Tag: ಡಾ ಕೆ ಸುಧಾಕರ್

  • ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು: ಸುಧಾಕರ್ ಕಿಡಿ

    ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು: ಸುಧಾಕರ್ ಕಿಡಿ

    ಬೆಂಗಳೂರು: ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು ಅಂತ ಕಾಂಗ್ರೆಸ್ ವಿರುದ್ಧ ಆರೋಗ್ಯ ಸಚಿವ ಸುಧಾಕರ್ ಆಕ್ರೋಶ ಹೊರ ಹಾಕಿದ್ದಾರೆ. ಲಸಿಕೆ ಕೊರತೆ ಬಗ್ಗೆ ಆರೋಗ್ಯ ಸಚಿವರು ಸುಳ್ಳು ಹೇಳ್ತಿದ್ದಾರೆ ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್, ಕಾಂಗ್ರೆಸ್ ಮೊದಲಿನಿಂದಲೂ ರಾಜಕೀಯ ಮಾಡ್ತಾ ಇದೆ. ಈಗ ಲಸಿಕೆ ವಿಚಾರದಲ್ಲೂ ಇದನ್ನೆ ಮಾಡುತ್ತಿದೆ ಅಂತ ಕಿಡಿಕಾರಿದರು.

    ರಾಜ್ಯದಲ್ಲಿ ಈವರೆಗೂ 2 ಕೋಟಿ 28 ಲಕ್ಷ ಲಸಿಕೆ ನೀಡಲಾಗಿದೆ. ಲಸಿಕೆ ಕೊರತೆ ಇದ್ದರೆ ಇಷ್ಟು ಲಸಿಕೆ ಕೊಡಲು ಆಗುತ್ತಿತ್ತಾ? ಇದರಲ್ಲಿ ನಾವು ಸುಳ್ಳು ಹೇಳೋಕೆ ಆಗುತ್ತಾ? ಅಂತ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ರು. ಕಾಂಗ್ರೆಸ್ ನವರು ಮೊದಲಿನಿಂದಲೂ ಅನಗತ್ಯ ಗೊಂದಲ ಸೃಷ್ಟಿ ಮಾಡುವ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್ ಅವರು ಲಸಿಕೆಯಲ್ಲಿ ರಾಜಕೀಯ ಮಾಡಬಾರದು ಅಂತ ತಿರುಗೇಟು ಕೊಟ್ರು. ಇದನ್ನೂ ಓದಿ: ಅಧಿಕಾರಿ ಸತ್ಯ ಹೇಳಿದ್ದಕ್ಕೆ ಸಚಿವ ಸುಧಾಕರ್​​​ಗೆ ಇರಿಸು ಮುರಿಸು

    ಒಂದೆರೆಡು ದಿನ ರಾಜ್ಯಕ್ಕೆ ಕಡಿಮೆ ಲಸಿಕೆ ಬಂದಿರಬಹುದು. ಆದ್ರೆ ಲಸಿಕೆ ಇಲ್ಲ ಅಂತ ಹೇಳೋದು ಸರಿಯಲ್ಲ. ವಿಶ್ವದಲ್ಲಿ ಅತಿ ಹೆಚ್ಚು ಲಸಿಕೆ ಕೊಟ್ಟಿರೋದು ಭಾರತ ದೇಶ. ಇದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಅಂತ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ರು. ನಾನು ಸೋಮವಾರ ದೆಹಲಿಗೆ ತೆರಳುತ್ತಿದ್ದೇನೆ. ಲಸಿಕೆ ಹೆಚ್ಚಳ ಮಾಡಲು ಕೇಂದ್ರಕ್ಕೆ ಮನವಿ ಮಾಡ್ತೀವಿ ಅಂತ ಇದೇ ವೇಳೆ ಸಚಿವರು ತಿಳಿಸಿದರು.

  • ಅಧಿಕಾರಿ ಸತ್ಯ ಹೇಳಿದ್ದಕ್ಕೆ ಸಚಿವ ಸುಧಾಕರ್​​​ಗೆ ಇರಿಸು ಮುರಿಸು

    ಅಧಿಕಾರಿ ಸತ್ಯ ಹೇಳಿದ್ದಕ್ಕೆ ಸಚಿವ ಸುಧಾಕರ್​​​ಗೆ ಇರಿಸು ಮುರಿಸು

    – ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ಅಧಿಕಾರಿಗೆ ಸೂಚನೆ

    ಮೈಸೂರು: ವಾಕ್ಸಿನ್ ಖಾಲಿ ಎಂದು ಅಧಿಕೃತವಾಗಿ ನಿನ್ನೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಹೇಳುವ ಮೂಲಕ ವಾಸ್ತವ ಒಪ್ಪಿಕೊಂಡಿದ್ದರು. ಡಿಎಚ್‍ಓ ಅವರ ಈ ಮಾತು ಆರೋಗ್ಯ ಸಚಿವರಿಗೆ ಇರಿಸು ಮುರಿಸು ಉಂಟು ಮಾಡಿದೆ.

    ಹೀಗಾಗಿಯೆ ಇಂದು ಮೈಸೂರಿಗೆ ಆಗಮಿಸಿದ ಆರೋಗ್ಯ ಸಚಿವ ಡಾ. ಸುಧಾಕರ್ ಕೋವಿಡ್ ನಿರ್ವಹಣಾ ಸಭೆಯ ಆರಂಭದಲ್ಲೆ ಡಿಎಚ್‍ಓಗೆ ಮೆಲು ದನಿಯಲ್ಲೇ ವಾರ್ನಿಂಗ್ ನೀಡಿದರು. ಡಿಎಚ್‍ಓ ಪ್ರಸಾದ್ ಅವರೇ ಇನ್ಮುಂದೆ ವಾಕ್ಸಿನ್ ಬಗ್ಗೆ ನೀವು ಮಾಧ್ಯಮಗಳಿಗೆ ಮಾಹಿತಿ ನೀಡಬೇಡಿ. ಜಿಲ್ಲಾಧಿಕಾರಿಗಳೇ ಎಲ್ಲಾ ಮಾತಾಡುತ್ತಾರೆ ಎಂದು ಮೆಲು ದನಿಯಲ್ಲೇ ವಾರ್ನಿಂಗ್ ನೀಡಿದರು.

    ಎಲ್ಲೆಡೆ ನೋ ಸ್ಟಾಕ್ ಬೋರ್ಡ್: ಮೈಸೂರಲ್ಲಿ ಲಸಿಕೆ ಇಲ್ಲ ಎಂಬ ಸತ್ಯವನ್ನು ಜಿಲ್ಲಾ ಆರೋಗ್ಯ ಇಲಾಖೆ ಒಪ್ಪಿಕೊಂಡು ಅಧಿಕೃತವಾಗಿಯೆ ವ್ಯಾಕ್ಸಿನ್ ಸ್ಟಾಕ್ ಇಲ್ಲ ಎಂಬ ಬೋರ್ಡ್ ಅನ್ನು ಆರೋಗ್ಯ ಕೇಂದ್ರಗಳ ಮುಂದೆ ಹಾಕಿದೆ. ಜುಲೈ ಒಂದರವರೆಗೆ ಮೈಸೂರಲ್ಲಿ ವಾಕ್ಸಿನ್ ಸಿಗುವುದಿಲ್ಲ. ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಎರಡು ವ್ಯಾಕ್ಸಿನ್ ಕೂಡ ಮೈಸೂರಲ್ಲಿ ಲಭ್ಯವಿಲ್ಲ. ಇದನ್ನೂ ಓದಿ: ಮೊದಲು ಲಸಿಕೆ, ನಂತರ ಮನ್ ಕೀ ಬಾತ್: ರಾಹುಲ್ ಕಿಡಿ

