Tag: ಡಾಂಬರು

  • ಪಬ್ಲಿಕ್‌ ಟಿವಿ ಇಂಪ್ಯಾಕ್ಟ್: ಹೊಸದಾಗಿ ಡಾಂಬರು ಹಾಕಿದ ರಸ್ತೆ ಕುಸಿತ- ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

    ಪಬ್ಲಿಕ್‌ ಟಿವಿ ಇಂಪ್ಯಾಕ್ಟ್: ಹೊಸದಾಗಿ ಡಾಂಬರು ಹಾಕಿದ ರಸ್ತೆ ಕುಸಿತ- ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

    ಬೆಂಗಳೂರು: ಒಂದೇ ದಿನದಲ್ಲಿ ಬಿಬಿಎಂಪಿ ಡಾಂಬರು ರಸ್ತೆ ಹಾಳಾದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.

    ಹೌದು. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕೆನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಲಾಗಿತ್ತು. ಇದೀಗ ಈ ರಸ್ತೆ ಕುಸಿದಿದೆ.‌ ಈ ಕುರಿತು ನಿಮ್ಮ ಪಬ್ಲಿಕ್‌ ಟಿವಿ ಇಂದು ರಿಯಾಲಿಟಿ ಚೆಕ್‌ ನಡೆಸಿ ವರದಿ ಪ್ರಸಾರ ಮಾಡಿತ್ತು. ಇದೀಗ ಈ ಸಂಬಂಧ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಇದನ್ನೂಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ಹಿಟ್‌ಮ್ಯಾನ್ – ಭಾವುಕ ಪತ್ರ ಬರೆದ ರೋಹಿತ್ ಶರ್ಮಾ

    ಈ ರಸ್ತೆ ಕಳಪೆ ಕಾಮಗಾರಿಯು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯ ರಾಜ್ಯ ಸರ್ಕಾರದ ವರದಿ ಕೇಳಿದೆ. ಕಳಪೆ ಕಾಮಗಾರಿ ಸಂಬಂಧ ವರದಿ ನೀಡುವಂತೆ ಸಿಎಂ ಕಚೇರಿಯಿಂದ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದೆ. ಸದ್ಯ ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ ನೀರಿನ ಪೈಪ್ ಸೋರಿಕೆಯಿಂದ ರಸ್ತೆ ಕುಸಿದಿರುವುದು ಕಂಡು ಬಂದಿದೆ.

    Live Tv

  • 6 ಕಿ.ಮೀ ರಸ್ತೆಗೆ 6 ಕೋಟಿ- ರಾತ್ರಿ ಹಾಕಿದ್ದ ಡಾಂಬರ್ ಬೆಳಗ್ಗೆ ಕೈಯಲ್ಲಿ

    6 ಕಿ.ಮೀ ರಸ್ತೆಗೆ 6 ಕೋಟಿ- ರಾತ್ರಿ ಹಾಕಿದ್ದ ಡಾಂಬರ್ ಬೆಳಗ್ಗೆ ಕೈಯಲ್ಲಿ

    ಚಿಕ್ಕಮಗಳೂರು: 6 ಕಿ.ಮೀ. ರಸ್ತೆಗೆ 6 ಕೋಟಿ ರೂ. ಒಂದು ವರ್ಷದ ಹಿಂದೆ ಬಿಡುಗಡೆಯಾಗಿತ್ತು. ಆದರೆ ಒಂದು ವರ್ಷದಿಂದ ಕಾಮಗಾರಿ ಮಾಡಿದ ಗುತ್ತಿಗೆದಾರ ಹಾಗೂ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ಮಾಡಿದ್ದು ಮೂರೇ ಮೂರು ಕಿ.ಮೀ. ರಸ್ತೆ. ಅದು ರಾತ್ರಿ ಹಾಕಿದ ಡಾಂಬರ್ ಬೆಳಗ್ಗೆ ಕೈಗೆ ಬರುವಂತೆ ಎಂದು ಆರೋಪಿಸಿರೋ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಿಕ್ಕನಕೂಡಿಗೆ ಗ್ರಾಮಸ್ಥರು ಗುತ್ತಿಗೆದಾರ ಹಾಗೂ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ನೇರ ರಸ್ತೆಗೆ ಡಾಂಬರ್ ಹಾಕಿ, ಅಪಾಯಕಾರಿ ತಿರುವುಗಳಿಗೆ ಹಿಡಿಗಾತ್ರದ ಕಲ್ಲನ್ನ ಹಾಸಿ ಹಾಗೇ ಬಿಟ್ಟಿದ್ದಾರೆ. ಕಲ್ಲಿನ ಮೇಲೆ ಪ್ರತಿದಿನ ಏಳೋರು, ಬೀಳೋರು ಹತ್ತಾರು ಜನ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ರಸ್ತೆ ಪ್ರವಾಸೋದ್ಯಮಕ್ಕೂ ಸಹಕಾರಿಯಾಗುತ್ತಿತ್ತು. ಯಾಕಂದರೆ ಚಿಕ್ಕಮಗಳೂರು ಪ್ರವಾಸಿ ಜಿಲ್ಲೆಯಾಗಿದ್ದು, ಎರಡು ಧಾರ್ಮಿಕ ಶಕ್ತಿ ಕೇಂದ್ರಗಳು ಇವೆ. ಶೃಂಗೇರಿಯಿಂದ ಹೊರನಾಡಿಗೆ ಈ ಮಾರ್ಗದಲ್ಲಿ ಕೇವಲ 32 ಕಿ.ಮೀ. ಬೇರೆ ಮಾರ್ಗ ಅಂದ್ರೆ ಅದು 80 ಕಿ.ಮೀ. ದೂರವಾಗುತ್ತದೆ. ಹೀಗಾಗಿ ಈ ರಸ್ತೆ ಪ್ರವಾಸಿಗರು ಹಾಗೂ ಭಕ್ತರಿಗೂ ಅನುಕೂಲವಾಗಲಿದೆ. ಸಾಲದ್ದಕ್ಕೆ ಈ ಮಾರ್ಗದಲ್ಲಿ ಹತ್ತಾರು ಹಳ್ಳಿಗಳಿವೆ. ನಾಲ್ಕೈದು ಸಾವಿರ ಜನಸಂಖ್ಯೆ ಇದೆ. ಇಷ್ಟು ಮಾತ್ರವಲ್ಲದೆ ನಕ್ಸಲ್ ಪೀಡಿತ ಪ್ರದೇಶ.

