Tag: ಡಾ ಕೆ ಸುಧಾಕರ್

  • ಯಲಹಂಕದಲ್ಲಿ ಸುಧಾಕರ್‌ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ವಿಶ್ವನಾಥ್ ಪ್ರತಿಜ್ಞೆ

    ಯಲಹಂಕದಲ್ಲಿ ಸುಧಾಕರ್‌ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ವಿಶ್ವನಾಥ್ ಪ್ರತಿಜ್ಞೆ

    ಚಿಕ್ಕಬಳ್ಳಾಪುರ: ಕಳೆದ ಬಾರಿ 2019ರಲ್ಲಿ ಯಲಹಂಕ (Yalahanka) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ (BJP) 45,000 ಮತಗಳ ಲೀಡ್ ದೊರೆತಿತ್ತು. ಈ ಬಾರಿ ಎನ್‌ಡಿಎಗೆ (NDA) 1 ಲಕ್ಷಕ್ಕೂ ಹೆಚ್ಚು ಮತಗಳ ಲೀಡ್ ಸಿಗಲಿದೆ ಎಂದು ಶಾಸಕ ಎಸ್‌ಆರ್ ವಿಶ್ವನಾಥ್ (SR Vishwanath) ವಿಶ್ವಾಸ ವ್ಯಕ್ತಪಡಿಸಿದರು.

    ಯಲಹಂಕ ವಿಧಾನಸಭಾ ಕ್ಷೇತ್ರದ ತೋಟದಗುಡ್ಡಹಳ್ಳಿ, ಅಂಚೆಪಾಳ್ಯ ಮೊದಲಾದ ಕಡೆಗಳಲ್ಲಿ ಶಾಸಕ ಎಸ್‌ಆರ್ ವಿಶ್ವನಾಥ್ ಅವರೊಂದಿಗೆ ಡಾ.ಕೆ ಸುಧಾಕರ್ ಪ್ರಚಾರ ಮತ್ತು ಸಭೆ ನಡೆಸಿದರು. ಬಳಿಕ ಮಾತನಾಡಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ (Dr K Sudhakar), ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಂದಾದ ಬಳಿಕ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪರಿಸ್ಥಿತಿ ಉಂಟಾಗಿದೆ. 80% ರಷ್ಟು ಮತಗಳು ಬಿಜೆಪಿಗೆ ದೊರೆಯಲಿದೆ. ಆದರೆ ಕಾಂಗ್ರೆಸ್‌ಗೆ 20% ರಷ್ಟು ಮತಗಳು ದೊರೆಯುವುದು ಅನುಮಾನ. ಇದಕ್ಕೆ ಶಾಸಕರ ಅಭಿವೃದ್ಧಿ ಕಾರ್ಯಗಳೇ ಕಾರಣ ಎಂದರು. ಇದನ್ನೂ ಓದಿ: ರಾಜ್ಯದ ವಿವಿಧೆಡೆ ಮಳೆ ಅಬ್ಬರ; ಶಿವಮೊಗ್ಗ, ಬೀದರ್‌ನಲ್ಲಿ ವರುಣಾರ್ಭಟಕ್ಕೆ ಇಬ್ಬರು ಬಲಿ – ಇನ್ನೂ 3 ದಿನ ಮಳೆ ಮುನ್ಸೂಚನೆ

    ಯಲಹಂಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಂಘಟನೆ ಶಕ್ತಿಯುತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಸಮಾಗಮದಿಂದ ಇಲ್ಲಿ ಹೆಚ್ಚು ಲಾಭವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ದುಬೈ ಬರೋ ಪ್ಲ್ಯಾನ್ ಇದ್ದರೆ ಮುಂದಕ್ಕೆ ಹಾಕಿ- ಭಾರತದ ರಾಯಭಾರಿ ಸೂಚನೆ

  • ನಾನೇನು ತಪ್ಪು ಮಾಡಿಲ್ಲ, 10 ತಿಂಗ್ಳು ಅಜ್ಞಾತವಾಸ ಅನುಭವಿಸಿದ್ದೇನೆ: ಸುಧಾಕರ್ ಕಣ್ಣೀರು

    ನಾನೇನು ತಪ್ಪು ಮಾಡಿಲ್ಲ, 10 ತಿಂಗ್ಳು ಅಜ್ಞಾತವಾಸ ಅನುಭವಿಸಿದ್ದೇನೆ: ಸುಧಾಕರ್ ಕಣ್ಣೀರು

    ಚಿಕ್ಕಬಳ್ಳಾಪುರ: ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಡಾ.ಕೆ.ಸುಧಾಕರ್ (Dr. K. Sudhakar) ಇಂದು ಸಹಸ್ರಾರು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿ ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.

    ಡಾ.ಕೆ ಸುಧಾಕರ್ ಪರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಮತಯಾಚನೆ ಮಾಡಿದರು. ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಸಾವಿರಾರು ಮಂದಿಯನ್ನ ಉದ್ದೇಶಿಸಿ ಮಾತನಾಡಿದ ಡಾ.ಕೆ.ಸುಧಾಕರ್, ನಾನು ಎಂದೂ ರಾಜಕೀಯ ಜಾತಿ ಮಾಡಿದವನಲ್ಲ. ನನ್ನನ್ನ ಜಾತಿಯಿಂದ ನೋಡಬೇಡಿ. ಎಲ್ಲ ಸಮುದಾಯಗಳನ್ನ ನಾನು ಸಮನಾಗಿ ಕಾಣುತ್ತೇನೆ ಅಂತ ಭಗವಂತನ ಮೇಲೆ ಪ್ರಮಾಣ ಮಾಡುತ್ತೇನೆ ಎಂದರು.

