್ಯ ಯೋಜನೆಗೆ ಡಿಪಿಆರ್ ಮಾಡಿದರು. ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ಸಿಎಂ ಆಗುವುದರಲ್ಲಿಯೇ ವಸ್ತುಸ್ಥಿತಿ ಬದಲಾಗಲಿ ಎನ್ನುವುದು ಜನರ ಆಶಯ. ಬೊಮ್ಮಾಯಿ ಸರ್ವಪಕ್ಷ ಸಭೆ ಕರೆಯುತ್ತೇವೆ ಅಂತ ಹೇಳಿ ಕರೆದಿಲ್ಲ. ಆ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡಿದ್ದಾರೆ. ಸರ್ವಪಕ್ಷ ಸಭೆಯಿಂದ ಮೇಕೆದಾಟು ಯೋಜನೆ ಆರಂಭ ಆಗಲ್ಲ ಎಂದಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್

    ತಮಿಳುನಾಡಿಗೆ ಮೇಕೆದಾಟು ಬಗ್ಗೆ ಮಾತಾಡುವ ಅಧಿಕಾರ ಇಲ್ಲ. ತಮಿಳುನಾಡಿಗೆ ಬಿಜೆಪಿ ಸಾಕಷ್ಟು ನೀರು ಕೊಡುತ್ತಿದೆ. ನಾವು ಬಿಬಿಎಂಪಿ ಎಲೆಕ್ಷನ್ ದೃಷ್ಟಿಯಲ್ಲಿಟ್ಟುಕೊಂಡು ಪಾದಯಾತ್ರೆ ಮಾಡುತ್ತಿಲ್ಲ. ಮುಂದಿನ ಐವತ್ತು ವರ್ಷ ಈ ಯೋಜನೆಯಿಂದ ಬೆಂಗಳೂರಿಗೆ ನೀರು ಸಿಗುತ್ತದೆ. ಇದು ಬೆಂಗಳೂರಿಗೆ ಮಾತ್ರ ಸೀಮಿತ ಅಲ್ಲ. ರಾಜ್ಯವೂ ಈ ಯೋಜನೆಯಿಂದ ಅಭಿವೃದ್ಧಿ ಆಗುತ್ತದೆ.

    ಮೇಕೆದಾಟು ಪಾದಯಾತ್ರೆ ಜನಾಂದೋಲನ ಆಗಿ ಪರಿಣಮಿಸಿದೆ. ಈ ಜನಾಂದೋಲನವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸುವ ಕಾಲ ಬಂದಿದೆ. ಪಾದಯಾತ್ರೆ ಸಿದ್ದರಾಮಯ್ಯ, ಡಿಕೆಶಿ ಸೇರಿ ಎಲ್ಲ ನಮ್ಮ ನಾಯಕರ ನೇತೃತ್ವದಲ್ಲಿ ನಡೆಯುತ್ತಿದೆ. ಪಾದಯಾತ್ರೆಯನ್ನು ನಾವು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಬೈಡನ್ ದೌರ್ಬಲ್ಯದಿಂದಲೇ ಈ ಅನಾಹುತವಾಗಿದೆ: ಟ್ರಂಪ್

  • ಡಬಲ್ ಇಂಜಿನ್ ಸರ್ಕಾರ ಉಚಿತ ಪಡಿತರ, ಲಸಿಕೆಗಳನ್ನು ಒದಗಿಸಿದೆ: ಪುಷ್ಕರ್ ಸಿಂಗ್ ಧಾಮಿ

    ಡಬಲ್ ಇಂಜಿನ್ ಸರ್ಕಾರ ಉಚಿತ ಪಡಿತರ, ಲಸಿಕೆಗಳನ್ನು ಒದಗಿಸಿದೆ: ಪುಷ್ಕರ್ ಸಿಂಗ್ ಧಾಮಿ

    ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭೆ ಚುನಾವಣೆಯ ಮುಖ್ಯಸ್ಥ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಡಬಲ್ ಇಂಜಿನ್ ಸರ್ಕಾರವು ಜನರಿಗೆ ಉಚಿತ ಪಡಿತರ ಮತ್ತು ಲಸಿಕೆಗಳನ್ನು ಒದಗಿಸಿದೆ ಎಂದಿದ್ದಾರೆ