    ಯಾವಾಗ ರಸ್ತೆ ಅವಸ್ಥೆ ಹೀಗಾಯ್ತೋ ಈ ಮಾರ್ಗದಲ್ಲಿ ಓಡಾಡ್ತಿದ್ದ ಬಸ್ಸುಗಳು ಕೂಡ ನಿಂತಿವೆ. ಎಲ್ಲರೂ ಆಟೋದಲ್ಲಿ ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಮತ್ತೆ ಮಳೆಗಾಲ ಶುರುವಾಗುತ್ತೆ. ಆಗ ರಸ್ತೆ ಕಾಮಗಾರಿ ಕಾರ್ಯ ನಿಂತೇ ಹೋಗುತ್ತೆ. ಈ ಕಲ್ಲಿನ ಹಾದಿಯಲ್ಲಿ ಓಡಾಡೋದು ಅಸಾಧ್ಯ ಅನ್ನೋದು ಸ್ಥಳೀಯರ ಆತಂಕವಾಗಿದೆ.

    ರಸ್ತೆ ಅವಸ್ಥೆ ಬಗ್ಗೆ ಶಾಸಕರು, ಅಧಿಕಾರಿಗಳ ಗಮನಕ್ಕೆ ತಂದ್ರು ಯಾವುದೇ ಪ್ರಯೋಜನವಾಗಿಲ್ಲ. ಸ್ಥಳೀಯರು ಹಾಗೂ 75 ಶಾಲಾ ಮಕ್ಕಳು 50 ರೂಪಾಯಿ ಕೊಟ್ಟು ಆಟೋ-ಜೀಪ್‍ಗಳಲ್ಲಿ ಓಡಾಡುವಂತ ಸ್ಥಿತಿ ನಿರ್ಮಾಣವಾಗಿದೆ. ನಮಗೆ ಕ್ವಾಲಿಟಿ-ಕ್ವಾಂಟಿಟಿ ಯಾವುದೂ ಬೇಡ. ಜಲ್ಲಿ ಮೇಲೆ ಡಾಂಬರ್ ಹಾಕಿ ಸಾಕು ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಆದರೆ ಸಂಬಂಧಪಟ್ಟವರು ಸಂಬಂಧವಿಲ್ಲದಂತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಬಂದಿದ್ದ ಅಧಿಕಾರಿಯ ಕಾರು ಈ ಜಲ್ಲಿಯ ರಸ್ತೆ ಮೇಲೆ ಹತ್ತಿಲ್ಲ. ಜನರ ಕೈಲಿ ಕಾರನ್ನ ತಳ್ಳಿಸಿಕೊಂಡಿದ್ದಾರೆ. ಆದರೂ ರಸ್ತೆ ಕಾಮಗಾರಿ ಮುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ರಾತ್ರೋರಾತ್ರಿ 1.75 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ – ಬೆಳಗ್ಗೆ ರೊಟ್ಟಿಯಂತೆ ಎದ್ದ ಡಾಂಬರು!

    ರಾತ್ರೋರಾತ್ರಿ 1.75 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ – ಬೆಳಗ್ಗೆ ರೊಟ್ಟಿಯಂತೆ ಎದ್ದ ಡಾಂಬರು!

    ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಅಭ್ಯರ್ಥಿಗಳು ತಮ್ಮ ಮತದಾರರನ್ನು ಸೆಳೆಯಲು ನಾನಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅದೇ ರೀತಿ ಈಗ ಜಿಲ್ಲೆಯಲ್ಲಿ ಮತದಾರರ ಮನ ಸೆಳೆಯಲು ರಾತ್ರೋರಾತ್ರಿ ರಸ್ತೆ ನಿರ್ಮಾಣ ಮಾಡಲಾಗಿದೆ.

    ಚಿಕ್ಕಮಗಳೂರಿನ ಎನ್‍ಆರ್ ಪುರ ತಾಲೂಕಿನ ಗಡಿಗೇಶ್ವರ ಗ್ರಾಮದಲ್ಲಿ ಒಂದೇ ದಿನಕ್ಕೆ 5 ಕಿಲೋಮೀಟರ್ ಕಳಪೆ ರಸ್ತೆ ನಿರ್ಮಾಣ ಮಾಡಲಾಗಿದೆ. ತಳದಲ್ಲಿ ಜಲ್ಲಿ ಹಾಕಿಲ್ಲ, ಮಣ್ಣಿನ ಮೇಲೆ ಡಾಂಬರ್ ರಸ್ತೆ ಮಾಡಿದ್ದಾರೆ. ಪರಿಣಾಮ ಪರೀಕ್ಷೆ ಮಾಡಿದರೆ ರೊಟ್ಟಿಯಂತೆ ಡಾಂಬರು ಎದ್ದು ಬರುತ್ತಿದೆ.

    ಗ್ರಾಮಸ್ಥರು ಬರಿಗೈಲ್ಲಿ ರಸ್ತೆಯ ಡಾಂಬರನ್ನು ಕಿತ್ತು ಬಿಸಾಡುತ್ತಿದ್ದಾರೆ. ಸುಮಾರು 1.75 ಕೋಟಿ ವೆಚ್ಚದಲ್ಲಿ ಈ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ. ಹೀಗಾಗಿ ಕಾಂಟ್ರಾಕ್ಟರ್ ರೆಡ್ಡಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಕಟ್ಟಿನಮನೆ-ಗಡಿಗೇಶ್ವರ ರಸ್ತೆಯಲ್ಲಿ ಬರಿಗೈಯಲ್ಲಿ ಡಾಂಬರ್ ಕಿತ್ತು ಪ್ರತಿಭಟನೆ ಮಾಡುತ್ತಿದ್ದಾರೆ.

  • ಗುಂಡಿಬಿದ್ದ ಕೆಸರು ರಸ್ತೆಯಲ್ಲಿ ನಾರಿಯರ ನಾಟಿ – ಟಾರ್ ಹಾಕಿದ ಐದೇ ದಿನಕ್ಕೆ ಕಿತ್ತುಬಂದ ಡಾಂಬರು!

    ಗುಂಡಿಬಿದ್ದ ಕೆಸರು ರಸ್ತೆಯಲ್ಲಿ ನಾರಿಯರ ನಾಟಿ – ಟಾರ್ ಹಾಕಿದ ಐದೇ ದಿನಕ್ಕೆ ಕಿತ್ತುಬಂದ ಡಾಂಬರು!

    ಮೈಸೂರು/ಚಿಕ್ಕಬಳ್ಳಾಪುರ: ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ನಾಗನಹಳ್ಳಿ-ಹೆಗ್ಗಡೆಪುರದ ರಸ್ತೆಯಲ್ಲಿ ಗುಂಡಿಗಳು ಬಿಟ್ರೆ ಏನೂ ಇಲ್ಲ. ಡಾಂಬರು ಹಾಕಿದ್ದ ರಸ್ತೆ ಹಾಳಾಗಿ ಹೋಗಿದೆ.

    ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಕ್ಷೇತ್ರ ಇದಾಗಿದ್ದು, ಇದೀಗ ರಿಪೇರಿಗೆ ಆಗ್ರಹಿಸಿ ಬೇಸತ್ತ ಊರಿನವರು ಈಗ ವಿನೂತನವಾಗಿ ಪ್ರತಿಭಟಿಸಿದ್ದಾರೆ.