    ಮಣ್ಣಿನ ಮಗನಾಗಿ ನನಗೆ ಮತ್ತೊಮ್ಮೆ ಸೇವೆ ಮಾಡಲು ಅವಕಾಶ ಮಾಡಿಕೊಡಿ. ನನ್ನನ್ನು ದೂರ ಮಾಡಿದ್ದೀರಿ. 10 ತಿಂಗಳಿಂದ ನಾನು ಅಜ್ಞಾತವಾಸ ಅನುಭವಿಸಿದ್ದೇನೆ. ನಾನೇನು ತಪ್ಪು ಮಾಡಿಲ್ಲ, ನಿಮ್ಮ ಸೇವೆಯನ್ನ ಮಗನಾಗಿ ಮಾಡುತ್ತೇನೆ. ಮತ್ತೊಮ್ಮೆ ಅವಕಾಶ ಕೊಡಿ ಅಂತ ಭಾವುಕರಾಗಿ ಕಣ್ಣೀರಿಟ್ಟರು. ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡಗೆ ಜಾಮೀನು

    ಬಳಿಕ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ಜೆಡಿಎಸ್- ಬಿಜೆಪಿ (JDS- BJP) ಮೈತ್ರಿ ನಮ್ಮ ಸ್ವಾರ್ಥಕ್ಕಾಗಿ ಅಲ್ಲ. ಸುಧಾಕರ್ ಹಾಗೂ ನಾನು ಸೇರಿ ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆಗಳನ್ನ ತರುತ್ತೇವೆ. ಇಲ್ಲವಾದಲ್ಲಿ ನಾವು ರಾಜಕೀಯದಿಂದಲೇ ನಿವೃತ್ತಿ ಆಗುತ್ತೇವೆ ಅಂತ ಸಾವಲು ಹಾಕಿದರು.

  • ಚಿಕ್ಕಬಳ್ಳಾಪುರ ಕ್ಷೇತ್ರವನ್ನು ವಿಶ್ವದಲ್ಲೇ ಮಾದರಿ ಕ್ಷೇತ್ರ ಮಾಡುವ ಪ್ರಯತ್ನ ಮಾಡ್ತೀನಿ: ಕೆ.ಸುಧಾಕರ್

    ಚಿಕ್ಕಬಳ್ಳಾಪುರ ಕ್ಷೇತ್ರವನ್ನು ವಿಶ್ವದಲ್ಲೇ ಮಾದರಿ ಕ್ಷೇತ್ರ ಮಾಡುವ ಪ್ರಯತ್ನ ಮಾಡ್ತೀನಿ: ಕೆ.ಸುಧಾಕರ್

    – ಮೋದಿ ಕಾಲಘಟ್ಟದಲ್ಲಿ ಅವಕಾಶ ಸಿಕ್ಕಿರೋದು ಜನ್ಮ-ಜನ್ಮಗಳ ಸೌಭಾಗ್ಯ
    – ಬಿಜೆಪಿ-ಜೆಡಿಎಸ್ ಹಾಲು, ಜೇನಿನಂತೆ ಬೆರೆತು ಕೆಲಸ ಮಾಡ್ತೀವಿ ಎಂದ ಸುಧಾಕರ್

    ಬೆಂಗಳೂರು: ನನ್ನ ಕ್ಷೇತ್ರವನ್ನು ವಿಶ್ವದಲ್ಲೇ ಮಾದರಿ ಕ್ಷೇತ್ರ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಚಿಕ್ಕಬಳ್ಳಾಪುರ (Chikkaballapura) ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್ (Dr.K Sudhakar) ಹೇಳಿದ್ದಾರೆ.

    ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅವರು, ಮಾಜಿ ಸಿಎಂ ಕುಮಾರಸ್ವಾಮಿಯವರನ್ನು (H.D Kumaraswamy) ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ (BJP) ಹೈಕಮಾಂಡ್ ನಾಯಕರು, ಮೋದಿ, ಯಡಿಯೂರಪ್ಪ, ಬೊಮ್ಮಾಯಿ, ವಿಜಯೇಂದ್ರ, ಕುಮಾರಸ್ವಾಮಿಯವರ ಸಹಕಾರದಿಂದ ಲೋಕಸಭಾ ಚುನಾವಣೆ ಎದುರಿಸುತ್ತಿದ್ದೇನೆ. ಎಲ್ಲರಿಗೂ ಹೃದಯ ಪೂರ್ವಕವಾಗಿ ಕೃತಜ್ಞತೆ ಹೇಳುತ್ತೇನೆ. ಮಾಜಿ ಶಾಸಕರಾದ ಎಂಟಿಬಿ ನಾಗರಾಜ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಹಾಗೂ ಜೆಡಿಎಸ್ ಮುಖಂಡರೆಲ್ಲರೂ ಆಶೀರ್ವಾದ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರವನ್ನ ಮಾದರಿ ಲೋಕಸಭಾ ಕ್ಷೇತ್ರವನ್ನಾಗಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮೋದಿಯವರ ಕಾಲಘಟ್ಟದಲ್ಲಿ ನನಗೆ ಅವಕಾಶ ಸಿಕ್ಕಿರುವುದು ಜನ್ಮ ಜನ್ಮಗಳ ಸೌಭಾಗ್ಯ ಎಂದಿದ್ದಾರೆ. ಇದನ್ನೂ ಓದಿ: ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ‘ಮಂಡಿ’ ಅಖಾಡದಲ್ಲಿ ಕಂಗನಾ

    ಹಾಲು-ಜೇನಿನಂತೆ ಬೆರೆತು ಕೆಲಸ ಮಾಡ್ತೀವಿ:
    ನಮ್ಮ ಕ್ಷೇತ್ರದಲ್ಲಿ 20 ಲಕ್ಷ ಮತದಾರರಿದ್ದಾರೆ. ಅವರಿಗೆ ಮನವಿ ಮಾಡ್ತೀನಿ. ನನ್ನ ಅವಧಿಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ನೋಡಿ. ಈ ಅಭಿವೃದ್ಧಿಯನ್ನ ಇಡೀ ಲೋಕಸಭಾ ಕ್ಷೇತ್ರಕ್ಕೆ ವಿಸ್ತರಣೆ ಮಾಡುವ ಪ್ರಯತ್ನ ಮಾಡುತ್ತೇನೆ. ಬಿಜೆಪಿ-ಜೆಡಿಎಸ್ ಸ್ವಾಭಾವಿಕ ಮೈತ್ರಿಯಾಗಿದ್ದು, ಎರಡೂ ಪಕ್ಷಗಳ ನಡುವೆ ಯಾವತ್ತೂ ವೈರತ್ವ ಇರುವ ಪಕ್ಷಗಳಲ್ಲ. ಸ್ಥಳೀಯ ಕಾರ್ಯಕರ್ತರು, ನಾಯಕರಿಗೆ ಒಟ್ಟಾಗಿ ಕೆಲಸ ಮಾಡ್ತಾರೆ. ಇದು ಸ್ವಾಭಾವಿಕ ಮೈತ್ರಿ. ಇಡೀ ರಾಜ್ಯದಲ್ಲಿ ಹಾಲು ಜೇನಿನಂತೆ ಬೆರತು ಬಿಜೆಪಿ-ಜೆಡಿಎಸ್ ನಾಯಕರು, ಕಾರ್ಯಕರ್ತರು ಕೆಲಸ ಮಾಡುತ್ತೇವೆ. ಒಳ್ಳೆಯ ಫಲಿತಾಂಶಕ್ಕಾಗಿ ರಾಜ್ಯದ ಜನ ತೀರ್ಮಾನ ಮಾಡಿದ್ದಾರೆ. ಮತ್ತೆ ಮೋದಿಯವರನ್ನು ಪ್ರಧಾನಿ ಮಾಡಲು ಜನ ಮತ ನೀಡಲಿದ್ದಾರೆ ಎಂದು ಹೇಳಿದ್ದಾರೆ.

    ವಿಶ್ವನಾಥ್ ಭದ್ರ ಕೋಟೆ ಕಟ್ಟಿದ್ದಾರೆ:
    ಶಾಸಕ ಎಸ್.ಆರ್ ವಿಶ್ವನಾಥ್ ಬಂಡಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ವಿಶ್ವನಾಥ್ ಅವರ ಜೊತೆ ಮಾತನಾಡುತ್ತೇನೆ. ಅವರು ಹಿರಿಯರು, ಅವರ ಕ್ಷೇತ್ರದಲ್ಲಿ ಸಂಘಟನೆ ಮಾಡಿ ಭದ್ರಕೋಟೆ ಕಟ್ಟಿದ್ದಾರೆ. ನಾವಿಬ್ಬರು ಮೊದಲೇ ಮಾತಾಡಿಕೊಂಡಿದ್ದೇವೆ. ಯಾರಿಗೆ ಟಿಕೆಟ್ ಕೊಟ್ಟರೂ ಒಟ್ಟಾಗೆ ಕೆಲಸ ಮಾಡಬೇಕು. ಹೊರಗಡೆಯವರಿಗೆ ಟಿಕೆಟ್ ಕೊಡುವುದು ಬೇಡ ಎಂದು ಚರ್ಚಿಸಿದ್ದೆವು. ಅದಕ್ಕೆ ಹೈಕಮಾಂಡ್ ಮನ್ನಣೆ ಕೊಟ್ಟಿದೆ. ವಿಶ್ವನಾಥ್ ಪ್ರಬಲ ನಾಯಕರು. ಅವರ ಪಡೆ ಸಂಘಟನೆ ಉತ್ತಮವಾಗಿದೆ. ಪಕ್ಷಕ್ಕೆ ಪೂರಕವಾಗಿ ಅವರ ನಿರ್ಣಯ ಇರಲಿದೆ. ಅವರು ಪಕ್ಷದ ಪರ ಇದ್ದು, ನನಗೆ ಸಹಕಾರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಾಸಕ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆ

  • ಸುಧಾಕರ್, ರಕ್ಷಾರಾಮಯ್ಯ ಚಿಕ್ಕಬಳ್ಳಾಪುರದ ಎಂಪಿ ಆಗಲಿ- ಅಭಿಮಾನಿಗಳಿಂದ ಹರಕೆ

    ಸುಧಾಕರ್, ರಕ್ಷಾರಾಮಯ್ಯ ಚಿಕ್ಕಬಳ್ಳಾಪುರದ ಎಂಪಿ ಆಗಲಿ- ಅಭಿಮಾನಿಗಳಿಂದ ಹರಕೆ

    ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ.ಕೆ.ಸುಧಾಕರ್ (K. Sudhakar) ಚಿಕ್ಕಬಳ್ಳಾಪುರ (Chikkaballapur) ಕ್ಷೇತ್ರದ ಸಂಸದರಾಗಲಿ ಎಂದು ಭೋಗನಂದೀಶ್ವರ ರಥೋತ್ಸವದಲ್ಲಿ ಅಭಿಮಾನಿಯೊಬ್ಬರು ಹರಕೆ ಮಾಡಿಕೊಂಡಿದ್ದಾರೆ. ಇನ್ನೊಂದೆಡೆ ರಕ್ಷಾರಾಮಯ್ಯ (Raksha Ramaiah) ಕ್ಷೇತ್ರದ ಎಂಪಿಯಾಗಲಿ ಎಂದು ಅವರ ಅಭಿಮಾನಿ ಸಹ ಹರಕೆ ಮಾಡಿಕೊಂಡಿದ್ದಾರೆ.

    &

    nbsp;

    ರಥೋತ್ಸವದಲ್ಲಿ ತೇರಿಗೆ ಸಮರ್ಪಿಸುವ ಬಾಳೆಹಣ್ಣಿನ ಮೇಲೆ ಡಾ.ಕೆ.ಸುಧಾಕರ್ ಎಂಪಿಯಾಗಲಿ ಎಂದು ಬರೆದು ರಥಕ್ಕೆ ಅರ್ಪಣೆ ಮಾಡಲಾಗಿದೆ. ಸುಧಾಕರ್ ಈ ಬಾರಿ ಬಿಜೆಪಿಯಿಂದ (BJP) ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇನ್ನೂ ತೇರಿಗೆ ಬಾಳೆಹಣ್ಣು ಸಮರ್ಪಣೆಯಲ್ಲಿ ಸುಧಾಕರ್ ಹಾಗೂ ರಕ್ಷಾರಾಮಯ್ಯ ಅಭಿಮಾನಿಗಳ ನಡುವೆ ಪೈಪೋಟಿ ನಡೆದಿದೆ.

    ಇತ್ತ ರಕ್ಷಾರಾಮಯ್ಯ ಅಭಿಮಾನಿಯಿಂದಲೂ ಹರಕೆ ಮಾಡಲಾಗಿದ್ದು, ಬಾಳೆಹಣ್ಣಿನ ಮೇಲೆ ರಕ್ಷಾರಾಮಯ್ಯ ಚಿಕ್ಕಬಳ್ಳಾಪುರ ಎಂಪಿ ಆಗಲಿ ಎಂದು ಬರೆದು ಸಮರ್ಪಣೆ ಮಾಡಿದ್ದಾರೆ. ರಕ್ಷಾರಾಮಯ್ಯ ಕಾಂಗ್ರೆಸ್ (Congress) ಪಕ್ಷದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

  • ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ರೆ ತಿಂಗಳೊಳಗೆ ಸುಧಾಕರ್ ಜೈಲು ಸೇರ್ತಾರೆ: N.H ಶಿವಶಂಕರರೆಡ್ಡಿ

    ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ರೆ ತಿಂಗಳೊಳಗೆ ಸುಧಾಕರ್ ಜೈಲು ಸೇರ್ತಾರೆ: N.H ಶಿವಶಂಕರರೆಡ್ಡಿ

    ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ.ಕೆ ಸುಧಾಕರ್ (Dr. K Sudhakar) ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ರೆ ಒಂದು ತಿಂಗಳೊಳಗೆ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಎನ್.ಎಚ್ ಶಿವಶಂಕರ ರೆಡ್ಡಿ ಹೇಳಿದ್ದಾರೆ.

    ಸುಧಾಕರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಾರೆ ಅನ್ನೋ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಧಾಕರ್ ಮೇಷ್ಟ್ರು ಮಗ ಅಂತ ಹೇಳಿಕೊಂಡು ಭ್ರಷ್ಟಾಚಾರದ ಮೂಲಕ ಇಂದು ಸಾವಿರಾರು ಕೋಟಿಯ ಒಡೆಯನಾಗಿದ್ದಾನೆ. ಹಾಗಾಗಿ ಬಿಜೆಪಿಯವರೇ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ರೆ ಇಡಿ ಹಾಗೂ ಐಡಿ ರೇಡ್ ಮಾಡಿಸಿ ಜೈಲಿಗೆ ಹಾಕಿಸ್ತಾರೆ ಅಂತ ಟಾಂಗ್ ನೀಡಿದರು.

    ಸುಧಾಕರ್ ಅವಶ್ಯಕತೆ ಕಾಂಗ್ರೆಸ್ ಗೆ ಇಲ್ಲ. ಪಕ್ಷದ್ರೋಹ ಮೋಸ ಮಾಡಿರುವ ಸುಧಾಕರ್ ನ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಸೇರಿಸಿಕೊಳ್ಳೋದು ಬೇಡ. ಒಂದು ವೇಳೆ ಸೇರಿಸಿಕೊಂಡರೆ ತೀವ್ರ ವಿರೋಧ ಮಾಡುತ್ತೇವೆ ಅಂತ ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ರೆ ಬಾಂಬ್ ಸ್ಫೋಟ ಆಗ್ತಿರಲಿಲ್ಲ: ಗೋವಾ ಸಿಎಂ ಪ್ರಮೋದ್ ಸಾವಂತ್

    ನಾನು ಕಾಂಗ್ರೆಸ್ ಬಿಡೋದಿಲ್ಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಸಿಗದೆ ಹೋದರೆ ಪಕ್ಷ ಬಿಡುವ ಎಚ್ಚರಿಕೆ ನೀಡಿದ್ದ ಮಾಜಿ ಸಚಿವ ಎನ್ ಎಚ್ ಶಿವಶಂಕರರೆಡ್ಡಿ (N.H Shivashankar Reddy) ಯೂಟರ್ನ್ ಹೊಡೆದಿದ್ದಾರೆ. ಟಿಕೆಟ್ ವಿಚಾರವಾಗಿ ನನಗೆ ಮಣೆ ಹಾಕಲಿಲ್ಲ, ನಮ್ಮ ಹಿರಿಯ ನಾಯಕರು ಗಾಢ‌ನಿದ್ದೆಗೆ ಜಾರಿದ್ರು. ಹಾಗಾಗಿ ಕಾಲು ಚುಚ್ಚುವ ಶಾಕ್ ಟ್ರೀಟ್ ಮೆಂಟ್ ಕೊಟ್ಟೆ, ಆಗ ನನ್ನ ಕರೆಸಿ ಮಾತನಾಡಿದ್ರು. ಈಗ ನನ್ನ ಹೆಸರು ಸಹ ಎಐಸಿಸಿ ಗೆ ಕಳುಹಿಸಿದ್ದಾರೆ. ಟಿಕೆಟ್ ಸಿಗುವ ವಿಶ್ವಾಸವಿದೆ. ಸಿಗದಿದ್ರೂ ಪಕ್ಷದಲ್ಲಿ ಇರ್ತೇನೆ ಅಂತ ಹೇಳಿದರು.