    ಬೆಂಗಳೂರಿನಲ್ಲಿ ಮಾತನಾಡಿದ್ದ ಆರೋಗ್ಯ ಸಚಿವರು, ಈ ತಿಂಗಳು ಹೆಚ್ಚಾಗಿ ಲಸಿಕೆ ಬರಬೇಕಿತ್ತು. ಆದ್ರೆ ಲಸಿಕೆ ಬರೋದು ತಡವಾಗಿದೆ. ಲಸಿಕೆ ಪೂರೈಕೆ ಹೆಚ್ಚಳ ಮಾಡುವಂತೆ ಮನವಿ ಮಾಡಲು ಸೋಮವಾರ ಅಥವಾ ಮಂಗಳವಾರ ದೆಹಲಿಗೆ ತೆರಳುತ್ತೇನೆ. ಕೇಂದ್ರ ಆರೋಗ್ಯ ಸಚಿವರನ್ನ ಭೇಟಿಯಾಗಿ ರಾಜ್ಯಕ್ಕೆ ಹೆಚ್ಚು ಲಸಿಕೆ ಪೂರೈಕೆ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಹೇಳುವ ಲಸಿಕೆ ಕೊರತೆಯನ್ನು ಒಪ್ಪಿಕೊಂಡಿದ್ದರು. ಇದನ್ನೂ ಓದಿ: ಮರದ ಕೆಳಗೆ, ನಡು ರಸ್ತೆಯಲ್ಲಿ, ಬೆಳೆಗಳ ಮಧ್ಯೆ, ಜನ ಎಲ್ಲಿ ಸಿಗುತ್ತಾರೋ ಅಲ್ಲಿ ಲಸಿಕೆ

    ಕೊಡಗಿನಲ್ಲಿಯೂ ಇಲ್ಲ ಸಂಜೀವಿನಿ: ಬುಧವಾರದಿಂದ ಕೊಡಗಿನಲ್ಲಿ ವ್ಯಾಕ್ಸಿನ್ ಅಭಾವ ಹೆಚ್ಚಾಗುವ ಸಾಧ್ಯತೆ ಇದೆ. ವ್ಯಾಕ್ಸಿನ್ ಗಾಗಿ ಸಾರ್ವಜನಿಕರು ಎರಡ್ಮೂರು ದಿನ ಕಾಯಲೇ ಬೇಕು, ಯಾರೂ ಗೊಂದಲಕ್ಕೊಳಗಾಗಬಾರದು ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಲಸಿಕೆಗಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ: ಬಾಲಕೃಷ್ಣ

  • ವ್ಯಾಕ್ಸಿನ್ ಪೂರೈಕೆಯಲ್ಲಿ ಎರಡ್ಮೂರು ದಿನ ವ್ಯತ್ಯಯ: ಕೊಡಗು ಡಿಸಿ

    ವ್ಯಾಕ್ಸಿನ್ ಪೂರೈಕೆಯಲ್ಲಿ ಎರಡ್ಮೂರು ದಿನ ವ್ಯತ್ಯಯ: ಕೊಡಗು ಡಿಸಿ

    – ಕೊರೊನಾ ಅಬ್ಬರದ ನಡುವೆ ಖಾಲಿಯಾಗುತ್ತಿದೆ ಲಸಿಕೆ

    ಮಡಿಕೇರಿ: ಒಂದೆಡೆ ಕೊರೊನಾ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ರಾಜ್ಯದ ವಿವಿಧೆಡೆ ಲಸಿಕಾ ಕೇಂದ್ರದ ಬಳಿ ನೋ ಸ್ಟಾಕ್(ಲಸಿಕೆ ಖಾಲಿಯಾಗಿದೆ) ನಾಳೆ ಬನ್ನಿ ಎಂಬ ಸಿದ್ಧ ಉತ್ತರ ಎದುರಾಗುತ್ತಿದೆ. ಲಸಿಕೆ ಹಾಕಿಸಿಕೊಳ್ಳಲು ಮೊದಲು ಹಿಂಜರಿದ ಜನ, ಈಗ ಕೊರೊನಾ ಲಸಿಕೆ ಪಡೆಯಲು ಮುಗಿಬೀಳುತ್ತಿದ್ದಾರೆ. ಆದರೆ ಲಸಿಕಾ ಕೇಂದ್ರಗಳಲ್ಲಿ ವ್ಯಾಕ್ಸಿನ್ ಕೊರತೆ ಎದುರಾಗುತ್ತಿದ್ದು, ಸ್ಟಾಕ್ ಇಲ್ಲ ಎಂಬ ಉತ್ತರ ಸಿಗುತ್ತಿದೆ.

    ಕೊಡಗಿನಲ್ಲೂ ಇದೇ ಪರಿಸ್ಥಿತಿ ಎದುರಾಗಿದ್ದು, ವ್ಯಾಕ್ಸಿನ್ ಹಾಕಿಸಿಕೊಳ್ಳಲು ಜನ ತಂಡೋಪತಂಡವಾಗಿ ಬರುತ್ತಿದ್ದಾರೆ. ಆದರೆ ಇಂದು ಹೇಗೋ ಎಲ್ಲ ಸೆಂಟರ್ ನಲ್ಲೂ ವ್ಯಾಕ್ಸಿನ್ ನೀಡಲಾಗಿದೆ. ಆದರೆ ನಾಳೆಯಿಂದ ಕೊಡಗಿನಲ್ಲಿ ವ್ಯಾಕ್ಸಿನ್ ಅಭಾವ ಹೆಚ್ಚಾಗುವ ಸಾಧ್ಯತೆ ಇದೆ. ವ್ಯಾಕ್ಸಿನ್ ಗಾಗಿ ಸಾರ್ವಜನಿಕರು ಎರಡ್ಮೂರು ದಿನ ಕಾಯಲೇ ಬೇಕು, ಯಾರೂ ಗೊಂದಲಕ್ಕೊಳಗಾಗಬಾರದು ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಯ ಲಸಿಕೆ ಕೊರತೆಯನ್ನು ಒಪ್ಪಿಕೊಂಡ ಸಚಿವ ಸುಧಾಕರ್

     

    ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡಬೇಕೆಂದು ಸರ್ಕಾರ ಸೂಚಿಸಿರುವುದರಿಂದ 800 ಡೋಸ್ ಮಾತ್ರ ಕೊಡಗು ಜಿಲ್ಲೆಗೆ ಸಿಕ್ಕಿದೆ. ಹೀಗಾಗಿ ಸಾರ್ವಜನಿಕರಿಗೆ ವ್ಯಾಕ್ಸಿನ್ ನಲ್ಲಿ ವ್ಯತ್ಯಯ ಅಗುತ್ತದೆ. ಸಾರ್ವಜನಿಕರು ವ್ಯಾಕ್ಸಿನ್ ಬರುವವರೆಗೂ ಎರಡ್ಮೂರು ದಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಅರೋಗ್ಯ ಅಧಿಕಾರಿ ಮೋಹನ್, ಜಿಲ್ಲೆಗೆ 2,900 ಡೋಸ್ ಲಸಿಕೆ ಬಂದಿತ್ತು. ಕೊಡಗಿನಲ್ಲಿರುವ ಎಲ್ಲ ಲಸಿಕೆ ಕೇಂದ್ರಗಳಿಗೆ ಕಳುಹಿಸಲಾಗಿದೆ. ಎಲ್ಲ ಕಡೆಗಳಲ್ಲಿ ಜನರು ಬೆಳಿಗ್ಗೆಯೇ ಲಸಿಕೆ ಹಾಕಿಸಿಕೊಳ್ಳಲು ಬಂದಿದ್ದಾರೆ. ಕೆಲವು ಕಡೆ ಮಧ್ಯಾಹ್ನದ ವೇಳೆಗೆ ವ್ಯಾಕ್ಸಿನ್ ಖಾಲಿಯಾಗಿದೆ. 2 ದಿನಗಳ ಕಾಲ ಲಸಿಕೆ ಇರುವುದಿಲ್ಲ. ಸರ್ಕಾರ ಎರಡು ದಿನಗಳಲ್ಲಿ ಪೂರೈಕೆ ಮಾಡುವುದಾಗಿ ತಿಳಿಸಿದೆ. ಆದರೆ ಬಂದ ಬಳಿಕವಷ್ಟೇ ಖಚಿತವಾಗಲಿದೆ ಎಂದು ತಿಳಿಸಿದ್ದಾರೆ.

    ಲಸಿಕೆ ಕೊರತೆ ಒಪ್ಪಿಕೊಂಡ ಸುಧಾಕರ್
    ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ನೀಗಿಸಲು ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನ ಭೇಟಿ ಮಾಡುತ್ತೇನೆ. ಲಸಿಕೆ ಹೆಚ್ಚಾಗಿ ನೀಡಲು ಮನವಿ ಮಾಡುತ್ತೇನೆ ಎಂದು ಹೇಳುವ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಲಸಿಕೆ ಕೊರತೆಯನ್ನು ಒಪ್ಪಿಕೊಂಡಿದ್ದಾರೆ.

    ರಾಜ್ಯದಲ್ಲಿ ಲಸಿಕೆ ಕೊರತೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಲಸಿಕೆ ಬರುತ್ತಿದೆ, ಈ ತಿಂಗಳು ಹೆಚ್ಚಾಗಿ ಲಸಿಕೆ ಬರಬೇಕಿತ್ತು ಆದರೆ ತಡವಾಗಿದೆ. ಲಸಿಕೆ ಪೂರೈಕೆ ಹೆಚ್ಚಿಸುವಂತೆ ಮನವಿ ಮಾಡಲು ಸೋಮವಾರ ಅಥವಾ ಮಂಗಳವಾರ ದೆಹಲಿಗೆ ತೆರಳುತ್ತೇನೆ. ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹೆಚ್ಚು ಲಸಿಕೆ ಪೂರೈಕೆ ಮಾಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

  • ಡಾ.ದೇವಿಶೆಟ್ಟಿ ವರದಿ ಶಿಫಾರಸು 45 ದಿನಗಳಲ್ಲಿ ಅನುಷ್ಠಾನ: ಸಚಿವ ಸುಧಾಕರ್

    ಡಾ.ದೇವಿಶೆಟ್ಟಿ ವರದಿ ಶಿಫಾರಸು 45 ದಿನಗಳಲ್ಲಿ ಅನುಷ್ಠಾನ: ಸಚಿವ ಸುಧಾಕರ್

    ಬೆಂಗಳೂರು: ಕೊರೊನಾ 3ನೇ ಅಲೆ ನಿಯಂತ್ರಣಕ್ಕೆ ಸರ್ಕಾರ ರಚಿಸಿದ್ದ ತಜ್ಞರ ಸಮಿತಿ ಮಧ್ಯಂತರ ವರದಿ ನೀಡಿದ ಬೆನ್ನಲ್ಲೇ ವರದಿಯ ಶಿಫಾರಸು ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ. ತಜ್ಞರ ನೀಡಿರುವ ಸಲಹೆ, ಶಿಫಾರಸುಗಳನ್ನ 45 ದಿನಗಳಲ್ಲಿ ರಾಜ್ಯಾದ್ಯಂತ ಅನುಷ್ಠಾನ ಮಾಡೋದಾಗಿ ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ವರದಿ ಅನುಷ್ಠಾನ ಕುರಿತು ಮಾತನಾಡಿದ ಅವರು, ನಿನ್ನೆ ಡಾ. ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. 92 ಪುಟಗಳ ವರದಿಯಲ್ಲಿ ಅನೇಕ ಶಿಫಾರಸುಗಳನ್ನು ಮಾಡಿದೆ. ಸಮಿತಿಯ ಶಿಫಾರಸು ಅನುಷ್ಠಾನ ಮಾಡಲು ಸರ್ಕಾರ ಪ್ರಕ್ರಿಯೆ ಪ್ರಾರಂಭ ಮಾಡಿದೆ. 45 ದಿನಗಳಲ್ಲಿ ತಜ್ಞರು ಕೊಟ್ಟ ಶಿಫಾರಸನು ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ:  2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್

    ಜಿಲ್ಲೆಗಳಲ್ಲಿ ಮಕ್ಕಳಿಗಾಗಿ ಕೇರ್ ಸೆಂಟರ್ ಪ್ರಾರಂಭ, ವೈದ್ಯರು, ಸಿಬ್ಬಂದಿ ನೇಮಕ ಪ್ರಕ್ರಿಯೆ, ಐಸಿಯು ಬೆಡ್, ಆಕ್ಸಿಜನ್ ಬೆಡ್ ಹೆಚ್ಚಳ ಮಾಡುವುದು. ಸಿಬ್ಬಂದಿಗೆ ಅಗತ್ಯ ತರಬೇತಿ ನೀಡುವುದು ಸೇರಿದಂತೆ ಅನೇಕ ಶಿಫಾರಸುಗಳನ್ನ ಸಮಿತಿ ಮಾಡಿತ್ತು. ಸಮತಿ ವರದಿಯನ್ನು ಪ್ರತಿ ಜಿಲ್ಲೆಗಳಲ್ಲೂ ಅನುಷ್ಠಾನ ಮಾಡಲು ಕ್ರಮವಹಿಸಲಾಗುತ್ತೆ. ತಜ್ಞರ ಎಲ್ಲಾ ಸಲಹೆ, ಶಿಫಾರಸುಗಳನ್ನ ರಾಜ್ಯ ಸರ್ಕಾರ ಸಮರ್ಪಕವಾಗಿ ಅನುಷ್ಠಾನ ಮಾಡುವ ಕೆಲಸ ಮಾಡಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

    ಖಾಸಗಿ ಆಸ್ಪತ್ರೆಗಳ ಬೆಡ್ ವಾಪಸ್:

    ಕೊರೊನಾ ತೀವ್ರತೆಯಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಂದ ಪಡೆದಿದ್ದ ಬೆಡ್‍ಗಳನ್ನು ತಾತ್ಕಾಲಿಕವಾಗಿ ಆಸ್ಪತ್ರೆಗಳಿಗೆ ವಾಪಸ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದೂ ಅವರು ಇದೇ ವೇಳೆ ತಿಳಿಸಿದರು. ಕೊರೊನಾ ಕೇಸ್ ಕಡಿಮೆ ಆಗಿರುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇವೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಬೆಡ್ ಸದ್ಯಕ್ಕೆ ಕೊಡೋದು ಬೇಡ. ಮುಂದೆ ಏನಾದ್ರೂ ಕೇಸ್ ಹೆಚ್ಚಳ ಆದ್ರೆ, ಸರ್ಕಾರಕ್ಕೆ ಬೆಡ್ ಬೇಕು ಎಂದು ಕೇಳಿದ್ರೆ ಆಗ ಖಾಸಗಿ ಆಸ್ಪತ್ರೆಗಳು ಬೆಡ್ ಕೊಡಬೇಕು. ಸದ್ಯ ಕೋವಿಡೇತರ ರೋಗಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗುತ್ತೆ ಎಂದು ಸಚಿವರು ತಿಳಿಸಿದರು.

  • ಮೈಸೂರಿನಲ್ಲಿ 1 ಡೆಲ್ಟಾ ಪ್ಲಸ್ ಪ್ರಕರಣ ಪತ್ತೆಯಾಗಿದ್ದು, ರೋಗಿಯನ್ನ ಐಸೋಲೇಟ್ ಮಾಡಲಾಗಿದೆ: ಸುಧಾಕರ್

    ಮೈಸೂರಿನಲ್ಲಿ 1 ಡೆಲ್ಟಾ ಪ್ಲಸ್ ಪ್ರಕರಣ ಪತ್ತೆಯಾಗಿದ್ದು, ರೋಗಿಯನ್ನ ಐಸೋಲೇಟ್ ಮಾಡಲಾಗಿದೆ: ಸುಧಾಕರ್

