Tag: ಡಾ.ಡಿ.ವೀರೇಂದ್ರ ಹೆಗ್ಗಡೆ

  • ಸೌಜನ್ಯ ಕೇಸ್ – ಸುಳ್ಳು ಹೇಳಿಕೆ, ವದಂತಿಗಳಿಗೆ ಗೊಂದಲಕ್ಕೀಡಾಗಬೇಡಿ: ವೀರೇಂದ್ರ ಹೆಗ್ಗಡೆ ಬೇಸರ

    ಸೌಜನ್ಯ ಕೇಸ್ – ಸುಳ್ಳು ಹೇಳಿಕೆ, ವದಂತಿಗಳಿಗೆ ಗೊಂದಲಕ್ಕೀಡಾಗಬೇಡಿ: ವೀರೇಂದ್ರ ಹೆಗ್ಗಡೆ ಬೇಸರ

    ಮಂಗಳೂರು: ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ (Sowjanya Case) ಸಂಬಂಧಿಸಿದಂತೆ ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳಿಗೆ ಭಕ್ತರು ಹಾಗೂ ಸಾರ್ವಜನಿಕರು ಗೊಂದಲಕ್ಕೀಡಾಗಬೇಡಿ ಎಂದು ಧರ್ಮಸ್ಥಳದ (Dharmasthala) ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ (Veerendra Heggade) ಅವರು ವಿನಂತಿಸಿಕೊಂಡಿದ್ದಾರೆ.

    ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಅವರು ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬದ ವಿರುದ್ಧ ಆರೋಪದ ಹಿನ್ನೆಲೆ ಬೇಸರ ವ್ಯಕ್ತಪಡಿಸಿದ್ದಾರೆ.

    2012ರಲ್ಲಿ ನಡೆದ ಸೌಜನ್ಯ ಹತ್ಯೆಗೆ ನ್ಯಾಯ ದೊರಕಿಸಿಕೊಡಲು ನಮ್ಮ ಕುಟುಂಬ ಒತ್ತಾಯಿಸಿತ್ತು. ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದೇವೆ. ಸಿಐಡಿ ಬಳಿಕ ದೇಶದ ಅತ್ಯುನ್ನತ ತನಿಖಾ ಸಂಸ್ಥೆ ಸಿಬಿಐ ತನಿಖೆ ನಡೆಸಿತ್ತು. ಇದೀಗ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರಕ್ಷಾ ಬಂಧನವನ್ನು ಮುಸ್ಲಿಂ ಮಹಿಳೆಯರೊಂದಿಗೂ ಆಚರಿಸಿ: ಬಿಜೆಪಿ ನಾಯಕರಿಗೆ ಮೋದಿ ಕರೆ

    ಇದೀಗ ಮತ್ತೆ ಕ್ಷೇತ್ರ ಹಾಗೂ ನಮ್ಮ ಕುಟುಂಬದ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ. ಈ ಪ್ರಕರಣ ಸರ್ಕಾರ ಹಾಗೂ ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿದೆ. ಹೀಗಾಗಿ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಕೊಡಲು ಒತ್ತಾಯಿಸುತ್ತೇನೆ. ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳಿಗೆ ಭಕ್ತರು ಹಾಗೂ ಸಾರ್ವಜನಿಕರು ಗೊಂದಲಕ್ಕೀಡಾಗಬೇಡಿ ಎಂದು ಧರ್ಮಾಧಿಕಾರಿಯವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ – ಒಂದು ಸಭೆ, 5 ವಿಷಯಗಳೇ ಹೈಕಮಾಂಡ್ ಟಾರ್ಗೆಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಂದೆ ಎಲ್ಲಾ ಕಲಾವಿದರಿಗೂ ಪುನೀತ್ ಸ್ಫೂರ್ತಿಯಾಗಿರಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

    ಮುಂದೆ ಎಲ್ಲಾ ಕಲಾವಿದರಿಗೂ ಪುನೀತ್ ಸ್ಫೂರ್ತಿಯಾಗಿರಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

    ಮಂಗಳೂರು: ಕರ್ನಾಟಕ ರತ್ನ (Karnataka Ratna) ಕ್ಕೆ ಪುನೀತ್ ಅರ್ಹನಾದ ವ್ಯಕ್ತಿಯಾಗಿರುವವರು. ಮುಂದೆ ಎಲ್ಲಾ ಕಲಾವಿದರಿಗೂ ಇವರು ಸ್ಫೂರ್ತಿಯಾಗಿರಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ (Dr. Veerendra Heggade) ಹೇಳಿದರು.