  • ಬಿಜೆಪಿ ಬಿಡಲ್ಲ, ಕಾಂಗ್ರೆಸ್ ಸೇರೋ ಅವಶ್ಯಕತೆ ನನಗಿಲ್ಲ: ಕೆ.ಸುಧಾಕರ್

    ಬಿಜೆಪಿ ಬಿಡಲ್ಲ, ಕಾಂಗ್ರೆಸ್ ಸೇರೋ ಅವಶ್ಯಕತೆ ನನಗಿಲ್ಲ: ಕೆ.ಸುಧಾಕರ್

    ಚಿಕ್ಕಬಳ್ಳಾಪುರ: ಬಿಜೆಪಿ (BJP) ಬಿಡುವ ಯೋಚನೆ, ಉದ್ದೇಶವಾಗಲಿ ಅಥವಾ ಅವಶ್ಯಕತೆಯಾಗಲಿ ನನಗಿಲ್ಲ. ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ (K.Sudhakar) ಹೇಳಿದ್ದಾರೆ.

    ಮಾಜಿ ಸಚಿವ ಡಾ.ಕೆ ಸುಧಾಕರ್ ಘರ್‌ವಾಪ್ಸಿ ಕಾಂಗ್ರೆಸ್ (Congress) ಸೇರುತ್ತಾರೆ ಎಂದು ರಾಜಕೀಯ ಪಾಳಯದಲ್ಲಿ ದಟ್ಟವಾಗಿ ಚರ್ಚೆಯಾಗುತ್ತಿದೆ. ಬಿಜೆಪಿಯಿಂದ ಲೋಕಸಭಾ ಟಿಕೆಟ್ ಸಿಗುವ ಬಗ್ಗೆ ಸಂಶಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕದ ತಟ್ಟಿದ್ದಾರೆ. ಕಾಂಗ್ರೆಸ್‌ನಿಂದ ಟಿಕೆಟ್ ಸಿಗುವ ಭರವಸೆ ಸಿಕ್ಕರೆ ಬಿಜೆಪಿಗೆ ಗುಡ್‌ಬೈ ಹೇಳುತ್ತಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಕುಡುಕರು ನಮ್ಮ ಎಣ್ಣೆ ನಮ್ಮ ಹಕ್ಕು ಅಂತಿದ್ದಾರೆ: ಆರ್.‌ ಅಶೋಕ್‌

    ಈ ವಿಚಾರವಾಗಿ ಡಿಸಿಎಂ ಹಂತದಲ್ಲಿ ಚರ್ಚೆ ನಡೆದಿದೆ ಎಂದು ಸಹ ಹೇಳಲಾಗುತ್ತಿದೆ. ರಾಜಕೀಯ ವಲಯದಲ್ಲಿನ ಚರ್ಚೆಗಳಿಂದ ಕೇಳಿಬರುತ್ತಿರುವ ಸುದ್ದಿಗಳಿಂದ ಎಚ್ಚೆತ್ತ ಸುಧಾಕರ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಪರಿಷತ್‌ನಲ್ಲಿ ಡಿಕೆಶಿ ಗಡ್ಡದ ಬಗ್ಗೆ ಹಾಸ್ಯಭರಿತ ಚರ್ಚೆ

    ಕಳೆದ ಸಲ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗುವ ಸಮಯದಲ್ಲೂ ನಾನು ಕಾಂಗ್ರೆಸ್ ಬಿಡಲ್ಲ ಅಂತಲೇ ಸುಧಾಕರ್ ಬಿಜೆಪಿ ಜೊತೆ ಸೇರಿಕೊಂಡಿದ್ದು ಜಗಜ್ಜಾಹೀರಾದ ವಿಚಾರ. ಹಾಗಾಗಿ ಕೆಲವರು ಇದನ್ನು ಹೇಗೆ ನಂಬೋದು ಎಂಬ ಪ್ರಶ್ನೆ ಮುಂದಿಟ್ಟಿದ್ದಾರೆ. ಇದನ್ನೂ ಓದಿ: ಸುಮಲತಾ ಅವರಷ್ಟು ಬುದ್ಧಿವಂತ ನಾನಲ್ಲ: ಚಲುವರಾಯಸ್ವಾಮಿ ಟಾಂಗ್

  • ಮೆಡಿಕಲ್ ಕಾಲೇಜು ಆರಂಭ ಮಾಡದಿದ್ರೆ ಉಪವಾಸ ಸತ್ಯಾಗ್ರಹ ಮಾಡ್ತೇನೆ: ಸುಧಾಕರ್

    ಮೆಡಿಕಲ್ ಕಾಲೇಜು ಆರಂಭ ಮಾಡದಿದ್ರೆ ಉಪವಾಸ ಸತ್ಯಾಗ್ರಹ ಮಾಡ್ತೇನೆ: ಸುಧಾಕರ್

    ಚಿಕ್ಕಬಳ್ಳಾಪುರ: ಜಿಲ್ಲೆಯ ವೈದ್ಯಕೀಯ ಕಾಲೇಜು ನಿರ್ಮಾಣ ವಿಚಾರದಲ್ಲಿ ಯಾವ ತನಿಖೆ ಬೇಕಾದರೂ ಮಾಡಿ. ಆದರೆ ಆದಷ್ಟು ಬೇಗ ಕಾಲೇಜು ಕಟ್ಟಡ ಹ್ಯಾಂಡ್ ಓವರ್ ಮಾಡಿಕೊಳ್ಳಿ. ಇಲ್ಲವಾದರೆ ನಾನು ಮೆಡಿಕಲ್ ಕಾಲೇಜು (Medical College) ಮುಂದೆಯೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ (Dr. K Sudhakar) ಹೇಳಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapur) ನಗರದ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಮಂತ್ರಿಗಳಾಗಿ ಎರಡು ತಿಂಗಳಾಗಿದೆ. ಜಿಲ್ಲಾಸ್ಪತ್ರೆಗೆ ಎಷ್ಟು ಬಾರಿ ಭೇಟಿ ಕೊಟ್ಟಿದ್ದೀರಿ. ಜಿಲ್ಲಾಸ್ಪತ್ರೆಯಲ್ಲಿ ಎಷ್ಟು ಐಸಿಯುಗಳಿವೆ ನಿಮಗೆ ಗೊತ್ತಾ. ನೀವು ಸಹ ವೈದ್ಯರಾಗಿದ್ದೀರಿ, ನಿಮಗೆ ಜವಾಬ್ದಾರಿ ಇಲ್ಲವಾ ಅಂತ ವಾಗ್ದಾಳಿ ನಡೆಸಿದರು.

    ನಾನು ಬಹಳ ಗಲಾಟೆ ಮಾಡಿ ಮೆಡಿಕಲ್ ಕಾಲೇಜು ತಂದಿದ್ದೇನೆ. ಶೀಘ್ರದಲ್ಲೇ ಕಾಲೇಜು ಆರಂಭ ಮಾಡಿ. ನಮ್ಮ ಜಿಲ್ಲೆಯಲ್ಲಿ ಆದ ಕಟ್ಟೆ ರಾಜ್ಯದಲ್ಲಿ ಎಲ್ಲೂ ಆಗಿಲ್ಲ. ಹೀಗಾಗಿ ನಿಮಗೆ ಹೊಟ್ಟೆ ಉರಿನಾ..? ನಾವ್ ಮಾಡೋಕೆ ಅಗಿಲ್ಲ ಅಂತ ಹೊಟ್ಟೆ ಉರಿನಾ..? ಒಳ್ಳೆಯ ಕೆಲಸ ಮಾಡಿದ್ರೂ ಸಹಿಸಲ್ಲ. ಕಾಲೇಜು ಪ್ರಾರಂಭ ಮಾಡದಿದ್ದರೆ ನಾನು ಮೆಡಿಕಲ್ ಕಾಲೇಜು ಮುಂದೆಯೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದರು. ಇದನ್ನೂ ಓದಿ: ಪ್ರದೀಪ್ ಈಶ್ವರ್ ಕನಸಲ್ಲೂ ನಾನು ಬರ್ತೀನಿ: ಸುಧಾಕರ್

    ಇದೇನು ಸಾಮ್ರಾಜ್ಯನಾ..? ರಾಜರ ಕಾಲ ಅಲ್ಲ. ಟಾರ್ಗೆಟ್ ಮಾಡಿದ್ದರಲ್ಲ ದ್ವೇಷದ ರಾಜಕಾರಣ ಮಾಡ್ತಿದ್ದರಲ್ಲ. ವೈಯಕ್ತಿಕವಾಗಿ ದ್ವೇಷ ಸಾಧಿಸೋದಾದರೆ ಮಾಡಿ. ಅದೇನು ಮಾಡಬೇಕೋ ಮಾಡಿ. ಕಾನೂನು ವ್ಯವಸ್ಥೆ ಇದೆ. ನಾನು ಹೆದರಿಕೊಳ್ಳೋದು ಇಲ್ಲ. ನನ್ನ ಜಿಲ್ಲೆಗೆ ಆದ ಅನ್ಯಾಯ ಸರಿಪಡಿಸಿ ಅಂತ ಆಗ್ರಹಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ವಗ್ರಾಮ ಪೆರೇಸಂದ್ರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ಗೆ ಮುಖಭಂಗ?

    ಸ್ವಗ್ರಾಮ ಪೆರೇಸಂದ್ರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ಗೆ ಮುಖಭಂಗ?

    ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಾ. ಕೆ.ಸುಧಾಕರ್‌ (Dr. K. Sudhakar) ಅವರಿಗೆ ಭಾರೀ ಮುಖಭಂಗವಾಗಿದೆ ಎಂದು ಹೇಳಲಾಗುತ್ತಿದೆ.