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯ ಭೀತಿಯ ಬೆನ್ನಲ್ಲೇ ರಾಜ್ಯದಲ್ಲಿ ಡೆಲ್ಟಾ ಪ್ಲಸ್ (Delta Plus) ವೈರಸ್ ಆತಂಕ ಎದುರಾಗಿದೆ. ಮೈಸೈರಿನಲ್ಲಿ ಒಂದು ಡೆಲ್ಟಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಆ ರೋಗಿಯನ್ನು ಐಸೋಲೇಟ್ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಲ್ಟಾ ಪ್ಲಸ್ ಕೇಸ್ ಮಹಾರಾಷ್ಟ್ರದಲ್ಲಿ 20-30 ಕೇಸ್ ಬಂದಿದೆ. ಮೈಸೂರಿನಲ್ಲಿ ಒಂದು ಕೇಸ್ ಬಂದಿದೆ. ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. ಅಲ್ಲದೆ ಅವರಿಂದ ಯಾರಿಗೂ ಸೋಂಕು ಹರಡಿಲ್ಲ. ಆತನ ಪ್ರಾಥಮಿಕ ಮತ್ತು ದ್ವೀತಿಯ ಸಂಪರ್ಕದಲ್ಲಿ ಇರೋರಿಗೆ ಸೋಂಕು ಹರಡಿಲ್ಲ. ಈ ವೈರಸ್ ಬಗ್ಗೆ ನಿರಂತರವಾಗಿ ಎಚ್ಚರವಹಿಸಿದ್ದೇವೆ. 6 ಜಿನೋಮ್ ಲ್ಯಾಬ್ ಕೂಡಾ ಪ್ರಾರಂಭ ಮಾಡಲು ತೀರ್ಮಾನ ಮಾಡಲಾಗಿದೆ. ನಾನ್ ಕೋವಿಡ್ ರೋಗಿಗಳಿಗೂ ಇನ್ನು ಮುಂದೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದೇವೆ ಎಂದರು.

    ಡಾ.ದೇವಿಶೆಟ್ಟಿ ನಿನ್ನೆ ಪ್ರಾಥಮಿಕ ವರದಿ ನೀಡಿದೆ. ನಮ್ಮ ಕಮಿಟಿ ಜೊತೆ ಚರ್ಚೆ ಮಾಡಿ ಶಿಫಾರಸು ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ. 45 ದಿನಗಳ ಒಳಗೆ ಎಲ್ಲಾ ಜಿಲ್ಲೆಗಳಿಗೆ ತಜ್ಞರ ಶಿಫಾರಸು ಅನುಷ್ಠಾನ ಮಾಡ್ತೀವಿ. ಡೆಲ್ಟಾ ಪ್ಲಸ್ ವೈರಸ್ ಗೆ ಚಿಕಿತ್ಸೆ ದೊಡ್ಡ ಬದಲಾವಣೆ ಇಲ್ಲ. ಡೆಲ್ಟಾ ವೈರಸ್ ಗೆ ನೀಡುವ ಚಿಕಿತ್ಸೆ ಜೊತೆ ಕೆಲ ಔಷಧಿಗಳನ್ನ ಹೆಚ್ಚುವರಿಯಾಗಿ ನೀಡಲಾಗ್ತಿದೆ. ಡೆಲ್ಟಾ ಪ್ಲಸ್ ಸ್ವಭಾವ ಕೂಡಾ ಡೆಲ್ಟಾ ಸ್ವಭಾವವೇ ಇದೆ. ಕೆಲ ಔಷಧಿ ಮಾತ್ರ ಬದಲಾವಣೆ ಮಾಡಲಾಗ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ನೆರೆಯ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ವೈರಾಣು ಪತ್ತೆ – ಸರ್ಕಾರಕ್ಕೆ ತಜ್ಞರ ಎಚ್ಚರಿಕೆ

    ಪ್ರತಿ ಜಿಲ್ಲೆಗಳಲ್ಲಿ ಡೆಲ್ಟಾ ಪ್ಲಸ್ ಕೇಸ್ ಬಗ್ಗೆ ಟೆಸ್ಟ್ ಗೆ ಕಳಿಸಲಾಗ್ತಿದೆ. ಶೇ.5 ಪ್ರತಿ ಜಿಲ್ಲೆಯಲ್ಲಿ ರಾಂಡಮ್ ಟೆಸ್ಟ್ ಗೆ ಕಳಿಸಲು ನಿರ್ಧಾರ ಮಾಡಲಾಗಿದೆ. ಅನುಮಾನ ಇರೋ ಕಡೆ ಹೆಚ್ಚು ಟೆಸ್ಟ್ ಗೆ ಕಳಿಸುವುದಾಗಿ ಹೇಳಿದರು.

  • ಮನೆಯಲ್ಲೇ ಯೋಗ ದಿನ ಆಚರಿಸಿ: ಡಾ.ಕೆ ಸುಧಾಕರ್

    ಮನೆಯಲ್ಲೇ ಯೋಗ ದಿನ ಆಚರಿಸಿ: ಡಾ.ಕೆ ಸುಧಾಕರ್

    – ಜೂನ್ 21ರಿಂದ ಉಚಿತ ಲಸಿಕೆ ನೀಡಿಕೆ ಆರಂಭ
    – ಒಂದೇ ದಿನ 7 ಲಕ್ಷ ಲಸಿಕೆ

    ಬೆಂಗಳೂರು: ಜೂನ್ 21 ರಂದು ಜಗತ್ತಿನಾದ್ಯಂತ ಯೋಗ ದಿನ ಆಚರಿಸುತ್ತಿದ್ದು, ಈ ಬಾರಿ ಎಲ್ಲರೂ ಮನೆಯಲ್ಲೇ ಇದ್ದು ಆಚರಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಎಂದು ಮನವಿ ಮಾಡಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜೂನ್ 21 ರಂದು ಯೋಗ ದಿನವನ್ನು ಆನ್ ಲೈನ್ ನಲ್ಲೇ ಆಚರಿಸಲಾಗುತ್ತಿದೆ. ‘ಬಿ ವಿತ್ ಯೋಗ ಬಿ ಅಟ್ ಹೋಮ್’ ಮತ್ತು ‘ಯೋಗ ಫಾರ್ ವೆಲ್ ನೆಸ್’ ಎಂಬ ಘೋಷವಾಕ್ಯದಡಿ ಯೋಗ ದಿನ ಆಚರಿಸಲಾಗುತ್ತಿದೆ. ಆದರೆ ಈ ಬಾರಿ ಗುಂಪುಗೂಡಿ ಆಚರಿಸಬಾರದು. ಮುಖ್ಯಮಂತ್ರಿಗಳು ಅಧಿಕೃತ ನಿವಾಸದಲ್ಲೇ ಯೋಗ ಮಾಡಲಿದ್ದು, ನಾನು ಕೂಡ ಪಾಲ್ಗೊಳ್ಳುತ್ತೇನೆ. ಎಲ್ಲರೂ ಮುಂಜಾನೆ 6 ಗಂಟೆಗೆ ಮನೆಯಲ್ಲೇ ಯೋಗ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಿ ಎಂದು ಕೋರಿದರು.

    ಎಸ್-ವ್ಯಾಸ ಸಂಸ್ಥೆಯ ಗೌರವಾಧ್ಯಕ್ಷ ನಾಗೇಂದ್ರ, ಜಗ್ಗಿ ವಾಸುದೇವ್, ರವಿಶಂಕರ್ ಗುರೂಜಿ, ವಚನಾನಂದ ಸ್ವಾಮೀಜಿಗಳ ಯೋಗಾಭ್ಯಾಸದ ವೀಡಿಯೋ ಹಂಚಿಕೊಳ್ಳಲಾಗುವುದು. ಆಯುಷ್ ನ ಎಲ್ಲ ಸಂಸ್ಥೆಗಳ ವಿದ್ಯಾರ್ಥಿಗಳು ಯೋಗ ಮಾಡಲು ಕೋರಲಾಗಿದೆ ಎಂದು ತಿಳಿಸಿದರು.

    ಲಸಿಕಾ ಮೇಳಕ್ಕೆ 7 ಲಕ್ಷ ಗುರಿ:
    ಜೂನ್ 21 ರಂದು ಕೋವಿಡ್ ಲಸಿಕೆ ಮೇಳಕ್ಕೆ ಚಾಲನೆ ದೊರೆಯಲಿದೆ. 18-44 ವರ್ಷದವರಿಗೆ, 45 ವರ್ಷ ಮೇಲ್ಪಟ್ಟವರಿಗೆ, ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು. 14 ಲಕ್ಷ ಕೋವಿಶೀಲ್ಡ್ ಡೋಸ್ ದಾಸ್ತಾನು ಇದ್ದು, ಸೋಮವಾರ 5 ರಿಂದ 7 ಲಕ್ಷ ಡೋಸ್ ನೀಡುವ ಗುರಿ ಇರಿಸಲಾಗಿದೆ. ಇದಕ್ಕೆ ಜನರ ಸಹಕಾರ ಬೇಕಿದೆ. ಈವರೆಗೆ 1.80 ಕೋಟಿ ಲಸಿಕೆ ನೀಡಲಾಗಿದೆ. ಅಂದರೆ ದೇಶದಲ್ಲಿ ನೀಡಿದ 15 ಲಸಿಕೆಯಲ್ಲಿ ಒಂದು ರಾಜ್ಯದ್ದು ಎಂದರು.

    ಹೊಸ ವೈರಾಣು ಅಧ್ಯಯನಕ್ಕೆ ಜಿನೋಮಿಕ್ಸ್ ಸಮಿತಿ ರಚಿಸಲಾಗಿದೆ. ಪ್ರತಿ ಜಿಲ್ಲಾಮಟ್ಟದಲ್ಲಿ ತಜ್ಞರ ಸಮಿತಿ ರಚಿಸಲಾಗುವುದು. ಈ ಸಮಿತಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಿದೆ. ಈ ಮೂಲಕ 3 ನೇ ಅಲೆ ನಿಯಂತ್ರಿಸಲಾಗುವುದು. ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿ 3 ನೇ ಅಲೆ ಸಿದ್ಧತೆ ಕುರಿತು ಪ್ರಾಥಮಿಕ ವರದಿ ನೀಡಿದೆ. ಅದನ್ನು ಮುಖ್ಯಮಂತ್ರಿಗಳಿಗೆ ನೀಡಲಾಗುವುದು. ಅಂತಿಮ ವರದಿ ಬಂದ ಬಳಿಕ 45 ದಿನಗಳಲ್ಲಿ ಕಾರ್ಯರೂಪಕ್ಕೆ ತರಲಾಗುವುದು. ಡೆಲ್ಟಾ ವೈರಾಣು ವೇಗವಾಗಿ ಹರಡುತ್ತಿದೆ. ಇದಕ್ಕಾಗಿ ಡಿಸೆಂಬರ್ ವರೆಗೂ ನಿತ್ಯ ಒಂದೂವರೆ ಲಕ್ಷ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಕೋವಿಡ್ ಎರಡು ಡೋಸ್ ಲಸಿಕೆ ಪಡೆದ 99.9 ರಷ್ಟು ಸೋಂಕು ತಗುಲಿಲ್ಲ. ಸೋಂಕು ಬಂದರೂ ತೀವ್ರ ಸಮಸ್ಯೆಯಾಗಿಲ್ಲ ಎಮದು ಸಚಿವರು ತಿಳಿಸಿದರು.

  • ಆಯುರ್ವೇದದಲ್ಲಿ ಹೆಚ್ಚು ಸಂಶೋಧನೆ ನಡೆಸಿ: ಸುಧಾಕರ್

    ಆಯುರ್ವೇದದಲ್ಲಿ ಹೆಚ್ಚು ಸಂಶೋಧನೆ ನಡೆಸಿ: ಸುಧಾಕರ್

    -ಕುಲಪತಿ ನೇಮಕ ಕುರಿತು ರಾಜ್ಯಪಾಲರೊಂದಿಗೆ ಚರ್ಚೆ
    – ನಾನು ಮಂತ್ರಿಯಾಗಿರುವವರೆಗೂ ಅಪವಾದ ಹೊತ್ತುವರು ಕುಲಪತಿಯಾಗಲು ಸಾಧ್ಯವಿಲ್ಲ

    ಬೆಂಗಳೂರು: ರೋಗ ಬಾರದಂತೆ ತಡೆಯುವ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಹೆಚ್ಚು ಸಂಶೋಧನೆಗಳನ್ನು ನಡೆಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಲೋಪತಿಯಲ್ಲಿ ಸಂಶೋಧನೆಗಳನ್ನು ಮಾಡುವಂತೆ ಆಯುರ್ವೇದದಲ್ಲೂ ಹೆಚ್ಚು ಸಂಶೋಧನೆಗಳು ನಡೆಯಬೇಕು. ಎಷ್ಟೇ ನಂಬಿಕೆ ಇದ್ದರೂ ಅದನ್ನು ಸಾಕ್ಷಿ ಸಮೇತ ನಿರೂಪಿಸಬೇಕು. ಸಂಶೋಧನೆ ಮತ್ತು ಆವಿಷ್ಕಾರವನ್ನು ಹೆಚ್ಚಾಗಿ ಮಾಡಬೇಕು. ಪ್ರತಿ ಮೆಡಿಕಲ್ ಕಾಲೇಜುಗಳಲ್ಲಿ ಕೂಡ ಸಂಶೋಧನೆಗಳನ್ನು ಹೆಚ್ಚಿಸಬೇಕಿದೆ. ಸಂಸ್ಥೆಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಸಂಶೋಧನೆ ಅಗತ್ಯ ಎಂದರು.

    ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಕೋವಿಡ್ ಲಸಿಕೆ ತಯಾರಿಸಿದೆ. ಅದೇ ರೀತಿ, ರಾಜೀವ್ ಗಾಂಧಿ ವಿವಿ ಕೂಡ ಯಾವುದೇ ರೋಗಗಳಿಗೆ ಪರಿಹಾರ ಕಂಡು ಹಿಡಿಯುವಂತೆ ಸಂಶೋಧನೆ ನಡೆಸಬೇಕು. ಎನ್‍ಸಿಡಿ ಸಮಸ್ಯೆಯಿಂದಾಗಿ ಬಡ ರಾಷ್ಟ್ರಗಳಲ್ಲಿ ವಾರ್ಷಿಕ 28 ದಶಲಕ್ಷ ಜನರು ಮೃತರಾಗುತ್ತಿದ್ದಾರೆ. ಭಾರತದಲ್ಲಿ ಕೂಡ ಈ ಸಮಸ್ಯೆ ಹೆಚ್ಚಿದೆ. ಈ ರೋಗಗಳಿಗೆ ಆಯುರ್ವೇದ ಪದ್ಧತಿ ಹೆಚ್ಚು ಪರಿಹಾರ ನೀಡುತ್ತದೆ ಎಂದು ತಿಳಿಸಿದರು.

    ರಾಜ್ಯಪಾಲರೊಂದಿಗೆ ಚರ್ಚೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಚರ್ಚಿಸಬೇಕಾಗಿತ್ತು. ಆದರೆ ಕೋವಿಡ್ ನಿಂದಾಗಿ ರಾಜ್ಯಪಾಲರು ಚರ್ಚೆ ನಡೆಸಲು ಆಗಿಲ್ಲ. ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ. ರಾಜ್ಯಪಾಲರ ಭೇಟಿಗೆ ಸಮಯ ಕೇಳಿ ನಂತರ ಚರ್ಚೆ ಮಾಡುತ್ತೇನೆ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ. ಅವರು ಕೆಲವು ವಿಷಯಗಳನ್ನು ಹೇಳಿದ್ದಾರೆ. ಆ ವಿಷಯಗಳನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

    ಶುದ್ಧ ಚಾರಿತ್ರ್ಯವಿರುವವರು ಕುಲಪತಿಯಾಗಲು ಸಾಧ್ಯ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಸ್ಥಾನ ತುಂಬುವ ಬಗ್ಗೆ ಚರ್ಚಿಸಲಾಗುವುದು. ಈ ಸ್ಥಾನಕ್ಕೆ ಯಾವ ರೀತಿಯ ಸಂಸ್ಕಾರ, ಯಾವ ರೀತಿಯ ಶೈಕ್ಷಣಿಕ ಅರ್ಹತೆ ಇರುವ ಉತ್ತಮರನ್ನು ತರಬೇಕೆಂಬ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇದೆ. ಆ ನಿಟ್ಟಿನಲ್ಲಿ ಸ್ಥಾನ ತುಂಬಬೇಕೆಂಬುದನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು. ಅನುಮಾನಕ್ಕೂ ಅವಕಾಶವಿಲ್ಲದ ಶುದ್ಧ ಚಾರಿತ್ರ್ಯವಿರುವ ವ್ಯಕ್ತಿ ಮಾತ್ರ ಕುಲಪತಿಯಾಗಲು ಯೋಗ್ಯವೇ ಹೊರತು ಯಾವುದೇ ಅಪವಾದ ಹೊತ್ತುಕೊಂಡವರು ಕುಲಪತಿ ಕುರ್ಚಿಯಲ್ಲಿ ಕೂರಲು ಸಾಧ್ಯವಿಲ್ಲ. ಕನಿಷ್ಠಪಕ್ಷ ನಾನು ಸಚಿವನಾಗಿರುವವರೆಗೂ ಅದು ಸಾಧ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

    ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ರಾಂಡಮ್ ಪರೀಕ್ಷೆ ಮಾಡಬೇಕೆಂದು ಸೂಚಿಸಲಾಗಿದೆ. ಅನ್ ಲಾಕ್ ಹಂತದಲ್ಲೇ ಬಹಳಷ್ಟು ಜನರು ಹೊರಗೆ ಓಡಾಡುತ್ತಿದ್ದಾರೆ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮಾಲ್, ಥಿಯೇಟರ್, ಹೋಟೆಲ್ ಎಲ್ಲವನ್ನೂ ತೆರೆಯಲು ಅವಕಾಶ ನೀಡಿಲ್ಲ. ಆದರೂ ಕೈಗಾರಿಕೆಗೆ ಅವಕಾಶ ನೀಡಿರುವುದರಿಂದ ಜನರು ಹೊರಗೆ ಓಡಾಡುತ್ತಿರಬಹುದು. ಇದಕ್ಕೆ ಪೂರಕವಾಗಿ ಪರೀಕ್ಷೆ ಸಂಖ್ಯೆಯನ್ನೂ ಹೆಚ್ಚಿಸಲಾಗುವುದು ಎಂದರು.

    ರಾಜ್ಯದಲ್ಲಿ ಕೋವಿಡ್ ನಿಂದ 25 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. 1.70 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲರಿಗೂ ಲಸಿಕೆ ನೀಡಲಾಗಿರುತ್ತದೆ. ಕೋವಿಡ್ ಮೂರನೇ ಅಲೆಗೆ ಸಿದ್ಧತೆಯಾಗಿ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ವಿಭಾಗ ಬಲಪಡಿಸಲಾಗುತ್ತಿದೆ. 1,763 ವೈದ್ಯರು, ವೈದ್ಯಾಧಿಕಾರಿಗಳನ್ನು ಐತಿಹಾಸಿಕದಂತೆ ಅತಿ ಕಡಿಮೆ ಅವಧಿಯಲ್ಲಿ ನೇಮಿಸಲಾಗಿದೆ. ವೈದ್ಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದರೂ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಲಭ್ಯತೆ ಕಡಿಮೆ. ವೈದ್ಯರು ನಗರಗಳಲ್ಲೇ ಆಯ್ಕೆ ಮಾಡಿಕೊಳ್ಳುತ್ತಾರೆ. ಹೆಚ್ಚಿನ ವೈದ್ಯರು ಹಳ್ಳಿಗಳಲ್ಲಿ ಕೆಲಸ ಮಾಡುವ ಛಲ ಹೊಂದಬೇಕು ಎಂದು ತಿಳಿಸಿದರು.  ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಬಾವಿ ಪಾಲಾದ ಕಾರು

  • HLH ರಾಜ್ಯದಲ್ಲಿ ಹಬ್ಬಿಲ್ಲ, ಒಂದೆರಡು ಪ್ರಕರಣಗಳು ಮಾತ್ರ ಪತ್ತೆಯಾಗಿವೆ: ಸುಧಾಕರ್

    HLH ರಾಜ್ಯದಲ್ಲಿ ಹಬ್ಬಿಲ್ಲ, ಒಂದೆರಡು ಪ್ರಕರಣಗಳು ಮಾತ್ರ ಪತ್ತೆಯಾಗಿವೆ: ಸುಧಾಕರ್

    ಚಿಕ್ಕಮಗಳೂರು: ಹಿಮೋಫ್ಯಾಗೋಸೈಟಿಕ್ ಲಿಂಫೋಹಿಸ್ಟಿಯೋಸಿಸ್(ಎಚ್‍ಎಲ್‍ಎಚ್) ಪ್ರಕರಣ ರಾಜ್ಯದಲ್ಲಿ ಬೇರೆ ಎಲ್ಲೂ ಜನರಲ್ ಆಗಿ ಕಂಡು ಬಂದಿಲ್ಲ. ಎಲ್ಲೋ ಒಂದೆರಡು ಕೇಸ್ ಪತ್ತೆಯಾಗಿವೆ ಅಷ್ಟೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು.

    ಜಿಲ್ಲೆಯಲ್ಲಿ ಕೊರೊನಾ ಕೇಸ್ ಹೆಚ್ಚಿರುವ ಹಿನ್ನೆಲೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದು, ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಎಷ್ಟು ಬೆಡ್ ಖಾಲಿ ಇದೆ, ಎಷ್ಟು ವೆಂಟಿಲೇಟರ್ ಖಾಲಿ ಇದೆ ಎಂದು ಆಸ್ಪತ್ರೆಯಲ್ಲಿ ಬೋರ್ಡ್ ಹಾಕಬೇಕು. ಎಲ್ಲಿದೆ ಬೋರ್ಡ್ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸರ್ಜನ್‍ಗೆ ತರಾಟೆಗೆ ತೆಗೆದುಕೊಂಡರು. ಬಳಿಕ ಆಕ್ಸಿಜನ್ ಘಟಕದ ತಪಾಸಣೆ ನಡೆಸಿದರು. ಇದನ್ನೂ ಓದಿ: ಕೋವಿಡ್ ಬಳಿಕ ಮಕ್ಕಳಲ್ಲಿ ಕಾಣಿಸಿಕೊಳ್ಳುವ HLH ಸಮಸ್ಯೆ ರಾಯಚೂರಿನಲ್ಲಿ ಪತ್ತೆ

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಜಿಲ್ಲೆಗಳಲ್ಲಿ ನಿಧಾನವಾಗಿ ಪಾಸಿಟಿವಿಟಿ ಹೆಚ್ಚಾಗಿದೆ. ಚಿಕ್ಕಮಗಳೂರಿನಲ್ಲಿ ಒಂದನೇ ಅಲೆಯಲ್ಲಿ ಕೂಡ ತಡವಾಗಿ ಪಾಸಿಟಿವಿಟಿ ಹೆಚ್ಚಾಗಿತ್ತು, ತಡವಾಗಿ ಕಡಿಮೆಯಾಗಿತ್ತು. ಈ ಬಾರಿಯೂ ತಡವಾಗಿ ಪಾಸಿಟಿವಿಟಿ ಹೆಚ್ಚಾಗಿದೆ. ಮುಂದಿನ ಎರಡು ವಾರಗಳಲ್ಲಿ ಸಂಪೂರ್ಣ ಹತೋಟಿಗೆ ಬಂದು ಶೇ.5ರ ಒಳಗೆ ಪಾಸಿಟಿವಿಟಿ ರೇಟ್ ಬರಲಿದೆ. ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಮಾಡಿರುವ ಹಣವನ್ನೇ ತೆಗೆದುಕೊಳ್ಳಬೇಕು. ಹೆಚ್ಚಿನ ಹಣ ವಸೂಲಿ ಮಾಡಿದರೆ ಅಂತಹ ಆಸ್ಪತ್ರೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

    ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಯಡಿಯೂರಪ್ಪನವರು ಕುರ್ಚಿಯಲ್ಲಿ ಕೂತಿದ್ದಾರೆ. ಈ ಕುರಿತು ನಮ್ಮ ಪ್ರಧಾನ ಕಾರ್ಯದರ್ಶಿಗಳೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸಿಎಂ ಕುರ್ಚಿ ಬಗೆಗಿನ ಮಾತುಕತೆ ಅಪ್ರಸ್ತುತ ಎಂದರು.

    ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಜಿಲ್ಲಾ ಪಂಚಾಯಿತಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ, ಜಿಲ್ಲೆಯಲ್ಲಿನ ಕೊರೊನಾ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದರು. ಇನ್ನು ಎರಡು ವಾರಗಳಲ್ಲಿ ಜಿಲ್ಲೆಯಲ್ಲೂ ಕೊರೊನಾ ಸಂಪೂರ್ಣ ಕಂಟ್ರೋಲ್‍ಗೆ ಬರಲಿದೆ ಎಂದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ, ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಶಾಸಕ ಸುರೇಶ್, ಬೆಳ್ಳಿ ಪ್ರಕಾಶ್ ಹಾಗೂ ಎಂ.ಕೆ.ಕುಮಾರಸ್ವಾಮಿ ಉಪಸ್ಥಿತರಿದ್ದರು.

    ಎಚ್‍ಎಲ್‍ಎಚ್ ಎಂದರೇನು?

    ಹಿಮೋಫ್ಯಾಗೋಸೈಟಿಕ್ ಲಿಂಫೋಹಿಸ್ಟಿಯೋಸಿಸ್ (ಎಚ್‍ಎಲ್‍ಎಚ್) ಸಮಸ್ಯೆ ಅತಿ ವಿರಳವಾಗಿ ಕಾಣಿಸಿಕೊಳ್ಳುವ ಬಿಕ್ಕಟ್ಟಾಗಿದೆ. ವಿಪರೀತ ಜ್ವರ, ವಾಂತಿ ಭೇದಿ, ಹೊಟ್ಟೆನೋವು ಇದರ ಲಕ್ಷಣಗಳು. ಬಿಳಿ ರಕ್ತಕಣ, ಪ್ಲೇಟ್ ಲೆಟ್ ಸಂಖ್ಯೆ ಗಣನೀಯ ಇಳಿಕೆ, ಸಿಆರ್ ಪಿ ಹೆಚ್ಚಳದಿಂದ ಮಕ್ಕಳಲ್ಲಿ ಸಮಸ್ಯೆಗಳು ಉಂಟಾಗುತ್ತವೆ.

  • ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ: ಕೋವಿಡ್ 19 ನಿರ್ವಹಣೆಗೆ ಮೆಚ್ಚುಗೆ

    ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ: ಕೋವಿಡ್ 19 ನಿರ್ವಹಣೆಗೆ ಮೆಚ್ಚುಗೆ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಆಶಾ ಕಾರ್ಯಕರ್ತೆಯರೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಕೋವಿಡ್ 19 ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಮುಕ್ತ ಕಂಠದಿಂದ ಶ್ಲಾಘಿಸಿದರು.

    ಆಶಾ ಕಾರ್ಯಕರ್ತೆಯರ ಪರಿಶ್ರಮ ಹಾಗೂ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯನಿರ್ವಹಿಸುವುದನ್ನು ಗಮನಿಸಿ, ಕೋವಿಡ್ 19 ಎರಡನೇ ಅಲೆಯ ಪರಿಹಾರ ಪ್ಯಾಕೇಜ್ ನಡಿ 3 ಸಾವಿರ ರೂ. ಸಹಾಯಧನ ಘೋಷಿಸಿರುವುದಾಗಿ ತಿಳಿಸಿದರು.

    ವಿವಿಧ ಜಿಲ್ಲೆಗಳ ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಅವರ ಆರೋಗ್ಯದ ಸ್ಥಿತಿ ಗತಿ, ಕಾರ್ಯ ನಿರ್ವಹಣೆ, ಅವರ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳ ವಿವರ, ಸಾರ್ವಜನಿಕರು, ಮೇಲಾಧಿಕಾರಿಗಳ ಸಹಕಾರ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.

    ಕೋವಿಡ್ ನಿರ್ವಹಣೆಯ ಸಂದರ್ಭದಲ್ಲಿ ಮೊದಲಿಗೆ ಸಾರ್ವಜನಿಕರು ಭಯ ಭೀತರಾಗಿದ್ದರು. ಪರೀಕ್ಷೆ ಮಾಡಿಸಲು, ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದರು. ಕೋವಿಡ್ ಸೋಂಕಿತರು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಾಗಲು ಭಯ ಪಡುತ್ತಿದ್ದರು. ಆದರೆ ಇದೀಗ ಸಹಕರಿಸುತ್ತಿದ್ದಾರೆ ಎಂದು ಆಶಾ ಕಾರ್ಯಕರ್ತೆಯರು ತಮ್ಮ ಅನುಭವಗಳನ್ನು ಹಂಚಿಕೊಂಡರು.

    ಲಸಿಕೆ ಹಾಕಿಸಲು ತಮ್ಮ ಗ್ರಾಮದ ಜನರ ಮನವೊಲಿಸಿ, ಮೇಲಾಧಿಕಾರಿಗಳ ಸಹಾಯದಿಂದ ವಾಹನ ವ್ಯವಸ್ಥೆ ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ದು ಲಸಿಕೆ ಹಾಕಿಸಿದ್ದನ್ನು ಸ್ಮರಿಸಿಕೊಂಡರು.

    ಕೋವಿಡ್ ಪೀಡಿತರಾಗಿದ್ದ ಶಿವಮೊಗ್ಗ ಜಿಲ್ಲೆ ಮುಂಬಾರಿನ ಶಾರದಾ ಕೆ.ವಿ. ಕೋವಿಡ್ ಕೇರ್ ಸೆಂಟರಿನಿಂದಲೇ ಸಂವಾದದಲ್ಲಿ ಪಾಲ್ಗೊಂಡರು. ಕಳೆದ 15 ದಿನಗಳ ವರೆಗೆ ತಮ್ಮ ಗ್ರಾಮ ಕೋವಿಡ್ ಮುಕ್ತವಾಗಿತ್ತು. ಇದೀಗ ಏಳು ಪ್ರಕರಣಗಳು ಕಂಡು ಬಂದಿವೆ. ಇಬ್ಬರು ಹೋಂ ಐಸೊಲೇಷನ್ ನಲ್ಲಿದ್ದು, ಉಳಿದವರು ಕೋವಿಡ್ ಕೇರ್ ಸೆಂಟರಿನಲ್ಲಿ ದಾಖಲಾಗಿದ್ದಾರೆ ಎಂದು ವಿವರಿಸಿದರು.

    ಜನರು ಲಸಿಕೆಯ ಸುರಕ್ಷತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ, ತಮ್ಮ ಪತಿಗೇ ಮೊದಲಿಗೆ ಲಸಿಕೆ ಕೊಡಿಸಿ, ಜನರಲ್ಲಿ ವಿಶ್ವಾಸ ಮೂಡಿಸಿದ ಅನುಭವವನ್ನು ರಾಮನಗರದ ಶಿವಲಿಂಗಮ್ಮ ಹಂಚಿಕೊಂಡರು. ವಿಜಯಪುರ ಜಿಲ್ಲೆಯ ದೀಪಾ ಬಜ್ಜನವರ ಅವರು ಕೋವಿಡ್ ಕೇರ್ ಸೆಂಟರಿಗೆ ದಾಖಲಾಗಲು ಜನರು ಹಿಂದೇಟು ಹಾಕಿದ ಅನುಭವವನ್ನು ವಿವರಿಸಿದರು.

