Tag: ಡಾಲಿ

  • ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ

    ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ

    ಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ‘ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯಿಂದ ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ ಎಂದು ನಟ ಧನಂಜಯ (Daali Dhananjay) ಮಾತನಾಡಿದ್ದಾರೆ. ಇದು ಎಲ್ಲರೂ ಖುಷಿಪಡುವಂತಹ ವಿಚಾರ ಎಂದು ಭಾರತ ಸೇನೆಯ ಬಗ್ಗೆ ಮೆಚ್ಚಿಗೆಯ ಮಾತುಗಳನ್ನಾಡಿದ್ದಾರೆ ಡಾಲಿ. ಇದನ್ನೂ ಓದಿ:12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ

    ಕಾರ್ಯಕ್ರಮವೊಂದರಲ್ಲಿ ಡಾಲಿ ಮಾತನಾಡಿ, ಉಗ್ರರಿಗೆ ಉತ್ತರ ಕೊಡಲೇಬೇಕು. ಪ್ರತಿ ಬಾರಿಯೂ ಉತ್ತರ ಕೊಟ್ಟಿದ್ದೇವೆ. ಇದೀಗ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಿಂದ ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ. ಇದು ಎಲ್ಲರೂ ಖುಷಿಪಡುವಂತದ್ದು ಎಂದಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್‌ಗೆ ಗುಡ್ ನ್ಯೂಸ್- ಬರಲಿದೆ ವಿಜಯ್ ಸೇತುಪತಿ ನಟನೆಯ ‘ಮಹಾರಾಜ’ ಸೀಕ್ವೆಲ್

    ಇದೇ ವೇಳೆ ಸೋನು ನಿಗಮ್ ಅವರ ಕನ್ನಡ ವಿವಾದದ ಬಗ್ಗೆಯೂ ಡಾಲಿ ಮಾತನಾಡಿ, ನಾಡು ನುಡಿ ಅಂತ ಬಂದಾಗ ಎಲ್ಲರೂ ನಿಂತುಕೊಳ್ಳಲೇಬೇಕು. ಸೋನು ನಿಗಮ್ ಕೂಡ ಕನ್ನಡದ ಬಗ್ಗೆ ಕಾಳಜಿಯಿರುವ ಕಲಾವಿದ. ಅವರು ಒಳ್ಳೆಯ ಸಿಂಗರ್, ಚಿತ್ರರಂಗಕ್ಕೆ ಅವರು ಕೊಡುಗೆ ಕೊಟ್ಟಿದ್ದಾರೆ. ನಾವು ಅವರು ಹಾಡಿರುವ ಹಾಡುಗಳನ್ನು ಕೇಳಿ ಎಂಜಾಯ್ ಮಾಡಿದ್ದೇವೆ. ಅಂದಿನ ಸಂದರ್ಭದಲ್ಲಿ ಅವರ ಪ್ರತಿಕ್ರಿಯೆ ಬೇರೆ ತರಹ ಕಾಣಿಸಿರಬಹುದು. ಅಥವಾ ತಪ್ಪಾಗಿ ರಿಯಾಕ್ಟ್ ಮಾಡಿರಬಹುದು. ಆದರೆ ಕನ್ನಡ ಅಂತ ಬಂದಾಗ ನಾವೆಂದಿಗೂ ಕನ್ನಡದ ಪರನೇ ಇರುತ್ತೇವೆ. ಕನ್ನಡನೇ ನಮ್ಮ ಅನ್ನ, ಅದೇ ನಮ್ಮ ಜೀವ ಎಂದಿದ್ದಾರೆ.

  • ‘ಟಾಕ್ಸಿಕ್’ ಸೆಟ್‌ಗೆ ತೆರಳಿ ಯಶ್‌ಗೆ ಮದುವೆ ಆಮಂತ್ರಣ ನೀಡಿದ ಡಾಲಿ

    ‘ಟಾಕ್ಸಿಕ್’ ಸೆಟ್‌ಗೆ ತೆರಳಿ ಯಶ್‌ಗೆ ಮದುವೆ ಆಮಂತ್ರಣ ನೀಡಿದ ಡಾಲಿ

    ಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸೆಟ್‌ಗೆ ತೆರಳಿ ಯಶ್‌ಗೆ (Yash) ಡಾಲಿ ಮದುವೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ರಾಕಿ ಭಾಯ್‌ಗೆ ಭೇಟಿಯಾಗಿ ಮದುವೆ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ:ಸ್ಯಾಂಡಲ್‌ವುಡ್‌ಗೆ ‘ಮಹಾನಟಿ’ ವಿನ್ನರ್ ಎಂಟ್ರಿ- ‘ಕಾಟೇರ’ ಡೈರೆಕ್ಟರ್‌ ತರುಣ್‌ ಸಿನಿಮಾದಲ್ಲಿ ಪ್ರಿಯಾಂಕಾ

    ನ್ಯಾಷನಲ್ ಸ್ಟಾರ್ ಯಶ್ ಅವರು ಈಗ ಬೆಂಗಳೂರಿನ HMT ಫ್ಯಾಕ್ಟರಿ ಆವರಣದಲ್ಲಿ ‘ಟಾಕ್ಸಿಕ್’ ಚಿತ್ರದ ಶೂಟಿಂಗ್‌ನಲ್ಲಿ ತೊಡಗಿಕೊಂಡಿದ್ದಾರೆ. ಆ ಸಿನಿಮಾದ ಚಿತ್ರೀಕರಣದ ಸೆಟ್‌ಗೆ ನಟ ಡಾಲಿ ಧನಂಜಯ ಅವರು ಭೇಟಿ ನೀಡಿದ್ದಾರೆ. ತಮ್ಮ ವಿವಾಹದ ಆಹ್ವಾನ ಪತ್ರಿಕೆಯನ್ನು ಯಶ್‌ಗೆ ನೀಡಿದ್ದಾರೆ. ಆ ಸಂದರ್ಭದ ಫೋಟೋಸ್ ಇಲ್ಲಿವೆ. ಮದುವೆ ಸಲುವಾಗಿ ಧನಂಜಯ್ (Daali Dhananjay) ಅವರು ಸಿನಿಮಾ ಕೆಲಸಗಳಿಂದ ಸದ್ಯಕ್ಕೆ ಬ್ರೇಕ್ ಪಡೆದಿದ್ದಾರೆ.

    ಮೈಸೂರಿನಲ್ಲಿ ಫೆಬ್ರವರಿ 15 ಮತ್ತು 16ರಂದು ಡಾಲಿ ಮದುವೆ ನೆರವೇರಲಿದೆ. ಡಾಲಿ ಮದುವೆ ಸಂಭ್ರಮದಲ್ಲಿ ರಾಜಕೀಯ ಗಣ್ಯರು ಸಿನಿಮಾ ಸ್ಟಾರ್ಸ್ ಭಾಗಿಯಾಗಲಿದ್ದಾರೆ.

    ಇನ್ನೂ ಡಾಲಿ ಅವರು ಡಾಕ್ಟರ್ ಧನ್ಯತಾ ಅವರನ್ನು ಮದುವೆಯಾಗುತ್ತಿದ್ದಾರೆ. ಇಬ್ಬರ ಮದುವೆಗೆ ಗುರುಹಿರಿಯರ ಸಮ್ಮತಿಯಿದೆ.

  • ಡಾಲಿ ಮದುವೆ ಸಂಭ್ರಮ: ಕಿಚ್ಚ ಸುದೀಪ್‌ಗೆ ಮದುವೆ ಆಹ್ವಾನ ಪತ್ರಿಕೆ ನೀಡಿದ ನಟ

    ಡಾಲಿ ಮದುವೆ ಸಂಭ್ರಮ: ಕಿಚ್ಚ ಸುದೀಪ್‌ಗೆ ಮದುವೆ ಆಹ್ವಾನ ಪತ್ರಿಕೆ ನೀಡಿದ ನಟ

    ಟರಾಕ್ಷಸ ಡಾಲಿ ಧನಂಜಯ (Daali Dhananjay) ಫೆ.16ರಂದು ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ. ಈ ಹಿನ್ನೆಲೆ ಇಂದು (ಜ.12) ಕಿಚ್ಚ ಸುದೀಪ್ (Sudeep) ಮತ್ತು ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರನ್ನು ಭೇಟಿಯಾಗಿ ಡಾಲಿ ಮದುವೆಯ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ:ಹಿರಿಯ ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಡಾಲಿ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಜ.11ರಂದು ಮೋಹಕತಾರೆ ರಮ್ಯಾಗೆ ಮದುವೆ ಪತ್ರಿಕೆ ನೀಡಿದ ಬೆನ್ನಲ್ಲೇ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್, ರಮೇಶ್ ಅರವಿಂದ್, ‘ಬಿಗ್ ಬಾಸ್’ ಖ್ಯಾತಿಯ ರಾಜೀವ್ ಸೇರಿದಂತೆ ಅನೇಕರಿಗೆ ಇಂದು (ಜ.12) ಮದುವೆಯ ಆಹ್ವಾನ ಪತ್ರಿಕೆ ನೀಡಿದ್ದಾರೆ.

    ಇನ್ನೂ ಈಗಾಗಲೇ ಪ್ರಿಯಾಂಕ ಉಪೇಂದ್ರ (Upendra) ದಂಪತಿ, ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ದಂಪತಿ, ಅಶ್ವಿನಿ ಪುನೀತ್ ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಕುಟುಂಬ, ‘ಯುವರತ್ನ’ ಡೈರೆಕ್ಟರ್ ಸಂತೋಷ್ ಆನಂದ್‌ರಾಮ್, ಸಪ್ತಮಿ ಗೌಡ ಸೇರಿದಂತೆ ಅನೇಕರಿಗೆ ಡಾಲಿ ಮದುವೆಯ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

    ಅಂದಹಾಗೆ, ಮೈಸೂರಿನಲ್ಲಿ ಫೆ.16ರಂದು ಡಾಕ್ಟರ್ ಧನ್ಯತಾ ಜೊತೆ ಡಾಲಿ ಹಸೆಮಣೆ ಏರುತ್ತಿದ್ದಾರೆ. ಸ್ಯಾಂಡಲ್‌ವುಡ್ ಕಲಾವಿದರಿಗೆ ಮಾತ್ರವಲ್ಲ. ರಾಜಕೀಯ ಗಣ್ಯರು ಈ ಮದುವೆಯಲ್ಲಿ ಭಾಗಿಯಾಗಲಿದ್ದಾರೆ.

  • ರಾಜ್ಯಪಾಲರಿಗೆ ಮದುವೆ ಆಮಂತ್ರಣ ನೀಡಿದ ಡಾಲಿ

    ರಾಜ್ಯಪಾಲರಿಗೆ ಮದುವೆ ಆಮಂತ್ರಣ ನೀಡಿದ ಡಾಲಿ

    ಸ್ಯಾಂಡಲ್‌ವುಡ್ ನಟ ಡಾಲಿ (Daali) ಫೆ.16ರಂದು ದಾಂಪತ್ಯ ಜೀವನಕ್ಕೆ (Wedding) ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಭೇಟಿಯಾಗಿ ಮದುವೆ ಪತ್ರಿಕೆಯನ್ನು ನೀಡಿದ್ದಾರೆ.

    ಇಂದು (ಜ.9) ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಡಾಲಿ (Daali) ಮದುವೆ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ:BBK 11: ಗೆಲುವಿಗಾಗಿ ವರಸೆ ಬದಲಿಸಿದ ಭವ್ಯಾಗೆ ಕಿವಿಹಿಂಡಿದ ತ್ರಿವಿಕ್ರಮ್‌

    ಅಂದಹಾಗೆ, ಡಾಲಿ ಧನಂಜಯ ಸಿನಿಮಾ ಕೆಲಸಕ್ಕೆ ಬ್ರೇಕ್ ನೀಡಿ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಮಾಜಿ ಪಿಎಂ ದೇವೇಗೌಡ, ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರಿಗೆ ಮದುವೆಗೆ ಆಹ್ವಾನಿಸಿದ್ದಾರೆ.

    ಇನ್ನೂ ಡಾಕ್ಟರ್ ಧನ್ಯತಾ ಜೊತೆ ಡಾಲಿ ಮೈಸೂರಿನಲ್ಲಿ ಹಸೆಮಣೆ ಏರಲಿದ್ದಾರೆ. ಫೆ.16ರಂದು ನಡೆಯಲಿರುವ ಈ ಮದುವೆಗೆ ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಭಾಗಿಯಾಲಿದ್ದಾರೆ.

    ಇನ್ನೂ ಅಣ್ಣ ಫ್ರಮ್ ಮೆಕ್ಸಿಕೋ, ನಾಡಪ್ರಭು ಕೆಂಪೇಗೌಡ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಹೊಸಬರ ಸಿನಿಮಾಗಳಿಗೆ ತಮ್ಮ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣ ಕೂಡ ಮಾಡುತ್ತಿದ್ದಾರೆ.

  • ಸುತ್ತೂರು ಮಠದಲ್ಲಿ ನಂದಿ ಧ್ವಜ ಹೊತ್ತು ಕುಣಿದ ಡಾಲಿ

    ಸುತ್ತೂರು ಮಠದಲ್ಲಿ ನಂದಿ ಧ್ವಜ ಹೊತ್ತು ಕುಣಿದ ಡಾಲಿ

    ಸ್ಯಾಂಡಲ್‌ವುಡ್ ನಟ ಡಾಲಿ (Daali) ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸುತ್ತೂರು ಮಠಕ್ಕೆ (Sri Suttur Mutt) ಭೇಟಿ ಕೊಟ್ಟಿದ್ದಾರೆ. ಈ ವೇಳೆ, ನಂದಿ ಕಂಬ ಹೊತ್ತು ಡಾಲಿ ಕುಣಿದಿದ್ದಾರೆ. ಇದನ್ನೂ ಓದಿ:ಮೈಸೂರಲ್ಲಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಕಿಚ್ಚ ಸುದೀಪ್

    ಧನ್ಯತಾ (Dhanyatha) ಜೊತೆ ಡಾಲಿ ಮದುವೆಗೆ ಸಜ್ಜಾಗಿರುವ ಹಿನ್ನೆಲೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಶಿವರಾತ್ರಿ ಶಿವಯೋಗಿಗಳ 1065ನೇ ಜಯಂತಿ ಹಿನ್ನೆಲೆ ನಂದಿ ಧ್ವಜಕ್ಕೆ ಪೂಜೆ ಜರುಗಿದೆ. ಬಳಿಕ ನಂದಿ ಧ್ವಜ ಹಿಡಿದು ಡಾಲಿ ಕುಣಿದಿದ್ದಾರೆ. ಡಾಲಿ, ಧನ್ಯತಾ ಜೊತೆ ನಟ ನಾಗಭೂಷಣ್ ಕೂಡ ಸಾಥ್ ನೀಡಿದ್ದಾರೆ.

    ಇನ್ನೂ ಫೆ.16ರಂದು ಮೈಸೂರಿನಲ್ಲಿ ಡಾಲಿ ಮದುವೆ ಜರುಗಲಿದೆ. ಈ ಮದುವೆಗೆ ರಾಜಕೀಯ ಗಣ್ಯರು, ಸಿನಿಮಾ ಸ್ಟಾರ್‌ಗಳು ಭಾಗಿಯಾಗಲಿದ್ದಾರೆ.

  • ಮಾಜಿ ಪಿಎಂ ದೇವೇಗೌಡರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ಡಾಲಿ

    ಮಾಜಿ ಪಿಎಂ ದೇವೇಗೌಡರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ಡಾಲಿ

    ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ (Daali Dhananjay) ಅವರು ಫೆ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಮಾಜಿ ಪಿಎಂ ಹೆಚ್.ಡಿ. ದೇವೇಗೌಡರನ್ನು ಮದುವೆಯ (Wedding) ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ್ದಾರೆ.

    ಭಾವಿ ಪತ್ನಿ ಧನ್ಯತಾ ಜೊತೆ ಮಾಜಿ ಪಿಎಂ ಹೆಚ್.ಡಿ. ದೇವೇಗೌಡ (H. D. Deve Gowda) ನಿವಾಸಕ್ಕೆ ಭೇಟಿ ನೀಡಿ, ಮದುವೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ:ಚಿತ್ರರಂಗದ ವರ್ತನೆಗೆ ಆಕ್ಷೇಪ- ತೆಲುಗು ನಟರ ಕಿವಿ ಹಿಂಡಿದ ಸಿಎಂ ರೇವಂತ್ ರೆಡ್ಡಿ

    ಅಂದಹಾಗೆ, ಇತ್ತೀಚೆಗೆ ಡಿಕೆ ಶಿವಕುಮಾರ್, ಡಿಕೆ ಸುರೇಶ್‌ ಮತ್ತು ಸಿಎಂ ಸಿದ್ದರಾಮಯ್ಯ ಅವರನ್ನು ಕೂಡ ಭಾವಿ ಪತ್ನಿಯ ಜೊತೆ ಭೇಟಿಯಾಗಿ ಮದುವೆಗೆ ಆಹ್ವಾನ ನೀಡಿದ್ದರು.

    ಇನ್ನೂ ಡಾಕ್ಟರ್ ಧನ್ಯತಾ ಜೊತೆ ಡಾಲಿ ಮೈಸೂರಿನಲ್ಲಿ ಮದುವೆಯಾಗುತ್ತಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ. ಈ ಮದುವೆಯಲ್ಲಿ ಸ್ಯಾಂಡಲ್‌ವುಡ್ ಕಲಾವಿದರು, ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

  • ಡಿಕೆ ಬ್ರದರ್ಸ್‌ಗೆ ಮದುವೆ ಆಮಂತ್ರಣ ನೀಡಿದ ಡಾಲಿ

    ಡಿಕೆ ಬ್ರದರ್ಸ್‌ಗೆ ಮದುವೆ ಆಮಂತ್ರಣ ನೀಡಿದ ಡಾಲಿ

    ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ (Daali Dhananjay) ಅವರು ಫೆ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಉಪಮುಖ್ಯಮಂತಿ ಡಿಕೆ ಶಿವಕುಮಾರ್ (DK Shivakumar) ಮತ್ತು ಡಿಕೆ ಸುರೇಶ್‌ಗೆ (DK Suresh) ಮದುವೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ:ವಿದೇಶದಲ್ಲೂ UI ಹವಾ: ಉಪ್ಪಿ ಸಿನಿಮಾಗೆ ಪ್ರೇಕ್ಷಕರು ಫಿದಾ

    ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ದಂಪತಿಗೆ ಮದುವೆ ಆಹ್ವಾನ ನೀಡಿದ್ದಾರೆ ಡಾಲಿ. ಕೆಲ ಕಾಲ ನಟ ಸಮಯ ಕಳೆದಿದ್ದಾರೆ. ಇದೇ ವೇಳೆ, ಡಿಕೆ ಸುರೇಶ್‌ರನ್ನು ಭೇಟಿಯಾಗಿ ಮದುವೆಗೆ ಆಮಂತ್ರಿಸಿದ್ದಾರೆ.

    ಅಂದಹಾಗೆ, ಡಾಕ್ಟರ್ ಧನ್ಯತಾ ಜೊತೆ ಡಾಲಿ ಮೈಸೂರಿನಲ್ಲಿ ಮದುವೆಯಾಗುತ್ತಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ. ಈ ಮದುವೆಯಲ್ಲಿ ಸ್ಯಾಂಡಲ್‌ವುಡ್ ಕಲಾವಿದರು, ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

  • ಕಾಮನ್‌ ಮ್ಯಾನ್‌ಗೆ ಎದ್ದೇಳು ಅಂತ ಚಿವುಟುವ ಸಿನಿಮಾವಿದು- UI ಬಗ್ಗೆ ಡಾಲಿ ಮಾತು

    ಕಾಮನ್‌ ಮ್ಯಾನ್‌ಗೆ ಎದ್ದೇಳು ಅಂತ ಚಿವುಟುವ ಸಿನಿಮಾವಿದು- UI ಬಗ್ಗೆ ಡಾಲಿ ಮಾತು

    ರಿಯಲ್‌ ಸ್ಟಾರ್‌ ಉಪೇಂದ್ರ (Upendra) ನಟನೆಯ ಪ್ರೀ ರಿಲೀಸ್‌ ಕಾರ್ಯಕ್ರಮಕ್ಕೆ ಇಂದು (ಡಿ.16) ಅದ್ಧೂರಿಯಾಗಿ ಚಾಲನೆ ನೀಡಲಾಗಿದ್ದು, ಶಿವಣ್ಣ, ಡಾಲಿ, ದುನಿಯಾ ವಿಜಯ್‌ ಸೇರಿದಂತೆ ಅನೇಕರು ಭಾಗಿಯಾಗಿ ಚಿತ್ರತಂಡಕ್ಕೆ ಸಾಥ್‌ ನೀಡಿದ್ದಾರೆ. ಈ ವೇಳೆ ಡಾಲಿ ಮಾತನಾಡಿ, ಉಪೇಂದ್ರ ಅವರ ಸಿನಿಮಾ ಕುರಿತಾದ ವಿಭಿನ್ನ ಯೋಚನೆಗಳ ಬಗ್ಗೆ ಕೊಂಡಾಡಿದ್ದಾರೆ. ಇದನ್ನೂ ಓದಿ:ಶಿವಣ್ಣ ನಟನೆಯ ಮತ್ತೊಂದು ಹೊಸ ಸಿನಿಮಾ ಘೋಷಣೆ- ಮಾಸ್‌ ಲೀಡರ್‌ಗೆ ಕೈ ಜೋಡಿಸಿದ ‌’ಗೂಗ್ಲಿ’ ಡೈರೆಕ್ಟರ್

    ಡಾಲಿ ಮಾತನಾಡಿ, ಮುಹೂರ್ತಕ್ಕೆ ಬಂದಾಗ ತುಂಬಾ ಕುತೂಹಲದಿಂದ ಯೋಚನೆ ಮಾಡಿದೆ, ಟ್ರೋಲಾಗುತ್ತೆ ಹಾಡು ನೋಡಿದ್ಮೇಲೆ ಟ್ರೆಂಡ್ ಬಗ್ಗೆ ಸಿನಿಮಾ ಮಾಡಿದ್ದಾರೆ ಅನ್ಕೊಂಡೆ, ವಾರ್ನರ್ ನೋಡ್ದಾಗ ಇದು ಎಲ್ಲೋ ಫ್ಯೂಚರ್ ಹೊರಟೋದ್ರು ಅಂತ ತಲೆ ಕೆಡಿಸಿಕೊಂಡೆ ಎಂದರು ಡಾಲಿ. ಯುಐ ಚಿತ್ರದ ಮೂಲಕ ಉಪೇಂದ್ರ ಸರ್ ನಿಮ್ಮ ಬುದ್ಧಿವಂತಿಕೆಯನ್ನು ಉಪಯೋಗಿಸಿ ಅಂತಿದ್ದಾರೆ. ಯುಐ ನೋಡಲು ಕಾಯುತ್ತಿದ್ದೇವೆ. ಕಾಮನ್ ಮ್ಯಾನ್‌ಗೆ ಎದ್ದೇಳು ಅಂತ ಚಿವುಟುವ ಸಿನಿಮಾವಿದು. ಆ ಸಿನಿಮಾಗಳಲ್ಲಿ ಫಿಲಾಸಫಿ ಅವರು ತುಂಬಾ ಚೆನ್ನಾಗಿ ಕಥೆ ಹೇಳುತ್ತಾರೆ ಎಂದು ಡಾಲಿ ಹಾಡಿ ಹೊಗಳಿದರು.

    ಎಲ್ಲರಿಗೂ ಒಳ್ಳೆಯದಾಗಲಿ, ಹೀರೋಯಿನ್ ರೀಷ್ಮಾರನ್ನು ನಮ್ಮ ಮುಂದಿನ ಸಿನಿಮಾಗೆ ಕಾಸ್ಟ್ ಮಾಡ್ಕೊಂಡಿದ್ದೀವಿ ಪ್ಯಾನ್ ಇಂಡಿಯಾ ದಾಟಿ ಹೋದ್ಮೇಲೆ ಸಿಗಲ್ಲ ಅಂತ ನಟಿಯ ಬಗ್ಗೆಯೂ ಮೆಚ್ಚುಗೆ ಸೂಚಿಸಿದರು.

    ಅಂದಹಾಗೆ, UI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.

    ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮನೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

  • Pushpa 2: ಅಲ್ಲು ಅರ್ಜುನ್ ಸಿನಿಮಾದಲ್ಲಿ ಕನ್ನಡ ಕಲಾವಿದರ ದಂಡು

    Pushpa 2: ಅಲ್ಲು ಅರ್ಜುನ್ ಸಿನಿಮಾದಲ್ಲಿ ಕನ್ನಡ ಕಲಾವಿದರ ದಂಡು

    ಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ 2’ (Pushpa 2) ಸಿನಿಮಾ ಡಿ.5ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಿದೆ. ಬಿಡುಗಡೆಯ ಬಳಿಕ ಪುಷ್ಪರಾಜ್ ಫೀವರ್ ಶುರುವಾಗಿದೆ. ಕೆಲ ಮಂದಿ ಸಿನಿಮಾವನ್ನು ಹಾಡಿ ಹೊಗಳಿ ಅಟ್ಟಕ್ಕೇರಿಸಿದರೆ, ಇನ್ನೂ ಕೆಲವರು ಸಿನಿಮಾ ಒಂದು ರೇಂಜಿಗಿದೆ ಎಂದು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇದರೆಲ್ಲದರ ನಡುವೆ ‘ಪುಷ್ಪ 2’ ಸಿನಿಮಾದಲ್ಲಿ ಕನ್ನಡ ಕಲಾವಿದರ ದಂಡು ಹೈಲೆಟ್ ಆಗಿದೆ.

    ಕನ್ನಡದ ‘ಕಿರಿಕ್ ಪಾರ್ಟಿ’ (Kirik Party) ನಟಿ ರಶ್ಮಿಕಾ ಮಂದಣ್ಣ (Rashmika Mandanna) ನ್ಯಾಷನಲ್ ಕ್ರಶ್ ಆಗಿ ಪರಭಾಷೆಗಳಲ್ಲಿ ಸದ್ದು ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಅಲ್ಲು ಅರ್ಜುನ್‌ಗೆ ನಾಯಕಿಯಾಗಿ ಶ್ರೀವಲ್ಲಿ ಪಾತ್ರಕ್ಕೆ ಕೊಡಗಿನ ಬೆಡಗಿ ಜೀವ ತುಂಬಿದ್ದಾರೆ. ರಶ್ಮಿಕಾ ನಟನೆಯ ಜೊತೆ ಫೀಲಿಂಗ್ಸ್ ಡ್ಯಾನ್ಸ್‌ಗೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

    ಕನ್ನಡಿಗ ತಾರಕ್ ಪೊನ್ನಪ್ಪ (Tarak Ponnappa) ಅವರು ಅಲ್ಲು ಅರ್ಜುನ್ ಮುಂದೆ ತೊಡೆ ತಟ್ಟಿದ್ದಾರೆ. ಅಲ್ಲು ಅರ್ಜುನ್ ಮತ್ತು ತಾರಕ್ ನಡುವಿನ ಆ್ಯಕ್ಷನ್ ಸೀಕ್ವೆನ್ಸ್ ಸಿನಿಮಾದಲ್ಲಿ ರೋಚಕವಾಗಿದೆ. ತಾರಕ್ ನಟನೆ ಮತ್ತು ಅವರ ಲುಕ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಪರಭಾಷೆಗಳಲ್ಲಿ ಅವರಿಗೆ ಬೇಡಿಕೆ ಹೆಚ್ಚಾಗಿದೆ.

    ಇನ್ನೂ ಕನ್ನಡದ ‘ಕಿಸ್’ ಬೆಡಗಿ ಶ್ರೀಲೀಲಾ (Sreeleela) ಅವರು ‘ಕಿಸ್ಸಿಕ್’ ಐಟಂ ಹಾಡಿಗೆ ಸೊಂಟ ಬಳುಕಿಸಿದ್ದಾರೆ. ಮಾದಕ ಲುಕ್ ಮತ್ತು ಡ್ಯಾನ್ಸ್‌ನಿಂದ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ. ಶ್ರೀಲೀಲಾ ಕೂಡ ತೆಲುಗಿನ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ.

    ಡಾಲಿ ಧನಂಜಯ (Daali Dhananjay) ಅವರು ಜಾಲಿ ರೆಡ್ಡಿ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರಕ್ಕೂ ಸುಕುಮಾರ್ ಪ್ರಾಮುಖ್ಯತೆ ನೀಡಿದ್ದಾರೆ. ಎರಡನೇ ಭಾಗದಲ್ಲೂ ಡಾಲಿ ಎಂಟ್ರಿ ಕೊಟ್ಟಿದ್ದಾರೆ. ಆದರೆ ಪಾರ್ಟ್ 3ನಲ್ಲಿ ಅವರ ಪಾತ್ರ ಹೇಗೆಲ್ಲಾ ತಿರುವು ಪಡೆಯಲಿದೆ ಎಂಬುದನ್ನು ಕಾದುನೋಡಬೇಕಿದೆ.

    ನಂದ ಗೋಪಾಲ್ (Nanda Gopal) ಕೂಡ ‘ಪುಷ್ಪ 2’ನಲ್ಲಿ ನಟಿಸಿದ್ದಾರೆ. ಅವರ ಪಾತ್ರ ಚಿಕ್ಕದಾಗಿದೆ. ತೆರೆಯ ಮೇಲೆ ಹೆಚ್ಚು ಕಾಣಿಸಿಕೊಳ್ಳದೇ ಇದ್ದರೂ ಕನ್ನಡದ ನಟ ಕಾಣಿಸಿಕೊಂಡಿದ್ದಾರೆ ಎಂಬುದು ವಿಶೇಷ.

  • ತೆಲುಗು ನಟ ಸತ್ಯದೇವ್ ಮೀಟ್ಸ್ ಶಿವಣ್ಣ

    ತೆಲುಗು ನಟ ಸತ್ಯದೇವ್ ಮೀಟ್ಸ್ ಶಿವಣ್ಣ

    ತೆಲುಗು ನಟ ಸತ್ಯದೇವ್ (Satyadev) ಮತ್ತು ಡಾಲಿ (Daali Dhananjay) ನಟನೆಯ ‘ಜೀಬ್ರಾ’ (Zebra) ಸಿನಿಮಾ ಇದೇ ನ.22ರಂದು ರಿಲೀಸ್‌ಗೆ ಸಜ್ಜಾಗಿದೆ. ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ‘ಜೀಬ್ರಾ’ ಚಿತ್ರತಂಡ ಇದೀಗ ಬೆಂಗಳೂರಿನ ಶಿವಣ್ಣ ನಿವಾಸಕ್ಕೆ ಭೇಟಿ ಕೊಟ್ಟಿದೆ. ಶಿವಣ್ಣರನ್ನು ನಟ ಸತ್ಯದೇವ್ ಭೇಟಿಯಾಗಿದ್ದಾರೆ. ಇದನ್ನೂ ಓದಿ:ಗುಲಾಬಿ ಹಿಡಿದು ಪೋಸ್ ಕೊಟ್ಟ ‘ಸಿಂಗಾರ ಸಿರಿ’ ಸಪ್ತಮಿ

    ಇಂದು (ನ.19) ಸಂಜೆ ಬೆಂಗಳೂರಿನಲ್ಲಿ ‘ಜೀಬ್ರಾ’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜಿಸಿದೆ. ಹಾಗಾಗಿ ಇಡೀ ಟೀಮ್ ಬೆಂಗಳೂರಿಗೆ ಆಗಮಿಸಿದೆ. ಇದರ ನಡುವೆ ಸತ್ಯದೇವ್ & ಟೀಮ್ ಶಿವಣ್ಣರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದ್ದಾರೆ. ಈ ವೇಳೆ, ಶಿವಣ್ಣ ಅವರು ಸತ್ಯದೇವ್‌ ನಟನೆಯ ‘ಜೀಬ್ರಾ’ ಸಿನಿಮಾಗೆ ಶುಭಹಾರೈಸಿದ್ದಾರೆ.

    ಇನ್ನೂ ‘ಜೀಬ್ರಾ’ ಸಿನಿಮಾ ಇದೇ ನ.22ಕ್ಕೆ ಬಹಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಸಿನಿಮಾದಲ್ಲಿ ಡಾಲಿ, ಸತ್ಯದೇವ್, ಅಮೃತಾ ಅಯ್ಯಂಗಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ.