Tag: ಡಾ.ಗೋವಿಂದ್ ಸ್ವರೂಪ್

  • ಭಾರತದ ರೇಡಿಯೊ ಖಗೋಳ ವಿಜ್ಞಾನ ಜನಕ ನಿಧನ – ಪ್ರಧಾನಿ ಸಂತಾಪ

    ಭಾರತದ ರೇಡಿಯೊ ಖಗೋಳ ವಿಜ್ಞಾನ ಜನಕ ನಿಧನ – ಪ್ರಧಾನಿ ಸಂತಾಪ

    ಮುಂಬೈ: ಭಾರತದ ರೇಡಿಯೊ ಖಗೋಳ ವಿಜ್ಞಾನ ಜನಕ ಡಾ.ಗೋವಿಂದ್ ಸ್ವರೂಪ್ (91) ನಿಧನರಾಗಿದ್ದಾರೆ.

    ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಗೋವಿಂದ್ ಸ್ವರೂಪ್ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಪುಣೆಯಲ್ಲಿ ನಿಧನರಾಗಿದ್ದಾರೆ.

    ಖಗೋಳ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರದ ಹಲವು ವಲಯಗಳಲ್ಲಿ ಮಹತ್ವದ ಸಂಶೋಧನೆಗಳ ಕೊಡುಗೆಯನ್ನು ನೀಡಿದ್ದಾರೆ. ಈ ಮೂಲಕ ಡಾ.ಗೋವಿಂದ್ ಸ್ವರೂಪ್ ರೇಡಿಯೊ ಖಗೋಳ ವಿಜ್ಞಾನ ಮುಂಚೂಣಿಯ ವಿಜ್ಞಾನಿಯಾಗಿದ್ದರು. ವಿಜ್ಞಾನಿಯ ನಿಧನದ ಬಗ್ಗೆ ತಿಳಿದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

    “ಪ್ರೊ.ಡಾ.ಗೋವಿಂದ್ ಸ್ವರೂಪ್ ಖ್ಯಾತ ವಿಜ್ಞಾನಿ. ರೇಡಿಯೋ ಖಗೋಳ ವಿಜ್ಞಾನದಲ್ಲಿ ಮಹತ್ತರ ಸಾಧನೆ ಮಾಡಿದ್ದಾರೆ. ಇದರಿಂದ ಜಾಗತಿಕ ಪ್ರಶಂಸೆಯನ್ನು ಗಳಿಸಿದ್ದಾರೆ” ಎಂದು ಡಾ.ಗೋವಿಂದ್ ಸ್ವರೂಪ್ ಕೊಡುಗೆಯನ್ನು ಪ್ರಧಾನಿ ಮೋದಿ ಸ್ಮರಿಸಿದರು. ಜೊತೆಗೆ ಅವರ ಆತ್ಮೀಯರಿಗೆ ಧೈರ್ಯ ತುಂಬಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ ಸಹ ವಿಜ್ಞಾನಿಗೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

    ಡಾ.ಗೋವಿಂದ್ ಸ್ವರೂಪ್ ಪದ್ಮಶ್ರೀ, ಡಾ. ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ, ಎಚ್.ಕೆ. ಫಿರೋಡಿಯಾ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.