    ಸಬ್ಬಮಂಗಲದ ರತ್ನಮ್ಮ ಅವರು, ಮನೆ ಮನೆಗೆ ಭೇಟಿ ನೀಡಿ, ಅರಿವು ಮೂಡಿಸುವುದರೊಂದಿಗೆ ಸೋಂಕಿತರಿಗೆ ಪೌಷ್ಟಿಕ ಆಹಾರ ಸೇವಿಸುವಂತೆ ಮನವರಿಕೆ ಮಾಡುತ್ತಿರುವುದಾಗಿ ತಿಳಿಸಿದರು. ಕೊಪ್ಪಳ ಜಿಲ್ಲೆ ನವಲಿ ಗ್ರಾಮದ ಲಕ್ಷ್ಮವ್ವ ನಾಯಕ್, ತಮ್ಮ ಗ್ರಾಮದಲ್ಲಿ 60 ವರ್ಷ ಮೇಲ್ಪಟ್ಟ 120 ಜನರಲ್ಲಿ 115 ಜನರಿಗೆ ಲಸಿಕೆ ಹಾಕಿಸಿರುವುದಾಗಿ ತಿಳಿಸಿದರು ಬೆಳಗಾವಿ ಜಿಲ್ಲೆ ಸುರೇಬಾನದ ಶಾರದಾ ಮುದ್ದನ್ನವರ ಅವರು ಬಡಜನರ ಚಿಕಿತ್ಸೆಗೆ ದಾನಿಗಳಿಂದ ನೆರವು ದೊರಕಿಸುವ ಪ್ರಯತ್ನ ಮಾಡಿರುವುದನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

    ಸಂವಾದದ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಗ್ರಾಮಸ್ಥರಿಗೆ ಕೋವಿಡ್ ಲಸಿಕೆ ಸುರಕ್ಷಿತ ಎಂಬುದನ್ನು ಮನವರಿಕೆ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಬೇಕು. ಜೊತೆಗೆ, ಐ ಎಲ್ ಐ, ಸಾರಿ ಪ್ರಕರಣಗಳು ಕಂಡುಬಂದಲ್ಲಿ ಅವರಿಗೆ ಕೂಡಲೇ ಪರೀಕ್ಷೆ ಮಾಡಿಸಿ, ಚಿಕಿತ್ಸೆ ಒದಗಿಸಲು ಕ್ರಮ ವಹಿಸುವಂತೆ ಸಲಹೆ ನೀಡಿದರು.

    ಧಾರವಾಡ ಜಿಲ್ಲೆ ಅಮ್ಮಿನಭಾವಿಯ ಪ್ರೇಮಾ ಪ್ರಕಾಶ್ ಕಬ್ಬೂರು, ದಕ್ಷಿಣ ಕನ್ನಡ ಜಿಲ್ಲೆ ಸುಲ್ಕೇರಿಯ ಹೇಮಲತಾ, ರಾಮನಗರ ಜಿಲ್ಲೆಯ ದೊಡ್ಡಗಂಗವಾಡಿಯ ಶಿವಲಿಂಗಮ್ಮ, ವಿಜಯಪುರ ಜಿಲ್ಲೆ ಕಂಬಾಗಿಯ ದೀಪಾ ಬಜ್ಜನವರ್, ಬೆಂಗಳೂರು ನಗರ ಜಿಲ್ಲೆ ಸಬ್ಬಮಂಗಲದ ರತ್ನಮ್ಮ, ಬಳ್ಳಾರಿ ಜಿಲ್ಲೆ ದಬ್ಬೂರಿನ ಪರಿಮಳಾ, ಶಿವಮೊಗ್ಗ ಜಿಲ್ಲೆ ಮುಂಬಾರಿನ ಶಾರದಾ ಕೆ.ವಿ., ಕೊಪ್ಪಳ ಜಿಲ್ಲೆ ನವಲಿಯ ಲಕ್ಷ್ಮವ್ವ ನಾಯಕ್, ರಾಯಚೂರು ಜಿಲ್ಲೆ ಗಣಮೂರಿನ ಇಂದಿರಾ, ಬೆಳಗಾವಿ ಜಿಲ್ಲೆ ಸುರೇಬಾನದ ಶಾರದಾ ಮುದ್ದನ್ನವರ ಅವರು ಮುಖ್ಯಮಂತ್ರಿಯವರೊಂದಿಗೆ ಸಂವಾದ ನಡೆಸಿದರು.

    ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ.ಕೆ.ವಿ. ತ್ರಿಲೋಕಚಂದ್ರ ಉಪಸ್ಥಿತರಿದ್ದರು.

  • ತಜ್ಞರ ವರದಿ ಆಧರಿಸಿ ಕೋವಿಡ್ ಮೂರನೇ ಅಲೆ ತಡೆಯಲು ಕ್ರಮ: ಸುಧಾಕರ್

    ತಜ್ಞರ ವರದಿ ಆಧರಿಸಿ ಕೋವಿಡ್ ಮೂರನೇ ಅಲೆ ತಡೆಯಲು ಕ್ರಮ: ಸುಧಾಕರ್

    ಚಿಕ್ಕಬಳ್ಳಾಪುರ: ಸಂಭವನೀಯ ಕೋವಿಡ್ ಮೂರನೇ ಅಲೆ ತಡೆಯಲು ಸರ್ಕಾರ ಸರ್ವ ಸಿದ್ಧತೆಗಳನ್ನ ಮಾಡಿಕೊಳ್ಳಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಸಧ್ಯ ಬ್ಲ್ಯಾಕ್ ಫಂಗಸ್ ಗೆ ಔಷಧಿ ಕೊರತೆ ಇಲ್ಲ. ನಿನ್ನೆ 8,700 ವಯಲ್ಸ್ ಲೈಫೋಜೋಮಲ್ ಅಂಪಿಟೆರಿಸನ್ ರಾಜ್ಯಕ್ಕೆ ಬಂದಿದೆ. ಇದುವರೆಗೂ 18,000 ವಯಲ್ಸ್ ರಾಜ್ಯಕ್ಕೆ ಬಂದಿದೆ. 2-3 ದಿನದಿಂದ ಔಷಧಿ ಸರಬರಾಜು, ಪೂರೈಕೆ ಚೆನ್ನಾಗಿ ಆಗುತ್ತಿದೆ. ಈ ವಾರದಲ್ಲಿ ಸಹ ಹೆಚ್ಚು ಔಷಧ ಸರಬರಾಜು ಆಗಲಿದೆ. ರೆಮ್‍ಡಿಸಿವಿರ್ ನ ಸಮಸ್ಯೆ ಬಗೆಹರಿದಂತೆ ಈ ಸಮಸ್ಯೆ ಸಹ ಬಗೆಹರಿದು ಔಷಧಿ ಸಿಗಲಿದೆ. ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ- ಶಸ್ತ್ರಚಿಕಿತ್ಸೆ ಉಚಿತವಾಗಿ ಮಾಡಲಾಗುತ್ತಿದೆ ಎಂದರು.

    ಮತ್ತೊಂದೆಡೆ ಮೂರನೇ ಅಲೆ ಕುರಿತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಡಾ.ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮತಿ ರಚನೆ ಮಾಡಲಾಗಿದೆ. 12-13 ಮಂದಿ ಹೆಸರಾಂತ ವೈದ್ಯರು, ಮಕ್ಕಳ ಮಾನಸಿಕ ತಜ್ಞರು ಸಮತಿಯಲ್ಲಿ ಇದ್ದಾರೆ. 0-12-18 ವರ್ಷದವರಗೆ ಯಾವ ರೀತಿ ಕೊರೊನಾ ಭಾಧಿಸಲಿದೆ? ಯಾವ ರೀತಿ ಚಿಕಿತ್ಸೆ ಕೊಡಬೇಕು ಎಂದು ಎಲ್ಲಾ ಆಯಾಮಗಳಲ್ಲಿ ಅಧ್ಯಯನ ಮಾಡಿ ಶೀಘ್ರವೇ ವರದಿ ನೀಡಲಿದ್ದಾರೆ. ಇದಕ್ಕೆ ಪೂರಕವಾಗಿ ಸರ್ಕಾರ ಕ್ರಮ, ಸಿದ್ಧತೆಗಳನ್ನ ಮಾಡಿಕೊಳ್ಳಲಿದೆ ಎಂದರು.