    ದಿವಂಗತ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಗೌರವಕ್ಕೆ ಧರ್ಮಸ್ಥಳ (Dharmasthala) ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹರ್ಷ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ ಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗ್ತಿದೆ. ಇಂದು ಆ ಯುವಕನನ್ನು ನಾನು ಸ್ಮರಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯೋತ್ಸವದಂದು ಗಡಿನಾಡಿನಲ್ಲಿ ಕನ್ನಡದ ಕಂಪು ಹರಡಿದ ‘ಬನಾರಸ್’ ಹೀರೋ

    ಪುನೀತ್ ಅವರ ತಂದೆ ಡಾ.ರಾಜ್ ಕುಮಾರ್ ನನಗೆ ಅತ್ಯಂತ ಪ್ರೀತಿಯವರು ಮತ್ತು ಕ್ಷೇತ್ರದ ಬಗ್ಗೆ ಅಪಾರ ಗೌರವವಿತ್ತು. ಅವರ ಪುತ್ರ ಪುನೀತ್ ತನ್ನ ವೈಯಕ್ತಿಕ ವ್ಯಕ್ತಿತ್ವ, ನಟನೆ ಮತ್ತು ಸ್ವಭಾವದಿಂದ ಪ್ರೀತಿ ಪಾತ್ರರಾಗಿದ್ದರು. ಅವರ ಸಾವು ಇನ್ನೂ ನಮಗೆ ಅರಗಿಸಿಕೊಳ್ಳಲಾಗ್ತಿಲ್ಲ. ಇಂತಹ ಸಾವು ಅಂತ ದೊಡ್ಡ ಮತ್ತು ಭವಿಷ್ಯವಿದ್ದ ಕಲಾವಿದನಿಗೆ ಬರಬಾರದಿತ್ತು. ಭಗವಂತದ ಪಾದ ಸೇರಿದ ಪುನೀತ್ ನನ್ನ ಇವತ್ತು ಸ್ಮರಿಸುತ್ತೇವೆ ಎಂದರು.

    ಕನ್ನಡದ ಸೇವೆ, ಸ್ವಭಾವತ ಸ್ನೇಹಪರರಾಗಿದ್ದರೆ ಜನ ಮತ್ತು ಸರ್ಕಾರ ಹೇಗೆ ನಮ್ಮನ್ನ ಸ್ಮರಿಸಿಕೊಳ್ಳುತ್ತೆ ಅನ್ನೋದು ಎಲ್ಲಾ ಕಲಾವಿದರಿಗೂ ಗೊತ್ತಾಗಲಿ. ಪುನೀತ್ ರ ಪುಣ್ಯದಿಂದ ಮತ್ತಷ್ಟು ಉತ್ತಮ ಕಲಾವಿದರು ಮೂಡಿ ಬರಲಿ ಅಂತ ಹಾರೈಸುತ್ತೇನೆ ಎಂದು ಅವರು ಹೇಳಿದರು.

    2009ರಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಕೊನೆಯ ಬಾರಿ ಕರ್ನಾಟಕ ರತ್ನ ಪ್ರಶಸ್ತಿ ಪಡೆದಿದ್ದರು. ಇದನ್ನೂ ಓದಿ: ಅಪ್ಪುಗೆ ಕರ್ನಾಟಕ ರತ್ನ : ಅಧಿಕೃತ ಆಹ್ವಾನವಿಲ್ಲ, ಹೋಗಲ್ಲ ಎಂದ ಸಿದ್ಧರಾಮಯ್ಯ

    Live Tv
    [brid partner=56869869 player=32851 video=960834 autoplay=true]

  • ಹೆಚ್‍ಡಿ ದೇವೇಗೌಡರ ಆರೋಗ್ಯ ವಿಚಾರಿಸಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    ಹೆಚ್‍ಡಿ ದೇವೇಗೌಡರ ಆರೋಗ್ಯ ವಿಚಾರಿಸಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ (Dr.D Veerendra Heggade) ಯವರು ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆರೋಗ್ಯ ವಿಚಾರಿಸಿದರು.

    ಇಂದು ದೇವೇಗೌಡರ ಪದ್ಮನಾಭನಗರ ನಿವಾಸಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತು ಉಪಾಧ್ಯಕ್ಷ ಡಾ. ಸುರೇಂದ್ರ ಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ವೀರೇಂದ್ರ ಹೆಗ್ಗಡೆಯವರು ದೇವೇಗೌಡ (H.D Devegowda) ರ ಯೋಗಕ್ಷೇಮ ವಿಚಾರಿಸಿ ಶುಭ ಹಾರೈಸಿದರು. ಇದನ್ನೂ ಓದಿ: ಹೆಚ್.ಡಿ.ದೇವೇಗೌಡರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್

    ಈ ಹಿಂದೆ ನಿರ್ಮಲಾ ಸೀತಾರಾಮನ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತಿತರರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಬಳಿಕ ಮಾಧ್ಯಮ ಬಿಡುಗಡೆ ಮಾಡಿದ್ದ ಹೆಚ್‍ಡಿಡಿ, ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದರು.

