Tag: ಡಾ ಕೆ ಸುಧಾಕರ್

  • ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ: ರಮೇಶ್ ಕುಮಾರ್

    ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ: ರಮೇಶ್ ಕುಮಾರ್

    ವಿಜಯಪುರ: ನಾನು ಈ ದೇಶದ ಪ್ರಜೆ, ಕಾನೂನನ್ನು ಗೌರವಿಸುತ್ತೇನೆ. ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆರೋಗ್ಯ ಸಚಿವ ಸುಧಾಕರ್‍ ಗೆ ತಿರುಗೇಟು ನೀಡಿದ್ದಾರೆ.

    ಕೆಲದಿನಗಳ ಹಿಂದೆ ಸುಧಾಕರ್, ರಮೇಶ್ ಕುಮಾರ್ ಡಿಸಿಸಿ ಬ್ಯಾಂಕ್‍ನ ಬ್ರಹ್ಮಾಂಡ ಭ್ರಷ್ಟಾಚಾರವನ್ನ ಬಯಲಿಗೆ ಎಳೆಯುತ್ತೇನೆ ಎಂದು ಪರೋಕ್ಷವಾಗಿ ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಮೇಶ್ ಕುಮಾರ್, ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ ಇದಕ್ಕೆ ನಂದೇನು ತಕರಾರಿಲ್ಲ. ಅವರ ಕೆಲಸ ಅವರು ಮುಂದುವರಿಸಲಿ. ವೈಯಕ್ತಿಕವಾಗಿ ನನಗೆ ಯಾರ ಮೇಲು ದ್ವೇಷವಿಲ್ಲ. ಅವರದೇ ಸರ್ಕಾರ ಅಂದ ಮೇಲೆ ಅವರು ಯೋಚನೆ ಮಾಡಿಯೇ ಮಾತನಾಡಿರುತ್ತಾರೆ. ಅವರು ಮಾತನಾಡುವಾಗ ಗೌರವಯುತವಾಗಿ, ಯೋಚನೆ ಮಾಡಿ ಮಾತನಾಡಬೇಕು. ಆಡಳಿತ ಪಕ್ಷದವರು ಹೀಗೆ ಮಾಡುತ್ತಾರೆ ಎಂದರೆ ಅವರ ಬಳಿ ಸಾಕ್ಷ್ಯಾಧಾರ ಇರಬೇಕು ಎಂದು ಪರೋಕ್ಷವಾಗಿ ಕುಟುಕಿದರು. ಇದನ್ನೂ ಓದಿ: ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ

    ಆರ್‌ಎಸ್‌ಎಸ್‌ ಟೀಕಾ ಪ್ರಹಾರ ವಿಚಾರವಾಗಿ ಮಾತನಾಡಿ, ನಾನೊಬ್ಬ ಸಾಮಾನ್ಯ ಮನುಷ್ಯ, ಏನೋ ಗ್ರಹಚಾರಕ್ಕೆ ರಾಜಕೀಯಕ್ಕೆ ಬಂದಿರುತ್ತೇವೆ. ಜನಾ ನಮಗೊಂದು ಅವಕಾಶ ಕೊಟ್ಟಿರುತ್ತಾರೆ. ದೊಡ್ಡದೊಡ್ಡವರ ವಿಚಾರಕ್ಕೆಲ್ಲಾ ನಾನು ಮಾತನಾಡುವುದಿಲ್ಲ. ಸಂಘದ ಬಗ್ಗೆ ನನಗೇನು ಅನಿಸುವುದಿಲ್ಲ. ಅದೊಂದು ಸಂಘಟನೆ, ಅವರ ಪಾಡಿಗೆ ಅವರಿದ್ದಾರೆ. ಹೇಳಬೇಕಾದ ಅಗತ್ಯ ಬಂದಾಗ ಹೇಳುತ್ತೇನೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನಿಮ್ಮಪ್ಪನ ಮನೆ ಆಸ್ತಿನಾ? – ರಮೇಶ್ ಕುಮಾರ್ ವಿರುದ್ಧ ಸುಧಾಕರ್ ವಾಗ್ದಾಳಿ

  • ದೌರ್ಜನ್ಯ ಆರೋಪ – ದಲಿತ ಮಹಿಳೆ ಮನೆಗೆ ಭೇಟಿ ನೀಡಿದ ಸುಧಾಕರ್

    ದೌರ್ಜನ್ಯ ಆರೋಪ – ದಲಿತ ಮಹಿಳೆ ಮನೆಗೆ ಭೇಟಿ ನೀಡಿದ ಸುಧಾಕರ್

    ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ದಲಿತ ಮಹಿಳೆ ಮೇಲೆ ನ್ಯಾಯಬೆಲೆ ಅಂಗಡಿ ವಿತರಕಿಯಿಂದ ಜಾತಿನಿಂದನೆ ಮಾಡಿ ದೌರ್ಜನ್ಯ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ದಲಿತ ಮಹಿಳೆಯ ಮನೆಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಸಾಂತ್ವನ ಹೇಳಿದರು.

    ನಿನ್ನೆ ಕಾಟೇನಹಳ್ಳಿ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಹೋಗಿದ್ದ ದಲಿತ ಸಮುದಾಯದ ಮಹಿಳೆ ನಾರಾಯಣಮ್ಮ, ಅಕ್ಕಿಯಲ್ಲಿ ರಾಗಿ ಮಿಶ್ರಣವಾಗಿದೆ. ಹೀಗಾಗಿ ನನಗೆ ಈ ಅಕ್ಕಿ ಬೇಡ ಎಂದು ವಾದ ಮಾಡಿ ಚೆಲ್ಲಿದ್ದಾರೆ. ಈ ಸಂಬಂಧ ಪಡಿತರ ವಿತರಣೆ ಮಾಡುತ್ತಿದ್ದ ಪದ್ಮಾವತಮ್ಮ ಹಾಗೂ ನಾರಾಯಣಮ್ಮ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ನಗರದಲ್ಲಿ ಅಂರ್ತಜಲ ಮಟ್ಟ ಭಾರೀ ಏರಿಕೆ – ಕಟ್ಟಡಗಳಿಗೆ ಕಾದಿದೆಯಾ ಅಪಾಯ?

    ಈ ಘಟನೆಯಾದ ನಂತರ ನಾರಾಯಣಮ್ಮ ಮಗ ಸೆಲ್ಫಿ ವೀಡಿಯೋ ಮಾಡಿ ಪದ್ಮಾವತಮ್ಮ ನನ್ನ ಪ್ರಶ್ನೆ ಮಾಡಿದ್ದು, ಈ ವೇಳೆ ಅನಕ್ಷರಸ್ಥಳಾದ ಪದ್ಮಾವತಮ್ಮ ಸಮರ್ಪಕ ಉತ್ತರ ನೀಡದೆ ಹಾರಿಕೆ ಉತ್ತರ ನೀಡಿದ್ದಳು. ಇದೇ ವೀಡಿಯೋವನ್ನ ನಾರಾಯಣಮ್ಮ ಮಗ ಸೋಶಿಯಲ್ ಮೀಡಿಯಾಗೆ ಹಾಕಿದ್ದು, ಈ ವೀಡಿಯೋ ವೈರಲ್ ಆಗಿತ್ತು. ಕಾರ್ಯಕ್ರಮ ನಿಮಿತ್ತ ವರಲಕೊಂಡ ಬಳಿ ಆಗಮಿಸಿದ್ದ ಸುಧಾಕರ್ ಅವರು ವಿಷಯ ತಿಳಿದು ಕಾಟೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ದಲಿತ ಮಹಿಳೆ ನಾರಾಯಣಮ್ಮ ಮನೆಗೆ ಭೇಟಿ ನೀಡಿದರು.