    ಚಿಕ್ಕಬಳ್ಳಾಪುರ (Chikkaballapura) ವಿಧಾನಸಭಾ ಕ್ಷೇತ್ರದ 29 ಗ್ರಾಮ ಪಂಚಾಯಿತಿಗಳಲ್ಲಿ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯುತ್ತಿದೆ. ಮಾಜಿ ಸಚಿವ ಡಾ. ಕೆ.ಸುಧಾಕರ್ ಸ್ವಗ್ರಾಮ ಪೆರೇಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಸುಧಾಕರ್ ಚಿಕ್ಕಪ್ಪ ರವೀಂದ್ರ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಸುಧಾಕರ್ ಅವರಿಗೆ ಮುಖಭಂಗ ಆಗಿದೆ ಅಂತ ವ್ಯಾಖ್ಯಾನ ಮಾಡಲಾಗುತ್ತಿದೆ. ಇದನ್ನೂ ಓದಿ: ಸುಧಾಕರ್ ನಮ್ಮೂರ ಹುಡ್ಗ, ಬೇರೆ ಕ್ಷೇತ್ರ ನೋಡಿಕೊಂಡ್ರೆ ಮುಂದಿನ ಸಲ ವಿಧಾನಸೌಧಕ್ಕೆ ಬರ್ತಾರೆ: ಪ್ರದೀಪ್ ಈಶ್ವರ್ ಟಾಂಗ್

    ಅಂದಹಾಗೆ ಬುಧವಾರ ನಡೆದ ಚುನಾವಣೆಯಲ್ಲಿ ಪೆರೇಸಂದ್ರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷೆಯಾಗಿ ಕೆ.ಗಂಗರತ್ನಮ್ಮ ಹಾಗೂ ಉಪಾಧ್ಯಕ್ಷರಾಗಿ ಭೋಯಿನಹಳ್ಳಿ ಗ್ರಾಮದ ಸದಸ್ಯೆ ವೆಂಕಟಪತಿ ಆಯ್ಕೆಯಾಗಿದ್ದಾರೆ. ಇನ್ನೂ ಸುಧಾಕರ್ ಬೆಂಬಲಿತ ಸದಸ್ಯರಾದ ವಿ. ಗಂಗರತ್ನಮ್ಮ ಹಾಗೂ ಪಿ.ಎಲ್ ಅನಂದ್ ಸೋಲನುಭವಿಸಿದ್ದಾರೆ.

    ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಕಾಂಗ್ರೆಸ್ ಬೆಂಬಲಿತರು ಅಂತಲೇ ಹೇಳಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಆಧಿಕಾರದ ಚುಕ್ಕಾಣಿ ಹಿಡಿದಿದ್ದು, ಇದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರ ಗೆಲುವು ಅಂತ ಚರ್ಚೆ ಮಾಡಲಾಗುತ್ತಿದೆ. ಆದರೆ ಇದನ್ನ ಮಾಜಿ ಸಚಿವ ಸುಧಾಕರ್ ತಳ್ಳಿಹಾಕಿದ್ದಾರೆ. ಪೆರೇಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಎಲ್ಲಾ ಸದಸ್ಯರು ನಮ್ಮವರೇ. ಎರಡು ಬಣಗಳಿವೆ. ಎರಡು ಬಣದವರೂ ನಮ್ಮವರೇ. ಕಾಂಗ್ರೆಸ್ ಆಧಿಕಾರ ಹಿಡಿದಿದೆ ಅನ್ನೋದು ಸುಳ್ಳು ಅಂತ ಹೇಳಿದ್ದಾರೆ. ಇದನ್ನೂ ಓದಿ: ಇಬ್ಬರೂ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸೋಣ.. ಯಾರಿಗೆ ಎಷ್ಟು ವೋಟು ಬರುತ್ತೆ ನೋಡೋಣ – ಪ್ರದೀಪ್ ಈಶ್ವರ್‌ಗೆ ಸುಧಾಕರ್ ಸವಾಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಧಾನಿ ಮೋದಿ ಕಾಳಿಂಗ ಸರ್ಪ – ಸುಧಾಕರ್

    ಪ್ರಧಾನಿ ಮೋದಿ ಕಾಳಿಂಗ ಸರ್ಪ – ಸುಧಾಕರ್

    ಚಿಕ್ಕಬಳ್ಳಾಪುರ: ಪ್ರಧಾನಿ ಮೋದಿ (Narendra Modi) ವಿಷ ಸರ್ಪ ಅಲ್ಲ (Venomous Snake), ದೇಶದ ಖಜಾನೆ ಕಾಯುವ ಕಾಳಿಂಗ ಸರ್ಪ (King Cobra) ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ (DR.K. Sudhakar) ಚಿಕ್ಕಬಳ್ಳಾಪುರದಲ್ಲಿ (Chikkaballapur) ಶನಿವಾರ ಹೇಳಿದ್ದಾರೆ.

     

    ಜರಬಂಡಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ (Election) ಪ್ರಚಾರದ ವೇಳೆ ಮಾತನಾಡಿದ ಅವರು, ರಾಹುಲ್ ಗಾಂಧಿ ಚೋಕಿದಾರ್ ಚೋರ್ ಅಂದಿದ್ದರು. ಈಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ವಿಷ ಸರ್ಪ ಎಂದಿದ್ದಾರೆ. ಆದರೆ ನರೇಂದ್ರ ಮೋದಿ ವಿಷ ಸರ್ಪ ಅಲ್ಲ, ದೇಶದ 140 ಕೋಟಿ ಜನರ ಖಜಾನೆ ರಕ್ಷಣೆ ಮಾಡುವ ಕಾಳಿಂಗ ಸರ್ಪ ಎಂದರು. ಇದನ್ನೂ ಓದಿ: ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ- ಸಿದ್ದರಾಮಯ್ಯ

    ಪುರಾತನ ದೇವಸ್ಥಾನಗಳ ಖಜಾನೆಗಳನ್ನ ರಕ್ಷಣೆ ಮಾಡುವುದು ಕಾಳಿಂಗ ಸರ್ಪಗಳು. ಈಗ ದೇಶದ 140 ಕೋಟಿ ಜನರ ತೆರಿಗೆಯ ಹಣ ಖಜಾನೆಯನ್ನು ಕಾಪಾಡುತ್ತಿರುವುದು ನರೇಂದ್ರ ಮೋದಿ ಎಂಬ ಕಾಳಿಂಗ ಸರ್ಪವೇ ಹೊರತು, ವಿಷ ಸರ್ಪ ಅಲ್ಲ. 130 ಕೋಟಿ ಜನರಿಗೆ ಕೊರೊನಾ ಲಸಿಕೆ  (COVID-19 vaccines) ಎಂಬ ಅಮೃತ ಕೊಟ್ಟ ಅವರನ್ನು ವಿಷ ಸರ್ಪ ಎನ್ನುತ್ತೀರಾ ಎಂದು ಕುಟುಕಿದರು.

    ಕಾಂಗ್ರೆಸ್‍ನವರ (Congress) ವಿಷವನ್ನು ಕಂಠದಲ್ಲಿ ಇಟ್ಟುಕೊಂಡಿರುವ ನಂಜುಡೇಶ್ವರ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಟೀಕಿಸುವುದು ಸರಿಯಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಸೋನಿಯಾ, ರಾಹುಲ್ ಗಾಂಧಿ ಹೇಳಿಕೊಟ್ಟಂತೆ ಖರ್ಗೆ ಮಾತಾಡಿದ್ದಾರೆ: ಜೆ.ಪಿ ನಡ್ಡಾ

  • ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ನಾಮಪತ್ರ ಸಲ್ಲಿಕೆ

    ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ನಾಮಪತ್ರ ಸಲ್ಲಿಕೆ

    ಚಿಕ್ಕಬಳ್ಳಾಪುರ: ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್ (K.Sudhakar) ಗುರುವಾರ ಸಾಂಕೇತಿಕವಾಗಿ ಚಿಕ್ಕಬಳ್ಳಾಪುರ (Chikkaballapura) ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿಯಾಗಿ ನಾಮಪತ್ರ (Nomination Paper) ಸಲ್ಲಿಸಿದ್ದಾರೆ.

    ಗುರುವಾರ ಕುಟಂಬ ಸಮೇತ ತಿರುಪತಿ (Tirupati) ತಿಮ್ಮಪ್ಪನ ದರ್ಶನ ಪಡೆದು ಆಗಮಿಸಿದ ಸಚಿವ ಸುಧಾಕರ್, ಚಿಕ್ಕಪ್ಯಾಯಲಗುರ್ಕಿ ಗ್ರಾಮದ ಮನೆ ದೇವರು ಚನ್ನಕೇಶವಸ್ವಾಮಿ ದೇವಾಯಕ್ಕೂ ಭೇಟಿ ನೀಡಿದರು. ನಂತರ ಚಿಕ್ಕಬಳ್ಳಾಪುರ ನಗರದ ಉಪವಿಭಾಗಾಧಿಕಾರಿಗಳ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ (Election Officer) ಸಂತೋಷ್ ಕುಮಾರ್‌ಗೆ ನಾಮಪತ್ರ ಸಲ್ಲಿಸಿದರು. ಇದನ್ನೂ ಓದಿ: ನಾನೇನಾದ್ರೂ ರೇಪ್ ಮಾಡಿದ್ನಾ: ಏನ್ ತಪ್ಪು ಮಾಡಿದ್ದೆ? – ಟಿಕೆಟ್ ಕೈತಪ್ಪಿದ್ದಕ್ಕೆ ಸವದಿ ಬೇಸರ 

    ಸಚಿವ ಸುಧಾಕರ್‌ಗೆ ಪತ್ನಿ ಪ್ರೀತಿ, ತಂದೆ ಕೇಶವರೆಡ್ಡಿ, ಸಹೋದರಿ ಅಶ್ವಿನಿ, ಹಾಗೂ ಮಾವ ಆನಂದ್ ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಸುಧಾಕರ್, ಗುರುವಾರ ಗುರುವನ್ನು ನಂಬುವ ನಾನು ತಿರುಪತಿ ತಿಮ್ಮಪ್ಪನ ಪರಮ ಭಕ್ತ. ಹಾಗಾಗಿ ಇಂದು ದೇವರ ದರ್ಶನ ಪಡೆದು ಆಗಮಿಸಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಪಕ್ಷ ಬಿ ಫಾರಂ ನೀಡಿದ್ದು, ಅದನ್ನು ಪಡೆಯಲು ಸಾಧ್ಯವಾಗಲಿಲ್ಲ. ಹಾಗೆ ಬಂದು ಇಂದು ಸಾಂಕೇತಿಕವಾಗಿ ನಾಮಿನೇಷನ್ ಮಾಡಿದ್ದೇನೆ ಎಂದರು. ಇದನ್ನೂ ಓದಿ: ವರುಣಾ ಕ್ಷೇತ್ರದಲ್ಲಿ ಜನ ಅಬ್ಬೆಪಾರಿಗಳಾಗಿದ್ದಾರೆ : ಪ್ರತಾಪ್ ಸಿಂಹ  

    ಏಪ್ರಿಲ್ 17ರಂದು ಮತ್ತೆ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲಿದ್ದೇನೆ. ಈ ಬಾರಿ ನನಗೆ ಪ್ರಬಲ ಪ್ರತಿಸ್ಪರ್ಧಿಗಳೇ ಇಲ್ಲ. ಕಳೆದ ಮೂರು ಬಾರಿ ಪಡೆದ ಲೀಡ್‌ಗಿಂತ ಹೆಚ್ಚಿನ ಲೀಡ್ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು. ಇದನ್ನೂ ಓದಿ: ಪತ್ರಿಕೋದ್ಯಮ ಓದಿದ ಬರಿಗಾಲ ಸಂತನಿಗೆ ಬಿಜೆಪಿ ಟಿಕೆಟ್