    ರಸ್ತೆ ಹಾಳಾಗಿ ಗುಂಡಿ ಬಿದ್ದಿದೆ. ಮಳೆಯಿಂದ ರಸ್ತೆಯೇ ಕೆರೆಯಂತಾಗಿ ಕೆಸರು ತುಂಬಿದೆ. ಇದು ಓಡಾಡುವುದಕ್ಕೆ ಯೋಗ್ಯವಾಗಿಲ್ಲ ಬದಲಾಗಿ ಭತ್ತದ ನಾಟಿಗೆ ಯೋಗ್ಯವಾಗಿದೆ ಎಂದು ಗ್ರಾಮದ ರೈತ ಮಹಿಳೆಯರು ರಸ್ತೆಯಲ್ಲೇ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಸ್ತೆ ದುರಸ್ತಿಗೊಳಿಸುವಂತೆ ಸಾಕಷ್ಟು ಬಾರಿ ಗ್ರಾಮಸ್ಥರು ಮನವಿ ಮಾಡಿದ್ರೂ, ಗ್ರಾಮಸ್ಥರ ಮನವಿಗೆ ಅಧಿಕಾರಿಗಳು ಜನಪ್ರತಿನಿಧಿಗಳು ಸ್ಪಂದಿಸಿದ ಕಾರಣ ಗ್ರಾಮಸ್ಥರು ಈ ವಿನೂತನ ರೀತಿಯ ಪ್ರತಿಭಟನೆ ಮಾಡಿದ್ದಾರೆ.

    ಇತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಡಿಎ ರಸ್ತೆ-ಹರಿಹಳ್ಳ-ಗೌಡಹಳ್ಳಿ ಮಾರ್ಗದ ರಸ್ತೆಗೆ ಐದು ದಿನಗಳ ಹಿಂದೆಯಷ್ಟೇ ಹಾಕಿದ್ದ ಡಾಂಬರು ಕಿತ್ಕೊಂಡು ಬರ್ತಿದೆ. 1 ಕೋಟಿ ರೂಪಾಯಿ 17 ಲಕ್ಷ ರೂಪಾಯಿ ಖರ್ಚು ಮಾಡಿ ಒಂದೂವರೆ ಕಿಲೋ ಮೀಟರ್ ರಸ್ತೆಗೆ ಟಾರ್ ಹಾಕಲಾಗಿದೆ. ತುಮಕೂರು ಜಿಲ್ಲೆಯ ಪಾವಗಡ ಮೂಲದ ಗುತ್ತಿಗೆದಾರ ಜಯಪ್ರಕಾಶ್ ಅನ್ನೋರು ಕಾಮಗಾರಿ ನಡೆಸಿದ್ದು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

  • ಡಾಂಬರ್ ನಲ್ಲಿ ಸಿಲುಕಿ, ನರಳಾಡಿ ಕೊನೆಗೂ ಬದುಕಿತು ನಾಗರಹಾವು!

    ಡಾಂಬರ್ ನಲ್ಲಿ ಸಿಲುಕಿ, ನರಳಾಡಿ ಕೊನೆಗೂ ಬದುಕಿತು ನಾಗರಹಾವು!

    ಮೈಸೂರು: ಡಾಂಬರ್ ನಲ್ಲಿ ಸಿಲುಕಿದ ನಾಗರಹಾವು ಜೀವನ್ಮರಣದ ಹೋರಾಟದಲ್ಲಿ ನರಳಾಡಿ ಕೊನೆಗೂ ಬದುಕುಳಿದಿದೆ.

    ಮೈಸೂರಿನ ಆರ್‍ಬಿಐ ಕಾಲೋನಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿ ಹಾಕಿದ್ದ ಡಾಂಬರ್ ನಲ್ಲಿ ನಾಗರಹಾವು ಸಿಲುಕಿತ್ತು. ಇದರಿಂದ ನಾಗರಹಾವಿಗೆ ತೆವಳಿಕೊಂಡು ಮುಂದೆ ಹೋಗಲು ಸಾಧ್ಯವಾಗದೇ ಉಸಿರಾಡಲು ಸಾಧ್ಯವಾಗದೆ ಜೀವನ್ಮರಣ ಹೋರಾಟ ನಡೆಸುತಿತ್ತು.

    ಇದನ್ನು ಗಮನಿಸಿದ ಸ್ಥಳೀಯರು ಉರಗತಜ್ಞ ಕೆಂಪರಾಜು ಅವರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಕೆಂಪರಾಜು ಹಾವನ್ನು ರಕ್ಷಿಸಿ ಹಾವಿನ ಮೈಮೇಲಿದ್ದ ಡಾಂಬರ್ ಶುಚಿಗೊಳಿಸಿದರು. ನಂತರ ಬದುಕುಳಿದ ಹಾವಿಗೆ ನೀರು ಕುಡಿಸಿದರು.

    ಅಗ್ನಿಶಾಮಕ ಇಲಾಖೆಯಲ್ಲಿ ಆರಕ್ಷಕರಾಗಿ ಹಾವು ಹಿಡಿಯುವ ಹವ್ಯಾಸ ಬೆಳೆಸಿಕೊಂಡಿರುವ ಕೆಂಪರಾಜು ಅವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.