    ಎಸ್‍ಪಿ-ಡಿಸಿ ಹಾಗೂ ಆಹಾರ ಇಲಾಖೆ ನಿರ್ದೇಶಕಿಯನ್ನು ಸಹ ಭೇಟಿ ಮಾಡಿದ್ದಾರೆ. ಅದು ಅಲ್ಲದೇ ಸ್ಥಳದಲ್ಲೇ ನ್ಯಾಯಬೆಲೆ ಅಂಗಡಿಯ ಪರವಾನಿಗೆ ರದ್ದು ಮಾಡಿ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಆಹಾರ ಇಲಾಖೆ ಉಪನಿರ್ದೇಶಕಿ, ಘಟನೆ ಸಂಬಂಧ ಪ್ರಾಥಮಿಕ ತನಿಖೆಯಲ್ಲಿ ಮೇಲ್ನೋಟಕ್ಕೆ ತೂಕದಲ್ಲಿ ಕಡಿಮೆ ವಿತರಣೆ, ಥಂಬ್ ಪಡೆಯಲು 10 ರೂ. ವಸೂಲಿ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ.

    ಅದು ಅಲ್ಲದೇ ಮಹಿಳೆ ಮೇಲೆ ದೌರ್ಜನ್ಯ ನಡೆಸಿದ ಬಗ್ಗೆ ಮಾಹಿತಿ ಸಿಕ್ಕಿದ್ದು, ನ್ಯಾಯಬೆಲೆ ಅಂಗಡಿ ಪರವಾನಿಗೆ ರದ್ದು ಮಾಡಲಾಗಿದೆ. ಸೋಮೇನಹಳ್ಳಿ ವಿ ಎಸ್ ಎಸ್ ಎನ್ ಮೂಲಕ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಉತ್ತರ ಕರ್ನಾಟಕ ಭಾಗದ ಜನರು ಮುಗ್ದರು : ಡಾ.ಚಂದ್ರಶೇಖರ್ ಕಂಬಾರ

    ನ್ಯಾಯಬೆಲೆ ಅಂಗಡಿ ಪರವಾನಿಗೆ ಪದ್ಮಾವತಮ್ಮ ಅವರ ತಾಯಿ ನಾಗರತ್ನ ಹೆಸರಲ್ಲಿದೆ. ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪದ್ಮಾವತಮ್ಮ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಪ್ರಸ್ತುತ ಪದ್ಮಾವತಮ್ಮ ನಾಪತ್ತೆಯಾಗಿದ್ದಾರೆ.

     

  • ಮೇಕ್ ಇನ್ ಇಂಡಿಯಾದಿಂದ ನವಭಾರತ ನಿರ್ಮಾಣ: ಡಾ.ಕೆ.ಸುಧಾಕರ್

    ಮೇಕ್ ಇನ್ ಇಂಡಿಯಾದಿಂದ ನವಭಾರತ ನಿರ್ಮಾಣ: ಡಾ.ಕೆ.ಸುಧಾಕರ್

    – ಆತ್ಮನಿರ್ಭರ ಭಾರತ ನಿರ್ಮಾಣ

    ಬೆಂಗಳೂರು: ಕೋವಿಡ್ ಆರಂಭದಲ್ಲಿ ವೈದ್ಯಕೀಯ ಸಾಧನಗಳ ಕೊರತೆ ಇತ್ತು. ನಂತರ ಮೇಕ್ ಇನ್ ಇಂಡಿಯಾದಿಂದಾಗಿ ಹೊರದೇಶಗಳಿಗೂ ಸಾಧನಗಳನ್ನು ರಫ್ತು ಮಾಡುವ ಸಾಮಥ್ರ್ಯ ಬಂದಿದ್ದು, ಇದರಿಂದ ನವಭಾರತ ನಿರ್ಮಾಣವಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

    ಐಐಟಿಪಿಎಲ್ ನ ನೂತನ ಕ್ಯಾತ್ ಲ್ಯಾಬ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗಾಗಿ ‘ಮೇಕ್ ಇನ್ ಇಂಡಿಯಾ’ ಕರೆ ನೀಡಿದ್ದಾರೆ. ಉತ್ಪಾದನಾ ವಲಯದಲ್ಲಿ ಎಫ್‍ಡಿಐ ಹೂಡಿಕೆ 2014 ಕ್ಕಿಂತ ಮುನ್ನ 20 ಬಿಲಿಯನ್ ಡಾಲರ್ ಇತ್ತು. ಈಗ ಮೂರು ಪಟ್ಟು ಹೆಚ್ಚಿದ್ದು, 68 ಬಿಲಿಯನ್ ಡಾಲರ್ ಹೂಡಿಕೆ ಬಂದಿದೆ. ಹೆಚ್ಚಿನ ವೈದ್ಯಕೀಯ ಉಪಕರಣಗಳಿಗಾಗಿ ನಾವು ಬೇರೆ ದೇಶಗಳನ್ನು ಅವಲಂಬಿಸಿದ್ದೇವೆ. ಆದರೆ ಐಐಟಿಪಿಎಲ್ ಕಂಪನಿ ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಯಡಿಯೂರಪ್ಪ ವ್ಯಕ್ತಿ ಅಲ್ಲ ದೊಡ್ಡ ಶಕ್ತಿ: ಶ್ರೀರಾಮುಲು

    ಈ ಹಿಂದೆ ಪಿಪಿಇ ಕಿಟ್ ಗೂ ಚೀನಾವನ್ನು ಅವಲಂಬಿಸಬೇಕಾಗಿತ್ತು. ನಂತರ ಮೋದಿ ಅವರ ಪ್ರಯತ್ನದಿಂದ ಅನೇಕ ದೇಶೀಯ ಕಂಪನಿಗಳು ಮಾಸ್ಕ್, ಪಿಪಿಇ ಕಿಟ್ ತಯಾರಿಸಿ ವಿದೇಶಗಳಿಗೂ ರಫ್ತು ಮಾಡುವಂತಾಯಿತು. ಇದರಿಂದ ನವಭಾರತ ನಿರ್ಮಾಣ ಸಾಧ್ಯವಾಗಿದೆ ಎಂದರು.

    ಭಾರತ ಮಧುಮೇಹಿಗಳು ಹೆಚ್ಚಿರುವ ಕೇಂದ್ರವಾಗಿದೆ. ಇದು ಬೇರೆ ರೋಗಗಳಿಗೂ ದಾರಿ ಮಾಡಿಕೊಡುತ್ತದೆ. ಸಾಂಕ್ರಾಮಿಕ ರೋಗಗಳಲ್ಲಿ ಹೆಚ್ಚಿನವು ಹೃದಯ ಸಂಬಂಧಿ ರೋಗಗಳಿಗೆ ಸಂಬಂಧಿಸಿದೆ. ಇದಕ್ಕಾಗಿ ಚಿಕಿತ್ಸೆ ನೀಡಲು ಅನೇಕ ವೈದ್ಯಕೀಯ ಉಪಕರಣಗಳು ಬೇಕಿದ್ದು, ಇದು ಸಾಮಾಜಿಕ ಪರಿಣಾಮವನ್ನೂ ಬೀರುತ್ತದೆ. ಇದು ಕೇವಲ ಉದ್ಯಮವಾಗಿರದೆ ಜನರ ಜೀವನದ ಮೇಲೆ ಪರಿಣಾಮ ಬೀರುವ ಅಂಶವೂ ಆಗಿದೆ. 3-4 ಲಕ್ಷ ರೂ. ಬೆಲೆಬಾಳುವ ಉಪಕರಣಗಳನ್ನು ಬೆಂಗಳೂರಿನಲ್ಲೇ ಉತ್ಪಾದಿಸಲು ಐಐಟಿಪಿಎಲ್ ಕಂಪನಿ ಮೂಲಸೌಕರ್ಯ ಅಭಿವೃದ್ಧಿಪಡಿಸಿದ್ದು, ಇದು ಜನರಿಗೆ ಅನುಕೂಲವಾಗಲಿದೆ. ಇಂತಹ ಹೂಡಿಕೆದಾರರು ಹಾಗೂ ಸಂಶೋಧಕರಿಗೆ ಸರ್ಕಾರ ಎಲ್ಲ ಬಗೆಯ ನೆರವು ನೀಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾಪತ್ತೆಗೂ ಮುನ್ನ ಖತರ್ನಾಕ್ ಪ್ಲಾನ್ ಮಾಡಿದ್ದ ಯುವತಿ, ಮಕ್ಕಳು

    ಶೀಘ್ರದಲ್ಲೇ ಸಭೆ

    ಕೋವಿಡ್ ಗೆ ಸಂಬಂಧಿಸಿದ ತೀರ್ಮಾನಗಳನ್ನು ಕೈಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇದಕ್ಕೂ ಮೊದಲು ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗುವುದು. ಕೋವಿಡ್ ಒಂದು ರಾಜ್ಯ ಅಥವಾ ದೇಶಕ್ಕೆ ಸೀಮಿತವಾಗಿಲ್ಲ. ರಾಜ್ಯದಲ್ಲಿ 83% ಮೊದಲ ಲಸಿಕೆ ಡೋಸ್, 38% ಎರಡೂ ಡೋಸ್ ನೀಡಲಾಗಿದೆ. ರಾಜ್ಯದಲ್ಲಿ ಸದ್ಯಕ್ಕೆ ತೀವ್ರ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.

  • ಮದ್ವೆಯಾದ ಬಳಿಕ ಒಂಟಿಯಾಗಿ ಜೀವಿಸ್ತಿರೋದು ಅವರ ನಾಯಕ- ಸುಧಾಕರ್‌ಗೆ ನಿಂಬಾಳ್ಕರ್ ಟಾಂಗ್

    ಮದ್ವೆಯಾದ ಬಳಿಕ ಒಂಟಿಯಾಗಿ ಜೀವಿಸ್ತಿರೋದು ಅವರ ನಾಯಕ- ಸುಧಾಕರ್‌ಗೆ ನಿಂಬಾಳ್ಕರ್ ಟಾಂಗ್

    ಬೆಳಗಾವಿ: ಮದುವೆಯಾದ ಬಳಿಕ ಒಂಟಿಯಾಗಿ ಜೀವಿಸುತ್ತಿರುವುದು ಅವರ ನಾಯಕ. ಒಂಟಿಯಾಗಿ ಜೀವಿಸುವ ಅವರ ನಾಯಕ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಏನಾದರೂ ಪ್ರತಿಕ್ರಿಯೆಗಳಿವೆಯಾ ಎಂದು ಸಚಿವ ಡಾ. ಕೆ ಸುಧಾಕರ್ ಅವರಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಶ್ನಿಸಿದ್ದಾರೆ.

    ಆಧುನಿಕ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಇಂತಹ ಪುರುಷರಿಗೆ ಆಪ್ತ ಸಮಾಲೋಚನೆಯ ಅವಶ್ಯವಿದೆ. ವಿಶ್ವ ಮಾನಸಿಕ ಆರೋಗ್ಯ ದಿನದಂದು ಆಪ್ತ ಸಮಾಲೋಚನೆಯ ಅವಶ್ಯವಿದೆ. ಆಧುನಿಕ ಮಹಿಳೆ ತನಗೆ ಇಷ್ಟ ಬಂದಂತೆ ಜೀವಿಸಲಿ. ಇದನ್ನ ಬೇರೆಯವರು ನಿರ್ಧರಿಸೋದಲ್ಲ ಆಕೆಯೇ ನಿರ್ಧರಿಸಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆಧುನಿಕ ಮಹಿಳೆಯರು ಮದುವೆ ಆದ್ರೆ ಮಕ್ಕಳನ್ನು ಹೆರಲು ಬಯಸಲ್ಲ: ಸುಧಾಕರ್

    ಸುಧಾಕರ್ ಹೇಳಿದ್ದೇನು..?
    ಭಾನುವಾರ ನಿಮ್ಹಾನ್ಸ್ ನಲ್ಲಿ ನಡೆದ ಅಂತರರಾಷ್ಟ್ರೀಯ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವರು, ಕೂಡು ಕುಟುಂಬಗಳ ನಶಿಸುವಿಕೆ ವಿಚಾರ ಪ್ರಸ್ತಾಪ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.

    ಮುತ್ತಾತ-ಮುತ್ತಜ್ಜಿ ಇರುವುದು ಬಿಡಿ, ನಾವು ನಮ್ಮ ಹೆತ್ತವರು ನಮ್ಮ ಜೊತೆಗೆ ಇರಲು ಬಯಸಲ್ಲ. ಇವತ್ತು ಇದನ್ನು ಹೇಳಲು ಬೇಸರ ಆಗುತ್ತೆ. ಭಾರತದಲ್ಲಿ ಬಹಳಷ್ಟು ಅಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸ್ತಾರೆ. ಒಂದು ವೇಳೆ ಅವರು ಮದುವೆ ಆದರೂ ಅವರು ಜನ್ಮ ನೀಡಲು ಬಯಸಲ್ಲ. ಅವರು ಬೇರೆಯವರಿಂದ ಮಗು ಹೆರಲು ಇಷ್ಟಪಡುತ್ತಾಳೆ. ಹೀಗಾಗಿ ನಮ್ಮ ಆಲೋಚನೆಯಲ್ಲಿ ವಿಚಿತ್ರ ಬದಲಾವಣೆ ಆಗಿದೆ, ಅದು ಒಳ್ಳೆಯದಲ್ಲ ಎಂದಿದ್ದರು. ಇದನ್ನೂ ಓದಿ: ಕೊಟ್ಟ ಮಾತಿನಂತೆ ನಡೆದುಕೊಂಡ ರೇಣುಕಾಚಾರ್ಯ – ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಸಹಾಯ

    ಬಹಳ ಮಹಿಳೆಯರು ಮದುವೆಯಾದರೂ ಮಕ್ಕಳಿಗೆ ಜನ್ಮ ಕೊಡಲು ಹಿಂಜರಿಯುತ್ತಾರೆ. ಅದರ ಬದಲು ಬಾಡಿಗೆ ತಾಯಂದಿರಿಂದ ಮಕ್ಕಳನ್ನು ಪಡೆಯುತ್ತಾರೆ. ಅವರ ಆಲೋಚನೆಯ ದೃಷ್ಟಿಕೋನವೇ ಸಂಪೂರ್ಣ ಬದಲಾಗಿದೆ. ಇಂತಹ ದೃಷ್ಟಿಕೋನ ಸೂಕ್ತವಲ್ಲ ಎಂದು ಸಚಿವರು ಹೇಳಿದ್ದರು.

  • ಆಧುನಿಕ ಮಹಿಳೆಯರು ಮದುವೆ ಆದ್ರೆ ಮಕ್ಕಳನ್ನು ಹೆರಲು ಬಯಸಲ್ಲ: ಸುಧಾಕರ್

    ಆಧುನಿಕ ಮಹಿಳೆಯರು ಮದುವೆ ಆದ್ರೆ ಮಕ್ಕಳನ್ನು ಹೆರಲು ಬಯಸಲ್ಲ: ಸುಧಾಕರ್

    – ಹೆಚ್ಚಿನವರು ಒಂಟಿಯಾಗಿರಲು ಬಯಸುತ್ತಾರೆ, ಇದು ಒಳ್ಳೆಯದಲ್ಲ

    ಬೆಂಗಳೂರು: ಆಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸುತ್ತಾರೆ. ಮದುವೆ ಆದರೆ ಮಕ್ಕಳನ್ನು ಹೆರಲು ಬಯಸಲ್ಲ. ಇದು ಒಳ್ಳೆಯದಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದು, ಇದೀಗ ವಿವಾದಕ್ಕೀಡಾಗಿದೆ.

    ಭಾನುವಾರ ನಿಮ್ಹಾನ್ಸ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವರು, ವಿವಾಹಿತ ಸುಶಿಕ್ಷಿತ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪೇಚಿಗೆ ಸಿಲುಕಿದ್ದಾರೆ. ಕೂಡು ಕುಟುಂಬಗಳ ನಶಿಸುವಿಕೆ ವಿಚಾರ ಪ್ರಸ್ತಾಪ ವೇಳೆ ಸಚಿವರು ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ: ಎಚ್‍ಡಿಕೆ

    ಮುತ್ತಾತ-ಮುತ್ತಜ್ಜಿ ಇರುವುದು ಬಿಡಿ, ನಾವು ನಮ್ಮ ಹೆತ್ತವರು ನಮ್ಮ ಜೊತೆಗೆ ಇರಲು ಬಯಸಲ್ಲ. ಇವತ್ತು ಇದನ್ನು ಹೇಳಲು ಬೇಸರ ಆಗುತ್ತೆ. ಭಾರತದಲ್ಲಿ ಬಹಳಷ್ಟು ಅಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸ್ತಾರೆ. ಒಂದು ವೇಳೆ ಅವರು ಮದುವೆ ಆದರೂ ಅವರು ಜನ್ಮ ನೀಡಲು ಬಯಸಲ್ಲ. ಅವರು ಬೇರೆಯವರಿಗಾಗಿ ಮಗು ಹೆರಲು ಇಷ್ಟಪಡುತ್ತಾಳೆ. ಹೀಗಾಗಿ ನಮ್ಮ ಆಲೋಚನೆಯಲ್ಲಿ ವಿಚಿತ್ರ ಬದಲಾವಣೆ ಆಗಿದೆ, ಅದು ಒಳ್ಳೆಯದಲ್ಲ ಎಂದಿದ್ದಾರೆ.

    ಬಹಳಷ್ಟು ಮಹಿಳೆಯರು ಮದುವೆಯಾದರೂ ಮಕ್ಕಳಿಗೆ ಜನ್ಮ ಕೊಡಲು ಹಿಂಜರಿಯುತ್ತಿದ್ದು, ಬಾಡಿಗೆ ತಾಯಂದಿರಿಂದ ಮಕ್ಕಳನ್ನು ಪಡೆಯುತ್ತಾರೆ. ಅವರ ಆಲೋಚನೆಯ ದೃಷ್ಟಿಕೋನವೇ ಸಂಪೂರ್ಣ ಬದಲಾಗಿದೆ. ಇಂತಹ ದೃಷ್ಟಿಕೋನ ಸೂಕ್ತವಲ್ಲ ಎಂದು ಹೇಳಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಚಿವರ ಹೇಳಿಕೆಗೆ ಭಾರೀ ಆಕ್ರೋಶ ಹಾಗೂ ಟೀಕೆ ವ್ಯಕ್ತವಾಗುತ್ತಿದೆ.

    ಸಚಿವರ ಈ ಹೇಳಿಕೆಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡಿ..

  • ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಜೊತೆ ಲಸಿಕೆ ಅಭಿಯಾನಕ್ಕೆ ಕೇಂದ್ರ ಸಚಿವರ ಮೆಚ್ಚುಗೆ

    ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಜೊತೆ ಲಸಿಕೆ ಅಭಿಯಾನಕ್ಕೆ ಕೇಂದ್ರ ಸಚಿವರ ಮೆಚ್ಚುಗೆ

    ಬೆಂಗಳೂರು: ರಾಜ್ಯದಲ್ಲಿನ ಕೋವಿಡ್-19 ಸೋಂಕಿನ ನಿರ್ವಹಣೆ ಹಾಗೂ ಲಸಿಕೆ ಕಾರ್ಯಕ್ರಮದ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್‍ಸುಖ್ ಮಾಂಡವೀಯ ಅವರು ಮೆಚ್ಚುಗೆ ವ್ಯಕ್ತಪಡಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಿದರು.

    ಇಂದು ನಗರದ ಎಸ್.ಡಿ.ಎಸ್-ಟಿ.ಆರ್.ಸಿ ಮತ್ತು ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯ ಆವರಣದಲ್ಲಿ ಸರ್ಕಾರದ ಮತ್ತು ಸಿ.ಎಸ್.ಆರ್. ಅನುದಾನದಡಿಯಲ್ಲಿ ನಿರ್ಮಿಸಲಾಗಿರುವ ಕೋವಿಡ್ ಫೀಲ್ಡ್ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಲಸಿಕೆ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ರಾಜ್ಯದಲ್ಲಿ ಶೇ.83 ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, ಸೆಪ್ಟೆಂಬರ್ 17ರಂದು ನಡೆಸಿದ ವಿಶೇಷ ಅಭಿಯಾನದಲ್ಲಿ ದೇಶದಲ್ಲಿ ಒಟ್ಟು 2.5 ಕೋಟಿ ಡೋಸ್ ಲಸಿಕೆ ನೀಡಲಾಯಿತು. ಇದರಲ್ಲಿ ಕರ್ನಾಟಕ ರಾಜ್ಯ ಅತಿ ಹೆಚ್ಚು ಲಸಿಕೆ ನೀಡಿ ದಾಖಲೆ ನಿರ್ಮಿಸಿದ್ದು, ಇದಕ್ಕಾಗಿ ಕರ್ನಾಟಕ ಸರ್ಕಾರ ಹಾಗೂ ರಾಜ್ಯದ ಜನತೆಯನ್ನು ಸಚಿವರು ಅಭಿನಂದಿಸಿದರು. ಇದನ್ನೂ ಓದಿ: ಬಿಸಿಲಿನಲ್ಲಿ ಬಾಸ್ಕೆಟ್ ಬಾಲ್ ಆಡಿದ ರಣ್‍ವೀರ್ – ಸಿಕ್ಸ್ ಪ್ಯಾಕ್ ನೋಡಿ ಹುಡ್ಗೀರು ಕ್ಲೀನ್ ಬೋಲ್ಡ್

    ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣದಲ್ಲಿದ್ದರೂ ಇನ್ನೂ ಅಂತ್ಯವಾಗಿಲ್ಲ. ಆದ್ದರಿಂದ ಸರ್ಕಾರಗಳು ಜಾಗರೂಕರಾಗಿರುವುದು ಅತಿ ಮುಖ್ಯ. ಈ ನಿಟ್ಟಿನಲ್ಲಿ ಅಗತ್ಯವಿದ್ದೆಡೆ ಸುಲಭವಾಗಿ ಸ್ಥಳಾಂತರಿಸಬಹುದಾದ ಫೀಲ್ಡ್ ಆಸ್ಪತ್ರೆಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುತ್ತಿರುವುದು ಒಂದು ದೂರದೃಷ್ಟಿಯ ನಡೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ  ಬಸವರಾಜ ಬೊಮ್ಮಾಯಿ ಅವರು, ಪ್ರತಿ ಜಿಲ್ಲೆಯಲ್ಲಿ ಫೀಲ್ಡ್ ಆಸ್ಪತ್ರೆ ಸ್ಥಾಪಿಸಲು ಸರ್ಕಾರ ಸಿದ್ಧವಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಅಡಿ ನೆರವು ನೀಡುವ ಮೂಲಕ ಕಾರ್ಪೊರೇಟ್ ಸಂಸ್ಥೆಗಳು ತಾವು ಬೆಳೆಯಲು ಅನುವು ಮಾಡಿಕೊಟ್ಟ ಸಮಾಜಕ್ಕೆ ಕೊಡುಗೆ ನೀಡಿ, ಉಪಕಾರ ಸ್ಮರಣೆ ಮಾಡುತ್ತಿವೆ. ಸರ್ಕಾರದ ಪ್ರಯತ್ನಗಳಲ್ಲಿ ಕೈಜೋಡಿಸುವ ಈ ಸಂಸ್ಥೆಗಳ ಉಪಕಾರಸ್ಮರಣೆಯನ್ನು ಸರ್ಕಾರ ಮಾಡುವುದು ಎಂದು ತಿಳಿಸಿದರು. ಇದನ್ನೂ ಓದಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ

    ಹುಟ್ಟಿದ ಕೂಡಲೇ ಯಾರೂ ದೊಡ್ಡವರಾಗುವುದಿಲ್ಲ. ನಮ್ಮ ಪೋಷಕರು, ಗುರುಗಳು, ನಮ್ಮ ಸಮಾಜ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಬೆಳವಣಿಗೆಗೆ ಕೊಡುಗೆ ನೀಡುತ್ತಾರೆ. ನಾವು ಬೆಳೆಯುವುದರೊಂದಿಗೆ ನಮ್ಮ ಸುತ್ತಮುತ್ತಲಿನವರನ್ನೂ ಬೆಳೆಸಬೇಕು. ಸಮಾಜಕ್ಕೆ ನಾವು ಪಡೆದುಕೊಂಡಿರುವುದರಲ್ಲಿ ಕಿಂಚಿತ್ತಾದರೂ ಹಿಂತಿರುಗಿಸಬೇಕು. ಆಗ ಬದುಕಿನ ಬ್ಯಾಲೆನ್ಸ್ ಶೀಟ್ ತಾಳೆಯಾಗುವುದು ಎಂದು ನುಡಿದರು.

    ಉಚಿತವಾಗಿ ಲಸಿಕೆ ಒದಗಿಸುವ ಮೂಲಕ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಕೋವಿಡ್ ಸೋಂಕು ನಿಯಂತ್ರಿಸಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ಸಚಿವರು ಹಾಗೂ ಭಾರತ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದರು. ಆರೋಗ್ಯ ಕ್ಷೇತ್ರದಲ್ಲಿ ಸಿ.ಎಸ್.ಆರ್. ಉಪಕ್ರಮಗಳ ಅಧ್ಯಕ್ಷೆಯಾಗಿರುವ ಗೀತಾಂಜಲಿ ಕಿರ್ಲೋಸ್ಕರ್ ಅವರ ಪ್ರಯತ್ನವನ್ನು ಶ್ಲಾಘಿಸಿದ ಮುಖ್ಯಮಂತ್ರಿಯವರು, ಹಿಂದುಳಿದ ಜಿಲ್ಲೆಗಳಲ್ಲಿ ಮತ್ತು ಅಗತ್ಯವಿರುವ ಜಿಲ್ಲೆಗಳಲ್ಲಿ ಇಂತಹ ಫೀಲ್ಡ್ ಆಸ್ಪತ್ರೆ ಸ್ಥಾಪಿಸಲು ಮುಂದಾಗುವಂತೆ ಸಲಹೆ ನೀಡಿದರು. ಇದಕ್ಕೆ ಸರ್ಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    ಇಂದು ಉದ್ಘಾಟಿಸಲಾದ ಕೋವಿಡ್ ಫೀಲ್ಡ್ ಆಸ್ಪತ್ರೆಗೆ ನೋಕಿಯ, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್, ಸ್ವಸ್ತಿ, ಮತ್ತಿತರ ಸಂಸ್ಥೆಗಳು ಸಹಕಾರ ನೀಡಿದ್ದವು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸದ ಪಿ.ಸಿ. ಮೋಹನ್, ಶಾಸಕ ಉದಯ್ ಗರುಡಾಚಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಬಿಜೆಪಿಗೆ ವಲಸಿಗರು ಸೊಸೆ ಇದ್ದಂತೆ, ಮನೆಯಲ್ಲಿ ಎಲ್ಲರ ವಿಶ್ವಾಸ ಗಳಿಸಬೇಕು: ಸುಧಾಕರ್

    ಬಿಜೆಪಿಗೆ ವಲಸಿಗರು ಸೊಸೆ ಇದ್ದಂತೆ, ಮನೆಯಲ್ಲಿ ಎಲ್ಲರ ವಿಶ್ವಾಸ ಗಳಿಸಬೇಕು: ಸುಧಾಕರ್

    ನವದೆಹಲಿ: ಬಿಜೆಪಿಗೆ ವಲಸಿಗರು ಸೊಸೆ ಇದ್ದಂತೆ, ಸೊಸೆ ಮನೆಯಲ್ಲಿ ಎಲ್ಲರ ವಿಶ್ವಾಸ ಗಳಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾರ್ಮಿಕವಾಗಿ ನುಡಿದಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಗೆ ವಲಸಿಗರು ಸೊಸೆ ಇದ್ದಂತೆ, ಸೊಸೆ ಮನೆಯಲ್ಲಿ ಎಲ್ಲರ ವಿಶ್ವಾಸ ಗಳಿಸಬೇಕು. ಗಂಡ, ಅತ್ತೆ ಸೇರಿದಂತೆ ಎಲ್ಲರ ವಿಶ್ವಾಸ ಅವಶ್ಯಕ. ಹೀಗಾಗಿ ವಲಸಿಗರು ಆಕ್ಟಿವ್ ಆಗಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮಾಡಿದರೇ ಅವರಿಗೆ ನಮ್ಮ ಮೇಲೆ ವಿಶ್ವಾಸ ಬರಲಿದೆ ಎಂದರು.

    ಜನತಾ ಪರಿವಾರದಿಂದ ಕಾಂಗ್ರೆಸ್ ಗೆ ಹೋಗೋದು ಒಂದೇ, ಕಾಂಗ್ರೆಸ್ ನಿಂದ ಬಿಜೆಪಿಗೆ ಬರೋದು ಒಂದೆ. ಜೆಡಿಎಸ್ ಜೊತೆಗೆ ಕಾಂಗ್ರೆಸ್ ಹೋಗಿದ್ದು ಇಷ್ಟ ಇರಲಿಲ್ಲ. ಹೀಗಾಗಿ ನಾನು ರಾಜೀನಾಮೆ ನೀಡಿದೆ ಎಂದು ರಾಜೀನಾಮೆ ಬಗ್ಗೆ ಮಾತನಾಡಿದರು. ಇದನ್ನೂ ಓದಿ: ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಾಧ್ಯತೆ: ಸುಧಾಕರ್

    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬಿಜೆಪಿ ಶಾಸಕರನ್ನು ಕಾಂಗ್ರೆಸ್ ಸೆಳೆಯುತ್ತೆ ಎಂದು ಹೇಳಿಲ್ಲ. ಚುನಾವಣೆ ಸಮಯದಲ್ಲಿ ನಡೆಯುವ ಸಹಜ ಪಕ್ಷಾಂತರದ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶಾಸಕರು ಹೋಗಬಹುದೆಂಬ ಭಯ ಬಿಜೆಪಿಗೆ ಇಲ್ಲ. ಬಿಜೆಪಿಯ ಶಾಸಕರಾರೂ ಬೇರೆ ಪಕ್ಷಗಳಿಗೆ ಹೋಗುತ್ತಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಶಾಸಕರಿಗೆ ಅವರ ಮೇಲೆ ವಿಶ್ವಾಸವಿದೆ ಎಂದು ಡಾ.ಸುಧಾಕರ್ ಹೇಳಿದರು.

    ಯಡಿಯೂರಪ್ಪ ಅವರ ಜಾಗವನ್ನು ಬಸವರಾಜ್ ಬೊಮ್ಮಾಯಿ ಅವರು ಭರ್ತಿ ಮಾಡುವ ಬಗ್ಗೆ ಕುತೂಹಲ ಇತ್ತು. ಬೊಮ್ಮಾಯಿಯವರು ಈ ಜಾಗ ತುಂಬಬಹುದೇ ಅನ್ನೊ ಪ್ರಶ್ನೆ ಇತ್ತು. ಆದರೆ ಕಳೆದ ಎರಡು ತಿಂಗಳ ಅವಧಿಯಲ್ಲಿ ಆ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳು ಉತ್ತರ ನೀಡಿದ್ದಾರೆ. ಸರ್ಕಾರದಲ್ಲಿ ಬೊಮ್ಮಾಯಿ ಅವರು ಉತ್ತಮ ವಾತಾವರಣ ಸೃಷ್ಟಿಸಿದ್ದಾರೆ. ಹೊಸ ಯಶಸ್ವಿ ಸಾರಥಿ ಸಿಕ್ಕಿದ್ದಾರೆ, ಎಲ್ಲರನ್ನೂ ದಡ ಮುಟ್ಟಿಸುವ ಹುರುಪು ಶಾಸಕರಿಗೆ ಬಂದಿದೆ. ಹೀಗಾಗಿ ಮುಂದಿನ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ ಎಂದು ತಿಳಿಸಿದರು.

  • ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಾಧ್ಯತೆ: ಸುಧಾಕರ್

    ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಾಧ್ಯತೆ: ಸುಧಾಕರ್

    ನವದೆಹಲಿ: ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ನೀಡುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಿಗಬಹುದು. ಈ ಕುರಿತು ಭಾರತ್ ಬಯೋಟೆಕ್ ಮತ್ತು ಝೈಡಸ್ ಕ್ಯಾಡಿಲಾ ಲಸಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಝೈಡಸ್ ವ್ಯಾಕ್ಸಿನ್ ಬೆಲೆ ನಿರ್ಣಯ ಮಾಡಬೇಕಿದೆ. ನವೆಂಬರ್ ವೇಳೆಗೆ ಭಾರತ್ ಬಯೋಟೆಕ್ ಈ ಲಸಿಕೆಗೆ ಅನುಮತಿ ಸಿಗಬಹುದು. ಮೂಗಿನ ಮೂಲಕ ಪಡೆಯುವ ವ್ಯಾಕ್ಸಿನ್ ಬಗ್ಗೆ ಸಹ ಚರ್ಚೆ ನಡೆದಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ವಿವರಿಸಿದರು.

    ಸಿರೋ ಸಮೀಕ್ಷೆಯಲ್ಲಿ ರಾಜ್ಯದ ಜನರಲ್ಲಿ ಶೇ.60ರಷ್ಟು ರೋಗ ನಿರೋಧಕ ಶಕ್ತಿ ಇದೆ. ಕೆಲವು ಕಡೆ ಶೇ.70ಕ್ಕೂ ಅಧಿಕ ಇದೆ. ನವೆಂಬರ್ ಡಿಸೆಂಬರ್ ವರೆಗೂ ಕಾದು ನೋಡಬೇಕು. ಕೊರೊನಾ ರೂಪಾಂತರದ ಬಗ್ಗೆ ಯೋಚನೆ ಮಾಡಬೇಕು. ಹೊಸ ರೂಪಾಂತರಿ ಬಗ್ಗೆ ಈಗಲೇ ಹೇಳುವುದು ಕಷ್ಟ. ಸಾಂಕ್ರಾಮಿಕ ರೋಗ ಗೆಲ್ಲಬೇಕು ಎಂದರೆ ಒಂದು ರಾಜ್ಯ, ದೇಶದಲ್ಲಿ ಕೈಯಲ್ಲಿ ಇಲ್ಲ. ಇಡೀ ಪ್ರಪಂಚದಲ್ಲಿ ನಿಯಂತ್ರಣ ಮಾಡಬೇಕು. ಭಾರತದಲ್ಲಿ ಎಲ್ಲರಿಗೂ ವ್ಯಾಕ್ಸಿನ್ ನೀಡದ ಹೊರತು ಕೋವಿಡ್ ನಿಯಂತ್ರಣಕ್ಕೆ ಬರುತ್ತೆ ಎಂಬುದು ಗ್ಯಾರಂಟಿ ಇಲ್ಲ. ಎಲ್ಲ ಕಡೆಯೂ ಕೊರೊನಾ ನಿಯಂತ್ರಣಕ್ಕೆ ಬರಬೇಕಿದೆ ಎಂದರು. ಇದನ್ನೂ ಓದಿ: ಸಿಕ್ಕಿಂನಲ್ಲಿ ಮಿನರಲ್ ವಾಟರ್ ಬಾಟಲ್ ಬ್ಯಾನ್

    ದಸರಾ ಬಳಿಕ ಸಭೆ ನಡೆಸಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ತಿರ್ಮಾನ ಮಾಡಲಿದ್ದೇವೆ. 1-12 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚು ರೋಗ ನಿರೋಧಕ ಶಕ್ತಿ ಇರುತ್ತದೆ. ಹೀಗಾಗಿ 1-5 ತರಗತಿಗಳನ್ನು ಶುರು ಮಾಡಬೇಕು. ಆದರೆ ಪೋಷಕರ ಅಭಿಪ್ರಾಯ ಮೇಲೆ ಕಾಲೇಜು ಶುರು ಮಾಡಿ, ಬಳಿಕ ಹಂತ ಹಂತವಾಗಿ ಹೈಸ್ಕೂಲ್ ವರೆಗೂ ಶಾಲೆಗಳನ್ನು ಆರಂಭಿಸಿದ್ದೇವೆ. ಪ್ರಾಥಮಿಕ ಶಾಲೆಗಳನ್ನೂ ಅದೇ ರೀತಿ ಆರಂಭಿಸಲಾಗುವುದು ಎಂದರು.

    ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇನೆ. 9, 10ರಂದು ರಾಜ್ಯಕ್ಕೆ ಆಹ್ವಾನ ನೀಡಿದ್ದೇವೆ. ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಆಹ್ವಾನಿಸಿದ್ದೇನೆ. 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಬೆಡ್ ಸಂಖ್ಯೆ ಹೆಚ್ಚು ಮಾಡುವುದು, ಮೂಲಭೂತ ಸೌಕರ್ಯ ಹೆಚ್ಚಿಸುವುದು, ವೈದ್ಯರು, ನರ್ಸ್ ಗಳಿಗೆ ವಸತಿ ನಿಲಯ ನಿರ್ಮಿಸಲು ಚಿಂತಿಸಲಾಗಿದೆ. ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಚಿಂತಿನೆ ನಡೆದಿದೆ. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಹ್ವಾನ ನೀಡಿದ್ದೇನೆ. ಅಲ್ಲದೆ ಅನುದಾನ ನೀಡುವಂತೆ ಸಹ ಕೇಳಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: 200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ

    ಕೊವೀಡ್ ನಿರ್ವಹಣೆಗಾಗಿ ಮೊದಲ ಪ್ರಶಸ್ತಿ ರಾಜ್ಯ ಸರ್ಕಾರಕ್ಕೆ ಬಂದಿದೆ. ರಾಷ್ಟ್ರೀಯ ವಾಹಿನಿಯಿಂದ ಅವಾರ್ಡ್ ಬಂದಿದೆ. ಈ ಪ್ರಶಸ್ತಿಯನ್ನು ಕೊರೊನಾ ಯೋಧರಿಗೆ ಅರ್ಪಣೆ ಮಾಡುತ್ತೇನೆ. ವೈದ್ಯರಿಂದ ಎಲ್ಲ ಫ್ರಂಟ್ ಲೈನ್ ವಾರಿಯರ್ಸ್ ಗೆ ಅರ್ಪಣೆ ಮಾಡುತ್ತೇನೆ. ಎಲ್ಲರ ಶ್ರಮದಿಂದ ರಾಜ್ಯಕ್ಕೆ ಮೊದಲ ಪ್ರಶಸ್ತಿ ಬಂದಿದೆ. ಈ ಪ್ರಶಸ್ತಿ ಮತ್ತಷ್ಟು ಹುರುಪು ತುಂಬಿದ್ದು, ಮತ್ತಷ್ಟು ಕೆಲಸ ಮಾಡಲು ಪ್ರೊತ್ಸಾಹಿಸದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಿಂದ ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದರು.

  • ಆರೋಗ್ಯ ಕರ್ನಾಟಕ ಬೊಮ್ಮಾಯಿ ಸರ್ಕಾರದ ಗುರಿ: ಸುಧಾಕರ್

    ಆರೋಗ್ಯ ಕರ್ನಾಟಕ ಬೊಮ್ಮಾಯಿ ಸರ್ಕಾರದ ಗುರಿ: ಸುಧಾಕರ್

    ಮೈಸೂರು: ಆರೋಗ್ಯ ಕರ್ನಾಟಕ ಕಟ್ಟಬೇಕು ಎಂಬುದು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಸರ್ಕಾರದ ಗುರಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನೋತ್ಸವದ ಅಂಗವಾಗಿ ನಗರದ ವಿದ್ಯಾರಣ್ಯಪುರಂನ ರಾಮಲಿಂಗೇಶ್ವರ ದೇವಸ್ಥಾನದ ಉದ್ಯಾನವನದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮೋದಿ ಯುಗ್ ಉತ್ಸವ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇದನ್ನೂ ಓದಿ: ಪಾದಯಾತ್ರೆ ಶಾಪದಿಂದ ಬಿಎಸ್‍ವೈ ಅಧಿಕಾರ ಕಳೆದುಕೊಂಡರು: ಕಾಶಪ್ಪನವರ್

    ಕೋವಿಡ್ ಬಂದಂತಹ ಸಂದರ್ಭದಲ್ಲಿ ಲಸಿಕೆ ಬರುವುದಿಲ್ಲ. ಈ ಸರ್ಕಾರ ಮಾರ್ಗಸೂಚಿಗಳನ್ನಾಗಲಿ ಅಥವಾ ಕೆಲಸವನ್ನಾಗಲಿ ಸರಿಯಾದ ರೀತಿಯಲ್ಲಿ ಮಾಡುತ್ತಿಲ್ಲ ಎಂದು ಪ್ರಾರಂಭದಿಂದ ಟೀಕೆಗಳನ್ನು ಮಾಡಲಾಗುತ್ತಿತ್ತು. ಲಸಿಕೆ ಬಂದಂತಹ ಸಂದರ್ಭದಲ್ಲಿ ಬಿಜೆಪಿ ಲಸಿಕೆ, ಮೋದಿ ಲಸಿಕೆ ಎಂದೂ ಸಹ ಟೀಕಿಸಲಾಗಿತ್ತು. ಈ ಲಸಿಕೆಯ ಬಗ್ಗೆ ಸಾಕಷ್ಟು ತಪ್ಪು ಸಂದೇಶ ಹಾಗೂ ಮಾಹಿತಿಗಳು ಹೋದವು. ಇದರಿಂದ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂಜರಿದರು ಎಂದರು.

    ದೇಶದ ಕಂಪನಿಗಳೇ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ತಯಾರಿಸಿದವು. ವಿಶ್ವದ ಇತರೆ ಲಸಿಕೆಗಳ ಜೊತೆಗೆ ಸರಿಸಮಾನವಾಗಿ ನಮ್ಮ ಲಸಿಕೆಗಳು ಹೊರಬಂದಿರುವುದು ಐತಿಹಾಸಿಕವಾದದ್ದು. ಇದರಿಂದ ಮೋದಿ ಅವರ ಆತ್ಮನಿರ್ಬರ ಭಾರತ ಕನಸು ನನಸಾಗಿದೆ ಎಂದರು. ಇದನ್ನೂ ಓದಿ: ಎರಡು ಉಪಚುನಾವಣೆಯಲ್ಲಿ ಬಿಜೆಪಿ ಧೂಳಿಪಟ ಖಚಿತ: ಎಸ್‍ಆರ್ ಪಾಟೀಲ್

    ಕೋವಿಡ್ 3ನೇ ಅಲೆ ಕಡಿಮೆ ಪ್ರಮಾಣದಲ್ಲಿಯೇ ಇದೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ. ಒಂದುವೇಳೆ 3ನೇ ಅಲೆ ಬಂದರೂ ಅದನ್ನು ನಿಯಂತ್ರಿಸುವ ಕಾರ್ಯ ಮಾಡಲಾಗುವುದು. ಈಗಾಗಲೇ ಮಕ್ಕಳಿಗೆ ಲಸಿಕೆ ನೀಡಲು ಟ್ರಯಲ್ ನಡೆಯುತ್ತಿದೆ. ಶೀಘ್ರವಾಗಿ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ ಎಂದರು. ವಿಶ್ವದಲ್ಲೇ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ ಇದ್ದರೆ ಅದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಂದಂತಹ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ. ಇದರಿಂದ ಬಡಜನರಿಗೆ ಲಕ್ಷಾಂತರ ರೂಪಾಯಿ ಉಳಿತಾಯವಾಗಲಿದೆ ಎಂದು ಹೇಳಿದರು.

    ಶಾಸಕರಾದವರು ರಸ್ತೆಗಳನ್ನು, ಕಟ್ಟಡಗಳನ್ನು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಾರೆ. ಆದರೆ ಶಾಸಕ ರಾಮದಾಸ್ ಅವರು ಕ್ಷೇತ್ರದ ಮನೆಯ ಸದಸ್ಯರಾಗಿ ಪ್ರತಿಯೊಬ್ಬರ ಆರೋಗ್ಯವನ್ನು ವಿಚಾರಿಸುತ್ತಿರುವುದು ವಿನೂತನವಾದ ಕಾರ್ಯಕ್ರಮವಾಗಿದೆ ಅವರ ಕಾರ್ಯ ಮೆಚ್ಚುವಂತದ್ದು ಎಂದರು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ನಡೆಸುತ್ತಿದ್ದಾರೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ರಕ್ತದಾನ ಮಾಡುವ ದಾನಿಗಳು ಕಡಿಮೆಯಾಗಿದ್ದು, ಕೋವಿಡ್ ಮಾತ್ರ ಕಡಿಮೆಯಾಗಿಲ್ಲ. ರಕ್ತದ ಅವಶ್ಯಕತೆ ಹಾಗೆ ಇದೆ. ನಮ್ಮಲ್ಲಿನ ಸಂಶೋಧನಕಾರರು ಎಲ್ಲವನ್ನೂ ಕಂಡುಹಿಡಿದಿದ್ದರೂ ಕೃತಕ ರಕ್ತವನ್ನು ತಯಾರು ಮಾಡುವುದನ್ನು ಸಾಧ್ಯವಾಗಿಲ್ಲ. ಹೀಗಾಗಿ ರಕ್ತಕ್ಕೆ ಪರ್ಯಾವಾಗಿ ವವ್ಯಸ್ಥೆ ಇಲ್ಲ. ಹೀಗಾಗಿ ರಕ್ತದಾನ ಒಂದು ಪುಣ್ಯವಾದ ಕಾರ್ಯವಾಗಿದೆ ಎಂದು ಹೇಳಿದರು.

    ಕಾರ್ಯಕ್ರದಲ್ಲಿ ಎಸ್.ಎ.ರಾಮದಾಸ್, ಎಂ.ಎಂ.ಸಿ.ಆರ್.ಐ ನಿರ್ದೇಶಕ ಡಾ.ಸಿ.ಪಿ.ನಂಜರಾಜ್, ಗಣಪತಿ ಸಚ್ಚಿದಾನಂದ ಆಶ್ರಮದ ಶ್ರೀ ವಿಜಯಾನಂದ ತೀರ್ಥಸ್ವಾಮೀಜಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್, ತಾಲೂಕು ವೈದ್ಯಾಧಿಕಾರಿ ಡಾ.ಮಹದೇವ ಪ್ರಸಾದ್ ಸೇರಿದಂತೆ ಇತರರು ಹಾಜರಿದ್ದರು.

  • ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ: ಬೊಮ್ಮಾಯಿ

    ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ: ಬೊಮ್ಮಾಯಿ

    ಬೆಂಗಳೂರು: ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ವಿಶ್ವ ಹೃದಯ ದಿನಾಚರಣೆ ಅಂಗವಾಗಿ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಇಂದು ಆಯೋಜಿಸಿದ್ದ ಹೃದಯದಿಂದ ಬಾಂಧವ್ಯ ಬೆಳೆಸೋಣ ವಾಕಥಾನ್ ಗೆ ಬೊಮ್ಮಾಯಿ ಅವರು ಚಾಲನೆ ನೀಡಿ ಮಾತನಾಡಿದರು. ಇದನ್ನೂ ಓದಿ: 10 ತಿಂಗಳ ಶಿಕ್ಷೆ ತಪ್ಪಿಸಲು 9 ವರ್ಷದಿಂದ ತಲೆ ಮರೆಸಿಕೊಂಡ ಆರೋಪಿ ಅಂದರ್

    ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯ ಸ್ನೇಹಿ ಚಟುವಟಿಕೆಯಾದ ಬಿರುಸಿನ ನಡಿಗೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಬಿರುಸಿನ ನಡಿಗೆ ಸಹಾಯಕ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಹೃದಯ ಮನುಷ್ಯನ ಅಂಗಗಳ ಪೈಕಿ ಅತ್ಯಂತ ಪ್ರಮುಖ ಅಂಗ ಎಂದ ಅವರು ಹೃದಯಾಘಾತವಾದಾಗ ಪ್ರಾಥಮಿಕ ಚಿಕಿತ್ಸೆ ಕುರಿತಂತೆ ಮಾಹಿತಿ ಪ್ರತಿಯೊಬ್ಬರಿಗೂ ಅತ್ಯಗತ್ಯ ಎಂದು ತಿಳಿಸಿದರು.

    ಶೇ.60 ರಷ್ಟು ಸಂಭವಿಸುವ ಅಕಾಲಿಕ ಮರಣಗಳಲ್ಲಿ ಶೇ.25 ರಷ್ಟು ಸಾವುಗಳು ಹೃದಯರೋಗದಿಂದ ಸಂಭವಿಸುತ್ತಿದೆ. ಇದನ್ನು ತಡೆಗಟ್ಟಲು ಬಿರುಸಿನ ನಡಿಗೆ ಅತ್ಯುತ್ತಮ ವ್ಯಾಯಾಮವಾಗಿದೆ. ರಾಜ್ಯದ ಜನತೆ ಪ್ರತಿದಿನ ಶ್ರಮಜೀವನಕ್ಕೆ ಬದ್ಧರಾಗಿರಬೇಕು. ಕನಿಷ್ಠ ಅರ್ಧ ಗಂಟೆಯಾದರೂ ಬಿರುಸಿನ ನಡಿಗೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಕಾರಲ್ಲೇ ಕೂರಿಸಿ ಯುವಕ, ಯುವತಿಯ ವೀಡಿಯೋ ರೆಕಾರ್ಡ್ – 5 ಲಕ್ಷಕ್ಕೆ ಬೆದರಿಕೆ

    ಬಿರುಸಿನ ನಡಿಗೆಗೆ ಸ್ಫೂರ್ತಿ ತುಂಬಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದಿನಿಂದ ನಿಯಮಿತವಾಗಿ ವಾಕಿಂಗ್ ಮಾಡುವ ಪ್ರತಿಜ್ಞೆಯನ್ನು ಮುಖ್ಯಮಂತ್ರಿಗಳು ಕೈಗೊಂಡರು. ವ್ಯಕ್ತಿ ಹಾಗೂ ಸಮುದಾಯದ ಆರೋಗ್ಯ ಬಹಳ ಮುಖ್ಯ. ಹೃದಯ ಸದಾ ಬಡಿಯುವ ಅಂಗ, ಇದನ್ನು ಆರೋಗ್ಯಕರವಾಗಿಡುವ ಮೂಲಕ ಆರೋಗ್ಯವಂತ ರಾಜ್ಯವನ್ನು ಕಟ್ಟೋಣ ಎಂದು ತಿಳಿಸಿದರು.

    ಈ ವೇಳೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಂಸದ ಪಿ.ಸಿ ಮೋಹನ್, ಜಿಲ್ಲಾಧಿಕಾರಿ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.