    ಮನೆಯಿಂದಲೇ ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಮಾಜಿ ಪ್ರಧಾನಿ ಮನವಿ ಮಾಡಿದ್ದರು. ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ, ಕಾರ್ಯಕರ್ತರು ಆತಂಕ ಪಡೋ ಅಗತ್ಯವಿಲ್ಲ: ಹೆಚ್.ಡಿ ದೇವೇಗೌಡ

    Live Tv
    [brid partner=56869869 player=32851 video=960834 autoplay=true]

  • ರಾಜ್ಯಸಭೆಗೆ ವೀರೇಂದ್ರ ಹೆಗ್ಗಡೆ ನಾಮನಿರ್ದೇಶನಕ್ಕೆ ಕೊಂಕು

    ರಾಜ್ಯಸಭೆಗೆ ವೀರೇಂದ್ರ ಹೆಗ್ಗಡೆ ನಾಮನಿರ್ದೇಶನಕ್ಕೆ ಕೊಂಕು

    ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಸೇರಿ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ವಿಶೇಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳನ್ನು ಮೇಲ್ಮನೆಗೆ ನೇಮಕ ಮಾಡಿರೋ ಕೇಂದ್ರದ ಕ್ರಮಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಈ ಬೆನ್ನಲ್ಲೇ ಕೆಲವೊಮದು ಕೊಂಕು ಮಾತುಗಳು ಕೂಡ ಕೇಳಿ ಬರುತ್ತಿವೆ.

    ಇದು ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿಜೆಪಿ ತನ್ನ ನೆಲೆ ವಿಸ್ತರಿಸಲು ಮಾಡಿರುವ ಗಿಮಿಕ್ ಅಷ್ಟೇ. ಮಿಷನ್ ದಕ್ಷಿಣ್ ಭಾಗವಾಗಿ ಹಿಂದೆಂದೂ ಇಲ್ಲದ ರೀತಿಯಲ್ಲಿ ದಕ್ಷಿಣ ಭಾರತೀಯರಿಗೆ ಆದ್ಯತೆ ನೀಡಿದ್ದಾರೆ. ಎಲೆಕ್ಷನ್ ಹತ್ತಿರ ಬಂದ್ವಲ್ಲ. ಅದಕ್ಕೆ ಇಷ್ಟೆಲ್ಲಾ ಕಸರತ್ತು ಎಂದು ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಕಾಮೆಂಟ್ ಹಾಕ್ತಾ ಇದ್ದಾರೆ. ಇದಕ್ಕೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಇದನ್ನೂ ಓದಿ: ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ ಬರೋದು ಗ್ಯಾರಂಟಿ; ಆದರೆ…!

    ಮಿಷನ್ ದಕ್ಷಿಣ ಅಂದ್ರೆ ಕೇವಲ ಅಧಿಕಾರ ಹಿಡಿಯುವ ರಾಜಕೀಯ ತಂತ್ರಗಾರಿಕೆ ಅಲ್ಲ. ದಕ್ಷಿಣ ರಾಜ್ಯಗಳ ಭಾಷಾ ಆಸ್ಮಿತೆ, ಸಾಧನೆ, ಜ್ಞಾನಭಂಡಾರ, ಅಭಿವೃದ್ಧಿ ಎಲ್ಲದಕ್ಕೂ ಗೌರವ ನೀಡುವುದಾಗಿದೆ ಎಂದು ಸ್ಪಷ್ಟಪಡಿಸಿದೆ. ಮೋದಿ ಯುಗದಲ್ಲಿ ಅರ್ಹರಿಗೆ ಮಾತ್ರ ಆದ್ಯತೆ. ಇದಕ್ಕೆ ರಾಜ್ಯಸಭೆಗೆ ನಾಮಿನಿರ್ದೇಶನಗೊಂಡ ಸದಸ್ಯರ ಸಾಧನೆಯೇ ಸಾಕ್ಷಿ ಎಂದಿದೆ. ಇದು ನಮ್ಮ ಕ್ಷೇತ್ರದ ಸೇವಾಕಾರ್ಯಕ್ಕೆ ಸಂದ ಗೌರವ ಎಂದು ವೀರೇಂದ್ರ ಹೆಗ್ಗಡೆ ಸಂತಸ ವ್ಯಕ್ತಪಡಿಸಿದ್ದಾರೆ. ಇತ್ತ ಇಂದು ಸಿಎಂ ಬೊಮ್ಮಾಯಿ ವೀರೇಂದ್ರ ಹೆಗ್ಗಡೆ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೇವರು ಒಂದು ಅವಕಾಶ ಕೊಟ್ಟಿದ್ದಾನೆ- ರಾಜ್ಯಸಭೆ ನಾಮನಿರ್ದೇಶನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆ ಸಂತಸ

    ದೇವರು ಒಂದು ಅವಕಾಶ ಕೊಟ್ಟಿದ್ದಾನೆ- ರಾಜ್ಯಸಭೆ ನಾಮನಿರ್ದೇಶನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆ ಸಂತಸ

    ಬೆಂಗಳೂರು/ಮಂಗಳೂರು: ಕೇಂದ್ರ ಸರ್ಕಾರವು ರಾಜ್ಯಸಭೆಗೆ ನಾಮನಿದೇರ್ಶನ ಮಾಡಿರುವುದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್ ರಂಗನಾಥ್ ಜೊತೆ ಮಾತನಾಡಿದ ಖಾವಂದರು, ದೇವರು ಒಂದು ಅವಕಾಶ ಕೊಟ್ಟಿದ್ದಾನೆ. ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ನಮ್ಮ ಅನೇಕ ಕಾರ್ಯಕ್ರಮಗಳನ್ನು ಜನತೆಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿದ್ದೇವೆ. ಬಹುಶಃ ಇದು ವಿಸ್ತಾರವಾಗಿ ಇಡೀ ದೇಶಕ್ಕೆ ತಲುಪುವ ಸಾಧ್ಯತೆ ಇದೆ ಎಂದರು.

    ಕಸ್ಟಮರ್ಸ್ ಸರ್ವಿಸ್ ಸೆಂಟರ್ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವಂತಹ ಏಜೆನ್ಸಿ ಇದೆ. ಈಗಾಗಲೇ ನಾವು 6 ಸಾವಿರ ಸೆಂಟರ್ ಮಾಡಿದ್ದೇವೆ. ಸರ್ಕಾರದ ಯೋಜನೆಯಲ್ಲಿ 600 ಕಾರ್ಯಕ್ರಮ ಇದೆ. ಅದು ಈ ಜನತೆಗೆ ಗೊತ್ತೇ ಇಲ್ಲ ಎಂದು ಹೇಳಿದರು.

    ರಾಸ್ಯಸಭೆಗೆ ನಾಮನಿರ್ದೇಶನ ಮಾಡುತ್ತಾರೆ ಎಂಬ ಯಾವುದೇ ಸುಳಿವು ನನಗೆ ಇರಲಿಲ್ಲ. ಪ್ರಧಾನಿಯವರು ಘೋಷಣೆ ಮಾಡುವ ಮೊದಲು ಒಬ್ಬರು ಕರೆ ಮಾಡಿ ನಿಮಗೆ ಈ ತರ ಒಂದು ಮೆಸೇಜ್ ಬರಬಹುದು ಅಂತ ಹೇಳಿದ್ರು ಅಷ್ಟೇ ಅಂದರು. ಯಾವತ್ತೂ ನಾನು ಯಾವುದರ ಹಿಂದೆ ಹೋದವನಲ್ಲ. ಬಂದಾಗೆಲ್ಲ ನಮ್ಮ ಕಾರ್ಯಕರ್ತರ ಸಂತಸ ಇಮ್ಮಡಿಯಾಗುತ್ತಿದೆ ಎಂದರು. ಇದನ್ನೂ ಓದಿ: ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ: ಮೋದಿ ಟ್ವೀಟ್

    ಇದೇ ಸಂದರ್ಭದಲ್ಲಿ ಧರ್ಮ, ನ್ಯಾಯ, ಸಮಾಜ ಸೇವೆ ಇವುಗಳು ಒಂದು ಕಡೆ ನಡೆಯುತ್ತಿದ್ದಾಗ ಜನರ ಗಮನ ಸೆಳೆದೇ ಸೆಳೆಯುತ್ತಿದೆ ಅನ್ನೋದಕ್ಕೆ ನೀವೇ ಸಾಕ್ಷಿ ಎಂದು ಹೆಚ್.ಆರ್ ರಂಗನಾಥ್ ಅವರು ಹೇಳಿದರು. ಆಗ ಹೆಗ್ಗಡೆಯವರು ಬಹಳ ಸಂತೋಷವಾಯಿತು ಎಂದು ಹರ್ಷ ವ್ಯಕ್ತಪಡಿಸಿದರು. ಸದ್ಯ ಧರ್ಮಾಧಿಕಾರಿಗಳಿಗೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

    ಕೇಂದ್ರ ಸರ್ಕಾರವು ಸಮಾಜ ಸೇವೆ ಕ್ಷೇತ್ರದಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕ್ರೀಡಾ ಕ್ಷೇತ್ರದಿಂದ ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಸಿನಿಮಾ ಕ್ಷೇತ್ರದಿಂದ ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ಸಂಗೀತ ಕ್ಷೇತ್ರದಿಂದ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಯ್ಕೆಯಾದ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಧರ್ಮಸ್ಥಳದಲ್ಲಿ ಮೋದಿ ದೀರ್ಘಾಯಸ್ಸು, ಆರೋಗ್ಯ ವೃದ್ಧಿಗಾಗಿ ಮಹಾಮೃತ್ಯುಂಜಯ ಯಾಗ

    ಧರ್ಮಸ್ಥಳದಲ್ಲಿ ಮೋದಿ ದೀರ್ಘಾಯಸ್ಸು, ಆರೋಗ್ಯ ವೃದ್ಧಿಗಾಗಿ ಮಹಾಮೃತ್ಯುಂಜಯ ಯಾಗ

    ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಮಹಾಮೃತ್ಯುಂಜಯ ಯಾಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ನಡೆಯಿತು.

    ಧರ್ಮಸ್ಥಳದ ದೇವಸ್ಥಾನದ ಅಮೃತ ವರ್ಷಿಣಿ ಸಂಭಾಗಣದಲ್ಲಿ ನಡೆದ ಯಾಗದ ನೇತೃತ್ವವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಹಿಸಿದ್ದರು. ಯಾಗ ಕರ್ತೃಗಳಾಗಿ ಹರೀಶ್ ಪೂಂಜಾ ದಂಪತಿ ಕುಳಿತು, ಪೂಜಾ ಕಾರ್ಯದಲ್ಲಿ ತೊಡಗಿದ್ದರು. 80 ಅರ್ಚಕರು ಏಕಕಂಠದಲ್ಲಿ ರುದ್ರ ಪಾರಾಯಣ ನಡೆಸಿದ್ದು, ಮೋದಿ ಹೆಸರಿನಲ್ಲಿ ವಿವಿಧ ವಿಧಿಗಳನ್ನು ನಡೆಸಲಾಗಿದೆ. ಮೋದಿಯ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಒಂದು ಲಕ್ಷ ಮೃತ್ಯುಂಜಯ ಜಪ ಪಾರಾಯಣ ಕೂಡ ಮಾಡಲಾಯಿತು. ಇದನ್ನೂ ಓದಿ: ಕೇರಳವನ್ನು ಪ್ರಶ್ನಿಸಬೇಕೇ ಹೊರತು ಕೇಂದ್ರವನ್ನಲ್ಲ: ಸಿದ್ದುಗೆ ಬಿಜೆಪಿ ತಿರುಗೇಟು

    ಇಂದು ಬೆಳಗ್ಗೆ ಚತುರ್ವೇದ ಪಾರಾಯಣ, ಗೋಪೂಜೆ, ಮಹಾಗಣಪತಿ ಹೋಮ, ಸಪ್ತ ಕುಂಡಗಳಲ್ಲಿ ಮಹಾ ಮೃತ್ಯುಂಜಯ ಹೋಮ ನಡೆದಿದೆ. ಈ ಎಲ್ಲಾ ಕಾರ್ಯಗಳಲ್ಲಿ ಹರೀಶ್ ಪೂಂಜ ದಂಪತಿ ಯಾಗ ಕರ್ತೃಗಳಾಗಿ ಕುಳಿತು, ಗೋ, ಗಜ ಹಾಗೂ ಅಶ್ವ ಪೂಜೆಗಳನ್ನು ನೆರವೇರಿಸಿದ್ದಾರೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ನೆಗೆಟಿವ್

    ಈ ಯಾಗದಲ್ಲಿ ಸಚಿವರಾದ ಕೆ.ಎಸ್ ಈಶ್ವರಪ್ಪ, ಶಶಿಕಲಾ ಜೊಲ್ಲೆ, ಸಿಸಿ ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಇದನ್ನೂ ಓದಿ: ಜನವರಿ 31ರ ವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

  • ಗ್ರಾಮದ ಜನರ ಸಮಸ್ಯೆ ಗೊತ್ತಾಗಬೇಕಿದ್ರೆ ಗ್ರಾಮವಾಸ್ತವ್ಯ ಸಹಕಾರಿ: ಡಾ.ಡಿ.ವೀರೇಂದ್ರ ಹೆಗ್ಗಡೆ

    ಗ್ರಾಮದ ಜನರ ಸಮಸ್ಯೆ ಗೊತ್ತಾಗಬೇಕಿದ್ರೆ ಗ್ರಾಮವಾಸ್ತವ್ಯ ಸಹಕಾರಿ: ಡಾ.ಡಿ.ವೀರೇಂದ್ರ ಹೆಗ್ಗಡೆ

    ಮಂಗಳೂರು: ಗ್ರಾಮದ ಜನರ ಸಮಸ್ಯೆಗಳನ್ನು ಅರಿಯಲು ಗ್ರಾಮವಾಸ್ತವ್ಯ ಸಹಕಾರಿ ಎಂದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

    ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು, ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜ.31 ರಂದು ಕಡಬದ ಕೊಂಬಾರು ಹಿ.ಪ್ರಾ ಶಾಲೆಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿಂದು ಬಿಡುಗಡೆಗೊಳಿಸಿ ಮಾತನಾಡಿದರು.

    ಪತ್ರಕರ್ತರು ಸಾಮಾನ್ಯವಾಗಿ ಗ್ರಾಮದ ಜನರ ಸಮಸ್ಯೆಗಳನ್ನು ವರದಿ ಮಾಡಿ ಅದರ ಪರಿಹಾರಕ್ಕೆ ಪ್ರಯತ್ನಿಸುತ್ತಾರೆ. ಇದೀಗ ಪತ್ರಕರ್ತರೇ ಗ್ರಾಮಕ್ಕೆ ತೆರಳಿ ಜನರ ಬಳಿಗೆ ಹೋಗುವುದರಿಂದ ಜನಸಾಮಾನ್ಯರು ಅನುಭವಿಸುತ್ತಿರುವ ಮೂಕವೇದನೆಯನ್ನು ಹೇಳಿಕೊಳ್ಳಲು ಜನರಿಗೆ ಅವಕಾಶ ಸಿಕ್ಕಂತಾಗುತ್ತದೆ. ಜೊತೆಗೆ ಪತ್ರಕರ್ತರಿಗೂ ಜನರ ಸಮಸ್ಯೆಯನ್ನು ತಿಳಿದುಕೊಳ್ಳಲು ಒಂದು ಅವಕಾಶವಾಗುತ್ತದೆ. ಈ ರೀತಿಯ ಪತ್ರಕರ್ತರ ಗ್ರಾಮವಾಸ್ತವ್ಯ ಗ್ರಾಮಾಭಿವ್ರದ್ಧಿಗೆ ಪೂರಕ ಎಂದು ಅವರು ಶುಭ ಹಾರೈಸಿದ್ದಾರೆ.

    ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಪುಷ್ಪರಾಜ ಬಿ.ಎನ್, ಗ್ರಾಮಾಂತರ ಕಾರ್ಯದರ್ಶಿ ಸಿದ್ದಿಕ್ ನೀರಾಜೆ, ಕಾರ್ಯಕಾರಿ ಸದಸ್ಯರಾದ ಭಾಸ್ಕರ ರೈ ಕಟ್ಟ, ಅತಿಥೇಯ ಕಡಬದ ಅಧ್ಯಕ್ಷ ನಾಗರಾಜ ಎನ್.ಕೆ, ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯ ಕುಮಾರ್ ಪೆರ್ಲ, ಬೆಳ್ತಂಗಡಿ ಪತ್ರಕರ್ತರ ಸಂಘದ ಕಾರ್ಯದರ್ಶಿ ಜಾರಪ್ಪ ಪೂಜಾರಿ ಬೆಳಾಲು, ಸದಸ್ಯರಾದ ಆರ್.ಎನ್ ಪೂವಣಿ, ಧನಕೀರ್ತಿ ಆರಿಗ ಮೊದಲಾದವರು ಉಪಸ್ಥಿತರಿದ್ದರು.

  • ಬಿಬಿಎಂಪಿ ಮೇಯರ್, ಆಯುಕ್ತರಿಗೆ ವೀರೇಂದ್ರ ಹೆಗ್ಗಡೆ ಧನ್ಯವಾದ

    ಬಿಬಿಎಂಪಿ ಮೇಯರ್, ಆಯುಕ್ತರಿಗೆ ವೀರೇಂದ್ರ ಹೆಗ್ಗಡೆ ಧನ್ಯವಾದ

    – ಬೆಂಗಳೂರಲ್ಲಿ ವಿಶೇಷ ಪೂಜೆ

    ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದಕ್ಕೆ ಬಿಬಿಎಂಪಿಗೆ ಧರ್ಮಾದಿಕಾರಿ ವೀರೇಂದ್ರ ಹೆಗ್ಗಡೆ ಧನ್ಯವಾದ ತಿಳಿಸಿದ್ದಾರೆ.

    ಈ ಬಗ್ಗೆ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಹಾಗೂ ಆಯುಕ್ತ ಮಂಜುನಾಥ್ ಪ್ರಸಾದ್ ಗೆ ಪತ್ರ ಬರೆದಿರುವ ಹೆಗ್ಗಡೆ, ಕುಡಿಯುವ ನೀರನ್ನು ಪೂರೈಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಮಂಗಳವಾರ 75 ಸಾವಿರ ಲೀಟರ್ ನೀರು ಬಿಬಿಎಂಪಿ ನೌಕರರ ಸಂಘ ಧರ್ಮಸ್ಥಳಕ್ಕೆ ಕಳುಹಿಸಿತ್ತು. ಹೀಗಾಗಿ ನೀರಿನ ಸಮಸ್ಯೆಗೆ ಸ್ಪಂದಿಸಿದಕ್ಕೆ ಧರ್ಮಾಧಿಕಾರಿ ಧನ್ಯವಾದ ತಿಳಿಸಿದ್ದಾರೆ. ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿದ್ದೀರಿ. ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದಿದ್ದಾರೆ. ಅಲ್ಲದೆ ಸಮಾಜ ಸೇವೆ ಮಾಡಿದ ನಿಮಗೆ ಮಂಜುನಾಥ ಸ್ವಾಮಿ ಒಳ್ಳೆಯದನ್ನ ಮಾಡಲಿ ಎಂದು ಹರಸಿದ್ದಾರೆ.

    ಪತ್ರದಲ್ಲೇನಿದೆ?
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವವಿದೆ ಎಂದು ತಿಳಿದ ತಕ್ಷಣ ಸ್ಪಂದಿಸಿ ತಮ್ಮ ಕೈಲಾದಷ್ಟು ನೀರನ್ನು ಸಂಗ್ರಹಿಸಿ ದೂರದ ಊರುಗಳಿಂದ ವಾಹನ ಮುಖಾಂತರ ತಂದು ಭಗವಾನ್ ಶ್ರೀ ಮುಂಜುನಾಥ ಸ್ವಾಮಿಯ ಸನ್ನಿಧಿಗೆ ತಲುಪಿಸಿ ಇಲ್ಲಿ ಬರುವ ಭಕ್ತರಿಗೆ ನೀರಿನ ಕೊರತೆ ಆಗಬಾರದೆಂಬ ಉದ್ದೇಶ ಇಟ್ಟುಕೊಂಡು ಸೇವೆ ಮಾಡಿರುವ ನಿಮಗೆಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯು ಹರಸಲೆಂದು ಪ್ರಾರ್ಥಿಸುವುದಾಗಿ ಬರೆದು ಬಿಬಿಎಂಪಿಗೆ ಕಳುಹಿಸಿದ್ದಾರೆ.

    ವಿಶೇಷ ಪೂಜೆ:
    ಧರ್ಮಸ್ಥಳದಲ್ಲಿ ನೀರಿನ ಅಭಾವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದೆ. ಬಸವನಗುಡಿ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಕೈಗೊಂಡಿದ್ದು, ಗಣಪತಿಗೆ ಕ್ಷೀರ ಅಭಿಷೇಕ ಹಾಗೂ ವಿಷ್ಣು ಸಹಸ್ರನಾಮ ಪಠಣೆ ಮಾಡಲಾಗುತ್ತಿದೆ. ವರುಣನ ಕೃಪೆ ಸಿಗಲಿ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಅಖಿಲ ಕರ್ನಾಟಕ ಮದ್ವ ಮಹಾಸಭಾ ವತಿಯಿಂದ ಈ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ.

    ಮಂಜುನಾಥನ ದರ್ಶನ ಮುಂದೂಡಿ:
    4 ದಿನಗಳ ಹಿಂದೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ಹೆಗ್ಗಡೆಯವರು, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೂಡ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀವ್ರ ರೀತಿಯಲ್ಲಿ ಕಡಿಮೆಯಾಗುತ್ತಿದೆ. ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತದೆ. ಆದ್ದರಿಂದ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದರು.

    ಈ ವಿಚಾರ ಸುದ್ದಿಯಾದ ಬೆನ್ನಲ್ಲೇ ಮತ್ತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ತಮ್ಮ ಕಳವಳವನ್ನು ಹೊರಹಾಕಿದ್ದರು.

  • ಧರ್ಮಸ್ಥಳದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಚಿಂತನೆ

    ಧರ್ಮಸ್ಥಳದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಚಿಂತನೆ

    ಬೆಂಗಳೂರು: ಧರ್ಮಸ್ಥಳದಲ್ಲಿ ಚೆಕ್ ಡ್ಯಾಂ ನಿರ್ಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

    ಈ ಬಾರಿ ಧರ್ಮಸ್ಥಳದಲ್ಲೂ ನೀರಿನ ಅಭಾವ ಉಂಟಾಗಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಸರ್ಕಾರ ಚೆಕ್ ಡ್ಯಾಂ ನಿರ್ಮಿಸಿ ನೀರಿನ ಸಮಸ್ಯೆ ಪರಿಹರಿಸಲು ಮುಂದಾಗಿದೆ.

    ಮುಖ್ಯಮಂತ್ರಿ ಸಲಹೆ ಮೇರೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಧರ್ಮಸ್ಥಳದಲ್ಲಿರುವ ನೀರಿನ ಅಭಾವದ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಇನ್ನೊಂದು ಚೆಕ್‍ಡ್ಯಾಂ ನಿರ್ಮಾಣ ಮಾಡಿಕೊಡುವಂತೆ ಶ್ರೀ ಹೆಗ್ಗಡೆಯವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದ.ಕ. ಜಿ.ಪಂ. ಸಿಇಒ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಇಂದು ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಟ್ವಿಟ್ಟರ್‍ ನಲ್ಲಿ ತಿಳಿಸಿದ್ದಾರೆ.

    ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು, 15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ತಮ್ಮ ಕಳವಳವನ್ನು ಹೊರಹಾಕಿದ್ದರು.

    ಶ್ರೀ ಕ್ಷೇತ್ರದಲ್ಲಿ ನೀರಿನ ಅಭಾವ ಇರುವ ಹಿನ್ನೆಲೆ ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತದೆ. ಆದ್ದರಿಂದ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸುವಂತೆ ವೀರೇಂದ್ರ ಹೆಗ್ಗಡೆಯವರು ಮನವಿಯನ್ನು ಮಾಡಿಕೊಂಡಿದ್ದರು.

  • ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಸಡಗರ – ಬಣ್ಣ ಬಣ್ಣದ ಬೆಳಕಿನ ಚಿತ್ತಾರ

    ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಸಡಗರ – ಬಣ್ಣ ಬಣ್ಣದ ಬೆಳಕಿನ ಚಿತ್ತಾರ

    ಮಂಗಳೂರು: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ ಜೋರಾಗಿದೆ. ಐದು ದಿನಗಳ ದೀಪಗಳ ಉತ್ಸವಕ್ಕೆ ಧರ್ಮಸ್ಥಳದಲ್ಲಿ ಚಾಲನೆ ದೊರತಿದ್ದು, ಕ್ಷೇತ್ರದ ಪರಿಸರ ಝಗಮಗಿಸುತ್ತಿದೆ. ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.

    ದೀಪೋತ್ಸವದ ವೇಳೆ ಕ್ಷೇತ್ರದ ಮುಖ್ಯ ದೇವರು ಮಂಜುನಾಥ, ಕ್ಷೇತ್ರದ ಹೊರಗೆ ಬಂದು ಭಕ್ತರಿಂದ ಪೂಜೆ ಪಡೆಯುತ್ತಾನೆ. ಕ್ಷೇತ್ರದ ಪರಿಸರದಲ್ಲಿ ದೇವರನ್ನು ಒಂದೊಂದು ಕಟ್ಟೆಯಲ್ಲಿಟ್ಟು ಪೂಜಿಸುತ್ತಾರೆ. ದೇವರ ಪೂಜಾ ಕಾರ್ಯಗಳು ಪ್ರತಿದಿನ ಬೆಳಗ್ಗೆ 5.30ಕ್ಕೆ ಆರಂಭವಾಗಲಿದೆ.

    ನವೆಂಬರ್ 16 ಮತ್ತು 17ರಂದು ನಡೆಯುವ 85ನೇ ವರ್ಷದ ಸರ್ವ ಧರ್ಮ ಸಮ್ಮೇಳನವನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಉದ್ಘಾಟನೆ ಮಾಡಲಿದ್ದಾರೆ.

    ನವೆಂಬರ್ 17 ರಂದು ಸಾಹಿತ್ಯ ಸಮ್ಮೇಳ ಆರಂಭವಾಗಲಿದ್ದು ಬರಹಗಾರ್ತಿ ಸುಧಾ ಮೂರ್ತಿ ಅವರು ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ನಡೆಯುವ ಈ ಅದ್ಭುತ ಕ್ಷಣಗಳಿಗೆ ಧರ್ಮಸ್ಥಳ ಸಾಕ್ಷಿಯಾಗುತ್ತಿದೆ.