Tag: ಡಬ್ಬಿಂಗ್

  • ಹಿಂದಿ ರಾಷ್ಟ್ರ ಭಾಷೆ ಅಲ್ಲದಿದ್ದರೆ ನೀವೇಕೆ ಹಿಂದಿಗೆ ಡಬ್ ಮಾಡುತ್ತೀರಿ?- ಕಿಚ್ಚ ಸುದೀಪ್‌ಗೆ ಅಜಯ್ ದೇವಗನ್ ಪ್ರಶ್ನೆ

    ಹಿಂದಿ ರಾಷ್ಟ್ರ ಭಾಷೆ ಅಲ್ಲದಿದ್ದರೆ ನೀವೇಕೆ ಹಿಂದಿಗೆ ಡಬ್ ಮಾಡುತ್ತೀರಿ?- ಕಿಚ್ಚ ಸುದೀಪ್‌ಗೆ ಅಜಯ್ ದೇವಗನ್ ಪ್ರಶ್ನೆ

    ಹಿಂದಿ ರಾಷ್ಟ್ರ ಭಾಷೆಯಲ್ಲ, ದಕ್ಷಿಣದ ಸಿನಿಮಾಗಳ ತಯಾರಕರು ಪ್ಯಾನ್ ಇಂಡಿಯಾ ಪದವನ್ನು ಬಳಸಬೇಡಿ ಎಂದು ಮೊನ್ನೆಯಷ್ಟೇ ಕಿಚ್ಚ ಸುದೀಪ್ ಮಾತನಾಡಿದ್ದರು. ಹಿಂದಿಯನ್ನು ರಾಷ್ಟ್ರ ಭಾಷೆಯನ್ನಾಗಿ ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲವೆಂದು ಹೇಳುವ ಮೂಲಕ ಕನ್ನಡಪರ ಹೋರಾಟಗಾರರ ಜೊತೆ ನಿಂತುಕೊಂಡಿದ್ದರು. ಅದಕ್ಕೀಗ ಬಾಲಿವುಡ್ ಖ್ಯಾತ ನಟ ಅಜಯ್ ದೇವಗನ್ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ : ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬ

    ನೇರವಾಗಿಯೇ ಕಿಚ್ಚ ಸುದೀಪ್ ಅವರಿಗೆ ಟ್ವಿಟ್ ಮಾಡಿರುವ ಅಜಯ್ ದೇವಗನ್, ‘ನನ್ನ ಸಹೋದರ ಕಿಚ್ಚ ಸುದೀಪ್, ನಿಮ್ಮ ಪ್ರಕಾರ ಹಿಂದಿಯು ರಾಷ್ಟ್ರ ಭಾಷೆ ಅಲ್ಲದಿದ್ದರೆ, ನಿಮ್ಮ ಮಾತೃ ಭಾಷೆಯಲ್ಲೇ ಚಿತ್ರಗಳನ್ನು ಬಿಡುಗಡೆ ಮಾಡಿಕೊಳ್ಳಿ. ಅವುಗಳನ್ನು ಹಿಂದಿಗೆ ಡಬ್ ಮಾಡುತ್ತೀರೇಕೆ? ಹಿಂದಿ ನಮಗೆ ಯಾವಾಗಲೂ ಮಾತೃಭಾಷೆ ಆಗಿರುತ್ತದೆ. ಹಿಂದಿ ಭಾಷೆ ಮತ್ತು ರಾಷ್ಟ್ರ ಭಾಷೆ. ಜನ ಗಣ ಮನ’ ಎಂದು ಹಿಂದಿಯಲ್ಲೇ ಟ್ವಿಟ್ ಮಾಡಿದ್ದಾರೆ ಅಜಯ್. ಇದನ್ನೂ ಓದಿ : ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ

    ಇತ್ತೀಚಿನ ದಿನಗಳಲ್ಲಿ ಹಿಂದಿ ಹೇರಿಕೆ ಮತ್ತು ಬಾಲಿವುಡ್ ಸಿನಿಮಾಗಳ ಕುರಿತಾಗಿ ಭಾರೀ ಚರ್ಚೆ ಆಗುತ್ತಿದೆ. ಕೆಜಿಎಫ್ 2, ಆರ್.ಆರ್.ಆರ್ ಮತ್ತು ಪುಷ್ಪಾ ಸಿನಿಮಾಗಳು ಬಾಲಿವುಡ್ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ನಂತರ ಬಾಲಿವುಡ್ ಮಂದಿಗೆ ನಡುಕ ಶುರುವಾಗಿದೆ. ಹೀಗಾಗಿಯೇ ಅವರು ದಕ್ಷಿಣದ ಸಿನಿಮಾಗಳ ವಿರುದ್ಧ ತೊಡೆತಟ್ಟುತ್ತಿದ್ದಾರೆ.

    ಮೊನ್ನೆಯಷ್ಟೇ ನವಾಜುದ್ದೀನ್ ಸಿದ್ದಿಕಿ ಕೂಡ ದಕ್ಷಿಣದ ಸಿನಿಮಾಗಳ ಬಗ್ಗೆ ಮಾತನಾಡಿದ್ದರು. ಈ ಗೆಲುವು ಯಾವಾಗಲೂ ನಿರಂತರವಾಗಿ ಇರುವುದಿಲ್ಲ. ವ್ಯಾಪಾರಿ ಸಿನಿಮಾಗಳಿಗೆ ಆಯುಷ್ಯ ಕಡಿಮೆ. ಒಂದು ಸಿನಿಮಾ ಗೆಲ್ಲಬಹುದು. ಮುಂದಿನ ಸಿನಿಮಾಗಳ ಬಗ್ಗೆಯೂ ಯೋಚಿಸಿ ಎನ್ನುವ ಮೂಲಕ ದಕ್ಷಿಣದ ಸಿನಿಮಾಗಳ ಗೆಲುವು ತಾತ್ಕಾಲಿಕ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು.

  • ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ – ಜೇಮ್ಸ್ ಸಿನಿಮಾ ರೀ ರಿಲೀಸ್

    ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ – ಜೇಮ್ಸ್ ಸಿನಿಮಾ ರೀ ರಿಲೀಸ್

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕೊನೇ ಚಿತ್ರ `ಜೇಮ್ಸ್’ ನಿರ್ಮಾಣ ಪೂರ್ಣಗೊಳ್ಳುವ ಮೊದಲೇ ಅಪ್ಪು ಹೃದಯಾಘಾತದಿಂದ ಅಗಲಿದ್ದು, ಅಭಿಮಾನಿಗಳಿಗೆ ಭಾರೀ ನೋವುಂಟು ಮಾಡಿತ್ತು.

    ಅಪ್ಪು ಅಗಲಿಕೆಗೂ ಮುನ್ನ ಜೇಮ್ಸ್ ಸಿನಿಮಾದ ಕೆಲವು ಡಬ್ಬಿಂಗ್ ಪಾರ್ಟ್ಗಳು ಬಾಕಿ ಉಳಿದಿದ್ದು, ಅವರ ಅಣ್ಣ ಶಿವರಾಜ್‌ಕುಮಾರ್ ಧ್ವನಿಯಲ್ಲಿ ಅದನ್ನು ಕಂಪ್ಲೀಟ್ ಮಾಡಿ ರಿಲೀಸ್ ಮಾಡಲಾಗಿತ್ತು. ಅಭಿಮಾನಿಗಳು ಅಪ್ಪು ಚಿತ್ರದಲ್ಲಿ ಶಿವಣ್ಣನ ಧ್ವನಿಯನ್ನು ಮೆಚ್ಚಿದ್ದರೂ ಎಲ್ಲೋ ಒಂದೆಡೆ ಪುನೀತ್ ಧ್ವನಿ ಇದ್ರೇನೆ ಚೆನ್ನಾಗಿರುತ್ತಿತ್ತು ಎಂಬ ನಿರಾಶೆ ಇತ್ತು. ಆದರೆ ಇದೀಗ ಜೇಮ್ಸ್ ತಂಡ ಅಪ್ಪು ಅಭಿಮಾನಿಗಳಿಗೆ ಒಂದು ಗುಡ್ ನ್ಯೂಸ್ ನೀಡಿದೆ. ಇದನ್ನೂ ಓದಿ: ಬಾಲಿವುಡ್‌ 3ನೇ ದಿನದ ಕಲೆಕ್ಷನ್‌ನಲ್ಲೂ ಹವಾ ಕ್ರಿಯೇಟ್‌ ಮಾಡಿದ ʻಕೆಜಿಎಫ್‌ 2ʼ

    ಹೌದು, ಜೇಮ್ಸ್ ತಂಡ ಸಿನಿಮಾವನ್ನು ಸಂಪೂರ್ಣವಾಗಿ ಅಪ್ಪು ಧ್ವನಿಯಲ್ಲೇ ಡಬ್ಬಿಂಗ್ ಮಾಡಿ ರೀ-ರಿಲೀಸ್‌ಗೆ ಪ್ಲಾನ್ ನಡೆಸಿದ್ದಾರೆ. ಅಪ್ಪು ಇಲ್ಲದೇ ಇದೆಲ್ಲ ಹೇಗೆ ಸಾಧ್ಯ ಎಂಬ ಗೊಂದಲ ಅಭಿಮಾನಿಗಳಲ್ಲಿ ಇದ್ದರೂ ಇದು ನಿಜ.

    ಹೊಸದೊಂದು ಆವಿಷ್ಕಾರದ ಮೂಲಕ ಅಪ್ಪು ಧ್ವನಿಯ ಮಾದರಿಯಿಂದ ಇಡೀ ಸಿನಿಮಾದ ಡಬ್ಬಿಂಗ್ ಅನ್ನು ಮಾಡಲಾಗುತ್ತಿದೆ. ಈ ಹಿಂದೆ ಶಿವಣ್ಣ ನೀಡಿದ್ದ ಧ್ವನಿಯನ್ನು ತೆಗೆದು ಆ ಜಾಗದಲ್ಲಿ ಹೊಸ ಟೆಕ್ನಾಲಜಿ ಮುಖಾಂತರ ಮಾಡಲಾಗುತ್ತಿರುವ ಅಪ್ಪು ಧ್ವನಿಯನ್ನು ಕೂರಿಸಲಾಗುತ್ತಿದೆ ಎಂದು ಜೇಮ್ಸ್ ಸಿನಿಮಾ ನಿರ್ದೇಶಕ ಚೇತನ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: `ಚಂದ್ರಲೇಖ ರಿಟರ್ನ್ಸ್’ ಅಂತಿದ್ದಾರೆ ನಿರ್ದೇಶಕ ಓಂಪ್ರಕಾಶ್ ರಾವ್

    ಇಂತಹ ಟೆಕ್ನಾಲಜಿ ಮೂಲಕ ಧ್ವನಿಯನ್ನು ರಿ ಕ್ರಿಯೇಟ್ ಮಾಡಿ ಡಬ್ಬಿಂಗ್ ಅನ್ನು ಕೂರಿಸಲಾಗುತ್ತಿರುವುದು ಇದೇ ಮೊದಲು. ಈ ಹೊಸ ಸೌಂಡ್ ಟ್ರ್ಯಾಕ್ ಕೂರಿಸಿದ ಜೇಮ್ಸ್ ಸಿನಿಮಾವನ್ನು ಇದೇ ತಿಂಗಳ 22ನೇ ತಾರೀಖಿನಂದು ಚಿತ್ರಮಂದಿರಗಳಲ್ಲಿ ಅಭಿಮಾನಿಗಳು ವೀಕ್ಷಿಸಬಹುದು ಎಂದು ಚೇತನ್ ಹೇಳಿದ್ದಾರೆ.

  • ಕೆಜಿಎಫ್ 2 : ಐದೂ ಭಾಷೆಯಲ್ಲೂ ಡಬ್ ಮಾಡಿದ ಏಕೈಕ ಕಲಾವಿದ ಪ್ರಕಾಶ್ ರೈ

    ಕೆಜಿಎಫ್ 2 : ಐದೂ ಭಾಷೆಯಲ್ಲೂ ಡಬ್ ಮಾಡಿದ ಏಕೈಕ ಕಲಾವಿದ ಪ್ರಕಾಶ್ ರೈ

    ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ 2 ಸಿನಿಮಾದಲ್ಲಿ ಪ್ರಕಾಶ್ ರೈ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ಸಾಗುವುದೇ ಈ ಪಾತ್ರದ ಮೂಲಕ. ಈ ಪಾತ್ರದ ಬಗ್ಗೆ ಈ ಹಿಂದೆ ನಾನಾ ರೀತಿಯಲ್ಲಿ ಚರ್ಚೆಗಳು ನಡೆದವು. ಅನಂತ್ ನಾಗ್ ಅವರು ನಿರ್ವಹಿಸಿದ್ದ ಪಾತ್ರವನ್ನು ಪ್ರಕಾಶ್ ರೈ ಮಾಡಿದ್ದಾರೆ ಎಂದು ಸುದ್ದಿಯಾಗಿತ್ತು. ಅನಂತ್ ನಾಗ್ ಬದಲಾಗಿ ಪ್ರಕಾಶ್ ರೈ ಅವರಿಗೆ ಈ ಪಾತ್ರವನ್ನು ಕೊಡಲಾಗಿದೆ ಎಂದೂ ಹೇಳಲಾಗಿತ್ತು. ಆದರೆ, ಈವರೆಗೂ ಸಿನಿಮಾ ತಂಡದಿಂದ ಇದಕ್ಕೆ ಉತ್ತರ ಸಿಕ್ಕಿಲ್ಲ. ಇದನ್ನು ಓದಿ: ‘ಅಣ್ಣಾವ್ರ ನಾಡು’: ಡಾ.ರಾಜ್ ಕುಮಾರ್ ನೆನೆದ ರಾಕಿಂಗ್ ಸ್ಟಾರ್ ಯಶ್

    ಈಗಾಗಲೇ ಬಿಡುಗಡೆಗೊಂಡಿರುವ ‘ಕೆಜಿಎಫ್ 2’ ಸಿನಿಮಾದ ಟೀಸರ್ ನೋಡಿದಾಗ, ಪ್ರಕಾಶ್ ರೈ ಪಾತ್ರದ ಬಗ್ಗೆ ಕೆಲವು ಅನುಮಾನಗಳು ಮತ್ತು ಕುತೂಹಲ ಮೂಡುವುದು ಸಹಜ. ಆದರೆ, ಈ ಕುತೂಹಲಕ್ಕೆ ಏಪ್ರಿಲ್ 14 ರಂದೇ ತೆರೆ ಬೀಳುತ್ತದೆ. ಆವಾಗ ಪ್ರಕಾಶ್ ರೈ ಮಾಡಿದ್ದು ಯಾವ ಪಾತ್ರ ಎನ್ನುವುದು ಗೊತ್ತಾಗಲಿದೆ. ಈ ಕುರಿತು ಸಂದರ್ಶನವೊಂದರಲ್ಲಿ ಯಶ್ ಮಾತನಾಡುತ್ತಾ, ‘ಅನಂತ್ ನಾಗ್ ಸರ್ ಲೆಜೆಂಡರಿ ನಟರು. ಅವರು ಕೆಜಿಎಫ್ ಚಿತ್ರಕ್ಕೆ ಒಂದು ಘನತೆ ತಂದುಕೊಟ್ಟಿದ್ದಾರೆ. ಹಾಗಾಗಿ ಅವರ ಕುರಿತು ನಾನು ಏನೂ ಹೇಳಲಾರೆ. ಸಿನಿಮಾ ರಿಲೀಸ್ ಆದ ಮೇಲೆ ಪ್ರಕಾಶ್ ರೈ ಅವರ ಪಾತ್ರದ ಹಿನ್ನೆಲೆ ಗೊತ್ತಾಗುತ್ತದೆ’ ಎಂದು ಹೇಳಿದ್ದಾರೆ.  ಈ ಮೂಲಕ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದ್ದಾರೆ. ಇದನ್ನೂ ಓದಿ : ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ಕಾಣಿಸಿಕೊಂಡ ಮೇಘಾ ಶೆಟ್ಟಿ

    ಈಗಾಗಲೇ ಸಿನಿಮಾ ತಂಡವೇ ಹೇಳಿರುವಂತೆ ‘ಕೆಜಿಎಫ್ 2’ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ರಿಲೀಸ್ ಆಗುತ್ತಿದೆ. ಅಷ್ಟೂ ಭಾಷೆಯಲ್ಲೂ ಮೂಡಿ ಬಂದ ಚಿತ್ರಕ್ಕೆ ಕೆಲವರು ಒಂದೇ ಭಾಷೆಗೆ ತಮ್ಮ ಪಾತ್ರಕ್ಕೆ ಡಬ್ ಮಾಡಿದರೆ, ಇನ್ನೂ ಕೆಲವರು ಎರಡ್ಮೂರು ಭಾಷೆಯಲ್ಲಿ ಡಬ್ ಮಾಡಿದ್ದಾರೆ. ರಾವ್ ರಮೇಶ್ ನಾಲ್ಕು ಭಾಷೆಯಲ್ಲಿ ಡಬ್ ಮಾಡಿದರೆ, ಅತೀ ಹೆಚ್ಚು ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದು ಪ್ರಕಾಶ್ ರೈ. ಅಷ್ಟೂ ಭಾಷೆಗೂ ಪ್ರಕಾಶ್ ರೈ ಅವರದ್ದೇ ಧ್ವನಿ ಇರಲಿದೆ ಎನ್ನುವುದು ವಿಶೇಷ. ಇದನ್ನೂ ಓದಿ : ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ

    ವಿಶ್ವದಾದ್ಯಂತ ಕೆಜಿಎಫ್ 2 ಸಿನಿಮಾ ಸಖತ್ ಕ್ರೇಜ್ ಕ್ರಿಯೇಟ್ ಮಾಡಿದೆ. ಈಗಾಗಲೇ ವಾರಕ್ಕೂ ಮೊದಲೇ ಹಲವು ಕಡೆ ಟಿಕೆಟ್ ಸೋಲ್ಡ್‌ಔಟ್‌ ಆಗಿವೆ. ತಮಿಳು ಮತ್ತು ತೆಲುಗಿನಲ್ಲಿ ಬೆಳಗ್ಗೆ 4 ಗಂಟೆಯಿಂದಲೇ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕನ್ನಡದಲ್ಲೂ ಇಂದಿನಿಂದ ಮುಂಗಡ ಟಿಕೆಟ್‌ಗೆ ವ್ಯವಸ್ಥೆ ಮಾಡಿದ್ದು, ಇಲ್ಲಿಯೂ ದಾಖಲೆ ರೀತಿಯಲ್ಲಿ ಟಿಕೆಟ್ ಮಾರಾಟವಾಗುತ್ತಿವೆ.

  • ಕನ್ನಡದಲ್ಲೂ ಬರಲಿದೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

    ಕನ್ನಡದಲ್ಲೂ ಬರಲಿದೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

    ವಿವಾದಿತ ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕನ್ನಡಕ್ಕೆ ಡಬ್ ಮಾಡುವ ಪ್ಲ್ಯಾನ್ ನಡೆಯುತ್ತಿದೆ. ಈ ಕುರಿತು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಕನ್ನಡ ಅವತರಣಿಕೆಯನ್ನು ರೆಡಿ ಮಾಡಿಸಿ, ಜನರಿಗೆ ತೋರಿಸುವ ಪ್ಲ್ಯಾನ್ ಕುರಿತು ಸಿ.ಎಂ ಬಸವರಾಜ ಬೊಮ್ಮಾಯಿ ಆಪ್ತ ಸಚಿವರ ಜತೆ ಮಾತನಾಡಿದ್ದಾರೆ ಎನ್ನಲಾಗುತ್ತಿದೆ.

    ಈಗಾಗಲೇ ಸಚಿವ ಸಂಪುಟದ ಸಹೋದ್ಯೋಗಿಗಳ ಜತೆ ಸಿನಿಮಾ ಮಾಡಿರುವ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ಸದಸ್ಯರಿಗೂ ಸಿನಿಮಾ ನೋಡುವಂತೆ ಮನವಿ ಮಾಡಿದ್ದರು. ಅಲ್ಲದೇ, ವಿಧಾನ ಸಭೆ ಮತ್ತು ವಿಧಾನ ಪರಿಷತ್ ನಲ್ಲೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡುವಂತೆ ಮನವಿ ಕೂಡ ಮಾಡಿಕೊಳ್ಳಲಾಗಿತ್ತು. ಇದೀಗ ಕರ್ನಾಟಕದ ಜನತೆಗೆ ಆ ಸಿನಿಮಾವನ್ನು ತೋರಿಸುವುದಕ್ಕಾಗಿ ಡಬ್ ಮಾಡುವ ಆಲೋಚನೆ ಮಾಡಿದೆಯಂತೆ ಕರ್ನಾಟಕದ ಭಾರತೀಯ ಜನತಾ ಪಕ್ಷ. ಇದನ್ನೂ ಓದಿ : ಪಠಾಣ್ ಚಿತ್ರಕ್ಕಾಗಿ ಬಿಕಿನಿ ತೊಟ್ಟ ದೀಪಿಕಾ ಪಡುಕೋಣೆ: ಫೋಟೋ ಲೀಕ್

    ಕರ್ನಾಟಕ ಸರಕಾರ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಮನರಂಜನಾ ತೆರಿಗೆಯನ್ನು ತಗೆದುಕೊಳ್ಳುತ್ತಿಲ್ಲ. ಅಲ್ಲದೇ, ಸಿನಿಮಾ ನೋಡುವಂತೆ ಪ್ರೇರೇಪಿಸುವ ಮಾತುಗಳನ್ನೂ ಆಡುತ್ತಿದೆ. ಕೆಲ ಸಚಿವರು ಮತ್ತು ಜನಪ್ರತಿನಿಧಿಗಳು ಆಯಾ ಕ್ಷೇತ್ರದಲ್ಲಿ ಈ ಸಿನಿಮಾವನ್ನು ಉಚಿತವಾಗಿ ತೋರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲರೂ ಸಿನಿಮಾ ನೋಡಬೇಕು ಎನ್ನುವ ಉದ್ದೇಶ ಬಿಜೆಪಿಯದ್ದು ಎನ್ನಲಾಗುತ್ತಿದೆ.