    ಬಾಜ್‍ಪುರ, ಉಧಮ್‍ಪುರ ಸಿಂಗ್ ನಗರದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಡಬಲ್ ಇಂಜಿನ್ ಸರ್ಕಾರವು ಜನರಿಗೆ ಉಚಿತ ರೇಷನ್, ಲಸಿಕೆಗಳನ್ನು ಒದಗಿಸಿದೆ. ನಮ್ಮ ಸರ್ಕಾರವು ಜನರಿಗೆ ವಿವಿಧ ವಲಯಗಳಲ್ಲಿ ಅನೇಕ ಯೋಜನೆಗಳನ್ನು ಪ್ರಾರಂಭಿಸಿದೆ ಮತ್ತು ಜನರಿಗೆ ನೇರ ಪ್ರಯೋಜನಗಳನ್ನು ನೀಡಿದೆ ಎಂದು ಹೇಳಿದ್ದಾರೆ.

    ಈಗಾಗಲೇ ಜನ ಬಿಜೆಪಿಯನ್ನು ಪೂರ್ಣ ಬಹುಮತದಿಂದ ಗೆಲ್ಲಿಸಲು ಮನಸ್ಸು ಮಾಡಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ಯುವಕರಿಗೆ 50 ಸಾವಿರ ಸರ್ಕಾರಿ ಉದ್ಯೋಗ, ಬಡವರಿಗೆ ಪ್ರತಿ ವರ್ಷ ಮೂರು ಎಲ್‍ಪಿಜಿ ಸಿಲಿಂಡರ್‍ಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ ಗುಡ್ಡಗಾಡು ಪ್ರದೇಶದಲ್ಲಿ ದುಡಿದು ಜೀವನ ನಡೆಸಲು ಸಾಧ್ಯವಾಗದ ಗರ್ಭಿಣಿಯರಿಗೆ 40 ಸಾವಿರ ಹಾಗೂ ಹಿರಿಯ ನಾಗರಿಕರ ಪಿಂಚಣಿಯನ್ನು 3,600ಕ್ಕೆ ಹೆಚ್ಚಿಸಲಾಗುವುದು ಎಂದಿದ್ದಾರೆ.

    ಕೇಂದ್ರ ಮತ್ತು ರಾಜ್ಯಗಳೆರಡೂ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ತಲಾ 6,000 ನೀಡಲು ನಿರ್ಧರಿಸಿದ್ದೇವೆ. ಅದು ಪ್ರತಿಯೊಬ್ಬ ರೈತರ ಬ್ಯಾಂಕ್ ಖಾತೆಗೆ 12,000 ನಿಧಿ ವರ್ಗಾವಣೆಯ ಲಾಭವನ್ನು ವಿಸ್ತರಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿಗೆ ದಶಕದ ಸಂಭ್ರಮ – ಶಾಂತಿಧಾಮಕ್ಕೆ 25 ಲಕ್ಷ ರೂ. ವಿತರಣೆ

    ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುಷ್ಕರ್ ಸಿಂಗ್ ಧಮಿ ಅವರು ಖತಿಮಾದಿಂದ ಸ್ಪರ್ಧಿಸಲಿದ್ದಾರೆ. ಉತ್ತರಾಖಂಡದ 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14 ರಂದು ಮತದಾನ ನಡೆಯಲಿದ್ದು, ಪ್ರಸ್ತುತ ಬಿಜೆಪಿ 57 ಶಾಸಕರನ್ನು ಹೊಂದಿದೆ. ಇದನ್ನೂ ಓದಿ: ರಾಜಧಾನಿಗೂ ಕಾಲಿಟ್ಟ ಹಿಜಬ್ ವಿವಾದ – ಹಿಜಬ್ ತೆಗೆಯುವಂತೆ ಮಕ್ಕಳಿಗೆ ಶಿಕ್ಷಕರಿಂದ ಒತ್ತಾಯ


    Pushkar Singh Dhami, Double Engine Government, Free Ration, Vaccine, Uttarakhand