Tag: ಡಾ.ಕೆ.ವಿ ರಾಜೇಂದ್ರ

  • ನಿವೇಶನ ಹಂಚಿಕೆ ವಿವಾದ- ಮುಡಾ ಆಯುಕ್ತರಿಗೆ 15 ಪತ್ರ ಬರೆದಿದ್ದ ಮೈಸೂರು ಡಿಸಿ

    ನಿವೇಶನ ಹಂಚಿಕೆ ವಿವಾದ- ಮುಡಾ ಆಯುಕ್ತರಿಗೆ 15 ಪತ್ರ ಬರೆದಿದ್ದ ಮೈಸೂರು ಡಿಸಿ

    ಮೈಸೂರು: ಮುಡಾದಲ್ಲಿ (Muda) 50:50 ಅನುಪಾತ ನಿವೇಶನ ಹಂಚಿಕೆ ಅವ್ಯವಹಾರ ವಿಚಾರಕ್ಕೆ ಇದೀಗ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ.

    ಈ ಹಿಂದೆಯೇ ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ (DC K.V Rajendra) ಅವರು ಮುಡಾ ಆಯುಕ್ತರಿಗೆ 15 ಪತ್ರ ಬರೆದಿದ್ದರು. ಪತ್ರದಲ್ಲಿ ತುರ್ತು ಕ್ರಮಕ್ಕೆ ಸಮಿತಿ ರಚಿಸಲು ಶಿಫಾರಸು ಮಾಡಿದ್ದರು.

    ಫೆ.8 ರಿಂದ ಮುಡಾ ಆಯುಕ್ತರಿಗೆ ಸ್ಪಷ್ಟನೆ ಕೇಳಿ ನಿರಂತರವಾಗಿ ಪತ್ರ ಬರೆಯಲಾಗಿತ್ತು. ಅದರಲ್ಲಿ ಸಾಕಷ್ಟು ಅಂಶಗಳನ್ನು ತಿಳಿಸಿ ನಗರಾಭಿವೃದ್ಧಿ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಆದರೆ ಆಯುಕ್ತರು ಈ ಪತ್ರಕ್ಕೆ ಯಾವುದೇ ಉತ್ತರ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಡಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದರು.

    ಪತ್ರದ ಪ್ರಮುಖ ಅಂಶಗಳು:
    – 50:50 ಅನುಪಾತದಲ್ಲಿ ನಿವೇಶನ ನೀಡಲು ಕೈಗೊಂಡ ನಿರ್ಣಯ ನಿಯಮಬಾಹಿರವೆಂದು ರದ್ದುಪಡಿಸಿರುವುದರಿಂದ 50:50ರ ಅನುಪಾತದಲ್ಲಿ ಈಗಾಗಲೇ ಹಂಚಿಕೆ ಮಾಡಿರುವ ನಿವೇಶನಗಳ ಕ್ರಯ ಪತ್ರಗಳ ನೋಂದಣಿಯನ್ನು ತಕ್ಷಣದಿಂದಲ್ಲೇ ಸ್ಥಗಿತಗೊಳಿಸಿ.
    – ಪ್ರಾಧಿಕಾರದ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಅನುಷ್ಠಾನಗೊಳಿಸುವ ಪೂರ್ವ ಸರ್ಕಾರದ ಅನುಮೋದನೆ ಪಡೆದು ಕಾರ್ಯಗತಗೊಳಿಸಬೇಕಾಗಿದ್ದು, ಆಯುಕ್ತರು ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಸರ್ಕಾರದಿಂದ ಅನುಮೋದನೆ ಪಡೆದಿರುವ ಬಗ್ಗೆ ಯಾವುದೇ ದಾಖಲೆಗಳನ್ನು ಸಲ್ಲಿಸಿರುವುದಿಲ್ಲ.
    – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಕೈಗೊಂಡ ನಿಯಮಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅನ್ವಯ ಮಾಡಿಕೊಳ್ಳಲು ಆಯುಕ್ತರಿಗೆ ಇರುವ ಅಧಿಕಾರದ ಬಗ್ಗೆ ಸೂಕ್ತ ದಾಖಲೆಗಳನ್ನು ಒದಗಿಸಿರುವುದಿಲ್ಲ.
    – ನ್ಯಾಯಾಲಯದ ಆದೇಶಗಳನ್ನು ಒಪ್ಪಲು ಬರದೇ ಇದ್ದ ಸಂದರ್ಭಗಳಲ್ಲಿ ಅದನ್ನು ಪ್ರಶ್ನಿಸಲು ಅವಕಾಶಗಳಿದ್ದರೂ ಪ್ರಶ್ನೆ ಮಾಡಿಲ್ಲ.
    – ನಗರಾಭಿವೃದ್ಧಿ ಪ್ರಾಧಿಕಾರದಿಂದ ಸರ್ಕಾರದ ನಿರ್ದೇಶನವನ್ನು ಉಲ್ಲಂಘಿಸಿ, ಬದಲಿ ನಿವೇಶನ ಮಂಜೂರಾತಿ, ತುಂಡು ಜಾಗ ಹಂಚಿಕೆ ಮತ್ತು ಭೂ ಪರಿಹಾರವಾಗಿ ಜಾಗಗಳನ್ನು ನೀಡಿರುತ್ತಾರೆ ಎಂಬ ಆರೋಪಕ್ಕೆ ಆಯುಕ್ತರು ಯಾವುದೇ ವಿವರಣೆಯನ್ನು ನೀಡಿಲ್ಲ.
    – ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿರುವುದರ ಬಗ್ಗೆ ದೂರು ಅರ್ಜಿದಾರರು ಹಲವಾರು ನಿದರ್ಶನಗಳನ್ನು ನೀಡಿದ್ದು, ಇದರ ಬಗ್ಗೆ ವಿವರಣೆಗಳಿರುವುದಿಲ್ಲ.

  • ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತ್ ಒಂದು ವಾರ ಸೀಲ್‍ಡೌನ್

    ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತ್ ಒಂದು ವಾರ ಸೀಲ್‍ಡೌನ್

    ಮಂಗಳೂರು: ಕೊರೊನಾ ಪ್ರಕರಣಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತ್‍ನ್ನು ಒಂದು ವಾರಗಳ ಕಾಲ ಸಂಪೂರ್ಣ ಸೀಲ್‍ಡೌನ್ ಮಾಡಿ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

     

    ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ 17 ಗ್ರಾಮ ಪಂಚಾಯತ್‍ಗಳಲ್ಲಿ 50ಕ್ಕಿಂತ ಹೆಚ್ಚು ಕೋವಿಡ್ ಸಕ್ರಿಯ ಪ್ರಕರಣಗಳಿರುವ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮಂಗಳೂರು ತಾಲೂಕಿನ ನೀರುಮಾರ್ಗ ಹಾಗೂ ಕೊಣಾಜೆ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯುರು, ಮಿತ್ತಬಾಗಿಲು, ಮಾಲಾಡಿ, ನೆರಿಯಾ, ಲಾಯಿಲಾ, ಚಾರ್ಮಾಡಿ, ಸುಳ್ಯ ತಾಲೂಕಿನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು. ಕಡಬ ತಾಲೂಕಿನ ಸುಬ್ರಹ್ಮಣ್ಯ, ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಇದನ್ನೂ ಓದಿ: 8ನೇ ಪರಿಚ್ಛೇದಕ್ಕೆ ತುಳು – ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ ಎಂದ ಕಟೀಲ್

    ಜೂ.14ರ ಬೆಳಗ್ಗೆ 9 ಗಂಟೆಯಿಂದ ಜೂ. 21 ರ ಬೆಳಗ್ಗೆ 9 ಗಂಟೆವರೆಗೆ ಸೀಲ್‍ಡೌನ್ ಮಾಡಿ ಆದೇಶ ಮಾಡಲಾಗಿದ್ದು, ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಗ್ರಾಮಕ್ಕೆ ಒಳ ಪ್ರವೇಶ ಮತ್ತು ನಿರ್ಗಮನ ಸಂಪೂರ್ಣ ಬಂದ್ ಆಗಲಿದೆ. ಈ ಗ್ರಾಮ ಪಂಚಾಯತ್‍ನ ಜನರಿಗೆ ಅಗತ್ಯ ವಸ್ತು ಪೂರೈಸಲು ಪಾವತಿ ಆಧಾರದ ಮೇಲೆ ಕಾರ್ಯಪಡೆ ರಚಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.