  • ಶಿವರಾಜ್ ಕುಮಾರ್ ಭೇಟಿಯಾದ ಜಗ್ಗೇಶ್

    ಶಿವರಾಜ್ ಕುಮಾರ್ ಭೇಟಿಯಾದ ಜಗ್ಗೇಶ್

    ವರಸ ನಾಯಕ ಜಗ್ಗೇಶ್ ಅವರು ತಮ್ಮ ಹೊಸ ಸಿನಿಮಾ ‘ರಾಘವೇಂದ್ರ ಸ್ಟೋರ್ಸ್’ ಚಿತ್ರೀಕರಣ ಮುಗಿಸಿಕೊಂಡು ಸದ್ಯ ಅದರ ಡಬ್ಬಿಂಗ್ ಕಾರ್ಯದಲ್ಲಿ ತೊಡಗಿದ್ದಾರೆ. ಡಬ್ಬಿಂಗ್ ಗಾಗಿ ಸ್ಟುಡಿಯೋಗೆ ಹೋದ ಸಂದರ್ಭದಲ್ಲಿ ಅವರು ಆಕಸ್ಮಿಕ ಎನ್ನುವಂತೆ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿಯನ್ನು ಅವರು ‘ಇದೊಂದು ಆಕಸ್ಮಿಕ ಭೇಟಿಯಾದರೂ, ಶಿವಣ್ಣನ ನೋಡಿದರೆ ನನಗಾಗುವ ಆನಂದವೇ ಬೇರೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಮಾಜಿ ಸಿಎಂ ಸಿದ್ಧರಾಮಯ್ಯಗೆ ಹೆದರಿಸಿದ ಬಿಗ್ ಬಾಸ್ ಪ್ರಥಮ್

    ಡಾ.ರಾಜ್ ಕುಟುಂಬಕ್ಕೂ ಮತ್ತು ಜಗ್ಗೇಶ್ ಅವರಿಗೂ ತೀರಾ ಹತ್ತಿರದ ನಂಟಿದೆ. ಜಗ್ಗೇಶ್ ಅವರ ಕಷ್ಟದ ಎಷ್ಟೋ ಸಂದರ್ಭದಲ್ಲಿ ಡಾ.ರಾಜ್ ಕುಮಾರ್ ಅವರೇ ಸಹಾಯಕ್ಕೆ ನಿಂತಿದ್ದಾರೆ. ಅಲ್ಲದೇ, ಪುನೀತ್ ರಾಜ್ ಕುಮಾರ್ ಜತೆಗೆ ಜಗ್ಗೇಶ್ ಅವರಿಗೆ ತೀರಾ ಆತ್ಮಿಯತೆ ಇತ್ತು. ಪುನೀತ್ ನಿಧನಕ್ಕೂ ಒಂದು ವಾರ ಮುಂಚೆ ಜಗ್ಗೇಶ್ ಮತ್ತು ಪುನೀತ್ ರಾಜ್ ಕುಮಾರ್ ಮಲ್ಲೇಶ್ವರಂನಲ್ಲಿ ಭೇಟಿ ಮಾಡಿ, ಒಂದು ತಾಸಿಗೂ ಹೆಚ್ಚು ಕಾಲ ಮಾತನಾಡಿದ್ದರು. ಪುನೀತ್ ರಾಜ್ ಕುಮಾರ್ ಏನಾದರೂ ಮಲ್ಲೇಶ್ವರಂ ಕಡೆ ಬಂದಾಗ, ಜಗ್ಗೇಶ್ ಅವರಿಗೆ ಫೋನ್ ಮಾಡಿ, ತಾವಿದ್ದಲ್ಲಿಗೆ ಕರೆಯಿಸಿಕೊಳ್ಳುತ್ತಿದ್ದರು. ಈ ಬಾಂಧವ್ಯದ ಕಾರಣಕ್ಕಾಗಿಯೇ ಜಗ್ಗೇಶ್ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾವನ್ನು ಒಪ್ಪಿಕೊಂಡಿದ್ದು. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ

    ಪುನೀತ್ ರಾಜ್ ಕುಮಾರ್ ಅವರ ಎರಡು ಚಿತ್ರಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ ‘ರಾಘವೇಂದ್ರ ಸ್ಟೋರ್’ ಚಿತ್ರದ ನಿರ್ದೇಶಕರು. ಪುನೀತ್ ಅವರ ಸಿನಿಮಾದ ಮೂಲಕವೇ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ ಹೊಂಬಾಳೆ ಫಿಲ್ಮ್ಸ್ ಚಿತ್ರವನ್ನು ನಿರ್ಮಾಣ ಮಾಡಿದೆ.

  • ಕೆಜಿಎಫ್2ಗೆ ಧ್ವನಿ ನೀಡಿದ ಮಸ್ತ್ ಮಸ್ತ್ ಹುಡುಗಿ

    ಕೆಜಿಎಫ್2ಗೆ ಧ್ವನಿ ನೀಡಿದ ಮಸ್ತ್ ಮಸ್ತ್ ಹುಡುಗಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬಹುನೀರಿಕ್ಷೆಯನ್ನು ಹುಟ್ಟು ಹಾಕಿದೆ. ಕೆಜಿಎಫ್ ಸಿನಿಮಾ ತಂಡ ಪೋಸ್ಟ್ ಪ್ರೋಡೆಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಮಸ್ತ್ ಮಸ್ತ್ ಹುಡುಗಿ ರವೀನಾ ಟಂಡನ್ ಅವರು ತಮ್ಮ ಪಾತ್ರಕ್ಕೆ ಧ್ವನಿ ಕೊಟ್ಟಿದ್ದಾರೆ.

    ಕೆಜಿಎಫ್ ನಿರ್ದೆಶಕ ಪ್ರಶಾಂತ್ ನೀಲ್ ಅವರು ಸಿನಿಮಾ ಕುರಿತಾಗಿ ಕೆಲವು ಅಪ್ಡೇಟ್‍ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ನಟಿ ರವೀನಾ ಟಂಡನ್ ಅವರು ಡಬ್ಬಿಂಗ್‍ನಲ್ಲಿ ಪಾಲ್ಗೊಂಡಿರುವುದನ್ನು ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾರೆ.

    ಕೆಜಿಎಫ್ 2 ಸಿನಿಮಾದಲ್ಲಿ ರವೀನಾ ಟಂಡನ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಪಾತ್ರಕ್ಕೆ ಸಾಮಾನ್ಯವಾಗಿ ಶೂಟಿಂಗ್ ವೇಳೆ ತುಟಿ ಚಲನೆಯನ್ನು ಎಲ್ಲರೂ ಮಾಡುತ್ತಾರೆ. ಆದರೆ ಪಾತ್ರಗಳಿಗೆ ಮತ್ತೊಮ್ಮೆ ಸ್ಟೂಡಿಯೋದಲ್ಲಿ ಧ್ವನಿ ಕೊಡುತ್ತಾರೆ. ಅದನ್ನೇ ಡಬ್ಬಿಂಗ್ ಎನ್ನುತ್ತಾರೆ. ಈಗ ಸ್ವತಃ ರವೀನಾ ಟಂಡನ್ ಅವರೇ ತಮ್ಮ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ಕೇವಲ ಹಿಂದಿಯಲ್ಲಿ ಮಾತ್ರ ಡಬ್ಬಿಂಗ್ ಮಾಡಿದ್ದಾರಾ? ಅಥವಾ ಕನ್ನಡಕ್ಕೂ ಅವರೇ ಧ್ವನಿ ಕೊಟ್ಟಿದ್ದಾರಾ? ಎನ್ನುವ ಪ್ರಶ್ನೆಗೆ ಪ್ರಶಾಂತ್ ನೀಲ್ ಅವರು ಉತ್ತರ ಕೊಡಬೇಕಾಗಿದೆ. ಇದನ್ನೂ ಓದಿ:  ಕೆಜಿಎಫ್ ಟೀಮ್​ ಜೊತೆ ಕ್ರಿಕೆಟ್ ಆಡಿದ ಯಶ್: ವೀಡಿಯೋ ವೈರಲ್

    ಏಪ್ರಿಲ್ 14 ರಂದು ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲೆಯಾಳಂ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದ್ದು, ಸಿನಿಮಾ ತಂಡ ಭರ್ಜರಿಸಿದ್ಧತೆ ಮಾಡಿಕೊಳ್ಳುತ್ತಿದೆ. ಕೆಲವು ದಿನಗಳ ಹಿಂದೆ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಕುಂದಾಪುರದ ಸ್ಟುಡಿಯೋಗೆ ಯಶ್ ಹೋಗಿದ್ದರು. ಅಲ್ಲಿ ಸುತ್ತಮುತ್ತಲಿನ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿಕೊಟ್ಟಿದ್ದರು. ಸಿನಿಮಾ ಬಿಡುಗಡೆಗೆ ಚಿತ್ರ ತಂಡ ಭರ್ಜರಿ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದರೆ, ಇತ್ತ ಅಭಿಮಾನಿಗಳು ಪರದೆ ಮೇಲೆ ನೋಡಿ ವಿಶಿಲ್ ಹಾಕಲು ಕಾಯುತ್ತಿದ್ದಾರೆ. ಇದನ್ನೂ ಓದಿ:  ಬಿಕಿನಿ ಫೋಟೋಗೆ ಕಾಮೆಂಟ್ ಮಾಡಿದ್ದ ಅರ್ಜುನ್‍ಗೆ ಚೋರ್ ಎಂದ ಮಲೈಕಾ

  • ಕೆಜಿಎಫ್‍ನಲ್ಲಿ ಪತ್ನಿ ಪಾತ್ರವನ್ನು ಹೇಳಿ ಧನ್ಯವಾದ ಹೇಳಿದ ಅನಂತ್ ನಾಗ್!

    ಕೆಜಿಎಫ್‍ನಲ್ಲಿ ಪತ್ನಿ ಪಾತ್ರವನ್ನು ಹೇಳಿ ಧನ್ಯವಾದ ಹೇಳಿದ ಅನಂತ್ ನಾಗ್!

    ಬೆಂಗಳೂರು: ಕೆಜಿಎಫ್ ಸಿನಿಮಾದ ಯಶಸ್ಸು ನನ್ನ ಪತ್ನಿ ಗಾಯತ್ರಿ ಅವರಿಗೂ ಸಲ್ಲುತ್ತದೆ. ಅವರಿಗೆ ನನ್ನ ವಿಶೇಷ ಧನ್ಯವಾದಗಳು ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ.

    ನಗರದಲ್ಲಿ ನಡೆದ ಕೆಜಿಎಫ್ ಚಿತ್ರತಂಡದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನಂತ್ ನಾಗ್ ಅವರು, ಕೆಜಿಎಫ್ ಸಿನಿಮಾದ ಡಬ್ಬಿಂಗ್ ಪೂರ್ಣಗೊಳಿಸಿ ನಾನು ವಿದೇಶಕ್ಕೆ ಹೋಗಿದ್ದೆ. ಇತ್ತ ಚಿತ್ರತಂಡ ನನ್ನ ಪಾತ್ರಕ್ಕೆ ಹಿಂದಿ ಡಬ್ಬಿಂಗ್ ನಡೆಸುತ್ತಿದ್ದರು. ನಾನು ವಿದೇಶದಿಂದ ಮರಳಿದ ಬಂದಾಗ ಯಶ್ ಹಾಗೂ ನಿರ್ದೇಶಕರು ನನ್ನ ಬಳಿಗೆ ಬಂದು, ನಿಮ್ಮ ಪಾತ್ರಕ್ಕೆ ಯಾರೋಬ್ಬರ ಧ್ವನಿ ಸರಿಯಾಗುತ್ತಿಲ್ಲ. ನೀವೇ ಹಿಂದಿ ಡಬ್ಬಿಂಗ್ ಮಾಡಬೇಕು ಅಂತ ಕೇಳಿಕೊಂಡರು. ಆದರೆ ನಾನು ಹಿಂದಿ ಮಾತನಾಡದೇ ಎಷ್ಟೋ ದಿನಗಳೇ ಕಳೆದು ಹೋಗಿತ್ತು. ಆಗ ನನಗೆ ಬೆಂಬಲ ನೀಡಿದ್ದು ನನ್ನ ಪತ್ನಿ ಗಾಯತ್ರಿ ಎಂದು ಅನಂತ್‍ನಾಗ್ ತಿಳಿಸಿದರು. ಇದನ್ನು ಓದಿ: ಈ ಸಕ್ಸಸ್ ನಮ್ಮೆಲ್ಲರ ಎದೆಯಲ್ಲಿದೆ, ಆ ಎದೆಯಲ್ಲಿ ನೀವು ಇದ್ದೀರಿ: ಯಶ್

    ಹಿಂದಿ ಡಬ್ಬಿಂಗ್ ವೇಳೆ ರಾಧಿಕಾ ಅವರಿಗೆ ಹೆಣ್ಣು ಮಗುವಾಗಿತ್ತು. ಬಾಣಂತಿ ವಿಶ್ರಾಂತಿಯ ಪಡೆಯಬೇಕಿತ್ತು. ಇತ್ತ ನನಗೆ ಕೊಂಕಣಿ ಭಾಷೆಯ ಶೈಲಿಯಲ್ಲಿಯೇ ಹಿಂದಿ ಮಾತನಾಡಿ ಬಿಡ್ತೀನಿ ಎನ್ನುವ ಭಯವಿತ್ತು. ಈ ವೇಳೆ ಉತ್ತರ ಪ್ರದೇಶ, ಪಂಜಾಬ್, ಮುಂಬೈನಲ್ಲಿ ಬೆಳೆದಿದ್ದ ಗಾಯತ್ರಿ ನನಗೆ ಹಿಂದಿ ಡೈಲಾಗ್‍ಗಳನ್ನು ಹೇಳಲು ಮುಂದಾದಳು. ಡಬ್ಬಿಂಗ್ ದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕುಳಿತು ಹಿಂದಿ ಉಚ್ಛಾರಣೆ ತಪ್ಪಾಗದಂತೆ ಎಚ್ಚರವಹಿಸಿದಳು. ಆಕೆಯ ಸಹಾಯದಿಂದ ಹಿಂದಿ ಡಬ್ಬಿಂಗ್ ಮುಗಿಯಿತು. ಇದರಿಂದಾಗಿ ನಾನು ಗಾಯತ್ರಿ ಅವರಿಗೂ ಕೂಡ ವಿಶೇಷ ಧನ್ಯವಾದ ಹೇಳುತ್ತೇನೆ. ಈ ಚಿತ್ರದ ಯಶಸ್ಸಿಗೆ ಅವರ ಪಾತ್ರವೂ ಪ್ರಮುಖವಾಗಿದೆ ಎಂದು ಅನಂತ್ ನಾಗ್ ಹೇಳಿದರು.

    ಯಶ್ ಬಗ್ಗೆ ಹೊಗಳಿಕೆ:
    ರಾಕಿಂಗ್ ಸ್ಟಾರ್ ಯಶ್ 10 ವರ್ಷಗಳ ಹಿಂದೆ ‘ಪ್ರೀತಿ ಇಲ್ಲದೆ ಮೇಲೆ’ ಸಿನಿಮಾದಲ್ಲಿ ನನ್ನ ಮಗನ ಪಾತ್ರದಲ್ಲಿ ನಟಿಸಿದ್ದ. ಆಗಿನ್ನು ಯಶ್ ಹಾಲುಗೆನ್ನೆಯ ಹುಡುಗ. ಅಲ್ಲಿಂದ ಆತನ ಜೊತೆಗೆ ಉತ್ತಮ ಒಡನಾಟ ಆರಂಭವಾಯಿತು. ಯಶ್ ಚಿತ್ರೀಕರಣದ ವೇಳೆ ಕುತೂಹಲ ಮೂಡಿಸುವ ಪ್ರಶ್ನೆಗಳನ್ನು ಕೇಳುತ್ತಿದ್ದ. ಗೂಗ್ಲಿ ಸಿನಿಮಾ ಸೇರಿದಂತೆ ಒಟ್ಟು ನಾಲ್ಕು ಸಿನಿಮಾಗಳಲ್ಲಿ ಯಶ್ ಜೊತೆಗೆ ನಟಿಸಿದ್ದೇನೆ ಎಂದು ತಿಳಿಸಿದರು.

    ಕೆಜಿಎಫ್ ಸಿನಿಮಾ ಭಾರತ ಹಾಗೂ ವಿದೇಶಿ ಭಾಷೆಗಳಲ್ಲಿ ತೆರೆ ಕಂಡು, ಯಶಸ್ವಿಯಾಗಿದೆ. ಯಶ್ ಯಶಸ್ಸಿನ ಮೆಟ್ಟಿಲುಗಳನ್ನು ಏರುತ್ತಿದ್ದಾನೆ. ನಿರ್ದೇಶಕ ವಿಜಯ್ ಹಾಗೂ ಚಿತ್ರತಂಡದ ಪ್ರತಿಯೊಬ್ಬರಿಗೂ ಸಿನಿಮಾದ ಯಶಸ್ಸು ಸಲ್ಲುತ್ತವೆ ಎಂದರು.

    ಡಬ್ಬಿಂಗ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅನಂತ್‍ನಾಗ್ ಅವರು, ಪರಭಾಷೆ ಚಿತ್ರಗಳನ್ನು ಡಬ್ಬಿಂಗ್ ಮಾಡಬಾರದು ಎನ್ನುವ ವಿಚಾರವಿತ್ತು. ಆದರೆ ಈಗ ಕೆಜಿಎಫ್ ಚಿತ್ರ ಬೇರೆ ಭಾಷೆಗಳಲ್ಲಿ ಹೋದ ಮೇಲೆ ಅದರ ದೃಷ್ಟಿಕೋನ ಬದಲಾಗಿದೆ. ಇಂತಹ ಅನೇಕ ಚಿತ್ರಗಳು ಸ್ಯಾಂಡಲ್‍ವುಡ್‍ನಿಂದ ತೆರೆ ಕಾಣಬೇಕು ಅಂತ ಜನ ಬಯಸುತ್ತಿದ್ದಾರೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇನ್ಮುಂದೆ ನಂಗೂ ಡಬ್ಬಿಂಗ್‍ಗೂ ಯಾವುದೇ ಸಂಬಂಧ ಇರಲ್ಲ: ನಟ ಜಗ್ಗೇಶ್

    ಇನ್ಮುಂದೆ ನಂಗೂ ಡಬ್ಬಿಂಗ್‍ಗೂ ಯಾವುದೇ ಸಂಬಂಧ ಇರಲ್ಲ: ನಟ ಜಗ್ಗೇಶ್

    ಬೆಂಗಳೂರು: ಇನ್ನು ಮುಂದೆ ನನಗೂ ಡಬ್ಬಿಂಗ್ ಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ನಟ ಜಗ್ಗೇಶ್ ಸ್ಪಷ್ಟವಾಗಿ ಹೇಳಿದ್ದಾರೆ.

    ಈ ಬಗ್ಗೆ ನಟ ಜಗ್ಗೇಶ್ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.”ನಾನು ಬದುಕಿನಲ್ಲಿ ಶ್ರಮದಿಂದ ಮುಂದೆ ಬಂದವನು. ಕನಸಿನಲ್ಲಿಯು ಯಾರಿಗೂ ಕೆಟ್ಟದ್ದು ಬಯಸಿಲ್ಲ, ಬಯಸೋದು ಇಲ್ಲ. ರಾಯರ ಭಕ್ತರು ತಪ್ಪು ಮಾಡುವವರಲ್ಲ. ನನಗೆ ನನ್ನ ಕನ್ನಡ ಭಾಷೆ, ಕನ್ನಡ ಜನರೆ ದೇವರು ಎಂದು ಭಾವಿಸಿ ಶ್ರದ್ಧೆಯಿಂದ ಯಾವ ತಪ್ಪು ಮಾಡದೇ ಬದುಕಿರುವೆ. ನನ್ನ ಮೇಲಿನ ಅಪಾರ್ಥ ಸರಿಪಡಿಸಲು ಈ ಬರಹ ಬರೆದಿದ್ದಾನೆ. ಆದ್ದರಿಂದ ಇದನ್ನು ಓದಿ ಬಿನ್ನಾಭಿಪ್ರಾಯ ಇದ್ದರೆ ಮರೆತು ಬಿಡಿ” ಎಂದು ವಿನಂತಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಡಬ್ಬಿಂಗ್ ಚಿತ್ರ ಬಿಡುಗಡೆಯಾದ್ರೆ ಆ ಚಿತ್ರಮಂದಿರಕ್ಕೆ ಬೆಂಕಿ: ಜಗ್ಗೇಶ್

    “ಮಾನ್ಯರೆ 36 ವರ್ಷ ಕನ್ನಡ ಚಿತ್ರರಂಗದಲ್ಲಿ ದುಡಿದು ಚಿತ್ರರಂಗದ ಸಮಸ್ಯೆಗೆ ಸ್ಪಂದಿಸುವುದು ನನ್ನ ಕರ್ತವ್ಯ. ಉದ್ಯಮ ಕರೆದ ಡಬ್ಬಿಂಗ್ ವಿರುದ್ಧದ ಸಭೆಗೆ ನಾನು ಹೋಗಿದ್ದು ನಿಜ. ನಮ್ಮ ಅಕ್ರೋಶವೂ ನಿಜ. ಆದರೆ ಅದಷ್ಟು ನಮ್ಮ ಕಲಾವಿದರು ತಂತ್ರಜ್ಞರಿಗಾಗಿ ಮಾತ್ರವೇ ವಿನಾಃ ಯಾವ ವೈಯಕ್ತಿಕ ಹಿತಾಸಕ್ತಿಗಾಗಿ ಅಲ್ಲ. ಸಂವಿಧಾನವೇ ಸರಿ ಅಂದ ಮೇಲೆ ನಮ್ಮದೇನು ಇಲ್ಲ” ಎಂದು ಹೇಳಿದ್ದಾರೆ.

    “ಕನ್ನಡಿಗರಿಗೆ ಏನು ಇಷ್ಟವೂ ಅದನ್ನು ನೋಡಲು, ಪಡೆಯಲು ಕನ್ನಡಿಗರು ಸರ್ವಸ್ವತಂತ್ರರು. ಇನ್ನು ಮುಂದೆ ನನಗೂ ಡಬ್ಬಿಂಗ್ ಗೂ ಯಾವುದೇ ಸಂಬಂಧವೂ ಇರುವುದಿಲ್ಲ. ನಾನಾಯಿತು ನನ್ನ ಕಲಾ ಕರ್ತವ್ಯವಾಯಿತು. ನನ್ನ ಹಿಂದಿನ ನಡಾವಳಿಗೆ ನಿಮಗೆ ನೋವಾಗಿದ್ದರೆ ಕ್ಷಮೆಯಿರಲಿ. ನಾನು ನಿಮ್ಮವನು ವಯಸ್ಸಿನಲ್ಲಿ ಹಿರಿಯನಾದರೆ, ಸಹೋದರನು ಎಂಬು ಭಾವಿಸಿ ನಗು ಸಂತೋಷವಾಗಿ ಬಾಳಿ. ಶುಭ ಹಾರೈಕೆ ಕನ್ನಡದ ಮನಗಳಿಗೆ” ಎಂದು ಜಗ್ಗೇಶ್ ಬರೆದು ಕೊಂಡಿದ್ದಾರೆ.

    ಜಗ್ಗೇಶ್ ಹಿಂದೆ ಹೇಳಿದ್ದು ಏನು?
    ತಮಿಳು ನಟ ಅಜಿತ್ ಅಭಿನಯದ ತಮಿಳಿನ `ಎನ್ನೈ ಎರಿಂದಲ್’ ಚಿತ್ರವನ್ನು 2017ರ ಮಾರ್ಚ್ ತಿಂಗಳಿನಲ್ಲಿ ಕನ್ನಡಕ್ಕೆ `ಸತ್ಯದೇವ್ ಐಪಿಎಸ್’ ಮೂಲಕ ಕರ್ನಾಟಕದಲ್ಲಿ ಚಿತ್ರ ಬಿಡುಗಡೆಗೆ ತಯಾರಿ ನಡೆದಿತ್ತು. ಇದರ ವಿರುದ್ಧ ಕರ್ನಾಟಕ ಚಲನಚಿತ್ರ ಮಂಡಳಿ, ನಟ ಜಗ್ಗೇಶ್, ನಿರ್ಮಾಪಕ ಸಾರಾ ಗೋವಿಂದ್ ಹಾಗೂ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆದಿತ್ತು. ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಜಗ್ಗೇಶ್, ಯಾವುದೇ ಕಾರಣಕ್ಕೂ ಡಬ್ಬಿಂಗ್ ಚಿತ್ರ ಬಿಡುಗಡೆಯಾಗಬಾರದು. ನಾನು ಜೈಲಿಗೆ ಹೋದರೂ ಚಿಂತೆಯಿಲ್ಲ. ಒಂದು ವೇಳೆ ಬಿಡುಗಡೆಯಾದರೆ ಆ ಚಿತ್ರ ಮಂದಿರಕ್ಕೆ ಬೆಂಕಿ ಹಚ್ಚುತ್ತೇವೆ ಆಕ್ರೋಶ ವ್ಯಕ್ತಪಡಿಸಿದ್ದರು.

    ಚಿತ್ರ ಬಿಡುಗಡೆಗೆ ಅಡ್ಡಿಪಡಿಸಿದ್ದರ ಕುರಿತು ಚಿತ್ರದ ವಿತರಕರು ಭಾರತೀಯ ಸ್ಪರ್ಧಾತ್ಮಕ ಆಯೋಗ(ಸಿಸಿಐ)ಗೆ ದೂರು ನೀಡಿದ್ದರು. ದೂರಿನ ವಿಚಾರಣೆ ನಡೆಸಿದ ಸಿಸಿಐ ಕರ್ನಾಟಕ ಚಲನಚಿತ್ರ ಮಂಡಳಿಗೆ 9,72,943 ರೂ. ನಟ ಜಗ್ಗೇಶ್ ಗೆ 2,71,286 ರೂ. ಹಾಗೂ ನಿರ್ಮಾಪಕ ಸಾರಾ ಗೋವಿಂದು ಅವರಿಗೆ 15,121 ರೂ. ದಂಡವನ್ನು ವಿಧಿಸಿತ್ತು.

    ದಂಡ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಜಗ್ಗೇಶ್, ನಾನು ಉದ್ಯಮಕ್ಕೋಸ್ಕರ ಹೋರಾಟ ಮಾಡಿದ್ದೇನೆಯೇ ಹೊರತು, ಜಗ್ಗೇಶ್‍ಗಾಗಿ ಅಲ್ಲ. ಕನ್ನಡ ಫಿಲ್ಮ್ ಚೇಂಬರ್ ಕರೆದಿದ್ದಕ್ಕೆ ನಾನು ಹೋಗಿದ್ದೆ. ಯಾವುದೇ ಸ್ವಾರ್ಥವಿಟ್ಟುಕೊಂಡು ಹೋರಾಟಕ್ಕೆ ಹೋಗಿರಲಿಲ್ಲ. ಡಬ್ಬಿಂಗ್ ಮಾಡುವವರಿಗೆ ನಷ್ಟ ಆಗಿರಬೇಕು, ಹೀಗಾಗಿ ದಂಡ ಹಾಕಿಸಿದ್ದಾರೆ ಎಂದು ವ್ಯಂಗ್ಯವಾಗಿ ಕಿಡಿಕಾರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಡಬ್ಬಿಂಗ್ ಮಾಡಿದ್ರು ಮೊಗ್ಗಿನ ಚೆಲುವೆ – ಫೋಟೋ ಹಾಕಿ ಅಂದಿಗೂ ಇಂದಿಗೂ ವ್ಯತ್ಯಾಸವೇನೆಂದು ಅಭಿಮಾನಿಗಳಿಗೆ ಪ್ರಶ್ನೆ

    ಡಬ್ಬಿಂಗ್ ಮಾಡಿದ್ರು ಮೊಗ್ಗಿನ ಚೆಲುವೆ – ಫೋಟೋ ಹಾಕಿ ಅಂದಿಗೂ ಇಂದಿಗೂ ವ್ಯತ್ಯಾಸವೇನೆಂದು ಅಭಿಮಾನಿಗಳಿಗೆ ಪ್ರಶ್ನೆ

    ಬೆಂಗಳೂರು: ನಟಿ ರಾಧಿಕಾ ಅವರು ಗರ್ಭಿಣಿಯಾಗಿದ್ದು, ತಮ್ಮ ಸಿನಿಮಾದ ಡಬ್ಬಿಂಗ್ ಕೆಲಸವನ್ನು ಮಾಡಿದ್ದಾರೆ. ಡಬ್ಬಿಂಗ್ ಮಾಡುವುದರ ಜೊತೆ ಅಭಿಮಾನಿಗಳಿಗೆ ಒಂದು ಪ್ರಶ್ನೆಯನ್ನು ಕೂಡ ಕೇಳಿದ್ದಾರೆ.

    ರಾಧಿಕಾ ಅವರು ಮದುವೆಯಾದ ನಂತರ ಸಿನಿಮಾವನ್ನು ಮಾಡಿಲ್ಲ. ಆದರೆ ಇತ್ತೀಚೆಗೆ ರಾಧಿಕಾ ಅವರು, ರಂಗಿತರಂಗ ಸಿನಿಮಾದ ನಟ ನಿರೂಪ್ ಭಂಡಾರಿ ಜೊತೆ ಮೊದಲ ಬಾರಿಗೆ ಅಭಿನಯಿಸುವುದರ ಮೂಲಕ ತಮ್ಮ ಸಿನಿಮಾ ಪ್ರಯಾಣವನ್ನು ಮತ್ತೆ ಆರಂಭಿಸಿದ್ದಾರೆ. ರಾಧಿಕಾ ಮತ್ತು ನಿರೂಪ್ ಭಂಡಾರಿ ಒಟ್ಟಿಗೆ ‘ಆದಿ ಲಕ್ಷ್ಮಿ ಪುರಾಣ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

    ಈ ಸಿನಿಮಾದ ಶೂಟಿಂಗ್ ಈಗಾಗಲೇ ಮುಗಿದಿದ್ದು, ಡಬ್ಬಿಂಗ್ ಕೆಲಸ ಮಾತ್ರ ಉಳಿದಿತ್ತು. ಈಗ ರಾಧಿಕಾ ಅವರು ‘ಆದಿ ಲಕ್ಷ್ಮಿ ಪುರಾಣ’ ಸಿನಿಮಾದ ಡಬ್ಬಿಂಗ್ ಮಾಡಿದ್ದಾರೆ. ಡಬ್ಬಿಂಗ್ ಮಾಡುವಾಗ ಫೋಟೋ ತೆಗೆದುಕೊಂಡು ಅದನ್ನು ತಮ್ಮ ಫೇಸ್‍ಬುಕ್ ಮತ್ತು ಇನ್ ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

    ಫೋಟೋ ಜೊತೆಗೆ “ಈಗ ಡಬ್ಬಿಂಗ್ ಕೆಲಸ ನಡೆಯುತ್ತಿದೆ. ಮದುವೆಯ ನಂತರ ನನ್ನ ಮೊದಲ ಸಿನಿಮಾಗೆ ಡಬ್ಬಿಂಗ್ ಮಾಡುತ್ತಿದ್ದೇನೆ. ಈ ಸಮಯದಲ್ಲಿ ಏನು ವ್ಯತ್ಯಾಸವಿದೆ ಗೆಸ್ ಮಾಡಿ” ಎಂದು ಒಂದು ಫನ್ನಿ ಎಮೋಜಿ ಹಾಕಿ ಪೋಸ್ಟ್ ಮಾಡಿದ್ದಾರೆ. ಕೊನೆಯಲ್ಲಿ ‘ಆದಿ ಲಕ್ಷ್ಮಿಪುರಾಣ’ ಸಿನಿಮಾ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

    ರಾಧಿಕಾ ಅವರು ಈ ರೀತಿ ಪೋಸ್ಟ್ ಹಾಕಿದ್ದ ತಕ್ಷಣ ಅಭಿಮಾನಿಗಳು ವ್ಯತ್ಯಾಸವನ್ನು ಕಂಡು ಹಿಡಿದು ಕಮೆಂಟ್ ಮಾಡುವ ಮೂಲಕ ಉತ್ತರಿಸಿದ್ದಾರೆ. ಕೆಲವರು ನೀವು ಈಗ ಇಬ್ಬರು ಡಬ್ಬಿಂಗ್ ಮಾಡಿದ್ದೀರಾ ಎಂದು ಮಾಡಿದ್ದಾರೆ. ಇನ್ನು ಕೆಲವರು ಜೂನಿಯರ್ ಯಶ್ ನಿಮಗೆ ಸಾಥ್ ಕೊಟ್ಟಿದ್ದಾರೆ ಎಂದು ಮಾಡಿದ್ದಾರೆ. ಬಳಿಕ ಅಭಿಮಾನಿಗಳು ಈ ಸಮಯದಲ್ಲಿ ನೀವು ರೆಸ್ಟ್ ಮಾಡಿ ಎಂದು ಕಾಳಜಿಯನ್ನ ವ್ಯಕ್ತಪಡಿಸಿದ್ದಾರೆ.

    ರಾಧಿಕಾ ಮತ್ತು ಯಶ್ ತಮ್ಮ ಮೊದಲನೆ ಮಗುವಿನ ನಿರೀಕ್ಷೆಯಲ್ಲಿದ್ದು, ಇತ್ತೀಚೆಗೆ ಬೇಬಿಮೂನ್ ಗಾಗಿ ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿದ್ದರು. ಅಲ್ಲಿ ತಮ್ಮ ಬೇಬಿಮೂನ್ ಫೋಟೋಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

    https://www.instagram.com/p/BoGBUr0gtrO/?hl=en&taken-by=iamradhikapandit

  • ಡಬ್ಬಿಂಗ್ ಮಾಡೋರಿಗೆ ಲಾಸ್ ಆಗಿರ್ಬೇಕು, ಅದಕ್ಕೆ  ದಂಡ ಹಾಕ್ಸಿದ್ದಾರೆ: ಜಗ್ಗೇಶ್

    ಡಬ್ಬಿಂಗ್ ಮಾಡೋರಿಗೆ ಲಾಸ್ ಆಗಿರ್ಬೇಕು, ಅದಕ್ಕೆ ದಂಡ ಹಾಕ್ಸಿದ್ದಾರೆ: ಜಗ್ಗೇಶ್

    ಬೆಂಗಳೂರು: ಡಬ್ಬಿಂಗ್ ಮಾಡುವವರಿಗೆ ನಷ್ಟ ಆಗಿರಬೇಕು, ಹೀಗಾಗಿ ದಂಡ ಹಾಕಿಸಿದ್ದಾರೆ ಎನ್ನುವ ಮೂಲಕ ಡಬ್ಬಿಂಗ್ ವಿರುದ್ಧ ಹೋರಾಟಕ್ಕೆ ಬಿದ್ದ ದಂಡಕ್ಕೆ ನಟ ಜಗ್ಗೇಶ್ ವ್ಯಂಗ್ಯವಾಗಿ ಕಿಡಿಕಾರಿದ್ದಾರೆ.

    ಡಬ್ಬಿಂಗ್ ವಿಚಾರವಾಗಿ ಹೋರಾಟ ನಡೆಸಿದ್ದ ನಟ ಜಗ್ಗೇಶ್‍ಗೆ ಭಾರತೀಯ ಸ್ಪರ್ಧಾತ್ಮಕ ಆಯೋಗ(ಸಿಸಿಐ) ದಂಡ ವಿಧಿಸಿತ್ತು. ಈ ಕುರಿತು ತಮ್ಮ 8 ಎಂಎಂ ಸಿನಿಮಾದ ಆಡಿಯೋ ರಿಲೀಸಿಂಗ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಉದ್ಯಮಕ್ಕೋಸ್ಕರ ಹೋರಾಟ ಮಾಡಿದ್ದೇನೆಯೇ ಹೊರತು, ಜಗ್ಗೇಶ್‍ಗಾಗಿ ಅಲ್ಲ. ಕನ್ನಡ ಫಿಲ್ಮ್ ಚೇಂಬರ್ ಕರೆದಿದ್ದಕ್ಕೆ ನಾನು ಹೋಗಿದ್ದೆ. ಯಾವುದೇ ಸ್ವಾರ್ಥವಿಟ್ಟುಕೊಂಡು ಹೋರಾಟಕ್ಕೆ ಹೋಗಿರಲಿಲ್ಲ ಎಂದರು.

    ಡಬ್ಬಿಂಗ್ ಮಾಡುವವರಿಗೆ ತುಂಬಾ ಲಾಸ್ ಆಗಿರುವ ಹಾಗೆ ಕಾಣುತ್ತಿದೆ. ಹೀಗಾಗಿ ದಂಡ ಹಾಕಿಸಿದ್ದಾರೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಈ ಕುರಿತು ನಾನು ಹೋರಾಟ ಮಾಡುತ್ತೇನೆ. ಶೀಘ್ರವೇ ಮೇಲ್ಮನವಿ ಸಲ್ಲಿಸುತ್ತೇನೆ. ನಾನು ಕೋರ್ಟ್ ಆದೇಶ ಬರುವುದಕ್ಕೂ ಮೊದಲೇ ಡಬ್ಬಿಂಗ್ ವಿರುದ್ಧ ಮಾತನಾಡಿದ್ದೆ, ಆದೇಶ ಬಂದ ಮೇಲೆ ಮಾತನಾಡಿಲ್ಲವೆಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಡಬ್ಬಿಂಗ್ ಚಿತ್ರ ಬಿಡುಗಡೆಯಾದ್ರೆ ಆ ಚಿತ್ರಮಂದಿರಕ್ಕೆ ಬೆಂಕಿ: ಜಗ್ಗೇಶ್

    ಏನಿದು ಪ್ರಕರಣ?
    ತಮಿಳು ನಟ ಅಜಿತ್ ಅಭಿನಯದ ತಮಿಳಿನ `ಎನ್ನೈ ಎರಿಂದಲ್’ ಚಿತ್ರವನ್ನು ಕನ್ನಡಕ್ಕೆ ಸತ್ಯದೇವ್ ಐಪಿಎಸ್ ಮೂಲಕ ಕರ್ನಾಟಕದಲ್ಲಿ ಚಿತ್ರ ಬಿಡುಗಡೆಗೆ ತಯಾರಿ ನಡೆದಿತ್ತು. ಇದರ ವಿರುದ್ಧ ಕರ್ನಾಟಕ ಚಲನಚಿತ್ರ ಮಂಡಳಿ, ನಟ ಜಗ್ಗೇಶ್, ನಿರ್ಮಾಪಕ ಸಾರಾ ಗೋವಿಂದ್ ಹಾಗೂ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆದಿತ್ತು. ಚಿತ್ರ ಬಿಡುಗಡೆಗೆ ಅಡ್ಡಿಪಡಿಸಿದ್ದರ ಕುರಿತು ಚಿತ್ರದ ವಿತರಕರು ಸಿಸಿಐಗೆ ದೂರು ನೀಡಿದ್ದರು. ದೂರಿನ ವಿಚಾರಣೆ ನಡೆಸಿದ ಸಿಸಿಐ ಕರ್ನಾಟಕ ಚಲನಚಿತ್ರ ಮಂಡಳಿಗೆ 9,72,943 ರೂ.  ನಟ ಜಗ್ಗೇಶ್ ಗೆ 2,71,286 ರೂ. ಹಾಗೂ ನಿರ್ಮಾಪಕ ಸಾರಾ ಗೋವಿಂದು ಅವರಿಗೆ 15,121 ರೂ. ದಂಡವನ್ನು ವಿಧಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv