Tag: ಡಾಲರ್ಸ್ ಕಾಲೋನಿ

  • ಸಿಎಂ ಯಡಿಯೂರಪ್ಪ ಮನೆ ರೋಡ್ ಫುಲ್ ಲಕಲಕ

    ಸಿಎಂ ಯಡಿಯೂರಪ್ಪ ಮನೆ ರೋಡ್ ಫುಲ್ ಲಕಲಕ

    ಬೆಂಗಳೂರು: ಸಿಲಿಕಾನ್ ಸಿಟಿಯ ಅದೆಷ್ಟೋ ರಸ್ತೆಗಳು ಗುಂಡಿ ಬಿದ್ದು ಹಾಳಾಗಿವೆ. ಎಷ್ಟೇ ಹಳ್ಳ ಬಿದ್ದರೂ ಅಧಿಕಾರಿಗಳು ಮಾತ್ರ ದುರಸ್ಥಿ ಕಾರ್ಯಕ್ಕೆ ಮುಂದಾಗಲ್ಲ. ಆದ್ರೆ ರಾಜ್ಯದ ದೊರೆ ಸಿಎಂ ಯಡಿಯೂರಪ್ಪರ ಡಾಲರ್ಡ್ ಕಾಲೋನಿ ನಿವಾದ ರಸ್ತೆ ಮಾತ್ರ ಅದೆಂತ ಪುಣ್ಯ ಮಾಡಿತ್ತೋ ಗೊತ್ತಿಲ್ಲ. ಚಿಕ್ಕ ಗುಂಡಿ ಬಿದ್ದಿದ್ದಕ್ಕೆ ರಾತ್ರೋ ರಾತ್ರಿ ರಸ್ತೆಗೆ ಡಾಂಬರೀಕರಣ ಭಾಗ್ಯ ದೊರೆತಿದೆ.

    ಸಿಎಂ ಯಡಿಯೂರಪ್ಪ ಅಧಿಕೃತ ಸರ್ಕಾರಿ ಬಂಗಲೆಗೆ ಹೋಗಿಲ್ಲ. ಹೀಗಾಗಿ ನಿತ್ಯ ತಮ್ಮ ಖಾಸಗಿ ಮನೆ ಧವಳಗಿರಿಯಿಂದಾನೇ ಓಡಾಡುತ್ತಿದ್ದಾರೆ. ನಿತ್ಯ ನೂರಾರು ಜನ ಸಿಎಂ ಭೇಟಿಗೆ ಬರ್ತಾರೆ. ಫಾರಿನ್ ಡೆಲಿಗೇಟ್ಸ್ ಕೂಡಾ ಬರ್ತಾನೆ ಇರ್ತಾರೆ. ಹೀಗಾಗಿ ರಸ್ತೆ ಸಮಸ್ಯೆ ಇದ್ರೆ ಸರಿಯಾಗಲ್ಲ ಅಂತ ಅಧಿಕಾರಿಗಳು ಡಾಂಬರೀಕರಣ ಭಾಗ್ಯ ಕೊಟ್ಟಿದ್ದಾರೆ.

    ಕೆಲ ದಿನಗಳ ಹಿಂದೆ ಸಿಎಂ ಮನೆಯ ಡಾಲರ್ಸ್ ಕಾಲೋನಿ ರಸ್ತೆಯಲ್ಲಿ ಅಲ್ಲಲ್ಲಿ ಚಿಕ್ಕ ಚಿಕ್ಕ ಗುಂಡಿ ಇತ್ತು. ಅದ್ಯಾವ ಅಧಿಕಾರಿ ಲೋಕೋಪಯೋಗಿ ಇಲಾಖೆಗೆ ತರಾಟೆಗೆ ತೆಗೆದುಕೊಂಡ್ರೋ ಗೊತ್ತಿಲ್ಲ. ರಾತ್ರೋ ರಾತ್ರಿ ಅಧಿಕಾರಿಗಳು ಡಾಂಬರೀಕರಣ ಮಾಡಿದ್ದಾರೆ. ಸಿಎಂ ಮನೆ ರಸ್ತೆ ಅಂತ ರಾತ್ರೊ ರಾತ್ರಿ ರಸ್ತೆ ಹಾಕೋ ಅಧಿಕಾರಿಗಳು ನಗರದ ಗುಂಡಿ ಬಿದ್ದ ರಸ್ತೆಯನ್ನು ಇಷ್ಟೇ ನಿಷ್ಠೆಯಿಂದ ಮುಚ್ಚಿದ್ರೆ ಅನುಕೂಲ ಆಗುತ್ತೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

  • ರಾಜ್ಯದಲ್ಲಿ ಸರ್ಕಾರವಿದೆ ಅನ್ನೋದು ಜನರಿಗೆ ಗೊತ್ತಿಲ್ಲ: ಶೆಟ್ಟರ್

    ರಾಜ್ಯದಲ್ಲಿ ಸರ್ಕಾರವಿದೆ ಅನ್ನೋದು ಜನರಿಗೆ ಗೊತ್ತಿಲ್ಲ: ಶೆಟ್ಟರ್

    ಬೆಂಗಳೂರು: ರಾಜ್ಯದಲ್ಲಿ ಸರ್ಕಾರವಿದೆ ಎನ್ನುವುದು ಜನರಿಗೆ ಗೊತ್ತಿಲ್ಲ, ಇದು ಅಪವಿತ್ರ ಮೈತ್ರಿ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಾಗ್ದಾಳಿ ಮಾಡಿದ್ದಾರೆ.

    ನಗರದ ಡಾಲರ್ಸ್ ಕಾಲೋನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಮೈತ್ರಿ ಸರ್ಕಾರ ರಾಜ್ಯದಲ್ಲಿ ಆಡಳಿತ ಮಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಗುಡುಗಿದ್ದಾರೆ.

    ಮೈತ್ರಿ ಸರ್ಕಾರ ಪತನವಾಗುವುದು ಖಚಿತ. ಮೈತ್ರಿ ನಾಯಕರು ಏನೇ ಸ್ಟಂಟ್ ಮಾಡಿದರೂ ಮೈತ್ರಿ ಸರ್ಕಾರದಲ್ಲಿ ಅಸಮಾಧಾನ ಭಾರೀ ದೊಡ್ಡ ಪ್ರಮಾಣದಲ್ಲಿದೆ. ಈಗ ಸಚಿವ ಸಂಪುಟ ಪುನಾರಚನೆ ಮಾಡುತ್ತೇವೆ ಎಂದು ಹೇಳುತ್ತಾರೆ. ಈಗ ಮಾಡಿದರೆ ನಾಲ್ಕು ಮಂದಿ ಸಂಪುಟದಿಂದ ಹೊರಗೆ ಹೋಗುವುದು ಒಳಗೆ ಬರುವುದು ಇದೇ ಆಗುತ್ತದೆ. ಯಾರೇ ಏನೇ ಕಸರತ್ತು ಮಾಡಿದರೂ ಈಗ ತೆರೆ ಎಳೆಯಲಾಗುತ್ತದೆ. ಮೈತ್ರಿಯಲ್ಲಿರುವ ಭಿನ್ನಮತೀಯರೇ ಸರ್ಕಾರಕ್ಕೆ ಗಡುವು ಕೊಟ್ಟಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25+1 ಸ್ಥಾನ ಗೆದ್ದಿದೆ. ಈ ಫಲಿತಾಂಶವನ್ನು ನೋಡಿ ಇವರಿಗೆ ನೈತಿಕತೆ ಇದ್ದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕಿತ್ತು ಎಂದು ಹೇಳಿದರು.

    ಮೈತ್ರಿ ಸರ್ಕಾರದಿಂದ ಜಿಂದಾಲ್ ಕಂಪನಿಗೆ 3,600 ಎಕರೆ ಜಮೀನು ಮಾರಾಟ ಕ್ರಯಪತ್ರ ಹಸ್ತಾಂತರ ವಿಚಾರದ ಬಗ್ಗೆ ಕೇಳಿದಾಗ, ಈ ಸರ್ಕಾರ ಯಾವಾಗ ಹೋಗುತ್ತದೋ ಗೊತ್ತಿಲ್ಲ. ಸರ್ಕಾರದ ಪತನಕ್ಕೆ ಅಂತಿಮ ಕ್ಷಣ ಬಂದಿದೆ. ಹೀಗಾಗಿ ಕೊನೆ ಕ್ಷಣದಲ್ಲಿ ಲೂಟಿ ಹೊಡೆಯುತ್ತಿದ್ದಾರೆ. ಮೈತ್ರಿ ಸರ್ಕಾರ ಸರ್ಕಾರದ ಜಮೀನು ಲೂಟಿ ಮಾಡುತ್ತಿದೆ. ಇದೊಂದು ಹಗರಣ ಆಗುತ್ತದೆ ಎಂದು ಜಗದೀಶ್ ಶೆಟ್ಟರ್ ಆರೋಪ ಮಾಡಿದರು.