Tag: ಡಾ ಕೆ ಸುಧಾಕರ್

  • ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

    ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

    ಬೆಂಗಳೂರು: ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಲ್ಲಿ (Pradhan Mantri Bhartiya Jan Aushadhi Kendra) ಅತೀ ಹೆಚ್ಚು ಜನೌಷಧಿ ಕೇಂದ್ರ ತೆರೆದ ಪಟ್ಟಿಯಲ್ಲಿ ಕರ್ನಾಟಕ (Karnataka) ಎರಡನೇ ಸ್ಥಾನದಲ್ಲಿದ್ದು, ರಾಜ್ಯಾದ್ಯಂತ 540 ಹೊಸ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Dr K Sudhakar) ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಡವರು, ಹಿಂದುಳಿದ ಮತ್ತು ಮಧ್ಯಮವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಮತ್ತು ಶಸ್ತ್ರಚಿಕಿತ್ಸೆಯ ಪರಿಕರಗಳನ್ನು ಒದಗಿಸುವಲ್ಲಿ ಪ್ರಧಾನಮಂತ್ರಿ ಜನೌಷಧಿ ಕಾರ್ಯಕ್ರಮ ಯಶಸ್ವಿಯಾಗಿದೆ. ರಾಜ್ಯದಲ್ಲಿ ಉತ್ತಮವಾಗಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಈವರೆಗೆ 1,052 ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಇಡೀ ದೇಶದಲ್ಲಿ ಅತೀ ಹೆಚ್ಚು ಜನೌಷಧಿ ಕೇಂದ್ರ ತೆರೆದ ಪಟ್ಟಿಯಲ್ಲಿ ಉತ್ತರ ಪ್ರದೇಶದ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನ ಕರ್ನಾಟಕಕ್ಕೆ ಸಿಕ್ಕಿದೆ. ಕೇರಳ ಮೂರನೇ ಸ್ಥಾನದಲ್ಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕೋಲಾರ ಎಂಟ್ರಿ ಬೆನ್ನಲ್ಲೇ ಗುಂಪು ರಾಜಕೀಯ- ಸಿದ್ದರಾಮಯ್ಯ ಮೇಲೆ ಮುನಿಯಪ್ಪ ಮುನಿಸು

    ಸಾರ್ವಜನಿಕರು ಆರೋಗ್ಯಕ್ಕಾಗಿ ಮಾಡುತ್ತಿರುವ ವೆಚ್ಚ ಜನೌಷಧಿ ಮಳಿಗೆಗಳಿಂದ ಗಣನೀಯವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಹೊಸದಾಗಿ ಮತ್ತೆ 500 ಮಳಿಗೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 40 ಹೊಸ ಮಳಿಗೆಗಳಿಗೆ ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಈ ವರ್ಷ ಫೆಬ್ರವರಿ ಬಳಿಕ ಸುಮಾರು 300 ಜನೌಷಧಿ ಕೇಂದ್ರಗಳನ್ನು ಆರಂಭಿಸಿದ್ದೇವೆ. ರಾಜ್ಯದಲ್ಲಿ ಜನೌಷಧಿಗಳು ಬ್ರಾಂಡೆಡ್ ಆಗಿದ್ದು, ಮಾರುಕಟ್ಟೆಗಿಂತ ಶೇ.50 ರಿಂದ 80 ರಷ್ಟು ಅಗ್ಗದ ದರದಲ್ಲಿ ದೊರೆಯುತ್ತಿವೆ. ಒಟ್ಟು 1,451 ಔಷಧಗಳು ಮತ್ತು 240 ಶಸ್ತ್ರಚಿಕಿತ್ಸೆ ಪರಿಕರಗಳು, ದುಬಾರಿ ವೆಚ್ಚದ ಕ್ಯಾನ್ಸರ್ ಔಷಧಗಳು ಸಹ ಇಲ್ಲಿ ಸಿಗುತ್ತಿದೆ. ಹೀಗಾಗಿ, ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಿಂದಲೂ ಜನೌಷಧಿ ಮಳಿಗೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆರೆಯಲು ಒತ್ತಡವಿದೆ. ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಎಂಬ ಗ್ರಾಮದಲ್ಲೂ ಜನೌಷಧಿ ಮಳಿಗೆ ತೆರೆದಿರುವುದು ವಿಶೇಷವಾಗಿದ್ದು, ಬೇಡಿಕೆಗೆ ಅನುಗುಣವಾಗಿ ಹೊಸ ಮಳಿಗೆಗಳಿಗೆ ಮಂಜೂರಾತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ ವಿವೇಕ ಶಾಲೆಗಳ ಬಣ್ಣ

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ನಡೆದಾಗ ಬರಲಿಲ್ಲ, ಇದೀಗ ಅಧಿಕಾರಕ್ಕಾಗಿ ಇಷ್ಟೊಂದು ನಾಟಕವೇ?: ಸುಧಾಕರ್

    ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ನಡೆದಾಗ ಬರಲಿಲ್ಲ, ಇದೀಗ ಅಧಿಕಾರಕ್ಕಾಗಿ ಇಷ್ಟೊಂದು ನಾಟಕವೇ?: ಸುಧಾಕರ್

    ಬೆಂಗಳೂರು: ಕಾಶ್ಮೀರದಲ್ಲಿ ಹಿಂದೂಗಳ ಮಾರಣ ಹೋಮ ನಡೆದಾಗ ಭಾರತ್ ಜೋಡೋ ಯಾತ್ರೆ (Bharat Jodo Yatra) ನೆನಪಾಗಲಿಲ್ಲ. ಮುಂಬಯಿ ಮೇಲೆ ಉಗ್ರರ ದಾಳಿ, ಬೋಧ ಗಯಾದಲ್ಲಿ ಭಯೋತ್ಪಾದಕ ದಾಳಿ ನಡೆದಾಗ ಸಹಬಾಳ್ವೆಯ ನೆನಪಾಗಲಿಲ್ಲ. ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ನಡೆದಾಗ ಶಾಂತಿ ಮಂತ್ರದ ಸ್ಮರಣೆ ಬರಲಿಲ್ಲ. ಈಗ ಮರಳಿ ಅಧಿಕಾರ ಗಳಿಸುವುದಕ್ಕಾಗಿ ಇಷ್ಟೊಂದು ನಾಟಕವೇ ಎಂದು ಸಚಿವ ಡಾ.ಕೆ ಸುಧಾಕರ್ (Dr.K Sudhakar) ಸರಣಿ ಟ್ವೀಟ್ ಮೂಲಕ ಭಾರತ್ ಜೋಡೋ ಯಾತ್ರೆ ಕುರಿತಾಗಿ ಟೀಕಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ರಾಹುಲ್ ಗಾಂಧಿ (RahulGandhi)  ನೇತೃತ್ವದ ಭಾರತ್ ಜೋಡೋ ಯಾತ್ರೆ ಸೂತ್ರ ಹರಿದ ಗಾಳಿಪಟದಂತ ಒಂದು ವ್ಯರ್ಥ ಹಾರಾಟ. ಗೊತ್ತು- ಗುರಿ ಎರಡೂ ಇಲ್ಲದ ಈ ನಡಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಂದಿಸುವ ಏಕಮಾತ್ರ ಉದ್ದೇಶ ಹೊಂದಿರುವುದು ವಿಪರ್ಯಾಸ. ಕಾಂಗ್ರೆಸ್ ಈ ದೇಶವನ್ನು ಅರ್ಧ ಶತಮಾನಗಳ ಕಾಲ ಆಳಿದೆ. ಈ ಅವಧಿಯಲ್ಲಿ ರಾಹುಲ್ ಗಾಂಧಿಯವರ ಪೂರ್ವಜರು ಎಲ್ಲೆಲ್ಲಿ ದೇಶವನ್ನು ಒಡೆದರೋ ಅದೆಲ್ಲವನ್ನೂ ಜತನದಿಂದ ಕಟ್ಟುವ ಕಾರ್ಯವನ್ನು ಆರ್‌ಎಸ್‌ಎಸ್‌ ಮಾಡಿದೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ಸಿಗರ ಭಾರತ ಬಿಟ್ಟು ಓಡೋ ಯಾತ್ರೆ: ನಳೀನ್ ಕುಮಾರ್ ಕಟೀಲ್

    ಈಗ ರಾಹುಲ್ ಗಾಂಧಿ ಕೂಡಿಸಿದ್ದನ್ನು ಕಳೆಯಲು ಹೊರಟಿದ್ದಾರೆ ಎಂಬುದೇ ಹೆಚ್ಚು ಸಮರ್ಪಕ ವ್ಯಾಖ್ಯಾನವಾದೀತು. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸದುದ್ದೇಶವನ್ನು ಅರ್ಥ ಮಾಡಿಕೊಳ್ಳುವ ಅಗತ್ಯವೇ ಇಲ್ಲ. ಇದೊಂದು ಶುದ್ಧ ರಾಜಕೀಯ ಅಜೆಂಡಾದ ವಿಭಜಕ ಮನಸುಗಳ ವಿಜೃಂಭಣೆಯ ನಡಿಗೆ! ದೇಶ ವಿಭಜನೆ, ಕಾಶ್ಮೀರ ವಿಭಜನೆ, ಎಮರ್ಜೆನ್ಸಿ ಹೇರಿಕೆ, ಬೋಫೋರ್ಸ್ ಹಗರಣ (Bofors Scam), 2ಜಿ ಸ್ಯಾಮ್ (2G Spectrum case) ಇದೆಲ್ಲವೂ ಕಾಂಗ್ರೆಸ್ ನಡೆಸಿದ ವಿಭಜಕ ಆಡಳಿತದ ಫಲಶೃತಿ. ಇದೆಲ್ಲದರ ಸಾಕ್ಷಿ ಪ್ರಜ್ಞೆಯೇ ರಾಹುಲ್ ಗಾಂಧಿ. ಇನ್ನೇನು ಉಳಿಸಿದ್ದೀರಿ ಜೋಡಿಸುವುದಕ್ಕೆ? ನಿಮ್ಮ ಯಾತ್ರೆಯ ಕಾಲದಲ್ಲಿ ಒಮ್ಮೆಯಾದರೂ ಆತ್ಮವಿಮರ್ಶೆ ಮಾಡಿಕೊಂಡು ಈ ಪ್ರಶ್ನೆಗಳಿಗೆ ಉತ್ತರಿಸಿ. ಇದನ್ನೂ ಓದಿ: ಭಾರತ್ ರಾಷ್ಟ್ರ ಸಮಿತಿ – ರಾಷ್ಟ್ರೀಯ ಪಕ್ಷ ಪ್ರಾರಂಭಿಸಿದ KCR

    ಕಾಶ್ಮೀರದಲ್ಲಿ ಹಿಂದೂಗಳ ಮಾರಣ ಹೋಮ ನಡೆದಾಗ ಭಾರತ್ ಜೋಡೋ ಯಾತ್ರೆ ನೆನಪಾಗಲಿಲ್ಲ, ಮುಂಬಯಿ ಮೇಲೆ ಉಗ್ರರ ದಾಳಿ, ಬೋಧ ಗಯಾದಲ್ಲಿ ಭಯೋತ್ಪಾದಕ ದಾಳಿ ನಡೆದಾಗ ಸಹಬಾಳ್ವೆಯ ನೆನಪಾಗಲಿಲ್ಲ, ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ನಡೆದಾಗ ಶಾಂತಿ ಮಂತ್ರದ ಸ್ಮರಣೆ ಬರಲಿಲ್ಲ. ಈಗ ಮರಳಿ ಅಧಿಕಾರ ಗಳಿಸುವುದಕ್ಕಾಗಿ ಇಷ್ಟೊಂದು ನಾಟಕವೇ?

    Live Tv
    [brid partner=56869869 player=32851 video=960834 autoplay=true]

  • 108 ಅಂಬುಲೆನ್ಸ್ ಕರೆ ಸ್ವೀಕಾರ ಸೇವೆ ಪುನರಾರಂಭಗೊಂಡಿದೆ: ಆರೋಗ್ಯ ಇಲಾಖೆ ಸ್ಪಷ್ಟನೆ

    108 ಅಂಬುಲೆನ್ಸ್ ಕರೆ ಸ್ವೀಕಾರ ಸೇವೆ ಪುನರಾರಂಭಗೊಂಡಿದೆ: ಆರೋಗ್ಯ ಇಲಾಖೆ ಸ್ಪಷ್ಟನೆ

    ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ 108 ಅಂಬುಲೆನ್ಸ್ (108 Ambulance)  ಕರೆ ಸ್ವೀಕಾರ ವ್ಯವಸ್ಥೆಯಲ್ಲಿ, ತಾಂತ್ರಿಕ ತೊಂದರೆಯಿಂದಾಗಿ, ವ್ಯತ್ಯಯ ಉಂಟಾಗಿತ್ತು. ಈಗ ಅದನ್ನು ಸರಿ ಪಡಿಸಲಾಗಿದ್ದು ಕರೆ ಸ್ವೀಕಾರ ಸೇವೆ ಪುನರಾರಂಭ ಗೊಂಡಿದೆ. ಆದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ಸಂಪರ್ಕ ಸಾಧಿಸಲು ಅನುಕೂಲವಾಗುವಂತೆ ಎಲ್ಲಾ ಜಿಲ್ಲೆಯ ಡಿಎಚ್‍ಒಗಳ (DHO) ಹೆಚ್ಚುವರಿ ದೂರವಾಣಿ ಸಂಖ್ಯೆಗಳನ್ನು ಅಯಾ ಜಿಲ್ಲೆಯ ಜನರಿಗೆ ಒದಗಿಸುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ  (Health department)  ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.

    ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ (Dr.K Sudhakar)  ಟ್ವೀಟ್ ಮಾಡಿದ್ದು, 108 – ಆರೋಗ್ಯ ಕವಚ ಅಂಬುಲೆನ್ಸ್ ಸೇವೆಯಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವ ಮತ್ತು ಅಂಬುಲೆನ್ಸ್ ಸೇವೆಯಲ್ಲಿ ಯಾವುದೇ ಅಡಚಣೆಯಾಗದಂತೆ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಸ್ಥಾಪಿಸುವ ಕುರಿತಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ವೀಡಿಯೋ ಕಾನ್ಫರೆನ್ಸ್ ಜರುಗಿತು. ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕೇಂದ್ರೀಕೃತ ಕಾಲ್ ಸೆಂಟರ್ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರ ಕರೆಗೆ ಸ್ಪಂದಿಸಿ ಸೇವೆ ಒದಗಿಸಲಾಗುತ್ತಿದೆ. ಇದನ್ನೂ ಓದಿ: ಬಿಜೆಪಿ ದುರಾಡಳಿತದಿಂದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆಯಾಗಿದೆ: ಕಾಂಗ್ರೆಸ್

    ತಾತ್ಕಾಲಿಕವಾಗಿ ಬ್ಯಾಕ್‍ಅಪ್ ಸರ್ವರ್ ಅಳವಡಿಸಲಾಗಿದ್ದು, ದೋಷಪೂರಿತ ಮುಖ್ಯ ಸರ್ವರ್ ಅನ್ನು ದುರಸ್ತಿ ಮಾಡುವ ಕಾರ್ಯ ಚಾಲ್ತಿಯಲ್ಲಿದೆ. ಈ ಎಲ್ಲ ಕ್ರಮಗಳ ಜೊತೆ ತಡೆರಹಿತ ಸೇವೆ ಖಾತ್ರಿಪಡಿಸಿಕೊಳ್ಳಲು ಪ್ರತೀ ಜಿಲ್ಲೆಯಲ್ಲಿ 3-4 ವಿಕೇಂದ್ರೀಕೃತ ಕಾಲ್ ಸೆಂಟರ್ ವ್ಯವಸ್ಥೆ ಮಾಡಲಾಗಿದ್ದು ಇದರ ಬಗ್ಗೆ ಸ್ಥಳೀಯ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ಇದನ್ನೂ ಓದಿ: ಆ ಭಾಗ್ಯ ಈ ಭಾಗ್ಯ ಅಂತಾ ರಾಜ್ಯಕ್ಕೆ ದೌರ್ಭಾಗ್ಯ ಕೊಟ್ಟರು: ಸಿದ್ದುಗೆ ಬೊಮ್ಮಾಯಿ ಟಾಂಗ್‌

    ನಿನ್ನೆಯಿಂದ 108 ಅಂಬುಲೆನ್ಸ್ ಸೇವೆ ಸರಿಯಾಗಿ ಕಾರ್ಯಚರಣೆ ಮಾಡುತ್ತಿರಲಿಲ್ಲ. ತಾಂತ್ರಿಕ ದೋಷದ ಕಾರಣ 108 ಕಾಲ್ ಸೆಂಟರ್ ವರ್ಕ್ ಆಗುತ್ತಿರಲಿಲ್ಲ. ಇದರಿಂದಾಗಿ ಸಕಾಲಕ್ಕೆ ಅಂಬುಲೆನ್ಸ್ ಸಿಗದೇ, ಸಕಾಲಕ್ಕೆ ವೈದ್ಯಕೀಯ ನೆರವು ಸಿಗದೇ ರಾಜ್ಯಾದ್ಯಂತ ರೋಗಿಗಳು ಪರದಾಡಿದ್ದಾರೆ. ಒಂದು ಜೀವ ಕೂಡ ಹೋಗಿದೆ. ಅನಾರೋಗ್ಯದಿಂದ ಬಳಲ್ತಿದ್ದ ತುಮಕೂರು ಜಿಲ್ಲೆ ಐಡಿ ಹಳ್ಳಿಯ ಜಯಮ್ಮ ಎಂಬಾಕೆ ಸಕಾಲಕ್ಕೆ ಅಂಬುಲೆನ್ಸ್ ಸಿಗದೇ ಸಾವನ್ನಪ್ಪಿದ್ದಾರೆ. 108 ಸೇವೆಗಳಿಗಾಗಿ ಜಿವಿಕೆ-ಇಎಂಆರ್‌ಐ ಕಾಲ್‍ಸೆಂಟರ್‌ನಲ್ಲಿ 2008ರಲ್ಲಿ ಅಳವಡಿಸಿದ್ದ ಆರೆಂಜಸ್ ಟೆಕ್ನಾಲಜಿ ಸಾಫ್ಟ್‌ವೆರ್ ಅಪ್‍ಡೇಟ್ ಮಾಡದ ಕಾರಣ ವೈರಸ್ ಅಟ್ಯಾಕ್ ಆಗಿ ಇಷ್ಟೆಲ್ಲಾ ಅವಾಂತರ ಉಂಟಾಗಿದೆ. ಆಸ್ಪತ್ರೆಯಿಂದ ಆಸ್ಪತ್ರೆಗೆ ಶಿಫ್ಟ್ ಸಹ ಅಂಬುಲೆನ್ಸ್‌ಗಳಿಗೆ ಕೃತಕ ಬರ ಬಂದಿತ್ತು. ರೋಗಿಗಳ ಸಂಬಂಧಿಕರು 108 ಅವ್ಯವಸ್ಥೆಗಳಿಗೆ ತೀವ್ರ ಆಕ್ರೋಶ ಹೊರಹಾಕಿದ್ರು. ಈ ಬಗ್ಗೆ ಪಬ್ಲಿಕ್ ಟಿವಿ ಬೆಳಗ್ಗೆಯಿಂದ ನಿರಂತರ ವರದಿ ಕಾರಣ, ಆರೋಗ್ಯ ಇಲಾಖೆ ಎಚ್ಚೆತ್ತು, ತಾತ್ಕಾಲಿಕವಾಗಿ ಪರ್ಯಾಯ ಸೇವೆ ಕಲ್ಪಿಸಲು ಪ್ರಯತ್ನಿಸಿತು. 108 ಬದಲಿಗೆ 112ಕ್ಕೆ ಕರೆ ಮಾಡಿ ಅಂಬುಲೆನ್ಸ್ ಸೇವೆ ಪಡೆಯಲು ಸೂಚಿಸಿತು. ಬೆಂಗಳೂರು, ತುಮಕೂರು, ನೆಲಮಂಗಲ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ವಿಜಯಪುರ ಸೇರಿ ಬಹುತೇಕ ಕಡೆ ಈ ಸಮಸ್ಯೆ ಕಂಡುಬಂತು.

    Live Tv
    [brid partner=56869869 player=32851 video=960834 autoplay=true]

  • ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆಯಿಂದ ಕ್ರಮ: ಸುಧಾಕರ್

    ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆಯಿಂದ ಕ್ರಮ: ಸುಧಾಕರ್

    ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದಲ್ಲಿ ಅಂಬುಲೆನ್ಸ್ ಸಮಸ್ಯೆಯ ಬಗ್ಗೆ ಟ್ವೀಟ್ ಮೂಲಕ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ ಅಂಬುಲೆನ್ಸ್ ಸೇವೆ ವ್ಯತ್ಯಯ – ನಿನ್ನೆ ಸಂಜೆಯಿಂದ ಕರೆ ಸ್ವೀಕರಿಸದ 108

    ಸ್ವಯಂಚಾಲಿತ ಕಾಲ್ ಸೆಂಟರ್ ವ್ಯವಸ್ಥೆ ಮೂಲಕ ಕರೆಗಳ ವಿತರಣೆಗೆ ಪರ್ಯಾಯವಾಗಿ ಮ್ಯಾನುವಲ್ ಐಡಿಗಳನ್ನು ಸೃಷ್ಟಿಸಿ ಅಂಬುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದ್ದು, ಇದರೊಂದಿಗೆ 104 ಕಾಲ್ ಸೆಂಟರ್‌ನಲ್ಲಿ 108 ಅಂಬುಲೆನ್ಸ್ ಸೇವೆಗೆ ಓವರ್ ಫೋನ್‌ ಕಾಲ್ ಸೆಂಟರ್ ಸ್ಥಾಪಿಸಲು ಸಹ ಸೂಚನೆ ನೀಡಲಾಗಿದೆ. 108 ಹಾಗೂ 112 ಕಾಲ್ ಸೆಂಟರ್‌ಗಳಲ್ಲಿ ಅಧಿಕ ಕರೆ ಸ್ವೀಕರಿಸಲು ಅನುಕೂಲವಾಗುವಂತೆ ಪ್ರಸ್ತುತ ಇರುವ ಸಿಬ್ಬಂದಿಗಳ ಜೊತೆಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಂಬುಲೆನ್ಸ್ ಡ್ರೈವರ್‌ಗಳಿಗೆ ತಮ್ಮ ಮೊಬೈಲ್ ಮೂಲಕ ಆಸ್ಪತ್ರೆಗಳಿಂದ ನೇರವಾಗಿ ಕರೆಗಳನ್ನು ಸ್ವೀಕರಿಸಲು ಸಹ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಊಹಾಪೋಹಗಳಿಗೆ ಕಿವಿಗೊಡದಂತೆ SMK ನಿವಾಸದಿಂದ ಸಂದೇಶ

    ತಾಂತ್ರಿಕ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಸಮರೋಪಾದಿಯಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪರ್ಯಾಯ ವ್ಯವಸ್ಥೆಗಳ ಮೂಲಕ ಸೇವೆಯಲ್ಲಿ ಉಂಟಾಗಿರುವ ತಾತ್ಕಾಲಿಕ ವ್ಯತ್ಯಯವನ್ನು ಕನಿಷ್ಠ ಮಟ್ಟದಲ್ಲಿಡಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉತ್ತರಕನ್ನಡ ಜನರ ದಶಕಗಳ ಬೇಡಿಕೆಗೆ ಕೊನೆಗೂ ಅಸ್ತು- ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕಾರ ಒಪ್ಪಿಗೆ

    ಉತ್ತರಕನ್ನಡ ಜನರ ದಶಕಗಳ ಬೇಡಿಕೆಗೆ ಕೊನೆಗೂ ಅಸ್ತು- ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕಾರ ಒಪ್ಪಿಗೆ

    ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ನಿರ್ಮಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Dr. K Sudhakar) ಹೇಳಿದರು.

    ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಪಾಲ್ಗೊಂಡ ಬಳಿಕ, ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ ಸಿಹಿ ಸುದ್ದಿ ನೀಡಿದರು. ಈ ಮೂಲಕ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ಮನ್ನಣೆ ದೊರೆತಿದೆ.

    ಉತ್ತರ ಕನ್ನಡ (Uttar Kannada) ಜಿಲ್ಲೆಗೆ ಉತ್ಕೃಷ್ಟವಾದ ಆರೋಗ್ಯ ಸೇವೆ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಎಲ್ಲಿ ನಿರ್ಮಿಸಬೇಕು, ಹೇಗೆ ನಿರ್ಮಾಣ ಮಾಡಬೇಕು ಎಂಬೆಲ್ಲ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಈ ಪ್ರಸ್ತಾವ ಆರ್ಥಿಕ ಇಲಾಖೆಯವರೆಗೆ ಹೋಗಿದೆ. ಇನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಚಿವ ಸಂಪುಟದಲ್ಲಿ ಪ್ರಸ್ತಾವ ಇರಿಸಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹಿಜಬ್ ವಿದ್ಯಾರ್ಥಿನಿಯರ ಪ್ರತಿಭಟನೆ ಹಿಂದೆ PFI ಪಿತೂರಿ: ಸಾಲಿಸಿಟರ್ ಜನರಲ್ ಮೆಹ್ತಾ ವಾದ

    ಕುಮಟಾ ಪ್ರದೇಶ ಉತ್ತರ ಕನ್ನಡ ಜಿಲ್ಲೆಯ ಮಧ್ಯಭಾಗದಲ್ಲಿದ್ದು, ಅಲ್ಲಿಯೇ ಆಸ್ಪತ್ರೆ ನಿರ್ಮಿಸುವ ಬಗ್ಗೆಯೂ ಚರ್ಚೆಯಾಗಿದೆ. ಶಿರಸಿ (Sirsi) ಯಲ್ಲಿ ಈಗಾಗಲೇ 250 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಾಮಗಾರಿ ಭರದಿಂದ ನಡೆಯುತ್ತಿದೆ. ಕಾರವಾರ(Karwar) ದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಿದ್ದು, ಮುಂದಿನ ವರ್ಷಕ್ಕೆ ಆ ಕಾಮಗಾರಿಯೂ ಮುಗಿಯಲಿದೆ. ಅಲ್ಲಿ ಈ ವರ್ಷವೇ 150 ವಿದ್ಯಾರ್ಥಿಗಳಿಗೆ ಬೋಧಿಸಲು ಎನ್‍ಎಂಸಿಯಿಂದ ಪರವಾನಗಿ ದೊರೆತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ಕೃಷ್ಟವಾದ ಆರೋಗ್ಯ ಸೇವೆ ನೀಡುವುದು, ಆರೋಗ್ಯ ಸೇವೆ ಮೇಲ್ದರ್ಜೆಗೇರಿಸುವುದು, ಸಿಬ್ಬಂದಿ ಕೊರತೆ ನೀಗಿಸುವುದು, ಉಪಕರಣಗಳ ಪೂರೈಕೆ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದರು.

    ಅಧಿವೇಶನ ಮುಗಿದ ಬಳಿಕ ಸಚಿವ ಡಾ.ಕೆ.ಸುಧಾಕರ್ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಸಚಿವ ಶಿವರಾಮ್ ಹೆಬ್ಬಾರ್, ಶಾಸಕರು ಸಭೆಯಲ್ಲಿದ್ದರು.

    Live Tv
    [brid partner=56869869 player=32851 video=960834 autoplay=true]

  • ವಿಮ್ಸ್ ಸರಣಿ ಸಾವು ಪ್ರಕರಣ – ಸತ್ತವರು ನಾಲ್ವರಲ್ಲ, ಇಬ್ಬರು ಮಾತ್ರ: ಸುಧಾಕರ್

    ವಿಮ್ಸ್ ಸರಣಿ ಸಾವು ಪ್ರಕರಣ – ಸತ್ತವರು ನಾಲ್ವರಲ್ಲ, ಇಬ್ಬರು ಮಾತ್ರ: ಸುಧಾಕರ್

    ಬಳ್ಳಾರಿ: ವಿಮ್ಸ್ (VIMS) ದುರಂತ ನಡೆದ ಬಳಿಕ ಇಂದು ಆಸ್ಪತ್ರೆಗೆ (Hospital) ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ (Dr K.Sudhakar)  ವಿಮ್ಸ್‌ನಲ್ಲಿ ಸತ್ತವರು ನಾಲ್ವರಲ್ಲ, ಇಬ್ಬರು ಮಾತ್ರ ಎಂದು ಹೇಳಿಕೆ ನೀಡಿದ್ದಾರೆ.

    ವಿಮ್ಸ್‌ಗೆ ಭೇಟಿ ನೀಡಿ ಮಾಹಿತಿ ಪಡೆದ ಬಳಿಕ ಮಾಧ್ಯಮಗೋಷ್ಠಿ ನಡೆಸಿದ ಸಚಿವರು, ಕಳೆದೆರಡು ವರ್ಷಗಳಲ್ಲಿ ನಾವು ಆರೋಗ್ಯಕ್ಕೆ ಹೆಚ್ಚು ಒತ್ತು ಕೊಟ್ಟಿದ್ದೇವೆ. ನೇಮಕಾತಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ನೀಡಿದ್ದೇವೆ. ನಮ್ಮ ಸರ್ಕಾರ ಅತೀ ಹೆಚ್ಚು ಬದ್ಧತೆಯಿಂದ ಕೆಲಸ ಮಾಡಿದೆ. ವಿಮ್ಸ್‌ನಲ್ಲಿ ಸಾವು ಸಂಭವಿಸಿದ ಮಾಹಿತಿ ಬಂದಾಗ ನನ್ನ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ನಾನು ಸದನಕ್ಕೆ ಮಾಹಿತಿ ಕೊಡಲು ಆಗಿಲ್ಲ. ನನ್ನ ಪರವಾಗಿ ಶ್ರೀರಾಮುಲು ಮಾಹಿತಿ ನೀಡಿದ್ದಾರೆ. ರಾಜ್ಯದ ಜನತೆಗೆ ಸತ್ಯ ತಿಳಿಯಬೇಕು. ಹೀಗಾಗಿ ತನಿಖಾ ಸಮಿತಿ ರಚನೆ ಮಾಡಿ ತನಿಖೆ ನಡೆಸಲಾಗುತ್ತಿದೆ ಎಂದರು. ಇದನ್ನೂ ಓದಿ: ವಿಮ್ಸ್ ದುರಂತ: ಇಂದು ಸಚಿವ ಸುಧಾಕರ್ ಭೇಟಿ – ಕರೆಂಟ್ ಸಮಸ್ಯೆಯಿಂದ ಸಾವಾಗಿಲ್ಲ ಎಂದ ಶ್ರೀರಾಮುಲು

    ಇಲ್ಲಿ ನಡೆದ ಸಂಪೂರ್ಣ ಮಾಹಿತಿಯನ್ನು ತನಿಖಾ ಸಮಿತಿ ಎಲ್ಲ ವಿಭಾಗಗಳಿಂದಲೂ ಮಾಹಿತಿ ಪಡೆದುಕೊಂಡಿದೆ. ರಾಜ್ಯದಲ್ಲಿ ವಿಮ್ಸ್ ಒಂದು ಅತ್ಯುತ್ತಮ ಸಂಸ್ಥೆ. ಇಲ್ಲಿ ಸತ್ತವರ ಸಂಖ್ಯೆ ಎರಡು ಮಾತ್ರ. ಬೆಳಗ್ಗೆ 8:30ಕ್ಕೆ ಕರೆಂಟ್ ಕಟ್ ಆಗಿದೆ. ಒಂದು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಪ್ರತಿ ವಿಭಾಗದ ಮುಖ್ಯಸ್ಥರ ಜೊತೆಯಲ್ಲಿ ನಾನು ಸಭೆ ನಡೆಸಿದ್ದೇನೆ. ಒಬ್ಬ ವ್ಯಕ್ತಿಗೆ ಹಲವಾರು ವರ್ಷಗಳಿಂದ ಕಿಡ್ನಿ ವೈಫಲ್ಯ ಇತ್ತು. ಅವರಿಗೆ ಬಿಪಿ ಹೆಚ್ಚಾಗಿತ್ತು. ಬ್ರೇನ್‍ನಲ್ಲಿ ಬ್ಲೀಡಿಂಗ್ ಕೂಡಾ ಆಗಿತ್ತು. ಈ ಸಮಸ್ಯೆಯನ್ನು ರೋಗಿಯ ಸಂಬಂಧಿಕರಿಗೆ ತಿಳಿಸಿದ್ದಾರೆ. ಬಳಿಕ ಅವರು 9:30ಕ್ಕೆ ಮೃತಪಟ್ಟಿದ್ದಾರೆ. ಇವರಿಗೆ ಎಲ್ಲ ರೀತಿಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇನ್ನೊಬ್ಬ ರೋಗಿಗೂ ಆರೋಗ್ಯ ಸಮಸ್ಯೆ ಇತ್ತು. ಈ ಸಾವು ಹೀಗೆ ಸಂಭವಿಸಿದೆ ಅಂತ ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ಕಾರಣ ನೀಡಿ ಆಸ್ಪತ್ರೆಯ ಆಡಳಿತ ವರ್ಗ ನನಗೆ ರಿಪೋರ್ಟ್ ನೀಡಿದೆ. ಈ ಮಾಹಿತಿಯನ್ನು ತನಿಖಾ ತಂಡಕ್ಕೆ ಸಹ ನೀಡಲಾಗಿದೆ. ಹೆಚ್ಚಿನ ಮಾಹಿತಿ ನೀಡಿದ್ರೆ, ತನಿಖಾ ಸಂಸ್ಥೆಯ ಮೇಲೆ ಪರಿಣಾಮ ಬೀರುತ್ತೆ. ಹೀಗಾಗಿ ನಾನು ಯಾವುದೇ ಮಾಹಿತಿ ನೀಡಲ್ಲ ತನಿಖಾ ಸಂಸ್ಥೆ ನೀಡುವ ವರದಿಯನ್ನು ನಾನು ಸದನಕ್ಕೆ ಒಪ್ಪಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಸಾಧ್ಯವಿಲ್ಲ: ಕೇರಳಕ್ಕೆ ಕರ್ನಾಟಕ ಸರ್ಕಾರ ಸ್ಪಷ್ಟನೆ

    ಈ ಪ್ರಕರಣದ ಹಿಂದೆ ಯಾವುದೇ ಕಾಣದ ಕೈಗಳಿದ್ದರು ಕ್ರಮ ತೆಗೆದುಕೊಳ್ಳುತ್ತೇವೆ. ತನಿಖೆಯ ನಂತರ ಸತ್ಯ ತಿಳಿಯಲಿದೆ ಎಂದರು. ಹಾಗಾದ್ರೆ ಕರೆಂಟ್ ಸಮಸ್ಯೆಯಿಂದ ಸಾವಾಗಿಲ್ಲ ಎನ್ನೋದಾದರೆ ಆಸ್ಪತ್ರೆಯಿಂದ ಉಳಿದ ರೋಗಿಗಳನ್ನು ಶಿಫ್ಟ್ ಮಾಡಿದ್ದೇಕೆ? ಆಸ್ಪತ್ರೆಗೆ ಹೊಸ ಜನರೇಟರ್‌ಗಳನ್ನು ತರಿಸಿದ್ದು ಏಕೆ? ರಾತ್ರೋರಾತ್ರಿ ಕರೆಂಟ್ ವೈರ್ ಬದಲಾಯಿಸಿದ್ದೇಕೆ? ನಾಲ್ವರು ಸಿಬ್ಬಂದಿಗೆ ನೋಟಿಸ್ ನೀಡಿದ್ದು ಯಾಕೆ? ಮೃತರ ಕುಟುಂಬಕ್ಕೆ ಪರಿಹಾರ ನೀಡಿದ್ದು ಏಕೆ ಎಂಬ ಪ್ರಶ್ನೆಗಳು ಈಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

    Live Tv
    [brid partner=56869869 player=32851 video=960834 autoplay=true]

  • ವಿಮ್ಸ್ ದುರಂತ: ಇಂದು ಸಚಿವ ಸುಧಾಕರ್ ಭೇಟಿ – ಕರೆಂಟ್ ಸಮಸ್ಯೆಯಿಂದ ಸಾವಾಗಿಲ್ಲ ಎಂದ ಶ್ರೀರಾಮುಲು

    ವಿಮ್ಸ್ ದುರಂತ: ಇಂದು ಸಚಿವ ಸುಧಾಕರ್ ಭೇಟಿ – ಕರೆಂಟ್ ಸಮಸ್ಯೆಯಿಂದ ಸಾವಾಗಿಲ್ಲ ಎಂದ ಶ್ರೀರಾಮುಲು

    ಬಳ್ಳಾರಿ: ವಿಮ್ಸ್ (VIMS) ದುರಂತಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ಘಟನೆ ನಡೆದು ಇಷ್ಟು ದಿನವಾದರೂ ವಿಮ್ಸ್‌ಗೆ ಭೇಟಿ ನೀಡದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ (Dr. K.Sudhakar)  ವಿರುದ್ಧ ಸ್ವಪಕ್ಷೀಯ ಶಾಸಕರೇ ಮುಗಿ ಬಿದ್ದಿದ್ದು, ಸಚಿವರ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿರೋದು ಎಂದು ಆರೋಪಿಸಿದ್ದಾರೆ.

    ಆರೋಪಗಳ ಬಳಿಕ ಎಚ್ಚೆತ್ತಿರುವ ಸುಧಾಕರ್ ಇಂದು ವಿಮ್ಸ್‌ಗೆ ಭೇಟಿ ನೀಡಲಿದ್ದಾರೆ. ಘಟನೆ ಬಗ್ಗೆ ಅಧಿಕಾರಿಗಳಿಂದ ವಿವರಣೆ ಪಡೆಯಲಿದ್ದಾರೆ. ವಿಮ್ಸ್ ದುರಂತ ಬಗ್ಗೆ ಶ್ರೀರಾಮುಲು (B. Sriramulu) ಮತ್ತೊಮ್ಮೆ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಆಸ್ಪತ್ರೆಯಲ್ಲಿ (Hospital) ಕರೆಂಟ್ ಕಟ್‍ನಿಂದ ಸಮಸ್ಯೆ ಆಗಿಲ್ಲ. ಆಸ್ಪತ್ರೆಯಲ್ಲಿ ವೆಂಟಿಲೇಟರ್ ಚೆನ್ನಾಗಿಯೇ ಕೆಲಸ ಮಾಡುತ್ತಿದೆ. ಆಕ್ಸಿಜನ್ ಸರಬರಾಜಿಗೆ ವಿದ್ಯುತ್ ಸಂಪರ್ಕ ಬೇಕಿಲ್ಲ. ಯಾವುದೇ ಕೇಬಲ್ ಬ್ಲಾಸ್ಟ್ ಆಗಿಲ್ಲ ಎಂದಿದ್ದಾರೆ. ಇದನ್ನೂ ಓದಿ: ವಿಮ್ಸ್‌ನಲ್ಲಿ ಸಾವಿನ ಸರಣಿ- ಸುಧಾಕರ್ ಹಠದಿಂದ ನಿರ್ದೇಶಕರ ನೇಮಕ

    ಹಾಗಾದ್ರೆ ಕರೆಂಟ್ ಸಮಸ್ಯೆಯಿಂದ ಸಾವಾಗಿಲ್ಲ ಎನ್ನೋದಾದರೆ ಆಸ್ಪತ್ರೆಯಿಂದ ಉಳಿದ ರೋಗಿಗಳನ್ನು ಶಿಫ್ಟ್ ಮಾಡಿದ್ದೇಕೆ? ಆಸ್ಪತ್ರೆಗೆ ಹೊಸ ಜನರೇಟರ್‌ಗಳನ್ನು ತರಿಸಿದ್ದು ಏಕೆ? ರಾತ್ರೋರಾತ್ರಿ ಕರೆಂಟ್ ವೈರ್ ಬದಲಾಯಿಸಿದ್ದೇಕೆ? ನಾಲ್ವರು ಸಿಬ್ಬಂದಿಗೆ ನೋಟಿಸ್ ನೀಡಿದ್ದು ಯಾಕೆ? ಮೃತರ ಕುಟುಂಬಕ್ಕೆ ಪರಿಹಾರ ನೀಡಿದ್ದು ಏಕೆ ಎಂಬ ಪ್ರಶ್ನೆಗಳು ಈಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ಜೊತೆಗೆ ನಿನ್ನೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಡಾ. ಕೆ ಸುಧಾಕರ್, ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ವಿಮ್ಸ್‌ಗೆ ಭೇಟಿ ನೀಡ್ತೇನೆ. ಸಾವು ಸಾವೇ, ಈಗಾಗಲೇ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಮುಂದೆ ಈ ರೀತಿ ಆಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು. ಇದನ್ನೂ ಓದಿ: ವಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಸಾಕ್ಷಿ- ಘಟನೆಯ ಭೀಕರತೆ ವೀಡಿಯೋದಲ್ಲಿ ಬಯಲು

    Live Tv
    [brid partner=56869869 player=32851 video=960834 autoplay=true]

  • 2,500 ಅಡಿ ಉದ್ದದ ತಿರಂಗಾ ವಾಕಥಾನ್‍ಗೆ ಸುಧಾಕರ್ ಚಾಲನೆ

    2,500 ಅಡಿ ಉದ್ದದ ತಿರಂಗಾ ವಾಕಥಾನ್‍ಗೆ ಸುಧಾಕರ್ ಚಾಲನೆ

    ಚಿಕ್ಕಬಳ್ಳಾಪುರ: 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಅಂಗವಾಗಿ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಜನರಲ್ಲಿ ಜಾಗೃತಿ ಹಾಗೂ ಪ್ರೇರೇಪಣೆ ಮೂಡಿಸುವ ಸಲುವಾಗಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ 2,500 ಅಡಿ ಉದ್ದದ ತಿರಂಗಾ ಯಾತ್ರೆ ನಡೆಸಲಾಯಿತು.

    ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೇತೃತ್ವದಲ್ಲಿ 2,500 ಅಡಿ ಉದ್ದದ ತ್ರಿವರ್ಣ ಧ್ವಜದ ವಾಕಥಾನ್ ನಡೆಸಲಾಗಿಯಿತು. ನಗರದ ಎಂಜಿ ರಸ್ತೆಯ ಜೈ ಭೀಮ್ ವಿದ್ಯಾರ್ಥಿನಿಲಯದಿಂದ ಬಿಬಿರಸ್ತೆಯ ಮೂಲಕ ಸಾಗಿ ಒಕ್ಕಲಿಗರ ಕಲ್ಯಾಣಮಂಟಪದ ಬಳಿ ವಾಕಥಾನ್ ಅಂತ್ಯವಾಯಿತು. ಈ ವಾಕಥಾನ್‍ನಲ್ಲಿ ಸಾವಿರಾರು ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಊಟ ನೀಡೋ ವಿಚಾರಕ್ಕೆ ಜಗಳ – ಬಾಮೈದನಿಂದಲೇ ಯೋಧನ ಕೊಲೆ

    ಆಗಸ್ಟ್ 13 ರಿಂದ 15 ರವರೆಗೆ ದೇಶದಲ್ಲಿ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇಂದು ಆಯೋಜಿಸಿದ್ದ ವಾಕಥಾನ್ ಇಡೀ ನಗರದಲ್ಲಿ ಸಂಚಲನವನ್ನೇ ಮೂಡಿಸಿತ್ತು. ಸುಮಾರು 2,500 ಅಡಿಗಳ ಉದ್ದದ ರಾಷ್ಟ್ರಧ್ವಜದೊಂದಿಗೆ ಹೆಜ್ಜೆ ಹಾಕಿದ ಸಾವಿರಾರು ಶಾಲಾ-ಕಾಲೇಜ್ ವಿದ್ಯಾರ್ಥಿಗಳೊಂದಿಗೆ ಬೆಳ್ಳಂ ಬೆಳಗ್ಗೆ ಆರೋಗ್ಯ ಸಚಿವರು ಹೆಜ್ಜೆ ಹಾಕಿ ಹುರುಪು ತುಂಬಿದರು. ಹೆಜ್ಜೆ ಹೆಜ್ಜೆಗೂ ಭಾರತ್ ಮಾತಾಕಿ ಜೈ ಉದ್ಘೋಷ ಅನುಕರಣಿಸುತ್ತಿದ್ದ ಮೆರವಣಿಗೆಯಲ್ಲಿ ಎಲ್ಲರ ಕೈಯಲ್ಲೂ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದ್ದವು. ಬ್ಯಾಂಡ್ ಸೆಟ್‌ಗಳು, ಡಿಜೆ ಶಬ್ದದ ಅಬ್ಬರದ ನಡುವೆ ರಾಷ್ಟ್ರಪ್ರೇಮ ಉಕ್ಕೇರಿಸುವ ಘೋಷಣೆಗಳು ಮೊಳಗಿದವು. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ – ಅಂಚೆ ಇಲಾಖೆಯಿಂದ 10 ದಿನಗಳಲ್ಲಿ 1 ಕೋಟಿ ಧ್ವಜ ಮಾರಾಟ

    ರಸ್ತೆಯುದ್ದಕ್ಕೂ ತ್ರಿವರ್ಣ ಧ್ವಜಗಳ ಹಾರಾಟ ಯುವ ವಿದ್ಯಾರ್ಥಿಗಳ ಜೈಕಾರದ ಅರ್ಭಟ ಕೇಳಿಬಂತು. ನಾಗರಿಕರು, ಅಧಿಕಾರಿಗಳು, ಶಿಕ್ಷಕರು ವಾಕಥಾನ್‍ನಲ್ಲಿ ಭಾಗವಹಿಸಿ ತಿರಂಗಾ ಅಭಿಯಾನ ಜಾಗೃತಿ ನಡಿಗೆಗೆ ಮೆರುಗು ತುಂಬಿದರು.

    Live Tv
    [brid partner=56869869 player=32851 video=960834 autoplay=true]

  • ನಿಮ್ಮದೆಲ್ಲಾ ಬಯಲಿಗೆ ಎಳೆಯುತ್ತೇನೆ ಜಸ್ಟ್ ವೇಟ್: ಎಂ.ಸಿ.ಸುಧಾಕರ್‌ಗೆ ಸಚಿವ ಸುಧಾಕರ್ ವಾರ್ನಿಂಗ್

    ನಿಮ್ಮದೆಲ್ಲಾ ಬಯಲಿಗೆ ಎಳೆಯುತ್ತೇನೆ ಜಸ್ಟ್ ವೇಟ್: ಎಂ.ಸಿ.ಸುಧಾಕರ್‌ಗೆ ಸಚಿವ ಸುಧಾಕರ್ ವಾರ್ನಿಂಗ್

    ಚಿಕ್ಕಬಳ್ಳಾಪುರ: ನಿಮ್ಮದೆಲ್ಲಾ ಬಯಲಿಗೆ ಎಳೆಯುತ್ತೇನೆ ಜಸ್ಟ್ ವೇಟ್ ಎಂದು ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್‍ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಖಡಕ್ ಎಚ್ಚರಿಕೆ ನೀಡಿದರು.

    ಶುಕ್ರವಾರ ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆದ ಪ್ರತಿಭಟನೆ ವೇಳೆ ಚಿಕ್ಕಬಳ್ಳಾಪುರ ಕ್ಷೇತ್ರವನ್ನ ಬಳ್ಳಾರಿಗೆ ಹೋಲಿಸಲಾಗಿತ್ತು. ಈ ವೇಳೆ ಬಳ್ಳಾರಿಯ ರಿಪಬ್ಲಿಕ್‍ನಂತೆ ಚಿಕ್ಕಬಳ್ಳಾಪುರ ಕ್ಷೇತ್ರವೂ ಸಹ ಕುಸಿದು ಬೀಳಲಿದೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಬಗ್ಗೆ ರಿಪಬ್ಲಿಕನ್ ಅನ್ನೋ ಪದ ಬಳಸಿ ಸಚಿವ ಸುಧಾಕರ್ ವಿರುದ್ಧ ಮಾಜಿ ಶಾಸಕ ಸುಧಾಕರ್ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ವಿಮಾನದಲ್ಲಿದ್ದ ಪ್ರಯಾಣಿಕರ ಜೀವ ಉಳಿಸಿದ ತೆಲಂಗಾಣ ರಾಜ್ಯಪಾಲ 

    ಎಂ.ಸಿ.ಸುಧಾಕರ್ ವಾಗ್ದಾಳಿಗೆ ಕಿಡಿಕಾರಿರುವ ಸಚಿವ ಸುಧಾಕರ್ ಅವರು, ಚಿಂತಾಮಣಿಯಲ್ಲಿ ಮೂರು ತಲೆಮಾರಿನ ರಿಪಬ್ಲಿಕ್ ಯಾರು ಮಾಡಿದ್ದಾರೆ? 10 ವರ್ಷದಿಂದ ನಿಮ್ಮನ್ನ ಜನ ಮನೆಯಲ್ಲಿ ಕೂರಿಸಿದ್ದಾರೆ. ಈಗಲಾದ್ರೂ ಸ್ವಲ್ಪ ಬುದ್ಧಿ ಕಲಿತುಕೊಳ್ಳಿ. ಇದೇ ಅಹಂಕಾರ ಮುಂದುವರಿದ್ರೆ ಒಳ್ಳೆಯದಲ್ಲ. ಇಷ್ಟು ದಿನ ನಾನು ಎಲ್ಲಾದ್ರೂ ಹೋಗಲಿ ಅಂತ ಸುಮ್ಮನೆ ಬಿಟ್ಟಿದ್ದೆ ಎಂದು ಆಕ್ರೋಶ ಹೊರಹಾಕಿದರು.

    ಎಲ್ಲ ಕೇಸುಗಳಲ್ಲಿ ಸಿಕ್ಕಿ ಹಾಕಿಕೊಂಡು ಇಷ್ಟು ವರ್ಷ ಸುಮ್ಮನೆ ಇದ್ರು. ದೇವಸ್ಥಾನ ಬಿಟ್ಟಿಲ್ಲ, ಸರ್ಕಾರಿ ಆಸ್ತಿ ಬಿಟ್ಟಿಲ್ಲ. ಸರ್ಕಾರಿ ಆಸ್ತಿಗಳಲ್ಲಿ ಸೈಟ್ ಮಾಡಿ ಮಾರಾಟ ಮಾಡಿದ್ದೀರಿ. ನಿಮ್ಮ ಹತ್ರ ನಾನು ನೀತಿ ಪಾಠ ಕೇಳಬೇಕಾ? ಯಾವ ಮುಖ ಇಟ್ಕೊಂಡು ನನ್ನ ಬಗ್ಗೆ ಮಾತಾಡ್ತೀರಾ? ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ:  ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಬಯಸುತ್ತಿದ್ದಾರೆ: ಜಮೀರ್ 

    ನಾನು ಆಗಲೀ, ನನ್ನ ಕುಟುಂಬ ಆಗಲೀ ಸರ್ಕಾರಿ ಆಸ್ತಿಯನ್ನ 1 ಇಂಚು ಮಾಡಿಕೊಂಡಿಲ್ಲ. ಮಾಡಿಕೊಂಡಿದ್ರೆ ತೋರಿಸಿ ಅಂತ ಸವಾಲು ಹಾಕಿದ್ರು. ಹೀಗಾಗಿ ನಿಮ್ಮದೆಲ್ಲಾ ಬಯಲಿಗೆ ಎಳೆಯುತ್ತೇನೆ ಕಾಯುತ್ತ ಇರಿ ಎಂದು ವಾರ್ನಿಂಗ್ ಕೊಟ್ಟರು.

    Live Tv
    [brid partner=56869869 player=32851 video=960834 autoplay=true]

  • ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ತಾಯಿಗೆ ಸಾಂತ್ವನ ಹೇಳಿದ ಸುಧಾಕರ್

    ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ತಾಯಿಗೆ ಸಾಂತ್ವನ ಹೇಳಿದ ಸುಧಾಕರ್

    ಚಿಕ್ಕಬಳ್ಳಾಪುರ: ನಗರದಲ್ಲಿ ಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡು ಮೃತಪಟ್ಟ ಚಿಕ್ಕಬಳ್ಳಾಪುರ ತಾಲೂಕಿನ ಬಾಲಕುಂಟಹಳ್ಳಿ ಗ್ರಾಮದ ಯುವಕ ನವೀನ್ ಅವರ ನಿವಾಸಕ್ಕೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಭೇಟಿ ನೀಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಸಾವಿನ ನಂತರವೂ ಅಂಗಾಂಗ ದಾನದ ಮೂಲಕ ಐದು ಮಂದಿಯ ಜೀವ ಉಳಿಸುವ ಜೊತೆಗೆ, ಐದು ಮಂದಿಗೆ ಹೊಸ ಬದುಕು ನೀಡಿ ಬೆಳಕಾದ ನವೀನ್ ಎಲ್ಲರಿಗೂ ಮಾದರಿಯಾಗಿದ್ದಾರೆ. ಪ್ರತಿಯೊಬ್ಬರಿಗೂ ಸಾವು ಬರುತ್ತದೆ. ಆದರೆ ನವೀನ್‍ರಂತಹ ಕೆಲವರು ಮಾತ್ರ ಮೃತಪಟ್ಟ ನಂತರವೂ ಜೀವಂತವಾಗಿರುತ್ತಾರೆ ಎಂದರು. ಇದನ್ನೂ ಓದಿ: ಊಟ ಬಿಟ್ಟು ಮರವಂತೆಗೆ ಸಿಎಂ ದೌಡಾಯಿಸಿದ್ದು ಯಾಕೆ?

    ಅಂಗಾಂಗ ದಾನ ಮಾಡಿದ ನವೀನ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವರು ನಂತರ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿ, ಐದು ಮಂದಿಗೆ ಜೀವದಾನ ಮಾಡಿದ ನವೀನ್ ಮತ್ತು ಅವರ ಕುಟುಂಬದ ಕಾರ್ಯ ಶ್ಲಾಘನೀಯವಾಗಿದೆ. ನವೀನ್ ಅಂಗಾಂಗಗಳ ರೂಪದಲ್ಲಿ ಸದಾ ಜೀವಂತವಾಗಿರಲಿದ್ದಾನೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಪ್ರೇಯಸಿಯನ್ನು ಚಾಕುವಿನಿಂದ ಇರಿದು ಪೊಲೀಸರಿಗೆ ಶರಣಾದ

    ಮಾದರಿಯಾದ ನವೀನ್ ಕುಟುಂಬ:
    ಗ್ರಾಮೀಣ ಪ್ರದೇಶದಲ್ಲಿ ಜನಿಸಿದವರಿಗೆ ಅಂಗಾಂಗ ದಾನದ ಬಗ್ಗೆ ಹಲವಾರು ಮೂಢನಂಬಿಕೆಗಳಿರುತ್ತವೆ. ಹಾಗಾಗಿ ಅಂಗಾಂಗಳನ್ನು ದಾನ ಮಾಡಲು ಸಹಜವಾಗಿಯೇ ಹಿಂಜರಿಕೆ ಇರುತ್ತದೆ. ಆದರೆ ಯಾವುದೇ ನಂಬಿಕೆಗಳಿಗೆ ಜೋತು ಬೀಳದೆ ಹಲವರ ಬಾಳಿಗೆ ಆಸರೆಯಾದ ನವೀನ್ ಕುಟುಂಬದ ಕಾರ್ಯ ಮಾದರಿಯಾಗಿದೆ. ಇಂತಹ ಆದರ್ಶಗಳಿಂದ ವ್ಯಕ್ತಿ ಸಾವಿನಲ್ಲೂ ಸಾರ್ಥಕತೆ ಮೆರೆಯಲು ಸಾಧ್ಯವಾಗಲಿದೆ ಎಂದರು. ಸರ್ಕಾರದಿಂದ ನವೀನ್ ಕುಟುಂಬಕ್ಕೆ ದೊರೆಯಬೇಕಾದ ಎಲ್ಲ ಸವಲತ್ತುಗಳನ್ನು ದೊರಕಿಸಿಕೊಡುವ ಭರವಸೆ ನೀಡಿದರು.

    Live Tv
    [brid partner=56869869 player=32851 video=960834 autoplay=true]